Tag: kerala

  • ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಅಥವಾ ಇಲ್ಲವೇ ಎಂಬುವುದರ ಚರ್ಚೆಯ ಸಂಪೂರ್ಣ ಮಾಹಿತಿ

    ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಅಥವಾ ಇಲ್ಲವೇ ಎಂಬುವುದರ ಚರ್ಚೆಯ ಸಂಪೂರ್ಣ ಮಾಹಿತಿ

    ಬೆಳಗಾವಿ: ಸಂಪೂರ್ಣ ಮದ್ಯ ನಿಷೇಧ ಕುರಿತು ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಆರಂಭವಾದ ಚರ್ಚೆಯಿಂದ ಕಲಾಪದಲ್ಲಿ ಬೇರಾವುದೇ ಪ್ರಮುಖ ವಿಚಾರ ಚರ್ಚೆಯಾಗದೆ ಕಲಾಪ ಅಂತ್ಯಗೊಂಡಿತು. ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಅಂತ 3 ದಿನಗಳ ಹಿಂದೆ ಪಬ್ಲಿಕ್‍ ಟಿವಿ ಪ್ರಸಾರ ಮಾಡಿದ್ದ ವರದಿ ಮಂಗಳವಾರ ಬಿಸಿ ಬಿಸಿ ಚರ್ಚೆಗೆ ಕಾರಣವಾಯಿತು.

    ಮಂಗಳವಾರ ಬೆಳಗ್ಗೆ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮದ್ಯ ನಿಷೇಧದ ವಿಷಯ ಪ್ರಸ್ತಾಪಿಸಿದರು. ಶೆಟ್ಟರ್ ಅವರಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಇಲ್ಲ’. ‘ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸಂಪೂರ್ಣ ಮದ್ಯ ನಿಷೇಧ ಇನ್ನೂ ಸಾಧ್ಯವಾಗಿಲ್ಲ. ಈ ಕುರಿತು ಕೇಂದ್ರ ಸರ್ಕಾರ ನ್ಯಾಷನಲ್ ಪಾಲಿಸಿ ಆಗಬೇಕು. ಇಡೀ ದೇಶದಲ್ಲಿ ಮದ್ಯ ನಿಷೇಧ ಮಾಡಲು ನಿಮ್ಮ ಪ್ರಧಾನಿ ಮೋದಿ ಅವರಿಗೆ ಹೇಳಿ, ಆವಾಗ ನಾವೂ ಸಪೋರ್ಟ್ ಮಾಡುತ್ತೇವೆ’ ಅಂದರು. ಅಲ್ಲದೇ ನಿಮ್ಮ ಸರ್ಕಾರ ಇದ್ದಾಗ ಏಕೆ ಮಾಡಲಿಲ್ಲ. ಮದ್ಯ ನಿಷೇಧಕ್ಕೆ ಒತ್ತಾಯಿಸುತ್ತಿರುವ ನಿಮಗೆ ಸಂಸ್ಕೃತಿ -ಸಂಸ್ಕಾರ ಇದೆಯಾ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

    ಸಿಎಂ ಅವರ ಹೇಳಿಕೆಗೆ ಕೋಪಗೊಂಡ ಬಿಜೆಪಿ ನಾಯಕರು ಸದನದ ಬಾವಿಗಿಳಿದು ಧರಣಿ ನಡೆಸಿ, ಅಸಂವಿಧಾನಿಕ ಪದಗಳನ್ನು ಕಡತದಿಂದ ತೆಗೆಯುವಂತೆ ಆಗ್ರಹಿಸಿದರು. ಇದಕ್ಕೆ ಸ್ಪೀಕರ್ ಒಪ್ಪದಿದ್ದಾಗ ಕಲಾಪದಲ್ಲಿ ಕೋಲಾಹಲ ಉಂಟಾಗಿ ಸದನವನ್ನು ಮುಂದೂಡಲಾಯಿತು. ಮತ್ತೆ ಕಲಾಪ ಆರಂಭವಾದಾಗ ರೂಲಿಂಗ್ ಪರಿಶೀಲಿಸುವುದಾಗಿ ಸ್ಪೀಕರ್ ಭರವಸೆ ನೀಡಿದ್ದರಿಂದ, ಬಿಜೆಪಿ ಸದಸ್ಯರು ಧರಣಿ ವಾಪಸ್ ಪಡೆದರು.

    ಈ ಹಿಂದೆ ಸುಪ್ರೀಂಕೋರ್ಟ್ ಹೆದ್ದಾರಿಗಳಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ನೀಡಿದಾಗ ಕರ್ನಾಟಕ ಸೇರಿದಂತೆ ರಾಜ್ಯಗಳು ಹೆದ್ದಾರಿಗಳನ್ನೇ ಡಿನೋಟಿಫೈಗೇ ಮುಂದಾಗಿದ್ದವು. ಅಲ್ಲದೇ ಸುಪ್ರೀಂ ಆದೇಶದಿಂದ ಬೊಕ್ಕಸಕ್ಕೆ ನಷ್ಟ ಆಗುತ್ತೆ ಎಂದು ಹೇಳಿದ್ದವು.

    ಇನ್ನು ನಮ್ಮ ರಾಜ್ಯ ಸರ್ಕಾರದ ಮದ್ಯ ಮಾರಾಟದಿಂದ ಲಭ್ಯವಾಗುವ ಆದಾಯ ಸುಮಾರು 11,000 ಕೋಟಿ ರೂ. ಇದ್ದು, ಈ ವರ್ಷದ ಆದಾಯವನ್ನು 18,000 ಕೋಟಿ ರೂ. ಗೆ ಹೆಚ್ಚಿಸುವ ಗುರಿಯನ್ನು ಹೊಂದಿದೆ.

    ರಾಜ್ಯದಲ್ಲಿ ಸಂಪೂರ್ಣ ಸಾರಾಯಿ ನಿಷೇಧ ಅಸಾಧ್ಯ ಅಂತ ಸಿಎಂ ಹೇಳಿದ್ದಾರೆ. ಹಾಗಾದ್ರೆ ದೇಶದ ಎಲ್ಲೆಲ್ಲಿ ಸಾರಾಯಿ ನಿಷೇಧ ಮಾಡಲಾಗಿದೆ. ನಿಷೇಧದ ಕಸರತ್ತು ನಡೆದಿದೆ ಅನ್ನೋದರ ಡೀಟೇಲ್ಸ್ ಇಲ್ಲಿದೆ.

    – ಗುಜರಾತ್ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡಲಾಗಿದ್ದು, ಮದ್ಯ ಮಾರಾಟ ಮಾಡಿದರೆ ಮರಣ ದಂಡನೆ ಶಿಕ್ಷೆ ನೀಡಬಹುದಾಗಿದೆ. ಅಲ್ಲದೇ ಮದ್ಯವನ್ನು ಮನೆಯಲ್ಲೂ ತಯಾರಿ ಮಾಡುವವರು ಶಿಕ್ಷೆಗೆ ಗುರಿ ಆಗಬೇಕಾಗುತ್ತದೆ.

    – ಬಿಹಾರ 2016ರಲ್ಲಿ ಮದ್ಯ ಮಾರಾಟ ನಿಷಿದ್ಧ ಕಾನೂನು ಜಾರಿ. ಮದ್ಯ ಮಾರಿದರೆ ಜಾಮೀನು ರಹಿತ ವಾರೆಂಟ್. ಕಾನೂನು ಬಾಹಿರ ಮದ್ಯ ಕೇಸಿನ ವಿಚಾರಣೆಗೆ ವಿಶೇಷ ಕೋರ್ಟ್ ರಚನೆ ಮಾಡಲಾಗಿದೆ.

    – ಲಕ್ಷದ್ವೀಪ ಮದ್ಯಕ್ಕೆ ಅಲ್ಪ ನಿರ್ಬಂಧ – ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಸಂಪೂರ್ಣ ನಿಷೇಧವಿಲ್ಲ. ಆದರೆ ದ್ವೀಪಪ್ರದೇಶ ಬಂಗಾರಂನಲ್ಲಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

    – ಕೇರಳ ಮದ್ಯ ನಿಷೇಧಿಸಿ ಆದೇಶ ವಾಪಸ್? 2014ರಲ್ಲಿ ಕೇರಳ ಸರ್ಕಾರದಿಂದ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಜಾರಿ ಮಾಡಲಾಗಿತ್ತು. ಆದರೆ 2017ರಲ್ಲಿ ಸಂಪೂರ್ಣ ನಿಷೇಧ ಆದೇಶ ತೆರವು ಮಾಡಿ ಹೋಟೆಲ್, ಬಾರ್, ಏರ್ ಪೋರ್ಟ್ ನಲ್ಲಿ ಮಾರಾಟ ವ್ಯವಸ್ಥೆ ಆರಂಭ ಮಾಡಲಾಗಿದೆ.

    – ಕೇರಳ ರಾಜ್ಯದಂತೆ ಆಂಧ್ರಪ್ರದೇಶ ರಾಜ್ಯದಲ್ಲಿಯೂ ಮದ್ಯ ನಿಷೇಧ ಜಾರಿ ಮಾಡಿ ಆದೇಶವನ್ನು ಹಿಂಪಡೆಯಲಾಯಿತು. 1994ರಲ್ಲಿ ಎನ್.ಟಿ. ರಾಮರಾವ್ ನೇತೃತ್ವದ ಸರ್ಕಾರ ಮದ್ಯ ನಿಷೇಧ ಮಾಡಿದರೆ. 1997ರಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ ಆದೇಶವನ್ನು ಹಿಂಪಡೆಯಿತು.

  • ನಾಲ್ವರು RSS ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ

    ನಾಲ್ವರು RSS ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ

    ತಿರುವನಂತಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಲ್ವರು ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ.

    ಹಲ್ಲೆಗೊಳಗಾದ ಕಾರ್ಯಕರ್ತರು ಭಾನುವಾರ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯ ಬಿಜೆಪಿಯ ಸಮಾವೇಶದಲ್ಲಿ ಭಾಗಿಯಾಗಿದ್ದರು. ಕಾರ್ಯಕರ್ತರ ಮೇಲೆ ಹರಿತವಾದ ಶಸ್ತ್ರಗಳಿಂದ ಮುಖದ ಭಾಗದಲ್ಲಿ ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದವನ್ನು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‍ಪಿ ಮನ್ ಸಿಂಗ್ ತಿಳಿಸಿದ್ದಾರೆ.

    ತಿರುವನಂತಪುರ ಮೇಯರ್ ವಿ.ಕೆ.ಪ್ರಶಾಂತ್ ಅವರ ಮೇಲಿನ ದಾಳಿಯ ನಂತರ ಈ ಹಲ್ಲೆ ನಡೆದಿದ್ದು, ಸಾಕಷ್ಟು ಅನುಮಾನಗಳನ್ನು ಹುಟ್ಟು ಹಾಕಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾನುವಾರ ಪ್ರಶಾಂತ್ ಮೇಲಿನ ದಾಳಿ ಆರ್‍ಎಸ್‍ಎಸ್ ನವರ ಪೂರ್ವ ಯೋಜಿತ ಕೃತ್ಯವಾಗಿದೆ ಎಂದು ಗಂಭೀರ ಆರೋಪ ಮಾಡಿದ್ದರು.

    ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೇಯರ್ ಪ್ರಶಾಂತ್‍ರನ್ನು ಭೇಟಿ ಬಳಿಕ, ಪ್ರಶಾಂತ್ ಮೇಲಿನ ದಾಳಿ ಉದ್ದೇಶಪೂರ್ವಕವಾದದ್ದು ಎಂದು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿಕೊಂಡಿದ್ದರು.

    ಇತ್ತೀಚೆಗೆ ಆರ್‍ಎಸ್‍ಎಸ್ ಕಾರ್ಯಕರ್ತ 28 ವರ್ಷದ ವಾಡೆಕೆತಲಾ ಆನಂದನ್ ಎಂಬವರನ್ನು ಕೊಲೆ ಮಾಡಲಾಗಿತ್ತು. ಆನಂದನ್ ಸಿಪಿಎಂ ಪಕ್ಷದ ಸದಸ್ಯ ಮೊಹಮ್ಮದ್ ಕಾಸಿಮ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

  • ದೇವೇಗೌಡರ ಒಂದು ಕಾಲದ ಶಿಷ್ಯ ಬಾಲಕೃಷ್ಣರಿಂದ ಗುರುವಿಗೆ ತಿರುಮಂತ್ರ?

    ದೇವೇಗೌಡರ ಒಂದು ಕಾಲದ ಶಿಷ್ಯ ಬಾಲಕೃಷ್ಣರಿಂದ ಗುರುವಿಗೆ ತಿರುಮಂತ್ರ?

    ಬೆಂಗಳೂರು: ಜೆಡಿಎಸ್ ವರಿಷ್ಠ ದೇವೇಗೌಡರ ಒಂದು ಕಾಲದ ಶಿಷ್ಯ, ಜೆಡಿಎಸ್ ಬಂಡಾಯ ಶಾಸಕ ಹೆಚ್.ಸಿ ಬಾಲಕೃಷ್ಣ ಗುರುವಿಗೆ ತಿರುಮಂತ್ರ ಹಾಕಿದ್ದಾರೆ ಎಂಬ ಚರ್ಚೆ ಶುರುವಾಗಿದೆ.

    ಕೇರಳಕ್ಕೆ ತೆರಳಿ ದೇವೇಗೌಡರ ವಿರುದ್ಧವೇ ಬಾಲಕೃಷ್ಣ ಶತ್ರು ಸಂಹಾರ ಯಾಗ ನಡೆಸಿದ್ದಾರೆ ಅಂತ ಗೊತ್ತಾಗಿದೆ. ತಮ್ಮ ವಿರುದ್ಧ ಮಾಗಡಿಯಲ್ಲಿ ಹೊಸ ಅಭ್ಯರ್ಥಿ ಹಾಕ್ತಿದ್ದಂತೆ ಬಾಲಕೃಷ್ಣ ಶತ್ರು ಸಂಹಾರ ಯಾಗ ನಡೆಸಿದ್ದಾರೆ ಎನ್ನಲಾಗಿದೆ.

    ಕೇರಳದ ಕಣ್ಣೀರಿನ ಭಗವತಿ ಹಾಗು ರಾಜೇಶ್ವರಿ ದೇವಾಲಯದಲ್ಲಿ ಪೂಜೆ ಮತ್ತು ಯಾಗ ನಡೆಸಿದ್ದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

    ಇದೇ ದೇಗುಲದಲ್ಲಿ ಜೆಡಿಎಸ್‍ನ ಹಲವು ನಾಯಕರು ಶತ್ರು ಸಂಹಾರ ಯಾಗ ನಡೆಸಿದ್ರು.

  • 1 ತಿಂಗ್ಳ ಮಗುವಿನ ಜೀವ ಉಳಿಸಲು 7 ಗಂಟೆಯಲ್ಲಿ 516 ಕಿ.ಮೀ ಕ್ರಮಿಸಿದ್ರು ಈ ಆಂಬುಲೆನ್ಸ್ ಡ್ರೈವರ್

    1 ತಿಂಗ್ಳ ಮಗುವಿನ ಜೀವ ಉಳಿಸಲು 7 ಗಂಟೆಯಲ್ಲಿ 516 ಕಿ.ಮೀ ಕ್ರಮಿಸಿದ್ರು ಈ ಆಂಬುಲೆನ್ಸ್ ಡ್ರೈವರ್

    ತಿರುವನಂತಪುರಂ: ರೋಗಿಯ ಪ್ರಾಣ ಉಳಿಸಲು ಆಂಬುಲೆನ್ಸ್ ಗಳು ಸೂಕ್ತ ಸಮಯಕ್ಕೆ ಅವರನ್ನ ಆಸ್ಪತ್ರೆಗೆ ಕರೆದೊಯ್ಯುವುದು ತುಂಬಾ ಮುಖ್ಯವಾಗುತ್ತದೆ. ಹೀಗೆ ಒಂದು ತಿಂಗಳ ಮಗುವಿನ ಪ್ರಾಣ ಉಳಿಸುವ ಸಲುವಾಗಿ ಆಂಬುಲೆನ್ಸ್ ಚಾಲಕರೊಬ್ಬರು ಉತ್ತರ ಕಣ್ಣೂರು ನಗರದಿಂದ ಕೇರಳ ರಾಜಧಾನಿ ತಿರುವನಂತಪುರಂವರೆಗೆ ಆಂಬುಲೆನ್ಸ್ ನಲ್ಲಿ 7 ಗಂಟೆ ಸಮಯದಲ್ಲಿ ಬರೋಬ್ಬರಿ 516 ಕಿ.ಮೀ ಕ್ರಮಿಸಿ ಸುದ್ದಿಯಾಗಿದ್ದಾರೆ.

    ಗೂಗಲ್ ಮ್ಯಾಪ್‍ನ ಪ್ರಕಾರ ನೋಡಿದರೆ ಸ್ವಲ್ಪ ಟ್ರಾಫಿಕ್ ನಡುವೆ ಇಷ್ಟು ದೂರವನ್ನು ಕ್ರಮಿಸಲು ಬರೋಬ್ಬರಿ 13 ಗಂಟೆ ಸಮಯ ಬೇಕು. ಅದರಲ್ಲೂ ಕೇರಳದ ಕಿರಿದಾದ ರಸ್ತೆಗಳಲ್ಲಿ ವಾಹನದಟ್ಟಣೆ ನೋಡಿದ್ರೆ ಸುಮಾರು 14 ಗಂಟೆಗಳೇ ಬೇಕಾಗಬಹುದು. ಹೀಗಿದ್ದರೂ ಆಂಬುಲೆನ್ಸ್ ಚಾಲಕ ಕೇವಲ 7 ಗಂಟೆಗಳಲ್ಲಿ ಆಸ್ಪತ್ರೆಗೆ ಮಗುವನ್ನ ರವಾನಿಸಿದ್ದಾರೆ. 15 ನಿಮಿಷಗಳ ಕಾಲ ಬ್ರೇಕ್ ತೆಗೆದುಕೊಂಡಿದ್ದನ್ನು ಕಡಿತಗೊಳಿಸಿದ್ರೆ ಇವರ ಪ್ರಯಾಣ 6 ಗಂಟೆ 45 ನಿಮಿಷಕ್ಕೆ ಇಳಿಯುತ್ತದೆ. ಅಂದ್ರೆ ಸರಾಸರಿ ವೇಗ ಗಂಟೆಗೆ 76.4 ಕಿ.ಮೀ ಆಗುತ್ತದೆ.

    ಆಂಬುಲೆನ್ಸ್ ಓಡಿಸುತ್ತಿದ್ದ ಚಾಲಕ ತಮೀಮ್. ಇವರು ಮೂಲತಃ ಕಾಸರಗೋಡಿನವರು. ಬುಧವಾರ ರಾತ್ರಿ ಕಣ್ಣೂರಿನ ಪರಿಯಾರಂ ಮೆಡಿಕಲ್ ಕಾಲೇಜಿನಿಂದ ತಮೀಮ್ ಅವರಿಗೆ ಕರೆ ಬಂದಿತ್ತು. 31 ದಿನಗಳ ಪುಟ್ಟ ಕಂದಮ್ಮ ಫಾತೀಮಾ ಲಬಿಯಾಳನ್ನು ಕಣ್ಣೂರಿನಿಂದ ತಿರುವನಂತಪುರಂನ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಿತ್ತು.

    ಏರ್ ಆಂಬುಲೆನ್ಸ್ ವ್ಯವಸ್ಥೆಗೆ 5 ಗಂಟೆ ಬೇಕಿತ್ತು:  ಮಗು ವಾರದಿಂದ ದೀರ್ಘ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿತ್ತು. ಹೀಗಾಗಿ ತುರ್ತು ಹೃದಯ ಶಸ್ತ್ರಚಿಕಿತ್ಸೆ ಮಾಡಬೇಕಿದ್ದರಿಂದ ಎಷ್ಟು ಸಾಧ್ಯವೋ ಅಷ್ಟು ಬೇಗ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಿತ್ತು. ವಿಮಾನದಲ್ಲಿ ಕರೆದುಕೊಂಡು ಹೋಗೋಣವೆಂದರೆ ಹತ್ತಿರದ ಮಂಗಳೂರು ಮತ್ತು ಕ್ಯಾಲಿಕಟ್ ವಿಮಾನ ನಿಲ್ದಾಣಗಳ ನಡುವೆ ಪ್ರಯಾಣಿಸಲು 3 ಗಂಟೆ ಬೇಕಿತ್ತು. ಆದ್ರೆ ಏರ್ ಆಂಬುಲೆನ್ಸ್ ವ್ಯವಸ್ಥೆ ಮಾಡಲು ಕನಿಷ್ಠ 5 ಗಂಟೆ ಸಮಯ ಬೇಕಿತ್ತು. ಆದ್ದರಿಂದ ರಸ್ತೆ ಮಾರ್ಗದಲ್ಲೇ ಮಗುವನ್ನ ಕಣ್ಣೂರಿನಿಂದ ತಿರುವನಂತಪುರಂಗೆ ರವಾನಿಸಲು ತೀರ್ಮಾನಿಸಿದ್ದರು.

    ಪೊಲೀಸ್, ಎನ್‍ಜಿಓ ಸಹಾಯ: ಮುಂದೆ ನಡೆದಿದ್ದೆಲ್ಲವೂ ಸಿನಿಮಾ ರೀತಿಯಲ್ಲಿತ್ತು. ತಮೀಮ್ ತನಗೆ ನಿಯೋಜಿಸಿದ ಕೆಲಸವನ್ನ ಕೈಗೆತ್ತಿಕೊಂಡ್ರು. ಕೇರಳ ಪೊಲೀಸರು ಆಂಬುಲೆನ್ಸ್ ಗಾಗಿ ರಸ್ತೆ ಅನುವು ಮಾಡಿಕೊಟ್ಟರು. ಇದರಲ್ಲಿ ಭಾಗಿಯಾದ ಮೊದಲ ಅಧಿಕಾರಿ ಕಣ್ಣೂರಿನ ಜಿಲ್ಲಾ ಪೊಲೀಸ್ ಮುಖ್ಯಸ್ಥರು. ಇಡೀ ಪ್ರಯಾಣದ ಜೊತೆ ಸಹಕರಿಸಲು ವಿಶೇಷ ತಂಡವನ್ನು ರಚಿಸಿದ್ರು. ಆಂಬುಲೆನ್ಸ್ ಜೊತೆಗೆ ಹೋಗಲು ಒಂದು ತಂಡ ಹಾಗೂ ತಮೀಮ್ ಅವರ ವಾಹನ ಹೋಗುವ ರಸ್ತೆಗಳಲ್ಲಿ ಟ್ರಾಫಿಕ್ ನಿಯಂತ್ರಿಸಲು ಮತ್ತೊಂದು ತಂಡವನ್ನು ರಚಿಸಿದ್ದರು. ಕೇವಲ ರಾಜ್ಯ ಪೊಲೀಸರಷ್ಟೇ ಅಲ್ಲ, ಮಗುವಿನ ಪ್ರಯಾಣದ ಬಗ್ಗೆ ವಿಷಯ ತಿಳಿದು ಕೇರಳ ಚೈಲ್ಡ್ ಪ್ರೊಟೆಕ್ಷನ್ ಟೀಮ್ ಎಂಬ ಎನ್‍ಜಿಓ ಕೂಡ ಪೊಲೀಸರೊಂದಿಗೆ ಕೈ ಜೋಡಿಸಿದ್ರು.

    ಆಂಬುಲೆನ್ಸ್ ನೋಡಲು ರಸ್ತೆಗಳಲ್ಲಿ ನಿಂತ್ರು ಜನ: ಬುಧವಾರ ರಾತ್ರಿ 8.23ಕ್ಕೆ ತಮೀಮ್ ಆಂಬುಲೆನ್ಸ್ ನ ಸೈರನ್ ಆನ್ ಮಾಡಿ ತಿರುವನಂತಪುರಂವರೆಗಿನ 516 ಕಿ.ಮೀ ಪ್ರಯಾಣವನ್ನ ಆರಂಭಿಸಿದ್ದರು. ಚೈಲ್ಡ್ ಪ್ರೊಟೆಕ್ಷನ್ ಟೀಂ ಸಹಾಯದಿಂದ ಆಂಬುಲೆನ್ಸ್ ಪ್ರಯಾಣದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿತ್ತು. ಜನ ಆಂಬುಲೆನ್ಸ್ ನೋಡಲೆಂದೇ ರಸ್ತೆಗಳಲ್ಲಿ ನಿಂತಿದ್ದರು. ಕೆಲವರು ಮೊಬೈಲ್‍ನಲ್ಲಿ ಇದನ್ನ ವಿಡಿಯೋ ಮಾಡಿ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದಾರೆ.

    ಒಂದೇ ಒಂದು ಸ್ಟಾಪ್: ಆಂಬುಲೆನ್ಸ್ ಜೊತೆಗೆ ಕೇರಳ ಪೊಲೀಸರ ಎರಡು ಎಸ್‍ಯುವಿ ವಾಹನಗಳಿದ್ದವು. ತಮೀಮ್ ವಾಹನವನ್ನು ನಿಧಾನಗೊಳಿಸದಂತೆ ನೋಡಿಕೊಳ್ಳಲು ಜಿಲ್ಲಾ ಗಡಿಗಳಲ್ಲಿ ಎಸ್‍ಯುವಿ ವಾಹನಗಳು ಬದಲಾವಣೆಯಾಗುತ್ತಿದ್ದವು. ಸುಮಾರು 11 ಗಂಟೆಯ ವೇಳೆಗೆ ವಾಹನಗಳು ಕೋಝಿಕೋಡ್‍ನ ಕಾಕಡು ನಲ್ಲಿನ ಪೆಟ್ರೋಲ್ ಬಂಕ್ ತಲುಪಿದ್ದವು. ಇಡೀ ಪ್ರಯಾಣದಲ್ಲಿ ಇದೊಂದೇ ಕಡೆ ವಾಹನವನ್ನ ನಿಲ್ಲಿಸಿದ್ದು.

    ಕೊನೆಗೆ ಗುರುವಾರ ನಸುಕಿನ ಜಾವ 3.23ರ ವೇಳೆಗೆ ಆಂಬುಲೆನ್ಸ್ ತಿರುವನಂತಪುರಂನ ಆಸ್ಪತ್ರೆ ತಲುಪಿತು. ಅಲ್ಲಿನ ವೈದ್ಯರು ಹಾಗೂ ಸಿಬ್ಬಂದಿ ಕೂಡಲೇ ಮಗುವನ್ನ ಒಳಗೆ ಕರೆದೊಯ್ದರು.

    100-120 ಕಿ.ಮೀ ವೇಗದಲ್ಲಿದ್ದೆ: ಇಂತದ್ದೊಂದು ಪ್ರಯಾಸಕರ ಪ್ರಯಾಣದ ನಂತರ ಮಾತನಾಡುವಾಗ ತಮೀಮ್ ತಾನು ಮಾಡಿದ ಈ ದೊಡ್ಡ ಕೆಲಸದ ಶಾಕ್‍ನಿಂದ ಇನ್ನೂ ಹೊರಬಂದಿರಲಿಲ್ಲ. ಪೊಲೀಸರು ಹಾಗೂ ಚೈಲ್ಡ್ ಪ್ರೊಟೆಕ್ಷನ್ ಟೀಂ ನ ಕೆಲಸವನ್ನು ಹೊಗಳಿದ ತಮೀಮ್, ಇವರ ಸಹಾಯ ಮತ್ತು ಬೆಂಬಲ ಇಲ್ಲದಿದ್ರೆ ಈ ಯಶಸ್ವಿ ಪ್ರಯಾಣ ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದ್ರು. ಬಹುತೇಕ 100-120 ಕಿ.ಮೀ ವೇಗದಲ್ಲಿ ನಾನಿದ್ದೆ. ಎರಡೂ ತಂಡಗಳ ಪರಿಶ್ರಮಕ್ಕೆ ಧನ್ಯವಾದ ಎಂದು ಅವರು ಹೇಳಿದ್ರು.

    ಇಡೀ ಪ್ರಯಾಣಕ್ಕೆ ಮುಖ್ಯ ಕಾರಣವಾಗಿದ್ದ ಮಗು ಫಾತೀಮಾ ಸರಿಯಾದ ಸಮಯಕ್ಕೆ ಆಸ್ಪತೆಯೇನೋ ತಲುಪಿದೆ. ಆದ್ರೆ ಮಗುವಿನ ಸ್ಥಿತಿ ಇನ್ನೂ ಚಿಂತಾನಕವಾಗಿದೆ ಎಂದು ವರದಿಯಾಗಿದೆ.

  • ಹೊಸ ಸ್ಕೋಡಾ ಕಾರನ್ನ ಅತೀ ವೇಗದಲ್ಲಿ ಚಾಲನೆ ಮಾಡಿ ಅಪಘಾತ- ಉದ್ಯಮಿ ಮಗ ಸಾವು

    ಹೊಸ ಸ್ಕೋಡಾ ಕಾರನ್ನ ಅತೀ ವೇಗದಲ್ಲಿ ಚಾಲನೆ ಮಾಡಿ ಅಪಘಾತ- ಉದ್ಯಮಿ ಮಗ ಸಾವು

    ತಿರುವನಂತಪುರಂ: ಹೊಸ ಕಾರನ್ನ ಅತೀ ವೇಗದಲ್ಲಿ ಚಾಲನೆ ಮಾಡುತ್ತಿದ್ದ ಪರಿಣಾಮ ಅಪಘಾತ ಸಂಭವಿಸಿ ಉದ್ಯಮಿಯ ಮಗನೊಬ್ಬ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.

    ಇಲ್ಲಿನ ತಿರುವನಂತಪುರಂನಲ್ಲಿ ಕಳೆದ ರಾತ್ರಿ 10.45ರ ಸುಮಾರಿನಲ್ಲಿ ಈ ಘಟನೆ ನಡೆದಿದೆ. ಉದ್ಯಮಿ ಸುಬ್ರಮಣ್ಯ ಎಂಬವರ ಮಗ ಆದರ್ಶ್ ಹೊಚ್ಚ ಹೊಸ ಸ್ಕೋಡಾ ಕಾರನ್ನ ವೇಗವಾಗಿ ಚಾಲನೆ ಮಾಡಿದ್ದು, ಆಟೋಗೆ ಗುದ್ದಿದೆ. ನಂತರ ನಿಯಂತ್ರಣ ತಪ್ಪಿ ಕಾರ್ ಅಪಘಾತಕ್ಕೀಡಾಗಿದೆ.

    ಕಾರಿನಲ್ಲಿದ್ದ ಮಹಿಳೆಯರಿಗೆ ಗಾಯವಾಗಿದ್ದು, ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

    ಅಪಘಾತದಿಂದಾಗಿ ಸ್ಕೋಡಾ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ವಾಹನವನ್ನ ಕಟ್ ಮಾಡಿ ಒಳಗಿದ್ದ ಪ್ರಯಾಣಿಕರನ್ನ ರಕ್ಷಣೆ ಮಡಿದ್ದಾರೆ.

    ಕಾರಿಗೆ ತಾತ್ಕಾಲಿಕ ರೆಜಿಸ್ಟ್ರೇಷನ್ ಇತ್ತು. ಅಪಘಾತದಲ್ಲಿ 20 ವರ್ಷದ ಆದರ್ಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆಂದು ಪೊಲೀಸರು ಹೇಳಿದ್ದಾರೆ.

  • ಆನೆ ಮುಂದೆ ಬಾಹುಬಲಿ ಸ್ಟಂಟ್ ಮಾಡಲು ಹೋಗಿ ಫುಟ್ ಬಾಲ್ ನಂತೆ ಗಾಳಿಯಲ್ಲಿ ಹಾರಿಬಿದ್ದ! ವಿಡಿಯೋ

    ಆನೆ ಮುಂದೆ ಬಾಹುಬಲಿ ಸ್ಟಂಟ್ ಮಾಡಲು ಹೋಗಿ ಫುಟ್ ಬಾಲ್ ನಂತೆ ಗಾಳಿಯಲ್ಲಿ ಹಾರಿಬಿದ್ದ! ವಿಡಿಯೋ

    ತಿರುವನಂತಪುರಂ: ಬಾಹುಬಲಿ ಚಿತ್ರದಲ್ಲಿ ಪ್ರಭಾಸ್ ಆನೆ ಏರುವಂತೆ ಸ್ಟಂಟ್ ಮಾಡಲು ಹೋಗಿ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ತೋಡುಪುಳದಲ್ಲಿ ನಡೆದಿದೆ.

    ಯುವಕನೊಬ್ಬ ಪ್ಲಾಸ್ಟಿಕ್ ಕವರ್ ಹಿಡಿದು ಆನೆಯ ಹತ್ತಿರ ಹೋಗಿ ಬಾಳೆಹಣ್ಣು ತಿನ್ನಿಸುತ್ತಿದ್ದನು. ಯುವಕ ಒಂದಾದ ಮೇಲೆ ಒಂದು ಬಾಳೆಹಣ್ಣು ತಿನ್ನಿಸುತ್ತಿದ್ದಂತೆ ಆನೆ ಕೂಡ ಮತ್ತೆ ಬಾಳೆಹಣ್ಣು ಬೇಕೆಂದು ಸನ್ನೆ ಮಾಡಿ ಹೇಳುತಿತ್ತು.

    ಬಾಳೆ ಹಣ್ಣು ತಿನ್ನಿಸಲು ಹೋದಾಗ ಯುವಕನಿಗೆ ಸೊಂಡಿಲಿನ ಮೂಲಕ ಏರಿ ಆನೆ ಮೇಲೆ ಕುಳಿತುಕೊಳ್ಳುವ ಮನಸ್ಸಾಗಿದೆ. ಕೊನೆಯ ಬಾಳೆಹಣ್ಣು ತಿನ್ನಿಸಿದ ಮೇಲೆ ಯುವಕ ಆನೆಯ ದಂತ ಹಿಡಿದು ಸೊಂಡಿಲಿಗೆ ಮುತ್ತಿಟ್ಟಿದ್ದ. ಮೊದಲ ಮುತ್ತಿನ ಪ್ರಯತ್ನದಲ್ಲಿ ಆತ ಯಶಸ್ವಿಯಾಗಿದ್ದ.

    ಯುವಕ ಪುನಃ ಆ ರೀತಿ ಮಾಡಲು ಪ್ರಯತ್ನಿಸಲು ಹೋದಾಗ ಫೇಸ್‍ ಬುಕ್ ಲೈವ್ ನಲ್ಲಿದ್ದ ಸ್ನೇಹಿತ ಈ ರೀತಿ ಮಾಡಬೇಡ ಎಂದು ಎಚ್ಚರಿಕೆ ನೀಡಿದ್ದ. ನೀನು ಮದ್ಯಪಾನ ಮಾಡಿದ್ದಿ. ಆ ರೀತಿ ಮಾಡಬೇಡ. ಆನೆಗೆ ಹುಚ್ಚು ಹಿಡಿಯುತ್ತೆ ಎಂದು ಆತನ ಸ್ನೇಹಿತ ಹೇಳಿದ್ದಾನೆ.

    ಸ್ನೇಹಿತನ ಎಚ್ಚರಿಕೆಯ ಮಾತನ್ನು ಕೇಳದೇ ಬಾಹುಬಲಿ ಚಿತ್ರದಲ್ಲಿ ಪ್ರಭಾಸ್ ಸೊಂಡಿಲಿನಿಂದ ಏರಿದಂತೆ ಪ್ರಯತ್ನಿಸಲು ಮುಂದಾಗಿದ್ದಾನೆ. ಸೊಂಡಿಲಿನ ಮೇಲೆ ಕಾಲು ಇಡುತ್ತಿದ್ದಂತೆ ರೊಚ್ಚಿಗೆದ್ದ ಆನೆ ಆತನ್ನು ತಿವಿದು ದೂರಕ್ಕೆ ಎಸೆದಿದೆ. ಫುಟ್‍ ಬಾಲ್ ನಂತೆ ಗಾಳಿಯಲ್ಲಿ ಹಾರಿ ಬಿದ್ದ ಯುವಕ ಬಳಿಕ ಪ್ರಜ್ಞೆ ಕಳೆದುಕೊಂಡಿದ್ದಾನೆ.

    ಸದ್ಯ ಯುವಕ ಪ್ರಾಣಪಾಯದಿಂದ ಪಾರಾಗಿದ್ದರೂ ಬಿದ್ದ ರಭಸಕ್ಕೆ ಬೆನ್ನು ಮೂಳೆ ಮುರಿದುಕೊಂಡಿದ್ದಾನೆ ಎಂದು ವರದಿಯಾಗಿದೆ.

  • ಕೇರಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತನ ಕಗ್ಗೊಲೆ

    ಕೇರಳದಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತನ ಕಗ್ಗೊಲೆ

    ತಿರುವನಂತಪುರಂ: ಕೇರಳದಲ್ಲಿ ರಾಜಕೀಯ ಸಂಘರ್ಷದ ಸರಣಿ ಕೊಲೆ ಮುಂದುವರೆದಿದ್ದು, ಇಂದು ಆರ್‍ಎಸ್‍ಎಸ್ ಸಂಘಟನೆಯ ಕಾರ್ಯಕರ್ತರೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

    28 ವರ್ಷದ ವಾಡೆಕೆತಲಾ ಆನಂದನ್ ಕೊಲೆಯಾದ ಆರ್‍ಎಸ್‍ಎಸ್ ಕಾರ್ಯಕರ್ತ. ಆನಂದನ್ ಸಿಪಿಐಎಂ ಪಕ್ಷದ ಸದಸ್ಯ ಮೊಹಮ್ಮದ್ ಕಾಸಿಮ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

    ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ವೇವಾಲಯ್ಡ್ ಪ್ರದೇಶದ ಗುರುವೂರು ದೇವಾಲಯ ಬಳಿ ಬೈಕ್ ನಲ್ಲಿ ಆನಂದ್ ಹೋಗುತ್ತಿದ್ದ ವೇಳೆ ಆನಂದನ್‍ರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಹಿಂದೆ ನಡೆದ ಸಿಪಿಐಎಂ ಕಾರ್ಯಕರ್ತರೊಬ್ಬರ ಕೊಲೆಯ ದ್ವೇಷದ ಹಿನ್ನೆಲೆಯಲ್ಲಿ ಅನಂದನ್ ಕೊಲೆ ನಡೆದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅನಂದನ್ ಕೊಲೆಯನ್ನು ಖಂಡಿಸಿ ಆರ್‍ಎಸ್‍ಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆಯನ್ನು ನಡೆಸಲು ನಿರ್ಧಾರಿಸಿದ್ದಾರೆ. ಘಟನಾ ಸ್ಥಳದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಹೆಚ್ಚಿನ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಧ್ಯಮಗಳಿಗೆ ಹೇಳಿದ್ದಾರೆ.

    ರಾಜ್ಯ ವ್ಯಾಪಿ ನಡೆಯುತ್ತಿರುವ ಆರ್‍ಎಸ್‍ಎಸ್ ಹಾಗೂ ಬಿಜೆಪಿ ನಾಯಕರ ಕೊಲೆಗಳನ್ನು ಜಿಹಾದಿ ಭಯೋತ್ಪದನೆ ಎಂದು ಆರೋಪಿಸಿ ಕೆಲ ದಿನಗಳ ಹಿಂದೆ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಕುಮ್ಮಮಾನಂ ರಾಜಶೇಖರನ್ ಅವರು ರಾಜ್ಯಾದ್ಯಂತ ಜನರಕ್ಷಾ ಯಾತ್ರೆಯನ್ನು ನಡೆಸಲಾಗಿತ್ತು. ಈ ಯಾತ್ರೆಯಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ಹಿರಿಯ ನಾಯಕರು ಭಾಗವಹಿಸಿದ್ದರು. ಈ ಯಾತ್ರೆಯಲ್ಲಿ ಪಾಲ್ಗೊಂಡು ಅಮಿತಾ ಶಾ ದೇವರನಾಡಲ್ಲಿ ರಾಕ್ಷಸರ ಆಡಳಿತ ನಡೆಯುತ್ತಿದೆ ಎಂದು ಆರೋಪಿಸಿದ್ದರು.

     

  • 85 ಭಾಷೆಗಳಲ್ಲಿ ಹಾಡಿ ಗಿನ್ನಿಸ್ ದಾಖಲೆಗೆ ತಯಾರಿ ನಡೆಸ್ತಿದ್ದಾಳೆ 12ರ ಪೋರಿ!

    85 ಭಾಷೆಗಳಲ್ಲಿ ಹಾಡಿ ಗಿನ್ನಿಸ್ ದಾಖಲೆಗೆ ತಯಾರಿ ನಡೆಸ್ತಿದ್ದಾಳೆ 12ರ ಪೋರಿ!

    ದುಬೈ: 12 ವರ್ಷದ ಬಾಲಕಿಯೊಬ್ಬರು 85 ಭಾಷೆಗಳಲ್ಲಿ ಹಾಡುಗಳನ್ನು ಗಾಯನ ಮಾಡುವ ಮೂಲಕ ಗಿನ್ನಿಸ್ ಬುಕ್ ದಾಖಲೆ ನಿರ್ಮಿಸಲು ತಯಾರಿ ನಡೆಸಿದ್ದಾಳೆ.

    ದುಬೈನ ಇಂಡಿಯನ್ ಹೈಸ್ಕೂಲ್‍ನಲ್ಲಿ ವ್ಯಾಸಂಗ ಮಾಡುತ್ತಿರುವ ಸುಖೇತಾ ಸತೀಶ್ ಎಂಬ ಬಾಲಕಿ ಈ ದಾಖಲೆ ನಿರ್ಮಿಸಲು ತಯಾರಿ ನಡೆಸಿದ್ದು, ಈಗಾಗಲೇ ಈಕೆ 80 ವಿವಿಧ ಭಾಷೆಗಳಲ್ಲಿ ಹಾಡುವ ಸಾಮಥ್ರ್ಯ ಹೊಂದಿದ್ದಾಳೆ. ಡಿಸೆಂಬರ್ 29 ರಂದು ನಡೆಯುವ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಕಾರ್ಯಕ್ರಮದಲ್ಲಿ ಪ್ರದರ್ಶನವನ್ನು ನೀಡಲು ಸಿದ್ಧತೆ ನಡೆಸಿದ್ದಾಳೆ.

    ಈ ಕಾರ್ಯಕ್ರಮದ ವೇಳೆಗೆ ಇನ್ನು 5 ಭಾಷೆಗಳ ಹಾಡುಗಳನ್ನು ಕಲಿತು ಹೊಸ ದಾಖಲೆ ಬರೆಯಲು ತಯಾರಿ ನಡೆಸಲಾಗುತ್ತಿದೆ. ಮೂಲತಃ ಕೇರಳದಿಂದ ಬಂದಿರುವ ಈಕೆ, ದೇಶದ ಪ್ರಮುಖ ಭಾಷೆಗಳಾದ ಹಿಂದಿ, ಮಲಯಾಳಂ, ತಮಿಳು ಭಾಷಗಳ ಹಾಡುಗಳನ್ನು ಹಾಡುತ್ತಾಳೆ.

    ಈ ಕುರಿತು ಮಾತನಾಡಿರುವ ಸುಖೇತಾ, `ನಾನು ಒಂದು ವರ್ಷ ಹಿಂದೆ ವಿದೇಶಿ ಭಾಷೆ ಹಾಡುಗಳನ್ನು ಕಲಿಯಲು ಆರಂಭಿಸಿದೆ. ನನ್ನ ಮೊದಲ ವಿದೇಶಿ ಭಾಷೆ ಹಾಡು ಜಪಾನಿಸ್. ನಮ್ಮ ತಂದೆಯವರ ಜಪಾನಿ ಸ್ನೇಹಿತರಿಂದ ಕೇವಲ 2 ಗಂಟೆ ಅವಧಿಯಲ್ಲಿ ಹಾಡನ್ನು ಕಲಿತೆ. ಇನ್ನು ಪ್ರೆಂಚ್, ಜರ್ಮನ್, ಹಂಗೇರಿಯನ್ ಭಾಷೆಗಳು ಕಲಿಯಲು ಹೆಚ್ಚು ಶ್ರಮ ವಾಹಿಸಬೇಕಾಯಿತು ಎಂದು ಹೇಳಿದ್ದಾಳೆ.

    ಪ್ರಸ್ತುತ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಅತೀ ಹೆಚ್ಚು ಭಾಷೆಗಳಲ್ಲಿ ಗಾಯನ ಮಾಡಿರುವ ದಾಖಲೆ ಆಂಧ್ರಪ್ರದೇಶ ಕೆಸಿರಾಜು ಶ್ರೀನಿವಾಸ್ ಎಂಬವರ ಹೆಸರಿನಲ್ಲಿದ್ದು, ಇವರು 2008 ರಲ್ಲಿ ನಡೆದ ಕಾರ್ಯಕ್ರಮದಲ್ಲಿ 75 ಭಾಷೆಗಳಲ್ಲಿ ಹಾಡನ್ನು ಹಾಡುವ ಮಾಡುವ ದಾಖಲೆ ನಿರ್ಮಿಸಿದ್ದರು.

  • ವಿಡಿಯೋ: ಶೂಟಿಂಗ್ ವೇಳೆ ಬಂಡೆಕಲ್ಲಿನ ಮೇಲೆ ಕಾಲುಜಾರಿ ಬಿದ್ದು ನಟಿಗೆ ಗಾಯ

    ವಿಡಿಯೋ: ಶೂಟಿಂಗ್ ವೇಳೆ ಬಂಡೆಕಲ್ಲಿನ ಮೇಲೆ ಕಾಲುಜಾರಿ ಬಿದ್ದು ನಟಿಗೆ ಗಾಯ

    ತಿರುವನಂತಪುರ: ಇಲ್ಲಿನ ಕೊಝಿಕೋಡ್ ನಲ್ಲಿ ಚಿತ್ರವೊಂದರ ಶೂಟಿಂಗ್ ವೇಳೆ ಬಂಡೆ ಕಲ್ಲಿನ ಮೇಲೆ ಬಿದ್ದು ನಟಿಯೊಬ್ಬರು ಗಾಯಗೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಸಿದ್ದಿಕ್ ಚೆಂಡಮಂಗಲ್ಲೂರ್ ಎಂಬವರ ನಿರ್ದೇಶನದ ಕುಂಜೀರಾಮಂತ ಕುಪ್ಪಯಂ ಚಿತ್ರದ ಡ್ಯಾನ್ಸ್ ವೇಳೆ ಈ ಅವಘಡ ಸಂಭವಿಸಿದೆ. ನಟಿ ಲಿಂಡಾ ಕುಮಾರ್ ಬಂಡೆ ಕಲ್ಲಿನ ಮೇಲೆ ಬಿದ್ದು ಕೈ ಹಾಗೂ ಕಾಲುಗಳಿಗೆ ಗಾಯಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಡ್ಯಾನ್ಸ್ ಮಾಡುತ್ತಿದ್ದಂತೆಯೇ ನಟಿ ಏಕಾಏಕಿ ಬಂಡೆಕ್ಲಲಿನ ಮೇಲೆ ಬಿದ್ದಿದ್ದು, ಕೂಡಲೇ ಚಿತ್ರತಂಡ ಆಕೆಯನ್ನು ರಕ್ಷಿಸಿದ್ದಾರೆ. ಘಟನೆಯಿಂದ ನಟಿ ಕೈ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಹೀಗಾಗಿ 10 ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತೆ ನಟಿಗೆ ವೈದ್ಯರು ಸೂಚಿಸಿರುವುದಾಗಿ ವರದಿಯಾಗಿದೆ.

    ಮೊದಲು ತೆಲುಗು ನಟಿ ಕೀರ್ತಿ ಸುರೇಶ್ `ಸಾವಿತ್ರಿ’ ಚಿತ್ರದ ಶೂಟಿಂಗ್ ವೇಳೆ ಬಿದ್ದಿರುವುದಾಗಿ ಹೇಳಿ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆಯೇ ನಟಿ ಕೀರ್ತಿ ಸುರೇಶ್, ತನಗೇನೂ ಆಗಿಲ್ಲ. ನಾನು ಚೆನ್ನಾಗಿಯೇ ಇದ್ದೇನೆ. ಈ ವಿಡಿಯೋ ಹಾಗೂ ನನಗೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಹೀಗಾಗಿ ಈ ವಿಡಿಯೋದಲ್ಲಿರುವುದು ಕೀರ್ತಿ ಅಲ್ಲ. ಅವರು ತೆಲುಗು ಚಿತ್ರವೊಂದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

  • ಕರ್ನಾಟಕ ಉಸ್ತುವಾರಿಯ ‘ಕೈ’ಚಳಕಕ್ಕೆ ಸರಿತಾಗೆ 5 ದಿನ ನಡೆಯೋಕೂ ಸಾಧ್ಯವಾಗಿಲ್ವಂತೆ!

    ಕರ್ನಾಟಕ ಉಸ್ತುವಾರಿಯ ‘ಕೈ’ಚಳಕಕ್ಕೆ ಸರಿತಾಗೆ 5 ದಿನ ನಡೆಯೋಕೂ ಸಾಧ್ಯವಾಗಿಲ್ವಂತೆ!

    – ಕೇರಳದ ಸೋಲಾರ್ ಕಾಮಕಾಂಡದ ವರದಿ ಬಯಲು
    – ವಿಧಾನಸಭೆಯಲ್ಲಿ ನ್ಯಾಯಾಂಗ ತನಿಖಾ ವರದಿ ಮಂಡನೆ

    ತಿರುವನಂತಪುರಂ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಅವರು ಬಹುಕೋಟಿ ಸೋಲಾರ್ ಹಗರಣದ ಆರೋಪಿ ಸರಿತಾ ನಾಯರ್ ಅವರಿಗೆ ದೈಹಿಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ನ್ಯಾಯಾಂಗ ತನಿಖಾ ವರದಿ ಹೇಳಿದೆ.

    ಸೋಲಾರ್ ಹಗರಣದ ನ್ಯಾಯಾಂಗ ತನಿಖಾ ವರದಿ ಗುರುವಾರ ಕೇರಳ ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಸರಿತಾ ನಾಯರ್ ಹೇಳಿಕೆಯನ್ನು ಆಧರಿಸಿ ತಯಾರಿಸಲಾದ ವರದಿಯಲ್ಲಿ ಕೆಸಿ ವೇಣುಗೋಪಾಲ್ ಅವರ ‘ಕೈ’ಚಳಕದ ಬಗ್ಗೆ ವಿವರವಾಗಿ ಪ್ರಸ್ತಾಪವಾಗಿದೆ.

    ವರದಿಯಲ್ಲಿ ಏನಿದೆ?
    ಟೀಂ ಸೋಲಾರ್ ಬ್ರ್ಯಾಂಚ್ ಉದ್ಘಾಟನೆಗೆ ಆಹ್ವಾನಿಸಲು ಆಲೆಪ್ಪಿಯಲ್ಲಿರುವ ವೇಣುಗೋಪಾಲ್ ನಿವಾಸ ‘ರಾಜೀವಂ’ ಗೆ ಸರಿತಾ ಆಗಮಿಸಿದ್ದರು. ಈ ವೇಳೆ ವೇಣುಗೋಪಾಲ್ ಅವರಿಗೆ ಸರಿತಾ ಪರಿಚಯವಾಗಿತ್ತು. ಉದ್ಘಾಟನೆಯ ದಿನಾಂಕ, ಸಮಯ ನಿಗದಿಯಾದ ಬಳಿಕ ಹೊರಡಲು ಸಜ್ಜಾಗಿದ್ದ ವೇಳೆ ಕೆ.ಸಿ.ವೇಣುಗೋಪಾಲ್ ಸರಿತಾ ಹಿಂಭಾಗವನ್ನು ಸವರಿದ್ದಾರೆ. ಇದೇ ವೇಳೆ ಕೈಯಲ್ಲಿದ್ದ ಫೈಲ್‍ನಲ್ಲಿ ವೇಣುಗೋಪಾಲ್ ಹೊಡೆದ ಸರಿತಾ,’ಹಾಗೆ ಮಾಡಬೇಡಿ’ ಎಂದು ಹೇಳಿದ್ದರು. ಈ ಘಟನೆಗೆ ಸರಿತಾ ಜೊತೆಗಿದ್ದ ಜನರಲ್ ಮ್ಯಾನೇಜರ್ ಸಾಕ್ಷಿಯಾಗಿದ್ದಾರೆ. ಈ ವೇಳೆ ಜನರಲ್ ಮ್ಯಾನೇಜರ್ ಮಧ್ಯಪ್ರವೇಶಿಸಿ ಸರಿತಾ ಅವರನ್ನು ಸುಮ್ಮನಾಗಿಸಿದ್ದರು.

    ಇದಾದ ಕೆಲ ಸಮಯದ ಬಳಿಕ ಸರಿತಾ ಮೊಬೈಲ್‍ಗೆ ವೇಣುಗೋಪಾಲ್ ‘ತುಂಬಾ ಮೃದುವಾಗಿತ್ತು’ ಎಂದು ಸಂದೇಶ ಕಳುಹಿಸಿದ್ದಾರೆ. ಇದರಿಂದ ಸಿಟ್ಟಾಗಿ ಸರಿತಾ ಫೋನ್ ಮಾಡಿ ಬೈದಾಗ ‘ಸ್ಟಿಲ್ ಲವ್ ಯೂ’ ಎಂದು ಹೇಳಿದ್ದಾರೆ. ಫೋನ್ ಕರೆಯಲ್ಲಿ ನೀನು ದೆಹಲಿಗೆ ಬಂದ್ರೆ ಮಾತ್ರ ಬ್ರ್ಯಾಂಚ್ ಉದ್ಘಾಟನೆಗೆ ಬರುತ್ತೇನೆ ಎಂದು ಷರತ್ತು ವಿಧಿಸಿದ್ದರು. ಕೊನೆಗೆ ದೆಹಲಿಗೆ ಬಂದು ಸರಿತಾ – ವೇಣುಗೋಪಾಲ್ ರಾಜಿಯಾಗಿದ್ದರು. ಇದಾದ ಬಳಿಕ ರಾತ್ರಿ ವೇಳೆ ಪದೇ ಪದೇ ವೇಣುಗೋಪಾಲ್ ಫೋನ್ ಮಾಡುತ್ತಿದ್ದರು. ಅನಿಲ್ ಕುಮಾರ್ ಹಾಗೂ ನಜರುಲ್ಲಾ ಅವರು ಕೆಸಿ ವೇಣುಗೋಪಾಲ್‍ಗೆ ಪಿಂಪ್‍ಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.

    ಅಂದು ಕೇರಳದಲ್ಲಿ ಬಿಜೆಪಿ ಬಂದ್‍ಗೆ ಕರೆ ನೀಡಿತ್ತು. ಈ ವೇಳೆ ಇಕೋ ಟೂರಿಸಂ ಯೋಜನೆಯ ಪೇಪರ್ ರೆಡಿಯಿದೆ ಎಂದು ರೋಸ್ ಹೌಸ್‍ಗೆ ಬರಲು ವೇಣುಗೋಪಾಲ್ ಸರಿತಾಗೆ ಆಹ್ವಾನ ನೀಡಿದ್ದರು. ಇಕೋಟೂರಿಸಂ ಯೋಜನೆ ನಂಬಿ ಸರಿತಾ ಆಗಮಿಸಿದಾಗ ರೋಸ್ ಹೌಸ್ ನಲ್ಲಿ ಬಂದಾಗ ಸಚಿವರೂ ಇರಲಿಲ್ಲ, ಸಚಿವರ ಆಪ್ತ ಸಿಬ್ಬಂದಿಯೂ ಇರಲಿಲ್ಲ. ಇಬ್ಬರು ಪೊಲೀಸರು ಮಾತ್ರ ಗೇಟ್‍ನಲ್ಲಿ ನಿಂತಿದ್ದರು. ಫೋನ್ ಮಾಡಿದಾಗ ಹಾಲ್‍ನಲ್ಲಿದ್ದೇನೆ ಎಂದು ವೇಣುಗೋಪಾಲ್ ಹೇಳಿದ್ದರು. ಕುಡಿದ ಅಮಲಿನಲ್ಲಿ ತೇಲಾಡುತ್ತಿದ್ದ ವೇಣುಗೋಪಾಲ್ ಸರಿತಾ ಕೊಠಡಿಗೆ ಬಂದಾಗ ಒತ್ತಾಯಪೂರ್ವಕವಾಗಿ ಅಪ್ಪಿಕೊಂಡಿದ್ದಾರೆ. ಈ ವೇಳೆ ಇಬ್ಬರೂ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ವೇಣುಗೋಪಾಲ್ ಬಲವಂತವಾಗಿ ದೈಹಿಕವಾಗಿ ದೌರ್ಜನ್ಯ ನಡೆಸಿದ್ದಾರೆ. ದೌರ್ಜನ್ಯ ನಡೆದ ಬಳಿಕ ಸರಿತಾಗೆ 5 ದಿನ ನಡೆಯಲೂ ಸಾಧ್ಯವಾಗಲಿಲ್ಲ. ಎದ್ದುನಿಂತುಕೊಳ್ಳಲೂ ಸಾಧ್ಯವಾಗಿರಲಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ಸರಿತಾ ಬಳಿ ಸಾಕ್ಷ್ಯಗಳಿದ್ದು, ಇದಾದ ಬಳಿಕವೂ ಫೋನ್ ಕಾಲ್ ಹಾಗೂ ಎಸ್‍ಎಂಎಸ್ ಮೂಲಕ ದೌರ್ಜನ್ಯ ನಡೆಯುತ್ತಿತ್ತು ಎನ್ನುವ ಅಂಶ ವರದಿಯಲ್ಲಿದೆ.

    ಕೆಸಿ ವೇಣುಗೋಪಾಲ್ ಬೆದರಿಸಿ ನನ್ನನ್ನು ಸೆಕ್ಸ್ ಗೆ ಬಳಸಿಕೊಂಡಿದ್ದಾರೆ. ಟೆಲಿಫೋನ್ ಕಾಲ್, ಎಸ್‍ಎಂಎಸ್ ಮಾಡಿ ದೌರ್ಜನ್ಯ ಎಸಗಿದ್ದಾರೆ. ಇದಕ್ಕೆ ಎಲ್ಲ ನನ್ನ ಬಳಿ ಸಾಕ್ಷ್ಯವಿದೆ ಎಂದು ಆಯೋಗದ ಮುಂದೆ ಸರಿತಾ ನಾಯರ್ ಹೇಳಿಕೆ ನೀಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದೇ ವೇಳೆ ವರದಿ ಮಂಡನೆ ಬಗ್ಗೆ ಪ್ರತಿಕ್ರಿಯಿಸಿದ ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ, ಇದು ಸೋಲಾರ್ ತನಿಖಾ ಆಯೋಗದ ವರದಿಯೋ ಅಥವಾ ಸರಿತಾ ನಾಯರ್ ಹೇಳಿಕೆಯ ವರದಿಯೋ ಎಂದು ಪ್ರಶ್ನಿಸಿದ್ದಾರೆ. ವರದಿಯಲ್ಲಿರುವ ಎಲ್ಲ ಅಂಶಗಳು ಈ ಹಿಂದೆ ಸರಿತಾ ಬರೆದ ಪತ್ರದಲ್ಲಿತ್ತು. ಈ ವರದಿಯಲ್ಲಿ ಏನೂ ವಿಶೇಷ ಅಂಶಗಳಿಲ್ಲ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

    ಈ ಹಿಂದಿನ ಯುಡಿಎಫ್ ಸರಕಾರದ ಆಡಳಿತದ ವೇಳೆ ನಡೆದ ಸೋಲಾರ್ ಭ್ರಷ್ಟಾಚಾರ ಹಗರಣದ ನ್ಯಾಯಾಂಗ ತನಿಖೆಯನ್ನು ಜಸ್ಟೀಸ್ ಜಿ. ಶಿವರಾಜನ್ ನಡೆಸಿದ್ದರು. ಅಂದು ಮುಖ್ಯಮಂತ್ರಿಯಾಗಿದ್ದ ಉಮ್ಮನ್ ಚಾಂಡಿ, ವಿದ್ಯುತ್ ಖಾತೆ ಸಚಿವ ಆರ್ಯಾಡನ್ ಮುಹಮ್ಮದ್, ಸೋಲಾರ್ ಪ್ಯಾನಲ್ ಪೂರೈಕೆಯ ಪ್ರಧಾನ ಸೂತ್ರಧಾರಿ ಸರಿತಾ ಎಸ್. ನಾಯರ್, ಆಕೆಯ ಪತಿ ಬಿಜು ರಾಧಾಕೃಷ್ಣನ್ ಸೇರಿದಂತೆ ಹಲವರು ಈ ಹೇಳಿಕೆ ನೀಡಿದ್ದರು.

    ಈ ಹಿಂದೆ ತಿರುವನಂತಪುರಂನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್, ಸರಿತಾ ನಾಯರ್ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆದಿದೆ. ಹೀಗಾಗಿ ಸರಿತಾ ನಾಯರ್ ಯಾರ ವಿರುದ್ಧ ಹೇಳಿಕೆ ನೀಡಿದ್ದಾರೋ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಹೇಳಿದ್ದರು.

    ಆರೋಪಿ ಸರಿತಾ ಉಲ್ಲೇಖ ಮಾಡಿರುವ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಬಹುದು ನ್ಯಾಯಾಂಗ ಆಯೋಗ ಹೇಳಿದೆ. ಲೈಂಗಿಕ ಬಯಕೆ ಈಡೇರಿಸುವಂತೆ ಬೇಡಿಕೆ ಇಡುವುದು ಭ್ರಷ್ಟಾಚಾರದ ಭಾಗವೆಂದು ಪರಿಗಣಿಸಲಾಗಿದೆ. ವರದಿಯನ್ನೇ ಆಧರಿಸಿ ಕಾಂಗ್ರೆಸ್‍ಗೆ ಶಾಕ್ ನೀಡಲು ಕೇರಳದ ಎಡಪಕ್ಷಗಳ ಸರ್ಕಾರ ಈಗ ಮುಂದಾಗಿದೆ.