Tag: kerala

  • ಶಬರಿಮಲೆಗೆ ಸ್ತ್ರೀ ಪ್ರವೇಶಕ್ಕಿಲ್ಲ ಸಹಮತ-ಇಂದಿನಿಂದ ಮತ್ತೆ ಅಯ್ಯಪ್ಪನ ದರ್ಶನ

    ಶಬರಿಮಲೆಗೆ ಸ್ತ್ರೀ ಪ್ರವೇಶಕ್ಕಿಲ್ಲ ಸಹಮತ-ಇಂದಿನಿಂದ ಮತ್ತೆ ಅಯ್ಯಪ್ಪನ ದರ್ಶನ

    ತಿರುವನಂತಪುರಂ: ಮಂಡಲ ಪೂಜೆ ಪ್ರಯುಕ್ತ ಇಂದಿನಿಂದ ಶಬರಿಮಲೆ ದೇಗುಲ ತೆರೆಯಲಾಗುತ್ತಿದೆ. ಆದ್ರೆ ಈ ಬಾರಿಯೂ ಮಹಿಳೆಯರಿಗೆ ಅಯ್ಯಪ್ಪನ ದರ್ಶನ ಸಿಗೋದು ಅನುಮಾನ.

    ಯಾಕಂದ್ರೆ ಸುಪ್ರೀಂ ಕೋರ್ಟ್ ತೀರ್ಪು ಜಾರಿಯ ಬಗ್ಗೆ ನಿನ್ನೆ ನಡೆದ ಸರ್ವ ಪಕ್ಷ ಸಭೆ ವಿಫಲವಾಗಿದೆ. ಶಬರಿಮಲೆಗೆ ಯುವತಿಯರ ಪ್ರವೇಶವನ್ನು ಯಾವುದೇ ಕಾರಣಕ್ಕೂ ತಡೆಯಲಾಗದೆಂಬ ಕೇರಳ ಸಿಎಂ ನಿಲುವನ್ನು ಖಂಡಿಸಿದ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರು ಸಭೆ ಬಹಿಷ್ಕರಿಸಿದ್ರು.

    ಸುಪ್ರೀಂ ತೀರ್ಪು ಜಾರಿಗೆ ಕಾಲಾವಕಾಶ ಕೋರಲು ದೇವಸ್ವಂ ಮಂಡಳಿಗೆ ಅವಕಾಶವಿದೆ ಎನ್ನುವ ಮೂಲಕ ಕೇರಳ ಸಿಎಂ ಮಹಿಳಾ ದರ್ಶನ ತಡೆಯಲು ಭಕ್ತರಿಗೆ ದಾರಿ ತೋರಿಸಿದ್ದಾರೆ. ಬದಲಾದ ಸರ್ಕಾರದ ಈ ನಡೆ ಬೆನ್ನಲ್ಲೇ ಮಂಡಲ ಪೂಜಾ ಮಹೋತ್ಸವಕ್ಕಾಗಿ ಅಯ್ಯಪ್ಪ ಗರ್ಭಗುಡಿ ಇಂದು ತೆರೆಯಲಿದೆ.

    ಒಟ್ಟಿನಲ್ಲಿ ಅಯ್ಯಪ್ಪ ದರ್ಶನಕ್ಕೆ 800 ಮಹಿಳೆಯರು ಆನ್‍ಲೈನ್ ಬುಕಿಂಗ್ ಮಾಡಿರುವುದರಿಂದ ಕ್ಷೇತ್ರದಲ್ಲಿ ಮತ್ತೆ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಾಗಿದೆ.

    ಸುಪ್ರೀಂ ಕೋರ್ಟ್ ಹೇಳಿದ್ದೇನು?
    ಸೆಪ್ಟೆಂಬರ್ 28 ರಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠದಲ್ಲಿ 4:1 ರಂತೆ ಶಬರಿಮಲೆ ದೇಗುಲಕ್ಕೆ ಎಲ್ಲಾ ಮಹಿಳೆಯ ಪ್ರವೇಶಕ್ಕೆ ಅಸ್ತು ಎಂದು ತೀರ್ಪು ಪ್ರಕಟಿಸಿತ್ತು.

    ಸುಪ್ರೀಂ ತೀರ್ಪು ಪ್ರಕಟವಾಗುತ್ತಿದ್ದಂತೆ, ಶಬರಿಮಲೆ ದೇಗುಲ ಪ್ರವೇಶಕ್ಕೆ ಮಹಿಳೆಯರು ಮುಂದಾಗಿದ್ದರು. ಆದರೆ ಅಯ್ಯಪ್ಪ ಸ್ವಾಮಿ ಭಕ್ತರು ಮಹಿಳೆಯರಿಗೆ ಯಾವುದೇ ಕಾರಣಕ್ಕೂ ಮಣಿಕಂಠನ ದರ್ಶನಕ್ಕೆ ಅವಕಾಶ ನೀಡುವುದಿಲ್ಲವೆಂದು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯು ಉಗ್ರ ಸ್ವರೂಪ ಪಡೆದುಕೊಂಡು ಲಾಠಿ ಚಾರ್ಜ್ ಗಳು ಆಗಿದ್ದವು. ಇಷ್ಟಾದರೂ ಭಕ್ತರು ಮಾತ್ರ ಮಹಿಳೆಯ ಪ್ರವೇಶಕ್ಕೆ ಅವಕಾಶ ಮಾಡಿಕೊಡಲೇ ಇಲ್ಲ. ಅಲ್ಲದೇ ಇದನ್ನು ವಿರೋಧಿಸಿ ಪ್ರಭಾವಿ ನಾಯರ್ ಸಮಾಜ, ಹಿಂದೂಪರ ಸಂಘಟನೆಗಳು, ಬಿಜೆಪಿ ಹಾಗೂ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದ್ದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಹೆಲಿಕಾಪ್ಟರ್ ಮೂಲಕ ಮಹಿಳೆಯರನ್ನು ಶಬರಿಮಲೆಗೆ ಕಳುಹಿಸಲು ಮುಂದಾದ ಕೇರಳ ಪೊಲೀಸರು?

    ಹೆಲಿಕಾಪ್ಟರ್ ಮೂಲಕ ಮಹಿಳೆಯರನ್ನು ಶಬರಿಮಲೆಗೆ ಕಳುಹಿಸಲು ಮುಂದಾದ ಕೇರಳ ಪೊಲೀಸರು?

    ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಲು ಮುಂದಾಗಿರುವ ಮಹಿಳೆಯರನ್ನು ಹೆಲಿಕಾಪ್ಟರ್ ಮೂಲಕ ಕಳುಹಿಸಿಕೊಡುವ ಬಗ್ಗೆ ಕೇರಳ ಪೊಲೀಸರ ಚಿಂತನೆ ನಡೆಸಿದ್ದಾರೆ.

    ಹೌದು. ಇದೇ ತಿಂಗಳ 17ನೇ ತಾರೀಖಿನಿಂದ ‘ಮಂಡಲಂ ಮಕರವಿಳಕ್ಕು’ ಪೂಜೆ ನಿಮಿತ್ತ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಇಲ್ಲಿಂದ 41 ದಿನಗಳ ಕಾಲ ಅಯ್ಯಪ್ಪ ಸ್ವಾಮಿ ಭಕ್ತರಿಗೆ ದರ್ಶನ ನೀಡಲಿದ್ದಾನೆ. ಹೀಗಾಗಿ ದೇಗುಲ ಪ್ರವೇಶಕ್ಕೆ ನೂರಾರು ಮಹಿಳೆಯರು ಆಸಕ್ತಿ ತೋರಿದ್ದಾರೆ. ಆದರೆ ‘ಶಬರಿಮಲೆ ರಕ್ಷಿಸಿ’ ಅಭಿಯಾನದ ಮೂಲಕ ಸಾವಿರಾರು ಭಕ್ತರು ದೇವಾಲಯಕ್ಕೆ ತೆರಳುವ ಮುಖ್ಯ ದ್ವಾರದಲ್ಲಿ ಪ್ರತಿಭಟನೆ ನಡೆಸುತ್ತಾರೆಂದು ಹೇಳಲಾಗುತ್ತಿದೆ.

    ಪ್ರತಿಭಟನೆಯಿಂದಾಗಿ ಈ ಬಾರಿಯೂ ಸಹ ಮಹಿಳೆಯ ಪ್ರವೇಶಕ್ಕೆ ಅಡ್ಡಿಯುಂಟಾಗುತ್ತದೆ ಎನ್ನುವ ನಿರೀಕ್ಷೆಯಿದೆ. ಹೀಗಾಗಿ ಕೇರಳ ಪೊಲೀಸರು ಮಹಿಳೆಯರ ಭದ್ರತೆಯ ದೃಷ್ಟಿಯಿಂದ ಅವರನ್ನು ಕೊಚ್ಚಿ ಹಾಗೂ ತಿರುವನಂತಪುರಂನಿಂದ ನೇರವಾಗಿ ಶಬರಿಮಲೆ ಬೆಟ್ಟಕ್ಕೆ ಹೆಲಿಕಾಪ್ಟರ್ ಮೂಲಕ ತಲುಪಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಈಗಾಗಲೇ ತುರ್ತು ಸನ್ನಿವೇಶಗಳಲ್ಲಿ ಭಕ್ತರ ರಕ್ಷಣೆಗಾಗಿ ಸಿದ್ಧವಾಗಿರುವ ಹೆಲಿಪ್ಯಾಡ್‍ಗಳಲ್ಲಿ ಹೆಲಿಕಾಪ್ಟರ್ ಗಳನ್ನು ಇಳಿಸುವ ಮೂಲಕ ಮಹಿಳೆಯರನ್ನು ಕರೆತರುವ ಬಗ್ಗೆ ಯೋಚಿಸಿದ್ದಾರೆ. ಆದರೆ ಶಬರಿಮಲೆ ಅರಣ್ಯ ವ್ಯಾಪ್ತಿಯಲ್ಲಿ ಬರುವ ಹೆಲಿಪ್ಯಾಡ್ ನಲ್ಲಿ ಹೆಲಿಕಾಪ್ಟರ್ ಗಳನ್ನು ಇಳಿಸಲು ಅರಣ್ಯ ಇಲಾಖೆಯ ಅನುಮತಿ ಬೇಕು. ಹೀಗಾಗಿ ಕೇರಳ ಪೊಲೀಸರು ಈ ಬಾರಿ ಮಹಿಳೆಯರನ್ನು ಹೇಗೆ ದೇಗುಲದ ಪ್ರವೇಶಕ್ಕೆ ಅನುವು ಮಾಡಿಕೊಡುತ್ತಾರೆಂದು ಕಾದು ನೋಡಬೇಕಿದೆ.

    ಶಬರಿಮಲೆ ಪ್ರವೇಶಕ್ಕೆ 560 ಮಹಿಳೆಯರ ನೋಂದಣಿ:
    ವಿಶೇಷ ಪೂಜೆ ನಿಮಿತ್ತ 10ರಿಂದ 50 ವರ್ಷದೊಳಗಿನ 560 ಮಹಿಳೆಯರು ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಬರಿಮಲೆ ದೇಗುಲದ ವೆಬ್‍ಸೈಟ್ ನಲ್ಲಿ ಮಾಹಿತಿ ಬಿಡುಗಡೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪರೀಕ್ಷೆಯಲ್ಲಿ 98 ಅಂಕಗಳಿಸಿದ್ದ ಅಜ್ಜಿಗೆ ಲ್ಯಾಪ್‍ಟಾಪ್ ಗಿಫ್ಟ್

    ಪರೀಕ್ಷೆಯಲ್ಲಿ 98 ಅಂಕಗಳಿಸಿದ್ದ ಅಜ್ಜಿಗೆ ಲ್ಯಾಪ್‍ಟಾಪ್ ಗಿಫ್ಟ್

    ತಿರುವನಂತಪುರಂ: ಸಾಕ್ಷರತಾ ಪರೀಕ್ಷೆಯಲ್ಲಿ 98 ಅಂಕಪಡೆದಿದ್ದ 96 ವರ್ಷದ ಕಾರ್ತಿಯಾಣಿ ಅಮ್ಮ ಅವರಿಗೆ ಕೇರಳ ಸರ್ಕಾರ ಲ್ಯಾಪ್‍ಟಾಪ್ ಗಿಫ್ಟ್ ನೀಡಿದೆ.

    ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದ ಕಾರ್ತಿಯಾಣಿ ಅವರು ಕಂಪ್ಯೂಟರ್ ಕಲಿಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ಹೀಗಾಗಿ ಕೇರಳ ರಾಜ್ಯ ಶಿಕ್ಷಣ ಸಚಿವ ಸಿ.ರವೀಂದ್ರನಾಥ್ ಕಾರ್ತಿಯಾಣಿ ಅವರ ಮನೆಗೆ ಭೇಟಿ ನೀಡಿ, ಲ್ಯಾಪ್‍ಟಾಪ್ ವಿತರಿಸಿದ್ದಾರೆ.

    ಕಾರ್ತಿಯಾಣಿ ಅವರ ಜೊತೆಗೆ ಕುಳಿತು ಕೆಲಹೊತ್ತು ಖುದ್ದಾಗಿ ಸಚಿವರೇ ಲ್ಯಾಪ್‍ಟಾಪ್ ಬಳಕೆ ಮಾಡುವ ಕುರಿತು ವಿವರಿಸಿದ್ದಾರೆ. ಈ ಮೂಲಕ ಕಾರ್ತಿಯಾಣಿ ಅವರ ಕಲಿಕೆಯ ತುಡಿತಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

    ಏನಿದು ಸಾಕ್ಷರತಾ ಪರೀಕ್ಷೆ?:
    ಅನಕ್ಷರತೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಮತ್ತು ಕೇರಳ ರಾಜ್ಯದಲ್ಲಿ 100% ರಷ್ಟು ಸಾಕ್ಷರತೆಯನ್ನು ಸಾಧಿಸುವ ‘ಸಾಕ್ಷರತಾ ಮಿಷನ್’ ಗುರಿಯಾಗಿದೆ. ಇದರಿಂದಾಗಿ ವೃದ್ಧರಿಗೆ, ಕಲಿಕೆ ವಂಚಿತರಿಗೆ ಓದುವಿಕೆ, ಬರಹ ಮತ್ತು ಗಣಿತ ಕೌಶಲ್ಯಗಳನ್ನು ಕಲಿಸಿಕೊಡಲಾಗುತ್ತದೆ. ಬಳಿ 100 ಅಂಕದ `ಅಕ್ಷರಲಕ್ಷಂ’ ಸಾಕ್ಷರತಾ ಪರೀಕ್ಷೆ ನಡೆಸಿ, ಪ್ರಮಾಣಪತ್ರ ನೀಡಲಾಗುತ್ತದೆ.
    ಬುಡಕಟ್ಟು ಜನಾಂಗ, ಮೀನುಗಾರರು ಮತ್ತು ಸ್ಲಂ-ನಿವಾಸಿಗಳಂತಹ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಅನಕ್ಷರತೆಯನ್ನು ನಿರ್ಮೂಲನೆ ಮಾಡುವ ಗುರಿಯನ್ನು ಈ ಕಾರ್ಯಕ್ರಮದ ಅಡಿ ಹಾಕಲಾಗಿದೆ.

    ಈ ವರ್ಷ ಸುಮಾರು 42,933 ಜನರು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಕಾರ್ಯಕ್ರಮ ಮೂಲಕ ರಾಜ್ಯ 100% ರಷ್ಟು ಸಾಕ್ಷರತೆ ಸಾಧಿಸುವ ಹಾದಿಯಲ್ಲಿದೆ. 1991 ರ ಎಪ್ರಿಲ್ 18 ರಂದು, ರಾಜ್ಯವನ್ನು ಸಂಪೂರ್ಣ ಸಾಕ್ಷರತಾ ರಾಜ್ಯ ಎಂದು ಘೋಷಿಸಲಾಗಿದೆ. ಆದರೆ ರಾಜ್ಯದಲ್ಲಿ 2011ರ ಜನಗಣತಿ ಪ್ರಕಾರ, ಸುಮಾರು 18 ಲಕ್ಷ ಜನರು ಅನಕ್ಷರಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ. ಆದ್ದರಿಂದ ಈ ವರ್ಷ ಜನವರಿ 26 ರಂದು ರಾಜ್ಯ ಸರ್ಕಾರವು `ಅಕ್ಷರಲಕ್ಷಂ’ ಹೆಸರಿನಲ್ಲಿ ಸಾಕ್ಷರತಾ ಕಾರ್ಯಕ್ರಮವನ್ನು ಪ್ರಾರಂಭಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉರಿವ ಬೆಂಕಿಗೆ ತುಪ್ಪ ಸುರೀತಾ ಬಿಜೆಪಿ- ಇಂದಿನಿಂದ ಸಂಪ್ರದಾಯ ಉಳಿಸಿ ಘೋಷಣೆ ಮೂಲಕ ರಥಯಾತ್ರೆ

    ಉರಿವ ಬೆಂಕಿಗೆ ತುಪ್ಪ ಸುರೀತಾ ಬಿಜೆಪಿ- ಇಂದಿನಿಂದ ಸಂಪ್ರದಾಯ ಉಳಿಸಿ ಘೋಷಣೆ ಮೂಲಕ ರಥಯಾತ್ರೆ

    ಬೆಂಗಳೂರು: ಶಬರಿಮಲೆ ದೇಗುಲಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಪ್ರವೇಶ ನೀಡುವ ಸುಪ್ರೀಂಕೋರ್ಟ್ ಆದೇಶದ ಬಳಿಕ ಮಹಿಳೆಯರ ದೇಗುಲ ಪ್ರವೇಶಕ್ಕೆ ಭಕ್ತರಿಂದ ವಿರೋಧ ವ್ಯಕ್ತವಾಗಿತ್ತು. ಸಂಪ್ರದಾಯ ಮುರಿಯಲು ಅವಕಾಶ ಕೊಡುವುದಿಲ್ಲ ಅಂತ ಹಿಂದೂ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

    ಕೇರಳ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಗಲಾಟೆ ನಡೆದಿತ್ತು. ಘಟನೆ ಬಳಿಕ ಕೇರಳ ಸರ್ಕಾರ ಸಂಪ್ರದಾಯದ ವಿರೋಧಿಯಾಗಿದೆ ಅಂತ ಕೇಸರಿ ಪಕ್ಷ ಆರೋಪಿಸಿತ್ತು. ಈ ಬೆನ್ನಲ್ಲೇ ಮಂಡಲಪೂಜೆಗೆ ಶಬರಿಮಲೆ ದೇಗುಲ ಓಪನ್ ಆಗಿರೋದ್ರಿಂದ ಇಂದಿನಿಂದ 5 ದಿನಗಳ ಕಾಲ ಕಾಸರಗೋಡುವಿನಿಂದ ಪತನಂತಿಟ್ಟದವರೆಗೆ ಬಿಜೆಪಿ ರಥಯಾತ್ರೆಯನ್ನು ಆರಂಭಿಸಿದೆ.

    ಶಬರಿಮಲೆ ದೇವಸ್ಥಾನದ ಸಂಪ್ರದಾಯಗಳನ್ನು ಉಳಿಸಿ ಅನ್ನೋ ಘೋಷಣೆಯೊಂದಿಗೆ ಬಿಜೆಪಿ ರಥಯಾತ್ರೆ ಆರಂಭಿಸಿದೆ. ಕೇರಳದಲ್ಲಿ ನಾಸ್ತಿಕ ಸರ್ಕಾರವಿದ್ದು ಶಬರಿಮಲೆ ದೇಗುಲದ ಅಪೂರ್ವತೆಯನ್ನು ನಾಶ ಮಾಡಲು ಹೊರಟಿದೆ ಅಂತ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಶ್ರೀಧರನ್ ಪಿಳ್ಳೈ ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಯ್ಯಪ್ಪ ದೇವರೇ ಅಲ್ಲ ಅಂದ್ರು ನಟ ಪ್ರಕಾಶ್ ರೈ..!

    ಅಯ್ಯಪ್ಪ ದೇವರೇ ಅಲ್ಲ ಅಂದ್ರು ನಟ ಪ್ರಕಾಶ್ ರೈ..!

    ಬೆಂಗಳೂರು: ಮಹಿಳೆಯರನ್ನು ನೋಡದ ದೇವರು ದೇವರೇ ಅಲ್ಲ ಎಂದು ಹೇಳುವ ಮೂಲಕ ನಟ ಪ್ರಕಾಶ್ ರೈ ಮತ್ತೊಂದು ವಿವಾದದ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ.

    ಗಲ್ಫ್ ನ ಅಂತರಾಷ್ಟ್ರೀಯ ಪುಸ್ತಕ ಮೇಳೆದಲ್ಲಿ ಭಾಗಿಯಾಗಿದ್ದ ಪ್ರಕಾಶ್ ರೈ ಅವರು ಶಬರಿಮಲೆ ದೇವಸ್ಥಾನದ ಕುರಿತು ಮಾತನಾಡುತ್ತಾ, ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು ಹೆಣ್ಣಿಗೆ ಹೋಲಿಸುತ್ತೇವೆ. ಅದೇ ಹೆಣ್ಣಿನಿಂದ ಜನ್ಮ ತಾಳುತ್ತೇವೆ. ಆದರೆ ಅದೇ ಹೆಣ್ಣನ್ನು ಪೂಜೆಯಿಂದ ಹೊರಗಿಡೋದು ಅಂದ್ರೆ ಏನರ್ಥ ಎಂದು ಪ್ರಶ್ನಿಸಿದರು. ಹೆಣ್ಣು ಮಕ್ಕಳ ಪ್ರಾರ್ಥನೆಗೆ ಅವಕಾಶ ಕೊಡದೇ ಇದ್ದರೇ ಅದು ನನ್ನ ಪಾಲಿಗೆ ಧರ್ಮವೇ ಅಲ್ಲ ಅಂತಾ ಕಿಡಿಕಾರಿದರು.

    ಯಾವ ಭಕ್ತರು ಸ್ತ್ರಿಯರನ್ನು ದೇವರ ದರ್ಶನಕ್ಕೆ ಅವಕಾಶ ಕೊಡುವುದಿಲ್ಲವೋ ಅವರು ಭಕ್ತರೇ ಇಲ್ಲ. ಯಾವ ದೇವರು ಮಹಿಳೆಯನ್ನು ನೋಡೋದಿಲ್ಲವೋ ಅದು ದೇವರೇ ಅಲ್ಲ. ಮಹಿಳೆಯರಿಗೆ ಕೇರಳ ದೇಗುಲ ಪ್ರವೇಶಕ್ಕೆ ಅವಕಾಶ ಮಾಡಿ ಕೊಡಲೇಬೇಕು. ಮಹಿಳೆಯರನ್ನು ತಡೆಯುವ ಹಕ್ಕು ಯಾರಿಗೂ ಇಲ್ಲ ಅಂತಾ ರೈ ಹೇಳಿದ್ದಾರೆ.

    ತಿಂಗಳ ಪೂಜೆ ನಿಮಿತ್ತ ಶಬರಿಮಲೆ ಅಯ್ಯಪ್ಪ ದೇಗುಲವು ಇಂದು ತೆರೆಯಲಿದೆ. ಮಂಗಳವಾರ ರಾತ್ರಿ ಮತ್ತೆ ದೇಗುಲದ ಬಾಗಿಲನ್ನು ಮುಚ್ಚಲಾಗುತ್ತದೆ. ಹೀಗಾಗಿ ಕಡಿಮೆ ಅವಧಿ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆಗೆ ಆಗಮಿಸಿಲಿದ್ದಾರೆ. ಕಳೆದ ಬಾರಿಯಂತೆ ಈಗಲೂ ಸಮಸ್ಯೆ ಪರಿಸ್ಥಿತಿ ಉದ್ವಿಗ್ನಗೊಳ್ಳಬಾರದು ಅಂತಾ ಎಚ್ಚೆತ್ತುಕೊಂಡ ಪೊಲೀಸ್ ಅಧಿಕಾರಿಗಳು ಭಾರೀ ಭದ್ರತೆಗೆ ಮುಂದಾಗಿದ್ದಾರೆ.

    ಶಬರಿಮಲೆ ಜಾಗರಣೆ ಸ್ಥಳದಲ್ಲಿ ಹಾಗೂ ಸಮೀಪದ ಸ್ಥಳಗಳಲ್ಲಿ 100 ಮಹಿಳಾ ಪೊಲೀಸ್ ಸೇರಿದಂತೆ 1,500 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಜೊತೆಗೆ 20 ಜನರ ಕಮಾಂಡೋ ತಂಡವನ್ನು ಸನ್ನಿಧಾನಂ, ನಿಲಕಲ್ ಮತ್ತು ಪಂಪಾ ಪ್ರದೇಶದಲ್ಲಿ ನಿಯೋಜನೆ ಮಾಡಲಾಗಿದೆ. ಭಕ್ತಾಧಿಗಳನ್ನು ತಪಾಸಣೆ ಮಾಡಲು ರಸ್ತೆ ಮಧ್ಯದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ದೇಗುಲದ ಬಳಿ ಭದ್ರತೆ ಒದಗಿಸಲಾಗಿದೆ. ಅಯ್ಯಪ್ಪನ ದರ್ಶನಕ್ಕೆ ಟಿಕೆಟ್ ಬುಕ್ ಮಾಡಲು ಪರವಾಣಿಗೆ ಪತ್ರ ಕಡ್ಡಾಯವಾಗಿದೆ. ಎಂದು ಕೇರಳ ಪೊಲೀಸರು ಮಾಹಿತಿ ನೀಡಿದ್ದಾರೆ.

    ಅಯ್ಯಪ್ಪನಿಗೆ ‘ಶ್ರೀ ಚಿತಿರ ಅಟ್ಟಾ ತಿರುನಾಳ್’ ವಿಶೇಷ ಪೂಜೆ ಮಂಗಳವಾರ ನಡೆಯಲಿದೆ. ಪೂಜೆಯ ವೇಳೆ ಭಕ್ತರಿಗೆ ದರ್ಶನದ ಅವಕಾಶ ನೀಡಲಾಗುತ್ತದೆ. ನಂತರ ರಾತ್ರಿ 10 ಗಂಟೆಗೆ ದೇವಸ್ಥಾನವನ್ನು ಮುಚ್ಚಲಾಗುತ್ತದೆ ಅಂತ ದೇಗುಲದ ಆಡಳಿತ ಮಂಡಳಿ ತಿಳಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೋಮವಾರ ಬಾಗಿಲು ತೆರೆಯಲಿದೆ ಶಬರಿಮಲೆ- ಭಾರೀ ಭದ್ರತೆ ಒದಗಿಸಿರುವ ಪೊಲೀಸರು

    ಸೋಮವಾರ ಬಾಗಿಲು ತೆರೆಯಲಿದೆ ಶಬರಿಮಲೆ- ಭಾರೀ ಭದ್ರತೆ ಒದಗಿಸಿರುವ ಪೊಲೀಸರು

    ತಿರುವನಂತಪುರಂ: ತಿಂಗಳ ಪೂಜೆ ನಿಮಿತ್ತ ಶಬರಿಮಲೆ ಅಯ್ಯಪ್ಪ ದೇಗುಲವು ಸೋಮವಾರ ತೆರೆಯಲಿದೆ. ಕಳೆದ ಬಾರಿಯಂತೆ ಈಗಲೂ ಸಮಸ್ಯೆ ಪರಿಸ್ಥಿತಿ ಉದ್ವಿಗ್ನಗೊಳ್ಳಬಾರದು ಅಂತಾ ಎಚ್ಚೆತ್ತುಕೊಂಡ ಪೊಲೀಸ್ ಅಧಿಕಾರಿಗಳು ಭಾರೀ ಭದ್ರತೆಗೆ ಮುಂದಾಗಿದ್ದಾರೆ.

    ದೇವಸ್ಥಾನವು ಸೋಮವಾರ ತೆರೆಯಲಿದ್ದು, ತಿಂಗಳ ಪೂಜಾ ಕಾರ್ಯ ಆರಂಭಗೊಳ್ಳುತ್ತದೆ. ಬಳಿಕ ಮಂಗಳವಾರ ರಾತ್ರಿ ಮತ್ತೆ ದೇಗುಲದ ಬಾಗಿಲನ್ನು ಮುಚ್ಚಲಾಗುತ್ತದೆ. ಹೀಗಾಗಿ ಕಡಿಮೆ ಅವಧಿ ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆಗೆ ಆಗಮಿಸಿಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಭದ್ರತೆ ಒದಗಿಸಿದ್ದಾರೆ.

    ಶಬರಿಮಲೆ ಜಾಗರಣೆ ಸ್ಥಳದಲ್ಲಿ ಹಾಗೂ ಸಮೀಪದ ಸ್ಥಳಗಳಲ್ಲಿ 100 ಮಹಿಳಾ ಪೊಲೀಸ್ ಸೇರಿದಂತೆ 1,500 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಜೊತೆಗೆ 20 ಜನರ ಕಮಾಂಡೋ ತಂಡವನ್ನು ಸನ್ನಿಧಾನಂ, ನಿಲಕಲ್ ಮತ್ತು ಪಂಪಾ ಪ್ರದೇಶದಲ್ಲಿ ನಿಯೋಜನೆ ಮಾಡಲಾಗಿದೆ ಎಂದು ಕೇರಳ ಪೊಲೀಸರು ಮಾಹಿತಿ ನೀಡಿದ್ದಾರೆ.

    ಅಯ್ಯಪ್ಪನಿಗೆ ‘ಶ್ರೀ ಚಿತಿರ ಅಟ್ಟಾ ತಿರುನಾಳ್’ ವಿಶೇಷ ಪೂಜೆ ಮಂಗಳವಾರ ನಡೆಯಲಿದೆ. ಪೂಜೆಯ ವೇಳೆ ಭಕ್ತರಿಗೆ ದರ್ಶನದ ಅವಕಾಶ ನೀಡಲಾಗುತ್ತದೆ. ನಂತರ ರಾತ್ರಿ 10 ಗಂಟೆಗೆ ದೇವಸ್ಥಾನವನ್ನು ಮುಚ್ಚಲಾಗುತ್ತದೆ ಅಂತ ದೇಗುಲದ ಆಡಳಿತ ಮಂಡಳಿ ತಿಳಿಸಿದೆ.

    ಭಕ್ತಾಧಿಗಳನ್ನು ತಪಾಸಣೆ ಮಾಡಲು ರಸ್ತೆ ಮಧ್ಯದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ದೇಗುಲದ ಬಳಿ ಭದ್ರತೆ ಒದಗಿಸಲಾಗಿದೆ. ಅಯ್ಯಪ್ಪನ ದರ್ಶನಕ್ಕೆ ಟಿಕೆಟ್ ಬುಕ್ ಮಾಡಲು ಪರವಾಣಿಗೆ ಪತ್ರ ಕಡ್ಡಾಯವಾಗಿದೆ.

    ನಿಲಕಲ್ ಮತ್ತು ಪಂಪಾ ಕ್ಷೇತ್ರಕ್ಕೆ ಪಾದಯಾತ್ರೆ ಮಾಡುವ ಭಕ್ತರಿಗೆ ಕೇರಳ ಸರ್ಕಾರ ನೀಡುವ ಟಿಕೆಟ್ ಕಡ್ಡಾಯಗೊಳಿಸಲಾಗಿದೆ. ಮಹಿಳೆಯರ ಪ್ರವೇಶವನ್ನು ವಿರೋಧ ಮತ್ತೆ ಪರಿಸ್ಥಿತಿ ಉದ್ವಿಗ್ನಕ್ಕೆ ಕಾರಣವಾಗವಾರದು ಅಂತಾ ಕೇರಳ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ. ಇತ್ತ ಶಬರಿಮಲೆಗೆ ಮಹಿಳೆಯ ಪ್ರವೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಪಿ.ಎಸ್.ಶ್ರೀಧರನ್ ಅವರಿಗೆ ಜೀವ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಬರಿಮಲೆಗೆ ಹೊರಟವರು ಮಸೀದಿಗೆ ಹೋಗಲಿ- ಶಿವರಾಂ

    ಶಬರಿಮಲೆಗೆ ಹೊರಟವರು ಮಸೀದಿಗೆ ಹೋಗಲಿ- ಶಿವರಾಂ

    ಉಡುಪಿ: ಶಬರಿಮಲೆಗೆ ಹೊರಟವರು ಮಸೀದಿಗೆ ಹೋಗಲಿ ಎಂದು ಹಿರಿಯ ನಟ ಹಾಗೂ ರಾಜ್ಯ ಅಯ್ಯಪ್ಪ ಭಕ್ತ ಸಂಘದ ಅಧ್ಯಕ್ಷ ಶಿವರಾಂ ಕಿಡಿಕಾರಿದ್ದಾರೆ.

    ಎಂಜಿಎಂ ಮೈದಾನದಲ್ಲಿ ನಡೆದ ಧರ್ಮ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ದೇವಾಲಯ ಮೊದಲು ಹುಟ್ಟಿತಾ? ನ್ಯಾಯಾಲಯ ಮೊದಲು ಹುಟ್ಟಿದೆಯೇ ಎಂದು ಪ್ರಶ್ನಿಸಿ, ನಾವು ಪಾರಂಪರಿಕವಾಗಿ ಬಂದ ಸಂಪ್ರದಾಯ ಪಾಲಿಸುತ್ತೇವೆ. ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್ ನೀಡಿದ ತೀರ್ಪು ಕೋಟ್ಯಂತರ ಭಕ್ತರ ನೋವಿಗೆ ಕಾರಣವಾಗಿದೆ. ಮಹಿಳೆಯರು ಶಬರಿಮಲೆಗೆ ಪ್ರವೇಶ ಮಾಡುವುದು, ಅಯ್ಯಪ್ಪನಿಗೆ ಹಿಡಿಸದ ಸಂಪ್ರದಾಯ ಎಂದು ತಿಳಿಸಿದರು. ಇದನ್ನು ಓದಿ: ಕೋರ್ಟ್ ಧರ್ಮದ ತೀರ್ಮಾನ ಮಾಡಕೂಡದು: ಪೇಜಾವರ ಶ್ರೀ

    ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಉದ್ಧಟತನ ಪ್ರದರ್ಶನ ಮಾಡಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ದೇಶದಲ್ಲಿ ಹಿಂದೂಗಳಿಗೆ ಹಿಂದೂಗಳೇ ವಿರೋಧಿಗಳಾದರು. ಪವಿತ್ರ ಕ್ಷೇತ್ರಗಳಿಗೆ ತೊಂದರೆಯಾದಾಗ ಹಿಂದೂ ಸಮಾಜದವರು ಸುಮ್ಮನಿರಬಾರದು ಎಂದು ಹೇಳಿದರು.

    ಬಾಕಿ ಇರುವ ತೀರ್ಪುಗಳನ್ನು ತೀರ್ಮಾನ ಮಾಡುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಮುಂದಾಗಿತ್ತು. ಹೀಗಾಗಿ ಸಲಿಂಗ ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡಲಾಯಿತು. ಅಷ್ಟೇ ಅಲ್ಲದೆ ಒಪ್ಪಿತ ಅಕ್ರಮ ಸಂಬಂಧ ಅಪರಾಧವಲ್ಲ ಅಂತ ಹೇಳಲಾಯಿತು. ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಕೊಡಲಾಯಿತು. ಈ ತೀರ್ಪುಗಳು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಿವೆ ಎಂದು ಆರೋಪಿಸಿದರು. ಇದನ್ನು ಓದಿ: ಅಯ್ಯಪ್ಪ ಸ್ವಾಮಿಯ ಅನುಗ್ರಹದಿಂದ ನನಗೆ ವರ್ಗಾವಣೆ ಸಿಕ್ತು: ರೆಹನಾ ಫಾತಿಮಾ

    ಕ್ರಿಶ್ಚಿಯನ್ ಹಾಗೂ ಮುಸ್ಲಿಂ ಧರ್ಮದ ಇಬ್ಬರು ಮಹಿಳೆಯರು ಅಯ್ಯಪ್ಪನ ದರ್ಶನಕ್ಕೆ ಮುಂದಾಗಿದ್ದರು. ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾ ವಿರುದ್ಧ ವಾಗ್ದಾಳಿ ನಡೆಸಿದ ಶಿವರಾಂ ಅವರು, ಆಕೆ ಒಂದು ದಿನವಾದರೂ ಮಸೀದಿಗೆ ಹೋಗಿದ್ದಾಳಾ ಎಂದು ಪ್ರಶ್ನಿಸಿದರು. ಶಬರಿಮಲೆಗೆ ಮಹಿಳೆ ಪ್ರವೇಶದ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸಂಪ್ರದಾಯದ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ತೀರ್ಪನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೇರಳ ಬಿಷಪ್ ಕಾಮ ಪುರಾಣ ಬಿಚ್ಚಿಟ್ಟಿದ್ದ ಫಾದರ್ ಅನುಮಾನಾಸ್ಪದ ಸಾವು!

    ಕೇರಳ ಬಿಷಪ್ ಕಾಮ ಪುರಾಣ ಬಿಚ್ಚಿಟ್ಟಿದ್ದ ಫಾದರ್ ಅನುಮಾನಾಸ್ಪದ ಸಾವು!

    ಕೊಚ್ಚಿ: ಅತ್ಯಾಚಾರ ಆರೋಪಿ ರೋಮನ್ ಕ್ಯಾಥೋಲಿಕ್ ಬಿಷಪ್ ಫ್ರಾಂಕೋ ಮುಳಕಲ್ ವಿರುದ್ಧ ಸಾಕ್ಷ್ಯ ಹೇಳಿದ್ದ ಪಾದ್ರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

    ಕುರಿಯ ಕಟ್ಟುಥಾರ ಪಾದ್ರಿ (62) ಅವರ ಮೃತ ದೇಹ ಪಂಜಾಬಿನ ಹೊಶಿಯರ್‍ಪುರ ಜಿಲ್ಲೆಯ ಚರ್ಚ್‍ನಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಇದೂವರೆಗೂ ಅವರ ಸಾವಿಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಸದ್ಯ ಪಾದ್ರಿಯ ಕುಟುಂಬಸ್ಥರು ಸಾವಿನ ಕುರಿತು ಶಂಕೆ ವ್ಯಕ್ತಪಡಿಸಿದ್ದಾರೆ.

    ಕ್ರೈಸ್ತ ಸನ್ಯಾಸಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಿಷಪ್ ಫ್ರಾಂಕೋ ಮುಳಕಲ್ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದರು. ಈ ವೇಳೆ ಅವರ ವಿರುದ್ಧ ಕುರಿಯ ಕಟ್ಟುಥಾರ ಅವರು ಸಾಕ್ಷಿ ಹೇಳಿ ಪೊಲೀಸರಿಗೆ ಹೇಳಿಕೆ ನೀಡಿದ್ದರು. ಬಳಿಕ ಅವರ ವಿರುದ್ಧ ಬೆದರಿಕೆ ಕರೆಗಳು ಕೇಳಿ ಬರುತಿತ್ತು. ಸಾಕ್ಷ್ಯ ಹೇಳಿದ್ದಕ್ಕೆ ಕುರಿಯ ಕಟ್ಟುಥಾರ ಅವರನ್ನು ಕೊಲೆ ಮಾಡಲಾಗಿದೆ ಎಂದು ಅವರ ಸಹೋದರ ಆರೋಪ ಮಾಡಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಎಸ್‍ಪಿ ಎಆರ್ ಶರ್ಮಾ, ಪಾದ್ರಿ ಅವರ ದೇಹದ ಮೇಲೆ ಯಾವುದೇ ಗಾಯದ ಗುರುತು ಇಲ್ಲ. ಅವರು ವಾಸಿಸುವ ಚರ್ಚ್‍ನಲ್ಲಿಯೇ ಅವರ ಮೃತದೇಹ ಪತ್ತೆಯಾಗಿದೆ. ಅವರ ಮೃತ ದೇಹದ ಬಳಿ ವಾಂತಿ ಮಾಡಿಕೊಂಡಿದ್ದಾರೆ. ಅಲ್ಲದೇ ರಕ್ತದೊತ್ತಡದ ಮಾತ್ರೆಗಳು ಸ್ಥಳದಲ್ಲಿ ಪತ್ತೆಯಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.

    ಏನಿದು ಪ್ರಕರಣ:
    ಕ್ರೈಸ್ತ ಸನ್ಯಾಸಿನಿ ಮೇಲೆ ಬಿಷಪ್ ಫ್ರಾಂಕೋ ಮುಳಕಲ್ ನಿರಂತರ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದಾರೆ. 2014 ರಿಂದ 2016 ವರೆಗೂ ತನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಸನ್ಯಾಸಿನಿ ಆರೋಪಿಸಿದ್ದಾರೆ.

    ಬಿಷಪ್ ಅವರ ವಿರುದ್ಧ ಪ್ರಕರಣ ದಾಖಲಿಸಿ ಫ್ರಾಂಕೋ ಮುಳಕಲ್ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಆರೋಪ ಹೊಂದಿರುವ ಬಿಷಪ್ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ. ನ್ಯಾಯಾಲಯ ಆರೋಪಿ ಬಿಷಪ್ ಫ್ರಾಂಕೋ ಮುಳಕಲ್ ಗೆ ಜಾಮೀನು ನೀಡಿದೆ. ಜಾಮೀನು ಪಡೆದ ಆಗಮಿಸಿದ ಬಿಷಪ್‍ಗೆ ಆತನ ಭಕ್ತರು ಅದ್ಧೂರಿ ಸ್ವಾಗತ ಕೋರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ಯತ್ನ: ರೆಹನಾ ಫಾತಿಮಾ ಇಸ್ಲಾಂನಿಂದ ಉಚ್ಚಾಟನೆ!

    ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ಯತ್ನ: ರೆಹನಾ ಫಾತಿಮಾ ಇಸ್ಲಾಂನಿಂದ ಉಚ್ಚಾಟನೆ!

    ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಯತ್ನಿಸುವ ಮೂಲಕ ಹಿಂದೂ ಧರ್ಮದ ನಂಬಿಕೆಗಳಿಗೆ ಧಕ್ಕೆ ತರಲು ಯತ್ನಿಸಿದ ರೆಹನಾ ಫಾತಿಮಾರನ್ನು ಕೇರಳ ಮುಸ್ಲಿಂ ಮಂಡಳಿ  ಇಸ್ಲಾಂ ಧರ್ಮದಿಂದ ಉಚ್ಚಾಟಿಸಿದೆ.

    ರೆಹನಾ ಫಾತಿಮಾ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರವೇಶಕ್ಕೆ ಯತ್ನಿಸಿ, ಕೇರಳ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೇ ಈ ಬಗ್ಗೆ ಖುದ್ದು ಕೇರಳ ಮುಸ್ಲಿ ಜಮಾ-ಅಥ್ ಕೌನ್ಸಿಲ್ ಸಹ ರೆಹನಾ ವಿರುದ್ಧ ಕ್ರಮಕೈಗೊಳ್ಳುವ ತೀರ್ಮಾನ ಕೈಗೊಂಡಿತ್ತು.

    ಈ ಕುರಿತು ಶನಿವಾರ ಹೇಳಿಕೆ ಬಿಡುಗಡೆ ಮಾಡಿದ ಕೌನ್ಸಿಲ್ ಅಧ್ಯಕ್ಷ ಎ.ಪೂನ್ಕುಂಜು, ರೆಹನಾ ಫಾತಿಮಾ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಪ್ರವೇಶಕ್ಕೆ ವಿರೋಧವಿದ್ದರೂ, ದೇವಾಲಯದ ಪ್ರವೇಶಕ್ಕೆ ಯತ್ನಿಸಿ ಹಿಂದೂ ಧರ್ಮದ ನಂಬಿಕೆಗಳಿಗೆ ಧಕ್ಕೆ ತರಲು ಯತ್ನಸಿದ್ದಾರೆ. ಹೀಗಾಗಿ ಆಕೆ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಇಸ್ಲಾಂ ಧರ್ಮದಿಂದ ಹೊರಹಾಕಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರವೇಶಿಸಿದ್ರೆ ಶಬರಿಮಲೆ ಗರ್ಭಗುಡಿ ಬಂದ್: ಅರ್ಚಕರ ಪ್ರತಿಭಟನೆಗೆ ಮಣಿದು ಪ್ರವೇಶದಿಂದ ಹಿಂದಕ್ಕೆ ಸರಿದ ಮಹಿಳೆಯರು

    ಶುಕ್ರವಾರ ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರ ವಿರೋಧ ನಡುವೆಯೂ, ಮಹಿಳಾ ಕಾರ್ಯಕರ್ತೆ ರೆಹನಾ ಫಾತಿಮಾ ಪೊಲೀಸರ ಬಿಗಿ-ಭದ್ರತೆಯೊಂದಿಗೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ತೆರಳಿದ್ದರು. ಆದರೆ ಇನ್ನೇನು ದೇವಾಲಯ ಪ್ರವೇಶ ಮಾಡಬೇಕು ಎನ್ನುವಷ್ಟರಲ್ಲಿ, ತಂತ್ರಿಗಳು ಒಂದು ವೇಳೆ ಆಕೆ ದೇವಾಲಯದ ಪ್ರವೇಶಕ್ಕೆ ಮುಂದಾದರೆ, ದೇವಾಲಯದ ಗರ್ಭಗುಡಿಯನ್ನು ಮುಚ್ಚಿ, ರಾಜಮನೆತನದ ಸುಪರ್ದಿಗೆ ನೀಡುತ್ತೇವೆ ಎಂದು ಎಚ್ಚರಿಸಿದ್ದರು. ಇದರಿಂದಾಗಿ ರೆಹನಾ ಫಾತಿಮಾ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯದೇ ಹಿಂದಿರುಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಿಂಸಾರೂಪಕ್ಕೆ ತಿರುಗಿದ ಶಬರಿಮಲೆ ಪ್ರತಿಭಟನೆ: ಗುಂಡಾಗಿರಿ ಪ್ರದರ್ಶಿಸಿದ ಪೊಲೀಸರು!

    ಹಿಂಸಾರೂಪಕ್ಕೆ ತಿರುಗಿದ ಶಬರಿಮಲೆ ಪ್ರತಿಭಟನೆ: ಗುಂಡಾಗಿರಿ ಪ್ರದರ್ಶಿಸಿದ ಪೊಲೀಸರು!

    ತಿರುವನಂತಪುರಂ: ಪುರಾತನ ಧಾರ್ಮಿಕ ಕ್ಷೇತ್ರ ಶಬರಿಮಲೆಗೆ ಮಹಿಳೆಯ ಪ್ರವೇಶ ವಿಚಾರವಾಗಿ ಶಬರಿಮಲದ ನಿಳಕ್ಕಲ್ ಬಳಿ ನಡೆಯುತ್ತಿದ್ದ ಪ್ರತಿಭಟನೆ ಉಗ್ರ ರೂಪ ಪಡೆದುಕೊಂಡಿದೆ.

    ಹೌದು, ಸುಪ್ರೀಂ ಕೋರ್ಟ್ ತೀರ್ಪು ಬೆನ್ನಲ್ಲೇ ಮಹಿಳೆಯರು ಇಂದು ಶಬರಿಮಲೆಯ ಪ್ರವೇಶಕ್ಕೆ ಮುಂದಾಗಿದ್ದರು. ಆದರೆ ಮಹಿಳೆಯರಿಗೆ ಮಾತ್ರ ಯಾವುದೇ ಕಾರಣಕ್ಕೂ ಮಣಿಕಂಠನ ದರ್ಶನಕ್ಕೆ ಅವಕಾಶ ನೀಡುವುದಿಲ್ಲವೆಂದು ಪ್ರಭಾವಿ ನಾಯರ್ ಸಮಾಜ, ಹಿಂದೂಪರ ಸಂಘಟನೆಗಳು, ಬಿಜೆಪಿ ಹಾಗೂ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಹಿಂಸಾರೂಪ ಪಡೆದಿದೆ.

    ಶಬರಿಗಿರಿ ತಲುಪುವ ಮುಖ್ಯ ದ್ವಾರವಾದ ನಿಳಕ್ಕಲ್‍ನಲ್ಲಿ ಬೆಳಗ್ಗೆಯಿಂದಲೂ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಲ್ಲಿಂದ 20 ಕಿ.ಮೀ. ಭಕ್ತರು ಕಾಲು ದಾರಿಯಲ್ಲೇ ಅಯ್ಯಪ್ಪನ ದೇಗುಲ ತಲುಪಬೇಕಿದೆ. ಇದರ ಜೊತೆ ಅಯ್ಯಪ್ಪನ ದೇಗುಲದ ದ್ವಾರ ತೆರೆಯಲು ಸಮಯ ಸಮೀಸುತ್ತಿದ್ದಂತೆಯೇ ಉದ್ರಿಕ್ತರು ಪ್ರತಿಭಟನೆಯನ್ನು ಹಿಂಸಾರೂಪಕ್ಕೆ ಬದಲಾಯಿಸಿದರು. ಅಯ್ಯಪ್ಪನ ದರ್ಶನಕ್ಕೆ ಆಗಮಿಸುತ್ತಿದ್ದ ಮಹಿಳೆಯರು ಹಾಗೂ ಹೆಣ್ಣು ಮಕ್ಕಳನ್ನು ಮಾರ್ಗಮಧ್ಯದಲ್ಲೇ ತಡೆದರು.

    ಇಂದು ಏನಾಯ್ತು?
    ಇಂದು ಬೆಳಗ್ಗೆ ಸ್ವತಃ ಮಹಿಳೆಯರಿಂದಲೇ ನಿಳಕ್ಕಲ್ ಹಾಗೂ ಪಂಪಾದಲ್ಲಿ ಪ್ರತಿಭಟನೆ ನಡೆಯಿತು. ಅಯ್ಯಪ್ಪನ ಸನ್ನಿಧಿಗೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅವಕಾಶ ನೀಡಿದ್ದು ಸರಿಯಲ್ಲ ಎಂದು ಮಹಿಳೆಯರು ಆಕ್ರೋಶ ಹೊರಹಾಕಿದರು. ಅಯ್ಯಪ್ಪನ ದರ್ಶನ ಪಡೆಯಲು ಮಕ್ಕಳೊಂದಿಗೆ ತೆರಳಿದ್ದ ಮಹಿಳೆಗೆ ಪ್ರತಿಭಟನಾಕಾರರು ದಾರಿಯಲ್ಲೇ ದಿಗ್ಬಂಧನ ಹಾಕಿದರು. ಇದರಿಂದ ಆತಂಕಕ್ಕೀಡಾದ ಮಹಿಳೆ ಮಗುವಿನೊಂದಿಗೆ ಹಿಂತಿರುಗಿದರು.

    ಮಧ್ಯಾಹ್ನ 2 ಗಂಟೆ ವೇಳೆಗೆ ಪ್ರತಿಭಟನೆ ಹಿಂಸಾರೂಪ ಪಡೀತು. ವರದಿಗೆ ತೆರಳಿದ್ದ ಇಂಗ್ಲೀಷ್ ನ್ಯೂಸ್ ಚಾನೆಲ್‍ಗಳ ವರದಿಗಾರ್ತಿಯರ ಮೇಲೆ ಹಲ್ಲೆ ನಡೆಸಲಾಯಿತು. ಪತ್ರಕರ್ತೆಯರು ಕಾರು ಹಾಗೂ ಪೊಲೀಸ್ ವ್ಯಾನ್‍ನಲ್ಲಿ ಭದ್ರತೆ ಪಡೆದರೂ, ಉದ್ರಿಕ್ತರು ದಾಳಿ ನಡೆಸಿದರು. ಮಧ್ಯಾಹ್ನ 3.45ರ ವೇಳೆಗೆ ಅಯ್ಯಪ್ಪನ ಸನ್ನಿಧಾನ ರಣಾಂಗಣವಾಗಿ ಮಾರ್ಪಟ್ಟಿತ್ತು. ಪೊಲೀಸರ ಮೇಲೆಯೇ ಪ್ರತಿಭಟನಾಕಾರರು ಕಲ್ಲುತೂರಿದರು. ಪರಿಸ್ಥಿತಿ ಮತ್ತಷ್ಟು ವಿಷಮಿಸಿ ಹಿಂಸಾಚಾರ ಭುಗಿಲೆದ್ದಿತ್ತು. ಬೆಳಗ್ಗಿನಿಂದಲೂ ಎಲ್ಲವನ್ನೂ ಸಮಚಿತ್ತದಿಂದಲೇ ನಿಭಾಯಿಸಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಬೀಸಿದರು.

    ಪೊಲೀಸರ ಲಾಠಿ ಚಾರ್ಜ್ ನಿಂದ ಮತ್ತಷ್ಟು ರೊಚ್ಚಿಗೆದ್ದ ಪ್ರತಿಭಟನಾಕಾರರು ಬೈಕ್‍ವೊಂದನ್ನ ಜಖಂಗೊಳಿಸಿ, ಕೇರಳ ಸಾರಿಗೆ ಬಸ್ ಮೇಲೆ ಕಲ್ಲು ತೂರಿ ಗ್ಲಾಸ್‍ಗಳನ್ನ ಹೊಡೆದು ಹಾಕಿದರು. ಪೊಲೀಸರ ಸರ್ಪಗಾವಲನ್ನೂ ಲೆಕ್ಕಿಸದೇ, ಸುಪ್ರೀಂಕೋರ್ಟ್ ತೀರ್ಪಲ್ಲ. ಸಂಪ್ರದಾಯವೇ ಮುಖ್ಯ ಎಂದು ರೊಚ್ಚಿಗೆದ್ದರು. ಈ ಮಧ್ಯೆ ಸ್ವಾಮಿ ಅಯ್ಯಪ್ಪ ಶಬರಿಮಲೆ ಸುತ್ತಲಿನ ಬುಡಕಟ್ಟು ಜನರ ಆರಾಧ್ಯ ದೈವವಾಗಿದ್ದು, ಶತಮಾನಗಳಿಂದ ಆಚರಿಸಿಕೊಂಡು ಬಂದ ಸಂಪ್ರದಾಯಗಳನ್ನು ಸರ್ಕಾರ ನಾಶಮಾಡಲು ಹೊರಟಿದೆ ಎಂದು ಬುಡಕಟ್ಟು ಸಮುದಾಯದ ಮುಖಂಡರು ಸಹ ಕಿಡಿಕಾರಿದರು.

    ಪೊಲೀಸರಿಂದ ಗುಂಡಾ ವರ್ತನೆ:
    ಸಂಜೆ ವೇಳೆಗೆ ಪ್ರತಿಭಟನೆ ಹಿಂಸಾರೂಪ ಪಡೆದ ಬೆನ್ನಲ್ಲೇ, ಪೊಲೀಸರು ಲಾಠಿ ಚಾರ್ಜ್ ಮಾಡುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದ್ದರು. ಇದಾದ ಬಳಿಕ ಪಂಪಾದ ಬಳಿ ಪ್ರತಿಭಟನಾಕಾರರು ನಿಲ್ಲಿಸಿದ್ದ ವಾಹನಗಳ ಮೇಲೆ ಪೊಲೀಸರು ಗುಂಡಾ ವರ್ತನೆ ತೋರಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ನಿಲ್ಲಿಸಿದ್ದ ಬೈಕುಗಳನ್ನು ಜಂಖಗೊಳಿಸಿದ್ದಾರೆ. ಅಲ್ಲದೇ ಅನೇಕ ವಾಹನಗಳನ್ನು ಮನಸೋ ಇಚ್ಛೆ ನಾಶಮಾಡಿದ್ದಾರೆ. ಪೊಲೀಸರ ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಪ್ರತಿಭಟನೆ ಮತ್ತಷ್ಟು ಕಾವು ಪಡೆದುಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv