Tag: kerala

  • ಕೊರೊನಾ ಭೀತಿ – ಕೇರಳದಂತೆ ಕರ್ನಾಟಕದಲ್ಲೂ ಥಿಯೇಟರ್ ಬಂದ್ ಸಾಧ್ಯತೆ

    ಕೊರೊನಾ ಭೀತಿ – ಕೇರಳದಂತೆ ಕರ್ನಾಟಕದಲ್ಲೂ ಥಿಯೇಟರ್ ಬಂದ್ ಸಾಧ್ಯತೆ

    ಬೆಂಗಳೂರು: ಕರ್ನಾಟಕಕ್ಕೆ ಕಾಲಿಟ್ಟಿರುವ ಮಹಾಮಾರಿ ಕೊರೊನಾ ಭಾರೀ ಆತಂಕ ಸೃಷ್ಟಿಸಿದ್ದು, ಕೇರಳದಂತೆ ಕರ್ನಾಟಕದಲ್ಲಿ ಕೂಡ ಚಿತ್ರಮಂದಿರಗಳನ್ನು ಬಂದ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

    ಇನ್ನೊಂದು ವಾರ ಸಿನಿಮಾ ಪ್ರದರ್ಶನ ಬಂದ್ ಆಗುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯವಾಗಿದೆ. ಮಾರ್ಚ್ 16ರವರೆಗೆ ಚಿತ್ರಮಂದಿರಗಳನ್ನು ಬಂದ್ ಮಾಡಲಾಗುವುದು ಎನ್ನಲಾಗಿದೆ. ಇತ್ತ ಕೇರಳದಲ್ಲಿ ಇಂದಿನಿಂದ ಮಾರ್ಚ್ 31ರವರೆಗೆ ಚಿತ್ರ ಮಂದಿರಗಳನ್ನು ಮುಚ್ಚಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಇದೇ ರೀತಿ ಕರ್ನಾಟಕದಲ್ಲೂ ಚಿತ್ರಮಂದಿರಗಳನ್ನು ಬಂದ್ ಆಗುವ ಸಾಧ್ಯತೆ ಹೆಚ್ಚಾಗಿದೆ.

    ಇತ್ತ ಕೊರೊನಾ ವೈರಸ್ ಆತಂಕ ಹೆಚ್ಚಾದ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದಂತೆ ಬಿಬಿಎಂಪಿ, ಬೆಂಗಳೂರುನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

    ದೇಶಾದ್ಯಂತ ಕೊರೊನಾ ತಾಂಡವ ಜೋರಾಗುತ್ತಿದ್ದು, ಕೇರಳದಲ್ಲಿ ಒಟ್ಟು 12 ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆ ಕೇರಳ ಸರ್ಕಾರ ಕಟ್ಟೆಚ್ಚರ ವಹಿಸಿದ್ದು, ಸಿಬಿಎಸ್‍ಇ ಹಾಗೂ ಐಸಿಎಸ್‍ಇ ಸೇರಿದಂತೆ 7ನೇ ತರಗತಿವರೆಗೆ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿದೆ. ಇದಷ್ಟೇ ಅಲ್ಲದೇ ಮಾರ್ಚ್ 31ರವರೆಗೆ ಚಿತ್ರಮಂದಿರಗಳನ್ನು ಬಂದ್ ಮಾಡಲು ಚಿತ್ರ ಸಂಘಟನೆಗಳು ನಿರ್ಧಾರ ತೆಗೆದುಕೊಂಡಿವೆ.

    ಕೇರಳದಲ್ಲಿ ಸ್ವಲ್ಪ ವೇಗವಾಗಿಯೇ ಕೊರೊನಾ ಹರಡುತ್ತಿದ್ದು, ಮೊದಲು ವೈರಸ್ ಕಾಣಿಸಿಕೊಂಡಿದ್ದ ಮೂವರು ಗುಣಮುಖರಾಗಿ ಡಿಸ್ಚಾರ್ಜ್ ಆದ ಬಳಿಕ ಇದೀಗ ಮತ್ತೆ 12 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಕೇರಳ ತಲೆಕೆಡಿಸಿಕೊಂಡಿದ್ದು, ಸಿಬಿಎಸ್‍ಇ ಹಾಗೂ ಐಸಿಎಸ್‍ಇ ಸೇರಿದಂತೆ 7ನೇ ತರಗತಿಯವರೆಗೆ ಎಲ್ಲ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ಆದೇಶಿಸಿದೆ.

    ಇಂದು ಹೊಸ ಆರು ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದಂತೆ ಸಭೆ ನಡೆಸಿದ ಸಿಎಂ ಪಿಣರಾಯಿ ವಿಜಯನ್, ಏಳನೇ ತರಗತಿವರೆಗಿನ ಶಾಲೆಗಳಿಗೆ ಮಾರ್ಚ್ 31ರ ವರೆಗೆ ರಜೆ ನೀಡಿದ್ದಾರೆ. ಅಲ್ಲದೇ ಖಾಸಗಿಯಾಗಿ ನಡೆಸುವ ಟ್ಯೂಷನ್, ರಾಜಾ ದಿನದ ವಿಶೇಷ ತರಗತಿ, ಮದರಸಾಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲು ಸೂಚನೆ ನೀಡಿದ್ದರು.

  • ಶಬರಿಮಲೆಗೂ ತಟ್ಟಿದ ಕೊರೊನಾ ಬಿಸಿ- ದೇವಸ್ಥಾನಕ್ಕೆ ಬರದಂತೆ ಆಡಳಿತ ಮಂಡಳಿ ಸೂಚನೆ

    ಶಬರಿಮಲೆಗೂ ತಟ್ಟಿದ ಕೊರೊನಾ ಬಿಸಿ- ದೇವಸ್ಥಾನಕ್ಕೆ ಬರದಂತೆ ಆಡಳಿತ ಮಂಡಳಿ ಸೂಚನೆ

    ತಿರುವನಂತಪುರಂ: ಕೊರೊನಾ ವೈರಸ್ ಕೇರಳದಲ್ಲಿ ಸ್ವಲ್ಪ ವೇಗವಾಗಿಯೇ ಹರಡುತ್ತಿದ್ದು, ನಿನ್ನೆಯಷ್ಟೇ 12ಜನರಲ್ಲಿ ಕಾಣಿಸಿಕೊಂಡಿದ್ದ ಮಹಾಮಾರಿ ಇಂದು 19 ಜನರಲ್ಲಿ ಪತ್ತೆಯಾಗಿದೆ. ಹೀಗಾಗಿ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಬರಬೇಡಿ ಎಂದು ಶಬರಿಮಲೆ ಆಡಳಿತ ಮಂಡಳಿ ಭಕ್ತರಿಗೆ ಮನವಿ ಮಾಡಿದೆ.

    ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ಭಕ್ತರು ಶಬರಿಮಲೆ ದೇವಸ್ಥಾನಕ್ಕೆ ಬರುವುದನ್ನು ಕೆಲವು ದಿನಗಳ ಕಾಲ ನಿಲ್ಲಿಸಿ, ಸಾರ್ವಜನಿಕ ಸಭೆಗಳನ್ನ ಒಳಗೊಂಡ ಹಬ್ಬಗಳಲ್ಲಿ ಭಾಗಿಯಾಗಬಾರದು ಎಂದು ದೇವಸ್ವಂ ಆಡಳಿತ ಮಂಡಳಿಯ ಅಧ್ಯಕ್ಷ ಎನ್.ವಾಸು ಭಕ್ತರಲ್ಲಿ ಮನವಿ ಮಾಡಿದ್ದಾರೆ.

    ಶುಕ್ರವಾರದಿಂದ ತಿಂಗಳ ಪೂಜೆ ಆರಂಭವಾಗಲಿದೆ. ಇಂದಿನಿಂದ ಮಾರ್ಚ್ 31ರವರೆಗೆ ಕೇರಳದಲ್ಲಿ ಸಿನಿಮಾ ಥಿಯೇಟರ್‍ಗಳು ಬಂದ್ ಆಗಲಿವೆ. ಕೊಚ್ಚಿಯಲ್ಲಿ ನಡೆದ ವಿವಿಧ ಮಲಯಾಳಂ ಸಿನಿಮಾ ಸಂಸ್ಥೆಗಳ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದಿನಿಂದ ಕೇರಳದಲ್ಲಿ ಸಿನಿಮಾ ಪ್ರದರ್ಶನಗಳು ನಡೆಯುವುದಿಲ್ಲ. ಕೊರೊನಾ ವೈರಸ್ ಭೀತಿ ಹಿನ್ನೆಲೆ ಕೇರಳದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ.

    ಮಹಾಮಾರಿ ಕೊರೊನಾ ದೇಶಾದ್ಯಂತ ವ್ಯಾಪಿಸುತ್ತಿದ್ದು, ಸೋಂಕಿತರ ಸಂಖ್ಯೆ 61ಕ್ಕೆ ಹೆಚ್ಚಿದೆ. ಬೆಂಗಳೂರಲ್ಲಿ ನಾಲ್ವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ರಾಜ್ಯದಲ್ಲಿ ಕೊರೋನಾ ಎಮೆರ್ಜೆನ್ಸಿ ಸೃಷ್ಟಿಯಾಗಿದೆ. ಹೀಗಾಗಿ ಇನ್ನೊಂದು ವಾರ ರಾಜ್ಯದಲ್ಲೂ ಸಿನಿಮಾ ಪ್ರದರ್ಶನ ಬಂದ್ ಸಾಧ್ಯತೆ ಇದೆ. ಮಾರ್ಚ್ 16ರವರೆಗೆ ಥಿಯೇಟರ್ ಬಂದ್ ಮಾಡುವ ನಿರೀಕ್ಷೆ ಇದೆ. ಕೇರಳದಲ್ಲಿ ಇಂದಿನಿಂದಲೇ ಥಿಯೇಟರ್‍ಗಳನ್ನು ಬಂದ್ ಮಾಡಲಾಗಿದೆ. ಕೊರೊನಾ ಭಯಕ್ಕೆ ಜನ ಮನೆಯಿಂದ ಹೊರಬರುತ್ತಿಲ್ಲ. ಹೀಗಾಗಿ ದೇವಸ್ಥಾನಗಳಲ್ಲೂ ಭಕ್ತರ ಸಂಖ್ಯೆ ಇಳಿಮುಖವಾಗಿದ್ದು, ಬಸ್, ಟ್ಯಾಕ್ಸಿಗಳು ಖಾಲಿ ಖಾಲಿ ಎನ್ನುವಂತಾಗಿದೆ.

  • ಕೇರಳದಲ್ಲಿ ಮಾ.31ರವರೆಗೆ ಸಿನಿಮಾ ಪ್ರದರ್ಶನ ರದ್ದು – 7ನೇ ತರಗತಿಯವರೆಗೆ ರಜೆ ಘೋಷಣೆ

    ಕೇರಳದಲ್ಲಿ ಮಾ.31ರವರೆಗೆ ಸಿನಿಮಾ ಪ್ರದರ್ಶನ ರದ್ದು – 7ನೇ ತರಗತಿಯವರೆಗೆ ರಜೆ ಘೋಷಣೆ

    ತಿರುವನಂತಪುರಂ: ದೇಶಾದ್ಯಂತ ಕೊರೊನಾ ತಾಂಡವ ಜೋರಾಗುತ್ತಿದ್ದು, ಕೇರಳದಲ್ಲಿ ಒಟ್ಟು 12 ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆ ಕೇರಳ ಸರ್ಕಾರ ಕಟ್ಟೆಚ್ಚರ ವಹಿಸಿದ್ದು, ಸಿಬಿಎಸ್‍ಇ ಹಾಗೂ ಐಸಿಎಸ್‍ಇ ಸೇರಿದಂತೆ 7ನೇ ತರಗತಿವರೆಗೆ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿದೆ. ಮಾತ್ರವಲ್ಲದೆ ಮಾರ್ಚ್ 31ರ ವರೆಗೆ ಚಿತ್ರಮಂದಿರಗಳನ್ನು ಬಂದ್ ಮಾಡಲು ಚಿತ್ರ ಸಂಘಟನೆಗಳು ನಿರ್ಧಾರ ತೆಗೆದುಕೊಂಡಿವೆ.

    ಕೇರಳದಲ್ಲಿ ಸ್ವಲ್ಪ ವೇಗವಾಗಿಯೇ ಕೊರೊನಾ ಹರಡುತ್ತಿದ್ದು, ಮೊದಲು ವೈರಸ್ ಕಾಣಿಸಿಕೊಂಡಿದ್ದ ಮೂವರು ಗುಣಮುಖರಾಗಿ ಡಿಸ್ಚಾರ್ಜ್ ಆದ ಬಳಿಕ ಇದೀಗ ಮತ್ತೆ 12 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಕೇರಳ ತಲೆಕೆಡಿಸಿಕೊಂಡಿದ್ದು, ಸಿಬಿಎಸ್‍ಇ ಹಾಗೂ ಐಸಿಎಸ್‍ಇ ಸೇರಿದಂತೆ 7ನೇ ತರಗತಿಯವರೆಗೆ ಎಲ್ಲ ಶಾಲೆಗಳನ್ನು ಬಂದ್ ಮಾಡಲು ಸರ್ಕಾರ ಆದೇಶಿಸಿದೆ.

    ಇಂದು ಹೊಸ ಆರು ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದಂತೆ ಸಭೆ ನಡೆಸಿದ ಸಿಎಂ ಪಿಣರಾಯಿ ವಿಜಯನ್, ಏಳನೇ ತರಗತಿವರೆಗಿನ ಶಾಲೆಗಳಿಗೆ ಮಾರ್ಚ್ 31ರ ವರೆಗೆ ರಜೆ ನೀಡಿದ್ದಾರೆ. ಅಲ್ಲದೇ ಖಾಸಗಿಯಾಗಿ ನಡೆಸುವ ಟ್ಯೂಷನ್, ರಾಜಾ ದಿನದ ವಿಶೇಷ ತರಗತಿ, ಮದರಸಾಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲು ಸೂಚನೆ ನೀಡಿದ್ದಾರೆ.

    8,9 ಮತ್ತು 10ನೇ ತರಗತಿಗಳಿಗೆ ನಿಗದಿಯಂತೆ ಪರೀಕ್ಷೆಗಳು ನಡೆಯಲಿದ್ದು, ಜನರು ಸಾರ್ವಜನಿಕವಾಗಿ ಗುಂಪು ಸೇರದಂತೆ ಮನವಿ ಮಾಡಿದ್ದಾರೆ. ಮದುವೆ ಮುಂತಾದ ಸಮಾರಂಭಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಕೇರಳ ಸರ್ಕಾರ ಸೂಚನೆ ನೀಡಿದೆ. ಇತ್ತೀಚೆಗಷ್ಟೇ ಮೂರು ವರ್ಷದ ಬಾಲಕಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿತ್ತು. ಹೀಗಾಗಿ ಕೇರಳ ಸರ್ಕಾರ ಎಚ್ಚೆತ್ತುಕೊಂಡು ಶಾಲೆಗಳಿಗೆ ರಜೆ ಘೋಷಿಸಿದೆ.

    ಸಿನಿಮಾ ಪ್ರದರ್ಶನ ರದ್ದು
    ವೈರಸ್ ಹರಡುವಿಕೆ ಹೆಚ್ಚಾಗುತ್ತಿದ್ದಂತೆ ಮಲೆಯಾಳಂ ಸಿನಿಮಾ ಒಕ್ಕೂಟಗಳು ಕೊಚ್ಚಿಯಲ್ಲಿ ಸಭೆ ನಡೆಸಿವೆ. ಸಭೆಯ ಬಳಿಕ ಮಾರ್ಚ್ 31ವರೆಗೂ ರಾಜ್ಯಾದ್ಯಂತ ಸಿನಿಮಾ ಪ್ರದರ್ಶನ ರದ್ದು ಮಾಡಲಾಗಿದೆ. ಥಿಯೇಟರ್ ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನರು ಸೇರ್ಪಡೆ ಹಿನ್ನಡೆ ವೈರಸ್ ಹರಡುವ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನಲೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕ್ಕೂಟದ ಸದಸ್ಯರು ಹೇಳಿದ್ದಾರೆ.

  • ಆಸ್ಪತ್ರೆಗೆ ಕೊರೊನಾ ಶಂಕಿತ ಬಂದಿದ್ದ ಎಂದ ವೈದ್ಯೆಯ ಕೆಲಸ ಹೋಯ್ತು!

    ಆಸ್ಪತ್ರೆಗೆ ಕೊರೊನಾ ಶಂಕಿತ ಬಂದಿದ್ದ ಎಂದ ವೈದ್ಯೆಯ ಕೆಲಸ ಹೋಯ್ತು!

    ತ್ರಿಶೂರ್: ನಮ್ಮ ಆಸ್ಪತ್ರೆಗೆ ಕೊರೊನಾ ಶಂಕಿತನೊಬ್ಬ ಬಂದಿದ್ದ ಎಂದು ಹೇಳಿದ್ದ ವೈದ್ಯೆಯನ್ನು ಆಸ್ಪತ್ರೆಯ ಆಡಳಿತ ಮಂಡಳಿ ಕೆಲಸದಿಂದ ವಜಾ ಮಾಡಿದೆ. ತ್ರಿಶೂರ್ ಜಿಲ್ಲೆಯ ತಳಿಕುಳಂ ಎಂಬಲ್ಲಿ ಖಾಸಗಿ ಕ್ಲಿನಿಕ್‍ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯೆ ಶಿನು ಶ್ಯಾಮಲನ್ ಈ ವಿಚಾರವನ್ನು ತನ್ನ ಫೇಸ್‍ಬುಕ್ ಪೇಜ್‍ನಲ್ಲಿ ಬರೆದುಕೊಂಡಿದ್ದಾರೆ.

    ಕೊರೊನಾ ವೈರಸ್ ಇದೆ ಎಂದು ಶಂಕಿತ ವ್ಯಕ್ತಿಯೋರ್ವ ನಮ್ಮ ಆಸ್ಪತ್ರೆಗೆ ಬಂದಿದ್ದ. ಬಳಿಕ ಆ ವ್ಯಕ್ತಿ ಕತಾರ್ ಗೆ ಹೋಗಿದ್ದ ಎಂದು ಶಿನು ಶ್ಯಾಮಲನ್ ತಮ್ಮ ಫೇಸ್‍ಬುಕ್ ನಲ್ಲಿ ಬರೆದುಕೊಂಡಿದ್ದರು. ಆದರೆ ವೈದ್ಯೆಯ ಈ ಕೆಲಸ ಕ್ಲಿನಿಕ್ ಮಾಲೀಕನಿಗೆ ಖುಷಿ ನೀಡಲಿಲ್ಲ. ಬದಲಿಗೆ, ನಮ್ಮ ಕ್ಲಿನಿಕ್‍ಗೆ ಕೊರೊನಾ ಶಂಕಿತ ಬಂದಿದ್ದ ಎಂದರೆ ಬೇರೆ ರೋಗಿಗಳು ನಮ್ಮಲ್ಲಿಗೆ ಬರುತ್ತಾರಾ ಎಂದು ಪ್ರಶ್ನಿಸಿದರು. ನಾಳೆಯಿಂದ ಕೆಲಸಕ್ಕೆ ಬರಬೇಡ ಎಂದು ಹೇಳಿದ್ದಾರಂತೆ. ಈ ಎಲ್ಲಾ ವಿಚಾರಗಳನ್ನೂ ಶಿನು ಶ್ಯಾಮಲನ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

    ಡಾ.ಶಿನು ಶ್ಯಾಮಲನ್ ಫೇಸ್‍ಬುಕ್ ಪೇಜ್‍ನಲ್ಲಿ ಬರೆದಿದ್ದೇನು?:
    ಖಾಸಗಿ ಕ್ಲಿನಿಕ್‍ಗೆ ಬಂದ ರೋಗಿಯಲ್ಲಿ ಸೋಂಕು ಶಂಕೆ ಬಂದ ಹಿನ್ನೆಲೆಯಲ್ಲಿ ಈ ವಿಚಾರವನ್ನು ಆರೋಗ್ಯ ಇಲಾಖೆಗೆ, ಮರುದಿನ ಪೊಲೀಸರಿಗೆ ರಿಪೋರ್ಟ್ ಮಾಡಿದ್ದಕ್ಕೆ, ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದಕ್ಕೆ, ಟಿವಿ ಚಾನೆಲ್‍ಗಳ ಮುಂದೆ ಹೇಳಿದ್ದಕ್ಕೆ ನನ್ನನ್ನು ಕೆಲಸದಿಂದ ಕೈಬಿಟ್ಟಿದ್ದಾರೆ.

    ರೋಗಿಯ ಬಗ್ಗೆಯಾಗಲೀ, ಕ್ಲಿನಿಕ್ ಕುರಿತಾಗಲೀ ನಾನು ಯಾವುದೇ ಮಾಹಿತಿ ಬಹಿರಂಗಪಡಿಸಿರಲಿಲ್ಲ. ಮಾಲೀಕರು ಹೇಳುವಂತೆ ಏನೂ ಮಾತನಾಡದೇ ಸುಮ್ಮನಿರಲು ಇದರಲ್ಲಿ ಅಂತಹ ವಿಚಾರವೇನಿದೆ..? ಬಂದಿದ್ದ ವ್ಯಕ್ತಿಗೆ ಕೊರೊನಾ ಬಂದಿತ್ತು ಎಂದು ಗೊತ್ತಾದರೆ ನಮ್ಮ ಕ್ಲಿನಿಕ್‍ಗೆ ಯಾರು ಬರುತ್ತಾರೆ ಎಂಬಿತ್ಯಾದಿ ಸ್ವಾರ್ಥ ಪ್ರಶ್ನೆಗಳಿತ್ತು ಮಾಲೀಕರಿಗೆ. ನಿಮಗೆಲ್ಲಾ ಆರೋಗ್ಯ ಕ್ಷೇತ್ರ ಎನ್ನುವುದು ಬಿಸಿನೆಸ್. ಕ್ಷಮಿಸಿಬಿಡಿ, ತಪ್ಪು ಕಾಣಿಸಿದರೆ ಧೈರ್ಯದಿಂದ ಹೇಳುತ್ತೇನೆ, ಇನ್ನು ಮುಂದೆಯೂ ಅದನ್ನೇ ಮಾಡುತ್ತೇನೆ. ಹೇಳಬೇಕಾದವರಿಗೆ ಹೇಳಿದರೂ ರೋಗಿಯನ್ನು ಕತಾರ್ ಗೆ ಹೋಗಲು ಬಿಟ್ಟವರಿಗೆ ಯಾವ ಸಮಸ್ಯೆಯೂ ಇಲ್ಲ, ಯಾವ ಕ್ರಮವೂ ಇಲ್ಲ. ಆದರೆ ನನಗೆ ನನ್ನ ಕೆಲಸ ಹೋಯಿತು. ಎಂಥಾ ರಾಜ್ಯವಿದು.

    ನಾನು ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ. ಇನ್ನು ಮುಂದೆಯೂ ಧ್ವನಿ ಎತ್ತುವೆ.

  • ಕೇರಳದಲ್ಲಿ ಮೂರರ ಕಂದಮ್ಮಗೆ ಕೊರೊನಾ ವೈರಸ್

    ಕೇರಳದಲ್ಲಿ ಮೂರರ ಕಂದಮ್ಮಗೆ ಕೊರೊನಾ ವೈರಸ್

    ತಿರುವನಂತಪುರ: ಕೇರಳದ ಮೂರು ವರ್ಷದ ಮಗುವಿನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಮಗುವಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಪ್ರಯೋಗಾಲಯದ ವರದಿಯಲ್ಲಿ ದೃಢಪಡಿಸಲಾಗಿದೆ. ಕೊರೊನಾ ಸೋಂಕು ಪೀಡಿತರ ಸಂಖ್ಯೆ ಕೇರಳದಲ್ಲಿ 9 ಮತ್ತು ದೇಶದಲ್ಲಿ 42ಕ್ಕೆ ಏರಿಕೆಯಾಗಿದೆ.

    ಕೆಲವು ದಿನಗಳ ಹಿಂದೆ ಮಗು ಪೋಷಕರ ಜೊತೆ ಇಟಲಿಗೆ ತೆರಳಿತ್ತು. ಹೀಗಾಗಿ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಎರ್ನಾಕುಲಂ ಮೆಡಿಕೆಲ್ ಕಾಲೇಜಿನ ಐಸೋಲೇಶನ್ ವಾಡ್ ನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

    ಬೆಂಗಳೂರಿನಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್‍ಕೆಜಿ, ಯುಕೆಜಿ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಆರೋಗ್ಯ ಆಯುಕ್ತರ ಸಲಹೆ ಮೇರೆಗೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ ಯುಕೆಜಿ, ಎಲ್‍ಕೆಜಿ ಶಾಲೆಗಳಿಗೆ ಇಂದಿನಿಂದ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

  • ಕೇರಳದಲ್ಲಿ ಒಂದೇ ಕುಟುಂಬದ ಐವರಿಗೆ ಕೊರೊನಾ – ಸೋಂಕು ಪೀಡಿತರ ಸಂಖ್ಯೆ 39 ಏರಿಕೆ

    ಕೇರಳದಲ್ಲಿ ಒಂದೇ ಕುಟುಂಬದ ಐವರಿಗೆ ಕೊರೊನಾ – ಸೋಂಕು ಪೀಡಿತರ ಸಂಖ್ಯೆ 39 ಏರಿಕೆ

    – ಆಸ್ಪತ್ರೆಗೆ ದಾಖಲಾಗಲು ಒಪ್ಪದ ಕುಟುಂಬ

    ತಿರುವಂತಪುರಂ: ಭಾರತದಲ್ಲಿ ಮೊದಲ ಬಾರಿಗೆ ಕೊರೊನಾ ವೈರಸ್ ಕಂಡು ಬಂದ ರಾಜ್ಯ ಕೇರಳದಲ್ಲಿ ಒಂದೇ ಕುಟುಂಬದ ಐವರಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ.

    ಕೊರೊನಾ ವೈರಸ್ ಪತ್ತೆಯಾಗಿರುವ ಕುಟುಂಬದವರು, ಪಥನಮತ್ತಟ್ಟ ಜಿಲ್ಲೆಯ ನಿವಾಸಿಗಳಾಗಿದ್ದಾರೆ. ಎಲ್ಲರನ್ನು ಪಥನಮತ್ತಟ್ಟ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತದೆ. ಈ ಕುಟುಂಬದ ಮೂವರು ಇತ್ತೀಚೆಗೆ ಸಂಬಂಧಿಕರನ್ನು ಭೇಟಿ ಮಾಡಲು ಇಟಲಿಗೆ ಹೋಗಿ ಬಂದಿದ್ದು, ಅಲ್ಲಿಂದ ಇವರಿಗೆ ಸೋಂಕು ತಗಲುಲಿದೆ ಎಂದು ಹೇಳಲಾಗುತ್ತದೆ.

    ಇದರ ಬಗ್ಗೆ ಮಾಹಿತಿ ನೀಡಿರುವ ಕೇರಳದ ಆರೋಗ್ಯ ಸಚಿವೆ ಕೆಕೆ ಶೈಲಜಾ ಅವರು, ಕೊರೊನಾ ವೈರಸ್‍ಗೆ ತುತ್ತಾಗಿರುವ ಕುಟುಂಬದವರು ತಮ್ಮ ಪ್ರಯಾಣದ ಇತಿಹಾಸದ ಬಗ್ಗೆ ನಮಗೆ ಮಾಹಿತಿ ನೀಡಿಲ್ಲ. ಹಾಗಾಗಿ ನಾವು ಅವರನ್ನು ಸ್ಕ್ರೀನಿಂಗ್ ಮಾಡಲು ಆಗಿಲ್ಲ. ಜೊತೆಗೆ ಅವರು ಮೊದಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಒಪ್ಪಿರಲಿಲ್ಲ. ನಂತರ ನಾವು ಅವರ ಮನವೊಲಿಸಿ ಆಸ್ಪತ್ರೆ ದಾಖಲು ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನು ಓದಿ: 1 ಲಕ್ಷ ದಾಟಿದ ಕೊರೊನಾ ಪ್ರಕರಣ – ಇದುವರೆಗೆ 3,412 ಸಾವು!

    ಈಗ ಸದ್ಯಕ್ಕೆ ಅವರನ್ನು ಪಥನಮತ್ತಟ್ಟ ಜೆನರಲ್ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಕುಟುಂಬದ ಮೂವರು ಇತ್ತೀಚೆಗೆ ಸಂಬಂಧಿಕರನ್ನು ಭೇಟಿ ಮಾಡಲು ಇಟಲಿಗೆ ಹೋಗಿ ಬಂದಿದ್ದರು. ಹೀಗಾಗಿ ಇವರಿಗೆ ಸೋಂಕು ತಗುಲಿದೆ. ಈಗ ನಾವು ಬೇಕಾದ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಕುಟುಂಬವನ್ನು ಪ್ರತ್ಯೇಕ ವಾರ್ಡಿನಲ್ಲಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ಶೈಲಜಾ ಅವರು ಹೇಳಿದ್ದಾರೆ. ಇದನ್ನು ಓದಿ: ಕೊರೊನಾ ಆಯ್ತು, ಈಗ ಹೆಚ್1 ಎನ್1 ಭಯ- ಹಕ್ಕಿ ಜ್ವರದ ಲಕ್ಷಣಗಳೇನು?

    ಭಾರತದ ಮೊದಲ ಮೂರು ಕೊರೊನ ವೈರಸ್ ಪ್ರಕರಣಗಳು ಕೇರಳದಿಂದಲೇ ವರದಿಯಾಗಿದ್ದವು. ಮೂವರೂ ರೋಗಿಗಳು ಚೀನಾದ ವುಹಾನ್‍ನ ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದರು. ಆದರೆ ಈಗ ಅವರು ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ.

    ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿರುವ ಕೇಂದ್ರ ಸರ್ಕಾರ ಸೋಂಕು ತಡೆಗೆ ಬೇಕಾದ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಜೊತೆಗೆ ಸ್ವತಃ ಪ್ರಧಾನಿ ಮೋದಿ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ರೋಗವು ಮತ್ತುಷ್ಟು ಹರಡುವ ಲಕ್ಷಣಗಳು ಕಂಡು ಬಂದರೆ ಅದನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದಾರೆ. ಜೊತೆಗೆ ವೈರಸ್ ಹರಡದ ರೀತಿಯಲ್ಲಿ ಕ್ರಮಕೈಗೊಳ್ಳಿ ಎಂದು ತಿಳಿಸಿದ್ದಾರೆ.

    ಇಟಲಿಯಲ್ಲಿ ಸುಮಾರು 6,000 ಜನರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದು, ಅವರಲ್ಲಿ 225 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ವೈರಸ್ ಕಂಡು ಬಂದಿರುವ ಇಟಲಿಯ ಉತ್ತರದ ಹೆಚ್ಚಿನ ಭಾಗಗಳನ್ನು ಇಟಾಲಿಯನ್ ಸರ್ಕಾರವು ಲಾಕ್ ಮಾಡಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ಚೀನಾದ ವುಹಾನ್ ನಗರದಿಂದ ಕಾಣಿಸಿಕೊಂಡ ಕೊರೊನಾ ವೈರಸ್, ಈಗ ಸುಮಾರು 95ಕ್ಕೂ ಹೆಚ್ಚು ರಾಷ್ಟ್ರಗಳು ಮತ್ತು ಪ್ರಾಂತ್ಯಗಳಿಗೆ ಹರಡಿದೆ. 3,500ಕ್ಕೂ ಹೆಚ್ಚು ಜನರು ಸತ್ತಿದ್ದಾರೆ ಮತ್ತು ಒಂದು ಲಕ್ಷ ಜನರು ಸೋಂಕಿಗೆ ಒಳಗಾಗಿದ್ದಾರೆ.

  • ಎಫ್‍ಬಿಯಲ್ಲಿ ಪರಿಚಯ, ಪ್ರೀತಿ -ಪಾರ್ಶ್ವವಾಯು ಪ್ರೇಮಿಯ ಜೊತೆ ಮದ್ವೆ

    ಎಫ್‍ಬಿಯಲ್ಲಿ ಪರಿಚಯ, ಪ್ರೀತಿ -ಪಾರ್ಶ್ವವಾಯು ಪ್ರೇಮಿಯ ಜೊತೆ ಮದ್ವೆ

    – ಯುವಕನಿಗಾಗಿ ಮನೆ, ಪೋಷಕರನ್ನು ಬಿಟ್ಟು ಹೋದ ಯುವತಿ
    – ಯುವತಿಯ ಪ್ರೀತಿಗೆ ನೆಟ್ಟಿಗರು ಫಿದಾ

    ತಿರುವನಂತಪುರಂ: ಪ್ರೀತಿಗೆ ಕಣ್ಣಿಲ್ಲ ಎಂದು ಹೇಳುತ್ತಾರೆ. ಇದೀಗ ಕೇರಳದ ಯುವತಿಯೊಬ್ಬಳು ತನ್ನ ಪೋಷಕರನ್ನು ಬಿಟ್ಟು ಪಾರ್ಶ್ವವಾಯುವಿಗೆ ಒಳಗಾಗಿರುವ ಯುವಕನನ್ನು ಮದುವೆಯಾಗಿರುವ ಅಪರೂಪದ ಘಟನೆ ನಡೆದಿದೆ.

    ಶಾಹ್ನಾ ಪಾರ್ಶ್ವವಾಯುವಿಗೆ ಒಳಗಾದ ಪ್ರಣವ್‍ನನ್ನು ಮದುವೆಯಾಗುವ ಮೂಲಕ ಇತರರಿಗೆ ಮಾದರಿಯಾಗಿದ್ದಾಳೆ. ಶಾಹ್ನಾ ತನ್ನ ಪೋಷಕರ ವಿರುದ್ಧವಾಗಿ ಪ್ರಣವ್‍ನನ್ನು ಮದುವೆಯಾಗಿದ್ದಾಳೆ. ಇವರಿಬ್ಬರೂ ಫೇಸ್‍ಬುಕ್ ಮೂಲಕ ಪರಿಚಯವಾಗಿದ್ದು, ಮಂಗಳವಾರ ವಿವಾಹವಾಗಿದ್ದಾರೆ. ಇದೀಗ ಇವರಿಬ್ಬರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

    ಪ್ರೀತಿ ಮೂಡಿದ್ದು ಹೇಗೆ:
    ಇರಿಂಜಲಕುಡ ಮೂಲದ ಪ್ರಣವ್ ಆರು ವರ್ಷಗಳ ಹಿಂದೆ ಕಾಲೇಜಿನಲ್ಲಿದ್ದಾಗ ರಸ್ತೆ ಅಪಘಾತವಾಗಿತ್ತು. ಆಗ ಸೊಂಟದ ಕೆಳಗಿನ ಭಾಗದ ಶಕ್ತಿ ಕಳೆದುಕೊಂಡು ಪಾರ್ಶ್ವವಾಯುವಿಗೆ ಒಳಗಾಗಿದ್ದನು. ಅಂದಿನಿಂದ ಪ್ರಣವ್ ವೀಲ್‌ಚೇರ್ ಮೇಲಿಯೇ ಇದ್ದಾರೆ. ಅಲ್ಲದೇ ಮೂಲಭೂತ ಅಗತ್ಯಗಳಿಗೂ ಇನ್ನೊಬ್ಬರ ಮೇಲೆ ಅವಲಂಬಿತನಾಗಿದ್ದಾನೆ. ಪ್ರಣವ್ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯನಾಗಿದ್ದನು. ಆಗಾಗ ವೀಲ್‍ಚೇರ್ ಮೂಲಕವೇ ಸ್ಥಳೀಯ ದೇವಾಲಯದ ಉತ್ಸವಗಳಿಗೆ ಹೋಗುತ್ತಿದ್ದನು. ಅಲ್ಲಿನ ವಿಡಿಯೋವನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡುತ್ತಿದ್ದನು.

    ನೆಟ್ಟಿಗರು ಕೂಡ ಪ್ರಣವ್‍ಗೆ ಒಳ್ಳೆಯ ರೀತಿಯ ಕಮೆಂಟ್ ಮಾಡುತ್ತಿದ್ದರು. ಈ ವಿಡಿಯೋವನ್ನು ಶಾಹ್ನಾ ನೋಡಿದ್ದಾಳೆ. ನಂತರ ಪ್ರಣವ್‍ನನ್ನು ಭೇಟಿ ಮಾಡಲು ಪ್ರಯತ್ನಿಸಿದ್ದಾಳೆ. ಕೊನೆಗೆ ಮೂರು ತಿಂಗಳ ಹಿಂದೆ ಫೇಸ್‍ಬುಕ್‍ನಿಂದ ಪ್ರಣವ್‍ನ ಫೋನ್ ನಂಬರ್ ತೆಗೆದುಕೊಂಡಿದ್ದಾಳೆ. ಬಳಿಕ ಇಬ್ಬರು ಚಾಟಿಂಗ್ ಮಾಡುತ್ತಿದ್ದರು. ಪರಸ್ಪರ ಮಾತನಾಡಿದ್ದಾರೆ.

    ಕೆಲವು ದಿನಗಳ ನಂತರ ತನ್ನ ಪ್ರೀತಿಯನ್ನು ಪ್ರಣವ್‍ಗೆ ಹೇಳಿಕೊಂಡಿದ್ದಾಳೆ. ಅಲ್ಲದೇ ಮದುವೆಯಾಗುವ ಆಸೆಯನ್ನು ವ್ಯಕ್ತಪಡಿಸಿದ್ದಾಳೆ. ಆಗ ಪ್ರಣವ್ ತನ್ನ ಆರೋಗ್ಯದ ಸ್ಥಿತಿಯ ಬಗ್ಗೆ ಹೇಳಿದ್ದಾನೆ. ಆದರೂ ಶಾಹ್ನಾ ಆತನನ್ನೇ ಮದುವೆಯಾಗಲು ಬಯಸಿದ್ದಳು. ಪ್ರಣವ್, ಅವರ ಸಂಬಂಧಿಕರು ಮತ್ತು ಸ್ನೇಹಿತರು ಅವಳ ನಿರ್ಧಾರವನ್ನು ಬದಲಾಯಿಸುವಂತೆ ಮನವೊಲಿಸಿದರು. ಶಾಹ್ನಾ ಕುಟುಂಬವೂ ಈ ಸಂಬಂಧವನ್ನು ವಿರೋಧಿಸಿತ್ತು. ಆದರೆ ಶಾಹ್ನಾ ತನ್ನ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ.

    ಕೊನೆಗೆ ಪ್ರಣವ್‍ನನ್ನು ಖುದ್ದಾಗಿ ಭೇಟಿಯಾಗಲು ಶಾಹ್ನಾ ಮನೆಬಿಟ್ಟು ಹೋಗಿದ್ದಾಳೆ. ಇದರಿಂದ ಪ್ರಣವ್ ಕುಟುಂಬದವರು ಬೇಸರಗೊಂಡು ಮತ್ತೊಮ್ಮೆ ಆಕೆಯ ಮನವೊಲಿಸಲು ಪ್ರಯತ್ನಿಸಿದರು. ಕೊನೆಗೂ ಪ್ರಣವ್‍ನನ್ನು ಭೇಟಿಯಾದಳು. ಆದರೆ ಶಾಹ್ನಾ, ಪ್ರಣವ್‍ನನ್ನು ನೇರವಾಗಿ ನೋಡಿ ಆತನ ಮೇಲಿನ ಪ್ರೀತಿ ಮಾತ್ರ ಕಡಿಮೆಯಾಗಿಲ್ಲ. ಆತನನ್ನೇ ಮದುವೆಯಾಗುವುದಾಗಿ ಹಠ ಮಾಡಿದ್ದಾಳೆ. ಭೇಟಿಯಾದ ಮರುದಿನವೇ ಶಾಹ್ನಾ ಮತ್ತು ಪ್ರಣವ್ ಕೊಡುಂಗಲ್ಲೂರಿನ ದೇವಸ್ಥಾನವೊಂದರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಪ್ರಣವ್ ಪೋಷಕರು, ಸ್ನೇಹಿತರು ಮತ್ತು ಸಂಬಂಧಿಕರ ನವದಂಪತಿಗೆ ಆಶೀರ್ವಾದ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಕೂಡ ನವ ದಂಪತಿಗೆ ಶುಭಾಕೋರಿದ್ದಾರೆ.

  • ದೆಹಲಿ, ತೆಲಂಗಾಣದಲ್ಲಿ ಮತ್ತೆರಡು ಕೊರೊನಾ ಪ್ರಕರಣ ಪತ್ತೆ

    ದೆಹಲಿ, ತೆಲಂಗಾಣದಲ್ಲಿ ಮತ್ತೆರಡು ಕೊರೊನಾ ಪ್ರಕರಣ ಪತ್ತೆ

    – ದೇಶದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ
    – 70 ದೇಶಕ್ಕೆ ಹಬ್ಬಿದ ವೈರಸ್

    ನವದೆಹಲಿ: ಪ್ರಪಂಚವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ನಮ್ಮ ದೇಶಕ್ಕೂ ಕಾಲಿಟ್ಟಿದ್ದು, ಕೇರಳದಲ್ಲಿ ಮೂವರಲ್ಲಿ ಕಾಣಿಸಿಕೊಂಡ ಬಳಿಕ ಇದೀಗ ದೆಹಲಿ ಹಾಗೂ ತೆಲಂಗಾಣದ ಇಬ್ಬರಲ್ಲಿ ಪತ್ತೆಯಾಗಿದೆ. ಇಬ್ಬರ ಆರೋಗ್ಯವೂ ಸ್ಥಿರವಾಗಿದ್ದು, ಎಚ್ಚರಿಕೆಯಿಂದ ನಿಭಾಯಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.

    ಈ ಕುರಿತು ಸೋಮವಾರ ಹೇಳಿಕೆ ಬಿಡುಗಡೆ ಮಾಡಿರುವ ಆರೋಗ್ಯ ಸಚಿವಾಲಯ, ಕೊರೊನಾ ವೈರಸ್ ತಗುಲಿದ ಒಬ್ಬ ವ್ಯಕ್ತಿಯನ್ನು ದೆಹಲಿಯಲ್ಲಿ ಹಾಗೂ ಇನ್ನೊಬ್ಬರನ್ನು ತೆಲಂಗಾಣದಲ್ಲಿ ಗುರುತಿಸಲಾಗಿದೆ. ದೆಹಲಿಯಲ್ಲಿ ವೈರಸ್ ಪತ್ತೆಯಾದ ವ್ಯಕ್ತಿ ಇಟಲಿಗೆ ಪ್ರಯಾಣ ಬೆಳೆಸಿದ್ದರು ಹಾಗೂ ತೆಲಂಗಾಣದ ರೋಗಿ ದುಬೈಗೆ ಭೇಟಿ ನೀಡಿದ್ದರು. ಇಬ್ಬರ ಆರೋಗ್ಯವೂ ಸ್ಥಿರವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

    ಈ ಹಿಂದೆ ಕೇರಳದಲ್ಲಿ ಮೂರು ಪ್ರಕರಣಗಳು ಪತ್ತೆಯಾಗಿದ್ದವು. ಮೂವರು ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಕಂಡುಬಂದಿರುವುದು ಖಚಿತವಾಗಿತ್ತು. ಇವರು ವುಹಾನ್‍ನಿಂದ ಬಂದವರಾಗಿದ್ದರು. ಈಗಾಗಲೇ ಈ ವೈರಸ್‍ನಿಂದಾಗಿ ಚೀನಾದಲ್ಲಿ 3 ಸಾವಿರ ಜನ ಮೃತಪಟ್ಟಿದ್ದು, ಇದೀಗ ಭಾರತಕ್ಕೂ ಕಾಲಿಡುತ್ತಿದೆ.

    ಮೂವರು ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಇರುವುದು ಕಂಡುಬಂದ ನಂತರ ಕೇರಳ ಸರ್ಕಾರವು ಇದನ್ನು ರಾಜ್ಯ ವಿಪತ್ತು ಎಂದು ಘೋಷಿಸಿತ್ತು. ನಂತರ ಯಾವುದೇ ಪ್ರಕರಣ ಪತ್ತೆಯಾಗದ ಹಿನ್ನೆಲೆ ಆದೇಶವನ್ನು ಹಿಂಪಡೆದಿತ್ತು.

    ಈ ಕುರಿತು ಕೇಂದ್ರ ಸರ್ಕಾರ ಸಹ ಎಚ್ಚರಿಕೆ ವಹಿಸಿದ್ದು, ದೇಶದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಈ ಕುರಿತು ಪರೀಕ್ಷೆ ನಡೆಸಲಾಗುತ್ತಿದೆ. ಹೀಗಾಗಿ ಕೊರೊನಾ ವೈರಸ್ ದೇಶದಲ್ಲಿ ವೇಗವಾಗಿ ಹಬ್ಬಿಲ್ಲ. ಇದಕ್ಕಾಗಿ ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಎಬೋಲಾ, ನಿಫಾ, ಸ್ವಿನ್ ಫ್ಲೂ ವೈರಸ್ ಹಬ್ಬಿದಾಗ ಸಹ ತಜ್ಞ ವೈದ್ಯರು ಕಾರ್ಯ ನಿರ್ವಹಿಸಿ, ಪರಿಸ್ಥಿತಿ ನಿಭಾಯಿಸಿದ್ದರು ಎಂದು ತಿಳಿಸಿದ್ದಾರೆ.

    ಪ್ರಪಂಚದಾದ್ಯಂತ 89 ಸಾವಿರ ಜರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದ್ದು, ಚೀನಾದಲ್ಲಿ 2,912 ಸೇರಿದಂತೆ ಒಟ್ಟು ಮೂರು ಸಾವಿರ ಜನ ಸಾವನ್ನಪ್ಪಿದ್ದಾರೆ. ಡಿಸೆಂಬರ್‍ನಲ್ಲಿ ಚೀನಾದಲ್ಲಿ ಮೊದಲ ಬಾರಿಗೆ ಈ ವೈರಸ್ ಪತ್ತೆಯಾಗಿದ್ದು, ಇದೀಗ ಸುಮಾರು 70ಕ್ಕೂ ಹೆಚ್ಚು ದೇಶಗಳಿಗೆ ಹಬ್ಬಿದೆ.

    ಕೊರೊನಾ ವೈರಸ್ ತಡೆಯಲು ಎಲ್ಲ ದೇಶಗಳು ಕ್ರಮ ಕೈಗೊಂಡಿದ್ದು, ಭಾರತವೂ ಹಲವು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಇದರ ಭಾಗವಾಗಿ ದೇಶದ ಎಲ್ಲ 21 ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಎಲ್ಲ ಆಸ್ಪತ್ರೆಗಳಿಗೂ ಸಹ ಈ ಕುರಿತು ಎಚ್ಚರಿಕೆ ನೀಡಲಾಗಿದೆ.

  • ಸಾಕು ಮಗಳನ್ನ ಹಿಂದೂ ಯುವಕನೊಂದಿಗೆ ಮದ್ವೆ ಮಾಡಿದ ಮುಸ್ಲಿಂ ದಂಪತಿ

    ಸಾಕು ಮಗಳನ್ನ ಹಿಂದೂ ಯುವಕನೊಂದಿಗೆ ಮದ್ವೆ ಮಾಡಿದ ಮುಸ್ಲಿಂ ದಂಪತಿ

    – ಪೋಷಕರಿಲ್ಲದೇ ಅನಾಥಳಾಗಿದ್ದಾಗ ದತ್ತು ಪಡೆದಿದ್ದ ದಂಪತಿ

    ತಿರುವನಂತಪುರಂ: ಮುಸ್ಲಿಂ ದಂಪತಿ ತಮ್ಮ ಸಾಕು ಮಗಳನ್ನು ಸ್ವಂತ ಮಗಳಂತೆ ಸಾಕಿ-ಸಲಹಿದ್ದರು. ಕೊನೆಗೆ ಆಕೆಯ ಇಷ್ಟದಂತೆ ಹಿಂದೂ ಹುಡುಗನ ಜೊತೆಯಲ್ಲಿಯೇ ವಿವಾಹ ಮಾಡಿರುವ ಅಪರೂಪದ ಕೋಮು ಸೌಹಾರ್ದತೆಯ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ.

    ಅಬ್ದುಲ್ಲಾ ಮತ್ತು ಖದೀಜಾ ಮುಸ್ಲಿಂ ದಂಪತಿ ತಮ್ಮ ಸಾಕು ಮಗಳು ರಾಜೇಶ್ವರಿಗೆ ಹಿಂದೂ ಹುಡುಗನ ಜೊತೆ ವಿವಾಹ ಮಾಡಿದ್ದಾರೆ. ಕೇರಳದ ಭಾಗವತಿ ದೇವಸ್ಥಾನದಲ್ಲಿ ಭಾನುವಾರ ಈ ವಿವಾಹ ಸಮಾರಂಭ ನಡೆದಿದೆ. ಮುಸ್ಲಿಂ ದಂಪತಿಯ ಮಗಳು ರಾಜೇಶ್ವರಿ ಹಿಂದೂ ಸಂಪ್ರದಾಯದಂತೆ ವಿಷ್ಣು ಪ್ರಸಾದ್ ಜೊತೆ ಮದುವೆಯಾಗಿದ್ದಾಳೆ. ಇದನ್ನೂ ಓದಿ: ಪ್ರಿಯತಮೆಗೆ ಕ್ಯಾನ್ಸರ್- MA ಕನಸು ಬಿಟ್ಟು ದಿನ ಕೂಲಿ ಕೆಲಸಗಾರನಾದ

    ಈ ಅಪರೂಪದ ಮದುವೆಗೆ ಹಿಂದೂ ಮತ್ತು ಮುಸ್ಲಿಂ ಕುಟುಂಬದವರು ಹಾಗೂ ಸ್ನೇಹಿತರು ಭಾಗಿಯಾಗಿದ್ದರು. ವಧು ರಾಜೇಶ್ವರಿ ತಂದೆ, ಅಬ್ದುಲ್ಲಾ ಅವರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮೃತಪಟ್ಟಿದ್ದರು. ಆಕೆಯ ತಾಯಿಯೂ ಕೂಡ ರಾಜೇಶ್ವರಿ ಮಗುವಾಗಿದ್ದಾಗ ಸಾವನ್ನಪ್ಪಿದ್ದರು. ಕೊನೆಗೆ ರಾಜೇಶ್ವರಿ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥಳಾಗಿದ್ದಳು. ಕೊನೆಗೆ ಅಬ್ದುಲ್ಲಾ ಮತ್ತು ಖದೀಜಾ ರಾಜೇಶ್ವರಿಯನ್ನು ದತ್ತು ಪಡೆದರು.

    ರಾಜೇಶ್ವರಿ, ಅಬ್ದುಲ್ಲಾ ಮತ್ತು ಖದೀಜಾ ಅವರ ಮೂವರು ಗಂಡು ಮಕ್ಕಳಾದ ಶಮೀಮ್, ನಜೀಬ್ ಮತ್ತು ಶೆರೀಫ್ ಅವರೊಂದಿಗೆ ಬೆಳೆದಿದ್ದಳು. ಮುಸ್ಲಿಂ ದಂಪತಿ ಸಾಕು ಮಗಳನ್ನು ಚೆನ್ನಾಗಿ ಸಾಕಿ, ಶಿಕ್ಷಣವನ್ನೂ ಕೊಡಿಸಿದ್ದರು. ಕೊನೆಗೆ ಆಕೆಯ ಇಷ್ಟದಂತೆ ಹಿಂದೂ ಹುಡುಗನ ಜೊತೆ ವಿವಾಹ ಕೂಡ ಮಾಡಿಸಿದ್ದಾರೆ.

    ಜಾತಿ, ಧರ್ಮವನ್ನು ಮೀರಿ ಕೇರಳದ ಕಾಯಂಕುಲಂನ ಮಸೀದಿಯಲ್ಲಿ ರಾಜೇಶ್ವರಿ ಮತ್ತು ವಿಷ್ಣು ಪ್ರಸಾದ್ ಜೋಡಿಯ ಹಿಂದೂ ವಿವಾಹ ಸಮಾರಂಭವನ್ನು ಆಯೋಜಿಸಿತ್ತು.

  • ಮೈಸೂರಿನ 23ಕ್ಕೂ ಹೆಚ್ಚು ಮಂದಿ ಅಯ್ಯಪ್ಪ ಭಕ್ತರಿದ್ದ ಬಸ್ಸಿಗೆ ಕೇರಳದಲ್ಲಿ ಬೆಂಕಿ

    ಮೈಸೂರಿನ 23ಕ್ಕೂ ಹೆಚ್ಚು ಮಂದಿ ಅಯ್ಯಪ್ಪ ಭಕ್ತರಿದ್ದ ಬಸ್ಸಿಗೆ ಕೇರಳದಲ್ಲಿ ಬೆಂಕಿ

    ಮೈಸೂರು: ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಬಸ್ ಬೆಂಕಿಗೆ ಆಹುತಿಯಾಗಿದ್ದು, ಕರ್ನಾಟಕದಿಂದ ಶಬರಿ ಮಲೆಗೆ ತೆರಳಿದ್ದ 35ಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೇರಳದಲ್ಲಿ ನಡೆದಿದೆ.

    ಶುಕ್ರವಾರ ಸಂಜೆ ಕೇರಳದ ನೆಲಕ್ಕಲ್‍ನಿಂದ ಪಂಪಾ ನದಿಗೆ ಕೇರಳ ಸರ್ಕಾರಿ ಬಸ್ಸಿನಲ್ಲಿ ತೆರಳುವಾಗ ಈ ಅವಘಡ ಸಂಭವಿಸಿದೆ. ಈ ಬಸ್ಸಿನಲ್ಲಿ ಮೈಸೂರಿನ ಹೂಟಗಳ್ಳಿ ಬಡವಾಣೆಯ 23 ಮಂದಿ ಅಯ್ಯಪ್ಪನ ಭಕ್ತರು ಇದ್ದರು. ಟಯರ್ ಸ್ಪೋಟಗೊಂಡ ಪರಿಣಾಮ ಇಡೀ ಬಸ್ಸಿಗೆ ಬೆಂಕಿ ಹತ್ತಿಕೊಂಡು ಉರಿದಿದೆ.

    ಘಟನೆ ನಡೆದ ತಕ್ಷಣ ಸ್ಥಳೀಯರ ಸಹಾಯದಿಂದ ಎಲ್ಲ ಭಕ್ತರ ರಕ್ಷಣೆ ಮಾಡಿದ್ದು, ಓರ್ವ ಯುವಕನಿಗೆ ಮಾತ್ರ ಗಾಯವಾಗಿದೆ. ಗಾಯಗೊಂಡ ಯುವಕನನ್ನು ಕೇರಳದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಮಾಹಿತಿ ತಿಳಿದು ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಪ್ರಾಣಾಪಾಯದಿಂದ ಪಾರಾದ ಮೈಸೂರಿನ ಹೂಟಗಳ್ಳಿ ನಿವಾಸಿಗಳು ಮೈಸೂರಿಗೆ ಹಿಂದಿರುಗಿದ್ದಾರೆ.