Tag: kerala

  • ಅವಳ ನಂಬಿಕೆಯನ್ನು ನಾವು ಉಳಿಸಿಕೊಳ್ಳಲಿಲ್ಲ: ವಿಜಯಲಕ್ಷ್ಮಿ ದರ್ಶನ್

    ಅವಳ ನಂಬಿಕೆಯನ್ನು ನಾವು ಉಳಿಸಿಕೊಳ್ಳಲಿಲ್ಲ: ವಿಜಯಲಕ್ಷ್ಮಿ ದರ್ಶನ್

    ಬೆಂಗಳೂರು: ಗರ್ಭಿಣಿ ಆನೆ ಸಾವನ್ನಪ್ಪಿದ ಸುದ್ದಿ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇದು ಹೆಚ್ಚು ಸದ್ದು ಮಾಡುತ್ತಿದ್ದು, ಮಾನವೀಯತೆ ಸತ್ತು ಹೋಗಿದೆ ಎಂಬ ಹ್ಯಾಷ್ ಟ್ಯಾಗ್‍ನೊಂದಿಗೆ ಹಲವರು ಆನೆ ಸಾವಿಗೆ ಮರುಕ ಪಡುತ್ತಿದ್ದಾರೆ. ಅದೇ ರೀತಿ ಇದೀಗ ಡಿ ಬಾಸ್ ಪತ್ನಿ ವಿಜಯಲಕ್ಷ್ಮಿ ಸಹ ಈ ಕೃತ್ಯವನ್ನು ಖಂಡಿಸಿದ್ದಾರೆ.

    ಗರ್ಭಿಣಿ ಆನೆ ಸಾವಿನ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನವೇ ಸೃಷ್ಟಿಯಾಗಿದ್ದು, ಹಲವರು ನಟ, ನಟಿಯರು, ಆಟಗಾರರು ಖಂಡನೆ ವ್ಯಕ್ತಪಡಿಸಿದ್ದಾರೆ. ಮಾನವೀಯತೆಯ ಕಗ್ಗೊಲೆ ಎಂದಿದ್ದಾರೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿಯವರು ಟ್ವೀಟ್ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ. ನೀರಲ್ಲಿ ಮುಳುಗಿದ ಆನೆಯ ಗ್ರಾಫಿಕ್ ಫೋಟೋ ಹಂಚಿಕೊಂಡು, ಅಂತಿಮವಾಗಿ ಮಾನವೀಯತೆ ಸತ್ತಿತು. ಅವಳು ಗರ್ಭಿಣಿ, ನಮ್ಮನ್ನು ನಂಬಿದ್ದಳು. ಆದರೆ ನಾವು ಅದನ್ನು ಹುಸಿಯಾಗಿಸಿದೆವು. ದ್ರೋಹಕ್ಕೆ ಮತ್ತೊಂದು ಹೆಸರೇ ಮಾನವರು ಎಂದು ಬರೆದುಕೊಂಡಿದ್ದಾರೆ.

    ಕೆಲ ದಿನಗಳ ಹಿಂದೆ ಕೇರಳದಲ್ಲಿ ಈ ಘಟನೆ ಸಂಭವಿಸಿದ್ದು, ಆಹಾರ ಅರಸಿ ಗ್ರಾಮಕ್ಕೆ ಬಂದಿದ್ದ ಗರ್ಭಿಣಿ ಆನೆಗೆ ಪೈನಾಪಲ್‍ನಲ್ಲಿ ಪಟಾಕಿ ಇಟ್ಟು ತಿನಿಸಲಾಗಿತ್ತು. ಮದ್ದು ಬಾಯಿಯಲ್ಲಿಯೇ ಬ್ಲಾಸ್ಟ್ ಆಗಿದ್ದು, ತಕ್ಷಣವೇ ಹತ್ತಿರದಲ್ಲೇ ಇದ್ದ ನದಿಯಲ್ಲಿ ಆನೆ ಮುಳುಗಿತ್ತು. ಅಷ್ಟೊತ್ತಿಗೆ ಅರಣ್ಯಾಧಿಕಾರಿಗಳು ಸಹ ಘಟನಾ ಸ್ಥಳಕ್ಕೆ ಆಗಮಿಸಿದರು. ಆದರೆ ಆನೆ ಆಗಲೇ ಕೊನೆಯುಸಿರೆಳೆದಿತ್ತು. ಕೊನೆಗೂ ಪಾಪಿಗಳ ಕೃತ್ಯಕ್ಕೆ ಗರ್ಭಿಣಿ ಆನೆ ಹೊಟ್ಟೆಯಲ್ಲಿನ ತನ್ನ ಮಗುವಿನೊಂದಿಗೆ ಪ್ರಾಣ ಬಿಟ್ಟಿತ್ತು.

    ಇದು ಸುದ್ದಿಯಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಟ್ವಿಟ್ಟರ್ ನಲ್ಲಿ ಸಹ ಟ್ರೆಂಡಿಂಗ್‍ನಲ್ಲಿತ್ತು. ಹ್ಯುಮ್ಯಾನಿಟಿ ಇಸ್ ಡೆಡ್ ಎಂಬ ಹ್ಯಾಶ್ ಟ್ಯಾಗ್‍ನೊಂದಿಗೆ ಅಭಿಯಾನವನ್ನೇ ಆರಂಭಿಸಲಾಗಿತ್ತು. ದೇಶಾದ್ಯಂತ ಹಲವು ಜನ ಮರುಕ ಪಟ್ಟಿದ್ದರು. ಅದೇ ರೀತಿ ವಿಜಯಲಕ್ಷ್ಮಿ ಸಹ ಈ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಆನೆಯ ಕಾರ್ಟೂನ್ ಫೋಟೋ ಟ್ವೀಟ್ ಮಾಡಿ, ಕೇರಳದ ಘಟನೆಯ ಬಗ್ಗೆ ಕೇಳಿ ತುಂಬಾ ಆಘಾತವಾಯಿತು. ಪ್ರಾಣಿಗಳನ್ನು ಪ್ರೀತಿಯಿಂದ ಕಾಣಬೇಕು, ಅವುಗಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಮನವಿ ಮಾಡುತ್ತೇನೆ. ಇಂತಹ ಹೇಡಿತನ ಕೃತ್ಯಗಳಿಗೆ ಅಂತ್ಯ ಹಾಡೋಣ ಎಂದು ಕರೆ ನೀಡಿದ್ದಾರೆ.

    ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಸಹ ಇನ್‍ಸ್ಟಾಗ್ರಾಮ್‍ನಲ್ಲಿ ಈ ಕುರಿತು ಖಾರವಾಗಿ ಪ್ರತಿಕ್ರಿಯಿಸಿದ್ದು, ಇಂತಹ ಹೇಯ ಕೃತ್ಯ ಎಸಗಿದವರನ್ನು ಹಿಡಿದು ಶಿಕ್ಷಿಸಬೇಕು. ಈ ಮೂಲಕ ನ್ಯಾಯ ಒದಗಿಸಬೇಕು ಎಂದು ಕೇರಳ ಮುಖ್ಯಮಂತ್ರಿಗೆ ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ.

  • ಆನ್‍ಲೈನ್ ಕ್ಲಾಸಿಗೆ ಹಾಜರಾಗಲು ಮನೆಯ ಹಂಚು ಏರಿದ ಬಿಎ ವಿದ್ಯಾರ್ಥಿನಿ

    ಆನ್‍ಲೈನ್ ಕ್ಲಾಸಿಗೆ ಹಾಜರಾಗಲು ಮನೆಯ ಹಂಚು ಏರಿದ ಬಿಎ ವಿದ್ಯಾರ್ಥಿನಿ

    ತಿರುವನಂತಪುರಂ: ಕೊರೊನಾ ಮಹಾಮಾರಿಯ ಅಟ್ಟಹಾಸದಿಂದ ಇದೀಗ ತಗರತಿಗಳೆಲ್ಲವೂ ಆನ್ ಲೈನ್ ನಲ್ಲೇ ನಡೆಯುತ್ತಿದೆ. ಆದರೆ ಇಲ್ಲಿ ಸಮಸ್ಯೆಯೆಂದರೆ ಕೆಲವರಿಗೆ ತರಗತಿಗೆ ಹಾಜರಾಗಲು ನೆಟ್ ವರ್ಕ್ ಇಲ್ಲದೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳದ ಪದವಿ ವಿದ್ಯಾರ್ಥಿನಿಯೊಬ್ಬಳು ಒಳ್ಳೆಯ ಉಪಾಯವೊಂದನ್ನು ಕಂಡುಕೊಂಡಿದ್ದಾಳೆ.

    ಹೌದು. ಕುಟ್ಟಿಪುರಂ ಕೆಎಂಸಿಟಿ ಆರ್ಟ್ಸ್ & ಸೈನ್ಸ್ ಕಾಲೇಜಿನ ವಿದ್ಯಾರ್ಥಿನಿ ನಮಿತಾ, ಮೊಬೈಲ್ ನೆಟ್‍ವರ್ಕ್ ಇಲ್ಲವೆಂದು ತನ್ನದೇ ಆದ ಐಡಿಯಾವೊಂದನ್ನು ಕಂಡುಕೊಂಡು ಇದೀಗ ಭಾರೀ ಸುದ್ದಿಯಾಗಿದ್ದಾಳೆ.

    ಕೊಟ್ಟಕಲ್ ಸಮೀಪದ ಅರೀಕ್ಕಲ್ ನಿವಾಸಿ ನಮಿತಾ ಬಿಎ ಐದನೇ ಸೆಮಿಸ್ಟರ್ ಇಂಗ್ಲಿಷ್ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಆದರೆ ಕೊರೊನಾ ಲಾಕ್ ಡೌನ್ ಪರಿಣಾಮ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿದ್ದು, ಆನ್ ಲೈನ್ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಮಿತಾ ತನ್ನ ಮನೆಯ ಮೇಲೆ ಹಂಚಿನಲ್ಲಿ ಮೊಬೈಲ್ ನೆಟ್ ವರ್ಕ್ ಸಿಗುವುದನ್ನು ಕಂಡುಕೊಂಡಿದ್ದಾಳೆ. ಹೀಗಾಗಿ ಸುಮಾರು 4 ಗಂಟೆಗಳ ಕಾಲ ಅಲ್ಲಿಯೇ ಕುಳಿತು ತರಗತಿಗೆ ಹಾಜರಾಗಿದ್ದಾಳೆ.

    ಈ ಬಗ್ಗೆ ಮಾತನಾಡಿರುವ ನಮಿತಾ, ನನ್ನ ಮನೆಯ ಸುತ್ತಮುತ್ತ ಎಲ್ಲಾ ಕಡೆ ಮೊಬೈಲ್ ನೆಟ್ ವರ್ಕ್ ಗಾಗಿ ಅಲೆದಾಡಿದ್ದೇನೆ. ಆದರೆ ಎಲ್ಲಿಯೂ ನೆಟ್‍ವರ್ಕ್ ಸಿಗುತ್ತಿರಲಿಲ್ಲ. ಕೊನೆಗೆ ಮನೆಯ ಹಂಚಿನ ಮೇಲೆ ಹೋದಾಗ ಅಲ್ಲಿ ನೆಟ್‍ವರ್ಕ್ ಸಿಕ್ಕಿತ್ತು ಎಂದು ಹೇಳಿದ್ದಾಳೆ.

    ಮೊಬೈಲ್ ನೆಟ್ ವರ್ಕ್ ಹುಡುಕಲು ಸಾಕಷ್ಟು ಕಷ್ಟಪಟ್ಟಿದ್ದೇನೆ. ಮನೆಯ ಸುತ್ತಮುತ್ತ ಎಲ್ಲಿಯೂ ನೆಟ್‍ವರ್ಕ್ ಸಿಗದೆ ಪರದಾಡುತ್ತಿದ್ದೆ. ಕೊನೆಗೂ ಮನೆಯ ಮಹಡಿ ಹತ್ತಿ ಕುಳಿತು ಆನ್ ಲೈನ್ ತರಗತಿಗೆ ಹಾಜರಾದೆ. ಸೋಮವಾರ ಹಾಗೂ ಮಂಗಳವಾರ ಛತ್ರಿ ಹಿಡಿದುಕೊಂಡೇ ಪಾಠ ಕೇಳಿದೆ. ಆದರೆ ಬುಧವಾರ ಬಿಸಿಲಿದ್ದರಿಂದ ಆರಮಾಗಿ ತರಗತಿಗೆ ಹಾಜರಾಗಿದ್ದೇನೆ. ಬರೀ ಮಳೆಯಾದರೆ ತೊಂದರೆ ಇಲ್ಲ. ಆದರೆ ಮಿಂಚು ಹಾಗೂ ಗುಡುಗಿನಿಂದಾಗಿ ಸ್ವಲ್ಪ ಭಯವಾಯಿತು. ನನ್ನಂತೆ ಹಲವು ವಿದ್ಯಾರ್ಥಿಗಳು ಮೊಬೈಲ್ ನೆಟ್ ವರ್ಕ್ ಇಲ್ಲದೆ ಕಷ್ಟ ಅನುಭವಿಸುತ್ತಿದ್ದಾರೆ. ಹೀಗೆ ಹಲವರು ಬೇರೆ ಬೇರೆ ವಿಧಾನಗಳ ಮೂಲಕ ಮೊಬೈಲ್ ನೆಟ್‍ವವರ್ಕ್ ಪಡೆದುಕೊಳ್ಳುವ ಮೂಲಕ ಕ್ಲಾಸಿಗೆ ಹಾಜರಾಗಿದ್ದಾರೆ ಎಂದು ತನ್ನ ಅನುಭವ ಹಾಗೂ ಸ್ನೇಹಿತರ ಕಷ್ಟವನ್ನು ಕೂಡ ನಮಿತಾ ಹಂಚಿಕೊಂಡಿದ್ದಾಳೆ.

    ನಮಿತಾ ತಂದೆ ಕೆ.ಸಿ ನಾರಾಯಣ್ ಅವರು ಕೋಟಕಲ್ ಆರ್ಯ ವೈದ್ಯ ಶಾಲೆಯ ಉದ್ಯೋಗಿಯಾಗಿದ್ದು, ತಾಯಿ ಎಂ. ಜೀಜಾ ಮಲ್ಲಪುರಂನಲ್ಲಿರುವ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಂದೆ-ತಾಯಿ ಸಹಾಯದಿಂದಾಗಿ ನಮಿತಾ ಮನೆಯ ಮಹಡಿಯಲ್ಲಿ ಕುಳಿತು ತರಗತಿಗೆ ಹಾಜರಾಗಿದ್ದಾಳೆ. ಈಕೆಯ ಸಹೋದರಿ ನಯನಾ ಬಿಎಎಂಎಸ್ 4ನೇ ವರ್ಷದಲ್ಲಿ ಕಲಿಯುತ್ತಿದ್ದು, ಆಕೆಯೂ ತಂಗಿಗೆ ಸಂಪೂರ್ಣ ಸಹಕಾರ ನೀಡಿದ್ದಾಳೆ. ನಾನು ಕೆಲವು ಡಾಟಾ ಆಪರೇಟರ್ ಗಳ ಮೊರೆ ಹೋದೆ. ಆದರೆ ಏನೇ ಮಾಡಿದರೂ ನೆಟ್ ವರ್ಕ್ ಪಡೆಯಲು ಸಾಧ್ಯವಾಗಿರಲಿಲ್ಲ ಎಂದು ನಮಿತಾ ತಂದೆ ಪ್ರತಿಕ್ರಿಯಿಸಿದ್ದಾರೆ.

  • ಪ್ರಾಣಿಗಳೊಂದಿಗೆ ಹೇಡಿತನದ ಕೃತ್ಯಕ್ಕೆ ಅಂತ್ಯ ಹಾಡೋಣ- ವಿರಾಟ್ ಕರೆ

    ಪ್ರಾಣಿಗಳೊಂದಿಗೆ ಹೇಡಿತನದ ಕೃತ್ಯಕ್ಕೆ ಅಂತ್ಯ ಹಾಡೋಣ- ವಿರಾಟ್ ಕರೆ

    ಮುಂಬೈ: ಪೈನಾಪಲ್‍ನಲ್ಲಿ ಪಟಾಕಿ ಇಟ್ಟು 15 ವರ್ಷದ ಗರ್ಭಿಣಿ ಆನೆಯನ್ನು ಕೊಲೆಗೈದ ಹೀನ ಕೃತ್ಯವನ್ನು ಕ್ರೀಡಾಪಟುಗಳು ಖಂಡಿಸಿ, ಅಸಮಾಧಾನ ಹೊರಹಾಕಿದ್ದಾರೆ. ಪ್ರಾಣಿಗಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕೆಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜನರಿಗೆ ಮನವಿ ಮಾಡಿಕೊಂಡಿದ್ದಾರೆ.

    ಆನೆ ಹಾಗೂ ಅದರ ಗರ್ಭದಲ್ಲಿ ಮರಿಯಾನೆ ಇರುವ ಕಾರ್ಟೂನ್ ಫೋಟೋವನ್ನು ಟ್ವೀಟ್ ಮಾಡಿರುವ ವಿರಾಟ್ ಕೊಹ್ಲಿ, “ಕೇರಳದ ಘಟನೆಯ ಬಗ್ಗೆ ಕೇಳಿ ತುಂಬಾ ಆಘಾತವಾಯಿತು. ಪ್ರಾಣಿಗಳನ್ನು ಪ್ರೀತಿಯಿಂದ ಕಾಣಬೇಕು, ಅವುಗಳ ಬಗ್ಗೆ ಕಾಳಜಿ ವಹಿಸಬೇಕು ಎಂದು ಮನವಿ ಮಾಡುತ್ತೇನೆ. ಇಂತಹ ಹೇಡಿತನ ಕೃತ್ಯಗಳಿಗೆ ಅಂತ್ಯ ಹಾಡೋಣ” ಎಂದು ಕರೆ ನೀಡಿದ್ದಾರೆ.

    ಟೀಂ ಇಂಡಿಯಾ ಸ್ಪಿನ್ನರ್ ಹರ್ಭಜನ್ ಸಿಂಗ್, “ಪೈನಾಪಲ್‍ನಲ್ಲಿ ಪಟಾಕಿ ತುಂಬಿ ಗರ್ಭಿಣಿ ಆನೆಯನ್ನು ಕೊಂದವರಿಗೆ ಶಿಕ್ಷೆಯಾಗಬೇಕು. ಮುಗ್ಧ ಆನೆ ಮೇಲೆ ಇಂತಹ ಕ್ರೌರ್ಯ ಎಸೆಗಿದ್ದು ಎಷ್ಟು ಸರಿ” ಎಂದು ಪ್ರಶ್ನಿಸಿದ್ದಾರೆ. ಭಾರತೀಯ ಮಹಿಳಾ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಟ್ವಿಟ್ ಮಾಡಿ, ಇದು ತುಂಬಾ ದುಃಖಕರ ಘಟನೆ ಎಂದು ಹೇಳಿದ್ದಾರೆ.

    ಭಾರತೀಯ ಫುಟ್ಬಾಲ್ ತಂಡದ ನಾಯಕ ಸುನಿಲ್ ಛೆಟ್ರಿ, “ಅವಳು ಮುಗ್ಧ ಗರ್ಭಿಣಿ ಆನೆ. ರಾಕ್ಷಸರೇ ನೀವು ಶಿಕ್ಷೆ ಅನುಭವಿಸುತ್ತೀರಾ ಎಂದು ಭಾವಿಸುತ್ತೇನೆ. ನಾವು ಪ್ರಕೃತಿಯನ್ನು ಮತ್ತೆ ಮತ್ತೆ ವಿಫಲಗೊಳಿಸುತ್ತಲೇ ಇರುತ್ತೇವೆ. ಹಾಗಾಗಿ ನಾವು ಹೆಚ್ಚು ವಿಕಸನಗೊಂಡಿರುವ ಪ್ರಭೇದ ಎನ್ನುವುದನ್ನು ನನಗೆ ತಿಳಿಸಿಕೊಡಿ” ಎಂದು ಟ್ವಿಟ್ ಮಾಡಿದ್ದಾರೆ.

    ಏನಿದು ಪ್ರಕರಣ?:
    ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಸ್ಥಳೀಯರು ಬುಧವಾರ ಪಟಾಕಿ ತುಂಬಿದ ಪೈನಾಪಲ್ ಹಣ್ಣನ್ನು ಗರ್ಭಿಣಿ ಆನೆಗೆ ತಿನ್ನಿಸಿದ್ದರು. ನಂತರ ಆನೆಯ ಬಾಯಿಯಲ್ಲಿ ಪಟಾಕಿ ಬ್ಲಾಸ್ಟ್ ಆಗಿ ಗಂಭೀರವಾಗಿ ಗಾಯಗೊಂಡಿತ್ತು. ಗರ್ಭಿಣಿ ಆನೆ ಯಾವೊಬ್ಬ ಗ್ರಾಮಸ್ಥರಿಗೂ ತೊಂದರೆ ನೀಡಿರಲಿಲ್ಲ. ಬಾಯಿಯಲ್ಲಿ ಪಟಾಕಿ ಸಿಡಿಯುತ್ತಿದ್ದಂತೆ ನೋವಿನಲ್ಲಿ ರಸ್ತೆ ತುಂಬಾ ಓಡಾಡಿತ್ತು. ಬಳಿಕ ವೆಲ್ಲಿಯಾರ್ ನದಿಯಲ್ಲಿ ಮುಳುಗಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ ಆನೆಯನ್ನು ಮೇಲೆತ್ತಲು ಅರಣ್ಯ ಇಲಾಖೆ ಅಧಿಕಾರಿಗಳು ನೀಲಕಂಠನ್ ಹಾಗೂ ಸುರೇಂದ್ರನ್ ಎಂಬ ಎರಡು ಆನೆಗಳನ್ನು ಕರೆ ತಂದಿದ್ದು, ಅಷ್ಟೊತ್ತಿಗಾಗಲೇ ಸಂಜೆ 4ರ ಸುಮಾರಿಗೆ ಆನೆ ನದಿಯಲ್ಲೇ ಸಾವನ್ನಪ್ಪಿತ್ತು.

    ಮಲಪ್ಪುರಂ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಅರಣ್ಯಾಧಿಕಾರಿಯೊಬ್ಬರು ಆನೆ ನೋವಿನ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಲೋಡ್ ಮಾಡಿದ್ದರು.

  • ಆನ್‍ಲೈನ್ ತರಗತಿಗೆ ಹಾಜರಾಗಲು ಸ್ಮಾರ್ಟ್ ಫೋನ್ ಇಲ್ಲ- ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

    ಆನ್‍ಲೈನ್ ತರಗತಿಗೆ ಹಾಜರಾಗಲು ಸ್ಮಾರ್ಟ್ ಫೋನ್ ಇಲ್ಲ- ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

    – ಆರ್ಥಿಕ ಸಂಕಷ್ಟದಲ್ಲಿ ಕುಟುಂಬ
    – ಬೆಂಕಿ ಹಚ್ಚಿಕೊಂಡು 14ರ ಹುಡುಗಿ ಆತ್ಮಹತ್ಯೆ

    ತಿರುವನಂತಪುರಂ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಿಂದ ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಹೀಗಾಗಿ ಆನ್‍ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ. ಆದರೆ ಆನ್‍ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ವಾಲಂಚೇರಿ ಪಟ್ಟಣದ ನಿವಾಸಿ 14 ವರ್ಷದ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಮೃತ ವಿದ್ಯಾರ್ಥಿನಿ ಕುಟುಂಬದವರು ಬಡವರಾಗಿದ್ದು, ಯಾವುದೇ ಟಿವಿ ಅಥವಾ ಸ್ಮಾರ್ಟ್ ಫೋನ್ ಅವರ ಬಳಿ ಇರಲಿಲ್ಲ. ಹೀಗಾಗಿ ನೊಂದ ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೋಮವಾರ ಮಧ್ಯಾಹ್ನದಿಂದ ವಿದ್ಯಾರ್ಥಿನಿ ಕಾಣೆಯಾಗಿದ್ದಳು. ಆದರೆ ಆಕೆಯ ಶವ ಮನೆಯ ಸಮೀಪವಿರುವ ಪ್ರತ್ಯೇಕ ಜಮೀನಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    “ನಮ್ಮ ಮನೆಯಲ್ಲಿ ಟೆಲಿವಿಷನ್ ಇದೆ. ಅದು ರಿಪೇರಿಗೆ ಬಂದಿದೆ. ಬೇಗ ರಿಪೇರಿ ಮಾಡಿಸುವಂತೆ ಮಗಳು ಹೇಳಿದ್ದಳು. ಆದರೆ ನಾನು ಟಿವಿ ರಿಪೇರಿ ಮಾಡಿಸಲು ಸಾಧ್ಯವಾಗಲಿಲ್ಲ. ನನಗೆ ಸ್ಮಾರ್ಟ್ ಫೋನ್ ಸಹ ಖರೀದಿ ಮಾಡಲು ಸಾಧ್ಯವಾಗಲಿಲ್ಲ” ಎಂದು ವಿದ್ಯಾರ್ಥಿನಿಯ ತಂದೆ ತಿಳಿಸಿದರು.

    ಕುಟುಂಬವು ಆರ್ಥಿಕವಾಗಿ ತುಂಬಾ ತೊಂದರೆಗೀಡಾಗಿದೆ. ಆಕೆಯ ಬಳಿ ಯಾವುದೇ ಸ್ಮಾರ್ಟ್ ಫೋನ್ ಕೂಡ ಇರಲಿಲ್ಲ. ಇದರಿಂದ ಅಧ್ಯಯನದ ಮೇಲೆ ಪರಿಣಾಮ ಬೀರುತ್ತದೆ ಎಂದು ಆಕೆ ಆತಂಕಗೊಂಡಿದ್ದಳು. ಅಲ್ಲದೇ ಆನ್‍ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ್ದಕ್ಕೆ ಬೇಸರ ಮಾಡಿಕೊಂಡಿದ್ದಳು. ಸದ್ಯಕ್ಕೆ ಈ ಕುರಿತು ತನಿಖೆ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಎಸ್‍ಪಿ ಯು.ಅಬ್ದುಲ್ ಕರೀಮ್ ಹೇಳಿದರು.

    ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮಾರ್ಚ್ 25 ರಿಂದ ದೇಶಾದ್ಯಂತ ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಿವೆ. ಸದ್ಯಕ್ಕೆ ಮೇ 31 ರವರೆಗೆ ಸತತ ನಾಲ್ಕು ಹಂತದ ಲಾಕ್‍ಡೌನ್ ನಂತರ ದೇಶದಲ್ಲಿ ಲಾಕ್‍ಡೌನ್ ರಿಲೀಫ್ ಸಿಕ್ಕಿದೆ. ಆದರೆ ಶಾಲೆಗಳು ಮತ್ತು ಕಾಲೇಜುಗಳನ್ನು ಪುನಃ ತೆರೆಯುವ ನಿರ್ಧಾರವನ್ನು ಜುಲೈನಲ್ಲಿ ತೀರ್ಮಾನಿಸಲಾಗುತ್ತದೆ.

     

  • ಓರ್ವ ವಿದ್ಯಾರ್ಥಿನಿಗಾಗಿ 70 ಆಸನದ ದೊಡ್ಡ ಬೋಟ್ ಓಡಿಸಿದ ಸರ್ಕಾರ

    ಓರ್ವ ವಿದ್ಯಾರ್ಥಿನಿಗಾಗಿ 70 ಆಸನದ ದೊಡ್ಡ ಬೋಟ್ ಓಡಿಸಿದ ಸರ್ಕಾರ

    – ಪರೀಕ್ಷೆ ಮುಗಿಸಿ ಬರುವರೆಗೂ ವಿದ್ಯಾರ್ಥಿನಿಗಾಗಿ ಕಾಯ್ತಿದ್ದ ದೋಣಿ
    – 4 ಸಾವಿರ ಖರ್ಚು ಆದ್ರೂ 18 ರೂ. ಪಡೆದ ಸಿಬ್ಬಂದಿ

    ತಿರುವನಂತಪುರಂ: ಕೊರೊನಾ ಲಾಕ್‍ಡೌನ್‍ನಿಂದಾಗಿ ಮುಂದೂಡಲ್ಪಟ್ಟ ಪರೀಕ್ಷೆಗಳು ಪುನರಾರಂಭಗೊಂಡಿವೆ. ಇದೀಗ 12ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಪರೀಕ್ಷಾ ಕೇಂದ್ರಕ್ಕೆ ಹೋಗಲು 70 ಆಸನ ಸಾಮರ್ಥ್ಯದ ಬೋಟ್ ಓಡಿಸಿರುವ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯ ಕಾಂಜಿರಮ್‍ನಲ್ಲಿ ನಡೆದಿದೆ. ಇದೀಗ ಕೇರಳ ಜಲಸಾರಿಗೆ ವಿಭಾಗ (ಎಸ್‍ಡಬ್ಲ್ಯೂಟಿಡಿ)ದ ಅಧಿಕಾರಿಗಳ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ಸಂದ್ರ ಬಾಬು ಜಲಸಾರಿಗೆ ಅಧಿಕಾರಿಗಳು ಮೂಲಕ ಪರೀಕ್ಷೆ ಬರೆದ ವಿದ್ಯಾರ್ಥಿನಿ. ಸಂದ್ರ ಕೂಲಿ ಕಾರ್ಮಿಕ ದಂಪತಿಯ ಪುತ್ರಿಯಾಗಿದ್ದಾಳೆ. ಕಳೆದ ಒಂದು ವರ್ಷದಿಂದ ಸಂದ್ರ ಬಾಬು ಕೊಟ್ಟಾಯಂ ಜಿಲ್ಲೆಯ ಕಾಂಜಿರಾಮ್‍ನ ಎಸ್‍ಎನ್‍ಡಿಪಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಓದುತ್ತಿದ್ದಾಳೆ. ವಿದ್ಯಾರ್ಥಿನಿ ಆಲಪ್ಪುಳದಲ್ಲಿರುವ ಎಂಎನ್ ಬ್ಲಾಕ್‍ನಲ್ಲಿರುವ ತನ್ನ ಸಂಬಂಧಿಕರ ಮನೆಯಲ್ಲಿ ವಾಸಿಸುತ್ತಿದ್ದಳು.

    ದ್ಯಾರ್ಥಿನಿ ಎಂಎನ್ ಬ್ಲಾಕ್‍ನಿಂದ ತನ್ನ ಶಾಲೆಗೆ ತಲುಪಲು ಕೊಟ್ಟಾಯಂ ಜಿಲ್ಲೆಯ ಗಡಿ ಗ್ರಾಮವಾದ ಕಾಂಜಿರಮ್‍ಗೆ ಸರ್ಕಾರಿ ಬೋಟ್ ಸೇವೆ ಇದೆ. ಕೊರೊನಾ ಲಾಕ್‍ಡೌನ್‍ನಿಂದಾಗಿ ಕುಟ್ಟನಾಡ್ ಪ್ರದೇಶದ ನಾನ ಕಡೆ ಸಂಪರ್ಕ ಕಲ್ಪಿಸುವ ಪ್ರಯಾಣಿಕರ ಬೋಟ್‍ಗಳ ಸಂಚಾರ ನಿಂತಿವೆ. ಈ ಮಧ್ಯೆ ಕೇರಳ ಸರ್ಕಾರ 12ನೇ ತರಗತಿ ಪರೀಕ್ಷೆ ದಿನಾಂಕವನ್ನು ನಿಗದಿಪಡಿಸಿತ್ತು. ಹೀಗಾಗಿ ಬೋಟ್ ಸಂಚಾರವಿಲ್ಲದೆ ವಿದ್ಯಾರ್ಥಿನಿ ಪರೀಕ್ಷಾ ಕೇಂದ್ರ ಹೋಗಲು ಸಾಧ್ಯವಿರಲಿಲ್ಲ.

    ಈ ವೇಳೆ ಕೇರಳ ಜಲಸಾರಿಗೆ ಇಲಾಖೆ ವಿದ್ಯಾರ್ಥಿನಿ ನೆರವಿಗೆ ಬಂದಿದ್ದು, ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಸಹಾಯ ಮಾಡಿದೆ. ಮೇ 29 ಮತ್ತು 30 ರಂದು ಎರಡು ದಿನ ವಿದ್ಯಾರ್ಥಿನಿ ಪರೀಕ್ಷಾ ಕೇಂದ್ರಕ್ಕೆ ಹೋಗಲು 70 ಆಸನಗಳ ಸಾಮರ್ಥ್ಯದ ಬೋಟ್‍ಅನ್ನು ಆಕೆಯಾಗಿ ಓಡಿಸಲಾಗಿದೆ. ಈ ಬೋಟ್‍ನಲ್ಲಿ ಚಾಲಕ, ನೇವಿಗೇಟರ್, ಬೋಟ್ ಮಾಸ್ಟರ್ ಮತ್ತು ಇಬ್ಬರು ಸಹಾಯಕರು ಸೇರಿ ಒಟ್ಟು ಐದು ಸಿಬ್ಬಂದಿಯನ್ನು ನೇಮಿಸಲಾಗಿತ್ತು.

    ವಿದ್ಯಾರ್ಥಿನಿಯನ್ನ ಸೋಮವಾರ ಬೆಳಗ್ಗೆ 11.30ಕ್ಕೆ ಕೊಟ್ಟಾಯಂ ನಿಲ್ದಾಣದಿಂದ ಕಾಂಜಿರಮ್‍ನ ಎಸ್‍ಎನ್‍ಡಿಪಿ ಹೈಯರ್ ಸೆಕೆಂಡರಿ ಶಾಲೆಯ ಮುಂಭಾಗದಲ್ಲಿರುವ ಜೆಟ್ಟಿಯಲ್ಲಿ ಇಳಿಸಲಾಯಿತು. ಅಲ್ಲಿಯೇ ವಿದ್ಯಾರ್ಥಿನಿಗಾಗಿ ಬೋಟ್ ಕಾಯುತ್ತಿತ್ತು. ಮತ್ತೆ ವಿದ್ಯಾರ್ಥಿನಿ ಪರೀಕ್ಷೆ ಬರೆದು ಮುಗಿಸಿದ ಬಳಿಕ ಬೋಟ್ ಮೂಲಕ ಮನೆಗೆ ತಲುಪಿಸಿದ್ದೇವೆ ಎಂದು ಬೋಟ್ ಅಧಿಕಾರಿ ತಿಳಿಸಿದ್ದಾರೆ.

    ಇಲಾಖೆ ಸಚಿವ ಮತ್ತು ಎಸ್‍ಡಬ್ಲ್ಯೂಟಿಡಿ ನಿರ್ದೇಶಕ ಶಾಜಿ ವಿ.ನಾಯರ್ ಅವರು ಪರೀಕ್ಷೆ ಬರೆಯಲು ನನಗೆ ಸಹಾಯ ಮಾಡಿದರು. ಮೊದಲು ನನ್ನ ಪೋಷಕರು ಸಾಮಾಜಿಕ ಕಾರ್ಯಕರ್ತರ ಸಹಾಯದಿಂದ ಸಾರಿಗೆ ಇಲಾಖೆಯನ್ನು ಸಂಪರ್ಕಿಸಿದ್ದರು. ಎಸ್‍ಡಬ್ಲ್ಯೂಟಿಡಿ ಸಚಿವರು ಸಹಾಯ ಮಾಡುವುದಾಗಿ ಭರವಸೆ ನೀಡಿದೆ. ಇದು ನನಗೆ ಮತ್ತು ನನ್ನ ಕುಟುಂಬಕ್ಕೆ ದೊಡ್ಡ ಸಹಾಯವಾಗಿದೆ ಎಂದು ಸಂದ್ರ ಸಂತಸದಿಂದ ಹೇಳಿದ್ದಾಳೆ.

    ಈ ಬಗ್ಗೆ ಮಾತನಾಡಿದ ಶಾಜಿ ವಿ.ನಾಯರ್ ಮಾತನಾಡಿ, ಈ ಸೇವೆಯನ್ನು ನಿರ್ವಹಿಸಲು ಸರ್ಕಾರ ಮತ್ತು ಸಚಿವರು ಸಂಪೂರ್ಣ ಬೆಂಬಲ ನೀಡಿದರು. ವಿದ್ಯಾರ್ಥಿನಿಯ ಪ್ರಯಾಣಕ್ಕೆ 4,000 ರೂಪಾಯಿ ಖರ್ಚಾಗಿದೆ. ಆದರೆ ಆಕೆಯಿಂದ ಒಂದು ದಿನದ ಪ್ರಯಾಣಕ್ಕೆ ನಿಗದಿತ ಪ್ರಯಾಣ ದರ 18 ರೂ. ಮಾತ್ರ ಪಡೆಯಲಾಗಿದೆ. ಆರ್ಥಿಕ ನಷ್ಟದ ಬಗ್ಗೆ ನಾವು ಯೋಚಿಸಲಿಲ್ಲ. ಏಕೆಂದರೆ ವಿದ್ಯಾರ್ಥಿನಿ ತನ್ನ ಪರೀಕ್ಷೆಯನ್ನು ಬರೆಯುವುದು ನಮಗೆ ಮುಖ್ಯವಾಗಿತ್ತು ಎಂದು ಹೇಳಿದರು.

  • ನಾಳೆ ಇಲ್ಲವೇ ನಾಡಿದ್ದು ರಾಜ್ಯಕ್ಕೆ ಮುಂಗಾರು ಪ್ರವೇಶ- ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

    ನಾಳೆ ಇಲ್ಲವೇ ನಾಡಿದ್ದು ರಾಜ್ಯಕ್ಕೆ ಮುಂಗಾರು ಪ್ರವೇಶ- ಮೂರ್ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

    ಧಾರವಾಡ, ಬೆಳಗಾವಿಯಲ್ಲಿ ಭಾರೀ ಮಳೆ

    ಬೆಂಗಳೂರು: ಇಂದು ಕೇರಳಕ್ಕೆ ಮುಂಗಾರು ಪ್ರವೇಶವಾಗಿದ್ದು, ಮಂಗಳವಾರ ಇಲ್ಲವೆ ಬುಧವಾರ ರಾಜ್ಯಕ್ಕೆ ಪ್ರವೇಶಿಸಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮಂಗಳವಾರ ಇಲ್ಲವೇ ಬುಧವಾರ ಮುಂಗಾರು ಪ್ರವೇಶಿಸುವ ಹಿನ್ನೆಲೆ ರಾಜ್ಯದಲ್ಲಿ ಮೂರು ದಿನಗಳ ಕಾಲ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ಕೇರಳಕ್ಕೆ ಇಂದು ಮುಂಗಾರು ಎಂಟ್ರಿಯಾಗಿದ್ದು, ನಾಳೆ ರಾಜ್ಯದ ಕರಾವಳಿ ಭಾಗಕ್ಕೆ ಪ್ರವೇಶಿಸಲಿದೆ ಎಂದು ತಿಳಿಸಿದ್ದಾರೆ.

    ರಾಜ್ಯದಲ್ಲಿ ಇಂದಿನಿಂದ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಂಭವವಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ರಾಜ್ಯದಲ್ಲಿ ಇದೀಗ ಮುಂಗಾರಿಗೆ ಪೂರಕವಾದ ವಾತಾವರಣವಿದ್ದು, ಭಾರತೀಯ ಹವಾಮಾನ ಇಲಾಖೆ ಮುಂಗಾರಿನ ಮಾಹಿತಿ ನೀಡಿದೆ ಎಂದು ವಿವರಿಸಿದ್ದಾರೆ.

    ಬೆಳಗಾವಿ ಹಾಗೂ ಧಾರವಾಡದಲ್ಲಿ ಹೆಚ್ಚು ಮಳೆ ಸಾಧ್ಯತೆ ಇದೆ. ಜೂನ್ 5ಕ್ಕೆ ರಾಜ್ಯದ ಕರಾವಳಿ ಭಾಗಕ್ಕೆ ಮುಂಗಾರು ಪ್ರವೇಶದ ನಿರೀಕ್ಷೆ ಇತ್ತು. ಮುಂಗಾರಿಗೆ ಪೂರಕ ವಾತಾವರಣವಿರುವುದರಿಂದ ಒಂದೆರಡು ದಿನ ಮೊದಲೇ ಮುಂಗಾರು ಮಳೆಯಾಗಲಿದೆ. ಈ ಬಾರಿ ವಾಡಿಕೆಯಷ್ಟು ಮುಂಗಾರು ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿಯೂ ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಮಳೆಯಿಂದ ಆಗುವ ಅನಾಹುತಗಳನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ, ಆರೋಗ್ಯ ಇಲಾಖೆಗೆ ತಿಳಿಸಲಾಗಿದೆ. ಪ್ರವಾಹ, ಚಂಡಮಾರುತ ಬಂದರೂ ಎದುರಿಸಲು ಸಿದ್ಧ. ಕೆಲವು ಕಡೆಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಈ ಕುರಿತು ಸಹ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

  • ಹಲಸಿನ ಮರದಿಂದ ಬಿದ್ದವನಿಗೆ ಕೊರೊನಾ ಅಂದ್ರು- ಇಂದು ನೆಗೆಟಿವ್ ರಿಪೋರ್ಟ್

    ಹಲಸಿನ ಮರದಿಂದ ಬಿದ್ದವನಿಗೆ ಕೊರೊನಾ ಅಂದ್ರು- ಇಂದು ನೆಗೆಟಿವ್ ರಿಪೋರ್ಟ್

    – ಮೊದಲು ಪಾಸಿಟಿವ್, ಈಗ ನೆಗೆಟಿವ್

    ತಿರುವನಂತಪುರ: ಹಲಸಿನ ಮರದಿಂದ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿತ್ತು. ಇದೀಗ ವ್ಯಕ್ತಿಯ ರಿಪೋರ್ಟ್ ನೆಗೆಟಿವ್ ಬಂದಿದ್ದು, ಕಾಸರಗೋಡಿನ ಜನತೆ ನಿರಾಳರಾಗಿದ್ದಾರೆ.

    ಕೋವಿಡ್-19 ಸೋಂಕು ತಗುಲಿದೆ ಎಂದಾಗ ಆತನಿಗೆ ಕೊರೊನಾ ಹೇಗೆ ತಗುಲಿತು ಎಂಬ ಪ್ರಶ್ನೆಗೆ ಕೇರಳ ಆರೋಗ್ಯ ಇಲಾಖೆ ಉತ್ತರ ಹುಡುಕುವಲ್ಲಿ ಸುಸ್ತಾಗಿತ್ತು. ಕಾರಣ ವ್ಯಕ್ತಿ ಯಾವ ಸೋಂಕಿತನ ಸಂಪರ್ಕಕ್ಕೂ ಬಂದಿರಲಿಲ್ಲ. ಯಾವುದೇ ಪ್ರಯಾಣದ ಹಿನ್ನೆಲೆಯನ್ನು ಹೊಂದಿರಲಿಲ್ಲ. ಆರೋಗ್ಯ ಇಲಾಖೆಗೆ ಸೋಂಕಿನ ಮೂಲ ಪತ್ತೆ ಹಚ್ಚೋದು ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಇದೀಗ ವ್ಯಕ್ತಿಯ ವರದಿ ನೆಗೆಟಿವ್ ಬಂದಿದ್ದು, ಆರೋಗ್ಯ ಇಲಾಖೆ ನಿಟ್ಟುಸಿರು ಬಿಟ್ಟಿದೆ.

    ಯಾರು ಈ ವ್ಯಕ್ತಿ? ಕಾಸರಗೋಡು ಜಿಲ್ಲೆಯ ಬೇಲೂರು ಪಂಚಾಯ್ತಿ ವ್ಯಾಪ್ತಿಯ ನಿವಾಸಿಯಾಗಿರೋ ಈ ವ್ಯಕ್ತಿ ವೃತ್ತಿಯಲ್ಲಿ ಆಟೋ ಚಾಲಕ. ಮರವೇರಿ ಹಲಸಿನ ಹಣ್ಣು ಕೀಳುವಾಗ ಆಯತಪ್ಪಿ ಬಿದ್ದಿದ್ದರು. ಈ ವೇಳೆ ವ್ಯಕ್ತಿಯ ಬೆನ್ನುಹುರಿ, ಕೈ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ವ್ಯಕ್ತಿಯನ್ನು ಪರಿಯಾರಂನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು.

    ವೈದ್ಯರು ಹೇಳಿದ್ದೇನು?
    ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಬೇಕಿತ್ತು. ಮೊದಲಿಗೆ ಆತನನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಿದಾಗ ಆತನಿಗೆ ಸೋಂಕು ತಗುಲಿರೋದು ಖಚಿತವಾಯ್ತು. ಆದ್ರೆ ಸೋಂಕಿನ ಮೂಲವೇ ತಿಳಿಯಲಿಲ್ಲ. ಆತನಲ್ಲಿ ಕೆಲ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದವು ಎಂದು ಮೆಡಿಕಲ್ ಕಾಲೇಜಿನ ಹಿರಿಯ ವೈದ್ಯ ಡಾ. ಕೆ. ಸುದೀಪ್ ಹೇಳಿದ್ದರು.

    ಸೋಮವಾರ ಆಟೋ ಚಾಲಕನಿಗೆ ಕೊರೊನಾ ಎಂದು ಹೇಳುತ್ತಲೇ, ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿ 18 ಜನರನ್ನು ಗುರುತಿಸಿ ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿತ್ತು. ಈ 18 ಜನರ ಪ್ರಾಥಮಿಕ ಸಂಪರ್ಕದಲ್ಲಿರುವ ಜನರನ್ನು ಗುರುತಿಸುವ ಕೆಲಸ ಸಹ ನಡೆದಿತ್ತು.

  • ಆಸ್ತಿಗಾಗಿ ಪತ್ನಿಯನ್ನ ಕೊಂದು ಹಾವಿನ ದ್ವೇಷದ ಕಥೆ ಕಟ್ಟಿದ್ದ ಪತಿ ಅರೆಸ್ಟ್

    ಆಸ್ತಿಗಾಗಿ ಪತ್ನಿಯನ್ನ ಕೊಂದು ಹಾವಿನ ದ್ವೇಷದ ಕಥೆ ಕಟ್ಟಿದ್ದ ಪತಿ ಅರೆಸ್ಟ್

    – ಒಂದಲ್ಲ ಎರಡು ಬಾರಿ ಹಾವಿನಿಂದ ಪತ್ನಿಗೆ ಕಚ್ಚಿಸಿದ್ದ ಪಾಪಿ
    – ಕೃತ್ಯಕ್ಕೆ ಸಹಕರಿಸಿದ್ದ ಹಾವಾಡಿಗನ ಬಂಧನ

    ತಿರುವನಂತಪುರಂ: ಆಸ್ತಿಗಾಗಿ ಪತ್ನಿಯನ್ನ ಕೊಂದು ಹಾವಿನ ದ್ವೇಷದ ಕಥೆ ಕಟ್ಟಿದ್ದ ಪತಿ ಹಾಗೂ ಕೃತ್ಯಕ್ಕೆ ಸಹಕರಿಸಿದ್ದ ಹಾವಾಡಿಗನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

    ಕೊಲ್ಲಂ ಜಿಲ್ಲೆಯ ಅಂಚಲ್ ನಿವಾಸಿ ಸೂರಜ್ (27) ಕೊಲೆಗೈದ ಪತಿ ಹಾಗೂ ಸುರೇಶ್ ಕೊಲೆಗೆ ಸಹಕರಿಸಿದ ಹಾವಾಡಿಗ. ಎಸ್.ಉತ್ತರ (25) ಕೊಲೆಯಾದ ಮಹಿಳೆ. ತಂದೆಯ ಹೇಯ ಕೃತ್ಯಕ್ಕೆ ಒಂದು ವರ್ಷದ ಗಂಡು ಮಗು ತಾಯಿಯನ್ನ ಕಳೆದುಕೊಂಡಿದೆ.

    ಏನಿದು ಪ್ರಕರಣ?:
    ಉತ್ತರಾಗೆ ಫೆಬ್ರವರಿಯಲ್ಲಿ ಹಾವು ಕಚ್ಚಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಸ್ಪತ್ರೆಯಲ್ಲಿ ಇದ್ದಾಗಲೇ ಅಂದ್ರೆ ಮೇ 7ರಂದು ಎರಡನೇ ಬಾರಿ ಹಾವು ಕಚ್ಚಿತ್ತು. ಆದರೆ ಉತ್ತರಾಳ ಪೋಷಕರು ಅಳಿಯನ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ಅಷ್ಟೇ ಅಲ್ಲದೆ ಸೂರಜ್ ವರದಕ್ಷಿಣೆಗಾಗಿ ನಮ್ಮ ಮಗಳಿಗೆ ಆಗಾಗ್ಗೆ ಕಿರುಕುಳ ನೀಡುತ್ತಿದ್ದ. ಮದುವೆಯ ಸಮಯದಲ್ಲಿ ನೀಡಿದ್ದ ಕೆಲವು ಆಭರಣಗಳು ಲಾಕರ್ ನಿಂದ ಕಾಣೆಯಾಗಿವೆ ಎಂದು ದೂರಿದ್ದರು.

    ಈ ಹಿನ್ನೆಲೆ ತನಿಖೆ ಆರಂಭಿಸಿದ ಪೊಲೀಸರಿಗೆ ಆಘಾತವೇ ಕಾದಿತ್ತು. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೆಲ ಸತ್ಯಗಳು ಬೆಳಕಿಗೆ ಬಂದಿದ್ದವು. ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ ಸೂರಜ್ ಕಳೆದ ಐದು ತಿಂಗಳುಗಳಿಂದ ಪತ್ನಿಯ ಕೊಲೆಗೆ ಸಂಚು ರೂಪಿಸಿದ್ದ. ಈ ಕುರಿತು ಇಂಟರ್ನೆಟ್‍ನಲ್ಲಿ ವಿಡಿಯೋ ಕೂಡ ನೋಡಿದ್ದ.

    ಸೂರಜ್ 10 ಸಾವಿರ ರೂ. ಪಾವತಿಸಿ ಕೊಲ್ಲಂ ಜಿಲ್ಲೆಯ ಹಾವಾಡಿಗ ಸುರೇಶ್‍ನಿಂದ ಹಾವನ್ನು ಖರೀದಿಸಿದ್ದ. ಬಳಿಕ ತನ್ನ ರೂಮ್‍ನಲ್ಲಿ ಹಾವನ್ನು ಬಿಟ್ಟು ಪತ್ನಿಗೆ ಕಚ್ಚುವಂತೆ ಮಾಡಿದ್ದ. ಮೊದಲ ಬಾರಿಗೆ ಹಾವು ಕಚ್ಚಿದಾಗಲೇ ಪತ್ನಿ ಸಾಯುತ್ತಾಳೆ ಎಂದು ಸೂರಜ್ ತಿಳಿಸಿದ್ದ. ಆದರೆ ಅದೃಷ್ಟವಶಾತ್ ಉತ್ತರ ಬದುಕುಳಿದಿದ್ದಳು. ಅಳಿಯನ ಮೇಲೆ ಆಗಲೇ ಅನುಮಾನ ವ್ಯಕ್ತಪಡಿಸಿದ್ದ ಉತ್ತರಾಳ ಪೋಷಕರು ಮಗಳನ್ನು ತಮ್ಮ ಊರಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತಿದ್ದರು.

    ಆರೋಪಿ ಮೇ 6ರಂದು ಮತ್ತೆ ಹಾವಿನಿಂದ ಪತ್ನಿಗೆ ಕಚ್ಚಿಸಿ ಕೊಲೆಗೈದಿದ್ದ. ಅಷ್ಟೇ ಅಲ್ಲದೆ ಹಾವನ್ನು ಕೊಂದು ಒಳ್ಳೆಯವನಂತೆ ನಾಟಕವಾಡಿದ್ದ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

    ಪತ್ನಿಯನ್ನ ಕೊಂದರೆ ಆಕೆಯ ಹೆಸರಿನಲ್ಲಿದ್ದ ಆಸ್ತಿ ತನಗೆ ಬರುತ್ತದೆ ಎಂದು ಸೂರಜ್ ಕೃತ್ಯ ಎಸೆಗಿದ್ದಾನೆ. ಅಷ್ಟೇ ಅಲ್ಲದೆ ವರದಕ್ಷಿಣೆಗಾಗಿ ಪದೇ ಪದೇ ಕಿರುಕುಳ ನೀಡುತ್ತಿದ್ದ ಎನ್ನುವುದು ವಿಚಾರಣೆ ವೇಳೆ ಸ್ಪಷ್ಟವಾಗಿದೆ.

  • ಹಾವಿನ ದ್ವೇಷಕ್ಕೆ ಮಹಿಳೆ ಬಲಿ- ಪ್ರಕರಣಕ್ಕೆ ಟ್ವಿಸ್ಟ್

    ಹಾವಿನ ದ್ವೇಷಕ್ಕೆ ಮಹಿಳೆ ಬಲಿ- ಪ್ರಕರಣಕ್ಕೆ ಟ್ವಿಸ್ಟ್

    ತಿರುವನಂತಪುರಂ: ಎರಡು ತಿಂಗಳ ಅವಧಿಯಲ್ಲಿ ಎರಡು ಬಾರಿ ಹಾವು ಕಡಿದು ಕೇರಳದ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಇಂದೊಂದು ಪ್ಲಾನ್ ಮರ್ಡರ್ ಆಗಿದೆ ಎಂಬುದು ಕೇರಳ ಪೊಲೀಸರು ತಿಳಿಸಿದ್ದಾರೆ.

    ಮೃತ ಮಹಿಳೆಯ ತಂದೆ ಏರಂ ವೆಳ್ಳಾಶೇರಿಯ ವಿಜಯಸೇನ ನೀಡಿದ್ದ ದೂರಿನ ಆಧಾರದ ಮೇಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಪ್ರಕರಣವು ಅನೇಕ ರೋಚಕ ಟ್ವಿಸ್ಟ್ ಪಡೆದುಕೊಂಡಿದೆ ಎಂದು ತನಿಖಾ ತಂಡದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕೊಲ್ಲಂ ಜಿಲ್ಲೆಯ ಅಂಚಲ್ ನಿವಾಸಿ ಎಸ್.ಉತ್ತರ (25) ಕೊಲೆಯಾದ ಮಹಿಳೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮಹಿಳೆಯ ಪತಿ, ಸ್ಥಳೀಯ ಹಾವಾಡಿಗ ಮತ್ತು ಇನ್ನೊಬ್ಬ ಸಹಚರನನ್ನು ಬಂಧಿಸಲಾಗಿದೆ.

    ಏನಿದು ಪ್ರಕರಣ?:
    ಮೂರು ತಿಂಗಳ ಹಿಂದೆ ಉತ್ತರಾಗೆ ಹಾವು ಕಚ್ಚಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಸ್ಪತ್ರೆಯಲ್ಲಿ ಇಗ್ದಾಗಲೇ ಅಂದ್ರೆ ಮೇ 7ರಂದು ಎರಡನೇ ಬಾರಿ ಹಾವು ಕಚ್ಚಿತ್ತು ಎಂದು ಹೇಳಲಾಗಿತ್ತು. ಆದರೆ ಉತ್ತರಾಳ ಪೋಷಕರು ಆಕೆಯ ಅಳಿಯನ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದರು. ಅಷ್ಟೇ ಅಲ್ಲದೆ ಸೂರಜ್ ವರದಕ್ಷಿಣೆಗಾಗಿ ನಮ್ಮ ಮಗಳಿಗೆ ಆಗಾಗ್ಗೆ ಕಿರುಕುಳ ನೀಡುತ್ತಿದ್ದ. ಮದುವೆಯ ಸಮಯದಲ್ಲಿ ನೀಡಿದ್ದ ಕೆಲವು ಆಭರಣಗಳು ಲಾಕರ್ ನಿಂದ ಕಾಣೆಯಾಗಿವೆ ಎಂದು ದೂರಿದ್ದರು.

    ಈ ಹಿನ್ನೆಲೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೆಲ ಸತ್ಯಗಳು ಬೆಳಕಿಗೆ ಬಂದಿವೆ ಎನ್ನಲಾಗಿದೆ. ಆರೋಪಿ ಸೂರಜ್ ಕಳೆದ ಐದು ತಿಂಗಳುಗಳಿಂದ ಪತ್ನಿಯ ಕೊಲೆಗೆ ಸಂಚು ರೂಪಿಸಿದ್ದ. ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಪತಿ ಸೂರಜ್ 10 ಸಾವಿರ ರೂ. ಪಾವತಿಸಿ ಆ ಪ್ರದೇಶದ ಹಾವಾಡಿಗ ಸುರೇಶ್‍ನಿಂದ ಹಾವನ್ನು ತಂದಿದ್ದ. ಬಳಿಕ ತನ್ನ ರೂಮ್‍ನಲ್ಲಿ ಹಾವನ್ನು ಪತ್ನಿ ಬಿಟ್ಟು ಪತ್ನಿಗೆ ಕಚ್ಚುವಂತೆ ಮಾಡಿದ್ದ. ಮೊದಲ ಬಾರಿಗೆ ಹಾವು ಕಚ್ಚಿದಾಗಲೇ ಪತ್ನಿ ಸಾಯುತ್ತಾಳೆ ಎಂದು ಸೂರಜ್ ತಿಳಿಸಿದ್ದ. ಆದರೆ ಅದೃಷ್ಟವಶಾತ್ ಉತ್ತರ ಬದುಕುಳಿದಿದ್ದಳು.

    “ಇದೊಂದು ವಿಚಿತ್ರ ಪ್ರಕರಣವಾಗಿದೆ. ಮೂವರು ಆರೋಪಿಗಳು ನಮ್ಮ ವಶದಲ್ಲಿದ್ದಾರೆ. ತನಿಖೆ ನಡೆಯುತ್ತಿರುವುದರಿಂದ ಯಾವುದೇ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ” ಎಂದು ಕೊಲ್ಲಂ ಗ್ರಾಮೀಣ ಪೊಲೀಸ್ ಅಧೀಕ್ಷಕ ಎಸ್.ಹರಿಶಂಕರ್ ಹೇಳಿದ್ದಾರೆ.

  • ಫೋಟೋದಿಂದ ಫಾದರ್‌ನ ಕಾಮದಾಟ ಬಯಲು – ಅಮಾನತು

    ಫೋಟೋದಿಂದ ಫಾದರ್‌ನ ಕಾಮದಾಟ ಬಯಲು – ಅಮಾನತು

    – ಚರ್ಚ್‌ನಲ್ಲಿ 2 ಮಕ್ಕಳ ತಾಯಿಯೊಂದಿಗೆ ಸೆಕ್ಸ್
    – ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಲೀಕ್

    ತಿರುವಂತನಪುರಂ: ಫಾದರ್ ಓರ್ವ ಚರ್ಚ್‌ನಲ್ಲಿಯೇ ಮಹಿಳೆಯೊಂದಿಗೆ ಸೆಕ್ಸ್ ಮಾಡಿದ್ದು, ಆ ಅಶ್ಲೀಲ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಮೂಲಕ ಫಾದರ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ಕೇರಳದಲ್ಲಿ ನಡೆದಿದೆ.

    ಇಡುಕ್ಕಿ ಜಿಲ್ಲೆಯ ಕ್ಯಾಥೊಲಿಕ್ ಚರ್ಚ್ ನ ಪಾದ್ರಿ ಜೇಮ್ಸ್ ಮಂಗಲಾಶೇರಿಯ ಅಶ್ಲೀಲ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಕೇರಳದ ಇಡುಕ್ಕಿ ಜಿಲ್ಲೆಯ ಮೊಬೈಲ್ ಫೋನ್ ಅಂಗಡಿಯೊಂದರಿಂದ ಈ ಫೋಟೋಗಳು ಆನ್‍ಲೈನ್‍ನಲ್ಲಿ ಲೀಕ್ ಆಗಿವೆ ಎಂದು ಹೇಳಲಾಗುತ್ತಿದೆ. ಆದರೆ ಅಂಗಡಿಯ ಮಾಲೀಕ ಈ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

    ಫಾದರ್ ತನ್ನ ಮೊಬೈಲ್ ಫೋನ್ ಅನ್ನು ರಿಪೇರಿಗಾಗಿ ಮೊಬೈಲ್ ಅಂಗಡಿಗೆ ಕೊಡಲಾಗಿದೆ. ಆಗ ಅಶ್ಲೀಲ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದೆ. ಆದರೆ ಅಂಗಡಿ ಮಾಲೀಕ ನಮ್ಮ ಅಂಗಡಿಯಿಂದ ಫೋಟೋಗಳು ಲೀಕ್ ಆಗಿಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದ್ದಾರೆ.

    ಈಗಾಗಲೇ ಫಾದರ್ ವಿರುದ್ಧ ಚರ್ಚ್ ಕ್ರಮ ಕೈಗೊಂಡಿದೆ. “ಮಾರ್ಚ್ 24, 2020 ರಂದು ಮಂಗಲಾಶೇರಿಯನ್ನು ಅಮಾನತುಗೊಳಿಸಲಾಗಿದೆ. ಅಲ್ಲದೇ ಈ ಕುರಿತು ತನಿಖೆ ಕೂಡ ನಡೆಯುತ್ತಿದೆ” ಎಂದು ಚರ್ಚ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

    ಫಾದರ್ ಜೊತೆಗಿದ್ದ ಮಹಿಳೆ ಎರಡು ಮಕ್ಕಳ ತಾಯಿ ಎಂದು ತಿಳಿದುಬಂದಿದೆ. ಸುಮಾರು ಎರಡು ತಿಂಗಳಿನಿಂದ ಈ ಇಬ್ಬರು ಸಂಬಂಧ ಹೊಂದಿದ್ದರು. ಆದರೆ ಈಗ ಇವರ ಕಾಮದಾಟ ಬಯಲಾಗಿದೆ. ಫೋಟೋಗಳು ಲೀಕ್ ಆಗುವ ಮೊದಲೇ ಫಾದರ್ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಎರ್ನಾಕುಲಂ ಜಿಲ್ಲೆಯೊಂದರ ಆಶ್ರಮಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

    ಇದರುವರೆಗೂ ಫಾದರ್ ಅಥವಾ ಮಹಿಳೆಯಿಂದ ಯಾವುದೇ ದೂರು ಬಂದಿಲ್ಲ. ಮೊಬೈಲ್ ಫೋನ್ ಅಂಗಡಿ ಮಾಲೀಕರು ನೀಡಿದ ದೂರಿನ ಆಧಾರದ ಮೇರೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಸರ್ಕಲ್ ಇನ್ಸ್ ಪೆಕ್ಟರ್ ಹೇಳಿದರು.