Tag: Kiran Rijiju

  • ಜನಸೇವೆಗಾಗಿ 30-40 ವರ್ಷಗಳ ಕಾಲ ಬದುಕುವ ಆಶಯವಿದೆ – ಉತ್ತರಾಧಿಕಾರಿ ವದಂತಿಗೆ ತೆರೆ ಎಳೆದ ದಲೈ ಲಾಮಾ

    ಜನಸೇವೆಗಾಗಿ 30-40 ವರ್ಷಗಳ ಕಾಲ ಬದುಕುವ ಆಶಯವಿದೆ – ಉತ್ತರಾಧಿಕಾರಿ ವದಂತಿಗೆ ತೆರೆ ಎಳೆದ ದಲೈ ಲಾಮಾ

    ನವದೆಹಲಿ: ಮುಂದಿನ 30-40 ವರ್ಷಗಳ ಕಾಲ ಜನರಿಗೆ ಸೇವೆ ಸಲ್ಲಿಸಲು ಬದುಕುವ ಆಶಯ ಹೊಂದಿದ್ದೇನೆ ಎಂದು ಟಿಬೆಟಿಯನ್ ಆಧ್ಯಾತ್ಮಿಕ ನಾಯಕ (Tibetan spiritual leader) ದಲೈ ಲಾಮಾ (Dalai Lama) ಹೇಳಿದ್ದಾರೆ. ಅವರ 90ನೇ ಜನ್ಮದಿನವಾದ ಇಂದು ಉತ್ತರಾಧಿಕಾರಿಯ ಘೋಷಣೆಯ ಕುರಿತಾದ ವದಂತಿಗಳ ನಡುವೆ ಈ ಹೇಳಿಕೆ ನೀಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ಅಂತ್ಯ ಹಾಡಿದ್ದಾರೆ.

    ಮೆಕ್ಲಿಯೋಡ್ಗಂಜ್‌ನ ತ್ಸುಗ್ಲಾಗ್‌ಖಾಂಗ್‌ನ ಮುಖ್ಯ ದಲೈ ಲಾಮಾ ದೇವಸ್ಥಾನದಲ್ಲಿ ತಮ್ಮ 90ನೇ ಹುಟ್ಟುಹಬ್ಬಕ್ಕೂ ಮುನ್ನ ನಡೆದ ದೀರ್ಘಾಯುಷ್ಯದ ಪ್ರಾರ್ಥನಾ ಸಮಾರಂಭದಲ್ಲಿ ದಲೈ ಲಾಮಾ ಟೆನ್ಜಿನ್ ಗ್ಯಾಟ್ಸೊ ಅವರು ಮಾತನಾಡಿದರು. ಅವಲೋಕಿತೇಶ್ವರನ ಆಶೀರ್ವಾದ ತಮ್ಮೊಂದಿಗಿದೆ ಎಂಬ ಸ್ಪಷ್ಟ ಚಿಹ್ನೆಗಳು ಸಿಗುತ್ತಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮರಾಠಿ ಕಲಿಯಲ್ಲ ಎಂದಿದ್ದಕ್ಕೆ ಉದ್ಯಮಿ ಕಚೇರಿಯೇ ಧ್ವಂಸ

    ನಾನು ಇಲ್ಲಿಯವರೆಗೆ ನನ್ನ ಕೈಲಾದಷ್ಟು ಜನರ ಸೇವೆ ಮಾಡಲು ಪ್ರಯತ್ನಿಸಿದ್ದೇನೆ. ನಾನು ಇನ್ನೂ 30-40 ವರ್ಷಗಳ ಕಾಲ ಬದುಕುತ್ತೇನೆ ಎಂದು ಭಾವಿಸುತ್ತೇನೆ. ಇಲ್ಲಿಯವರೆಗೆ ನಿಮ್ಮ ಪ್ರಾರ್ಥನೆಗಳು ಫಲ ನೀಡಿವೆ. ನಾವು ನಮ್ಮ ದೇಶವನ್ನು ಕಳೆದುಕೊಂಡು ಭಾರತದಲ್ಲಿ ದೇಶಭ್ರಷ್ಟರಾಗಿ ವಾಸಿಸುತ್ತಿದ್ದರೂ, ಇಲ್ಲಿ ನಾನು ಬಹಳಷ್ಟು ಜನರಿಗೆ ಸೇವೆ ಮಾಡಲು ಸಾಧ್ಯವಾಗಿದೆ. ನಾನು ಇನ್ನಷ್ಟು ಜನರ ಸೇವೆ ಮಾಡಲು ಬಯಸುತ್ತಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಹೇಳಿಕೆ ವಿವಾದ | ಕೊಡವ ಸಮುದಾಯ ಎಲ್ಲರನ್ನೂ ಬೆಂಬಲಿಸಿದೆ: ನಟಿ ಪ್ರೇಮ

    ದಲೈ ಲಾಮಾ ಅವರ 90ನೇ ಹುಟ್ಟುಹಬ್ಬವನ್ನು ಮೆಕ್ಲಿಯೋಡ್ಗಂಜ್‌ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆಚರಿಸಲಾಗುತ್ತಿದೆ. ಇಂದು ಕೇಂದ್ರ ಸಚಿವ ಕಿರಣ್ ರಿಜಿಜು, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು, ಹಾಲಿವುಡ್ ನಟ ರಿಚರ್ಡ್ ಗೆರೆ ಸೇರಿ ಇತರರು ಮುಖ್ಯ ಟಿಬೆಟಿಯನ್ ದೇವಾಲಯ ಮತ್ತು ದಲೈ ಲಾಮಾ ಅವರ ನಿವಾಸದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ʻಆಪರೇಷನ್ ಸಿಂಧೂರʼ ಯಶಸ್ಸಿನ ಬೆನ್ನಲ್ಲೇ 1 ಲಕ್ಷ ಕೋಟಿ ಮೊತ್ತದ ರಕ್ಷಣಾ ಯೋಜನೆಗಳಿಗೆ ಮೋದಿ ಸರ್ಕಾರ ಅಸ್ತು

    ದಲೈ ಲಾಮಾ ಅವರ ದೀರ್ಘಾಯುಷ್ಯ ಮತ್ತು ಆರೋಗ್ಯಕ್ಕಾಗಿ ಬೆಳಗ್ಗೆ ಬೌದ್ಧ ಮಠದಲ್ಲಿ ಪ್ರಾರ್ಥನಾ ಸಭೆಯನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 8:00ಗಂಟೆಗೆ ಪ್ರಾರಂಭವಾದ ಈ ಪ್ರಾರ್ಥನಾ ಸಭೆಯಲ್ಲಿ ದಲೈ ಲಾಮಾ ಸ್ವತಃ ಹಾಜರಿದ್ದರು. ಭಾನುವಾರ ದಲೈ ಲಾಮಾ ಅವರು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಲಿದ್ದಾರೆ. ಈ ವೇಳೆ ತಮ್ಮ ಅನುಯಾಯಿಗಳನ್ನು ಸಹ ಅವರು ಆಶೀರ್ವದಿಸಲಿದ್ದಾರೆ. ಇದನ್ನೂ ಓದಿ: 20 ವರ್ಷಗಳ ಬಳಿಕ ಮತ್ತೆ ಒಂದಾದ ಉದ್ಧವ್‌-ರಾಜ್‌ ಠಾಕ್ರೆ

    ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiran Rijiju), ದಲೈ ಲಾಮಾ ಅವರ 90ನೇ ಹುಟ್ಟುಹಬ್ಬದ ಆಚರಣೆಯಲ್ಲಿ ಭಾಗವಹಿಸಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದರು. ಅವರು ದಲೈ ಲಾಮಾ ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿ, ದಲೈ ಲಾಮಾ ಅವರ ಹುಟ್ಟುಹಬ್ಬದ ಆಚರಣೆಯನ್ನು ಭಾನುವಾರ ಆಚರಿಸಲಾಗುವುದು ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ.

  • ವಕ್ಫ್ ಫೈಟ್: ಏನಿದು ವಿವಾದ?- ಹೊಸ ತಿದ್ದುಪಡಿ ಮಸೂದೆಯಿಂದ ಆಗುವ ಬದಲಾವಣೆ ಏನು?

    ವಕ್ಫ್ ಫೈಟ್: ಏನಿದು ವಿವಾದ?- ಹೊಸ ತಿದ್ದುಪಡಿ ಮಸೂದೆಯಿಂದ ಆಗುವ ಬದಲಾವಣೆ ಏನು?

    – ವಕ್ಫ್ ತಿದ್ದುಪಡಿ ಮಸೂದೆಯಲ್ಲಿ ಬಡವರಿಗೆ ಆಗೋ ಪ್ರಯೋಜನಗಳೇನು?
    – ಪರ-ವಿರೋಧದ ಚರ್ಚೆ ಏನು?

    ದೇಶಾದ್ಯಂತ ವಕ್ಫ್ ಸುದ್ದಿಯೇ ಹೆಚ್ಚು ಸದ್ದು ಮಾಡುತ್ತಿದೆ. ಕೇಂದ್ರ ಸರ್ಕಾರವು ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು ಎಂದಿದೆ. ಸುದೀರ್ಘ ಚರ್ಚೆ, ವಾಕ್ಸಮರದ ನಡುವೆ ಮಸೂದೆ ಅಂಗೀಕಾರಗೊಂಡಿದೆ. ಸಂಸತ್‌ನ ಹೊರಗೂ ವಕ್ಫ್ ಬಗೆಗಿನ ಪರ-ವಿರೋಧದ ಚರ್ಚೆ ಜೋರಾಗಿದೆ. ಕೇಂದ್ರದ ಈ ಮಸೂದೆಗೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಮುಸ್ಲಿಂ ಸಂಘಟನೆಗಳಲ್ಲಿ ಕೆಲವು ಆಕ್ಷೇಪ ವ್ಯಕ್ತಪಡಿಸಿದರೆ, ಇನ್ನೂ ಕೆಲವು ಬೆಂಬಲ ಸೂಚಿಸಿವೆ.

    ತಿದ್ದುಪಡಿಯಾದ ವಕ್ಫ್ ಕಾಯ್ದೆಯು ಹಿಂದಿನ ಕಾಯ್ದೆಯ ನ್ಯೂನತೆಗಳನ್ನು ಸರಿಪಡಿಸುವುದು, ನೋಂದಣಿ ಪ್ರಕ್ರಿಯೆ ಸುಧಾರಿಸುವುದು, ವಕ್ಫ್ ಆಸ್ತಿಗಳ ನಿರ್ವಹಣೆ, ಪಾರದರ್ಶಕತೆ, ವಕ್ಫ್ ದಾಖಲೆಗಳನ್ನು ನಿರ್ವಹಿಸುವಲ್ಲಿ ತಂತ್ರಜ್ಞಾನದ ಪಾತ್ರವನ್ನು ಹೆಚ್ಚಿಸುವುದು, ಬಡವರ ಹಿತಕ್ಕಾಗಿ ಮಹತ್ವದ ಬದಲಾವಣೆ ತರಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಆದರೆ, ವಿಪಕ್ಷಗಳು ಮಸೂದೆಗೆ ವಿರೋಧ ವ್ಯಕ್ತಪಡಿಸಿವೆ. ಇದು ಅಸಾಂವಿಧಾನಿಕ, ಮುಸ್ಲಿಮರ ಹಕ್ಕು ಕಸಿಯುವ ಯತ್ನ, ಧಾರ್ಮಿಕ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂದು ಟೀಕಿಸಿವೆ.

    ಏನಿದು ವಕ್ಫ್ ವಿವಾದ? ಹೊಸ ತಿದ್ದುಪಡಿ ಮಸೂದೆಯಲ್ಲೇನಿದೆ? ಕೇಂದ್ರದ ಸಮರ್ಥನೆ ಏನು? ವಿಪಕ್ಷಗಳ ವಿರೋಧ ಯಾಕೆ? ಸಂಸತ್‌ನಲ್ಲಿ ಮಸೂದೆ ಅಂಗೀಕಾರವಾದರೆ ಆಗುವ ಬದಲಾವಣೆಗಳೇನು ಎಂಬಿತ್ಯಾದಿ ಪ್ರಶ್ನೆಗಳಿಗೆ ವಿವರ ಇಲ್ಲಿದೆ.

    ವಕ್ಫ್ ಎಂದರೇನು?
    ವಕ್ಫ್ ಎನ್ನುವುದು ಮುಸ್ಲಿಮರು ಆಸ್ತಿ ರೂಪದಲ್ಲಿ ನೀಡುವ ದತ್ತಿ ಅಥವಾ ಧಾರ್ಮಿಕ ದೇಣಿಗೆಯಾಗಿದೆ. ಮಸೀದಿ, ದರ್ಗಾ, ಸ್ಮಶಾನಗಳು, ಆಶ್ರಯ ಮನೆಗಳು, ಶಿಕ್ಷಣ ಸಂಸ್ಥೆಗಳು ಮುಂತಾದ ಧಾರ್ಮಿಕ ಮತ್ತು ದತ್ತಿ ಉದ್ದೇಶಗಳಿಗಾಗಿ ದೇವರ ಹೆಸರಿನಲ್ಲಿ ಸಮರ್ಪಿಸಲಾದ ಆಸ್ತಿಯಾಗಿದೆ. 1954ರಲ್ಲಿ ವಕ್ಫ್ ಕಾಯ್ದೆ ಜಾರಿಗೆ ಬಂದಿತು. ಈ ಕಾನೂನಿನ ಅನ್ವಯ, ಇಸ್ಲಾಂ ಅನ್ನು ಪ್ರತಿಪಾದಿಸುವ ಯಾವುದೇ ವ್ಯಕ್ತಿ ಧಾರ್ಮಿಕ ಕಾರಣಕ್ಕಾಗಿ ಆಸ್ತಿಯನ್ನು ದಾನ ಮಾಡಿದರೆ, ಅದು ವಕ್ಫ್ ಆಸ್ತಿಯಾಗಿ ವಕ್ಫ್ ಮಂಡಳಿಯ ಸ್ವಾಧೀನಕ್ಕೆ ಒಳಪಡುತ್ತದೆ. ವಕ್ಫ್ ಆಸ್ತಿಯನ್ನು ತನ್ನದು ಎಂದು ಘೋಷಿಸಿ ವಶಕ್ಕೆ ಪಡೆಯುವ ಸವೋಚ್ಛ ಅಧಿಕಾರವನ್ನು ವಕ್ಫ್ ಮಂಡಳಿ ಹೊಂದಿದೆ.

    ವಕ್ಫ್ ಆಸ್ತಿ ಆಗುವುದು ಹೇಗೆ?
    ಪತ್ರ ಅಥವಾ ಉಪಕರಣದ ಮೂಲಕ ಆಸ್ತಿಯನ್ನು ಧಾರ್ಮಿಕ ಅಥವಾ ದತ್ತಿ ಉದ್ದೇಶಗಳಿಗಾಗಿ ಬಳಸಿದರೆ ವಕ್ಫ್ ಆಗಬಹುದು. ಇಸ್ಲಾಂ ಧರ್ಮವನ್ನು ಪ್ರತಿಪಾದಿಸುವ ಮುಸ್ಲಿಮೇತರನು ಕೂಡ ವಕ್ಫ್ ರಚಿಸಬಹುದು. ಆದರೆ, ವಕ್ಫ್ ಅನ್ನು ರಚಿಸುವ ಉದ್ದೇಶ ಇಸ್ಲಾಮಿಕ್ ಆಗಿರಬೇಕು. ಆಸ್ತಿಯನ್ನು ವಕ್ಫ್ ಎಂದು ಗೊತ್ತುಪಡಿಸಿದರೆ, ಅದನ್ನು ಬೇರೆ ಕಡೆ ವರ್ಗಾಯಿಸಲು ಸಾಧ್ಯವಿಲ್ಲ. ದೇವರ ಹೆಸರಲ್ಲಿ ದತ್ತಿ ಕಾರ್ಯವಾಗಿ ಶಾಶ್ವತವಾಗಿ ಉಳಿಯುತ್ತದೆ. 1955ರ ಕಾಯ್ದೆ ಅಡಿಯಲ್ಲಿ ಸರ್ವೇ ಕಮಿಷನರ್ ಸ್ಥಳೀಯ ತನಿಖೆಯನ್ನು ನಡೆಸುತ್ತಾರೆ. ಸಾಕ್ಷಿಗಳನ್ನು ಕರೆಯುವುದು, ಸಾರ್ವಜನಿಕ ದಾಖಲೆಗಳನ್ನು ಕೇಳುವುದನ್ನು ಇದು ಒಳಗೊಂಡಿರುತ್ತದೆ. ಬಳಿಕ ವಕ್ಫ್ ಎಂದು ಘೋಷಿಸಲಾದ ಎಲ್ಲಾ ಆಸ್ತಿಗಳನ್ನು ಪಟ್ಟಿ ಮಾಡುತ್ತಾರೆ.

    ವಕ್ಫ್ ಆಸ್ತಿ ಎಷ್ಟಿದೆ?
    ಭಾರತದಲ್ಲಿ ಒಟ್ಟು 8.72 ಲಕ್ಷ ವಕ್ಫ್ ಆಸ್ತಿಗಳಿವೆ. 8 ಲಕ್ಷ ಎಕರೆ ವಕ್ಫ್ ಆಸ್ತಿ ವಿಸ್ತೀರ್ಣ ಆಗಿದೆ. ಆಸ್ತಿಯ ಅಂದಾಜು ಮೌಲ್ಯ 1 ಲಕ್ಷ ಕೋಟಿ ರೂ.. ಆಸ್ತಿಯಲ್ಲಿ ಒಟ್ಟು 1,50,569 ಸ್ಮಶಾನಗಳಿವೆ. 1,19,200 ಮಸೀದಿಗಳಿವೆ. 1,13,187 ಅಂಗಡಿ ಮತ್ತು 92,505 ಮನೆಗಳಿವೆ. 1,40,788 ಕೃಷಿ ಭೂಮಿಗಳಿವೆ. ವಕ್ಫ್‌ ಆಸ್ತಿಯ ವ್ಯಾಪ್ತಿಯಲ್ಲಿ 33,492 ಧಾರ್ಮಿಕ ಸ್ಥಳಗಳಿವೆ. ದೇಶದಲ್ಲಿ 32 ವಕ್ಫ್ ಮಂಡಳಿಗಳಿವೆ.

    ವಕ್ಫ್ ಕಾಯ್ದೆಗೆ ಎಷ್ಟು ತಿದ್ದುಪಡಿಯಾಗಿವೆ?
    1995ರಲ್ಲಿ ವಕ್ಫ್ ಕಾಯ್ದೆಗೆ ಮೊದಲ ತಿದ್ದುಪಡಿ ಮಾಡಲಾಯಿತು. 2013ರಲ್ಲಿ ಕಾಯ್ದೆಗೆ 2ನೇ ತಿದ್ದುಪಡಿ ತರಲಾಯಿತು. 2024ರಲ್ಲಿ 2 ಬಾರಿ ತಿದ್ದುಪಡಿ ಮಸೂದೆ ಮಂಡಿಸಲಾಯಿತು. ಈಗ ಹೊಸ ಮಸೂದೆಯಲ್ಲಿ 44 ತಿದ್ದುಪಡಿಗಳಿವೆ.

    ಹೊಸ ಮಸೂದೆ ಯಾಕೆ?
    ವಕ್ಫ್ ವ್ಯಾಖ್ಯಾನ, ರಾಜ್ಯ ವಕ್ಫ್ ಮಂಡಳಿಗಳ ಅಧಿಕಾರ, ನೋಂದಣಿ, ವಕ್ಫ್ ಆಸ್ತಿಗಳ ಸರ್ವೆ, ಒತ್ತುವರಿ ತೆರವು ಸೇರಿದಂತೆ ಹಲವು ವಿಚಾರಗಳಿಗೆ ಕಾಯ್ದೆಯಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ ಎಂದು ಕಾಯ್ದೆಗೆ ತಿದ್ದುಪಡಿ ತಂದು ಕೇಂದ್ರ ಸರ್ಕಾರ ಹೊಸ ಮಸೂದೆ ಮಂಡಿಸಿದೆ. ವಕ್ಫ್ ಆಸ್ತಿಗಳ ನಿರ್ವಹಣೆ, ಇರುವ ನ್ಯೂನತೆಗಳನ್ನು ಸರಿಪಡಿಸುವ ಉದ್ದೇಶ ಹೊಂದಲಾಗಿದೆ ಎಂದು ಸರ್ಕಾರ ಹೇಳಿದೆ.

    ವಕ್ಫ್ ಮಂಡಳಿ ಬಗೆಗಿನ ವಿವಾದ ಏನು?
    ವಕ್ಫ್ ಮಂಡಳಿಯಲ್ಲಿ ಸಾಕಷ್ಟು ಸಮಸ್ಯೆಗಳಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಒಮ್ಮೆ ವಕ್ಫ್ ಆಸ್ತಿಯಾಗಿದ್ದರೆ, ಅದು ಯಾವಾಗಲೂ ವಕ್ಫ್ ಆಸ್ತಿಯೇ ಆಗಿರುತ್ತದೆ. ಇದರಿಂದ ವಕ್ಫ್ ಆಸ್ತಿ ರದ್ದತಿ ಅಸಾಧ್ಯ. ಈ ನಿಯಮ ವಿವಾದಗಳನ್ನು ಹುಟ್ಟುಹಾಕಿದೆ. ವಕ್ಫ್ ಕಾಯ್ದೆಗೆ ತಂದಿರುವ ತಿದ್ದುಪಡಿಗಳು ಪರಿಣಾಮಕಾರಿಯಾಗಿಲ್ಲ. ಅಕ್ರಮ ಭೂ ಸ್ವಾಧೀನ, ದುರುಪಯೋಗ, ಮಾಲೀಕತ್ವದ ವಿವಾದಗಳು, ನೋಂದಣಿ ಮತ್ತು ಸಮೀಕ್ಷೆಗಳಲ್ಲಿನ ವಿಳಂಬ, ದೂರುಗಳ ಹೆಚ್ಚಳದಂತಹ ಸಮಸ್ಯೆಗಳಿಗೆ ಕಾರಣವಾಗಿದೆ. ಅಷ್ಟೇ ಅಲ್ಲ, ವಕ್ಫ್ ನ್ಯಾಯಮಂಡಳಿ ನೀಡಿದ ತೀರ್ಪುಗಳನ್ನು ಪ್ರಶ್ನಿಸಿ ಉನ್ನತ ನ್ಯಾಯಾಲಯಗಳಲ್ಲಿ ಮೇಲ್ಮನವಿ ಸಲ್ಲಿಸಲು ಆಗುವುದಿಲ್ಲ. ಇದು ವಕ್ಫ್ ನಿರ್ವಹಣೆಯಲ್ಲಿನ ಪಾರದರ್ಶಕತೆ ಮೇಲೆ ಪ್ರಶ್ನೆ ಹುಟ್ಟುಹಾಕಿದೆ. ಕೆಲವು ರಾಜ್ಯ ವಕ್ಫ್ ಮಂಡಳಿಗಳು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಸಮುದಾಯಗಳ ನಡುವೆ ವೈಷಮ್ಯ ಮೂಡಿಸಿವೆ. ಇದು ಕಾನೂನು ವಿವಾದಕ್ಕೆ ಕಾರಣವಾಗಿದೆ.

    ವಕ್ಫ್ ಕಾಯ್ದೆ ಒಂದು ಧರ್ಮಕ್ಕಷ್ಟೇ ಸೀಮಿತವಾಗಿದೆ. ಇತರೆ ಧರ್ಮಗಳಿಗೆ ಈ ರೀತಿಯ ಕಾನೂನು ಇಲ್ಲ. ವಕ್ಫ್ ಕಾಯ್ದೆ ಸಾಂವಿಧಾನಿಕವೇ ಎಂಬ ಪ್ರಶ್ನೆಯೊಂದಿಗೆ ದೆಹಲಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆಯಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡುವಂತೆ ಕೋರ್ಟ್, ಕೇಂದ್ರ ಸರ್ಕಾರಕ್ಕೆ ಕೇಳಿದೆ.

    ತಿದ್ದುಪಡಿ ಮಸೂದೆಯಲ್ಲೇನಿದೆ?
    * ತಿದ್ದುಪಡಿ ಮಸೂದೆಯು 1995ರ ವಕ್ಫ್ ಕಾಯ್ದೆಯನ್ನು ‘ಏಕೀಕೃತ ವಕ್ಫ್ ನಿರ್ವಹಣೆ, ಮೌಲ್ಯವರ್ಧನೆ, ಕಾರ್ಯದಕ್ಷತೆ ಮತ್ತು ಅಭಿವೃದ್ಧಿ ಕಾಯ್ದೆ-1995’ ಎಂದು ಮರುನಾಮಕರಣ ಮಾಡುತ್ತದೆ. ಅದರಂತೆ, ಕನಿಷ್ಠ 5 ವರ್ಷಗಳಿಂದ ಇಸ್ಲಾಂ ಧರ್ಮವನ್ನು ಅನುಸರಿಸುತ್ತಿರುವ ವ್ಯಕ್ತಿ ತನ್ನ ಒಡೆತನದಲ್ಲಿರುವ ಆಸ್ತಿಯನ್ನು ವಕ್ಫ್ಗೆ ನೀಡಬಹುದು. ದಾನ ನೀಡುವವರೊಂದಿಗೆ ‘ವಕ್ಫ್-ಅಲಲ್-ಔಲಾದ್’ (ದತ್ತಿ ಒಪ್ಪಂದ) ಮಾಡಿಕೊಳ್ಳುವಾಗ, ಕುಟುಂಬದ ಮಹಿಳೆಯರಿಗೆ ಪಿತ್ರಾರ್ಜಿತವಾಗಿ ಸಿಗುವ ಹಕ್ಕನ್ನು ನಿರಾಕರಿಸುವಂತಿಲ್ಲ ಎಂಬುದನ್ನು ಖಾತ್ರಿಪಡಿಸುತ್ತದೆ.

    * ಮೂಲ ಕಾಯ್ದೆಯ ಸೆಕ್ಷನ್ 4ರ ಪ್ರಕಾರ ರಾಜ್ಯದಲ್ಲಿರುವ ವಕ್ಫ್ ಆಸ್ತಿಗಳ ಸರ್ವೆ ನಡೆಸಲು ರಾಜ್ಯ ಸರ್ಕಾರ ಸರ್ವೆ ಆಯುಕ್ತರನ್ನು ನೇಮಕ ಮಾಡುವಂತಿತ್ತು. ಆದರೆ, ತಿದ್ದುಪಡಿ ಮಸೂದೆಯಲ್ಲಿ ಈ ಜವಾಬ್ದಾರಿಯನ್ನು ಸರ್ವೆ ಆಯುಕ್ತರ ಬದಲು ಜಿಲ್ಲಾಧಿಕಾರಿಗೆ ನೀಡಲಾಗಿದೆ.

    * 1995ರ ವಕ್ಫ್ ಮಸೂದೆ ಪ್ರಕಾರ, ಸರ್ಕಾರಿ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಘೋಷಿಸಲಾಗುತ್ತಿತ್ತು. ಹೊಸ ತಿದ್ದುಪಡಿ ಮಸೂದೆಯಲ್ಲಿ ಸರ್ಕಾರಿ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಪರಿಗಣಿಸಿದರೂ, ಜಿಲ್ಲಾಧಿಕಾರಿ ವಿವಾದವನ್ನು ಪರಿಹರಿಸಬಹುದು.

    * ಹಿಂದಿನ ಕಾಯ್ದೆಯಲ್ಲಿ ಕೇಂದ್ರ ವಕ್ಫ್ ಮಂಡಳಿಯಲ್ಲಿ ಮುಸ್ಲಿಮರು ಮಾತ್ರ ಇರಬೇಕು ಎಂದಿತ್ತು. ಈಗಿನ ತಿದ್ದುಪಡಿ ಮಸೂದೆಯಲ್ಲಿ ಇಬ್ಬರು ಮುಸ್ಲಿಮೇತರರು ಮತ್ತು ಇಬ್ಬರು ಮುಸ್ಲಿಂ ಮಹಿಳೆಯರು ಇರಬೇಕು ಎಂದು ಬದಲಾಯಿಸಲಾಗಿದೆ. (ಶಿಯಾ, ಸುನ್ನಿ ಮತ್ತು ಮುಸ್ಲಿಮರ ಹಿಂದುಳಿದ ವರ್ಗಗಳಿಂದ ಕನಿಷ್ಠ ಒಬ್ಬರು ಸದಸ್ಯರು ಇರಬೇಕು).

    * ಮೂಲ ಕಾಯ್ದೆಯಡಿ ವಕ್ಫ್ ನ್ಯಾಯಮಂಡಳಿ ತೀರ್ಮಾನವೇ ಅಂತಿಮ ಎಂದಿತ್ತು. ತಿದ್ದುಪಡಿ ಮಸೂದೆಯಲ್ಲಿ, ಆದೇಶದ ಮೇಲೆ 90 ದಿನಗಳ ಒಳಗಾಗಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

    * 1995 ಕಾಯ್ದೆಯಲ್ಲಿ ವಕ್ಫ್ ಮಂಡಳಿಗೆ ಕೆಲವು ನಿರ್ದೇಶನ ನೀಡುವ ಅಧಿಕಾರವಷ್ಟೇ ಕೇಂದ್ರ ಸರ್ಕಾರಕ್ಕಿತ್ತು. ಆದರೆ, ಕಾನೂನು ರಚಿಸುವ ಅಧಿಕಾರ ಇರಲಿಲ್ಲ. ಆದರೆ, ಹೊಸ ತಿದ್ದುಪಡಿ ಮಸೂದೆಯು ವಕ್ಫ್ ಆಸ್ತಿಗಳ ನಿರ್ವಹಣೆ, ನೋಂದಣಿ, ಲೆಕ್ಕಪರಿಶೋಧನೆಯಲ್ಲಿ ಕೇಂದ್ರದ ಪಾತ್ರವನ್ನು ಹೆಚ್ಚಿಸಿದೆ.

    ವಕ್ಫ್‌ ಕಾಯ್ದೆಗೆ ಪರಮಾಧಿಕಾರ ನೀಡಿದ್ದ ಸೆಕ್ಷನ್‌ 40 ರದ್ದು
    ಯಾವುದೇ ಭೂಮಿ ವಕ್ಫ್‌ ಆಸ್ತಿ ಎಂದು ಘೋಷಿಸಲು ವಕ್ಫ್‌ ಮಂಡಳಿಗಳು ಮತ್ತು ನ್ಯಾಯಾಧೀಕರಣಕ್ಕೆ ಈ ಹಿಂದಿನ ವಕ್ಫ್‌ ಕಾಯ್ದೆಯಲ್ಲಿದ್ದ ಸೆಕ್ಷನ್‌ 40 ಅವಕಾಶ ನೀಡಿತ್ತು. ಈ ನಿಯಮ ಬಳಸಿಕೊಂಡು ಸಾಮೂಹಿಕ ಭೂ ಪರಿವರ್ತನೆ ಮಾಡಿಕೊಳ್ಳಲಾಗುತ್ತಿತ್ತು. ನ್ಯಾಯಾಲಯದ ಮೊರೆ ಹೋಗಲು ಅವಕಾಶ ಇರಲಿಲ್ಲ. ಆದರೆ, ತಿದ್ದುಪಡಿ ಮಸೂದೆಯಲ್ಲಿ ಈ ಸೆಕ್ಷನ್‌ ಕೈಬಿಡಲಾಗಿದ್ದು, ವಕ್ಫ್‌ ಹಕ್ಕು ಸಾಧಿಸುವ ಆಸ್ತಿಯನ್ನು ಕೋರ್ಟ್‌ನಲ್ಲಿ ಪ್ರಶ್ನಿಸಲು ಅವಕಾಶ ಕಲ್ಪಿಸಿದೆ.

    ಮುಸ್ಲಿಮೇತರ ಆಸ್ತಿಗಳ ಕಥೆ ಏನು?
    2024ರ ಸೆಪ್ಟೆಂಬರ್ ತಿಂಗಳಲ್ಲಿ 25 ರಾಜ್ಯಗಳ 5,973 ಸರ್ಕಾರಿ ಆಸ್ತಿಗಳನ್ನು ವಕ್ಫ್ ಎಂದು ಮಂಡಳಿಗಳು ಘೋಷಿಸಿದ್ದವು. ಕರ್ನಾಟಕದಲ್ಲೂ ಕೃಷಿ ಜಮೀನು, ಸಾರ್ವಜನಿಕ ಸ್ಥಳಗಳು, ಸರ್ಕಾರಿ ಜಾಗ, ಸ್ಮಶಾನ, ಕೆರೆ ಹಾಗೂ ದೇವಾಲಯಗಳನ್ನೂ ವಕ್ಫ್ ಆಸ್ತಿಗಳು ಎಂದು ಗುರುತಿಸಲಾಗಿತ್ತು. ಕರ್ನಾಟಕದ ನೆರೆ ರಾಜ್ಯಗಳಲ್ಲೂ ವಕ್ಫ್ ಆಸ್ತಿ ವಿಚಾರವಾಗಿ ವಿವಾದ ಹುಟ್ಟುಕೊಂಡಿದೆ. ಕರ್ನಾಟಕದಲ್ಲೂ ಹಲವೆಡೆ ಇಂಥ ಘಟನೆಗಳು ನಡೆದಿವೆ. ಇವುಗಳ ಕಥೆ ಏನು ಎಂಬುದು ಪ್ರಶ್ನೆಯಾಗಿದೆ.

    ತಿದ್ದುಪಡಿ ಮಸೂದೆಯಿಂದ ಬಡವರಿಗೆ ಪ್ರಯೋಜನ ಆಗುತ್ತಾ?
    ವಕ್ಫ್ ತಿದ್ದುಪಡಿ ಮಸೂದೆಯಲ್ಲಿ ಡಿಜಿಟಲೀಕರಣಕ್ಕೆ ಆದ್ಯತೆ ನೀಡಲಾಗಿದೆ. ವಕ್ಫ್ ಆಸ್ತಿ ನಿರ್ವಹಣೆಯ ಡಿಜಿಟಲೀಕರಣವು ಟ್ರಾö್ಯಕಿಂಗ್, ಗುರುತಿಸುವಿಕೆ, ಮೇಲ್ವಿಚಾರಣೆಯನ್ನು ಸುಧಾರಿಸುತ್ತದೆ. ಪಾರದರ್ಶಕತೆ, ಹೊಣೆಗಾರಿಕೆಯನ್ನು ಖಚಿತಪಡಿಸುತ್ತದೆ. ಜಾಗ ಒತ್ತುವರಿ, ಪಾರದರ್ಶಕ ಕೊರತೆ ನೀಗಿಸುತ್ತದೆ. ಜೊತೆಗೆ, ಆರ್ಥಿಕವಾಗಿ ಪಾರದರ್ಶಕತೆ ತರುವುದರಿಂದ ಹಣದ ಸೋರಿಕೆಯಾಗದೇ, ಹಣವನ್ನು ಕಲ್ಯಾಣ ಉದ್ದೇಶಗಳಿಗಾಗಿ ಬಳಸುವುದನ್ನು ಖಾತ್ರಿಪಡಿಸುತ್ತದೆ. ವಕ್ಫ್ ಭೂಮಿಗಳ ದುರುಪಯೋಗ, ಅಕ್ರಮ ಸ್ವಾಧೀನ ತಡೆಗಟ್ಟಿ ಆದಾಯ ಹೆಚ್ಚಿಸುತ್ತದೆ. ಹಣ ನೇರವಾಗಿ ಬಡವರ ಕಲ್ಯಾಣಕ್ಕೆ ಬಳಕೆಯಾಗಲಿದೆ ಎಂದು ಅಲ್ಪಸಂಖ್ಯಾತರ ಸಚಿವಾಲಯ ತಿಳಿಸಿದೆ.

  • ಜಮ್ಮು-ಕಾಶ್ಮೀರದಲ್ಲಿ ಕೇಂದ್ರ ಸಚಿವ ಕಿರಣ್‌ ರಿಜಿಜು ಕಾರು ಅಪಘಾತ

    ಜಮ್ಮು-ಕಾಶ್ಮೀರದಲ್ಲಿ ಕೇಂದ್ರ ಸಚಿವ ಕಿರಣ್‌ ರಿಜಿಜು ಕಾರು ಅಪಘಾತ

    – ಅಪಘಾತಕ್ಕೂ ಹಿಂದಿನ ದಿನ “ಪ್ರಯಾಣದುದ್ದಕ್ಕೂ ಸುಂದರವಾದ ರಸ್ತೆ ಆನಂದಿಸಬಹುದು” ಎಂದು ಹೊಗಳಿದ್ದ ಸಚಿವ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಂಬನ್‌ ಜಿಲ್ಲೆಯ ಬನಿಹಾಲ್‌ ಪ್ರದೇಶದಲ್ಲಿ ಕಾನೂನು ಸಚಿವ ಕಿರಣ್‌ ರಿಜಿಜು ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ. ಸಣ್ಣ ಮಟ್ಟದ ಅಪಘಾತವಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ.

    ಶನಿವಾರ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಮಬಾನ್‌ನಲ್ಲಿ ಕೇಂದ್ರ ಸಚಿವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ರಸ್ತೆ ಅಪಘಾತದಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ಎಡಿಜಿ ಮುಖೇಶ್‌ ಸಿಂಗ್‌ ತಿಳಿಸಿದ್ದಾರೆ.

    ಘಟನೆಯ ದೃಶ್ಯಾವಳಿಯ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಭದ್ರತಾ ಸಿಬ್ಬಂದಿ ಸಚಿವರ ಕಪ್ಪು ಸ್ಕಾರ್ಪಿಯೊದ ಬಾಗಿಲು ತೆರೆದು ಒಳಗಿದ್ದವರನ್ನು ಹೊರಗೆ ಕರೆತರಲು ಮುಂದಾಗುತ್ತಿರುವ ದೃಶ್ಯ ವೀಡಿಯೋದಲ್ಲಿದೆ.

    ಈ ಪ್ರಯಾಣಕ್ಕೂ ಹಿಂದಿನ ದಿನ ಕಾನೂನು ಸೇವಾ ಶಿಬಿರದಲ್ಲಿ ಪಾಲ್ಗೊಳ್ಳಲು ಜಮ್ಮುವಿನಿಂದ ಉಧಮ್‌ಪುರಕ್ಕೆ ಪ್ರಯಾಣಿಸುತ್ತಿದ್ದಾಗ ಸಚಿವರು, “ಪ್ರಯಾಣದ ಉದ್ದಕ್ಕೂ ಸುಂದರವಾದ ರಸ್ತೆಯನ್ನು ಆನಂದಿಸಬಹುದು” ಎಂದು ಟ್ವೀಟ್ ಮಾಡಿದ್ದರು.

  • ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು ಹೆಚ್ಚಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ – ಸಚಿವ ಕಿರಣ್ ರಿಜಿಜು

    ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು ಹೆಚ್ಚಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ – ಸಚಿವ ಕಿರಣ್ ರಿಜಿಜು

    ಮುಂಬೈ: ಸುಪ್ರೀಂ ಕೋರ್ಟ್ (Supreme Court) ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ (High Court Judges) ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಯಾವುದೇ ಯೋಜನೆ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiran Rijiju) ಹೇಳಿದ್ದಾರೆ. ನ್ಯಾಯಾಧೀಶರ ನಿವೃತ್ತಿ ವಯಸ್ಸು ಮತ್ತು ನ್ಯಾಯಾಂಗದಲ್ಲಿ ಪ್ರಕರಣಗಳು ಬಾಕಿ ಉಳಿಯಲು ಕಾರಣವಲ್ಲ ಎಂದು ತಿಳಿಸಿದರು.

    ಮುಂಬೈನಲ್ಲಿ ನಡೆದ ಖಾಸಗಿ ವಾಹಿನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ನ್ಯಾಯಾಧೀಶರ ಅಧಿಕಾರವಧಿಯನ್ನು ಹೆಚ್ಚಿಸುತ್ತಿಲ್ಲ. ನಾವು ಸುಪ್ರೀಂ ಕೋರ್ಟ್‌ಗೆ 65 ವರ್ಷ ಮತ್ತು ಹೈಕೋರ್ಟ್‌ಗೆ 62 ವರ್ಷ ನಿವೃತ್ತಿ ವಯಸ್ಸು ಸರಿ ಎಂದು ಭಾವಿಸುತ್ತೇವೆ. ಮುಂದೆ ಇದು ಬದಲಾಗಬಹುದು. ಆದರೆ ಸದ್ಯ ಸರ್ಕಾರದ ಮುಂದೆ ಈ ಬಗ್ಗೆ ಪ್ರಸ್ತಾಪಗಳಿಲ್ಲ ಎಂದರು. ಇದನ್ನೂ ಓದಿ: ಗುಜರಾತ್ ವಿಧಾನಸಭೆ ಚುನಾವಣೆ – BJPಗೆ ಗುಡ್ ಬೈ ಹೇಳಿದ ಹಿರಿಯ ನಾಯಕ

    court order law

    ನ್ಯಾಯಾಂಗದಲ್ಲಿ ಹೆಚ್ಚಿನ ಸಂಖ್ಯೆಯ ಹುದ್ದೆಗಳು ಖಾಲಿ ಇರುವುದರಿಂದ ಪ್ರಕರಣಗಳ ಬಾಕಿ ಹೆಚ್ಚಿದೆ ಎಂಬ ತಪ್ಪು ಕಲ್ಪನೆ ಇದೆ. ಪ್ರಕರಣಗಳ ವಿಲೇವಾರಿಗೆ ನ್ಯಾಯಾಧೀಶರ ವಯಸ್ಸು ಅಥವಾ ಖಾಲಿ ಇರುವ ಹುದ್ದೆಗೆ ಯಾವುದೇ ಸಂಬಂಧವಿಲ್ಲ. ಜನರು ಈ ತಪ್ಪು ಕಲ್ಪನೆಯನ್ನು ಹೊಂದಿದ್ದಾರೆ. ದೊಡ್ಡ ಹುದ್ದೆಗಳ ಖಾಲಿ ಕಾರಣ ಪ್ರಕರಣಗಳು ಬಾಕಿ ಉಳಿದಿವೆ ಎನ್ನುವುದು ನಿಜವಲ್ಲ.

    ಈ‌ ನಡುವೆ ಅನರ್ಹ ಪ್ರಕರಣಗಳು ಸುಪ್ರೀಂ ಕೋರ್ಟ್‌ಗೆ ಹೋಗುತ್ತಿವೆ. ಇದು ನ್ಯಾಯಾಂಗದ ಹೊರೆಯನ್ನು ಹೆಚ್ಚಿಸುತ್ತವೆ. ಪ್ರಕರಣಗಳ ಸಂಖ್ಯೆಯನ್ನು ನೋಡಿದರೆ, ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ವಾಸ್ತವವಾಗಿ ವಿಚಾರಣೆಗೆ ಪಟ್ಟಿ ಮಾಡಲು ಅರ್ಹವಾಗಿಲ್ಲ. ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಗಳಲ್ಲಿ ತಮ್ಮನ್ನು ಏಕೆ ತೊಡಗಿಸಿಕೊಳ್ಳಬೇಕು? ಪ್ರತಿ ಜಾಮೀನು ಸುಪ್ರೀಂ ಕೋರ್ಟ್‌ಗೆ ಹೋಗುತ್ತಿದೆ. ಇದನ್ನೂ ಓದಿ: ಒಂದು ಲಕ್ಷ ಸರ್ಕಾರಿ ಉದ್ಯೋಗ, ಉಚಿತ ವಿದ್ಯುತ್ – ಹಿಮಾಚಲ ಪ್ರದೇಶ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ

    ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಗಳ ವಿಚಾರಣೆಗಾಗಿ ಮಾಡಿದೆಯೇ? ಜಾಮೀನು ಅರ್ಜಿಗಳನ್ನು ಕೆಳ ನ್ಯಾಯಾಲಯಗಳು ವ್ಯವಹರಿಸಬೇಕು, ಸೀಮಿತ ಪ್ರಕರಣಗಳು ಹೈಕೋರ್ಟ್‌ಗೆ ಬರಬೇಕು, ಸುಪ್ರೀಂ ಕೋರ್ಟ್‌ನಲ್ಲಿ ಗಂಭೀರ ಪ್ರಕರಣಗಳ ವಿಚಾರಣೆ ನಡೆಯಬೇಕು, ಮರಣದಂಡನೆ ಅಥವಾ ಕೆಲವು ಗಂಭೀರ ಪ್ರಕರಣಗಳ ಹೊರತು ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಗಳನ್ನು ಏಕೆ ನಿಭಾಯಿಸಬೇಕು ಎಂದು ಪ್ರಶ್ನಿಸಿದರು.

    Live Tv
    [brid partner=56869869 player=32851 video=960834 autoplay=true]

  • ಆಧಾರ್ ಪೌರತ್ವದ ಪುರಾವೆಯಲ್ಲ: ಸಂಸತ್‌ನಲ್ಲಿ ಕೇಂದ್ರ ಸ್ಪಷ್ಟನೆ

    ಆಧಾರ್ ಪೌರತ್ವದ ಪುರಾವೆಯಲ್ಲ: ಸಂಸತ್‌ನಲ್ಲಿ ಕೇಂದ್ರ ಸ್ಪಷ್ಟನೆ

    ನವದೆಹಲಿ: ಆಧಾರ್ ಹಾಗೂ ಮತದಾರರ ಗುರುತಿನ ಚೀಟಿಗಳ ನಡುವೆ ಲಿಂಕ್ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಶುಕ್ರವಾರ ಸಂಸತ್ತಿನಲ್ಲಿ ತಿಳಿಸಿದ್ದಾರೆ.

    ಲೋಕಸಭೆಯಲ್ಲಿ ನಡೆದ ಪ್ರತ್ಯೇಕ ಪ್ರಶ್ನೋತ್ತರ ಅವಧಿಯಲ್ಲಿ ಕಿರಣ್ ರಿಜಿಜು ಆಧಾರ್ ಹಾಗೂ ಮತದಾರರ ಗುರುತಿನ ಚೀಟಿಗಳ ಜೋಡಣೆ ಬಗ್ಗೆ ಇದ್ದ ಗೊಂದಲಕ್ಕೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಹಿಜಬ್‍ನಿಂದ ವಿದ್ಯಾರ್ಥಿನಿಯ ಶಿಕ್ಷಣ ಭವಿಷ್ಯ ಕಸಿದುಕೊಳ್ಳುತ್ತಿದ್ದೇವೆ: ರಾಹುಲ್ ಗಾಂಧಿ

    ಆಧಾರ್ ಬಳಸಿಕೊಂಡು ಪೌರತ್ವ ದೃಢೀಕರಿಸಲು ಸರ್ಕಾರ ಪ್ರೊಟೋಕಾಲ್ ರಚಿಸಿದೆಯೇ? ಎಂಬ ಲಿಖಿತ ಪ್ರಶ್ನೆಗೆ ಸಂಸತ್ತಿನಲ್ಲಿ ಪ್ರತಿಕ್ರಿಯಿಸಿದ ಕಿರಣ್ ರಿಜಿಜು, ಆಧಾರ್ ಹಾಗೂ ಮತದಾರರ ಗುರುತಿನ ಚೀಟಿಗಳ ನಡುವೆ ಯಾವುದೇ ರೀತಿಯ ಜೋಡಣೆ ನಡೆಸಲಾಗುವುದಿಲ್ಲ. ಆಧಾರ್ ಪೌರತ್ವದ ಪುರಾವೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಇಬ್ಬರು ಉಗ್ರರ ಸಾವು

    ಆಧಾರ್ ಅನ್ನು ಕಾನೂನುಬದ್ಧ ಸಾಧನವಾಗಿ ಬಳಸುವ ವಿಚಾರವಾಗಿ ಉತ್ತರಿಸಿದ ಕಿರಣ್ ರಿಜಿಜು, ಆಧಾರ್ ಪೌರತ್ವದ ಪುರಾವೆಯಲ್ಲ. ಹೀಗಾಗಿ ಅದನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಜೋಡಿಸುವ ಬಗ್ಗೆ ಗೊಂದಲ ಬೇಡ ಎಂದಿದ್ದಾರೆ.

  • ನಾಪತ್ತೆಯಾಗಿದ್ದ ಅರುಣಾಚಲ ಪ್ರದೇಶದ ಯುವಕನನ್ನು ಬಿಡುಗಡೆ ಮಾಡಿದ ಚೀನಾ

    ನಾಪತ್ತೆಯಾಗಿದ್ದ ಅರುಣಾಚಲ ಪ್ರದೇಶದ ಯುವಕನನ್ನು ಬಿಡುಗಡೆ ಮಾಡಿದ ಚೀನಾ

    ನವದೆಹಲಿ: ಅರುಣಾಚಲ ಪ್ರದೇಶದ ಮಿರಮ್ ತಾರೋನ್‍ನಿಂದ ಕಾಣೆಯಾಗಿದ್ದ ಯುವಕನನ್ನು ಚೀನಾ ಭಾರತ ಸೇನೆಗೆ ಹಸ್ತಾಂತರಿಸಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ದೃಢಪಡಿಸಿದ್ದಾರೆ.

    ಘಟನೆ ಕುರಿತು ಚೀನಾದೊಂದಿಗೆ ಪ್ರಕರಣವನ್ನು ಇತ್ಯರ್ಥ ಪಡಿಸಲು ಹಾಗೂ ಯುವಕನನ್ನು ಸುರಕ್ಷಿತವಾಗಿ ಮನೆಗೆ ಮರಳುವಂತೆ ಮಾಡಿದ ಭಾರತೀಯ ಸೇನೆಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಕಿರಣ್ ರಿಜಿಜು ಟ್ವೀಟ್‍ನಲ್ಲಿ ತಿಳಿಸಿದರು.

    ಘಟನೆಯೇನು?: ಜನವರಿ 18ರಂದು ಅರುಣಾಚಲ ಪ್ರದೇಶದಲ್ಲಿ ತ್ಸಾಂಗ್ಪೋ ನದಿಯು ಭಾರತವನ್ನು ಪ್ರವೇಶಿಸುವ ಸಮೀಪದಲ್ಲಿ ಜೀಡೋ ಗ್ರಾಮದ ಮಿರಾಮ್ ಟ್ಯಾರೋನ್ (17) ಹಾಗೂ ಆತನ ಸ್ನೇಹಿತ ಜಾನಿ ಯಾಯಿಂಗ್ ಬೇಟೆಗಾಗಿ ತೆರಳಿದ್ದರು. ಅಲ್ಲಿ ಮಿರಾಮ್ ಅವರನ್ನು ಚೀನಾ ಅಧಿಕಾರಿಗಳು ಅಪಹರಿಸಿದ್ದರು. ಅವನ ಜೊತೆಯಿದ್ದ ಸ್ನೇಹಿತ ಜಾನಿ ಯಾಯಿಂಗ್ ಚೀನಾ ಅಧಿಕಾರಿಗಳಿಂದ ತಪ್ಪಿಸಿಕೊಂಡು ಬಂದಿದ್ದಾನೆ. ನಂತರ ವಿರಾಮನ್ ಟ್ಯೂರೋನ್‍ನ ಅಪಹರಣದ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದನು. ಇದನ್ನೂ ಓದಿ: ನಾಪತ್ತೆಯಾಗಿದ್ದ ಯುವಕನನ್ನು ಶೀಘ್ರವೇ ಬಿಡುಗಡೆ ಮಾಡಲಿದೆ ಚೀನಾ

    ಜನವರಿ 20ರಂದು, ಕಾಣೆಯಾದ ಅರುಣಾಚಲ ಯುವಕನ ಗುರುತನ್ನು ಪತ್ತೆ ಹಚ್ಚಲು ಚೀನಾದ ಕಡೆಯವರು ಭಾರತದ ಕಡೆಯಿಂದ ವಿವರಗಳನ್ನು ಕೇಳಿದ್ದರು. ನಂತರ, ಭಾರತೀಯ ಸೇನೆಯು ಮಿರಾಮ್ ಟ್ಯಾರೋನ್ ಅವರ ಗುರುತನ್ನು ಖಚಿತಪಡಿಸಲು ಅವರ ವೈಯಕ್ತಿಕ ವಿವರಗಳನ್ನು ಹಂಚಿಕೊಂಡಿತು. ಇದನ್ನೂ ಓದಿ: ಚೀನಾದಿಂದ ಅರುಣಾಚಲ ಪ್ರದೇಶದ ಹುಡುಗನ ಅಪಹರಣ – ಪ್ರಧಾನಿ ವಿರುದ್ಧ ರಾಗಾ ಕಿಡಿ

    ಮಂಗಳವಾರ, ಹವಾಮಾನ ವೈಪರಿತ್ಯದಿಂದಾಗಿ ಬಿಡುಗಡೆ ವಿಳಂಬವಾಗಿದೆ. ಟ್ಯಾರನ್ ಅವರನ್ನು ಭಾರತಕ್ಕೆ ವಾಪಸ್ಸು ಕಳುಹಿಸಲಾಗುವುದು ಎಂದು ದೃಢಪಡಿಸಿತು. ಈ ಹಿನ್ನೆಲೆಯಲ್ಲಿ ಇಂದು ಯುವಕನನ್ನು ಭಾರತಕ್ಕೆ ಹಿಂದಿರುಗಿಸಿದ್ದಾರೆ. ಇದನ್ನೂ ಓದಿ: ಕಣ್ಮರೆಯಾಗಿದ್ದ ಯುವಕ ಪತ್ತೆ: ಭಾರತೀಯ ಸೇನೆಗೆ ಚೀನಾ ಮಾಹಿತಿ

  • ನಾಪತ್ತೆಯಾಗಿದ್ದ ಯುವಕನನ್ನು ಶೀಘ್ರವೇ ಬಿಡುಗಡೆ ಮಾಡಲಿದೆ ಚೀನಾ

    ನಾಪತ್ತೆಯಾಗಿದ್ದ ಯುವಕನನ್ನು ಶೀಘ್ರವೇ ಬಿಡುಗಡೆ ಮಾಡಲಿದೆ ಚೀನಾ

    ನವದೆಹಲಿ: ಜನವರಿ 18ರಂದು ನಾಪತ್ತೆಯಾಗಿದ್ದ ಅರುಣಾಚಲ ಮೂಲದ ಯುವಕನನ್ನು ಕೆಲವು ದಿನಗಳ ಬಳಿಕ ಚೀನಾದಲ್ಲಿ ಪತ್ತೆಹಚ್ಚಲಾಗಿತ್ತು. ಇದೀಗ ಚೀನಾ ಯುವಕನನ್ನು ಬಿಡುಗಡೆ ಮಾಡಲು ಸೂಚನೆ ನೀಡಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

    ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ 17 ವರ್ಷದ ಯುವಕನ ಬಿಡುಗಡೆಗೆ ಚೀನಾ ಸೂಚಿಸಿದ್ದು, ಅದರ ದಿನಾಂಕ ಹಾಗೂ ಸಮಯವನ್ನು ಶೀಘ್ರವೇ ಹಂಚಿಕೊಳ್ಳಲಿದೆ ಎಂದು ತಿಳಿಸಿದ್ದಾರೆ. ಚೀನಾ ಯುವಕನ ಬಿಡುಗಡೆಯ ಸ್ಥಳವನ್ನು ಸೂಚಿಸಿದೆ. ಆದರೆ ಹವಾಮಾನ ವೈಪರಿತ್ಯದಿಂದಾಗಿ ಬಿಡುಗಡೆ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಣ್ಮರೆಯಾಗಿದ್ದ ಯುವಕ ಪತ್ತೆ: ಭಾರತೀಯ ಸೇನೆಗೆ ಚೀನಾ ಮಾಹಿತಿ

    ಅಪ್ಪರ್ ಸಿಯಾಂಗ್ ಜಿಲ್ಲೆಯ ಜಿಡೋ ಗ್ರಾಮದ ಯುವಕ ಮಿರಾಮ್ ಟ್ಯಾರೋನ್ 2022ರ ಜನವರಿ 18 ರಂದು ಬಿಶಿಂಗ್ ಪ್ರದೇಶದ ಶಿಯುಂಗ್‌ಲಾದಿಂದ ನಾಪತ್ತೆಯಾಗಿದ್ದ. ಟ್ಯಾರೋನ್‌ನ ಸ್ನೇಹಿತ ಜಾನಿ ಯಾಯಿಂಗ್ ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್‌ಎ) ಆತನನ್ನು ಅಪಹರಿಸಿದ್ದಾಗಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದ. ಇದನ್ನೂ ಓದಿ: ಚೀನಾದಿಂದ ಅರುಣಾಚಲ ಪ್ರದೇಶದ ಹುಡುಗನ ಅಪಹರಣ – ಪ್ರಧಾನಿ ವಿರುದ್ಧ ರಾಗಾ ಕಿಡಿ

    ಭಾರತೀಯ ಸೇನೆ ಪಿಎಲ್‌ಎಯನ್ನು ಸಂಪರ್ಕಿಸಿ ಯುವಕನನ್ನು ಪತ್ತೆ ಹಚ್ಚಿ ಹಿಂದಿರುಗಿಸುವಂತೆ ಮನವಿ ಮಾಡಿತ್ತು. ಬಳಿಕ ಆತ ಪತ್ತೆಯಾಗಿರುವ ಬಗ್ಗೆ ಪಿಎಲ್‌ಎ ಭಾರತೀಯ ಸೇನೆಗೆ ಮಾಹಿತಿ ನೀಡಿತ್ತು.

  • ಮೂಡಬಿದಿರೆಯಲ್ಲಿ ಅಖಿಲ ಭಾರತ ವಿಶ್ವವಿದ್ಯಾನಿಲಯ ಕ್ರೀಡಾಕೂಟಕ್ಕೆ ಚಾಲನೆ

    ಮೂಡಬಿದಿರೆಯಲ್ಲಿ ಅಖಿಲ ಭಾರತ ವಿಶ್ವವಿದ್ಯಾನಿಲಯ ಕ್ರೀಡಾಕೂಟಕ್ಕೆ ಚಾಲನೆ

    ಮಂಗಳೂರು: ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಅಖಿಲ ಭಾರತ ವಿಶ್ವವಿದ್ಯಾನಿಲಯಗಳ ಒಕ್ಕೂಟ ಹಾಗೂ ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಇವರ ಜಂಟಿ ಸಹಯೋಗದಲ್ಲಿ ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿ 80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್ – 2020 ಅದ್ಧೂರಿ ಕ್ರೀಡಾಕೂಟಕ್ಕೆ ಚಾಲನೆ ದೊರೆಯಿತು.

    ಜನವರಿ 6ರವರೆಗೆ ನಡೆಯುವ ಈ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, ಕ್ರೀಡೆಯನ್ನು ಪಠ್ಯೇತರ ವಿಷಯವನ್ನಾಗಿಸುವ ಬದಲು ಅದನ್ನು ಶಿಕ್ಷಣದ ಅವಿಭಾಜ್ಯ ಅಂಗವನ್ನಾಗಿ ರೂಪಿಸಬೇಕು. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಶಯ ಮಾರ್ಗದರ್ಶನದಲ್ಲಿ ಕೇಂದ್ರ ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳುತ್ತಿದೆ ಎಂದರು.

    ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸರ್ಕಾರ ಬಹಳಷ್ಟು ಅವಕಾಶ ನೀಡುತ್ತಿದೆ. ಯುವ ಜನತೆಯನ್ನು ಮತ್ತಷ್ಟು ಉತ್ತೇಜಿಸಿ ಮತ್ತೊಮ್ಮೆ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವಂತೆ ಆಗಬೇಕು. 2020ರ ಟೋಕಿಯೋ ಒಲಿಂಪಿಕ್ಸ್‌ನಲ್ಲೂ ನಾವು ಪದಕ ಗೆಲ್ಲಬೇಕಾಗಿದೆ. ಬಳಿಕ ಪ್ಯಾರಿಸ್, ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗಳಲ್ಲೂ ಪದಕ ಜಯಿಸಲು ನಮ್ಮ ದೇಶದ ಕ್ರೀಡಾಪಟುಗಳು ಸೇರಿದಂತೆ ನಾವೆಲ್ಲರೂ ಸಾಕಷ್ಟು ಸಿದ್ಧತೆ ನಡೆಸಬೇಕಿದೆ ಎಂದು ತಿಳಿಸಿದ ಅವರು, ಕಾರ್ಯಕ್ರಮದಲ್ಲಿ ನೆರೆದಿದ್ದ ಕ್ರೀಡಾಪಟುಗಳಿಗೆ ಶುಭ ಕೋರಿದರು.

    ಕಾರ್ಯಕ್ರಮಕ್ಕೂ ಮುನ್ನ ಕ್ರೀಡಾಪಟುಗಳಿಂದ ಪಂಥ ಸಂಚಲನ, ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ನೂರಕ್ಕೂ ಅಧಿಕ ಸಾಂಸ್ಕೃತಿಕ ಕಲಾಪ್ರಕಾರಗಳ ಮೆರವಣಿಗೆ ಕಾರ್ಯಕ್ರಮದ ಮೆರುಗು ಹೆಚ್ಚಿಸಿತು. ಕನ್ನಡ ಸಂಸ್ಕೃತಿ, ಪ್ರವಾಸೋದ್ಯಮ ಖಾತೆ ಸಚಿವ ಸಿ.ಟಿ. ರವಿ, ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಕುಲಪತಿ ಡಾ.ಎಸ್ ಸಚ್ಚಿದಾನಂದ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮೋಹನ್ ಆಳ್ವ, ಶಾಸಕ ಉಮನಾಥ್ ಕೋಟ್ಯಾನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಕ್ರೀಡಾಕೂಟದಲ್ಲಿ ದೇಶದ 306 ವಿಶ್ವವಿದ್ಯಾಲಯಗಳ 4,469 ವಿದ್ಯಾರ್ಥಿಗಳು, 1,000 ಕ್ರೀಡಾಧಿಕಾರಿಗಳು ಭಾಗವಹಿಸಿದ್ದಾರೆ. ಈ ಬಾರಿ ಹೊಸತಾಗಿ ವಿದ್ಯಾರ್ಥಿ, ವಿದ್ಯಾರ್ಥಿನಿಯರ 42 ಕಿ.ಮೀ ಮ್ಯಾರಥಾನ್ ಈ ಕ್ರೀಡಾಕೂಟಕ್ಕೆ ಸೇರ್ಪಡೆ ಆಗಿದೆ.