Tag: Kiccha

  • ಸುದೀಪ್ ಹೊಸ ಸಿನಿಮಾದ ಪೋಸ್ಟರ್ ವೈರಲ್: ಏನಿದು ವಿಶೇಷ?

    ಸುದೀಪ್ ಹೊಸ ಸಿನಿಮಾದ ಪೋಸ್ಟರ್ ವೈರಲ್: ಏನಿದು ವಿಶೇಷ?

    ಸುದೀಪ್ (Sudeep) ಅವರ ಮುಂದಿನ ಸಿನಿಮಾದ್ದು ಎನ್ನಲಾದ ಪೋಸ್ಟರ್ (Poster) ವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಕಿಚ್ಚ 47 ಹೆಸರಿನಲ್ಲಿ ಕಿಚ್ಚನ ಅಭಿಮಾನಿಗಳು ಅದನ್ನು ಶೇರ್ ಮಾಡುತ್ತಿದ್ದಾರೆ. ಅತೀ ಶೀಘ್ರದಲ್ಲೇ ಈ ಹೊಸ ಸಿನಿಮಾದ ಅಪ್ ಡೇಟ್ ಸಿಗಲಿದೆ ಎಂದೂ ಅವರು ಬರೆದುಕೊಂಡಿದ್ದಾರೆ. ಈ ಹೊಸ ಸಿನಿಮಾ ಯಾವುದು? ಏನ್ ಸಮಾಚಾರ ಎನ್ನುದು ಇನ್ನಷ್ಟೇ ತಿಳಿಯಬೇಕಿದೆ.

    ಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಿರಂತರವಾಗಿ ನಡೆಯುತ್ತಿದೆ. ಬಿಗ್ ಬಾಸ್ ನಡುವೆಯೂ ತಪ್ಪದೇ ಸುದೀಪ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದುಕೊಂಡಂತೆ ನಡೆದರೆ, ಡಿಸೆಂಬರ್ ಹೊತ್ತಿಗೆ ಮ್ಯಾಕ್ಸ್ (Max) ಸಿನಿಮಾದ ಬಹುತೇಕ ಶೂಟಿಂಗ್ ಮುಗಿಯಲಿದೆ. ಹಾಗಾಗಿ ಫೆಬ್ರವರಿಯಲ್ಲಿ (February) ಸಿನಿಮಾ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಿನಿಮಾ ತಂಡವು ಅಧಿಕೃತವಾಗಿ ಮಾಹಿತಿ ನೀಡದೇ ಇದ್ದರೂ, ಚಿತ್ರೋದ್ಯಮದಲ್ಲಿ ಕೇಳಿ ಬರುತ್ತಿರುವ ಮಾತಿನಂತೆ ಫೆಬ್ರವರಿಗೆ ಮ್ಯಾಕ್ಸ್ ತೆರೆ ಕಾಣಲಿದೆ. ಬ್ಯಾಕ್ ಟು ಬ್ಯಾಕ್ ಚಿತ್ರಗಳನ್ನು ಸುದೀಪ್ ಒಪ್ಪಿಕೊಂಡಿದ್ದರಿಂದ ಮತ್ತು ಅವರೇ ಚಿತ್ರವೊಂದನ್ನು ನಿರ್ದೇಶನ ಮಾಡಬೇಕಾಗಿರುವುದರಿಂದ ಪಕ್ಕಾ ಪ್ಲ್ಯಾನ್ ಮಾಡಿಕೊಂಡೇ ಸಿನಿಮಾದ ಶೂಟಿಂಗ್ ಮುಗಿಸಲಿದ್ದಾರಂತೆ.

     

    ಮ್ಯಾಕ್ಸ್ (Max) ಸಿನಿಮಾದಲ್ಲಿ ದಕ್ಷಿಣದ ಖ್ಯಾತ ನಟಿ ವರಲಕ್ಷ್ಮಿ (Varalakshmi) ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಅದು ಈಗ ನಿಜವಾಗಿದೆ. ಚೆನ್ನೈನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ವರಲಕ್ಷ್ಮಿ ಭಾಗಿಯಾಗಿದ್ದಾರೆ. ಅಧಿಕೃತವಾಗಿಯೇ ಈ ಮಾಹಿತಿಯನ್ನು ಚಿತ್ರತಂಡ ಹೇಳಿಕೊಂಡಿದೆ. ‘ವೆಲ್ ಕಮ್ ಆನ್ ಬೋರ್ಡ್ ಮಹಾಲಕ್ಷ್ಮಿ’ ಎಂದು ಪೋಸ್ಟರ್ ವೊಂದನ್ನು ರಿಲೀಸ್ ಮಾಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Big Boss Kannada 10: ಜಿಯೋ ಸಿನಿಮಾದಲ್ಲೂ ನೋಡಿ ಬಿಗ್ ಬಾಸ್ ಸೀಸನ್ 10

    Big Boss Kannada 10: ಜಿಯೋ ಸಿನಿಮಾದಲ್ಲೂ ನೋಡಿ ಬಿಗ್ ಬಾಸ್ ಸೀಸನ್ 10

    ನ್ನಡಿಗರಿಗೆ ಮಹಾ ಮನರಂಜನೆ ನೀಡುವ ತನ್ನ ಭರವಸೆಯನ್ನು ಮರೆಯದ ಕಲರ್ಸ್‌ ಕನ್ನಡ, ಇದೀಗ ಬಿಗ್ ಬಾಸ್ ನ ಹತ್ತನೇ ಸೀಸನ್ ಅನ್ನು ಹೊತ್ತು ತಂದಿದೆ. ಕನ್ನಡ ಬಿಗ್ ಬಾಸ್ (Big Boss Kannada) ಹೊಸ ಸೀಸನ್ ಅಕ್ಟೋಬರ್ 8 ರಿಂದ  ಆರಂಭಗೊಳ್ಳಲಿದೆ. ಅಕ್ಟೋಬರ್ 8ನೇ ತಾರೀಖಿನ ಸಂಜೆ 6 ಗಂಟೆಗೆ ಸ್ಪರ್ಧಿಗಳನ್ನು ಮನೆಯೊಳಕ್ಕೆ ಕಳಿಸಲಾಗುವುದು. ದೈನಂದಿನ ಸಂಚಿಕೆಗಳು ಮರುದಿನದಿಂದ ಪ್ರತಿ ದಿನ ರಾತ್ರಿ 9.30ರಿಂದ  ಪ್ರಸಾರವಾಗುತ್ತವೆ. ಬಿಗ್‌ಬಾಸ್ ಕನ್ನಡದ ಹತ್ತನೇ ವರ್ಷಾಚರಣೆಯ ಈ ಸೀಸನ್ ಅನ್ನು ವಯಕಾಮ್‌18ರ ಒಟಿಟಿ ಫ್ಲ್ಯಾಟ್‌ಫಾರಂ ಆದ ಜಿಯೋ ಸಿನಿಮಾ (JioCinema) ದಲ್ಲಿ 24 ಗಂಟೆ ಲೈವ್ ಚಾನಲ್‌ನಲ್ಲಿ ಉಚಿತವಾಗಿ ವೀಕ್ಷಿಸುವ ಸೌಲಭ್ಯವನ್ನು ಈ ಬಾರಿ ಕಲ್ಪಿಸಲಾಗಿದೆ.

    ‘ಬಿಗ್‌ಬಾಸ್ ಕನ್ನಡ’ ಹತ್ತನೇ ಆವೃತ್ತಿಯ ಕುರಿತು ಕುತೂಹಲ ಬೆಳೆಯುತ್ತಿರುವ ಹೊತ್ತಿನಲ್ಲಿಯೇ ಹಬ್ಬದ ಮನರಂಜನಾ ಮೆನ್ಯೂ ಜಿಯೋ ಸಿನಿಮಾ ಮೂಲಕ ಇನ್ನಷ್ಟು ವೈವಿಧ್ಯಗೊಂಡಿದೆ. ಇದೇ ಮೊದಲ ಬಾರಿಗೆ ‘ಬಿಗ್‌ಬಾಸ್ ಕನ್ನಡ’ ಜಿಯೋ ಸಿನಿಮಾದಲ್ಲಿಯೂ ಪಸಾರವಾಗಲಿದ್ದು, ದಿನದ ಇಪ್ಪತ್ತನಾಲ್ಕು ಗಂಟೆಯೂ ಮನೆಯಲ್ಲಿ ಏನಾಗುತ್ತಿದೆ ಎಂಬುದರ ನೇರಪ್ರಸಾರವನ್ನು ವೀಕ್ಷಕರು 24 ಗಂಟೆ ಲೈವ್ ಚಾನಲ್‌ನಲ್ಲಿ ನೋಡಬಹುದಾಗಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ದಿನದ ಎಪಿಸೋಡಿನ ಹೊರತಾಗಿಯೂ ಹಲವು ವೈವಿಧ್ಯದ ಎಕ್ಸ್‌ ಕ್ಯೂಸಿವ್ ಮತ್ತು ಅನ್‌ಸೀನ್ ಮನರಂಜನಾ ಕಂಟೆಂಟ್‌ಗಳು ಜಿಯೋ ಸಿನಿಮಾದಲ್ಲಿ ಇರಲಿವೆ. ‘ಬಿಗ್ ನ್ಯೂಸ್’, ‘ಅನ್‌ಸೀನ್ ಕಥೆಗಳು’, ‘ ಜಿಯೋ ಸಿನಿಮಾ ಫನ್ ಪ್ರೈಡೇ’, ‘ಡೀಪ್ ಆಗಿ ನೋಡಿ…’ ಹೀಗೆ ಹಲವಾರು ರೂಪದಲ್ಲಿ, ಮನೆಯೊಳಗಿನ ಕುತೂಹಲಕಾರಿ ಘಟನಾವಳಿಗಳನ್ನು ವೀಕ್ಷಕರಿಗೆ ತಲುಪಿಸಲು ವೇದಿಕೆ ಸಜ್ಜುಗೊಂಡಿದೆ. ಬೆಳವಣಿಗೆಗಳನ್ನು ಸಂಕ್ಷಿಪ್ತವಾಗಿ ಕಟ್ಟಿಕೊಡುವ ‘ಲೈವ್ ಆಕರ್ಷಣೆಯಾಗಿದೆ. ಮನೆಯೊಳಗೆ ನಡೆಯುವ ನಾಟಕೀಯ ಇನ್ನೊಂದು ವಿಶೇಷ.

    ಇದರ ಜೊತೆಜೊತೆಯಲ್ಲಿ ‘ವಾಚ್ ಆಂಡ್ ವಿನ್’, ‘ಮೀಮ್ ದ ಮೊಮೆಂಟ್’, ‘ಹೈಪ್ ಚಾಟ್’, ‘ವಿಡಿಯೊ ವಿಚಾರ್’ಗಳ ಮೂಲಕ ಬಿಗ್‌ಬಾಸ್ ಕನ್ನಡದ ಅಭಿಮಾನಿಗಳಿಗೆ, ಸಂವಾದ ನಡೆಸುವ ಅಪೂರ್ವ ಅವಕಾಶವನ್ನೂ ಕಲ್ಪಿಸಲಾಗಿದೆ. ಇಷ್ಟೇ ಅಲ್ಲ, ಇದೇ ಮೊದಲ ಬಾರಿಗೆ, ಟೀವಿಯಲ್ಲಿ ಷೋ ನೋಡಿ, ಅಲ್ಲಿ ಕೇಳಲಾದ ಪ್ರಶ್ನೆಗಳಿಗೆ ಜಿಯೋ ಸಿನಿಮಾದಲ್ಲಿ ಉತ್ತರಿಸುವ ಮೂಲಕ ಪ್ರತಿದಿನವೂ ರೋಮಾಂಚಕಾರಿ ಬಹುಮಾನಗಳನ್ನು ತಮ್ಮದಾಗಿಸಿಕೊಳ್ಳುವ ಸುವರ್ಣಾವಕಾಶವನ್ನೂ ಪರಿಚಯಿಸಲಾಗಿದೆ. ಈ ಎಲ್ಲ ಸಂವಾದ ದಾರಿಗಳು ವೀಕ್ಷಕರ ಅನುಭವವನ್ನು ಇನ್ನಷ್ಟು ರೋಚಕಗೊಳಿಸುವುದರ ಜೊತೆಗೆ, ಮನೆಯೊಳಗೆ ತೆಗೆದುಕೊಳ್ಳಲಾಗುವ ಅತಿಮುಖ್ಯ ನಿರ್ಧಾರಗಳ ಮೇಲೆ ಪ್ರಭಾವ ಬೀರುವ, ತಮ್ಮಿಷ್ಟದ ಅಭ್ಯರ್ಥಿಯನ್ನು ಉಳಿಸುವ ಅಧಿಕಾರವನ್ನೂ ನೀಡಲಿವೆ.

    ಅಂತೂ ಹಲವು ಹೊಸತನಗಳೊಂದಿಗೆ ನಿಮ್ಮ ಮನದಂಗಳಕ್ಕೆ ದಾಳಿಯಿಡಲು ಬಿಗ್ ಬಾಸ್ ಹತ್ತನೇ ಸೀಸನ್ ಸಜ್ಜಾಗಿದೆ. ನೀವೂ ತಯಾರಾಗಿ, ಕಲರ್ಸ್‌ ಕನ್ನಡ ಚಾನೆಲ್ ನಲ್ಲಿ ಲಾಂಚ್ ಎಪಿಸೋಡ್ ಅಕ್ಟೋಬರ್ 8 ರ ಸಂಜೆ ಆರು ಗಂಟೆಗೆ ಮತ್ತು ನಂತರ ಪ್ರತಿದಿನ ರಾತ್ರಿ 9.30ಕ್ಕೆ. ಜೊತೆಗೆ ಬಿಗ್‌ಬಾಸ್ ಕನ್ನಡ 10ನೇ ಸೀಸನ್‌ನ ಅನಿಯಮಿತ ಮನರಂಜನೆಯನ್ನು ಜಿಯೋ ಸಿನಿಮಾದಲ್ಲಿ ಉಚಿತವಾಗಿ ಆನಂದಿಸಿ. ಹತ್ತನೇ ಸೀಸನ್ ಕನ್ನಡ ಬಿಗ್ ಬಾಸ್ ನ ವಿಶೇಷಗಳು ಹಲವು. ಇದೇ ಮೊದಲ ಬಾರಿಗೆ ‘ಹ್ಯಾಪಿ ಬಿಗ್ ಬಾಸ್’ ಎಂಬ ಥೀಮ್ ಹೊಂದಿರುವುದು ಮೊದಲನೇ ವಿಶೇಷ. ಹದಿನಾರು ಸ್ಪರ್ಧಿಗಳು ಭಾಗವಹಿಸಲಿರುವ ಈ ಸೀಸನ್ ನ ಮನೆಯನ್ನು ಕಾಯಲು 73 ಕ್ಯಾಮರಾಗಳು ಸಜ್ಜಾಗಿವೆ.

     

    ಹತ್ತನೇ ಆವೃತ್ತಿಗಾಗಿ ಕಲರ್ಸ್ ಕನ್ನಡವು ಹೊಸ ಬಿಗ್ ಬಾಸ್ ಮನೆಯನ್ನೇ ಕಟ್ಟಿರುವುದು ಮತ್ತೊಂದು ವಿಶೇಷ. ಬೆಂಗಳೂರಿನ ಹೊರವಲಯದಲ್ಲಿ ನಿರ್ಮಾಣಗೊಂಡಿರುವ ಈ ಹೊಸ ಮನೆ ಹೆಚ್ಚು ವಿಶಾಲವಾಗಿದ್ದು, ಬೇರೆಲ್ಲ ಭಾಷೆಯ ಬಿಗ್ ಬಾಸ್ ಮನೆಗಳಿಗಿಂತ ದೊಡ್ಡದಾಗಿದೆ. 12 ಸಾವಿರ ಚದರಡಿಗಳ ಈ ಮಹಾಮನೆಯಲ್ಲಿ ಮೊದಲಿಗಿಂತ ದೊಡ್ಡ ಆಟಗಳನ್ನು ಆಡುವುದು ಹಾಗೂ ಟಾಸ್ಕ್ ಗಳನ್ನು ಮಾಡುವುದು ಸಾಧ್ಯವಿದೆ. ಹಾಗಾಗಿ ಭಾವನೆಗಳ ಆಟವೂ ಈ ಸಲ ದೊಡ್ಡದಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Bigg Boss Kannada 10 : ಸ್ಪರ್ಧಿಗಳ ಆಯ್ಕೆಗೆ ಯಾವೆಲ್ಲ ಟೆಸ್ಟ್ ಇರುತ್ತೆ ಗೊತ್ತಾ? ಬಹಿರಂಗ ಪಡಿಸಿದ ಕಿಚ್ಚ

    Bigg Boss Kannada 10 : ಸ್ಪರ್ಧಿಗಳ ಆಯ್ಕೆಗೆ ಯಾವೆಲ್ಲ ಟೆಸ್ಟ್ ಇರುತ್ತೆ ಗೊತ್ತಾ? ಬಹಿರಂಗ ಪಡಿಸಿದ ಕಿಚ್ಚ

    ಬಿಗ್ ಬಾಸ್  (Bigg Boss Kannada) ಸ್ಪರ್ಧಿಗಳನ್ನು ಆಯ್ಕೆ ಮಾಡುವುದು ಸುಲಭವಲ್ಲ.  ಅವರ ಹಿನ್ನೆಲೆ, ವ್ಯಕ್ತಿತ್ವ ಮತ್ತು ಜನಪ್ರಿಯತೆಯನ್ನು ಗಣನೆಗೆ ತೆಗೆದುಕೊಂಡು ಆಯ್ಕೆ ಮಾಡಲಾಗುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ, ಇನ್ನೂ ಹಲವಾರು ಟೆಸ್ಟ್ ಗಳನ್ನು ಮಾಡಿಯೇ ದೊಡ್ಮನೆ ಒಳಗೆ ಜನರನ್ನು ಕಳುಹಿಸಲಾಗುತ್ತಿದೆ ಎನ್ನುವ ವಿಚಾರವನ್ನು ಈಗ ಬಹಿರಂಗ ಪಡಿಸಿದ್ದಾರೆ ಕಿಚ್ಚ ಸುದೀಪ್.

    ಬಿಗ್ ಬಾಸ್ ಮನೆಯಲ್ಲಿ ಹೊಡೆದಾಡಿಕೊಳ್ಳಬಾರದು, ಅವಮಾನಿಸಬಾರದು, ದೈಹಿಕ ಹಿಂಸೆಯನ್ನು ಮಾಡಬಾರದು ಎಂದೆಲ್ಲ ರೂಲ್ಸ್ ಇವೆ. ಅಹಿತಕರ ಘಟನೆಗಳು ಮನೆಯಲ್ಲಿ ಆಗಬಾರದು ಎನ್ನುವ ಕಾರಣಕ್ಕಾಗಿಯೇ  ಸೈಕಿಯಾಟಿಸ್ಟ್ ಟೆಸ್ಟ್, ಮೆಡಿಕಲ್ ಟೆಸ್ಟ್ (Test) ಮಾಡಿಸಿಯೇ ಸ್ಪರ್ಧಿಗಳನ್ನು ಮನೆಗೆ ಕಳುಹಿಸಲಾಗುತ್ತದೆ ಎಂದು ಕಿಚ್ಚ ಸುದೀಪ್  (Kiccha Sudeep)ಮಾಧ್ಯಮ ಗೋಷ್ಠಿಯಲ್ಲಿ ಮಾಹಿತಿಯನ್ನು ಹೊರ ಹಾಕಿದರು.

    ಬಿಗ್ ಬಾಸ್ ಮನೆಯಲ್ಲಿ ಕಿಚ್ಚನ ದಾಖಲೆ ಏನು?

    ಕನ್ನಡದ ಬಿಗ್ ಬಾಸ್ ನಾನಾ ಕಾರಣಗಳಿಂದಾಗಿ ವಿಶೇಷ ಮತ್ತು ಹೊಸತು ಅನಿಸುತ್ತದೆ. ಇಂತಹ ಶೋ ಮೂಲಕ ಕಿಚ್ಚ ಸುದೀಪ್ ದಾಖಲೆಯೊಂದನ್ನು ಬರೆದಿದ್ದಾರೆ. ಆ ದಾಖಲೆಯನ್ನು ಸ್ವತಃ ಕಲರ್ಸ್ ಕನ್ನಡ ವಾಹಿನಿಯೇ ಇಂದು ಬಹಿರಂಗ ಪಡಿಸಿದೆ. ಈ ಮೂಲಕ ಸುದೀಪ್‍ ವೃತ್ತಿ ಬದುಕಿಗೆ ಇದೊಂದು ಗೌರವದ ಸಂಗತಿಯೂ ಆಗಿದೆ.

    ಭಾರತದಾದ್ಯಂತ ಬಿಗ್ ಬಾಸ್ ಶೋಗಳು ಆಯೋಜನೆಯಾಗಿವೆ. ಹಿಂದಿ, ತಮಿಳು, ತೆಲುಗು ಸೇರಿದಂತೆ ಹಲವು ಕಡೆ ಬಿಗ್ ಬಾಸ್ ಕಾರ್ಯಕ್ರಮ ಪ್ರಸಾರವಾಗುತ್ತದೆ. ಈ ಎಲ್ಲ ಶೋಗಳಲ್ಲೂ ನಿರೂಪಕರು ಬದಲಾಗಿದ್ದಾರೆ. ಆದರೆ, ಮೊದಲ ಸೀಸನ್ ನಿಂದ ಈವರೆಗೂ ಕನ್ನಡದಲ್ಲಿ ನಿರೂಪಕರು ಬದಲಾಗಿಲ್ಲ. ಸುದೀಪ್ ಅವರೇ ಹತ್ತೂ ಸೀಸನ್ ಗಳನ್ನು ನಡೆಸಿಕೊಂಡು ಬಂದು ದಾಖಲೆ ಬರೆದಿದ್ದಾರೆ. ಇಂತಹ ದಾಖಲೆಯನ್ನು ಬೇರೆ ಯಾವ ಭಾಷೆಯಲ್ಲೂ ನಡೆದಿಲ್ಲ ಎನ್ನುವುದು ವಿಶೇಷ.

     

    ಕೇವಲ ಟಿವಿಯಲ್ಲಿ ಪ್ರಸಾರವಾಗುವ ಶೋ ಮಾತ್ರವಲ್ಲ, ಓಟಿಟಿಗಾಗಿ ಬಿಗ್ ಬಾಸ್ ಆಯೋಜನೆ ಮಾಡಿದ್ದರೂ, ಅದನ್ನೂ ಸುದೀಪ್ ಅವರೇ ನಡೆಸಿಕೊಂಡು ಬಂದಿದ್ದಾರೆ. ಜೊತೆಗೆ ಬಿಗ್ ಬಾಸ್ ಮನೆಯಲ್ಲಿ ಅಡುಗೆ ರೀತಿಯ ಕಾರ್ಯಕ್ರಮವನ್ನೂ ಅವರು ಆಯೋಜನೆ ಮಾಡಿದ್ದಾರೆ. ಈ ಎಲ್ಲ ಕಾರಣದಿಂದಾಗಿ ಸುದೀಪ್ ವಿಶೇಷ ಅನಿಸುತ್ತಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Bigg Boss Kannada 10: ಸುದೀಪ್ ಬರೆದ ದಾಖಲೆ ಯಾವುದು?

    Bigg Boss Kannada 10: ಸುದೀಪ್ ಬರೆದ ದಾಖಲೆ ಯಾವುದು?

    ನ್ನಡದ ಬಿಗ್ ಬಾಸ್ (Bigg Boss Kannada) ನಾನಾ ಕಾರಣಗಳಿಂದಾಗಿ ವಿಶೇಷ ಮತ್ತು ಹೊಸತು ಅನಿಸುತ್ತದೆ. ಇಂತಹ ಶೋ ಮೂಲಕ ಕಿಚ್ಚ ಸುದೀಪ್ (Sudeep) ದಾಖಲೆಯೊಂದನ್ನು (Record) ಬರೆದಿದ್ದಾರೆ. ಆ ದಾಖಲೆಯನ್ನು ಸ್ವತಃ ಕಲರ್ಸ್ ಕನ್ನಡ ವಾಹಿನಿಯೇ ಇಂದು ಬಹಿರಂಗ ಪಡಿಸಿದೆ. ಈ ಮೂಲಕ ಸುದೀಪ್‍ ವೃತ್ತಿ ಬದುಕಿಗೆ ಇದೊಂದು ಗೌರವದ ಸಂಗತಿಯೂ ಆಗಿದೆ.

    ಭಾರತದಾದ್ಯಂತ ಬಿಗ್ ಬಾಸ್ ಶೋಗಳು ಆಯೋಜನೆಯಾಗಿವೆ. ಹಿಂದಿ, ತಮಿಳು, ತೆಲುಗು ಸೇರಿದಂತೆ ಹಲವು ಕಡೆ ಬಿಗ್ ಬಾಸ್ ಕಾರ್ಯಕ್ರಮ ಪ್ರಸಾರವಾಗುತ್ತದೆ. ಈ ಎಲ್ಲ ಶೋಗಳಲ್ಲೂ ನಿರೂಪಕರು ಬದಲಾಗಿದ್ದಾರೆ. ಆದರೆ, ಮೊದಲ ಸೀಸನ್ ನಿಂದ ಈವರೆಗೂ ಕನ್ನಡದಲ್ಲಿ ನಿರೂಪಕರು ಬದಲಾಗಿಲ್ಲ. ಸುದೀಪ್ ಅವರೇ ಹತ್ತೂ ಸೀಸನ್ ಗಳನ್ನು ನಡೆಸಿಕೊಂಡು ಬಂದು ದಾಖಲೆ ಬರೆದಿದ್ದಾರೆ. ಇಂತಹ ದಾಖಲೆಯನ್ನು ಬೇರೆ ಯಾವ ಭಾಷೆಯಲ್ಲೂ ನಡೆದಿಲ್ಲ ಎನ್ನುವುದು ವಿಶೇಷ.

    ಕೇವಲ ಟಿವಿಯಲ್ಲಿ ಪ್ರಸಾರವಾಗುವ ಶೋ ಮಾತ್ರವಲ್ಲ, ಓಟಿಟಿಗಾಗಿ ಬಿಗ್ ಬಾಸ್ ಆಯೋಜನೆ ಮಾಡಿದ್ದರೂ, ಅದನ್ನೂ ಸುದೀಪ್ ಅವರೇ ನಡೆಸಿಕೊಂಡು ಬಂದಿದ್ದಾರೆ. ಜೊತೆಗೆ ಬಿಗ್ ಬಾಸ್ ಮನೆಯಲ್ಲಿ ಅಡುಗೆ ರೀತಿಯ ಕಾರ್ಯಕ್ರಮವನ್ನೂ ಅವರು ಆಯೋಜನೆ ಮಾಡಿದ್ದಾರೆ. ಈ ಎಲ್ಲ ಕಾರಣದಿಂದಾಗಿ ಸುದೀಪ್ ವಿಶೇಷ ಅನಿಸುತ್ತಾರೆ.

    ಗೆದ್ದವರಿಗೆ ಬಹುಮಾನ ಎಷ್ಟು?

    ಕನ್ನಡದ ಬಿಗ್ ಬಾಸ್ ಸೀಸನ್ 10 ಅಕ್ಟೋಬರ್ 8 ರಿಂದ  ಅದ್ಧೂರಿಯಾಗಿ ಶುರುವಾಗಲಿದೆ. ಬಿಗ್ ಬಾಸ್ ಪ್ರಸಾರವಾಗುವ ಮುನ್ನ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಹತ್ತು ಹಲವಾರು ವಿಷಯಗಳನ್ನು ಹಂಚಿಕೊಂಡಿತು ಕಲರ್ಸ್ ಕನ್ನಡ ವಾಹಿನಿ. ಸಹಜವಾಗಿ ಈ ಬಾರಿ ಗೆದ್ದವರಿಗೆ ಎಷ್ಟು ಮೊತ್ತದ ಬಹುಮಾನ ಸಿಗಲಿದೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

     

    ಪ್ರತಿ ಸಲವೂ ಬಿಗ್ ಬಾಸ್ ಗೆದ್ದವರಿಗೆ ಟ್ರೋಫಿ ಮತ್ತು ಭಾರೀ ಮೊತ್ತದ ಹಣವನ್ನೇ ಬಹುಮಾನವಾಗಿ ನೀಡಲಾಗುತ್ತದೆ. ಜೊತೆಗೆ ಇತರ ಬಹುಮಾನಗಳು ಕೂಡ ಇರಲಿವೆ. ಈ ಬಾರಿ ಬಿಗ್ ಬಾಸ್ ಗೆದ್ದವರಿಗೆ ಐವತ್ತು ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ವಾಹಿನಿಯು ತಿಳಿಸಿದೆ. ಜೊತೆಗೆ ಇತರ ಬಹುಮಾನಗಳು ಕೂಡ ಮುಂದುವರೆಯಲಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುದೀಪ್ ಹುಟ್ಟುಹಬ್ಬ: ಮನೆಗೆ ಬರಬೇಡಿ, ಅಭಿಮಾನಿಗಳ ಭೇಟಿಗೆ ಸ್ಥಳ ಫಿಕ್ಸ್

    ಸುದೀಪ್ ಹುಟ್ಟುಹಬ್ಬ: ಮನೆಗೆ ಬರಬೇಡಿ, ಅಭಿಮಾನಿಗಳ ಭೇಟಿಗೆ ಸ್ಥಳ ಫಿಕ್ಸ್

    ಕಿಚ್ಚ ಸುದೀಪ್ (Sudeep) ಅವರ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಅಭಿಮಾನಿಗಳ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸುದೀಪ್ ಸದ್ಯ ಚೆನ್ನೈನಲ್ಲಿದ್ದಾರೆ. ಅವರ ಹೊಸ ಸಿನಿಮಾದ ಚಿತ್ರೀಕರಣ ಅಲ್ಲಿ ನಿರಂತರವಾಗಿ ನಡೆಯುತ್ತಿದೆ. ಶೂಟಿಂಗ್ ನಡುವೆಯೂ ಬ್ರೇಕ್ ತೆಗೆದುಕೊಂಡು ಅಭಿಮಾನಿಗಳ ಜೊತೆ ಅವರು ಒಂದು ದಿನ ಕಳೆಯಲಿದ್ದಾರೆ.

    ಈ ಕುರಿತು ಅಖಿಲ ಕರ್ನಾಟಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳ ಸಂಘ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದ್ದು, ‘ಪ್ರತಿ ವರ್ಷ ಸುದೀಪ್ ಅವರ ಹುಟ್ಟು ಹಬ್ಬವನ್ನು ಜೆಪಿ ನಗರದಲ್ಲಿರುವ ಅವರ ನಿವಾಸದ ಮುಂದೆ ಆಚರಣೆ ಮಾಡಲಾಗುತ್ತಿತ್ತು. ಜನಸಂದಣಿಯಿಂದಾಗಿ ಅಭಿಮಾನಿಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕಾಗಿ ಈ ಬಾರಿ ಒಂದು ದಿನ ಮೊದಲೇ ಸೆಪ್ಟೆಂಬರ್ 1ರಂದು  ಬೆಂಗಳೂರಿನ ನಂದಿ ಲಿಂಕ್ಸ್ ಮೈದಾನದಲ್ಲಿ ಹುಟ್ಟು ಹಬ್ಬವನ್ನು ಆಚರಿಸಲು ನಿರ್ಧರಿಸಲಾಗಿದೆ’ ಎಂದು ಹೇಳಲಾಗಿದೆ.

    ಸೆಪ್ಟೆಂಬರ್ 1ರಂದು ಸಂಜೆ 7 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ಸುದೀಪ್ ಅವರು ನಂದಿ ಲಿಂಕ್ಸ್ ಮೈದಾನದಲ್ಲಿ ಅಭಿಮಾನಿಗಳ ಜೊತೆ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಹಾಗಾಗಿ ಸೆಪ್ಟೆಂಬರ್ 2ಕ್ಕೆ ಯಾರೂ ಸುದೀಪ್ ಅವರ ಮನೆಯ ಮುಂದೆ ಬರಬಾರದು ಎಂದು ವಿನಂತಿಸಲಾಗಿದೆ.

     

    ಸುದೀಪ್ ಅವರ ಹುಟ್ಟು ಹಬ್ಬಕ್ಕೆ ಹಲವು ಅಚ್ಚರಿಗಳು ಕೂಡ ಇರಲಿವೆಯಂತೆ. ಹೊಸ ಸಿನಿಮಾದ ಟ್ರೈಲರ್  ಮತ್ತು ಹೊಸ ಸಿನಿಮಾಗಳ ಘೋಷಣೆ ಕೂಡ ಆಗಲಿವೆ ಎನ್ನುವ ಮಾಹಿತಿ ಇದೆ. ಸತತವಾಗಿ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಸುದೀಪ್, ಈ ಬಾರಿ ಅಭಿಮಾನಿಗಳ ಒತ್ತಡಕ್ಕೆ ಮಣಿದು, ಶೂಟಿಂಗ್ ಕ್ಯಾನ್ಸಲ್ ಮಾಡಿಕೊಂಡು ಹುಟ್ಟು ಹಬ್ಬವನ್ನು ಆಚರಿಸುತ್ತಿರುವುದು ವಿಶೇಷ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೊಸ ಸಿನಿಮಾದ ಶೂಟಿಂಗ್ ಬೆನ್ನಲ್ಲೇ ತಿಮ್ಮಪ್ಪನ ದರ್ಶನ ಪಡೆದ ಸುದೀಪ್

    ಹೊಸ ಸಿನಿಮಾದ ಶೂಟಿಂಗ್ ಬೆನ್ನಲ್ಲೇ ತಿಮ್ಮಪ್ಪನ ದರ್ಶನ ಪಡೆದ ಸುದೀಪ್

    ನ್ನೇನು ಕೆಲವೇ ದಿನಗಳಲ್ಲಿ ಸುದೀಪ್ ನಟನೆಯ ಹೊಸ ಸಿನಿಮಾದ ಚಿತ್ರೀಕರಣ ಶುರುವಾಗಲಿದೆ. ಅದಕ್ಕೂ ಮುನ್ನ ಸುದೀಪ್ ತಿರುಪತಿಗೆ (Thirupathi Thimmappa) ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಹಲವು ದಿನಗಳಿಂದ ಕಿರಿಕಿರಿ ಅನುಭವಿಸುತ್ತಿದ್ದ ಕಿಚ್ಚ, ದೇವರ ದರ್ಶನ ಪಡೆದುಕೊಂಡು ನಿರಾಳರಾಗಿದ್ದಾರೆ.

    ಕಿಚ್ಚ ಸುದೀಪ್(Kiccha Sudeep)- ನಿರ್ಮಾಪಕ ಕುಮಾರ್ ಕಾಲ್‌ಶೀಟ್ ಕದನಕ್ಕೆ ಪೂರ್ಣ ವಿರಾಮ ಬೀಳುವ ಮುಂಚಯೇ ಕಿಚ್ಚನ 46 ಸಿನಿಮಾಗೆ ಸಿದ್ಧತೆ ನಡೆಯುತ್ತಿದೆ. ಕುಮಾರ್ ಜೊತೆಗಿನ ಸಂಧಾನದ ಮಾತುಕತೆ ನಡೆಯುತ್ತಿದೆ. ಈ ವಾರದ ಅಂತ್ಯದಲ್ಲಿ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದು ಹೇಳಲಾಗಿತ್ತು. ಅದು ಸಾಧ್ಯವಾಗಿಲ್ಲ. ವಿವಾದ ಬದಿಗಿಟ್ಟು ಕಾಯಕವೇ ಕೈಲಾಸ ಅಂತಾ ಸುದೀಪ್ ಹೊಸ ಸಿನಿಮಾದ ಶೂಟಿಂಗ್‌ನತ್ತ ಮುಖ ಮಾಡಿದ್ದಾರೆ.‌ ಇದನ್ನೂ ಓದಿ:ಮಗಳ ವಯಸ್ಸಿನ ನಟಿ ಜೊತೆ ಅನಿಲ್ ಕಪೂರ್ ಲಿಪ್‌ಲಾಕ್- ನೆಟ್ಟಿಗರಿಂದ ಛೀಮಾರಿ

    ‘ವಿಕ್ರಾಂತ್ ರೋಣ’ ಸಿನಿಮಾದ ಬಳಿಕ ತನ್ನ ಜೊತೆ ಸಿನಿಮಾ ಮಾಡ್ತಾರೆ ಅಂತಾ ಮಾತುಕತೆ ಆಗಿತ್ತು. ಹಣ ಪಡೆದು ಸಾಕಷ್ಟು ಸಮಯದಿಂದ ಕಾಲ್‌ಶೀಟ್ ನೀಡದೇ ಸುದೀಪ್ ಸತಾಯಿಸುತ್ತಿದ್ದಾರೆ ಎಂದು ನಿರ್ಮಾಪಕ ಕುಮಾರ್ (Producer Kumar) ಆರೋಪಿಸಿದ್ದರು. ಇದಾದ ಬಳಿಕ ಸುದೀಪ್ ಕಾನೂನು ಸಮರ ಸಾರಿದ್ದರು. ಬಳಿಕ ರವಿಚಂದ್ರನ್ (Ravichandran) ಅವರ ಜೊತೆ ಕುಮಾರ್-ಸುದೀಪ್ ಇಬ್ಬರ ಸಂಧಾನ ಸಭೆ ನಡೆದಿತ್ತು. ಆದರೆ ಇದು ಇನ್ನೂ ಅಂತಿಮ ಹಂತಕ್ಕೆ ತಲುಪಿಲ್ಲ. ಕೊನೆಯ ಮೀಟಿಂಗ್‌ನಲ್ಲಿ ಶಿವಣ್ಣ (Shivarajkumar) ಕೂಡ ಭಾಗಿಯಾಗಲಿದ್ದಾರೆ. ಬಳಿಕ ಕಾಲ್‌ಶೀಟ್ ಕದನಕ್ಕೆ ಬ್ರೇಕ್ ಸಿಗಲಿದೆ.

    ʼವಿಕ್ರಾಂತ್ ರೋಣ’ (Vikrant Rona) ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಸುದೀಪ್ ಒಂದು ಬ್ರೇಕ್ ಪಡೆದರು. ವೃತ್ತಿ ಜೀವನದಲ್ಲಿ ಅವರು ಪಡೆದ ಮೊದಲ ಬ್ರೇಕ್ ಇದು ಅನ್ನೋದು ವಿಶೇಷ. ಈ ಸಮಯದಲ್ಲಿ ಸುದೀಪ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ಕೊಟ್ಟರು. ಚುನಾವಣಾ ಪ್ರಚಾರದಲ್ಲಿ ಭಾಗಿ ಆದರು. ಬಿಜೆಪಿ ಕ್ಷೇತ್ರದ ಪರ ಪ್ರಚಾರಕ್ಕೆ ಕಣಕ್ಕೆ ಇಳಿದರು. ಈಗ ಅವರು ಶೂಟಿಂಗ್ ಹೊರಡೋಕೆ ರೆಡಿ ಆಗಿದ್ದಾರೆ.

     

    ‘K 46’ ಚಿತ್ರದ ಶೂಟಿಂಗ್ ಆಗಸ್ಟ್ ಮೊದಲ ವಾರದಿಂದ ಪ್ರಾರಂಭ ಆಗಲಿದೆ. 55 ದಿನಗಳ ಸುದೀರ್ಘ ಶೆಡ್ಯೂಲ್‌ನಲ್ಲಿ ಚಿತ್ರೀಕರಣ ನಡೆಯಲಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಯಲಿದೆ. ಸಿನಿಮಾದ ಮೊದಲ ಝಲಕ್ ಸಂಚಲನ ಮೂಡಿಸಿದೆ. ನಾನು ಮನುಷ್ಯನಲ್ಲ ರಾಕ್ಷಸ ಎನ್ನುವ ಕಿಚ್ಚನ ಖಡಕ್ ಡೈಲಾಗ್ ಫ್ಯಾನ್ಸ್ ಕಿಕ್ ಕೊಟ್ಟಿತ್ತು. ಈಗ ಸಿನಿಮಾ ಚಿತ್ರೀಕರಣಕ್ಕೆ ಕೌಂಟ್‌ಡೌನ್ ಶುರುವಾಗಿದೆ. ವಿಜಯ್ ಕಾರ್ತಿಕೇಯ ಅವರು ‘K 46ʼ ಚಿತ್ರಕ್ಕೆ ನಿರ್ದೇಶನ ಮಾಡ್ತಿದ್ದಾರೆ. ವಿ ಕ್ರಿಯೇಷನ್ಸ್ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನನ್ನನ್ನು ಹಿರಿಯ ನಟ ಎಂದು ಕರೆಯಬೇಡಿ: ಸಹನಟರ ಕಾಲೆಳೆದ ಕಿಚ್ಚ

    ನನ್ನನ್ನು ಹಿರಿಯ ನಟ ಎಂದು ಕರೆಯಬೇಡಿ: ಸಹನಟರ ಕಾಲೆಳೆದ ಕಿಚ್ಚ

    ಶಾಂಕ್ ನಿರ್ದೇಶನದ ಸಿನಿಮಾದ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ (Sudeep) ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲಿದ್ದ ಕೆಲ ಕಲಾವಿದರು ಸುದೀಪ್ ಅವರನ್ನು ಹಿರಿಯನಟ ಎಂದು ಕರೆಯುತ್ತಿದ್ದರು. ಅದನ್ನು ಗಮನಿಸಿದ ಕಿಚ್ಚ, ಸಹನಟರಿಗೆ ತಮಾಷೆ ಎನ್ನುವಂತೆ ಕಾಲೆಳೆದಿದ್ದಾರೆ. ನಾನು ಹಿರಿಯ ನಟ ಅಲ್ಲ, ಹಾಗೆ ಕರೆಯಬೇಡಿ ಎಂದು ನಗ್ತಾನೆ ಮಾತನಾಡಿದ್ದಾರೆ.

    ಒಂದು ಕಡೆ ಸಿನಿಮಾ ಸಂಬಂಧಿ ನಾನಾ ಕಾರ್ಯಕ್ರಮಗಳಲ್ಲಿ ಸುದೀಪ್ ಬ್ಯುಸಿಯಾಗಿದ್ದರೆ ಮತ್ತೊಂದು ಕಡೆ ಅವರದ್ದೇ ಹೊಸ ಸಿನಿಮಾದ ಕೆಲಸಗಳಲ್ಲೂ ಅವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಸುದೀಪ್ ನಟನೆಯ 46ನೇ ಸಿನಿಮಾಗೆ ತಮಿಳಿನ ಯುವ ನಿರ್ದೇಶಕ ವಿಜಯ್ ಕಾರ್ತಿಕೇಯ (Vijay Karthikeya) ಆ್ಯಕ್ಷನ್ ಕಟ್ ಹೇಳುತಿದ್ದು, ‘ವಿಕ್ರಾಂತ್ ರೋಣ’ ಸಿನಿಮಾದ ಸೂಪರ್ ಸಕ್ಸಸ್ ನಂತರ ಎಂದೂ ಕಾಣಿಸಿಕೊಂಡಿರದ ಹೊಸ ಅವತಾರದಲ್ಲಿ ಸುದೀಪ್ ಎಂಟ್ರಿ ಕೊಟ್ಟಿದ್ದಾರೆ. ಸದ್ಯ Kiccha 46 ಸಿನಿಮಾ ಟೀಸರ್ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡ್ತಿದೆ.

    ದೊಡ್ಡ ಕಥೆದು ಚಿಕ್ಕ ಸಂದರ್ಭ ಹೇಳೋದಾ ಎಂದು ಹೇಳುವ ಡೈಲಾಗ್ ಮೂಲಕ ಕಿಚ್ಚ ಸುದೀಪ್ ರಾ ಲುಕ್‌ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಒಬ್ಬನನ್ನ ಮುಗಿಸೋಕೆ ಅಷ್ಟು ಜನ ಹೋಗಿದ್ದಾರಾ. ಇನ್ನೂ ಅವನನ್ನ ಸಾಯಿಸಿಲ್ವ ಅನ್ನೋ ಕೆಡಿ ಖಡಕ್ ಮಾತಿಗೆ ಗನ್ ಹಿಡಿದು ಸುದೀಪ್ ರಗಡ್ ಆಗಿ ಎಂಟ್ರಿ ನೀಡಿದ್ದಾರೆ. ಯುದ್ಧ ನಾ ಹುಟ್ಟು ಹಾಕೋರನ್ನ ಕಂಡರೆ ಆಗಲ್ಲ. ಯುದ್ಧಕ್ಕೆ ಹೆದರಿಕೊಂಡು ಓಡಿಹೋಗೋರನ್ನ ಕಂಡರೂ ನನಗೆ ಆಗಲ್ಲ. ಅಖಾಡಕ್ಕೆ ಇಳಿದು ಎದುರಾಳಿಗಳ ಎದೆ ಬಗೆದು ರಕ್ತ ಚೆಲ್ಲಾಡಿ, ಆ ರಕ್ತ ಸುರಿಸಿಕೊಂಡು ಓಡಿ ಹೋಗೋದನ್ನ ನೋಡೋನು ನಾನು. ಇಳಿದ ಮೇಲೆ ದಯೆ, ಕ್ಷಮೆ, ಸಂಧಾನ ಇದ್ಯಾವುದು ಇರೋದಿಲ್ಲ ಎಂದು ಎದುರಾಳಿಗಳಿಗೆ ಸುದೀಪ್ ಖಡಕ್ ಡೈಲಾಗ್‌ನಿಂದ ವಾರ್ನಿಂಗ್ ನೀಡಿದ್ದಾರೆ. ಚಿತ್ರದ ಮೊದಲ ಟೀಸರ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ನಾನು ಮನುಷ್ಯನಲ್ಲ, ರಾಕ್ಷಸ ಎಂದು ಹೇಳುವ ಕಿಚ್ಚನ ಖಡಕ್ ಮಾತು ಅಭಿಮಾನಿಗಳ ಗಮನ ಸೆಳೆದಿದೆ.

    ಕಾಲಿವುಡ್‌ನ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ವಿ ಕ್ರಿಯೇಷನ್ಸ್’ ಜೊತೆ ಕಿಚ್ಚ ಸುದೀಪ್ ಕೈ ಜೋಡಿಸಿದ್ದಾರೆ. ಕಿಚ್ಚನ 46ನೇ ಚಿತ್ರಕ್ಕೆ ಅದ್ದೂರಿಯಾಗಿ ಸಿನಿಮಾ ನಿರ್ಮಾಣ ಮಾಡ್ತಿದ್ದಾರೆ. ಕಬಾಲಿ, ತುಪಾಕಿ, ಅಸುರನ್, ಸಿನಿಮಾಗಳಂತಹ ಬಿಗ್ ಬಜೆಟ್ ಸಿನಿಮಾಗಳನ್ನ ನಿರ್ಮಾಣ ಮಾಡಿರುವ ಕಲೈಪುಲಿ ಎಸ್. ಧಾನು ಅವರು ಸುದೀಪ್ ಅವರ ಈ ಚಿತ್ರಕ್ಕೆ ಸಾಥ್ ನೀಡ್ತಿದ್ದಾರೆ.

     

    ಕಿಚ್ಚ ಸುದೀಪ್ ಸಿನಿಮಾಗಾಗಿ ಕಾದು ಕುಳಿತಿದ್ದ ಅಭಿಮಾನಿಗಳಿಗೆ ಖುಷಿ ಪಡೋವಂತಹ ರಗಡ್ ಟೀಸರ್ ಸಿಕ್ಕಿದೆ. ಸುದೀಪ್ ರಣ ರಣ ರಕ್ತ ಸಿಕ್ತ ಅವತಾರ ನೋಡಿ ಕಿಚ್ಚ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿರ್ಮಾಪಕ ಕುಮಾರ್ ವಿರುದ್ಧ ರಾಜ್ಯಾದ್ಯಂತ ಸುದೀಪ್ ಅಭಿಮಾನಿಗಳ ಆಕ್ರೋಶ

    ನಿರ್ಮಾಪಕ ಕುಮಾರ್ ವಿರುದ್ಧ ರಾಜ್ಯಾದ್ಯಂತ ಸುದೀಪ್ ಅಭಿಮಾನಿಗಳ ಆಕ್ರೋಶ

    ಸುಖಾಸುಮ್ಮನೆ ತಮ್ಮ ನೆಚ್ಚಿನ ನಟ ಸುದೀಪ್ (Sudeep) ಅವರ ಘನತೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ಸಿಡಿದೆದ್ದಿರುವ ಕಿಚ್ಚನ ಅಭಿಮಾನಿಗಳು ರಾಜ್ಯಾದ್ಯಂತ ಅಲ್ಲಲ್ಲಿ ಪ್ರತಿಭಟನೆ ಮಾಡಿದ್ದಾರೆ. ಬೆಂಗಳೂರಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮುಂದೆ ಕೆಲ ಅಭಿಮಾನಿಗಳು ಜಮಾಯಿಸಿ, ನಿರ್ಮಾಪಕರಾದ ಕುಮಾರ್ ಮತ್ತು ರೆಹಮಾನ್ ವಿರುದ್ಧ ಘೋಷಣೆ ಕೂಗಿದರು. ಕುಮಾರ್ ಅವರ ಭಾವಚಿತ್ರಕ್ಕೆ ಚೆಪ್ಪಲಿ ಸೇವೆ ಮಾಡಿದ್ದಾರೆ.

    ಪ್ರತಿಭಟನಾ ಸ್ಥಳಕ್ಕೆ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್ ಬರುವತನಕ ಪ್ರತಿಭಟನೆ ಮಾಡಿದ ಸುದೀಪ್ ಅಭಿಮಾನಿಗಳು, ಹರೀಶ್ ಬಂದ ನಂತರ ಅವರಿಗೆ ಮನವಿ ಸಲ್ಲಿಸಿದರು. ಸಾಕ್ಷಿ, ಆಧಾರಗಳು ಇಲ್ಲದೇ ಆರೋಪ ಮಾಡುವವರಿಗೆ ಫಿಲ್ಮ್ ಚೇಂಬರ್ ಅವಕಾಶ ನೀಡಬಾರದು ಎಂದು ಘೋಷಣೆ ಕೂಗಿದರು. ಅಲ್ಲದೇ, ಕುಮಾರ್ ಮತ್ತು ರೆಹಮಾನ್ ಎರಡು ದಿನಗಳ ಒಳಗೆ ಕ್ಷಮೆ ಕೇಳದೇ ಇದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಅಭಿಮಾನಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು. ಇದನ್ನೂ ಓದಿ:ತಮನ್ನಾ ಭಾರತೀಯ ಚಿತ್ರರಂಗದ ಶಕೀರಾ: ಸೆಕ್ಸಿ ಸ್ಟೆಪ್ ಹಾಕಿದ್ದಕ್ಕೆ ಬಿರುದು

    ಬೆಂಗಳೂರಿನಲ್ಲಿ ಮಾತ್ರವಲ್ಲ ಚಾಮರಾಜನಗರದಲ್ಲೂ ಪ್ರತಿಭಟನೆ ಕಾವು ಜೋರಾಗಿತ್ತು. ಚಾಮರಾಜನಗರದ ಕಿಚ್ಚನ ಅಭಿಮಾನಿಗಳು ಕೂಡ ನಿರ್ಮಾಪಕ ಎನ್.ಕುಮಾರ್ ಮತ್ತು ರೆಹಮಾನ್ ವಿರುದ್ಧ ಬೀದಿಗಿಳಿದಿದ್ದರು. ನಿರ್ಮಾಪಕರ ಫೋಟೋಗೆ ಚಪ್ಪಲಿ ಸೇವೆ ಮಾಡಿ ಆಕ್ರೋಶ ಹೊರಹಾಕಿದರು. ಚಾಮರಾಜನಗರದ ಭುವನೇಶ್ವರಿ ವೃತ್ತಿಯಲ್ಲಿ ಸೇರಿದ್ದ ಅಭಿಮಾನಿಗಳು ನಿರ್ಮಾಪಕರ ವಿರುದ್ಧ ‍ಘೋಷಣೆ ಕೂಗಿದರು.

    ನಿರ್ಮಾಪಕ ಕುಮಾರ್ ಅವರು ಕಿಚ್ಚ (Kiccha) ಸುದೀಪ್ ಅವರ ಹೆಸರಿಗೆ ಕಳಂಕ ತರುವ ಕೆಲಸಕ್ಕೆ ಮುಂದಾಗಿದ್ದಾರೆ. ಕುಮಾರ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು. ಕ್ಷಮೆ ಕೇಳದೇ ಇದ್ದರೆ, ಅವರ ಸಿನಿಮಾಗಳನ್ನು ಬ್ಯಾನ್ ಮಾಡುತ್ತೇವೆ. ಮತ್ತು ಸುದೀಪ್ ಅವರ ವಿರುದ್ಧ ಮಾತನಾಡಿದರೆ, ಅವರ ಬೆಂಗಳೂರಿನ ಮನೆಗೆ ಮುತ್ತಿಗೆ ಹಾಕುವುದಾಗಿ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಿರ್ಮಾಪಕ ಕುಮಾರ್ ವಿರುದ್ಧ ಮಾನನಷ್ಟದ ಅಸ್ತ್ರ ಬಿಟ್ಟ ಸುದೀಪ್

    ನಿರ್ಮಾಪಕ ಕುಮಾರ್ ವಿರುದ್ಧ ಮಾನನಷ್ಟದ ಅಸ್ತ್ರ ಬಿಟ್ಟ ಸುದೀಪ್

    ತ್ತೀಚೆಗೆ ನಟ ಸುದೀಪ್ (Sudeep) ವಿರುದ್ದ ನಿರ್ಮಾಪಕ ಎಂ.ಎನ್ ಕುಮಾರ್ ಸುದ್ದಿಗೋಷ್ಠಿ ಮೂಲಕ ಸಾಕಷ್ಟು ಆರೋಪ ಮಾಡಿದ್ದರು. ಸುದೀಪ್ ಹಣ ಪಡದು, ಡೇಟ್ಸ್ ನೀಡಿಲ್ಲ ಅಂತೆಲ್ಲಾ ಆರೋಪಿಸಿದ್ದರು. ಕುಮಾರ್ ಆರೋಪದ ನಂತರ ಒಗಟಿನ ರೀತಿಯಲ್ಲಿ ಟ್ವೀಟ್ ಒಂದನ್ನು ಮಾಡಿ ಸುಮ್ಮನಾಗಿದ್ದ ಸುದೀಪ್, ಇದೀಗ ಮೌನ ಮುರಿದು ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

    ವಕೀಲರ ಮೂಲಕ ನಿರ್ಮಾಪಕ ಕುಮಾರ್ (M.N. Kumar) ಅವರಿಗೆ ನೋಟಿಸ್ ಕಳುಹಿಸಿರುವ ಸುದೀಪ್, ‘ನೀವು ನನ್ನ ತಾಳ್ಮೆಯನ್ನ ಪರೀಕ್ಷಿಸಿದ್ದೀರಿ. ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನಾನು ನ್ಯಾಯಾಲಯ ಮತ್ತು ಸಂವಿಧಾನ ನಂಬಿರುವವನು. ನಾನು ನನ್ನದೇ ರೀತಿಯಲ್ಲಿ ಉತ್ತರ ಕೊಡಲು ಕಾಯುತ್ತಿದ್ದೆ. ನೀವು ಮಾಡಿರುವ ಎಲ್ಲಾ ಆರೋಪಗಳನ್ನು ಸಾಬೀತು ಪಡಿಸಿ, ಇಲ್ಲವಾದಲ್ಲಿ 10 ಕೋಟಿ ಮಾನನಷ್ಟದ (Defamation Case) ದಂಡ ಕಟ್ಟಿಕೊಡಿ’ ಎಂದಿದ್ದಾರೆ. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ

    ಸುಳ್ಳು ಆರೋಪ -ಸಾಕ್ಷಿ ರಹಿತ ವಿವಾದ ಮತ್ತು ಕುಮಾರ್ ಅವರಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ನಿರ್ಮಾಪಕ ಎಂ.ಎನ್ ಸುರೇಶ್ (MN Suresh) ಮೇಲೆಯೂ ಕಿಚ್ಚನಿಂದ ತೀವ್ರ ಕ್ರಿಮಿನಲ್ ಮೊಕದ್ದಮೆ ಹೂಡಿದ್ದು ಈ ಮೂಲಕ ಇಬ್ಬರು ನಿರ್ಮಾಪಕರ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

    ಸುದೀಪ್ ಮತ್ತು ಕುಮಾರ್ ಒಟ್ಟಾಗಿ ನಾಲ್ಕು ಸಿನಿಮಾಗಳನ್ನು ಮಾಡಿದ್ದಾರೆ. ಮತ್ತೊಂದು ಸಿನಿಮಾ ಮಾಡಲು ಇಬ್ಬರೂ ಮುಂದಾಗಿದ್ದರು ಎಂದು ಹೇಳಲಾಗುತ್ತಿದೆ. ಈ ಸಿನಿಮಾ ಸಂಬಂಧವಾಗಿ ಸುದೀಪ್ ಅವರಿಗೆ ಕುಮಾರ್ ಹಣ ನೀಡಿದ್ದರು ಎಂದು ಸ್ವತಃ ಕುಮಾರ್ ಅವರೇ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಿಚ್ಚನಿಗೆ ಇಂದು ವಿಶೇಷ ದಿನ : ಫ್ಯಾನ್ಸ್ ಸಂಭ್ರಮ

    ಕಿಚ್ಚನಿಗೆ ಇಂದು ವಿಶೇಷ ದಿನ : ಫ್ಯಾನ್ಸ್ ಸಂಭ್ರಮ

    ಕಿಚ್ಚನಿಗೆ (Kiccha) ಎಂದು ಮರೆಯಲಾಗದ ದಿನವಿಂದು. ಅಲ್ಲದೇ, ಸುದೀಪ್ (Sudeep) ಅವರ ವೃತ್ತಿ ಬದುಕಿಗೆ ಇವತ್ತಿನ ದಿನ ತುಂಬಾ ಸ್ಪೆಷಲ್. ಅದಕ್ಕೊಂದು ಕಾರಣವಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಿತ್ರರಂಗ ಪ್ರವೇಶಿಸಿ 26 ವರ್ಷ ಕಳೆದಿದೆ. ಈ ಪಯಣದಲ್ಲಿ ಏಳು ಬೀಳು ಕಂಡಿರುವ ಕೋಟಿಗೊಬ್ಬನಿಗೆ ಈ ದಿನ ಬಹಳ ವಿಶೇಷ. ಸುದೀಪ್ ಸಿನಿಕರಿಯರ್ ಗೆ ದೊಡ್ಡ ಯಶಸ್ಸು ನೀಡಿದ ‘ಹುಚ್ಚ’ (Huchcha) ಬಿಡುಗಡೆಯಾಗಿ ಸರಿಯಾಗಿ 22 ವರ್ಷ ಕಳೆದಿದೆ.

    2001ರ ಜು.6ರಂದು ರಾಜ್ಯಾದ್ಯಂತ ಹುಚ್ಚ ರಿಲೀಸ್ ಆಗಿತ್ತು. ಡಿಫರೆಂಟ್ ಆದ ಶೀರ್ಷಿಕೆ, ಪೋಸ್ಟರ್ ಗಳಲ್ಲಿ ಕಾಣಿಸಿಕೊಂಡ ಸುದೀಪ್ ಡಿಫರೆಂಟ್ ಗೆಟಪ್ ನೋಡಿ ಸಹಜವಾಗಿಯೇ ಚಿತ್ರದ ಬಗ್ಗೆ ಜನರಲ್ಲಿ ನಿರೀಕ್ಷೆ ಮೂಡಿತ್ತು. ಆ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದ್ದು ರಾಜೇಶ್ ರಾಮನಾಥ್ ಅವರ ಸುಮಧುರ ಹಾಡುಗಳು. ಜು.6ರಂದು ಚಿತ್ರಮಂದಿರದಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರ ನಿರೀಕ್ಷೆ ಹುಸಿ ಆಗಲಿಲ್ಲ. ಇದನ್ನೂ ಓದಿ:‘ಸಲಾರ್’ ಚಿತ್ರಕ್ಕೂ ‘ಕೆಜಿಎಫ್ 2’ಗೂ ಇದೆ ನಂಟು: ತಲೆಕೆಡಿಸಿಕೊಂಡ ಫ್ಯಾನ್ಸ್

    ಅದಾಗಿ 11 ವರ್ಷ ಕಳೆಯುವುದರಲ್ಲಿ ಅಂದರೆ 2012ರಲ್ಲಿ ಸುದೀಪ್ ನಿರ್ದೇಶಕ ರಾಜಮೌಳಿ ಜೊತೆ ಸಿನಿಮಾ ಮಾಡುವ ಮಟ್ಟಕ್ಕೆ ಬೆಳೆದರು. ಕನ್ನಡದಲ್ಲಿ ಸ್ಟಾರ್ ನಟನಾಗಿದ್ದ ಅವರ ಜೊತೆ ಜಕ್ಕಣ್ಣ ಕೈ ಜೋಡಿಸಿ ‘ಈಗ’  (Eega)  ಸಿನಿಮಾ ಮಾಡಿದರು. ತೆಲುಗು ಮತ್ತು ತಮಿಳಿನಲ್ಲಿ ಆ ಚಿತ್ರ ಬಿಡುಗಡೆಯಾಗಿ ಜಯಭೇರಿ ಬಾರಿಸಿತು. ‘ಈಗ’ ರಿಲೀಸ್ ಆಗಿದ್ದು ಕೂಡ ಜುಲೈ 6ರಂದು. ಅಂದರೆ ಇವತ್ತಿಗೆ 11 ವರ್ಷ. ಹೀಗಾಗಿ ಕಿಚ್ಚ ಸುದೀಪ್ ಪಾಲಿಗೆ ಜುಲೈ 6 ತುಂಬಾ ಸ್ಪೆಷಲ್.

    ಧೂಳ್ ಎಬ್ಬಿಸಿದ ಕಿಚ್ಚ 46 ಟೀಸರ್

    ಕಿಚ್ಚ ಸುದೀಪ್ ಸದ್ಯ 46ನೇ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಜುಲೈ 2ರಂದು ಯೂಟ್ಯೂಬ್ ಲೋಕಕ್ಕೆ ಎಂಟ್ರಿ ಕೊಟ್ಟ ಡಿಮೋನ್ ಟೀಸರ್ ಭಾರೀ ಸದ್ದು ಮಾಡ್ತಿದೆ. ರಕ್ತಸಿಕ್ತ ದೇಹದ ಹೆಬ್ಬುಲಿ ಘರ್ಜನೆ ಜೋರಾಗಿದೆ. ಇದೇ ಜುಲೈ 15ರಿಂದ ಸುದೀಪ್ ಹೊಸ ಚಿತ್ರದ ಶೂಟಿಂಗ್ ಅಖಾಡಕ್ಕೆ ಧುಮುಕಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]