Tag: kerala

  • ರಣರಂಗವಾಯ್ತು ಪ್ರತಿಭಟನೆ: ಪೊಲೀಸರ ಮೇಲೆ ಅಯ್ಯಪ್ಪ ಭಕ್ತರಿಂದ ಕಲ್ಲು ತೂರಾಟ!

    ರಣರಂಗವಾಯ್ತು ಪ್ರತಿಭಟನೆ: ಪೊಲೀಸರ ಮೇಲೆ ಅಯ್ಯಪ್ಪ ಭಕ್ತರಿಂದ ಕಲ್ಲು ತೂರಾಟ!

    ತಿರುವನಂತಪುರ: ಬೆಳಗ್ಗೆಯಿಂದಲೂ ಬೂದಿ ಮುಚ್ಚಿದ ಕೆಂಡದಂತ್ತಿದ್ದ ನಿಳಕ್ಕಲ್ ಬಳಿಯ ಅಯ್ಯಪ್ಪ ಭಕ್ತರ ಪ್ರತಿಭಟನೆ ಸಂಜೆ ವೇಳೆಗೆ ಹಿಂಸಾಚಾರಕ್ಕೆ ತಿರುಗಿದ್ದು, ಭಕ್ತರು ಹಾಗೂ ಪೊಲೀಸರ ನಡುವೇ ಕಲ್ಲು ತೂರಾಟಕ್ಕೆ ನಡೆದಿದೆ.

    ನಿಳಕ್ಕಲ್ ಬಳಿ ಬೆಳಗ್ಗೆಯಿಂದ ಶಬರಿಮಲೆಗೆ ತೆರಳುತ್ತಿದ್ದ ಪ್ರತಿ ವಾಹನವನ್ನು ಪರಿಶೀಲನೆ ನಡೆಸಿ ಮಹಿಳಾ ಭಕ್ತರನ್ನು ತಡೆಯುತ್ತಿದ್ದರು. ಈ ವೇಳೆ ವರದಿ ಮಾಡಲು ತೆರಳಿದ್ದ ಮಹಿಳಾ ಪತ್ರಕರ್ತರ ಮೇಲೂ ದೌರ್ಜನ್ಯ ನಡೆಸಿದ ಭಕ್ತರು ಹಲ್ಲೆ ನಡೆಸಿದ್ದರು. ಇದರ ನಡುವೆಯೇ ಪ್ರತಿಭಟನಕಾರರು ಪೊಲೀಸ್ ಬೈಕನ್ನು ನಾಶ ಪಡಿಸಿದ್ದರು. ಅಲ್ಲದೇ ಪೊಲೀಸ್ ಕ್ಯಾಪ್ ಮೇಲೂ ಕಲ್ಲೆಸೆದಿದ್ದರು.

    ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಲು ಮುಂದಾದ ಪೊಲೀಸರು ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್ ನಡೆಸಿ ಗುಂಪನ್ನು ಚದುರಿಸುವ ಪ್ರಯತ್ನ ನಡೆಸಿದರು.

    ಬೆಳಗ್ಗೆಯಿಂದ ನಿರಂತರವಾಗಿ ಪೊಲೀಸರ ಕಾರ್ಯಕರ್ತರ ನಡುವೇ ವಾಗ್ವಾದ ನಡೆಯುತ್ತಲೇ ಇತ್ತು. ಆದರೂ ಅಯ್ಯಪ್ಪ ದರ್ಶನ ಪಡೆಯಲು ಇಷ್ಟಪಟ್ಟಿದ್ದ ಮಹಿಳಾ ಭಕ್ತರಿಗೆ ಬೀಗಿ ಪೊಲೀಸ್ ಭದ್ರತೆ ನೀಡಿದ್ದ ಪೊಲೀಸರು ಅವರನ್ನು ಅಯ್ಯಪ್ಪ ಬೆಟ್ಟದತ್ತ ಕರೆದ್ಯೊಯಲು ಮುಂದಾದರು. ಈ ವೇಳೆ ರೊಚ್ಚಿಗೆದ್ದ ಭಕ್ತರು ಪೊಲೀಸ್ ಜೀಪ್ ಸೇರಿದಂತೆ ಕ್ಯಾಪ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಇವತ್ತೇ ನಾರಿಯರಿಗೆ ಮಣಿಕಂಠನ ದರ್ಶನ ಸಿಗುತ್ತಾ – ಅಯ್ಯಪ್ಪನ ಊರಲ್ಲಿ ಗಲಾಟೆ ಜೋರು

    ಇವತ್ತೇ ನಾರಿಯರಿಗೆ ಮಣಿಕಂಠನ ದರ್ಶನ ಸಿಗುತ್ತಾ – ಅಯ್ಯಪ್ಪನ ಊರಲ್ಲಿ ಗಲಾಟೆ ಜೋರು

    ತಿರುವನಂತಪುರ: ಇಂದು ಸಂಜೆ 5 ಗಂಟೆ ವೇಳೆಗೆ ದೇವಾಲಯದ ಬಾಗಿಲು ತೆರೆಯಲಿರುವ ಹಿನ್ನೆಲೆಯಲ್ಲಿ ಕೇರಳಾದ್ಯಂತ ಅಯ್ಯಪ್ಪಸ್ವಾಮಿ ಉಳಿಸಿ ಆಂದೋಲನ ಜೋರಾಗಿದೆ.

    ಸುಪ್ರೀಂ ಕೋರ್ಟ್ ಪ್ರವೇಶಕ್ಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಯಾವೊಬ್ಬ ಮಹಿಳೆಯರು ದೇವಾಲಯಕ್ಕೆ ತೆರಳದಂತೆ ಭಕ್ತರು ಹಾಗೂ ಮಹಿಳಾ ಹೋರಾಟಗಾರರು ಸ್ಥಳದಲ್ಲಿ ಅಡ್ಡಗಟ್ಟಿ ಪ್ರತಿ ವಾಹನವನ್ನು ಪರಿಶೀಲನೆ ನಡೆಸಿ ಮುಂದಕ್ಕೆ ಬಿಡುತ್ತಿದ್ದಾರೆ. ದೇವಾಲಯದ ಆಡಳಿತ ಮಂಡಳಿಕಾರ್ಯಕರ್ತರು, ಭಕ್ತರು ದೇವಾಲಯದ ಬೆಟ್ಟದ ಕೆಳಭಾಗದ ಅಂದರೆ ದೇವಾಲಯದಿಂದ 20 ಕಿಮೀ ದೂರದ ನಿಳಕ್ಕಲ್ ಬಳಿಯೇ ವಾಹನಗಳನ್ನು ತಡೆಯುತ್ತಿದ್ದಾರೆ.

    ಸುಪ್ರೀಂ ಕೋರ್ಟ್ ಆದೇಶವನ್ನು ಧಿಕ್ಕರಿಸಿರುವ ಭಕ್ತರು ಸ್ಥಳದಲ್ಲಿ ಭದ್ರಕೋಟೆ ನಿರ್ಮಿಸಿದ್ದಾರೆ. ಪ್ರತಿಭಟನೆ ನಡೆಸುತ್ತಿರುವವರಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಮಂಗಳವಾರ ತಿರುವಾಂಕೂರು ಆಡಳಿತ ಮಂಡಳಿ, ಪಂದಳಂ ರಾಜಮನೆತನ ಹಾಗೂ ಸರ್ಕಾರ ನಡುವೆ ಏರ್ಪಡಿಸಿದ್ದ ಸಂಧಾನ ಸಭೆಯೂ ವಿಫಲವಾಗಿದೆ. ಪೊಲೀಸರು ನಡೆಸಬೇಕಾದ ಕಾರ್ಯವನ್ನು ಕಾರ್ಯಕರ್ತರು ಕೈಗೆತ್ತುಕೊಂಡಿದ್ದು ದೇವಾಲಯ ಪ್ರದೇಶದಲ್ಲಿ ಹೈ ಆಲರ್ಟ್ ಘೋಷಣೆ ಮಾಡಲಾಗಿದೆ.

    ಈ ನಡುವೆ ವಿವಾದ ಕುರಿತು ಪ್ರತಿಕ್ರಿಯೆ ನೀಡಿರುವ ಪತ್ತನಂತಿಟ್ಟಂ ಕ್ಷೇತ್ರದ ಸಂಸದ ಆಂಟೋ ಆ್ಯಂಟನಿ ಅವರು, ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿ ಕೋರ್ಟ್ ತೀರ್ಪು ಜಾರಿಗೆ ಅವಕಾಶ ನೀಡಬೇಕು ಎಂದು ತಿಳಿಸಿದ್ದಾರೆ. ದೇವಾಲಯದ ಪ್ರದೇಶದಲ್ಲಿ ಶಾಂತಿ ಕಾಪಾಡಲಿ ಸರ್ಕಾರ ಕೂಡ ಕ್ರಮಕೈಗೊಂಡಿದ್ದು ಜಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನೇಮಕ ಮಾಡಿ ಪ್ರದೇಶವನ್ನು ವಶಕ್ಕೆ ಪಡೆದಿದೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ವಿಚಾರವಾದಿ ಪ್ರೋ ಭಗವಾನ್, ದೇವಾಲಯ ಪ್ರವೇಶಕ್ಕೆ ತಡೆ ನೀಡಿರುವುದು ಅವೈಜ್ಞಾನಿಕ ನಡೆ. ಮಹಿಳೆಯರಿಗೆ ತಡೆ ನೀಡಿರುವುದು ಕಂದಚಾರ ಆಚರಣೆ ಪ್ರತಿರೂಪ. ಮಹಿಳೆಯಲ್ಲಿ ನಡೆಯುವ ಕ್ರೀಯೆ ಪ್ರಕೃತಿಯ ವರ. ಆದರೆ ಈ ಕಾರಣದಿಂದ ಪ್ರವೇಶ ನಿರಾಕರಿಸಬಾರದು. ಮಹಿಳೆಯರೇ ಅಲ್ಲಿ ಪ್ರತಿಭಟನೆ ನಡೆಸುತ್ತಿರುವುದು ವಿಷಾದನೀಯ. ಆಡಳಿತ ಮಂಡಳಿ ಹಾಗೂ ರಾಜಮನೆತನ ನಡೆ ಕೂಡ ಅವರ ಮೌಢ್ಯವನ್ನು ಬೆಳೆಸುತ್ತಿದೆ. ಆದರೆ ಕೇರಳ ಸರ್ಕಾರ ಸುಪ್ರೀಂ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸದೇ ಇರುವುದು ಉತ್ತಮ ನಡೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ದೇವಾಲಯಕ್ಕೆ ಮಹಿಳೆಯರ ಪ್ರವೇಶ ನಿರಾಕರಣೆ ಮಾಡಿರುವುದು ವೈಜ್ಞಾನಿಕ ಕಾರಣಕ್ಕೂ ಆಗಿರಬಹುದು, ಏಕೆಂದರೆ ದೇವದಾಸಿ ಪದ್ಧತಿ ಜಾರಿ ಇದ್ದ ವೇಳೆ ಅಂತಹ ಘಟನೆಗಳು ಅಲ್ಲಿ ನಡೆಯಬಾರದು ಎಂಬ ಕಾರಣದಿಂದಲೂ ನಿಷೇಧ ಮಾಡಿರಬಹುದು. ಆದರೆ ಇಂದು ಸಂವಿಧಾನ ಎಲ್ಲಾ ಜನರಿಗೂ ಸಮಾನತೆ ಹಕ್ಕು ನೀಡಿದೆ. ಅದ್ದರಿಂದ ಮಹಿಳೆಯ ಪ್ರವೇಶಕ್ಕೆ ತಡೆ ನೀಡಬಾರದು ಎಂದು ತಿಳಿಸಿದರು.

    ತುಲಾ ಮಾಸದ ಆರಂಭದ ಕಾರಣ ಇಂದಿನಿಂದ 6 ದಿನಗಳ ಕಾಲ ದೇವಾಲಯ ತೆರೆಯಲಾಗುತ್ತದೆ, 6 ದಿನಗಳ ಕಾಲ ನಡೆಯುವ ವಿಶೇಷ ಪೂಜೆಯ ಬಳಿಕ ಮತ್ತೆ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಪತ್ರಕರ್ತೆಯೊಬ್ಬರು ಕಾರಿನಲ್ಲಿ ತೆರಳಲು ಯತ್ನಿಸಿದ ವೇಳೆ ಮಹಿಳಾ ಪ್ರತಿಭಟನಕಾರರೇ ಕಾರಿನ ಗಾಜನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ಕೆಲ ಕಾಲ ಸ್ಥಳದಲ್ಲಿ ಅಂತಕದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೇ ಮಹಿಳೆಯರು ದೇವಾಲಯ ಪ್ರವೇಶ ಮಾಡಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಶಿವಸೇನೆಯ ಮಹಿಳಾ ಕಾರ್ಯಕರ್ತೆಯರು ಬೆದರಿಕೆ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕನ್ನಡ ಬರುತ್ತಾ ಅಂತ ಕೇಳಿ ಯುವಕನ ಎದೆಗೆ ಚಾಕು ಇರಿದು ಕೊಲೆಗೈದ್ರು!

    ಕನ್ನಡ ಬರುತ್ತಾ ಅಂತ ಕೇಳಿ ಯುವಕನ ಎದೆಗೆ ಚಾಕು ಇರಿದು ಕೊಲೆಗೈದ್ರು!

    ಬೆಂಗಳೂರು: ಕನ್ನಡ ಬರುತ್ತಾ ಅಂತ ಕೇಳಿ ಕೇರಳ ಮೂಲದ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಗೌತಮ್ ಕೃಷ್ಣ ಕೊಲೆಗೀಡಾದ ಯುವಕ. ಈತ ಮೂರು ದಿನಗಳ ಹಿಂದೆ ನಗರದ ಕೊರಿಯರ್ ಒಂದರಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದನು.

    ನಡೆದಿದ್ದೇನು?:
    ಗೌತಮ್ ಹಾಗೂ ಆತನ ಗೆಳೆಯರು ವಾರದ ಹಿಂದೆ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದ್ದರು. ಮೊದಲು ಎರ್ನಾಕುಲಮ್ ನಲ್ಲಿ ಸ್ಯಾಮ್ ಸಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೌತಮ್ ಗೆ ಮೂರು ದಿನಗಳ ಹಿಂದೆಯಷ್ಟೇ ನಗರದ ಕೊರಿಯರ್ ಒಂದರಲ್ಲಿ ಕೆಲಸ ಸಿಕ್ಕಿತ್ತು. ಹೀಗಾಗಿ ಹಳೆ ಕಂಪನಿಯ ಸಂಬಳ ಬಂದ ಹಿನ್ನಲೆಯಲ್ಲಿ ಗೌತಮ್ ಮತ್ತು ಗೆಳೆಯರು ಮೆಜೆಸ್ಟಿಕ್ ನಲ್ಲಿ ಪಾರ್ಟಿ ಮಾಡಿದ್ದರು.

    ಪಾರ್ಟಿ ಮುಗಿಸಿ ಬರುವಾಗ ಕೆ.ಜಿ ರಸ್ತೆಯ ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಡಿಯೊ ಬೈಕ್ ನಲ್ಲಿ ಬಂದ ಮೂರು ಜನ ಯುವಕರಲ್ಲಿ ಇಬ್ಬರು ಬೈಕಿನಿಂದ ಇಳಿದು ಕನ್ನಡ ಬರುತ್ತಾ ಎಂದು ಗೌತಮ್ ನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಗೌತಮ್ ಉತ್ತರಿಸುತ್ತಿದ್ದಂತೆಯೇ ಆತನ ಎದೆಗೆ ಚಾಕುವಿನಿಂದ ಇರಿದಿದ್ದಾರೆ. ಪರಿಣಾಮ ಗೌತಮ್ ನೆಲಕ್ಕುರುಳಿದ್ದಾನೆ.

    ಕೂಡಲೇ ಗೌತಮ್ ನನ್ನು ಆಟೋ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದ್ರೆ ಅದಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉಪ್ಪಾರಪೇಟೆ ಪೊಲೀಸರು, ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಹಾಗೆಯೇ ಹತ್ಯೆ ಮಾಡಿ ಎಸ್ಕೇಪ್ ಆದ ಯುವಕರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಬರಿಮಲೆಗೆ ಬರೋ ಮಹಿಳೆಯರನ್ನ ಸೀಳಿ ಹಾಕ್ಬೇಕು: ನಟ ಕೊಲ್ಲಂ ತುಳಸಿ

    ಶಬರಿಮಲೆಗೆ ಬರೋ ಮಹಿಳೆಯರನ್ನ ಸೀಳಿ ಹಾಕ್ಬೇಕು: ನಟ ಕೊಲ್ಲಂ ತುಳಸಿ

    ತಿರುವನಂತಪುರಂ: ಶಬರಿಮಲೆಗೆ ಬರುವ ಮಹಿಳೆಯರನ್ನು ಸೀಳಿ ಹಾಕಬೇಕು ಎಂದು ಮಲಯಾಳಂ ಚಿತ್ರ ನಟ ಕೊಲ್ಲಂ ತುಳಸಿ ವಿವಿದಾತ್ಮಕ ಹೇಳಿ ನೀಡಿದ್ದಾರೆ.

    ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಶಬರಿಮಲೆಗೆ ಕಾಲಿಡುವ ಮಹಿಳೆಯನ್ನು ಎರಡು ಭಾಗ ಮಾಡಬೇಕು. ತುಂಡಾದ ಒಂದು ದೇಹವನ್ನು ದೆಹಲಿಗೆ, ಮತ್ತೊಂದನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಮನೆಗೆ ಕಳುಹಿಸಿಕೊಡಬೇಕು ಎಂದು ಹೇಳಿದ್ದಾರೆ.

    ಮಹಿಳೆಯರಿಗೆ ಶಬರಿಮಲೆ ಪ್ರವೇಶ ಮಾಡಲು ಅವಕಾಶ ನೀಡಿದರೆ ದೇವಾಲಯದ ಪಾವಿತ್ರ್ಯ ಧಕ್ಕೆ ಬರುತ್ತದೆ. ಇದೇ ಕಾರಣಕ್ಕೆ ಹಿಂದಿನಿಂದಲೂ ಪ್ರವೇಶ ನಿಷೇಧಿಸಲಾಗಿತ್ತು. ಜನರ ನಂಬಿಕೆಯನ್ನು ಲೆಕ್ಕಿಸದೇ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸುಪ್ರೀ ಕೋರ್ಟ್ ತೀರ್ಪು ಸಿಕ್ಕಿದೆ ಅಂತಾ ಮಹಿಳೆಯರು ದೇವಾಲಯಕ್ಕೆ ಬಂದರೆ ಕತ್ತರಿಸಿ ಹಾಕಲಾಗುತ್ತದೆ ಎಂದು ಕೊಲ್ಲಂ ತುಳಸಿ ಎಚ್ಚರಿಕೆ ನೀಡಿದ್ದಾರೆ.

    `ಸುಪ್ರೀಂ’ ಹೇಳಿದ್ದೇನು?
    ಶಬರಿಮಲೆ, ಮಹಿಳೆಯರ ಧಾರ್ಮಿಕ ಹಕ್ಕನ್ನು ಕಸಿದುಕೊಂಡಿದ್ದು, ಭಕ್ತಿಯನ್ನು ಲಿಂಗದ ಆಧಾರದಲ್ಲಿ ವಿವರಿಸಲು ಸಾಧ್ಯವಿಲ್ಲ. ಧಾರ್ಮಿಕ ಹಕ್ಕಿಗೂ- ದೈಹಿಕ ಸ್ಥಿತಿಗತಿಗೂ ಸಂಬಂಧವೇ ಇಲ್ಲ. ಅಯ್ಯಪ್ಪನ ಭಕ್ತರು ಅನ್ಯಧರ್ಮದವರಂತೆ ಪ್ರತ್ಯೇಕ ಸ್ಥಾನಮಾನ ಹೊಂದಿಲ್ಲ. ಒಂದೆಡೆ ಮಹಿಳೆಯರನ್ನು ದೇವರಂತೆ ಪೂಜಿಸುತ್ತೇವೆ. ಮತ್ತೊಂದೆಡೆ ನಿಷೇಧ ಹೇರಲಾಗಿದೆ. ಮಹಿಳೆ ದೇವರಿಗೆ ಸಮಾನವಾಗಿದ್ದು ಮಹಿಳೆಯರಿಗೆ ಶಬರಿಮಲೆಗೆ ಬಹಿಷ್ಕಾರ ಸರಿಯಲ್ಲ. ಮಹಿಳೆಯರ ಬಗೆಗಿನ ಇಬ್ಬಗೆ ನೀತಿಯಿಂದ ಆಕೆಯ ಸ್ಥಾನಮಾನಕ್ಕೆ ಧಕ್ಕೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊರಿಯರ್ ಆಫೀಸ್‍ನಲ್ಲಿ ಸಿಕ್ತು 200 ಕೋಟಿ ಮೌಲ್ಯದ ಡ್ರಗ್ಸ್!

    ಕೊರಿಯರ್ ಆಫೀಸ್‍ನಲ್ಲಿ ಸಿಕ್ತು 200 ಕೋಟಿ ಮೌಲ್ಯದ ಡ್ರಗ್ಸ್!

    ತಿರುವನಂತಪುರಂ: ಡ್ರಗ್ಸ್ ನಿಗ್ರಹ ದಳ ಹಾಗೂ ಅಬಕಾರಿ ಇಲಾಖೆಯ ಜಂಟಿ ಕಾರ್ಯಾಚರಣೆ ನಡೆಸಿ ಸುಮಾರು 200 ಕೋಟಿ ರೂಪಾಯಿ ಮೌಲ್ಯದ 32 ಕೆ.ಜಿ. ಡ್ರಗ್ಸ್ ಅನ್ನು ಕೊಚ್ಚಿಯ ಕೊರಿಯರ್ ಸೆಂಟರ್ ನಲ್ಲಿ ವಶಪಡಿಸಿಕೊಂಡಿದೆ.

    ಖಚಿತ ಮಾಹಿತಿ ಆಧರಿಸಿ ಕೇರಳದ ಮಾದಕ ದ್ರವ್ಯ ನಿಗ್ರಹ ಪಡೆ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಶನಿವಾರ ಕೊಚ್ಚಿಯ ಖಾಸಗಿ ಕೊರಿಯರ್ ಸೆಂಟರ್ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಸುಮಾರು 200 ಕೋಟಿ ರೂಪಾಯಿ ಮೌಲ್ಯದ 32 ಕೆಜಿ ಮಾದಕ ದ್ರವ್ಯದ 64 ಪ್ಯಾಕೆಟ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

    ಡ್ರಗ್ಸ್ ದಂಧೆಕೋರರು ಪ್ಯಾಕೆಟ್‍ಗಳನ್ನು ಬಟ್ಟೆಯಲ್ಲಿ ಸುತ್ತಿ ಬಾಕ್ಸ್‍ಗಳಲ್ಲಿ ಬಚ್ಚಿಟ್ಟಿದ್ದರು. ಅಲ್ಲದೇ ಸಾಗಾಣಿಕೆಯ ಹಿಂದೆ ಕೊರಿಯರ್ ಸೆಂಟರ್‍ನ ಸಿಬ್ಬಂದಿಗಳು ಭಾಗಿಯಾಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ ಎಂದು ಎರ್ನಾಕುಲಂನ ವಿಭಾಗೀಯ ಉಪ ಅಬಕಾರಿ ಆಯುಕ್ತ ಎ.ಎಸ್.ರಂಜಿತ್ ಹೇಳಿದ್ದಾರೆ.

    ಅಬಕಾರಿ ಆಯುಕ್ತ ರಿಶಿ ರಾಜ್ ಸಿಂಗ್ ಮಾತನಾಡಿ, ಡ್ರಗ್ಸ್ ದಂಧೆಕೋರರು ಅಕ್ರಮವಾಗಿ ಮಾದಕ ವಸ್ತುಗಳನ್ನು ವಿದೇಶಕ್ಕೆ ರಫ್ತು ಮಾಡುವ ಯೋಜನೆಯನ್ನು ಹೊಂದಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ಭಾರೀ ಪ್ರಮಾಣದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದೇವೆ. ಅಲ್ಲದೇ ದಂಧೆಕೋರರು ಯಾವ ರೀತಿ ಇವುಗಳನ್ನು ರಫ್ತು ಮಾಡುತ್ತಿದ್ದರು ಎನ್ನುವುದು ವಿಚಾರಣೆ ವೇಳೆ ತಿಳಿಯಲಿದೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಷೇರು ಮಾರಾಟ ಮಾಡಿ ಕೇರಳ ಫುಟ್‍ಬಾಲ್ ತಂಡಕ್ಕೆ ಸಚಿನ್ ಗುಡ್‍ಬೈ

    ಷೇರು ಮಾರಾಟ ಮಾಡಿ ಕೇರಳ ಫುಟ್‍ಬಾಲ್ ತಂಡಕ್ಕೆ ಸಚಿನ್ ಗುಡ್‍ಬೈ

    ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಸಚಿನ್ ತೆಂಡೂಲ್ಕರ್ ಇಂಡಿಯನ್ ಸೂಪರ್ ಲೀಗ್‍ನಲ್ಲಿ ಕೇರಳ ಬ್ಲಾಸ್ಟರ್ಸ್ ಫುಟ್ಬಾಲ್ ಕ್ಲಬ್ ನಲ್ಲಿ ಹೊಂದಿದ್ದ ತಮ್ಮ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಈ ಮೂಲಕ ತಂಡದ ಸಹ ಮಾಲೀಕತ್ವಕ್ಕೆ ಗುಡ್ ಬೈ ಹೇಳಿದ್ದಾರೆ.

    ಕಳೆದ ನಾಲ್ಕು ಆವೃತ್ತಿಗಳಿಂದ ಸಚಿನ್ ಕೇರಳ ಬ್ಲಾಸ್ಟರ್ಸ್ ತಂಡದ ಸಹ ಮಾಲೀಕರಾಗಿದ್ದರು. ಈ ವರ್ಷದ ಆವೃತ್ತಿ ಆರಂಭವಾಗುವ ಮುನ್ನವೇ ಸಚಿನ್ ತಮ್ಮ ಷೇರು ಮಾರಾಟ ಮಾಡಿದ್ದಾರೆ.

    ಸದ್ಯ ಸಚಿನ್‍ರ ಈ ನಿರ್ಧಾರ ಕೇರಳ ಬ್ಲಾಸ್ಟರ್ಸ್ ತಂಡಕ್ಕೆ ಶಾಕ್ ನೀಡಿದೆ. ಏಕೆಂದರೆ ಕೇರಳ ತಂಡಕ್ಕೆ ಸಚಿನ್ ಬೆಂಬಲವಾಗಿ ನಿಂತಿದ್ದರು. ಅವರ ಅಪಾರ ಅಭಿಮಾನಿಗಳು ಕೂಡ ತಂಡವನ್ನು ಬೆಂಬಲಿಸುತ್ತಿದ್ದರು. ಇದು ಆಟಗಾರರಲ್ಲಿ ಹೆಚ್ಚಿನ ಸ್ಫೂರ್ತಿ ತುಂಬುತ್ತಿತ್ತು.

    ತಂಡದ ಮಾಲೀಕತ್ವ ತೊರೆದ ಬಳಿಕ ಮಾತನಾಡಿದ ಸಚಿನ್, ತಂಡ ಸದ್ಯ ಉತ್ತಮ ರೂಪವನ್ನು ಪಡೆದಿದ್ದು, ಸಾಧನೆಯ ದಾರಿಯಲ್ಲಿದೆ. ಈ ವೇಳೆ ಅವರಿಗೆ ಹೆಚ್ಚಿನ ಯಶಸ್ಸು ಸಿಗಲಿ. ಎಂದಿಗೂ ನಾನು ತಂಡದ ಪರ ಇರಲಿದ್ದೇನೆ ಎಂದು ಹಾರೈಸುವುದಾಗಿ ತಿಳಿಸಿದ್ದಾರೆ.

    ಆರಂಭದಲ್ಲಿ ಹೆಚ್ಚಿನ ಷೇರು ಹೊಂದಿದ್ದ ಸಚಿನ್ ನಂತರ ತನ್ನಲ್ಲಿದ್ದ ಷೇರುಗಳನ್ನು ಮಾರಾಟ ಮಾಡುತ್ತಾ ಬಂದಿದ್ದರು. ಕೊನೆಗೆ ಸಚಿನ್ ಬಳಿ 20% ಷೇರು ಇದ್ದರೆ, ಹೈದರಾಬಾದಿನ ಮೀಡಿಯಾ ಆಂಡ್ ಎಂಟರ್‍ಟೈನ್‍ಮೆಂಟಿನ ಪ್ರಸಾದ್ ಗ್ರೂಪ್ 80% ಷೇರು ಹೊಂದಿತ್ತು. ಸಚಿನ್ ಅವರ ಬಳಿಯಿದ್ದ ಷೇರನ್ನು ಅಂತಾರಾಷ್ಟ್ರೀಯ ಉದ್ಯಮಿ ಎಂ.ಎ. ಯೂಸುಫ್ ಆಲಿ ಅವರ ಲುಲು ಗ್ರೂಪ್ ಖರೀದಿಸಿದೆ ಎಂದು ಮಾಧ್ಯಮವೊಂದು ವರದಿ ಪ್ರಕಟಿಸಿದೆ. ಆದರೆ ಈ ಬಗ್ಗೆ ಲುಲು ಗ್ರೂಪ್ ಆಗಲಿ ಕೇರಳ ಬ್ಲಾಸ್ಟರ್ಸ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಧಿಕಾರದ ಗದ್ದುಗೆ ಹಿಡಿಯಲು ಕೇರಳದ ದೇಗುಲಕ್ಕೆ ಮೊರೆ ಹೊದ್ರಾ ಬಿಎಸ್‍ವೈ..?

    ಅಧಿಕಾರದ ಗದ್ದುಗೆ ಹಿಡಿಯಲು ಕೇರಳದ ದೇಗುಲಕ್ಕೆ ಮೊರೆ ಹೊದ್ರಾ ಬಿಎಸ್‍ವೈ..?

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಕೇರಳದ ಪ್ರಸಿದ್ಧ ದೇವಾಲಯದಲ್ಲಿ ಯಜ್ಞ-ಯಾಗಾದಿಗಳನ್ನು ನೇರವೇರಿಸುತ್ತಿದ್ದಾರೆ.

    ಕೈತಪ್ಪಿರುವ ಅಧಿಕಾರದ ಗದ್ದುಗೆಯನ್ನು ಮತ್ತೊಮ್ಮೆ ಪಡೆಯಬೇಕೆಂದಿರುವ ಬಿ.ಎಸ್.ಯಡಿಯೂರಪ್ಪನವರು, ಕೇರಳದ ಕಣ್ಣೂರಿನ ಅರಣ್ಯ ಪ್ರದೇಶದಲ್ಲಿರುವ ಪ್ರಸಿದ್ಧ ಶಿವನ ದೇವಾಲಯವಾಗಿರುವ ರಾಜರಾಜೇಶ್ವರ ದೇವಾಲಯದಲ್ಲಿ ಕಳೆದ ಅಮಾವಸ್ಯೆಯ ದಿನ ಶನಿವಾರ ಹಾಗೂ ಭಾನುವಾರದಂದು ವಿಶೇಷ ಯಜ್ಞ-ಯಾಗಾದಿಗಳನ್ನು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಪರಿಣಾಮವಾಗಿಯೇ ಭಾನುವಾರದ ನಂತರ ರಾಜ್ಯ ರಾಜಕಾರಣದಲ್ಲಿನ ಆಗುತ್ತಿರುವ ಬದಲಾವಣೆಗಳಿಗೆ ಕಾರಣವಾಗಿದೆ ಎನ್ನಲಾಗಿದೆ.

    ಕಣ್ಣೂರಿನ ಪುರಾತನ ಹಾಗೂ ಪ್ರಸಿದ್ಧ ದೇವಾಲಯವಾಗಿರುವ ರಾಜರಾಜೇಶ್ವರ ದೇವಾಲಯದಲ್ಲಿ ಕಳೆದ ಶನಿವಾರ ಹಾಗೂ ಭಾನುವಾರ ಎರಡು ದಿನಗಳ ಕಾಲ ತಂತ್ರಿಗಳಿಂದ ನಿರಂತರ ಯಾಗ ನಡೆದಿದ್ದು, ಪ್ರಮುಖವಾಗಿ ರಾಜಸೂಯ ಯಾಗ, ಶತ್ರು ಮರ್ಧಿನಿ ಯಾಗ ಹಾಗೂ ವಶೀಕರಣ ಯಾಗವನ್ನು ಬಿಎಸ್‍ವೈ ನೆರವೇರಿಸಿದ್ದಾರೆ. ಅಧಿಕಾರವನ್ನು ಹಿಡಿಯಲು ಮಾಡಿಸುವ ಯಾಗವೇ ರಾಜಸೂಯ ಯಾಗ, ಎದುರಾಳಿಗಳನ್ನು ಮಟ್ಟಹಾಕಿ ತಮ್ಮ ಪ್ರಾಬಲ್ಯವನ್ನು ಸ್ಥಾಪಿಸಿಕೊಳ್ಳಲು ಮಾಡುವ ಯಾಗವೇ ಶತ್ರು ಮರ್ಧಿನಿ ಯಾಗ ಹಾಗೂ ವಶೀಕರಣ ಯಾಗವನ್ನು ಸಹ ಮಾಡಿಸಿದ್ದಾರಂತೆ.

    ಇದಲ್ಲದೇ ನವರಾತ್ರಿಯ ವೇಳೆಯೂ ಒಂಬತ್ತು ದಿನಗಳ ವಿಶೇಷ ಯಾಗ ನಡೆಸುವಂತೆ ಸೂಚಿಸಿದ್ದು, ಮೈಸೂರಿನ ಚಾಮುಂಡಿ ಬೆಟ್ಟದಿಂದ ಕಳಸ ತೆಗೆದುಕೊಂಡು ಹೋಗಿ ಯಾಗ ನೆರವೇರಿಸುತ್ತಾರೆ. ಅಲ್ಲದೇ ದಸರಾ ವೇಳೆ ತಂತ್ರಿಗಳು ನವಶಕ್ತಿಯನ್ನು ಆರಾಧನೆ ಮಾಡಿ ಯಾಗ ನಡೆಸುತ್ತಾರೆ.

    ಯಡಿಯೂರಪ್ಪನವರು ಆಗಾಗ ಈ ದೇವಸ್ಥಾನಕ್ಕೆ ಹೋಗಿ ಬರುತ್ತಲೇ ಇರುತ್ತಾರೆ. ಅಲ್ಲದೇ ಕೆಲ ತಿಂಗಳ ಹಿಂದೆಯೂ ದೇವಸ್ಥಾನಕ್ಕೆ ಭೇಟಿ ನೀಡಿದ್ದರ ಬಗ್ಗೆ ದೇವಸ್ಥಾನದ ವೆಬ್‍ಸೈಟ್‍ಗಳಲ್ಲಿ ಮಾಹಿತಿ ಉಲ್ಲೇಖಿಸಿಲಾಗಿದೆ. ಈ ಹಿಂದೆಯೂ ಸಹ ಆನೆಯನ್ನು ದೇವಸ್ಥಾನಕ್ಕೆ ನೀಡಿದ್ದರು. ಇವರಲ್ಲದೆ ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾರವರು ಸಹ ಆನೆಯನ್ನು ನೀಡಿರುವುದಾಗಿ ಉಲ್ಲೇಖವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೇರಳ ಪ್ರವಾಹ – ಮಾರುತಿ ಸುಜುಕಿಯ 357 ಹೊಸ ಕಾರುಗಳು ಗುಜುರಿಗೆ!

    ಕೇರಳ ಪ್ರವಾಹ – ಮಾರುತಿ ಸುಜುಕಿಯ 357 ಹೊಸ ಕಾರುಗಳು ಗುಜುರಿಗೆ!

    ತಿರುವನಂತಪುರ: ಕೇರಳ ಪ್ರವಾಹಕ್ಕೆ ಒಂದೇ ಕಾರ್ ಶೋರೂಂನ 357 ಹೊಸ ಕಾರುಗಳು ಸಂಪೂರ್ಣ ಹಾಳಾಗಿದ್ದು, ಎಲ್ಲಾ ಕಾರುಗಳನ್ನು ಗುಜುರಿಗೆ ಹಾಕಲು ಶೋರೂಂ ಮಾಲೀಕರು ನಿರ್ಧರಿಸಿದ್ದಾರೆ.

    ಪ್ರವಾಹದಿಂದಾಗಿ ತ್ರಿಶೂರ್ ನ ಮಾರುತಿ ಸುಜುಕಿ ಕಾರು ಡೀಲರ್ ಬಿಆರ್‌ಡಿ ಕಾರ್ ವರ್ಲ್ಡ್ ಶೋರಂನ ಒಟ್ಟು 357 ಹೊಸ ಕಾರುಗಳೂ ನೀರಿನಿಂದ ತುಂಬಿಕೊಂಡು ಸಂಪೂರ್ಣ ಹಾಳಾಗಿ ಹೋಗಿದೆ. ಇದಲ್ಲದೇ 147 ಬಳಸಿದ ಕಾರುಗಳು ಹಾಗೂ 110 ಗ್ರಾಹಕರ ವಾಹನಗಳಿಗಾಗಿರುವ ಹಾನಿಯ ಬಗ್ಗೆಯೂ ಸಹ ವಿಮೆ ಸಮೀಕ್ಷಕರು ಮೌಲ್ಯಮಾಪನ ನಡೆಸುತ್ತಿದ್ದಾರೆ.

    ನಷ್ಟವಾದ 357 ಹೊಸ ಕಾರುಗಳ ಮಾರುಕಟ್ಟೆ ಮೌಲ್ಯ ಜಿಎಸ್‍ಟಿ ಸೇರಿದಂತೆ ಒಟ್ಟು 28.75 ಕೋಟಿ ರೂಪಾಯಿಯಾಗಿದೆ. ಅಲ್ಲದೇ ಶೋರೂಮಿನಲ್ಲಿ ಸುಮಾರು 500 ಹೊಸ ಕಾರುಗಳನ್ನು ಶೇಖರಿಸಿ ಇಡಲಾಗಿತ್ತು, ನೀರಿನ ಪ್ರಮಾಣ ಹೆಚ್ಚಾದ ಕಾರಣ ಕೆಲವು ಕಾರುಗಳನ್ನು ಮಾತ್ರ ಸುರಕ್ಷತಾ ಸ್ಥಳಕ್ಕೆ ರವಾನೆ ಮಾಡಲಾಗಿತ್ತು ಎಂದು ತಿಳಿದು ಬಂದಿದೆ.

    ಈ ಎಲ್ಲಾ ಕಾರುಗಳಲ್ಲಿ ಡ್ಯಾಶ್‍ಬೋರ್ಡ್‍ನವರೆಗೂ ನೀರು ತುಂಬಿದ್ದ ಕಾರಣ ವಿಮಾ ಸಂಸ್ಥೆಯವರು `ಸಿ’ ವಿಭಾಗದಡಿ ಸೇರಿಸಿ ಸಂಪೂರ್ಣ ನಷ್ಟ ಎಂದು ವರದಿ ನೀಡಿದ್ದಾರೆ. ಹೀಗಾಗಿ ವಾಹನಗಳನ್ನು ಕಡಿಮೆ ಬೆಲೆಗೆ ಪುಣೆ, ಜೈಪುರ ಹಾಗೂ ಅಹಮದಾಬಾದಿನ ಗುಜುರಿದಾರರಿಗೆ ಮಾರಲು ಕಂಪೆನಿ ನಿರ್ಧರಿಸಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಶೋರೂಂ ಅಧಿಕಾರಿಗಳು, ಪ್ರವಾಹದಿಂದ ಸಂಪೂರ್ಣ ಹಾಳಾಗಿರುವ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ನಿಲ್ಲಿಸಿದ್ದೇವೆ. ಅಲ್ಲದೇ ಆ ಕಾರುಗಳ ಮಾರಾಟವನ್ನು ಸಹ ನಿಷೇಧಿಸಲಾಗುತ್ತದೆ. ಅಂತಹ ವಾಹನಗಳು ನಮ್ಮ ಶೋರೂಂಗಳಲ್ಲಿ ಕಾಣಿಸುವುದಿಲ್ಲ ಎಂದು ತಿಳಿಸಿದ್ದಾರೆ.

    ಕೇರಳ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಮನೋಜ್ ಕುರುಪ್ ಮಾತನಾಡಿ, ಪ್ರವಾಹದಲ್ಲಿ ಹಾನಿಯಾಗಿರುವ ವಾಹನಗಳನ್ನು ಮತ್ತೆ ಶೋರೂಂಗಳಲ್ಲಿ ಮಾರಾಟಕ್ಕೆ ಇಡುವುದಿಲ್ಲ. ವಾಹನಗಳು ವಿಮೆಯ ವಿಧಿಗಳ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಯಾವ ಡೀಲರ್ ಸಹ ಅಂತಹ ವಾಹನಗಳನ್ನು ಮಾರಾಟ ಮಾಡುವುದಿಲ್ಲ. ಕೇರಳದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಲವು ಆಟೋಮೊಬೈಲ್ ಕಂಪನಿಗಳ ಸುಮಾರು 1,000 ಹೊಸ ಕಾರುಗಳು ಹಾಗೂ 7,000 ದಿಂದ 8,000 ಗ್ರಾಹಕರ ಕಾರುಗಳು ಹಾನಿಗೀಡಾಗಿವೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗೋದಾಮಿನಲ್ಲಿ ಕೊಳೆಯುತ್ತಿವೆ ಕೊಡಗು, ಕೇರಳ ಸಂತ್ರಸ್ತರಿಗೆ ನೀಡಿದ ದವಸ ಧಾನ್ಯಗಳು

    ಗೋದಾಮಿನಲ್ಲಿ ಕೊಳೆಯುತ್ತಿವೆ ಕೊಡಗು, ಕೇರಳ ಸಂತ್ರಸ್ತರಿಗೆ ನೀಡಿದ ದವಸ ಧಾನ್ಯಗಳು

    ಬಳ್ಳಾರಿ: ಕೊಡಗು, ಕೇರಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಪರಿಸ್ಥಿತಿಗೆ ನಾಡಿನ ಜನರು ಸಾಕಷ್ಟು ನೆರವು ನೀಡಿದ್ದಾರೆ. ಸಂತ್ರಸ್ತರಿಗಾಗಿ ಸಾವಿರಾರು ಜನರು ಆಹಾರ ಧಾನ್ಯ, ದವಸ, ಬಟ್ಟೆ ಬರೆ, ಔಷಧಿಗಳನ್ನು ಸಂತ್ರಸ್ತರಿಗಾಗಿ ನೀಡಿದ್ದಾರೆ. ಆದರೆ ಸಂತ್ರಸ್ತರಿಗೆ ತಲುಪಬೇಕಾಗಿದ್ದ ರಾಶಿ ರಾಶಿ ವಸ್ತುಗಳು ಇದೀಗ ಬಳ್ಳಾರಿಯ ಗೋದಾಮವೊಂದರಲ್ಲಿ ಕೊಳೆಯುತ್ತಿವೆ.

    ಕೊಡಗು ಹಾಗೂ ಕೇರಳ ಸಂತ್ರಸ್ತರಿಗೆ ವಸ್ತುಗಳನ್ನು ತಲುಪಿಸಲು ಲಾರಿ ಸಿಗಲಿಲ್ಲ ಅಂತಾ ಬಳ್ಳಾರಿ ಜಿಲ್ಲಾಡಳಿತ ಕೈ ಚೆಲ್ಲಿ ಕುಳಿತಿದೆ. ಬಳ್ಳಾರಿ ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಇದೀಗ ರಾಜ್ಯದ ಜನರು ಹಿಡಿಶಾಪ ಹಾಕುವಂತಾಗಿದೆ. ಏಕೆಂದರೆ ಕೊಡಗು ಹಾಗೂ ಕೇರಳದಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿಯಿಂದ ನಲುಗಿದ ಸಂತ್ರಸ್ತರಿಗಾಗಿ ಬಳ್ಳಾರಿಯ ಸಾವಿರಾರು ಜನರು ಸಾಕಷ್ಟು ದವಸ, ಧಾನ್ಯ, ಬಟ್ಟೆ, ಬರೆ, ಔಷಧಿ ಸೇರಿದಂತೆ ದಿನನಿತ್ಯ ಬಳಕೆಯ ವಸ್ತುಗಳನ್ನು ನೀಡಿದ್ದರು. ಆದರೆ ಬಳ್ಳಾರಿ ಜಿಲ್ಲಾಡಳಿತ ಸಂತ್ರಸ್ತರಿಗಾಗಿ ತಲುಪಿಸಬೇಕಾದ ಸಾಮಾಗ್ರಿಗಳನ್ನು ಗೊದಾಮಿನಲ್ಲಿಟ್ಟು ನಿರ್ಲಕ್ಷ್ಯ ವಹಿಸಿದ ಪರಿಣಾಮ ಸಂತ್ರಸ್ತರಿಗೆ ತಲುಪಬೇಕಿದ್ದ ಸಾಮಾಗ್ರಿಗಳು ಗೋದಾಮಿನಲ್ಲೆ ಕೊಳೆಯುವಂತಾಗಿದೆ.

    ಸಂತ್ರಸ್ತರಿಗಾಗಿ ಸಾವಿರಾರು ಜನರು ತಮ್ಮ ದುಡಿದ ದುಡಿಮೆಯಲ್ಲೇ ಸಾಕಷ್ಟು ಸಾಮಾಗ್ರಿಗಳನ್ನು ನೀಡಿದ್ದರು. ಇನ್ನೂ ಕೆಲವರು ಅಲ್ಪ ಸ್ವಲ್ಪ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೆರವು ನೀಡಿದ್ದರು. ಅಲ್ಲದೇ ಸಿಎಂ ಪರಿಹಾರ ನಿಧಿಗೆ ನೀಡಿದ ಸುಮಾರು 7 ಲಕ್ಷ ರೂ. ಗೂ ಅಧಿಕ ಮೊತ್ತದ ಚೆಕ್‍ಗಳನ್ನು ಸಹ ಮುಖ್ಯಮಂತ್ರಿಗಳ ಪರಿಹಾರ ನಿಧಿ ಅಕೌಂಟ್‍ಗೆ ತಲುಪಿಸದೇ ನಿರ್ಲಕ್ಷ್ಯ ವಹಿಸಿರುವುದು ನಿಜಕ್ಕೂ ದುರಂತಮಯವಾಗಿದೆ. ಈ ಕುರಿತು ಗೃಹರಕ್ಷಕ ದಳದ ಅಧಿಕಾರಿಯನ್ನು ಪ್ರಶ್ನೆ ಮಾಡಿದರೆ ಸಾಮಾಗ್ರಿಗಳನ್ನು ಸಾಗಿಸಲು ಲಾರಿ ಸಿಗಲಿಲ್ಲ. ನಾಳೆ ನಾಡಿದು ಕಳುಹಿಸುತ್ತೇವೆ ಅಂತಾ ನಿರ್ಲಕ್ಷ್ಯತನದ ಉತ್ತರ ನೀಡುತ್ತಾರೆ.

    ಬಳ್ಳಾರಿ ಜಿಲ್ಲೆಯಲ್ಲಿ ಸಾವಿರಾರು ಲಾರಿಗಳಿದ್ದರೂ ಜಿಲ್ಲಾಡಳಿತಕ್ಕೆ ಮಾತ್ರ ಸಂತ್ರಸ್ತರ ಸಾಮಾಗ್ರಿಗಳನ್ನು ಸಾಗಿಸಲು ಒಂದು ಲಾರಿಯೂ ಸಹ ಸಿಗಲಿಲ್ಲ ಅನ್ನೋದು ನಿಜಕ್ಕೂ ದುರಂತಮಯವಾಗಿದೆ. ಹೀಗಾಗಿ ಬಳ್ಳಾರಿ ಜಿಲ್ಲೆಯ ಜನರು ಇದೆಂಥ ಜಿಲ್ಲಾಡಳಿತ. ಇವರೆಂಥಾ ಜಿಲ್ಲಾಧಿಕಾರಿ ಅಂತಾ ಹಿಡಿಶಾಪ ಹಾಕುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರ‍್ಯಾಗಿಂಗ್‌ ತಪ್ಪಿಸಿಕೊಂಡಿದ್ದಕ್ಕೆ ಟೆಕ್ ವಿದ್ಯಾರ್ಥಿಗೆ ಶಿಕ್ಷೆ – ಮೈದಾನದಲ್ಲೇ ಮೂರು ಗಂಟೆ ಥಳಿಸಿದ ಹಿರಿಯ ವಿದ್ಯಾರ್ಥಿಗಳು!

    ರ‍್ಯಾಗಿಂಗ್‌ ತಪ್ಪಿಸಿಕೊಂಡಿದ್ದಕ್ಕೆ ಟೆಕ್ ವಿದ್ಯಾರ್ಥಿಗೆ ಶಿಕ್ಷೆ – ಮೈದಾನದಲ್ಲೇ ಮೂರು ಗಂಟೆ ಥಳಿಸಿದ ಹಿರಿಯ ವಿದ್ಯಾರ್ಥಿಗಳು!

    ತಿರುವನಂತಪುರ: ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನಿಗೆ ರ‍್ಯಾಗಿಂಗ್‌ಗಾಗಿ ಹಿರಿಯ ವಿದ್ಯಾರ್ಥಿಗಳು ಅಮಾನವೀಯವಾಗಿ ಥಳಿಸಿ ಘಟನೆ ಕೇರಳದಲ್ಲಿ ನಡೆದಿದ್ದು, ವಿದ್ಯಾರ್ಥಿ ಈಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಕೇರಳದ ಇಡುಕ್ಕಿ ಜಿಲ್ಲೆಯ ಡಿಸಿ ಸ್ಕೂಲ್ ಆಫ್ ಮ್ಯಾನೆಜ್‍ಮೆಂಟ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ರ‍್ಯಾಗಿಂಗ್‌ ನಡೆದಿದ್ದು, ವಿದ್ಯಾರ್ಥಿಯ ಕಾಲು ಹಾಗೂ ತೊಡೆಯ ಭಾಗದಲ್ಲಿ ಬಾಸುಂಡೆ ಕಾಣಿಸಿಕೊಂಡಿದೆ.

    ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಕ್ಯಾಂಪಸ್‍ನಿಂದ ನನ್ನನ್ನು ಹೊರಗಡೆ ಕರೆದುಕೊಂಡು ಹೋಗಿದ್ದರು. ನನಗೆ ರಾಡ್ ಹಾಗೂ ಮೊಬೈಲ್ ನೀಡಿ ಒಂದೇ ಕೈಯಲ್ಲಿ ಹಿಡಿಯುವಂತೆ ಹೇಳಿದ್ದರು. ಯಾವುದಾದರು ಒಂದು ಕೆಳಗೆ ಬಿದ್ದರೂ ಥಳಿಸಿಸುವುದಾಗಿ ಸೂಚಿಸಿದ್ದರು. ಆದರೆ ನಾನು ಫೋನ್ ಬೀಳಿಸಿದೆ, ತಕ್ಷಣವೇ ಗುಂಪಿನಿಂದ ಮೂರು ಜನ ನನ್ನ ಮೇಲೆ ಹಲ್ಲೆ ಮಾಡಿದರು. ಬಳಿಕ ಸ್ಟಿಕ್‍ನಿಂದ ನಿರಂತರವಾಗಿ ಮೂರು ಗಂಟೆಗಳ ಕಾಲ ನನ್ನನ್ನು ಥಳಿಸಿದರು ಎಂದು ವಿದ್ಯಾರ್ಥಿ ಆರೋಪಿಸಿದ್ದಾನೆ. ಇದನ್ನು ಓದಿ: ರ‍್ಯಾಗಿಂಗ್‌ ಮಾಡ್ಬೇಡ ಅಂದಿದ್ದಕ್ಕೆ ಶಿವಮೊಗ್ಗದ್ದಲ್ಲಿ ಸೀನಿಯರ್‌ಗೆ ಚೂರಿ ಹಾಕ್ದ ಜೂನಿಯರ್!

    ಹಲ್ಲೆಗೆ ಒಳಗಾದ ವಿದ್ಯಾರ್ಥಿಯು ಜೂನ್ 22 ರಂದು ಕಾಲೇಜಿಗೆ ಸೇರಿದ್ದು, ರ‍್ಯಾಗಿಂಗ್‌ನಿಂದ ತಪ್ಪಿಸಿಕೊಂಡಿದ್ದನು. ಆದರೆ ಈ ಬಾರಿ ಸಿಕ್ಕಿಹಾಕಿಕೊಂಡಿದ್ದ. ಈ ಕುರಿತು 5 ಜನ ಹಿರಿಯ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

    ರ‍್ಯಾಗಿಂಗ್‌ ಕಾರಣದಿಂದಾಗಿ ಕಾಲೇಜಿನ ಅನೇಕ ವಿದ್ಯಾರ್ಥಿಗಳು ಹಾಸ್ಟೆಲ್‍ನಲ್ಲಿ ಇರಲು ಹಿಂದೆಟು ಹಾಕಿದ್ದಾರೆ ಎನ್ನಲಾಗಿದೆ. ‘ಕಲಿಯಲು ನಾವು ಶಾಲೆಗೆ ಶುಲ್ಕ ಪಾವತಿಸಿದ್ದೇವೆಯೇ ಹೊರತು ರ‍್ಯಾಗಿಂಗ್‌ಗಾಗಿ ಅಲ್ಲ. ಈ ಕುರಿತು ಅನೇಕ ಬಾರಿ ಆ್ಯಂಟಿ ರ‍್ಯಾಗಿಂಗ್‌ ಕೇಂದ್ರಕ್ಕೆ ದೂರು ಸಲ್ಲಿಸಿದ್ದೇವು. ಆದರೆ ಕೆಲವು ಒತ್ತಡಕ್ಕೆ ಮಣಿದು ದೂರನ್ನು ಹಿಂದಕ್ಕೆ ಪಡೆಯಬೇಕಾಯಿತು ಎಂದು ಕಾಲೇಜಿನ ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ಈ ಕುರಿತು ಕಾಲೇಜು ಆಡಳಿತ ಮಂಡಳಿ ಹಾಗೂ ಪ್ರಾಚಾರ್ಯರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv