Tag: Khushi

  • ವಿಜಯ್ ದೇವರಕೊಂಡ ಭಾವಿ ಪತ್ನಿ ಬಗ್ಗೆ ಕಾಮೆಂಟ್ ಮಾಡಿದ ಸಮಂತಾ

    ವಿಜಯ್ ದೇವರಕೊಂಡ ಭಾವಿ ಪತ್ನಿ ಬಗ್ಗೆ ಕಾಮೆಂಟ್ ಮಾಡಿದ ಸಮಂತಾ

    ದ್ಯ ದಕ್ಷಿಣ ಭಾರತದ ಚಿತ್ರೋದ್ಯಮದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡಿದ್ದು ವಿಜಯ್ ದೇವರಕೊಂಡ ಮತ್ತು ಸಮಂತಾ (Samantha). ಈ ಜೋಡಿಯ ಖುಷಿ ಸಿನಿಮಾ ಇನ್ನಷ್ಟೇ ರಿಲೀಸ್ ಆಗಬೇಕಿದೆ. ಇದೀಗ ಇಬ್ಬರೂ ಆ ಸಿನಿಮಾದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಖಾಸಗಿಯ ಅನೇಕ ಸಂಗತಿಗಳನ್ನು ಹಂಚಿಕೊಳ್ಳುತ್ತಿದ್ದಾರೆ.

    ಮಾಧ್ಯಮದೊಂದಿಗೆ ಮಾತನಾಡಿರುವ ಸಮಂತಾ, ನಟ ವಿಜಯ್ ದೇವರಕೊಂಡ (Vijay Devarakonda) ಅವರ ಭಾವಿ ಪತ್ನಿ ಹೇಗಿರಬೇಕು ಎನ್ನುವುದನ್ನು ವಿವರಿಸಿದ್ದಾರೆ. ‘ವಿಜಯ್ ಅವರಿಗೆ ಪತ್ನಿಯಾಗಿ ಬರುವವರು ಸಾಮಾನ್ಯರಲ್ಲಿ ಸಾಮಾನ್ಯವಾಗಿರಬೇಕು, ಕುಟುಂಬದ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಅತೀ ಹೆಚ್ಚು ಪ್ರೀತಿಸಬೇಕು’ ಎಂದೆಲ್ಲ ಹೇಳುತ್ತಾ ಹೋಗುತ್ತಾರೆ. ಸಮಂತಾ ಮತ್ತೆ ವಿಜಯ್ ಮತ್ತಷ್ಟು ವಿಷಯಗಳನ್ನು ಜೋಡಿಸುತ್ತಾರೆ.

    ‘ಖುಷಿ’ (Khushi) ಸಿನಿಮಾದ ಟ್ರೈಲರ್ (Trailer) ರಿಲೀಸ್ ಕಾರ್ಯಕ್ರಮ ಇತ್ತೀಚೆಗಷ್ಟೇ ಹೈದರಾಬಾದ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಹಲವಾರು ವಿಷಯಗಳನ್ನು ಹಂಚಿಕೊಂಡರ ವಿಜಯ್ ದೇವರಕೊಂಡ. ಸಮಂತಾ ಈ ಸಿನಿಮಾದಲ್ಲಿ ಆರಾಧ್ಯ ಹೆಸರಿನ ಪಾತ್ರ ಮಾಡಿದ್ದು, ಸಿನಿಮಾ ಕಥೆ ಕೇಳಿದಾಗ ಮೊದಲು ನೆನಪಾಗಿದ್ದ ನಟಿ ಸಮಂತಾ ಎಂದಿದ್ದರು ವಿಜಯ್. ಇದನ್ನೂ ಓದಿ:ಮದುವೆ ಮುನ್ನ ಅಭಿಮಾನಿಗಳಿಗೆ ಹರ್ಷಿಕಾ-ಭುವನ್ ಕೊಟ್ಟರು ಗುಡ್ ನ್ಯೂಸ್

    ‘ಖುಷಿ’ ಸಿನಿಮಾದ ಟ್ರೈಲರ್ ಮೆಚ್ಚುಗೆಗೆ ಪಾತ್ರವಾಗಿದ್ದು ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥೆ ಅನ್ನೋದು ಅರ್ಥವಾಗುತ್ತದೆ.

     

    ಇಬ್ಬರ ಮನೆಯಲ್ಲೂ ಮದುವೆಗೆ ಒಪ್ಪುವುದಿಲ್ಲ. ನಾಯಕಿಯ ತಂದೆಯಂತೂ ಇವರಿಬ್ಬರು ಮದುವೆ ಆದರೆ ಭಾರೀ ಸಮಸ್ಯೆಗಳಾಗುತ್ತದೆ ಎಂದು ಭವಿಷ್ಯ ನುಡಿಯುತ್ತಾನೆ. ಆದರೆ ಅದನ್ನೆಲ್ಲಾ ಮೀರಿ ಇಬ್ಬರು ಮದುವೆ ಆಗಿ ಒಂದು ವರ್ಷ ನಾವು ಆದರ್ಶ ದಂಪತಿಗಳಾಗಿ ಬದುಕಿ ತೋರಿಸುತ್ತೇವೆ ಎಂದು ಸವಾಲು ಹಾಕಿ ಮದುವೆ ಆಗುತ್ತಾರೆ. ಮದುವೆ ನಂತರ ಇಬ್ಬರ ನಡುವೆ ನಡೆಯುವ  ಜಗಳ ಶುರುವಾಗುತ್ತದೆ. ಆಗಿದ್ದರೆ ಮುಂದೇನಾಗುತ್ತದೆ ಅನ್ನೋವುದನ್ನು ನೀವು ಸಿನಿಮಾದಲ್ಲಿ ನೋಡಬೇಕು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಖುಷಿ’ ಚಿತ್ರದ ಕಥೆ ಕೇಳಿದಾಗ ಸಮಂತಾ ಹೊರತಾಗಿ ಬೇರೆ ನಟಿ ಕಾಣಲಿಲ್ಲ: ವಿಜಯ್

    ‘ಖುಷಿ’ ಚಿತ್ರದ ಕಥೆ ಕೇಳಿದಾಗ ಸಮಂತಾ ಹೊರತಾಗಿ ಬೇರೆ ನಟಿ ಕಾಣಲಿಲ್ಲ: ವಿಜಯ್

    ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ (Vijay Devarakonda) ಮತ್ತು ಸಮಂತಾ (Samantha) ಕಾಂಬಿನೇಷನ್ ನ ‘ಖುಷಿ’ (Khushi) ಸಿನಿಮಾದ ಟ್ರೈಲರ್ (Trailer) ರಿಲೀಸ್ ಕಾರ್ಯಕ್ರಮ ಇತ್ತೀಚೆಗಷ್ಟೇ ಹೈದರಾಬಾದ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಹಲವಾರು ವಿಷಯಗಳನ್ನು ಹಂಚಿಕೊಂಡರ ವಿಜಯ್ ದೇವರಕೊಂಡ. ಸಮಂತಾ ಈ ಸಿನಿಮಾದಲ್ಲಿ ಆರಾಧ್ಯ ಹೆಸರಿನ ಪಾತ್ರ ಮಾಡಿದ್ದು, ಸಿನಿಮಾ ಕಥೆ ಕೇಳಿದಾಗ ಮೊದಲು ನೆನಪಾಗಿದ್ದ ನಟಿ ಸಮಂತಾ ಎಂದರು ವಿಜಯ್.

    ‘ಖುಷಿ’ ಸಿನಿಮಾದ ಟ್ರೈಲರ್ ಮೆಚ್ಚುಗೆಗೆ ಪಾತ್ರವಾಗಿದ್ದು ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥೆ ಅನ್ನೋದು ಅರ್ಥವಾಗುತ್ತದೆ.

    ಇಬ್ಬರ ಮನೆಯಲ್ಲೂ ಮದುವೆಗೆ ಒಪ್ಪುವುದಿಲ್ಲ. ನಾಯಕಿಯ ತಂದೆಯಂತೂ ಇವರಿಬ್ಬರು ಮದುವೆ ಆದರೆ ಭಾರೀ ಸಮಸ್ಯೆಗಳಾಗುತ್ತದೆ ಎಂದು ಭವಿಷ್ಯ ನುಡಿಯುತ್ತಾನೆ. ಆದರೆ ಅದನ್ನೆಲ್ಲಾ ಮೀರಿ ಇಬ್ಬರು ಮದುವೆ ಆಗಿ ಒಂದು ವರ್ಷ ನಾವು ಆದರ್ಶ ದಂಪತಿಗಳಾಗಿ ಬದುಕಿ ತೋರಿಸುತ್ತೇವೆ ಎಂದು ಸವಾಲು ಹಾಕಿ ಮದುವೆ ಆಗುತ್ತಾರೆ. ಮದುವೆ ನಂತರ ಇಬ್ಬರ ನಡುವೆ ನಡೆಯುವ  ಜಗಳ ಶುರುವಾಗುತ್ತದೆ. ಆಗಿದ್ದರೆ ಮುಂದೇನಾಗುತ್ತದೆ ಅನ್ನೋವುದನ್ನು ನೀವು ಸಿನಿಮಾದಲ್ಲಿ ನೋಡಬೇಕು. ಇದನ್ನೂ ಓದಿ:ನಾನಿನ್ನೂ ಸಿಂಗಲ್, ದಿಶಾ ಜೊತೆಗಿನ ಬ್ರೇಕಪ್ ಬಗ್ಗೆ ಟೈಗರ್ ಶ್ರಾಫ್ ಸ್ಪಷ್ಟನೆ

    ರೊಮ್ಯಾಂಟಿಕ್ ಎಂಟರ್‌ಟೈನರ್ ಸಿನಿಮಾವಾಗಿರುವ ಖುಷಿಗೆ ಶಿವ ನಿರ್ವಣ ಆಕ್ಷನ್ ಕಟ್ ಹೇಳಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡಿದೆ. ಜಯರಾಂ, ಸಚಿನ್ ಖೇಡೇಕರ್, ಮುರಳಿ ಶರ್ಮಾ, ಜ್ಯೂಲಿ ಲಕ್ಷ್ಮಿ, ಅಲಿ, ರೋಹಿಣಿ, ವೆನ್ನೆಲಾ ಕಿಶೋರ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ.

    ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಪ್ಯಾನ್ ಇಂಡಿಯಾ ಸಿನಿಮಾ. ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಬಿಡುಗಡೆಯಾಗಲಿದೆ. ಸೆಪ್ಟೆಂಬರ್ 1ರಂದು ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ. ಹೇಷಂ ವಾಹೆಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಮಂತಾ ಜೊತೆಗಿನ ಬೆಡ್ ರೂಮ್ ಸೀನ್ ಹಂಚಿಕೊಂಡ ವಿಜಯ್: ಏನಾಗಿದೆ ನಟನಿಗೆ ಎಂದ ಫ್ಯಾನ್ಸ್

    ಸಮಂತಾ ಜೊತೆಗಿನ ಬೆಡ್ ರೂಮ್ ಸೀನ್ ಹಂಚಿಕೊಂಡ ವಿಜಯ್: ಏನಾಗಿದೆ ನಟನಿಗೆ ಎಂದ ಫ್ಯಾನ್ಸ್

    ಲ್ಲದ ಕಾರಣಕ್ಕಾಗಿ ವಿಜಯ್ ದೇವರಕೊಂಡ (Vijay Devarakonda) ಸುದ್ದಿಯಾಗುತ್ತಿದ್ದಾರೆ. ಅದರಲ್ಲೂ ನಟಿ ಸಮಂತಾ ಜೊತೆಗಿನ ಫೋಟೋ, ವಿಡಿಯೋ ಹಂಚಿಕೊಳ್ಳುವ ಮೂಲಕ ಏನೇನೋ ಹೇಳಲು ಅವರು ಯತ್ನಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಸಮಂತಾ (Samantha) ಜೊತೆ ತಾವು ತೀರಾ ಕ್ಲೋಸ್ ಆಗಿದ್ದೇನೆ ಎಂದು ಹೇಳಿಕೊಳ್ಳಲು ಸಿನಿಮಾದ ವಿಡಿಯೋಗಳನ್ನು ಅವರು ಹಂಚಿಕೊಳ್ಳುತ್ತಿದ್ದಾರೆ. ಇದು ನೆಟ್ಟಿಗರನ್ನು ಕೆರಳಿಸುವಂತೆ ಮಾಡಿದೆ.

    ಈಗಷ್ಟೇ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಸಮಂತಾ ಜೊತೆ ಬೆಡ್ ರೂಮ್ ನಲ್ಲಿರುವ (Bedroom Video) ದೃಶ್ಯ ಅದಾಗಿದೆ. ಆ ವಿಡಿಯೋ ಶೇರ್ ಮಾಡುವುದರ ಜೊತೆಗೆ ‘ನನ್ನ ಬಯಸುವಂತಹ ಪ್ರೀತಿ’ ಎಂದು ಬರೆದುಕೊಂಡಿದ್ದಾರೆ. ಈ ಬರಹವೇ ನಾನಾ ಚರ್ಚೆಗೆ ಕಾರಣವಾಗಿದೆ. ಅದು ಖುಷಿ (Khushi) ಸಿನಿಮಾದ ವಿಡಿಯೋ ಆಗಿದ್ದು, ಗಂಡ ಹೆಂಡತಿಯ  ಅನ್ಯೋನ್ಯತೆಯನ್ನು ಅದು ಹೊಂದಿದೆ. ಇದನ್ನೂ ಓದಿ:ನಿರಾಸೆ ಮೂಡಿಸಿದ ಪ್ರಭಾಸ್ ನಟನೆಯ ‘ಪ್ರಾಜೆಕ್ಟ್ ಕೆ’ ಫಸ್ಟ್ ಲುಕ್

    ಒಂದು ಕಡೆ ಸಮಂತಾ ಜೊತೆಗಿನ ಫೋಟೋ ಮತ್ತು ವಿಡಿಯೋಗಳನ್ನು ವಿಜಯ್ ದೇವರಕೊಂಡ ಹಂಚಿಕೊಳ್ಳುತ್ತಿದ್ದರೆ ಮತ್ತೊಂದು ಕಡೆ ಸಮಂತಾ ಧ್ಯಾನ, ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಅವರು ಚಿಕಿತ್ಸೆ ಪಡೆಯಲು ಅಮೆರಿಕಾಗೆ ಹಾರಲಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕೂ ಮುನ್ನ ಅವರು ಅನೇಕ ದೇವಸ್ಥಾನಗಳಿಗೆ ಬೇಡಿ ನೀಡಿ ದರ್ಶನ ಪಡೆಯುತ್ತಿದ್ದಾರೆ.

     

    ಅಲ್ಲದೇ, ಮನಶಾಂತಿಗಾಗಿ ಅವರು ಸದ್ಗುರು ಆಶ್ರಮವನ್ನೂ ಸೇರಿಕೊಂಡಿದ್ದು, ಆಶ್ರಮದಲ್ಲಿ ಧ್ಯಾನ ಮಾಡುತ್ತಿರುವ ಫೋಟೋವನ್ನು ಸಮಂತಾ ಶೇರ್ ಮಾಡಿದ್ದಾರೆ. ಚಿಕಿತ್ಸೆಗೂ ಮುನ್ನ ಅವರು ಮನಸ್ಸನ್ನು ನಿಗ್ರಹಿಸುವ ಧ್ಯಾನಕ್ಕೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಖುಷಿ’ಯಲ್ಲಿ ಪ್ರೇಮಗೀತೆ ಹಾಡಿದ ವಿಜಯ್-ಸಮಂತಾ ಜೋಡಿ

    ‘ಖುಷಿ’ಯಲ್ಲಿ ಪ್ರೇಮಗೀತೆ ಹಾಡಿದ ವಿಜಯ್-ಸಮಂತಾ ಜೋಡಿ

    ಟಾಲಿವುಡ್ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ (Vijay Devarakonda) ಹಾಗೂ ಸಮಂತಾ (Samantha)  ನಟನೆಯ ಬಹುನಿರೀಕ್ಷಿತ ‘ಖುಷಿ’ (Khushi) ಸಿನಿಮಾದ ಎರಡನೇ ಹಾಡು (Song) ಬಿಡುಗಡೆಯಾಗಿದೆ. ಗಂಡ ಹೆಂಡತಿ ನಡುವಿನ ಪ್ರೇಮಗೀತೆ ಇದಾಗಿದ್ದು, ಸ್ಯಾಮ್ ಹಾಗೂ ವಿಜಯ್ ಕೆಮಿಸ್ಟ್ರೀ ನೋಡುಗರ ಗಮನಸೆಳೆಯುತ್ತಿದೆ.

    ಕನ್ನಡದಲ್ಲಿಯೂ ಅನಾವಣಗೊಂಡಿರುವ ಆರಾಧ್ಯ ಸಿಂಗಿಂಗ್ ಮಸ್ತಿಗೆ ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದು, ಹರಿಚರಣ್ ಹಾಗೂ ಚಿನ್ಮಯಿ ಶ್ರೀಪಾದ್ ಧ್ವನಿಯಾಗಿದ್ದಾರೆ. ಹೇಶಾಮ್ ಅಬ್ದುಲ್ ವಹಾಬ್ ಟ್ಯೂನ್ ಹಾಕಿದ್ದಾರೆ. ಈಗಾಗ್ಲೇ ರಿಲೀಸ್ ಆಗಿದೆ ‘ನನ್ನ ರೋಜಾ ನೀನೇ’ ಎಂಬ ಹಾಡಿಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದ್ದು, ಈಗ ಆರಾಧ್ಯ ಗೀತೆಯ ಸರದಿ. ಇದನ್ನೂ ಓದಿ:ಕೊನೆಗೂ ಮದುವೆ ಬಗ್ಗೆ ಸಿಕ್ರೇಟ್ ಬಿಟ್ಟುಕೊಟ್ಟ ವಿಜಯ್ ದೇವರಕೊಂಡ

    ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗಿರುವ ಖುಷಿ ಸಿನಿಮಾ ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿಯೂ ತೆರೆಗೆ ಬರಲಿದೆ. ಮೈತ್ರಿ ಮೂವಿ ಬ್ಯಾನರ್ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಮಜಿಲಿ ಹಿಟ್ ನಿರ್ದೇಶಕ ಶಿವ ನರ್ವಣ ನಿರ್ದೇಶಿಸುತ್ತಿದ್ದಾರೆ. ನವೀನ್ ಯೆರ್ನೇನಿ ಮತ್ತು ಯಲಮಂಚಿಲಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.

    ರೊಮ್ಯಾಂಟಿಕ್ ಲವ್ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಖುಷಿ ಸಿನಿಮಾ ಸೆಪ್ಟೆಂಬರ್1 ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. ಜಯರಾಮ್, ಮುರಳಿ ಶರ್ಮಾ, ಲಕ್ಷ್ಮೀ, ಅಲಿ, ವಿನ್ನಿಲ್ಲಾ ಕಿಶೋರ್, ರೋಹಿನಿ ಸೇರಿದಂತೆ ಹಲವರು ಚಿತ್ರದ ಭಾಗವಾಗಿದ್ದಾರೆ. ಹೇಷಂ ವಾಹೆಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊನೆಗೂ ಮದುವೆ ಬಗ್ಗೆ ಸಿಕ್ರೇಟ್ ಬಿಟ್ಟುಕೊಟ್ಟ ವಿಜಯ್ ದೇವರಕೊಂಡ

    ಕೊನೆಗೂ ಮದುವೆ ಬಗ್ಗೆ ಸಿಕ್ರೇಟ್ ಬಿಟ್ಟುಕೊಟ್ಟ ವಿಜಯ್ ದೇವರಕೊಂಡ

    ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಮದುವೆ (Marriage) ವಿಚಾರ ಹಲವು ಬಾರಿ ಚರ್ಚೆಗೆ ಬಂದಿದೆ. ಅದರಲ್ಲೂ ಕನ್ನಡತಿ ರಶ್ಮಿಕಾ ಮಂದಣ್ಣ ಜೊತೆ ಲವ್ವಿಡವ್ವಿ ವಿಚಾರ ಬಂದಾಗೆಲ್ಲ ಮದುವೆ ಬಗ್ಗೆ ಪ್ರಶ್ನೆಗಳನ್ನು ಮಾಡಲಾಗಿದೆ. ಇದೇ ಮೊದಲ ಬಾರಿಗೆ ವಿಜಯ್ ದೇವರಕೊಂಡ ತಮ್ಮ ಮದುವೆಯ ಬಗ್ಗೆ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಮದುವೆಗೆ ಹೇಗಿರಬೇಕು ಎಂದು ಅವರು ಹೇಳಿಕೊಂಡಿದ್ದಾರೆ.

    ಸಮಂತಾ ಮತ್ತು ವಿಜಯ್ ನಟನೆಯ ಖುಷಿ ಸಿನಿಮಾದ ಹಾಡೊಂದು ಬಿಡುಗಡೆಯಾಗಿದೆ. ‘ಆರಾಧ್ಯ..’ (Aradhya) ಎಂದು ಶುರುವಾಗುವ ಹಾಡಿನಲ್ಲಿ ಸಮಂತಾ ಜೊತೆ ವಿಜಯ್ ಖುಷಿ ಖುಷಿಯಾದ ಕ್ಷಣಗಳನ್ನು ಕಳೆದಿದ್ದಾರೆ. ತುಂಟಾಟ, ರೊಮ್ಯಾನ್ಸ್, ಪ್ರೀತಿ, ಪ್ರೇಮ ಹೀಗೆ ಎಲ್ಲವೂ ಹದವಾಗಿ ಬೆರೆತಿದೆ. ಈ ಹಾಡನ್ನು ತೋರಿಸುವ ಮೂಲಕ ವಿಜಯ್, ನನ್ನ ಮದುವೆ ಮತ್ತು ಜೀವನ ಹೀಗೆಯೇ ಇರಬೇಕು ಎಂದು ಹೇಳಿಕೊಂಡಿದ್ದಾರೆ.

    ಮದುವೆ ಬಗ್ಗೆ ನನಗೂ ನನ್ನದೇ ಆದ ಕನಸುಗಳು ಇವೆ. ಈ ಕನಸುಗಳು ಥೇಟ್ ಖುಷಿ ಸಿನಿಮಾದ ಹಾಡಿನಂತಿದೆ. ಒಂದು ವೇಳೆ ಮದುವೆ ಅಂತಾದರೆ, ಈ ಹಾಡಿನಂತಿಯೇ ನನ್ನ ಬದುಕು ಕೂಡ ಇರಲಿದೆ ಎಂದು ಮದುವೆ ವಿಚಾರ ಮಾತನಾಡಿದ್ದಾರೆ. ತಮ್ಮದೇ ಸಿನಿಮಾದ ಪಾತ್ರವೊಂದನ್ನು ಕನಸಾಗಿ ಅವರು ಸ್ವೀಕರಿಸಿದ್ದಾರೆ.

    ಈ ಹಿಂದೆ ವಿಜಯ್ ದೇವರಕೊಂಡ ಹುಟ್ಟುಹಬ್ಬದ (Birthday) ದಿನದಂದು ಸ್ಪೆಷಲ್ ಆಗಿ ಖುಷಿ ಸಿನಿಮಾದ ಮೊದಲ ಹಾಡು (Song) ರಿಲೀಸ್ ಮಾಡಲಾಗಿತ್ತು. ‘ನನ್ನ ರೋಜಾ ನೀನೇ’ (Nanna Roja Neene) ಎಂಬ ಮೆಲೋಡಿ ಟ್ರ್ಯಾಕ್ ಬಿಡುಗಡೆಯಾಗಿದ್ದು, ಕೇಳುಗರನ್ನು ಇಂಪ್ರೆಸ್ ಮಾಡಿತ್ತು. ಈ ಹಾಡು ಕೂಡ ಅಷ್ಟೇ ಬ್ಯೂಟಿಫುಲ್ ಆಗಿ ಮೂಡಿ ಬಂದಿತ್ತು.

    ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿರುವ ಈ ಹಾಡಿಗೆ ಹೇಶಾಮ್ ಅಬ್ದುಲ್ ವಹಾಬ್ ಧ್ವನಿಯಾಗುವುದರ ಜೊತೆಗೆ ಟ್ಯೂನ್ ಹಾಕಿದ್ದಾರೆ. ಲವರ್ ಬಾಯ್ ಆಗಿ ವಿಜಯ್ ದೇವರಕೊಂಡ (Vijay Devarakonda) ಕಾಣಿಸಿಕೊಂಡಿದ್ದು, ಸಮಂತಾ (Samantha) ನಾಯಕಿಯಾಗಿ ಅಭಿನಯಿಸಿದ್ದಾರೆ. ಕಾಶ್ಮೀರ ಭಾಗದಲ್ಲಿ ಇಡೀ ಸಾಂಗ್ ಅನ್ನು ಚಿತ್ರೀಕರಿಸಲಾಗಿದೆ. ಇದನ್ನೂ ಓದಿ:ಕಣ್ಣು ಕುಕ್ಕುವಂತೆ ಪಡ್ಡೆಹುಡುಗರ ನಿದ್ದೆಗೆಡಿಸಿದ ಸೇಸಮ್ಮ ನಯಾ ಲುಕ್

    ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗಿರುವ ಖುಷಿ ಸಿನಿಮಾ ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿಯೂ ತೆರೆಗೆ ಬರಲಿದೆ. ಮೈತ್ರಿ ಮೂವಿ ಬ್ಯಾನರ್ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಮಜಿಲಿ ಹಿಟ್ ನಿರ್ದೇಶಕ ಶಿವ ನಿರ್ವಣ (Shiva Nirvana) ನಿರ್ದೇಶಿಸುತ್ತಿದ್ದಾರೆ. ನವೀನ್ ಯೆರ್ನೇನಿ ಮತ್ತು ಯಲಮಂಚಿಲಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ.

     

    ರೊಮ್ಯಾಂಟಿಕ್ ಲವ್ ಎಂಟರ್‌ಟೈನರ್ ಕಥಾಹಂದರ ಹೊಂದಿರುವ ಖುಷಿ ಸಿನಿಮಾ ಸೆಪ್ಟೆಂಬರ್ 1 ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. ಜಯರಾಮ್, ಮುರಳಿ ಶರ್ಮಾ, ಲಕ್ಷ್ಮೀ, ಅಲಿ, ವಿನ್ನಿಲ್ಲಾ ಕಿಶೋರ್, ರೋಹಿನಿ ಸೇರಿದಂತೆ ಹಲವರು ಚಿತ್ರದ ಭಾಗವಾಗಿದ್ದಾರೆ. ಹೇಷಂ ವಾಹೆಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಡ್ವಾನ್ಸ್ ವಾಪಸ್ ಮಾಡಿದ ಸಮಂತಾ: ಚಿತ್ರರಂಗಕ್ಕೆ ತಾತ್ಕಾಲಿಕ ಗುಡ್ ಬೈ

    ಅಡ್ವಾನ್ಸ್ ವಾಪಸ್ ಮಾಡಿದ ಸಮಂತಾ: ಚಿತ್ರರಂಗಕ್ಕೆ ತಾತ್ಕಾಲಿಕ ಗುಡ್ ಬೈ

    ದು ನಿಜಕ್ಕೂ ಸಮಂತಾ (Samantha) ಅಭಿಮಾನಿಗಳಿಗೆ ಕಹಿ ಸಮಾಚಾರ. ಇದ್ದಕ್ಕಿದ್ದಂತೆಯೇ ಸಮಂತಾ ಸಿನಿಮಾ ರಂಗದಿಂದ ದೂರ (Goodbye) ಉಳಿಯುವ ಆಲೋಚನೆ ಮಾಡಿದ್ದಾರಂತೆ. ಕೈಯಲ್ಲಿರುವ ಎರಡು ಪ್ರಾಜೆಕ್ಟ್ ಗಳನ್ನು ಶೀಘ್ರವಾಗಿ ಮುಗಿಸಿಕೊಟ್ಟು, ಒಂದು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಇರುವ ಪ್ಲ್ಯಾನ್ ಮಾಡಿದ್ದಾರಂತೆ.

    ಸದ್ಯ ವಿಜಯ್ ದೇವರಕೊಂಡ ಜೊತೆ ಖುಷಿ (Khushi,) ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಸಮಂತಾ.  ಈ ಸಿನಿಮಾದ ಶೂಟಿಂಗ್ ನಾಲ್ಕೈದು ದಿನಗಳ ಬಾಕಿಯಷ್ಟೇ ಇದೆಯಂತೆ. ಅಲ್ಲದೇ, ಸಿಟಾಡೆಲ್ (Citadel) ಪ್ರಾಜೆಕ್ಟ್ ಅನ್ನೂ ಬಹುತೇಕ ಮುಗಿಸಿದ್ದಾರಂತೆ ಸಮಂತಾ. ಈಗಾಗಲೇ ಒಪ್ಪಿಕೊಂಡಿದ್ದ ಕೆಲವು ಪ್ರಾಜೆಕ್ಟ್ ಗಳ ನಿರ್ಮಾಪಕರಿಗೆ ಹಣ ವಾಪಸ್ಸು ಮಾಡಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಇದನ್ನೂ ಓದಿ:‘ಕೆಡಿ’ ಸಿನಿಮಾದಲ್ಲಿ ಧ್ರುವ ಸರ್ಜಾ: ರೆಟ್ರೋ ಲುಕ್ ಫೋಟೋ ಲೀಕ್

    ಸಮಂತಾ ಇಂಥದ್ದೊಂದು ಕಠಿಣ ನಿರ್ಧಾರ ತೆಗೆದುಕೊಳ್ಳಲು ಕಾರಣ ಅವರಿಗಿರುವ ಅನಾರೋಗ್ಯ. ಆಟೋಇಮ್ಯೂನ್ ಎನ್ನುವ ಅಪರೂಪದ ಕಾಯಿಲೆಯಿಂದ ಸಮಂತಾ ಬಳಲುತ್ತಿದ್ದಾರೆ. ಕಳೆದ ವರ್ಷದಿಂದ ಅದಕ್ಕಾಗಿ ಅವರು ಚಿಕಿತ್ಸೆಯನ್ನೂ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುವಾಗಲೂ ಅವರು ಚಿತ್ರರಂಗದಿಂದ ದೂರವಿದ್ದರು. ಇದೀಗ ಹೆಚ್ಚುವರಿಯಾಗಿ ಮತ್ತೆ ಅವರು ಚಿಕಿತ್ಸೆ ಪಡೆದುಕೊಳ್ಳಲಿದ್ದಾರಂತೆ.

    ಈ ಕಾಯಿಲೆಗೆ ಹೆಚ್ಚು ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸೂಚಿಸಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದು ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆಯಲು ಸಮಂತಾ ಪ್ಲ್ಯಾನ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆ.ಆರ್.ಮಾರ್ಕೆಟ್ ನಲ್ಲಿ ಕಾಣಿಸಿಕೊಂಡ ದಿಯಾ ಬ್ಯೂಟಿ  ಖುಷಿ

    ಕೆ.ಆರ್.ಮಾರ್ಕೆಟ್ ನಲ್ಲಿ ಕಾಣಿಸಿಕೊಂಡ ದಿಯಾ ಬ್ಯೂಟಿ ಖುಷಿ

    ದಿಯಾ (Dia) ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿ ಇಟ್ಟ ಸರಳ ಸಿಗ್ದ ಸುಂದರಿ ಖುಷಿ ರವಿ (Khushi Ravi) ಹೊಸ ಲುಕ್ ನಲ್ಲಿ ಕ್ಯಾಮೆರಾ ಕಣ್ಣುಗಳಲ್ಲಿ ಸೆರೆಯಾಗಿದ್ದಾರೆ. ಅದೂ ಅತ್ಯಂತ ಜನಬೀಡು ಪ್ರದೇಶವಾದ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ (K.R. Market) ಎನ್ನುವುದು ಮತ್ತೊಂದು ವಿಶೇಷ.

    ಬೆಂಗಳೂರಿನ ಕೆ ಆರ್ ಮಾರುಕಟ್ಟೆಯಲ್ಲಿ ಬೆಳಂ ಬೆಳಗ್ಗೆ ಹೂವುಗಳ ಮಧ್ಯೆ ಫೋಟೋಗೆ (Photoshoot) ಫೋಸ್ ಕೊಟ್ಟಿದ್ದಾರೆ. ತಿಳಿನೀಲಿ ಬಣ್ಣದ ಸೀರೆಯುಟ್ಟು ಹೋಮ್ಲಿ ಲುಕ್ ನಲ್ಲಿ ಕಂಗೊಳಿಸಿರುವ ಖುಷಿಯ ಚೆಂದದ ಪಟ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿವೆ. ಇದನ್ನೂ ಓದಿ:ಹೊಸ ಫೋಟೋಶೂಟ್‌ನಿಂದ ಇಂಟರ್‌ನೆಟ್‌ ಬೆಂಕಿ ಹಚ್ಚಿದ ರಶ್ಮಿಕಾ ಮಂದಣ್ಣ

    ಹೂವುಗಳ‌ ಮಧ್ಯೆ ಮತ್ತೊಂದು ಹೂವು ನೋಡಿ ಫ್ಯಾನ್ಸ್ ಮನಮೋಹಕ ಎನ್ನುತ್ತಿದ್ದಾರೆ. ವಿಂಟೇಜ್ ಲುಕ್ ನಲ್ಲಿ ಬಹಳ ಸೊಗಸಾಗಿ ಮೂಡಿಬಂದಿರುವ ಫೋಟೋಶೂಟ್ ಹಿಂದಿನ ಶಕ್ತಿ ನಿರ್ಮಾಪಕ ನಾಗರಾಜ್ ಸೋಮಯಾಜಿ.

    ಈ ಸ್ಪೆಷಲ್ ಫೋಟೋಶೂಟ್ ಐಡಿಯಾ ಹಾಗೂ ಫೋಟೋಗ್ರಫಿ ಕೈಚಳಕ ಇವರದ್ದೆ. ತಮ್ಮದೇ ಫೋಕಸ್ ಸ್ಟುಡಿಯೋನಡಿ ಬ್ಯೂಟಿಫುಲ್ ಫೋಟೋಶೂಟ್ ಮಾಡಿದ್ದಾರೆ.  ರಾಕಿಂಗ್ ಸ್ಟಾರ್ ಯಶ್ ಫ್ಯಾಮಿಲಿ ಕಾರ್ಯಕ್ರಮಗಳು ಸೇರಿದಂತೆ ಒಂದಿಷ್ಟು ತಾರೆಯರಿಗೆ ಫೋಕಸ್ ಫೋಟೋಗ್ರಫಿ ಸ್ಟುಡಿಯೋ ಅಚ್ಚುಮೆಚ್ಚು.

    ಸೆಲೆಬ್ರಿಟಿಗಳ ಫೋಟೋಶೂಟ್, ವೆಡ್ಡಿಂಗ್ ಫೋಟೋಗ್ರಫಿ ಹಾಗೂ ನಾನಾ ಕಾರ್ಯಕ್ರಮಗಳ ಸೇರಿದಂತೆ ಇನ್ನಿತರ ಶುಭ ಸಂದರ್ಭದ ಚೆಂದದ ಫೋಟೋಗಳನ್ನು ಸೆರೆಹಿಡಿಯುವಲ್ಲಿ ನಾಗರಾಜ್ ಸೋಮಯಾಜಿ  (Nagaraj Somyaji)ಹೆಸರುವಾಸಿ.

  • ಬಾಲಿವುಡ್ ಸಿನಿಮಾಗಳಿಂದಲೂ ಸಮಂತಾ ಔಟ್: ಹೆಚ್ಚುತ್ತಾ ಹೋಗುತ್ತಿದೆ ಆತಂಕ

    ಬಾಲಿವುಡ್ ಸಿನಿಮಾಗಳಿಂದಲೂ ಸಮಂತಾ ಔಟ್: ಹೆಚ್ಚುತ್ತಾ ಹೋಗುತ್ತಿದೆ ಆತಂಕ

    ತೆಲುಗು ಸಿನಿಮಾ ರಂಗದ ಖ್ಯಾತ ತಾರಾ ಸಮಂತಾ ಅವರ ಬಗ್ಗೆ ದಿನಕ್ಕೊಂದು ಸುದ್ದಿ ಹೊರ ಬೀಳುತ್ತಿದೆ. ಮೊನ್ನೆಯಷ್ಟೇ ಅವರು ದಕ್ಷಿಣದ ಹಲವು ಸಿನಿಮಾಗಳನ್ನು ಕೈ ಬಿಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಮತ್ತೊಂದು ನ್ಯೂಸ್ ಹೊರ ಬಂದಿದ್ದು, ಬಾಲಿವುಡ್ (Bollywood) ಸಿನಿಮಾಗಳಿಂದಲೂ ಅವರನ್ನು ಕೈ ಬಿಡಲಾಗಿದೆಯಂತೆ. ಅವರ ಆರೋಗ್ಯ ಸುಧಾರಿಸಲು ಸಾಕಷ್ಟು ಸಮಯ ಬೇಕಾಗಿರುವುದರಿಂದ ಇಂಥದ್ದೊಂದು ನಿರ್ಧಾರ ತಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಆದರೆ, ಹಲವು ಪ್ರಾಜೆಕ್ಟ್ ಗಳಿಂದ ಅವರನ್ನು ಕೈ ಬಿಡಲಾಗಿದೆ ಎನ್ನುವುದು ಸುಳ್ಳು ಎನ್ನುವ ಮಾಹಿತಿ ಹೊರ ಬಿದ್ದಿದೆ. ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಖುಷಿ’ ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸುತ್ತಿದ್ದರು. ಈಗಾಗಲೇ ಎರಡು ಹಂತದ ಚಿತ್ರೀಕರಣ ಕೂಡ ಮುಗಿದಿದೆ. ಈ ಸಿನಿಮಾದಿಂದ ಅವರನ್ನು ಕೈ ಬಿಡಲಾಗಿದೆ ಎಂದು ಹೇಳಲಾಗಿತ್ತು. ಈ ಕುರಿತು ಚಿತ್ರತಂಡವೇ ಸ್ಪಷ್ಟನೆ ಕೊಟ್ಟಿದೆ.

    ಸದ್ಯ ಸಮಂತಾ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಹಾಗಾಗಿಯೇ ಶೂಟಿಂಗ್ ಪ್ರಾರಂಭಿಸಿಲ್ಲ. ಅವರು ಈಗಾಗಲೇ ಎರಡು ಹಂತದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಅವರಿಗೆ ವಿಶ್ರಾಂತಿಯ ಅಗತ್ಯ ಇರುವುದರಿಂದ ಸಂಕ್ರಾತಿಯ ನಂತರ ಮತ್ತೆ ಶೂಟಿಂಗ್ ಪ್ರಾರಂಭ ಮಾಡುತ್ತೇವೆ ಎಂದು ಖುಷಿ ತಂಡವೇ ಸ್ಪಷ್ಟನೆ ನೀಡಿದೆ. ಅವರು ಈ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವುದು ಕೇವಲ ಗಾಸಿಪ್ ಎಂದೂ ಅವರು ಹೇಳಿಕೆ ಕೊಟ್ಟಿದ್ದಾರೆ. ಈ ಮೂಲಕ ಸಮಂತಾ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನುವುದನ್ನೂ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: `ತೂತು ಮಡಿಕೆ’ ನಂತರ ಮತ್ತೆ ಆ್ಯಕ್ಷನ್ ಕಟ್ ಹೇಳೋಕೆ ಚಂದ್ರ ಕೀರ್ತಿ ರೆಡಿ

    ಸಮಂತಾ (Samantha) ಅಪರೂಪದ ಕಾಯಿಲೆಗೆ ತುತ್ತಾಗಿದ್ದು ಗುಟ್ಟಿನ ವಿಚಾರವೇನೂ ಅಲ್ಲ. ಈ ಕಾಯಿಲೆ ಪ್ರಾರಂಭಿಕ ಹಂತದಲ್ಲಿ ಇರುವಾಗಲೇ ಗೊತ್ತಾಗಿದ್ದರಿಂದ ಅದಕ್ಕೆ ಸೂಕ್ತ ಚಿಕಿತ್ಸೆಯನ್ನೂ ಪಡೆದುಕೊಂಡಿದ್ದಾರೆ. ಈ ಚಿಕಿತ್ಸೆ ಪಡೆಯಲೆಂದೇ ಅವರು ವಿದೇಶಕ್ಕೂ ಹಾರಿದ್ದರು. ಇದೊಂದು ಅಪಾಯಕಾರಿ ಸಮಸ್ಯೆಯಾದರೂ, ಅದಕ್ಕೆ ಸೂಕ್ತ ಚಿಕಿತ್ಸೆ ಇದೆ ಎಂದು ಸ್ವತಃ ಅವರೇ ಬರೆದುಕೊಂಡಿದ್ದರು. ಇದು ಅಭಿಮಾನಿಗಳ ಆತಂಕಕ್ಕೂ ಕಾರಣವಾಗಿತ್ತು.

    ಈ ನಡುವೆ ಸಮಂತಾ ನಟನೆಯ ಎರಡು ಚಿತ್ರಗಳು ರಿಲೀಸ್ ಆದವು. ಎರಡೂ ಚಿತ್ರದ ಪ್ರಚಾರಕ್ಕೆ ಅವರು ಬರಲಿಲ್ಲ. ಹೀಗಾಗಿ ಸಮಂತಾ ಗಂಭೀರ ಸಮಸ್ಯೆಯಿಂದಲೇ ಬಳಲುತ್ತಿದ್ದಾರೆ ಎಂದು ಹೇಳಲಾಗಿತ್ತು. ಈ ಕಾರಣದಿಂದಾಗಿಯೇ ಅವರನ್ನು ಪ್ರಾಜೆಕ್ಟ್ ಗಳಿಂದ ಕೈ ಬಿಡಲಾಗುತ್ತಿದೆ ಎಂದು ಸುದ್ದಿ ಆಗಿತ್ತು. ಈ ಸುದ್ದಿಗೆ ಕೆಲವ ತಂಡಗಳು ಈಗೀಗ ಸ್ಪಷ್ಟನೆಯನ್ನು ಕೊಡುತ್ತಿವೆ. ಈ ಮೂಲಕ ಸಮಂತಾ ಮತ್ತೆ ಚಿತ್ರೀಕರಣಕ್ಕೆ ಬರಲಿದ್ದಾರೆ ಎನ್ನುವ ವಿಶ್ವಾಸವನ್ನೂ ವ್ಯಕ್ತಪಡಿಸಿವೆ.

    Live Tv
    [brid partner=56869869 player=32851 video=960834 autoplay=true]

  • ಸಮಂತಾ ವಿಶ್ರಾಂತಿಯಲ್ಲಿದ್ದಾರೆ, ಖುಷಿ ಸಿನಿಮಾ ಬಿಟ್ಟಿಲ್ಲ ಎಂದು ಸ್ಪಷ್ಟನೆ ಕೊಟ್ಟ ತಂಡ

    ಸಮಂತಾ ವಿಶ್ರಾಂತಿಯಲ್ಲಿದ್ದಾರೆ, ಖುಷಿ ಸಿನಿಮಾ ಬಿಟ್ಟಿಲ್ಲ ಎಂದು ಸ್ಪಷ್ಟನೆ ಕೊಟ್ಟ ತಂಡ

    ಕ್ಷಿಣದ ಖ್ಯಾತ ತಾರೆ ಸಮಂತಾ (Samantha) ಆರೋಗ್ಯದ ಕಾರಣದಿಂದಾಗಿ ಸಿನಿಮಾ ರಂಗದಿಂದ ದೂರ ಉಳಿದಿದ್ದಾರೆ ಎನ್ನುವುದು ನಿಜವಾಗಿದೆ. ಆದರೆ, ಹಲವು ಪ್ರಾಜೆಕ್ಟ್ ಗಳಿಂದ ಅವರನ್ನು ಕೈ ಬಿಡಲಾಗಿದೆ ಎನ್ನುವುದು ಸುಳ್ಳು ಎನ್ನುವ ಮಾಹಿತಿ ಹೊರ ಬಿದ್ದಿದೆ. ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಖುಷಿ’ (Khushi) ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸುತ್ತಿದ್ದರು. ಈಗಾಗಲೇ ಎರಡು ಹಂತದ ಚಿತ್ರೀಕರಣ ಕೂಡ ಮುಗಿದಿದೆ. ಈ ಸಿನಿಮಾದಿಂದ ಅವರನ್ನು ಕೈ ಬಿಡಲಾಗಿದೆ ಎಂದು ಹೇಳಲಾಗಿತ್ತು. ಈ ಕುರಿತು ಚಿತ್ರತಂಡವೇ ಸ್ಪಷ್ಟನೆ ಕೊಟ್ಟಿದೆ.

    ಸದ್ಯ ಸಮಂತಾ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಹಾಗಾಗಿಯೇ ಶೂಟಿಂಗ್ ಪ್ರಾರಂಭಿಸಿಲ್ಲ. ಅವರು ಈಗಾಗಲೇ ಎರಡು ಹಂತದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಅವರಿಗೆ ವಿಶ್ರಾಂತಿಯ ಅಗತ್ಯ ಇರುವುದರಿಂದ ಸಂಕ್ರಾತಿಯ ನಂತರ ಮತ್ತೆ ಶೂಟಿಂಗ್ ಪ್ರಾರಂಭ ಮಾಡುತ್ತೇವೆ ಎಂದು ಖುಷಿ ತಂಡವೇ ಸ್ಪಷ್ಟನೆ ನೀಡಿದೆ. ಅವರು ಈ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವುದು ಕೇವಲ ಗಾಸಿಪ್ ಎಂದೂ ಅವರು ಹೇಳಿಕೆ ಕೊಟ್ಟಿದ್ದಾರೆ. ಈ ಮೂಲಕ ಸಮಂತಾ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನುವುದನ್ನೂ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: ಡೇಂಜರ್ ಝೋನ್‌ನಲ್ಲಿ 8 ಸ್ಪರ್ಧಿಗಳು, ಯಾರ ಆಟಕ್ಕೆ ಬ್ರೇಕ್ ಹಾಕಲಿದ್ದಾರೆ ಬಿಗ್ ಬಾಸ್

    ಸಮಂತಾ ಅಪರೂಪದ ಕಾಯಿಲೆಗೆ ತುತ್ತಾಗಿದ್ದು ಗುಟ್ಟಿನ ವಿಚಾರವೇನೂ ಅಲ್ಲ. ಈ ಕಾಯಿಲೆ ಪ್ರಾರಂಭಿಕ ಹಂತದಲ್ಲಿ ಇರುವಾಗಲೇ ಗೊತ್ತಾಗಿದ್ದರಿಂದ ಅದಕ್ಕೆ ಸೂಕ್ತ ಚಿಕಿತ್ಸೆಯನ್ನೂ ಪಡೆದುಕೊಂಡಿದ್ದಾರೆ. ಈ ಚಿಕಿತ್ಸೆ ಪಡೆಯಲೆಂದೇ ಅವರು ವಿದೇಶಕ್ಕೂ ಹಾರಿದ್ದರು. ಇದೊಂದು ಅಪಾಯಕಾರಿ ಸಮಸ್ಯೆಯಾದರೂ, ಅದಕ್ಕೆ ಸೂಕ್ತ ಚಿಕಿತ್ಸೆ ಇದೆ ಎಂದು ಸ್ವತಃ ಅವರೇ ಬರೆದುಕೊಂಡಿದ್ದರು. ಇದು ಅಭಿಮಾನಿಗಳ ಆತಂಕಕ್ಕೂ ಕಾರಣವಾಗಿತ್ತು.

    ಈ ನಡುವೆ ಸಮಂತಾ ನಟನೆಯ ಎರಡು ಚಿತ್ರಗಳು ರಿಲೀಸ್ ಆದವು. ಎರಡೂ ಚಿತ್ರದ ಪ್ರಚಾರಕ್ಕೆ ಅವರು ಬರಲಿಲ್ಲ. ಹೀಗಾಗಿ ಸಮಂತಾ ಗಂಭೀರ ಸಮಸ್ಯೆಯಿಂದಲೇ ಬಳಲುತ್ತಿದ್ದಾರೆ ಎಂದು ಹೇಳಲಾಗಿತ್ತು. ಈ ಕಾರಣದಿಂದಾಗಿಯೇ ಅವರನ್ನು ಪ್ರಾಜೆಕ್ಟ್ ಗಳಿಂದ ಕೈ ಬಿಡಲಾಗುತ್ತಿದೆ ಎಂದು ಸುದ್ದಿ ಆಗಿತ್ತು. ಈ ಸುದ್ದಿಗೆ ಕೆಲವ ತಂಡಗಳು ಈಗೀಗ ಸ್ಪಷ್ಟನೆಯನ್ನು ಕೊಡುತ್ತಿವೆ. ಈ ಮೂಲಕ ಸಮಂತಾ ಮತ್ತೆ ಚಿತ್ರೀಕರಣಕ್ಕೆ ಬರಲಿದ್ದಾರೆ ಎನ್ನುವ ವಿಶ್ವಾಸವನ್ನೂ ವ್ಯಕ್ತಪಡಿಸಿವೆ.

    Live Tv
    [brid partner=56869869 player=32851 video=960834 autoplay=true]

  • ‘ಮೆಲ್ಲುಸಿರೆ ಸವಿಗಾನ’ ಹಾಡಿಗೆ ಸೊಂಟ ಬಳುಕಿಸಿದ ರೀಷ್ಮಾ ನಾಣಯ್ಯ

    ‘ಮೆಲ್ಲುಸಿರೆ ಸವಿಗಾನ’ ಹಾಡಿಗೆ ಸೊಂಟ ಬಳುಕಿಸಿದ ರೀಷ್ಮಾ ನಾಣಯ್ಯ

    ರವತ್ತರ ದಶಕದಲ್ಲಿ ಡಾ.ರಾಜ್ ಹಾಗೂ ಲೀಲಾವತಿ ಅಭಿನಯಿಸಿದ್ದ “ವೀರಕೇಸರಿ” ಚಿತ್ರದ  “ಮೆಲ್ಲುಸಿರೆ ಸವಿಗಾನ” ಹಾಡನ್ನು “ಸ್ಪೂಕಿ ಕಾಲೇಜ್” ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. “ಏಕ್ ಲವ್ ಯಾ” ಚಿತ್ರದ ಖ್ಯಾತಿಯ ರೀಷ್ಮಾ ನಾಣಯ್ಯ ಈ ಸುಮಧುರ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಹಿರಿಯ ನಿರ್ದೇಶಕ ಭಗವಾನ್, ಸಾಹಿತಿ ಪದ್ಮಶ್ರೀ ದೊಡ್ಡರಂಗೇಗೌಡ ಹಾಗೂ ಪತ್ರಕರ್ತ ಬಿ.ಗಣಪತಿ ಅವರು ಈ ಹಾಡನ್ನು ಬಿಡುಗಡೆ ಮಾಡಿದರು.

    ಆ ಕಾಲದಲ್ಲಿ ಸಿನಿಮಾ ಮಾಡುವುದು ಅಷ್ಟು ಸುಲಭ ಇರಲಿಲ್ಲ. ಈಗ ಹಾಗಲ್ಲ ತಂತ್ರಜ್ಞಾನ ಮುಂದುವರೆದಿದೆ. “ಮೆಲ್ಲುಸಿರೆ ಸವಿಗಾನ” ಹಾಡಿಗೆ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಈ ಚಿತ್ರದಲ್ಲಿ ಬಳಸಿಕೊಂಡಿದ್ದಾರೆ.  ರೀಷ್ಮಾ ನಾಣಯ್ಯ ಅಭಿನಯ, ಭೂಷಣ್ ನೃತ್ಯ ನಿರ್ದೇಶನ‌ ಎಲ್ಲವೂ ಚೆನ್ನಾಗಿದೆ. ನಿರ್ದೇಶಕ ಭರತ್ ನನ್ನ ಶಿಷ್ಯ. ಚಿತ್ರಕ್ಕೆ ಒಳ್ಳೆಯ ನಾಯಕಿ ಎಂದರು ಹಿರಿಯ ನಿರ್ದೇಶಕ ಭಗವಾನ್. ಅರವತ್ತರ ದಶಕದ ಈ ಹಾಡನ್ನು ಈಗಿನ ರೀತಿಗೆ ಚಿತ್ರೀಕರಿಸುವುದು ಕಷ್ಟಸಾಧ್ಯ. ಅದರೆ ಅದನ್ನು ನಿರ್ದೇಶಕ ಭರತ್ ಸಾಧ್ಯವಾಗಿಸಿದ್ದಾರೆ ಎಂದು ಸಾಹಿತಿ ದೊಡ್ಡರಂಗೇಗೌಡ ತಿಳಿಸಿದರು. ಇದನ್ನೂ ಓದಿ:ಸಾರಾ ಜೊತೆಗಿನ ಡೇಟಿಂಗ್ ಬಗ್ಗೆ ಸ್ಪಷ್ಟನೆ ನೀಡಿದ ಕ್ರಿಕೆಟಿಗ ಶುಭಮನ್ ಗಿಲ್

    ಈ ಹಾಡನ್ನು ದಾಂಡೇಲಿಯಲ್ಲಿ ಸುಮಾರು 250ಕ್ಕೂ ಅಧಿಕ ತಂತ್ರಜ್ಞರ ಪಾಲ್ಗೊಳ್ಳುವಿಕೆಯಲ್ಲಿ ಚಿತ್ರಿಸಿಕೊಳ್ಳಲಾಯಿತು. ಭೂಷಣ್ ಒಳ್ಳೆಯ ದಾಗ ಬಲಿ ನಿರ್ದೇಶನದಲ್ಲಿ ರೀಷ್ಮಾ ನಾಣಯ್ಯ ಈ ಹಾಡುಗೆ ಹೆಜ್ಜೆ ಹಾಕಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಐಶ್ವರ್ಯ ರಂಗರಾಜನ್ ಗಾಯನ ಹಾಗೂ ಮನೋಹರ್ ಜೋಷಿ ಅವರ ಛಾಯಾಗ್ರಹಣ ಈ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ವಿಶ್ವಾಸ್ ಕಲಾ ನಿರ್ದೇಶನ ಕೂಡ ಕಣ್ಮನ ಸೆಳೆಯುತ್ತದೆ. ಹಾಡು ಹಾಗೂ ಚಿತ್ರ ಅದ್ದೂರಿಯಾಗಿ ಮೂಡಿಬರಲು ನಿರ್ಮಾಪಕ ಹೆಚ್ ಕೆ ಪ್ರಕಾಶ್ ಅವರ ಸಹಕಾರ ಹಾಗೂ ನನ್ನ ಚಿತ್ರತಂಡದ ಶ್ರಮ ಕಾರಣ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ. ಪ್ರೋತ್ಸಾಹಿಸಿ ಎಂದರು ನಿರ್ದೇಶಕ ಭರತ್ ಜಿ.

    ಹಾಡಿನ ಬಗ್ಗೆ ರೀಷ್ಮಾ ನಾಣಯ್ಯ, ಚಿತ್ರದ ಬಗ್ಗೆ ನಾಯಕ ವಿವೇಕ್ ಸಿಂಹ, ನಾಯಕಿ ಖುಷಿ ರವಿ, ಛಾಯಾಗ್ರಾಹಕ ಮನೋಹರ್ ಜೋಷಿ ಮುಂತಾದವರು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]