Tag: Khushbhu

  • ಖುಷ್ಬೂಗೆ ಪಾದ ತೊಳೆದು ನಾರಿ ಪೂಜೆ: ಫೋಟೋಗಳು ವೈರಲ್

    ಖುಷ್ಬೂಗೆ ಪಾದ ತೊಳೆದು ನಾರಿ ಪೂಜೆ: ಫೋಟೋಗಳು ವೈರಲ್

    ಖ್ಯಾತ ನಟಿ ಖುಷ್ಭೂ ಸುಂದರ್ (Khushboo) ಅವರನ್ನು ಕೇರಳದ (Kerala) ತ್ರಿಶೂರ್ ನ ವಿಷ್ಣುಮಾಯಾ (Vishnumaya) ದೇವಸ್ಥಾನಕ್ಕೆ ಆಹ್ವಾನಿಸಿ ಪಾದಪೂಜೆ ನೆರವೇರಿಸಿದ್ದಾರೆ ಪೂಜಾರಿಗಳು. ಕೇರಳ ವಿಷ್ಣುಮಾಯಾ ದೇವಸ್ಥಾನದಲ್ಲಿ (Temple) ಪ್ರತಿ ವರ್ಷವೂ ಸುಹಾಸಿನಿ ಪೂಜಾ ಹೆಸರಿನಲ್ಲಿ ನಾರಿ ಪೂಜೆಯನ್ನು ಮಾಡಲಾಗುತ್ತಿದೆ. ಪ್ರತಿ ವರ್ಷವೂ ಒಬ್ಬೊಬ್ಬ ಮಹಿಳೆಯನ್ನು ಆಹ್ವಾನಿಸಿ ಈ ರೀತಿ ಪೂಜೆ ನೆರವೇರಿಸಲಾಗುತ್ತದೆ.

    ಈ ಬಾರಿ ನಟಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯೂ ಆಗಿರುವ ಖುಷ್ಣೂ ಸುಂದರ್ ಅವರನ್ನು ದೇವಸ್ಥಾನಕ್ಕೆ ಕರೆಯಿಸಿಕೊಂಡು ನಾರಿ ಪೂಜೆಯನ್ನು ಮಾಡಲಾಗಿದೆ. ಪಾದಪೂಜೆ ಸೇರಿದಂತೆ ವಿವಿಧ ಪೂಜಾ ವಿಧಾನಗಳ ಮೂಲಕ ಶಾಸ್ತ್ರೋಕ್ತವಾಗಿ ಪೂಜೆಯನ್ನು ಮಾಡಲಾಗುತ್ತದೆ.

    ಪೂಜೆಯಲ್ಲಿ ಮಹಿಳೆಯರಿಗೆ ರೇಷ್ಮೆ ವಸ್ತ್ರಗಳನ್ನು ನೀಡುವುದರ ಜೊತೆ ಪಾದ ಪೂಜೆ ಮಾಡಿ, ಕೊರಳಿಗೆ ಹಾರ ಹಾಕಲಾಗುತ್ತದೆ. ಹೀಗೆ ಮಾಡಿದರೆ ಸ್ವರ್ಗದಿಂದಲೇ ದೇವತೆಯು ಧರೆಗೆ ಬಂದು, ಪಾದ ಪೂಜೆ ಮಾಡಿಸಿಕೊಳ್ಳುತ್ತಾಳೆ ಎನ್ನುವುದು ಅಲ್ಲಿನ ನಂಬಿಕೆ. ಇದನ್ನೂ ಓದಿ:‘ಐ ಯ್ಯಾಮ್ ಇನ್ ಲವ್’ ಅಂತಿದ್ದಾರೆ ರಚಿತಾ ರಾಮ್

    ಈ ವಿಷಯವನ್ನು ಸ್ವತಃ ಖುಷ್ಭೂ ಅವರೇ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇಂತಹ ಅವಕಾಶ ನನಗೆ ಸಿಕ್ಕಿದ್ದು ನನ್ನ ಅದೃಷ್ಟ, ಶಾಂತಿ ನೆಲೆಸಲು ನಾನು ನಿರಂತರವಾಗಿ ಶ್ರಮಿಸುವೆ ಎಂದೆಲ್ಲ ಅವರು ಬರೆದುಕೊಂಡಿದ್ದಾರೆ.

     

    ಖುಷ್ಬು ಮೂಲತಃ ಮುಸ್ಲಿಂ ಸಮುದಾಯಲ್ಲಿ ಹುಟ್ಟಿದವರು. ಇವರು ಮೂಲ ಹೆಸರು ನಖತ್ ಖಾನ್. ಸಿನಿಮಾ ರಂಗಕ್ಕೆ ಬಂದ ನಂತರ ಮತ್ತು ಮದುವೆಯ ನಂತರ ತಮ್ಮ ಹೆಸರನ್ನು ಬದಲಾಯಿಸಿಕೊಂಡರು. ಇದೀಗ ಖುಷ್ಭೂ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಜೊತೆಗೆ ಅಭಿಮಾನಿಗಳು ಖುಷ್ಭೂಗಾಗಿ ದೇವಸ್ಥಾನವೊಂದನ್ನು ಕಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನನ್ನ ಪತಿ ಹಿಂದೂ, ನಾನಿನ್ನೂ ಮುಸ್ಲಿಂ : ಮತ್ತೆ ಗುಡುಗಿದ ಖುಷ್ಭೂ

    ನನ್ನ ಪತಿ ಹಿಂದೂ, ನಾನಿನ್ನೂ ಮುಸ್ಲಿಂ : ಮತ್ತೆ ಗುಡುಗಿದ ಖುಷ್ಭೂ

    ಬಾಲಿವುಡ್ ಚಿತ್ರೋದ್ಯಮದ ಬಗ್ಗೆ ಸದಾ ಕೊಂಕುಗಳನ್ನು ಬರೆಯುವ ಮತ್ತು ತನ್ನದೇ ಆದ ರೀತಿಯಲ್ಲಿ ಪ್ರಶ್ನೆ ಮಾಡುವ ಕೆ.ಆರ್.ಕೆ ಅಲಿಯಾಸ್ ಕಮಾಲ್ ಆರ್ ಖಾನ್ (Kamal Khan), ಈ ಬಾರಿ ನಟಿ ಖುಷ್ಬೂ ಬೆನ್ನುಬಿದ್ದಿದ್ದಾರೆ. ಖುಷ್ಭೂ ಮದುವೆ ಕುರಿತು ಮತ್ತು ಅವರ ನಿಜವಾದ ಹೆಸರಿನ ಕುರಿತು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಗೆ ಸ್ವತಃ ಖುಷ್ಭೂ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

    ಖುಷ್ಭೂ (Khushbhu) ಅವರ ಮದುವೆ ಮತ್ತು ಮತಾಂತರ (Conversion) ಕುರಿತಾಗಿ ಪ್ರಶ್ನೆ ಮಾಡಿರುವ ಕೆ.ಆರ್.ಕೆ, ‘ನೀವು ಹಿಂದೂ (Hindu) ಧರ್ಮಕ್ಕೆ ಮತಾಂತಗೊಂಡಿದ್ದೀರಾ? ಮತಾಂತರ ಆದ ನಂತರ ನಿಮ್ಮ ಹೆಸರನ್ನು ಖುಷ್ಭೂ ಅಂತ ಬದಲಾಯಿಸಿಕೊಂಡಿದ್ದೀರಾ’ ಎಂದು ಕೇಳಿದ್ದಾರೆ. ನಖತ್ ಎಂದಿದ್ದ ನಿಮ್ಮ ಹೆಸರು ಖುಷ್ಣೂ ಅಂತ ಬದಲಾಗಿದ್ದು ಯಾವಾಗ ಎಂದೂ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:ಕಸ್ಟಡಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆದ ನಾಗ ಚೈತನ್ಯ

    ಕಮಾಲ್ ಕೇಳಿದ ಪ್ರಶ್ನೆಗೆ ಖುಷ್ಭೂ ಉತ್ತರಿಸಿದ್ದು, ‘ನೀವು ನನ್ನ ಹೆಸರು ನಿಖಿತ್ ಎಂದು ಬರೆದಿದ್ದೀರಿ. ಆದರೆ, ನನ್ನ ಹೆಸರು ನಖತ್. ಈ ಹೆಸರಿನ ಅರ್ಥ ಖುಷ್ಭೂ ಅಂತಾನೆ. ಖುಷ್ಭೂ ಅಂತ ಹೆಸರಿಟ್ಟಿದ್ದು ಬಿ.ಆರ್.ಚೋಪ್ರಾ ಅವರು. ನಿಮಗೆ ವಿಶೇಷ ಮದುವೆ ಕಾಯ್ದೆ ಬಗ್ಗೆ ಗೊತ್ತಾ? ಆ ಕಾಯ್ದೆ ಅಡಿ ಮದುವೆ ಆಗಿದ್ದೇನೆ. ನನ್ನ ಗಂಡ ಹಿಂದೂ ಆಗಿ, ನಾನು ಮುಸ್ಲಿಂ (Muslim) ಆಗಿಯೇ ಇದ್ದೇನೆ. ಗಂಡ ನನ್ನ ಅರ್ಧ ಜೀವ. ಹಾಗಾಗಿ ಅವರ ಹೆಸರು ಸೇರಿಸಿಕೊಂಡಿದ್ದೇನೆ’ ಎಂದು ತಿರುಗೇಟು ನೀಡಿದ್ದಾರೆ.

    ಧರ್ಮ ಮತ್ತು ಮದುವೆ (Marriage) ವಿಚಾರವಾಗಿ ಖುಷ್ಭೂಗೆ ಇತ್ತೀಚಿನ ದಿನಗಳಲ್ಲಿ ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ. ಪ್ರಶ್ನೆ ಕೇಳಿದವರಿಗೆಲ್ಲ ಬೋಲ್ಡ್ ಆಗಿಯೇ ಉತ್ತರ ನೀಡುತ್ತಿದ್ದಾರೆ ಖುಷ್ಭೂ. ಯಾವುದೇ ವಿಷಯವನ್ನೂ ಅವರು ಮುಚ್ಚಿಡದೇ ಎಲ್ಲವೂ ಹಂಚಿಕೊಳ್ಳುತ್ತಿದ್ದಾರೆ.

  • ಖುಷ್ಬೂ ಮತಾಂತರ ಆಗಿದ್ದಾರಾ?: ನಟಿ ಕೊಟ್ಟ ಉತ್ತರವೇನು?

    ಖುಷ್ಬೂ ಮತಾಂತರ ಆಗಿದ್ದಾರಾ?: ನಟಿ ಕೊಟ್ಟ ಉತ್ತರವೇನು?

    ಟಿ ಹಾಗೂ ಸಕ್ರಿಯ ರಾಜಕಾರಣಿಯೂ ಆಗಿರುವ ಖುಷ್ಬೂ (Khushboo) ಸೋಷಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಒಂದಿಲ್ಲೊಂದು ಚರ್ಚೆ ಹುಟ್ಟು ಹಾಕುತ್ತಲೇ ಇರುತ್ತಾರೆ. ಅದಕ್ಕೆ ಬಂದ ಉತ್ತರಗಳಿಗೆ ಮತ್ತು ಹುಟ್ಟಿದ ಪ್ರಶ್ನೆಗಳಿಗೆ ಸಮಾಧಾನವಾಗಿಯೇ ಉತ್ತರ ನೀಡುತ್ತಾರೆ. ಈ ಬಾರಿ ಅವರ ಮದುವೆ ಮತ್ತು ಮತಾಂತರ (Conversion) ಕುರಿತಾಗಿ ಪ್ರಶ್ನೆಯೊಂದು ತೇಲಿ ಬಂದಿದ್ದು, ಅದಕ್ಕೂ ಖುಷ್ಬೂ ಉತ್ತರಿಸಿದ್ದಾರೆ.

    ಖುಷ್ಬೂ ಮುಂಬೈನ ಮುಸ್ಲಿಂ ಕುಟುಂಬದಲ್ಲಿ ಹುಟ್ಟಿದವರು. ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ನಂತರ ಅವರು ದಕ್ಷಿಣ ಭಾರತದಲ್ಲಿ ನೆಲೆಯೂರಿದರು. ಹೆಚ್ಚೆಚ್ಚು ಸಿನಿಮಾಗಳು ಸಿಕ್ಕಾಗಿ ಚೆನ್ನೈನಲ್ಲೇ ಮನೆ ಮಾಡಿಕೊಂಡರು. ಅಲ್ಲದೇ, ನಿರ್ದೇಶಕ ಸುಂದರ್. ಸಿ  (Sundar C)ಅವರನ್ನು ವಿವಾಹವೂ ಆದರು. ಈ ವಿವಾಹದ ಕುರಿತಾಗಿಯೇ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿದ್ದಾರೆ. ನೀವು ಹಿಂದೂ ವ್ಯಕ್ತಿಯನ್ನು ಮದುವೆ ಆಗಿದ್ದೀರಿ. ಹಾಗಾಗಿ ಮತಾಂತರ ಆಗಿದ್ದೀರಾ? ಎನ್ನುವ ಪ್ರಶ್ನೆಯನ್ನು ನಟಿಯ ಮುಂದಿಟ್ಟಿದ್ದಾರೆ. ಇದನ್ನೂ ಓದಿ:ಶಿವಣ್ಣ ಅಭಿಮಾನಿಗಳ ಆಕ್ರೋಶಕ್ಕೆ ಮಣಿದು, ಹೇಳಿದ ಮಾತು ಹಿಂಪಡೆದ ಸಂಬರ್ಗಿ

    ದಿ ಕೇರಳ ಸ್ಟೋರಿ ಸಿನಿಮಾ ರಿಲೀಸ್ ಆದ ಬೆನ್ನಲ್ಲೇ ಈ ಪ್ರಶ್ನೆ ಅವರಿಗೆ ಎದುರಾಗಿದೆ. ಕೇಳಿದ ಪ್ರಶ್ನೆಗೆ ಸಮಚಿತ್ತದಿಂದಲೇ ಉತ್ತರಿಸಿರುವ ಖುಷ್ಭೂ. ನಾನು ಮತಾಂತರ ಆಗಿಲ್ಲ. ವಿಶೇಷ ವಿವಾಹ ಕಾಯ್ದೆ ಅಡಿಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದ್ದೆ. ಈ ಕಾಯ್ದೆ ಬಗ್ಗೆ ತಿಳಿದುಕೊಳ್ಳಿ ಎಂದು ಅವರು ಹೇಳಿದ್ದಾರೆ. ಈ ಮೂಲಕ ತಾವು ಯಾವುದೇ ಧರ್ಮಕ್ಕೆ ಮತಾಂತರ ಆಗಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ.

    ಖುಷ್ಬೂ ದಕ್ಷಿಣ ಭಾರತದ ಅಷ್ಟೂ ಭಾಷೆಯ ಸಿನಿಮಾಗಳಲ್ಲಿ ನಟಿಸಿರುವ ಹೆಸರಾಂತ ನಟ. ಕನ್ನಡದಲ್ಲೂ ಅವರು ರವಿಚಂದ್ರನ್ ಜೊತೆ ಸಿನಿಮಾ ಮಾಡಿದ್ದಾರೆ. ಮತ್ತೆ ಕನ್ನಡ ಸಿನಿಮಾ ರಂಗಕ್ಕೆ ವಾಪಸ್ಸಾಗುವ ಮಾತುಗಳನ್ನೂ ಆಡಿದ್ದಾರೆ. ಇದರ ಜೊತೆ ಜೊತೆಗೆ ರಾಜಕಾರಣದಲ್ಲೂ ಅವರು ಹಂತ ಹಂತವಾಗಿ ಬೆಳೆಯುತ್ತಿದ್ದಾರೆ.

  • ರವಿಚಂದ್ರನ್ ಗಾಗಿ ಮತ್ತೆ ಕನ್ನಡಕ್ಕೆ ಬರಲಿದ್ದಾರಂತೆ ಖುಷ್ಬೂ

    ರವಿಚಂದ್ರನ್ ಗಾಗಿ ಮತ್ತೆ ಕನ್ನಡಕ್ಕೆ ಬರಲಿದ್ದಾರಂತೆ ಖುಷ್ಬೂ

    ಣಧೀರ ಸಿನಿಮಾ ಅಂದಾಕ್ಷಣ ಥಟ್ಟನೆ ನೆನಪಾಗುವ ಹೆಸರು ರವಿಚಂದ್ರನ್ (Ravichandran) ಮತ್ತು ಖುಷ್ಭೂ (Khushbhu) ಅವರದ್ದು. ಈ ಸಿನಿಮಾದ ನಂತರ ಇದೇ ಜೋಡಿ ಅನೇಕ ಸಿನಿಮಾಗಳನ್ನೂ ಮಾಡಿದೆ. ನಂತರದ ದಿನಗಳಲ್ಲಿ ಮತ್ತೆ ಕಾಣಿಸಿಕೊಂಡಿಲ್ಲ. ಸದ್ಯ ಗಾಂಧಿನಗರದಲ್ಲಿ ಹರಿದಾಡುತ್ತಿರುವ ಸುದ್ದಿ ಪ್ರಕಾರ ಮತ್ತೆ ರವಿಚಂದ್ರನ್ ಹಾಗೂ ಖುಷ್ಭೂ ಒಟ್ಟಾಗಿ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

    ನಿರ್ದೇಶಕ ಗುರುರಾಜ್ ಕುಲಕರ್ಣಿ (Gururaj Kulkarni) ಎನ್ನುವವರು ರವಿಚಂದ್ರನ್ ಗಾಗಿ ಸಿನಿಮಾವೊಂದನ್ನು ಮಾಡುತ್ತಿದ್ದು, ಈ ಸಿನಿಮಾದ ನಾಯಕಿಯನ್ನಾಗಿ ಖುಷ್ಬೂ ಅವರನ್ನೇ ಆಯ್ಕೆ ಮಾಡಿಕೊಳ್ಳಬೇಕು ಅಂದುಕೊಂಡಿದ್ದಾರೆ. ಒಂದು ಸುತ್ತಿನ ಮಾತುಕತೆ ಕೂಡ ಆಗಿದೆ ಎನ್ನುವ ಸುದ್ದಿಯಿದೆ. ಸದ್ಯ ಖುಷ್ಭೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಪಾತ್ರ ಒಪ್ಪಬಹುದು ಎನ್ನಲಾಗುತ್ತಿದೆ.

    ಇದೊಂದು ಥ್ರಿಲ್ಲರ್ ಮಾದರಿಯ ಚಿತ್ರವಾಗಿದ್ದು, ರವಿಚಂದ್ರನ್ ನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಇವರೊಂದಿಗೆ ಖುಷ್ಭೂ ಅವರನ್ನು ಮತ್ತೆ ತೆರೆಯ ಮೇಲೆ ತೋರಿಸಬೇಕು ಎನ್ನುವ ಆಸೆ ನಿರ್ದೇಶಕರದ್ದು. ಇದೇ ತಿಂಗಳು 21ರಂದು ಸಿನಿಮಾ ಬಗ್ಗೆ ಅಧಿಕೃತ ಘೋಷಣೆ ಆಗಲಿದೆಯಂತೆ. ಅಂದುಕೊಂಡಂತೆ ಆದರೆ, ಆ ದಿನದೊಳಗೆ ಖುಷ್ಭೂ ಅವರನ್ನು ಮಾತನಾಡಿಸುವ ಪ್ರಯತ್ನ ಕೂಡ ಮಾಡಲಿದ್ದಾರಂತೆ. ಇದನ್ನೂ ಓದಿ: ಮದುವೆ ಆಗುವ ಬಗ್ಗೆ ಸೀಕ್ರೆಟ್‌ ಬಿಚ್ಚಿಟ್ಟ ಶರ್ಮಿಳಾ ಮಾಂಡ್ರೆ

    ರವಿಚಂದ್ರನ್ ಅವರೇ ಸಿನಿಮಾದ ಹೀರೋ ಆಗಿರುವಾಗ ಖುಷ್ಭೂ ಬರಬಹುದು ಎನ್ನುವ ಅಂದಾಜಿದೆ. ಅದರ ಜೊತೆಗೆ ರಾಜಕಾರಣದಲ್ಲೂ ಅವರು ಬ್ಯುಸಿಯಾಗಿರುವುದರಿಂದ ಮತ್ತೆ ಸಿನಿಮಾ ಒಪ್ಪಿಕೊಳ್ಳುತ್ತಾರಾ ಎನ್ನುವ ಅನುಮಾನವೂ ಇದೆ. ಸದ್ಯಕ್ಕೆ ಖುಷ್ಭೂ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡವೇ ಕೊಡಬಹುದು.