Tag: Kidambi Srikanth

  • ಥಾಮಸ್ ಕಪ್ ಗೆದ್ದ ಭಾರತ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ: ಮೋದಿ

    ಥಾಮಸ್ ಕಪ್ ಗೆದ್ದ ಭಾರತ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ: ಮೋದಿ

    ನವದೆಹಲಿ: ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ 43 ವರ್ಷಗಳ ಬಳಿಕ ಚೊಚ್ಚಲ ಬಾರಿಗೆ ಚಾಂಪಿಯನ್ ಆದ ಭಾರತದ ಪುರುಷರ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್ ಮೂಲಕ ಸಂಭ್ರಮ ಹಂಚಿಕೊಂಡಿದ್ದಾರೆ.‌

    ಟ್ವೀಟ್‍ನಲ್ಲಿ ಏನಿದೆ?
    ಭಾರತ ಬ್ಯಾಡ್ಮಿಂಟನ್ ತಂಡ ಇತಿಹಾಸ ಬರೆದಿದೆ. ಥಾಮಸ್ ಕಪ್ ಗೆದ್ದ ಭಾರತ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ. ನಮ್ಮ ಬಲಿಷ್ಠ ತಂಡಕ್ಕೆ ಅಭಿನಂದನೆಗಳು ಮತ್ತು ಅವರ ಮುಂದಿನ ಸಾಧನೆಗಳಿಗೆ ಶುಭಾಶಯಗಳು. ಈ ಗೆಲುವು ಮುಂಬರುವ ಹಲವು ಕ್ರೀಡಾ ಪಟುಗಳಿಗೆ ಪ್ರೇರಣೆ ನೀಡಲಿದೆ. ಇದನ್ನೂ ಓದಿ: ಥಾಮಸ್‌ ಕಪ್‌ ಬ್ಯಾಡ್ಮಿಂಟನ್‌ – ಭಾರತ ಚಾಂಪಿಯನ್‌, ಇತಿಹಾಸ ಸೃಷ್ಟಿ

    1 ಕೋಟಿ ರೂ. ಬಹುಮಾನ:
    43 ವರ್ಷಗಳ ಬಳಿಕ ಬ್ಯಾಡ್ಮಿಂಟನ್‍ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭಾರತದ ಪುರುಷರ ತಂಡಕ್ಕೆ 1 ಕೋಟಿ ರೂ. ನೀಡಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಘೋಷಿಸಿದ್ದು, ಇದೊಂದು ಐತಿಹಾಸಿಕ ಸಾಧನೆ. ದೇಶಕ್ಕೆ ಹೆಮ್ಮೆ ತಂದಿದೆ ಎಂದು ಸಂಭ್ರಮಪಟ್ಟರು.

    43 ವರ್ಷಗಳಿಂದಲೂ ಟೂರ್ನಿಯಲ್ಲಿ ಆಡುತ್ತಿರುವ ಭಾರತ ಈ ಬಾರಿ ಚೊಚ್ಚಲ ಟ್ರೋಫಿಯನ್ನು ಗೆದ್ದುಕೊಂಡಿದೆ. ಅದು 14 ಬಾರಿ ಚಾಂಪಿಯನ್ ಇಂಡೋನೇಷ್ಯಾದ ವಿರುದ್ಧ ಗೆದ್ದು ಈ ಸಾಧನೆ ಮಾಡಿದೆ ಎನ್ನುವುದು ವಿಶೇಷ. ಈ ಮೂಲಕ ಥಾಮಸ್ ಕಪ್ ಗೆದ್ದ 6ನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಈ ಹಿಂದೆ 1979ರಲ್ಲಿ ಕಂಚಿನ ಪದಕ ಗೆದ್ದಿದ್ದೇ ಈವರೆಗೆ ಟೂರ್ನಿಯಲ್ಲಿ ಭಾರತದ ಶ್ರೇಷ್ಠ ಸಾಧನೆ ಎನಿಸಿತ್ತು. ಇದನ್ನೂ ಓದಿ: ಉದ್ದನೆ ಕೂದಲಿನ, ತುಟಿಗೆ ಬಣ್ಣ ಹಚ್ಚಿ ದೈತ ದಾಂಡಿಗನಾಗಿ ಗಮನಸೆಳೆದ ಸೈಮಂಡ್ಸ್ ಇನ್ನು ನೆನಪು ಮಾತ್ರ

    ಮೊದಲ ಸಿಂಗಲ್ಸ್ ಪಂದ್ಯದಲ್ಲಿ ಲಕ್ಷ್ಯ ಸೆನ್ ಜಿಂಟಿಂಗ್ ವಿರುದ್ಧ ಜಯಗಳಿಸಿದರು. ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಜಿಂಟಿಗ್ ಮೊದಲ ಪಂದ್ಯವನ್ನು 8-21 ರಿಂದ ಗೆದ್ದುಕೊಂಡರೂ ಲಕ್ಷ್ಯ ಸೆನ್ ನಂತರ ಎರಡು ಪಂದ್ಯವನ್ನು 21-17, 21-16 ಗೇಮ್‍ಗಳಿಂದ ಗೆದ್ದುಕೊಳ್ಳುವ ಮೂಲಕ ಭಾರತಕ್ಕೆ ಮೊದಲ ಮುನ್ನಡೆಯನ್ನು ತಂದುಕೊಟ್ಟರು.

    ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‍ಸಾಯಿರಾಜ್ ರಾಂಕಿರೆಡ್ಡಿ, ಚಿರಾಗ್ ಶೆಟ್ಟಿ ಅವರು ಮೊಹಮ್ಮದ್ ಅಹ್ಸಾನ್ ಮತ್ತು ಕೆವಿನ್ ಸುಕಮುಲ್ಜೊ ಜೊತೆ ಮೊದಲ ಪಂದ್ಯವನ್ನು 18-21 ರಿಂದ ಸೋತಿದ್ದರೂ ನಂತರ 23-21, 21-19 ಗೇಮ್‍ಗಳಿಂದ ಗೆಲ್ಲುವ ಮೂಲಕ ಗೆಲುವಿನ ಸಮೀಪ ತಂದರು. ಇದನ್ನೂ ಓದಿ: ಗುಜರಾತ್ ಗುನ್ನಕ್ಕೆ ಚೆನ್ನೈ ಚಿಂದಿ –  ಟೈಟಾನ್ಸ್‌ಗೆ 7 ವಿಕೆಟ್‌ಗಳ ಜಯ

    ಮೂರನೇ ಪಂದ್ಯದಲ್ಲಿ ಶ್ರೀಕಾಂತ್ ಕಿಡಂಬಿ ಅವರು ಜೊನಾಟನ್ ಕ್ರಿಸ್ಟಿ ಅವರ ವಿರುದ್ಧ 21-15, 23-21 ನೇರ ಸೆಟ್‍ಗಳಿಂದ ಗೆಲುವು ಸಾಧಿಸಿ ಭಾರತಕ್ಕೆ ಟ್ರೋಫಿಯನ್ನು ಗೆದ್ದುಕೊಟ್ಟರು.

    ಈ ಸಾಧನೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಷ್ಟ್ರೀಯ ಕೋಚ್ ಹಾಗೂ ಭಾರತೀಯ ಬ್ಯಾಡ್ಮಿಂಟನ್ ಸಂಸ್ಥೆ ಉಪಾಧ್ಯಕ್ಷ ಪುಲ್ಲೇಲ ಗೋಪಿಚಂದ್, ಇದು ನಿಜವಾಗಿಯೂ ದೊಡ್ಡ ಸಾಧನೆ. 1983ರಲ್ಲಿ ಭಾರತ ಕ್ರಿಕೆಟ್ ವಿಶ್ವಕಪ್ ಗೆದ್ದಂತೆ ಆಗಿದೆ. ಇಂಡೋನೇಷ್ಯಾ ಬ್ಯಾಡ್ಮಿಂಟನ್ ಮತ್ತು ಥಾಮಸ್ ಕಪ್‍ನಲ್ಲಿ ದೊಡ್ಡ ಖ್ಯಾತಿ ಮತ್ತು ಪರಂಪರೆಯನ್ನು ಹೊಂದಿದೆ. ಈ ತಂಡವನ್ನು ಸೋಲಿಸುವ ಮೂಲಕ ವಿಶ್ವ ಮಟ್ಟದಲ್ಲಿ ನಾವು ಬಲಿಷ್ಠವಾಗುತ್ತಿದ್ದೇವೆ ಎಂಬುದಕ್ಕೆ ಸಾಕ್ಷಿ ಎಂದರು.

    ನಾವು ಸೈನಾ ಮತ್ತು ಸಿಂಧು ಅವರನ್ನು ಮಹಿಳಾ ಶಕ್ತಿ ಎಂದು ಕರೆಯಲ್ಪಟ್ಟಿದ್ದೇವೆ, ಆದರೆ ಈಗ ನಮ್ಮ ಹುಡುಗರು ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ಈ ಸಾಧನೆ ಮುಂದಿನ ದಿನಗಳಲ್ಲಿ ತಮ್ಮ ಮಕ್ಕಳು ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುತ್ತದೆ ಎಂದು ನಾನು ಭಾವಿಸುತ್ತೇನೆ.  ಭಾರತದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಸವಾಲು ಇದೆ. ಕ್ರೀಡಾಪಟುಗಳಿಗೆ ಬ್ಯಾಡ್ಮಿಂಟನ್ ಸಂಸ್ಥೆ ಹಾಗೂ ಪ್ರಧಾನಿ ಮೋದಿ ಅವರ ಬೆಂಬಲಕ್ಕಾಗಿ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ನುಡಿದರು.

  • ಶಟ್ಲರ್ ಶ್ರೀಕಾಂತ್‍ಗೆ ಕೊಟ್ಟ ಮಾತು ಉಳಿಸಿಕೊಂಡ ಧೋನಿ!

    ಶಟ್ಲರ್ ಶ್ರೀಕಾಂತ್‍ಗೆ ಕೊಟ್ಟ ಮಾತು ಉಳಿಸಿಕೊಂಡ ಧೋನಿ!

    ಹೈದರಾಬಾದ್: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಭಾರತದ ಟಾಪ್ ಶಟ್ಲರ್ ಕಿಡಂಬಿ ಶ್ರೀಕಾಂತ್ ಅವರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ತಮ್ಮ ಹಸ್ತಾಕ್ಷರ ಹೊಂದಿರುವ ಬ್ಯಾಟನ್ನು ಉಡುಗೊರೆಯಾಗಿ ನೀಡಿದ್ದಾರೆ.

    ಧೋನಿ ಹಸ್ತಾಕ್ಷರ ಹೊಂದಿರುವ ಬ್ಯಾಟನ್ನು ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‍ಕೆ ಪ್ರಸಾದ್ ಅವರು ಶ್ರೀಕಾಂತ್ ಅವರಿಗೆ ಹಸ್ತಾಂತರಿಸಿದ್ದಾರೆ. ಸದ್ಯ ವಿಶ್ವ ಬ್ಯಾಡ್ಮಿಂಟನ್ ನಲ್ಲಿ ನಾಲ್ಕನೇ ಶ್ರೇಯಾಂಕ ಹೊಂದಿರುವ ಶ್ರೀಕಾಂತ್, ಧೋನಿಯವರ ಕೊಡುಗೆ ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.

    ಅಂದಹಾಗೇ ಶ್ರೀಕಾಂತ್ ಈ ಹಿಂದೆ ಧೋನಿಯ ಬಳಿ ಬ್ಯಾಟ್ ಕೊಡುಗೆ ನೀಡುವಂತೆ ಕೇಳಿದ್ದರು. ಅದಕ್ಕೆ ಬ್ಯಾಡ್ಮಿಂಟನ್ ನಲ್ಲಿ ನಂ.1 ಸ್ಥಾನಕ್ಕೆ ತಲುಪಿದರೆ ಗಿಫ್ಟ್ ಕೊಡುವುದಾಗಿ ಧೋನಿ ಭರವಸೆ ನೀಡಿದ್ದರು. ಇದರಂತೆ ಕಳೆದ ಏಪ್ರಿಲ್ ನಲ್ಲಿ ಶ್ರೀಕಾಂತ್ ವಿಶ್ವ ಶ್ರೇಯಾಂಕ ಪಟ್ಟಿಯಲ್ಲಿ ನಂ.1 ಸ್ಥಾನ ಪಡೆದಿದ್ದರು. ಅಲ್ಲದೇ ಭಾರತದಿಂದ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದರು. ಸದ್ಯ ಧೋನಿ ತಾವು ಕೊಟ್ಟ ಮಾತಿನಂತೆ ಶ್ರೀಕಾಂತ್ ಅವರಿಗೆ ಗಿಫ್ಟ್ ನೀಡಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಶ್ರೀಕಾಂತ್, ಧೋನಿ ಅವರು ಬ್ಯಾಟ್ ಗಿಫ್ಟ್ ನೀಡಿರುವುದು ಹೆಚ್ಚು ಸಂತಸ ತಂದಿದೆ. ಇದು ತನ್ನ ಜೀವನದ ಅತ್ಯಂತ ಸ್ಮರಣೀಯ ದಿನ ಎಂದು ತಿಳಿಸಿದ್ದಾರೆ.

    ಸದ್ಯ ಹೈದರಾಬಾದ್ ನ ಗೋಪಿಚಂದ್ ಬ್ಯಾಡ್ಮಿಂಟನ್ ಆಕಾಡೆಮಿಯಲ್ಲಿ ತರಬೇತಿಯಲ್ಲಿ ನಿರತರಾಗಿರುವ ಶ್ರೀಕಾಂತ್ ಅವರಿಗೆ ಎಂಎಎಸ್‍ಕೆ ಪ್ರಸಾದ್ ಅವರು ಬ್ಯಾಟ್ ಹಸ್ತಾಂತರಿಸುವ ವೇಳೆ ಬ್ಯಾಡ್ಮಿಂಟನ್ ರಾಷ್ಟ್ರೀಯ ತಂಡದ ಕೋಚ್ ಗೋಪಿಚಂದ್, ಶ್ರೀಕಾಂತ್ ಅವರ ತಂದೆ ಕೆವಿಎಸ್ ಕೃಷ್ಣ ಸೇರಿದಂತೆ ಹಲವರು ಹಾಜರಿದ್ದರು.

  • ಒಲಿಂಪಿಕ್ಸ್ ಚಾಂಪಿಯನ್ ಸೋಲಿಸಿ ಆಸ್ಟ್ರೇಲಿಯನ್ ಓಪನ್ ಗೆದ್ದ ಶ್ರೀಕಾಂತ್

    ಒಲಿಂಪಿಕ್ಸ್ ಚಾಂಪಿಯನ್ ಸೋಲಿಸಿ ಆಸ್ಟ್ರೇಲಿಯನ್ ಓಪನ್ ಗೆದ್ದ ಶ್ರೀಕಾಂತ್

    ಸಿಡ್ನಿ: ಭಾರತದ ಕಿಡಂಬಿ ಶ್ರೀಕಾಂತ್ ರಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತ ಚೀನಾದ ಆಟಗಾರ ಚೆಂಗ್ ಲಾಂಗ್ ಅವರನ್ನು ಸೋಲಿಸಿ ಆಸ್ಟ್ರೇಲಿಯನ್ ಓಪನ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

    ವಿಶ್ವದ 11ನೇ ಶ್ರೇಯಾಂಕದ ಶ್ರೀಕಾಂತ್ ಅವರು ವಿಶ್ವದ ಮಾಜಿ ನಂಬರ್ ಒನ್ ಪ್ರಸ್ತುತ 4ನೇ ಶ್ರೇಯಾಂಕದ ಚೀನಾದ ಚೆಂಗ್ ಲಾಂಗ್ ಅವರನ್ನು 21-10, 21-14 ಅಂತರದಲ್ಲಿ ಸೋಲಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದರು.

    ಕ್ವಾರ್ಟರ್ ಹಾಗೂ ಸೆಮಿಫೈನಲ್‍ನಲ್ಲಿ ಚೀನಾ ಹಾಗೂ ಮಲೇಷ್ಯಾ ಆಟಗಾರರ ವಿರುದ್ಧ ಜಯಸಾಧಿಸಿ ಫೈನಲ್‍ಗೆ ಎಂಟ್ರಿಯಾಗಿದ್ದ ಕಿಡಂಬಿ ಆರಂಭದಿಂದಲೇ ಡ್ರಾಪ್ ಮತ್ತು ಸ್ಮಾಷ್ ಹೊಡೆಯುವ ಮೂಲಕ ಚೆಂಗ್ ಲಾಂಗ್ ಅವರನ್ನು ಸುಲಭವಾಗಿ ಮಣಿಸಿದರು.

    ಈ ವರ್ಷದ ಅತ್ಯುತ್ತಮ ಫಾರ್ಮ್ ನಲ್ಲಿರುವ  24 ವರ್ಷದ ಶ್ರೀಕಾಂತ್ ಏಪ್ರಿಲ್‍ನಲ್ಲಿ ಸಿಂಗಾಪುರ ಓಪನ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಭಾರತದ ಸಾಯಿ ಪ್ರಣೀತ್ ವಿರುದ್ಧ ಸೋತಿದ್ದರು. ಜೂನ್ 18ರಂದು ಇಂಡೋನೇಷ್ಯಾ ಓಪನ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದ ಶ್ರೀಕಾಂತ್ ಒಂದು ವಾರದಲ್ಲಿ ಮತ್ತೊಂದು ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

    ಚೆಂಗ್ ಲಾಂಗ್ ಮತ್ತು ಶ್ರೀಕಂತ್ ನಡುವೆ ಇದೂವರೆಗೆ 6 ಪಂದ್ಯಗಳು ನಡೆದಿದ್ದು, ಇದೇ ಮೊದಲ ಬಾರಿಗೆ ಕಿಡಂಬಿ ಜಯಗಳಿಸುವ ಮೂಲಕ 75 ಲಕ್ಷ ಡಾಲರ್(ಅಂದಾಜು 4.83 ಕೋಟಿ ರೂ.) ನಗದು ಬಹುಮಾನ ಗೆದ್ದಿದ್ದಾರೆ.

     

    https://twitter.com/TrollywoodOffl/status/878870639842545664