Tag: Kings Eleven Punjab

  • ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್‍ವಾಡಿಯಾಗೆ ಜೈಲು ಶಿಕ್ಷೆ

    ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್‍ವಾಡಿಯಾಗೆ ಜೈಲು ಶಿಕ್ಷೆ

    ನವದೆಹಲಿ: ಉದ್ಯಮಿ ಹಾಗೂ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ತಂಡದ ಸಹ ಮಾಲೀಕರಾಗಿರುವ ನೆಸ್ ವಾಡಿಯಾ ಅವರಿಗೆ ಜಪಾನ್ ಕೋರ್ಟ್ 2 ವರ್ಷ ಜೈಲಿ ಶಿಕ್ಷೆ ವಿಧಿಸಿದೆ.

    ನೆಸ್ ವಾಡಿಯಾ ಮಾದಕ ವಸ್ತು ಸಾಗಾಣೆ ಆರೋಪದಲ್ಲಿ ಮಾರ್ಚ್ ನಲ್ಲಿ ಉತ್ತರ ಜಪಾನಿನ ದ್ವೀಪದ ಹೊಕ್ಕೈಹೋಡ ಚಿಟೋಸ್ ವಿಮಾನ ನಿಲ್ದಾಣದಲ್ಲಿ ಬಂಧನವಾಗಿದ್ದರು. ಈ ಸಂದರ್ಭದಲ್ಲಿ ಅವರ ಜೇಬಿನಲ್ಲಿ ಸುಮಾರು 25 ಗ್ರಾಂ ಗಾಂಜಾ ಪತ್ತೆಯಾಗಿತ್ತು.

    ಈ ಕುರಿತು ಮಾಧ್ಯಮವೊಂದು ವರದಿ ಮಾಡಿದ್ದು, ತಮ್ಮ ಬಳಿ ಇದ್ದ ಮಾದಕ ವಸ್ತು ವೈಯಕ್ತಿಕ ಬಳಕೆಗೆ ಎಂದು ವಾಡಿಯಾ ಹೇಳಿಕೆ ನೀಡಿದ್ದರು. ನಂತರ ನ್ಯಾಯಾಂಗ ಬಂಧನದಲ್ಲಿದ್ದ ಅವರಿಗೆ ಸಪ್ಪೊರೊ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

    ವಾಡಿಯಾ ಸಂಸ್ಥೆ ಭಾರತ ಬಹುದೊಡ್ಡ ಉದ್ಯಮ ಸಂಸ್ಥೆಯಾಗಿದ್ದು, 47 ವರ್ಷದ ನೆಸ್ ವಾಡಿಯಾ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. 2014ರ ಜೂನ್ ಐಪಿಎಲ್ ಟೂರ್ನಿಯ ವೇಳೆ ಪ್ರೀತಿ ಜಿಂಟಾ ನೆಸ್ ವಾಡಿಯಾ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯದ ವೇಳೆ ತಮ್ಮ ಮೇಲೆ ವಾಡಿಯಾ ಹಲ್ಲೆ ನಡೆಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

    2020ರ ಟೋಕಿಯೋ ಒಲಂಪಿಕ್ಸ್ ಹಿನ್ನೆಲೆಯಲ್ಲಿ ಜಪಾನ್ ಮಾದಕ ವಸ್ತುಗಳ ಸಾಗಾಣೆ ಮಾಡುವವರ ವಿರುದ್ಧ ಕಠಿಣ ನಿಯಮಗಳನ್ನು ಜಾರಿ ಮಾಡಿದೆ.

  • ಬೌಂಡರಿ ಗೆರೆ ಬಳಿ ಅದ್ಭುತ ಕ್ಯಾಚ್ – ಇನ್‍ಗ್ರಾಮ್, ಅಕ್ಷರ್ ಮೋಡಿಗೆ ಗೇಲ್ ಔಟ್ : ವಿಡಿಯೋ

    ಬೌಂಡರಿ ಗೆರೆ ಬಳಿ ಅದ್ಭುತ ಕ್ಯಾಚ್ – ಇನ್‍ಗ್ರಾಮ್, ಅಕ್ಷರ್ ಮೋಡಿಗೆ ಗೇಲ್ ಔಟ್ : ವಿಡಿಯೋ

    – ನಿಯಮ ಬದಲಿಸಿ ಎಂದ ನೆಟ್ಟಿಗರು

    ನವದೆಹಲಿ: ಕಿಂಗ್ಸ್ ಇಲೆವನ್ ವಿರುದ್ಧದ ಪಂದ್ಯವನ್ನು ದೆಹಲಿ ತಂಡ ಕೊನೆಯ ಎರಡು ಎಸೆತ ಬಾಕಿ ಇರುವಾಗ ಗೆದ್ದುಕೊಂಡರೂ ಈ ಪಂದ್ಯದಲ್ಲಿ ಕಾಲಿನ್ ಇನ್‍ಗ್ರಾಮ್ ಕ್ಯಾಚ್ ಹಿಡಿಯುತ್ತಿರುವ ವಿಡಿಯೋ ವೈರಲ್ ಆಗಿದೆ.

    ಸದ್ಯ ಸೂಪರ್ ಫಿಟ್ ಫೀಲ್ಡರ್ ಗಳ ಸಂಖ್ಯೆ ಸದ್ಯ ಹೆಚ್ಚಾಗುತ್ತಲೇ ಇದ್ದು, ಪಂಜಾಬ್ ವಿರುದ್ಧ ಪಂದ್ಯದಲ್ಲೂ ಕಾಲಿನ್ ಇನ್‍ಗ್ರಾಮ್ ಸೂಪರ್ ಕ್ಯಾಚ್ ಪಡೆದಿದ್ದಾರೆ. ಕಾಲಿನ್, ಅಕ್ಷರ್ ಇಬ್ಬರ ಜೋಡಿ ಕ್ಯಾಚ್ ಪಡೆಯುವಲ್ಲಿ ಮೋಡಿ ಮಾಡಿದ್ದು, ಪಂದ್ಯದ 12ನೇ ಓವರಿನ 2ನೇ ಎಸೆತದಲ್ಲಿ ಗೇಲ್ ಬೀಸಿದ ಸಿಕ್ಸರ್ ರನ್ನು ಬೌಂಡರಿ ಗೆರೆ ಬಳಿ ಕ್ಯಾಚ್ ಪಡೆದ ಇನ್‍ಗ್ರಾಮ್ ನಾನು ಬೌಂಡರಿ ಗೆರೆ ದಾಟುತ್ತಿದ್ದೇನೆ ಎಂದು ಅರಿವಾಗುತ್ತಿದಂತೆ ಅಲ್ಪ ದೂರದಲ್ಲಿದ್ದ ಅಕ್ಷರ್ ಗೆ ಬಾಲ್ ಪಾಸ್ ಮಾಡಿ ಕ್ಯಾಚ್ ಪೂರ್ಣಗೊಳಿಸುವಂತೆ ಮಾಡಿದ್ರು.

    ಅಕ್ಷರ್ ಕ್ಯಾಚ್ ಪೂರ್ಣಗೊಳಿಸಿದ ಪರಿಣಾಮ 37 ಎಸೆತಗಳಲ್ಲಿ 69 ರನ್ ಗಳಿಸಿ ಸ್ಫೋಟಕ ಪ್ರದರ್ಶನ ನೀಡುತ್ತಿದ್ದ ಗೇಲ್ ಪೆವಿಲಿಯನ್ ಸೇರಿದರು. ಅಲ್ಲದೇ ಕ್ಯಾಚ್ ಪಡೆಯುವ ವೇಳೆ ಇನ್‍ಗ್ರಾಮ್ ತೋರಿದ ಸಮಯ ಪ್ರಜ್ಞೆಯ ಬಗ್ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದರೆ ಕ್ಯಾಚ್ ಪಡೆಯಲು ಇನ್‍ಗ್ರಾಮ್ ಶ್ರಮವಹಿಸಿದ್ದರೂ ಕೂಡ ನಿಯಮಗಳಂತೆ ಈ ಕ್ಯಾಚ್ ಅಕ್ಷರ್ ಪಟೇಲ್ ಖಾತೆಗೆ ಸೇರಿತ್ತು. ಈ ನಿಯಮಗಳ ಬಗ್ಗೆಯೂ ಹಲವರು ಪ್ರಶ್ನೆ ಮಾಡಿದ್ದು, ನಿಯಮಗಳ ಬದಲಾವಣೆ ಅಗತ್ಯ ಇದೆ ಎಂದಿದ್ದಾರೆ.

    ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿ ನಿಗದಿತ 20 ಓವರ್ ಗಳಲ್ಲಿ 163 ರನ್ ಸಿಡಿಸಿದ ಪಂಜಾಬ್ ಡೆಲ್ಲಿಗೆ 164 ರನ್ ಗಳ ಗುರಿ ನೀಡಿತು. ಸವಾಲಿನ ಗುರಿ ಬೆನ್ನತ್ತಿದ ಶ್ರೇಯಸ್ ಅಯ್ಯರ್ ನಾಯಕತ್ವದ ತಂಡ 19.4 ಓವರಿನಲ್ಲೇ ಗೆಲುವಿನ ರನ್ ಗಳಿಸಿ 5 ವಿಕೆಟ್ ಜಯ ಪಡೆಯಿತು. ಪಂದ್ಯಲ್ಲಿ ಧವನ್ 56 ರನ್ (41 ಎಸೆತ, 7 ಬೌಂಡರಿ, 1 ಸಿಕ್ಸರ್), ಶ್ರೇಯಸ್ 58 ರನ್ (49 ಎಸೆತ, 5 ಬೌಂಡರಿ, 1 ಸಿಕ್ಸರ್) ಗಳಿಸಿ ಅಜೇಯರಾಗಿ ಉಳಿದು ತಂಡಕ್ಕೆ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಂಕಪಟ್ಟಿಯಲ್ಲಿ 12 ಅಂಕಗಳೊಂದಿಗೆ ಮುಂಬೈ 2ನೇ ಸ್ಥಾನದಲ್ಲಿದ್ದರೆ, ಅಷ್ಟೇ ಅಂಕ ಪಡೆದಿರುವ ಡೆಲ್ಲಿ ಕಡಿಮೆ ರನ್ ರೇಟ್ ಕಾರಣದಿಂದ 3ನೇ ಸ್ಥಾನ ಪಡೆದುಕೊಂಡಿದೆ.

  • ರಾಹುಲ್‍ಗೆ ಮಹಿಳೆಯರೆಂದರೆ ಅಪಾರ ಗೌರವವಿದೆ: ಪ್ರೀತಿ ಜಿಂಟಾ

    ರಾಹುಲ್‍ಗೆ ಮಹಿಳೆಯರೆಂದರೆ ಅಪಾರ ಗೌರವವಿದೆ: ಪ್ರೀತಿ ಜಿಂಟಾ

    ನವದೆಹಲಿ: ಕೆಎಲ್ ರಾಹುಲ್ ಮಹಿಳೆಯರ ಬಗ್ಗೆ ಅಪಾರವಾದ ಗೌರವವನ್ನು ಹೊಂದಿದ್ದಾರೆ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಒಡತಿ, ನಟಿ ಪ್ರೀತಿ ಜಿಂಟಾ ಹೇಳಿದ್ದಾರೆ.

    ಕಾಫಿ ವಿಥ್ ಕರಣ್ ಕಾರ್ಯಕ್ರಮದಲ್ಲಿ ಕೆಎಲ್ ರಾಹುಲ್ ಹಾಗೂ ಪಾಂಡ್ಯ ಹಾಡಿದ ವಿವಾದಾತ್ಮಾಕ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಉತ್ತಮ ವ್ಯಕ್ತಿತ್ವವನ್ನು ಹೊಂದಿರುವ ಆಟಗಾರ. ಆದರೆ ಟಿವಿ ಶೋ ವಿವಾದ ಎಂಬುವುದು ಮುಗಿದ ಭಾಗವಾಗಿದೆ. ಆದರೆ ಇಂತಹ ಘಟನೆಗಳು ಜೀವನದಲ್ಲಿ ಸಾಕಷ್ಟು ಸಂಗತಿಗಳನ್ನು ಕಲಿಸುತ್ತವೆ ಎಂದಿದ್ದಾರೆ.

    ಇದೇ ವೇಳೆ ತಂಡದ ಒಡತಿಯಾಗಿ ಆರ್ಥಿಕತೆ ಕುರಿತು ಉತ್ತರಿಸಿದ ಜಿಂಟಾ, ಈಗಾಗಲೇ ನಾವು ಹೂಡಿಕೆ ಮಾಡಿರುವ ಹಣ ವಾಪಸ್ ಆಗಿದ್ದು, ಟೈಟಲ್ ಗೆಲುವು ಪಡೆಯುವುದು ಮಾತ್ರ ನಮ್ಮ ಗುರಿಯಾಗಿದೆ. ಟೂರ್ನಿಯಲ್ಲಿ ರಾಹುಲ್ ಫಾರ್ಮ್ ಗೆ ಮರಳಿರುವುದು ನಮಗೆ ಮತ್ತಷ್ಟು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.

    ಟೂರ್ನಿಯಲ್ಲಿ ಆರ್ ಅಶ್ವಿನ್ ನಾಯಕತ್ವದಲ್ಲಿ ಕಣಕ್ಕೆ ಇಳಿದಿರುವ ಪಂಜಾಬ್ ಕ್ರಿಕೆಟ್ ತಂಡ ಇದುವರೆಗೂ ಆಡಿರುವ 4 ಪಂದ್ಯಗಳಲ್ಲಿ 3 ರಲ್ಲಿ ಗೆಲುವು ಪಡೆದು ಅಂಕಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದೆ. ಇಷ್ಟೇ ಪಂದ್ಯಗಳಲ್ಲಿ ಗೆಲುವು ಪಡೆದಿರುವ ಹೈದರಾಬಾದ್ ಹಾಗೂ ಕೆಕೆಆರ್ ತಂಡದ ಮೊದಲ ಎರಡು ಸ್ಥಾನಗಳಲ್ಲಿವೆ.

  • ‘ಕರ್ಮ’ವನ್ನು ಅನುಭವಿಸಿದ ಅಶ್ವಿನ್ – ನೆಟ್ಟಿಗರಿಂದ ಟ್ರೋಲ್

    ‘ಕರ್ಮ’ವನ್ನು ಅನುಭವಿಸಿದ ಅಶ್ವಿನ್ – ನೆಟ್ಟಿಗರಿಂದ ಟ್ರೋಲ್

    ಕೋಲ್ಕತ್ತಾ: ಕೆಕೆಆರ್ ಪಂದ್ಯದಲ್ಲಿ ತಂಡದ ನಾಯಕನಾಗಿ ತಪ್ಪು ಫೀಲ್ಡ್ ಸೆಟ್ ಮಾಡಿದ್ದ ಕಿಂಗ್ಸ್ ಇಲೆವೆನ್ ಪಂಬಾಜ್ ತಂಡದ ನಾಯಕ ಆರ್ ಅಶ್ವಿನ್ ಅವರನ್ನ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

    ಹಿಂದಿನ ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ‘ಮಂಕಡ್’ ರನೌಟ್ ಮಾಡಿ ಭಾರೀ ಚರ್ಚೆಗೆ ಕಾರಣರಾಗಿದ್ದ ಆರ್ ಅಶ್ವಿನ್, ಕ್ರಿಕೆಟ್ ನಿಯಮಗಳ ಅಡಿಯಲ್ಲೇ ರನೌಟ್ ಮಾಡಿದ್ದಾಗಿ ಸಮರ್ಥನೆ ನೀಡಿದ್ದರು. ಆದರೆ ಮರು ಪಂದ್ಯದಲ್ಲೇ ಅದೇ ನಿಯಮಗಳನ್ನು ಮರೆತು ಫೀಲ್ಡಿಂಗ್ ನಿರ್ವಹಿಸಿ ಟ್ರೋಲ್ ಆಗಿದ್ದಾರೆ.

    ಪಂದ್ಯದ 16.5 ಓವರಿನ ಎಸೆತದಲ್ಲಿ ಕೆಕೆಆರ್ ತಂಡ ರಸೆಲ್ ಔಟಾಗಿದ್ದರು. ಈ ವೇಳೆ ನಿಮಯಗಳ ಅನ್ವಯ ಇನ್ ಸೈಡ್ ಸರ್ಕಲ್ ನಲ್ಲಿ 4 ಆಟಗಾರರು ಕಡ್ಡಾಯವಾಗಿ ಫೀಲ್ಡಿಂಗ್ ಮಾಡಬೇಕಿತ್ತು. ಆದರೆ ಅಶ್ವಿನ್ 3 ಆಟಗಾರನ್ನು ಮಾತ್ರ ನಿಯೋಜಿಸಿದ್ದರು. ಪರಿಣಾಮ ರಸೆಲ್ ಕ್ಲೀನ್ ಬೌಲ್ಡ್ ಆಗಿದ್ದರೂ ಕೂಡ ಜೀವದಾನ ಪಡೆದರು.

    ಬಳಿಕ ಸ್ಫೋಟಕ ಆಟ ಪ್ರದರ್ಶಿಸಿದ ರಸೆಲ್ 19 ಎಸೆತಗಳಲ್ಲಿ 48 ರನ್ ಸಿಡಿಸಿ ತಂಡದ ಗೆಲುವಿಗೆ ಕಾರಣರಾದರು. ಕೊನೆಯ ಓವರಿನಲ್ಲಿ ರಸೆಲ್ ಕ್ಯಾಚ್ ನೀಡಿ ಪೆವಿಲಿಯನ್‍ಗೆ ತೆರಳಿದರು. ಪಂದ್ಯದ ಬಳಿಕ ನಾಯಕನ ತಪ್ಪನ್ನೇ ಗುರಿ ಮಾಡಿ ಟ್ವೀಟ್ ಮಾಡಿರುವ ನೆಟ್ಟಿಗರು, ಅಶ್ವಿನ್ ‘ಕರ್ಮ’ವನ್ನು ಅನುಭವಿಸಿದ್ದಾರೆ ಎಂದು ಹೇಳಿ ಕಾಲೆಳೆಯುತ್ತಿದ್ದಾರೆ.

    https://twitter.com/Gowthaman_Rockz/status/1110953803245719553

  • ಐವರು ಹುತಾತ್ಮ ಯೋಧರ ಕುಟುಂಬಕ್ಕೆ ಪಂಜಾಬ್ ತಂಡದಿಂದ 25 ಲಕ್ಷ ರೂ. ನೆರವು

    ಐವರು ಹುತಾತ್ಮ ಯೋಧರ ಕುಟುಂಬಕ್ಕೆ ಪಂಜಾಬ್ ತಂಡದಿಂದ 25 ಲಕ್ಷ ರೂ. ನೆರವು

    ನವದೆಹಲಿ: ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಯೋಧರ ಐದು ಕುಟುಂಬಗಳಿಗೆ ಕಿಂಗ್ಸ್ ಇಲೆವನ್ ಪಂಜಾಬ್ ತಂಡ 25 ಲಕ್ಷ ರೂ. ನೆರವು ನೀಡಿದೆ.

    ಪಂಜಾಬ್ ಹಾಗೂ ಹಿಮಾಚಲ ಪ್ರದೇಶದ ಯೋಧರ ಕುಟುಂಬಗಳಿಗೆ ಪರಿಹಾರವನ್ನು ನೀಡಲಾಗಿದೆ. ನೆರವಿನ ಹಣವನ್ನು ತಂಡ ಕುಟುಂಬ ಸದಸ್ಯರಿಗೆ ವರ್ಗಾವಣೆ ಮಾಡಲಾಗಿದೆ. ಈ ವೇಳೆ ತಂಡ ನಾಯಕ ಆರ್. ಅಶ್ವಿನ್ ಹಾಗೂ ಸಿಆರ್ ಪಿಎಫ್ ಡಿಐಜಿ ವಿಕೆ ಕುನ್ದಲ್ ಅವರು ಹಾಜರಿದ್ದರು.

    ಬಾಲಿವುಡ್ ನಟಿ ಪ್ರೀತಿ ಜಿಂಟಾ ಮಾಲೀಕತ್ವದ ಪಂಜಾಬ್ ತಂಡ ಈ ಬಾರಿಯ ಕಪ್ ಗೆಲ್ಲುವ ರೇಸ್‍ನಲ್ಲಿದ್ದು, ಮೊದಲ ಕಪ್ ಗೆಲ್ಲುವ ವಿಶ್ವಾಸದಲ್ಲಿದೆ. 2014 ರಲ್ಲಿ ಪಂಜಾಬ್ ತಂಡ ಆಡಿದ 11 ಪಂದ್ಯಗಳನ್ನು ಗೆದ್ದು, 3 ಪಂದ್ಯಗಳಲ್ಲಿ ಮಾತ್ರ ಸೋಲುಂಡಿತ್ತು. ಉತ್ತಮ ಪ್ರದರ್ಶನ ನೀಡುತ್ತಲೇ ಬಂದಿರುವ ಪಂಜಾಬ್ ತಂಡ ಗೆಲುವಿನ ಸ್ಥಿರತೆಯನ್ನು ಕಾಪಾಡಿಕೊಳ್ಳುವುದು ಪ್ರಮುಖವಾಗಿದೆ.

    ಕಳೆದ ಐಪಿಎಲ್ ಆವೃತ್ತಿಯಲ್ಲಿ ಆರಂಭದ 9 ಪಂದ್ಯಗಳಲ್ಲಿ 6 ಪಂದ್ಯಗಳನ್ನು ಗೆದ್ದು ವಿಶ್ವಾಸ ಮೂಡಿಸಿತ್ತು. ಆದರೆ ಆ ಬಳಿಕ ನಡೆದ 5 ಪಂದ್ಯಗಳಲ್ಲಿ ಸೋಲುಂಡು ನಿರಾಸೆ ಮೂಡಿಸಿತ್ತು. ಇತ್ತ 23 ರಂದು 12ನೇ ಆವೃತ್ತಿಯ ಟೂರ್ನಿ ಮಾರ್ಚ್ 23 ರಂದು ಆರಂಭವಾಗುತ್ತಿದ್ದು, ಪಂಜಾಬ್ ತಂಡ ಮಾರ್ಚ್ 25 ರಂದು ರಾಜಸ್ಥಾನ ತಂಡವನ್ನು ಎದುರಿಸಲಿದೆ.

  • ಐಪಿಎಲ್ ಅಚ್ಚರಿ: ಮಿಲಿಯನ್ ಡಾಲರ್ ಬೇಬಿ ವರುಣ್ ಚಕ್ರವರ್ತಿ!

    ಐಪಿಎಲ್ ಅಚ್ಚರಿ: ಮಿಲಿಯನ್ ಡಾಲರ್ ಬೇಬಿ ವರುಣ್ ಚಕ್ರವರ್ತಿ!

    ಜೈಪುರ: 2019ರ ಐಪಿಎಲ್ ಭಾರತೀಯ ಕ್ರಿಕೆಟರ್‍ಗಳ ಪಾಲಿನ ಅತ್ಯುತ್ತಮ ಅವಕಾಶಗಳನ್ನು ತೆರೆದಿಟ್ಟಿದೆ ಎಂದು ಕರೆಯಬಹುದಾಗಿದ್ದು, ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಈ ಬಾರಿ ಹೆಚ್ಚು ಯುವ ಆಟಗಾರು ಕೋಟಿ ಕೋಟಿ ರೂ. ಮೊತ್ತಕ್ಕೆ ಹರಾಜು ಆಗುವ ಮೂಲಕ ಅಚ್ಚರಿಗೆ ಕಾರಣರಾಗಿದ್ದಾರೆ.

    ಐಪಿಎಲ್ ಅಚ್ಚರಿಯ ಸಾಲಿಗೆ ಸೇರಿದ ಮತ್ತೊಬ್ಬ ಯುವ ಆಟಗಾರ ವರುಣ್ ಚಕ್ರವರ್ತಿ ಅವರನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಬರೋಬ್ಬರಿ 8.4 ಕೋಟಿ ರೂ.ಗೆ ಖರೀದಿ ಮಾಡಿದೆ. 27 ವರ್ಷದ ವರುಣ್ ತಮಿಳುನಾಡು ತಂಡದ ಆಟಗಾರರಾಗಿದ್ದು, ಕಳೆದ ವರ್ಷದ ವಿಜಯ್ ಹಜರೆ ಟ್ರೋಫಿ ಹಾಗೂ ಈ ವರ್ಷದ ತಮಿಳುನಾಡು ಪ್ರೀಮಿಯರ್ ಲೀಗ್‍ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿ ಸಂತಸ ವ್ಯಕ್ತಪಡಿಸಿರುವ ವರುಣ್ ಚಕ್ರವರ್ತಿ, ಪ್ರೀಮಿಯರ್ ಲೀಗ್ ಬಳಿಕ ನನಗೆ ಹೆಚ್ಚಿನ ಅವಕಾಶಗಳು ಲಭಿಸುವ ಬಗ್ಗೆ ಆತ್ಮವಿಶ್ವಾಸ ಇತ್ತು. ಆದರೆ ಪಂಜಾಬ್ ತಂಡ ಇಷ್ಟು ಮೊತ್ತಕ್ಕೆ ನನ್ನನ್ನು ಪಡೆದುಕೊಳ್ಳುತ್ತದೆ ಎಂಬುವುದನ್ನು ನಾನು ಊಹೆ ಕೂಡ ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ.

    ವಿಜಯ್ ಹಜಾರೆ ಟ್ರೋಫಿಯಲ್ಲಿ ಅತ್ಯುತ್ತಮ ಬೌಲರ್ ಎಂದು ಗುರುತಿಸಿಕೊಂಡಿದ್ದ ವರುಣ್, 22 ವಿಕೆಟ್ ಪಡೆಯುವ ಮೂಲಕ 4.23 ಎಕಾನಮಿಯಲ್ಲಿ ಟೂರ್ನಿಯ ಅತ್ಯುತ್ತಮ ಬೌಲರ್ ಆಗಿ ಹೊರಹೊಮ್ಮಿದ್ದರು. ಅಲ್ಲದೇ ವರುಣ್ 8 ಶೈಲಿಯಲ್ಲಿ ಬೌಲಿಂಗ್ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ.

    ಸದ್ಯ ನಾನು ಐದು ಶೈಲಿಗಳನ್ನು ಮಾತ್ರ ಇದುವರೆಗೂ ಆಟದಲ್ಲಿ ಪ್ರಯೋಗ ಮಾಡಿದ್ದು, ಸ್ಟ್ರೈಟ್, ಇನ್ ಸ್ವಿಂಗ್, ಔಟ್ ಸ್ವಿಂಗ್, ಫ್ಲಿಪರ್, ಝೂಟರ್ ಶೈಲಿಗಳಲ್ಲಿ ಎಸೆದಿದ್ದೇನೆ. ಮತ್ತು ಕೆಲ ಬದಲಾವಣೆಗಳನ್ನು ನನ್ನ ಬೌಲಿಂಗ್‍ನಲ್ಲಿ ಕಾಣಬಹುದು. ಕಳೆದ 2 ವರ್ಷಗಳಲ್ಲಿ ನನ್ನ ಬೌಲಿಂಗ್‍ನಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಸಿಕ್ಕ ಎಲ್ಲಾ ಜವಾಬ್ದಾರಿಗಳನ್ನು ಸಾಮರ್ಥವಾಗಿ ನಿಭಾಯಿಸಿದ್ದಾಗಿ ವರುಣ್ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ಪರ ನೆಟ್ ಬೌಲರ್ ಆಗಿಯೂ ವರುಣ್ ಕಾರ್ಯನಿರ್ವಹಿಸಿದ್ದರು. ಹರಾಜು ಪ್ರಕ್ರಿಯೆ ವೇಳೆ ಇತ್ತಂಡಗಳು ಪಂಜಾಬ್ ತಂಡಕ್ಕೆ ಪೈಪೋಟಿ ನೀಡಿದ ಕಾರಣ ವರುಣ್ ಕೋಟಿ ಕೋಟಿ ರೂ. ಹಣಗಳಿಸಲು ಕಾರಣವಾಯಿತು.

    ಆರ್ ಅಶ್ವಿನ್ ಮುಂದಾಳತ್ವದ ಪಂಜಾಬ್ ಅಂತಿಮವಾಗಿ ವರುಣ್‍ರನ್ನು ಪಡೆಯಲು ಸಫಲವಾಯಿತು. 1991 ರಲ್ಲಿ ಜನಿಸಿರುವ ವರುಣ್ 9 ಲಿಸ್ಟ್ `ಎ’ ಪಂದ್ಯಗಳನ್ನು ಆಡಿದ್ದು, 22 ವಿಕೆಟ್ ಪಡೆದಿದ್ದಾರೆ. ಉಳಿದಂತೆ ಏಕೈಕ ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯದಲ್ಲಿ 1 ವಿಕೆಟ್ ಪಡೆದಿದ್ದಾರೆ. ಅಂದಹಾಗೇ ಈ ಬಾರಿ ಪಂಜಾಬ್ ಪರ ದುಬಾರಿ ಪ್ಲೇಯರ್ ಕೂಡ ಆಗಿದ್ದಾರೆ.

    ಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪರ್ಪಲ್ ಕ್ಯಾಪ್ ವಿನ್ನರ್ ಒಂದು ವಿಕೆಟ್‍ಗೆ ಪಡೆದ ಹಣವೆಷ್ಟು ಗೊತ್ತೆ?

    ಪರ್ಪಲ್ ಕ್ಯಾಪ್ ವಿನ್ನರ್ ಒಂದು ವಿಕೆಟ್‍ಗೆ ಪಡೆದ ಹಣವೆಷ್ಟು ಗೊತ್ತೆ?

    ಮುಂಬೈ: 2018 ಐಪಿಎಲ್ ಪರ್ಪಲ್ ಕ್ಯಾಪ್ ವಿನ್ನರ್ ಪಂಜಾಬ್ ತಂಡದ ಆಸೀಸ್ ಆಟಗಾರ ಅಂಡ್ರ್ಯೂ ಟೈ ಒಂದು ವಿಕೆಟ್ ಗೆ 30 ಲಕ್ಷ ರೂ. ಪಡೆದಿದ್ದಾರೆ.

    ಬೆಂಗಳೂರಿನಲ್ಲಿ ನಡೆದ ಐಪಿಎಲ್ ಹರಾಜಿನ ವೇಳೆ ಟೈ ರನ್ನು ಕಿಂಗ್ಸ್ ಇಲೆವೆನ್ ಪಂಜಾಬ್ 7.2 ಕೋಟಿ ನೀಡಿ ಖರೀದಿಸಿತ್ತು. 31 ವರ್ಷದ ಆಸೀಸ್ ಆಟಗಾರ ಟೈ ಟೂರ್ನಿಯಲ್ಲಿ 14 ಪಂದ್ಯಗಳಿಂದ 24 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಕಿಂಗ್ಸ್ ಇಲೆವೆನ್ ಪಂಜಾಬ್ ಪ್ರತಿ ವಿಕೆಟ್ ಗೆ 30 ಲಕ್ಷ ರೂ. ನೀಡಿದಂತಾಗಿದೆ.

    ಟೂರ್ನಿಯಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಆಟಗಾರನಾಗಿ ಹೊರ ಹೊಮ್ಮಿರುವ ಟೈ ಐಪಿಎಲ್ ನಲ್ಲಿ ಪರ್ಪಲ್ ಕ್ಯಾಪ್ ಪಡೆದ ಮೊದಲ ಆಸೀಸ್ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ. ಒಟ್ಟಾರೆ ಟೂರ್ನಿಯಲ್ಲಿ ಟೈ 56 ಓವರ್ ಬೌಲಿಂಗ್ ಮಾಡಿದ್ದು, 18.66 ಸರಾಸರಿಯಲ್ಲಿ 24 ವಿಕೆಟ್ ಪಡೆದಿದ್ದಾರೆ.

    ಟೂರ್ನಿಯಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ರಶೀದ್ ಖಾನ್, ಸಿದ್ದಾರ್ಥ್ ಕೌಲ್, ಉಮೇಶ್ ಯಾದವ್, ಬೌಲ್ಟ್ ಕ್ರಮವಾಗಿ 21, 21, 20, 18 ವಿಕೆಟ್ ಪಡೆಯುವ ಮೂಲಕ ಟಾಪ್ 5ರ ಒಳಗಡೆ ಸ್ಥಾನ ಪಡೆದಿದ್ದಾರೆ.

    ಯಾರಿಗೆ ಯಾವ ಪ್ರಶಸ್ತಿ:
    ಟೂರ್ನಿಯ ಫೈನಲ್ ಪಂದ್ಯದ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಶೇನ್ ವಾಟ್ಸನ್ ಗೆ ಸಿಕ್ಕಿದರೆ ಸನ್ ರೈಸರ್ಸ್ ಹೈದರಾಬಾದ್ ನ ಕೇನ್ ವಿಲಿಯಮ್ಸ್ ಗೆ ಆರೆಂಜ್ ಕ್ಯಾಪ್ ಸಿಕ್ಕಿದೆ.

    ಉದಯೋನ್ಮುಖ ಆಟಗಾರ ಹಾಗೂ ಸ್ಟೈಲಿಶ್ ಆಟಗಾರ ಪ್ರಶಸ್ತಿಗಳನ್ನು ಡೆಲ್ಲಿ ತಂಡದ ರಿಷಬ್ ಪಂತ್ ಪಡೆದುಕೊಂಡರೆ, ಉತ್ತಮ ಕ್ಯಾಚ್ ಪ್ರಶಸ್ತಿ ಟ್ರೇನ್ಟ್ ಬೌಲ್ಟ್ ಗೆ ಸಿಕ್ಕಿದೆ. ಸೂಪರ್ ಸ್ಟ್ರೈಕರ್ ಮತ್ತು ಮೌಲ್ಯಯುತ ಆಟಗಾರ ಪ್ರಶಸ್ತಿ ಕೋಲ್ಕತ್ತಾದ ಸುನೀಲ್ ನರೇನ್ ಹಾಗೂ ಫೇರ್ ಪ್ಲೇ ಪ್ರಶಸ್ತಿಯನ್ನು ಮುಂಬೈ ತಂಡ ಪಡೆದುಕೊಂಡಿದೆ.

     

     

  • ಒಂದೇ ಪದದಲ್ಲಿ ಕೊಹ್ಲಿಯನ್ನು ವ್ಯಾಖ್ಯಾನಿಸಿದ ಪ್ರೀತಿ ಜಿಂಟಾ

    ಒಂದೇ ಪದದಲ್ಲಿ ಕೊಹ್ಲಿಯನ್ನು ವ್ಯಾಖ್ಯಾನಿಸಿದ ಪ್ರೀತಿ ಜಿಂಟಾ

    ಬೆಂಗಳೂರು: ಕೊಹ್ಲಿ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಪಂಜಾಬ್ ತಂಡದ ಕೋ-ಒನರ್ ಪ್ರೀತಿ ಜಿಂಟಾ ಕೊಹ್ಲಿ ಅದ್ಭುತ ವ್ಯಕ್ತಿ ಎಂದು ಹೇಳಿದ್ದಾರೆ.

    ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಅಭಿಮಾನಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಾಲಿವುಡ್ ನಟಿ ಪ್ರೀತಿ ಜಿಂಟಾ ಕೊಹ್ಲಿ ಕುರಿತು ತಮ್ಮ ಅಭಿಪ್ರಾಯವನ್ನು ಟ್ವೀಟ್ ಮಾಡಿದ್ದಾರೆ.

    ಪಂಜಾಬ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ ಪ್ರವೇಶಿಸಲು ವಿಫಲವಾಗಿತ್ತು. ಇದೇ ವೇಳೆ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಪ್ರವೇಶ ಪಡೆಯದ ಕುರಿತ ಪ್ರೀತಿ ಜಿಂಟಾರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಈ ಕುರಿತು ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದ ಜಿಂಟಾ, ಮುಂಬೈ ಪ್ಲೇ ಆಫ್ ಪ್ರವೇಶಿಸದಿದ್ದರೆ ಪಂಜಾಬ್‍ಗೆ ಪ್ಲೇ ಆಫ್‍ಗೆ ಪ್ರವೇಶ ಪಡೆಯುವ ಅವಕಾಶವಿತ್ತು. ಈ ಕುರಿತು ತಾನು ಆ ಮಾತು ಹೇಳಿದ್ದು. ಆದರೆ ರಾಜಸ್ಥಾನ ಗೆಲುವು ಪಡೆಯಿತು ಮತ್ತು ಚೆನ್ನೈ ವಿರುದ್ಧ ನಮ್ಮ ಸೋಲು ಪ್ಲೇ ಆಫ್ ನಿಂದ ದೂರ ಉಳಿಯುವಂತೆ ಮಾಡಿತು. ಯಾವುದೇ ತಂಡ ಕೇವಲ ಗೆಲುವುಗಳನ್ನು ಮಾತ್ರ ಕಾಣಲು ಸಾಧ್ಯವಿಲ್ಲ, ಸೋಲು ಸಮನಾಗಿರುತ್ತದೆ ಎಂದು ಹೇಳಿದ್ದಾರೆ.

    ಟೂರ್ನಿಯ ಆರಂಭದಲ್ಲಿ 6 ಪಂದ್ಯಗಳಿಂದ 5 ಪಂದ್ಯಗಳನ್ನು ಗೆದ್ದ ಪಂಜಾಬ್ ಈಗ ಟೂರ್ನಿಯಿಂದ ಹೊರನಡೆದಿದೆ. ಈ ಕುರಿತು ತಮ್ಮ ತಂಡದ ಅಭಿಮಾನಿಗಳಲ್ಲಿ ಕ್ಷಮೆ ಕೇಳುತ್ತೇನೆ. ಮುಂದಿನ ವರ್ಷ ನಾವು ನಿಮ್ಮನ್ನು ನಿರಾಸೆ ಮಾಡುವುದಿಲ್ಲ ಎಂದು ಮತ್ತೊಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

  • ಪ್ರೀತಿ ಜಿಂಟಾ ಮುನಿಸು, ಕಿಂಗ್ಸ್ ಇಲೆವೆನ್ ತಂಡದಲ್ಲಿ ಬಿರುಕು?

    ಪ್ರೀತಿ ಜಿಂಟಾ ಮುನಿಸು, ಕಿಂಗ್ಸ್ ಇಲೆವೆನ್ ತಂಡದಲ್ಲಿ ಬಿರುಕು?

    ಮುಂಬೈ: ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸೋಲುಂಡ ಬಳಿಕ ತಂಡದ ಮೆಂಟರ್ ಸೆಹ್ವಾಗ್ ಹಾಗೂ ಕೋ-ಓನರ್ ಪ್ರೀತಿ ಜಿಂಟಾ ನಡುವೆ ಎಲ್ಲವೂ ಸರಿ ಇಲ್ಲವೇ ಎನ್ನುವ ಪ್ರಶ್ನೆ ಎದ್ದಿದೆ.

    ರಾಜಸ್ಥಾನದ ವಿರುದ್ಧ ಪಂದ್ಯದಲ್ಲಿ ಸುಲಭ ಮೊತ್ತವನ್ನು ಬೆನ್ನತ್ತಲು ತಂಡ ವಿಫಲವಾಗಲು ಮೆಂಟರ್ ಸೆಹ್ವಾಗ್ ಅವರ ನಿರ್ಧಾರವೇ ಕಾರಣ ಎಂದು ಪ್ರೀತಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಅಂದಹಾಗೇ ರಾಜಸ್ಥಾನ ಪಂದ್ಯದಲ್ಲಿ ನಾಯಕ ಆಶ್ವಿನ್‍ಗೆ ಬ್ಯಾಟಿಂಗ್ ನಲ್ಲಿ ಮುಂಬಡ್ತಿ ನೀಡಿ ನಂಬರ್ 3 ಸ್ಥಾನದಲ್ಲಿ ಕಳಿಸಲಾಗಿತ್ತು. ಆದರೆ ಪಂದ್ಯದಲ್ಲಿ ಅಶ್ವಿನ್ ಶೂನ್ಯ ಸುತ್ತುವ ಮೂಲಕ ಎಲ್ಲ ಲೆಕ್ಕಾಚಾರನ್ನು ತಲೆ ಕೆಳಗೆ ಮಾಡಿದ್ದರು. ಸದ್ಯ ಪಂದ್ಯದ ಫಲಿತಾಂಶದಿಂದ ಪ್ರೀತಿ ಅಸಮಾಧಾನಗೊಂಡಿದ್ದರೆ ಎನ್ನಲಾಗಿದೆ.

    ಪಂದ್ಯದ ಬಳಿಕ ಆಟಗಾರರು ಮೈದಾನದಿಂದ ಮರಳುವ ಮುನ್ನವೇ ಪ್ರೀತಿ ಜಿಂಟಾ ಈ ಕುರಿತು ಪ್ರಶ್ನೆ ಮಾಡಿದ್ದರು. ಆದ್ರೆ ಸೆಹ್ವಾಗ್ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ತಂಡ ಉತ್ತಮ ಪ್ರದರ್ಶನ ನೀಡುತ್ತಿದ್ದು, ಪ್ಲೇಆಫ್ ಗೆ ಆಯ್ಕೆ ಆಗುವ ಎಲ್ಲಾ ಅವಕಾಶ ಇರುವ ವೇಳೆ ಈ ರೀತಿಯ ಗೊಂದಲಗಳಿಗೆ ಅವಕಾಶ ನೀಡಬಾರದು. ಇದು ಆಟಗಾರ ಮೇಲೆ ಪರಿಣಾಮ ಉಂಟಾಗಬಹುದು ಎಂದು ಸೆಹ್ವಾಗ್ ಪ್ರತಿಕ್ರಿಯೇ ನೀಡಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಈ ಕುರಿತು ಮಾಧ್ಯಮಗಳು ಸೆಹ್ವಾಗ್ ಹಾಗೂ ಪ್ರೀತಿ ಜಿಂಟಾ ಅವರ ಪ್ರತಿಕ್ರಿಯೆಗಳನ್ನು ಕೇಳಿದ್ದು, ಇಬ್ಬರು ಈ ಕುರಿತು ಮಾತನಾಡಲು ನಿರಾಕರಿಸಿದ್ದಾರೆ. ಟೂರ್ನಿಯಲ್ಲಿ ಪಂಜಾಬ್ ಇದುವರೆಗೂ ಉತ್ತಮ ಪ್ರದರ್ಶನವನ್ನು ನೀಡಿದ್ದು, ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. ಕಳೆದ ಬಾರಿ ಪಂಬಾಜ್ ಪರ ಬ್ಯಾಟ್ ಬೀಸಿದ್ದ ಸೆಹ್ವಾಗ್ ಈ ಬಾರಿ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ತಂಡದ ನಾಯಕತ್ವ ಸ್ಥಾನಕ್ಕೆ ಆಶ್ವಿನ್ ಆಯ್ಕೆ ಹಾಗೂ ಕ್ರಿಸ್‍ಗೇಲ್ ಖರೀದಿ ವೇಳೆಯೂ ಸೆಹ್ವಾಗ್ ಸಲಹೆಯನ್ನು ಪಡೆಯಲಾಗಿತ್ತು.

  • ಕ್ಯಾನ್ಸರ್ ಪೀಡಿತ ಬಾಲಕನಿಗೆ ಧೈರ್ಯ ತುಂಬಿದ ಯುವರಾಜ್ ಸಿಂಗ್

    ಕ್ಯಾನ್ಸರ್ ಪೀಡಿತ ಬಾಲಕನಿಗೆ ಧೈರ್ಯ ತುಂಬಿದ ಯುವರಾಜ್ ಸಿಂಗ್

    ಇಂದೋರ್‌: ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸಿ ಗೆದ್ದಿರುವ ಟೀಂ ಇಂಡಿಯಾ ಆಟಗಾರ ಯುವರಾಜ್ ಸಿಂಗ್ ಎಲ್ಲರಿಗೂ ಸ್ಫೂರ್ತಿಯಾಗಿದ್ದು, ಈ ನಡುವೆ ಕ್ಯಾನ್ಸರ್ ಪೀಡಿತರಿಗೆ ಧೈರ್ಯ ತುಂಬುವ ಕಾರ್ಯವನ್ನು ಮಾಡುತ್ತಿದ್ದಾರೆ.

    ಈ ಬಾರಿಯ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ತಂಡದ ಪರ ಆಡುತ್ತಿರುವ ಯುವಿ, ಕ್ಯಾನ್ಸರ್ ಪೀಡಿದ ಬಾಲಕನನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಈ ಕುರಿತ ಫೋಟೋಗಳನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿದೆ.

    11 ವರ್ಷದ ಬಾಲಕ ರಾಕಿ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಯುವರಾಜ್ ಆತನನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಯುವಿ ಬಾಲಕನೊಂದಿಗೆ ಕೆಲ ಸಮಯ ಕಳೆದಿದ್ದಾರೆ. ಬಾಲಕ ಬಹುಬೇಗ ಚೇತರಿಕೊಳ್ಳಲಿ ಎಂದು ಟ್ವೀಟ್ ನಲ್ಲಿ ಬರೆಯಲಾಗಿದೆ. ಭೇಟಿ ವೇಳೆ ಯುವಿ ಬಾಲಕನಿಗೆ ತಂಡದ ಜರ್ಸಿ ಹಾಗೂ ಕ್ಯಾಪ್ ಗಿಫ್ಟ್ ಮೇಲೆ ಸಹಿ ಮಾಡಿ ನೀಡಿದ್ದಾರೆ. ಯುವಿ ಅವರ ಈ ಫೋಟೋ ನೋಡಿರುವ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

    ಬಹು ಸಮಯ ಕ್ಯಾನ್ಸರ್ ನಿಂದ ಬಳಿದ್ದ ಯುವಿ ಅನಾರೋಗ್ಯದ ನಡುವೆ ಭಾರತದ ಪರ ಆಡಿ ವಿಶ್ವಕಪ್ ಗೆಲುವು ಪಡೆಯಲು ಕಾರಣರಾಗಿದ್ದರು. ದಕ್ಷಿಣ ಆಫ್ರಿಕಾದಲ್ಲಿ ನಡೆದ 2007 ರ ಟಿ-20 ವಿಶ್ವಕಪ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಅಲ್ಲದೇ 2011 ವಿಶ್ವಕಪ್ ಟೂರ್ನಿಯಲ್ಲಿ ಸರಣಿ ಶ್ರೇಷ್ಟ ಪ್ರಶಸ್ತಿ ಪಡೆದಿದ್ದರು. ಬಳಿಕ ಯುವಿ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸಿ ಮತ್ತೆ 2012 ರಲ್ಲಿ ಟೀಂ ಇಂಡಿಯಾ ದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದರು. ಆದರೆ ಫಿಟ್‍ನೆಸ್ ಸಮಸ್ಯೆ ಎದುರಿಸುತ್ತಿರುವ ಯುವಿ ಈ ಬಾರಿಯ ಐಪಿಎಲ್ ನಲ್ಲೂ ನೀರಸ ಪ್ರದರ್ಶನ ಮುಂದುವರೆಸಿದ್ದಾರೆ. ಟೂರ್ನಿಯಲ್ಲಿ 7 ಪಂದ್ಯಗಳನ್ನು ಆಡಿರುವ ಯುವಿ 64 ರನ್ ಮಾತ್ರ ಗಳಿಸಿದ್ದಾರೆ. ಈಗ ಪಂಜಾಬ್ ತಂಡದ ಅಂತಿಮ 11 ಆಟಗಾರರ ಪಟ್ಟಿಯಲ್ಲಿ ಸ್ಥಾನಗಳಿಸುವ ವಿಶ್ವಾಸವನ್ನು ಹೊಂದಿದ್ದಾರೆ.