Tag: KGF-2

  • ‘ಟಾಕ್ಸಿಕ್’ ಮುನ್ನ ಸಲ್ಮಾನ್ ಖಾನ್ ಬ್ಯಾನರ್‌ನಲ್ಲಿ ಕಾಣಿಸಿಕೊಂಡ ಯಶ್

    ‘ಟಾಕ್ಸಿಕ್’ ಮುನ್ನ ಸಲ್ಮಾನ್ ಖಾನ್ ಬ್ಯಾನರ್‌ನಲ್ಲಿ ಕಾಣಿಸಿಕೊಂಡ ಯಶ್

    ನ್ಯಾಷನಲ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ (Toxic Film) ಸಿನಿಮಾಗೂ ಮುನ್ನ ಸಲ್ಮಾನ್ ಖಾನ್ (Salman Khan) ಬ್ಯಾನರ್‌ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ‘ಆ್ಯಂಗ್ರಿ ಯಂಗ್ ಮ್ಯಾನ್’ (Angry Young Man) ಬಾಲಿವುಡ್ ಟ್ರೈಲರ್‌ನಲ್ಲಿ ಯಶ್ ಕಾಣಿಸಿಕೊಳ್ಳುವ ಮೂಲಕ ಫ್ಯಾನ್ಸ್‌ಗೆ ಅಚ್ಚರಿ ಮೂಡಿಸಿದ್ದಾರೆ.

    ಸಲ್ಮಾನ್ ಖಾನ್ ನಿರ್ಮಾಣದಲ್ಲಿ ಬಾಲಿವುಡ್‌ನ ರೈಟರ್ ಸಲೀಂ ಖಾನ್ ಮತ್ತು ಜಾವೇದ್ ಕುರಿತು ಡಾಕ್ಯುಮೆಂಟರಿ ಟ್ರೈಲರ್ ಅನ್ನು ರಿಲೀಸ್ ಮಾಡಲಾಗಿದೆ. ಈ ಡಾಕ್ಯುಮೆಂಟರಿ ಬಗ್ಗೆ ಸಲ್ಮಾನ್ ಖಾನ್, ಹೃತಿಕ್ ರೋಷನ್, ಜಯಾ ಬಚ್ಚನ್, ಬಿಗ್ ಬಿ ಸೇರಿದಂತೆ ಅನೇಕರು ಸಲೀಂ ಮತ್ತು ಜಾವೇದ್ ಅವರ ಸಾಧನೆ ಬಗ್ಗೆ ಮಾತನಾಡಿದ್ದಾರೆ. ಅದರಲ್ಲಿ ಸೌತ್ ಚಿತ್ರರಂಗದಿಂದ ಯಶ್ (Actor Yash) ಒಬ್ಬರೇ ಟ್ರೈಲರ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

     

    View this post on Instagram

     

    A post shared by prime video IN (@primevideoin)

    ಆ.20ರಂದು ಒಟಿಟಿಯಲ್ಲಿ ಬಿಡುಗಡೆಯಾಗಲಿರುವ ‘ಆ್ಯಂಗ್ರಿ ಯಂಗ್ ಮ್ಯಾನ್’ ಡಾಕ್ಯುಮೆಂಟರಿ ಬಗ್ಗೆ ಮಾತನಾಡಿದ ಯಶ್, ಇವತ್ತು ಜನ ಯಾಕೆ ಆ ಡೈಲಾಗ್ ಹೇಳುತ್ತಾರೆ. ಅದನ್ನು ನೆನಪಿಡುತ್ತಾರೆ ಗೊತ್ತಾ? ಯಾಕೆಂದರೆ ಅವುಗಳು ಡೈಲಾಗ್‌ಗಳಾಗಿರಲಿಲ್ಲ. ಅದು ಫಿಲಾಸಫಿ ಆಗಿತ್ತು ಎಂದು ಯಶ್ ಮಾತನಾಡಿದ್ದಾರೆ. ಈ ಮೂಲಕ ಸಲ್ಮಾನ್ ಖಾನ್ ಬ್ಯಾನರ್‌ನಲ್ಲಿ ರಾಕಿ ಬಾಯ್ ಕಾಣಿಸಿಕೊಂಡಿದ್ದಾರೆ.

    ಅಂದಹಾಗೆ, ಕಳೆದ ವಾರ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಮುಹೂರ್ತ ಕಾರ್ಯಕ್ರಮ ಸರಳವಾಗಿ ಜರುಗಿದೆ. ಶೂಟಿಂಗ್ ಕೂಡ ಭರದಿಂದ ಸಾಗುತ್ತಿದೆ. ಮುಂದಿನ ವರ್ಷ ಈ ಸಿನಿಮಾ ರಿಲೀಸ್ ಆಗಲಿದೆ.

  • ಆ.8ರಿಂದ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಶುರು

    ಆ.8ರಿಂದ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಶುರು

    ನ್ಯಾಷನಲ್ ಸ್ಟಾರ್ ಯಶ್ (Yash) ನಟನೆಯ ‘ಟಾಕ್ಸಿಕ್’ (Toxic Film) ಸಿನಿಮಾ ಚಿತ್ರೀಕರಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ಆ.8ರಿಂದ ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣ ಶುರುವಾಗಲಿದೆ. ಈ ಮೂಲಕ ಯಶ್‌ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ಕಿದೆ. ಇದನ್ನೂ ಓದಿ:ನಾನು ಭೂಮಿಯ ಮೇಲಿನ ಅದೃಷ್ಟ ವ್ಯಕ್ತಿ: ವಿಕ್ರಮ್ ಭೇಟಿಯಾದ ಡಿವೈನ್ ಸ್ಟಾರ್

    ನಿನ್ನೆ (ಆ.6) ಉಜಿರೆಯ ಸುರ್ಯ ದೇಗುಲಕ್ಕೆ ಪತ್ನಿ ರಾಧಿಕಾ (Radhika Pandit) ಜೊತೆ ಯಶ್ ಭೇಟಿ ಕೊಟ್ಟ ಬೆನ್ನಲ್ಲೇ ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣ ಶುರು ಮಾಡಲು ಸಿದ್ಧತೆ ನಡೆಯುತ್ತಿದೆ. ಯಶ್‌ಗೆ 8 ಲಕ್ಕಿ ನಂಬರ್ ಆಗಿರೋ ಕಾರಣ ಈ ದಿನ ‘ಟಾಕ್ಸಿಕ್’ ಚಿತ್ರಕ್ಕೆ ಚಾಲನೆ ಸಿಗಲಿದೆ.

    ಯಶ್‌ ಪಾಲಿಗೆ 8ನೇ ತಾರೀಕು ವಿಶೇಷವಾಗಿದೆ. 2+0+2+4 ಈ ಇಸವಿಯನ್ನು ಕೂಡಿದಾಗ 8 ಸಂಖ್ಯೆ ಬರುತ್ತದೆ. ಹಾಗಾಗಿ 2024ರ 8ನೇ ತಿಂಗಳಾದ ಆಗಸ್ಟ್‌ 8ರಂದು ಟಾಕ್ಸಿಕ್‌ ಚಿತ್ರದ ಶೂಟಿಂಗ್‌ ಚಾಲನೆ ನೀಡಲು ಮುಂದಾಗಿದ್ದಾರೆ. ನಾಳೆಯಿಂದ (ಆ.8) ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಸಿನಿಮಾ ಚಿತ್ರೀಕರಣ ಪ್ರಾರಂಭವಾಗುತ್ತದೆ ಎಂದು ಸಿನಿಮಾ ವಿಮರ್ಶಕರೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಅಂದಹಾಗೆ, ಯಶ್‌ ಜನ್ಮ ದಿನಾಂಕ ಜ.8 ಮತ್ತು ಅವರು ಟಾಕ್ಸಿಕ್‌ ಸಿನಿಮಾ ಕೂಡ ಡಿ.8ರಂದು ಘೋಷಣೆ ಮಾಡಿದ್ದರು.

    ಈಗಾಗಲೇ ಕಿಯಾರಾ ಅಡ್ವಾಣಿ (Kiara Advani), ನಯನತಾರಾ, ಹುಮಾ ಖುರೇಶಿ ಸೇರಿದಂತೆ ಹಲವರ ಹೆಸರು ಕೇಳಿ ಬರುತ್ತಿದೆ. ಸದ್ಯದಲ್ಲೇ ಈ ಕುರಿತು ಅಧಿಕೃತ ಮಾಹಿತಿ ಸಿಗಲಿದೆ. ಈಗ ಚಿತ್ರದ ಶೂಟಿಂಗ್ ಅಪ್‌ಡೇಟ್ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

    ಇನ್ನೂ ಯಶ್ ಈ ಸಿನಿಮಾಗೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಸ್ವತಃ ಯಶ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅವರ ಜೊತೆ ಕೆವಿಎನ್ ಸಂಸ್ಥೆ ಕೂಡ ಕೈಜೋಡಿಸಿದೆ.

  • ಮಕ್ಕಳ ಜೊತೆ ರಾಧಿಕಾ ಪಂಡಿತ್ ವೆಕೇಷನ್- ಯಶ್ ಎಲ್ಲಿ ಎಂದ ಫ್ಯಾನ್ಸ್

    ಮಕ್ಕಳ ಜೊತೆ ರಾಧಿಕಾ ಪಂಡಿತ್ ವೆಕೇಷನ್- ಯಶ್ ಎಲ್ಲಿ ಎಂದ ಫ್ಯಾನ್ಸ್

    ಸ್ಯಾಂಡಲ್‌ವುಡ್ ನಟಿ ರಾಧಿಕಾ ಪಂಡಿತ್ (Radhika Pandit) ಇದೀಗ ಮಕ್ಕಳ ಜೊತೆ ವೆಕೇಷನ್‌ನಲ್ಲಿ ಸಖತ್ ಆಗಿ ಎಂಜಾಯ್ ಮಾಡಿದ್ದಾರೆ. ಪ್ರವಾಸದ ಸುಂದರ ಕ್ಷಣಗಳ ಫೋಟೋಗಳನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:4ನೇ ಬಾರಿ ಮದುವೆಗೆ ರೆಡಿಯಾದ ‘ಬಿಗ್ ಬಾಸ್’ ಖ್ಯಾತಿಯ ವನಿತಾ ವಿಜಯ್‌ಕುಮಾರ್

    ಕುಟುಂಬದ ಜೊತೆ ವಿವಿಧ ಸ್ಥಳಗಳಿಗೆ ಭೇಟಿ ಕೊಟ್ಟು ರಾಧಿಕಾ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ನೀಲಿ ಬಣ್ಣದ ಡ್ರೆಸ್ ಧರಿಸಿ ರಾಧಿಕಾ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ಆದರೆ ಯಶ್ ಮಾತ್ರ ಕಾಣಿಸಿಕೊಂಡಿಲ್ಲ. ಈ ಫೋಟೋ ನೋಡಿ ಯಶ್ ಎಲ್ಲಿ ಎಂದು ನಟಿಗೆ ಅಭಿಮಾನಿಗಳು ಪ್ರಶ್ನಿಸಿದ್ದಾರೆ. ಇದನ್ನೂ ಓದಿ:ಭವಿಷ್ಯದಲ್ಲಿ ಕಾಸ್ಮೆಟಿಕ್‌ ಸರ್ಜರಿ ಮಾಡಿಸುತ್ತೇನೆ ಎಂದ ನಟಿ ರಾಧಿಕಾ ಮದನ್

    ಅಂದಹಾಗೆ, ಇತ್ತೀಚೆಗೆ ಅಂಬಾನಿ ಮನೆ ಮಗನ ಮದುವೆಗೆ ಯಶ್ (Yash) ದಂಪತಿ ಹಾಜರಿ ಹಾಕಿದ್ದರು. ಈ ವೇಳೆ, ಯಶ್ ಹೊಸ ಲುಕ್ ಭಾರೀ ವೈರಲ್ ಆಗಿತ್ತು. ಅದರಂತೆ ರಾಧಿಕಾ ಪಂಡಿತ್, ಸೀರೆಯುಟ್ಟು ಸಿಂಪಲ್ ಆಗಿ ಭಾಗಿಯಾಗಿದ್ದು ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗಿತ್ತು.

    ಇನ್ನೂ ಕಡೆಯದಾಗಿ ‘ಆದಿ ಲಕ್ಷ್ಮಿ ಪುರಾಣ’ ಎಂಬ ಸಿನಿಮಾದಲ್ಲಿ ರಾಧಿಕಾ ನಟಿಸಿದ್ದರು. ಮತ್ತೆ ಅವರು ನಟನೆಗೆ ಕಮ್ ಬ್ಯಾಕ್ ಎಂದು ಫ್ಯಾನ್ಸ್ ಎದುರು ನೋಡ್ತಿದ್ದಾರೆ. ಒಳ್ಳೆಯ ಕಥೆ ಸಿಕ್ಕರೆ ಖಂಡಿತಾ ನಟಿಸುತ್ತೇನೆ ಎಂದು ನಟಿ ಕೂಡ ಭರವಸೆ ನೀಡಿದ್ದಾರೆ. ಹಾಗಾದ್ರೆ ಮುಂದಿನ ದಿನಗಳಲ್ಲಿ ಗುಡ್ ನ್ಯೂಸ್ ಸಿಗುತ್ತಾ ಕಾದುನೋಡಬೇಕಿದೆ.

  • ಯಶ್ ಹೊಸ ಹೇರ್ ಸ್ಟೈಲ್ ಯಾವ ಚಿತ್ರಕ್ಕಾಗಿ? ಕೊನೆಗೂ ಹೊರಬಿತ್ತು ಸೀಕ್ರೆಟ್

    ಯಶ್ ಹೊಸ ಹೇರ್ ಸ್ಟೈಲ್ ಯಾವ ಚಿತ್ರಕ್ಕಾಗಿ? ಕೊನೆಗೂ ಹೊರಬಿತ್ತು ಸೀಕ್ರೆಟ್

    ನ್ಯಾಷನಲ್ ಸ್ಟಾರ್ ಯಶ್ (Yash) ಇತ್ತೀಚೆಗೆ ಅಂಬಾನಿ ಮಗನ ಮದುವೆಯಲ್ಲಿ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಯಾವ ಚಿತ್ರಕ್ಕಾಗಿ ಯಶ್ ಲುಕ್ ಬದಲಾಯಿಸಿಕೊಂಡಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಶುರುವಾಗಿತ್ತು. ಇದೀಗ ಈ ಲುಕ್ ‘ಟಾಕ್ಸಿಕ್’ (Toxic Film) ಚಿತ್ರಕ್ಕಾಗಿ ಎಂಬುದು ಖಚಿತವಾಗಿದೆ.

    ಸೆಲೆಬ್ರಿಟಿ ಹೇರ್ ಸ್ಟೈಲೀಸ್ಟ್ ಅಲೆಕ್ಸ್ ವಿಜಯಕಾಂತ್ ಅವರು ರಾಕಿ ಬಾಯ್ ಲುಕ್ ಬಗ್ಗೆ ಪ್ರತಿಕ್ರಿಯಿಸಿ, ಯಶ್ ಅವರ ಹೊಸ ಲುಕ್ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಈ ಬಗ್ಗೆ ಫ್ಯಾನ್ ಚರ್ಚೆ ಮಾಡಿದರು. ಈ ಲುಕ್ ‘ಟಾಕ್ಸಿಕ್’ ಮಾಡಿರೋದು. ನಾನು ಕೂಡ ಕಥೆ ಕೇಳಿದಾಗ ಈ ಹೇರ್ ಸ್ಟೈಲ್ ಯಶ್ ಪಾತ್ರಕ್ಕೆ ಸೂಕ್ತವಾಗಿದೆ ಎಂದು ನನಗೆ ತಿಳಿದಿತ್ತು. ಯಶ್ ಪಾತ್ರಕ್ಕೆ ಸಂಪೂರ್ಣವಾಗಿ ಹೊಂದಿಕೊಳ್ಳುವ ‘ಪಾಂಪಡೋರ್’ ಶೈಲಿಯಲ್ಲಿ ಸ್ಟೈಲ್ ಮಾಡಿದ್ದೇವೆ ಎಂದಿದ್ದಾರೆ.

    ಯಶ್ ಹೇರ್ ಸ್ಟೈಲ್ ಯಾವುದು ಅಂದರೆ ‘ಪಾಂಪಡೋರ್’ ಎಂದು ಕರೆಯಲಾಗುತ್ತದೆ ಎಂದಿದ್ದಾರೆ. ಈ ಸಿನಿಮಾದಲ್ಲಿ ನಿರ್ವಹಿಸುತ್ತಿರುವ ಪಾತ್ರಕ್ಕೆ ಸಖತ್ ಟ್ವಿಸ್ಟ್ ಕೂಡ ಇದೆ ಎಂದು ಅಲೆಕ್ಸ್ ಮಾತನಾಡಿದ್ದಾರೆ. ಇದನ್ನೂ ಓದಿ:ಶಿವಸೈನ್ಯಕ್ಕೆ ಗುಡ್ ನ್ಯೂಸ್- 131ನೇ ಚಿತ್ರದ ಶೂಟಿಂಗ್‌ಗೆ ಹೊರಡಲು ರೆಡಿಯಾದ್ರು ಶಿವಣ್ಣ

    ಇನ್ನೂ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಗೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಡ್ರಗ್ಸ್ ಮಾಫಿಯಾ ಕುರಿತು ಇರುವ ಚಿತ್ರ ಇದಾಗಿದ್ದು, 2025ರಲ್ಲಿ ಟಾಕ್ಸಿಕ್ ರಿಲೀಸ್ ಆಗಲಿದೆ.

    ಕೆಜಿಎಫ್, ಕೆಜಿಎಫ್ 2 ಸಿನಿಮಾದ ಸಕ್ಸಸ್ ನಂತರ ‘ಟಾಕ್ಸಿಕ್’ ಚಿತ್ರಕ್ಕಾಗಿ ಯಶ್ ಫ್ಯಾನ್ಸ್ ಎದುರು ನೋಡ್ತಿದ್ದಾರೆ. ಯಶ್ ಲುಕ್ ಮತ್ತು ಪಾತ್ರದ ಬಗ್ಗೆ ಫ್ಯಾನ್ಸ್‌ಗೆ ಕುತೂಹಲವಿದೆ.

  • ಕಾರು ಅಪಘಾತ: ರವೀನಾ ಟಂಡನ್‌ ಮೇಲೆ ಸುಳ್ಳು ಕೇಸ್- ಡಿಸಿಪಿ ಸ್ಪಷ್ಟನೆ

    ಕಾರು ಅಪಘಾತ: ರವೀನಾ ಟಂಡನ್‌ ಮೇಲೆ ಸುಳ್ಳು ಕೇಸ್- ಡಿಸಿಪಿ ಸ್ಪಷ್ಟನೆ

    ‘ಕೆಜಿಎಫ್ 2′ (KGF 2) ಸಿನಿಮಾದ ನಟಿ ರವೀನಾ ಟಂಡನ್ (Raveena Tandon) ಕಾರು ಅಪಘಾತದ (Car Accident) ಬಗೆಗಿನ ಅಸಲಿ ವಿಚಾರ ಈಗ ಹೊರಬಿದ್ದಿದೆ. ನಟಿ ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಿದ್ದಾರೆ. ಕೆಟ್ಟದಾಗಿ ಮಾತನಾಡಿದ್ದಾರೆ ಎಂದೆಲ್ಲಾ ಹೇಳಲಾಗಿತ್ತು. ಮುಂಬೈನ ಖಾರ್ ಪೊಲೀಸ್ ಠಾಣೆಯಲ್ಲಿ ರವೀನಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅಸಲಿ ಸಂಗತಿ ಈಗ ತಿಳಿದು ಬಂದಿದೆ. ನಟಿಯ ವಿರುದ್ಧ ಸುಳ್ಳು ದೂರು ದಾಖಲಿಸಿರುವ ಬಗ್ಗೆ ಡಿಸಿಪಿ ರಾಜ್ ತಿಲಕ್ ರೋಷನ್ ಸ್ಪಷನೆ ನೀಡಿದ್ದಾರೆ.

    ರವೀನಾ ಟಂಡನ್ ಕಾರು ಮೂವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಗಾಯಗಳಾಗಿವೆ ಎಂದು ಹೇಳಲಾಗಿತ್ತು. ನಟಿಯ ವಿರುದ್ಧ ಕಿಡಿಕಾರಿದ್ದರು. ಅವರ ಮೇಲೆ ಹಲ್ಲೆ ಕೂಡ ಮಾಡಲಾಗಿತ್ತು. ಅಸಲಿಗೆ, ಸುಳ್ಳು ದೂರನ್ನು ದೂರುದಾರರು ನೀಡಿರುವ ಬಗ್ಗೆ ಡಿಸಿಪಿ ಸ್ಪಷ್ಟನೆ ನೀಡಿದ್ದಾರೆ. ಅವರ ಕಾರು ಯಾರಿಗೂ ಡಿಕ್ಕಿ ಹೊಡೆದಿಲ್ಲ ಮತ್ತು ರವೀನಾ ಅಂದು ಕುಡಿದಿರಲಿಲ್ಲ. ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಅಸಲಿ ವಿಚಾರ ಹೊರಬಿದ್ದಿದೆ ಎಂದು ಡಿಸಿಪಿ ಕ್ಲ್ಯಾರಿಟಿ ನೀಡಿದ್ದಾರೆ. ಇದನ್ನೂ ಓದಿ:ಸೈಲೆಂಟ್ ಆಗಿ ಮದುವೆಯಾದ್ರಾ ‘ಮಿಲನಾ’ ನಟಿ ಪಾರ್ವತಿ?

    ರವೀನಾ ಅವರು ಕಾರಿನಲ್ಲಿ ಮನೆಗೆ ಬರುತ್ತಿದ್ದರು. ಅವರ ಕಾರನ್ನು ರಿವರ್ಸ್ ತೆಗೆದುಕೊಳ್ಳಲಾಗಿತ್ತು. ಆದರೆ ಕಾರು ಯಾರಿಗೂ ಟಚ್ ಮಾಡಿಲ್ಲ. ಆದರೂ ಅಲ್ಲಿ ಮಾತಿನ ಚಕಮಕಿ ನಡೆದು ಈ ಘಟನೆ ವಿವಾದ ಸೃಷ್ಟಿಸಿದೆ. ಘಟನೆಯ ವೇಳೆ, ನಟಿ ಕಾರಿನಿಂದ ಹೊರಬಂದಿದ್ದು, ಜಗಳವಾಡಲು ಅಲ್ಲ. ಬದಲಾಗಿ ತನ್ನ ಚಾಲಕನನ್ನು ರಕ್ಷಿಸಲು ಎಂದು ಹೇಳಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಲಿಲ್ಲ ಎಂದು ಎಂಬುದು ಸಿಸಿಟಿವಿ ದೃಶ್ಯಾವಳಿಯಿಂದ ಸಾಬೀತಾಗಿದೆ. ಇದೆಲ್ಲಾ ಸುಳ್ಳು ಆರೋಪ ಎಂದು ಸ್ಪಷ್ಟನೆ ನೀಡಿದ್ದಾರೆ.

    ಅಂದಹಾಗೆ, ‘ಕೆಜಿಎಫ್ ಪಾರ್ಟ್ 3’ ಸೇರಿದಂತೆ ಬಾಲಿವುಡ್‌ನ ಹಲವು ಸಿನಿಮಾಗಳು ರವೀನಾ ಕೈಯಲ್ಲಿವೆ. ಅವರ ಮಗಳು ಕೂಡ ಬಾಲಿವುಡ್‌ಗೆ ಪಾದಾರ್ಪಣೆ ಮಾಡಲು ರೆಡಿಯಾಗಿದ್ದಾರೆ.

  • ರವೀನಾ ಟಂಡನ್‌ ಕಾರು ಅಪಘಾತ- ನಟಿಯ ಮೇಲೆ ಭಾರೀ ಆಕ್ರೋಶ

    ರವೀನಾ ಟಂಡನ್‌ ಕಾರು ಅಪಘಾತ- ನಟಿಯ ಮೇಲೆ ಭಾರೀ ಆಕ್ರೋಶ

    ‘ಕೆಜಿಎಫ್ 2′ (KGF 2) ಸಿನಿಮಾದಲ್ಲಿ ರಮಿಕಾ ಪಾತ್ರದಲ್ಲಿ ನಟಿಸಿದ್ದ ರವೀನಾ ಟಂಡನ್ (Raveena Tandon) ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಜೂನ್ 1ರಂದು ರಾತ್ರಿ ರವೀನಾ ಕಾರು (Car Accident) ಮೂವರು ಮಹಿಳೆಯರಿಗೆ ಗುದ್ದಿದೆ. ಈ ಪರಿಣಾಮ, ನಟಿ ರವೀನಾ ಮತ್ತು ಕಾರು ಚಾಲಕನ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಇಟಲಿಗೆ ಹಾರಿದ ಲವ್ ಬರ್ಡ್ಸ್- ಮದುವೆಗೂ ಮುನ್ನ ಅದಿತಿ ಜೊತೆ ಸಿದ್ಧಾರ್ಥ್‌ ಜಾಲಿ ಟ್ರಿಪ್

    ರಿಜ್ವಿ ಕಾಲೇಜು ಬಳಿಯ ಕಾರ್ಟರ್ ರಸ್ತೆಯಲ್ಲಿ ರವೀನಾ ಅವರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಮೂವರಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಅವರ ತಲೆ ಮತ್ತು ಮೂಗಿಗೆ ಗಾಯಗಳಾಗಿವೆ. ಈ ಘಟನೆಯಿಂದ ರೊಚ್ಚಿಗೆದ್ದ ಸ್ಥಳಿಯರು ಕಾರು ಚಾಲಕನ ಮೇಲೆ ಹಲ್ಲೆ ಮಾಡುವುದಕ್ಕೆ ಮುಂದಾಗಿದ್ದಾರೆ. ಕಾರು ಚಾಲಕನ್ನು ಪಾರು ಮಾಡಲು ಬಂದ ನಟಿ, ತನ್ನ ಕಾರಿನಿಂದ ಇಳಿದು ಸಂತ್ರಸ್ತರಿಗೆ ನಿಂದಿಸಿದ್ದಾರೆ ಎನ್ನಲಾಗಿದೆ.

    ಅಪಘಾತದಿಂದ ಮಹಿಳೆಗೆ ರಕ್ತಸ್ರಾವವಾಗಿದೆ ಎಂಬುದು ತಿಳಿದಿದೆ. ಈ ವಿಚಾರ ದೊಡ್ಡದಾಗುತ್ತಿದ್ದಂತೆ ವಿಡಿಯೋಗಳನ್ನು ರೆಕಾರ್ಡ್ ಮಾಡಬೇಡಿ ಎಂದು ರವೀನಾ ನೆರದವರಲ್ಲಿ ವಿನಂತಿಸಿದ್ದಾರೆ. ತಳ್ಳಬೇಡಿ, ದಯವಿಟ್ಟು ನನಗೆ ಹೊಡೆಯಬೇಡಿ ಎಂದು ರವೀನಾ ಕೇಳಿಕೊಂಡಿದ್ದಾರೆ. ಚಾಲಕನ ರಕ್ಷಣೆಗೆ ಬಂದ ರವೀನಾ ಟಂಡನ್ ಮೇಲೆ ಮಹಿಳೆಯೊಬ್ಬರು ಹಲ್ಲೆಗೆ ಪ್ರಯತ್ನಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ರವೀನಾ ಫ್ಯಾನ್ಸ್ ಆಘಾತಗೊಂಡಿದ್ದಾರೆ. ಅಂದಹಾಗೆ, ಈ ಘಟನೆ ನಡೆದ ವೇಳೆ ರವೀನಾ ಮದ್ಯ ಸೇವನೆ ಮಾಡಿದ್ದರು ಎನ್ನಲಾಗಿದೆ.

    ಈ ಘಟನೆ ಸಂಬಂಧ ಸಂತ್ರಸ್ತರು ಖಾರ್‌ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಿಸಲು ಮುಂದಾಗಿದ್ದರು. ಆದರೆ ಪೊಲೀಸರು ನಮ್ಮ ದೂರನ್ನು ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

  • ಕಾನ್ ಫೆಸ್ಟಿವಲ್‌ನಲ್ಲಿ ಮೊದಲ ಬಹುಮಾನ ಗೆದ್ದ ಕನ್ನಡಿಗನ ಸಾಧನೆಯನ್ನು ಹಾಡಿ ಹೊಗಳಿದ ಯಶ್

    ಕಾನ್ ಫೆಸ್ಟಿವಲ್‌ನಲ್ಲಿ ಮೊದಲ ಬಹುಮಾನ ಗೆದ್ದ ಕನ್ನಡಿಗನ ಸಾಧನೆಯನ್ನು ಹಾಡಿ ಹೊಗಳಿದ ಯಶ್

    ಕಾನ್ ಫಿಲ್ಮ್ ಫೆಸ್ಟಿವೆಲ್‌ಗೆ (Cannes Film Festival 2024) ಮೈಸೂರಿನ ಹುಡುಗ ಚಿದಾನಂದ ನಾಯ್ಕ್ (Chidananda S Naik) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಸನ್ ಫ್ಲವರ್ಸ್ ವರ್ ದ ಫಸ್ಟ್ ಒನ್ಸ್ ಟು ನೋ’ ಕಿರುಚಿತ್ರ ಆಯ್ಕೆಯಾಗಿತ್ತು. ಈ ಫೆಸ್ಟಿವೆಲ್‌ಗೆ ಆಯ್ಕೆಯಾದ ಮೊದಲ ಕನ್ನಡಿಗರ ಕಿರುಚಿತ್ರ ಇದಾಗಿದ್ದು, ಇದೀಗ ಮೊದಲ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿರುವ ಚಿದಾನಂದ ಸಾಧನೆಗೆ ನ್ಯಾಷನಲ್ ಸ್ಟಾರ್ ಯಶ್ (Actor Yash) ಹಾಡಿ ಹೊಗಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ‘ಕೆಜಿಎಫ್‌ 2’ ನಟ (KGF 2 Actor) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಚಿದಾನಂದ ನಾಯಕ್‌ಗೆ ಅಭಿನಂದನೆಗಳು. ಕಾನ್ ಚಿತ್ರೋತ್ಸವದಲ್ಲಿ ಅತ್ಯುತ್ತಮ ಕಿರುಚಿತ್ರಕ್ಕಾಗಿ ‘ಲಾ ಸಿನೆಫ್’ ಪ್ರಶಸ್ತಿಯನ್ನು ಗೆದ್ದಿದ್ದಕ್ಕಾಗಿ ‘ಸನ್ ಫ್ಲವರ್ಸ್ ವರ್ ದ ಫಸ್ಟ್ ಒನ್ಸ್ ಟು ನೋ’ (Sunflowers Were The First Ones To Know) ಚಿತ್ರಕ್ಕೆ ಅಭಿನಂದನೆಗಳು ಎಂದು ಯಶ್ ಶುಭಕೋರಿದ್ದಾರೆ. ನೀವು ಕನ್ನಡ ಜಾನಪದವನ್ನು ಜಾಗತಿಕ ಹಂತಕ್ಕೆ ಕೊಂಡೊಯ್ಯುವುದನ್ನು ಮತ್ತು ಭಾರತೀಯ ಚಿತ್ರರಂಗಕ್ಕೆ ಹೊಸ ಮಾನದಂಡಗಳನ್ನು ಹೊಂದಿಸುವುದನ್ನು ನೋಡಲು ಹೆಮ್ಮೆಪಡುತ್ತೇನೆ ಎಂದು ಚಿದಾನಂದಗೆ ಯಶ್ ಎಕ್ಸ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ನಾನು ಸಿಂಗಲ್‌, ಹೊಸ ಸಂಬಂಧಕ್ಕೆ ಸಿದ್ಧಳಾಗಿದ್ದೇನೆ ಎಂದು ಬ್ರೇಕಪ್‌ ಬಗ್ಗೆ ತಿಳಿಸಿದ ‘ಸಲಾರ್‌’ ನಟಿ


    ರಚನೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಚಿದಾನಂದ ಹೊತ್ತಿದ್ದರೆ, ವಿ. ಮನೋಜ್ ಅವರ ಸಂಕಲನವಿದೆ. ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್ ಸ್ಟಿಟ್ಯೂಟ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಅಲ್ಲದೇ ಕನ್ನಡದ ಅನೇಕ ಕಲಾವಿದರು ಈ ಕಿರುಚಿತ್ರದಲ್ಲಿ ನಟಿಸಿದ್ದಾರೆ.

    ಕಾನ್ ಚಿತ್ರೋತ್ಸವಕ್ಕೆ ತಮ್ಮ ಕಿರುಚಿತ್ರ ಆಯ್ಕೆಯಾಗಿರುವುದು ಸಹಜವಾಗಿಯೇ ಚಿದಾನಂದ್ ಅವರಿಗೆ ಸಂಭ್ರಮ ತಂದಿತ್ತು. ಕಾನ್ ನೋಡುಗರು ಈ ಕಿರುಚಿತ್ರವನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಕೊನೆಗೂ ಕನ್ನಡದ ಹುಡುಗ ಗೆದ್ದಿದ್ದಾನೆ. ಈ ಮೂಲಕ ಕನ್ನಡದ ಹಿರಿಮೆಯನ್ನು ಎತ್ತಿ ಹಿಡಿದಿದ್ದಾನೆ.

  • ‘ಕೆಜಿಎಫ್ 3’ ಬರೋದು ಪಕ್ಕಾ- 8 ತಿಂಗಳ ಹಿಂದೆಯೇ ಸ್ಟೋರಿ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ ಡಿಜಿಟಲ್

    ‘ಕೆಜಿಎಫ್ 3’ ಬರೋದು ಪಕ್ಕಾ- 8 ತಿಂಗಳ ಹಿಂದೆಯೇ ಸ್ಟೋರಿ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ ಡಿಜಿಟಲ್

    ಶ್ ನಟನೆಯ ‘ಕೆಜಿಎಫ್ 1’ ಮತ್ತು ಪಾರ್ಟ್‌ 2 ನಂತರ ‘ಕೆಜಿಎಫ್ 3’ (KGF 3) ಬರುವ ಬಗ್ಗೆ ಸುದ್ದಿಯೊಂದು ಸಖತ್ ವೈರಲ್ ಆಗುತ್ತಿದೆ. ‘ಕೆಜಿಎಫ್ 3’ (KGF 3) ಸಿನಿಮಾ ಬರೋದು ಪಕ್ಕಾ ಎಂದು 8 ತಿಂಗಳ ಹಿಂದೆಯೇ ಪಬ್ಲಿಕ್ ಟಿವಿ ಡಿಜಿಟಲ್ ಬ್ರೇಕ್‌ ಮಾಡಿತ್ತು. ಇದನ್ನೂ ಓದಿ:ಜ್ಯೋತಿ ರೈ ಅಶ್ಲೀಲ ವಿಡಿಯೋ- ಸೈಬರ್ ಕ್ರೈಂಗೆ ದೂರು ನೀಡಿದ ನಟಿ

    ‘ಕೆಜಿಎಫ್‌ 3’ ಸಿನಿಮಾ ಬರೋದು ಖಚಿತ. ಸದ್ಯ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಯಶ್ ಇಬ್ಬರೂ ಬೇರೆ ಬೇರೆ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಒಪ್ಪಿಕೊಂಡಿರುವ ಪ್ರಾಜೆಕ್ಟ್‌ಗಳು ಪೂರ್ಣಗೊಂಡ ಮೇಲೆ ಕೆಜಿಎಫ್ 3 ಚಿತ್ರಕ್ಕೆ ಸಿದ್ಧತೆ ಮಾಡಿಕೊಳ್ಳಲಿದೆ ಚಿತ್ರತಂಡ. ಇದನ್ನೂ ಓದಿ:‘ಲಡ್ಕಿ ಕಮಾಲ್ ಕಿ’ ಹಾಡಿಗೆ ಕುಣಿದ ಕ್ರಿಕೆಟಿಗ ರಸೆಲ್

    ‘ಕೆಜಿಎಫ್ 2’ ಕ್ಲೈಮ್ಯಾಕ್ಸ್‌ನಲ್ಲಿ ಪಾರ್ಟ್ 3 ಬರುವ ಬಗ್ಗೆ ಸುಳಿವು ನೀಡಿದ್ದಾರೆ. ಪಾರ್ಟ್ 3 ಕೂಡ ದೊಡ್ಡ ಮಟ್ಟದಲ್ಲಿ ತಯಾರಿ ಆಗಲಿದೆ. ಯಶ್ ರಾಕಿಭಾಯ್ ಆಗಿ ಮಿಂಚೋದು ಪಕ್ಕಾ. ಇದನ್ನೂ ಓದಿ:ಜ್ಯೋತಿ ರೈ ಅಶ್ಲೀಲ ವಿಡಿಯೋ- ಸೈಬರ್ ಕ್ರೈಂಗೆ ದೂರು ನೀಡಿದ ನಟಿ

    2022ರಲ್ಲಿ ಯಶ್‌ ಮತ್ತು ಶ್ರೀನಿಧಿ ಶೆಟ್ಟಿ ನಟನೆಯ ‘ಕೆಜಿಎಫ್‌ 2’ ಸಿನಿಮಾ ಏ.14ರಂದು ರಿಲೀಸ್‌ ಆಗಿತ್ತು. ಸಿನಿಮಾ ಸಾವಿರ ಕೋಟಿ ರೂ. ಕ್ಲಬ್‌ ಸೇರಿತ್ತು.

  • ಮತ್ತಷ್ಟು ಎತ್ತರಕ್ಕೆ ಏರುತ್ತೀಯ- ‘ಕೆಜಿಎಫ್’ ನಟಿಗೆ ದೈವದ ಅಭಯ

    ಮತ್ತಷ್ಟು ಎತ್ತರಕ್ಕೆ ಏರುತ್ತೀಯ- ‘ಕೆಜಿಎಫ್’ ನಟಿಗೆ ದೈವದ ಅಭಯ

    ‘ಕೆಜಿಎಫ್’ (KGF) ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ (Srinidhi Shetty) ಅವರು ದೈವ ಕೋಲದಲ್ಲಿ ಭಾಗಿಯಾಗಿದ್ದಾರೆ. ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು (Daiva Kola) ನೆರವೇರಿಸಿದ್ದಾರೆ. ಈ ವೇಳೆ, ಮತ್ತಷ್ಟು ಎತ್ತರಕ್ಕೆ ಏರುತ್ತೀಯ ಎಂದು ದೈವ ಶ್ರೀನಿಧಿ ಶೆಟ್ಟಿಗೆ ಅಭಯ ನೀಡಿದೆ.

    ಮಂಗಳೂರಿನ ಹೊರವಲಯದ ಕಿನ್ನಿಗೋಳಿ ತಮ್ಮ ಕುಟುಂಬದ ಮನೆ ತಾಳಿಪಾಡಿ ಗುತ್ತುವಿನಲ್ಲಿ ಈ ಹರಕೆ ನೇಮೋತ್ಸವ ನಡೆಯಿತು. ಈ ಹಿಂದೆ ತನ್ನ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತಂತೆ ಕಿನ್ನಿಗೋಳಿ ಸಮೀಪ ತಾಳಿಪಾಡಿ ಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಸಲಾಯಿತು. ಇದನ್ನೂ ಓದಿ:ಬಾಲಿವುಡ್ ನಲ್ಲಿ ಅಮಿತಾಭ್ ಬಿಟ್ಟರೆ ನನಗೆ ಹೆಚ್ಚು ಗೌರವ : ನಟಿ ಕಂಗನಾ

    ಈ ವೇಳೆ, ಶ್ರೀನಿಧಿ ಶೆಟ್ಟಿಯವರ ಕುಟುಂಬ ವರ್ಗದವರು ಸಂಬಂಧಿಕರು ಪಾಲ್ಗೊಂಡಿದ್ದಾರೆ. ತನ್ನ ಯಶಸ್ಸಿನ ಹಿಂದೆ ಕುಟುಂಬದ ದೈವಗಳ ಆಶೀರ್ವಾದ ಇದ್ದು, ತನ್ನ ಇಷ್ಟಾರ್ಥ ಸಿದ್ಧಿಗಾಗಿ ಈ ಹರಕೆ ಹೇಳಿಕೊಂಡಿದ್ದರು. ಅದರಂತೆ ಇದೀಗ ಹರಕೆಯನ್ನು ಶ್ರೀನಿಧಿ ಶೆಟ್ಟಿ ಸಲ್ಲಿಸಿದ್ದಾರೆ. ಮುಂದೆ ಇನ್ನಷ್ಟು ಎತ್ತರಕ್ಕೆ ಏರುತ್ತೀಯ ಎಂದು ದೈವಗಳು ‘ಕೆಜಿಎಫ್’ ನಟಿಗೆ ಅಭಯ ನೀಡಿದೆ.

    ಕನ್ನಡದ ಕೆಜಿಎಫ್ 1, ಕೆಜಿಎಫ್ 2 (KGF 2) ಸಿನಿಮಾಗಳಲ್ಲಿ ಯಶ್‌ಗೆ (Yash) ನಾಯಕಿಯಾಗಿ ಮಿಂಚಿದ್ದರು. ಬಳಿಕ ಸೌತ್ ಸಿನಿಮಾಗಳಲ್ಲಿ ಶ್ರೀನಿಧಿ ಶೆಟ್ಟಿ ನಟಿಸಿದ್ದರು. ಇದೀಗ ಕಿಚ್ಚ ಸುದೀಪ್ (Kiccha Sudeep) ಅವರ 47ನೇ ಚಿತ್ರದಲ್ಲಿ ಶ್ರೀನಿಧಿ ನಾಯಕಿಯಾಗಿದ್ದಾರೆ. ಸದ್ಯದಲ್ಲೇ ಚಿತ್ರದ ಶೂಟಿಂಗ್ ಕೂಡ ಆರಂಭ ಆಗಲಿದೆ.

  • ‘ರಾಮಾಯಣ’ ಸಿನಿಮಾ ಬಗ್ಗೆ ಯಶ್‌ ಹೇಳಿದ್ದೇನು?

    ‘ರಾಮಾಯಣ’ ಸಿನಿಮಾ ಬಗ್ಗೆ ಯಶ್‌ ಹೇಳಿದ್ದೇನು?

    ನ್ಯಾಷನಲ್ ಸ್ಟಾರ್ ಯಶ್ (Yash) ಇಂದು (ಏ.26) ಹೊಸಕೆರೆಹಳ್ಳಿಯಲ್ಲಿ ಮತದಾನ ಮಾಡಿದ್ದಾರೆ. ದೇಶಕ್ಕಾಗಿ ಮತದಾನ ಮಾಡಬೇಕು ಎಂದು ಯಂಗ್‌ಸ್ಟರ್‌ಗೆ ಯಶ್ ಕಿವಿಹಿಂಡಿದ್ದಾರೆ. ಈ ವೇಳೆ, ಮಾಧ್ಯಮ ಎದುರು ಬಂದ ಯಶ್‌ಗೆ ‘ರಾಮಾಯಣ’ ಸಿನಿಮಾ ಬಗ್ಗೆ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

    ‘ರಾಮಾಯಣ’ (Ramayana) ಸಿನಿಮಾ ಬಗ್ಗೆ ಯಶ್ ಮಾತನಾಡಿ, ಈಗ ವೋಟಿಂಗ್ ನಡೆಯುತ್ತಿದೆ. ವಿಷಯವನ್ನು ಡೈವರ್ಟ್ ಮಾಡಬೇಡಿ. ಈ ವಿಚಾರದ ಬಗ್ಗೆ ಮುಂದೆ ಮಾತಾಡೋಣ. ನಾನು ಎಲ್ಲೂ ಹೋಗಲ್ಲ ಇಲ್ಲೇ ಇರುತ್ತೇನೆ ಮಾತಾಡೋಣ ಎಂದು ಯಶ್ ರಿಯಾಕ್ಟ್‌ ಮಾಡಿದ್ದರು. ಬಳಿಕ ‘ರಾಮಾಯಣ’ ಸಿನಿಮಾ ಬಗ್ಗೆ ಯಾವುದೇ ಅಪ್‌ಡೇಟ್ ನೀಡಲಿಲ್ಲ.‌ ಇದನ್ನೂ ಓದಿ:ನನ್ನ ಕೆಣಕಿದರೆ ನೆಟ್ಟಗೆ ಇರಲ್ಲ: ಸಚಿವನಿಗೆ ವಾರ್ನ್ ಮಾಡಿದ ನಟ ವಿಶಾಲ್

    ‘ರಾಮಾಯಣ’ ಸಿನಿಮಾ ಬಹುಕೋಟಿ ವೆಚ್ಚದಲ್ಲಿ ಮೂಡಿ ಬರುತ್ತಿದೆ. ನಿತೇಶ್ ತಿವಾರಿ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ರಣ್‌ಬೀರ್ ಕಪೂರ್ ರಾಮನಾದ್ರೆ, ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಯಶ್ ಕೂಡ ಸಹ ನಿರ್ಮಾಪಕರಾಗಿದ್ದಾರೆ.

    ಕೆಜಿಎಫ್‌ 2 (KGF 2) ಸಕ್ಸಸ್‌ ನಂತರ ಯಶ್ ‘ಟಾಕ್ಸಿಕ್‌’ (Toxic Film) ಸಿನಿಮಾಗಾಗಿ ನಟನೆಯ ಜೊತೆ ನಿರ್ಮಾಣದ ಹೊಣೆ ಕೂಡ ಹೊತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆ ಇದೆ.