Tag: khadar

  • ದಕ್ಷಿಣ ಕನ್ನಡ ಜಿಲ್ಲೆಯದ್ದು ಒಬ್ಬರಿಗೊಬ್ಬರು ಜೀವ ಕೊಡೋ ಸಂಸ್ಕೃತಿ: ಖಾದರ್

    ದಕ್ಷಿಣ ಕನ್ನಡ ಜಿಲ್ಲೆಯದ್ದು ಒಬ್ಬರಿಗೊಬ್ಬರು ಜೀವ ಕೊಡೋ ಸಂಸ್ಕೃತಿ: ಖಾದರ್

    ರಾಯಚೂರು: ದಕ್ಷಿಣ ಕನ್ನಡದ ಜಿಲ್ಲೆಯ ಸಂಸ್ಕೃತಿ ನಿಜವಾದ ಸಂಸ್ಕೃತಿ. ಕೊಲೆಮಾಡುವ ಸಂಸ್ಕೃತಿ ನಮ್ಮದಲ್ಲ, ಒಬ್ಬರಿಗೊಬ್ಬರು ಜೀವ ಕೊಡುವ ಸಂಸ್ಕೃತಿ ನಮ್ಮದು ಅಂತ ಸಚಿವ ಯುಟಿ ಖಾದರ್ ಹೇಳಿದ್ದಾರೆ.

    ರಾಯಚೂರಿನ ಸಿಂಧನೂರಿನಲ್ಲಿ ಮಾತನಾಡಿದ ಸಚಿವ ಖಾದರ್ ಕೇವಲ ಶೇ.10 ರಷ್ಟು ಜನ ಮಾತ್ರ ಕೋಮುವಾದ ಸಂಬಂಧ ಹಲ್ಲೆ ಮಾಡುತ್ತಿದ್ದಾರೆ. ಅವರು ಯಾರೇ ಇದ್ದರೂ ಅವರ ವಿರುದ್ದ ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಶರತ್ ಕೊಲೆ ಆರೋಪಿಗಳನ್ನ ಶೀಘ್ರದಲ್ಲಿ ಪತ್ತೆ ಹಚ್ಚಲು ಪೊಲೀಸರಿಗೆ ಸೂಚಿಸಿದ್ದೇವೆ ಅಂತ ತಿಳಿಸಿದರು.

    ಗುಜರಾತ್ ನ ಶಾಸಕರಿಗೆ ಬೆದರಿಕೆ ಹಾಗೂ ಆಮಿಷ ಒಡ್ಡಿದ್ದರಿಂದ ರಾಜ್ಯದಲ್ಲಿ ರಕ್ಷಣೆ ನೀಡಲಾಗಿತ್ತು. ಸೇಡಿನ ರಾಜಕಾರಣ ಮಾಡಿರುವ ಬಿಜೆಪಿ ಡಿಕೆಶಿ ಮೇಲೆ ಐಟಿ ದಾಳಿ ಮಾಡಿಸಿದೆ ಅಂತ ಆರೋಪಿಸಿದರು.

     

     

     

     

  • ಮಹದೇವ ಪ್ರಸಾದ್ ಅವ್ರ ಕೆಲ್ಸಕ್ಕೆ ಜನ ನೀಡಿದ ಕಾಣಿಕೆಯಿದು: ಖಾದರ್

    ಮಹದೇವ ಪ್ರಸಾದ್ ಅವ್ರ ಕೆಲ್ಸಕ್ಕೆ ಜನ ನೀಡಿದ ಕಾಣಿಕೆಯಿದು: ಖಾದರ್

    ಗುಂಡ್ಲುಪೇಟೆ: ಪಕ್ಷದ ಪ್ರಾಮಾಣಿಕ ಕೆಲಸದಿಂದ ಜನ ಇಂದು ಕಾಂಗ್ರೆಸ್‍ಗೆ ಮತ ಹಾಕಿ ಗೆಲ್ಲಿಸಿದ್ದಾರೆ ಅಂತಾ ಆಹಾರ ಮತ್ತು ನಾಗರಿಕ ಪೊರೈಕೆ ಸರಬರಾಜು ಸಚಿವ ಯು ಟಿ ಖಾದರ್ ಹೇಳಿದ್ದಾರೆ.

    ಎರಡೂ ಕ್ಷೇತ್ರಗಳ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್, ಜನಪರ ಯೋಜನೆಗಳು, ಸಚಿವ, ಅಧ್ಯಕ್ಷರ ವಿಶೇಷವಾದ ಸಹಕಾರ ಹಾಗೂ ಡಿಕೆ ಶಿವಕುಮಾರ್, ದಿನೇಶ್ ಗುಂಡೂರಾವ್, ಸಚಿವರು, ಶಾಸಕ ಮಿತ್ರರು, ಜಿಲ್ಲಾ ಪಂಚಾಯತ್ ಸದಸ್ಯರ ಪ್ರಾಮಾಣಿಕ ಕೆಲಸದಿಂದ ಇಂದು ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದರು.

    ಸ್ಥಳೀಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರು, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರು, ಗ್ರಾಮ, ನಗರಸಭೆ ಸದಸ್ಯರು ಎಲ್ಲರೂ ಒಗ್ಗಟಾಗಿ ಒಂದೇ ಕುಟುಂಬದಂತೆ ಕೆಲಸ ಮಾಡಿದರ ಫಲಿತಾಂಶ ಇದಾಗಿದೆ. ಡಾ. ಮಹದೇವ ಪ್ರಸಾದ್ ಅವರು ಮಾಡಿದ ಕೆಲಸಕ್ಕೆ ಈ ಕ್ಷೇತ್ರದ ಜನರು ಕೊಟ್ಟಂತಹ ವಿಶೇಷ ಕಾಣಿಕೆ ಇದಾಗಿದೆ ಅಂತಾ ಹೇಳಿದ್ರು.

    ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಡಾ. ಗೀತಾ ಮಹದೇವಪ್ರಸಾದ್ ಈ ಕ್ಷೇತ್ರದ ಗೌರವನ್ನು ಇನ್ನಷ್ಟು ಹೆಚ್ಚು ಮಾಡಲು ಮುಖ್ಯಮಂತ್ರಿಗಳು ಹಾಗೂ ಅಧ್ಯಕ್ಷರು ಎಲ್ಲರೂ ಅವರಿಗೆ ಸಹಕಾರ ಕೊಡ್ತಾರೆ. ಮಾನ್ಯ ಸಿದ್ದರಾಮಯ್ಯ ಅವರು ಯಾವೆಲ್ಲಾ ಯೋಜನೆಗಳನ್ನು ಜಾರಿಗೆ ತಂದದ್ದಾರೋ, ಅವುಗಳ ಅಭಿವೃದ್ಧಿಗೆ ಈ ಜನತೆ ತೀರ್ಮಾನ ಕೊಟ್ಟಿದ್ದಾರೆ. ಒಟ್ಟಿನಲ್ಲಿ ಗುಂಡ್ಲುಪೇಟೆಯ ಸರ್ವರಿಗೂ, ಸರ್ವ ಮತದಾರರಿಗೂ ಹಾಗೂ ಕಾರ್ಯಕರ್ತರಿಗೂ ಅಭಿನಂದನೆ ತಿಳಿಸಿದ್ರು.

    ಗುಂಡ್ಲುಪೇಟೆಯಲ್ಲಿ ಅಂತಿಮ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಾ. ಗೀತಾ ಮಹದೇವ ಪ್ರಸಾದ್ ಭರ್ಜರಿ ಜಯ ಗಳಿಸಿದ್ದಾರೆ. ಇದೀಗ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ.

  • ಅನ್ನಭಾಗ್ಯ ಯೋಜನೆಯಡಿಯಲ್ಲಿ ಇನ್ಮುಂದೆ 5 ಅಲ್ಲ, 7ಕೆ.ಜಿ ಅಕ್ಕಿ: ಖಾದರ್

    ಅನ್ನಭಾಗ್ಯ ಯೋಜನೆಯಡಿಯಲ್ಲಿ ಇನ್ಮುಂದೆ 5 ಅಲ್ಲ, 7ಕೆ.ಜಿ ಅಕ್ಕಿ: ಖಾದರ್

    ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿಯಲ್ಲಿ 5 ಕೆ.ಜಿ ವಿತರಣೆ ಮಾಡುತ್ತಿದ್ದ ಅಕ್ಕಿಯನ್ನು 7ಕೆ.ಜಿಗೆ ಹೆಚ್ಚಳ ಮಾಡಿದ್ದೇವೆ. ಈ ವ್ಯವಸ್ಥೆ ಏಪ್ರಿಲ್ 1ರಿಂದ ರಾಜ್ಯಾದ್ಯಂತ ಜಾರಿಯಾಗಲಿದೆ ಅಂತಾ ಆಹಾರ ಸಚಿವ ಯುಟಿ ಖಾದರ್ ತಿಳಿಸಿದ್ದಾರೆ.

    ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಡಿತರ ವಿತರಣೆ ಪ್ರತಿ ತಿಂಗಳು 1 ರಿಂದ 15ರೊಳಗೆ ಮಾಡಬೇಕು. ಈ ಹಿಂದೆ ಪಡಿತರವನ್ನು ಪಡೆಯಲು 30 ತಾರೀಕಿನವರೆಗೆ ಅವಕಾಶ ನೀಡಲಾಗಿತ್ತು. ಇದ್ರಿಂದ ಅಂಗಡಿಯವರು ಕ್ಲೋಸಿಂಗ್ ಬ್ಯಾಲೆನ್ಸ್ ಕೊಡುತ್ತಿರಲಿಲ್ಲ. ಹೀಗಾಗಿ ಇನ್ಮುಂದೆ ಜನರು ಪ್ರತಿ ತಿಂಗಳು 15ನೇ ತಾರೀಕಿನೊಳಗೆ ಪಡಿತರ ಪಡೆಯಬೇಕು ಅಂತಾ ಖಾದರ್ ಹೇಳಿದ್ದಾರೆ.

    ಇಂದಿರಾ ಕ್ಯಾಂಟಿನ್ ಈ ವಿಚಾರಕ್ಕೆ ಸಂಬಂಧಿಸಿದಂತೆ ಇಸ್ಕಾನ್ ಜೊತೆ ಇನ್ನೂ ಒಪ್ಪಂದ ಆಗಿಲ್ಲ. ವಾರ್ಷಿಕವಾಗಿ ಅಂದಾಜು ನೂರು ಕೋಟಿ ಸರ್ಕಾರಕ್ಕೆ ಹೊರೆಯಾಗುತ್ತದೆ. ಪ್ರಥಮ ಹಂತದಲ್ಲಿ ಒಂದು ಕ್ಯಾಂಟೀನ್ ನಲ್ಲಿ 250 ಜನರಿಗೆ ಮಾತ್ರ ಊಟ, ತಿಂಡಿ ಲಭ್ಯವಾಗುವುದು ಅಂತಾ ಅಂದ್ರು.

    ಇಸ್ಕಾನ್ ಜೊತೆ ಒಪ್ಪಂದ ಇಲ್ಲ: ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಇಸ್ಕಾನ್‍ಗೆ ಗುತ್ತಿಗೆ ನೀಡಲು ಶಾಸಕರು ವಿರೋಧಿಸಿದ್ದಾರೆ. ಇಸ್ಕಾನ್ ನವರು ಈರುಳ್ಳಿ, ಬೆಳ್ಳುಳ್ಳಿ ಬಳಸಲ್ಲ. ಆದ್ರೆ ಸರ್ಕಾರ ಮಾತ್ರ ಈರುಳ್ಳಿ, ಬೆಳ್ಳುಳ್ಳಿ ಬಳಸಬೇಕೆಂದು ಪಟ್ಟು ಹಿಡಿದಿದೆ. 3 ಗಂಟೆ ಮೊದಲು ಆಹಾರ ತಯಾರಿಸಲಾಗುತ್ತದೆ ಅಂತಾ ಇಸ್ಕಾನ್ ನವರು ಹೇಳಿದ್ದಾರೆ. ಹೀಗಾಗಿ ಒಂದು ಕೇಂದ್ರೀಕೃತ ಅಡುಗೆ ಮನೆಗೆ ಬದಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ಅಡುಗೆ ಮನೆ ನಿರ್ಮಾಣಕ್ಕೆ ಟೆಂಡರ್ ಕರೆಯಲು ಉದ್ದೇಶಿಸಿದ್ದೇವೆ. ಇನ್ನು ಈ ಬಗ್ಗೆ ಹೋಟೆಲ್ ಉದ್ಯಮಿಗಳ ಜತೆ ಮಾತುಕತೆ ನಡೆಸಿದ್ದೇವೆ ಅಂತಾ ನುಡಿದ್ರು.

    ರಾಂಗ್ ಹೇಳಿಕೆ: ಗುಂಡ್ಲುಪೇಟೆ ಹಾಗೂ ನಂಜನಗೂಡು ಉಪಚುನಾವಣೆಯಲ್ಲಿ ಒಂದು ಮತಕ್ಕೆ ಕಾಂಗ್ರೆಸ್ ಅವರು ನಾಲ್ಕು ಸಾವಿರ ಕೊಡುತ್ತಿದ್ದಾರಂತೆ. ಅವರ ಹತ್ತಿರ ದುಡ್ಡನ್ನು ಇಸ್ಕೊಳ್ಳಿ. ಆದ್ರೆ ಮತ ಮಾತ್ರ ಬಿಜೆಪಿಗೆ ಹಾಕಿ. ಅವರ ಅಪ್ಪನ ಮನೆಯಿಂದ ಕೂಲಿ ಮಾಡಿ ಹಣ ತಂದಿಲ್ಲ ಅವರು ಅಂತಾ ಈಶ್ವರಪ್ಪ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಖಾದರ್, ಇದೊಂದು ರಾಂಗ್ ಸ್ಟೇಟ್ ಮೆಂಟ್. ಇದಕ್ಕೆ ನಗಬೇಕಾ, ರಿಯಾಕ್ಟ್ ಮಾಡಬೇಕೋ ಗೊತ್ತಾಗ್ತಿಲ್ಲ. ನಮ್ಮಲ್ಲಿ ಆ ರೀತಿ ಏನೂ ಇಲ್ಲ. ಯಡಿಯೂರಪ್ಪ ಸಿಎಂ ಆಗಿದ್ದಾಗ ಚಾಮರಾಜನಗರ ಜಿಲ್ಲೆಗೆ ಭೇಟಿ ಕೊಟ್ಟಿಲ್ಲ. ಇದೀಗ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಚಾಮರಾಜನಗರಕ್ಕೆ ತೆರಳಿ ಜನರನ್ನು ಮತ ಹಾಕುವಂತೆ ಬೇಡುತ್ತಿದ್ದಾರೆ ಅಂತಾ ಗರಂ ಆದ್ರು.