Tag: Kiran Mazumdar Shaw

  • ಈ ವರ್ಷವೇ ಮೇಡ್ ಇನ್ ಇಂಡಿಯಾ ಕೋವಿಡ್-19 ಔಷಧಿ ಲಭ್ಯ – ಕಿರಣ್ ಮಜುಂದಾರ್ ಶಾ

    ಈ ವರ್ಷವೇ ಮೇಡ್ ಇನ್ ಇಂಡಿಯಾ ಕೋವಿಡ್-19 ಔಷಧಿ ಲಭ್ಯ – ಕಿರಣ್ ಮಜುಂದಾರ್ ಶಾ

    ಬೆಂಗಳೂರು: ಈ ವರ್ಷದಲ್ಲೇ ಮೇಡ್ ಇನ್ ಇಂಡಿಯಾ ಕೋವಿಡ್ -19 ಔಷಧಿ ಲಭ್ಯವಾಗಲಿದೆ ಎಂದು ಬಯೋಕಾನ್ ಕಂಪನಿಯ ಆಡಳಿತ ನಿರ್ದೇಶಕಿ ಕಿರಣ್ ಮಜುಂದಾರ್ ಶಾ ಹೇಳಿದ್ದಾರೆ.

    ಈಗಾಗಲೇ ಎರಡು, ಮೂರು ಸಣ್ಣ ಕಂಪನಿಗಳು ಔಷಧಿ ಅಭಿವೃದ್ಧಿ ಪಡಿಸುತ್ತಿವೆ. ಈ ಕಂಪನಿಗಳು ದೊಡ್ಡ ಕಂಪನಿಗಳ ಸಹಯೋಗದೊಂದಿಗೆ ಔಷಧಿ ತಯಾರಿಸುವ ಕೆಲಸ ಮಾಡುತ್ತಿವೆ. ನಾವು ಔಷಧಿ ನಿರ್ಮಾಣಕ್ಕೆ ಕೈ ಹಾಕಿದ್ದೇವೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

    ಪ್ಲಾಸ್ಮಾ ಥೆರಪಿ ಬಗ್ಗೆ ಕೇಳಲಾದ ಪ್ರಶ್ನೆಗೆ, ಪ್ಲಾಸ್ಮಾ ಥೆರಪಿ ಸಂಬಂಧ ಕೋವಿಡ್-19ನಿಂದ ಗುಣಮುರಾದ ರೋಗಿಗಳ ರಕ್ತ ಸಂಗ್ರಹಿಸುವ ವಿಚಾರದ ಬಗ್ಗೆ ನಾನು ಕೆಲ ರಾಜ್ಯಗಳ ಜೊತೆ ಚರ್ಚಿಸಿದ್ದೇನೆ. ಈ ಪ್ಲಾಸ್ಮಾ ಕೊರೊನಾ ವೈರಸ್ ಅನ್ನು ನಾಶ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು.

    ಈಗಾಗಲೇ ನಮ್ಮ ಬಳಿ ಹಲವು ಡೇಟಾಗಳಿವೆ. ಪ್ಲಾಸ್ಮಾ ಥೆರಪಿ ಯಶಸ್ವಿಯಾದ ಹಲವು ಉದಾಹರಣೆಗಳಿವೆ. 1918ರ ಸ್ಪ್ಯಾನಿಶ್ ಜ್ವರಕ್ಕೆ ಪ್ಲಾಸ್ಮಾ ಥೆರಪಿ ಯಶಸ್ವಿಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೊರೊನಾ ವೈರಸ್‍ಗೆ ಭಾರತೀಯ ವಿಜ್ಞಾನಿಯಿಂದ ಔಷಧಿ ಎಸ್.ಎಸ್. ವಾಸನ್ ನೇತೃತ್ವದಲ್ಲಿ ಸಂಶೋಧನೆ

    ಕೊರೊನಾ ವೈರಸ್ ನಿಯಂತ್ರಣ ಸಂಬಂಧ ಭಾರತ ಸರ್ಕಾರ ಕ್ರಮವನ್ನು ಶ್ಲಾಘಿಸಿದ ಅವರು, ಕ್ವಾರಂಟೈನ್ ವಿಧಾನ, ರಾಷ್ಟ್ರಮಟ್ಟದ ಲಾಕ್‍ಡೌನ್, ವಲಯವಾರು ಝೋನ್ ಗಳಿಂದ ನಿಯಂತ್ರಣವಾಗಿದೆ. ಸದ್ಯಕ್ಕೆ ನಾವು ಸೇಫ್ ಜಾಗದಲ್ಲಿದೆ ಎಂದರು.

    ಕಳೆದ 5 ವಾರಗಳ ಲಾಕ್‍ಡೌನ್ ನಿಂದ ಭಾರತ ಹಲವು ಪಾಠಗಳನ್ನು ಕಲಿತಿದೆ. ಭಾರತದ ಆಸ್ಪತ್ರೆಗಳು ರೋಗಿಗಳಿಂದ ಭರ್ತಿ ಆಗಿಲ್ಲ. ಕಡಿಮೆ ಸಂಖ್ಯೆಯ ರೋಗಿಗಳು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಭಾರತದಲ್ಲಿ ಶೇ.90 ರಷ್ಟು ಜನರು 60 ವರ್ಷದ ಒಳಗಿನವರು. ವಿಶ್ವದಲ್ಲಿ ಶೇ.80 ರಷ್ಟು ಮೃತಪಟ್ಟವರು 60 ವರ್ಷ ಮೇಲ್ಪಟ್ಟವರು ಎಂದು ಅಭಿಪ್ರಾಯಪಟ್ಟರು.

    ನನ್ನ ಪ್ರಕಾರ ಮೇ 3 ರಿಂದ ಹಂತ ಹಂತವಾಗಿ ಲಾಕ್‍ಡೌನ್ ತೆಗೆದು ಜೂನ್ ಕೊನೆಯಲ್ಲಿ ಎಲ್ಲ ಸೇವೆ ಆರಂಭಿಸಬಹುದು. ಆರ್ಥಿಕತೆಗೆ ಸಮಸ್ಯೆಯಾಗುತ್ತದೆ. ಆದರೆ ಜೀವವೂ ಮುಖ್ಯವಾಗುತ್ತದೆ ಎಂದು ತಿಳಿಸಿದರು.

    ಕೆಲ ರಾಜ್ಯಗಳಲ್ಲಿ ಕೊರೊನಾ ನಿಯಂತ್ರಣವಾಗಬೇಕು. ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಸಾಕಷ್ಟು ಪ್ರಕರಣಗಳು ವರದಿಯಾಗಿದೆ. ಕರ್ನಾಟಕ ಉತ್ತಮವಾಗಿ ಕೆಲಸ ಮಾಡುತ್ತಿದ್ದು ಕಡಿಮೆ ಸಾವಾಗಿದೆ. ಪಾಸಿಟಿವ್ ಪ್ರಕರಣಗಳು ಜಾಸ್ತಿ ಇದ್ದರೂ ಮೃತಪಡುವವರ ಸಂಖ್ಯೆ ಕಡಿಮೆ ಇರುವ ಕಾರಣ ನಾವು ಸುರಕ್ಷಿತ ವಲಯದಲ್ಲಿದ್ದೇವೆ ಎಂದು ತಿಳಿಸಿದರು.

     

  • ಟ್ಯಾಕ್ಸ್ ಟೆರರಿಸಂ ದೇಶದ ಸಾಧನೆಯನ್ನು ಕುಗ್ಗಿಸುತ್ತಿದೆ: ಇನ್ಫೋಸಿಸ್ ಮಾಜಿ ನಿರ್ದೇಶಕ

    ಟ್ಯಾಕ್ಸ್ ಟೆರರಿಸಂ ದೇಶದ ಸಾಧನೆಯನ್ನು ಕುಗ್ಗಿಸುತ್ತಿದೆ: ಇನ್ಫೋಸಿಸ್ ಮಾಜಿ ನಿರ್ದೇಶಕ

    ನವದೆಹಲಿ: ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಅವರ ಸಾವಿನ ಬೆನ್ನಲ್ಲೇ ಉದ್ಯಮಿಗಳು ಟ್ಯಾಕ್ಸ್ ಟೆರರಿಸಂ ಕುರಿತು ತಮ್ಮ ಅಸಮಾಧಾನ ಹೊರ ಹಾಕುತ್ತಿದ್ದಾರೆ.

    ಇದೀಗ ಉದ್ಯಮಿ ಹಾಗೂ ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನ್ ದಾಸ್ ಪೈ ಆಕ್ರೋಶ ವ್ಯಕ್ತಪಡಿಸಿದ್ದು, ಉದ್ಯಮಿಗಳು ಟ್ಯಾಕ್ಸ್ ಟೆರರಿಸಂನಿಂದ ಬೇಸತ್ತು ಹೋಗಿದ್ದಾರೆ ಎಂದು ತಿಳಿಸಿದ್ದಾರೆ.

    ಟ್ಯಾಕ್ಸ್ ಟೆರರಿಸಂ ಉದ್ಯಮಿಗಳನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ ಎಂಬ ಮಾತುಗಳು ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ.ಸಿದ್ಧಾರ್ಥ್ ಅವರ ಸಾವಿನ ನಂತರ ಕೇಳಿ ಬಂದಿತ್ತು. ಇದೀಗ ಮೋಹನ್ ದಾಸ್ ಪೈ ಹಾಗೂ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಸಹ ಈ ಕುರಿತು ಅಸಮಾಧಾನ ಹೊರ ಹಾಕಿದ್ದು, ರಾಷ್ಟ್ರೀಯ ವಾಹಿನಿಯೊಂದಕ್ಕೆ ನೀಡಿದ ಸಂರ್ದಶದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

    ತೆರಿಗೆ ಭಯೋತ್ಪಾದನೆಯು ದೇಶದಲ್ಲಿನ ವ್ಯಾಪಾರದ ಸರಳತೆಗೆ ಅಪಾಯವನ್ನು ತಂದೊಡ್ಡಿದೆ. ಇದನ್ನು ಕೊನೆಗೊಳಿಸಲು ಸರ್ಕಾರ ಭರವಸೆ ನೀಡಿದರೂ ಅನಗತ್ಯ ತೆರಿಗೆ ಕುರಿತು ದೂರುಗಳು ಇನ್ನೂ ವ್ಯಾಪಕವಾಗಿವೆ. ಇದು ದೇಶದ ಸಾಧನೆಯನ್ನು ಕುಗ್ಗಿಸುತ್ತದೆ ಎಂದು ಮೋಹನ್ ದಾಸ್ ಪೈ ಅಭಿಪ್ರಾಯಪಟ್ಟಿದ್ದಾರೆ.

    ಈ ಕುರಿತು ಪೈ ಅವರು ತಮ್ಮ ಜೀವನದಲ್ಲಾದ ಘಟನೆ ಮೂಲಕ ವಿವರಿಸಿದ್ದು, ಕಿರಣ್ ಎಂಬ ಸರ್ಕಾರಿ ಅಧಿಕಾರಿ ಸಂದೇಶ ಕಳುಹಿಸಿದ್ದರು. ಇದಕ್ಕೆ ನಾನು ಉತ್ತರಿಸಿ, ಇದು ಸರಿಯಾದ ಕ್ರಮವಲ್ಲ ಎಂದು ತಿಳಿಸಿದೆ. ಇದು ಅಧಿಕಾರಿಗಳಲ್ಲಿ ಯಾವ ರೀತಿಯ ಸಂಸ್ಕøತಿ ಬೆಳೆದಿದೆ ಎಂಬುದನ್ನು ತೋರಿಸುತ್ತದೆ. ಇದನ್ನು ಯಾರು ಯೋಚಿಸುತ್ತಾರೆ, ಅವರು ಹುಟ್ಟಿರುವುದೇ ನಮ್ಮನ್ನು ಆಳುವುದಕ್ಕಾಗಿ ಎಂಬ ಅಹಂನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

    ಈ ಘಟನೆ ಕುರಿತು ಅಧಿಕಾರಿ ಮತ್ತೆ ಪ್ರತ್ಯುತ್ತರ ನೀಡಿದ್ದು, ಇನ್ಫೋಸಿಸ್‍ನ ಸಹೋದ್ಯೋಗಿಯನ್ನು ಕರೆದು ನನ್ನನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಬೆದರಿಕೆ ಹಾಕಿದ್ದರು ಎಂದು ಘಟನೆಯನ್ನು ವಿವರಿಸಿದ್ದಾರೆ. ಇಂತಹ ವರ್ತನೆಗಳನ್ನು ಖಂಡಿಸಬೇಕಿದೆ. ಈ ಮೂಲಕ ತೆರಿಗೆ ಭಯೋತ್ಪಾದನೆಯನ್ನು ತೊಲಗಿಸಬೇಕಿದೆ. ಆದರೆ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಈ ಕುರಿತು ಭರವಸೆ ನೀಡಿದ್ದರು. ಅಲ್ಲದೆ, ಇದು 2014ರ ಎನ್‍ಡಿಎ ಪ್ರಣಾಳಿಕೆಯಲ್ಲಿಯೂ ಇದೆ. ಕಳೆದ 5 ವರ್ಷಗಳಿಂದ ಇದು ದ್ವಿಗುಣಗೊಂಡಿದ್ದು, 6 ಲಕ್ಷ ಕೋಟಿ ರೂ. ಸಂಗ್ರಹವಾಗುತ್ತಿದೆ. ಹೀಗಾಗಿ ಟ್ಯಾಕ್ಸ್ ಟೆರರಿಸಂ ಕಡಿಮೆಯಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಕಳೆದ ವರ್ಷದ ಬಜೆಟ್‍ನಲ್ಲಿ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸದೆ ಹಣಕಾಸು ಸಚಿವರನ್ನು ದೋಷಿಸಿದ್ದರು ಎಂದು ಪೈ ವಿವರಿಸಿದ್ದಾರೆ.

    ಈ ಟ್ಯಾಕ್ಸ್ ಟೆರರಿಸಂ ತೊಲಗಿಸಬೇಕಾದಲ್ಲಿ ಸರ್ಕಾರ ಹಾಗೂ ಕಂಪನಿಗಳ ಸಿಇಓಗಳ ನಡುವೆ ಆಗಾಗ ಸಭೆ ಅಥವಾ ಮಾತುಕತೆ ನಡೆಸಬೇಕು. ಆಗ ಉದ್ಯಮಿಗಳ ಸಮಸ್ಯೆಗಳನ್ನು ತಿಳಿಯಬಹುದು ಎಂದು ಹೇಳಿದ್ದಾರೆ.

    ಕೆಫೆ ಕಾಫಿ ಡೇ ಸಿದ್ಧಾರ್ಥ್ ಅವರು ಸಾವನ್ನಪ್ಪುವುದಕ್ಕೂ ಮುನ್ನ ತಮ್ಮ ಪತ್ರದಲ್ಲಿ ಆದಾಯ ತೆರಿಗೆ ಅಧಿಕಾರಿಗಳ ಕಿರುಕುಳದಿಂದ ಬೇಸತ್ತಿದ್ದೇನೆ ಎಂದು ಉಲ್ಲೇಖಿಸಿದ್ದರು. ನಮ್ಮ ಶೇರನ್ನು ಎರಡು ವಿವಿಧ ಹಂತಗಳಲ್ಲಿ ಸಲ್ಲಿಸಿ, ನಮ್ಮ ಕಾಫಿಯ ದಿನದ ಶೇರುಗಳ ಸ್ಥಾನವನ್ನು ಪಡೆದುಕೊಂಡಿದ್ದೇವೆ. ಪರಿಷ್ಕೃತ ಆದಾಯ ತೆರಿಗೆಯನ್ನೂ ನಮ್ಮಿಂದ ಸಲ್ಲಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದರು. ಆದಾಯ ತೆರಿಗೆ ಇಲಾಖೆಯು ಈ ಆರೋಪಗಳನ್ನು ತಳ್ಳಿ ಹಾಕಿತ್ತು, ಆದಾಯ ತೆರಿಗೆ ಕಾಯ್ದೆಯ ನಿಬಂಧನೆಗಳ ಪ್ರಕಾರ ಇಲಾಖೆ ಕಾರ್ಯನಿರ್ವಹಿಸಿದೆ ಎಂದು ಪ್ರತಿಕ್ರಿಯಿಸಿತ್ತು.

  • ಕುತೂಹಲ ಮೂಡಿಸಿತು ಕಿರಣ್ ಮಜುಂದಾರ್ ಶಾ, ಸಿಎಂ ಎಚ್‍ಡಿಕೆ ಭೇಟಿ!

    ಕುತೂಹಲ ಮೂಡಿಸಿತು ಕಿರಣ್ ಮಜುಂದಾರ್ ಶಾ, ಸಿಎಂ ಎಚ್‍ಡಿಕೆ ಭೇಟಿ!

    ಬೆಂಗಳೂರು: ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರನ್ನು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಭೇಟಿ ಮಾಡಿದ್ದಾರೆ.

    ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಿರಣ್, ಪ್ರಮುಖವಾಗಿ ಬೆಂಗಳೂರಿನ ಟ್ರಾಫಿಕ್ ನಿಯಂತ್ರಣ ಬಗ್ಗೆ, ಕಸ ನಿರ್ವಹಣೆ ಕುರಿತಾಗಿ ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಿದೆ ಅಂತ ಹೇಳಿದ್ರು.

    ಈ ಕುರಿತು ಸಮಸ್ಯೆ ಬಗೆಹರಿಸಲು ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಕೆಲವೇ ತಿಂಗಳಲ್ಲಿ ಇಂದಿನ ಚರ್ಚೆಯ ಪರಿಣಾಮ ಎದುರಿಸಲಿದ್ದೇವೆ. ಟ್ರಾಫಿಕ್ ನಿಯಂತ್ರಣಕ್ಕೆ ಬೃಹತ್ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಮನವಿ ಮಾಡಿದ್ದೇವೆ ಅಂದ್ರು.

    ಮೆಟ್ರೋ ಕಾಮಗಾರಿ ಉತ್ತರ ರೀತಿಯಲ್ಲಿ ಸಾಗಿದೆ. ವೈಟ್ ಫೀಲ್ಡ್, ಎಲೆಕ್ಟ್ರಾನಿಕ್ ಸಿಟಿ ಹಾಗು ಹೆಬ್ಬಗೋಡಿಯಂತ್ರ ಸಂಚಾರಿ ದಟ್ಟಣೆಯ ಪ್ರದೇಶಗಳಿಗೆ ಮೆಟ್ರೋ ಅವಶ್ಯಕವಾಗಿದೆ. ಈ ಎಲ್ಲ ವಿಚಾರಗಳ ಬಗ್ಗೆ ಸಿಎಂ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಕೆಲವೇ ತಿಂಗಳಲ್ಲಿ ಇಂದಿನ ಚರ್ಚಾ ವಿಷಯಗಳ ಬಗ್ಗೆ ಪರಿಣಾಮ ಕಾಣುವ ವಿಶ್ವಾಸವಿದೆ ಅಂತ ಅವರು ತಿಳಿಸಿದ್ರು.

    ಕಿರಣ್ ಮಜುಂದಾರ್ ಶಾ ಅವರು ಇತ್ತೀಚೆಗಷ್ಟೇ ಕನ್ನಡಪರ ಸಂಘಟನೆಗಳ ಕುರಿತು ಅವಹೇಳನಕಾರಿ ಟ್ವೀಟ್ ಮಾಡಿ ಕನ್ನಡ ಸಂಘಟನೆಗಳ ವಿರೋಧ ಎದುರಿಸಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿರುವುದು ಮಹತ್ವ ಪಡೆದಿದೆ.

  • ಕನ್ನಡಿಗರ ಕ್ಷಮೆ ಕೇಳುವಂತೆ ಕಿರಣ್ ಮಜುಂದಾರ್ ಭಾವಚಿತ್ರಕ್ಕೆ ಪೊರಕೆ ಏಟು!

    ಕನ್ನಡಿಗರ ಕ್ಷಮೆ ಕೇಳುವಂತೆ ಕಿರಣ್ ಮಜುಂದಾರ್ ಭಾವಚಿತ್ರಕ್ಕೆ ಪೊರಕೆ ಏಟು!

    ರಾಮನಗರ: ಕನ್ನಡ ಹಾಗೂ ಕನ್ನಡ ಪರ ಹೋರಾಟಗಾರರ ಬಗ್ಗೆ ಲಘುವಾಗಿ ಮಾತನಾಡಿದ್ದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಹೇಳಿಕೆ ಖಂಡಿಸಿ ಚನ್ನಪಟ್ಟಣದಲ್ಲಿ ಇಂದು ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು.

    ನಗರದ ಚರ್ಚ್ ಸ್ಟ್ರೀಟ್‍ನಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಕಿರಣ್ ಮಜುಂದಾರ್ ಷಾ ಭಾವಚಿತ್ರಕ್ಕೆ ಪೊರಕೆಯಿಂದ ಹೊಡೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೇ ಕಿರಣ್ ಮಜುಂದಾರ್ ವಿರುದ್ಧ ಧಿಕ್ಕಾರ ಕೂಗಿದರು. ಕನ್ನಡಿಗರ ವಿರುದ್ಧ ಮಾತನಾಡಿರುವ ಕಿರಣ್ ಮಜುಂದಾರ್ ಷಾ ಕೂಡಲೇ ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಅಲ್ಲದೇ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಕಿರಣ್ ಶಾ ಹೇಳಿಕೆ ಏನು?
    ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಪಾಠ-ಪ್ರವಚನ ನಡೆಸುವ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಅದರ ಅಧ್ಯಕ್ಷರು, ಕನ್ನಡಪರ ಹೋರಾಟಗಾರರು ಹಾಗೂ ಸಾಹಿತಿಗಳು ಕಿಡಿಗೇಡಿಗಳು ಎಂದು ಟೀಕೆ ಮಾಡಿದ್ದರು.