Tag: Khelo India

  • ಖೇಲೋ ಇಂಡಿಯಾಗೆ ಆಯ್ಕೆ – ಕ್ರೀಡಾಧಿಕಾರಿ, ವಿದ್ಯಾರ್ಥಿಗಳನ್ನು ಮೆರವಣಿಯೊಂದಿಗೆ ಬರಮಾಡಿಕೊಂಡ ಬೆಳ್ಳಾರೆ ಜನತೆ

    ಖೇಲೋ ಇಂಡಿಯಾಗೆ ಆಯ್ಕೆ – ಕ್ರೀಡಾಧಿಕಾರಿ, ವಿದ್ಯಾರ್ಥಿಗಳನ್ನು ಮೆರವಣಿಯೊಂದಿಗೆ ಬರಮಾಡಿಕೊಂಡ ಬೆಳ್ಳಾರೆ ಜನತೆ

    ಮಂಗಳೂರು: ಖೇಲೋ ಇಂಡಿಯಾ (Khelo India) ರಾಷ್ಟ್ರ ಮಟ್ಟದ ಕಬಡ್ಡಿ (Kabaddi) ಪಂದ್ಯಾಟಕ್ಕೆ ಆಯ್ಕೆಯಾದ ಬೆಳ್ಳಾರೆಯ (Bellare) ಕೆಪಿಎಸ್‌ನ ಇಬ್ಬರು ವಿದ್ಯಾರ್ಥಿಗಳು ಮತ್ತು ಕ್ರೀಡಾಧಿಕಾರಿಯನ್ನು ನಾಗರಿಕರು ಮೆರವಣಿಗೆಯ ಮೂಲಕ ಸಂಸ್ಥೆಗೆ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

    ತೆಲಂಗಾಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ (Karnataka) ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ರಾಜ್ಯದ ಕಬಡ್ಡಿ ತಂಡವನ್ನು ಪ್ರತಿನಿಧಿಸಿದ ಕಿಶನ್ ದ್ರಾವಿಡ್ ಹಾಗೂ ಹೇಮಂತ ಕೆ. ವಿ ಇವರು ಖೇಲೋ ಇಂಡಿಯಾ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ ಆಗಿದ್ದಾರೆ. ಇವರ ಜೊತೆ ಖೇಲೋ ಇಂಡಿಯಾ ಕ್ರೀಡಾಧಿಕಾರಿಯಾಗಿ ಬೆಳ್ಳಾರೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪಾವತಿ ಆಯ್ಕೆಗೊಂಡಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ – ಯುಪಿ ಮೂಲದ ಹೊಸ ಆಟಗಾರನಿಗೆ ಚಾನ್ಸ್

    ಸುಳ್ಯ ತಾಲೂಕಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಕೆಪಿಎಸ್‌ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಖೇಲೋ ಇಂಡಿಯಾಗೆ ಆಯ್ಕೆಯಾಗಿ ಬೆಳ್ಳಾರೆಗೆ ಕೀರ್ತಿ ತಂದಿದ್ದಾರೆ. ಈ ವಿಶೇಷ ಸಾಧನೆಗೆ ಊರಿನ ನಾಗರಿಕರು ತೆಲಂಗಾಣದಿಂದ ಬೆಂಗಳೂರು ಮೂಲಕ ಸುಬ್ರಹ್ಮಣ್ಯ ಮಾರ್ಗವಾಗಿ ಆಗಮಿಸಿದ ಇಬ್ಬರು ಆಟಗಾರರನ್ನು ಮತ್ತು ಕ್ರೀಡಾಧಿಕಾರಿ ಪುಷ್ಪಾವತಿ ಇವರನ್ನು ಬರಮಾಡಿಕೊಂಡು ಸನ್ಮಾನಿಸಿ ಮೆರವಣಿಗೆಯ ಮೂಲಕ ಸಂಸ್ಥೆಗೆ ಬರಮಾಡಿದ್ದಾರೆ.

  • Union Budget 2023: ಕ್ರೀಡೆಗೆ ದಾಖಲೆಯ 3,397.22 ಕೋಟಿ ರೂ. ಅನುದಾನ

    Union Budget 2023: ಕ್ರೀಡೆಗೆ ದಾಖಲೆಯ 3,397.22 ಕೋಟಿ ರೂ. ಅನುದಾನ

    ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಡಿಸಿದ ಬಜೆಟ್‍ನಲ್ಲಿ (Union Budget 2023) ಕ್ರೀಡಾ ಕ್ಷೇತ್ರಕ್ಕೆ (Sports) ದಾಖಲೆಯ 3,397.32 ಕೋಟಿ ರೂ. ಮೀಸಲಿಡಲಾಗಿದೆ.

    ಈವರೆಗಿನ ಬಜೆಟ್‍ನಲ್ಲಿ ಇಷ್ಟು ದೊಡ್ಡ ಮೊತ್ತದ ಅನುದಾನ ಕ್ರೀಡಾಗೆ ನೀಡಿರಲಿಲ್ಲ. ಈ ಬಾರಿ ದಾಖಲೆಯ ಮೊತ್ತದ ಅನುದಾನ ನೀಡಲಾಗಿದೆ. 2023ರ ಏಷ್ಯನ್ ಗೇಮ್ಸ್ (Asian Games), ಪ್ಯಾರಿಸ್ ಒಲಿಂಪಿಕ್ಸ್ (Paris Olympics) ಸಿದ್ಧತೆಗಾಗಿ ಹೆಚ್ಚಿನ ಹಣ ಮೀಸಲಿಡಲಾಗಿದೆ. ಖೇಲೋ ಇಂಡಿಯಾಗಾಗಿ (Khelo India) 1,045 ಕೋಟಿ ರೂ. ಅನುದಾನ ನೀಡಲಾಗಿದೆ. ಇದನ್ನೂ ಓದಿ: Union Budget 2023: ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ – ಯಾವುದು ಇಳಿಕೆ? ಯಾವುದು ಏರಿಕೆ?

    ಈ ಬಾರಿಯ ಬಜೆಟ್‍ನಲ್ಲಿ ರಾಷ್ಟ್ರೀಯ ಕ್ರೀಡಾ ಫೆಡರೇಷನ್‍ಗೆ 325 ಕೋಟಿ ರೂ. ನೆರವು ನೀಡಲಾಗಿದೆ. ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ಈ ಬಾರಿ ಏಷ್ಯನ್ ಗೇಮ್ಸ್ ಮತ್ತು ಒಲಿಂಪಿಕ್ಸ್ ಅರ್ಹತಾ ಪಂದ್ಯಗಳಿಗಾಗಿ 785.52 ಕೋಟಿ ರೂ. ಅನುದಾನ ನೀಡಲಾಗಿದೆ. 2022-2023ನೇ ಸಾಲಿನ ಬಜೆಟ್‍ನಲ್ಲಿ ಕ್ರೀಡೆಗೆ ನೀಡಿದ್ದ ಅನುದಾನ ಈ ಬಾರಿ 358.5 ಕೋಟಿ ರೂ.ಗೆ ಏರಿಕೆ ಕಂಡಿದ್ದು, 2022-2023ನೇ ಸಾಲಿನಲ್ಲಿ 2,757 ಕೋಟಿ ರೂ. ಅನುದಾನ ನೀಡಲಾಗಿತ್ತು. ಇದನ್ನೂ ಓದಿ: Union Budget 2023: 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ

    2023-24 ಕ್ರೀಡಾ ಬಜೆಟ್ ಹಂಚಿಕೆ:
    ಖೇಲೋ ಇಂಡಿಯಾ: 1,045 ಕೋಟಿ ರೂ.
    ಸಾಯಿ: 785.52 ಕೋಟಿ ರೂ.
    ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳು: 325 ಕೋಟಿ ರೂ.
    ರಾಷ್ಟ್ರೀಯ ಸೇವಾ ಯೋಜನೆ: 325 ಕೋಟಿ ರೂ.
    ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ನಿಧಿ: 15 ಕೋಟಿ ರೂ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕ್ರೀಡಾಪಟುಗಳ ಫ್ಯಾಕ್ಟರಿ ಖೇಲೋ ಇಂಡಿಯಾ

    ಕ್ರೀಡಾಪಟುಗಳ ಫ್ಯಾಕ್ಟರಿ ಖೇಲೋ ಇಂಡಿಯಾ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮುಂದಿನ ಒಲಿಂಪಿಕ್‌ಗಳಲ್ಲಿ ಹೆಚ್ಚು ಪದಕ ಗೆಲ್ಲುವ ಗುರಿ ನಮ್ಮದಾಗಬೇಕು: ಕ್ರೀಡಾಪಟುಗಳಿಗೆ ಅಮಿತ್ ಶಾ ಕರೆ

    ಮುಂದಿನ ಒಲಿಂಪಿಕ್‌ಗಳಲ್ಲಿ ಹೆಚ್ಚು ಪದಕ ಗೆಲ್ಲುವ ಗುರಿ ನಮ್ಮದಾಗಬೇಕು: ಕ್ರೀಡಾಪಟುಗಳಿಗೆ ಅಮಿತ್ ಶಾ ಕರೆ

    ಬೆಂಗಳೂರು: ಮುಂದಿನ ಒಲಿಂಪಿಕ್‌ಗಳಲ್ಲಿ ಹೆಚ್ಚು ಪದಕಗಳನ್ನು ಗೆಲ್ಲುವ ಗುರಿ ನಮ್ಮದಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಶಯ ವ್ಯಕ್ತಪಡಿಸಿದ್ದಾರೆ.

    ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್-2021 ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2014ರ ಮುಂಚೆ ಕ್ರಿಕೆಟ್‌ಗೆ ಮಾನ್ಯತೆ ದೇಶದಲ್ಲಿ ಹೆಚ್ಚು ಇತ್ತು. ಅಂತರರಾಷ್ಟ್ರೀಯ ಕ್ರೀಡೆಯಲ್ಲಿ ನಮ್ಮ ಕ್ರೀಡಾಪಟುಗಳು ಪದಕ ತರುತ್ತಿರಲಿಲ್ಲ. ಮೋದಿ ಅವರು 2014ರಲ್ಲಿ ಆಡಳಿತಕ್ಕೆ ಬಂದ ಮೇಲೆ ಕ್ರೀಡೆಗೆ ಮೊದಲ ಆದ್ಯತೆ ಕೊಟ್ಟರು. ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ಕೊಟ್ಟರು. ಇವತ್ತು ನಮ್ಮ ಕ್ರೀಡಾಪಟುಗಳು ಪದಕ ತರುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಮಿತ್ ಶಾ ಐರನ್ ಮ್ಯಾನ್, ಹಿಡಿದ ಕೆಲಸ ಬಿಡೋದಿಲ್ಲ: ಅನುರಾಗ್ ಠಾಕೂರ್

    ನಮ್ಮ ಕ್ರೀಡಾ ಸಚಿವರು ಅತ್ಯುತ್ತಮ ಕ್ರೀಡಾಕೂಟ ವ್ಯವಸ್ಥೆ ಮಾಡಿದ್ದಾರೆ. ಉತ್ತಮ ಕೋಚ್ ವ್ಯವಸ್ಥೆ, ಎಲ್ಲಾ ಸೌಲಭ್ಯವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಹೀಗಾಗಿ ದೇಶದಲ್ಲಿ ಇವತ್ತು ಕ್ರೀಡಾ ಕ್ಷೇತ್ರದಲ್ಲಿ ಬದಲಾವಣೆ ಆಗಿದೆ. ಕ್ರೀಡಾ ಜೀವನದ ಅಂಗ. ಕ್ರೀಡೆ ಗೊತ್ತಿರುವವನು ಎಲ್ಲವನ್ನೂ ಎದುರಿಸುತ್ತಾನೆ. 130 ಕೋಟಿ ಜನಸಂಖ್ಯೆಯಿರುವ ದೇಶದಲ್ಲಿ ಮೊದಲ ಪದಕ ತರಲು ಆಗ್ತಿರಲಿಲ್ಲ. ಇವತ್ತು ಪದಕ ಗಳು ನಮ್ಮ ದೇಶಕ್ಕೆ ಬರುತ್ತಿದೆ. ಇದು 2014 ನಂತರದ ಪರಿವರ್ತನೆ. ಅಲ್ಪ ಕಾಲದಲ್ಲಿ ಮೋದಿ ಅವರು ಈ ಸಾಧನೆ ಮಾಡಿದ್ದಾರೆ ಎಂದು ಬಣ್ಣಿಸಿದ್ದಾರೆ.

    100 ವರ್ಷಗಳ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾರತ ಒಲಿಂಪಿಕ್ಸ್ ಪದಕ ಪಟ್ಟಿಯಲ್ಲಿ ಟಾಪ್ 5ರ ಸ್ಥಾನದಲ್ಲಿ ಇರಬೇಕು ಅನ್ನೋ ಸಂಕಲ್ಪವನ್ನು ಮೋದಿ ಮಾಡಿದ್ದಾರೆ. ಹೀಗಾಗಿ ವಿವಿ ಗೇಮ್ ಪ್ರಾರಂಭ ಮಾಡಿದ್ದಾರೆ. ಕ್ರೀಡೆಗೆ ಉತ್ತಮ ಸೌಲಭ್ಯಗಳನ್ನು ನೀಡಿದ್ದಾರೆ. ಕ್ರೀಡೆಗೆ ಭಾರತದಲ್ಲಿ ಉಜ್ವಲ ಭವಿಷ್ಯ ಇದೆ ಅಂತ ಮೋದಿ ಈ ಕಾರ್ಯ ಮಾಡ್ತಿದ್ದಾರೆ. ಭಾರತೀಯ ಗ್ರಾಮೀಣ ಕ್ರೀಡೆಗೆ ಆದ್ಯತೆ ನೀಡುತ್ತಿದ್ದೇವೆ. ಯೋಗ, ಮಲ್ಲಕಂಬವನ್ನೂ ಕ್ರೀಡಾ ಪಟ್ಟಿಗೆ ಸೇರಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಿಕ್ಷಣ ಕ್ರಾಂತಿಯಲ್ಲಿ ಪ್ರಾದೇಶಿಕ ಭಾಷೆಗಳು ಮಹತ್ವದ ಪಾತ್ರ ವಹಿಸುತ್ತದೆ: ಅಮಿತ್ ಶಾ

    ಗುಜರಾತ್‌ನಲ್ಲಿ ಮೋದಿ ಸ್ಟೇಡಿಯಂ ಮಾಡಿದೆವು. ಆದರೆ ವಿವಿಯಲ್ಲಿ ಎಲ್ಲಾ ಕ್ರೀಡೆಗಳ ವ್ಯವಸ್ಥೆ ಇದೆ. ಇದು ಹೆಮ್ಮೆಯ ವಿಚಾರ. ಮೋದಿ ಅವರು ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇಂತಹ ಕ್ರೀಡಾಕೂಟಗಳಿಂದ ಪ್ರತಿಭೆಗಳು ಹೊರ ಬರುತ್ತವೆ. ಇಂತಹ ಕೆಲಸವನ್ನು ಮೋದಿ ಅವರು ಮಾಡುತ್ತಿದ್ದಾರೆ. ಮೋದಿ ಅವರ ಸಹಕಾರದಿಂದ ಒಲಿಂಪಿಕ್ಸ್, ಪ್ಯಾರಾ ಒಲಿಂಪಿಕ್‌ಗಳಲ್ಲಿ ಹೆಚ್ಚು ಪದಕ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಇದನ್ನ ಮತ್ತಷ್ಟು ಹೆಚ್ಚಳ ಮಾಡಲು ಶ್ರಮಿಸುತ್ತೇವೆ ಎಂದು ತಿಳಿಸಿದ್ದಾರೆ.

    ಇದೇ ವೇಳೆ ಕರ್ನಾಟಕ ಸರ್ಕಾರದ 75 ಕ್ರೀಡಾಪಟುಗಳನ್ನು ದತ್ತು ಸ್ವೀಕಾರ ಮಾಡಿರುವ ಕಾರ್ಯಕ್ಕೆ ಅಮಿತ್ ಶಾ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಅಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆ 75 ಕ್ರೀಡಾಪಟುಗಳಿಗೆ ವಿಶೇಷ ತರಬೇತಿಯನ್ನು ರಾಜ್ಯ ಸರ್ಕಾರ ನೀಡುತ್ತಿದೆ. ಹೀಗಾಗಿ ಸಿಎಂ ಹಾಗೂ ರಾಜ್ಯ ಸರ್ಕಾರದ ಕಾರ್ಯವನ್ನು ಅಮಿತ್ ಶಾ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಅಮಿತ್ ಶಾ ಮಿಂಚಿನ ಸಂಚಾರ- ವಿದ್ಯಾರ್ಥಿಗಳಿಗೆ ಜೋಷ್ ತುಂಬಿದ ಕೇಂದ್ರ ಸಚಿವ

    ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಅನುರಾಗ್ ಠಾಕೂರ್, ಸಚಿವರಾದ ಅಶ್ವಥ್ ನಾರಾಯಣ, ಆರಗ ಜ್ಞಾನೇಂದ್ರ, ನಾರಾಯಣಗೌಡ, ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ನಟ ಸುದೀಪ್ ಪಾಲ್ಗೊಂಡಿದ್ದರು.

  • ಅಮಿತ್ ಶಾ ಐರನ್ ಮ್ಯಾನ್, ಹಿಡಿದ ಕೆಲಸ ಬಿಡೋದಿಲ್ಲ: ಅನುರಾಗ್ ಠಾಕೂರ್

    ಅಮಿತ್ ಶಾ ಐರನ್ ಮ್ಯಾನ್, ಹಿಡಿದ ಕೆಲಸ ಬಿಡೋದಿಲ್ಲ: ಅನುರಾಗ್ ಠಾಕೂರ್

    ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಐರನ್ ಮ್ಯಾನ್, ಹಿಡಿದ ಕೆಲ ಬಿಡುವುದಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

    ಇಂದು ಕಂಠೀರವ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ 2021 ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಕನ್ನಡದಲ್ಲಿ ಎಲ್ಲರಿಗೂ ನಮಸ್ಕಾರ ಎಂದು ಭಾಷಣ ಪ್ರಾರಂಭ ಮಾಡಿದರು. ಅಮಿತ್ ಶಾ ಐರನ್ ಮ್ಯಾನ್. ಅವ್ರು ಹಿಡಿದ ಕೆಲಸ ಬಿಡೋದಿಲ್ಲ. ಗುಜರಾತ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಿದ್ದಾರೆ. ನವ ಭಾರತ ನಿರ್ಮಾಣದ ಕೆಲಸ ಮೋದಿ, ಅಮಿತ್ ಶಾ ಮಾಡ್ತಿದ್ದಾರೆ ಎಂದು ತಿಳಿಸಿದರು.

    ಖೇಲೋ ಇಂಡಿಯಾ ಪ್ರಧಾನಿಗಳ ಕಲ್ಪನೆ ಕ್ರೀಡಾಕೂಟ ಆಗಿದೆ. ಕೊರೊನಾದಿಂದ ಎರಡು ವರ್ಷ ಕ್ರೀಡಾಕೂಟ ನಡೆದಿರಲಿಲ್ಲ. ಇದೀಗ ಅತ್ಯಂತ ಯಶಸ್ವಿಯಾಗಿ ಕ್ರೀಡಾಕೂಟ ಮುಗಿದಿದೆ. 209 ವಿವಿಯ 3800 ಕ್ಕೂ ಹೆಚ್ಚು ಕ್ರೀಡಾಪಟುಗಳ ಭಾಗವಹಿಸಿದ್ದಾರೆ. ಎರಡು ರಾಷ್ಟ್ರೀಯ ದಾಖಲೆ ಕ್ರೀಡಾಕೂಟದಲ್ಲಿ ದಾಖಲಾಗಿದೆ ಎಂದರು.

    ಯೋಗ ಮತ್ತು ಮಲ್ಲಕಂಬ ಈ ಬಾರಿ ಕ್ರೀಡಾಕೂಟದಲ್ಲಿ ಸೇರಿಸಲಾಗಿದೆ. ಮೋದಿ ಅವರ ಕರೆ ಮೇರೆಗೆ ಇಡೀ ವಿಶ್ವ ಯೋಗ ದಿನ ಆಚರಣೆ ಮಾಡುತ್ತದೆ. ಕಳೆದ ಕ್ರೀಡಾಕೂಟದ 76 ರೆಕಾರ್ಡ್ ಈ ಕ್ರೀಡಾಕೂಟದಲ್ಲಿ ಬ್ರೇಕ್ ಆಗಿದೆ. ಶಿವ ಶ್ರೀಧರ್ ಜೈನ್ ವಿವಿ 7 ಚಿನ್ನದ ಪದಕ ಪಡೆದಿದ್ದಾರೆ. ಇಂದು ಕಬ್ಬಡ್ಡಿ ಫೈನಲ್ ನಾನು ವೀಕ್ಷಣೆ ಮಾಡಿದೆ. ಕೆಲ ಆಟಗಾರರಿಗೆ ಪ್ರೊ ಕಬ್ಬಡ್ಡಿಯಲ್ಲಿ ಆಕ್ಷನ್ ನಲ್ಲಿ ಭಾಗವಹಿಸಲು ಸೇರಿಸಲಾಗಿದೆ. ಕರ್ನಾಟಕ ಸರ್ಕಾರ ಬೆಂಗಳೂರಿಗೆ ಕ್ರೀಡಾಕೂಟ ಯಶಸ್ವಿಯಾಗಿ ನಡೆಸಿ ಕೊಟ್ಟಿದ್ದಕ್ಕೆ ಧನ್ಯವಾದ ಹೇಳಿದರು.

    ಇದೇ ವೇಳೆ ಜೈನ್ ವಿವಿ 20 ಚಿನ್ನದ ಪದಕ ಪಡೆದಿದೆ. 200 ಮೀಟರ್ ಓಟದಲ್ಲಿ ಒಲಂಪಿಯನ್ ದ್ಯುತಿ ಚಾಂದ್ ಸೋಲಿಸಿ ಪ್ರಿಯಾ ಮೋಹನ್ ಚಿನ್ನದ ಪದಕ ಪಡೆದಿದ್ದಾರೆ ಎಂದು ಖೇಲೋ ಇಂಡಿಯಾದ ಸಾಧಕರ ವಿವರ ಹೇಳಿದರು. ಕಾರ್ಯಕ್ರಮದಲ್ಲಿ ಅಮಿತ್ ಶಾ, ನಟ ಸುದೀಪ್, ಸಂಸದ ತೇಜಸ್ವಿಸೂರ್ಯ, ಸಿಎಂ ಬೊಮ್ಮಾಯಿ, ಪ್ರಹ್ಲಾದ್ ಜೋಶಿ, ಸಚಿವ ನಾರಾಯಣಗೌಡ, ಆರಗ ಜ್ಞಾನೇಂದ್ರ, ಸಂಸದ ಪಿಸಿ ಮೋಹನ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

  • ಇಂದು ಕಂಠೀರವದಲ್ಲಿ ಖೇಲೋ ಇಂಡಿಯಾಗೆ ತೆರೆ – ಬೆಂಗಳೂರಿಗರೇ ಪರ್ಯಾಯ ಮಾರ್ಗ ಬಳಸಿ

    ಇಂದು ಕಂಠೀರವದಲ್ಲಿ ಖೇಲೋ ಇಂಡಿಯಾಗೆ ತೆರೆ – ಬೆಂಗಳೂರಿಗರೇ ಪರ್ಯಾಯ ಮಾರ್ಗ ಬಳಸಿ

    ಬೆಂಗಳೂರು: ಇಂದು ಸಂಜೆ ಖೇಲೋ ಇಂಡಿಯಾ ಸಮಾರೋಪ ‌ಸಮಾರಂಭ ನಡೆಯಲಿರುವ ಹಿನ್ನೆಲೆಯಲ್ಲಿ ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆಯಿದೆ.

    ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವು ಸಚಿವರು ಹಾಗೂ ವಿವಿಧ ರಾಜ್ಯದ ಗಣ್ಯರು ಭಾಗವಹಿಸುವ ಹಿನ್ನೆಲೆ ಕಂಠೀರವ ಸ್ಟೇಡಿಯಂ ‌ಸುತ್ತಮುತ್ತ ಇರುವ ರಸ್ತೆಯ ಬದಲು ಪರ್ಯಾಯ ರಸ್ತೆಯನ್ನು ಬಳಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ನಿನ್ನಿಂದ್ಲೇ ಎಲ್ಲಾ ಆಗಿದ್ದು ನಿನ್ನಿಂದ ಅಪ್ಪ ಜೈಲಿಗೆ ಹೋಗಿದ್ದು – ದಿವ್ಯಾ ಹಾಗರಗಿಯನ್ನು ತರಾಟೆಗೆ ತೆಗೆದುಕೊಂಡ ಪುತ್ರ

    ವಾಹನ ನಿಲುಗಡೆ ನಿಷೇಧ:
    ಇಂದು ಬೆಳಗ್ಗೆ 6 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಕೆಲ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಸ್ತೂರ್ಬಾ ರಸ್ತೆ, ಹಡ್ಸನ್ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಮಲ್ಯ ಆಸ್ಪತ್ರೆ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್. ಜಂಕ್ಷನ್‍ವರೆಗೆ, ಆರ್.ಆರ್.ಎಂ.ಆರ್. ರಸ್ತೆ, ಆರ್.ಆರ್.ಎಂ.ಆರ್. ಜಂಕ್ಷನ್ ನಿಂದ ಹಡ್ಸನ್ ವೃತ್ತದವರೆಗೆ, ಎನ್.ಆರ್. ರಸ್ತೆ, ಕೆ.ಜಿ.ರಸ್ತೆ, ನೃಪತುಂಗ ರಸ್ತೆ, ಹಳೇ ಅಂಚೆ ಕಛೇರಿ ರಸ್ತೆ, ಬಿ.ಆರ್.ಅಂಬೇಡ್ಕರ್ ರಸ್ತೆ, ರಾಜಭವನ ರಸ್ತೆ, ದೇವರಾಜ್ ಅರಸ್ ರಸ್ತೆ, ಪ್ಯಾಲೇಸ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಟಿ.ಚೌಡಯ್ಯ ರಸ್ತೆ, ಟೆಂಪಲ್ ಸ್ಟ್ರೀಟ್ ರಸ್ತೆಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

  • ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ಗೆ ರಾಜ್ಯ ಸರ್ಕಾರದಿಂದ ಸಕಲ ಸಿದ್ಧತೆ: ನಾರಾಯಣ ಗೌಡ

    ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ಗೆ ರಾಜ್ಯ ಸರ್ಕಾರದಿಂದ ಸಕಲ ಸಿದ್ಧತೆ: ನಾರಾಯಣ ಗೌಡ

    ಬೆಂಗಳೂರು: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 ಎರಡನೇ ಆವೃತ್ತಿ ಯಶಸ್ವಿ ಆಯೋಜನೆಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ತಿಳಿಸಿದರು.

    ಖೇಲೋ ಇಂಡಿಯಾ ಯೂನಿವರ್ಸಿಟಿ 2021ರ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಸಚಿವ ಡಾ. ನಾರಾಯಣಗೌಡ ಇಂದು ವಿಧಾನಸೌಧದಲ್ಲಿ ಕೇಂದ್ರ ಯುವಜನ ಹಾಗೂ ಕ್ರೀಡಾ ಇಲಾಖೆ ಕಾರ್ಯದರ್ಶಿ ಸುಜಾತಾ ಚತುರ್ವೇದಿ ಸೇರಿದಂತೆ ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದರು. ಇದನ್ನೂ ಓದಿ: ಕೇಸರಿ ಕನ್ನಡಕದೊಳಗಿಂದ ಬೊಮ್ಮಾಯಿಗೆ ಜನರ ಕಷ್ಟ ಕಾಣದಿರಬಹುದು, ನಮಗೆ ಕಾಣುತ್ತಿದೆ: ಕಾಂಗ್ರೆಸ್

    ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾರಾಯಣಗೌಡ, ಏಪ್ರಿಲ್ 24 ರಿಂದ ಮೇ 3 ರವರೆಗೂ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ರ ಕ್ರೀಡಾಕೂಟ ನಡೆಯಲಿದ್ದು, ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಕೇಂದ್ರ ಸರ್ಕಾರದ ಕ್ರೀಡಾ ಸಚಿವ ಅನುರಾಗ್ ಠಾಕೂರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಸುಮಾರು 4,500 ಸಾವಿರ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನಾನು ಮಾತನಾಡಲ್ಲ, ನನ್ನ ಆಕ್ಷನ್ ಮಾತನಾಡುತ್ತದೆ: ವಿಪಕ್ಷಗಳಿಗೆ ಬೊಮ್ಮಾಯಿ ತಿರುಗೇಟು

    ಈ ವೇಳೆ ಕೇಂದ್ರ ಕ್ರೀಡಾ ಇಲಾಖೆ ಕಾರ್ಯದರ್ಶಿ ಸುಜಾತಾ ಚತುರ್ತೇದಿ ಮಾತನಾಡಿ, ಶಾಲೆ ಮತ್ತು ಕಾಲೇಜಿನಲ್ಲಿ ಕ್ರೀಡಾ ಸ್ಪೂರ್ತಿ ಮೂಡಿಸಲು ಖೇಲೋ ಇಂಡಿಯಾ ನಡೆಸಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರ 35 ಕೋಟಿ ರೂ. ಅನುದಾನ ನೀಡಿದೆ. ದೇಶದ 190 ಯೂನಿವರ್ಸಿಟಿಗಳ ನಾಲ್ಕೂವರೆ ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಈ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಮಲ್ಲಗಂಬವನ್ನು ಸೇರಿಸಲಾಗಿದ್ದು, ಯೋಗ, ಕರಾಟೆ ಸೇರಿದಂತೆ 20 ಕ್ರೀಡೆಗಳ ಸ್ಪರ್ಧೆ ನಡೆಯಲಿದೆ ಎಂದು ಹೇಳಿದರು.

  • ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ಗೆ ಸಕಲ ಸಿದ್ಧತೆ – ಗ್ರೀನ್ ಗೇಮ್ಸ್‌ಗೆ ಸಜ್ಜಾದ ಬೆಂಗಳೂರು

    ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ಗೆ ಸಕಲ ಸಿದ್ಧತೆ – ಗ್ರೀನ್ ಗೇಮ್ಸ್‌ಗೆ ಸಜ್ಜಾದ ಬೆಂಗಳೂರು

    ಬೆಂಗಳೂರು: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಏಪ್ರಿಲ್ 1 ರಂದು ಲೋಗೋ, ಥೀಮ್ ಸಾಂಗ್ ಹಾಗೂ ಜೆರ್ಸಿ ಬಿಡುಗಡೆಗೊಳಿಸಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದರು.

    ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಎರಡನೇ ಆವೃತ್ತಿಯನ್ನು ಆಯೋಜಿಸುವುದು ನಮ್ಮ ಕರ್ನಾಟಕಕ್ಕೆ ಸಿಕ್ಕಿರುವುದು ಹೆಮ್ಮೆಯ ವಿಷಯ. ಏಪ್ರಿಲ್ 24 ರಿಂದ ಮೇ 03 ವರೆಗೂ ನಡೆಯಲಿದ್ದು, ಏಪ್ರಿಲ್ 1 ರಂದು ಕ್ರೀಡಾಕೂಟದ ಲೋಗೋ, ಥೀಮ್ ಸಾಂಗ್, ಜೆರ್ಸಿ, ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗುತ್ತದೆ. ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಲೋಗೋ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಯುವಜನ ಮತ್ತು ಕ್ರೀಡೆ, ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್, ಕೇಂದ್ರ ಗೃಹ ಇಲಾಖೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಸಚಿವ ನಿಸಿತ್ ಪ್ರಾಮಾಣಿಕ್, ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವಥ್ ನಾರಾಯಣ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಕಾಶ್ಮೀರ ಹತ್ಯಾಕಾಂಡ – 31 ವರ್ಷದ ಬಳಿಕ ಪಾತಕಿ ಬಿಟ್ಟಾ ಕರಾಟೆ ವಿರುದ್ಧ ಅರ್ಜಿ ಸಲ್ಲಿಕೆ

    ಏಪ್ರಿಲ್ 24 ರಂದು ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಉದ್ಘಾಟನೆಗೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮಿಸಲಿದ್ದಾರೆ. ಅಲ್ಲದೇ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. 10 ದಿನಗಳ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ಜುಡೋ, ವಾಲಿಬಾಲ್, ಕಬಡ್ಡಿ, ಬಾಸ್ಕೆಟ್ ಬಾಲ್, ಕರಾಟೆ, ಮಲ್ಲಕಂಬ ಸೇರಿದಂತೆ 20 ಕ್ರೀಡೆಗಳು ನಡೆಯಲಿದ್ದು, ದೇಶದ 200ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳಿಂದ 8 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು, ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ. ಜೈನ್ ವಿವಿ ಕ್ಯಾಂಪಸ್, ಕಂಠೀರವ ಕ್ರೀಡಾಂಗಣದಲ್ಲಿ ಗೇಮ್ಸ್‍ಗಳು ನಡೆಯಲಿವೆ. ಈ ಕ್ರೀಡಾಕೂಟವನ್ನು ಅದ್ಧೂರಿಯಾಗಿ ಆಯೋಜಿಸಲು ಆರು ತಿಂಗಳಿನಿಂದ ಸಿದ್ಧತೆ ನಡೆಸುತ್ತಿದ್ದು, ಕಳೆದ ಎರಡು ತಿಂಗಳಿಂದ ಪ್ರತಿನಿತ್ಯ ವಿಶೇಷ ನಿಗಾವಹಿಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಕನ್ನಡ ಮತ್ತು ಹಿಂದಿಯಲ್ಲಿ ಸರೋಜಿನಿ ನಾಯ್ಡು ಬಯೋಪಿಕ್ : ಭಾರತದ ಕೋಗಿಲೆ ಪಾತ್ರದಲ್ಲಿ ಇಬ್ಬರು ನಟಿಯರು

    ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ನಾ ಥೀಮ್ ಸಾಂಗ್‍ನ್ನು ಕನ್ನಡದ ಖ್ಯಾತ ರಾರ್ಪರ್, ಗಾಯಕ ಚಂದನ್ ಶೆಟ್ಟಿ ಕಂಪೋಸ್ ಮಾಡಿದ್ದಾರೆ. ಕ್ರೀಡೆ ಜೊತೆಯಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸುವುದು ಸರ್ಕಾರದ ಉದ್ದೇಶವಾಗಿದ್ದು ಈ ಕಾರಣಕ್ಕಾಗಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ಅನ್ನು ಹಸಿರು ಕ್ರೀಡಾಕೂಟ (ಗ್ರೀನ್ ಗೇಮ್ಸ್)ಎಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

    MODi

    ಈ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರೀತಿಯ ಸಹಕಾರ ನೀಡ್ತಿದ್ದು, ಕ್ರೀಡೆಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಮಾರ್ಗದರ್ಶನ ನೀಡುತ್ತಿದ್ದಾರೆ. ಅದರ ಜೊತೆಗೆ ನಮ್ಮ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಕೂಡ ಪ್ರತಿನಿತ್ಯ ಮಾಹಿತಿ ಪಡೆಯುತ್ತಿದ್ದು, ಎಲ್ಲಾ ರೀತಿಯ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಐಪಿಎಲ್ ಮಾಧ್ಯಮ ಹಕ್ಕು ಟೆಂಡರ್ ಆಹ್ವಾನ – ಬಂಪರ್ ನಿರೀಕ್ಷೆಯಲ್ಲಿ ಬಿಸಿಸಿಐ

    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಾಧನೆ ಕುರಿತ ‘ಕಾರ್ಯಪಥ’ ಪುಸ್ತಕವನ್ನು ಅನುರಾಗ್ ಠಾಕೂರ್ ಬಿಡುಗಡೆಗೊಳಿಸಲಿದ್ದಾರೆ. ಇದೇ ದಿನ ಕಂಠೀರವ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಹೊಸ ಸಿಂಥೆಟಿಕ್ ಅಥ್ಲೆಟಿಕ್ ಟ್ರ್ಯಾಕ್‌ ಉದ್ಘಾಟನೆಗೊಳಿಸಲಾಗುವುದು ಎಂದರು.

    ಸುದ್ದಿಗೋಷ್ಠಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಜೈನ್ ವಿವಿ ವೈಸ್ ಚಾನ್ಸಲರ್ ಉಪಸ್ಥಿತರಿದ್ದರು.

  • ಖೇಲೋ ಇಂಡಿಯಾ: ಚಿನ್ನ ಗೆದ್ದು ರಾಜ್ಯಕ್ಕೆ ಕೀರ್ತಿ ತಂದ ಯುವಕ

    ಖೇಲೋ ಇಂಡಿಯಾ: ಚಿನ್ನ ಗೆದ್ದು ರಾಜ್ಯಕ್ಕೆ ಕೀರ್ತಿ ತಂದ ಯುವಕ

    ಧಾರವಾಡ: ಖೇಲೋ ಇಂಡಿಯಾ ಕ್ರೀಡಾಕೂಟದ ಜಿಮ್ನಾಸ್ಟಿಕ್‍ನಲ್ಲಿ ಧಾರವಾಡ ಯುವಕ ಚಿನ್ನದ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

    ಆಸ್ಸಾಂನ ಗುವಾಹಟಿಯಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಧಾರವಾಡ ಅಮೃತ ಮುದ್ರಬೆಟ್ಟ ಅವರು ಚಿನ್ನದ ಪದಕ ಪಡೆದಿದ್ದಾರೆ. ಜಿಮ್ನಾಸ್ಟಿಕ್‍ನ ಫ್ಲೋರ್ ಎಕ್ಸಸೈಜ್ ವಿಭಾಗದಲ್ಲಿ ಚಿನ್ನ ಪದಕ ಗಳಿಸಿ ಕೀರ್ತಿ ತಂದಿದ್ದಾರೆ.

    ಧಾರವಾಡದ ಬಾಲ ಮಾರುತಿ ಜಿಮ್ನಾಸ್ಟಿಕ್‍ನ ಕ್ರೀಡಾಪಟುವಾಗಿರುವ ಮುದ್ರಬೆಟ್ಟ ಅವರು, ಖೇಲೋ ಇಂಡಿಯಾದ ಜಿಮ್ನಾಸ್ಟಿಕ್ ವಿಭಾಗದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದರು. ಉಳಿದಂತೆ ಜಿಮ್ನಾಸ್ಟಿಕ್‍ನ ಫ್ಲೋರ್ ಎಕ್ಸಸೈಜ್‍ನಲ್ಲಿ ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರದ ಕ್ರೀಡಾಪಟುಗಳು ಕ್ರಮವಾಗಿ 2 ಮತ್ತು 3ನೇ ಪಡೆದುಕೊಂಡಿದ್ದಾರೆ.

    ಅಮೃತ ಮುದ್ರಬೆಟ್ಟ ಅವರು ಚಿನ್ನ ಗೆಲ್ಲುತಿದ್ದಂತೆಯೇ ತಂದೆ ನಾಗೇಶ್ ಅವರೊಂದಿಗೆ ಮಾತನಾಡಿ ಸಂತಸ ಹಂಚಿಕೊಂಡಿದ್ದಾರೆ. ಮುದ್ರಬೆಟ್ಟ ಅವರ ಸಾಧನೆಗೆ ಇಡೀ ಕುಟುಂಬ ಸಂತಸ ವ್ಯಕ್ತಪಡಿಸಿದೆ. ಅಮೃತ ಮುದ್ರಬೆಟ್ಟ ಅವರು ಟೆಬಲ್ ವಾಲ್ಟ್ ಹಾಗೂ ಪಾಮೆಲ್ ಹಾರ್ಸ್ ಪಂದ್ಯ ಕೂಡಾ ಆಡಲಿದ್ದು, ಅದರಲ್ಲಿ ಕೂಡಾ ಟಾಪ್ 8 ರಲ್ಲಿದ್ದಾರೆ ಎಂದು ನಾಗೇಶ್ ಅವರು ಮಾಹಿತಿ ನೀಡಿದರು. ಈ ವಿಭಾಗಳಲ್ಲಿ ಅಮೃತ ಬೆಟ್ಟ ಅವರು ಚಿನ್ನ ಗೆಲ್ಲಲಿ ಎಂದು ಕುಟುಂಬಸ್ಥರು ಆಶಯ ವ್ಯಕ್ತಪಡಿಸಿದ್ದಾರೆ.

  • ಚಿನ್ನ ಗೆದ್ದ 16ರ ಹರೆಯದ ಶೂಟರ್ ಹಿಂದಿದೆ ಖೇಲೋ ಇಂಡಿಯಾ! ಏನಿದು ಯೋಜನೆ?

    ಚಿನ್ನ ಗೆದ್ದ 16ರ ಹರೆಯದ ಶೂಟರ್ ಹಿಂದಿದೆ ಖೇಲೋ ಇಂಡಿಯಾ! ಏನಿದು ಯೋಜನೆ?

    ನವದೆದಲಿ: ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಏರ್ ಪಿಸ್ತೂಲ್‍ನಲ್ಲಿ 16ನೇ ವರ್ಷದ ಸೌರಭ್ ಚೌಧರಿ ಚಿನ್ನ ಪದಕ ಜಯಿಸಿ ದೇಶದ ಜನರ ಮನ ಗೆದ್ದಿದ್ದಾರೆ.

    ಕ್ರೀಡಾಕೂಟದ ಪುರುಷರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಸೌರಭ್ ಚೌಧರಿ ಚಿನ್ನ ಪದಕ ಗೆದಿದ್ದಾರೆ. ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಸದ್ಯ ಭಾರತ 4 ಚಿನ್ನ, 3 ಬೆಳ್ಳಿ ಮತ್ತು 4 ಕಂಚು ಗೆಲ್ಲುವ ಮೂಲಕ 6ನೇ ಸ್ಥಾನ ಗಳಿಸಿದೆ.

    ಖೇಲೋ ಇಂಡಿಯಾ ಪ್ರತಿಭೆ: ಸೌರಭ್ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಖೇಲೋ ಇಂಡಿಯಾ ಮೂಲಕ ಬೆಳಕಿಗೆ ಬಂದವರು. ಫೆಬ್ರವರಿಯಲ್ಲಿ ದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಶಾಲಾ ಕ್ರೀಡಾಕೂಟದಲ್ಲಿ ಭಾಗಹಿಸಿ ಪದಕ ಗೆದ್ದಿದ್ದರು. ಬಳಿಕ ತರಬೇತಿ ಪಡೆದು ಜುಲೈನಲ್ಲಿ ಜರ್ಮನಿಯಲ್ಲಿ ನಡೆದಿದ್ದ ಕಿರಿಯರ ವಿಶ್ವಕಪ್ ನಲ್ಲಿ 243.7 ಅಂಕ ಪಡೆದು ದಾಖಲೆ ನಿರ್ಮಿಸಿ ಚಿನ್ನದ ಪದಕ ಗೆದ್ದಿದ್ದರು. ಅಲ್ಲದೆ ಅರ್ಜೆಂಟೀನಾದಲ್ಲಿ ನಡೆಯಲಿರುವ ಕಿರಿಯರ ಒಲಿಂಪಿಕ್ಸ್ ಗೂ ಆರ್ಹತೆ ಪಡೆದಿದ್ದರು. ಉತ್ತರ ಪ್ರದೇಶದ ಪ್ರತಿಭೆಯಾಗಿರುವ ಸೌರಭ್ ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ಶೂಟಿಂಗ್ ಕ್ರೀಡೆ ಆಯ್ಕೆ ಮಾಡಿಕೊಂಡಿದ್ದರು. 2016 ರಲ್ಲಿ ತೆಹ್ರಾನ್ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತವನ್ನು ಮೊದಲ ಬಾರಿಗೆ ಪ್ರತಿನಿಧಿಸಿದ್ದರು.

    ಖೇಲೋ ಇಂಡಿಯಾ: ಗ್ರಾಮೀಣ ಹಾಗೂ ತೆರೆಮರೆಯಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರ ಕೈಗೊಂಡಿರುವ ಮಹತ್ವಾಕಾಂಕ್ಷಿ ಯೋಜನೆ `ಖೇಲೋ ಇಂಡಿಯಾ’. ಇದರ ಮೊದಲ ಚೊಚ್ಚಲ ಆವೃತ್ತಿ ಫೆಬ್ರವರಿಯಲ್ಲಿ 8 ದಿನಗಳ ಕಾಲ ದೆಹಲಿಯಲ್ಲಿ ನಡೆದಿತ್ತು.

    ಪ್ರತಿಭಾವಂತರ ಆಯ್ಕೆ: ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಆಟಗಾರರಿಗೆ ಪದಕ ಗೆಲ್ಲುವ ಅವಕಾಶವಿರುತ್ತದೆ. ಈ ಯೋಜನೆಯ ಅನ್ವಯ ಒಟ್ಟು 1 ಸಾವಿರ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಅವರಿಗೆ ವಿಶ್ವದರ್ಜೆಯ ತರಬೇತಿ ಕಲ್ಪಿಸಲಾಗುತ್ತದೆ. ಕ್ರೀಡಾಕೂಟದಲ್ಲಿ 18 ಕ್ರೀಡೆಗಳಲ್ಲಿ ವಿವಿಧ ರಾಜ್ಯಗಳ ಸುಮಾರು 5 ಸಾವಿರ ಕ್ರೀಡಾಪಟುಗಳು ಭಾವಹಿಸಿದ್ದರು.

    ಸೌಲಭ್ಯ ಏನು?
    ಖೇಲೋ ಇಂಡಿಯಾ ಕ್ರೀಡಾಪಟುದಲ್ಲಿ ಆಯ್ಕೆಯಾದ ಕ್ರೀಡಾಪಟುಗಳಿಗೆ ಕೇಂದ್ರ ಸರ್ಕಾರ 8 ವರ್ಷಗಳ ಕಾಲ ವಾರ್ಷಿಕ 5 ಲಕ್ಷ ರೂ. ಆರ್ಥಿಕ ನೆರವು ನೀಡಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಕ್ರೀಡಾಪಟುಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡುಲಾಗುತ್ತದೆ.

    16 ಕ್ರೀಡೆಗಳು: ಶೂಟಿಂಗ್, ವೇಟ್ ಲಿಫ್ಟಿಂಗ್, ಜುಡೋ, ಕುಸ್ತಿ, ಬಾಸ್ಕೆಟ್ ಬಾಲ್, ಫುಟ್ಬಾಲ್, ಹಾಕಿ, ಕಬಡ್ಡಿ, ಖೋ-ಖೋ, ವಾಲಿಬಾಲ್, ಜಿಮ್ನಾಸ್ಟಿಕ್ಸ್, ಆರ್ಚರಿ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಈಜು.

    ಫೆಬ್ರವರಿಯಲ್ಲಿ ಒಂದು ವಾರದ ಕಾಲ ನಡೆದ ಕ್ರೀಡಾಕೂಟಕ್ಕೆ ಅಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಈ ವೇಳೆ ಕ್ರೀಡಾಕೂಟದಲ್ಲಿ ಮುಂದಿನ ವರ್ಷದಿಂದ ಮತ್ತಷ್ಟು ಕ್ರೀಡೆಗಳನ್ನು ಖೇಲೋ ಇಂಡಿಯಾ ಯೋಜನೆಯಡಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಘೋಷಿಸಿದ್ದರು. ಅಲ್ಲದೇ ಭವಿಷ್ಯದ ಚಾಂಪಿಯನ್ ಕ್ರೀಡಾಪಟುಗಳನ್ನು ಗುರುತಿಸುವ ಅವರಿಗೆ ಉತ್ತಮ ಬೆಂಬಲ ನೀಡುವ ಉದ್ದೇಶ ಯೋಜೆನೆಯ ಹಿಂದಿದೆ ಎಂದು ತಿಳಿಸಿದ್ದರು. ಖೇಲೋ ಇಂಡಿಯಾ ಯೋಜನೆಯೂ ಈ ಹಿಂದೆ ಜಾರಿಗೆ ಮಾಡಲಾಗಿದ್ದ ರಾಜೀವ್ ಗಾಂಧಿ ಖೇಲ್ ಅಭಿಯಾನ್, ರಾಷ್ಟ್ರೀಯ ಕ್ರೀಡಾ ಪ್ರತಿಭಾನ್ವೇಷಣೆ ಯೋಜನೆ, ನಗರ ಕ್ರೀಡಾ ಸೌಕರ್ಯ ಯೋಜನೆಗಳ ವಿಲೀನ ರೂಪ ಇದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv