Tag: Kikkodi

  • ಲಸಿಕೆ ವಿತರಣೆ – ಬೆಳಗಾವಿ ಜಿಲ್ಲೆಯಲ್ಲಿ ಹುಕ್ಕೇರಿ ನಂಬರ್‌ 1

    ಲಸಿಕೆ ವಿತರಣೆ – ಬೆಳಗಾವಿ ಜಿಲ್ಲೆಯಲ್ಲಿ ಹುಕ್ಕೇರಿ ನಂಬರ್‌ 1

    ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಾದ್ಯಂತ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೊದಲ ಕೋವಿಡ್ ಲಸಿಕೆ ನೀಡುವಲ್ಲಿ ಬೆಳಗಾವಿ ಜಿಲ್ಲೆಯಲ್ಲಿಯೇ ಹುಕ್ಕೇರಿ ತಾಲೂಕು 100ಕ್ಕೆ ನೂರು ಸ್ಥಾನ ಪಡೆಯುವ ಮೂಲಕ ಪ್ರಥಮ ಸ್ಥಾನದಲ್ಲಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ಉದಯ ಕುಡಚಿ ಹೇಳಿದರು.

    ಹುಕ್ಕೇರಿ ಪಟ್ಟಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿಯವರೆಗೆ 18 ವರ್ಷ ಮೇಲ್ಪಟ್ಟವರಿಗೆ 2,97,145 ಜನರಿಗೆ ಲಸಿಕೆ ನೀಡುವ ಗುರಿ ಇಡಲಾಗಿತ್ತು. ಆದರೆ ಇಲ್ಲಿ 2,97,378 ಜನರಿಗೆ ಮೊದಲನೇ ಡೋಸ್ ಲಸಿಕೆ ನೀಡಿರುವ ಹೆಗ್ಗಳಿಕೆಗೆ ಹುಕ್ಕೇರಿ ತಾಲೂಕು ಪಾತ್ರವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆಗೆ ಮತಾಂತರ ಯತ್ನವೇ ಕಾರಣ- ಪೊಲೀಸರ ತನಿಖೆಯಿಂದ ಬಯಲು

    2,16,939 ಜನರಿಗೆ ಎರಡನೇ ಲಸಿಕೆ ನೀಡಿದ್ದು, ಶೇ.73ರಷ್ಟು ಪ್ರಗತಿ ಸಾಧಿಸಲಾಗಿದೆ. ತಾಲೂಕಿನಲ್ಲಿ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿ ಶ್ರಮಿಸಿದ್ದಾರೆ ಎಂದರು.

    CORONA

    ವ್ಯಾಕ್ಸಿನ್ ಪಡೆದುಕೊಂಡವರಲ್ಲಿ ರೋಗ ನಿರೋಧಕ ಹೆಚ್ಚಿರುವುದು ಈಗಾಗಲೇ ದೃಢಪಟ್ಟಿದೆ. ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಈ ಬಾರಿ ಲಸಿಕಾ ಅಭಿಯಾನದಲ್ಲಿ ಸಂಪೂರ್ಣವಾಗಿ ತೊಡಗಿಸಿ ಕೊಂಡಿದ್ದಾರೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಕೈಗಳ ಶುಚಿತ್ವ ನಮ್ಮ ಜೀವನ ಶೈಲಿಯ ಅಂಗವಾಗಬೇಕು. ಜನದಟ್ಟಣೆಯಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸದಿರುವುದು ಮತ್ತು ಅಂತಹ ಕಾರ್ಯಕ್ರಮಗಳನ್ನು ಸಂಘಟಿಸದೇ ಸರಳ ಆಚರಣೆಗೆ ಆದ್ಯತೆ ನೀಡುವುದು ಅಪಾಯದಿಂದ ಪಾರಾಗುವ ಪ್ರಮುಖ ದಾರಿ ಎಂದು ಹೇಳಿದರು. ಇದನ್ನೂ ಓದಿ: ಅರಿಶಿನ ಶಾಸ್ತ್ರ ಸಂಭ್ರಮದ ಫೋಟೋ ಹಂಚಿಕೊಂಡ ಕತ್ರಿನಾ ಕೈಫ್ 

    ಈ ವೇಳೆ ಹುಕ್ಕೇರಿ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಮಹಾಂತೇಶ್ ನರಸನ್ನವರ, ಸಂಕೇಶ್ವರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದತ್ತಾತ್ರೇಯ ದೊಡಮನಿ, ಅಮ್ಮಣಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸೌಮ್ಯಾ ಸಜ್ಜನ ಮತ್ತಿತರರು ಉಪಸ್ಥಿತರಿದ್ದರು.

  • ಅಣ್ಣ-ತಮ್ಮಂದಿರೂ ಎಲ್ಲರೂ ಒಂದೇ ಎಂಬ ಮನಸ್ಥಿತಿಯಿಂದ ಹೊರಗೆ ಬನ್ನಿ: ಸತೀಶ್ ಜಾರಕಿಹೊಳಿ

    ಅಣ್ಣ-ತಮ್ಮಂದಿರೂ ಎಲ್ಲರೂ ಒಂದೇ ಎಂಬ ಮನಸ್ಥಿತಿಯಿಂದ ಹೊರಗೆ ಬನ್ನಿ: ಸತೀಶ್ ಜಾರಕಿಹೊಳಿ

    ಚಿಕ್ಕೋಡಿ: ಅಣ್ಣ ತಮ್ಮಂದಿರೂ ಎಲ್ಲರೂ ಒಂದೇ ಎಂಬ ಮನಸ್ಥಿತಿಯಿಂದ ಹೊರಗೆ ಬರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಜನರಲ್ಲಿ ಮನವಿ ಮಾಡಿದರು.

    ರಾಯಭಾಗದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ನನ್ನನ್ನು ಅಣ್ಣ-ತಮ್ಮಂದಿರು ಸೋಲಿಸಿದ್ದಾರೆ. ಅದಕ್ಕೆ ಎಲ್ಲರೂ ಅಣ್ಣ-ತಮ್ಮಂದಿರೂ ಒಂದೇ ಎಂಬ ಭಾವನೆಯಿಂದ ಹೊರ ಬನ್ನಿ ಎಂದು ಕೇಳಿಕೊಂಡರು. ರಮೇಶ್ ಮತ್ತು ಲಖನ್ ಜಾರಕಿಹೊಳಿ ಅವರನ್ನು ಗೆಲ್ಲಿಸುವುದು ನನ್ನ ಕನಸಿನಲ್ಲಿಯೂ ಸಹ ಇಲ್ಲ ಎಂದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ 7, ಜೈಪುರದಲ್ಲಿ 9 ಜನರಿಗೆ ಓಮಿಕ್ರಾನ್- 21ಕ್ಕೆ ಏರಿದ ಕೇಸ್ 

    ಪಕ್ಷೇತರ ಅಭ್ಯರ್ಥಿಯ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಂತೆ ಲಖನ್ ಜಾರಕಿಹೊಳಿ ಜಾಗದಲ್ಲಿ ವಿವೇಕರಾವ್ ಪಾಟೀಲ್ ಸ್ಪರ್ಧೆ ಮಾಡಿದ್ದರೆ ಈ ಗೊಂದಲವೇ ಇರುತ್ತಿರಲಿಲ್ಲ. ಸಚಿವ ಗೋವಿಂದ ಕಾರಜೋಳ ಅವರು ಜನವರಿ 10ಕ್ಕೆ ಚುನಾವಣೆ ಎಂದು ತಿಳಿದುಕೊಂಡಿರಬೇಕು. ಇನ್ನು ಕೂಡ ಅವರು ಎಲ್ಲೂ ಸಹ ಪತ್ತೆಯಾಗಿಲ್ಲ. ಉಮೇಶ್ ಕತ್ತಿ, ಸವದಿ ಬೆಂಗಳೂರಿನಲ್ಲಿದ್ದಾರೆ. ಬಿಜೆಪಿಯಿಂದ ಇಬ್ಬರು ಸ್ಪರ್ಧೆ ಮಾಡಿದ್ದಾರೆ. ಒಬ್ಬರು ಎ ಟೀಮ್ ಇನ್ನೊಬ್ಬರು ಬಿ ಟೀಮ್. ಸದ್ಯ ಗೊಂದಲ ಮಾಡೋರೆಲ್ಲರೂ ಈಗ ಬಿಜೆಪಿಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

    ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಹೀನಾಯವಾಗಿ ಸೋಲಿಸುವಲ್ಲಿ ಅವರು ಯಶಸ್ವಿಯಾದರು. ಆದರೆ ಈ ಚುನಾವಣೆಯಲ್ಲಿ ನಾಲ್ಕು ಸಾವಿರ ಮತಗಳಿಂದ ನಾವು ಗೆಲುವು ಸಾಧಿಸುತ್ತೇವೆ. ಅಣ್ಣ ತಮ್ಮಂದಿರೂ ಎಲ್ಲರೂ ಒಂದೇ ಎಂಬ ಮನಸ್ಥಿತಿಯಿಂದ ಹೊರಗೆ ಬರಬೇಕು. ಕಳೆದ ಬಾರಿ ನನ್ನ ಅವರು ಸೋಲಿಸಿದ್ದಾರೆ. ಅದನ್ನು ಈಗ ನಾವು ಪಡೆದುಕೊಳ್ಳಬೇಕಾಗಿದೆ ಎಂದು ಪ್ರಚೋದಿಸಿದರು. ಇದನ್ನೂ ಓದಿ: ಜರತಾರಿ ಸೀರೆ, ಆಭರಣ ಧರಿಸಿ ರೈಲ್ವೇ ನಿಲ್ದಾಣದಲ್ಲಿ ಊಟ ಹಂಚಿದ ಮಹಿಳೆ

    ಗೋಕಾಕದಲ್ಲಿ ನಾನೇ ಏಜೆಂಟ್ ಆಗುತ್ತಿದ್ದೇನೆ. ಏಜೆಂಟ್ ಆಗದಿದ್ದರೆ ನೂರಕ್ಕೆ ನೂರು ವೋಟ್ ಲಖನ್ ಅವರಿಗೆ ಬೀಳುತ್ತವೆ. ಹೀಗಾಗಿ ನಾನು ಏಜೆಂಟ್ ಆಗುತ್ತಿದ್ದೇನೆ. ನನ್ನ ಮಕ್ಕಳು ಸಹ ಬೂತ್ ಏಜೆಂಟ್ ಗಳು ಆಗುತ್ತಿದ್ದಾರೆ. ಅಣ್ಣ-ತಮ್ಮಂದಿರೂ ಒಂದೇ ಎಂಬ ಮನಸ್ಥಿತಿಯಿಂದ ನೀವು ಹೊರ ಬನ್ನಿ. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.

  • ಹಿರಣ್ಯಕೇಶಿ ನದಿಯಲ್ಲಿ ಮೊಸಳೆ ಪ್ರತ್ಯಕ್ಷ – ಆತಂಕದಲ್ಲಿ ನದಿ ತೀರದ ಜನ

    ಹಿರಣ್ಯಕೇಶಿ ನದಿಯಲ್ಲಿ ಮೊಸಳೆ ಪ್ರತ್ಯಕ್ಷ – ಆತಂಕದಲ್ಲಿ ನದಿ ತೀರದ ಜನ

    ಚಿಕ್ಕೋಡಿ: ಹಿರಣ್ಯಕೇಶಿ ನದಿ ತೀರದಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ನದಿ ತೀರದಲ್ಲಿರುವ ಜನರಲ್ಲಿ ಆತಂಕ ಹೆಚ್ಚಾಗಿದೆ.

    ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದ ಬಳಿ ಹಿರಣ್ಯಕೇಶಿ ನದಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ನದಿ ತೀರದ ಜನರಲ್ಲಿ ಆತಂಕ ಮೂಡಿಸಿದೆ. ಇದನ್ನೂ ಓದಿ: ನಟ ಅಕ್ಷಯ್​ ಕುಮಾರ್​ಗೆ ಮಾತೃವಿಯೋಗ

    ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾದ ನಂತರ ಮೊಸಳೆ ಕಾಣಿಸಿಕೊಂಡಿದ್ದು, ಈ ಪರಿಣಾಮ ನದಿ ದಡದಲ್ಲಿನ ಹೊಲಗದ್ದೆಯ ಜನರಿಗೆ ಭಯ ಎದುರಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮೊಸಳೆಯನ್ನು ಸೆರೆ ಹಿಡಿದು ನಮ್ಮ ಆತಂಕ ದೂರ ಮಾಡಬೇಕೆಂದು ಇಲ್ಲಿನ ಜನರು ಒತ್ತಾಯಿಸುತ್ತಿದ್ದಾರೆ. ಇದನ್ನೂ ಓದಿ: ಪೊಲೀಸ್ ಜೇಬಿನಲ್ಲಿದ್ದ 4 ಲಕ್ಷ ಮೌಲ್ಯದ ಚಿನ್ನದ ಬಳೆಗಳು ಕಳವು

    ಮೊಸಳೆ ಸೆರೆ ಹಿಡಿಯುವರೆಗೂ ಗ್ರಾಮಸ್ಥರು ನದಿಗೆ ಇಳಿಯದಂತೆ ಗೋಟುರ ಗ್ರಾಮದಲ್ಲಿ ಧ್ವನಿವರ್ಧಕ ಬಳಸಿ ಎಚ್ಚರಿಕೆ ನೀಡಲಾಗುತ್ತಿದೆ.