Tag: kerala

  • ಮಂಗಳೂರಿಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮನ

    ಮಂಗಳೂರಿಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಗಮನ

    ಮಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಯ್ತು.

    ಸಿಎಂ ಯೋಗಿ ಅವರು ಮಂಗಳೂರಿನಿಂದ ಕೇರಳದ ಕಣ್ಣೂರಿಗೆ ತೆರಳಿದ್ದಾರೆ. ಕೇರಳದ ಕಣ್ಣೂರಿನಲ್ಲಿ ನಡೆಯುವ ಬಿಜೆಪಿ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಹೋಗಿದ್ದಾರೆ. ಯೋಗಿ ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ್ದು, ಕಾರ್ಯಕ್ರಮದ ಬಳಿಕ ನಾಳೆ ರಾತ್ರಿ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ನಿರ್ಗಮಿಸಲಿದ್ದಾರೆ.

    ಜನರಕ್ಷಾ ಯಾತ್ರೆಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಚಾಲನೆ ನೀಡಿದ್ದಾರೆ. ಈ ಯಾತ್ರೆ 15 ದಿನಗಳ ಕಾಲ ನಡೆಯಲಿದ್ದು, ಅ.17 ರಂದು ತಿರುವನಂತಪುರಂನಲ್ಲಿ ಕೊನೆಗೊಳ್ಳಲಿದೆ. ಪ್ರತಿದಿನವೂ ದೇಶದಾದ್ಯಂತದ ಯುವಮೋರ್ಚಾ ಕಾರ್ಯಕರ್ತರು, ಬಿಜೆಪಿ ಆಡಳಿತವುಳ್ಳ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಈ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ.

  • ಕೇರಳದಲ್ಲಿ ಬಿಜೆಪಿಯ ಜನರಕ್ಷಾ ಯಾತ್ರೆಗೆ ಅಮಿತ್ ಶಾ ಚಾಲನೆ

    ಕೇರಳದಲ್ಲಿ ಬಿಜೆಪಿಯ ಜನರಕ್ಷಾ ಯಾತ್ರೆಗೆ ಅಮಿತ್ ಶಾ ಚಾಲನೆ

    ತಿರುವನಂತಪುರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೇರಳದಲ್ಲಿ ಮಂಗಳವಾರ ಜನರಕ್ಷಾ ಯಾತ್ರೆಗೆ ಚಾಲನೆ ನೀಡಿ, ಆಡಳಿತರೂಢ ಸಿಪಿಎಂ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಸಿಪಿಎಂ ಸರ್ಕಾರ `ಹತ್ಯೆ ರಾಜಕೀಯ’ ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಕಣ್ಣೂರಿನ ಪಯ್ಯನ್ನೂರಿನಲ್ಲಿ ಅಮಿತ್ ಶಾ ಜನರಕ್ಷಾ ಯಾತ್ರೆಗೆ ಚಾಲನೆ ನೀಡಿದರು.

    ನಾಲ್ಕು ಕಿಲೋ ಮೀಟರ್ ಯಾತ್ರೆ ನಡೆಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, 2001ರಿಂದ ಇಲ್ಲಿಯವರಗೆ 120ಕ್ಕೂ ಹೆಚ್ಚು ಮಂದಿ ಬಿಜೆಪಿ ಮತ್ತು ಆರ್‍ಎಸ್‍ಎಸ್ ಕಾರ್ಯಕರ್ತರ ಹತ್ಯೆ ನಡೆದಿದೆ. ಅದರಲ್ಲೂ ಪಿಣರಾಯಿ ಅಧಿಕಾರಕ್ಕೆ ಏರಿದ ಬಳಿಕ 14 ಹತ್ಯೆಗಳು ಕಣ್ಣೂರಿನಲ್ಲಿ ನಡೆದಿದೆ. ಈ ಹತ್ಯೆಗೆ ಕಾರಣ ಯಾರು ಎನ್ನುವುದನ್ನು ತಿಳಿಸಲಿ. ಈ ಪ್ರಶ್ನೆಗೆ ಅವರು ಉತ್ತರ ನೀಡದೇ ಇದ್ದರೆ, ಅವರೇ ಈ ಹತ್ಯೆಗಳಿಗೆ ನೇರ ಹೊಣೆ ಎಂದು ವಾಗ್ದಾಳಿ ನಡೆಸಿದರು.

    ರಾಜಧಾನಿ ತಿರುವನಂತಪುರದ ವರೆಗೆ ಸುಮಾರು 15 ದಿನಗಳ ಕಾಲ ನಡೆಯಲಿರುವ ಯಾತ್ರೆಯಲ್ಲಿ ಬಿಜೆಪಿಯ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ. ಈ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬುಧವಾರ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಕಣ್ಣೂರಿಗೆ ಆಗಮಿಸಲಿದ್ದಾರೆ.

  • ನಟಿ ಕಿಡ್ನಾಪ್ ಕೇಸ್: 86 ದಿನಗಳ ನಂತ್ರ ದಿಲೀಪ್‍ಗೆ ಸಿಕ್ತು ಜಾಮೀನು

    ನಟಿ ಕಿಡ್ನಾಪ್ ಕೇಸ್: 86 ದಿನಗಳ ನಂತ್ರ ದಿಲೀಪ್‍ಗೆ ಸಿಕ್ತು ಜಾಮೀನು

    ಕೊಚ್ಚಿ: ಬಹುಭಾಷಾ ನಟಿ ಕಿಡ್ನಾಪ್ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ಮಲೆಯಾಳಂ ನಟ ದಿಲೀಪ್ ಗೆ ಜಾಮೀನು ಮಂಜೂರು ಮಾಡಿದೆ.

    ಒಂದು ಲಕ್ಷ ರೂ. ಶ್ಯೂರಿಟಿ ಹಾಗೂ ಪಾಸ್ ಪೋರ್ಟ್ ಗಳನ್ನು ಕೋರ್ಟ್ ಗೆ ಸಲ್ಲಿಸಬೇಕೆಂದು ಸೂಚಿಸಿ ಜಾಮೀನು ನೀಡಿದೆ.

    ಕಳೆದ ಜುಲೈ10ರಂದು ನಟಿ ಕಿಡ್ನಾಪ್ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಪೊಲೀಸರು ಬಂಧಿಸಿದ್ದರು. ಎರಡು ಬಾರಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು ಕೂಡಾ ಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು. ಈಗ 86 ದಿನಗಳ ಬಳಿಕ ಹೈಕೋರ್ಟ್ ದಿಲೀಪ್ ಗೆ ಜಾಮೀನು ನೀಡಿದೆ.

  • ಕಳೆದ ಎರಡು ತಿಂಗಳಲ್ಲಿ ಪಕ್ಷ ಸಂಘಟನೆ ಎಷ್ಟಾಗಿದೆ: ವರದಿ ಕೇಳಿದ ಅಮಿತ್ ಶಾ

    ಕಳೆದ ಎರಡು ತಿಂಗಳಲ್ಲಿ ಪಕ್ಷ ಸಂಘಟನೆ ಎಷ್ಟಾಗಿದೆ: ವರದಿ ಕೇಳಿದ ಅಮಿತ್ ಶಾ

    ಬೆಂಗಳೂರು: ನಾನು ಬೆಂಗಳೂರಿಗೆ ಬಂದು ಹೋದ ಬಳಿಕ ಪಕ್ಷ ಸಂಘಟನೆ ಸಂಪೂರ್ಣ ವರದಿಯನ್ನು ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆ.

    ಮಂಗಳೂರಿನಲ್ಲಿ ಅಕ್ಟೋಬರ್ 4 ರಂದು ವಿಶೇಷ ಕೋರ್ ಕಮಿಟಿ ಸಭೆ ನಡೆಯಲಿದ್ದು, ಈ ವೇಳೆ ಎರಡು ತಿಂಗಳ ಪಕ್ಷ ಸಂಘಟನೆ ವರದಿ ಕೊಡಿ, ವಿಸ್ತಾರಕರು ಏನು ಕೆಲಸ ಮಾಡಿದ್ದಾರೆ ಎನ್ನುವ ಮಾಹಿತಿಯನ್ನು ನೀಡಿ ಎಂದು ಸೂಚಿಸಿದ್ದಾರೆ.

    ಮೂರು ದಿನಗಳ ಭೇಟಿ ವೇಳೆ ಕೊಟ್ಟಿದ್ದ ಸಲಹೆ ಮತ್ತು ನಿರ್ದೇಶನಗಳು ಎಷ್ಟು ಅನುಷ್ಠಾನ ಆಗಿದೆ ಇದರ ಬಗ್ಗೆ ವಿವರ ನೀಡುವಂತೆ ಅಮಿತ್ ಶಾ ತಾಕೀತು ಮಾಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

    ಪಾದಯಾತ್ರೆ ಇಲ್ಲ: ಮಂಗಳೂರಿನಲ್ಲಿ ಅಮಿತ್ ಶಾ ಪಾದಯಾತ್ರೆ ಮಾಡುವುದಿಲ್ಲ. ಮಂಗಳೂರಿನಲ್ಲಿ ರಾಜ್ಯ ನಾಯಕರ ಜೊತೆ ಮಾತುಕತೆಯಷ್ಟೇ ನಡೆಸಲಿದ್ದಾರೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

  • ಲಾಡ್ಜ್ ನಲ್ಲಿ ಜಗಳ: ಪ್ರೇಮಿಯ ಮರ್ಮಾಂಗವನ್ನು ಕತ್ತರಿಸಿದ್ಳು ಪ್ರೇಯಸಿ

    ಲಾಡ್ಜ್ ನಲ್ಲಿ ಜಗಳ: ಪ್ರೇಮಿಯ ಮರ್ಮಾಂಗವನ್ನು ಕತ್ತರಿಸಿದ್ಳು ಪ್ರೇಯಸಿ

    ಮಲಪುರಂ: ಪ್ರೇಮಿಗಳಿಬ್ಬರ ನಡುವೆ ಜಗಳ ಉಂಟಾಗಿ ಪ್ರೇಯಸಿಯೊಬ್ಬಳು ಪ್ರಿಯಕರನ ಮರ್ಮಾಂಗವನ್ನು ಚಾಕುವಿನಿಂದ ಕತ್ತರಿಸಿದ ಧಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಲಾಡ್ಜ್ ಒಂದರಲ್ಲಿ ನಡೆದಿದೆ.

    ಘಟನೆಯಲ್ಲಿ ಗಾಯಗೊಂಡ ಯುವಕನ್ನು ಸ್ಥಳೀಯ ಪುರಥೂರ್ ನಿವಾಸಿ ಇರ್ಶಾದ್ ಎಂದು ಗುರುತಿಸಲಾಗಿದೆ. ಪ್ರೇಮಿಗಳಿಬ್ಬರು ಲಾಡ್ಜ್‍ನಲ್ಲಿ ಬುಧವಾರ ರೂಮ್ ಬುಕ್ ಮಾಡಿದ್ದು, ಗುರುವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದೆ.

    ಇರ್ಶಾದ್ ಗುರುವಾರ ಬೆಳಿಗ್ಗೆ ತನ್ನ ಕೊಠಡಿಯಿಂದ ಓಡಿಬರುವುದನ್ನು ಗಮನಿಸಿದ ಲಾಡ್ಜ್ ಸಿಬ್ಬಂದಿ ಆತನನ್ನು ಕೋಯಿಕ್ಕೋಡು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದಾರೆ. ವೈದ್ಯರು ಯುವಕನ ತುರ್ತು ಅಪರೇಷನ್ ನಡೆಸಿ ಮರ್ಮಾಂಗವನ್ನು ಯಶಸ್ವಿಯಾಗಿ ಜೋಡಿಸಿದ್ದಾರೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ 30 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಪ್ರೇಮಿಯ ಮರ್ಮಾಂಗವನ್ನು ನಾನೇ ಚಾಕುವಿನಿಂದ ಕತ್ತರಿಸಿದ್ದೇನೆ ಎಂದು ಮಹಿಳೆ ಒಪ್ಪಿಕೊಂಡಿದ್ದಾಳೆ.

    ಕೃತ್ಯ ಎಸಗಿದ್ದು ಯಾಕೆ?
    ಮಹಿಳೆಗೆ ಈ ಹಿಂದೆ ಮದುವೆಯಾಗಿದ್ದು ಪತಿಗೆ ವಿಚ್ಛೇದನ ನೀಡಿದ್ದಳು. ಕಳೆದ 2 ವರ್ಷಗಳಿಂದ ಇರ್ಷಾದ್ ಜೊತೆ ಮಹಿಳೆ ಸಂಬಂಧ ಹೊಂದಿದ್ದು, ಇವರಿಬ್ಬರು ರಹಸ್ಯವಾಗಿ ಮದುವೆಯಾಗಿದ್ದರು. ಈ ಮದುವೆಯಾಗಿದ್ದರೂ ಇರ್ಷಾದ್ ಮತ್ತೊಂದು ಹುಡುಗಿಯ ಜೊತೆ ಸಂಬಂಧ ಬೆಳೆಸಲು ಮುಂದಾಗಿದ್ದ. ಈ ವಿಚಾರ ತಿಳಿದು ರೊಚ್ಚಿಗೆದ್ದ ಮಹಿಳೆ ಇರ್ಷಾದ್ ಮರ್ಮಾಂಗವನ್ನು ಚಾಕುವಿನಿಂದ ಇರಿದು ಕತ್ತರಿಸಿದ್ದಾಳೆ.

    ಆದರೆ ಇರ್ಷಾದ್ ನಾನೇ ಕೃತ್ಯ ಎಸಗಿದ್ದೇನೆ ಎಂದು ಪೊಲೀಸ್ ವಿಚಾರಣೆ ವೇಳೆ ಹೇಳಿದ್ದಾನೆ.

  • ದೇವರನಾಡು ಕೇರಳದಲ್ಲಿ ಸಮೂಹ `ಸನ್ನಿ’ – ಸನ್ನಿ ಲಿಯೋನ್ ನೋಡಲು ಮುಗಿಬಿದ್ದ ಲಕ್ಷ-ಲಕ್ಷ ಜನ

    ದೇವರನಾಡು ಕೇರಳದಲ್ಲಿ ಸಮೂಹ `ಸನ್ನಿ’ – ಸನ್ನಿ ಲಿಯೋನ್ ನೋಡಲು ಮುಗಿಬಿದ್ದ ಲಕ್ಷ-ಲಕ್ಷ ಜನ

    ತಿರುವನಂತಪುರ: ಬಾಲಿವುಡ್ ನಟಿ ಸನ್ನಿ ಲಿಯೋನ್ ಗುರುವಾರ ಕೇರಳದ ಕೊಚ್ಚಿಗೆ ಭೇಟಿ ನೀಡಿದ್ದು ಅಭಿಮಾನಿಗಳ ಸಾಗರವೇ ಅಲ್ಲಿ ನೆರೆದಿತ್ತು.

    ಶೋ ರೂಂ ಒಂದರ ಉದ್ಘಾಟನೆಗಾಗಿ ಸನ್ನಿ ಲಿಯೋನ್ ಬಂದಿದ್ದು, ಕೊಚ್ಚಿಯ ಹೃದಯಭಾಗವಾದ ಧಾರವಾಹಿ ಎಂಜಿ ರಸ್ತೆಯಲ್ಲಿ ಸನ್ನಿ ಲಿಯೋನ್ ಕಣ್ತುಂಬಿಕೊಳ್ಳಲು ಅಭಿಮಾನಿಗಳ ಸಾಗರವೇ ಹರಿದುಬಂದಿತ್ತು. ಅಭಿಮಾನಿಗಳು ತಮ್ಮ ಮೊಬೈಲ್‍ಗಳಲ್ಲಿ ಸನ್ನಿಯನ್ನು ಸೆರೆ ಹಿಡಿದುಕೊಂಡರು. ಈ ವೇಳೆ ಸ್ಥಳದಲ್ಲಿ ಸಾಕಷ್ಟು ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನಸಮೂಹ ಮತ್ತು ಸಂಚಾರವನ್ನು ನಿರ್ವಹಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.

    ಭೇಟಿ ಬಳೀಕ ಸನ್ನಿ ಲಿಯೋನ್ ಟ್ವಿಟರ್ ಮತ್ತು ಅವರ ಫೇಸ್‍ಬುಕ್ ಪುಟಗಳಲ್ಲಿ ಪ್ರೇಕ್ಷಕರ ಚಿತ್ರಗಳನ್ನು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ. ಕೊಚ್ಚಿಯ ಜನರಿಗೆ ಧನ್ಯವಾದ ಹೇಳಲು ಯಾವುದೇ ಪದಗಳಿಲ್ಲ. ಪ್ರೀತಿ ವಿಶ್ವಾಸವಿಟ್ಟ ಕೇರಳವನ್ನು ಎಂದಿಗೂ ಮರೆಯುವುದಿಲ್ಲ ಎಂದು ಬರೆದುಕೊಂಡಿದ್ದಾರೆ. . ಸನ್ನಿಗಾಗಿ ಸಮೂಹ ಸನ್ನಿಯ ದೃಶ್ಯ ಇದೀಗ ಎಲ್ಲೆಡೆ ಸಖತ್ ವೈರಲ್ ಆಗಿದೆ.

     

  • ಪೊಲೀಸರ ಮುಂದೆಯೇ ಕೇರಳ ಬಿಜೆಪಿಯ ರಾಜ್ಯ ಕಚೇರಿಯ ಮೇಲೆ ಕಲ್ಲು ತೂರೋದನ್ನು ನೋಡಿ

    ಪೊಲೀಸರ ಮುಂದೆಯೇ ಕೇರಳ ಬಿಜೆಪಿಯ ರಾಜ್ಯ ಕಚೇರಿಯ ಮೇಲೆ ಕಲ್ಲು ತೂರೋದನ್ನು ನೋಡಿ

    ತಿರುವನಂತಪುರಂ: ಕೇರಳ ಬಿಜೆಪಿಯ ರಾಜ್ಯ ಕಚೇರಿ ಮೇಲೆ ಸಿಪಿಐ(ಎಂ) ಕಾಯಕರ್ತರು ದಾಳಿ ಮಾಡಿರುವ ಘಟನೆ ಶುಕ್ರವಾರ ಬೆಳಗ್ಗೆ ತಿರುವನಂತಪುರಂನಲ್ಲಿ ನಡೆದಿದೆ.

    ಬಿಜೆಪಿ ರಾಜ್ಯಾಧ್ಯಕ್ಷ ಕುಮ್ಮನನ್ ರಾಜಶೇಖರ್ ಕಚೇರಿಯಲ್ಲಿರುವ ವೇಳೆ ಈ ದಾಳಿ ನಡೆದಿದೆ. ಆ ಸ್ಥಳದಲ್ಲಿ ಪೊಲೀಸರಿದ್ದರೂ ಕೂಡ ದುಷ್ಕರ್ಮಿಗಳು ಕೈಗೆ ಸಿಕ್ಕಿದ್ದನ್ನು ತೂರಿ ಬಿಜೆಪಿ ಕಚೇರಿಯ ಕಿಟಕಿ ಗಾಜುಗಳನ್ನ ಪುಡಿ ಪುಡಿ ಮಾಡಿ ಅಲ್ಲೇ ನಿಂತಿದ್ದ ವಾಹಗಳ ಮೇಲೂ ಕಲ್ಲುತೂರಾಟ ನಡೆಸಿದ್ದಾರೆ.

    ಬಿಜೆಪಿ ನಾಯಕರು ಸಿಪಿಐ(ಎಂ) ಕಾರ್ಯಕರ್ತರು ಈ ಕೃತ್ಯದ ಹಿಂದೆ ಇದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

    ರಾಜಶೇಖರ್ ಅವರ ಕಾರು ಸೇರಿದಂತೆ ಸ್ಥಳದಲ್ಲಿ ಪಾರ್ಕ್ ಮಾಡಿದ್ದ 6 ಕಾರುಗಳು ಮೇಲೆ ದಾಳಿ ನಡೆಸಲಾಗಿದೆ.

  • 51ರ ಮಹಿಳೆ ಮೇಲೆ ಅತ್ಯಾಚಾರ ಆರೋಪ- ಕೇರಳ ಕಾಂಗ್ರೆಸ್ ಶಾಸಕ ಅರೆಸ್ಟ್

    51ರ ಮಹಿಳೆ ಮೇಲೆ ಅತ್ಯಾಚಾರ ಆರೋಪ- ಕೇರಳ ಕಾಂಗ್ರೆಸ್ ಶಾಸಕ ಅರೆಸ್ಟ್

    ತಿರುವನಂತಪುರಂ: 51 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಕೇರಳದ ಕಾಂಗ್ರೆಸ್ ಶಾಸಕ ಎಮ್ ವಿನ್ಸೆಂಟ್ ಅವರನ್ನ ಪೊಲೀಸರು ಬಂಧಿಸಿದ್ದಾರೆ.

    ಅತ್ಯಾಚಾರದ ಆರೋಪ ಮಾಡಿರುವ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ವಿನ್ಸೆಂಟ್ ಅವರನ್ನ ತಿರುವನಂತಪುರಂನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಹಿಳೆಯ ದೂರಿನನ್ವಯ ಶಾಸಕರ ವಿರುದ್ಧ ಅತ್ಯಾಚಾರ ಹಾಗು ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮಹಿಳೆಯು ನೆಯ್ಯಟಿಂಕಾರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆಕೆಯ ಹೇಳಿಕೆ ದಾಖಲಿಸಿಕೊಂಡ ನಂತರ ಶಾಸಕರ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕೊಲ್ಲಂನ ನಗರ ಪೊಲೀಸ್ ಆಯುಕ್ತರಾದ ಅಜೀತಾ ಬೇಗಂ ಹೇಳಿದ್ದಾರೆ.

    ಆಸ್ಪತ್ರೆಯಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ದಾಖಲಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    ಶಾಸಕರು ಸತತವಾಗಿ ನನ್ನ ಹೆಂಡತಿಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದರು ಎಂದು ಸಂತ್ರಸ್ತ ಮಹಿಳೆಯ ಪತಿ ಆರೋಪ ಮಾಡಿದ್ದಾರೆ.

    ಆದರೆ ಶಾಸಕ ವಿನ್ಸೆಂಟ್ ಈ ಎಲ್ಲಾ ಆರೋಪಗಳು ನಿರಾಧಾರ ಎಂದು ಹೇಳಿದ್ದು, ತನಿಖೆ ಎದುರಿಸುತ್ತೇನೆ ಎಂದಿದ್ದಾರೆ. ನನ್ನ ವಿರುದ್ಧ ಪಿತೂರಿ ಮಾಡಿ ಈ ಆರೋಪ ಮಾಡಲಾಗಿದೆ. ಆ ಮಹಿಳೆ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತಂತೆ ನನಗೆ ಹಲವು ಬಾರಿ ಕರೆ ಮಾಡಿದ್ರು. ಆಕೆಯ ದೂರುಗಳನ್ನ ಸ್ಥಳೀಯ ಪೊಲೀಸರಿಗೆ ವರ್ಗಯಿಸಿದ್ದೆ ಎಂದು ವಿನ್ಸೆಂಟ್ ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದಾರೆ.

  • ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ- ವಿರಾಜಪೇಟೆಯಲ್ಲಿ ಕರ್ನಾಟಕ-ಕೇರಳ ಸಂಪರ್ಕ ರಸ್ತೆ ಕಟ್

    ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ- ವಿರಾಜಪೇಟೆಯಲ್ಲಿ ಕರ್ನಾಟಕ-ಕೇರಳ ಸಂಪರ್ಕ ರಸ್ತೆ ಕಟ್

    ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದೆ. ಮಡಿಕೇರಿಯ ಕಾವೇರಿ ನದಿಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹಳ್ಳ-ಕೊಳ್ಳ ನದಿ ತೊರೆಗಳು ಹರಿಯುವ ತಟಗಳಲ್ಲಿರುವ ಗದ್ದೆ-ತೋಟಗಳಿಗೆ ನೀರು ನುಗ್ಗಿದೆ. ಕರ್ನಾಟಕ-ಕೇರಳ ಸಂಪರ್ಕ ಕಲ್ಪಿಸುವ ವಿರಾಜಪೇಟೆ ತಾಲೂಕಿನ ಪೆರುಂಬಾಡಿ ಬಳಿ ರಸ್ತೆಯೇ ಕುಸಿದು ಸಂಪರ್ಕ ಕಡಿತಗೊಂಡಿದೆ. ತಾತ್ಕಾಲಿಕವಾಗಿ ರಸ್ತೆ ರಿಪೇರಿ ಕೆಲಸ ನಡೆಯುತ್ತಿದೆ.

    ಮಹಾರಾಷ್ಟ್ರದಲ್ಲಿ ಭೀಕರ ಮಳೆಯಾಗುತ್ತಿದ್ದು ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಎರಡು ದಿನಗಳಿಂದ ರಾಯಭಾಗ ಹಾಗೂ ಅಥಣಿ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡಲಾಗ್ತಿದೆ. ದೂದಗಂಗಾ, ವೇದಗಂಗಾ ಕೃಷ್ಣಾ ನದಿ ಮೇಲಿರುವ ಕೆಳ ಹಂತದ 6 ಸೇತುವೆಗಳು ಜಲಾವೃತಗೊಂಡಿವೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನದಿ ಪಾತ್ರದಲ್ಲಿ ಜನರ ಸಂಚಾರ ಅಸ್ತವ್ಯಸ್ಥವಾಗಿದೆ. ಪ್ರವಾಹದ ಆತಂಕವಿಲ್ಲ, 2 ಲಕ್ಷ ಕ್ಯೂಸೆಕ್ ಮೇಲೆ ನೀರು ಬಂದರೆ ಮಾತ್ರ ಸಮಸ್ಯೆ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

    ಚಿಕ್ಕಮಗಳೂರು, ಶಿವಮೊಗ್ಗ ಭಾಗದಲ್ಲಿ ಮಳೆ ಸ್ವಲ್ಪಮಟ್ಟಿಗೆ ತಗ್ಗಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಕಳಸ, ಕುದುರೆಮುಖದಲ್ಲಿ ಮಳೆಯಾಗ್ತಿದ್ದು, ತುಂಬಾ, ಭದ್ರಾ ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.

     

  • ಬಹುಭಾಷಾ ನಟಿಯ ಕಿಡ್ನಾಪ್ ಕೇಸ್: ನಟ ದಿಲೀಪ್ ಅರೆಸ್ಟ್

    ಬಹುಭಾಷಾ ನಟಿಯ ಕಿಡ್ನಾಪ್ ಕೇಸ್: ನಟ ದಿಲೀಪ್ ಅರೆಸ್ಟ್

    ತಿರುವನಂತಪುರಂ: ಬಹುಭಾಷಾ ನಟಿಯ ಕಿಡ್ನಾಪ್  ಕೇಸಿಗೆ ಸಂಬಂಧಿಸಿದಂತೆ ನಟ ದಿಲೀಪ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

    ಬೆಳಗ್ಗೆಯಿಂದ ಪೊಲೀಸರು ದಿಲೀಪ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು. 13 ಗಂಟೆಗಳ ನಡೆದ ಸತತ ವಿಚಾರಣೆ ಬಳಿಕ ಪೊಲೀಸರು ದಿಲೀಪ್ ಅವರನ್ನು ಬಂಧಿಸಿದ್ದಾರೆ ಎಂದು ಮಲೆಯಾಳಂ ಮಾಧ್ಯಮಗಳು ವರದಿ ಮಾಡಿವೆ.

    ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪಲ್ಸರ್ ಸುನಿ ಮತ್ತು ದಿಲೀಪ್ ಅವರ ನಡುವೆ ಸ್ನೇಹವಿದ್ದು, ದಿಲೀಪ್ ಸೂಚನೆ ಮೇರೆಗೆ ಈ ಅಪಹರಣ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿತ್ತು.

    ಕೆಲ ದಿನಗಳ ಹಿಂದೆ ದಿಲೀಪ್ ಪತ್ನಿ ಆಗಿರುವ ಕಾವ್ಯಾ ಮನೆಗೆ ಪೊಲೀಸರು ದಾಳಿ ನಡೆಸಿದ್ದರು.

    ಏನಿದು ಪ್ರಕರಣ?
    ಕೇರಳದ ಕೊಚ್ಚಿಯಿಂದ ಫೆಬ್ರವರಿ 17 ರಂದು ರಾತ್ರಿ ವೇಳೆಗೆ ಶೂಟಿಂಗ್ ಮುಗಿಸಿ ತ್ರಿಶೂರ್‍ಗೆ ತೆರಳುತ್ತಿದ್ದ ಮಲೆಯಾಳಂ ನಟಿಯನ್ನು ಐದು ಜನ ದುಷ್ಕರ್ಮಿಗಳ ತಂಡ ಅಪಹರಿಸಿ, ಲೈಂಗಿಕ ಕಿರುಕುಳ ನೀಡಿತ್ತು. ಈ ಕೃತ್ಯವನ್ನು ಕ್ಯಾಮೆರಾದಲ್ಲಿ ಚಿತ್ರೀಕರಿಸಿಕೊಂಡು, ಕಾರಿನಲ್ಲಿಯೇ ನಟಿಯನ್ನು ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದರು. ಘಟನೆಯ ಬಳಿಕ ನಟಿ ನಿರ್ಮಾಪಕರ ಮನೆಗೆ ತೆರಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ಇದನ್ನೂ ಓದಿ:ನಾನು ಏನು ನೋಡಬಾರದಿತ್ತೋ ಅದನ್ನು ಜೀವನ ತೋರಿಸಿದೆ, ಎಲ್ಲವನ್ನೂ ಮೆಟ್ಟಿ ನಿಲ್ತೀನಿ – ಬಹುಭಾಷಾ ನಟಿಯ ಮೊದಲ ಪ್ರತಿಕ್ರಿಯೆ