Tag: kickbacks

  • ದೆಹಲಿ ಮದ್ಯ ಹಗರಣದಲ್ಲಿ 100 ಕೋಟಿ ಕಿಕ್‌ಬ್ಯಾಕ್‌ ಆರೋಪ – ಕೆಸಿಆರ್ ಪುತ್ರಿ ಕವಿತಾಗೆ 10ಕ್ಕೂ ಹೆಚ್ಚು ಬಾರಿ ಕರೆ

    ದೆಹಲಿ ಮದ್ಯ ಹಗರಣದಲ್ಲಿ 100 ಕೋಟಿ ಕಿಕ್‌ಬ್ಯಾಕ್‌ ಆರೋಪ – ಕೆಸಿಆರ್ ಪುತ್ರಿ ಕವಿತಾಗೆ 10ಕ್ಕೂ ಹೆಚ್ಚು ಬಾರಿ ಕರೆ

    ನವದೆಹಲಿ: ಆಪ್ ಸರ್ಕಾರದ ಹೊಸ ಮದ್ಯ ನೀತಿಯಲ್ಲಿ(Delhi Liquor Policy Scam) ನಡೆದಿದೆ ಎನ್ನಲಾದ ಅಕ್ರಮದಲ್ಲಿ(Scam) ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್(K Chandrashekar Rao) ಅವರ ಪುತ್ರಿ ಎಂಎಲ್‌ಸಿ ಕಲ್ವಕುಂಟ್ಲ ಕವಿತಾ(Kavitha) ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ(ED) ಹೇಳಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಕವಿತಾ ಹೆಸರು ಉಲ್ಲೇಖವಾಗಿದೆ.

    ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ಅವರ ಆಪ್ತ ಸಹಾಯಕ ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಮಿತ್ ಅರೋರಾ, ಕಳೆದ ಒಂದು ವರ್ಷದಲ್ಲಿ 10ಕ್ಕೂ ಹೆಚ್ಚು ಬಾರಿ ಕವಿತಾಗೆ ದೂರವಾಣಿ ಕರೆ ಮಾಡಿದ್ದು, ಒಟ್ಟು 35 ಜನರನ್ನು ಸಂಪರ್ಕಿಸಲು ಅವರು ಪ್ರಯತ್ನಿಸಿದ್ದಾರೆ ಎಂದು ಇಡಿ ಹೇಳಿದೆ.

    ಕೆ.ಕವಿತಾ ಅಮಿತ್ ಅರೋರಾ ಅವರೊಂದಿಗೆ ಸಂವಹನ ನಡೆಸಲು ಫ್ಯಾನ್ಸಿ ನಂಬರ್‌ಗಳನ್ನು ಬಳಸಿದ್ದಾರೆ. ಪೈಕಿ ಎರಡು ಸಿಮ್‌ಗಳನ್ನು ಹೆಚ್ಚು ಬಳಸಿದ್ದು, ಈ ಬಗ್ಗೆ ಸಂಭಾಷಣೆ ನಡೆಸಲು ಅವರು ಹತ್ತಕ್ಕೂ ಹೆಚ್ಚು ಬಾರಿ IMEI ಅನ್ನು ಬದಲಾಯಿಸಿದ್ದಾರೆ. ತನಿಖೆ ವೇಳೆ ಫೋನ್‌ಗಳನ್ನು ಪರಿಶೀಲಿಸಿದಾಗ ಫೋನ್‌ಗಳಲ್ಲಿ ಡೇಟಾವನ್ನು ಅಳಿಸಿ ಹಾಕಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

    ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಎಎಪಿ ನಾಯಕ ವಿಜಯ್ ನಾಯರ್ ಅವರು ಕೆಲವು ಉದ್ಯಮಿಗಳು ಮತ್ತು ರಾಜಕಾರಣಿಗಳ ನಿಯಂತ್ರಣದಲ್ಲಿರುವ ‘ದಕ್ಷಿಣ ಗುಂಪಿನಿಂದ’ 100 ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪವಿದೆ. ಇದನ್ನೂ ಓದಿ: ಸರ್ಕಾರದಿಂದ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಇಲ್ಲ: ಶಶಿಕಲಾ ಜೊಲ್ಲೆ

    ಇಡಿ ಆರೋಪಗಳನ್ನು ಕೆ. ಕವಿತಾ ಬಲವಾಗಿ ತಳ್ಳಿಹಾಕಿದ್ದಾರೆ, ತೆಲಂಗಾಣದಲ್ಲಿ ಆಡಳಿತಾರೂಢ ಟಿಆರ್‌ಎಸ್(TRS) ಅನ್ನು ಅಸ್ಥಿರಗೊಳಿಸುವ ಪ್ರಯತ್ನವಲ್ಲದೆ ಮತ್ತೇನಲ್ಲ ಎಂದು ಕಿಡಿಕಾರಿದ್ದಾರೆ. ಚುನಾವಣಾ ರಾಜ್ಯಗಳಲ್ಲಿ ಬಿಜೆಪಿ ನಾಯಕರಿಗಿಂತ ಮುನ್ನ ಇಡಿ ಮೊದಲು ತಲುಪಲಿದ್ದು ನಾವು ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

    ಇಡಿ ಯಾವುದೇ ತನಿಖೆ ನಡೆಸಿದರೂ ವಿಚಾರಣೆಯಲ್ಲಿ ಭಾಗಿಯಾಗಿ ಉತ್ತರಿಸಲು ಸಿದ್ದವಿದ್ದೇವೆ ಆದರೆ ಮಾಧ್ಯಮಗಳಿಗೆ ಆಯ್ದ ಮಾಹಿತಿಯನ್ನು ಸೋರಿಕೆ ಮಾಡುವ ಮೂಲಕ ನಾಯಕರ ಇಮೇಜ್‌  ಹಾಳು ಮಾಡುವ ಪ್ರಯತ್ನ ಮಾಡಲಾಗುತ್ತಿದೆ. ಇದನ್ನು ಜನರು ಒಪ್ಪುವುದಿಲ್ಲ ಎಂದು ಇಡಿ ವಿರುದ್ಧ ಸಿಟ್ಟು ಹೊರಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಫೆಲ್ ಯುದ್ಧ ವಿಮಾನ ಖರೀದಿ – ಸುಸೇನ್ ಗುಪ್ತಾ  ಮೇಲೆ ಲಂಚ ಸ್ವೀಕಾರ ಆರೋಪ

    ರಫೆಲ್ ಯುದ್ಧ ವಿಮಾನ ಖರೀದಿ – ಸುಸೇನ್ ಗುಪ್ತಾ ಮೇಲೆ ಲಂಚ ಸ್ವೀಕಾರ ಆರೋಪ

    ನವದೆಹಲಿ: ಬಹುಕೋಟಿ ರಫೆಲ್ ಯುದ್ಧ ವಿಮಾನ ಖರೀದಿಗಾಗಿ ಮಧ್ಯವರ್ತಿ ಸುಸೇನ್ ಗುಪ್ತಾಗೆ ಫ್ರಾನ್ಸ್ ನ ಡಸಾಲ್ಟ್ ಏವಿಯೇಷನ್ 64 ಕೋಟಿ ರೂಪಾಯಿ ಲಂಚ ನೀಡಿತ್ತು ಎಂಬ ಸ್ಫೋಟಕ ವರದಿಯನ್ನು ಫ್ರಾನ್ಸ್ ನ ಮೀಡಿಯಾಪಾರ್ಟ್ ಸಂಸ್ಥೆ ಬಿಚ್ಚಿಟ್ಟಿದೆ.

    ಈ ಲಂಚ ಸಂದಾಯದ ಬಗ್ಗೆ ಮಾರಿಷಸ್‍ನ ಅಟಾರ್ನಿ ಜನರಲ್ ಅವರೇ ಖುದ್ದು ಪತ್ರ ಬರೆದಿದ್ದರೂ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನಿಖೆ ನಡೆಸಲಿಲ್ಲ ಎಂಬ ಅಂಶ ವರದಿಯಲ್ಲಿ ಉಲ್ಲೇಖವಾಗಿದೆ. 36 ರಫೆಲ್ ಯುದ್ಧ ವಿಮಾನಗಳ ಡೀಲ್ ಕುದುರಿಸುವ ಸಲುವಾಗಿ 2009ರಿಂದ 2012ರ ಅವಧಿಯಲ್ಲಿ ಮಾರಿಷಸ್‍ನಲ್ಲಿರುವ ಗುಪ್ತಾಗೆ ಸೇರಿದ ಕಂಪನಿ ಇಂಟರ್‍ಸ್ಟೆಲರ್ ಮೂಲಕ ಕಮಿಷನ್ ಪಾವತಿ ಮಾಡಲಾಗಿತ್ತು ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: 60 ಸಾವಿರ ಕೋಟಿ ರಫೇಲ್ ಡೀಲ್‍ನಲ್ಲಿ ಕೋಟಿ ಕೋಟಿ ಗಿಫ್ಟ್ ಸಿಕ್ಕಿದ್ಯಾರಿಗೆ – ಕಾಂಗ್ರೆಸ್ ಪ್ರಶ್ನೆ

    ಬೋಗಸ್ ಬಿಲ್‍ಗಳ ಮೂಲಕ ಈ ಹಣ ವರ್ಗಾವಣೆ ಮಾಡಲಾಗಿತ್ತು. ರಫೆಲ್ ಡೀಲ್ ಮೇಲೆ ಪ್ರಭಾವ ಬೀರುವ ಸಲುವಾಗಿ ಫ್ರಾನ್ಸ್ ಥೇಲ್ಸ್ ಕಂಪನಿ ಕೂಡಾ ಗುಪ್ತಾಗೆ ಕಮಿಷನ್ ಸಂದಾಯ ಮಾಡಿತ್ತು. 2018ರಲ್ಲೇ ಈ ಅಕ್ರಮದ ಬಗ್ಗೆ ದಾಖಲೆಗಳಿದ್ದರೂ ಸಿಬಿಐ ಮತ್ತು ಇಡಿ ತನಿಖೆ ನಡೆಸಲಿಲ್ಲ ಎಂದು ಮೀಡಿಯಾ ಪಾರ್ಟ್ ವರದಿಯಲ್ಲಿ ಉಲ್ಲೇಖೆಸಿದೆ. ಇದನ್ನೂ ಓದಿ: ರಫೇಲ್ ಡೀಲ್‍ನಲ್ಲಿ ನಿಮಗೆ ಎಷ್ಟು ಕಮೀಷನ್ ಸಿಕ್ಕಿದೆ: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

    ಈ ಹಿಂದೆ ಕೂಡ  ಮೀಡಿಯಾಪಾರ್ಟ್ ವರದಿ ಮಾಡಿರುವ ಪ್ರಕಾರ, 2016ರಲ್ಲಿ ಭಾರತ ಮತ್ತು ಫ್ರಾನ್ಸ್ ನಡುವೆ ಯುದ್ಧ ವಿಮಾನ ಖರೀದಿ ವ್ಯವಹಾರ ನಡೆದಿತ್ತು. ಆ ವೇಳೆ ಫ್ರಾನ್ಸಿನ ಡಸಾಲ್ಟ್ ಏವಿಯೇಷನ್ ಭಾರತದ ಓರ್ವ ಮಧ್ಯವರ್ತಿಗೆ 1.1 ಮಿಲಿಯನ್ ಯುರೋ ಗಿಫ್ಟ್ ರೂಪದಲ್ಲಿ ನೀಡಿದೆ. 2017ರ ಡಸಾಲ್ಟ್ ಸಮೂಹದ ಲೆಕ್ಕ ಪತ್ರಗಳನ್ನ ಪರಿಶೀಲಿಸಿದಾಗ ಮಧ್ಯವರ್ತಿ ಗ್ರಾಹಕರಿಗೆ ಗಿಫ್ಟ್ ರೂಪದಲ್ಲಿ 1.1 ಮಿಲಿಯನ್ ವರ್ಗಾವಣೆ ಆಗಿರೋದು ಬೆಳಕಿಗೆ ಬಂದಿದೆ ಎಂದು ತಿಳಿಸಿತ್ತು. ಇದನ್ನೂ ಓದಿ: ಕೈ ಅವರದು, ಕಾಲು ಅವರದು, ಎಲ್ಲಾದರೂ ಇಟ್ಟುಕೊಳ್ಳಲಿ: ಹ್ಯಾರಿಸ್