Tag: Kevin Pietersen

  • ಪ್ಯಾನ್ ಕಾರ್ಡ್ ಕಳೆದುಕೊಂಡ ಪೀಟರ್ಸನ್‌ಗೆ ಸಹಾಯ ಮಾಡಿದ ಭಾರತೀಯ ತೆರಿಗೆ ಇಲಾಖೆ

    ಪ್ಯಾನ್ ಕಾರ್ಡ್ ಕಳೆದುಕೊಂಡ ಪೀಟರ್ಸನ್‌ಗೆ ಸಹಾಯ ಮಾಡಿದ ಭಾರತೀಯ ತೆರಿಗೆ ಇಲಾಖೆ

    ನವದೆಹಲಿ: ಇಂಗ್ಲೆಂಡ್‌ನ ಮಾಜಿ ನಾಯಕ ಕೆವಿನ್ ಪೀಟರ್ಸನ್ ಅವರು ಭಾರತಕ್ಕೆ ಭೇಟಿ ನೀಡಲು ಬೇಕಾದ ಪ್ಯಾನ್ ಕಾರ್ಡ್‌ನ್ನು ಕಳೆದುಕೊಂಡಿದ್ದರು. ಈ ಬಗ್ಗೆ ಯಾರದರೂ ಸಹಾಯ ಮಾಡುವ ಬಗ್ಗೆ ಟ್ವೀಟ್ ಮಾಡಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿದ್ದರು. ಇದಕ್ಕೆ ಈಗ ಭಾರತೀಯ ಆದಾಯ ತೆರಿಗೆ ಇಲಾಖೆ ಸಹಾಯ ಮಾಡಿದೆ.

    ಪೀಟರ್ಸನ್ ಅವರು ಅಂತಾರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿ ಪಡೆದ ನಂತರ ಐಪಿಎಲ್ ಪಂದ್ಯಕ್ಕಾಗಿ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ಯಾನ್ ಕಾರ್ಡ್‌ನ್ನು ಕಳೆದುಕೊಂಡಿರುವ ಬಗ್ಗೆ ದುಃಖವನ್ನು ಹಂಚಿಕೊಂಡಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?: ಭಾರತ ದಯವಿಟ್ಟು ಸಹಾಯ ಮಾಡಿ, ನಾನು ನನ್ನ ಪ್ಯಾನ್ ಕಾರ್ಡ್ ಅನ್ನು ಕಳೆದುಕೊಂಡಿದ್ದೇನೆ ಮತ್ತು ಸೋಮವಾರ ಭಾರತಕ್ಕೆ ಪ್ರಯಾಣಿಸುತ್ತಿದ್ದೇನೆ. ಆದರೆ ಕೆಲಸಕ್ಕಾಗಿ ನನಗೆ ಪ್ಯಾನ್ ಕಾರ್ಡ್ ಅಗತ್ಯವಿದೆ. ದಯವಿಟ್ಟು ನನಗೆ ಸಹಾಯ ಮಾಡಲು ನಾನು ಆದಷ್ಟು ಬೇಗ ಸಂಪರ್ಕಿಸಬಹುದಾದ ಯಾರಿಗಾದರೂ ದಯವಿಟ್ಟು ನನ್ನನ್ನು ನಿರ್ದೇಶಿಸಬಹುದೇ? ಎಂದು ತಿಳಿಸಿದ್ದಾರೆ. ಪೀಟರ್ಸನ್ ನಂತರ ತಮ್ಮ ಟ್ವೀಟ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ಯಾಗ್ ಮಾಡಿದ್ದಾರೆ. ದನ್ನೂ ಓದಿ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಿಜೆಪಿ ಯತ್ನ: ಸಂಜಯ್ ರಾವತ್

    ಈ ಬಗ್ಗೆ ಭಾರತೀಯ ಆದಾಯ ತೆರಿಗೆ ಇಲಾಖೆಯೆ ಅಧಿಕೃತ ಖಾತೆ ಪ್ರತಿಕ್ರಿಯಿಸಿದ್ದು ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ನಿಮ್ಮ ಪ್ಯಾನ್ ವಿವರಗಳಿದ್ದರೆ, ಪ್ಯಾನ್ ಕಾರ್ಡ್‌ನ್ನು ನಕಲು ಇದ್ದರೆ ಅರ್ಜಿ ಸಲ್ಲಿಸುವ ವಿಧಾನಕ್ಕಾಗಿ ದಯವಿಟ್ಟು ಈ ಲಿಂಕ್‌ಗಳಿಗೆ ಭೇಟಿ ನೀಡಿ ಎಂದು ತಿಳಿಸಿದೆ. ಇದಕ್ಕೆ ಧನ್ಯವಾದ ತಿಳಿಸಿರುವ ಪೀಟರ್ಸನ್ ಅವರು ಮಾಹಿತಿಗಳನ್ನು ಇಮೇಲ್ ಮಾಡಿರುವುದಾಗಿ ತಿಳಿಸಿದ್ದಾರೆ. ದನ್ನೂ ಓದಿ: ಬಿಜೆಪಿ ಬೆಂಗಾವಲು ಪಡೆ ಮೇಲೆ ಎಸ್‍ಪಿ ಗೂಂಡಾಗಳಿಂದ ದಾಳಿ: ಕೇಶವ್ ಪ್ರಸಾದ್ ಮೌರ್ಯ

    ಮಾಜಿ ಇಂಗ್ಲೆಂಡ್ ನಾಯಕ ಪೀಟರ್ಸನ್‌ಗೆ ಟ್ವಿಟರ್‌ನಲ್ಲಿ ಸುಮಾರು 3.8 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಕಳೆದ ತಿಂಗಳ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ಕೊನೆಯ ಬಾರಿಗೆ ಪೀಟರ್ಸನ್ ಕಾಣಿಸಿಕೊಂಡಿದ್ದರು. ಇವರು ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಕ್ಕನ್ ಚಾರ್ಜರ್ಸ್, ಸನ್‌ರೈಸರ್ಸ್ ಹೈದರಾಬಾದ್, ರೈಸಿಂಗ್ ಪುಣೆ ಸೂಪರ್‌ಜೈಂಟ್, ಡೆಲ್ಲಿ ಕ್ಯಾಪಿಟಲ್ಸ್ ಪರ ಆಟವಾಡಿದ್ದಾರೆ.

  • ಕೊಹ್ಲಿಯನ್ನು ಹಾಡಿಹೊಗಳಿದ ಕೇವಿನ್ ಪೀಟರ್ಸನ್

    ಕೊಹ್ಲಿಯನ್ನು ಹಾಡಿಹೊಗಳಿದ ಕೇವಿನ್ ಪೀಟರ್ಸನ್

    ಮುಂಬೈ: ಈ ಬಾರಿಯ ಐಪಿಎಲ್‍ನಲ್ಲಿ ಆರ್​ಸಿಬಿ ತಂಡದ ನಿರ್ವಹಣೆ ಕಂಡು ಸಂತೋಷಗೊಂಡಿರುವ ಇಂಗ್ಲೆಂಡ್‍ನ ಮಾಜಿ ಆಟಗಾರ ಕೇವಿನ್ ಪೀಟರ್ಸನ್ ಆರ್​ಸಿಬಿ ಕಪ್ತಾನ ವಿರಾಟ್ ಕೊಹ್ಲಿಯನ್ನು ಹಾಡಿಹೊಗಳಿದ್ದಾರೆ.

    ನಿಜಕ್ಕೂ 14ನೇ ಆವೃತ್ತಿ ಐಪಿಎಲ್‍ನಲ್ಲಿ ಆರ್​ಸಿಬಿ ತಂಡದ ನಿರ್ವಹಣೆ ಕಂಡು ಅಚ್ಚರಿಯಾಗಿದೆ. ಅದರಲ್ಲೂ ಬೌಲಿಂಗ್ ಸೈಡ್ ಅಂತೂ ತುಂಬಾನೆ ಬದಲಾವಣೆಯೊಂದಿಗೆ ಬಲಿಷ್ಠವಾಗಿ ಗೋಚರಿಸುತ್ತಿದೆ. ಹಾಗಾಗಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಈ ಕುರಿತು ಮಾಧ್ಯಮವೊಂದರ ಚರ್ಚೆಯಲ್ಲಿ ಭಾಗವಹಿಸಿದ ಪೀರ್ಟಸನ್, ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ತಂಡದ ನಾಯಕನಾಗಿ ತಂಡವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದು, ಸರಿಯಾದ ನಿರ್ಧಾರಗಳನ್ನು ತೆಗೆದುಕೊಂಡು ಮುನ್ನುಗುತ್ತಿದ್ದಾರೆ ಹಾಗಾಗಿ ಆಡಿದ ನಾಲ್ಕು ಪಂದ್ಯವನ್ನು ಗೆದ್ದುಕೊಂಡು 8 ಅಂಕದೊಂದಿಗೆ ಅಗ್ರಸ್ಥಾನದಲ್ಲಿದೆ ಎಂದು ಕೊಹ್ಲಿಯ ಪರ ಹೊಗಳಿಕೆಯ ಮಾತನಾಡಿದ್ದಾರೆ.

    ಆರ್​ಸಿಬಿ ತಂಡ ಡೆತ್ ಓವರ್‍ ಗಳಲ್ಲಿ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಎದುರಾಳಿ ತಂಡವನ್ನು ಬಗ್ಗಬಡಿಯುತ್ತಿದೆ. ಪ್ರತಿ ಸೀಸನ್‍ನ್ನು ಗಮನಿಸಿದರು ಕೂಡ ಆರ್​ಸಿಬಿ ತಂಡದ ಬ್ಯಾಟಿಂಗ್ ಲೈನ್ ಅಪ್ ತುಂಬಾ ಬಲಿಷ್ಠವಾಗಿ ಗೋಚರಿಸುತ್ತಿತ್ತು. ಆದರೆ ಈ ಬಾರಿ ಆರ್​ಸಿಬಿ ಬೌಲರ್‍ ಗಳು ಉತ್ತಮ ಪ್ರದರ್ಶನದಿಂದ ಸದ್ದು ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಆರ್​ಸಿಬಿ ತಂಡದ ಯುವ ಬೌಲರ್ ಮೊಹಮ್ಮದ್ ಸಿರಾಜ್ ಬಗ್ಗೆ ಮಾತನಾಡಿರುವ ಪೀಟರ್ಸನ್, ಸಿರಾಜ್ ಒಬ್ಬ ವಿಶಿಷ್ಟವಾದ ಬೌಲರ್. ಆವರಿಗೆ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಸಿಕ್ಕಿರುವ ಅನುಭವವನ್ನು ಇದೀಗ ಐಪಿಎಲ್‍ನಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಇವರಿಗೆ ಕೈಲ್ ಜೇಮಿಸನ್ ಉತ್ತಮ ಸಹಾಯಕ ಬೌಲರ್ ಆಗಿದ್ದು, ಹರ್ಷಲ್ ಪಟೇಲ್ ಡೆತ್ ಓವರ್‍ ಗಳಲ್ಲಿ ಮ್ಯಾಜಿಕ್ ಮಾಡುತ್ತಿದ್ದಾರೆ. ಇವರೊಂದಿಗೆ ವಾಷಿಂಗ್ಟನ್ ಸುಂದರ್ ಮತ್ತು ಶಹಬಾಜ್ ಅಹ್ಮದ್ ಕೂಡ ಉತ್ತಮ ಲಯದಲ್ಲಿದ್ದಾರೆ ಎಂದು ಅಭಿಪ್ರಾಯ ಹಂಚಿಕೊಂಡರು.

    ಕೇವಿನ್ ಪೀಟರ್ಸನ್ ಈ ಹಿಂದೆ ಐಪಿಎಲ್‍ನಲ್ಲಿ ಆರ್​ಸಿಬಿ ತಂಡದ ಪರ ಆಟವಾಡಿದ್ದರು. ಹಾಗಾಗಿ ಆರ್​ಸಿಬಿ ತಂಡದ ಕುರಿತು ಸರಿಯಾದ ಮಾಹಿತಿ ಹೊಂದಿರುವ ಪೀಟರ್ಸನ್ ಈ ಬಾರಿಯ ಅವರ ಆಟದ ಕುರಿತು ಮೆಚ್ಚುಗೆ ಸೂಚಿಸಿದ್ದಾರೆ.

  • ‘ಈ ಮಗುವಿಗೆ ಸಲಹೆಗಳೇ ಬೇಡ’- ಪುಟ್ಟ ಪೋರನ ಬ್ಯಾಟಿಂಗ್‍ಗೆ ಪೀಟರ್ಸನ್ ಫಿದಾ

    ‘ಈ ಮಗುವಿಗೆ ಸಲಹೆಗಳೇ ಬೇಡ’- ಪುಟ್ಟ ಪೋರನ ಬ್ಯಾಟಿಂಗ್‍ಗೆ ಪೀಟರ್ಸನ್ ಫಿದಾ

    ಲಂಡನ್: ಹೆಮ್ಮಾರಿ ಕೊರೊನಾ ವೈರಸ್‍ನಿಂದಾಗಿ ಅನೇಕ ಕ್ರೀಡಾಕೂಟ, ಟೂರ್ನಿಗಳು ರದ್ದುಗೊಂಡಿವೆ ಅಥವಾ ಮುಂದೂಡಲ್ಪಟ್ಟಿವೆ. ಹೀಗಾಗಿ ಆಟಗಾರರು, ಕ್ರೀಡಾಪಟುಗಳು ಮನೆಯಲ್ಲೇ ಕಾಲ ಕಳೆಯುತ್ತಿದ್ದಾರೆ. ಇಂತಹ ಸಮಯದಲ್ಲಿ ಕೆಲವರು ಯುವ ಪ್ರತಿಭೆಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಆಟದ ತಂತ್ರ, ನಿಯಮಗಳನ್ನು ಹೇಳಿಕೊಡುತ್ತಿದ್ದಾರೆ.

    ಅಂಥೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಆಕ್ರಮನಕಾರಿ ಬ್ಯಾಟ್ಸ್‌ಮನ್ ಕೂಡ ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ಯುವ ಕ್ರಿಕೆಟರ್ ಗಳ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ. ಜೊತೆಗೆ ಒಂದಿಷ್ಟು ಬ್ಯಾಟಿಂಗ್ ತಂತ್ರಗಳನ್ನು ತಿಳಿಸಿಕೊಡುತ್ತಿದ್ದಾರೆ. ಆದರೆ ಪೀಟರ್ಸನ್ ”ಈ ಮಗುವಿಗೆ ಯಾವುದೇ ಸಲಹೆಗಳೇ ಬೇಡ” ಎಂದು ಟ್ವಿಟ್ಟರ್‌ನಲ್ಲಿ ಒಂದು ವಿಡಿಯೋಗೆ ಪ್ರತಿಕ್ರಿಯೆ ನೀಡಿದ್ದಾರೆ.

    https://twitter.com/KP24/status/1253643460357369856

    ಶಾಹಿದ್ ಎಂಬ ಪುಟ್ಟ ಪೋರ, ತಾನು ಬ್ಯಾಟಿಂಗ್ ಮಾಡುತ್ತಿರುವ 1 ನಿಮಿಷ 17 ಸೆಂಕೆಡ್ ಇರುವ ವಿಡಿಯೋವನ್ನು ಟ್ವಿಟ್ ಮಾಡಿದ್ದಾನೆ. ಇದನ್ನು ನೋಡಿದ ಕೇವಿನ್ ಪೀಟರ್ಸನ್ ಫುಲ್ ಫಿದಾ ಆಗಿದ್ದಾರೆ. ”ನನ್ನ ಯೂಟ್ಯೂಬ್ ಚಾನೆಲ್‍ನಲ್ಲಿ ಈ ಹುಡುಗನ ಜೊತೆಗೆ 45 ನಿಮಿಷ ಲೈವ್‍ನಲ್ಲಿದ್ದೆ. ಈ ಮಗುವಿಗೆ ಯಾವುದೇ ರೀತಿಯ ಸಲಹೆಗಳ ಅಗತ್ಯವೇ ಇಲ್ಲ ಎನ್ನುವುದು ನನ್ನ ಅಭಿಪ್ರಾಯ. ಅವನು ಎಲ್ಲ ಕೌಶಲ್ಯಗಳನ್ನು ಹೊಂದಿದ್ದಾನೆ” ಎಂದು ತಿಳಿಸಿದ್ದಾರೆ.

    ಪಶ್ಚಿಮ ಬಂಳಾದ ಈ ಪುಟ್ಟ ಪೋರ ಮೂರು ವರ್ಷದವನಾಗಿದ್ದು, ಭಾರತ ಸೇರಿದಂತೆ ವಿದೇಶಿ ಕ್ರಿಕೆಟರ್‌ಗಳ ಮನ ಗೆದ್ದಿದ್ದಾನೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಾಲಕ ಶಾಹಿದ್‍ಗೆ ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಬೌಲಿಂಗ್ ಮಾಡಿದ್ದರು. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಾಲಕನ ಬ್ಯಾಟಿಂಗ್‍ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಸ್ಟೀವ್ ವಾ ಅವರು ಬಾಲಕ ಶಾಹಿದ್‍ನನ್ನು ಕೋಲ್ಕತ್ತಾದಲ್ಲಿ ಭೇಟಿಯಾಗಿ, ಆತನನ್ನು ಎತ್ತಿ ಮುದ್ದಾಡಿದ್ದರು.

    https://twitter.com/Shahid68577153/status/1237440118224379904

    ಶಾಹಿದ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾಡಬೇಕು. ಆ ದಿನಕ್ಕಾಗಿ ನಾನು ಕಾಯುತ್ತಿದ್ದೇನೆ ಎಂದು ಬಾಲಕನ ತಂದೆ ಈ ಹಿಂದೆ ಸಂದರ್ಶನವೊಂದರಲ್ಲಿ ಹೇಳಿದ್ದರು. ಶಾಹಿದ್ ಕೂಡ ಅಷ್ಟೇ ಶ್ರದ್ಧೆಯಿಂದ ಅಭ್ಯಾಸದಲ್ಲಿ ತೊಡಗಿದ್ದಾನೆ.

  • ‘ಐಪಿಎಲ್ ನಡೆಯಲೇಬೇಕು’: ಟೂರ್ನಿ ನಡೆಸುವ ಬಗ್ಗೆ ಪೀಟರ್ಸನ್ ಸಲಹೆ

    ‘ಐಪಿಎಲ್ ನಡೆಯಲೇಬೇಕು’: ಟೂರ್ನಿ ನಡೆಸುವ ಬಗ್ಗೆ ಪೀಟರ್ಸನ್ ಸಲಹೆ

    ಮುಂಬೈ: ವಿಶ್ವಾದ್ಯಂತ ಹಾಗೂ ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿ ತೊಂದರೆಗೆ ಸಿಲುಕಿದೆ. ಆದರೆ ಏನೇ ಆದರೂ ಈ ಬಾರಿಯ ಟೂರ್ನಿ ನಡೆಯಲೇ ಬೇಕು ಅಂತ ಮಾಜಿ ಇಂಗ್ಲೆಂಡ್ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಟೂರ್ನಿ ನಡೆಸುವ ಬಗ್ಗೆ ಸಲಹೆ ಕೂಡ ನೀಡಿದ್ದಾರೆ.

    ಖಾಲಿ ಮೈದಾನ, ಕ್ರಿಕೆಟ್ ಅಭಿಮಾನಿಗಳಿಲ್ಲದ ಮೂರು ಸುರಕ್ಷಿತ ಕ್ರೀಡಾಂಗಣಗಳಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಇಲ್ಲಿಯೇ ಟೂರ್ನಿ ನಡೆಸಬೇಕು. ಇದರಿಂದ ಪ್ರೇಕ್ಷಕರ ಜೀವಕ್ಕೆ ಯಾವುದೇ ಅಪಾಯವಿಲ್ಲ ಇರುವುದಿಲ್ಲ ಎಂದು ಪಿಟರ್ಸನ್ ಸಲಹೆ ನೀಡಿದ್ದಾರೆ.

    ಐಪಿಎಲ್ ಟೂರ್ನಿ ಮೂರು ಅಥವಾ ನಾಲ್ಕು ವಾರಗಳಲ್ಲಿ ಕೊನೆಗೊಳ್ಳಬೇಕು. ಹೀಗಾಗಿ ಈ ಬಾರಿ ಐಪಿಎಲ್‍ನ ಸ್ವರೂಪವೂ ಚಿಕ್ಕದಾಗಿರಬೇಕು ಎಂದು ಪೀಟರ್ಸನ್ ಸಲಹೆ ನೀಡಿದ್ದಾರೆ.

    ಕೊರೊನಾ ವೈರಸ್ ಹಾಗೂ ವಿದೇಶಿ ಆಟಗಾರರಿಗೆ ವೀಸಾ ನಿರ್ಬಂಧದಿಂದಾಗಿ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮಾರ್ಚ್ 29ರಿಂದ ಏಪ್ರಿಲ್ 15ರವರೆಗೆ ಮುಂದೂಡಿದೆ. ಮೊದಲ ಪಂದ್ಯ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಬೇಕಿತ್ತು.

    “ಜುಲೈ-ಆಗಸ್ಟ್‍ನಲ್ಲಿ ಕ್ರೀಡಾ ಚಟುವಟಿಕೆ ಆರಂಭವಾಗಬೇಕು. ಐಪಿಎಲ್‍ನ 13ನೇ ಆವೃತ್ತಿಯನ್ನು ಸಹ ನಡೆಸಬೇಕು ಎಂದು ಬಯಸುತ್ತೇನೆ. ವಿಶ್ವದ ಪ್ರತಿಯೊಬ್ಬ ಆಟಗಾರನೂ ಇದನ್ನೇ ಬಯಸುತ್ತಿದ್ದಾರೆ. ಅವರು ಸಹ ಟೂರ್ನಿಯಲ್ಲಿ ಆಡಲೇಬೇಕು ಎನ್ನುವ ಇಚ್ಛೆಯನ್ನು ಹೊಂದಿದ್ದಾರೆ. ಆಟಗಾರರು ಮತ್ತು ಫ್ರಾಂಚೈಸಿಗಳ ಜೊತೆಗೆ ತೆರೆಮರೆಯಲ್ಲಿ ಕೆಲಸ ಮಾಡುವವರಿಗೆ ಐಪಿಎಲ್ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ಫ್ರ್ಯಾಂಚೈಸಿ ಸ್ವಲ್ಪ ಹಣವನ್ನು ಉಳಿಸುವ ಮಾರ್ಗವನ್ನು ಸಹ ಕಂಡುಕೊಳ್ಳಬೇಕು. ಉದಾಹರಣೆಗೆ ಎಲ್ಲಾ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೆ ಮೂರು ಸುರಕ್ಷಿತ ಕ್ರೀಡಾಂಗಣಗಳಲ್ಲಿ ನಡೆಸಲಾಗುತ್ತದೆ. ಹೀಗಾಗಿ ಟೂರ್ನಿಯನ್ನು ಮೂರು ಅಥವಾ ನಾಲ್ಕು ವಾರಗಳಿಗೆ ಕಡಿತಗೊಳಿಸಬಹುದು” ಎಂದು ಸಲಹೆ ನೀಡಿದ್ದಾರೆ.

    ಭಾರತದ ಮಾಜಿ ಬ್ಯಾಟ್ಸ್‌ಮನ್ ಸಂಜಯ್ ಮಂಜ್ರೇಕರ್ ಕೂಡ ಐಪಿಎಲ್‍ನ ಮಹತ್ವವನ್ನು ವ್ಯಕ್ತಪಡಿಸಿದ್ದಾರೆ. ಪೀಟರ್ಸನ್ ಅವರ ಸಲಹೆಗೆ ಸಹಮತ ನೀಡಿರುವ ಮಂಜ್ರೇಕರ್, ಸರ್ಕಾರ, ಮಂಡಳಿ ಮತ್ತು ಫ್ರಾಂಚೈಸಿಗಳು ಸೇರಿದಂತೆ ಇತರ ಎಲ್ಲಾ ಸಂಬಂಧಿತ ಸಂಸ್ಥೆಗಳಿಂದ ಒಪ್ಪಿಗೆ ಪಡೆದು ಐಪಿಎಲ್ ನಡೆಸಬೇಕು. ಇದು ವಿಶೇಷ ಆರ್ಥಿಕತೆಯನ್ನು ಸಹ ಪ್ರಾರಂಭಿಸುತ್ತದೆ. ಏಕೆಂದರೆ ಈ ಟೂರ್ನಿ ನಡೆಬೇಕಾಗಿರುವುದು ಮುಂಬೈ ಇಂಡಿಯನ್ಸ್, ಎಂ.ಎಸ್.ಧೋನಿ ಅಥವಾ ವಿರಾಟ್ ಕೊಹ್ಲಿ ಅವರಿಗಾಗಿ ಅಷ್ಟೇ ಅಲ್ಲ. ಐಪಿಎಲ್‍ನಿಂದ ಉದ್ಯೋಗ ಪಡೆಯುವವರಿಗೆ ಟೂರ್ನಿ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

    ಇದೇ ವಿಚಾರವಾಗಿ ಮಾತನಾಡಿರುವ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟ್ ಜಸ್ಟಿನ್ ಲ್ಯಾಂಗರ್, ನೀವು ಕ್ರಿಕೆಟ್ ಆಡಲು ಪ್ರಾರಂಭಿಸಿದಾಗ ನಿಮ್ಮ ಮುಂದೆ ಜನಸಂದಣಿ ಇರುತ್ತಿರಲಿಲ್ಲ. ಆಗಲೇ ಕ್ರಿಕೆಟ್ ಆಡಿದ್ದೀರಿ. ಏಕೆಂದರೆ ನೀವು ಆಟವನ್ನು ಇಷ್ಟಪಡುತ್ತೀರಿ. ನಿಮ್ಮ ತಂಡದ ಆಟಗಾರರೊಂದಿಗೆ ಆಡಲು ಇಷ್ಟಪಡುತ್ತೀರಿ. ಈ ಆಟದ ಪ್ರೀತಿಯಿಂದಾಗಿ ಇಂದು ಹೆಚ್ಚಿನ ಜನರು ಟಿವಿ ಮಾಧ್ಯಮ ಮತ್ತು ರೇಡಿಯೋ ಮೂಲಕ ಜನರನ್ನು ರಂಜಿಸಲು ಸಮರ್ಥರಾಗಿದ್ದೀರಿ. ಇದಕ್ಕಾಗಿಯೇ ಖಾಲಿ ಕ್ರೀಡಾಂಗಣದಲ್ಲಿ ಪಂದ್ಯವನ್ನು ನಡೆಸುವುದು ಮುಖ್ಯವಾಗಿದೆ. ಇದು ಸ್ವಲ್ಪ ವಿಭಿನ್ನವಾಗಿರುತ್ತದೆ. ಆದರೆ ನಾವೆಲ್ಲರೂ ಎಷ್ಟು ಅದೃಷ್ಟವಂತರು ಎಂಬುದನ್ನು ಎಂದಿಗೂ ನಿರ್ಲಕ್ಷಿಸಬಾರದು ಎಂದು ಐಪಿಎಲ್ ಟೂರ್ನಿ ನಡೆಸುವ ಬಗ್ಗೆ ಸಲಹೆ ನೀಡಿದ್ದಾರೆ.

  • ನಿಮ್ಮ ನಾಯಕತ್ವವು ಕೂಡ ತುಂಬಾ ಸ್ಫೋಟಕವಾಗಿದೆ ಮೋದಿಜೀ- ಪೀಟರ್ಸನ್

    ನಿಮ್ಮ ನಾಯಕತ್ವವು ಕೂಡ ತುಂಬಾ ಸ್ಫೋಟಕವಾಗಿದೆ ಮೋದಿಜೀ- ಪೀಟರ್ಸನ್

    ನವದೆಹಲಿ: ವಿಶ್ವದ ಎಲ್ಲೆಡೆ ಹರಡುತ್ತಿರುವ ಕೊರೊನಾ ವೈರಸ್ ವಿರುದ್ಧ ಹೋರಾಡಲು ಇಂಗ್ಲೆಂಡ್ ಮಾಜಿ ಸ್ಫೋಟಕ ಬ್ಯಾಟ್ಸ್ ಮ್ಯಾನ್ ಕೇವಿನ್ ಪೀಟರ್ಸನ್ ಹಿಂದಿಯಲ್ಲಿ ಟ್ವೀಟ್ ಮಾಡಿ ಕರೆಕೊಟ್ಟಿದ್ದು, ಇದಕ್ಕೆ ಪ್ರಧಾನಿ ಮೋದಿ ಅವರು ಫಿದಾ ಆಗಿದ್ದಾರೆ.

    ಕೊರೊನಾ ವೈರಸ್ ಮಹಾಮಾರಿ ವಿಶ್ವದಾದ್ಯಂತ ತನ್ನ ಅರ್ಭಟವನ್ನು ಶುರು ಮಾಡಿದೆ. ಕೊರೊನಾ ಪರಿಣಾಮದಿಂದ ಜಗತ್ತಿನ ಬಹುತೇಕ ಚುಟುವಟಿಕೆಗಳು ಸ್ತಬ್ಧವಾಗಿವೆ. ಕ್ರಿಕೆಟ್ ಕೂಡ 60 ವರ್ಷದ ನಂತರ ತನ್ನ ಎಲ್ಲ ಚುಟುವಟಿಕೆಯನ್ನು ನಿಲ್ಲಿಸಿದೆ. ಇದರ ಮಧ್ಯೆ ಕ್ರಿಕೆಟಿಗರು ಮನೆಯಲ್ಲೇ ತಮ್ಮನ್ನು ತಾವೇ ಪ್ರತ್ಯೇಕವಾಗಿದ್ದು ಕೊರೊನಾ ವಿರುದ್ಧ ಹೋರಾಡಲು ಸಿದ್ಧವಾಗಿ ಎಂದು ಸಂದೇಶ ರವಾನಿಸುತ್ತಿದ್ದಾರೆ.

    https://twitter.com/KP24/status/1240903502345486336

    ಈ ವಿಚಾರವಾಗಿ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಕೇವಿನ್ ಪೀಟರ್ಸನ್ ಹಿಂದಿಯಲ್ಲಿ ಒಂದು ಟ್ವೀಟ್ ಮಾಡಿದ್ದು, ಭಾರೀ ವೈರಲ್ ಆಗಿದೆ. ನಮಸ್ಕಾರ ಭಾರತ, ನಾವು ಕೊರೊನಾ ವೈರಸ್ ಅನ್ನು ಹೋಗಾಲಾಡಿಸಲು ಒಂದಾಗಬೇಕಿದೆ. ನಾವು ನಮ್ಮ ನಮ್ಮ ಸರ್ಕಾರ ನೀಡುವ ಆದೇಶದಂತೆ ಸ್ವಲ್ಪ ದಿನಗಳ ಕಾಲ ಮನೆಯಲ್ಲೇ ಇರಬೇಕು. ನಾವೂ ಜಾಗರೂಕತೆಯಿಂದ ಇರಬೇಕಾದ ಸಮಯವಿದು ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

    ಕೇವಿನ್ ಪೀಟರ್ಸನ್ ಅವರು ಬೇರೆ ದೇಶದವರು ಅದರೂ ನಮ್ಮ ದೇಶದ ಮೇಲಿನ ಕಾಳಜಿಯಿಂದ ಹಿಂದಿಯಲ್ಲಿ ಟ್ವೀಟ್ ಮಾಡಿದ್ದನ್ನು ನೋಡಿ ಖುಷಿಯಾದ ಮೋದಿ ಅವರು, ಪೀಟರ್ಸನ್ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ. ಹಲವು ಬಿಕ್ಕಟ್ಟುಗಳ ಸಮಯದಲ್ಲಿ ತಮ್ಮ ತಂಡವನ್ನು ನೋಡಿದ ಸ್ಫೋಟಕ ಬ್ಯಾಟ್ಸ್ ಮ್ಯಾನ್ ನಮಗಾಗಿ ಏನನ್ನೋ ಹೇಳುತ್ತಿದ್ದಾರೆ ಕೇಳಿ ಎಂದು ಬರೆದು, ನಾವೂ ಕೂಡ ಕೊರೊನಾ ವೈರಸ್ ವಿರುದ್ಧ ಹೋರಾಡಲು ಒಗ್ಗೂಡುತ್ತೇವೆ ಎಂದು ಹೇಳಿದ್ದಾರೆ.

    https://twitter.com/KP24/status/1240989666733707266

    ಮೋದಿ ಅವರು ಟ್ವೀಟ್‍ಗೆ ಮತ್ತೆ ರೀಟ್ವೀಟ್ ಮಾಡಿರುವ ಕೇವಿನ್ ಪೀಟರ್ಸನ್ ಅವರು, ಧನ್ಯವಾದಗಳು ಮೋದಿ ಜೀ, ನಿಮ್ಮ ನಾಯಕತ್ವ ಕೂಡ ಬಹಳ ಸ್ಫೋಟಕವಾಗಿದೆ ಎಂದು ಬರೆದುಕೊಂಡಿದ್ದಾರೆ. ಕೊರೊನಾ ವಿರುದ್ಧ ಹೋರಾಡುವಂತೆ ಮತ್ತು ಸರ್ಕಾರದ ಸೂಚನೆಯಂತೆ ನಡೆಯುವಂತೆ ಎಲ್ಲಾ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣದಲ್ಲಿ ಕರೆಕೊಡುತ್ತಿದ್ದಾರೆ.

    ಶನಿವಾರ ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಕೂಡ ವಿಡಿಯೋ ಮಾಡಿ ಸಂದೇಶ ನೀಡಿದ್ದರು. ಈಗ ನಾವೆಲ್ಲ ಬಹಳ ಕಠಿಣ ಪರಿಸ್ಥಿತಿಯಲ್ಲಿ ಇದ್ದೇವೆ. ನಾವೆಲ್ಲ ಸೇರಿ ಕೊರೊನಾ ವೈರಸ್ ಅನ್ನು ತಡೆಹಿಡಿಯಬೇಕಿದೆ. ನಾವು ನಮ್ಮ ಸುರಕ್ಷತೆಗಾಗಿ ಮನೆಯಲ್ಲೇ ಇದ್ದೇವೆ. ಹಾಗೇ ನೀವು ಕೂಡ ನಿಮ್ಮ ಸುರಕ್ಷತೆಗೆ ಮನೆಯಲ್ಲೇ ಇರಿ. ನಾವೆಲ್ಲರೂ ಸೇರಿ ಕೊರೊನಾ ಹರಡುವಿಕೆಯನ್ನು ತಡೆಗಟ್ಟಬೇಕು. ನಾವಾಗಿಯೇ ಐಸೋಲೇಷನ್‍ನಲ್ಲಿ ಇರೋಣ ಎಂದು ವಿರುಷ್ಕಾ ಜೋಡಿ ಮನವಿ ಮಾಡಿಕೊಂಡಿದ್ದರು.

    ಕೊರೊನಾ ವೈರಸ್ ವಿರುದ್ಧ ಹೋರಾಡಲು ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹಲವಾರು ನಿಯಮಗಳನ್ನು ಮಾಡುತ್ತಿದೆ. ಈ ವಿಚಾರವಾಗಿ ಶುಕ್ರವಾರ ಮಾತನಾಡಿದ್ದ ಮೋದಿ ಅವರು ಮಾರ್ಚ್ 22 ರ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಯಾರೂ ಹೊರಗಡೆ ಬರಬೇಡಿ. ಜನರೇ ಜನರಿಗಾಗಿ ಮಾಡುವ ಕರ್ಫ್ಯೂ ಇದಾಗಿದ್ದು, ನಾವು ಆರೋಗ್ಯವಾಗಿದ್ದರೆ ದೇಶ ಆರೋಗ್ಯದಲ್ಲಿರುತ್ತದೆ ಎಂದು ಮನವಿ ಮಾಡಿದ್ದಾರೆ.

  • 250 ರನ್ ಟಾರ್ಗೆಟ್ ಟೀಂ ಇಂಡಿಯಾಗೆ ಕಷ್ಟಸಾಧ್ಯ: ಮೆಕಲಮ್

    250 ರನ್ ಟಾರ್ಗೆಟ್ ಟೀಂ ಇಂಡಿಯಾಗೆ ಕಷ್ಟಸಾಧ್ಯ: ಮೆಕಲಮ್

    ಲಂಡನ್: 2019ರ ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಗೆಲ್ಲುವ ಅವಕಾಶ ಹೆಚ್ಚಾಗಿದ್ದು, ಮಳೆಯಿಂದ ಪಂದ್ಯ ಮುಂದೂಡಿರುವ ಪರಿಣಾಮ ಭಾರತಕ್ಕೆ 250 ರನ್ ಗಳ ಗುರಿ ಸಿಗಲಿದೆ ಎಂದು ಕಿವೀಸ್ ಮಾಜಿ ನಾಯಕ ಬ್ರೆಂಡನ್ ಮೆಕಲಮ್ ಅಭಿಪ್ರಾಯ ಪಟ್ಟಿದ್ದಾರೆ.

    ಇತ್ತಂಡಗಳ ನಡುವೆ ನಡೆಯುವ ಪಂದ್ಯಗಳಲ್ಲಿ 250 ರನ್ ಗುರಿ ಸಾಧಾರಣ. ಆದರೆ ವಿಶ್ವಕಪ್ ನಂತರ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಈ ಟಾರ್ಗೆಟ್ ಸವಾಲಿನಿಂದ ಇರಲಿದೆ ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿ ಕೇವಿನ್ ಪೀಟರ್ಸನ್ ಇನ್ನು 250 ರನ್ ಆಗಲಿಲ್ಲ ಎಂದು ಹೇಳಿದ್ದರು.

    https://twitter.com/Bazmccullum/status/1148692701681819651

    ಪೀಟರ್ಸನ್ ಅವರ ಟ್ವೀಟ್ ಮರುಪ್ರತಿಕ್ರಿಯೆ ನೀಡಿರುವ ಮೆಕಲಮ್, ಈ ಬಾರಿಯ ಟೂರ್ನಿಯಲ್ಲಿ ಎರಡು ತಂಡಗಳು (ಭಾರತ, ಬಾಂಗ್ಲಾದೇಶ) ಮಾತ್ರ 250 ಪ್ಲಸ್ ರನ್ ಗುರಿಯನ್ನು ಬೆನ್ನತ್ತಲು ಯಶಸ್ವಿಯಾಗಿದ್ದಾರೆ. ಈ ಎರಡು ತಂಡಗಳಿಗೆ ಆಗ ಸೆಮಿಫೈನಲ್ ಒತ್ತಡ ಇರಲಿಲ್ಲ ಎಂದು ತಂಡಕ್ಕೆ ಬೆಂಬಲ ನೀಡಿದ್ದಾರೆ.

    https://twitter.com/Bazmccullum/status/1148729916650688512

    ಅಂದಹಾಗೇ ಲೀಗ್ ಹಂತದಲ್ಲಿ ಭಾರತ ಮತ್ತು ಬಾಂಗ್ಲಾದೇಶ 250 ಪ್ಲಸ್ ರನ್‍ಗಳನ್ನು ಗುರು ಬೆನ್ನತ್ತಲು ಯಶಸ್ವಿಯಾಗಿದ್ದರು. ವೆಸ್ಟ್ ಇಂಡೀಸ್ ವಿರುದ್ಧ 322 ರನ್ ಹಾಗೂ ಶ್ರೀಲಂಕಾ ತಂಡದ ವಿರುದ್ಧ ಭಾರತ 265 ರನ್ ಳನು ಬೆನತ್ತಿ ಗೆಲುವು ಪಡೆದಿದ್ದರು. ಸದ್ಯ ಮೆಕಲಮ್ ಅಭಿಪ್ರಾಯಕ್ಕೆ ಕೆಲ ವಿಶ್ಲೇಷಕರು ಪ್ರತಿಕ್ರಿಯೆ ನೀಡಿದ್ದು, ಭೌರತಕ್ಕೆ 240 ಪ್ಲಸ್ ರನ್ ಟಾರ್ಗೆಟ್ ಲಭಿಸಿದರೆ ಗುರಿ ಬೆನ್ನಟ್ಟುವುದು ಕಷ್ಟಸಾಧ್ಯ ಎಂದಿದ್ದಾರೆ.

  • ಫೈನಲ್ ಪ್ರವೇಶಿಸಲಿರುವ 2 ತಂಡಗಳ ಬಗ್ಗೆ ಪೀಟರ್ಸನ್ ಭವಿಷ್ಯ

    ಫೈನಲ್ ಪ್ರವೇಶಿಸಲಿರುವ 2 ತಂಡಗಳ ಬಗ್ಗೆ ಪೀಟರ್ಸನ್ ಭವಿಷ್ಯ

    ಲಂಡನ್: 2019ರ ವಿಶ್ವಕಪ್ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಲೀಗ್ ಹಂತದ ಎಲ್ಲ ಪಂದ್ಯಗಳನ್ನು ಮುಗಿದಿದ್ದು, ಇಂಗ್ಲೆಂಡ್‍ನ ಮಾಜಿ ಆಟಗಾರ ಕೇವಿನ್ ಪೀಟರ್ಸನ್ ಫೈನಲ್‍ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಸೆಣಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

    ಮಂಗಳವಾರ ನಡೆಯಲಿರಿವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಭಾರತ ಮತ್ತು ನಾಲ್ಕನೆಯ ಸ್ಥಾನದಲ್ಲಿರುವ ನ್ಯೂಜಿಲೆಂಡ್ ಮುಖಾಮುಖಿ ಆಗಲಿವೆ. ಗುರುವಾರ ನಡೆಯಲಿರುವ ಎರಡನೇ ಸೆಮಿಫೈನಲ್‍ನಲ್ಲಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ಮತ್ತು ಮೂರನೇ ಸ್ಥಾನದಲ್ಲಿರುವ ಇಂಗ್ಲೆಂಡ್ ಸೆಣಸಲಿವೆ.

    https://twitter.com/KP24/status/1147602245942435840

    ಈಗ ಸೆಮಿಫೈನಲ್ ಹಂತದಲ್ಲೇ ಫೈನಲ್ ಪಂದ್ಯದ ಬಗ್ಗೆ ಮಾತನಾಡಿರುವ ಪೀಟರ್ಸನ್, ನಾವು ಸೆಮಿಫೈನಲ್‍ನಲ್ಲಿ ಆಸ್ಟ್ರೇಲಿಯಾವನ್ನು ಬಗ್ಗು ಬಡಿಯುತ್ತೇವೆ. ಭಾನುವಾರ ಭಾರತ ಇಂಗ್ಲೆಂಡ್ ನಡುವೆ ಫೈನಲ್ ಪಂದ್ಯ ನಡೆಯಲಿದೆ ಎಂದು ಟ್ವೀಟ್ ಮಾಡಿದ್ದಾರೆ. ಇದರ ಜೊತೆಗೆ ಭಾರತ ರವೀಂದ್ರ ಜಡೇಜಾ ಅವರನ್ನು ಸೆಮಿಫೈನಲ್‍ನಲ್ಲಿ ಆಡಬೇಕು. ಕುಲದೀಪ್ ಯಾದವ್ ಅವರ ಬದಲು ಮೊಹಮ್ಮದ್ ಶಮಿ ಆಡಬೇಕು ಮತ್ತು ದಿನೇಶ್ ಕಾರ್ತಿಕ್ ಬದಲು ಜಡೇಜಾ ಅವರನ್ನು ಆಡಿಸಬೇಕು ಎಂದಿದ್ದಾರೆ. ಆದರೂ ಇಂಗ್ಲೆಂಡ್‍ಗೆ ಈ ಪಂದ್ಯ ಸುಲಭವಾಗಿರಲಿದೆ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ.

    https://twitter.com/KP24/status/1147464976828964864

    ವಿಶ್ವಕಪ್ ಟೂರ್ನಿಯಲ್ಲಿ ಕೇವಿನ್ ಪೀಟರ್ಸನ್ ಭವಿಷ್ಯ ಹೇಳುತ್ತಿರುವುದು ಇದೇ ಮೊದಲೇನಲ್ಲ. ವಿಶ್ವಕಪ್‍ನಲ್ಲಿ ಭಾರತ ಎಲ್ಲ ಪಂದ್ಯಗಳನ್ನು ಗೆಲ್ಲುತ್ತಿದ್ದಾಗ ಲೀಗ್ ಹಂತದಲ್ಲಿ ಭಾರತವನ್ನು ಸೋಲಿಸಿದ ತಂಡ ವಿಶ್ವಕಪ್ ಗೆಲ್ಲುತ್ತದೆ ಎಂದು ಟ್ವೀಟ್ ಮಾಡಿದ್ದರು. ನಂತರ ಇಂಗ್ಲೆಂಡ್ ಭಾರತವನ್ನು ಸೋಲಿಸಿತ್ತು.

    ಭಾರತ ಲೀಗ್ ಹಂತದಲ್ಲಿ ಆಡಿದ 9 ಪಂದ್ಯಗಳಲ್ಲಿ 7 ರಲ್ಲಿ ಗೆದ್ದು ಒಂದರಲ್ಲಿ ಸೋತು 15 ಅಂಕದೊಂದಿಗೆ ಅಗ್ರ ಸ್ಥಾನದಲ್ಲಿದೆ. 11 ಅಂಕಗಳಿಸಿರುವ ನ್ಯೂಜಿಲೆಂಡ್ 4ನೇ ಸ್ಥಾನದಲ್ಲಿದೆ. ಲೀಗ್ ಹಂತದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯ ಮಳೆಯ ಕಾರಣ ಒಂದು ಎಸೆತ ಕಾಣದೇ ರದ್ದಾಗಿತ್ತು. ಲೀಗ್ ಹಂತದಲ್ಲಿ ಒಂದು ಬಾರಿಯೂ ಮುಖಾಮುಖಿಯಾಗದ ತಂಡಗಳು ನಾಳೆ ಸೆಮಿಫೈನಲ್‍ನಲ್ಲಿ ಸೆಣಸಲಿವೆ.

    ಈ ಪಂದ್ಯದಲ್ಲಿ 11 ವರ್ಷದ ನಂತರ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮುಖಾಮುಖಿಯಾಗಲಿದ್ದಾರೆ. 2008ರಲ್ಲಿ ನಡೆದ ಅಂಡರ್ 19 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಈ ಇಬ್ಬರು ನಾಯಕರು ಮುಖಾಮುಖಿಯಾಗಿದ್ದರು. ಈ ಪಂದ್ಯದಲ್ಲಿ ಕೊಹ್ಲಿ ನೇತೃತ್ವದ ಭಾರತ ಭರ್ಜರಿ ಜಯಸಾಧಿಸಿತ್ತು. ಬರೋಬ್ಬರಿ 11 ವರ್ಷಗಳ ಬಳಿಕ ಮತ್ತೆ ಈ ಇಬ್ಬರು ನಾಯಕರು ತಂಡದ ಜವಾಬ್ದಾರಿಯೊಂದಿಗೆ ಹೋರಾಟಕ್ಕೆ ಸಿದ್ಧವಾಗಿದ್ದಾರೆ.