Tag: Kittur Fort

  • ಬಚ್ಚನಕೇರಿ ಗ್ರಾಮದಲ್ಲಿ ಕಿತ್ತೂರು ಅರಮನೆ ನಿರ್ಮಾಣ – ಸ್ಥಳೀಯರಿಂದ ವಿರೋಧ

    ಬಚ್ಚನಕೇರಿ ಗ್ರಾಮದಲ್ಲಿ ಕಿತ್ತೂರು ಅರಮನೆ ನಿರ್ಮಾಣ – ಸ್ಥಳೀಯರಿಂದ ವಿರೋಧ

    ಬೆಳಗಾವಿ: ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದಲ್ಲಿ ಅರಮನೆ ನಿರ್ಮಾಣಕ್ಕೆ ಮುಂದಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

    ಕಿತ್ತೂರು ಕೋಟೆ ನಿರ್ಮಾಣವನ್ನು ಕಿತ್ತೂರು ಪಟ್ಟಣದಲ್ಲಿರುವ ಚೆನ್ನಮ್ಮನ ಕೋಟೆ ಪಕ್ಕದಲ್ಲೇ ಅರಮನೆ ನಿರ್ಮಾಣ ಮಾಡುವಂತೆ ಸ್ಥಳೀಯರು ಈ ಹಿಂದೆಯೇ ಬೇಡಿಕೆ ಇಟ್ಟಿದ್ದರು. ಆದರೆ ಈಗ ಬೆಳಗಾವಿ ಜಿಲ್ಲಾಡಳಿತ ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದಲ್ಲಿ ಅರಮನೆ ನಿರ್ಮಾಣಕ್ಕೆ ತಯಾರಿ ನಡೆಸಿದೆ. ಇದನ್ನೂ ಓದಿ: ಮ್ಯೂಸಿಕ್ ಶೂಟ್ ವೇಳೆ ದಾಳಿ: 8 ಮಹಿಳಾ ರೂಪದರ್ಶಿಗಳ ಮೇಲೆ ಅತ್ಯಾಚಾರ 

    ಬಚ್ಚನಕೇರಿ ಗ್ರಾಮದಲ್ಲಿ ಕೋಟೆಯ ಪ್ರತಿರೂಪದ ಅರಮನೆ ಮಾಡಲು ಮುಂದಾಗಿದ್ದು, ಈಗಾಗಲೇ ರಾಜ್ಯ ಸರ್ಕಾರ ಅರಮನೆ ನಿರ್ಮಾಣಕ್ಕೆ ಬಚ್ಚನಕೇರಿ ಗ್ರಾಮದಲ್ಲಿರುವ 57 ಎಕರೆ ಜಾಗವನ್ನು ಮೀಸಲಿಟ್ಟಿದೆ.

    ಅರಮನೆ ನಿರ್ಮಾಣಕ್ಕೆ ಸರ್ಕಾರಿ ಜಾಗವನ್ನು ಕಿತ್ತೂರು ಪ್ರಾಧಿಕಾರಕ್ಕೆ ನೀಡಲು ಸರ್ಕಾರ ಉದ್ದೇಶಿಸಿದೆ. ಈ ಸಂಬಂಧ ಬೈಲಹೊಂಗಲ ಉಪವಿಭಾಗಾಧಿಕಾರಿಗೆ ಬೆಳಗಾವಿ ಜಿಲ್ಲಾಡಳಿತ ಪತ್ರ ಬರೆದಿದೆ. ಈ ಸಂಬಂಧ ಆಕ್ಷೇಪಗಳಿದ್ದರೆ ಸಮರ್ಥವಾದ ಕಾರಣ ನೀಡುವಂತೆ ಕೋರಲಾಗಿದೆ.

    ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಜಿಲ್ಲಾಡಳಿತ ಅವಕಾಶ ನೀಡಿದೆ. ಆದರೆ ಬಚ್ಚನಕೇರಿಯಲ್ಲಿ ಅರಮನೆ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಫೈನಲ್ ತಲುಪಿದ ಕನ್ನಡಿಗ, ಈಜುಪಟು ಶ್ರೀಹರಿ ನಟರಾಜ್ 

    Live Tv
    [brid partner=56869869 player=32851 video=960834 autoplay=true]

  • 267 ವರ್ಷಗಳ ಬಳಿಕ ಐತಿಹಾಸಿಕ ಕಿತ್ತೂರು ಗ್ರಾಮದೇವಿ ಜಾತ್ರೆ

    267 ವರ್ಷಗಳ ಬಳಿಕ ಐತಿಹಾಸಿಕ ಕಿತ್ತೂರು ಗ್ರಾಮದೇವಿ ಜಾತ್ರೆ

    ಬೆಳಗಾವಿ: ಕಳೆದ ಮೂರು ಶತಮಾನಗಳ ಹಿಂದೆ ನಡೆದಿದ್ದ ಜಿಲ್ಲೆಯ ಕಿತ್ತೂರಿನ ಐತಿಹಾಸಿಕ ಚನ್ನಮ್ಮಾಜಿ ಕೋಟೆ ಆವರಣದ ಗ್ರಾಮದೇವಿ ಜಾತ್ರಾ ಮಹೋತ್ಸವವನ್ನು ಮತ್ತೆ ಆಯೋಜಿಸಲಾಗುತ್ತಿದೆ. ಜಾತ್ರೆಯ ಹಿನ್ನೆಲೆಯಲ್ಲಿ ಶಾಸಕ ಮಹಾಂತೇಶ್ ದೊಡಗೌಡರ, ಅಧ್ಯಕ್ಷ ಈರಣ್ಣಾ ಮಾರಿಹಾಳ, ಮಾಜಿ ಶಾಸಕ ಸುರೇಶ ಮಾರಿಹಾಳ ಸೇರಿದಂತೆ ಹಲವು ಮುಖಂಡರು ಇಂದು ಪೂರ್ವಭಾವಿ ಸಭೆಯ ನಡೆಸಿ ಸಿದ್ಧತೆ ಆರಂಭಸಿದ್ದಾರೆ.

    ಜಾತ್ರಾ ಮಹೋತ್ಸವ ಏಪ್ರಿಲ್ 27 ರಿಂದ 11 ದಿನಗಳವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಐತಿಹಾಸಿಕ ಕಿತ್ತೂರು ಪಟ್ಟಣದಲ್ಲಿನ ಗ್ರಾಮದೇವಿ ಜಾತ್ರೆಗೆ ಎಲ್ಲ ಸಹಕಾರ ನೀಡುವುದರ ಮೂಲಕ ಯಶಸ್ಸಿಗೆ ಶಕ್ತಿ ಮೀರಿ ಪ್ರಯತ್ನಿಸುವುದಾಗಿ. ತೇರು ಸರಾಗವಾಗಿ ಸಾಗಲು ಪಟ್ಟಣದಲ್ಲಿನ ರಸ್ತೆಗಳನ್ನು ಸಿದ್ಧಗೊಳಿಸಲಾಗುವುದು. ಅಧಿಕಾರಗಳ ಜೊತೆ ಸಭೆ ನಡೆಸಿ ಜಾತ್ರೆ ಯಶಸ್ಸಿಗೆ ಬೇಕಾಗುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಮಹಾಂತೇಶ ದೊಡಗೌಡರ ಹೇಳಿದ್ದಾರೆ.

    ಕಳೆದ ಮೂರು ಶತಮಾನದಿಂದಲೂ ಕಿತ್ತೂರಲ್ಲಿ ಗ್ರಾಮದೇವಿ ಜಾತ್ರೆ ನಡೆದ ಇತಿಹಾಸವಿಲ್ಲ. ಈಗ ಜಾತ್ರೆ ನಡೆಯುತ್ತಿದ್ದು ಪಟ್ಟಣದ ಹಾಗೂ ಸುತ್ತಲಿನ ಗ್ರಾಮಗಳ ಎಲ್ಲ ಜನರ ಸಹಕಾರ ಅವಶ್ಯವಿದೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿಜೃಂಭಣೆಯಿಂದ ಜಾತ್ರೆಯನ್ನು ಮಾಡೋಣ. ಪಟ್ಟಣದ ರಸ್ತೆ ಅಭಿವೃದ್ಧಿ, ನೀರು, ವಿದ್ಯುತ್ ಸೇರಿದಂತೆ ಅವಶ್ಯವಿರುವ ಸೌಲಭ್ಯಗಳನ್ನು ನೀಡುತ್ತೇವೆ ಎಂದು ಶಾಸಕರು ತಿಳಿಸಿದರು.

    ಜಾತ್ರಾ ಮಹೋತ್ಸವದ ಅಧ್ಯಕ್ಷ ಈರಣ್ಣಾ ಮಾರಿಹಾಳ ಮಾತನಾಡಿ, ಗ್ರಾಮದೇವಿ ಜಾತ್ರೆಯು ನೂರಾರು ವರ್ಷಗಳಿಂದ ನಡೆದ ಇತಿಹಾಸವಿಲ್ಲ. ಈಗಿನ ತಲೆಮಾರಿನಿಂದ ಈ ಜಾತ್ರೆಯು ನಡೆಯುವಂತಾಗಿದೆ. ಏಪ್ರಿಲ್ 27 ರಿಂದ ಪ್ರಾರಂಭವಾಗಿ 11 ದಿನಗಳವರೆಗೆ ವಿಜೃಂಭಣೆಯಿಂದ ಜಾತ್ರೆ ನಡೆಯಲಿದೆ. ಜಾತ್ರೆಯ ಹೆಚ್ಚಿನ ಜವಾಬ್ದಾರಿಯು ಶಾಸಕ ಮಹಾಂತೇಶ ದೊಡಗೌಡರ ಹಾಗೂ ಮಾಜಿ ಶಾಸಕ ಸುರೇಶ ಮಾರಿಹಾಳ ಇವರ ಮೇಲಿದೆ. ಜಾತ್ರೆ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸುವುದಾಗಿ ಹೇಳಿದರು.

    ಮಾಜಿ ಶಾಸಕ ಸುರೇಶ ಮಾರಿಹಾಳ, ಜಾತ್ರಾ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಭಜನಾ ಸಮಿತಿ ಸದಸ್ಯರು, ಕಿತ್ತೂರಿನ ಹಾಗೂ ಸುತ್ತಲಿನ ಗ್ರಾಮಗಳ ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು. ಜಾತ್ರೆಯ ಯಶಸ್ಸಿಗೆ ಬೇಕಾಗುವ ಹಲವು ಬೇಡಿಕೆಗಳನ್ನು ಮನವಿ ಮೂಲಕ ಅಧಿಕಾರಿಗಳಿಗೆ ಸಲ್ಲಿಸಿದರು.