ಬೆಂಗಳೂರು: 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್ನಲ್ಲಿ (Kho Kho World Cup) ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಿಧಾನಸೌಧದ ತಮ್ಮ ಕಚೇರಿಯಲ್ಲಿಂದು ಕ್ರೀಡಾಪಟುಗಳಿಗೆ ಸನ್ಮಾನಿಸಿ ಗೌರವಿಸಿದರು. ಇಬ್ಬರೂ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಬಹುಮಾನ ಸಹ ಘೋಷಿಸಿದರು. ಇದನ್ನೂ ಓದಿ: ಖೋ ಖೋ ವಿಶ್ವಕಪ್; ಎಂಕೆ ಗೌತಮ್, ಚೈತ್ರಾರನ್ನು ಗೌರವಿಸಿದ ಹೆಚ್ಡಿಕೆ
ಈ ಸಂದರ್ಭದಲ್ಲಿ ಸಚಿವ ಚಲುವರಾಯಸ್ವಾಮಿ (Chaluvaraya Swamy) ಮತ್ತು ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷರೂ ಆದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು. ಇದನ್ನೂ ಓದಿ: IPL 2025 | ಲಕ್ನೋ ಸೂಪರ್ ಜೈಂಟ್ಸ್ಗೆ ರಿಷಬ್ ನೂತನ ಸಾರಥಿ
ನವದೆಹಲಿ: 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್ನಲ್ಲಿ (Kho Kho World Cup) ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂಕೆ ಗೌತಮ್ (MK Gowtham) ಹಾಗೂ ಚೈತ್ರಾ (Chaitra) ಅವರನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಸನ್ಮಾನಿಸಿ ಗೌರವಿಸಿದರು.
ಗೌತಮ್, ಚೈತ್ರಾ ಇಬ್ಬರಿಗೂ ಶುಭ ಕೋರಿದ ಸಚಿವರು, ಭಾರತದ ಪುರುಷರು ಮತ್ತು ಮಹಿಳೆಯರ ಖೋ ಖೋ ವಿಶ್ವಕಪ್ ತಂಡದಲ್ಲಿ ಅಮೋಘ ಆಟವನ್ನಾಡಿ ಭಾರತವನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ನಿಮ್ಮಿಬ್ಬರಿಗೂ ನನ್ನ ಅಭಿನಂದನೆಗಳು. ಕರ್ನಾಟಕದ ಗರಿಮೆಯನ್ನು ನೀವು ಹೆಚ್ಚಿಸಿದ್ದೀರಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರದ ಸಾಧನೆಗಳನ್ನು ಮಾಡಿ ಎಂದು ಶುಭಹಾರೈಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಗೃಹ ಇಲಾಖೆ ಸತ್ತು ಹೋಗಿದೆ: ಶರವಣ ವ್ಯಂಗ್ಯ
ಕನ್ನಡ ನೆಲದ ಗ್ರಾಮೀಣ ಮಕ್ಕಳಿಬ್ಬರೂ ಇಂದು ಭಾರತಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಮಾತ್ರವಲ್ಲದೆ, ಕನ್ನಡಮ್ಮನ ಕೀರ್ತಿ ಕಿರೀಟಕ್ಕೆ ಮತ್ತಷ್ಟು ಗರಿಗಳನ್ನು ಪೇರಿಸಿ ನಮ್ಮ ಸಂತಸವನ್ನು ಇಮ್ಮಡಿಗೊಳಿಸಿದ್ದಾರೆ. ಇಬ್ಬರಿಗೂ ಶುಭವಾಗಲಿ, ಭವಿಷ್ಯದಲ್ಲಿ ಇಂತಹ ಅನೇಕ ಉನ್ನತ ಸಾಧನೆಗಳನ್ನು ಮಾಡಲಿ ಎಂದು ಹಾರೈಸುತ್ತೇನೆ ಹಾಗೂ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮಕ್ಕಳಿಗೆ ಇವರ ಸಾಧನೆ ಸದಾ ಪ್ರೇರಣೆಯಾಗಲಿ ಎಂದು ಆಶಿಸುತ್ತೇನೆ ಎಂದರು. ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಶಾಸಕರು ಕಾಂಗ್ರೆಸ್ಗೆ ಹೋಗಲ್ಲ: ರವಿಕುಮಾರ್
ಎಂಕೆ ಗೌತಮ್ ಅವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಡಿ.ಮಲ್ಲೀಗೆರೆ ಗ್ರಾಮದವರು ಹಾಗೂ ಚೈತ್ರಾ ಅವರು ಚಾಮರಾಜನಗರ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದವರು. ಗ್ರಾಮೀಣ ಮಕ್ಕಳು ಹೆಚ್ಚು ಪ್ರಮಾಣದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಬರಬೇಕು. ನಮ್ಮಿಂದ ಸಾಧ್ಯ ಆಗುವಷ್ಟು ಪ್ರೋತ್ಸಾಹ ನೀಡುತ್ತೇವೆ. ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕ್ರೀಡೆಗೆ ಬಹಳಷ್ಟು ಬೆಂಬಲ, ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ – ಸಿಎಂ, ಡಿಸಿಎಂ ರಾಜೀನಾಮೆ ಕೊಡ್ಬೇಕು: ರವಿಕುಮಾರ್
ಈ ಸಂದರ್ಭದಲ್ಲಿ ಮಾತನಾಡಿದ ಗೌತಮ್, ಚೈತ್ರಾ ಇಬ್ಬರೂ; ಕರ್ನಾಟಕದವರೇ ಆಗಿರುವ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಕಚೇರಿಗೆ ಬರಮಾಡಿಕೊಂಡು ನಮ್ಮಿಬ್ಬರನ್ನು ಗೌರವಿಸಿದ್ದು ಬಹಳ ಸಂತೋಷ ಉಂಟು ಮಾಡಿದೆ. ನಮ್ಮ ಬದುಕಿನಲ್ಲಿ ಇದು ಅವಿಸ್ಮರಣೀಯ ಘಟನೆ ಆಗಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಇದನ್ನೂ ಓದಿ: Kolar | ಅರಣ್ಯ ಇಲಾಖೆ ಗೋಡೌನ್ ಬೀಗ ಒಡೆದು ಕಳ್ಳತನಕ್ಕೆ ಯತ್ನ – ಇಬ್ಬರು ಅರೆಸ್ಟ್
ನವದೆಹಲಿ: ಭಾರತದ ಮಹಿಳೆಯರ ತಂಡವು ಖೋ ಖೋ ವಿಶ್ವಕಪ್ನ ಫೈನಲ್ನಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಅದರ ಬೆನ್ನಲ್ಲೇ ಪುರುಷರ ತಂಡವೂ ಸಾಂಘಿಕ ಆಟ ಪ್ರದರ್ಶಿಸಿ ದೇಸಿ ಕ್ರೀಡೆಯ ಚೊಚ್ಚಲ ವಿಶ್ವಕಿರೀಟ ಮುಡಿಗೇರಿಸಿಕೊಂಡಿದೆ.
Congratulations to the Indian women’s team on winning the first-ever Kho Kho World Cup! This historic victory is a result of their unparalleled skill, determination and teamwork.
This triumph has brought more spotlight to one of India’s oldest traditional sports, inspiring… pic.twitter.com/5lMftjZB5Z
ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಫೈನಲ್ ಹಣಾಹಣಿಯಲ್ಲಿ ತವರಿನ ಪ್ರೇಕ್ಷಕರ ಮುಂದೆ ಪ್ರಿಯಾಂಕಾ ಇಂಗೈ ಮತ್ತು ಪ್ರತೀಕ್ ವೈಕರ್ ಬಳಗವು ಗೆದ್ದು ಬೀಗಿತು.
ಎರಡೂ ವಿಭಾಗಗಳಲ್ಲೂ ನೇಪಾಳ ತಂಡವು ರನ್ನರ್ಅಪ್ ಪ್ರಶಸ್ತಿಗೆ ಪಾತ್ರವಾಯಿತು. ಆತಿಥೇಯ ತಂಡಗಳು ಜಯ ಸಾಧಿಸುತ್ತಿದ್ದಂತೆ ಕಿಕ್ಕಿರಿದು ಸೇರಿದ್ದ ಕ್ರೀಡಾಭಿಮಾನಿಗಳು ಎದ್ದು ನಿಂತು ಚಪ್ಪಾಳೆ ತಟ್ಟಿ, ರಾಷ್ಟ್ರಧ್ವಜದೊಂದಿಗೆ ಕುಣಿದು ಕುಪ್ಪಳಿಸಿದರು.
19 ತಂಡಗಳಿದ್ದ ಮಹಿಳೆಯರ ವಿಭಾಗದಲ್ಲಿ ಭಾರತ ಮತ್ತು ನೇಪಾಳವು ಅಜೇಯವಾಗಿ ಫೈನಲ್ ಪ್ರವೇಶಿಸಿದ್ದವು. ಹೀಗಾಗಿ, ಅವುಗಳ ಸೆಣಸಾಟ ಭಾರೀ ಕುತೂಹಲ ಮೂಡಿಸಿತ್ತಾದರೂ, ಅಂತಿಮವಾಗಿ 78-40ರಿಂದ ಆತಿಥೇಯ ಬಳಗವು ಪಾರಮ್ಯ ಮೆರೆಯಿತು.