Tag: Kisan Drones

  • ಕೃಷಿ ಕ್ಷೇತ್ರದಲ್ಲಿ ಕ್ರಾಂತಿ – 100 ʼಕಿಸಾನ್‌ ಡ್ರೋನ್‌ʼಗಳಿಗೆ ಪ್ರಧಾನಿ ಮೋದಿ ಚಾಲನೆ

    ಕೃಷಿ ಕ್ಷೇತ್ರದಲ್ಲಿ ಕ್ರಾಂತಿ – 100 ʼಕಿಸಾನ್‌ ಡ್ರೋನ್‌ʼಗಳಿಗೆ ಪ್ರಧಾನಿ ಮೋದಿ ಚಾಲನೆ

    ನವದೆಹಲಿ: ಬೆಳೆ ಮೌಲ್ಯಮಾಪನ, ಭೂ ದಾಖಲೆಗಳು ಮತ್ತು ಕೀಟನಾಶಕಗಳ ಸಿಂಪಡಣೆಗಾಗಿ ಬಳಕೆ ಮಾಡುವ ಉದ್ದೇಶದಿಂದ 100 ʼಕಿಸಾನ್‌ ಡ್ರೋನ್‌ʼಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ.

    ಡ್ರೋನ್‌ ವಲಯದಲ್ಲಿ ಹೆಚ್ಚುತ್ತಿರುವ ಭಾರತದ ಸಾಮರ್ಥ್ಯವು ಜಗತ್ತಿಗೆ ಹೊಸ ನಾಯಕತ್ವವನ್ನು ನೀಡುತ್ತದೆ. ಇದು ರೈತರಿಗೆ ಅತ್ಯಂತ ನವೀನ ಮತ್ತು ಉತ್ತೇಜಕ ಉಪಕ್ರಮವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಕುಟುಂಬ ಮಣಿಪುರವನ್ನು ಎಟಿಎಂ ಆಗಿ ಬಳಸಿದೆ: ಸ್ಮೃತಿ ಇರಾನಿ

    ಭಾರತದಲ್ಲಿ ಡ್ರೋನ್‌ ಸ್ಟಾರ್ಟ್‌ಅಪ್‌ಗಳ ಹೊಸ ಸಂಸ್ಕೃತಿ ಸಿದ್ಧವಾಗುತ್ತಿದೆ. ಈ ಸಂಖ್ಯೆ ಈಗ 200ಕ್ಕಿಂತ ಬೃಹತ್‌ ಪ್ರಮಾಣದಲ್ಲಿದ್ದು, ಉದ್ಯೋಗಾವಕಾಶಗಳ ಉತ್ಪಾದನೆಗೆ ಕಾರಣವಾಗುತ್ತದೆ ಎಂದು ತಿಳಿಸಿದ್ದಾರ.

    ನೀತಿಯು ಸರಿಯಾಗಿದ್ದರೆ ದೇಶವು ಎಷ್ಟು ಬೆಳೆಯಬಲ್ಲದು ಎಂಬುದಕ್ಕೆ ಉದಾಹರಣೆಯಾಗಿದೆ. ಕೆಲವು ವರ್ಷಗಳ ಹಿಂದೆ ಡ್ರೋನ್‌ಗಳು ಹೆಚ್ಚಾಗಿ ರಕ್ಷಣಾ ಕ್ಷೇತ್ರದೊಂದಿಗೆ ಸಂಬಂಧ ಹೊಂದಿದ್ದವು. ಈಗ ಅದು ಬದಲಾಗಿದೆ ಎಂದು ಮೋದಿ ಬಣ್ಣಿಸಿದ್ದಾರೆ.

    21ನೇ ಶತಮಾನದಲ್ಲಿ ಆಧುನಿಕ ಕೃಷಿ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಇದೊಂದು ಹೊಸ ಅಧ್ಯಾಯವಾಗಿದ್ದು, ಡ್ರೋನ್‌ ವಲಯದ ಅಭಿವೃದ್ಧಿಯಲ್ಲಿ ಮೈಲುಗಲ್ಲಾಗಿದೆ. ಡ್ರೋನ್‌ ವಲಯವನ್ನು ತೆರೆಯುವ ಬಗ್ಗೆ ನಮ್ಮ ಸರ್ಕಾರವು ಆತಂಕಗಳಗೆ ಸಮಯ ವ್ಯರ್ಥಮಾಡಲಿಲ್ಲ. ನಮ್ಮ ಸರ್ಕಾರ ಬಜೆಟ್‌ ಮತ್ತು ನೀತಿ ಕ್ರಮಗಳಲ್ಲಿ ತಂತ್ರಜ್ಞಾನ ಮತ್ತು ಆವಿಷ್ಕಾರಗಳಿಗೆ ಆದ್ಯತೆ ನೀಡಿದೆ ವಿವರಿಸಿದ್ದಾರೆ. ಇದನ್ನೂ ಓದಿ: ನಲಪಾಡ್ ವಿರುದ್ಧ ಎಫ್‍ಐಆರ್ ದಾಖಲು

    ಕಿಸಾನ್‌ ಡ್ರೋನ್‌ಗಳು ಹೊಸ ಕ್ರಾಂತಿಗೆ ನಾಂದಿ ಹಾಡಿವೆ. ರೈತರು ತಮ್ಮ ಉತ್ಪನ್ನಗಳಾದ ಉತ್ಪನ್ನಗಳಾದ ಹಣ್ಣುಗಳು, ತರಕಾರಿಗಳು ಮತ್ತು ಹೂವುಗಳನ್ನು ಕಡಿಮೆ ಸಮಯದಲ್ಲಿ ಮಾರುಕಟ್ಟೆಗಳಿಗೆ ಆಗಿಸುವ ಮುಂಬರುವ ದಿನಗಳಲ್ಲಿ ಹೆಚ್ಚಿನ ಸಾಮರ್ಥ್ಯದ ಡ್ರೋನ್‌ಗಳನ್ನು ಬಳಸಬಹುದು. ಇದರಿಂದ ಆದಾಯವೂ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಕೇಂದ್ರ ಬಜೆಟ್‌ 2022ರಲ್ಲಿ ಕಿಸಾನ್‌ ಡ್ರೋನ್‌ ಬಳಕೆ ಬಗ್ಗೆ ತಿಳಿಸಲಾಗಿತ್ತು. ‘ಬೆಳೆ ಮೌಲ್ಯಮಾಪನ, ಭೂ ದಾಖಲೆಗಳು, ಕೀಟನಾಶಕಗಳ ಸಿಂಪಡಣೆಗಾಗಿ ಕಿಸಾನ್ ಡ್ರೋನ್‌ಗಳನ್ನು ಬಳಕೆ ಮಾಡಲಾಗುತ್ತದೆ. ಇದರಿಂದ ಕೃಷಿ ವಲಯದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚುವ ನಿರೀಕ್ಷೆ ಇದೆ’ ಎಂದು ಅವರು ಬಜೆಟ್ ಭಾಷಣದ ವೇಳೆ ತಿಳಿಸಿದ್ದರು. ಇದನ್ನೂ ಓದಿ: ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸಿ – ಅಂಜುಮನ್ ಸಂಸ್ಥೆಯಿಂದ ಮನವಿ

  • Budget 2022: ಬೆಳೆ ರಕ್ಷಣೆಗೆ ಕಿಸಾನ್ ಡ್ರೋನ್ ಬಳಕೆಗೆ ಅಸ್ತು – ಬಜೆಟ್‍ನಲ್ಲಿ ಕೃಷಿ ವಲಯಕ್ಕೆ ದಕ್ಕಿದ್ದೇನು?

    Budget 2022: ಬೆಳೆ ರಕ್ಷಣೆಗೆ ಕಿಸಾನ್ ಡ್ರೋನ್ ಬಳಕೆಗೆ ಅಸ್ತು – ಬಜೆಟ್‍ನಲ್ಲಿ ಕೃಷಿ ವಲಯಕ್ಕೆ ದಕ್ಕಿದ್ದೇನು?

    ನವದೆಹಲಿ: ಕೇಂದ್ರ ಬಜೆಟ್‍ನಲ್ಲಿ ಕೃಷಿ ವಲಯಕ್ಕೆ ಸಂಬಂಧಿಸಿದಂತೆ ನೂತನ ತಂತ್ರಜ್ಞಾನಗಳ ಬೆಳವಣಿಗೆಯೊಂದಿಗೆ ಕೃಷಿಕರಿಗೆ ನೆರವಾಗಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಹೆಜ್ಜೆಯಿಟ್ಟಿದ್ದಾರೆ.

    ಕಿಸಾನ್ ಸಮ್ಮಾನ್ ಯೋಜನೆ, ಸಿರಿಧಾನ್ಯಗಳ ಉತ್ಪನ್ನಗಳಿಗೆ ಆಧ್ಯತೆ, ಕೃಷಿಕರಿಗೆ ಡಿಜಿಟಲ್-ಹೈ ಟೆಕ್ ಸೇವೆ ಸಹಿತ ಹಲವು ಹೊಸ ಯೋಜನೆಗಳಿಗೆ ಬಜೆಟ್‍ನಲ್ಲಿ ಒತ್ತು ನೀಡಲಾಗಿದೆ. ಕಿಸಾನ್ ಸಮ್ಮಾನ್ ನಿಧಿ – 68,000 ಕೋಟಿ ರೂ. (500 ಕೋಟಿ ರೂ. ಹೆಚ್ಚಳ), ಬೆಳೆ ಸ್ಥಿರತೆ ಯೋಜನೆಗೆ ಅನುದಾನ ಕಡಿತ ಮಾಡಿದೆ. 163 ಲಕ್ಷ ರೈತರಿಗೆ 2.37 ಲಕ್ಷ ಕೋಟಿ ಎಂಎಸ್‍ಪಿ ನೇರ ಪಾವತಿಗೆ ಮುಂದಾಗಿದೆ. ರಾಸಾಯನಿಕ ಮುಕ್ತ ಸಹಜ ಕೃಷಿಗೆ ರಿಯಾಯ್ತಿ ಮೂಲಕ ರೈತರಿಗೆ ಉತ್ತೇಜನ ನೀಡಲು ಹೆಜ್ಜೆಯನ್ನಿಟ್ಟಿದೆ. ಶೂನ್ಯ ಬಂಡವಾಳ ಕೃಷಿಗೆ ಒತ್ತು. ಸಣ್ಣ ರೈತರಿಗೆ ಬಾಡಿಗೆ ಯಂತ್ರ. ಸಿರಿಧಾನ್ಯಗಳ ಉತ್ಪನ್ನಗಳಿಗೆ ಒತ್ತು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಘೋಷಣೆ ಮಾಡಿದೆ. ಇದನ್ನೂ ಓದಿ: Budget 2022: 39.54 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ನ `ರೂಪಾಯಿ’ ಲೆಕ್ಕಾಚಾರ ಹೇಗಿದೆ ಗೊತ್ತಾ?

    ಕೃಷಿಕರಿಗೆ ಡಿಜಿಟಲ್, ಹೈ ಟೆಕ್ ಸೇವೆ ಆರಂಭಿಸಿ ಭೂ ದಾಖಲೆಗಳ ಡಿಜಿಟಲೀಕರಣ ಮತ್ತು ಬೆಳೆ ರಕ್ಷಣೆಗೆ ಕಿಸಾನ್ ಡ್ರೋನ್ ಬಳಸಲು ಅವಕಾಶ ನೀಡಿದೆ. ಕೃಷಿ ಉತ್ಪನ್ನಗಳ ಮಾರಾಟಕ್ಕಾಗಿ ಸ್ಟಾರ್ಟ್‍ಅಪ್. ಕೃಷಿ ಸ್ಟಾರ್ಟ್‍ಅಪ್‍ಗಳಿಗೆ ಮೂಲಧನದ ನೆರವು (ನಬಾರ್ಡ್ ಮೂಲಕ ಸಾಲ). ಸ್ಥಳೀಯ ಮಾರುಕಟ್ಟೆಗಾಗಿ ಒನ್ ನೇಷನ್, ಒನ್ ಪ್ರೊಡಕ್ಷನ್. ಖಾದ್ಯ ತೈಲ ಆಮದು ಕಡಿಮೆಗೆ ಪ್ರೋತ್ಸಾಹ. ಭೂಮಿ ವ್ಯವಹಾರಗಳಿಗೆ ಡಿಜಿಟಲ್ ಟಚ್. 8 ಭಾಷೆಗಳಲ್ಲಿ ಆಸ್ತಿ ನೋಂದಣಿಗೆ ಏಕರೂಪ ವ್ಯವಸ್ಥೆ ಆಸ್ತಿ ನೋಂದಣಿಗೆ ಒನ್ ನೇಷನ್, ಒನ್ ರಿಜಿಸ್ಟ್ರೇಷನ್ ಯೋಜನೆ ಮೂಲಕ ರೈತರಿಗೆ ಡಿಜಿಟಲ್ ಟಚ್ ನೀಡಲು ಬಜೆಟ್‍ನಲ್ಲಿ ಯೋಜನೆ ರೂಪಿಸಲಾಗಿದೆ. ಇದನ್ನೂ ಓದಿ: ಮಾನಸಿಕ ಆರೋಗ್ಯಕ್ಕೆ ಟೆಲಿ-ಮೆಂಟಲ್‌ ಆರೋಗ್ಯ ಕಾರ್ಯಕ್ರಮ – ಬೆಂಗಳೂರಿನ IIITB ತಾಂತ್ರಿಕ ಬೆಂಬಲ

    ಗೋಧಿ ಮತ್ತು ಭತ್ತದ ಖರೀದಿಗಾಗಿ 1.63 ಕೋಟಿ ರೈತರಿಗೆ 2.37 ಲಕ್ಷ ಕೋಟಿ ರೂ.ನೇರ ಪಾವತಿ. ದೇಶದಾದ್ಯಂತ ರಾಸಾಯನಿಕ ಮುಕ್ತ ಸಹಜ ಕೃಷಿಯನ್ನು ಉತ್ತೇಜಿಸಲಾಗುವುದು. ಆರಂಭಿಕವಾಗಿ ಗಂಗಾ ನದಿಯ ಉದ್ದಕ್ಕೂ 5 ಕಿಮೀ ಅಗಲದ ಕಾರಿಡಾರ್‍ಗಳಲ್ಲಿ ರೈತರ ಜಮೀನುಗಳ ಮೇಲೆ ಗಮನವನ್ನು ಕೇಂದ್ರೀಕರಣ. ಕೃಷಿ ಮತ್ತು ಗ್ರಾಮೀಣ ಉದ್ಯಮಗಳ ಸ್ಟಾರ್ಟಪ್‍ಗಳಿಗೆ ಹಣಕಾಸು ಒದಗಿಸಲು ಸಂಯೋಜಿತ ಬಂಡವಾಳ ನಿಧಿಯನ್ನು ನಬಾರ್ಡ್. ಬೆಳೆ ಮೌಲ್ಯಮಾಪನ, ಭೂ ದಾಖಲೆಗಳ ಡಿಜಿಟಲೀಕರಣ, ಕೀಟನಾಶಕಗಳು ಮತ್ತು ಪೋಷಕಾಂಶಗಳ ಸಿಂಪರಣೆಗಾಗಿ ‘ಕಿಸಾನ್ ಡ್ರೋನ್ಸ್’ ಬಳಕೆಗೆ ಕೇಂದ್ರ ಅಸ್ತು ಎಂದಿದೆ. ಇದನ್ನೂ ಓದಿ: Budget 2022: ಮುಂದಿನ 5 ವರ್ಷಗಳಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಯ ಗುರಿ

    ಕೆನ್-ಬೆಟ್ವಾ ಯೋಜನೆ:
    ಕೆನ್ – ಬೆಟ್ವಾ ಜೋಡಣೆ ಯೋಜನೆಯ ಅನುಷ್ಠಾನಕ್ಕೆ 1400 ಕೋಟಿ ರೂ.ವೆಚ್ಚ ಬರಿಸಲು ಮುಂದಾಗಿದ್ದು, ಕೆನ್-ಬೆಟ್ವಾ ಜೋಡಣೆ ಯೋಜನೆಯಿಂದ 9.08 ಲಕ್ಷ ಹೆಕ್ಟೇರ್ ರೈತರ ಜಮೀನುಗಳಿಗೆ ನೀರಾವರಿ ಕಲ್ಪಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಉದ್ಯಮ್, ಇ-ಶ್ರಮ್, ಎನ್‍ಸಿಎಸ್ ಮತ್ತು ಅಸೀಮ್ ಪೋರ್ಟಲ್‍ಗಳನ್ನು ಪರಸ್ಪರ ಜೋಡಿಸಲಾಗಿದೆ. 130 ಲಕ್ಷ ಎಂಎಸ್‍ಎಂಇಗಳಿಗೆ ತುರ್ತು ಸಾಲ ಖಾತ್ರಿ ಯೋಜನೆ (ಇಸಿಎಲ್‍ಜಿಎಸ್)ಅಡಿಯಲ್ಲಿ ಹೆಚ್ಚುವರಿ ಸಾಲವನ್ನು ಒದಗಿಸಲಾಗಿದ್ದು, ಇಸಿಎಲ್‍ಜಿಎಸ್ ಅನ್ನು ಮಾರ್ಚ್ 2023 ರವರೆಗೆ ವಿಸ್ತರಿಸಲಾಗಿದೆ. ಇಸಿಎಲ್‍ಜಿಎಸ್ ಅಡಿಯಲ್ಲಿ ಖಾತರಿ ಕವರ್ ಅನ್ನು 50000 ಕೋಟಿ ರೂ.ಗಳಿಂದ ಒಟ್ಟು 5 ಲಕ್ಷ ಕೋಟಿ ರೂ.ಗಳಿಗೆ ವಿಸ್ತರಿಸಲು ಮುಂದಾಗಿದ್ದು, ಮೈಕ್ರೋ ಮತ್ತು ಸ್ಮಾಲ್ ಎಂಟರ್‍ಪ್ರೈಸಸ್ ಕ್ರೆಡಿಟ್ ಗ್ಯಾರಂಟಿ ಟ್ರಸ್ಟ್ (ಸಿಜಿಟಿಎಂಎಸ್‍ಇ) ಅಡಿಯಲ್ಲಿ ಕಿರು ಮತ್ತು ಸಣ್ಣ ಉದ್ಯಮಗಳಿಗೆ 2 ಲಕ್ಷ ಕೋಟಿ ಹೆಚ್ಚುವರಿ ಸಾಲ ಕೊಡುವುದಾಗಿ ಕೇಂದ್ರ ಬಜೆಟ್‍ನಲ್ಲಿ ತಿಳಿಸಿದೆ.