Tag: kichen

  • ಅಡುಗೆ ಮನೆಯಲ್ಲಿ ಸೇರಿಕೊಂಡಿತ್ತು 12 ಅಡಿ ಉದ್ದ, 8 ಕೆಜಿ ತೂಕದ ಕಾಳಿಂಗ ಸರ್ಪ!

    ಅಡುಗೆ ಮನೆಯಲ್ಲಿ ಸೇರಿಕೊಂಡಿತ್ತು 12 ಅಡಿ ಉದ್ದ, 8 ಕೆಜಿ ತೂಕದ ಕಾಳಿಂಗ ಸರ್ಪ!

    ಮಡಿಕೇರಿ: ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಚೇರಂಬಾಣೆ ಸಮೀಪದ ಕೊಳಗದಾಳು ಗ್ರಾಮದ ಸಂಜು ಎಂಬವರ ಮನೆಯ ಅಡುಗೆಮನೆಯಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾಗಿದೆ.

    ಆಹಾರಕ್ಕಾಗಿ ಕಾಡಿನಿಂದ ನಾಡಿಗೆ ಬಂದ ಕಾಳಿಂಗ ಅಕಸ್ಮಾತಾಗಿ ಮನೆಯೊಳಗೆ ಸೇರಿಕೊಂಡಿತ್ತು. ಇನ್ನು ಹಾವನ್ನು ಕಂಡ ಮನೆಯವರು ಜೀವ ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ವಿಚಾರ ತಿಳಿದ ಸ್ನೇಕ್ ಶರತ್ ಮತ್ತು ತಂಡ ಒಂದು ಗಂಟೆಯ ಯಶಸ್ವಿ ಕಾರ್ಯಾಚರಣೆ ನಡೆಸಿ ಹಾವನ್ನ ರಕ್ಷಣೆ ಮಾಡಿದ್ದಾರೆ.

    ಇದುವರೆಗೆ 16 ಕಾಳಿಂಗ ಸರ್ಪ, ಒಂದು ಬಿಳಿ ನಾಗರ ಹಾವು ಸೇರಿದಂತೆ 2500ಕ್ಕೂ ಹೆಚ್ಚು ಹಾವುಗಳನ್ನ ಸೆರೆಹಿಡಿದಿರೋ ಶರತ್, ಹಾವುಗಳನ್ನ ಕಂಡರೆ ಹೊಡಿಬೇಡಿ, ಕೊಲ್ಲಬೇಡಿ ಎಷ್ಟೊತ್ತಿಗಾದ್ರೂ ಸರಿ ಎಲ್ಲಿದ್ದರೂ ನನಗೆ ಕಾಲ್ ಮಾಡಿ. ಹಾವನ್ನ ನಾವು ರಕ್ಷಣೆ ಮಾಡ್ತೇವೆ ಎಂದು ಮನವಿ ಮಾಡಿದ್ದಾರೆ.

    ಸುಮಾರು 12 ಅಡಿ ಉದ್ದದ 8 ಕೆ.ಜಿ ತೂಕದ ಈ ಭಾರೀ ಗಾತ್ರದ ಉರಗ ನೋಡಿದ ಕೂಡಲೇ ಬೆಚ್ಚಿಬೀಳಿಸುವಂತಿತ್ತು. ಬುಸುಗುಡುತ್ತಾ ಅಡುಗೆಮನೆಯಲ್ಲಿ ಅಡಗಿದ್ದ ಹಾವನ್ನ ಸೆರೆಹಿಡಿದ ಶರತ್, ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಇಂದು ವಿರಾಜಪೇಟೆ ತಾಲೂಕಿನ ಮಾಕುಟ್ಟ ಮೀಸಲು ಅರಣ್ಯಕ್ಕೆ ಬಿಡೋದಾಗಿ ತಿಳಿಸಿದ್ದಾರೆ.

  • ಪರಪ್ಪನ ಅಗ್ರಹಾರದಲ್ಲಿ ಶಶಿಕಲಾಗೆ ಅಡುಗೆ ಮನೆ- 2 ಕೋಟಿ ಲಂಚ ಪಡೆದು ಐಷಾರಾಮಿ ಸೌಲಭ್ಯ

    ಪರಪ್ಪನ ಅಗ್ರಹಾರದಲ್ಲಿ ಶಶಿಕಲಾಗೆ ಅಡುಗೆ ಮನೆ- 2 ಕೋಟಿ ಲಂಚ ಪಡೆದು ಐಷಾರಾಮಿ ಸೌಲಭ್ಯ

    ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹ ಅವ್ಯವಹಾರಗಳ ಅಡ್ಡೆ ಆಗಿದ್ದು, ಇದೀಗ ಜೈಲು ಉಪ ನಿರೀಕ್ಷಕಿ ಡಿ. ರೂಪ ಜೈಲಿನ ಅಕ್ರಮಗಳನ್ನು ಬಯಲಿಗೆಳೆದಿದ್ದಾರೆ.

    ಅಕ್ರಮ ಆಸ್ತಿ ಗಳಿಕೆ ಅರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಜಯಲಲಿತಾ ಆಪ್ತೆ ಶಶಿಕಲಾಗೆ ಪರಪ್ಪನ ಅಗ್ರಹಾರದಲ್ಲಿ ರಾಯಲ್ ಟ್ರೀಟ್‍ಮೆಂಟ್ ನೀಡಲಾಗುತ್ತಿದ್ದು, ಇದಕ್ಕಾಗಿ ಕಾರಾಗೃಹ ಮಹಾ ನಿರ್ದೇಶಕ ಸತ್ಯನಾರಾಯಣ್ ಗೆ 2 ಕೋಟಿ ಲಂಚ ನೀಡಿರುವುದಾಗಿ ಆರೋಪಿಸಲಾಗಿದೆ.

    ಲಂಚ ಪಡೆದು ಶಶಿಕಲಾಗೆ ಜೈಲಿನಲ್ಲಿ ರಾಯಲ್ ಟ್ರೀಟ್ಮೆಂಟ್ ನೀಡುವುದರ ಜೊತೆಗೆ ಪ್ರತ್ಯೇಕ ಅಡುಗೆ ಮನೆಯನ್ನು ನಿರ್ಮಿಸಿಕೊಡಲಾಗಿದೆ ಎಂದು ರೂಪ ರವರು ನೀಡಿರುವ ವರದಿಯಲ್ಲಿ ಉಲ್ಲೇಖವಾಗಿದೆ. ಇಷ್ಟೇ ಅಲ್ಲದೆ ಛಾಪಾಕಾಗದ ಹಗರಣದ ಅರೋಪಿ ಅಬ್ದುಲ್ ಕರೀಂ ಲಾಲ್ ತೆಲಗಿಗೆ ಸೇವೆ ಮಾಡಲು ಕೈಗೊಬ್ಬ, ಕಾಲಿಗೊಬ್ಬ ಕೈದಿಗಳನ್ನು ಇರಿಸಲಾಗಿದೆ.

    ಇದರ ಜೊತೆಗೆ ಜೈಲಿನಲ್ಲಿರುವ ಕೈದಿಗಳಿಗೆ ಗಾಂಜಾ ಸೇರಿದಂತೆ ಎಲ್ಲಾ ತರಹದ ಮಾದಕ ವಸ್ತುಗಳು ಸಪ್ಲೈ ಆಗುತ್ತಿದ್ದು ಜೈಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ 18 ಕೈದಿಗಳನ್ನು ಡ್ರಗ್ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟೀವ್ ರಿಪೋರ್ಟ್ ಬಂದಿದೆ.

    ಈ ವೇಳೆ ವಿಚಾರಣಧೀನ ಕೈದಿಯೊರ್ವ ನರ್ಸ್ ಜೊತೆ ಅನುಚಿತ ವರ್ತನೆ ನಡೆಸಿದ್ದಾನೆ ಎನ್ನಲಾಗಿದೆ. ಜೈಲು ಉಪ ನಿರೀಕ್ಷಕಿ ರೂಪರವರು ಇದೇ ತಿಂಗಳ 10ರಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಎಲ್ಲಾ ಅವ್ಯವಹಾರಗಳು ಬೆಳಕಿಗೆ ಬಂದಿವೆ. ರೂಪ ರವರು ಹಿರಿಯ ಅಧಿಕಾರಿಗಳಿಗೆ ನೀಡಿರುವ ವರದಿಯಿಂದ ಈ ಎಲ್ಲಾ ಅಕ್ರಮಗಳು ಬಹಿರಂಗವಾಗಿವೆ.