Tag: Kiran Kumar

  • ‘ಸೂತ್ರಧಾರಿ’ಗೆ ಡಬ್ಬಿಂಗ್ ಶುರು ಮಾಡಿದ ಚಂದನ್ ಶೆಟ್ಟಿ

    ‘ಸೂತ್ರಧಾರಿ’ಗೆ ಡಬ್ಬಿಂಗ್ ಶುರು ಮಾಡಿದ ಚಂದನ್ ಶೆಟ್ಟಿ

    ಗಾಯಕನಾಗಿ, ಗೀತರಚನೆಕಾರನಾಗಿ,‌ ಸಂಗೀತ ನಿರ್ದೇಶಕನಾಗಿ ಜನಪ್ರಿಯತೆ ಪಡೆದಿರುವ ಚಂದನ್ ಶೆಟ್ಟಿ,  ಈಗ ನಾಯಕನಾಗಿಯೂ‌ ಚಿರಪರಿಚಿತ. ಪ್ರಸ್ತುತ ಚಂದನ್ ಶೆಟ್ಟಿ (Chandan Shetty) ‘ಸೂತ್ರಧಾರಿ’ (Sutradhari) ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಈ ಸಿನಿಮಾಗೆ ಡಬ್ಬಿಂಗ್ (Dubbing) ಕೆಲಸ ಆರಂಭವಾಗಿದ್ದು, ಇಂದಿನಿಂದ ಚಂದನ್ ಮಾತಿನ ಮರುಲೇಪನ ಮಾಡುತ್ತಿದ್ದಾರೆ. ಇದು ಇವರು ನಾಯಕನಾಗಿ ನಟಿಸುತ್ತಿರುವ ಎರಡನೇ ಚಿತ್ರವಾಗಿದೆ. ಮೈ ಮೂವೀ ಬಜಾರ್ ನ ನವರಸನ್ ಈ ಚಿತ್ರ ನಿರ್ಮಿಸುತ್ತಿದ್ದು, ಕ್ರಿಯೇಟಿವ್ ಹೆಡ್ ಆಗಿಯೂ ಕಾರ್ಯ ನಿರ್ವಹಿಸಲಿದ್ದಾರೆ. ಕಿರಣ್ ಕುಮಾರ್ (Kiran Kumar) ನಿರ್ದೇಶನ ಮಾಡುತ್ತಿದ್ದಾರೆ.

    ಇದು ನನ್ನ ನಿರ್ಮಾಣದ ಐದನೇ ಚಿತ್ರ. ಈವರೆಗೂ ನಮ್ಮ ಸಂಸ್ಥೆಯ ಮೂಲಕ 180ಕ್ಕೂ ಹೆಚ್ಚು ಚಿತ್ರಗಳ ಇವೆಂಟ್ ನಡೆಸಿಕೊಟ್ಟಿದ್ದೇನೆ. ನಿರ್ದೇಶನದೊಂದಿಗೆ ವಿತರಕನಾಗೂ ಕಾರ್ಯ ನಿರ್ವಹಿಸಿದ್ದೇನೆ. ಪ್ರಸ್ತುತ ಸೂತ್ರಧಾರಿ ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ನಮ್ಮ‌ ತಂಡದವರೇ ಆದ ಕಿರಣ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಂದನ್ ಶೆಟ್ಟಿ ನಾಯಕನಾಗಿ, ಅಪೂರ್ವ ನಾಯಕಿಯಾಗಿ ನಟಿಸುತ್ತಿದ್ದಾರೆ ಎಂದಿದ್ದಾರೆ ನಿರ್ಮಾಪಕ ನವರಸನ್. ಇದನ್ನೂ ಓದಿ:ರಾಕಿ ಭಾಯ್ ಲೆಜೆಂಡ್ ಎಂದು ಹಾಡಿ ಹೊಗಳಿದ ಪೂಜಾ ಹೆಗ್ಡೆ

    ನಾಯಕನಾಗಿ ನಾನು ಅಭಿನಯಿಸುತ್ತಿರುವ ಮೊದಲ ಚಿತ್ರ ‘ಎಲ್ರ ಕಾಲೆಳಿಯುತ್ತೆ ಕಾಲ’. ಆ ಚಿತ್ರ ರೆಟ್ರೊ ಶೈಲಿಯಲ್ಲಿ ಇರುತ್ತದೆ.  ಸೂತ್ರಧಾರಿ ಚಿತ್ರದಲ್ಲಿ ನಾನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಕಿರಣ್ ಕುಮಾರ್ ಉತ್ತಮ ಕಥೆ ಬರೆದಿದ್ದಾರೆ. ಮರ್ಡರ್ ಮಿಸ್ಟರಿ ಕಥೆ‌ ಅಂತ ಹೇಳಬಹುದು. ಈ ಚಿತ್ರಕ್ಕಾಗಿ ನಾನು ಹನ್ನೆರಡು ಕೆಜಿ ತೂಕ ಇಳಿಸಿಕೊಂಡಿದ್ದೀನಿ. ಸಂಗೀತ ನಿರ್ದೇಶನವನ್ನೂ ನಾನೇ ಮಾಡುತ್ತಿದ್ದೇನೆ. ‌ಎಲ್ಲರೂ ಗುನಗುವಂತಹ ಹಾಡುಗಳನ್ನು ಕೊಟ್ಟಿದ್ದೇನೆ ಎಂದಿದ್ದಾರೆ ಚಂದನ್ ಶೆಟ್ಟಿ.

    ಸೂತ್ರಧಾರಿ ಎಲ್ಲರಿಗೂ ಮೆಚ್ಚುಗೆಯಾಗುವಂತಹ ಕಥಾಹಂದರ ಹೊಂದಿದೆ. ನಾನು ನವರಸನ್ (Navarasan) ಅವರ ಬಳಿ ಸಹ ನಿರ್ದೇಶಕನಾಗಿ  ಹಾಗೂ ಪಿ.ಕೆ.ಹೆಚ್ ದಾಸ್ ಅವರ ಹತ್ತಿರ ಛಾಯಾಗ್ರಹಣ ವಿಭಾಗದಲ್ಲಿ ಕೆಲಸ‌ ಮಾಡಿದ್ದೇನೆ.‌ ನಿರ್ದೇಶಕನಾಗಿ ಇದು ಮೊದಲ ಚಿತ್ರ ಎಂದು ಹೇಳಿದ್ದ ನಿರ್ದೇಶಕ ಕಿರಣ್ ಕುಮಾರ್, ಅವಕಾಶ ಕೊಟ್ಟ ನವರಸನ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ‌ನಾಯಕಿಯಾಗಿ ಅಪೂರ್ವ (Apoorva), ಹಿರಿಯ ನಟ ತಬಲ ನಾಣಿ ಹಾಗೂ ಗಣೇಶ್ ನಾರಾಯಣ್ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದಾರೆ.

  • ‘ಡ್ಯಾಶ್’ ಹಾಡಿನ ಮೂಲಕ ಕೋಟಿ ಹೃದಯ ಗೆದ್ದ ಚಂದನ್ ಶೆಟ್ಟಿ

    ‘ಡ್ಯಾಶ್’ ಹಾಡಿನ ಮೂಲಕ ಕೋಟಿ ಹೃದಯ ಗೆದ್ದ ಚಂದನ್ ಶೆಟ್ಟಿ

    ಹೊಸ ವರ್ಷದ ಸಂಭ್ರಮಕ್ಕಾಗಿ  ಡಿಸೆಂಬರ್ ಕೊನೆಯಲ್ಲಿ  ‘ಸೂತ್ರಧಾರಿ’ (Sutradhari) ಚಿತ್ರದ ಡ್ಯಾಶ್ (Dash) ಹಾಡು ಬಿಡುಗಡೆಯಾಗಿತ್ತು. ಈ ಹಾಡಿಗೆ ಪ್ರೇಕ್ಷಕರಿಂದ ಅದ್ಭುತ ಪ್ರಶಂಸೆ ವ್ಯಕ್ತವಾಗುತ್ತಿದೆ.  ಕಡಿಮೆ ಸಮಯದಲ್ಲೇ   ಈ ಹಾಡು 10 ಮಿಲಿಯನ್ ಗೂ ಅಧಿಕ ಬಾರಿ ವೀಕ್ಷಣೆ ಗೊಂಡು ದಾಖಲೆ ನಿರ್ಮಿಸಿದೆ.

    ಇತ್ತೀಚಿಗೆ ಕೇಕ್ ಕಟ್ ಮಾಡುವ ಮೂಲಕ ಚಿತ್ರತಂಡ ಸಂಭ್ರಮಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದ ನಿರ್ಮಾಪಕ ನವರಸನ್ (Navarasan),  ‘ನನಗೆ ಈ ಸಂಭ್ರಮ ವಿಶೇಷ. ನಾನು ಇಷ್ಟು ದಿನ ಮಾಡಿರುವ ಸಿನಿಮಾಗಳ ಪೈಕಿ ಇಷ್ಟು ಒಳ್ಳೆಯ ರೆಸ್ಪಾನ್ಸ್ ಯಾವ ಹಾಡಿಗೂ ಸಿಕ್ಕಿಲ್ಲ. ನನ್ನ ಚಿತ್ರದಲ್ಲಿ ಹಿಟ್ ಗೀತೆಯೊಂದು ಬರಬೇಕೆಂದು ಆಸೆಯಿತ್ತು.   ಈಗ ಇಡೇರಿದೆ. ಹೊಸ ವರ್ಷಕ್ಕಾಗಿಯೇ ಈ‌‌ ಸಾಂಗ್ ಮಾಡಿದ್ದೆವು.  ಚಿತ್ರದಲ್ಲಿ ಇನ್ನೂ ಮೂರು ಹಾಡುಗಳಿದ್ದು, ಆ ಹಾಡುಗಳು ಅದ್ಭುತವಾಗಿದೆ.  ಫೆಬ್ರವರಿಯಲ್ಲಿ ಟ್ರೇಲರ್ ಬಿಡುಗಡೆ ಮಾಡುತ್ತೇವೆ.  ಏಪ್ರಿಲ್, ಮೇನಲ್ಲಿ ಸಿನಿಮಾ ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದೇವೆ. ಈ ಒಂದು ಕೋಟಿ ವೀಕ್ಷಣೆಯ ಸಕ್ಸಸ್ ಚಿತ್ರತಂಡಕ್ಕೆ ಸಲ್ಲುತ್ತದೆ’ ಎಂದರು.

    ಈ ಹಾಡನ್ನು ಬರೆದು,   ಸಂಗೀತ ಸಂಯೋಜಿಸುವ ಜೊತೆಗೆ ನಾಯಕನಾಗೂ ನಟಿಸಿರುವ ಚಂದನ್ ಶೆಟ್ಟಿ (Chandan Shetty) ಮಾತನಾಡಿ,  ‘ಸಾಂಗ್ ರಿಲೀಸ್ ಆದ ಮೂರು ವಾರದಲ್ಲೇ ಒಂದು ಕೋಟಿ ವೀಕ್ಷಣೆ ಆಗಿರುವುದು ಮಾಧ್ಯಮಗಳ ಸಹಕಾರದಿಂದ. ಈ ಗೀತೆಗೆ ನಾನು ಹಾಗೂ  ಚೇತನ್ ಸೇರಿ ಸಾಹಿತ್ಯ ಬರೆದಿದ್ದೇವೆ’ ಎಂದರು. ‘ಪ್ರಾರಂಭದಲ್ಲಿ ನಿರ್ಮಾಪಕರಿಗೆ ಹಾಡು ಚೆನ್ನಾಗಿ ಬರಬೇಕು ಸರ್. ಇದೇ ಮೊದಲಬಾರಿ ನಾನು ಬೇರೆ ಸಿನಿಮಾವೊಂದರ ಹಾಡಿನಲ್ಲಿ ನಟಿಸುತ್ತಿದ್ದೆನೆ ಎಂದಿದ್ದೆ. ಇಂದು ಈ ಗೀತೆಯಲ್ಲಿ ನಾನಿರುವುದು ಖುಷಿಯಾಗಿದೆ ಎನ್ನುತ್ತಾರೆ ನಟಿ ಸಂಜನಾ ಆನಂದ್. ಇದನ್ನೂ ಓದಿ: ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ವಿಕ್ರಮ್’ ನಟಿ ಸ್ವಾತಿಷ್ಟ ಕೃಷ್ಣನ್

    ‘ಈ ಗೀತೆ ನಮ್ಮ ಸಿನಿಮಾಗೆ ಆಮಂತ್ರಣ ಆಗಿದ್ದು, ಹಾಡು  ನೋಡಿ ಬಂದ ಜನರನ್ನು ಇಡೀ ಸಿನಿಮಾವನ್ನು ನೋಡುವ ಹಾಗೆ ಮಾಡುವ ಜವಾಬ್ದಾರಿ ನನ್ನದು  ಎಂದು ನಿರ್ದೇಶಕ ಕಿರಣ್ ಕುಮಾರ್   ತಿಳಿಸಿದರು. ಕೊರಿಯೋಗ್ರಾಫರ್ ಮೋಹನ್ ಮಾಸ್ಟರ್ ಮಾತನಾಡುತ್ತಾ, ಈ ಹಾಡು ಕೇವಲ ಎರಡು ದಿನಗಳಲ್ಲಿ ಆಗಿದೆ.   ನನ್ನ ಮತ್ತು ಚಂದನ್ ಶೆಟ್ಟಿ ಕಾಂಬಿನೇಷನ್ ನ ೨ನೇ ಹಿಟ್  ಗೀತೆ ಇದು ಎಂದರು. ಈ ಸಂತಸದ ಸಮಾರಂಭದಲ್ಲಿ ನಟ ತಬಲಾನಾಣಿ, ಸೆಟ್ ವರ್ಕ್ ಮಾಡಿರುವ ಕಿರಣ್, ನಟಿ ಪಲ್ಲವಿ ಛಾಯಾಗ್ರಾಹಕ ಪಿ.ಕೆ.ಹೆಚ್ ದಾಸ್, ಸಾಹಿತಿ ಕಿನ್ನಾಲ್ ರಾಜ್ ತಮ್ಮ ಅನುಭವ ಹಂಚಿಕೊಂಡರು. ಸಸ್ಪೆನ್ಸ, ಥ್ರಿಲ್ಲರ್ ಕಥಾ ಹಂದರ ಒಳಗೊಂಡ ಈ ಚಿತ್ರದಲ್ಲಿ ಅಪೂರ್ವ ನಾಯಕಿಯಾಗಿ ಅಭಿನಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮತ್ತೊಂದು ಸಿನಿಮಾಗೆ ಚಂದನ್ ಶೆಟ್ಟಿ ಹೀರೋ : ವಿಜಯ ದಶಮಿಗೆ ನೂತನ ಚಿತ್ರ

    ಮತ್ತೊಂದು ಸಿನಿಮಾಗೆ ಚಂದನ್ ಶೆಟ್ಟಿ ಹೀರೋ : ವಿಜಯ ದಶಮಿಗೆ ನೂತನ ಚಿತ್ರ

    ಗಾಗಲೇ ಒಂದು ಸಿನಿಮಾದಲ್ಲಿ ಖ್ಯಾತ ಗಾಯಕ, ಸಂಗೀತ ನಿರ್ದೇಶಕ  ಚಂದನ್ ಶೆಟ್ಟಿ (Chandan Shetty) ನಟಿಸಿದ್ದಾರೆ. ಈಗ ಮತ್ತೊಂದು ಸಿನಿಮಾವನ್ನು ಅವರು ಒಪ್ಪಿಕೊಂಡಿದ್ದಾರೆ. ಇವರು ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರ ವಿಜಯ ದಶಮಿ ಶುಭದಿನದಂದು ಆರಂಭವಾಗಲಿದೆ.‌ ನವರಸನ್ (Navarasan) ನಿರ್ಮಾಣದಲ್ಲಿ ಮೂಡಿ ಬರಲಿರುವ ಈ ಚಿತ್ರಕ್ಕೆ ಅಕ್ಟೋಬರ್ 10ರಿಂದ ಚಿತ್ರೀಕರಣ ಆರಂಭವಾಗಲಿದೆ.

    ಕನ್ನಡ ಚಿತ್ರರಂಗದಲ್ಲಿ ಇತ್ತೀಚಿಗೆ ಹಾಡುಗಳ ಬಿಡುಗಡೆ, ಪ್ರೀ ರಿಲೀಸ್ ಇವೆಂಟ್ ಸೇರಿದಂತೆ ಸಾಕಷ್ಟು ಸಮಾರಂಭಗಳನ್ನು ಅದ್ದೂರಿಯಾಗಿ ಆಯೋಜಿಸುವುದರಲ್ಲಿ ಮುಂಚೂಣಿಯಲ್ಲಿರುವ ಮೈ ಮೂವೀ ಬಜಾರ್ ಹಾಗೂ ಶ್ರೇಯಸ್ ಮೀಡಿಯಾ ದ ಪ್ರಮುಖ ನವರಸನ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈವರೆಗೂ “ದಮಯಂತಿ” ಸೇರಿದಂತೆ ನಾಲ್ಕು ಚಿತ್ರಗಳನ್ನು ನವರಸನ್ ನಿರ್ಮಾಣ ಮಾಡಿದ್ದಾರೆ. ನಿರ್ಮಾಣದೊಂದಿಗೆ ಕ್ರಿಯೇಟಿವ್ ನಿರ್ದೇಶಕನಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ‌.

    ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿರಣ್ ಕುಮಾರ್ (Kiran Kumar) ನಿರ್ದೇಶಿಸಲಿದ್ದಾರೆ. ಇದು ಅವರಿಗೆ ಮೊದಲ ಚಿತ್ರ. ಚಂದನ್ ಶೆಟ್ಟಿ ಸಂಗೀತ ಸಂಯೋಜಿಸಲಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ತಬಲ ನಾಣಿ ಸೇರಿದಂತೆ ಅನೇಕ ಹಿರಿಯ ಕಲಾವಿದರು ಇದರಲ್ಲಿ ನಟಿಸುತ್ತಿದ್ದಾರೆ.ನಾಯಕಿಯ ಆಯ್ಕೆ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಸಿನಿಮಾವಾಗ್ತಿದೆ ಮಾಜಿ ಡಾನ್, ಹಾಲಿ ಕನ್ನಡಪರ ಹೋರಾಟಗಾರನ ಜೀವನ ಕಥೆ

    ಸಿನಿಮಾವಾಗ್ತಿದೆ ಮಾಜಿ ಡಾನ್, ಹಾಲಿ ಕನ್ನಡಪರ ಹೋರಾಟಗಾರನ ಜೀವನ ಕಥೆ

    ಗಾಗಲೇ ಕನ್ನಡದಲ್ಲಿ ಸಾಕಷ್ಟು ಬಯೋಪಿಕ್ ಚಿತ್ರಗಳು ಬಂದಿವೆ. ಆ ಸಾಲಿಗೆ ಮತ್ತೊಂದು ಸಿನಿಮಾ ಸೇರಲಿದೆ. ಇದು ಪೂರ್ಣ ಪ್ರಮಾಣದಲ್ಲಿ ಬಯೋಪಿಕ್ ಅಲ್ಲದೇ, ಇದ್ದರೂ, ಮಾಜಿ ರೌಡಿ, ಹಾಲಿ ಕನ್ನಡಪರ ಹೋರಾಟಗಾರನೊಬ್ಬನ ಕಥೆಯನ್ನು ಚಿತ್ರ ಮಾಡಲಾಗುತ್ತಿದೆ. ಆದರೆ, ಆ ಡಾನ್ ಯಾರು? ಏನು ಕಥೆ ಎನ್ನುವ ವಿಚಾರ ಮಾತ್ರ ಚಿತ್ರತಂಡ ಗುಟ್ಟಾಗಿ ಇಟ್ಟಿದೆ. ಇದನ್ನೂ ಓದಿ : ನನ್ನ ಮುಗಿಸ್ಬಿಡ್ತೀನಿ ಅಂತಾನೆ: ಗಂಭೀರ ಆರೋಪ ಮಾಡಿದ ನಟಿ ಸಂಜನಾ

    ಭೂಗತ ಜಗತ್ತಿನ ಚಟುವಟಿಕೆಯಲ್ಲಿದ್ದ ಕೆಲವರು ಕನ್ನಡ ಪರ ಸಂಘಟನೆ ಕಟ್ಟಿಕೊಂಡು, ಹೋರಾಟ ಮಾಡುತ್ತಿರುವುದು ಗುಟ್ಟಿನ ಸಂಗತಿಯೇನಲ್ಲ. ಆದರೆ, ಈ ಸಿನಿಮಾ ಯಾರ ಕುರಿತಾದದ್ದು ಎನ್ನುವುದೇ ಸಸ್ಪೆನ್ಸ್.  ಇದನ್ನೂ ನೋಡಿ : ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

    ಗುರು ದೇಶಪಾಂಡೆ ಸಾರಥ್ಯದಲ್ಲಿ ಪೆಂಟಗನ್ ಸಿನಿಮಾ ಮೂಡಿ ಬರುತ್ತಿದೆ. ಐದು ಜನ ನಿರ್ದೇಶಕರು, ಐದು ಕಥೆಗಳನ್ನು ಈ ಸಿನಿಮಾದಲ್ಲಿ  ಹೇಳುತ್ತಿದ್ದಾರೆ. ಆ ಐದು ಕಥೆಗಳಲ್ಲಿ ಒಂದು ಕನ್ನಡ ಪರ ಹೋರಾಟಗಾರನ ಕುರಿತಾದದ್ದುಆಗಿದೆ ಎನ್ನುವುದು ವಿಶೇಷ. ಇದನ್ನೂ ಓದಿ : ಪ್ರಭಾಸ್‍ಗೆ ಮಿರ್ಚಿ ಪ್ರಶ್ನೆ ಕೇಳಿದ ದೀಪಿಕಾ ಪಡುಕೋಣೆ!

    ಚೂರಿಕಟ್ಟೆ ಖ್ಯಾತಿಯ ರಾಘು ಶಿವಮೊಗ್ಗ, ಆಕಾಶ್ ‍ಶ್ರೀವತ್ಸ, ಚಂದ್ರ  ಮೋಹನ್, ಕಿರಣ್ ಕುಮಾರ್ ತಲಾ ಒಂದೊಂದು ಕಥೆಗೆ ನಿರ್ದೇಶನ ಮಾಡಿದ್ದರೆ, ಕನ್ನಡ ಪರ ಹೋರಾಟಗಾರನ ಕಥೆಗೆ ಗುರು ದೇಶಪಾಂಡೆ ನಿರ್ದೇಶಕರು. ಇದನ್ನೂ ಓದಿ: ಭಾಸ್ಕರ್.ವಿ.ರೆಡ್ಡಿ ಕ್ಯಾಮೆರಾ ಕಣ್ಣಲ್ಲಿ ಸೆರೆಯಾದ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ ‘ಮೈಸೂರು

    ಈಗಾಗಲೇ ನಾಲ್ಕೂ ಕಥೆಗಳ ಚಿತ್ರೀಕರಣ ಮುಗಿದಿದ್ದು, ಐದನೇ ಕಥೆಯಾದ ಕನ್ನಡ ಪರ ಹೋರಾಟಗಾರನ ಕಥೆಯ ಚಿತ್ರೀಕರಣ ಕೂಡ ಕೊನೆಯ ಹಂತದಲ್ಲಿದೆ. ಈ ಪಾತ್ರವನ್ನು ಖ್ಯಾತ ನಟ ಕಿಶೋರ್ ಮಾಡುತ್ತಿದ್ದಾರೆ. ಅಲ್ಲದೇ, ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಗುರುತಿಸಿಕೊಂಡಿರುವ, ನಟಿ ಅಶ್ವಿನಿ ಗೌಡ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

  • ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಮೈಲಿಗಲ್ಲು, ಐತಿಹಾಸಿಕ ಸಾಧನೆಗೆ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳು: ಕಿರಣ್ ಕುಮಾರ್

    ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಮೈಲಿಗಲ್ಲು, ಐತಿಹಾಸಿಕ ಸಾಧನೆಗೆ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳು: ಕಿರಣ್ ಕುಮಾರ್

    ಶ್ರೀಹರಿಕೋಟಾ: ಸ್ವದೇಶಿ ಕ್ರಯೋಜನಿಕ್ ಸಿ-25 ಇಂಜಿನ್ ಹೊಂದಿರುವ ಜಿಎಸ್‍ಎಲ್‍ವಿ ಮಾರ್ಕ್-3 ರಾಕೆಟ್ ಉಡಾವಣೆ ಯಶಸ್ವಿಯಾಗಿದ್ದು, ಜಿಸ್ಯಾಟ್ 19 ಉಪಗ್ರಹ ನಿಗದಿತ ಕಕ್ಷೆಗೆ ಸೇರುವ ಮೂಲಕ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲನ್ನು ಬರೆದಿದೆ.

    ಉಡಾವಣೆ ಯಶಸ್ವಿಯಾಗುತ್ತಿದ್ದಂತೆ ಇಸ್ರೋ ವಿಜ್ಞಾನಿಗಳು ಪರಸ್ಪರ ಅಭಿನಂದಿಸಿದರು. ಬಳಿಕ ಮಾತನಾಡಿದ ಇಸ್ರೋ ಅಧ್ಯಕ್ಷ ಕಿರಣ್ ಕುಮಾರ್, ಇವತ್ತು ನಮಗೆ ಐತಿಹಾಸಿಕ ದಿನ. ಮೊದಲ ಪ್ರಯತ್ನದಲ್ಲೇ ಜಿಎಸ್‍ಎಲ್‍ವಿ ಮಾರ್ಕ್ 3 ರಾಕೆಟ್ ಮೂಲಕ ಜಿಸ್ಯಾಟ್ -19 ಉಪಗ್ರಹ ಕಕ್ಷೆಗೆ ಸೇರಿದೆ. 2002ರಿಂದ ಹಗಲು ಇರುಳು ಈ ಯೋಜನೆಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ತಿಳಿಸಿದರು.

    ರಾಕೆಟ್ ಉಡಾವಣೆ ವೇಳೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಉಪಸ್ಥಿತರಿದ್ದರು.

    https://www.youtube.com/watch?v=T7_8MtGxyN8

     

    ಏನಿದು ಜಿಎಸ್‍ಎಲ್‍ವಿ ಮಾರ್ಕ್-3?
    ಇಸ್ರೋ ವಿಜ್ಞಾನಿಗಳ 25 ವರ್ಷಗಳ ಪರಿಶ್ರಮದ ಫಲದಿಂದ ಜಿಎಸ್‍ಎಲ್‍ವಿ ರಾಕೆಟ್ ತಯಾರಾಗಿದೆ. 640 ಟನ್ ತೂಕದ ಈ ರಾಕೆಟ್‍ಗೆ ಸ್ವದೇಶಿ ನಿರ್ಮಿತ ಕ್ರಯೋಜನಿಕ್ ಎಂಜಿನ್ ಬಳಕೆಯಾಗಿದೆ. 43.43 ಮೀಟರ್ ಉದ್ದ, 4 ಮೀಟರ್ ಸುತ್ತಳತೆಯನ್ನು ಈ ರಾಕೆಟ್ ಹೊಂದಿದ್ದು, 200 ಕ್ಕೂ ಹೆಚ್ಚು ಬಾರಿ ಪರೀಕ್ಷೆಗೊಳಪಡಿಸಲಾಗಿದೆ.

    ಸ್ವದೇಶಿ ಕ್ರಯೋಜನಿಕ್ ಎಂಜಿನ್ ರೂಪುಗೊಂಡಿದ್ದು ಹೇಗೆ?
    1999ರ ಭಾರತ ಪಾಕ್ ಯುದ್ಧದ ವೇಳೆ ಅಮೆರಿಕ ಜಿಪಿಎಸ್ ಮಾಹಿತಿ ನೀಡಲು ನಿರಾಕರಿಸಿದ್ದಕ್ಕೆ ಇಸ್ರೋ ವಿಜ್ಞಾನಿಗಳು ಈಗ ಸ್ವದೇಶಿ ಜಿಪಿಎಸ್ ವ್ಯವಸ್ಥೆಯನ್ನು ರೂಪಿಸುವಲ್ಲಿ ಯಶಸ್ವಿಯಾಗಿದ್ದರೆ. ಇದೇ ರೀತಿಯ ಕಥೆ ಸ್ವದೇಶಿ ಕ್ರಯೋಜನಿಕ್ ಎಂಜಿನ್ ತಯಾರಿಕೆಯಲ್ಲೂ ಇದೆ. ಕ್ರಯೋಜನಿಕ್ ಎಂಜಿನ್ ಗಾಗಿ ಭಾರತ ರಷ್ಯಾವನ್ನು ಅವಲಂಬಿಸಿತ್ತು ಅಷ್ಟೇ ಅಲ್ಲದೇ ಒಪ್ಪಂದ ಸಹ ಮಾಡಿಕೊಂಡಿತ್ತು. ಆದರೆ ಈ ಕ್ರಯೋಜನಿಕ್ ಎಂಜಿನ್ ಭಾರತ ಕ್ಷಿಪಣಿಗಳಿಗೆ ಬಳಸುತ್ತದೆ ಎನ್ನುವ ಭೀತಿಯನ್ನು ಅಮೆರಿಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ರಷ್ಯಾ ಭಾರತಕ್ಕೆ ನೀಡಲು ನಿರಾಕರಿಸಿತು. ಇದರಿಂದಾಗಿ ಇಸ್ರೋ ವಿಜ್ಞಾನಿಗಳು ಸ್ವದೇಶಿ ಕ್ರಯೋಜನಿಕ್ ಎಂಜಿನ್ ತಯಾರಿಸಲು ಮುಂದಾದರು. 15 ವರ್ಷದ ಪರಿಶ್ರಮವಾಗಿ ಕ್ರಯೋಜನಿಕ್ ಎಂಜಿನ್ ಹೊಂದಿರುವ ರಾಕೆಟ್ ಈಗ ಅಭಿವೃದ್ಧಿಯಾಗಿದೆ. 2014ರ ಡಿಸೆಂಬರ್ 18ರಂದು ಜಿಎಸ್‍ಎಲ್‍ವಿ ಮಾರ್ಕ್-3ಯ ಪ್ರಾಯೋಗಿಕ ಉಡಾವಣೆ ಮಾಡಲಾಗಿತ್ತು. ಆದರೆ ಇದರಲ್ಲಿ ಕ್ರಯೋಜನಿಕ್ ಎಂಜಿನ್ ಬಳಕೆ ಮಾಡಿರಲಿಲ್ಲ.

    ಈಗಾಗಲೇ ಕೇವಲ 454 ಕೋಟಿ ರೂ. ಮಂಗಳಯಾನ ಕೈಗೊಳ್ಳುವ ಮೂಲಕ ಇಸ್ರೋ ವಿಶ್ವದಲ್ಲೇ ಕಡಿಮೆ ವೆಚ್ಚದಲ್ಲಿ ಮಂಗಳನ ಅಂಗಳಕ್ಕೆ ಉಪಗ್ರಹ ಕಳುಹಿಸಿದ ದೇಶ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಸ್ರೋದಿಂದ ಉಪಗ್ರಹ ಉಡಾವಣೆ ವೆಚ್ಚ ಉಳಿದ ಏಜೆನ್ಸಿಗಳಿಗಿಂತ 11 ಪಟ್ಟು ಅಗ್ಗವಾಗಿದ್ದು, ಈ ಕ್ರಯೋಜನಿಕ್ ಎಂಜಿನ್ ಇರುವ ಈ ರಾಕೆಟ್ ತಯಾರಿಕೆಗೆ ಇಸ್ರೋ 300 ಕೋಟಿ ರೂ. ವೆಚ್ಚ ಮಾಡಿದೆ.

    ಪವರ್‍ಫುಲ್ ರಾಕೆಟ್:
    ಇಸ್ರೋ ಹೆಚ್ಚಾಗಿ ತನ್ನ ಉಪಗಹಗಳನ್ನು ಉಡಾವಣೆ ಮಾಡಲು ಪಿಎಸ್‍ಎಲ್‍ವಿ(ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್), ಮತ್ತು ಜಿಎಸ್‍ಎಲ್‍ವಿ(ಜಿಯೋಸಿಂಕ್ರೋನಾಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್) ಬಳಕೆ ಮಾಡುತ್ತದೆ. ಪಿಎಸ್‍ಎಲ್‍ವಿ 1500 ಕೆಜಿ ತೂಕ ಸಾಮರ್ಥ್ಯದ ಉಪಗ್ರಹವನ್ನು ಕಕ್ಷಗೆ ಸೇರಿಸುವ ಸಾಮರ್ಥ್ಯವನ್ನು ಹೊಂದಿದ್ದರೆ, ಈ ಜಿಎಸ್‍ಎಲ್‍ವಿ ಮಾರ್ಕ್ 3 ರಾಕೆಟ್ 4 ಸಾವಿರ ಕೆಜಿ ತೂಕದ ಉಪಗ್ರಹವನ್ನು ಒಯ್ಯುವ ಸಾಮರ್ಥ್ಯ ಹೊಂದಿದೆ. 640 ಟನ್ ತೂಕದ ಈ ರಾಕೆಟ್ ಪ್ರಯಾಣಿಕರಿಂದ ತುಂಬಿರುವ 5 ಜಂಬೋ ವಿಮಾನಗಳ ತೂಕಕ್ಕೆ ಸಮವಾಗಿದೆ.

    ಭಾರತಕ್ಕೆ ಲಾಭ ಏನು?
    ಇಸ್ರೋ ಇಲ್ಲಿಯವರೆಗೆ ಭಾರದ ಉಪಗ್ರಹಗಳನ್ನು ವಿದೇಶಿ ರಾಕೆಟ್‍ಗಳ ಮೂಲಕ ಉಡಾವಣೆ ಮಾಡುತಿತ್ತು. ಇನ್ನು ಮುಂದೆ ಈ ಯಶಸ್ಸಿನಿಂದ ಅನ್ಯದೇಶಗಳ ಅವಲಂಬನೆ ತಪ್ಪಲಿದೆ. ಅಷ್ಟೇ ಅಲ್ಲದೇ ಮಾನವ ಸಹಿತ ಬಾಹ್ಯಾಕಾಶ ಯಾತ್ರೆ ಕೈಗೊಳ್ಳಲು ಈ ರಾಕೆಟ್ ಸಹಾಯವಾಗಲಿದೆ.

    ಉಪಗ್ರಹದ ವಿಶೇಷತೆ ಏನು?
    ಜಿಎಸ್‍ಎಲ್‍ವಿ ಮಾರ್ಕ್ 3 ರಾಕೆಟ್ 3136 ಕೆಜಿ ತೂಕವಿರುವ ಜಿಸ್ಯಾಟ್ -19 ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಿದೆ. ಇದು ಇಸ್ರೋ ಉಡಾಯಿಸಿದ ತೂಕದ ಉಪಗ್ರಹವಾಗಿದೆ. ಕಳೆದ ತಿಂಗಳ 5 ರಂದು ಜಿಎಸ್‍ಎಲ್‍ವಿ ಮಾರ್ಕ್ 2 ರಾಕೆಟ್‍ನೊಂದಿಗೆ 2,230 ಕೆಜಿ ತೂಕದ ದಕ್ಷಿಣ ಏಷ್ಯಾ ಉಪಗ್ರಹ ಜಿಸ್ಯಾಟ್ 9 ಉಡಾವಣೆಯನ್ನು ಇಸ್ರೋ ಮಾಡಿತ್ತು. ಇದು ಇದೂವರೆಗಿನ ಇಸ್ರೋ ಉಡಾಯಿಸಿದ ಅತಿಹೆಚ್ಚು ತೂಕದ ಉಪಗ್ರಹ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಉಪಗ್ರಹದ ಲಾಭ ಏನು?
    ಈ ಹಿಂದೆ ಉಡಾವಣೆಯಾಗಿರುವ ಹಳೆಯ 6,7 ಸಂವಹನ ಉಪಗ್ರಹಗಳಿಗೆ ಜಿಸ್ಯಾಟ್-19 ಸಮವಾಗಿದ್ದು ಕೆ-ಎ ಮತ್ತು ಕೆ-ಯು ಬ್ಯಾಂಡ್‍ನ ಟ್ರಾನ್ಸ್ ಪಾಂಡರ್ ಅಳವಡಿಸಲಾಗಿದೆ. ಇದರ ಬಳಕೆಯಿಂದ ಇಂಟರ್ನೆಟ್, ದೂರವಾಣಿ ಮತ್ತು ವಿಡಿಯೋ ಸೇವೆಗಳ ಗುಣಮಟ್ಟ ಸುಧಾರಣೆಯಾಗಲಿದೆ. ಕಕ್ಷೆ ಸೇರಿದ ಬಳಿಕ ಇಂಟರ್ನೆಟ್ ವೇಗ ಮತ್ತು ಕನೆಕ್ಟಿವಿಟಿ ಹೆಚ್ಚಾಗಲಿದೆ. ಇಸ್ರೋ ಇದರಲ್ಲಿ ಮಲ್ಟಿಪಲ್ ಸ್ಪಾಟ್ ಬೀಮ್ ಅಳವಡಿಸಿದೆ. ಉಪಗ್ರಹದಲ್ಲಿ ವಿಕಿರಣ ಸ್ಪೆಕ್ಟ್ರೋಮೀಟರ್(ಜಿಆರೆಎಸ್‍ಪಿ) ಅಳವಡಿಸಲಾಗಿದ್ದು ಇದು ಪ್ರಕೃತಿ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳ ಮೇಲೆ ವಿಕಿರಣಗಳ ಪ್ರಭಾವವನ್ನೂ ಅಧ್ಯಯನ ನಡೆಸಲಿದೆ. ಅಷ್ಟೇ ಅಲ್ಲದೇ ಮೊದಲ ಬಾರಿಗೆ ಸ್ವದೇಶಿ ಲಿಥಿಯಾಂ ಆಯಾನ್ ಬ್ಯಾಟರಿಯನ್ನು ಇಸ್ರೋ ಬಳಕೆ ಮಾಡಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಬ್ಯಾಟರಿಗಳನ್ನು ಎಲೆಕ್ಟ್ರಿಕ್ ಬಸ್, ಕಾರುಗಳಲ್ಲಿ ಬಳಸಬಹುದಾಗಿದೆ.