Tag: Khushi

  • ‘ಖುಷಿ’ ಸಿನಿಮಾದ ಶೂಟಿಂಗ್‌ಗೆ ಸಮಂತಾ ಗೈರು: ಅನಾರೋಗ್ಯದ ಬಗ್ಗೆ ಗುಸುಗುಸು

    ‘ಖುಷಿ’ ಸಿನಿಮಾದ ಶೂಟಿಂಗ್‌ಗೆ ಸಮಂತಾ ಗೈರು: ಅನಾರೋಗ್ಯದ ಬಗ್ಗೆ ಗುಸುಗುಸು

    ಮಂತಾ (Samantha) ಆರೋಗ್ಯದ (health) ಬಗ್ಗೆ ಹಲವು ತಿಂಗಳಿನಿಂದ ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಅವುಗಳಿಗೆ ಪುಷ್ಠಿ ಕೊಡುವಂತೆ ಸಮಂತಾ ಕೂಡ ಯಾರ ಕಣ್ಣಿಗೂ ಕಾಣಿಸಿಕೊಳ್ಳದೇ, ಸಿನಿಮಾ ಸಂಬಂಧಿ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳದೇ, ಕೊನೆ ಪಕ್ಷ ಹರಡಿರುವ ಸುದ್ದಿಗೆ ಸ್ಪಷ್ಟನೆ ಕೊಡದೇ ಮತ್ತೆ ಮತ್ತೆ ಅಭಿಮಾನಿಗಳನ್ನು ಆತಂಕಕ್ಕೆ ದೂಡುತ್ತಿದ್ದಾರೆ.

    ಸಮಂತಾ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಅವರು ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೇ, ಖಾಯಿಲೆ ಕಾರಣದಿಂದಾಗಿ ಅವರು ಮನೆಯಿಂದ ಆಚೆ ಬರುತ್ತಿಲ್ಲ ಎನ್ನುವ ಸುದ್ದಿಯೂ ಇತ್ತು. ಈ ಕಾರಣದಿಂದಾಗಿಯೇ ಅವರು ನಟಿಸಿದ ಸಿನಿಮಾಗಳ ಬಿಡುಗಡೆ ದಿನಾಂಕ ಮುಂದೂಡಲಾಗಿದೆ ಎಂದೂ ಹೇಳಲಾಗಿತ್ತು. ಇಷ್ಟೆಲ್ಲ ಸುದ್ದಿಗಳು ಹರಡಿದರೂ, ಅವರು ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ:ಕೊಟ್ಟ ಮಾತಿನಂತೆ ದಾವಣಗೆರೆ ಬೆಣ್ಣೆದೋಸೆ ಸವಿದ ಸ್ಯಾಂಡಲ್ ವುಡ್ ಕ್ವೀನ್

    ಅಂದುಕೊಂಡಂತೆ ಆಗಿದ್ದರೆ, ವಿಜಯ್ ದೇವರಕೊಂಡ (Vijay Devarakonda) ನಾಯಕನಾಗಿ ನಟಿಸುತ್ತಿರುವ ಖುಷಿ (Khushi) ಸಿನಿಮಾದ ಚಿತ್ರೀಕರಣದಲ್ಲಿ ಸಮಂತಾ ತೊಡಗಿಕೊಳ್ಳಬೇಕಿತ್ತು. ಆದರೆ, ಅವರು ಚಿತ್ರೀಕರಣದಲ್ಲಿ ಭಾಗಿಯಾಗಿಲ್ಲ ಎಂದು ಹೇಳಲಾಗಿತ್ತು. ಖುಷಿ ಸಿನಿಮಾಗೆ ಎರಡು ಹಂತದಲ್ಲಿ ಚಿತ್ರೀಕರಣ ನಡೆದಿದ್ದೂ, ಎರಡೂ ಹಂತದ ಶೂಟಿಂಗ್‌ನಲ್ಲಿ ಅವರು ಭಾಗಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ವಿಜಯ್ ದೇವರಕೊಂಡ ಡೇಟ್ ಸಮಸ್ಯೆ ಆಗುತ್ತಿದೆಯಂತೆ.

    ಖುಷಿ ಸಿನಿಮಾದ ಚಿತ್ರೀಕರಣದಲ್ಲಿ ಸಮಂತಾ ಭಾಗಿ ಆಗಿಲ್ಲ ಎನ್ನುವ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಮತ್ತೆ ಸಮಂತಾ ಅವರ ಆರೋಗ್ಯದ ಬಗ್ಗೆ ಚರ್ಚೆ ಶುರುವಾಗಿದೆ. ಅನಾರೋಗ್ಯದ ಕಾರಣದಿಂದಾಗಿಯೇ ಅವರು ಶೂಟಿಂಗ್‌ಗೆ ಬಂದಿಲ್ಲ ಎಂದು ಹೇಳಲಾಗುತ್ತಿದೆ. ಸಮಂತಾ ಈ ಕುರಿತು ಏನೂ ಹೇಳದೇ ಇರುವ ಕಾರಣದಿಂದಾಗಿ ಅಭಿಮಾನಿಗಳಿಗೆ ಸಹಜವಾಗಿ ಆತಂಕ ಮೂಡಿದೆ.

    Live Tv
    [brid partner=56869869 player=32851 video=960834 autoplay=true]

  • ಆಸ್ಪತ್ರೆಯಲ್ಲಿ ದಾಖಲಾಗಿಲ್ಲ ವಿಜಯ್ ದೇವರಕೊಂಡ, ಸಮಂತಾ?

    ಆಸ್ಪತ್ರೆಯಲ್ಲಿ ದಾಖಲಾಗಿಲ್ಲ ವಿಜಯ್ ದೇವರಕೊಂಡ, ಸಮಂತಾ?

    ಮಿಳಿನ ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ನಟಿ ಸಮಂತಾ ಇದೀಗ ‘ಖುಷಿ’ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಎರಡು ವಾರಗಳಿಂದ ಅವರು ಶೂಟಿಂಗ್‌ಗಾಗಿ ಕಾಶ್ಮೀರದಲ್ಲಿ ಬೀಡು ಬಿಟ್ಟಿದ್ದರು. ಚಿತ್ರೀಕರಣದ ಸಂದರ್ಭದಲ್ಲಿ ಅಪಘಾತವಾಗಿದ್ದು, ಇಬ್ಬರೂ ಗಾಯಗೊಂಡಿದ್ದಾರೆ ಎನ್ನುವ ಸುದ್ದಿ ಇತ್ತು. ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಇದನ್ನೂ ಓದಿ : ತೆರೆಯ ಮೇಲೂ ನಿರ್ದೇಶಕನಾಗಿ ನಟಿಸಿದ ಯೋಗರಾಜ್ ಭಟ್

    ವಿಜಯ್ ದೇವರಕೊಂಡ ಮತ್ತು ಸಮಂತಾ ಅವರಿದ್ದ ಜೀಪ್ ನದಿಗೆ ಉರುಳಿ, ಭಾರೀ ಅಪಘಾತವಾಗಿದೆ ಎನ್ನುವ ಸುದ್ದಿ ಎರಡ್ಮೂರು ದಿನಗಳಿಂದ ಭಾರೀ ಸದ್ದು ಮಾಡಿತ್ತು. ಇಬ್ಬರೂ ಅಭಿಮಾನಿಗಳು ಇದರಿಂದಾಗಿ ಸಹಜವಾಗಿಯೇ ಆತಂಕಕ್ಕೀಡಾಗಿದ್ದರು. ಆದರೆ ಈ ಸುದ್ದಿಯ ಅಸಲಿ ಕಥೆಯೇ ಬೇರೆ ಇದೆ ಎನ್ನುತ್ತಾರೆ ಇವರ ಆಪ್ತರು. ಇದನ್ನೂ ಓದಿ : ಪೊಲೀಸ್ ಪೇದೆ ನನ್ನನ್ನು ಸೆಕ್ಸ್ ವರ್ಕರ್ ರೀತಿ ನೋಡಿದ : ಮಲಯಾಳಿ ನಟಿ ಅರ್ಚನಾ ಆರೋಪ

    ಅಷ್ಟಕ್ಕೂ ಸಮಂತಾ ಮತ್ತು ದೇವರಕೊಂಡ ಶೂಟಿಂಗ್‌ಗಾಗಿ ಕಾಶ್ಮೀರಕ್ಕೆ ಹೋಗಿದ್ದು ನಿಜ. ಎರಡು ವಾರಗಳ ಕಾಲ ಕಾಶ್ಮೀರದಲ್ಲೇ ಚಿತ್ರೀಕರಣ ನಡೆದಿದೆ. ಆದರೆ ಯಾವುದೇ ಅವಘಡ ಸಂಭವಿಸಿಲ್ಲವಂತೆ. ಈ ಸುದ್ದಿ ಹಬ್ಬಿದ ದಿನ ಇಬ್ಬರೂ ತಮ್ಮ ತಮ್ಮ ಮನೆಯಲ್ಲೇ ಇದ್ದರಂತೆ. ಶೂಟಿಂಗ್ ಮುಗಿಸಿಕೊಂಡು ಈಗಾಗಲೇ ಅವರು ತಮ್ಮ ಮನೆ ಸೇರಿಕೊಂಡಿದ್ದಾರೆ. ಅಲ್ಲದೇ ಇಬ್ಬರೂ ಕರಣ್ ಜೋಹಾರ್ ಹುಟ್ಟುಹಬ್ಬದ ಪಾರ್ಟಿಯಲ್ಲೂ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ : ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

    ಕಾಶ್ಮೀರದ ಶೂಟಿಂಗ್ ಮುಗಿದು ಮೂರ್ನಾಲ್ಕು ದಿನಗಳೇ ಆಗಿವೆ. ಇಬ್ಬರೂ ತಮ್ಮ ತಮ್ಮ ಮನೆಯಲ್ಲಿ ನೆಮ್ಮದಿಯಾಗಿ ಇದ್ದಾರೆ. ಈ ನಡುವೆ ಅಪಘಾತದ ಸುದ್ದಿ ಬಂದಿದೆ. ಈ ಸುದ್ದಿಯನ್ನು ಯಾರು, ಯಾಕೆ ಹಬ್ಬಿಸಿದರೋ ಗೊತ್ತಿಲ್ಲ. ಆದರೆ ಈ ಸುದ್ದಿಯು ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದ್ದು ಸುಳ್ಳಲ್ಲ.

  • ಸಮಂತಾ, ವಿಜಯ್ ದೇವರಕೊಂಡ ಪ್ರೀತಿಗಿಟ್ಟ ಹೆಸರು ‘ಖುಷಿ’

    ಸಮಂತಾ, ವಿಜಯ್ ದೇವರಕೊಂಡ ಪ್ರೀತಿಗಿಟ್ಟ ಹೆಸರು ‘ಖುಷಿ’

    ಮೊನ್ನೆಯಷ್ಟೇ ವಿಜಯ್ ದೇವರಕೊಂಡ ಅವರ ಹುಟ್ಟು ಹಬ್ಬಕ್ಕೆ ವಿಭಿನ್ನವಾಗಿ ವಿಶ್ ಮಾಡಿ ಸುದ್ದಿಯಾಗಿದ್ದ ಸಮಂತಾ, ಇದೀಗ ಮತ್ತೊಂದು ಕಾರಣಕ್ಕೆ ಸದ್ದು ಮಾಡುತ್ತಿದ್ದಾರೆ. ವಿಜಯ್ ದೇವರಕೊಂಡ ಮತ್ತು ಸಮಂತಾ ನಟನೆಯ ಹೊಸ ಸಿನಿಮಾಗೆ ವಿಭಿನ್ನವಾಗಿ ಶೀರ್ಷಿಕೆ ಇಡಲಾಗಿದ್ದು, ಅದು ಈಗ ರಿವೀಲ್ ಆಗಿದೆ. ಇದನ್ನೂ ಓದಿ: ದೊಡ್ಮನೆ ಕುಡಿ ಯುವರಾಜ್ ಎದುರು ವಿಲನ್ ಆಗಿ ಡಾಲಿ!

    ಇದೇ ಮೊದಲ ಬಾರಿಗೆ ವಿಜಯ್ ದೇವರಕೊಂಡ ಮತ್ತು ಸಮಂತಾ ಒಟ್ಟಾಗಿ ನಟಿಸುತ್ತಿದ್ದರಿಂದ ಈ ಚಿತ್ರಕ್ಕೆ ಯಾವ ರೀತಿಯ ಟೈಟಲ್ ಇಡಬಹುದು ಎಂದು ಚರ್ಚೆ ಶುರುವಾಗಿತ್ತು. ಈಗ ಅದಕ್ಕೆ ಫುಲ್ ಸ್ಟಾಪ್ ಬಿದ್ದಿದ್ದು ಚಿತ್ರಕ್ಕೆ ‘ಖುಷಿ’ ಎಂದು ಶೀರ್ಷಿಕೆ ಇಟ್ಟಿದ್ದಾರೆ ನಿರ್ದೇಶಕರು. ಸಮಂತಾ ಮತ್ತು ವಿಜಯ್ ದೇವರಕೊಂಡ ಅವರ ತೆರೆಯ ಮೇಲಿನ ಪ್ರೀತಿಗೆ ‘ಖುಷಿ’ಯೇ ಸಾಕ್ಷಿಯಾಗಿದೆ ಎಂದಿದ್ದಾರೆ ನಿರ್ದೇಶಕರು. ಇನದನ್ನೂ ಓದಿ:`ಫಿದಾ’ ಬ್ಯೂಟಿ ಸಾಯಿ ಪಲ್ಲವಿಗೆ ಕನ್ನಡ ಹೇಳಿಕೊಟ್ಟ ಶೀತಲ್ ಶೆಟ್ಟಿ

    ಟೈಟಲ್ ರಿವೀಲ್ ಗಾಗಿಯೇ ತಯಾರಾದ ಪೋಸ್ಟರ್ ನಲ್ಲಿ ಸಮಂತಾ ಕಲರ್ ಫುಲ್ ಸೀರೆ ಧರಿಸಿ, ಫಳಫಳ ಹೊಳೆಯುತ್ತಿದ್ದಾರೆ. ಥೇಟ್ ಮದುವಣಗಿತ್ತಿಯಂತೆಯೇ ಕಾಣುತ್ತಾರೆ. ದೇವರಕೊಂಡ ಅವರದ್ದು ಕಾಶ್ಮೀರಿ ಶೈಲಿಯ ಡ್ರೆಸ್. ಹೀಗಾಗಿ ಸಿನಿಮಾದಲ್ಲಿ ಕತೆಯು ಹೇಗಿರಬಹುದು ಎಂಬ ಕುತೂಹಲ ಮೂಡಿಸಿದೆ ಪೋಸ್ಟರ್. ಇದನ್ನೂ ಓದಿ: ಟಗರು-2ನಲ್ಲಿ ಶಿವಣ್ಣನ ಜತೆ ನಟಿಸಬೇಕಿತ್ತು ಅಪ್ಪು!

    ಸಿನಿಮಾದ ಶೂಟಿಂಗ್ ಇನ್ನೂ ನಡೆದಿದ್ದರೂ, ಟೈಟಲ್ ಜೊತೆ ಫಸ್ಟ್ ಲುಕ್ ಮತ್ತು ಸಿನಿಮಾ ಬಿಡುಗಡೆಯ ದಿನಾಂಕವನ್ನೂ ಚಿತ್ರತಂಡ ಬಹಿರಂಗಗೊಳಿಸಿದೆ. ಡಿಸೆಂಬರ್ 23 ರಂದು ಖುಷಿ ಸಿನಿಮಾ ತೆರೆಗೆ ಬರಲಿದೆ. ಈ ಚಿತ್ರಕ್ಕೆ ಶಿವ ನಿರರ್ವಾನ ನಿರ್ದೇಶನ ಮಾಡಿದ್ದು, ನಾನಾ ಕಾರಣಗಳಿಂದಾಗಿ ಈ ಸಿನಿಮಾ ಕುತೂಹಲ ಮತ್ತು ನಿರೀಕ್ಷೆ ಹೆಚ್ಚು ಮಾಡಿದೆ.

  • ಹೈದರಾಬಾದ್‍ಗೆ ಹಾರಿದ ಅರ್ವಿಯಾ ಜೋಡಿ

    ಹೈದರಾಬಾದ್‍ಗೆ ಹಾರಿದ ಅರ್ವಿಯಾ ಜೋಡಿ

    ಬೆಂಗಳೂರು: ಬಿಗ್‍ಬಾಸ್ ಸೀಸನ್-8ರ ಕಾರ್ಯಕ್ರಮದ ಸ್ಪರ್ಧಿಗಳಾಗಿದ್ದ ಅರವಿಂದ್ ಹಾಗೂ ದಿವ್ಯಾ ಉರುಡುಗ ಹೈದರಾಬಾದ್‍ಗೆ ಹಾರಿದ್ದಾರೆ.

    aravind divya

    ಅರವಿಂದ್ ಹಾಗೂ ದಿವ್ಯಾ ಉರುಡುಗ ಬಿಗ್‍ಬಾಸ್ ಸೀಸನ್-8ರ ಪ್ರಣಯ ಪಕ್ಷಿಗಳು ಎಂದೇ ಫೇಮಸ್ ಆಗಿದ್ದರು. ಬಿಗ್‍ಬಾಸ್ ಮನೆಯಲ್ಲಿ ಸದಾ ಜೊತೆ, ಜೊತೆಯಾಗಿದ್ದ ಈ ಜೋಡಿ ರಿಯಾಲಿಟಿ ಶೋ ನಂತರ ಕೂಡ ಎಲ್ಲೆಲ್ಲೂ ಜೊತೆ, ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.  ಇದನ್ನೂ ಓದಿ: ಬಿಗ್‌ಬಾಸ್ ಲವ್ ಬರ್ಡ್ಸ್ ಭೇಟಿಯಾದ ಶುಭಾ ಪೂಂಜಾ

    ಇತ್ತೀಚೆಗಷ್ಟೇ ಶುಭಾ ಪೂಂಜಾ ಜೊತೆಗೆ ಕಾಣಿಸಿಕೊಂಡಿದ್ದ ಈ ಜೋಡಿ ಇದೀಗ ಫ್ಲೈಟ್‍ವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಅರವಿಂದ್ ಹಾಗೂ ದಿವ್ಯಾ ಉರುಡುಗ ಒಟ್ಟಿಗೆ ಹೈದರಾಬಾದ್‍ಗೆ ಹಾರಿದ್ದಾರೆ. ಸದ್ಯ ಇವರಿಬ್ಬರು ಫ್ಲೈಟ್‍ನಲ್ಲಿ ಪ್ರಯಾಣಿಸುತ್ತಿರುವ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ವಿಶೇಷವೆಂದರೆ ಇವರಿಬ್ಬರೊಂದಿಗೆ ದಿಯಾ ಸಿನಿಮಾ ಖ್ಯಾತಿಯ ನಟಿ ಖುಷಿ ಅವರು ಕೂಡ ಕಾಣಿಸಿಕೊಂಡಿದ್ದಾರೆ.

     

    ನಟಿ ಖುಷಿ ಅವರು ಕೂಡ ಅರವಿಂದ್ ಹಾಗೂ ದಿವ್ಯಾ ಉರುಡುಗ ಜೊತೆಗಿರುವ ಫೋಟೋವನ್ನು ಶೇರ್ ಮಾಡಿಕೊಂಡಿದ್ದು, ಫೋಟೋ ಜೊತೆಗೆ ಹೈದರಾಬಾದ್ ಕಾಲಿಂಗ್ ದಿವ್ಯಾ ಉರುಡುಗ, ಕೆ.ಪಿ ಅರವಿಂದ್ ಎಂದು ಬರೆದುಕೊಂಡಿದ್ದಾರೆ.  ಇದನ್ನೂ ಓದಿ: ಬ್ಯಾಕ್ ಬ್ಯೂಟಿಗೆ 13 ಕೋಟಿ ಇನ್ಶೂರೆನ್ಸ್ ಮಾಡಿಸಿದ Miss Bumbum 2021

    ಇತ್ತೀಚೆಗಷ್ಟೇ ಬಿಗ್‍ಬಾಸ್ ಸೀಸನ್ 8ರ ಸ್ಪರ್ಧಿ ಶುಭಾ ಪೂಂಜಾ ಅವರು ಅರವಿಂದ್.ಕೆ.ಪಿ ಮತ್ತು ದಿವ್ಯಾ ಉರುಡುಗ ಅವರನ್ನು ಭೇಟಿ ಮಾಡಿ ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಇನ್ನೂ ಆ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು.