Tag: KGF chapter 2

  • ಕೆಜಿಎಫ್‌ 2 ಹಾಡು ಬಳಕೆ – ಕಾಂಗ್ರೆಸ್‌ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ ಎಂಆರ್‌ಟಿ ಮ್ಯೂಸಿಕ್‌

    ಕೆಜಿಎಫ್‌ 2 ಹಾಡು ಬಳಕೆ – ಕಾಂಗ್ರೆಸ್‌ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ ಎಂಆರ್‌ಟಿ ಮ್ಯೂಸಿಕ್‌

    ಬೆಂಗಳೂರು: ಕಾಂಗ್ರೆಸ್‌(Congress) ವಿರುದ್ಧ ಎಂಆರ್‌ಟಿ ಮ್ಯೂಸಿಕ್‌(MRT Music) ನ್ಯಾಯಾಂಗ ನಿಂದನೆ(Contempt of Court ) ಅರ್ಜಿ ಸಲ್ಲಿಸಿದ್ದು ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

    ಈ ಹಿಂದೆ ಹೈಕೋರ್ಟ್‌ನಲ್ಲಿ(High Court) ನಡೆದ ವಿಚಾರಣೆ ವೇಳೆ ಕೆಜಿಎಫ್ ಚಾಪ್ಟರ್‌ 2(KGF 2) ಸಿನಿಮಾದ ಹಾಡು ತೆಗೆಯುತ್ತೇವೆಂದು ಕಾಂಗ್ರೆಸ್‌ ಮುಚ್ಚಳಿಕೆ ನೀಡಿತ್ತು. ಆದರೆ ಈ ಹಾಡನ್ನು ಇನ್ನೂ ತೆಗೆದಿಲ್ಲ ಎಂದು ಆರೋಪಿಸಿ ಎಂಆರ್‌ಟಿ ಮ್ಯೂಸಿಕ್‌ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ.

    ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ದ್ವಿಸದಸ್ಯ ಪೀಠ ರಾಹುಲ್ ಗಾಂಧಿ (Rahul Gandhi), ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ (Supriya) ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್(Jairam Ramesh) ಅವರಿಗೆ ನೋಟಿಸ್‌ ಜಾರಿ ಮಾಡಿದೆ.  ಅರ್ಜಿಯ ಮುಂದಿನ ವಿಚಾರಣೆ  ಜನವರಿ 12ಕ್ಕೆ ನಡೆಯಲಿದೆ.

    kgf 2

    ಏನಿದು ಪ್ರಕರಣ?:
    ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಸಂಸ್ಥೆಯ ಅನುಮತಿ ಇಲ್ಲದೇ ಕೆಜಿಎಫ್‌ ಹಾಡನ್ನು ಭಾರತ್‌ ಜೋಡೋ ಯಾತ್ರೆಯಲ್ಲಿ ಬಳಸಿದೆ. ಹಾಡನ್ನು ಯಾತ್ರೆಯಲ್ಲಿ ಬಳಸಿದ್ದಕ್ಕಾಗಿ ಕೆಜಿಎಫ್ ಚಿತ್ರದ ಹಾಡುಗಳ ಪ್ರಸಾರ ಹಕ್ಕು ಹೊಂದಿರುವ ಎಂಆರ್‌ಟಿ ಸಂಸ್ಥೆಯು ರಾಹುಲ್ ಗಾಂಧಿ, ಸೋಷಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ, ಹಾಗೂ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ವಹಿಸಿಕೊಂಡಿರುವ ಜೈರಾಂ ರಮೇಶ್ ವಿರುದ್ಧ ದೂರು ದಾಖಲಿಸಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ (FIR) ದಾಖಲಾಗಿತ್ತು.

    ಕೆಜಿಎಫ್‌ ಹಾಡನ್ನು ಕಾಗ್ರೆಸ್ ಪಕ್ಷದ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಾದ ಟ್ಟಿಟ್ಟರ್‌, ಯೂಟ್ಯೂಬ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬಳಸಲಾಗಿದೆ. ನಮ್ಮ ಸಂಸ್ಥೆಯ ಅನುಮತಿ ಪಡೆಯದೇ ಕಾಪಿರೈಟ್‌ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಎಂಆರ್‌ಟಿ ಸಂಸ್ಥೆ ಬಳಿಕ ಕೋರ್ಟ್‌ ಮೊರೆ ಹೋಗಿತ್ತು. ದೂರಿನ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಮತ್ತು ಭಾರತ್‌ ಜೋಡೋ ಯಾತ್ರೆಯ ಖಾತೆಯನ್ನು ತಾತ್ಕಾಲಿಕವಾಗಿ ಅಮಾನತು ಮಾಡುವಂತೆ ಟ್ವಿಟ್ಟರ್‌ ಕಂಪನಿಗೆ ಬೆಂಗಳೂರು ನಗರ ಜಿಲ್ಲಾ ವಾಣಿಜ್ಯ ಕೋರ್ಟ್‌ ಆದೇಶಿಸಿತ್ತು.

    ಈ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್‌ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ನ.8 ರಂದು ನ್ಯಾ. ಜಿ. ನರೇಂದರ್‌ ಮತ್ತು ನ್ಯಾ.ಪಿಎನ್‌ ದೇಸಾಯಿ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ನಡೆದ ಅರ್ಜಿಯ ವಿಚಾರಣೆ ವೇಳೆ ಕಾಂಗ್ರೆಸ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ, ನಮ್ಮ ಪ್ರತಿವಾದಿಗಳು ಸಂಪೂರ್ಣ ಟ್ವಿಟ್ಟರ್‌ ಖಾತೆಯನ್ನು ತೆಗೆದು ಹಾಕುವಂತೆ ಕೋರಿದ್ದಾರೆ. ಆದರೆ 45 ಸೆಕೆಂಡಿನ ಆಡಿಯೋದಲ್ಲಿ ಮಾತ್ರ ಮ್ಯೂಸಿಕ್‌ ಬಳಕೆ ಮಾಡಲಾಗಿದೆ. ಮ್ಯೂಸಿಕ್‌ ಬಳಸಿ ನಾವು ತಪ್ಪು ಮಾಡಿದ್ದೇವೆ. ಕೆಜಿಎಫ್‌ ಮ್ಯೂಸಿಕ್‌ ಎಲ್ಲೆಲ್ಲಿ ಬಳಕೆ ಮಾಡಲಾಗಿದೆಯೋ ಅವೆಲ್ಲವನ್ನು ತೆಗೆದು ಹಾಕುತ್ತೇವೆ ಎಂದು ಮನವಿ ಮಾಡಿದ್ದರು.

    ತನ್ನ ತಪ್ಪನ್ನು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಕೆಜಿಎಫ್‌ ಹಾಡನ್ನು ಬಳಕೆ ಮಾಡಿದ್ದ ಟ್ವೀಟ್‌ಗಳನ್ನು(Tweet) ತೆಗೆದು ಹಾಕಬೇಕೆಂದು ಹೈಕೋರ್ಟ್‌ ಕಾಂಗ್ರೆಸ್‌ಗೆ ಆದೇಶ ನೀಡಿ ಕೆಳ ನ್ಯಾಯಾಲಯ ನೀಡಿದ ಆದೇಶವನ್ನು ರದ್ದುಗೊಳಿಸಿತ್ತು.

    ದೂರುದಾರರು ಸಂಪೂರ್ಣ ಖಾತೆಯನ್ನು ತೆಗೆದು ಹಾಕುವಂತೆ ಕೋರಿದ್ದಾರೆ. ಇಲ್ಲಿ ಪ್ರತಿವಾದಿಯವರಿಗೆ ರಾಜಕೀಯ ಕುಮ್ಮಕ್ಕು ಇದೆಯೇ ಹೊರತು ಬೇರೆ ಯಾವುದೇ ಉದ್ದೇಶ ಇಲ್ಲ. ನಾವು ತಪ್ಪು ಮಾಡಿದ್ದೇವೆ. ಆದರೆ ಇದರಲ್ಲಿ ಯಾವುದೇ ವಾಣಿಜ್ಯ ಉದ್ದೇಶ ಇಲ್ಲ. ನಮ್ಮ ಅಭಿಪ್ರಾಯವನ್ನು ಆಲಿಸದೇ ಕೆಳ ನ್ಯಾಯಾಲಯ ಈ ರೀತಿಯ ಆದೇಶ ನೀಡಿದ್ದು ಎಷ್ಟು ಸರಿ? ದೇಶದ ದೊಡ್ಡ ರಾಜಕೀಯ ಪಕ್ಷದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ವ್ಯಕ್ತಪಡಿಸುವ ಸಾಮಾಜಿಕ ಮಾಧ್ಯಮ ಧಮನಿಸುವುದಕ್ಕೆ ಕೋರ್ಟ್‌ ಅನುಮತಿ ನೀಡಬಾರದು ಎಂದು ಸಿಂಘ್ವಿ ಮನವಿ ಮಾಡಿದ್ದರು.

    ಈ ವೇಳೆ ಎಂಆರ್‌ಟಿ ಸ್ಟುಡಿಯೋ ಪರ ವಕೀಲರಿಗೆ, ಈ ಪ್ರಕರಣದಲ್ಲಿ ಕಾಂಗ್ರೆಸ್‌ ಟ್ವಿಟ್ಟರ್‌ ಖಾತೆಯನ್ನು ತನಿಖೆ ಯಾಕೆ ಮಾಡಬೇಕು? ಆಯುಕ್ತರನ್ನು ಯಾಕೆ ನೇಮಿಸಬೇಕು? ಅವರು ತಪ್ಪನ್ನು ಒಪ್ಪಿಕೊಂಡಿದ್ದಾರೆ. ತಪ್ಪನ್ನು ಒಪ್ಪಿಕೊಂಡ ಮೇಲೆ ತನಿಖೆ ಯಾಕೆ ಎಂದು ಪ್ರಶ್ನಿಸಿತು.

    ಅಭಿಷೇಕ್‌ ಮನು ಸಿಂಘ್ವಿ, ನ.9ರ ಮಧ್ಯಾಹ್ನ 2 ಗಂಟೆಯ ಒಳಗಡೆ ಎಲ್ಲೆಲ್ಲಿ ಮ್ಯೂಸಿಕ್‌ ಬಳಕೆ ಮಾಡಿದ್ದೇವೋ ಅವುಗಳನ್ನು ತೆಗೆದು ಹಾಕುತ್ತೇವೆ. ಅರ್ಜಿದಾರ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಗೆ ದಾಖಲೆ ನೀಡುತ್ತೇವೆ ಎಂದು ತಿಳಿಸಿದ್ದರು. ಈ ಮನವಿಯನ್ನು ಪುರಸ್ಕರಿಸಿದ ಕೋರ್ಟ್‌ ಕಾಪಿರೈಟ್‌ ಉಲ್ಲಂಘನೆ ಮಾಡಿದ ಎಲ್ಲಾ ಟ್ವೀಟ್‌ಗಳನ್ನು ತೆಗೆದು ಹಾಕುವಂತೆ ಆದೇಶಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ವೈಲೆನ್ಸ್.. ವೈಲೆನ್ಸ್ ಡೈಲಾಗ್ ಹೊಡೆದು ರಾಕಿಭಾಯ್ ನೆನೆದ ಶಿಲ್ಪಾ ಶೆಟ್ಟಿ

    ವೈಲೆನ್ಸ್.. ವೈಲೆನ್ಸ್ ಡೈಲಾಗ್ ಹೊಡೆದು ರಾಕಿಭಾಯ್ ನೆನೆದ ಶಿಲ್ಪಾ ಶೆಟ್ಟಿ

    ನ್ಯಾಷನಲ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ ಚಾಪ್ಟರ್-2’ ಚಿತ್ರವು ವಿಶ್ವದಾದ್ಯಂತ ಭಾರೀ ಜನ ಮನ್ನಣೆ ಗಳಿಸಿದೆ. ಸಿನಿಮಾರಂಗದಲ್ಲಿಯೇ ಅಚ್ಚಳಿಯದ ಇತಿಹಾಸ ಸೃಷ್ಟಿಸುತ್ತಿರುವ ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲೂ ಸಖತ್ ಸದ್ದು ಮಾಡಿದೆ. ರೀಲಿಸ್ ಆದ 2 ವಾರದಲ್ಲಿ ಅಂದಾಜು 800 ಕೋಟಿಗೂ ಅಧಿಕ ಹಣ ಗಳಿಸಿದೆ ಎಂದು ಬಾಕ್ಸ್ ಆಫೀಸ್ ವಿಮರ್ಶಕರು ವರದಿ ಮಾಡಿದ್ದಾರೆ. ಬಾಕ್ಸ್ ಆಫಿಸ್ ಅಷ್ಟೇ ಅಲ್ಲದೇ ಚಿತ್ರದಲ್ಲಿರುವ ರಾಕಿಭಾಯ್ ಡೈಲಾಗ್‍ಗಳಿಗೆ ಹಲವು ಬಾಲಿವುಡ್ ತಾರೆಯರು ಕೂಡಾ ಫಿದಾ ಆಗಿದ್ದಾರೆ.

    ಚಿತ್ರದ ಡೈಲಾಗ್‍ಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದೂ, ಅದರಲ್ಲೂ ರಾಕಿಭಾಯ್ ಯಶ್ ಅವರ ವೈಲೆನ್ಸ್ ವೈಲೆನ್ಸ್.. ಡೈಲಾಗಂತೂ ಇನ್‍ಸ್ಟಾಗ್ರಾಮ್‍ನ ರಿಲ್ಸ್‌ಗಳಲ್ಲಿ ಹೆಚ್ಚಾಗಿ ಬಳಕೆಯಾಗುತ್ತಿದೆ. ಬಾಲಿವುಡ್‍ನ ಬಳಕುವ ಬಳ್ಳಿ ಶಿಲ್ಪಾ ಶೆಟ್ಟಿ ಕೂಡಾ ಕೆಜಿಎಫ್-2 ಚಿತ್ರವನ್ನು ನೋಡಿ ನಮ್ಮ ರಾಕಿಭಾಯ್ ವೈಲೆನ್ಸ್ ವೈಲೆನ್ಸ್.. ಡೈಲಾಗ್ ಹೊಡೆದು ಸಾಮಾಜಿಕ ಜಾಲತಾಣದಲ್ಲಿ ಬೆಂಕಿ ಹಚ್ಚಿದ್ದಾರೆ.

    ಮುಂಬೈನ ಚಿತ್ರಮಂದಿರವೊಂದರಲ್ಲಿ ಫ್ಯಾಮಿಲಿಯೊಂದಿಗೆ ಕುಳಿತುಕೊಂಡು ಚಿತ್ರವನ್ನು ವೀಕ್ಷಿಸಿ, ಚಿತ್ರಮಂದಿರದಿಂದ ಹೊರಬರುತ್ತಿದ್ದ ಶಿಲ್ಪಾಗೆ ಕೆಜಿಎಫ್-2ರಲ್ಲಿ ನಿಮಗೆ ಬಹಳ ಇಷ್ಟವಾದ ಡೈಲಾಗ್ ಯಾವುದು ಎಂದು ಮಾಧ್ಯಮದವರು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅವರು, ರಾಕಿಭಾಯ್‍ನ ಸ್ಟೈಲ್‍ನಲ್ಲಿಯೇ ವೈಲೆನ್ಸ್ ವೈಲೆನ್ಸ್ ಡೈಲಾಗ್ ಹೇಳಿ ಸಾಮಾಜಿಕ ಜಾಲತಾಣದಲ್ಲಿ ಬೆಂಕಿ ಹಚ್ಚಿದ್ದಾರೆ.

     

    View this post on Instagram

     

    A post shared by Viral Bhayani (@viralbhayani)

    ಸದ್ಯ ವೀಡಿಯೋ 60,000ಕ್ಕೂ ಹೆಚ್ಚು ವಿವ್ಸ್ ಪಡೆದುಕೊಂಡು ನೆಟ್ಟಿಗರ ಮನಗೆದ್ದಿದೆ. ಕನ್ನಡತಿಯ ಬಾಯಲ್ಲಿ ನಮ್ಮ ಕನ್ನಡದ ಹೆಮ್ಮೆ ಕೆಜಿಎಫ್ ಚಾಪ್ಟರ್ 2ನ ಡೈಲಾಗ್ ಕೇಳಿ ಕರ್ನಾಟಕದ ಫ್ಯಾನ್ಸ್ ಖುಷ್ ಆಗಿದ್ದಾರೆ.

     

  • ಕೆಜಿಎಫ್ ಚಾಪ್ಟರ್-2 ಡೈಲಾಗ್ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ ವ್ಯಂಗ್ಯ

    ಕೆಜಿಎಫ್ ಚಾಪ್ಟರ್-2 ಡೈಲಾಗ್ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ ವ್ಯಂಗ್ಯ

    ಮುಂಬೈ: ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡವು ಈ ಬಾರಿಯ ಐಪಿಎಲ್ 2022ರ ಆವೃತ್ತಿಯಲ್ಲಿ ಅತ್ಯಂತ ಕಳಪೆ ಆಟವನ್ನು ಪ್ರದರ್ಶಿಸುತ್ತಿದೆ.

    ಹಾಲಿ ಚಾಂಪಿಯನ್ ತಂಡವು ಈಗಾಗಲೇ ಸತತ ಆರು ಸೋಲುಗಳನ್ನು ಕಂಡು ಐಪಿಎಲ್ ಪಾಯಿಂಟ್ಸ್ ಪಟ್ಟಿಯ ಕೊನೆಯ ಸ್ಥಾನದಲ್ಲಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೀಮ್ಸ್‌ಗಳು ಹರಿದಾಡುತ್ತಿದ್ದು, ರೋಹಿತ್ ಪಡೆಯು ಟ್ರೋಲ್‍ಗೆ ಗುರಿಯಾಗಿದೆ. ಇದನ್ನೂ ಓದಿ: ಐಪಿಎಲ್ 2022: ದೆಹಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರ ಮಿಚೆಲ್ ಮಾರ್ಷ್‍ಗೆ ಕೋವಿಡ್ ದೃಢ

    ಕನ್ನಡದ ಹೆಮ್ಮೆ ಕೆಜಿಎಫ್ ಚಾಪ್ಟರ್-2 ಚಿತ್ರದ ಯಶ್ ಅವರ ವೈಲೆನ್ಸ್.. ವೈಲೆನ್ಸ್.. ಎಂಬ ಜನಪ್ರಿಯ ಡೈಲಾಗ್ ಬದಲು ನೆಟ್ಟಿಗರು ಸೋಲು ಸೋಲು ಸೋಲು ಎಂದು ಬರೆದು ಮುಂಬೈ ತಂಡಕ್ಕೆ ವ್ಯಂಗ್ಯ ಮಾಡಿದ್ದಾರೆ. ಇದನ್ನೂ ಓದಿ: 2023ರಲ್ಲಿ ಆರಂಭಗೊಳ್ಳಲಿದೆ 6 ತಂಡಗಳ ನಡುವಿನ ಮಹಿಳಾ ಐಪಿಎಲ್

    ದಾಖಲೆಯ 5 ಬಾರಿಯ ಐಪಿಎಲ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದ ಮುಂಬೈ ತಂಡವು ಈ ಬಾರಿ ಆವೃತ್ತಿಯಲ್ಲಿ ಆಡಿರುವ ಆರಕ್ಕೆ ಆರೂ ಪಂದ್ಯಗಳಲ್ಲಿ ಸೋಲುಂಡಿದೆ. ಹೀಗಾಗಿ ಕನಿಷ್ಠ ಪಕ್ಷ ಒಂದು ಪಂದ್ಯವನ್ನಾದರು ಮುಂಬೈ ತಂಡ ಗೆಲ್ಲಲಿ ಎಂದು ನೆಟ್ಟಿಗರೊಬ್ಬರು ಅಪಹಾಸ್ಯ ಮಾಡಿದ್ದಾರೆ.

    ನಾಯಕ ರೋಹಿತ್ ಶರ್ಮಾ ಅವರ ಯೋಜನೆಗಳೆಲ್ಲವೂ ವಿಫಲವಾಗಿವೆ. ಬ್ಯಾಟಿಂಗ್‍ನಲ್ಲಿ ಅತ್ಯಂತ ಕಳಪೆ ಆಟವನ್ನು ತೋರುತ್ತಿರುವ ಎಮ್‍ಐ ತಂಡವು ಬೌಲಿಂಗ್‍ನಲ್ಲೂ ಸಹ ಅಷ್ಟೇ ಕಳಪೆ ಆಟವನ್ನು ತೋರುತ್ತಿದೆ. ಇದರ ನಡುವೆಯೂ ಮುಂಬೈ ತಂಡದ ಅಭಿಮಾನಿಗಳು ತಂಡದ ಮೇಲಿನ ಅಭಿಮಾನವನ್ನು ಕಳೆದುಕೊಂಡಿಲ್ಲ.

  • ಕೆಜಿಎಫ್ ಚಾಪ್ಟರ್ ಒಂದನ್ನೇ ನೋಡಿಲ್ಲ ಎಂದ ಉರ್ಫಿ – ಯಶ್ ಫ್ಯಾನ್ಸ್ ಫುಲ್ ಗರಂ

    ಕೆಜಿಎಫ್ ಚಾಪ್ಟರ್ ಒಂದನ್ನೇ ನೋಡಿಲ್ಲ ಎಂದ ಉರ್ಫಿ – ಯಶ್ ಫ್ಯಾನ್ಸ್ ಫುಲ್ ಗರಂ

    ಬಾಲಿವುಡ್ ಓಟಿಟಿ ರಿಯಾಲಿಟಿ ಶೋನಲ್ಲಿ ಮಿಂಚಿದ್ದ ಉರ್ಫಿ ಜಾವೇದ್ ಭಿನ್ನವಾದ ಬೋಲ್ಡ್ ಉಡುಪುಗಳನ್ನು ತೊಟ್ಟು ಬಿ’ಟೌನ್‍ನಲ್ಲಿ ಭಾರೀ ಸದ್ದು ಮಾಡುತ್ತಿರುತ್ತಾರೆ. ದಿನಕ್ಕೊಂದು ಭಿನ್ನ ಡ್ರೆಸ್ ತೊಟ್ಟು ಸೋಶಿಯಲ್ ಮೀಡಿಯಾದಲ್ಲಿ ತನ್ನದೇ ಕ್ರೇಜ್ ಮೂಡಿಸಿದ್ದಾರೆ. ಬಾಲಿವುಡ್ ಕ್ಯಾಮರಾಗಳು ಉರ್ಫಿ ಇಂದು ಯಾವ ರೀತಿಯ ಬಟ್ಟೆ ತೊಡುತ್ತಾರೆ ಎಂದು ಕಾಯುತ್ತ ಇರುತ್ತಾರೆ. ಈ ನಡುವೆ ಭಾರತದ ಬಹುನಿರೀಕ್ಷಿತ ಸಿನಿಮಾ ಕೆಜಿಎಫ್ ಚಾಪ್ಟರ್-2 ಸಿನಿಮಾ ಬಗ್ಗೆ ಕ್ಯಾಮರಾ ಮ್ಯಾನ್ ಪ್ರಶ್ನೆ ಕೇಳಿದ್ದಾರೆ. ಈ ನಟಿ ಉತ್ತರ ಕೇಳಿ ಯಶ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದು, ಉರ್ಫಿ ವಿರುದ್ಧ ಗರಂ ಆಗಿದ್ದಾರೆ.

    ಯಶ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ ಚಾಪ್ಟರ್-2 ಇಡೀ ಇಂಡಿಯಾದ ಕಣ್ಣನ್ನು ತನ್ನತ್ತ ಸೆಳೆದಿದೆ. ಈ ಹಿನ್ನೆಲೆ ಉರ್ಫಿಯನ್ನು ಮುಂಬೈ ಪಾಪರಾಜಿಗಳು ಕೆಜಿಎಫ್-2 ಸಿನಿಮಾ ಟ್ರೇಲರ್ ನೋಡಿದ್ರಾ ಎಂದು ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿದ ಉರ್ಫಿ, ಇಲ್ಲ ನಾನು ನೋಡಿಲ್ಲ. ನಾನು ಕೆಜಿಎಫ್ ಚಾಪ್ಟರ್ ಒಂದನ್ನೇ ಇನ್ನೂ ನೋಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾನು ನಿಮ್ಮವಳು, ಕೆಟ್ಟದ್ದಾಗಿ ಮಾತನಾಡಬೇಡಿ ಎಂದ ರಾಶಿ ಖನ್ನಾ

     

    View this post on Instagram

     

    A post shared by Viral Bhayani (@viralbhayani)

    ಆದರೆ ಈ ಬಗ್ಗೆ ನನಗೆ ಬೇಸರವಿದೆ. ಅದಕ್ಕೆ ಈ ಸಿನಿಮಾವನ್ನು ಒಟ್ಟಿಗೆ ನೋಡುವ ಯೋಜನೆಯಿದೆ. ಎರಡೂ ಭಾಗವನ್ನು ನೋಡುತ್ತೇನೆ ಎಂದು ತಿಳಿಸಿದ್ದಾರೆ. ಈ ವೇಳೆ ದಕ್ಷಿಣ ಸಿನಿಮಾವನ್ನು ನೀವು ನೋಡುವುದಿಲ್ವ ಎಂದು ಕೇಳಿದಾಗ, ಇಲ್ಲ. ನಾನು ನೋಡುತ್ತೇನೆ. ಸೌತ್ ಸಿನಿಮಾದಲ್ಲಿಯೂ ಒಳ್ಳೆ ಸಿನಿಮಾಗಳಿವೆ. ಅಲ್ಲಿಯೂ ಹೆಚ್ಚು ಹ್ಯಾಂಡ್‍ಸಮ್ ನಾಯಕರಿದ್ದಾರೆ ಎಂದು ಉತ್ತರಿದ್ದಾರೆ. ದಕ್ಷಿಣದ ನೆಚ್ಚಿನ ನಟರ್ಯಾರು ಎಂದು ಕೇಳಿದ್ದಕ್ಕೆ, ಆಕೆ, ರಾಮ್‍ಚರಣ್ ನನಗೆ ತುಂಬಾ ಇಷ್ಟ. ಅವರು ತುಂಬಾ ಹ್ಯಾಂಡ್‍ಸಮ್ ಆಗಿದ್ದಾರೆ ಎಂದು ಉತ್ತರಿಸಿದ್ದಾರೆ.

    ತಮ್ಮ ಡ್ರೆಸ್‍ಗೆ ಸಂಬಂಧಿಸಿದಂತೆ ಹೆಚ್ಚು ಟ್ರೋಲ್‍ಗೆ ಗುರಿಯಾಗುವ ಈ ನಟಿ ಯಾವುದಕ್ಕೂ ಕೇರ್ ಮಾಡುವುದಿಲ್ಲ. ಓಟಿಟಿ ಶೋ ಮೂಲಕ ಬಾಲಿವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟ ಈ ನಟಿ ಹಾಟ್ ಅವತಾರದಲ್ಲಿ ಅಭಿಮಾನಿಗಳ ಮುಂದೆ ಬರುತ್ತಿರುತ್ತಾರೆ. ಅವರ ವೀಡಿಯೋ, ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿರುತ್ತೆ. ಇದನ್ನೂ ಓದಿ: ಗರ್ಲ್‍ಫ್ರೆಂಡ್, ಮಾಜಿ ಪತ್ನಿ ಜೊತೆ ಗೋವಾದಲ್ಲಿ ಪಾರ್ಟಿ ಮಾಡಿದ ಹೃತಿಕ್ ರೋಷನ್

  • 24 ಗಂಟೆಯಲ್ಲಿ ಅತಿ ಹೆಚ್ಚು ವೀಕ್ಷಣೆ – ಭಾರತದಲ್ಲಿ ಕೆಜಿಎಫ್ ದಾಖಲೆ

    24 ಗಂಟೆಯಲ್ಲಿ ಅತಿ ಹೆಚ್ಚು ವೀಕ್ಷಣೆ – ಭಾರತದಲ್ಲಿ ಕೆಜಿಎಫ್ ದಾಖಲೆ

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಕೆಜಿಎಫ್ ಚ್ಯಾಪ್ಟರ್ 2 ಟ್ರೈಲರ್ ಬಿಡುಗಡೆಯಾಗಿದೆ. ಕೇವಲ 24 ಗಂಟೆಗಳಲ್ಲಿ ಟ್ರೈಲರ್ ಬರೋಬ್ಬರಿ 10 ಕೋಟಿಗೂ ಅಧಿಕ ವೀಕ್ಷಣೆ ಪಡೆದಿದ್ದು, ಈ ಹಿಂದೆ ರಾಧೆ ಶ್ಯಾಮ್ ಸಿನಿಮಾದ ಟ್ರೈಲರ್ ಬರೆದಿದ್ದ ದಾಖಲೆಯನ್ನು ಕೆಜಿಎಫ್ ಚ್ಯಾಪ್ಟರ್ 2 ಟ್ರೈಲರ್ ಮುರಿದಿದೆ.

    ಈ ಹಿಂದೆ ಪ್ರಭಾಸ್ ಅಭಿನಯದ ತೆಲುಗು ಚಿತ್ರ ರಾಧೆ ಶ್ಯಾಮ್ ಸಿನಿಮಾದ ಟ್ರೈಲರ್ ಕೇವಲ 24 ಗಂಟೆಗಳಲ್ಲಿ 6.4 ಕೋಟಿಗೂ ಅಧಿಕ ವೀಕ್ಷಣೆ ಪಡೆದಿತ್ತು. 2021ರ ಡಿಸೆಂಬರ್ 23ರಂದು ಬಿಡುಗಡೆಯಾಗಿದ್ದ ಸಿನಿಮಾದ ಟ್ರೈಲರ್ ಕೇವಲ 24 ಗಂಟೆಗಳಲ್ಲಿ ಭಾರತದಲ್ಲೇ ಅತೀ ಹೆಚ್ಚು ವೀಕ್ಷಣೆ ಪಡೆದು ಹೆಗ್ಗಳಿಕೆಗೆ ಪಾತ್ರವಾಗಿತ್ತು. ಇದೀಗ ಕೆಜಿಎಫ್ ಚ್ಯಾಪ್ಟರ್ 2 ಟ್ರೈಲರ್ ರಾಧೆ ಶ್ಯಾಮ್ ದಾಖಲೆ ಮುರಿದಿದೆ.

    ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ ಚ್ಯಾಪ್ಟರ್ 2 ಟ್ರೈಲರ್ ಕನ್ನಡದಲ್ಲಿ 1.8 ಕೋಟಿ, ತೆಲುಗಿನಲ್ಲಿ 2 ಕೋಟಿ, ತಮಿಳಿನಲ್ಲಿ 1.2 ಕೋಟಿ, ಮಲೆಯಾಳಂನಲ್ಲಿ 80 ಲಕ್ಷ ಹಾಗೂ ಹಿಂದಿ ಭಾಷೆಯಲ್ಲಿ 5.1 ಕೋಟಿ ವೀಕ್ಷಣೆಗಳನ್ನು ಪಡೆದಿದೆ. ಇದನ್ನೂ ಓದಿ: ಸಿನಿಮಾದ ಒಂದಷ್ಟು ಕಥೆ ಬಿಟ್ಟುಕೊಟ್ಟ ‘ಕೆಜಿಎಫ್ 2’ ಟ್ರೈಲರ್

    ಕೆಜಿಎಫ್ ಚ್ಯಾಪ್ಟರ್ 2 ಟೀಸರ್ ಬಿಡುಗಡೆಯಾದಾಗಲೂ ಕೇವಲ 24 ಗಂಟೆಗಳಲ್ಲಿ 7 ಕೋಟಿಗೂ ಅಧಿಕ ವೀಕ್ಷಣೆ ಪಡೆದುಕೊಂಡಿತ್ತು. ಇಲ್ಲಿಯವರೆಗೆ ಇದರ ಟೀಸರ್ 20 ಮಿಲಿಯನ್‌ಗೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಇದನ್ನೂ ಓದಿ: ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ

    ಈ ಹಿಂದೆ ಕೆಜಿಎಫ್‌ನ ಮೊದಲ ಆವೃತ್ತಿ ಬಿಡುಗಡೆಯಾದಾಗ ಭಾರತ ಮಾತ್ರವಲ್ಲದೇ ವಿದೇಶದಲ್ಲೂ ಈ ಸಿನಿಮಾ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಕೆಜಿಎಫ್ ಚ್ಯಾಪ್ಟರ್ 2 ಸಿನಿಮಾ ದೇಶಾದ್ಯಂತ ಏಪ್ರಿಲ್ 14ರಂದು ಬಿಡುಗಡೆಯಾಗಲಿದ್ದು, ಇದಕ್ಕಾಗಿ ಯಶ್ ಅಭಿಮಾನಿಗಳು ಭಾರೀ ಕಾತುರರಾಗಿ ಕಾಯುತ್ತಿದ್ದಾರೆ.

  • ಬೃಹತ್ ಎಲ್.ಇ.ಡಿ ಪರದೆಯ ಮೇಲೆ ನೋಡಿ ಕೆಜಿಎಫ್ 2 ಟ್ರೈಲರ್

    ಬೃಹತ್ ಎಲ್.ಇ.ಡಿ ಪರದೆಯ ಮೇಲೆ ನೋಡಿ ಕೆಜಿಎಫ್ 2 ಟ್ರೈಲರ್

    ದೊಡ್ಡಬಳ್ಳಾಪುರದಲ್ಲಿ ಕೆಜಿಎಫ್ ಚಾಪ್ಟರ್-2 ಚಿತ್ರದ ಟ್ರೈಲರ್ ಅನ್ನು ಬೃಹತ್ ಎಲ್‍ಇಡಿ ಪರದೆಯ ಮೂಲಕ ವಿಕ್ಷಣೆಗೆ ಯಶ್ ಅಭಿಮಾನಿಗಳು ವ್ಯವಸ್ಥೆ ಮಾಡಿಕೊಂಡಿದ್ದಾರೆ.

    ಕೆಜಿಎಫ್-2 ಸಿನಿಮಾಕ್ಕಾಗಿ ಇಡೀ ಭಾರತವೇ ಎದುರು ನೋಡುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಅವರನ್ನು ಪ್ಯಾನ್ ಇಂಡಿಯಾ ಸ್ಟಾರ್ ಮಾಡಿದ ಚಿತ್ರ ಕೆಜಿಎಫ್ ಚಾಪ್ಟರ್-1 ಸಲ್ಲುತ್ತದೆ. ಇದೀಗ ಕೆಜಿಎಫ್ ಚಾಪ್ಟರ್-2ರ ಮೇಲೆ ನಿರೀಕ್ಷೆ ದುಪ್ಪಟ್ಟಾಗಿದೆ. ಈ ಮಧ್ಯೆ ‘ಕೆಜಿಎಫ್ 2’ ಟ್ರೈಲರ್ ಯಾವಾಗ ರಿಲೀಸ್ ಆಗಲಿದೆ ಎಂಬ ಪ್ರಶ್ನೆ ಹಲವರಲ್ಲಿ ಇತ್ತು. ಅದಕ್ಕೂ ಉತ್ತರ ಸಿಕ್ಕಿದ್ದು, ಚಿತ್ರತಂಡ ಅಧಿಕೃತ ಮಾಹಿತಿ ಹೊರಹಾಕಿದೆ. ಇದನ್ನೂ ಓದಿ: RRR ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ

    ಯಶ್ ಅಭಿನಯದ ಈ ಚಿತ್ರದ ಟ್ರೈಲರ್ ಮಾರ್ಚ್ 27ರಂದು ಸಂಜೆ 6.40ಕ್ಕೆ ರಿಲೀಸ್ ಆಗಲಿದ್ದು, ಯಾವಾಗಲೂ ಕೂಡ ಮಿಂಚು ಬರುವ ಮುನ್ನ ಗುಡುಗು ಬರುತ್ತದೆ ಎಂದು ಟ್ರೈಲರ್ ರಿಲೀಸ್ ಡೇಟ್ ಅನ್ನು ಅನೌನ್ಸ್ ಮಾಡಿದೆ ಚಿತ್ರತಂಡ. ಅಭಿಮಾನಿಗಳು ಸಿನಿಮಾದ ಅಪ್‍ಡೇಟ್ ಏನೂ ಸಿಗುತ್ತಿಲ್ಲ ಎಂದು ಹಲವು ಸಮಯದಿಂದ ಬೇಸರ ಮಾಡಿಕೊಂಡಿದ್ದರು. ಟ್ವಿಟ್ಟರ್‍ನಲ್ಲೂ ಚಿತ್ರದ ಅಪ್‍ಡೇಟ್‍ಗಾಗಿ ಕೇಳುತ್ತಿದ್ದರು. ಇದೀಗ ಅವರೆಲ್ಲರಿಗೂ ಖುಷಿಯಾಗುವಂತಹ ಮಾಹಿತಿಯನ್ನು ಚಿತ್ರತಂಡ ಹಂಚಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಸಂಘ ದೊಡ್ಡಬಳ್ಳಾಪುರ ತಾಲೂಕು ಘಟಕದಿಂದ ಬೃಹತ್ ಎಲ್‍ಇಡಿ ಪರದೆ ಮೂಲಕ ಟ್ರೈಲರ್ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿದೆ. ಇದನ್ನೂ ಓದಿ: ಆರ್.ಆರ್.ಆರ್ ಬೈಕಾಟ್ : ಕನ್ನಡ ಪರ ಹೋರಾಟಗಾರರಿಗೇ ಜವಾಬ್ದಾರಿ ಕೊಟ್ಟ ರಾಜಮೌಳಿ ಟೀಮ್

    ಈ ಕುರಿತಂತೆ ಪೋಸ್ಟರ್ ಬಿಡುಗಡೆ ಮಾಡಿರುವ ಅಭಿಮಾನಿಗಳ ಸಂಘದ ತಾಲೂಕು ಘಟಕದ ಅಧ್ಯಕ್ಷ ಯಶವಂತ್ ಆರಾಧ್ಯ, ಬಹು ನಿರೀಕ್ಷಿತ ಕೆಜಿಎಫ್ ಚಾಪ್ಟರ್-2 ಟ್ರೈಲರ್ ಮಾರ್ಚ್ 27ರಂದು ಸಂಜೆ 6.40ಕ್ಕೆ ರಿಲೀಸ್ ಆಗಲಿರುವುದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ಬೃಹತ್ ಎಲ್‍ಇಡಿ ಪರದೆ ಮೂಲಕ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಟ್ರೈಲರ್ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಅಂತ ತಿಳಿಸಿದ್ದಾರೆ.

  • ಥಿಯೇಟರ್‌ಗಳಲ್ಲಿ ನಾವು ರಾಜಿಯಾಗಲ್ಲ: ಅಮೀರ್‌ಗೆ ಯಶ್ ಉತ್ತರ

    ಥಿಯೇಟರ್‌ಗಳಲ್ಲಿ ನಾವು ರಾಜಿಯಾಗಲ್ಲ: ಅಮೀರ್‌ಗೆ ಯಶ್ ಉತ್ತರ

    ಬೆಂಗಳೂರು: ಥಿಯೇಟರ್‌ಗಳಲ್ಲಿ ನಾವು ರಾಜೀಯಾಗುವುದಿಲ್ಲ ಎಂದು ರಾಕಿಂಗ್ ಸ್ಟಾರ್ ಯಶ್ ಬಾಲಿವುಡ್ ನಟ ಅಮೀರ್ ಖಾನ್ ಗೆ ಉತ್ತರಿಸಿದ್ದಾರೆ.

    ಕೆಜಿಎಫ್ ಚಾಪ್ಟರ್-2 ರಿಲೀಸ್ ದಿನವೇ `ಲಾಲ್ ಸಿಂಗ್ ಚಡ್ಡಾ’ ಸಿನಿಮಾ ಸಹ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆ ಅಮೀರ್ ಖಾನ್ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಯಶ್ ಅವರನ್ನು ಟೆಕ್ಸ್ಟ್ ಮೆಸೇಜ್ ನಲ್ಲಿ ಕ್ಷಮೆ ಕೇಳಿಕೊಂಡಿದ್ದರು.

    ಅದಕ್ಕೆ ಪ್ರತಿಕ್ರಿಯಿಸಿದ ಯಶ್, ಅಮೀರ್ ಜೀ ನಿಮ್ಮ ಅನಿವಾರ್ಯತೆ ನಮಗೆ ಅರ್ಥವಾಗುತ್ತೆ. ಪರವಾಗಿಲ್ಲ ನೀವೂ ಅಂದೇ ಸಿನಿಮಾವನ್ನು ರಿಲೀಸ್ ಮಾಡಬಹುದು. ನೀವು ಬಾಲಿವುಡ್‍ಗೆ ಹಿರಿಯರು. ನಿಮ್ಮ ಕೋರಿಕೆಯನ್ನು ತಿರಸ್ಕರಿಸಲಾಗದು. ಆದರೆ ಥಿಯೇಟರ್‍ಗಳಲ್ಲಿ ನಾವು ರಾಜಿಯಾಗುವುದಿಲ್ಲ. ನಮ್ಮ ನಿರ್ಮಾಪಕರಿಗೂ ಕಷ್ಟವಾಗಬಾರದಲ್ಲವೇ? ನಮ್ಮ ಹಂಚಿಕೆದಾರರ ಜೊತೆ ಈ ಬಗ್ಗೆ ಒಂದು ಸಲ ಮಾತನಾಡುತ್ತೇನೆ. ನಿಮ್ಮ ಬೆಂಬಲಕ್ಕೆ ನಾನಿರುತ್ತೇನೆ. ನೀವು ಸಹಕರಿಸಿ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಯಶ್‌, ಪ್ರಶಾಂತ್‌ ನೀಲ್‌ ಬಳಿ ಕ್ಷಮೆ ಕೇಳಿದ ಅಮೀರ್‌ ಖಾನ್‌

    ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅಮೀರ್ ನಾನು ಬೇರೆಯವರನ್ನು ಅತಿಕ್ರಮಿಸಿಕೊಳ್ಳುತ್ತಿದ್ದೇನೆ ಎಂಬ ಭಾವನೆ ಸೃಷ್ಟಿ ಆಗುವುದನ್ನು ದ್ವೇಷಿಸ್ತೇನೆ. ಆದರೆ ನಾನು ಮೊದಲ ಬಾರಿಗೆ ಸಿಖ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕಾರಣ ಏಪ್ರಿಲ್ 14ರಂದು ಬೈಸಾಖಿ ದಿನ ಸಿನಿಮಾ ರಿಲೀಸ್ ಮಾಡುವುದು ಸೂಕ್ತ ಎಂದು ಭಾವಿಸಿದ್ದೆ. ಹೀಗಾಗಿ ನಾನು ಕೆಜಿಎಫ್ ನಿರ್ಮಾಪಕ, ನಿರ್ದೇಶಕ ಮತ್ತು ಯಶ್ ಅವರಲ್ಲಿ ಕ್ಷಮೆ ಕೇಳಿದ್ದೇನೆ ಎಂದಿದ್ದರು.

    ಬೈಸಾಖಿ ದಿನ ನನ್ನ ಸಿನಿಮಾ ಬಿಡುಗಡೆಯಾದರೆ ಸೂಕ್ತ ಎಂದು ಅವರಿಗೆ ತಿಳಿಸಿದೆ. ಅವರು ನನ್ನ ಅಭಿಪ್ರಾಯವನ್ನು ಒಪ್ಪಿಕೊಂಡರು. ಅವರ ಸಿನಿಮಾ ರಿಲೀಸ್ ಇದ್ದರೂ ಅದೇ ನೀವು ಸಿನಿಮಾ ಬಿಡುಗಡೆ ಮಾಡಿ ಎಂದು ನನಗೆ ಹೇಳಿದರು. ಅವರ ಸ್ಪಂದನೆ ನನಗೆ ಇಷ್ಟ ಆಯಿತು. ನನ್ನ ಯೋಚನೆಗೆ ಯಶ್ ತುಂಬಾನೇ ಬೆಂಬಲವಾಗಿ ನಿಂತರು ಎಂದು ಅಮೀರ್ ಹೇಳಿಕೊಂಡಿದ್ದರು. ಇದನ್ನೂ ಓದಿ:  ಅಭಿಮಾನಿಯಿಂದ ಅಪ್ಪುಗೆ ಅಯ್ಯಪ್ಪನ ದರ್ಶನ

  • ಯಶ್‌, ಪ್ರಶಾಂತ್‌ ನೀಲ್‌ ಬಳಿ ಕ್ಷಮೆ ಕೇಳಿದ ಅಮೀರ್‌ ಖಾನ್‌

    ಯಶ್‌, ಪ್ರಶಾಂತ್‌ ನೀಲ್‌ ಬಳಿ ಕ್ಷಮೆ ಕೇಳಿದ ಅಮೀರ್‌ ಖಾನ್‌

    ಮುಂಬೈ: ಕೆಜಿಎಫ್ ಚಾಪ್ಟರ್-2 ರಿಲೀಸ್ ದಿನವೇ `ಲಾಲ್ ಸಿಂಗ್ ಚಡ್ಡಾ’ ಸಿನಿಮಾವನ್ನೂ ರಿಲೀಸ್ ಮಾಡುತ್ತಿರುವುದಕ್ಕೆ ಅಮೀರ್ ಖಾನ್ ಕೆಜಿಎಫ್‍ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ರಾಕಿಂಗ್ ಸ್ಟಾರ್ ಯಶ್‍ಗೆ ಟೆಕ್ಟ್ಸ್ ಮೆಸೇಜ್ ಮಾಡಿ ಕ್ಷಮೆ ಕೇಳಿದ್ದಾರೆ.

    ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅಮೀರ್, ನಾನು ಬೇರೆಯವರನ್ನು ಅತಿಕ್ರಮಿಸಿಕೊಳ್ಳುತ್ತಿದ್ದೇನೆ ಎಂಬ ಭಾವನೆ ಸೃಷ್ಟಿ ಆಗುವುದನ್ನು ದ್ವೇಷಿಸ್ತೇನೆ. ಆದರೆ ನಾನು ಮೊದಲ ಬಾರಿಗೆ ಸಿಖ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕಾರಣ ಏಪ್ರಿಲ್ 14ರಂದು ಬೈಸಾಖಿ ದಿನ ಸಿನಿಮಾ ರಿಲೀಸ್ ಮಾಡುವುದು ಸೂಕ್ತ ಎಂದು ಭಾವಿಸಿದ್ದೆ. ಹೀಗಾಗಿ ನಾನು ಕೆಜಿಎಫ್ ನಿರ್ಮಾಪಕ ವಿಜಯ್‌ ಕಿರಗಂದೂರು, ನಿರ್ದೇಶಕ ಪ್ರಶಾಂತ್‌ ನೀಲ್ ಮತ್ತು ಯಶ್ ಅವರಲ್ಲಿ ಕ್ಷಮೆ ಕೇಳಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್!

    ಬೈಸಾಖಿ ದಿನ ನನ್ನ ಸಿನಿಮಾ ಬಿಡುಗಡೆಯಾದರೆ ಸೂಕ್ತ ಎಂದು ಅವರಿಗೆ ತಿಳಿಸಿದೆ. ಅವರು ನನ್ನ ಅಭಿಪ್ರಾಯವನ್ನು ಒಪ್ಪಿಕೊಂಡರು. ಅವರ ಸಿನಿಮಾ ರಿಲೀಸ್ ಇದ್ದರೂ ಅದೇ ನೀವು ಸಿನಿಮಾ ಬಿಡುಗಡೆ ಮಾಡಿ ಎಂದು ನನಗೆ ಹೇಳಿದರು. ಅವರ ಸ್ಪಂದನೆ ನನಗೆ ಇಷ್ಟ ಆಯಿತು. ನನ್ನ ಯೋಚನೆಗೆ ಯಶ್ ತುಂಬಾನೇ ಬೆಂಬಲವಾಗಿ ನಿಂತರು ಎಂದು ಅಮೀರ್ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ತಾಯಿಯಾಗ್ತಿದ್ದಾರಾ ಪ್ರಿಯಾಂಕಾ ಚೋಪ್ರಾ?

    ಸಾಮಾನ್ಯವಾಗಿ ಅಮೀರ್ ಖಾನ್ ಸಿನಿಮಾಗಳು ಕ್ರಿಸ್‍ಮಸ್ ರಜೆಗೆ ರಿಲೀಸ್ ಆಗುತ್ತಿತ್ತು. ಆದರೆ ಕ್ರಿಸ್‍ಮಸ್ ಬದಲು ಏಪ್ರಿಲ್‍ನಲ್ಲಿ ಕೆಜಿಎಫ್ ಜೊತೆಗೆ ರಿಲೀಸ್ ಆಗುತ್ತಿರುವುದು ಯಾಕೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಕೋವಿಡ್ ಕಾರಣದಿಂದ ಕ್ರಿಸ್‍ಮಸ್‍ಗೆ ರಿಲೀಸ್ ಮಾಡುವುದು ಬೇಡ ಎಂದು ಲಾಲ್ ಸಿಂಗ್ ಚಡ್ಡಾ ಸಿನಿಮಾ ತಂಡ ನಿರ್ಧರಿಸಿತ್ತು. ಈ ನಡುವೆ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮಾರ್ಚ್ 14ಕ್ಕೆ ಮೊದಲು ಮುಗಿಯುವುದು ಕಷ್ಟವಾಗಿತ್ತು. ಹೀಗಾಗಿ ಏಪ್ರಿಲ್ 14ರಂದು ಸಿನಿಮಾ ರಿಲೀಸ್ ಮಾಡೋಣ ಎಂದು ಲಾಲ್‍ಸಿಂಗ್ ಚಡ್ಡಾ ಸಿನಿಮಾ ತಂಡ ನಿರ್ಧರಿಸಿದೆ.

  • ಕೆಜಿಎಫ್ ಶೂಟಿಂಗ್ ನಡೆದ ಬಂಜರು ಭೂಮಿಗೆ ಮತ್ತೆ ಜೀವ ನೀಡುತ್ತಿದೆ ಹೊಂಬಾಳೆ ಫಿಲಂಸ್

    ಕೆಜಿಎಫ್ ಶೂಟಿಂಗ್ ನಡೆದ ಬಂಜರು ಭೂಮಿಗೆ ಮತ್ತೆ ಜೀವ ನೀಡುತ್ತಿದೆ ಹೊಂಬಾಳೆ ಫಿಲಂಸ್

    ಕೋಲಾರ: ಕೆಜಿಎಫ್ ಚಾಪ್ಟರ್ 2 ಸಿನಿಮಾ ಚಿತ್ರೀಕರಣ ನಡೆದ ಸೈನೈಡ್ ಬೆಟ್ಟದಲ್ಲಿ ಹೊಂಬಾಳೆ ಫಿಲಂಸ್ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.

    ಕೆಜಿಎಫ್ ಚಾಪ್ಟರ್ 2 ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲಂಸ್ ಸಂಸ್ಥೆ ಕೆಜಿಎಫ್ ನಗರದಲ್ಲಿ ಬರಡು ಭೂಮಿಯಾಗಿದ್ದ ಸೈನೈಡ್ ಗುಡ್ಡದಲ್ಲಿ ಸಸಿ ನೆಡಲು ಆರಂಭಿಸಿದೆ.

    ಸೈನೈಡ್ ಗುಡ್ಡದಲ್ಲಿ ಅರಣ್ಯ ಬೆಳೆಸುವ ಮೂಲಕ ಅಲ್ಲಿನ ನಿವಾಸಿಗಳಿಗೆ ಸ್ವಚ್ಛ ಪರಿಸರ ನೀಡುವ ಉದ್ದೇವನ್ನು ಹೊಂಬಾಳೆ ಫಿಲಂಸ್ ಹೊಂದಿದ್ದು, ಹೊಂಬಾಳೆ ಫಿಲಂಸ್ ವೀಡಿಯೋ ಅಪ್ಲೋಡ್ ಮಾಡಿದೆ. ಈ ವೀಡಿಯೋ ನೋಡಿದ ವೀಕ್ಷಕರು ಸಖತ್ ಖುಷಿ ಪಟ್ಟಿದ್ದು, ಈ ಕೆಲಸಕ್ಕೆ ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಷ್ಟಕರವಾದ ರಸ್ತೆಗಳು ಸುಂದರ ತಾಣಗಳಿಗೆ ದಾರಿ ಮಾಡಿಕೊಡುತ್ತೆ: ದೀಪಿಕಾ ದಾಸ್

    ಕೆಜಿಎಫ್ ಸಿನಿಮಾ ಚಿತ್ರೀಕರಣ ನಡೆದ ಜಾಗದಲ್ಲಿ ಹೊಂಬಾಳೆ ಫಿಲಂಸ್ ಹಾಗೂ ಅರಣ್ಯ ಇಲಾಖೆ ಜೊತೆಗೂಡಿ ಸಾವಿರಾರು ಗಿಡಗಳನ್ನು ನೆಡುವ ಮೂಲಕ ಈ ಬಂಜರು ಭೂಮಿಗೆ ಮತ್ತೆ ಜೀವ ನೀಡಲಾಗುತ್ತಿದೆ. ಇದಕ್ಕೆ ಕೋಲಾರದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ ಈ ಕಾರ್ಯಕ್ಕೆ ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಿದೆ.

    ಪ್ರಕೃತಿಯ ಮೇಲಿನ ಕಾಳಜಿ ಪ್ರಕೃತಿಗೆ ಮರಳಿ ನೀಡುವುದರಲ್ಲಿ ಹಾಗೂ ಅದನ್ನು ಮುಂದಿನ ಪೀಳಿಗೆಗೋಸ್ಕರ ಕಾಪಾಡುವುದರಲ್ಲಿದೆ ಎಂದು ನಾವು ನಂಬುತ್ತೇವೆ ಹೊಂಬಾಳೆ ಫಿಲಂಸ್ ಹೇಳಿದೆ. ಇದನ್ನೂ ಓದಿ: ಭಾರತದಲ್ಲಿ ಆರಂಭ, ಅಮೆರಿಕದಲ್ಲಿ ಕೊನೆ – ಸ್ಪೆಷಲ್ ಆಗಿ ಹುಟ್ಟುಹಬ್ಬ ಆಚರಿಸಿದ ರಮಿಕಾ ಸೇನ್‍

    ಕೆಜಿಎಫ್ ಸಿನಿಮಾ ಪ್ಯಾನ್ ಇಂಡಿಯಾ ಸುದ್ದಿಯಾಗಿತ್ತು. ಈಗ ಕೆಜಿಎಫ್ ಚಾಪ್ಟರ್ 2 ಸಿನಿಮಾ ಮೇಲೆ ಪ್ರೇಕ್ಷಕರಲ್ಲಿ ಭಾರೀ ನೀರಿಕ್ಷೆಯಿದೆ. ಪ್ರಶಾಂತ್ ನೀಲ್ ಈ ಚಿತ್ರಕ್ಕೆ ಆಕ್ಷನ್ ಕಟ್ ಕೇಳಿದ್ದು, ರಾಕಿಂಗ್ ಸ್ಟಾರ್ ಯಶ್ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಕೆಜಿಎಫ್ ಚಾಪ್ಟರ್ 2 ಚಿತ್ರವನ್ನು 2022ರ ಏಪ್ರಿಲ್ 14 ರಂದು ಬಹುಭಾಷೆಗಳಲ್ಲಿ ರಿಲೀಸ್ ಮಾಡಲಾಗುತ್ತಿದೆ.

  • ಭಾರತದಲ್ಲಿ ಆರಂಭ, ಅಮೆರಿಕದಲ್ಲಿ ಕೊನೆ –  ಸ್ಪೆಷಲ್ ಆಗಿ ಹುಟ್ಟುಹಬ್ಬ ಆಚರಿಸಿದ ರಮಿಕಾ ಸೇನ್‍

    ಭಾರತದಲ್ಲಿ ಆರಂಭ, ಅಮೆರಿಕದಲ್ಲಿ ಕೊನೆ – ಸ್ಪೆಷಲ್ ಆಗಿ ಹುಟ್ಟುಹಬ್ಬ ಆಚರಿಸಿದ ರಮಿಕಾ ಸೇನ್‍

    ಮುಂಬೈ: ಕೆಜಿಎಫ್:ಚಾಪ್ಟರ್ 2 ಸಿನಿಮಾದಲ್ಲಿ ನಟಿಸಿದ ರವೀನಾ ಟಂಡನ್ ತಮ್ಮ 47ನೇ ಹುಟ್ಟುಹಬ್ಬದ ಆಚರಣೆಯನ್ನು ಭಾರತದಲ್ಲಿ ಪ್ರಾರಂಭಿಸಿ ಅಮೆರಿಕದ ಲಾಸ್ ಏಂಜಲೀಸ್‍ನಲ್ಲಿ ಕೊನೆಗೊಳಿಸಿದ್ದಾರೆ.

    ನಿನ್ನೆ ರವೀನಾ 47ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಭಾರತದಲ್ಲಿ ತಮ್ಮ ಮನೆಯಲ್ಲಿ ಮಧ್ಯರಾತ್ರಿ ಕೇಕ್ ಕತ್ತರಿಸುವುದರೊಂದಿಗೆ ಆರಂಭಿಸಿದ ಇವರು, ಮರುದಿನ ಸಂಜೆ ಲಾಸ್ ಏಂಜಲೀಸ್, ಕ್ಯಾಲಿಫೋರ್ನಿಯಾ, ಯುಎಸ್ ನಲ್ಲಿ ಮುಕ್ತಾಯಗೊಳಿಸಿದ್ದಾರೆ. ಈ ವೇಳೆ ರುಚಿಕರವಾದ ಭಿನ್ನ ಆಹಾರವನ್ನು ಸೇವಿಸಿರುವ ಈ ನಟಿ ತಮ್ಮ ಹುಟ್ಟುಹಬ್ಬವನ್ನು ಮತ್ತಷ್ಟು ವಿಶೇಷವಾಗಿಸಿಕೊಂಡಿದ್ದಾರೆ. ಇದನ್ನೂ ಓದಿ:  ನವೆಂಬರ್‌ನಲ್ಲಿ ತೆರೆಗೆ ಅಪ್ಪಳಿಸಲಿದೆ ‘ಟಾಮ್ ಅಂಡ್ ಜೆರ್ರಿ’

    ರವೀನಾ ತಮ್ಮ ಹುಟ್ಟುಹಬ್ಬದ ಆಚರಣೆಯ ಫೋಟೋ ಮತ್ತು ವೀಡಿಯೋಗಳನ್ನು ಇನ್‍ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು, ಶುಭಕೋರಿದ, ಆಶೀರ್ವಾದ ಮಾಡಿದ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇವರ ಹುಟ್ಟುಹಬ್ಬಕ್ಕೆ, ಶಿಲ್ಪಾ ಶೆಟ್ಟಿ ಮತ್ತು ಜೂಹಿ ಚಾವ್ಲಾ ಸೇರಿದಂತೆ ಹಲವು ಸೆಲೆಬ್ರಿಟಿಗಳು ವಿಶೇಷ ಪೋಸ್ಟ್ ಹಾಕಿ ಶುಭ ಹಾರೈಸಿದ್ದಾರೆ.

    ರವೀನಾ ಅವರ ಹಂಚಿಕೊಂಡಿದ್ದ ಫೋಟೋಗಳನ್ನು ನೋಡಿದರೆ, ಜನ್ಮದಿನವನ್ನು ವಿಶೇಷವಾಗಿ, ಬಹಳ ಸಂತೋಷದಿಂದ ಕಳೆದಿದ್ದಾರೆ ಎಂದು ಅವರು ಶೇರ್ ಮಾಡಿದ ಫೋಟೋ ಮತ್ತು ವೀಡಿಯೋ ನೋಡಿದರೆ ತಿಳಿಯುತ್ತದೆ. ರವೀನಾ ಭಾರತ ಮತ್ತು ಲಾಸ್ ಏಂಜಲೀಸ್‍ನಲ್ಲಿ ತನ್ನ ಪ್ರೀತಿಪಾತ್ರರ ಜೊತೆ ದಿನ ಕಳೆದಿದ್ದಾರೆ.

    ನನ್ನ ಮಕ್ಕಳು 16 ವರ್ಷ ಎಂದು ಭಾವಿಸುತ್ತಾರೆ!

    ರವೀನಾ ತಮ್ಮ ಹುಟ್ಟುಹಬ್ಬದ ಆಚರಣೆಯ ಫೋಟೋಗಳನ್ನು ಹಂಚಿಕೊಂಡಿದ್ದು, ಎ ಹ್ಯಾಪ್ ಹ್ಯಾಪ್ ಹ್ಯಾಪಿಪಿ ಜನ್ಮದಿನದ ಡಂಪ್, ಮಧ್ಯರಾತ್ರಿ 12 ಗಂಟೆಯಿಂದ ಕೇಕ್ ಹಾಸಿಗೆಯಲ್ಲಿ ಮುಂದಿನ ರಾತ್ರಿ 12 ರವರೆಗೆ, ಭಾರತದಲ್ಲಿ ಈಗ ನನ್ನ ಸಮಯ! ನನ್ನ ಮಕ್ಕಳು ನನಗೆ ಇನ್ನೂ 16 ವರ್ಷ ಎಂದು ಭಾವಿಸುತ್ತಾರೆ! ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಕ್ಕೆ ಎಲ್ಲರಿಗೂ ಧನ್ಯವಾದಗಳು! ನಿಮ್ಮೆಲ್ಲರಿಗೂ ವೈಯಕ್ತಿಕವಾಗಿ ಧನ್ಯವಾದ ಹೇಳಲು ಇಷ್ಟಪಡುತ್ತೇನೆ, ಆದರೆ ಕೊರೊನಾ ಕಾರಣ ಈ ಸಮಯದಲ್ಲಿ ಆಗುವುದಿಲ್ಲ. ಆದರೆ ನಿಮ್ಮೆಲ್ಲರ ಆಶೀರ್ವಾದಗಳೇ ನನ್ನ ಜೀವನವನ್ನು ಅದ್ಭುತವಾಗಿಸಿದೆ. ಎಂದೆಂದಿಗೂ ಕೃತಜ್ಞರಾಗಿರುತ್ತೇನೆ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ರಿಲ್ಯಾಕ್ಸ್ ಮೂಡ್​ನಲ್ಲಿರುವ ಹೇಮ ಮಾಲಿನಿ, ಧರ್ಮೇಂದ್ರ

    ಓಟಿಟಿಯಲ್ಲಿ ‘ಅರಣ್ಯಕ್’ ಸರಣಿಯಲ್ಲಿ ರವೀನಾ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸರಣಿಯಲ್ಲಿ ಇವರು ಯುವ ಪ್ರವಾಸಿಗರು ಕಣ್ಮರೆಯದಾಗ ಅವರನ್ನು ತನಿಖೆ ಮಾಡುವ ಪಾತ್ರವನ್ನು ಮಾಡುತ್ತಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳುತ್ತಿರುವ ಕೆಜಿಎಫ್ ಚಾಪ್ಟರ್ 2 ಸಿನಿಮಾದಲ್ಲಿ ರವೀನಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಈ ಚಿತ್ರವನ್ನು 2022ರ ಏಪ್ರಿಲ್ 14 ರಂದು ಬಹುಭಾಷೆಗಳಲ್ಲಿ ರಿಲೀಸ್ ಮಾಡಲಾಗುತ್ತಿದೆ. ಈ ಚಿತ್ರದಲ್ಲಿ ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ಪ್ರಕಾಶ್ ರಾಜ್, ಮಾಳವಿಕಾ ಅವಿನಾಶ್, ಅನಂತ್ ನಾಗ್ ಮತ್ತು ಅಚ್ಯುತ್ ಕುಮಾರ್ ನಟಿಸಿದ್ದಾರೆ.