Tag: kerala

  • ಅಪ್ಪ-ಅಮ್ಮನಿಗೆ ಬಾಯ್ ಹೇಳಿ ಚಲಿಸ್ತಿದ್ದ ರೈಲಿನಿಂದ ಜಿಗಿದ ಟೆಕ್ಕಿ..!

    ಅಪ್ಪ-ಅಮ್ಮನಿಗೆ ಬಾಯ್ ಹೇಳಿ ಚಲಿಸ್ತಿದ್ದ ರೈಲಿನಿಂದ ಜಿಗಿದ ಟೆಕ್ಕಿ..!

    -ಮಗನಿಗೆ ಏನಾಗಿದೆಯೆಂದು ನೋಡಲು ತಂದೆಯೂ ರೈಲಿನಿಂದ ಹಾರಿದ್ರು

    ಬೆಂಗಳೂರು: ಕೇರಳದಿಂದ ತನ್ನನ್ನು ನೋಡಲು ನಗರಕ್ಕೆ ಬಂದಿದ್ದ ತಂದೆ-ತಾಯಿಯನ್ನು ಕಳುಹಿಸಲೆಂದು ಹೋದ ಟೆಕ್ಕಿ, ಚಲಿಸುತ್ತಿರುವ ರೈಲಿನಿಂದ ಹಾರಿದ ಪರಿಣಾಮ ಮೃತಪಟ್ಟ ಮನಕಲಕುವ ಘಟನೆಯೊಂದು ಸೋಮವಾರ ನಡೆದಿರುವುದಾಗಿ ವರದಿಯಾಗಿದೆ.

    ಈ ಘಟನೆ ಪೂರ್ವ ಬೆಂಗಳೂರಿನ ಕಾರ್ಮೆಲರಂ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಮೃತ ದುರ್ದೈವಿ ಟೆಕ್ಕಿಯನ್ನು 26 ವರ್ಷದ ವಿಕ್ರಮ್ ವಿಜಯನ್ ಎಂದು ಗುರುತಿಸಲಾಗಿದೆ. ಇವರು ಪ್ರತಿಷ್ಠಿತ ವಿಪ್ರೊ ಕಂಪೆನಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದಾರೆ. ಘಟನೆಯಲ್ಲಿ ತಂದೆ 65 ವರ್ಷದ ವಿಜಯನ್ ಚಕ್ಕಿಂಗಲ್ ಅವರಿಗೂ ಗಾಯಳಾಗಿವೆ.

    ಘಟನೆಯೇನು..?
    ವಿಕ್ರಮ್ ಎಚ್ ಎಸ್ ಆರ್ ಲೇಔಟ್ ನಲ್ಲಿ ನೆಲೆಸಿದ್ದು, ಪ್ರತಿಷ್ಠಿತ ವಿಪ್ರೊ ಕಂಪೆನಿಯ ಟೆಕ್ಕಿಯಾಗಿದ್ದಾರೆ. ಇವರ ತಂದೆ ವಿಜಯನ್ ಚಕ್ಕಿಂಗಲ್ ನಿವೃತ್ತ ಟೆಕ್ನಿಶಿಯನ್ ಆಗಿದ್ದರು. ಇವರು ಮೂಲತಃ ಕೇರಳದ ಪಾಲಕಾಡ್ ಜಿಲ್ಲೆಯ ಕಂಜಿಕೋಡ್ ನಿವಾಸಿಯಾಗಿದ್ದಾರೆ. ಸದ್ಯ ಘಟನೆಯಲ್ಲಿ ಗಾಯಗೊಂಡ ಇವರು ಮಾರತಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ವಿಜಯನ್ ಹಾಗೂ ಪತ್ನಿ ಉದಯ ಕುಮಾರಿ ಕೆಲ ದಿನಗಳ ಹಿಂದೆ ಮಗನ ಜೊತೆ ಇರಲು ಬಂದಿದ್ದರು. ಬಳಿಕ ಸೋಮವಾರ ಯಶವಂತಪುರ-ಕಣ್ಣೂರು ರೈಲಿನಲ್ಲಿ ಮತ್ತೆ ತಮ್ಮ ಊರು ಪಾಲಕಾಡ್ ಗೆ ತೆರಳಲೆಂದು ಮಗ ವಿಕ್ರಮ್ ಜೊತೆ ಕಾರ್ಮೆಲರಂ ರೈಲು ನಿಲ್ದಾಣಕ್ಕೆ ಬಂದಿದ್ದಾರೆ. ಅಂತೆಯೇ ರಾತ್ರಿ 8.56ರ ಸುಮಾರಿಗೆ ರೈಲು ಫ್ಲಾಟ್ ಫಾರಂ ನಂಬರ್ 1ಕ್ಕೆ ಬಂದು ಕೆಲ ನಿಮಿಷ ನಿಂತಿತ್ತು.

    ಹೀಗಾಗಿ ರೈಲು ನಿಂತಿದೆಯೆಂದು ವಿಕ್ರಮ್ ಕೂಡ ತನ್ನ ಹೆತ್ತವರ ಲಗೇಜ್ ಹಿಡಿದುಕೊಂಡು ತಾವು ಬುಕ್ ಮಾಡಿದ್ದ ಸೀಟ್ ಹುಡುಕಿಕೊಡಲೆಂದು ರೈಲಿಗೆ ಹತ್ತಿದ್ದಾರೆ. ಅಂತೆಯೇ ಎಸಿ ಕಂಪಾರ್ಟ್ ಮೆಂಟ್ ನಲ್ಲಿ ತಾವು ರಿಸರ್ವ್ ಮಾಡಿದ ಸೀಟಿಗೆ ತೆರಳಿ ಅಪ್ಪ-ಅಮ್ಮನ ಲಗೇಜ್ ಇಟ್ಟು, ಅವರಿಗೆ ಸೀಟ್ ಇಲ್ಲಿದೆ ಅಂತ ಹೇಳಿದ್ದಾರೆ. ಅದಾಗಲೇ ರೈಲು ಚಲಿಸುತ್ತಿರುವುದು ವಿಕ್ರಮ್ ಗಮನಕ್ಕೆ ಬಂದಿದೆ. ಕೂಡಲೇ ಹೆತ್ತವರಿಗೆ ಹ್ಯಾಪಿ ಜರ್ನಿ ಅಂತ ವಿಶ್ ಮಾಡಿ ರೈಲಿನಿಂದ ಕೆಳಗಿಳಿಯಲು ಓಡಿದ್ದಾರೆ.

    ರೈಲು ಚಲಿಸುತ್ತಿತ್ತು. ಹೀಗಾಗಿ ವಿಕ್ರಮ್ ರೈಲು ಚಲಿಸುತ್ತಿದ್ದ ವಿರುದ್ಧ ದಿಕ್ಕಿನಿಂದ ಹಾರಿದ್ದಾರೆ. ಪರಿಣಾಮ ಕಂಟ್ರೋಲ್ ತಪ್ಪಿ ಫ್ಲಾಟ್ ಫಾರಂ ಹಾಗೂ ರೈಲ್ವೇ ಟ್ರ್ಯಾಕ್ ಮಧ್ಯೆ ಬಿದ್ದಿದ್ದು, ಚಕ್ರಗಳ ನಡುವೆ ಸಿಲುಕಿದ್ದಾರೆ. ರೈಲು ಚಲಿಸುತ್ತಿದ್ದುದರಿಂದ ಟೆಕ್ಕಿಯ ಕಾಲು, ಕೈ ಹಾಗೂ ತಲೆ ಬೇರೆಬೇರೆಯಾಗಿವೆ. ಮಗ ಹಾರಿದ ವಿಚಾರ ಗಮನಕ್ಕೆ ಬರುತ್ತಿದ್ದಂತೆಯೇ ವಿಕ್ರಮ್ ತಂದೆ ವಿಜಯನ್, ಮಗನಿಗೆ ಏನಾಗಿದೆ ಅಂತ ತಿಳಿದುಕೊಳ್ಳಲು ತಾವು ಕೂಡ ರೈಲಿನಿಂದ ಹಾರಿದ್ದಾರೆ. ಹೀಗಾಗಿ ಅವರಿಗೂ ಗಾಯಗಳಾಗಿವೆ ಅಂತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಈ ಎಲ್ಲಾ ಬೆಳವಣಿಗೆಗಳನ್ನು ಕಂಡ ಉದಯಕುಮಾರಿ ಇತರ ರೈಲು ಪ್ರಯಾಣಿಕರಲ್ಲಿ ರೈಲನ್ನು ನಿಲ್ಲಿಸುವಂತೆ ಬೇಡಿಕೊಂಡಿದ್ದಾರೆ. ಹೀಗಾಗಿ ಪ್ರಯಾಣಿಕರು ರೈಲಿನ ಚೈನ್ ಎಳೆದು ನಿಲ್ಲಿಸಿದ್ದಾರೆ. ಕೂಡಲೇ ಗಾಯಗೊಂಡಿರುವ ವಿಜಯನ್ ಅವರನ್ನು ಮಾರತಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಅಂತ ಪೊಲೀಸರು ತಿಳಿಸಿದ್ದಾರೆ.

    ಘಟನೆಯ ಬಳಿಕ ಬೈಯಪ್ಪನಹಳ್ಳಿ ರೈಲ್ವೇ ಪೊಲೀಸರು ಮೃತ ವಿಕ್ರಮ್ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಮಂಗಳವಾರ ಬೆಳಗ್ಗೆ ವಿಕ್ರಮ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದೆ. ಸದ್ಯ ಪ್ರಕರಣ ಸಂಬಂಧ ಕಾರ್ಮೆಲರಂ ರೈಲ್ವೇ ನಿಲ್ದಾಣದ ಸ್ಟೇಷನ್ ಮಾಸ್ಟರ್ ಚಂದನ್ ಕುಮಾರ್ ಅವರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಯ್ಯಪ್ಪನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ರೆಹನಾ ಫಾತಿಮಾಗೆ ಬಿಗ್ ರಿಲಿಫ್

    ಅಯ್ಯಪ್ಪನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ರೆಹನಾ ಫಾತಿಮಾಗೆ ಬಿಗ್ ರಿಲಿಫ್

    ತಿರುವನಂತಪುರಂ: ಶಬರಿಮಲೆ ಪ್ರವೇಶ ಮಾಡಿ ಅಯ್ಯಪ್ಪ ಸ್ವಾಮಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ಬಂಧನಕ್ಕೆ ಒಳಗಾಗಿದ್ದ ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾಗೆ ಬಿಗ್ ರಿಲಿಫ್ ಸಿಕ್ಕಿದೆ.

    ಪೊಲೀಸರು ರೆಹನಾ ಫಾತಿಮಾಳನ್ನು ಕೇರಳ ಹೈಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸುನಿಲ್ ಥಾಮಸ್ ಅವರು, ಫಾತಿಮಾಳಿಗೆ ಷರತ್ತು ಬದ್ಧ ಜಾಮಿನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

    50 ಸಾವಿರ ರೂ. ಬಾಂಡ್ ಮತ್ತು ಇಬ್ಬರು ವ್ಯಕ್ತಿಗಳ ಶ್ಯೂರಿಟಿ, ಪಂಪಾ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶಕ್ಕೆ ತೆರಳಬಾರದು, ವಿವಾದಾತ್ಮಕ ಹೇಳಿಕೆ ನೀಡದಂತೆ ಕೋರ್ಟ್ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.

    ಏನಿದು ಪ್ರಕರಣ?
    ರೆಹನಾ ಫಾತಿಮಾಳ ಕೆಲವೊಂದು ಫೇಸ್‍ಬುಕ್ ಪೋಸ್ಟ್‍ಗಳು ಧಾರ್ಮಿಕ ಮನೋಭಾವನೆಗೆ ಧಕ್ಕೆಯುಂಟು ಮಾಡುವಂತಿದೆ ಎಂದು ಆರೋಪಿಸಿ ರಾಧಾಕೃಷ್ಣ ಮೆನನ್ ಎಂಬವರು ಪತ್ತನಂತಿಟ್ಟ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು ಫಾತಿಮಾ ಮೇಲೆ ಐಪಿಸಿ ಸೆಕ್ಷನ್ 295ಎ (ಧಾರ್ಮಿಕ ಮನೋಭಾವಕ್ಕೆ ಧಕ್ಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾಗಿದ್ದರಿಂದ ಬಂಧನ ಭೀತಿಯಲ್ಲಿದ್ದ ರೆಹನಾ ಕೇರಳ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಳು. ಆದರೆ ರೆಹನಾರ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಆದೇಶ ನೀಡಿತ್ತು.

    ರೆಹನಾ ಫಾತಿಮಾ ಯಾರು?:
    ಸಾಮಾಜಿಕ ಕಾರ್ಯಕತೆ ರೆಹನಾ ಫಾತಿಮಾ ಶಬರಿಮಲೆಗೆ ಮಹಿಳೆಯರು ಪ್ರವೇಶ ಮಾಡಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರಿಂದ ಅಕ್ಟೋಬರ್ ನಲ್ಲಿ ಅಯ್ಯಪ್ಪನ ದೇಗುಲದ ಪ್ರವೇಶಕ್ಕೆ ಮುಂದಾಗಿದ್ದಳು. ಫಾತಿಮಾ ಜೊತೆಗೆ ಆಂಧ್ರ ಪ್ರದೇಶದ ಪತ್ರಕರ್ತೆ ಕವಿತಾ ಜಕ್ಕಾಲ್ ಕೂಡ ಇದ್ದರು. ಈ ಇಬ್ಬರು ಮಹಿಳೆಯರಿಗೆ 180 ಪೊಲೀಸರ ಬಿಗಿ ಭದ್ರತೆ ನೀಡಲಾಗಿತ್ತು. ಆದರೆ ಮಹಿಳೆಯ ಪ್ರವೇಶಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ದೇಗುಲ ಪ್ರವೇಶ ಮಾಡಲು ಸಾಧ್ಯವಾಗದೇ ಮರಳಿದ್ದರು. ಬಳಿಕ ರೆಹನಾ ಫಾತಿಮಾ ಅಯ್ಯಪ್ಪ ಹಾಗೂ ಭಕ್ತರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ, ಬಂಧನಕ್ಕೆ ಒಳಗಾಗಿದ್ದಳು. ಬಂಧನವಾದ ಹಿನ್ನೆಲೆಯಲ್ಲಿ ಬಿಎಸ್‍ಎನ್‍ಎಲ್ ಫಾತಿಮಾಳನ್ನು ಕೆಲಸದಿಂದ ಅಮಾನತು ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕಣ್ಣೂರು ವಿಮಾನ ನಿಲ್ದಾಣ ಉದ್ಘಾಟನೆ : ಹೆಗ್ಗಳಿಕೆಗೆ ಪಾತ್ರವಾಯ್ತು ಕೇರಳ – ಕೊಡಗಿಗೆ ಲಾಭ ಹೇಗೆ?

    ಕಣ್ಣೂರು ವಿಮಾನ ನಿಲ್ದಾಣ ಉದ್ಘಾಟನೆ : ಹೆಗ್ಗಳಿಕೆಗೆ ಪಾತ್ರವಾಯ್ತು ಕೇರಳ – ಕೊಡಗಿಗೆ ಲಾಭ ಹೇಗೆ?

    ಕಣ್ಣೂರು: ಕೇರಳದ ಕಣ್ಣೂರಿನಲ್ಲಿ ನಿರ್ಮಾಣಗೊಂಡಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಭಾನುವಾರ ಅಧಿಕೃತವಾಗಿ ಲೋಕಾರ್ಪಣೆಯಾಗಿದೆ.

    ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಜೊತೆಯಾಗಿ ಬೆಳಗ್ಗೆ 9.55ಕ್ಕೆ ಅಬುಧಾಬಿಗೆ ಹೊರಟ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ಗೆ ಹಸಿರು ಬಾವುಟ ತೋರಿಸಿ ಅಧಿಕೃತವಾಗಿ ಚಾಲನೆ ನೀಡಿದರು.

    ಕಣ್ಣೂರು ವಿಮಾನ ನಿಲ್ದಾಣ ಉದ್ಘಾಟನೆಯಾಗುವ ಮೂಲಕ ದೇಶದಲ್ಲಿ 4 ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹೊಂದಿರುವ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಕೇರಳ ಪಾತ್ರವಾಗಿದೆ. ಈಗಾಗಲೇ ತಿರುವಂತಪುರಂ, ಕೋಳಿಕ್ಕೋಡ್, ಕೊಚ್ಚಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿವೆ.

    ಕಣ್ಣೂರು ನಗರದಿಂದ 16 ಕಿ.ಮೀ ದೂರದಲ್ಲಿರುವ ಮಟ್ಟನ್ನೂರಿನ 2,062 ಎಕರೆ ಜಾಗದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದೆ. 3,050 ಮೀಟರ್ ಉದ್ದದ ರನ್ ವೇ ಹೊಂದಿದ್ದು ಮುಂದಿನ ದಿನಗಳಲ್ಲಿ 3,400 ಮೀಟರ್ ವರೆಗೆ ರನ್‍ವೇ ವಿಸ್ತರಣೆಯಾಗಲಿದೆ.

    ಉದ್ಘಾಟನಾ ದಿನದಿಂದಲೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ವಿಮಾನ ಸೇವೆ ಕಣ್ಣೂರಿನಿಂದ ಆರಂಭವಾಗಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿದೇಶ ಸೇವೆ ಹಾಗೂ ಗೋ ಏರ್ ಸರ್ವೀಸ್ ಸಿಗಲಿದೆ. ಏರ್ ಇಂಡಿಯಾ ಕಂಪನಿ ರಿಯಾದ್ ಮತ್ತು ದೋಹಾ ನಡುವೆ ವಿಮಾನ ಸೇವೆ ನೀಡುವುದಾಗಿ ಹೇಳಿದೆ.

    ಕೇಂದ್ರ ಅನುಮತಿ ನೀಡದ ಕಾರಣ ಮೊದಲ ಹಂತದಲ್ಲಿ ವಿದೇಶಿ ಕಂಪನಿಗಳ ವಿಮಾನಗಳು ಕಣ್ಣೂರಿಗೆ ಬರುತ್ತಿಲ್ಲ. ಬೆಂಗಳೂರಿಗೆ ವಾರಕ್ಕೆ 6 ಬಾರಿ, ಹೈದರಾಬಾದಿಗೆ 4 ಬಾರಿ, ಚೆನ್ನೈಗೆ 3 ಸಲ ಸೇವೆ ನೀಡುವುದಾಗಿ ಗೋ ಏರ್ ಹೇಳಿಕೊಂಡಿದೆ.

    ಕೊಡಗಿಗೆ ಹೇಗೆ ಲಾಭ?
    ಮಡಿಕೇರಿಯಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ 300 ಕಿ.ಮೀ ದೂರದಲ್ಲಿದ್ದು ಬಸ್ಸಿನಲ್ಲಿ ಏಳುವರೆ ಗಂಟೆ ಸಮಯ ಬೇಕು. ಸಮೀಪದಲ್ಲಿರುವ ಮಂಗಳೂರು ವಿಮಾನ ನಿಲ್ದಾಣಕ್ಕೆ 140 ಕಿ.ಮೀ ದೂರವಿದ್ದು 4 ಗಂಟೆ ಸಮಯ ಬೇಕು. ಆದರೆ ಕಣ್ಣೂರು ವಿಮಾನ ನಿಲ್ದಾಣ 85 ಕಿ.ಮೀ ದೂರದಲ್ಲಿದ್ದು, ಎರಡು ಗಂಟೆಯಲ್ಲಿ ತಲುಪಬಹುದು. ಕೇರಳ ಮತ್ತು ಕೊಡಗಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಹೀಗಾಗಿ ಭವಿಷ್ಯದಲ್ಲಿ ಈ ವಿಮಾನ ನಿಲ್ದಾಣದಿಂದ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿಯಾಗುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಧಿವೇಶನಕ್ಕೂ ಮುನ್ನವೇ ಮೈತ್ರಿ ಸರ್ಕಾರ ಕೆಡವಲು ಮತ್ತೆ ಹರಸಾಹಸ!

    ಅಧಿವೇಶನಕ್ಕೂ ಮುನ್ನವೇ ಮೈತ್ರಿ ಸರ್ಕಾರ ಕೆಡವಲು ಮತ್ತೆ ಹರಸಾಹಸ!

    ಬೆಂಗಳೂರು: ಮೈತ್ರಿ ಸರ್ಕಾರವನ್ನು ಉರುಳಿಸುವ ರಣತಂತ್ರವನ್ನು ರೂಪಿಸುವುದರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬ್ಯುಸಿ ಆಗಿದ್ದು, ಕೇರಳಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ.

    ಅಧಿವೇಶನಕ್ಕೂ ಮುನ್ನವೇ ಸರ್ಕಾರ ಕೆಡವಲು ಮತ್ತೆ ಹರಸಾಹಸ ಮಾಡಲಾಗುತ್ತಿದ್ದು, ಬಿಜೆಪಿ ಆಂಡ್ ಕಾಂಗ್ರೆಸ್ ಅತೃಪ್ತರಿಂದ ಈಗಾಗಲೇ ಗುಪ್ತ್ ಗುಪ್ತ್ ರಣತಂತ್ರ ನಡೆದಿದೆ. ಆರೋಗ್ಯದ ಕಡೆ ಒತ್ತುಕೊಡುವ ನೆಪದಲ್ಲಿ ಬಿಎಸ್‍ವೈ ಇಂದು ಕೇರಳಕ್ಕೆ ಶಿಫ್ಟ್ ಆಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಬಿಎಸ್ ಯಡಿಯೂರಪ್ಪ ಪ್ರಕೃತಿ ಚಿಕಿತ್ಸೆಗೆ ಎಂದು ಕೇರಳಕ್ಕೆ ಹೊರಡಲಿದ್ದು, ಡಿಸೆಂಬರ್ 8ರ ಬಳಿಕ ರಾಜ್ಯಕ್ಕೆ ಮತ್ತೆ ವಾಪಸ್ ಆಗಲಿದ್ದಾರೆ. ಪ್ರಕೃತಿ ಚಿಕಿತ್ಸೆ ಜೊತೆ ವಿಶ್ರಾಂತಿ, ಪೂಜೆ ಪುನಸ್ಕಾರಗಳಲ್ಲಿ ಬಿಎಸ್‍ವೈ ಭಾಗಿಯಾಗಲಿದ್ದಾರೆ. ಇದೇ ಅವಧಿಯಲ್ಲಿ ಬಿಜೆಪಿ ಆಪರೇಷನ್ ಮಾಡಲಿದಿಯಾ ಎಂಬ ಸಂಶಯ ವ್ಯಕ್ತವಾಗಿದೆ. ನಿಜಕ್ಕೂ ಬಿಎಸ್‍ವೈ ಚಿಕಿತ್ಸೆಗಾಗಿ ಹೋಗುತ್ತಿದ್ದಾರಾ ಅಥವಾ ಮೈತ್ರಿ ಕೆಡವಲು ಹೊಸ ರಣತಂತ್ರ ರೂಪಿಸಲು ತೆರಳುತ್ತಿದ್ದಾರಾ ಎಂಬ ಪ್ರಶ್ನೆಗಳು ಇದೀಗ ರಾಜಕೀಯ ವಲಯದಲ್ಲಿ ಎದ್ದಿದೆ.

    ಅತ್ತ ಕಾಂಗ್ರೆಸ್‍ನ 10ಕ್ಕೂ ಹೆಚ್ಚು ಅತೃಪ್ತರ ತಂಡ ಮಹಾರಾಷ್ಟ್ರಕ್ಕೆ ಶಿಫ್ಟ್ ಆಗುವ ಸಾಧ್ಯತೆ ಇದ್ದು, ಇಂದು ಸಂಜೆ ಮಹಾರಾಷ್ಟ್ರಕ್ಕೆ ತೆರಳಲು ಕೈ ಶಾಸಕರು ಪ್ಲಾನ್ ನಡೆಸಿದ್ದಾರೆ ಎಂದು ಹೇಳಲಾಗುತ್ತದೆ. ಒಂದು ವೇಳೆ ಹೈಕಮಾಂಡ್ ನಿಂದ ಆದೇಶ ಬಂದರೆ 6 ಅಥವಾ 7ರಂದು ಸಂಪುಟ ವಿಸ್ತರಣೆಯ ಸಭೆಯನ್ನು ನಡೆಸುವ ಸಾಧ್ಯತೆ ಇದೆ. ಹೀಗಾಗಿ ಇಂದು ಸಂಜೆ ವೇಳೆಗೆ ಅತೃಪ್ತರ ನಿರ್ಧಾರ ಬದಲಾದರೂ ಅಚ್ಚರಿ ಏನು ಇಲ್ಲ ಎಂದು ಹೇಳಲಾಗುತ್ತಿದೆ.

    ಈಗಾಗಲೇ ಬಿಜೆಪಿ ಆಪರೇಷನ್ ಮಾಡಲು ಮುಂದಾಗಿದ್ದು, ಸೋತಿತ್ತು. ಈಗ ಮತ್ತೆ ಕೇರಳಕ್ಕೆ ಹೋಗುವ ಮೂಲಕ ಮತ್ತೊಮ್ಮೆ ಆಪರೇಷನ್ ಕಮಲ ಮಾಡಲು ಮುಂದಾಗುತ್ತಿದೆ. ಇನ್ನೊಂದು ಕಡೆ ಬಿ.ಎಸ್ ಯುಡಿಯೂರಪ್ಪ ಅನಾರೋಗ್ಯದ ಕಾರಣದಿಂದ ಪ್ರಕೃತಿ ಚಿಕಿತ್ಸೆ ಪಡೆಯಲು ಕೇರಳಕ್ಕೆ ಹೋಗುತ್ತಿದ್ದು, ಎಂಟು ದಿನಗಳ ಕಾಲ ಕೇರಳದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಎಕ್ಸಾಂನಲ್ಲಿ ಕಾಪಿ ಹೊಡೆದು ಸಿಕ್ಕಿದ್ದರಿಂದ ಚಲಿಸುತ್ತಿರುವ ರೈಲಿಗೆ ಹಾರಿದ ವಿದ್ಯಾರ್ಥಿನಿ

    ಎಕ್ಸಾಂನಲ್ಲಿ ಕಾಪಿ ಹೊಡೆದು ಸಿಕ್ಕಿದ್ದರಿಂದ ಚಲಿಸುತ್ತಿರುವ ರೈಲಿಗೆ ಹಾರಿದ ವಿದ್ಯಾರ್ಥಿನಿ

    ತಿರುವನಂತಪುರಂ: ಪರೀಕ್ಷೆಯಲ್ಲಿ ನಕಲು ಮಾಡುತ್ತಾ ಸಿಕ್ಕಿಬಿದ್ದ ಯುವತಿಯೊಬ್ಬಳು, ಚಲಿಸುತ್ತಿರುವ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದೆ.

    ರಾಖಿ ಕೃಷ್ಣ (19) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕೊಲ್ಲಂ ಜಿಲ್ಲೆಯ ಫಾತಿಮಾ ಮಾತಾ ನ್ಯಾಷನಲ್ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದ ರಾಖಿ ಸೆಮಿಸ್ಟರ್ ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವಾಗ ಪ್ರಾಧ್ಯಾಪಕರ ಕೈಗೆ ಸಿಕ್ಕಿಬಿದ್ದಿದ್ದಳು. ಕೂಡಲೇ ಪ್ರಾಧ್ಯಾಪಕರು ರಾಖಿಯನ್ನು ನಕಲು ನಿಗ್ರಹ ದಳದ ಅಧಿಕಾರಿಗಳಿಗೆ ಒಪ್ಪಿಸಿದ್ದರು. ಯುವತಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು, ಪೋಷಕರನ್ನು ಕರೆತರುವಂತೆ ಆಗ್ರಹಿಸಿದ್ದರು.

    ಈ ವೇಳೆ 12 ಗಂಟೆಗೆ ಪೋಷಕರನ್ನು ಕರೆತರುವುದಾಗಿ ಕಾಲೇಜಿನಿಂದ ರಾಖಿ ಹೊರಟಿದ್ದಳು. ಆದರೆ ಮನೆಗೆ ರಾಖಿ ಹೋಗದಿರುವುದನ್ನು ಅರಿತ ಕಾಲೇಜು ಪ್ರಾಧ್ಯಾಪಕರು ಆಕೆಯನ್ನು ಎಲ್ಲೆಡೆ ಹುಡುಕಾಡಿದ್ದರು. ಕೆಲ ಸಮಯದ ನಂತರ ಯುವತಿಯ ಶವ ರೈಲ್ವೇ ಹಳಿ ಬಳಿ ದೊರತಿದೆ. ಎಚ್ಚೆತ್ತ ಕಾಲೇಜು ಸಿಬ್ಬಂದಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತ ಯುವತಿಯ ಶವವನ್ನು ತಿರುವನಂತಪುರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ. ಘಟನಾ ಸಂಬಂಧ ಕೊಲ್ಲಂನ ಪೂರ್ವ ವಿಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ಆಯುಕ್ತ ಪಿ.ಕೆ.ಮಧು, ಪ್ರಾಥಮಿಕ ತನಿಖೆಗಳ ಪ್ರಕಾರ ಅಸಹಜ ಸಾವು ಎಂಬುದಾಗಿ ಪ್ರಕರಣ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇನೆ. ಅಲ್ಲದೇ ಯುವತಿಯ ಕುಟುಂಬಸ್ಥರು ಅಥವಾ ಆಕೆಯ ಸ್ನೇಹಿತರಿಂದ ದೂರು ಬಂದಲ್ಲಿ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆಯಾಗಲು ಬಿಡಲ್ಲ: ಕೇರಳ ಮುಖ್ಯಮಂತ್ರಿ

    ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆಯಾಗಲು ಬಿಡಲ್ಲ: ಕೇರಳ ಮುಖ್ಯಮಂತ್ರಿ

    ತಿರುವನಂತಪುರಂ: ಶಬರಿಮಲೆಯನ್ನು ಯಾವುದೇ ಕಾರಣಕ್ಕೂ ಮತ್ತೊಂದು ಅಯೋಧ್ಯೆಯನ್ನಾಗಲು ಬಿಡುವುದಿಲ್ಲವೆಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಹೇಳಿದ್ದಾರೆ.

    ಬುಧವಾರದಿಂದ ಕೇರಳದ ವಿಧಾನಸಭಾ ಅಧಿವೇಶನ ಪ್ರಾರಂಭವಾಗಿತ್ತು. ಈ ಅಧಿವೇಶನದಲ್ಲಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸದಸ್ಯರು ಶಬರಿಮಲೆಯಲ್ಲಿ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ, ಸದನದಲ್ಲೇ ಪ್ರತಿಭಟನೆ ನಡೆಸಿದ್ದರು.

    ಪ್ರತಿಪಕ್ಷಗಳ ಹೋರಾಟಕ್ಕೆ ಮಣಿಯದ ಸಿಎಂ ಪಿಣರಾಯ್, ಶಬರಿಮಲೆಯಲ್ಲಿ ಜಾರಿಮಾಡಲಾಗಿರುವ ನಿಷೇಧಾಜ್ಞೆಯನ್ನು ಯಾವುದೇ ಕಾರಣಕ್ಕೂ ಸಡಿಲಗೊಳಿಸುವುದಿಲ್ಲ. ನಾವು ಸುಪ್ರೀಂ ನ್ಯಾಯಾಲಯದ ತೀರ್ಪನ್ನು ಪಾಲಿಸಬೇಕಾಗಿದೆ. ಶಬರಿಮಲೆಯಲ್ಲಿ ಜಾರಿಯಲ್ಲಿರುವ ಆದೇಶದ ಬಗ್ಗೆ ಹೈ ಕೋರ್ಟ್ ಕೂಡ ಸಮ್ಮತಿ ಸೂಚಿಸಿದೆ. ಹೀಗಾಗಿ ನಿಷೇಧಾಜ್ಞೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

    ಕಾಂಗ್ರೆಸ್ ಬೆಂಬಲದೊಂದಿಗೆ ಸಂಘ ಪರಿವಾರದವರು ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಾನದಲ್ಲಿ ಸಮಸ್ಯೆ ಸೃಷ್ಟಿಸುತ್ತಿದೆ. ಹೀಗಾಗಿ ಶಬರಿಮಲೆಯನ್ನು ಯಾವುದೇ ಕಾರಣಕ್ಕೂ ಮತ್ತೊಂದು ಅಯೋಧ್ಯೆಯನ್ನಾಗಿ ಮಾಡಲು ಬಿಡುವುದಿಲ್ಲವೆಂದು ಖಡಕ್ ಆಗಿ ಉತ್ತರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರೀತಿಸಿದವಳು ಕೈಕೊಟ್ಲು ಅಂತಾ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟ ಯುವಕ

    ಪ್ರೀತಿಸಿದವಳು ಕೈಕೊಟ್ಲು ಅಂತಾ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟ ಯುವಕ

    ಬೆಂಗಳೂರು: ಪ್ರೀತಿಸಿದವಳು ಕೈಕೊಟ್ಟಳು ಅಂತಾ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೆಬ್ಬಗೋಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಕೇರಳ ಹಿಡಚಿ ಮೂಲದ ಅಭಿಲಾಷ್ (32) ಆತ್ಮಹತ್ಯೆಗೆ ಶರಣಾದ ಯುವಕ. ಆನೇಕಲ್ ತಾಲೂಕಿನ ಹೆಬ್ಬಗೋಡಿಯ ನಳಂದ ಹೊಟೇಲ್‍ನಲ್ಲಿ ಅಭಿಲಾಷ್ ಇಂದು ನೇಣು ಹಾಕಿಕೊಂಡು ಪ್ರಾಣ ಬಿಟ್ಟಿದ್ದಾನೆ.

    ಅಭಿಲಾಷ್ ಹಾಗೂ ಯುವತಿ ಕೇರಳದಲ್ಲಿ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತ ಯುವತಿ ಉದ್ಯೋಗ ಹುಡುಕಿಕೊಂಡು ಬೆಂಗಳೂರಿನ ಬೊಮ್ಮಸಂದ್ರಕ್ಕೆ ಬಂದು ವಾಸವಾಗಿದ್ದಳು. ಬಳಿಕ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದಳು. ವೃತ್ತಿಯಲ್ಲಿ ಚಾಲಕನಾಗಿದ್ದ ಅಭಿಲಾಷ್ ಹಿಡಚಿಯಲ್ಲಿಯೇ ಕೆಲಸ ಮಾಡುತ್ತಿದ್ದ. ಇಬ್ಬರೂ ಫೋನ್ ಮೂಲಕ ಸಂಪರ್ಕದಲ್ಲಿದ್ದರು.

    ಕೆಲ ದಿನಗಳ ನಂತರ ಯುವತಿ ಅಭಿಷೇಕ್ ಜೊತೆಗೆ ಫೋನ್‍ನಲ್ಲಿ ಮಾತನಾಡುವುದು ಹಾಗೂ ಮೆಸೇಜ್ ಮಾಡುವುದನ್ನು ಕಡಿಮೆ ಮಾಡಿದ್ದಾಳೆ. ಆಕೆಯ ವರ್ತನೆಯಿಂದ ಅನುಮಾನ ವ್ಯಕ್ತಪಡಿಸಿದ ಅಭಿಷೇಕ್ ಬೆಂಗಳೂರಿಗೆ ಬಂದಿದ್ದ. ಆದರೆ ಯುವತಿ ತನ್ನ ನಿರ್ಧಾರ ಬದಲಿಸಿದ್ದಾಗಿ, ನಿನ್ನನ್ನು ಪ್ರೀತಿಸುವುದಿಲ್ಲ ಎಂದು ಹೇಳಿದ್ದಾಳೆ. ಆಕೆಯ ಹೇಳಿಕೆಯಿಂದ ಮನನೊಂದ ಅಭಿಷೇಕ್ ತಾನು ವಾಸವಿದ್ದ ಹೆಬ್ಬಗೋಡಿಯ ನಳಂದ ಹೊಟೇಲ್‍ಗೆ ವಾಪಾಸ್ ಮರಳಿದ್ದಾನೆ. ಬಳಿಕ ಫ್ಯಾನ್‍ಗೆ ಬ್ಲ್ಯಾಂಕೇಟ್ ಕಟ್ಟಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ನೇಣು ಬಿಗಿದ ಸ್ಥಿತಿಯಲ್ಲಿದ್ದ ಅಭಿಷೇಕ್ ಶವವನ್ನು ನೋಡಿದ ಹೊಟೇಲ್ ಮಾಲೀಕರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಹೆಬ್ಬಗೋಡಿ ಠಾಣೆ ಪೊಲಿಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ್ದ ರೆಹನಾ ಫಾತಿಮಾ ಬಂಧನ

    ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ್ದ ರೆಹನಾ ಫಾತಿಮಾ ಬಂಧನ

    ತಿರುವನಂತಪುರ: ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಕೇರಳ ಪೊಲೀಸರು ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾರನ್ನು ಬಂಧಿಸಿದ್ದಾರೆ.

    ಹೌದು, ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಪ್ರವೇಶಿಲು ಯತ್ನಿಸಿ ಸುದ್ದಿಯಾಗಿದ್ದ ರೆಹನಾ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ ಎಂಬ ಕೇಸಿಗೆ ಸಂಬಂಧಪಟ್ಟಂತೆ ಕೇರಳ ಹೈಕೋರ್ಟ್ ರೆಹನಾ ಫಾತೀಮಾರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಪತ್ತನಂಪಟ್ಟಿ ಪೊಲೀಸರು ಮಂಗಳವಾರ ಕೊಚ್ಚಿಯಲ್ಲಿ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

    ಏನಿದು ಪ್ರಕರಣ?
    ರೆಹನಾ ಫಾತಿಮಾರ ಕೆಲವೊಂದು ಫೇಸ್‍ಬುಕ್ ಪೋಸ್ಟ್‍ಗಳು ಧಾರ್ಮಿಕ ಮನೋಭಾವನೆಗೆ ಧಕ್ಕೆಯುಂಟು ಮಾಡುವಂತಿದೆ ಎಂದು ಆರೋಪಿಸಿ ರಾಧಾಕೃಷ್ಣ ಮೆನನ್ ಎಂಬವರು ಪತ್ತನಂಪಟ್ಟಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು ಫಾತಿಮಾ ಮೇಲೆ ಐಪಿಸಿ ಸೆಕ್ಷನ್ 295ಎ ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದರು.

    ಪ್ರಕರಣ ದಾಖಲಾಗಿದ್ದರಿಂದ ಬಂಧನ ಭೀತಿಯಲ್ಲಿದ್ದ ರೆಹನಾ ಕೇರಳ ಹೈಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ ರೆಹನಾರ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೇರಳದಲ್ಲಿ ತೈಮೂರ್ ಪ್ರತಿರೂಪದ ಗೊಂಬೆ

    ಕೇರಳದಲ್ಲಿ ತೈಮೂರ್ ಪ್ರತಿರೂಪದ ಗೊಂಬೆ

    ಮುಂಬೈ: ಬಾಲಿವುಡ್ ಸ್ಟಾರ್ ದಂಪತಿ ಕರೀನಾ-ಸೈಫ್ ಅವರ ಮುದ್ದಾದ ಮಗ ತೈಮೂರ್ ಸಾಮಾಜಿಕ ಜಾಲತಾಣದಲ್ಲಿ ಆಗಾಗ ತನ್ನ ಕ್ಯೂಟ್ ಫೋಟೋಗಳಿಂದ ಸುದ್ದಿ ಮಾಡುತ್ತಲೇ ಇರುತ್ತಾನೆ. ಆದರೆ ಕೇರಳದಲ್ಲಿ ತೈಮೂರ್ ನನ್ನು ಹೋಲುವ ಮುದ್ದಾದ ಮೊಗದ ಸ್ಪೂರ್ತಿಯಿಂದ ಗೊಂಬೆಯೊಂದನ್ನ ಸೃಷ್ಟಿಸಿದ್ದು, ಈ ಫೋಟೋ ಟ್ವಿಟ್ಟರ್ ನಲ್ಲಿ ವೈರಲ್ ಆಗಿದೆ.

    ಓ ಮೈ ಗಾಡ್ ಮತ್ತು ಸಿಂಗ್ ಇಸ್ ಬ್ಲಿಂಗ್ ಚಿತ್ರಗಳ ಖ್ಯಾತಿಯ ನಿರ್ಮಾಪಕರಾದ ಅಶ್ವಿನಿ ಯಾರ್ಡಿ ಕೇರಳದ ಆಟಿಕೆ ಅಂಗಡಿಗೆ ಭೇಟಿ ಕೊಟ್ಟಿದ್ದರು. ಅಲ್ಲಿ ತೈಮೂರ್ ನಂತೆ ಹೋಲುವ ಗೊಂಬೆಗಳ ಸಾಲನ್ನ ನೋಡಿ, ಅದರ ಫೋಟೋ ಕ್ಲಿಕ್ಕಿಸಿದ್ದಾರೆ. ತಮ್ಮ ಟ್ವಿಟ್ಟರ್ ನಲ್ಲಿ “ಈ ನಡುವೆ ಕೇರಳದ ಆಟಿಕೆಯ ಅಂಗಡಿಯಲ್ಲಿ” ಎಂದು ಬರೆದುಕೊಂಡು ಆ ಫೋಟೋವನ್ನ ಹಂಚಿಕೊಂಡಿದ್ದಾರೆ.

    ತೈಮೂರ್ ಹೋಲುವ ಗೊಂಬೆಗಳ ಫೋಟೋಗಳು ಎಲ್ಲೆಡೆ ಹರಿದಾಡುತ್ತಿದ್ದು, ಟ್ವಿಟ್ಟರ್ ನಲ್ಲಿ ಈ ಕುರಿತು ಸಾಕಷ್ಟು ಜನರು ಕಮೆಂಟ್‍ಗಳ ಸುರಿಮಳೆಯನ್ನೇ ಹರಿಸಿದ್ದಾರೆ. ದಿನಕಳೆದಂತೆ ತೈಮೂರ್ ಅಭಿಮಾನಿ ಬಳಗ ಹೆಚ್ಚುತಿದ್ದು, ಈ ರೀತಿಯ ಘಟನೆಗಳು ಎಲ್ಲರನ್ನ ಹುಬ್ಬೇರಿಸುವಂತೆ ಮಾಡುತ್ತಿವೆ.

    “ಈ ಫೋಟೋ ನನ್ನ ಯೋಚನೆಗೂ ನಿಲುಕದ್ದಾಗಿದೆ. ನಾನು ಎಂದಿಗೂ ತೈಮೂರ್ ಗೊಂಬೆಯನ್ನ ನೋಡುತ್ತೇನೆ ಎಂದು ಅಂದುಕೊಂಡಿರಲಿಲ್ಲ ಎಂದು ಹಲವರು ಪ್ರತಿಕ್ರಿಯೆ ನೀಡಿದ್ರೆ, ಇನ್ನು ಕೆಲವು ಜನರು ಈ ವಿಚಾರವೂ ಭಯಾನಕವಾಗಿದ್ದು, ಮಕ್ಕಳಿಗೆ ಇನ್ನೊಂದು ಮಗುನಂತೆ ಹೋಲುವ ಗೊಂಬೆಯನ್ನ ಕೊಟ್ಟು, ಅದರ ಜೊತೆ ಆಟವಾಡುವುದು ಅಥವಾ ಅವುಗಳನ್ನ ಸಂಗ್ರಹಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಶಬರಿಮಲೆ ಭಕ್ತರಿಗೆ ಜಯ: ತೃಪ್ತಿ ದೇಸಾಯಿಂದ ಪುಣೆಗೆ ರಿಟರ್ನ್ ಟಿಕೆಟ್ ಬುಕ್

    ಶಬರಿಮಲೆ ಭಕ್ತರಿಗೆ ಜಯ: ತೃಪ್ತಿ ದೇಸಾಯಿಂದ ಪುಣೆಗೆ ರಿಟರ್ನ್ ಟಿಕೆಟ್ ಬುಕ್

    ಕೊಚ್ಚಿ: ಶಬರಿಮಲೆ ದೇವಾಲಯವನ್ನು ಪ್ರವೇಶಿಸಿಯೇ ಸಿದ್ಧ ಎಂದು ಹಠ ಹಿಡಿದಿದ್ದ ಮಹಿಳಾ ಹೋರಾಟಗಾರ್ತಿ ತೃಪ್ತಿ ದೇಸಾಯಿ ಭಕ್ತರ ಪ್ರತಿಭಟನೆಗೆ ಮಣಿದು ಪುಣೆಗೆ ಮರಳುವುದಾಗಿ ಹೇಳಿದ್ದಾರೆ. ಈ ಮೂಲಕ ಸತತ 18 ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ್ದ ಭಕ್ತರಿಗೆ ಜಯ ಸಿಕ್ಕಿದೆ.

    ಎಷ್ಟು ದಿನವಾದರೂ ಪರವಾಗಿಲ್ಲ ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡಿಯೇ ನೀಡುತ್ತೇನೆ. ಅದಕ್ಕಾಗಿ ಮರಳಿ ಟಿಕೆಟ್ ಬುಕ್ ಮಾಡಿಲ್ಲ ಎಂದು ಹೇಳಿದ್ದ ತೃಪ್ತಿ ದೇಸಾಯಿ ಶುಕ್ರವಾರ ಬೆಳಗ್ಗೆ 4.30ಕ್ಕೆ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

    ತೃಪ್ತಿ ಬರುತ್ತಿದ್ದಾರೆ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ಮಧ್ಯರಾತ್ರಿಯೇ ಕೊಚ್ಚಿ ವಿಮಾನ ನಿಲ್ದಾಣದ ಹೊರ ಆವರಣದಲ್ಲಿ ಶಬರಿಮಲೆಯ ಭಕ್ತರು, ಬಿಜೆಪಿ, ಆರ್‍ಎಸ್‍ಎಸ್, ಹಿಂದೂಪರ ಸಂಘಟನೆಯ ಸದಸ್ಯರು ಹೊರ ಆವರಣದಲ್ಲಿ ಪ್ರತಿಭಟನೆ ಆರಂಭಿಸಿದ್ದರು.

    ಯಾವುದೇ ಕಾರಣಕ್ಕೆ ನಾವು ತೃಪ್ತಿ ದೇಸಾಯಿ ಅವರನ್ನು ನಿಲ್ದಾಣದಿಂದ ಹೊರ ಬರಲು ಬಿಡುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದು ದಿಗ್ಭಂದನ ಹಾಕಿದ್ದರು. ಈ ಸಮಯದಲ್ಲಿ ತೃಪ್ತಿ ಅವರು ಶಬರಿಮಲೆಗೆ ತೆರಳಲು ಟ್ಯಾಕ್ಸಿ ಬುಕ್ ಮಾಡಿದ್ದರೂ ಟ್ಯಾಕ್ಸಿ ಚಾಲಕರು ಸಹ ಶಬರಿಮಲೆಗೆ ಬರುವುದಿಲ್ಲ ಎಂದು ಹೇಳಿದ್ದರು.

    ನಾವು ತೃಪ್ತಿ ದೇಸಾಯಿ ಅವರನ್ನು ಕರೆದುಕೊಂಡು ಹೋಗುವುದಿಲ್ಲ. ಬೇಕಾದರೆ ಪೊಲೀಸ್ ಭದ್ರತೆಯಲ್ಲಿ ಅಥವಾ ಸ್ವಂತ ವಾಹನದಲ್ಲಿ ಹೋಗಲಿ ಎಂದು ತಿಳಿಸಿದ್ದರು. ಈ ನಡುವೆ ಕೊಚ್ಚಿ ತಹಶೀಲ್ದಾರ್ ಅವರು ತೃಪ್ತಿ ಅವರನ್ನು ಮನವೊಲಿಸುವ ಪ್ರಯತ್ನ ಮಾಡಿದ್ದರೂ ಅದು ಫಲ ನೀಡಲಿಲ್ಲ.

    ಭಕ್ತರ ಪ್ರತಿಭಟನೆ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ತೃಪ್ತಿ ಮತ್ತು ಅವರ ತಂಡ ಕಾನೂನು ತಜ್ಞರ ಜೊತೆ ಹೈ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಪ್ರವೇಶ ಮಾಡಲು ಮುಂದಾದರೆ ಹೇಗೆ ಎಂದು ಚರ್ಚಿಸಿದರು. ತೃಪ್ತಿ ವಿಮಾನ ನಿಲ್ದಾಣದಿಂದ ತೆರಳುವವರೆಗೂ ನಾವು ಕದಲುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದು ಕುಳಿತ ಕಾರಣ ಅನಿವಾರ್ಯವಾಗಿ ಸಿಐಎಸ್‍ಎಫ್(ಕೇಂದ್ರ ಗೃಹ ಕೈಗಾರಿಕಾ ಭದ್ರತಾ ಪಡೆ) ಅಧಿಕಾರಿಗಳು ಮಧ್ಯಪ್ರವೇಶಿಸಿದ್ದರು.

    ವಿಮಾನ ನಿಲ್ದಾಣದ ಆವರಣದಲ್ಲಿ ಕಳೆದ 13 ಗಂಟೆಯಿಂದ ಪ್ರತಿಭಟನೆ ನಡೆಯುತ್ತಿದೆ. ಇದರಿಂದಾಗಿ ಇಲ್ಲಿಗೆ ಆಗಮಿಸುವ ಮತ್ತು ಇಲ್ಲಿಂದ ತೆರಳುವ ಪ್ರಯಾಣಿಕರಿಗೆ ಭಾರೀ ತೊಂದರೆಯಾಗುತ್ತಿದೆ. ಹೀಗಾಗಿ ಶಬರಿಮಲೆಗೆ ತೆರಳುವ ತಮ್ಮ ನಿರ್ಧಾರವನ್ನು ಪರಿಶೀಲಿಸುವುದು ಉತ್ತಮ ಎಂದು ಸಿಐಎಸ್‍ಎಫ್ ಅಧಿಕಾರಿಗಳು ಸಲಹೆ ನೀಡಿದ್ದರು. ಕೊನೆಗೆ ತಮ್ಮ ನಿರ್ಧಾರದಿಂದ ಹಿಂದೆ ಸರಿದ ತೃಪ್ತಿ ಮರಳಿ ಪುಣೆಗೆ ತೆರಳಲು ಟಿಕೆಟ್ ಬುಕ್ ಮಾಡಿದ್ದಾರೆ. ಇಂದು ರಾತ್ರಿ 9.25ರ ಏರ್ ಇಂಡಿಯಾ 055 ವಿಮಾನದಲ್ಲಿ ತೃಪ್ತಿ ಮತ್ತು ಅವರ ತಂಡ ಪುಣೆಗೆ ಹೋಗಲು ಟಿಕೆಟ್ ಬುಕ್ ಆಗಿದೆ.

    ಪುಣೆ ಮೂಲದ ಭೂ ಮಾತಾ ಬ್ರಿಗೇಡ್ ಸಂಘಟನೆ ನಡೆಸುತ್ತಿರುವ ತೃಪ್ತಿ ದೇಸಾಯಿ ಮಹಿಳಾ ಹಕ್ಕುಗಳ ಪರ ಹೋರಾಟ ನಡೆಸುತ್ತಿದ್ದಾರೆ. ಅಹಮದ್ ನಗರ ಜಿಲ್ಲೆಯ ಶನಿ ಶಿಂಘ್ನಪುರ ದೇವಾಲಯ, ಕೊಲ್ಲಾಪುರ ಜಿಲ್ಲೆಯ ಮಹಾಲಕ್ಷ್ಮೀ ದೇವಾಲಯ ಮತ್ತು ನಾಸಿಕ್ ಜಿಲ್ಲೆಯ ತ್ರಿಯಂಬಕ್ ಶಿವಾ ದೇವಾಲಯ ಮತ್ತಿತರ ಕಡೆಗಳಲ್ಲಿ ಮಹಿಳೆಯರ ವಿರುದ್ಧ ತಾರಾತಮ್ಯ ವಿರುದ್ಧ ಹೋರಾಟ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews