Tag: Keshwapur Police Station

  • ಪತ್ನಿ, ಪೊಲೀಸರ ಮಾನಸಿಕ ಕಿರುಕುಳದಿಂದ ಸೂಸೈಡ್ ಕೇಸ್- ನಿಜವಾಯ್ತು ಪಬ್ಲಿಕ್ ಟಿವಿ, ಡಿಜಿಟಲ್ ವರದಿ

    ಪತ್ನಿ, ಪೊಲೀಸರ ಮಾನಸಿಕ ಕಿರುಕುಳದಿಂದ ಸೂಸೈಡ್ ಕೇಸ್- ನಿಜವಾಯ್ತು ಪಬ್ಲಿಕ್ ಟಿವಿ, ಡಿಜಿಟಲ್ ವರದಿ

    ಹುಬ್ಬಳ್ಳಿ: ಪತ್ನಿ ಹಾಗೂ ಪೊಲೀಸರ ಮಾನಸಿಕ ಕಿರುಕುಳದಿಂದ ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿ (Public TV) ಮತ್ತು ಡಿಜಿಟಲ್ (Public TV Digital) ವರದಿ ನಿಜವಾಗಿದೆ. ಹುಬ್ಬಳ್ಳಿ ಕೋಟಿ ಲಿಂಗೇಶ್ವರ ನಗರದಲ್ಲಿ 28 ವರ್ಷ ನಿಖಿಲ್ ಎನ್ನುವ ಯುವಕ ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.

    ಯುವಕನ ಸಾವಿಗೆ ಆತನ ಪತ್ನಿ ಪ್ರೀತಿ ಮತ್ತು ಕೇಶ್ವಾಪುರ ಠಾಣೆಯ (Keshwapur Police Station) ಪೊಲೀಸ್ ಸಿಬ್ಬಂದಿ ಕಾರಣ ಅಂತ ಕುಟುಂಬಸ್ಥರು ಆರೋಪಿಸಿದ್ದರು. ಇದನ್ನು ಪಬ್ಲಿಕ್ ಟಿವಿ ಮತ್ತು ಪಬ್ಲಿಕ್ ಟಿವಿ ಡಿಜಿಟಲ್ ಮಾಧ್ಯಮದಲ್ಲಿ ಪ್ರಸಾರ ಮಾಡಿತ್ತು. ಆದರೆ ಈ ವರದಿಯ ಲಿಂಕ್ ಅನ್ನು ಹುಬ್ಬಳ್ಳಿ ಧಾರವಾಡ ಪೊಲೀಸರು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿ ಇದು ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದರು.

    ಇದಕ್ಕೆ ಪೊಲೀಸರ ಬಗ್ಗೆ ಮೃತ ನಿಖಿಲ್ (Nikhil Suicide) ಕುಟುಂಬಸ್ಥರು ಆರೋಪ ಮಾಡಿರುವ ವೀಡಿಯೋವನ್ನು ರೀ ಎಕ್ಸ್ ಮಾಡಲಾಗಿತ್ತು. ಪಬ್ಲಿಕ್ ಟಿವಿ ರೀಎಕ್ಸ್‌ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೊಲೀಸರು, ಕೇಶ್ವಾಪುರ ಠಾಣೆ ಪಿಐ ಸಾತೇನಳ್ಳಿ ಮತ್ತು ಎಎಸ್‍ಐ ಜಯಶ್ರೀ ಮತ್ತು ಪತ್ನಿ ಪ್ರೀತಿ ಸೇರಿದಂತೆ ಒಟ್ಟು 8 ಜನರ ಮೇಲೆ ಎಫ್‍ಐಆರ್ ದಾಖಲು ಮಾಡಿದ್ದಾರೆ.

    ಈ ಬಗ್ಗೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ನಿಖಿಲ್ ಪತ್ನಿ ಪ್ರೀತಿ, PI ಸಾತೇನಹಳ್ಳಿ ASI ಜಯಶ್ರೀ, ಪ್ರೀತಿ ತಂದೆ ಧನರಾಜ್, ತಾಯಿ ಮಂಜುಳಾ, ಸಂಬಂಧಿ ಆನಂದಪ್ಪ, ಆನಂದಪ್ಪನ ಪತ್ನಿ, ಜಯಶ್ರೀ ಸೇರಿದಂತೆ ಇತರ ಮೇಲೆ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಗಂಡ-ಹೆಂಡ್ತಿ ಜಗಳದಲ್ಲಿ ಸಂಧಾನಕ್ಕೆ ಬಂದು 2 ಲಕ್ಷ ನೀಡುವಂತೆ ಪೊಲೀಸ್ರು ತಾಕೀತು; ನಿಖಿಲ್ ಆತ್ಮಹತ್ಯೆ

    ಗಂಡ ಹೆಂಡತಿ ಜಗಳ ಬಗೆಹರಿಸಲು 2 ಲಕ್ಷಕ್ಕೆ ಬೇಡಿಕೆಯಿಟ್ಟಿರುವ ಆರೋಪ ಕೇಶ್ವಾಪುರ ಪೊಲೀಸರ ಮೇಲೆ ಕೇಳಿ ಬಂದಿತ್ತು. ಇದರಿಂದಾಗಿ ಮಾನಸಿಕ ಕಿರುಕುಳದಿಂದ ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ಕುಟುಂಬಸ್ಥರು ಆರೋಪಿಸಿದ್ದರು. ಐಪಿಸಿ ಸೆಕ್ಷನ್ 306‌ (ಆತ್ಮಹತ್ಯೆಗೆ ಪ್ರಚೋದನೆ), 149 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್ ಪೆಕ್ಟರ್ ಸಾತೇನಹಳ್ಳಿ, ASI ಜಯಶ್ರೀ ಚಲವಾದಿ ಹಣಕ್ಕೆ ಒತ್ತಾಯಿಸಿದ್ದಾರೆ ಎಂದು ಮೃತ ನಿಖಿಲ್ ಕುಟುಂಬಸ್ಥರು ನೀಡಿದ ದೂರಿನಲ್ಲಿ ಉಲ್ಲೇಖ ಮಾಡಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಡಹಗಲೇ ರೈಲ್ವೆ ನೌಕರನಿಗೆ ಚಾಕು ಇರಿತ!

    ಹಾಡಹಗಲೇ ರೈಲ್ವೆ ನೌಕರನಿಗೆ ಚಾಕು ಇರಿತ!

    ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಹಾಡಹಗಲೇ ಮಾರಕಾಸ್ತ್ರಗಳು ಸದ್ದು ಮಾಡಿವೆ. ದುಷ್ಕರ್ಮಿಗಳು ರೈಲ್ವೆ ನೌಕರನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ನಗರದ ರೇಲ್ವೆ ಶೆಡ್ ಮುಂಭಾಗದಲ್ಲಿ ನಡೆದಿದೆ.

    ಹುಬ್ಬಳ್ಳಿ – ಗದಗ ರಸ್ತೆಯಲ್ಲಿರುವ ಲೋಕೋ ಶೆಡ್ ಮುಂಭಾಗದಲ್ಲಿಯೇ ಚಂದ್ರಶೇಖರ್ ನಾಯ್ಡು ಎಂಬವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಮೂರ್ನಾಲ್ಕು ಬಾರಿ ಇರಿದಿದ್ದರಿಂದ ಅವರಿಗೆ ತೀವ್ರವಾಗಿ ರಕ್ತಸ್ರಾವವಾಗಿದೆ.

    ತಕ್ಷಣವೇ ಚಂದ್ರಶೇಖರ್ ಅವರನ್ನು ರೈಲ್ವೆ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳೀಯರು ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಧಾರವಾಡದ ಸತ್ತೂರ ಬಳಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಕೇಶ್ವಾಪುರ ಠಾಣೆಯ ಇನ್ಸ್‍ಪೆಕ್ಟರ್ ಜಗದೀಶ್ ಹಂಚಿನಾಳ ಸ್ಥಳಕ್ಕೆ ಆಗಮಿಸಿ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಇದನ್ನೂ ಓದಿ:  ಎರಡು ದಿನಗಳಲ್ಲಿ 20ಕ್ಕೂ ಹೆಚ್ಚು ಮನೆಗಳ್ಳತನ – ಆತಂಕದಲ್ಲಿ ಗಡಿಭಾಗದ ಜನರು

    ಘಟನೆಯ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.