Tag: Kishore Babu

  • ಚಿಂತಾಮಣಿ ಬಳಿ ಭೀಕರ ಅಪಘಾತ – ಆಸ್ಪತ್ರೆಗೆ ಭೇಟಿ ನೀಡಿದ ಕೋಲಾರ ಎಸ್‍ಪಿ

    ಚಿಂತಾಮಣಿ ಬಳಿ ಭೀಕರ ಅಪಘಾತ – ಆಸ್ಪತ್ರೆಗೆ ಭೇಟಿ ನೀಡಿದ ಕೋಲಾರ ಎಸ್‍ಪಿ

    ಕೋಲಾರ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಲಾರಿ ಮತ್ತು ಜೀಪ್‍ಗಳ ಭೀಕರ ಅಪಘಾತವಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿನ್ನೆಲೆ ಎಸ್‍ಪಿ ಕೋಲಾರ ಆಸ್ಪತ್ರೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು.

    ಅಪಘಾತದಲ್ಲಿ ಎರಡು ವರ್ಷ ವಯಸ್ಸಿನ ಮಗುವೊಂದು ಪ್ರಾಣಾಪಾಯದಿಂದ ಪಾರಾಗಿದೆ. ಆ ಮಗುವನ್ನು ಚಿಂತಾಮಣಿಯಿಂದ ಜೀರೋ ಟ್ರಾಫಿಕ್ ಮೂಲಕ ಆಂಬುಲೆನ್ಸ್ ನಲ್ಲಿ ಕೋಲಾರಕ್ಕೆ ಕರೆತರಲಾಗಿತ್ತು. ಇದನ್ನೂ ಓದಿ:  ಬೆಂಗಳೂರು ಹೋಟೆಲಿನಲ್ಲಿ ಅಗ್ನಿ ಅವಘಡಕ್ಕೆ ಬೊಲೇರೋ ವಾಹನ ಕಾರಣ?

    ಘಟನೆಗೆ ಸಾರಿಗೆ ಅಧಿಕಾರಿಗಳ ನಿರ್ಲಕ್ಷ್ಯವು ಎದ್ದು ಕಾಣುತ್ತಿದೆ. ಸ್ಥಳಿಯರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಾರಿಗೆ ಬಸ್‍ಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಜಾಲಪ್ಪ ಆಸ್ಪತ್ರೆಗೆ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕ ಕಿಶೋರ್ ಬಾಬು ಭೇಟಿ ನೀಡಿ ಗಾಯಾಳುಗಳ ಚಿಕಿತ್ಸೆ ಕುರಿತು ಪರಿಶೀಲನೆ ನಡೆಸಿದರು. ಇದನ್ನೂ ಓದಿ:  ಹುಬ್ಬಳ್ಳಿ ರೈಲಿನಲ್ಲಿ 15 ಕೆಜಿ ಹಸಿ ಗಾಂಜಾ ಪತ್ತೆ!

    ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮರಿನಾಯಕನಹಳ್ಳಿ ಬಳಿ ಸಿಮೆಂಟ್ ಲಾರಿ ಹಾಗೂ ಜೀಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ 8 ಜನರು ಮೃತಪಟ್ಟಿದ್ರೆ, 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೋಲಾರದ ಆರ್.ಎಲ್.ಜಾಲಪ್ಪ ಹಾಗು ಎಸ್.ಎನ್.ಆರ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ 2 ಮಕ್ಕಳು, 6 ಮಹಿಳೆಯರು ಸೇರಿ ಒಟ್ಟು 17 ಜನರು ಜೀಪ್ ನಲ್ಲಿ ಪ್ರಯಾಣ ಮಾಡುತ್ತಿದ್ದರು. ಇದನ್ನೂ ಓದಿ:  ಕೆಲಸಕ್ಕೆ ಹಾಜರಾಗಿ – ಪೊಲೀಸರಿಗೆ ತಾಲಿಬಾನ್ ಕಮಾಂಡರ್​ಗಳಿಂದ ಕರೆ

  • ಚೆಕ್ ಪೋಸ್ಟ್ ಪೊಲೀಸರಿಂದ ಆಟೋ ಚಾಲಕನಿಗೆ ಥಳಿತ

    ಚೆಕ್ ಪೋಸ್ಟ್ ಪೊಲೀಸರಿಂದ ಆಟೋ ಚಾಲಕನಿಗೆ ಥಳಿತ

    ರಾಯಚೂರು: ಚುನಾವಣೆ ಹಿನ್ನೆಲೆ ರಾಯಚೂರಿನಲ್ಲಿ ತೆರೆಯಲಾದ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರ ದರ್ಬಾರ್ ಜೋರಾಗಿದೆ. ನಗರದ ಆಶ್ರಯ ಕಾಲೋನಿಯ ಚೆಕ್ ಪೋಸ್ಟ್ ನಲ್ಲಿ ಹಣ ನೀಡದಿದ್ದಕ್ಕೆ ಪೊಲೀಸರು ಥಳಿಸಿರುವ ಘಟನೆ ನಡೆದಿದೆ.

    ಚೆಕ್ ಪೋಸ್ಟ್ ಪೊಲೀಸರು ಪ್ರತಿ ವಾಹನವನ್ನು ತಪಾಸಣೆ ಮಾಡುತ್ತಿದ್ದರು. ಡಿಸೇಲ್, ಪೆಟ್ರೋಲ್ ತೆಗೆದುಕೊಂಡು ಆಟೋದಲ್ಲಿ ಬಂದಿದ್ದ ರಂಗಪ್ಪನಿಗೆ ಕೆನ್ನೆ ಹಾಗೂ ಬೆನ್ನಿನ ಮೇಲೆ ರಕ್ತ ಬರುವಂತೆ ಹೊಡೆದಿದ್ದಾರೆ ಅಂತಾ ಆರೋಪಿಸಲಾಗಿದೆ.

    ಡಿಸೇಲ್, ಪೆಟ್ರೋಲ್ ತೆಗೆದುಕೊಂಡು ಆಟೋದಲ್ಲಿ ರಾಯಚೂರಿನಿಂದ ಚಂದ್ರಬಂಡಾ ಗ್ರಾಮಕ್ಕೆ ಹೋಗುತ್ತಿದ್ದೆವು. ಚೆಕ್ ಪೋಸ್ಟ್ ಬಳಿ ಪೊಲೀಸರು ನಮ್ಮ ವಾಹನವನ್ನು ಚೆಕ್ ಮಾಡಿದರು. ಎರಡು ಬಿಲ್ ಇತ್ತು ಒಂದು ಬಿಲ್ ಇರಲಿಲ್ಲ. ಆ ಒಂದು ಬಿಲ್ ಅನ್ನು ತೆಗೆದುಕೊಂಡು ಬರಲು ಹೇಳಿದರು. ಹಣ ಇಟ್ಟಿದ್ದೀರಾ ಎಂದು ಕೇಳಿದರು ಇಲ್ಲ ಎಂದೆವು. ಜೇಬಿನಲ್ಲಿ 3000 ರೂ. ಇತ್ತು. ಮಾರ್ಕೆಟ್ ಯಾರ್ಡ್ ಠಾಣೆ ಹೆಡ್ ಕಾನ್ಸ್‍ಟೇಬಲ್ ರಾಜಪ್ಪ ಜೇಬಿಗೆ ಕೈ ಹಾಕಿದರು. ಕೆನ್ನೆ ಹಾಗೂ ಬೆನ್ನಿನ ಮೇಲೆ ಹೊಡೆದರು. ರಾಜಪ್ಪ ಈ ಹಿಂದೆಯೂ ಹಣ ಕೇಳಿದ್ದ ಎಂದು ರಂಗಪ್ಪನ ಅಣ್ಣ ಆರೋಪ ಮಾಡಿದರು.

     

    ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಗಾಯಾಳು ರಂಗಪ್ಪ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಕಿಶೋರ್ ಬಾಬು ಅವರಿಗೆ ದೂರು ನೀಡಿದ್ದಾ ರೆ. ರಾಜಪ್ಪ ಈ ಹಿಂದೆಯೂ ಹಣ ಕೇಳಿದ್ದ, ಈ ಬಾರಿಯೂ ಹಣ ನೀಡದ್ದಕ್ಕೆ ಥಳಿಸಿದ್ದಾನೆ ಅಂತ ಗಾಯಾಳು ರಂಗಪ್ಪ ಆರೋಪಿಸಿದ್ದಾರೆ.