Tag: kerala

  • ಭಾರತೀಯನಿಗೆ ಒಲಿಯಿತು 6.5 ಕೋಟಿ ಬಂಪರ್ ಲಾಟರಿ!

    ಭಾರತೀಯನಿಗೆ ಒಲಿಯಿತು 6.5 ಕೋಟಿ ಬಂಪರ್ ಲಾಟರಿ!

    ದುಬೈ: ಭಾರತೀಯ ಮೂಲದ 25 ವರ್ಷದ ಯುವಕನಿಗೆ ಒಂದು ಮಿಲಿಯನ್(6.5 ಕೋಟಿ ರೂ.) ಯುಎಸ್ ಡಾಲರ್ ಬಹುಮಾನ ಲಾಟರಿ ಹೊಡೆದಿದೆ.

    ದುಬೈ ಡ್ಯೂಟಿ ಫ್ರೀ (ಡಿಡಿಎಫ್) ಅವರು ನಡೆಸಿದ ಮಿಲೆನಿಯಮ್ ಮಿಲಿಯನೇರ್ ಸ್ಪರ್ಧೆಯಲ್ಲಿ ಭಾರಿ ಮೊತ್ತದ ಬಹುಮಾನ ಧಾನೀಶ್ ಕೋಥರಂಬನ್ ಅವರಿಗೆ ಸಿಕ್ಕಿದೆ.

    ಧಾನೀಶ್ ಮೂಲತಃ ಕೇರಳದವರಾಗಿದ್ದು, ದುಬೈನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲವು ವಾರಗಳ ಹಿಂದೆ ಧಾನೀಶ್ ರಜೆಗೆಂದು ಕೇರಳಗೆ ಹೋಗುತ್ತಿದ್ದಾಗ ತಮ್ಮ ಮಿಲೆನಿಯಮ್ ಡಾಲರ್ ನ ಮೊದಲ ಟಿಕೆಟ್ ತೆಗೆದುಕೊಂಡಿದ್ದರು.


    ಈ ಕುರಿತು ಧಾನೀಶ್ ಅವರು ಕೇರಳದಲ್ಲಿ ಮಾತನಾಡಿ, ಡಿಡಿಎಫ್ ಪ್ರತಿನಿಧಿಗಳಿಂದ ಮಿಲಿಯನ್ ಡಾಲರ್ ನಲ್ಲಿ ಗೆದ್ದಿರುವುದಾಗಿ ಕರೆ ಬಂದಾಗ ನನಗೆ ತಕ್ಷಣ ಆಶ್ಚರ್ಯವಾಯಿತು. ನಿಜವಾಗಿ ನಾನು ಗೆದ್ದಿರುವುದನ್ನು ನನಗೆ ನಂಬಲು ಸಾಧ್ಯವಾಗಲಿಲ್ಲ. ಚಿಕ್ಕ ವಯಸ್ಸಿನಲ್ಲಿಯೇ ನಾನು ಈ ದೊಡ್ಡ ಗೆಲುವು ಸಾಧಿಸಬಹುದೆಂದು ನಾನು ಭಾವಿಸಿರಲಿಲ್ಲ! ಈ ಅದ್ಭುತ ಕೊಡುಗೆಗಾಗಿ ದೇವರಿಗೆ ಮತ್ತು ದುಬೈ ಡ್ಯೂಟಿ ಫ್ರೀ ಧನ್ಯವಾದಗಳು” ಎಂದು ತಮ್ಮ ಖುಷಿಯನ್ನ ಹೇಳಿಕೊಂಡಿದ್ದಾರೆ.

    ಈ ಹಿಂದೆ ಜನವರಿಯಲ್ಲಿ ಅಬುದಾಬಿಯಲ್ಲಿ ಯು.ಎ.ಇ.ನಲ್ಲಿ ಭಾರತೀಯ ಮೂಲದ ವ್ಯಕ್ತಿಗಳಿಗೆ ಭಾರೀ ಮೊತ್ತದ ಬಹುಮಾನ ಬಂದಿತ್ತು. ಕಳೆದ ವರ್ಷ ಅಕ್ಟೋಬರ್ ನಲ್ಲಿ ನಡೆದ ಮೆಗಾ ರಾಫೆಲ್ ಡ್ರಾನಲ್ಲಿ ಪ್ರತಿವರ್ಷ 1 ಮಿಲಿಯನ್ ಡಾಲರ್ (ಯುಎಸ್‍ಡಿ 2.7 ಲಕ್ಷ) ಗೆದ್ದುಕೊಂಡ 10 ಜನರ ಪೈಕಿ ಎಂಟು ಭಾರತೀಯರು ಸೇರಿದ್ದರು. ಈಗ ಧಾನೀಶ್ ಕೋಥರಂಬನ್ ಸುಮಾರು 6.5 ಕೋಟಿ ರೂ. ಬಹುಮಾನವನ್ನು ಗೆದ್ದಿದ್ದಾರೆ.

    ಮಿಲೆನಿಯಮ್ ಮಿಲಿಯನೇರ್ ಎರಡನೇ ವಿಜೇತ ಯಾಝನ್ ಕ್ಯೂರ್ಔಟ್ ಆಗಿದ್ದು, ಇದು ತಮ್ಮ ಮದುವೆ ಆದ ನಂತರ ಎರಡನೇ ಖುಷಿ ಸಮಯ ಎಂದು ಹೇಳಿಕೊಂಡಿದ್ದಾರೆ.

  • ಅಪಘಾತಕ್ಕೀಡಾಗಿ ಜನಸಂದಣಿ ಇರೋ ನಡುರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ನರಳಾಡಿದ ವೃದ್ಧೆ!

    ಅಪಘಾತಕ್ಕೀಡಾಗಿ ಜನಸಂದಣಿ ಇರೋ ನಡುರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ನರಳಾಡಿದ ವೃದ್ಧೆ!

    ತಿರುವನಂತಪುರಂ: ಅಪಘಾತಕ್ಕೀಡಾಗಿ ವೃದ್ಧೆಯೊಬ್ಬರು ನಡುರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದರೂ, ಯಾರೊಬ್ಬರೂ ಆಕೆಯ ಸಹಾಯಕ್ಕೆ ಬಾರದೆ ಮಾನವೀಯತೆಯನ್ನು ಮರೆತ ಹೀನಾಯ ಘಟನೆಯೊಂದು ಕೇರಳದಲ್ಲಿ ನಡೆದಿದೆ.

    ಈ ಘಟನೆ ತಿರುವನಂತಪುರದ ಜನಸಂದಣಿ ಹೆಚ್ಚಿರುವ ರಸ್ತೆಯಲ್ಲಿಯೇ ಮಂಗಳವಾರ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಘಟನೆ ವಿವರ: 65 ವರ್ಷದ ವೃದ್ಧೆಯೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಪರಿಣಾಮ ಗಂಭೀರ ಗಾಯಗೊಂಡ ಅವರು ನಡುರಸ್ತೆಯಲ್ಲಿಯೇ ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದರು. ಜನಸಂದಣಿ ದಟ್ಟವಾಗಿ ಇರುವ ಪ್ರದೇಶವಾಗಿದ್ದರಿಂದ ವಾಹನಗಳು ಸಂಚರಿಸುತ್ತಲೇ ಇದ್ದವು. ಆದ್ರೆ ಯಾರೊಬ್ಬರೂ ತಮ್ಮ ವಾಹನ ನಿಲ್ಲಿಸಿ ವೃದ್ಧೆಯ ಸಹಾಯಕ್ಕೆ ಬರಲಿಲ್ಲ. ಅಲ್ಲದೇ ಪೊಲೀಸರಿಗೂ ಮಾಹಿತಿ ನೀಡಿರಲಿಲ್ಲ. ಘಟನೆ ನಡೆದ ಸ್ಥಳದಲ್ಲಿ ಮೂಕಪ್ರೇಕ್ಷರಂತೆ ಸ್ಥಳೀಯರು ನೆರೆದಿದ್ದರು. ಆದ್ರೂ ಯಾರೂ ವೃದ್ಧೆಗೆ ಸಹಾಯ ಮಾಡುವ ಮನಸ್ಸು ಮಾಡಲಿಲ್ಲ. ಕೊನೆಗೆ ಯುವಕನೊಬ್ಬ ವೃದ್ಧೆಯ ಸಹಾಯಕ್ಕೆ ಧಾವಿಸಿದ್ದಾನೆ. ಅದೇ ಸಮಯದಲ್ಲಿ ಪೊಲೀಸ್ ಕಾರೊಂದು ಅದೇ ಮಾರ್ಗವಾಗಿ ಚಲಿಸಿದ್ದು, ಹೀಗಾಗಿ ಘಟನೆಯನ್ನು ಅರಿತ ಪೊಲೀಸ್ ಮತ್ತು ಯುವಕ ಸೇರಿ ವೃದ್ಧೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಎಲ್ಲಾ ಸನ್ನಿವೇಶಗಳು ಸುಮಾರು 3:25 ಸೆಕೆಂಡ್ ಇರೋ ಸಿಸಿಟಿವಿ ವಿಡಿಯೋದಲ್ಲಿ ಸೆರೆಯಾಗಿದೆ.

    ಘಟನೆಯ ಬಗ್ಗೆ ಪೊಲೀಸರಿಗೆ ಯಾರೊಬ್ಬರೂ ಮಾಹಿತಿ ನೀಡಲಿಲ್ಲ. ಬದಲಾಗಿ ಅವರು ಆ ಮಾರ್ಗವಾಗಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ನೆರೆದಿದ್ದ ಜನರನ್ನು ಕಂಡು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ವೇಳೆ ವೃದ್ಧೆಯೊಬ್ಬರು ರಕ್ತದ ಮಡುವಿನಲ್ಲಿ ಬಿದ್ದಿದ್ದು, ಯುವಕನೊಬ್ಬ ಆಕೆಯ ಸಹಾಯಕ್ಕೆ ಬಂದಿದ್ದನು. ಹೀಗಾಗಿ ಆತನೊಂದಿಗೆ ಸೇರಿ ಪೊಲಿಸರು ವೃದ್ಧೆಯನ್ನು ತಿರುವನಂತಪುರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿರುವುದಾಗಿ ವರದಿಯಾಗಿದೆ.

    ಘಟನೆಗೆ ಸಂಬಂಧಿಸಿದಂತೆ ಪೊಲೀಸರು 20 ವರ್ಷದ ದ್ವಿಚಕ್ರ ವಾಹನ ಸವಾರನ ಜೊತೆ ಇಬ್ಬರು ಹಿಂಬದಿ ಸವಾರರನ್ನೂ ಬಂಧಿಸಿದ್ದಾರೆ. ಈ ಮೂವರು ಹೆಲ್ಮೆಟ್ ಧರಿಸಿರಲಿಲ್ಲ ಎಂಬುದಾಗಿ ವರದಿಯಾಗಿದೆ.

  • ಮಾರಕಾಸ್ತ್ರಗಳಿಂದ ಹಲ್ಲೆಗೈದು ರೆಡ್ ಎಫ್‍ಎಂನ ಫೇಮಸ್ ಆರ್ ಜೆಯ  ಬರ್ಬರ ಹತ್ಯೆ

    ಮಾರಕಾಸ್ತ್ರಗಳಿಂದ ಹಲ್ಲೆಗೈದು ರೆಡ್ ಎಫ್‍ಎಂನ ಫೇಮಸ್ ಆರ್ ಜೆಯ ಬರ್ಬರ ಹತ್ಯೆ

    ತಿರುವನಂತಪುರಂ: ಪ್ರಸಿದ್ಧ ರೇಡಿಯೋ ಜಾಕಿಯೊಬ್ಬರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದ ಆಘಾತಕಾರಿ ಘಟನೆಯೊಂದು ಕೇರಳದಲ್ಲಿ ನಡೆದಿದೆ.

    ಈ ಘಟನೆ ಮಂಗಳವಾರ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ. ಮೃತ ದುರ್ದೈವಿಯನ್ನು 36 ವರ್ಷದ ರಾಜೇಶ್ ಅಲಿಯಾಸ್ ರಸಿಕನ್ ರಾಜೇಶ್ ಎಂಬುದಾಗಿ ಗುರುತಿಸಲಾಗಿದೆ. ಇವರು ಕೇವಲ ರೇಡಿಯೋ ಜಾಕಿಯಾಗಿರದೇ ಮಿಮಿಕ್ರಿ ಅರ್ಟಿಸ್ಟ್, ಜಾನಪದ ಹಾಡುಗಾರನೂ ಕೂಡ ಆಗಿದ್ದರು.

    ಏನಿದು ಘಟನೆ?: ಪಲ್ಲಕಿಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಡವೂರ್ ಎಂಬಲ್ಲಿ ರಾಜೇಶ್ ಮೆಟರೋ ಸ್ಟುಡಿಯೋ ಅಂತ ಸೌಂಡ್ ರೆಕಾರ್ಡಿಂಗ್ ಸ್ಟುಡಿಯೋವೊಂದನ್ನು ಹೊಂದಿದ್ದರು. ಸೋಮವಾರ ರಾತ್ರಿ ಸ್ಟೇಜ್ ಪ್ರೋಗ್ರಾಂ ಒಂದನ್ನು ಮುಗಿಸಿ, ಉಪಕರಣಗಳೊಂದಿಗೆ ತನ್ನ ಗೆಳೆಯ ಕುಟ್ಟನ್ ಜೊತೆ ರಾಜೇಶ್ ಸ್ಟುಡಿಯೋಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಇವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಘಟನೆಯನ್ನು ಅರಿತ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ಯಾರು ಗದ್ದಲ ಮಾಡದಂತೆ ಪೊಲೀಸರು ಸ್ಥಳೀಯರಿಗೆ ಸೂಚಿಸಿದ್ದಾರೆ.

    ಪರಿಪ್ಪಲ್ಲಿ ಆಸ್ಪತ್ರೆಯಲ್ಲಿ ದಾಖಲಾದ ರಾಜೇಶ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗೆಳೆಯ ಕುಟ್ಟನ್ ಅವರಿಗೆ ತಿರುವನಂತಪುರಂ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಆದ್ರೆ ಈ ಘಟನೆಗೆ ಕಾರಣವೇನೆಂದು ತಿಳಿದುಬಂದಿಲ್ಲ ಎಂಬುದಾಗಿ ವರದಿಯಾಗಿದೆ.

    ರಾಜೇಶ್ ಅವರು ದೋಹಾದಲ್ಲಿ ವಾಯ್ಸ್ ಆಫ್ ಕೇರಳ ರೆಡ್ ಎಫ್‍ಎಂ ನಲ್ಲಿ ಸೇರುವ ಮುನ್ನವೇ ರೆಡ್ ಎಫ್‍ಎಂ ನಲ್ಲಿ ಹಲವು ವರ್ಷಗಳ ಕಾಲ ಆರ್ ಜೆ ಆಗಿ ಕಾರ್ಯನಿರ್ವಹಿಸಿದ್ದರು. ವಿದೇಶದಿಂದ ಇತ್ತೀಚೆಗಷ್ಟೇ ಬಂದಿದ್ದ ಅವರು ಮಿಮಿಕ್ರಿ ತಂಡವೊಂದರಲ್ಲಿ ಸೇರಿಕೊಂಡಿದ್ದರು. ಇದೀಗ ರಾಜೇಶ್ ಪತ್ನಿ ಹಾಗೂ ಮಗನನ್ನು ಅಗಲಿದ್ದಾರೆ.

  • ಅಂಬುಲೆನ್ಸ್ ನಲ್ಲಿ ಮೂತ್ರವಿಸರ್ಜನೆ ಮಾಡಿದ್ದಕ್ಕೆ ಗಾಯಾಳುವನ್ನ ತಲೆಕೆಳಗಾಗಿ ಬಿಟ್ಟ ಚಾಲಕ, ವ್ಯಕ್ತಿ ಸಾವು

    ಅಂಬುಲೆನ್ಸ್ ನಲ್ಲಿ ಮೂತ್ರವಿಸರ್ಜನೆ ಮಾಡಿದ್ದಕ್ಕೆ ಗಾಯಾಳುವನ್ನ ತಲೆಕೆಳಗಾಗಿ ಬಿಟ್ಟ ಚಾಲಕ, ವ್ಯಕ್ತಿ ಸಾವು

    ತಿರುವನಂತಪುರಂ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಆಂಬುಲೆನ್ಸ್ ನಲ್ಲಿ ಮೂತ್ರವಿಸರ್ಜನೆ ಮಾಡಿದರೆಂದು ಅವರನ್ನು ಚಾಲಕ ಸ್ಟ್ರೆಚ್ಚರ್ ಸಮೇತ ತಲೆಕೆಳಗಾಗಿ ಬಿಟ್ಟ ಅಮಾನವೀಯ ಘಟನೆ ಕೇರಳದ ತ್ರಿಶೂರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.

    ಗಾಯಾಳು ಮಲಗಿದ್ದ ಸ್ಟ್ರೆಚ್ಚರನ್ನು ಆಂಬುಲೆನ್ಸ್ ಚಾಲಕ ಆಸ್ಪತ್ರೆಯ ಹೊರಗಡೆ ತಲೆಕೆಳಗಾಗಿ ಬಿಟ್ಟಿದ್ದು, ಬಳಿಕ ಅವರು ಸಾವನ್ನಪ್ಪಿದ್ದಾರೆ. ತಲೆಕೆಳಗಾದ ಸ್ಟೆಚ್ಚರ್‍ನ ಒಂದು ಭಾಗ ನೆಲದ ಮೇಲಿದ್ದು ಮತ್ತೊಂದು ತುದಿ ಆಂಬುಲೆನ್ಸ್ ನಲ್ಲಿತ್ತು. ವ್ಯಕ್ತಿಯ ತಲೆ ನೆಲಕ್ಕೆ ಬಿದ್ದ ಸ್ಥಿತಿಯಲ್ಲಿದ್ದು, ಇದನ್ನ ಪ್ರತ್ಯಕ್ಷದರ್ಶಿಯೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವ್ಯಕ್ತಿಯ ಜೀವಕ್ಕೆ ಕುತ್ತು ತಂದ ಆಂಬುಲೆನ್ಸ್ ಚಾಲಕನ ಬೇಜವಾಬ್ದಾರಿ ವರ್ತನೆಗೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಸಾವನ್ನಪ್ಪಿದ ವ್ಯಕ್ತಿ ಮಾರ್ಚ್ 20ರಂದು ರಸ್ತೆ ಅಪಘಾತಕ್ಕೀಡಾಗಿ ತೀವ್ರವಾಗಿ ಗಾಯಗೊಂಡಿದ್ದರು. ಅವರ ತಲೆಗೂ ಕೂಡ ಪೆಟ್ಟು ಬಿದ್ದಿತ್ತು. ಮೊದಲಿಗೆ ಅವರನ್ನು ಪಲಕ್ಕಾಡ್‍ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಅದೇ ದಿನ ಹೆಚ್ಚಿನ ಚಿಕಿತ್ಸೆಗೆಂದು ತ್ರಿಶೂರ್‍ಗೆ ರವಾನಿಸಲಾಗಿತ್ತು. ಅಲ್ಲಿ ಸುಮಾರು 8.30ರ ವೇಳೆಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ವ್ಯಕ್ತಿಯ ಜೊತೆ ಅವರ ಕುಟುಂಬ ಸದಸ್ಯರಾಗಲೀ, ಸಂಬಂಧಿಕರಾಗಲಿ ಇಲ್ಲದಿದ್ದ ಕಾರಣ ಪಲಕ್ಕಾಡ್ ಆಸ್ಪತ್ರೆಯ ಸಿಬ್ಬಂದಿಯೇ ಗಾಯಾಳುವನ್ನ ತ್ರಿಶೂರ್ ಆಸ್ಪತ್ರೆಗೆ ಕರೆತಂದಿದ್ದರು. ಸಿಬ್ಬಂದಿ ಗ್ಲೋವ್ಸ್ ತರಲು ಆಸ್ಪತ್ರೆಯ ಒಳಗೆ ಹೋದಾಗ ಚಾಲಕ ಸ್ಟ್ರೆಚ್ಚರ್ ಹೊರಗೆಳೆದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ.

    ತಲೆಕೆಳಗಾದ ಸ್ಟ್ರೆಚ್ಚರ್ ಮೇಲೆ ಅಸಹಾಯಕರಾಗಿ ಬಿದ್ದಿದ್ದ ಗಾಯಾಳುವನ್ನ ಕೊನೆಗೆ ಆಸ್ಪತ್ರೆಯ ಸಿಬ್ಬಂದಿ ಮೇಲೆತ್ತಿ ವ್ಹೀಲ್‍ಚೇರ್ ಮೇಲೆ ಕೂರಿಸಿದ್ದರು. ವ್ಯಕ್ತಿಗೆ ಶಸ್ತ್ರಚಿಕಿತ್ಸೆ ಮಾಡಲಾಯಿತಾದ್ರೂ ಶನಿವಾರ ಬೆಳಗ್ಗೆ ಕೊನೆಯಿಸಿರೆಳೆದಿದ್ದಾರೆ.

  • 90 ವರ್ಷದ ವೃದ್ಧೆಯ ಮೇಲೆ ಸಾರ್ವಜನಿಕರ ಎದುರೇ ಹಲ್ಲೆ ನಡೆಸಿದ ನಿರ್ದಯಿ ಮೊಮ್ಮಗಳು!

    90 ವರ್ಷದ ವೃದ್ಧೆಯ ಮೇಲೆ ಸಾರ್ವಜನಿಕರ ಎದುರೇ ಹಲ್ಲೆ ನಡೆಸಿದ ನಿರ್ದಯಿ ಮೊಮ್ಮಗಳು!

    ತಿರುವನಂತಪುರಂ: ನಿರ್ದಯಿ ಮೊಮ್ಮಗಳೊಬ್ಬಳು 90 ವರ್ಷದ ಅಜ್ಜಿಗೆ ಸಾರ್ವಜನಿಕರ ಎದುರೇ ಹಿಗ್ಗಾಮುಗ್ಗಾಗಿ ಥಳಿಸಿ ಹಲ್ಲೆಗೈದ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಅಯಿಕ್ಕೆರ ಎಂಬಲ್ಲಿ ನಡೆದಿದೆ.

    30 ವರ್ಷದ ದೀಪಾ ತನ್ನ ತಾಯಿಯ ತಾಯಿ ಕಲ್ಯಾಣಿ ಅವರಿಗೆ ಹಲ್ಲೆ ನಡೆಸಿದ್ದಾಳೆ. ಅಜ್ಜಿ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೀಗಾಗಿ ಪ್ರಕರಣ ಸಂಬಂಧಿಸಿದಂತೆ ಆರೋಪಿ ದೀಪಾಳನ್ನು ಪೊಲೀಸರು ಬಂಧಿಸಿದ್ದಾರೆ.

    ವಿಡಿಯೊದಲ್ಲೇನಿದೆ?: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರೋ ವಿಡಿಯೋದಲ್ಲಿ ಅಜ್ಜಿ ಕಲ್ಯಾಣಿ ಅಮ್ಮ ಮನೆಯ ಮುಂದೆ ಮಲಗಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ದೀಪಾ ಹಿಗ್ಗಾಮುಗ್ಗಾವಾಗಿ ಥಳಿಸಿದ್ದಾಳೆ. ಅಲ್ಲದೇ ಅಜ್ಜಿ ಮೈಮೇಲಿದ್ದ ಬಟ್ಟೆಯನ್ನು ಎಳೆದಾಡಿ, ಅದರಲ್ಲೇ ಥಳಿಸಿದ್ದಾಳೆ. ಬಳಿಕ  ಅಜ್ಜಿಯನ್ನು ಮಲಗಿದ್ದಲ್ಲಿಂದ ಎಬ್ಬಿಸಿ, ಕುಳಿತುಕೊಳ್ಳಿಸಿ ಮತ್ತೆ ಹಲವಾರು ಬಾರಿ ಥಳಿಸುವ ಮೂಲಕ ಕ್ರೂರ ವರ್ತನೆ ತೋರಿದ್ದಾಳೆ. ಹೀಗೆ 5 ನಿಮಿಷಗಳ ಕಾಲ ಚೆನ್ನಾಗಿ ಥಳಿಸಿದ್ದಾಳೆ. ಈ ಎಲ್ಲಾ ಘಟನೆಗಳನ್ನು ನೋಡುತ್ತಿದ್ದ ಸಾರ್ವಜನಿಕರು ಹಲ್ಲೆ ನಡೆಸದಂತೆ ಪರಿಪರಿಯಾಗಿ ಕೇಳಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ. ಯಾಕಂದ್ರೆ ವೃದ್ಧೆಯ ಸಹಾಯಕ್ಕೆ ನಿಂತ ಸಾರ್ವಜನಿಕರ ಮೇಲೆಯೇ ದೀಪಾ ರೇಗಾಡಿರುವುದು ವಿಡಿಯೋದಲ್ಲಿ ನಾವು ಕಾಣಬಹುದಾಗಿದೆ.

    ಹಲ್ಲೆ ಮಾಡಲು ಕಾರಣವೇನು?: ಹಲ್ಲೆ ನಡೆಸಿದ ದೀಪಾ ತನ್ನ ಇಬ್ಬರು ಮಕ್ಕಳೊಂದಿಗೆ ಅಮ್ಮ ಹಾಗೂ ಅಜ್ಜಿಯೊಂದಿಗೆ ವಾಸವಿದ್ದರು. ಕೆಲ ತಿಂಗಳ ಹಿಂದೆ ದೀಪಾ ಕೆಲಸ ಕಳೆದುಕೊಂಡಿದ್ದಳು. ಹೀಗಾಗಿ ಹಣದ ಸಮಸ್ಯೆ ಎದುರಿಸುತ್ತಿದ್ದಳು. ಈ ಮಧ್ಯೆ ಅಜ್ಜಿಯ ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಾ ಹೋಗುತ್ತಿತ್ತು. ಇದರಿಂದ ದೀಪಾ ಕಿರಿಕಿರಿ ಅನುಭವಿಸುತ್ತಿದ್ದು, ಅಜ್ಜಿ ಮೇಲೆ ಯದ್ವಾತದ್ವಾ ಹಲ್ಲೆ ನಡೆಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಆರೋಪಿ ದೀಪಾಳನ್ನು ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 323ರ (ಸ್ವಯಂಪ್ರೇರಿತ ಹಾನಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹಾಗೂ ಆರೋಪಿ ಅಮ್ಮ ಹಾಗೂ ಅಜ್ಜಿಯನ್ನು ರಕ್ಷಿಸಲಾಗಿದೆ ಎಂಬುದಾಗಿ ವರದಿಯಾಗಿದೆ.

    https://www.facebook.com/kayalfriends/videos/2021498344530524/

  • 51 ಬಾರಿ ತಿವಿದು ಹತ್ಯೆಗೈದ ಕೊಲೆಗಡುಕನಿಗೆ ಪ್ರತಿ ತಿಂಗಳು ಸಿಗುತ್ತೆ 15 ದಿನ ಪೆರೋಲ್!

    51 ಬಾರಿ ತಿವಿದು ಹತ್ಯೆಗೈದ ಕೊಲೆಗಡುಕನಿಗೆ ಪ್ರತಿ ತಿಂಗಳು ಸಿಗುತ್ತೆ 15 ದಿನ ಪೆರೋಲ್!

    ತಿರುವನಂತಪುರ: ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಸಿಪಿಐ(ಎಂ) ಪಕ್ಷದ ಮುಖಂಡ 3 ವರ್ಷದಲ್ಲಿ ಪ್ರತಿ ತಿಂಗಳು 15 ದಿನಗಳ ಕಾಲ ಪೆರೋಲ್ ಪಡೆದಿರುವ ಮಾಹಿತಿ ಬಹಿರಂಗ ಗೊಂಡಿದೆ.

    ರೆವೊಲ್ಯೂಷನರಿ ಮಾರ್ಕ್ಸಿಸ್ಟ್ ಪಕ್ಷದ (ಆರ್ ಎಂಪಿ) ಪಕ್ಷ ನಾಯಕ ಟಿಪಿ ಚಂದ್ರಶೇಖರನ್ ಎಂಬವರ ಕೊಲೆ ಪ್ರಕರಣದಲ್ಲಿ ಅಪರಾಧಿ ಪಿಕೆ ಕುನ್ಹನಂದನ್ ಜೈಲು ಶಿಕ್ಷೆಗೆ ಗುರಿಯಾಗಿದ್ದ. ಆದರೆ 2015 ನಂತರ ಮೂರು ವರ್ಷದಲ್ಲಿ ಪ್ರತಿ ತಿಂಗಳು 15 ದಿನಗಳ ಕಾಲ ಪೆರೋಲ್ ಮೂಲಕ ಬಿಡುಗಡೆಯಾಗುತ್ತಿದ್ದ ವಿಚಾರ ಮಾಹಿತಿ ಹಕ್ಕಿನ ಅಡಿ ಬೆಳಕಿಗೆ ಬಂದಿದೆ.

    ಕೊಲೆಯಾದ ಚಂದ್ರಶೇಖರನ್ ಅವರ ಪತ್ನಿ ಕೆಕೆ ರೀಮಾ ಅವರಿಗೆ ಸಿಕ್ಕಿದ ಮಾಹಿತಿ ಪ್ರಕಾರ ಅಪರಾಧಿಗೆ 2017 ರ ಅಕ್ಟೋಬರ್ ಮತ್ತು ನವೆಂಬರ್ ತಿಂಗಳು ಹೊರತು ಪಡಿಸಿ 2015 ರಿಂದ 2018ರ ವರೆಗೆ ಪ್ರತಿ ತಿಂಗಳು ಪೆರೋಲ್ ಲಭಿಸಿದೆ.

    ಏನಿದು ಪ್ರಕರಣ: ಕೇರಳ ಸ್ಥಳೀಯ ರಾಜಕೀಯ ಮುಖಂಡರಾಗಿದ್ದ ಟಿಪಿ ಚಂದ್ರಶೇಖರ್ ಅವರನ್ನು 2012 ಮೇ 4 ರಂದು 51 ಬಾರಿ ತಿವಿದು ಕೊಲೆ ಮಾಡಲಾಗಿತ್ತು. ಚಂದ್ರಶೇಖರ್ ಮೊದಲು ಸಿಪಿಐ(ಎಂ) ಪಕ್ಷದಲ್ಲಿ ಗುರುತಿಸಿಕೊಂಡು ಬಳಿಕ ನೂತನ ರೆವೊಲ್ಯೂಷನರಿ ಮಾರ್ಕ್ಸಿಸ್ಟ್ ಪಕ್ಷದ ನಾಯಕತ್ವ ವಹಿಸಿದ್ದರು. ಚಂದ್ರಶೇಖರನ್ ಕೊಲೆ ಬಳಿಕ ಅವರ ಕ್ಷೇತ್ರದಲ್ಲಿ ಆರ್ ಎಂಪಿ ಪಕ್ಷ ಜಯಗಳಿಸಿತ್ತು.

    ಪ್ರಕರಣದ ವಿಚಾರಣೆ ಬಳಿಕ ಸಿಪಿಐ(ಎಂ) ನಾಯಕ ಕೊಲೆಯಲ್ಲಿ ಶಿಕ್ಷೆಗೆ ಗುರಿಯಾಗಿದ್ದ. ಆದರೆ ಚಂದ್ರಶೇಖರನ್ ಕೊಲೆ ನಡೆದು ಆರು ವರ್ಷ ಕಳೆದರೂ ಕೊಲೆ ನಡೆದ ಪ್ರದೇಶದಲ್ಲಿ ನಿರ್ಮಿಸಿಲಾಗಿದ್ದ ಚಂದ್ರಶೇಖರನ್ ಸ್ಮಾರಕ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. 5 ಬಾರಿ ಸ್ಮಾರಕ ನಿರ್ಮಾಣವಾಗಿದ್ದರೂ ಸಿಪಿಐ(ಎಂ) ಕಾರ್ಯಕರ್ತರು ದ್ವಂಸಗೊಳಿಸಿದ್ದಾರೆ. ಪ್ರಸ್ತುತ ನಿರ್ಮಾಣಗೊಂಡಿರುವ ಚಂದ್ರಶೇಖರನ್ ಅವರ ಸ್ಮಾರಕದ ರಕ್ಷಣೆಗೆ ಪೊಲೀಸ್ ರಕ್ಷಣೆಯನ್ನು ಕಲ್ಪಿಸಲಾಗಿದೆ.

    ಪೆರೋಲ್ ದುರ್ಬಳಕೆಯಾಗುತ್ತಿರುವ ವಿಚಾರ ತಿಳಿದು ಈಗ ಚಂದ್ರಶೇಖರನ್ ಪತ್ನಿ ರೀಮಾ ಅವರು ಕೇರಳ ಸರ್ಕಾರದ ವಿರುದ್ಧ ಕಾನೂನು ಸಮರ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ.

  • ಅಭಿಮಾನಿಗಳ ಜೊತೆ ಕ್ಷಮೆ ಕೇಳಿದ ಸೆಹ್ವಾಗ್

    ಅಭಿಮಾನಿಗಳ ಜೊತೆ ಕ್ಷಮೆ ಕೇಳಿದ ಸೆಹ್ವಾಗ್

    ನವದೆಹಲಿ: ಟ್ಟಿಟ್ಟರ್ ನಲ್ಲಿ ಸದಾ ಸಕ್ರಿಯರಾಗಿರುವ ವೀರೇಂದ್ರ ಸೆಹ್ವಾಗ್ ಕೇರಳದ ವ್ಯಕ್ತಿಯನ್ನು ಕಟ್ಟಿ ಹಾಕಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಈಗ ಕ್ಷಮೆ ಕೇಳಿದ್ದಾರೆ.

    ಫೆ.24 ರ ಮಧ್ಯಾಹ್ನ 1.18ಕ್ಕೆ ಸೆಹ್ವಾಗ್, ಬುಡಕಟ್ಟು ಜನಾಂಗದ ಮಧು 1 ಕೆಜಿ ಅಕ್ಕಿಯನ್ನು ಕಳ್ಳತನ ಮಾಡಿದ್ದಕ್ಕೆ ಉಬೈದ್, ಹುಸೈನ್, ಅಬ್ದುಲ್ ಕರೀಂ ಥಳಿಸಿ ಹತ್ಯೆ ಮಾಡಿದ್ದಾರೆ. ನಾಗರಿಕ ಸಮಾಜದಲ್ಲಿ ಈ ರೀತಿ ನಡೆದಿದ್ದು ಇದೊಂದು ತಲೆ ತಗ್ಗಿಸುವ ಪ್ರಕರಣ ಎಂದು ಟ್ವೀಟ್ ಮಾಡಿದ್ದರು.

    ಈ ಟ್ವೀಟ್ ಬಳಿಕ ಸೆಹ್ವಾಗ್ ಈ ಮೂವರ ಹೆಸರನ್ನು ಬರೆದು ಆರೋಪಿಗಳನ್ನು ಧರ್ಮದ ಆಧಾರದಲ್ಲಿ ಈ ಪ್ರಕರಣದಲ್ಲಿ ನೋಡಿದ್ದು ತಪ್ಪು ಎನ್ನುವ ಟೀಕೆಗಳು ಸಾಮಾಜಿಕ ಜಾಲತಾಣದಲ್ಲಿ ಬರತೊಡಗಿತು. ಈ ಪ್ರಕರಣ ದೇಶವ್ಯಾಪಿ ಚರ್ಚೆಗೆ ಗ್ರಾಸವಾಗುತ್ತಲೇ ಕೇರಳ ಪೊಲೀಸರು ಕೃತ್ಯಕ್ಕೆ ಸಾಥ್ ನೀಡಿದ್ದ ಆರೋಪದ ಅಡಿಯಲ್ಲಿ 16 ಮಂದಿಯನ್ನು ಬಂಧಿಸಿದ್ದರು.

    https://twitter.com/virendersehwag/status/967305291359555584

    ಫೆ.24 ರಾತ್ರಿ 9 ಗಂಟೆಯ ವೇಳೆಗೆ ಸೆಹ್ವಾಗ್ ಟ್ವೀಟ್ ಮಾಡಿ, ಈ ಪ್ರಕರಣದಲ್ಲಿ ಭಾಗಿಯಾದ ವ್ಯಕ್ತಿಗಳ ಹೆಸರನ್ನು ಬರೆಯುವಾಗ ಒಂದು ಹೆಸರನ್ನು ಬಿಟ್ಟಿದ್ದೇನೆ. ಸರಿಯಾದ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ್ದಕ್ಕೆ ನಾನು ಕ್ಷಮೆ ಕೋರುತ್ತೇವೆ. ಆ ಟ್ವೀಟ್ ಯಾವುದೇ ಧರ್ಮಕ್ಕೆ ಸಂಬಂಧಿಸಿದ್ದಲ್ಲ. ಕಿಲ್ಲರ್ ಗಳು ಧರ್ಮದ ಆಧಾರದಲ್ಲಿ ಬೇರೆ ಬೇರೆಯಾಗಿದ್ದರೂ ಹಿಂಸಾತ್ಮಕ ಮನಸ್ಥಿತಿಯಲ್ಲಿ ಒಂದಾಗಿದ್ದಾರೆ ಎಂದು ಬರೆದು ಆಕ್ರೋಶವನ್ನು ಹೊರ ಹಾಕಿದ್ದಾರೆ. ಇದನ್ನೂ ಓದಿ: ಕೇರಳ ಶಾಕಿಂಗ್ – ಸಾಯೋವರೆಗೂ ಕಳ್ಳನಿಗೆ ಥಳಿಸಿ ಸೆಲ್ಫಿ ಕ್ಲಿಕ್ಕಿಸಿದ ಸಾರ್ವಜನಿಕರು!

    https://twitter.com/virendersehwag/status/967428117324320768

  • ಸಾಯೋವರೆಗೂ ಕಳ್ಳನಿಗೆ ಥಳಿಸಿ ಸೆಲ್ಫಿ ಕ್ಲಿಕ್ಕಿಸಿದ ಸಾರ್ವಜನಿಕರು!

    ಸಾಯೋವರೆಗೂ ಕಳ್ಳನಿಗೆ ಥಳಿಸಿ ಸೆಲ್ಫಿ ಕ್ಲಿಕ್ಕಿಸಿದ ಸಾರ್ವಜನಿಕರು!

    ತಿರುವನಂತಪುರಂ: ಕಳ್ಳತನ ಆರೋಪದಡಿ ವ್ಯಕ್ತಿಯನ್ನು ಕಟ್ಟಿ ಹಾಕಿ ಥಳಿಸಿ, ಆತನೊಂದಿಗೆ ಸೆಲ್ಫಿ ತೆಗೆದುಕೊಂಡ ಘಟನೆ ಕೇರಳದ ಪಲ್ಕಾಡ್ ನಲ್ಲಿ ನಡೆದಿದೆ. ಘಟನೆಯಲ್ಲಿ ಸಾರ್ವಜನಿಕರಿಂದ ಥಳಿತಕ್ಕೆ ಒಳಗಾದ ವ್ಯಕ್ತಿ ಸಾವನ್ನಪ್ಪಿದ್ದು, ಈ ಕುರಿತು ಪೊಲೀಸರು ದೂರು ದಾಖಲಿಕೊಂಡಿದ್ದಾರೆ.

    ಕಳ್ಳತನ ಆರೋಪ ಹೊತ್ತ ವ್ಯಕ್ತಿ 27 ವರ್ಷದ ಅಧಿವಾಸಿಯಾಗಿದ್ದು, ಮೃತ ವ್ಯಕ್ತಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಮೃತ ವ್ಯಕ್ತಿ ಸ್ಥಳೀಯ ಅಂಗಡಿಯಲ್ಲಿ ಆಹಾರ ಪದಾರ್ಥವನ್ನು ಕಳ್ಳತನ ಮಾಡುತ್ತಿದ್ದ ಎಂದು ಸ್ಥಳೀಯರು ಆತನನ್ನು ಹಿಡಿದು ಕಟ್ಟಿ ಹಾಕಿ ಥಳಿಸಿದ್ದರು. ಅಲ್ಲದೇ ಅದನ್ನು ವಿಡಿಯೋ ಮಾಡಿ, ಆತನೊಂದಿಗೆ ಸೆಲ್ಫಿ ಸಹ ತೆಗೆದುಕೊಂಡಿದ್ದರು. ಬಳಿಕ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಹೋಗಲು ಯತ್ನಿಸಿದ್ದಾರೆ. ಆದರೆ ಆತ ದಾರಿ ನಡುವೆಯೇ ಪೊಲೀಸ್ ವಾಹನದಲ್ಲಿ ಮೃತಪಟ್ಟಿದ್ದಾನೆ. ಪ್ರಸ್ತುತ ಘಟನೆ ಕುರಿತು ಪೊಲೀಸರು ಅನುಮಾನಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಘಟನೆಯ ಸಂಬಂಧ 7 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಕಳೆದ ಕೆಲ ದಿನಗಳಲ್ಲಿ ಕೇರಳದಲ್ಲಿ ಇಂತಹ ಘಟನೆಗಳು ಹೆಚ್ಚು ಮರುಕಳಿಸುತ್ತಿವೆ. ಒಂದು ತಿಂಗಳಿನಲ್ಲಿ ಸಾರ್ವಜನಿಕರು ಥಳಿಸುತ್ತಿರುವ ನಾಲ್ಕನೇ ಘಟನೆಯಾಗಿದೆ. ಕೆಲ ದಿನಗಳ ಹಿಂದೆ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಪಲ್ಲಿಪುರಂ ಪ್ರದೇಶದಲ್ಲಿ ಮೂವರು ಮಹಿಳೆಯರು ಸಾರ್ವಜನಿಕವಾಗಿ ಥಳಿಸಿ ಆಕೆಯ ಕಾಲಿನ ಮೇಲೆ ಕಬ್ಬಿಣದ ಬಿಸಿ ರಾಡ್ ನಿಂದ ಬರೆ ಎಳೆದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪೊಲೀಸರು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದರು. ತಿರುವನಂತಪುರಂನಲ್ಲೂ ತೃತೀಯ ಲಿಂಗಿಗೆ ಸಾರ್ವಜನಿಕರು ಥಳಿಸಿದ ಘಟನೆ ನಡೆದಿತ್ತು.

  • ನೃತ್ಯ ಮಾಡುತ್ತಲೇ ವೇದಿಕೆಯಲ್ಲಿ ಕುಸಿದು ಬಿದ್ದು ಪ್ರಾಣಬಿಟ್ಟ ಕಲಾವಿದ!

    ನೃತ್ಯ ಮಾಡುತ್ತಲೇ ವೇದಿಕೆಯಲ್ಲಿ ಕುಸಿದು ಬಿದ್ದು ಪ್ರಾಣಬಿಟ್ಟ ಕಲಾವಿದ!

    ತಿರುವನಂತಪುರ: ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಮಂಗಳೂರಿನ ಪ್ರಸಿದ್ಧ ಯಕ್ಷಗಾನ ಕಲಾವಿದರೊಬ್ಬರು ಪಾತ್ರ ನಿರ್ವಹಿಸುತ್ತಿದ್ದಾಗ ವೇದಿಕೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದು, ಇದೀಗ ಅಂತಹದ್ದೇ ಒಂದು ಘಟನೆ ಕೇರಳದಲ್ಲಿ ನಡೆದಿದೆ.

    ಖ್ಯಾತ ಓಟ್ಟಮ್‍ತುಳ್ಳಲ್ ಕಲಾವಿದರಾದ ಕಲಾಮಂಡಲಂ ಗೀತಾನಾಥನ್(58) ಅವರು ಪ್ರದರ್ಶನ ನೀಡುತ್ತಿರುವಾಗಲೇ ಹೃದಾಯಘಾತವಾಗಿ ಕುಸಿದು ಬಿದ್ದು ರಂಗಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

    ತ್ರಿಶೂರ್ ಜಿಲ್ಲೆಯ ಇರಿಂಙಲಕ್ಕುಡದಲ್ಲಿರುವ ಅವಿಟ್ಟತ್ತೂರ್ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ನೃತ್ಯ ಮಾಡುತ್ತಿರುವಾಗಲೇ ವೇದಿಕೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಅದಾಗಲೇ ಅವರು ಮೃತ ಪಟ್ಟಿದ್ದಾರೆ ಅಂತ ವೈದ್ಯರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

    ಪ್ರೇಕ್ಷಕರು ಗೀತಾ ಅವರ ನೃತ್ಯ ನೋಡುತ್ತಿರುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇವರು ಕೇರಳದ ಅತ್ಯಂತ ಹಿರಿಯ ಕಲಾವಿದರಾಗಿದ್ದಾರೆ. ಗೀತಾನಂದಮ್ ಅವರಿಗೆ 2000ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, 2010ರಲ್ಲಿ ಕಲಾಮಂದಲ್ ಅವಾರ್ಡ್ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಅಲ್ಲದೇ ಸುಮಾರು 30ಕ್ಕೂ ಹೆಚ್ಚು ಮಲೆಯಾಲಂ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇದೀಗ ಗೀತಾನಂದನ್ ಅವರ ಮರಣಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದಾರೆ.

    2017ರ ಮಾರ್ಚ್ ನಲ್ಲಿ ಕಟೀಲು ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಗೇರುಕಟ್ಟೆ ಗಂಗಯ್ಯ ಶೆಟ್ಟಿ (63) ಅವರು ಪಾತ್ರ ನಿರ್ವಹಿಸುತ್ತಿರುವಾಗ ವೇದಿಕೆಯಲ್ಲೇ ಕುಸಿದು ಮೃತಪಟ್ಟಿದ್ದರು.

    https://www.youtube.com/watch?v=wO4QaCYdVyM

    https://www.youtube.com/watch?v=CJyPZsfLWFY

  • ಕನ್ನಡದ ಹುಡುಗನ ಜೊತೆ ಸಪ್ತಪದಿ ತುಳಿದ ಭಾವನಾ-ಫೋಟೋಗಳಲ್ಲಿ ನೋಡಿ

    ಕನ್ನಡದ ಹುಡುಗನ ಜೊತೆ ಸಪ್ತಪದಿ ತುಳಿದ ಭಾವನಾ-ಫೋಟೋಗಳಲ್ಲಿ ನೋಡಿ

    ಬೆಂಗಳೂರು: ಬಹುಭಾಷಾ ಚಿತ್ರ ತಾರೆ, ಮಲೆಯಾಳಂ ಬೆಡಗಿ ನಟಿ ಭಾವನಾ ಕನ್ನಡದ ಹುಡುಗ ನವೀನ್ ಅವರ ಜತೆ ದಾಂಪತ್ಯ ಬಾಳಿಗೆ ಕಾಲಿಟ್ಟಿದ್ದಾರೆ.

    ಕೇರಳದ ತ್ರಿಶೂರ್ ಜವರ್ ಲಾಲ್ ಕನ್ವೇಷನ್ ಹಾಲ್‍ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಜೋಡಿ ಇದೀಗ ಸಪ್ತಪದಿ ತುಳಿದಿದೆ. ಕೇರಳ ಸಂಪ್ರದಾಯದಂತೆ ಇವರ ಮದುವೆ ನಡೆದಿದ್ದು, ಹಲವು ಸಿನಿಮಾ ತಾರೆಯರು, ಆಪ್ತರು ಹಾಗೂ ಅಭಿಮಾನಿಗಳು ಮದುವೆಯ ಫೋಟೋಗಳನ್ನು ಸಾಮಾಜಿಕ ತಾಣದಲ್ಲಿ ಹಾಕಿ ನವ ಜೋಡಿಗೆ ಶುಭಕೋರುತ್ತಿದ್ದಾರೆ.

    ದಕ್ಷಿಣ ಚಿತ್ರರಂಗದ ಈ ವರ್ಷದ ಮೊದಲ ಸಿನಿಮಾ ನಟಿಯ ಮದುವೆ ಇದಾಗಿದೆ. 2017 ಮಾರ್ಚ್ 9ರಂದು ಕೊಚ್ಚಿಯಲ್ಲಿ ನಡೆದ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾವನಾ ಮತ್ತು ನವೀನ್ ಕುಟುಂಬದ ಸದಸ್ಯರು ಸೇರಿದಂತೆ ನಟಿಯರಾದ ಮಂಜುವಾರಿಯರ್ ಹಾಗೂ ಸಂಯುಕ್ತವರ್ಮಾ ಪಾಲ್ಗೊಂಡಿದ್ದರು. ಕೇರಳ ಮೂಲದವರಾದ ಭಾವನಾ ಅವರು ಮಲೆಯಾಳಂ, ತಮಿಳು, ತೆಲಗು, ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ.

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ `ಜಾಕಿ’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಫೇಮಸ್ ಆಗಿದ್ದರು. ನಂತರ ಬಂದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ `ರೋಮಿಯೊ’, ಕಿಚ್ಚ ಸುದೀಪ್‍ನ ಅಭಿನಯದ `ವಿಷ್ಣುವರ್ಧನ್’ ಹಾಗೂ `ಬಚ್ಚನ್’ ಚಿತ್ರಗಳಿಂದ ಭಾವನಾ ಕನ್ನಡಿಗರಿಗೆ ಮನೆ ಮಗಳಾಗಿದ್ದಾರೆ.

    https://www.youtube.com/watch?v=A1aJzuyrLiw