Tag: kiss

  • ನಟಿಗೆ ಸುಶಾಂತ್ ಕಿಸ್- ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್

    ನಟಿಗೆ ಸುಶಾಂತ್ ಕಿಸ್- ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್

    -ಫೋಟೋ ಪೋಸ್ಟ್ ಮಾಡಿದ್ದ ನಟಿ
    -ಸಲ್ಮಾನ್ ಬರ್ತ್ ಡೇ ಪಾರ್ಟಿಯಲ್ಲಿ ಕಿಸ್ಸಿಂಗ್

    ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಟಿಗೆ ಕಿಸ್ ಮಾಡಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. 2016ರ ವೇಳೆ ನಟ ಸಲ್ಮಾನ್ ಖಾನ್ ಬರ್ತ್ ಡೇ ಪಾರ್ಟಿಯಲ್ಲಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನ ನಟಿಯೇ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿಕೊಂಡು ಸುಶಾಂತ್ ತಲೆಹರಟೆಯನ್ನ ರಿವೀಲ್ ಮಾಡಿದ್ದರು. ಸದ್ಯ ಈ ಫೋಟೋಗಳು ವೈರಲ್ ಆಗಿವೆ.

    ಎಂ.ಎಸ್.ಧೋನಿ ಸಿನಿಮಾದಲ್ಲಿ ಸುಶಾಂತ್ ಗೆ ಜೊತೆಯಾಗಿ ಕಿಯಾರಾ ಅದ್ವಾನಿ ನಟಿಸಿದ್ದರು. ಸಲ್ಮಾನ್ ಖಾನ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಇಬ್ಬರು ಭಾಗಿಯಾಗಿದ್ದ ವೇಳೆ ಸುಶಾಂತ್ ನಟಿಗೆ ಕಿಸ್ ಮಾಡಿದ್ದರು. ಅಂದು ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದ ಕಿಯಾರಾ, ನೀವು ಯಾವಾಗಲೂ ಸಿಕ್ಕಾಗಲೂ ಹೀಗೆ ಆಗೋದು ಎಂದು ಬರೆದು ಸುಶಾಂತ್ ಅಟ್ಯಾಕ್ ಹ್ಯಾಶ್ ಟ್ಯಾಗ್ ಬಳಸಿದ್ದರು. ಇದನ್ನೂ ಓದಿ: ರಿಯಾ ನನ್ನ ಮಗನಿಗೆ ಹಂತ ಹಂತವಾಗಿ ವಿಷ ನೀಡಿ ಕೊಂದ್ಳು: ಸುಶಾಂತ್ ತಂದೆ

    https://www.instagram.com/p/BOg0M_0jExw/?utm_source=ig_embed

    ಸುಶಾಂತ್ ನಿಧನವಾದಗಲೂ ಕಿಯಾರಾ ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡು ಸಂತಾಪ ಸೂಚಿಸಿದ್ದರು. ಸುಶಾಂತ್ ನಿಧನದ ಬಳಿಕ ನಟನ ಹಳೆಯ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡಿವೆ. ಇದನ್ನೂ ಓದಿ: ಹೌದು, ಸುಶಾಂತ್ ಶವದ ಮುಂದೆ ಕ್ಷಮೆ ಕೇಳಿದ್ದೆ: ರಿಯಾ ಚಕ್ರವರ್ತಿ

    ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಜೀವನಾಧರಿತ ಸಿನಿಮಾದಲ್ಲಿ ಸುಶಾಂತ್ ಸಿಂಗ್ ರಜಪೂತ್ ಗೆ ದೊಡ್ಡ ಬ್ರೇಕ್ ನೀಡಿತ್ತು. ಚಿತ್ರದಲ್ಲಿ ನಟಿಸಿದ ಕಿಯಾರಾ ಅದ್ವಾನಿ ಮತ್ತು ದಿಶಾ ಪಟಾಣಿಗೂ ಹೆಸರು ತಂದುಕೊಟ್ಟಿತ್ತು. 2016ರಲ್ಲಿ ಬಿಡುಗಡೆಯಾಗಿದ್ದ ಸಿನಿಮಾ 200ಕ್ಕೂ ಅಧಿಕ ಕೋಟಿ ಹಣವನ್ನ ತನ್ನ ಜೇಬಿಗೆ ಇಳಿಸಿಕೊಂಡಿತ್ತು. ಇದನ್ನೂ ಓದಿ: ಸರ್ ನಿಧನದ ಬಳಿಕ ಮನೆಯಲ್ಲಿದ್ದ ಡ್ರಗ್ ಸಿಗರೇಟ್  ರೋಲ್ ಮಾಯವಾಯ್ತು: ಸುಶಾಂತ್ ಮನೆಯ ಕುಕ್ 

    ಜೂನ್ 14ರಂದು ಸುಶಾಂತ್ ಮೃತದೇಹ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಆತ್ಮಹತ್ಯೆ ಎಂದು ಹೇಳಲಾಗಿದ್ರೂ ಅಭಿಮಾನಿಗಳು ನಟನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಸುಶಾಂತ್ ನಿಧನ ಬಾಲಿವುಡ್ ನಲ್ಲಿರುವ ಸ್ವಜನಪಕ್ಷಪಾತದಿಂದ ಆಗಿದ್ದು, ಸೂಕ್ತ ತನಿಖೆ ನಡೆಸಬೇಕೆಂದು ನಟಿ ಕಂಗನಾ ರಣಾವತ್ ಆಗ್ರಹಿಸಿದ್ದರು. ಸುಶಾಂತ್ ನಿಧನದ ಒಂದು ತಿಂಗಳ ಬಳಿ ಕಂಗನಾಗೆ ನಟಿ ಅಂಕಿತಾ ಲೋಖಂಡೆ ಸಾಥ್ ನೀಡಿ, ಮಾಜಿ ಪ್ರಿಯಕರನ ಸಾವಿನ ರಹಸ್ಯ ಬಹಿರಂಗವಾಗಬೇಕೆಂದು ಒತ್ತಾಯಿಸಿದ್ದರು. ಇದನ್ನೂ ಓದಿ: ಸುಶಾಂತ್ ಸಾವಿಗೆ ಭೂಗತ ಲೋಕದ ಲಿಂಕ್: ಸುಬ್ರಮಣಿಯನ್ ಸ್ವಾಮಿ

    ಕಳೆದ ಮೂರು ತಿಂಗಳಲ್ಲಿ ಹಲವು ಮಜಲುಗಳಲ್ಲಿ ಸಾಗಿದ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯನ್ನ ಸಿಬಿಐ ನಡೆಸುತ್ತಿದೆ. ಸಿಬಿಐ ತನಿಖೆ ವೇಳೆ ಡ್ರಗ್ಸ್ ದಂಧೆಯ ಸುಳಿವು ಲಭ್ಯವಾಗಿದ್ದರಿಂದ ಎನ್‍ಸಿಬಿ ಸಹ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಎನ್‍ಸಿಬಿ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಸೇರಿದಂತೆ ಹಲವರನ್ನ ಬಂಧಿಸಿದೆ. ಇತ್ತ ಬಾಲಿವುಡ್ ನಟಿಯರಾದ ಸಾರಾ ಅಲಿ ಖಾನ್ ಮತ್ತು ರಕುಲ್ ಪ್ರೀತ್ ಸಿಂಗ್ ಗೂ ಎನ್‍ಸಿಬಿ ಸಮನ್ಸ್ ನೀಡಿರುವ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಪ್ರಕರಣಕ್ಕೆ ಹೊಸ ತಿರುವು ನೀಡಿದ ಸುಶಾಂತ್ ಪಕ್ಕದ್ಮನೆ ಮಹಿಳೆ ಹೇಳಿಕೆ

  • ಕಚೇರಿಯಲ್ಲೇ ತಹಶೀಲ್ದಾರ್ ಕಿಸ್ಸಿಂಗ್ – ವಿಡಿಯೋ ವೈರಲ್

    ಕಚೇರಿಯಲ್ಲೇ ತಹಶೀಲ್ದಾರ್ ಕಿಸ್ಸಿಂಗ್ – ವಿಡಿಯೋ ವೈರಲ್

    ಕೊಪ್ಪಳ: ಸರ್ಕಾರಿ ಕಚೇರಿಯಲ್ಲೇ ಉನ್ನತ ಸ್ಥಾನದ ಅಧಿಕಾರಿಯೊಬ್ಬ ಲವ್ವಿಡವ್ವಿ ನಡೆಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

    ಜಿಲ್ಲೆಯ ಕುಷ್ಟಗಿ ತಹಶೀಲ್ದಾರ್ ಕಚೇರಿಯಲ್ಲಿ ಎರಡು ತಿಂಗಳು ಹಿಂದೆ ಈ ಘಟನೆ ನಡೆದಿದೆ. ಈ ಹಿಂದೆ ಕುಷ್ಟಗಿ ತಹಶೀಲ್ದಾರ್ ಆಗಿದ್ದ ಗುರುಬಸವರಾಜ್ ಕಿಸ್ಸಿಂಗ್ ವಿಡಿಯೋ ವೈರಲ್ ಆಗಿದೆ. ಗುರುಬಸವರಾಜ್ ತಹಶೀಲ್ದಾರ್ ಆಗಿದ್ದಾಗ ತಮ್ಮ ಸಹೋದ್ಯೋಗಿಗೆ ಕಚೇರಿಯಲ್ಲಿ ಕಿಸ್ ಮಾಡಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ತಮ್ಮ ಕಚೇರಿಯಲ್ಲಿ ಬಂದು ನಿಂತಿದ್ದ ಮಹಿಳಾ ಸಿಬ್ಬಂದಿಯನ್ನ ಕಿಸ್ ಮಾಡಿ ಕಚೇರಿಯ ಘನತೆಯನ್ನ ಮಣ್ಣು ಪಾಲು ಮಾಡಿದ್ದಾರೆ ಎಂದು ಕೆಲ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗುರುಬಸವರಾಜ್ ಕುಷ್ಟಗಿ ತಹಶೀಲ್ದಾರ್ ಆಗಿದ್ದ ಅವಧಿಯಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ವೈರಲ್ ಆಗಿದೆ. ಅಲ್ಲಿಂದ ವರ್ಗಾವಣೆಯಾಗಿ ಈಗ ಗುರುಬಸವರಾಜ್ ಸದ್ಯ ಕೊಪ್ಪಳ ನಗರಾಭಿವೃದ್ಧಿ ಕೋಶದಲ್ಲಿ ತಹಶೀಲ್ದಾರ್ ಆಗಿದ್ದಾರೆ.

    ಅಲ್ಲಿಂದ ವರ್ಗಾವಣೆಗೊಂಡ ಬಳಿಕ ಅವರ ಕಿಸ್ಸಿಂಗ್ ಸೀನ್ ಈಗ ವೈರಲ್ ಆಗಿದೆ. ಉನ್ನತ ಸ್ಥಾನದಲ್ಲಿರುವ ಅಧಿಕಾರಿಯೇ ತಮ್ಮ ಕಚೇರಿಯಲ್ಲಿ ಈ ರೀತಿ ರಾಸಲೀಲೆ ಮಾಡಿ ಹುದ್ದೆಯ ಘನತೆಗೆ ದಕ್ಕೆ ತಂದಿದ್ದಾರೆ ಅಂತ ಅಧಿಕಾರಿಯ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

  • ಬಿಲ್ಡಿಂಗ್‍ನ ತುತ್ತತುದಿಯಲ್ಲಿ ನಿಂತು ಸ್ಟಾರ್ ನಟನ ತಂಗಿಯ ಲಿಪ್‍ಲಾಕ್

    ಬಿಲ್ಡಿಂಗ್‍ನ ತುತ್ತತುದಿಯಲ್ಲಿ ನಿಂತು ಸ್ಟಾರ್ ನಟನ ತಂಗಿಯ ಲಿಪ್‍ಲಾಕ್

    -ಅಣ್ಣ ಸಿಂಗಲ್, ತಂಗಿ ಎಂಗೇಜ್
    -ಹಾಟ್ ಫೋಟೋಗಳಿಂದಲೇ ಸುದ್ದಿಯಾಗೋ ಸ್ಟಾರ್ ಕುಡಿ

    ಮುಂಬೈ: ಬಾಲಿವುಡ್ ಹಿರಿಯ ನಟ ಜಾಕಿ ಶ್ರಾಫ್ ಪುತ್ರಿ, ಟೈಗರ್ ಶ್ರಾಫ್ ಸೋದರಿ ಕೃಷ್ಣಾ ಶ್ರಾಫ್ ತನ್ನ ಗೆಳೆಯನ ಜೊತೆ ಲಿಪ್ ಲಾಕ್ ಮಾಡಿರುವ ಫೋಟೋಗಳನ್ನು ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮಿಂಚಿನಂತೆ ಹರಿದಾಡುತ್ತಿವೆ.

    ಸೋದರ ಜಾಕಿ ಶ್ರಾಫ್ ಸಿಂಗಲ್ ಆಗಿದ್ದರೂ ಸೋದರಿ ಕೃಷ್ಣಾ ಗೆಳೆಯನ ಜೊತೆ ಕೊರೊನಾ ಹಾಲಿಡೇಯನ್ನ ಎಂಜಾಯ್ ಮಾಡ್ತಿದ್ದಾರೆ. ಟೈಗರ್ ಶ್ರಾಫ್ ಮತ್ತು ದಿಶಾ ಪಟಾಣಿ ನಡುವೆ ಲವ್ ಇದೆ ಎಂಬ ಮಾತುಗಳು ಕೇಳಿ ಬರುತ್ತಿದ್ದರೂ, ಇಬ್ಬರೂ ಮಾತ್ರ ತಾವು ಇನ್ನೂ ಸಿಂಗಲ್ ಅಂತಾನೇ ಹೇಳಿಕೊಂಡಿದ್ದಾರೆ. ಆದ್ರೆ ಟೈಗರ್ ಸೋದರಿ ಬಹು ದಿನಗಳ ಹಿಂದೆ ತನ್ನ ಪ್ರೀತಿಯನ್ನು ಬಹಿರಂಗವಾಗಿಯೇ ಹೇಳಿಕೊಂಡು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

    https://www.instagram.com/p/B_pUWQxg4e8/?utm_source=ig_embed

    ಬಾಸ್ಕೆಟ್ ಬಾಲ್ ಆಟಗಾರ ಇಬಾನ್ ಹ್ಯಾಂಸ್ ಪ್ರೇಮಪಾಶದಲ್ಲಿ ಕೃಷ್ಣಾ ಬಂಧಿಯಾಗಿದ್ದು, ಸದ್ಯ ಇಬ್ಬರು ಮುಂಬೈನಲ್ಲಿ ಕಾಲ ಕಳೆಯುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕೃಷ್ಣಾ ಬಿಕಿನಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದವು. 2015ರಲ್ಲಿ ಕೃಷ್ಣಾರ ಟಾಪ್‍ಲೆಸ್ ಫೋಟೋ ಚರ್ಚೆಗೆ ಗ್ರಾಸವಾಗಿತ್ತು.

  • ಜವಾಬ್ದಾರಿಯುತವಾಗಿ ರೊಮ್ಯಾನ್ಸ್ ಮಾಡಿ ಎಂದ ರಚಿತಾ ಸೋದರಿ

    ಜವಾಬ್ದಾರಿಯುತವಾಗಿ ರೊಮ್ಯಾನ್ಸ್ ಮಾಡಿ ಎಂದ ರಚಿತಾ ಸೋದರಿ

    – ಮಾಸ್ಕ್ ಧರಿಸಿ ಲಿಪ್‍ಲಾಕ್

    ಬೆಂಗಳೂರು: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಪ್ರಕರಣ ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ. ಈಗಾಗಲೇ ಸೀರಿಯಲ್, ಸಿನಿಮಾ ಶೂಟಿಂಗ್‍ಗಳನ್ನು ಕ್ಯಾನ್ಸಲ್ ಮಾಡಲಾಗಿದೆ. ಕೆಲವು ನಟ-ನಟಿಯರು ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ಈ ಮಧ್ಯೆ ನಟಿ ನಿತ್ಯಾ ರಾಮ್ ಮಾಸ್ಕ್ ಧರಿಸಿ ಪತಿಯೊಂದಿಗೆ ಕಿಸ್ ಮಾಡಿದ್ದಾರೆ.

    ನಟಿ ರಚಿತಾ ರಾಮ್ ಸಹೋದರಿ ನಿತ್ಯಾ ರಾಮ್ ಪತಿ ಗೌತಮ್ ಜೊತೆ ಮಾಸ್ಕ್ ಧರಿಸಿ ಕಿಸ್ ಮಾಡಿದ್ದಾರೆ. ಈ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇಬ್ಬರೂ ಪರಸ್ಪರ ಮಾಸ್ಕ್ ಧರಿಸಿ ಕಿಸ್ ಮಾಡಿದ್ದು, “ಜವಾಬ್ದಾರಿಯುತವಾಗಿ ರೊಮ್ಯಾನ್ಸ್ ಮಾಡಿ” ಎಂದು ಫೋಟೋಗೆ ಕ್ಯಾಪ್ಶನ್ ಕೊಟ್ಟಿದ್ದಾರೆ.

    ಅಷ್ಟೇ ಅಲ್ಲದೇ ಆ ಫೋಟೋಗೆ #CoronaEffect #StaySafe #NeverStopRomance ಎಂಬ ಹ್ಯಾಶ್ ಟ್ಯಾಗ್‍ಗಳನ್ನು ಬಳಸಿದ್ದಾರೆ. ಈ ಫೋಟೋವನ್ನು ಅಪ್ಲೋಡ್ ಮಾಡಿದ ತಕ್ಷಣ ಕಮೆಂಟ್ ಮಾಡುವ ಮೂಲಕ ಟ್ರೋಲ್ ಮಾಡಿದ್ದಾರೆ. ‘ಮೊದಲು ಸುರಕ್ಷತೆ ಆಮೇಲೆ ಕಿಸ್’, ‘ಕೊರೊನಾ ಗಂಭೀರವಾದ ಸಮಸ್ಯೆ, ತಮಾಷೆಯಲ್ಲ’ ಅಲ್ಲಿ ಕೊರೊನಾ ಇದ್ರೂ ನೀವು ರೊಮ್ಯಾನ್ಸ್ ಮಾಡುವುದು ಬಿಡುತ್ತಿಲ್ಲ’ ಎಂದು ಅನೇಕ ರೀತಿ ಕಮೆಂಟ್ ಮಾಡಿದ್ದಾರೆ.

    https://www.instagram.com/p/B9-vhgoAFNB/

    2019 ಡಿಸೆಂಬರ್‌ನಲ್ಲಿ ನಿತ್ಯ ರಾಮ್ ಆಸ್ಟ್ರೇಲಿಯಾ ಉದ್ಯಮಿ ಗೌತಮ್ ಜೊತೆ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‍ನಲ್ಲಿ ಸಾಂಪ್ರದಾಯಿಕವಾಗಿ ಮದುವೆಯಾಗಿದ್ದಾರೆ.

    ನಿತ್ಯ ರಾಮ್ ಹಾಗೂ ಗೌತಮ್ ಅವರದ್ದು ಅರೇಂಜ್ಡ್ ಮ್ಯಾರೇಜ್ ಆಗಿದೆ. ನಿತ್ಯಾ ರಾಮ್ ತಾಯಿಯ ಸ್ನೇಹಿತರ ಮಗನೇ ಗೌತಮ್. ಹೀಗಾಗಿ ಕುಟುಂಬದವರ ಮೂಲಕ ಪರಿಚಯರಾದ ಗೌತಮ್ ಅವರನ್ನೇ ನಿತ್ಯಾ ವರಿಸಿದ್ದಾರೆ. ಗೌತಮ್ ಉದ್ಯಮಿಯಾಗಿದ್ದು, ಆಸ್ಟ್ರೇಲಿಯಾದಲ್ಲಿಯೇ ವಾಸಿಸುತ್ತಿದ್ದಾರೆ. ಹೀಗಾಗಿ ಮದುವೆ ನಂತರ ನಟಿ ನಿತ್ಯಾ ಕೂಡ ಆಸ್ಟ್ರೇಲಿಯಾದಲ್ಲಿ ಸೆಟಲ್ ಆಗಿದ್ದಾರೆ.

    ನಿತ್ಯಾ ರಾಮ್ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ನಂದಿನಿ’ ಧಾರಾವಾಹಿ ಮೂಲಕ ಖ್ಯಾತಿ ಪಡೆದುಕೊಂಡಿದ್ದರು.

  • ಚುಂಬಿಸ್ತಾರೆ, ಜೋಡಿಯಾಗಿ ಕುಣಿಯುತ್ತಾರೆ -ದಾವಣಗೆರೆಯಲ್ಲೊಂದು ವಿಶೇಷ ಜಾತ್ರೆ

    ಚುಂಬಿಸ್ತಾರೆ, ಜೋಡಿಯಾಗಿ ಕುಣಿಯುತ್ತಾರೆ -ದಾವಣಗೆರೆಯಲ್ಲೊಂದು ವಿಶೇಷ ಜಾತ್ರೆ

    ದಾವಣಗೆರೆ: ಜಾತ್ರೆ ಎಂದರೆ ಸಾಕು ಪೂಜೆ, ದೇವಿ ಮೆರವಣೆಗೆ, ಭರ್ಜರಿ ಬಾಡೂಟ ಎಲ್ಲಾ ಇರುತ್ತೆ. ನೆಂಟರೆಲ್ಲಾ ಬಂದು ಮನೆಯಲ್ಲಿ ಸಂಭ್ರಮದ ವಾತವರಣದ ಇರುತ್ತದೆ. ಅಲ್ಲದೆ ಜಾತ್ರೆಯಲ್ಲಿ ಆರ್ಕೇಸ್ಟ್ರಾ, ರಿಕಾರ್ಡಿಂಗ್ ಡ್ಯಾನ್ಸ್, ನಾಟಕ ಸೇರಿದಂತೆ ಹಲವು ರೀತಿಯ ಮನೋರಂಜನೆ ಕೂಡ ಇರುತ್ತದೆ. ಆದರೆ ದಾವಣಗೆರೆ ತಾಲೂಕಿನ ಮಾಗಾನಹಳ್ಳಿ ಗ್ರಾಮದಲ್ಲಿ ನಡೆಯುವ ಜಾತ್ರೆಯಲ್ಲಿ ದೇವಿಯ ಮುಂದೆ ಭಕ್ತರು ಜೋಡಿಗಳು ಡ್ಯಾನ್ಸ್ ಮಾಡಿ, ಮುತ್ತು ಕೊಟ್ಟು ವಿಶಿಷ್ಟವಾಗಿ ಜಾತ್ರೆ ಆಚರಿಸುತ್ತಾರೆ.

    ಹೌದು. ಮಾಗಾನಹಳ್ಳಿಯ ಉರಮ್ಮ ದೇವಿಯ ಎದುರು ಭಕ್ತರು ಜೋಡಿಯಾಗಿ ಡ್ಯಾನ್ಸ್ ಮಾಡಿ, ಮುತ್ತು ಕೊಡುವುದೇ ಈ ಜಾತ್ರೆಯ ವಿಶೇಷವಾಗಿದೆ. ಈ ಊರಲ್ಲಿ 10 ವರ್ಷಕ್ಕೊಮ್ಮೆ ಈ ಜಾತ್ರೆ ನಡೆಯುತ್ತದೆ. ಮೂರು ದಿನಗಳ ಕಾಲ ನಡೆಯುವ ದೇವಿಯ ಜಾತ್ರೆಯನ್ನು ಗ್ರಾಮಸ್ಥರು ಅದ್ಧೂರಿಯಾಗಿ ಆಚರಿಸಿ ದೇವರ ಕೃಪಗೆ ಪಾತ್ರರಾಗುತ್ತಾರೆ.

    ಈ ಜಾತ್ರೆಯಲ್ಲಿ ಅಸಾಧಿ ಸಂಪ್ರದಾಯದ ನೃತ್ಯ ಮಾಡಲಾಗುತ್ತೆ. ಸಾಮಾನ್ಯವಾಗಿ ದಲಿತರು ಅಸಾಧಿ ಪದ ಹಾಡಿ ನೃತ್ಯ ಮಾಡುತ್ತಾರೆ. ಹೀಗಾಗಿ ಇಲ್ಲಿ ಕೂಡ ಸಂಪ್ರದಾಯದಂತೆ ದಲಿತ ಮಹಿಳೆಯೊಬ್ಬಳು ಗ್ರಾಮದ ಜಾತ್ರೆ ವೇಳೆ ನೃತ್ಯ ಮಾಡುತ್ತಾಳೆ. ಈ ಮಹಿಳೆ ಜೊತೆ ಗ್ರಾಮದ ಮುಖಂಡ ಕೂಡ ಹೆಜ್ಜೆ ಹಾಕುತ್ತಾನೆ. ನೃತ್ಯ ಮಾಡುವ ವೇಳೆ ಆ ಮಹಿಳೆಗೆ ಮುತ್ತು ಕೊಡುವುದೇ ಈ ಜಾತ್ರೆಯ ವಿಶೇಷವಾಗಿದೆ.

    ದೊಡ್ಡವರು ಮಾತ್ರವಲ್ಲ ಮಕ್ಕಳು, ವೃದ್ಧರು ಕೂಡ ಡ್ಯಾನ್ಸ್ ಮಾಡಿ ಜಾತ್ರೆಯಲ್ಲಿ ಸಂಭ್ರಮಿಸುತ್ತಾರೆ. ಈ ರೀತಿ ನೃತ್ಯ ಮಾಡಿದರೆ ಗ್ರಾಮ ದೇವಿ ಸಂತೃಪ್ತಳಾಗುತ್ತಾರೆ. ತಮ್ಮ ಸಂಕಷ್ಟ ನಿವಾರಣೆಯಾಗುತ್ತದೆ ಎಂಬುದು ಗ್ರಾಮದ ಜನರ ನಂಬಿಕೆಯಾಗಿದೆ. ಇಂಥ ವಿಶಿಷ್ಟ ಆಚರಣೆ ನಡೆಸುವ ಮೂಲಕ ಇಡೀ ಗ್ರಾಮವೇ ಜಾತ್ರೆ ಮಾಡುತ್ತದೆ.

    ತುಂಬಾ ವರ್ಷಗಳಿಂದ ಈ ಸಂಪ್ರದಾಯ ನಡೆದುಕೊಂಡು ಬಂದಿದೆ, ನಮ್ಮ ಹಿರಿಯರ ಮಾರ್ಗದರ್ಶನದಂತೆ ನಾವು ಹಬ್ಬ ಮಾಡುತ್ತೇವೆ. ಜಾತ್ರೆಯಲ್ಲಿ ದೇವರಿಗೆ ವಿಶೇಷ ಪೂಜೆ ವಿಶಿಷ್ಟ ಅಡುಗೆ ಮಾಡುತ್ತೇವೆ. ಜೊತೆಗೆ ಅಸಾಧಿ ಸಂಪ್ರದಾಯದಂತೆ ನೃತ್ಯ ಮಾಡುವುದು ಒಂದು ಸಂಪ್ರದಾಯ. ಹತ್ತು ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಅಸಾಧಿ ಆಚರಣೆ ಪ್ರಮುಖವಾಗಿದ್ದು, ಇಲ್ಲಿ ಯಾವುದೇ ಅಶ್ಲೀಲತೆ ಇರುವುದಿಲ್ಲ. ಹೀಗೆ ಮಾಡಿದರೆ ಊರಮ್ಮ ದೇವಿ ಸಂತೃಷ್ಟವಾಗಿ ಇಡೀ ಗ್ರಾಮಕ್ಕೆ ಒಳಿತು ಮಾಡುತ್ತಾಳೆ ಎನ್ನುವುದು ಇಲ್ಲಿನ ನಂಬಿಕೆ ಎಂದು ಗ್ರಾಮದ ಮುಖಂಡರು ಹೇಳಿದ್ದಾರೆ.

    ವಿಶಿಷ್ಟ ಹಬ್ಬ ಆಚರಣೆ ಹಿನ್ನೆಲೆ ಸುತ್ತಮುತ್ತ ಗ್ರಾಮದ ಜನರು ಈ ಜಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಇನ್ನೂ ಅಸಾಧಿ ಸಂಪ್ರಾದಾಯದಂತೆ ಇಲ್ಲಿ ನೃತ್ಯ ಮಾಡಿ ಕಿಸ್ ಮಾಡುವುದು ಸಖತ್ ಫೇಮಸ್ ಆಗಿದೆ. ಇದು ಒಂದು ಸಂಪ್ರದಾಯವಷ್ಟೇ ಎಂಬುದು ಜನರ ನಂಬಿಕೆಯಾಗಿದೆ.

  • ವಿದ್ಯಾರ್ಥಿಗಳ ಎದುರೇ ವೇದಿಕೆಯಲ್ಲಿ ಶಿಕ್ಷಕಿಗೆ ಕಿಸ್ ಕೊಟ್ಟು ನಕ್ಕ ಶಿಕ್ಷಕ

    ವಿದ್ಯಾರ್ಥಿಗಳ ಎದುರೇ ವೇದಿಕೆಯಲ್ಲಿ ಶಿಕ್ಷಕಿಗೆ ಕಿಸ್ ಕೊಟ್ಟು ನಕ್ಕ ಶಿಕ್ಷಕ

    – ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್

    ಜೈಪುರ: ವಿದ್ಯಾರ್ಥಿಗಳ ಮುಂದೆಯೇ ವೇದಿಕೆ ಮೇಲೆ ಶಿಕ್ಷಕಿಗೆ ಶಿಕ್ಷಕನೋರ್ವ ಮುತ್ತಿಟ್ಟ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ರಾಜಸ್ಥಾನದ ಕರೌಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕರೌಲಿಯ ಶಾಲೆಯೊಂದರಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ವೇದಿಕೆ ಮೇಲೆ ಕುಳಿತ್ತಿದ್ದ ಶಿಕ್ಷಕನೋರ್ವ ತನ್ನ ಪಕ್ಕದಲ್ಲಿದ್ದ ಶಿಕ್ಷಕಿಯ ಕೆನ್ನೆಗೆ ಮುತ್ತು ಕೊಟ್ಟಿದ್ದಾನೆ. ವಿದ್ಯಾರ್ಥಿಗಳ ಎದುರೇ ಶಿಕ್ಷಕಿಗೆ ಶಿಕ್ಷಕ ಮುತ್ತಿಟ್ಟ ದೃಶ್ಯವನ್ನು ಕಾರ್ಯಕ್ರಮದಲ್ಲಿ ನೆರೆದಿದ್ದವರು ವಿಡಿಯೋ ಮಾಡಿದ್ದಾರೆ. ಅಷ್ಟೇ ಅಲ್ಲದೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ತರಗತಿಯಲ್ಲೇ 8ನೇ ತರಗತಿ ಹುಡ್ಗ-ಹುಡ್ಗಿ ಕಿಸ್ಸಿಂಗ್

    ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು, ಈ ಬಗ್ಗೆ ರಾಜಸ್ಥಾನದ ಶಿಕ್ಷಣ ಸಚಿವರನ್ನು ಪ್ರಶ್ನಿಸಿದರೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ದುರ್ವರ್ತನೆ ತೋರಿದ ಶಿಕ್ಷಕನ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಚಿವರು ತಲೆಕೆಡಿಸಿಕೊಂಡಿಲ್ಲ. ಸಚಿವರ ಈ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಶಿಕ್ಷಕನ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಟಮಟ ಮಧ್ಯಾಹ್ನವೇ ವಿದ್ಯಾರ್ಥಿಗಳಿಬ್ಬರ ಲಿಪ್ ಲಾಕ್

    ವೈರಲ್ ವಿಡಿಯೋದಲ್ಲಿ, ವೇದಿಕೆ ಮೇಲೆ ಓರ್ವ ಶಿಕ್ಷಕ, ಒಬ್ಬರು ಶಿಕ್ಷಕಿ ಕೂತಿರುವಾಗ ಏಕಾಏಕಿ ಶಿಕ್ಷಕ ಪಕ್ಕದಲ್ಲಿದ್ದ ಶಿಕ್ಷಕಿ ಕೆನ್ನೆಗೆ ಮುತ್ತು ಕೊಟ್ಟಿದ್ದಾನೆ. ಈ ವೇಳೆ ವೇದಿಕೆ ಎದುರಿಗಿದ್ದ ವಿದ್ಯಾರ್ಥಿಗಳು ಜೋರಾಗಿ ಕೂಗುತ್ತಾ, ಶಿಕ್ಷಕನಿಗೆ ರೇಗಿಸಿದ ದೃಶ್ಯಗಳು ಸೆರೆಯಾಗಿದೆ.

    ಈ ಹಿಂದೆ ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕವಾಗಿಯೇ ಕಿಸ್ ಮಾಡುತ್ತಿರುವ ವಿಡಿಯೋವೊಂದು ಸಖತ್ ವೈರಲ್ ಆಗಿತ್ತು. ಆ ಬಳಿಕ ಗುಜರಾತಿನಲ್ಲಿ 8ನೇ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿ ತರಗತಿಯಲ್ಲೇ ಕಿಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡಿತ್ತು.

    ಗುಜರಾತ್‍ನ ಪಂಚಮಹಲ್ ಜಿಲ್ಲೆಯ ಗೋದ್ರಾ ಸಮೀಪವಿರುವ ಮೊರ್ವಾ ಹಡಾಫ್‍ನ ಕ್ರುಶಿಕರ್ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿ ಕಿಸ್ ಮಾಡಿದ್ದರು. 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿ ಕ್ಲಾಸ್ ರೂಮಿನಲ್ಲಿಯೇ ಒಬ್ಬರಿಗೊಬ್ಬರು ಕಿಸ್ ಕೊಡುತ್ತಿರುವ ವಿಡಿಯೋ ಸದ್ಯ ಸಖತ್ ವೈರಲ್ ಆಗಿತ್ತು. ವಿದ್ಯಾರ್ಥಿ, ವಿದ್ಯಾರ್ಥಿನಿ ಕಿಸ್ ಮಾಡುತ್ತಿರುವ ವಿಡಿಯೋವನ್ನು ಯಾರೋ ಸೆರೆಹಿಡಿದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.

  • ತರಗತಿಯಲ್ಲೇ 8ನೇ ತರಗತಿ ಹುಡ್ಗ-ಹುಡ್ಗಿ ಕಿಸ್ಸಿಂಗ್

    ತರಗತಿಯಲ್ಲೇ 8ನೇ ತರಗತಿ ಹುಡ್ಗ-ಹುಡ್ಗಿ ಕಿಸ್ಸಿಂಗ್

    – ಸೋಶಿಯಲ್ ಮಿಡಿಯಾದಲ್ಲಿ ವಿಡಿಯೋ ವೈರಲ್

    ಗಾಂಧಿನಗರ: ಈ ಹಿಂದೆ ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕವಾಗಿಯೇ ಕಿಸ್ ಮಾಡುತ್ತಿರುವ ವಿಡಿಯೋವೊಂದು ಸಖತ್ ವೈರಲ್ ಆಗಿತ್ತು. ಈಗ ಗುಜರಾತಿನಲ್ಲಿ 8ನೇ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿ ತರಗತಿಯಲ್ಲೇ ಕಿಸ್ ಮಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಗುಜರಾತ್‍ನ ಪಂಚಮಹಲ್ ಜಿಲ್ಲೆಯ ಗೋದ್ರಾ ಸಮೀಪವಿರುವ ಮೊರ್ವಾ ಹಡಾಫ್‍ನ ಕ್ರುಶಿಕರ್ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿ ಕಿಸ್ ಮಾಡಿದ್ದಾರೆ. 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿ ಕ್ಲಾಸ್ ರೂಮಿನಲ್ಲಿಯೇ ಒಬ್ಬರಿಗೊಬ್ಬರು ಕಿಸ್ ಕೊಡುತ್ತಿರುವ ವಿಡಿಯೋ ಸದ್ಯ ಸಖತ್ ವೈರಲ್ ಆಗಿದೆ. ವಿದ್ಯಾರ್ಥಿ, ವಿದ್ಯಾರ್ಥಿನಿ ಕಿಸ್ ಮಾಡುತ್ತಿರುವ ವಿಡಿಯೋವನ್ನು ಯಾರೋ ಸೆರೆಹಿಡಿದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ಮಟಮಟ ಮಧ್ಯಾಹ್ನವೇ ವಿದ್ಯಾರ್ಥಿಗಳಿಬ್ಬರ ಲಿಪ್ ಲಾಕ್

    ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ಈ ಕಿಸ್ಸಿಂಗ್ ಪ್ರಕರಣದ ಬಗ್ಗೆ ಪಂಚಮಹಲ್ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಪಂಚಮಹಲ್ ಜಿಲ್ಲಾ ಶಿಕ್ಷಣ ಅಧಿಕಾರಿ ಬಿಎಸ್ ಪಂಚಾಲ್, ಕ್ರುಶಿಕರ್ ಪ್ರೌಢ ಶಾಲೆಯ ಆಡಳಿತ ಮಂಡಳಿಯಿಂದ ವರದಿ ಕೇಳಲಾಗಿದೆ ಎಂದು ತಿಳಿಸಿದ್ದಾರೆ. ಇತ್ತ ಕ್ರುಶಿಕರ್ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಅಶ್ವಿನ್ ಪಟೇಲ್ ಮಾತನಾಡಿ, ಈ ಘಟನೆ ಸಂಬಂಧ ವಿದ್ಯಾರ್ಥಿಗಳ ಪೋಷಕರಿಗೆ ಸುದ್ದಿ ತಿಳಿಸಲಾಗಿದೆ. ವಿದ್ಯಾರ್ಥಿಗಳು ಕಿಸ್ ಮಾಡುತ್ತಿರುವ ದೃಶ್ಯವನ್ನು ತರಗತಿಯಲ್ಲೇ ವಿಡಿಯೋ ಮಾಡಲಾಗಿದೆ. ಈ ಬಗ್ಗೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

  • ಪಬ್ಲಿಕ್ ಪ್ಲೇಸ್‍ನಲ್ಲಿ ಕಿಸ್, ಹಗ್ ಮಾಡ್ತಾರೆ ಪ್ರೇಮಿಗಳು!

    ಪಬ್ಲಿಕ್ ಪ್ಲೇಸ್‍ನಲ್ಲಿ ಕಿಸ್, ಹಗ್ ಮಾಡ್ತಾರೆ ಪ್ರೇಮಿಗಳು!

    – ಪ್ರವಾಸಿಗರಿಗೆ ಮುಜುಗರ ತರ್ತಿರೋ ಪ್ರೇಮಿಗಳ ಹುಚ್ಚಾಟ

    ಚಿಕ್ಕಬಳ್ಳಾಪುರ: ವಿಶ್ವಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಹೋಗುವ ಕೆಲ ಪ್ರೇಮಿಗಳು, ಮನಸ್ಸೊಇಚ್ಛೆ ಅಶ್ಲೀಲ ಹಾಗೂ ಅನೈತಿಕ ಚಟುವಟಿಕೆಗಳಲ್ಲಿ ತೊಡುಗುತ್ತಾರೆ ಎಂದು ಸರ್ಕಾರ ಅಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನ ಅಳವಡಿಸಿದೆ. ಆದರೂ ಕ್ಯಾಮೆರಾಗಳಿವೆ ಎಂಬ ಪರಿಜ್ಞಾನವಿಲ್ಲದ ಕೆಲ ಜೋಡಿಗಳು ಸಾರ್ವಜನಿಕರ ಸಮ್ಮುಖದಲ್ಲೇ ರೊಮ್ಯಾನ್ಸ್‌ನಲ್ಲಿ ತೊಡಗುವುದರ ಮೂಲಕ ಪ್ರವಾಸಿಗರಿಗೆ ಕಿರಿಕಿರಿಯನ್ನುಂಟು ಮಾಡುತ್ತಿದ್ದಾರೆ.

    ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದಲ್ಲಿ ಪ್ರೇಮಿಗಳು ಸಾರ್ವಜನಿಕ ಸ್ಥಳದಲ್ಲಿಯೇ ಅಶ್ಲೀಲವಾಗಿ ವರ್ತಿಸುತಿದ್ದಾರೆ. ನೂರಾರು ಎಕರೆ ವಿಶಾಲವಾಗಿ ಹರಡಿರುವ ನಂದಿಗಿರಿಧಾಮದಲ್ಲಿ ಹಿಂದೊಮ್ಮೆ ಅಶ್ಲೀಲ ಅನೈತಿಕ ಚಟುವಟಿಕೆಗಳು ಹೆಚ್ಚಾಗಿದ್ದ ಕಾರಣ ರಾಜ್ಯ ತೋಟಗಾರಿಕೆ ಇಲಾಖೆ ಗಿರಿಧಾಮದ ವಿವಿಧೆಡೆ ಸಿಸಿಟಿವಿ ಕ್ಯಾಮೆರಾಗಳನ್ನ ಅಳವಡಿಸಿದೆ.

    ಕೆಲವು ಜೋಡಿಗಳು ಈಗಲೂ ಸಹ ಸಿಸಿಟಿವಿ ಕ್ಯಾಮೆರಾಗಳಿದ್ದರೂ ಸಾರ್ವಜನಿಕವಾಗಿಯೇ ಒಬ್ಬರಿಗೊಬ್ಬರು ಕೀಸ್ ಮಾಡ್ತಾ, ತಬ್ಬಿಕೊಂಡು ಮುದ್ದು ಮಾಡುತ್ತಾ, ರೊಮ್ಯಾನ್ಸ್ ಮಾಡುವ ಘಟನೆಗಳು ಪದೇ ಪದೇ ಮರುಕಳಿಸುತ್ತಿವೆ. ಹೀಗಾಗಿ ನಂದಿಬೆಟ್ಟಕ್ಕೆ ಬರುವ ಪ್ರವಾಸಿಗರಿಗೆ ಮುಜುಗರ ಉಂಟು ಮಾಡುತ್ತಿದ್ದಾರೆ ಎಂದು ನಂದಿಗಿರಿಧಾಮದ ಅಧಿಕಾರಿ ರವಿಕುಮಾರ್ ಬೇಸರದಿಂದ ಹೇಳಿದ್ದಾರೆ.

    ಸಿಸಿಟಿವಿ ಭಯದಿಂದ ನಂದಿಗಿರಿಧಾಮಕ್ಕೆ ಬರೋ ಕೆಲ ಜೋಡಿಗಳು ಗಿರಿಧಾಮದಲ್ಲಿನ ಪೊದೆಗಳ ಮರೆಗೆ ಹೋಗಿ ರೊಮ್ಯಾನ್ಸ್‌ನಲ್ಲಿ ತೊಡಗುತ್ತಾರೆ. ಹೀಗಾಗಿ ಎಚ್ಚೆತ್ತ ತೋಟಗಾರಿಕೆ ಇಲಾಖೆ ಈ ಹಿಂದೆ ಬೆಟ್ಟದ ಮೇಲಿರುವ ದಟ್ಟವಾದ ಪೊದೆಗಳನ್ನು ಸಹ ಕಟಾವು ಮಾಡಿಸಿದೆ. ಆದರೂ ಪ್ರೇಮಿಗಳ ಈ ತುಂಟಾಟ ಮಾತ್ರ ನಿಲ್ಲುತ್ತಿಲ್ಲ. ಒಂದೆಡೆ ಪ್ರಕೃತಿ ಸೊಬಗು ಸವಿಯೋಣ ಎಂದು ಬರುವ ಪ್ರವಾಸಿಗರು, ಮತ್ತೊಂದೆಡೆ ಬೆಟ್ಟದ ಮೇಲೆ ಇರೋ ದೇವಸ್ಥಾನಗಳಿಗೆ ಬರುವ ಭಕ್ತರಿಗೆ ಇದು ಇರುಸು ಮುರುಸು ಉಂಟುಮಾಡುತ್ತಿದೆ ಎಂದು ಪ್ರವಾಸಿಗ ನಾಗೇಂದ್ರ ಪ್ರಸಾದ್ ಹೇಳಿದ್ದಾರೆ.

    ಪ್ರೇಮಿಗಳ ತಾಣ ನಂದಿಗಿರಿಧಾಮದಲ್ಲಿ ಹೆಜ್ಜೆ ಹೆಜ್ಜೆಗೂ ಸಿಸಿಟಿವಿ ಅಳವಡಿಸಲಾಗಿದೆ. ಆದರೆ ಸಕಾಲಕ್ಕೆ ಕ್ಯಾಮೆರಾಗಳ ಮಾನಿಟರಿಂಗ್ ವ್ಯವಸ್ಥೆ ಇಲ್ಲದೆ ಇಲ್ಲದಿರುವುದರಿಂದ ಬೆಟ್ಟದಲ್ಲಿ ಕೆಲವು ಪ್ರೇಮಿ ಜೋಡಿಗಳು ಆಡಿದ್ದೆ ಆಟ, ಮಾಡಿದ್ದೆ ಕಾಯಕವಾಗಿದೆ. ಇನ್ನೂ ಮುಂದಾದರು ಗಿರಿಧಾಮದ ವಿಶೇಷಾಧಿಕಾರಿಗಳು ನಂದಿಬೆಟ್ಟದಲ್ಲಿ ಅಶ್ಲೀಲ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

     

  • ಅಂದು ಹೊಡೆದು, ಇಂದು ಕಿಸ್ ಕೊಟ್ಟ ಪೋಪ್

    ಅಂದು ಹೊಡೆದು, ಇಂದು ಕಿಸ್ ಕೊಟ್ಟ ಪೋಪ್

    ವ್ಯಾಟಿಕನ್ ಸಿಟಿ: ಕೈ ಹಿಡಿದು ಎಳೆದ ಮಹಿಳೆಯೊಬ್ಬರಿಗೆ ಹೊಡೆದಿದ್ದ ಪೋಪ್ ಈಗ ಸನ್ಯಾಸಿನಿಯೊಬ್ಬರಿಗೆ ಕಿಸ್ ಕೊಟ್ಟು ಸುದ್ದಿಯಾಗಿದ್ದಾರೆ.

    ವ್ಯಾಟಿಕನ್ ನಗರದ ಸೇಂಟ್ ಪೀಟರ್ಸ್ ನಲ್ಲಿ ಪೋಪ್ ಫ್ರಾನ್ಸಿಸ್ ಅವರು ಹೊಸ ವರ್ಷದ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೋರುತ್ತಿದ್ದರು. ಈ ವೇಳೆ ಸಾಲಿನಲ್ಲಿ ನಿಂತಿದ್ದ ಮಹಿಳೆಯೊಬ್ಬರು ಪೋಪ್ ಅವರ ಕೈಯನ್ನು ಹಿಡಿದು ಎಳೆದಿದ್ದರು. ಇಂದರಿಂದ ಕೋಪಗೊಂಡ ಪೋಪ್, ಮಹಿಳೆಯ ಕೈಗೆ ಹೊಡೆದು ಹೊರಟುಹೋದಿದ್ದರು. ಆದರೆ ಈಗ ಪೋಪ್ ಅವರು ಸನ್ಯಾಸಿನಿಯೊಬ್ಬರಿಗೆ ಮುತ್ತು ಕೊಟ್ಟ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದನ್ನೂ ಓದಿ: ಕೈ ಹಿಡಿದು ಎಳೆದ ಮಹಿಳೆಗೆ ಹೊಡೆದ ಪೋಪ್: ವಿಡಿಯೋ

    ಚರ್ಚ್ ಸಭಾಂಗಣದಲ್ಲಿ ಬುಧವಾರ ಸಾರ್ವಜನಿಕರ ಸಭೆ ನಡೆದಿತ್ತು. ಈ ವೇಳೆ ಸನ್ಯಾಸಿನಿಯೊಬ್ಬರು ಸಭೆಗೆ ಆಗಮಿಸಿದ ಪೋಪ್ ಫ್ರಾನ್ಸಿಸ್ ಅವರಿಗೆ ಕಿಸ್ ಕೊಡುವಂತೆ ಕೇಳಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಫ್ರಾನ್ಸಿಸ್ ಅವರು, ಕೊಡುತ್ತೇನೆ. ಆದರೆ ನೀವು ಕಚ್ಚುತ್ತೀರಿ ಎಂದರು. ಹೀಗಾಗಿ ಅಲ್ಲಿ ಸೇರಿದ್ದ ಜನರು ನಗೆಗಡಲಲ್ಲಿ ತೇಲಿದರು.

    ಮಾತು ಮುಂದುವರಿಸಿದ ಫ್ರಾನ್ಸಿಸ್ ಅವರು, ಶಾಂತವಾಗಿರಿ. ನಾನು ನಿಮಗೆ ಕಿಸ್ ನೀಡುತ್ತೇನೆ. ಆದರೆ ನೀವು ಶಾಂತವಾಗಿರಿ. ಕಚ್ಚಬೇಡಿ ಎಂದು ಮಹಿಳೆಯ ಬಳಿಗೆ ಹೋಗಿ ಸನ್ಯಾಸಿನಿಯ ಬಲ ಕೆನ್ನೆಗೆ ಮುತ್ತಿಕ್ಕಿದರು. ಆಗ ಸನ್ಯಾಸಿನಿಯು ಸಂಭ್ರಮಿಸುತ್ತಾ ಕ್ರೇಜಿ, ಪಾಪಾ ಎಂದು ಕೂಗಿ ಧನ್ಯವಾದ ತಿಳಿಸಿದರು.

  • ಕಿಸ್ ಕೊಟ್ರೆ ಮಾತ್ರ ಬೈಕಿಂದ ಇಳಿಸ್ತೀನಿ- ಬೀದಿ ಕಾಮಣ್ಣನ ವಿರುದ್ಧ ಕೇಸ್

    ಕಿಸ್ ಕೊಟ್ರೆ ಮಾತ್ರ ಬೈಕಿಂದ ಇಳಿಸ್ತೀನಿ- ಬೀದಿ ಕಾಮಣ್ಣನ ವಿರುದ್ಧ ಕೇಸ್

    ಬೆಂಗಳೂರು: ಡ್ರಾಪ್ ಕೊಡುವುದಾಗಿ ಬೈಕಿನಲ್ಲಿ ಕರೆದುಕೊಂಡು ಹೋಗಿ ದಾರಿ ಮಧ್ಯದಲ್ಲಿ ಬೈಕ್ ನಿಲ್ಲಿಸಿ, ನನಗೆ ಕಿಸ್ ಕೊಟ್ಟರೆ ಮಾತ್ರ ಬೈಕ್‍ನಿಂದ ಇಳಿಸುವುದಾಗಿ ಕಾಮುಕನೊಬ್ಬ ದುಂಬಾಲು ಬಿದ್ದಿದ್ದ ಘಟನೆ ವಿಜ್ಞಾನ ನಗರದಲ್ಲಿ ನಡೆದಿದೆ.

    ಕಳೆದ ಮೂರು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವತಿ ಹೆಚ್‍ಎಎಲ್ ಬಸ್ ನಿಲ್ದಾಣದಿಂದ ನಡೆದುಕೊಂಡು ಹೋಗುತ್ತಿದ್ದಳು. ಆಗ ಅಪರಿಚಿತ ಯುವಕನೊಬ್ಬ ಬಂದು, ನಾನು ಅದೇ ರೂಟ್‍ನಲ್ಲಿ ಹೋಗುತ್ತಿದ್ದೇನೆ. ಹೀಗಾಗಿ ವಿಜ್ಞಾನನಗರ ಬಿಡುವುದಾಗಿ ಒತ್ತಾಯ ಪೂರ್ವಕವಾಗಿ ಬೈಕ್ ಹತ್ತಿಸಿಕೊಂಡಿದ್ದಾನೆ.

    ಎರಡು ಮೂರು ಕಿಲೋಮೀಟರ್ ತನಕ ಕರೆದುಕೊಂಡು ಹೋಗಿ ದಾರಿ ಮಧ್ಯದಲ್ಲಿ ಬೈಕ್ ನಿಲ್ಲಿಸಿದ್ದಾನೆ. ಯುವತಿ ಏಕಾಏಕಿ ದಾರಿ ಮಧ್ಯ ಬೈಕ್ ನಿಲ್ಲಿಸಿದ್ದನ್ನ ಕಂಡು ಯುವಕನಿಗೆ ಪ್ರಶ್ನಿಸಿದ್ದಾಳೆ. ಆಗ ಯುವಕ ನಾನು ಮದ್ಯಪಾನ ಮಾಡಿದ್ದೀನಿ, ನನಗೆ ನೀನು ಕಿಸ್ ಕೊಡಲೇಬೇಕೆಂದು ದುಂಬಾಲು ಬಿದ್ದಿದ್ದಾನೆ. ಕಾಮುಕ ಯುವಕನ ವರ್ತನೆಯಿಂದ ಭಯಬೀತಗೊಂಡ ಯುವತಿ ರಸ್ತೆ ಮಧ್ಯದಲ್ಲೇ ಚಿರಾಡಲು ಶುರು ಮಾಡಿದ್ದಾಳೆ. ಯುವತಿ ಕಿರುಚಾಡಲು ಆರಂಭಿಸುತ್ತಿದ್ದಂತೆ ಯುವತಿಯನ್ನ ಬಿಟ್ಟು ಅಲ್ಲಿಂದ ಯುವಕ ಎಸ್ಕೇಪ್ ಆಗಿದ್ದಾನೆ.

    ಕಾಮುಕನ ವರ್ತನೆಯಿಂದ ಆತಂಕಗೊಂಡಿದ್ದ ಯುವತಿ ಸ್ನೇಹಿತೆಯ ಸಹಾಯದಿಂದ ಹೆಚ್‍ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ದೂರಿನಲ್ಲಿ ಯುವತಿ ಟಿವಿಎಸ್  ಕಂಪನಿಯ ಐಡಿ ಕಾರ್ಡ್ ಧರಿಸಿಕೊಂಡಿದ್ದ ಎಂಬ ಮಾಹಿತಿ ನೀಡಿದ್ದಾಳೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ರೋಡ್ ರೋಮಿಯೋಗಾಗಿ ಹುಡುಕಾಟ ನಡೆಸುತ್ತಿದ್ದಾರೆ.