Tag: khader

  • ರಾಜ್ಯ ಕಾಂಗ್ರೆಸ್ಸಿನಲ್ಲಿ ನಿಲ್ಲದ ಮುಸ್ಲಿಮ್ ನಾಯಕರ ಕಿತ್ತಾಟ

    ರಾಜ್ಯ ಕಾಂಗ್ರೆಸ್ಸಿನಲ್ಲಿ ನಿಲ್ಲದ ಮುಸ್ಲಿಮ್ ನಾಯಕರ ಕಿತ್ತಾಟ

    ಬೆಂಗಳೂರು: ಕಾಂಗ್ರೆಸ್ ನಲ್ಲಿ ಮುಸ್ಲಿಮ್ ನಾಯಕರ ಕಿತ್ತಾಟ ನಿಲ್ಲುವ ಸಾಧ್ಯತೆಗಳು ಕಂಡು ಬರುತ್ತಿಲ್ಲ.

    ಸಚಿವ ಜಮೀರ್ ವಿರುದ್ಧ ರೋಷನ್ ಬೇಗ್, ತನ್ವೀರ್ ಸೇಠ್ ಅಸಮಾಧಾನ ಹೊರ ಹಾಕುತ್ತಿದ್ದು, ಹಜ್ ಖಾತೆ ಜಮೀರ್ ಬಳಿ ಇರೋದು ಬೇಡವೇ ಬೇಡ ಎಂದು ರೋಷನ್ ಬೇಗ್ ಪಟ್ಟು ಹಿಡಿದಿದ್ದಾರೆ. ಅಷ್ಟೇ ಅಲ್ಲದೇ ಹಜ್ ಖಾತೆಯನ್ನು ಖಾದರ್ ಗೆ ನೀಡುವಂತೆ ರೋಷನ್ ಬೇಗ್ ಹೊಸ ರಾಗ ತೆಗೆದಿದ್ದಾರೆ ಎಂದು ತಿಳಿದು ಬಂದಿದೆ.

    ಹಜ್ ಖಾತೆ ಅನ್ನುವುದು ಯಾತ್ರಿಕರನ್ನು ಕಳುಹಿಸಿ ಕೊಡುವುದು. ಕೆಲವು ಮುಸ್ಲಿಮ್ ಸಮುದಾಯದ ದುರ್ಬಲ ವರ್ಗದವರಿಗೆ ನೆರವಾಗುತ್ತದೆ. ಈ ಖಾತೆಯ ಮೂಲಕ ಜಮೀರ್ ಸಮುದಾಯ ಲಾಭ ಪಡೆದುಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಜಮೀರ್ ಬಳಿ ಈ ಖಾತೆ ಇರುವುದು ಬೇಡ ಎಂದು ರೋಷನ್ ಬೇಗ್ ಪಟ್ಟು ಹಿಡಿದ್ದಾರೆ ಎನ್ನಲಾಗಿದೆ.

    ಸೋಮವಾರ ರಾತ್ರಿ ಸಚಿವ ಯುಟಿ ಖಾದರ್ ಜೊತೆ ರೋಷನ್ ಬೇಗ್ ಮಾತನಾಡಿದ್ದಾರೆ. ಅಷ್ಟೇ ಅಲ್ಲದೇ ಜಿ.ಪರಮೇಶ್ವರ್ ಮತ್ತು ವೇಣುಗೋಪಾಲ್ ಬಳಿ ಈ ಬಗ್ಗೆ ಚರ್ಚೆ ನಡೆಸಿದ್ದು, ಈ ಖಾತೆಯನ್ನು ಜಮೀರ್ ಬಳಿ ಇರುವುದು ಬೇಡ. ಯಾರಿಗಾದರೂ ಕೊಡಿ ಅಥವಾ ಖಾದರ್ ಗೆ ಕೊಡಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.

    ಒಟ್ಟಿನಲ್ಲಿ ಜಮೀರ್ ವಿರುದ್ಧದ ರೋಷನ್ ಬೇಗ್ ರಣತಂತ್ರ ಯಶಸ್ವಿಯಾಗುತ್ತಾ? ಈ ಪ್ರತಿಷ್ಠೆಯ ಫೈಟ್‍ ನಲ್ಲಿ ಜಮೀರ್ ಗೆಲ್ತಾರಾ? ರೋಷನ್ ಬೇಗ್ ಗೆಲ್ತಾರಾ.? ಅನ್ನೋದನ್ನು ಕಾದು ನೋಡಬೇಕಿದೆ.

    https://www.youtube.com/watch?v=1XyltNonwdU

  • ಬಿಜೆಪಿ ಕಾರ್ಯಕರ್ತನ ಸಾವಿನ ಮಧ್ಯೆ ರಾಜಕೀಯ- ಸಂತೋಷ್ ಮನೆ ಸಮೀಪದಲ್ಲೇ ಸಿಎಂ ಬಿರಿಯಾನಿ ಪಾರ್ಟಿ

    ಬಿಜೆಪಿ ಕಾರ್ಯಕರ್ತನ ಸಾವಿನ ಮಧ್ಯೆ ರಾಜಕೀಯ- ಸಂತೋಷ್ ಮನೆ ಸಮೀಪದಲ್ಲೇ ಸಿಎಂ ಬಿರಿಯಾನಿ ಪಾರ್ಟಿ

    ಬೆಂಗಳೂರು: ನಗರದಲ್ಲಿ ಬಿಜೆಪಿ ಕಾರ್ಯಕರ್ತ ನಡುರಸ್ತೆಯಲ್ಲೇ ಕೊಲೆಯಾಗಿದ್ರೆ, ಗುರುವಾರ ತಡರಾತ್ರಿ ಅದೇ ಏರಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಫುಲ್ ರಜಾಕ್ ಸಾಹೇಬರ ಬಿರಿಯಾನಿ ತಿಂದು ಪಾರ್ಟಿಯಲ್ಲಿ ಮುಳುಗಿದ್ರು.

    ಹೌದು, ನಿನ್ನೆ ತಡರಾತ್ರಿ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಯುಟಿ ಖಾದರ್ ಮನೆಯಲ್ಲಿ ಭೋಜನ ಕೂಟ ಆಯೋಜಿಸಲಾಗಿತ್ತು. ಈ ಭೋಜನ ಕೂಟದಲ್ಲಿ ಸಿಎಂ ಸಿದ್ದರಾಮಯ್ಯ, ಶಾಸಜ ಜಮೀರ್ ಅಹಮ್ಮದ್ ಹಾಗೂ ಮುಸ್ಲಿಂ ಮುಖಂಡರು ಪಾಲ್ಗೊಂಡಿದ್ದರು. ಶಾಸಕ ಜಮೀರ್ ಅಹಮ್ಮದ್ ಇತ್ತೀಚೆಗೆ ಕಾಂಗ್ರೆಸ್ ಸೇರಲು ಸಕಲ ತಯಾರಿಗಳನ್ನ ಮಾಡ್ಕೊಂಡಿರೋ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಕೆಲ ನಾಯಕರಿಗೆ ಅಸಮಾಧಾನ ಮೂಡಿತ್ತು.

    ಅದೇ ರೀತಿ ಈ ಹಿಂದೆ ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲ್ಪಟ್ಟಿದ್ದ ನಾಯಕರುಗಳು ಜಮೀರ್ ರ ಪಕ್ಷಾಂತರಕ್ಕೆ ತೀವೃ ವಿರೋಧ ವ್ಯಕ್ತಪಡಿಸಿದ್ದರು. ಆದ್ರೆ, ಅದ್ಯಾವುದಕ್ಕೂ ಡೋಂಟ್ ಕ್ಯಾರ್ ಅಂದಿರೋ ಸಿಎಂ ಬಿಜೆಪಿ ಕಾರ್ಯಕರ್ತನ ಸಾವಿನ ಬೆನ್ನಲ್ಲೇ ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ಇದೀಗ ಭೋಜನ ಕೂಟಕ್ಕೆ ಸೈ ಎಂದಿದ್ದಾರೆ. ಇದೆಲ್ಲವನ್ನ ನೋಡಿದ್ರೆ ಮುಂದಿನ ದಿನಗಳಲ್ಲಿ ನೂರಕ್ಕೆ ನೂರರಷ್ಟು ಜಮೀರ್ ಕಾಂಗ್ರೆಸ್ ಪ್ರವೇಶ ಶತಸಿದ್ಧ ಎನ್ನುವುದರಲ್ಲಿ ಎರಡು ಮಾತಿಲ್ಲ.

    ಜೆ.ಸಿ. ನಗರದ ನಿವಾಸಿಯಾಗಿರೋ 28 ವರ್ಷದ ಸಂತೋಷ್ ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದು, ಬಿಜೆಪಿ ಪರ ಓಡಾಡಿಕೊಂಡಿದ್ದರು. ಬುಧವಾರ ರಾತ್ರಿ ಸುಮಾರು 7:30 ರಲ್ಲಿ ಹೊತ್ತಿಗೆ ಸಂತೋಷ್ ತಮ್ಮ ಮನೆ ಬಳಿ ಇದ್ದ ಬೇಕರಿಯಲ್ಲಿ ಟೀ ಕುಡಿಯುತ್ತಾ ನಿಂತಿದ್ದರು. ಈ ವೇಳೆ ಅದೇ ಏರಿಯಾದ ವಾಸೀಮ್, ಉಮರ್, ಫಿಲಿಪ್ಸ್ ಮತ್ತು ಇರ್ಫಾನ್ ಎಂಬವರು ಕೂಡ ಅಲ್ಲೇ ಟೀ ಕುಡಿಯುತ್ತಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದು ವಾಸೀಮ್ ಎಂಬಾತ ತನ್ನ ಬಳಿ ಇದ್ದ ಚಾಕುವಿನಿಂದ ಸಂತೋಷ್ ತೊಡೆಗೆ ಇರಿದಿದ್ದಾನೆ. ಪರಿಣಾಮ ತೀವ್ರ ರಕ್ತ ಸ್ರಾವದಿಂದ ಸಂತೋಷ್ ಕೊನೆಯುಸಿರೆಳೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಸದ್ಯ ಪ್ರಕರಣ ಸಂಬಂಧ ವಸೀಂ, ಫಿಲಿಪ್ಸ್ ಎಂಬ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಘಟನೆ ನಡೆದ ಬಗ್ಗೆ ಮಾಹಿತಿ ಸಿಕ್ಕಿದ ತಕ್ಷಣ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಠಾಣೆಯೆದುರು ಪ್ರತಿಭಟನೆ ಸಹ ನಡೆಸಿದ್ದರು. ಸಂತೋಷ್ ಹತ್ಯೆ ರಾಜಕೀಯ ಪ್ರೇರಿತ ಕೊಲೆ ಅಂತ ಆರೋಪಿಸಿದ್ದು, ವಸೀಂ ಸ್ಥಳೀಯ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತರ ಮಗ, ಅವನಿಗೂ ಬಿಜೆಪಿಗೂ ಆಗುತ್ತಿರಲಿಲ್ಲ. ಹಾಗಾಗಿ ಬಿಜೆಪಿಯ ಪರ ಓಡಾಡುತ್ತಿದ್ದ ಸಂತೋಷ್‍ನನ್ನ ಕೊಲೆಗೈಯ್ಯಲಾಗಿದೆ ಎಂದು ಆರೋಪಿಸಿದ್ದರು.

  • `ಟಾರ್ಗೆಟ್’ ಇಲಿಯಾಸ್ ಕೊಲೆ ಬಗ್ಗೆ ಸಚಿವ ಖಾದರ್ ಹೀಗಂದ್ರು

    `ಟಾರ್ಗೆಟ್’ ಇಲಿಯಾಸ್ ಕೊಲೆ ಬಗ್ಗೆ ಸಚಿವ ಖಾದರ್ ಹೀಗಂದ್ರು

    ಧಾರವಾಡ: ಯಾವುದೇ ಹತ್ಯೆಯಾದಾಗ ನಾವು ಆ ವ್ಯಕ್ತಿಯ ಹಿನ್ನೆಲೆಗಳನ್ನು ಅರಿಯಬೇಕು. ಇಲಿಯಾಸ್ ಕಾಂಗ್ರೆಸ್ ಕಾರ್ಯಕರ್ತ ಆಗಿದ್ದ. ನಮಗೆ ಎಲ್ಲರೂ ಕೂಡ ಸಹಚರರೇ. ಆದ್ರೆ ಯಾರೇ ತಪ್ಪು ಮಾಡಿದ್ರು ನಾವು ಸಹಿಸೊಲ್ಲ ಅಂತ ಸಚಿವ ಯುಟಿ ಖಾದರ್ ಹೇಳಿದ್ದಾರೆ.

    ಮಂಗಳೂರಿನಲ್ಲಿ ಟಾರ್ಗೆಟ್ ಗ್ರೂಪ್ ರೂವಾರಿ, ಕಾಂಗ್ರೆಸ್ ಕಾರ್ಯಕರ್ತ ಇಲಿಯಾಸ್ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಾರ್ಗೆಟ್ ಗ್ರೂಪ್ ಏನು ಮಾಡ್ತಾ ಇತ್ತು ಅನ್ನೋದರ ಬಗ್ಗೆ ತನಿಖೆಯಾಗಬೇಕಿದೆ. ಯಾರೆಲ್ಲ ಕೊಲೆಯಲ್ಲಿ ಭಾಗಿಯಾಗ್ತಾರೆ? ಅಶಾಂತಿ ಸೃಷ್ಟಿಸ್ತಾರೆ? ಅವೆಲ್ಲ ಸಂಘಟನೆಗಳನ್ನು ಬ್ಯಾನ್ ಮಾಡುತ್ತೇವೆ. ಅಂತಹ ಸಂಘಟನೆಗಳು ಕೇಂದ್ರ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಾ ಇರುತ್ತವೆ. ಹೀಗಾಗಿ ಕೇಂದ್ರ ಸರ್ಕಾರವೇ ಅಂತಹ ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಅಂತ ಹೇಳಿದ್ರು. ಇದನ್ನೂ ಓದಿ: ಸಚಿವ ಖಾದರ್ ಜೊತೆ ಕಾಣಿಸಿಕೊಂಡಿದ್ದ ಇಲಿಯಾಸ್ ನ ಬರ್ಬರ ಹತ್ಯೆ

    ಕೆಲ ಸಂಘಟನೆಗಳನ್ನು ಬ್ಯಾನ್ ಮಾಡಿ ಎಂದು ಕೇಳುವ ಬಿಜೆಪಿಯವರು ತಮ್ಮದೇ ಕೇಂದ್ರ ಸರ್ಕಾರದ ಮೂಲಕ ಬ್ಯಾನ್ ಮಾಡಿಸಲಿ. ರಾಜ್ಯ ಸರ್ಕಾರ ನಮ್ಮ ರಾಜ್ಯದಲ್ಲಿ ಬ್ಯಾನ್ ಮಾಡಿದ್ರೆ ಅವರು ಬೇರೆ ಬೇರೆ ರಾಜ್ಯದಲ್ಲಿ ಕುಳಿತು ಕಾರ್ಯನಿರ್ವಹಿಸಬಹುದು. ಹಾಗಾಗಿ ಅಂತಹ ಸಂಘಟನೆಗಳನ್ನು ಕೇಂದ್ರ ಸರ್ಕಾರವೇ ಗುರುತಿಸಬೇಕು. ಮಂಗಳೂರಿನಲ್ಲಿ ಕೆಲ ಹತ್ಯೆಗಳಾದಾಗ ಅದನ್ನು ಇನ್ನಷ್ಟು ಗೊಂದಲ ಮಾಡಿ ದಂಗೆ ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪೊಲೀಸರಿಗೆ ತನಿಖೆ ಮಾಡಲು ಬಿಡದಂತೆ ಗಲಾಟೆಗಳನ್ನು ಸೃಷ್ಟಿಸುತ್ತಾ ಇದ್ದಾರೆ ಅಂದ್ರು. ಇದನ್ನೂ ಓದಿ: ಯುಟಿ ಖಾದರ್ ಜೊತೆ ದೀಪಕ್ ಹತ್ಯೆಯ ಆರೋಪಿ ಕುಳಿತಿರುವ ಫೋಟೋ ವೈರಲ್

    ಮಂಗಳೂರಿನಲ್ಲಿ ಕೆಲವರು ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ್ರೂ ಮಂಗಳೂರು ಜನ ಸಹಬಾಳ್ವೆ ಬಿಡಲಿಲ್ಲ. ದೀಪಕ್ ಹತ್ಯೆ ಮಾಡಿದವರು ಸುಪಾರಿ ಕಿಲ್ಲರ್ ಅಂತ ಮೇಲ್ನೋಟಕ್ಕೆ ತಿಳಿದುಬಂದಿದೆ. ಈ ಕುರಿತು ಪೊಲೀಸರೇ ಹೆಚ್ಚಿನ ತನಿಖೆ ಮಾಡಬೇಕು. ಬಿಜೆಪಿಯವರು ಒಬ್ಬೊಬ್ಬರೂ ಒಂದೊಂದು ಕಡೆ ಬೆಂಕಿ ಹಾಕುತ್ತೀವಿ ಅಂತ ಹೇಳಿಕೊಳ್ತಾ ಹೋಗುತ್ತಿದ್ದಾರೆ. ಒಬ್ಬರು ಮೈಸೂರು, ಇನ್ನೊಬ್ಬರು ಮಂಗಳೂರು, ಮತ್ತೊಬ್ಬರು ಇನ್ನೆಲ್ಲೋ ಬೆಂಕಿ ಹಾಕುತ್ತೇವೆ ಅಂದ್ರೆ ರಾಜ್ಯಾಧ್ಯಕ್ಷರು ಇಡೀ ರಾಜ್ಯಕ್ಕೆ ಬೆಂಕಿ ಹಾಕ್ತೇನೆ ಅಂತ ಹೊರಟಿದ್ದಾರೆ ಅಂದ್ರು.

  • ಐಎಎಸ್ ಅಧಿಕಾರಿ ನಿಗೂಢ ಸಾವಿನ ಬಗ್ಗೆ ರಾಜ್ಯದ ಮಂತ್ರಿಗಳು ಪ್ರತಿಕ್ರಿಯಿಸಿದ್ದು ಹೀಗೆ

    ಐಎಎಸ್ ಅಧಿಕಾರಿ ನಿಗೂಢ ಸಾವಿನ ಬಗ್ಗೆ ರಾಜ್ಯದ ಮಂತ್ರಿಗಳು ಪ್ರತಿಕ್ರಿಯಿಸಿದ್ದು ಹೀಗೆ

    ಬೆಂಗಳೂರು: ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವಿನ ಕುರಿತು ಹಲವು ಅನುಮಾನಗಳು ಎದ್ದಿದ್ದು, ಕಾಂಗ್ರೆಸ್ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಅವರನ್ನು ಕೊಲೆ ಮಾಡಲಾಗಿದೆ ಎಂಬ ಆರೋಪವೊಂದು ಕೇಳಿಬಂದಿದೆ.

    ಕಾಂಗ್ರೆಸ್ ಹಗರಣದ ಆರೋಪ ವ್ಯಕ್ತವಾಗುತ್ತಿದ್ದಂತೆಯೇ ಇತ್ತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಸುಮಾರು 40 ನಿಮಿಷ ಇಬ್ಬರು ಪ್ರತ್ಯೇಕ ಚರ್ಚೆ ನಡೆಸಿ, ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಿಎಂಗೆ ಪರಮೇಶ್ವರ್ ನೀಡಿದ್ದಾರೆ. ಸಿಬಿಐ ತನಿಖೆಗೆ ಒತ್ತಾಯಗಳು ಕೇಳಿ ಬರುತ್ತಿರುವುದರ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

    ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿರುವುದರಿಂದ ಯಾವ ರೀತಿಯ ತನಿಖೆ ನಡೆಸಿದ್ರೆ ಒಳಿತು ಅನ್ನುವ ಬಗ್ಗೆ ಚರ್ಚೆ ನಡೆದಿದೆ. ಅಲ್ಲದೇ ವಿಪಕ್ಷಗಳ ಆರೋಪಕ್ಕೆ ತಿರುಗುಬಾಣ ರೂಪಿಸುವ ಬಗ್ಗೆಯೂ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಬೆಳಗ್ಗೆ ಮಾತುಕತೆ ನಡೆಸಿದ್ದಾರೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣ ಏನು ಅಂತಾ ಗೊತ್ತಿಲ್ಲ. ಆದ್ರೆ ಮರಣೋತ್ತರ ಪರೀಕ್ಷೆಯಲ್ಲಿ ತಿವಾರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಅಂತಾ ವರದಿ ಬಂದಿದೆ. ನಾವು ಯಾವುದೇ ತನಿಖೆಗೆ ಸಹಕಾರ ಕೊಡಲು ಸಿದ್ಧ. ಹೀಗಾಗಿ ಕೇಂದ್ರ ಸರ್ಕಾರ ಯಾವ ತನಿಖೆ ಬೇಕಾದ್ರು ನಡೆಸಲಿ. ಹಗರಣ ಆಗಿದೆ ಅಂತಾ ಯಾರೋ ಹೇಳಿದ್ದನ್ನ ನಂಬೋದಕ್ಕೆ ಆಗಲ್ಲ ಅಂತಾ ಹೇಳಿದರು.

    ಪರಮೇಶ್ವರ್ ಮಾತನಾಡಿ, ಉತ್ತರ ಪ್ರದೇಶ ವಿಧಾನಸಭೆಯಲ್ಲಿ ನಮ್ಮ ಸರ್ಕಾರದ ಮೇಲೆ ಆರೋಪ ಮಾಡಬಾರದಿತ್ತು, ಇದು ಸರಿಯಲ್ಲ. ರಾಜಕೀಯ ಕಾರಣಗಳಿದ್ರೆ ಹೊರಗೆ ಪ್ರಸ್ತಾಪ ಮಾಡಲಿ. ಒಬ್ಬ ಜವಾಬ್ದಾರಿಯುತ ಸಚಿವರಾಗಿ ನಮ್ಮ ಸರ್ಕಾರದ ಮೇಲೆ ಆರೋಪ ಮಾಡಬಾರದಿತ್ತು ಎಂದು ಹೇಳಿದರು.

    ದಲಿತರ ಮನೆಯಲ್ಲಿ ಬಿಜೆಪಿ ಊಟ ಮಾಡ್ತೀವಿ ಅಂತ ಹೇಳಿ ತುಮಕೂರು ಹೋಟೆಲ್ ನಿಂದ ಆಹಾರ ತಂದು ತಿಂದ ಬಿಜೆಪಿ ನಾಯಕರ ಬಣ್ಣ ಬಯಲಾಗಿದೆ. ನೀವೇ ಬಯಲು ಮಾಡಿದ್ದೀರಾ, ಅದ್ಕೆ ಏನು ಕಾಮೆಂಟ್ ಮಾಡೋದು..? ಅಂತಾ ಸುದ್ದಿಗಾರರ ಜೊತೆ ಮಾತನಾಡುತ್ತಾ ಬಿಜೆಪಿ ವಿರುದ್ಧ ಅವರು ವ್ಯಂಗ್ಯವಾಡಿದ್ದಾರೆ.

    ತನಿಖೆಗೆ ಸಹಕಾರ: ತಿವಾರಿ ನಿಗೂಢ ಸಾವಿನ ವಿಚಾರವಾಗಿ ಮಂಗಳೂರಿನಲ್ಲಿ ಆಹಾರ ಇಲಾಖೆ ಸಚಿವ ಯು.ಟಿ.ಖಾದರ್ ಮಾಧ್ಯಮದವರ ಜೊತೆ ಮಾತನಾಡಿ, ತಿವಾರಿ ಕಳೆದ ಜನವರಿ ನಾಲ್ಕರಂದು ಇಲಾಖೆಗೆ ಸೇರಿದ್ದರು. ಒಟ್ಟು 132 ದಿನ ಇಲಾಖೆಯಲ್ಲಿದ್ದರೂ 37 ದಿನಗಳಷ್ಟೆ ಕೆಲಸ ಮಾಡಿದ್ದರು. ಜನವರಿ 18ರಂದು ಪಂಜಾಬ್ ಚುನಾವಣೆಗೆ ಹೋಗಿದ್ದರು. ಮೇ 5ರಂದು ಐಎಎಸ್ ತರಬೇತಿಗೆಂದು ರಜೆಯಲ್ಲಿ ತೆರಳಿದ್ದರು. ಇದೀಗ ಅಧಿಕಾರಿ ಯುಪಿಯಲ್ಲಿ ಸಾವನ್ನಪ್ಪಿದ್ದಾರೆ, ಅಲ್ಲಿ ಏನಾಗಿದೆಯೋ ಗೊತ್ತಿಲ್ಲ. ಇಲಾಖೆಯಲ್ಲಿ ಹಗರಣ ನಡೆದಿರುವ ಬಗ್ಗೆ ಒಮ್ಮೆಯೂ ಹೇಳಿರಲಿಲ್ಲ. ಲಿಖಿತವಾಗಿ ಅಥವಾ ಮೌಖಿಕವಾಗಿಯೂ ಪ್ರಸ್ತಾವ ಮಾಡಿರಲಿಲ್ಲ. ಯುಪಿ ಸರಕಾರದ ತನಿಖೆಗೆ ಸಂಪೂರ್ಣ ಸಹಕಾರ ನೀಡಲಾಗುವುದು. ಪ್ರತಿಪಕ್ಷಗಳು ಈ ವಿಚಾರದಲ್ಲಿ ರಾಜಕೀಯ ನಡೆಸುವುದು ದುರದೃಷ್ಟಕರ. ಸಿಬಿಐ ತನಿಖೆ ನಡೆಸುವುದಿದ್ದರೆ ಯುಪಿ ಸರಕಾರ ಕೊಡಲಿ. ನಮ್ಮ ಸರಕಾರ ಯಾವುದೇ ತನಿಖೆಗೂ ಸಿದ್ಧವಿದೆ ಅಂತಾ ಸ್ಪಷ್ಟಪಡಿಸಿದ್ದಾರೆ.

  • ವಿದೇಶದಲ್ಲಿರುವ ಭಾರತೀಯರು ಆಧಾರ್ ಕಾರ್ಡ್ ಬಳಸಿ ರೇಷನ್ ಕಾರ್ಡ್ ಪಡೆಯಬಹುದು: ಯು.ಟಿ.ಖಾದರ್

    ವಿದೇಶದಲ್ಲಿರುವ ಭಾರತೀಯರು ಆಧಾರ್ ಕಾರ್ಡ್ ಬಳಸಿ ರೇಷನ್ ಕಾರ್ಡ್ ಪಡೆಯಬಹುದು: ಯು.ಟಿ.ಖಾದರ್

    ಸೌದಿ ಅರೇಬಿಯಾ: ವಿದೇಶದಲ್ಲಿರುವ ಭಾರತೀಯರು ಆಧಾರ್ ಕಾರ್ಡ್ ಬಳಸಿಕೊಂಡು ತಮ್ಮ ರೇಷನ್ ಕಾರ್ಡನ್ನು ಪಡೆಯಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

    ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್) ಮದೀನಾ ಸೆಕ್ಟರ್ ವತಿಯಿಂದ ಸೌದಿ ಅರೇಬಿಯಾದ ಮದೀನಾದಲ್ಲಿರುವ ಕೆ.ಸಿ.ಎಫ್ ಭವನದಲ್ಲಿ ಸೋಮವಾರ ನಡೆದ ಅಸುಪ್ಫಾ 2ನೇ ಆವೃತ್ತಿಯ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟಿಸಿ ಮಾತನಾಡಿದರು.

    ಅನಿವಾಸಿಗಳಾದ ನೀವು ವಿದೇಶದಲ್ಲಿದ್ದುಕೊಂಡೇ ಅರ್ಜಿ ಸಲ್ಲಿಸಿ, ತಿಂಗಳೊಳಗೆ ರೇಷನ್ ಕಾರ್ಡ್ ನಿಮ್ಮ ಕೈ ಸೇರಲಿದೆ ಎಂದರು. ಕಲಿಕೆ ಸಮಯದಲ್ಲಿ ಬಡತನದಿಂದಾಗಿ ಇಂಗ್ಲಿಷ್ ಭಾಷೆ ಕಲಿಯಲು ಸಾಧ್ಯವಾಗದ ಮಂದಿಗೆ ವಿದೇಶದಲ್ಲಿದ್ದುಕೊಂಡು ಕೆ.ಸಿ.ಎಫ್ ಆಧಾರ ಸ್ತಂಭವಾಗಿ ಇಂಗ್ಲಿಷ್ ಭಾಷೆ ಕಲಿಸಲು ಹೆಜ್ಜೆ ಇಟ್ಟಿರುವುದು ಶ್ಲಾಘನೀಯ ಎಂದರು.

    ಇದೇ ಸಂದರ್ಭ ಕೆ.ಸಿ.ಎಫ್ ಕಾರ್ಯಕರ್ತರು ಸಚಿವ ಯು.ಟಿ.ಖಾದರ್ ಹಾಗೂ ಇಹ್ಸಾನ್ ಮುಖ್ಯಸ್ಥ ಇಬ್ರಾಹಿಂ ಸಖಾಫಿ ದಾವಣಗೆರೆ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು. ಕೆ.ಎಸಿ.ಎಫ್ ರಾಷ್ಟ್ರೀಯ ಸಮಿತಿ ಆಯೋಜಿಸಿದ ಅಸುಫ್ಫಾ ಪರೀಕ್ಷೆಯಲ್ಲಿ ಪ್ರಥಮ ಪಡೆದ ಉಮ್ಮರ್ ಗೇರುಕಟ್ಟೆ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಈ ವೇಳೆ ಐ.ಸಿ.ಎಫ್.ನ ಯೂಸುಫ್ ಸಅದಿ, ಮೊಹಿಯುದ್ದೀನ್ ಸಖಾಫಿ, ಡಿ.ಕೆ.ಎಸ್.ಸಿಯ ಮಹಮೂದ್ ಮುಸ್ಲಿಯಾರ್ ಉದ್ದಬೆಟ್ಟು, ಕೆಸಿಎಫ್ ಮದೀನಾ ವಲಯ ಅಧ್ಯಕ್ಷ ಫಾರೂಕ್ ನಈಮಿ, ಕೆಸಿಎಫ್ ಮದೀನಾ ಸೆಕ್ಟರ್, ಅಧ್ಯಕ್ಷ ಅಶ್ರಫ್ ಸಖಾಫಿ ನೂಜಿ, ಕೆಸಿಎಫ್ ಮದೀನಾ ಝೋನಲ್ ರಿಲೀಫ್ ಚೇರ್ಮನ್ ತಾಜುದ್ದೀನ್ ಸುಳ್ಯ, ರಝಾಕ್ ಅಳಕೆ ಮಜಲ್, ಡಾ.ರಫೀಕ್ ಉಪ್ಪಳ, ವಹಾಬ್ ಕುದ್ರೋಳಿ ಮತ್ತಿತರರು ಉಪಸ್ಥಿತರಿದ್ದರು.