Tag: KJ George

  • ಶಾಸಕ ಗಣೇಶ್ ಹಲ್ಲೆ ವಿಚಾರ ನನ್ನ ಇಲಾಖೆ ವ್ಯಾಪ್ತಿಗೆ ಬರಲ್ಲ- ಸಚಿವ ಕೆಜೆ ಜಾರ್ಜ್

    ಶಾಸಕ ಗಣೇಶ್ ಹಲ್ಲೆ ವಿಚಾರ ನನ್ನ ಇಲಾಖೆ ವ್ಯಾಪ್ತಿಗೆ ಬರಲ್ಲ- ಸಚಿವ ಕೆಜೆ ಜಾರ್ಜ್

    ಚಿಕ್ಕಮಗಳೂರು: ರೆಸಾರ್ಟ್ ರಾಜಕೀಯ ಮುಗಿಸಿ ಬಿಜೆಪಿಯವರು ಬರ ಅಧ್ಯಯನಕ್ಕೆ ಮುಂದಾದ ಬೆನ್ನಲ್ಲೇ ಕಾಂಗ್ರೆಸ್ ನಾಯಕ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಕೂಡ ಬರ ಅಧ್ಯಯನ ಆರಂಭಿಸಿದ್ದಾರೆ.

    ಸಚಿವರು ಇಂದು ಕಡೂರು ತಾಲೂಕಿನ ಕೆ.ಬಿದರೆ ಗ್ರಾಮದಲ್ಲಿ ಬರ ಅಧ್ಯಯನ ನಡೆಸಿದರು. ಈ ವೇಳೆ ಈಗಲ್‍ಗನ್ ರೆಸಾರ್ಟಿನಲ್ಲಿ ಕಾಂಗ್ರೆಸ್ ಶಾಸಕರ ಹಲ್ಲೆ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು. ಇದನ್ನು ಓದಿ: ಕಂಪ್ಲಿ ಗಣೇಶ್ ಕಣ್ಣಾ ಮುಚ್ಚಾಲೆ ಆಟ – ಮುಂಬೈನಲ್ಲಿ ಪೊಲೀಸರಿಗೆ ಚಳ್ಳೆಹಣ್ಣು!

    ಗಣೇಶ್ ಹಲ್ಲೆ ಮಾಡಿರುವ ವಿಚಾರ ನನ್ನ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ. ನಾನು ಕೈಗಾರಿಕಾ ಮಂತ್ರಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತವಾರಿ ಸಚಿವ ಅಷ್ಟೇ. ಇದಕ್ಕೆ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಹಾಗೂ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಉತ್ತರ ಕೊಡುತ್ತಾರೆ ಎಂದು ಹಾರಿಕೆ ಉತ್ತರ ನೀಡಿದರು.

    ನೀವು ಪ್ರಕರಣದ ವಿಚಾರಣೆಯ ಕಮಿಟಿಯಲ್ಲಿ ಇರುವುದಿಂದ ಕೇಳಿದ್ವಿ ಅಂತಾ ಮಾಧ್ಯಮದವರು ಹೇಳುತ್ತಿದ್ದಂತೆ, ನಾನು ಕಮಿಟಿಯ ಸದಸ್ಯನಾಗಿ ನಿಮಗೆ ಎಲ್ಲವನ್ನೂ ಹೇಳುವುದಕ್ಕೆ ಆಗುತ್ತಾ? ಇಲ್ಲಿ ನಿಂತು ಎಲ್ಲವನ್ನೂ ಹೇಳಲಿಕ್ಕೆ ಆಗುವುದಿಲ್ಲ. ವಿಚಾರಣೆ ನಡೆಸಿ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಾರಿಕೊಂಡರು.

    ಈ ವೇಳೆ ಅಲ್ಲಿದ್ದ ಕೆಲ ಸ್ಥಳೀಯರು, ನೀವು ಬಂದು, ನೋಡಿ ವಾಪಾಸ್ ಹೋಗಿಬಿಡುತ್ತೀರಿ. ಆದರೆ ನಿಮ್ಮಿಂದ ನಮಗೆ ಯಾವುದೇ ಪ್ರಯೋಜನವಾಗಿಲ್ಲ. ಇಲ್ಲಿ ಹನಿ ನೀರಿಗೂ ಹಾಹಾಕಾರವಿದೆ. ನಿಮ್ಮ ಅಧ್ಯಯನದ ಪ್ರವಾಸಕ್ಕಿಂತ ನಮಗೆ ಶಾಶ್ವತ ನೀರಾವರಿ ಯೋಜನೆ ಬೇಕು ಎಂದು ಆಗ್ರಹಿಸಿದರು. ಮಧ್ಯಾಹ್ನ 1 ಗಂಟೆಗೆ ಬಂದು ಬರ ಅಧ್ಯಯನ ನಡೆಸಿದ ಸಚಿವರು ಎರಡು ಗಂಟೆಗೆ ವಾಪಾಸ್ ನಡೆದರು. ಸಚಿವರ ಅಲ್ಲಿಂದ ಹೋಗುತ್ತಿದ್ದಂತೆ ಕೆಲವರು, ಇವರು ಕಾಟಾಚಾರಕ್ಕೆ ಭೇಟಿ ನೀಡಿದ್ದಾರೆ ಅಷ್ಟೇ ಎಂದು ಆಕ್ರೋಶ ಹೊರ ಹಾಕಿದರು.

    https://www.youtube.com/watch?v=F1q42m7oBuA

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಡಿಕೆಶಿ ಮನೇಲಿ ತಿಂಡಿ ತಿಂದ್ದಿದ್ದು ಬೆಳ್ಳಿ ತಟ್ಟೆನೋ, ಯಾವ ತಟ್ಟೆನೋ ಅಂತ ಗೊತ್ತಿಲ್ಲ: ಕೆ.ಜೆ.ಜಾರ್ಜ್

    ಡಿಕೆಶಿ ಮನೇಲಿ ತಿಂಡಿ ತಿಂದ್ದಿದ್ದು ಬೆಳ್ಳಿ ತಟ್ಟೆನೋ, ಯಾವ ತಟ್ಟೆನೋ ಅಂತ ಗೊತ್ತಿಲ್ಲ: ಕೆ.ಜೆ.ಜಾರ್ಜ್

    ಕೋಲಾರ: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮನೆಯಲ್ಲಿ ತಿಂಡಿ ಮಾಡಿದ್ದು ಬೆಳ್ಳಿ ತಟ್ಟೆಯೋ, ಯಾವ ತಟ್ಟೆಯೋ ಅಂತಾ ಗೊತ್ತಿಲ್ಲ ಎಂದು ಭಾರೀ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

    ವೇಮಗಲ್ ಹಾಗೂ ನರಸಾಪುರ ಕೈಗಾರಿಕಾ ಪ್ರದೇಶಗಳಲ್ಲಿ ವಿವಿಧ ಕೈಗಾರಿಕೆಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ಸಚಿವ ಡಿ.ಕೆ.ಶಿವಕುಮಾರ್ ಮನೆಯಲ್ಲಿ ತಿಂಡಿ ಮಾಡಿದ್ದು ಬೆಳ್ಳಿ ತಟ್ಟೆನೋ, ಯಾವ ತಟ್ಟೆ ಅಂತಾ ಗೊತ್ತಿಲ್ಲ. ಸಿದ್ದರಾಮಯ್ಯನವರು ಮಾಜಿ ಮುಖ್ಯಮಂತ್ರಿಗಳು ಹಾಗೂ ನಮ್ಮ ನಾಯಕರು. ಅವರಿಗೆ ಒಂದು ಸ್ಥಾನ ಇದೆ. ಹೀಗಾಗಿ ಬ್ರೇಕ್ ಫಾಸ್ಟ್‍ಗೆ ಹೋದ ಕಡೆಯೆಲ್ಲೆಲ್ಲಾ ಅವರನ್ನ ಕರೆಯಲು ಸಾಧ್ಯವಿಲ್ಲ. ನಿನ್ನೆ ಸಭೆ ನಡೆದಿಲ್ಲ. ಸಚಿವರುಗಳ ಮುಖಾಮುಖಿ ಚರ್ಚೆ ಅಷ್ಟೇ ಎನ್ನುವ ಮೂಲಕ ಸಿದ್ದರಾಮಯ್ಯನವರ ಗೈರಿಗೆ ಸಮಾಜಾಯಿಸಿ ನೀಡಿದರು.

    ಪಿ.ಆರ್.ಸ್ವಾಮಿ ಮನೆ ಮೇಲೆ ಎಸಿಬಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಅದು ಎಸಿಬಿ ಕೆಲಸ ಯಾರು ತಪ್ಪು ಮಾಡುತ್ತಾರೋ ಅವರು ಶಿಕ್ಷೆ ಅನುಭವಿಸುತ್ತಾರೆ. ಎಸಿಬಿ ಅಧಿಕಾರಿಗಳು ಸ್ವತಂತ್ರವಾಗಿ ಕ್ರಮ ಕೈಗೊಳ್ಳಲಿ ಎಂದರು.  ಇದನ್ನೂ ಓದಿ: ಡಿಕೆಶಿ ನಿವಾಸದಲ್ಲಿ ಬೆಳ್ಳಿ ತಟ್ಟೆ, ಕಪ್ ಗಳಲ್ಲಿ ಉಪಹಾರ ಸೇವಿಸಿದ ಕೈ ನಾಯಕರು

    ಸಿಎಂ ಕುಮಾರಸ್ವಾಮಿ ದೆಹಲಿ ಭೇಟಿಯಲ್ಲಿ ವಿಶೇಷ ಏನು ಇಲ್ಲ. ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ. ಎಚ್‍ಡಿಕೆ ಮುಖ್ಯಮಂತ್ರಿಯಾಗಿಯೇ ಇರುತ್ತಾರೆ. ನಾನು ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಲ್ಲ ಎಂದು ತಿಳಿಸಿದರು.

    ಇದೇ ವೇಳೆ ಬಿಬಿಎಂಪಿ ಉಪಮೇಯರ್ ರಮೀಳಾ ನಿಧನಕ್ಕೆ ಸಂತಾಪ ಸೂಚಿಸಿದ ಜಾರ್ಜ್, ರಮೀಳಾ ಅವರ ಕುಟುಂಬಕ್ಕೆ ನೋವನ್ನು ತಡೆದುಕೊಳ್ಳುವ ಶಕ್ತಿ ಕೊಡಲಿ, ಅವರು ಒಳ್ಳೆಯ ಲೀಡರ್ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 1 ನಿಮಿಷದಲ್ಲಿ 1,400 ಎಕರೆ ಕೈಗಾರಿಕಾ ಪ್ರದೇಶ ವೀಕ್ಷಿಸಿ ಕಾಲ್ಕಿತ್ತ ಸಚಿವ ಜಾರ್ಜ್!

    1 ನಿಮಿಷದಲ್ಲಿ 1,400 ಎಕರೆ ಕೈಗಾರಿಕಾ ಪ್ರದೇಶ ವೀಕ್ಷಿಸಿ ಕಾಲ್ಕಿತ್ತ ಸಚಿವ ಜಾರ್ಜ್!

    ಚಾಮರಾಜನಗರ: ಭಾರೀ ಮತ್ತು ಮಧ್ಯಮ ಕೈಗಾರಿಕೆ, ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಕೆ.ಜೆ.ಜಾರ್ಜ್ ಕೇವಲ ಒಂದು ನಿಮಿಷದಲ್ಲೇ 1,400 ಎಕರೆ ಕೈಗಾರಿಕಾ ಪ್ರದೇಶವನ್ನು ಪರಿಶೀಲನೆ ಮಾಡಿ ಕಾಲ್ಕಿತ್ತಿದ್ದಾರೆ.

    ಗಡಿ ಜಿಲ್ಲೆ ಚಾಮರಾಜನಗರದ ಕೆಲ್ಲಂಬಳ್ಳಿ ಹಾಗೂ ಬದನಗುಪ್ಪೆ ಕೈಗಾರಿಕಾ ಪ್ರದೇಶವನ್ನು ವೀಕ್ಷಿಸಲು ಜಾರ್ಜ್ ಬರುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದು ಅಧಿಕಾರಿಗಳು ಸಕಲ ಸಿದ್ಧತೆ ನಡೆಸಿದ್ದರು. ಅಧಿಕಾರಿಗಳು ಒಂದು ವಾರದಿಂದ ಇಲ್ಲಿನ ಸಮಸ್ಯೆಗಳನ್ನು ಹಾಗೂ ಪರಿಹಾರವನ್ನು ಪಟ್ಟಿಮಾಡಿಕೊಂಡು ಸ್ಥಳ ವೀಕ್ಷಣೆಗೆ ಸಜ್ಜಾಗಿದ್ದರು. ಇದನ್ನೂ ಓದಿ: ಗಡಿ ಜಿಲ್ಲೆ ಅಭಿವೃದ್ಧಿ ಕನಸಿಗೆ ತೊಡಕಾದ ಮೂಲಭೂತ ಸೌಲಭ್ಯ- ಸರ್ಕಾರದ 800ಕೋಟಿ ರೂ. ಯೋಜನೆ ವ್ಯರ್ಥ

    ನಿಗದಿಯಂತೆ ಆಗಮಿಸಿದ ಜಾರ್ಜ್ 1,400 ಎಕರೆ ಕೈಗಾರಿಕಾ ಪ್ರದೇಶವನ್ನು ಕೇವಲ ಒಂದೇ ನಿಮಿಷದಲ್ಲಿ ವೀಕ್ಷಣೆ ಮಾಡಿದ್ದಾರೆ. ಕಾರಿನಲ್ಲಿ ಕೈಗಾರಿಕಾ ಪ್ರದೇಶಕ್ಕೆ ಬಂದಿಳಿದ ಜಾರ್ಜ್ ಸಚಿವ ಕೈ ಕುಲುಕಿ ಹಾರ ಹಾಕಿಸಿಕೊಂಡು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

    ಈಗ ಜಾರ್ಜ್ ಬಂದ ಪುಟ್ಟ, ಹೋದ ಪುಟ್ಟ ಎಂಬಂತೆ ಕಾಟಚಾರಕ್ಕೆ ಕೈಗಾರಿಕಾ ಪ್ರದೇಶದ ಪರಿಶೀಲನೆ ನಡೆಸಿದ್ದಾರೆ ಅಂತ ಸ್ಥಳೀಯರು ಆಕ್ರೋಶ ಹೊರ ಹಾಕುತ್ತಿದ್ದಾರೆ.

  • ಜನರ ಕಷ್ಟ ಕೇಳಲು ಸಚಿವ ಕೆ.ಜೆ.ಜಾರ್ಜ್ ಗೆ ಟೈಮ್ ಇಲ್ವಾ?

    ಜನರ ಕಷ್ಟ ಕೇಳಲು ಸಚಿವ ಕೆ.ಜೆ.ಜಾರ್ಜ್ ಗೆ ಟೈಮ್ ಇಲ್ವಾ?

    ಬೆಂಗಳೂರು: ಚುನಾವಣೆಯ ವೇಳೆ ಮನೆ ಬಾಗಿಲಿಗೆ ಬರುವ ಜನಪ್ರತಿನಿಧಿಗಳು ಗೆದ್ದ ನಂತರ ಜನರನ್ನೇ ಮರೆತುಬಿಡ್ತಾರೆ ಎಂಬ ಮಾತನ್ನು ಕೇಳುತ್ತಾ ಇರುತ್ತವೆ. ಇದಕ್ಕೆ ಪೂರಕವಾಗಿ ಸಚಿವ ಕೆ.ಜೆ.ಜಾಜ್ ಅವರ ಬಳಿ ಬಾಣಂತಿ ಮನೆಯ ಬಾಗಿಲಿಗೆ ಹೋಗಿ ಅಂಗಲಾಚಿದರೂ, ಮಾನವಿಯತೆಗಾದ್ರೂ ಮಹಿಳೆಯನ್ನು ಮಾತನಾಡಿಸುವ ಪ್ರಯತ್ನ ಮಾಡಿಲ್ಲ.

    ಬಾಣಸವಾಡಿ ಬಳಿಯ ಮಾರುತಿ ಸೇವಾನಗರದಲ್ಲಿ ಕಟ್ಟಡವೊಂದನ್ನು ನೆಲಸಮ ಮಾಡಲಾಗಿದೆ. ಪರಿಣಾಮ ಐದಾರು ಕುಟುಂಬದ ಸುಮಾರು 20ಕ್ಕೂ ಹೆಚ್ಚು ಮಂದಿ ಈಗ ಬೀದಿಗೆ ಬಿದ್ದಿದ್ದಾರೆ. ಈ ಜಾಗ ನಮ್ಮ ತಾತನಿಗೆ ಸೇರಿದ್ದು ಎಂದು ಉಳ್ಳವರೊಬ್ಬರು ಪೊಲೀಸರು ಹಾಗೂ ಸುಮಾರು 20ಕ್ಕೂ ಯುವಕರನ್ನು ಕರೆತಂದು ಈ ಮನೆಗಳನ್ನ ಕೆಡವಿದ್ದಾರೆ.

    ಕಟ್ಟಡದ ನಿವಾಸಿಗಳು ಇಲ್ಲಿ ಅಪಾರ್ಟ್ ಮೆಂಟ್ ಕಟ್ಟಲು ಪ್ರಯತ್ನ ಮಾಡಲಾಗುತ್ತಿದೆ. ವಾಸವಿದ್ದ ಕಟ್ಟಡವನ್ನು ಬೀಳಿಸಿ ನಮ್ಮನ್ನು ಬೀದಿಗೆ ತಂದಿದ್ದಾರೆ. ಇತ್ತ ಸಚಿವರ ಬಳಿ ಹೋದರೂ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ. ಇಂತಹ ಜನಪ್ರತಿನಿಧಿಗಳು ನಮಗೆ ಬೇಕಿತ್ತ ಅಂತ ನೊಂದವರು ತಮಗೆ ತಾವೇ ಶಪಿಸಿಕೊಳ್ಳುತ್ತಿದ್ದಾರೆ. ಆದರೆ ಸ್ಥಳೀಯ ಜನರಿಗೆ ತಮ್ಮ ಕಟ್ಟಡವನ್ನು ಯಾರು ಬೀಳಿಸಿದ್ದಾರೆ ಎಂಬುದೇ ಗೊತ್ತಿಲ್ಲ.

  • ಸರ್ಕಾರ ನಡೆಸುವುದಂದ್ರೆ ಹೂವಿನ ಹಾಸಿಗೆಯಲ್ಲ, ಅದೊಂದು ಮುಳ್ಳಿನ ಹಾಸಿಗೆ- ಸಿಎಂ ಕಣ್ಣೀರಿಗೆ ಜಾರ್ಜ್ ಸಮರ್ಥನೆ

    ಸರ್ಕಾರ ನಡೆಸುವುದಂದ್ರೆ ಹೂವಿನ ಹಾಸಿಗೆಯಲ್ಲ, ಅದೊಂದು ಮುಳ್ಳಿನ ಹಾಸಿಗೆ- ಸಿಎಂ ಕಣ್ಣೀರಿಗೆ ಜಾರ್ಜ್ ಸಮರ್ಥನೆ

    – ಅರುಣ್ ಜೇಟ್ಲಿ ಟ್ವೀಟ್ ಗೆ ಜಾರ್ಜ್ ಟಾಂಗ್

    ಬೆಳಗಾವಿ: ಕಾಂಗ್ರೆಸ್ಸಿನವರಿಂದ ಯಾವುದೇ ಒತ್ತಡವಿಲ್ಲ ಎಂದು ಕುಮಾರಸ್ವಾಮಿ ಅವರೇ ಸ್ಪಷ್ಟಪಡಿಸಿದ್ದಾರೆ. ಸಿಎಂ ಸಮಸ್ಯೆಗಳಿಗೆ ಸ್ಪಂದಿಸುವ ವಿಚಾರದಲ್ಲಿ ಕಣ್ಣೀರು ಹಾಕಿದ್ದಾರೆ. ಕುಮಾರಸ್ವಾಮಿ ವೀಕ್ ಅಲ್ಲಾ ಅವರು ಸ್ಟ್ರಾಂಗ್ ಇದ್ದಾರೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ, ಐಟಿ ಬಿಟಿ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿಎಂ ಕಣ್ಣೀರು ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರ ನಡೆಸುವುದಂದ್ರೆ ಹೂವಿನ ಹಾಸಿಗೆಯಲ್ಲ ಅದೊಂದು ಮುಳ್ಳಿನ ಹಾಸಿಗೆ. ಯಾರೇ ಮುಖ್ಯಮಂತ್ರಿಯಾದ್ರೂ ಸರ್ಕಾರ ನಡೆಸುವುದು ಸುಲಭವಲ್ಲ. ಸಿಎಂ ಹುದ್ದೆ ಎನ್ನುವುದು ಎಂಜಾಯ್ ಮಾಡುವ ಹುದ್ದೆಯಲ್ಲ. ಎಲ್ಲಾ ಸಿಎಂಗಳಿಗೂ ಸರ್ಕಾರ ನಡೆಸುವಾಗ ಕಷ್ಟ ಇದ್ದೇ ಇರುತ್ತೆ. ಕೆಲವೊಬ್ಬರು ನೋವು ಒಳಗಡೆ ಇಟ್ಟುಕೊಳ್ಳುತ್ತಾರೆ ಇವರು ಕಣ್ಣೀರಿನ ಮೂಲಕ ಹೊರ ಹಾಕಿದ್ದಾರೆ ಅಷ್ಟೇ ಅಂತ ಹೇಳಿದ್ರು. ಇದನ್ನೂ ಓದಿ: ದೇವೇಗೌಡರಿಗೆ ಆದ ಸ್ಥಿತಿಯೇ ಕುಮಾರಸ್ವಾಮಿಗೂ ಆಗಲಿದೆ : ಸಮ್ಮಿಶ್ರ ಸರ್ಕಾರದ ವಿರುದ್ಧ ಅರುಣ್ ಜೇಟ್ಲಿ ವ್ಯಂಗ್ಯ

    ಮಾಧ್ಯಮ ಮಿತ್ರರು ಸಿಎಂ ಅವರ ಒಂದೊಂದು ವಿಷಯ ತೆಗೆದು ಹೈಲೆಟ್ ಮಾಡುವ ಬದಲು ಮನಸ್ಸು ಮಾಡಿದ್ರೆ ಒಳ್ಳೆ ರೀತಿಯಿಂದ ತೋರಿಸಬಹುದು. ಸಿಎಂ ಜನಪರ ಇದ್ದಾರೆ. ಜನರ ನೋವು ಒಳಗಡೆ ತೆಗೆದುಕೊಂಡಿದ್ದಾರೆ ಅಂತಾ ಹೇಳಬಹುದು. ಆದ್ರೇ ನೀವು ಸಿಎಂ ಅಳ್ತಾರೆ ಅಳ್ತಾರೆ ಅಂತಾ ಹೇಳಿದ್ರೇ ಹೇಗ್ ಆಗುತ್ತೆ. ಅಳು ಅವರ ಹೃದಯದಿಂದ ಬಂದಿದ್ದು, ಅವರೇನು ಅಶಕ್ತರೇನಲ್ಲ ಶಕ್ತರೆ ಅಂತ ಅವರು ತಿಳಿಸಿದ್ರು.

    ಇದೇ ವೇಳೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಟ್ವೀಟ್ ಗೆ ಟಾಂಗ್ ಕೊಟ್ಟ ಜಾರ್ಜ್, ಜೇಟ್ಲಿಯವರು ಬಿಜೆಪಿಯವರು. ಕುಮಾರಸ್ವಾಮಿ ಸ್ಟ್ರಾಂಗ್ ಇದ್ದಾರೆ ಸಮ್ಮಿಶ್ರ ಸರ್ಕಾರ ಸ್ಟ್ರಾಂಗ್ ಆಗಿದೆ ಅಂತಾ ಬಿಜೆಪಿಯವರು ಹೇಳ್ತಾರಾ ಹೇಳಲ್ಲ. ಅವರು ರಾಜಕೀಯ ಉದ್ದೇಶ ಇಟ್ಟುಕೊಂಡೇ ಮಾತನಾಡುತ್ತಾರೆ. ಅವರ ಅಭಿಪ್ರಾಯ ಹೇಳಿದ್ದಾರೆ ಅದಕ್ಕೆಲ್ಲಾ ನಾವು ಉತ್ತರ ಕೊಡಲು ಆಗಲ್ಲ ಅಂದ್ರು. ಇದನ್ನೂ ಓದಿ: ನೀವು ಅತ್ತರೆ ನಮಗೂ ಅಳು ಬರುತ್ತೆ – ಹೆಚ್‍ಡಿಕೆಗೆ ಧೈರ್ಯ ತುಂಬಿದ ಹಾಸನ ಬಾಲಕಿ

    ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಚಳುವಳಿ ಸಮರ್ಥಿಸಿಕೊಂಡ ಜಾರ್ಜ್, ಸಿದ್ದರಾಮಯ್ಯ ಸಮನ್ವಯ ಸಮಿತಿ ಅಧ್ಯಕ್ಷರಿದ್ದಾರೆ. ಪತ್ರದ ಮೂಲಕ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಸಮಸ್ಯೆಗಳನ್ನ ಪತ್ರದ ಮೂಲಕ ಹೇಳುತ್ತಿದ್ದಾರೆ ಎಂದರು.

  • ಡಿಕೆ ರವಿ ಆತ್ಮಹತ್ಯೆ ಕೇಸ್‍ನಲ್ಲಿ ಸಚಿವ ಜಾರ್ಜ್ ಪಾತ್ರವಿಲ್ಲ: ಸಿಎಂ ಎಚ್‍ಡಿಕೆ

    ಡಿಕೆ ರವಿ ಆತ್ಮಹತ್ಯೆ ಕೇಸ್‍ನಲ್ಲಿ ಸಚಿವ ಜಾರ್ಜ್ ಪಾತ್ರವಿಲ್ಲ: ಸಿಎಂ ಎಚ್‍ಡಿಕೆ

    ಬೆಂಗಳೂರು: ಐಎಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣದಲ್ಲಿ ಕೈಗಾರಿಕಾ ಸಚಿವ ಕೆ.ಜೆ ಜಾರ್ಜ್ ಪಾತ್ರವಿಲ್ಲ. ಈ ಬಗ್ಗೆ ತನಿಖೆ ನಡೆಸಿದ ಸಿಬಿಐ ಕ್ಲೀನ್‍ಚಿಟ್ ಕೊಟ್ಟಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

    ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸದನದಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಸಚಿವ ಕೆ.ಜೆ ಜಾರ್ಜ್ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಾನು ಜಾರ್ಜ್ ಅವರನ್ನು ವಹಿಸಿಕೊಳ್ಳುತ್ತಿಲ್ಲ. ವಿರೋಧ ಪಕ್ಷದಲ್ಲಿದ್ದಾಗ ನಾನು ಜಾರ್ಜ್ ಅವರ ರಾಜೀನಾಮೆ ಕೇಳಿದ್ದು ನಿಜ. ಆಗ ನಮ್ಮ ಒತ್ತಡದ ಮೇರೆಗೆ ಅವರು ರಾಜೀನಾಮೆ ನೀಡಿದ್ದರು.

    ಕಾನೂನು ಏನಿದೆ ಆ ಬಗ್ಗೆ ತನಿಖೆ ನಡೆಸಿ ಜಾರ್ಜ್ ಅವರಿಗೆ ಸಿಬಿಐ ಕ್ಲೀನ್ ಚಿಟ್ ಕೊಟ್ಟಿದೆ. ಡಿವೈಎಸ್‍ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲೂ ಜಾರ್ಜ್ ನೇರ ಪಾತ್ರವಿಲ್ಲ ಅಂತ ತಿಳಿದು ಬಂದಿದೆ. ಇದೇ ವೇಳೆ ನಮ್ಮ ಸಮ್ಮಿಶ್ರ ಸರ್ಕಾರ 5 ವರ್ಷ ಪೂರೈಸುತ್ತದೆ. ಈ ಬಗ್ಗೆ ಯಾರಿಗೂ ಭಯ, ಆತಂಕ ಬೇಡ ಎಂದು ಸಿಎಂ ಹೇಳಿದರು.

  • 1 ಕೋಟಿಯ ಕಾರು ಜೊತೆಗೆ 1 ವರ್ಷ ಡೀಸೆಲ್ ಭಾಗ್ಯ – ಮಾಜಿ ಸಿಎಂಗೆ ಜಾರ್ಜ್ ಭರ್ಜರಿ ಗಿಫ್ಟ್!

    1 ಕೋಟಿಯ ಕಾರು ಜೊತೆಗೆ 1 ವರ್ಷ ಡೀಸೆಲ್ ಭಾಗ್ಯ – ಮಾಜಿ ಸಿಎಂಗೆ ಜಾರ್ಜ್ ಭರ್ಜರಿ ಗಿಫ್ಟ್!

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯುತ್ತಿದ್ದಂತೆ ಇನ್ನೋವಾ ಕಾರಿನಲ್ಲಿ ಓಡಾಟ ಮಾಡುತ್ತಿದ್ದರು. ಇವರ ಸ್ಥಿತಿಯನ್ನು ನೋಡಿ ಕುಚುಕು ಗೆಳೆಯ ಮಾಜಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ದುಬಾರಿ ಕಾರನ್ನು ಗಿಫ್ಟ್ ನೀಡಿದ್ದಾರೆ.

    ಅಧಿಕಾರಿದಲ್ಲಿದ್ದಾಗ ಸರ್ಕಾರದ ಕಾರಿನಲ್ಲಿ ಸಿದ್ದರಾಮಯ್ಯ ಓಡಾಡುತ್ತಿದ್ದರು. ಆದರೆ ಅಧಿಕಾರದಿಂದ ಕೆಳಗಿಳಿಯುತ್ತಿದ್ದಂತೆ ಅವರು ಇನ್ನೋವಾ ಕಾರಿನಲ್ಲಿ ಓಡಾಟ ನಡೆಸುತ್ತಿದ್ದರು. ಸಿದ್ದರಾಮಯ್ಯ ಸ್ಥಿತಿ ನೋಡಿ ಗೆಳೆಯ ಜಾರ್ಜ್ ಮರುಕ ಪಟ್ಟು ಅವರಿಗಾಗಿ ಒಂದು ದುಬಾರಿ ಮೊತ್ತದ ಲ್ಯಾಂಡ್ ಕ್ರೂಸರ್ ಪ್ರಾಡೋ ಕಾರು ಖರೀದಿಸಿ ಕೊಟ್ಟಿದ್ದಾರೆ.

    ಲ್ಯಾಂಡ್ ಕ್ರೂಸರ್ ಪ್ರಾಡೋ ಕಾರಿಗೆ ಒಂದು ಕೋಟಿ ರೂ. ಬೆಲೆಯಿದೆ. ಕಾರು ಅಲ್ಲದೇ ಒಂದು ವರ್ಷಕ್ಕೆ ಸಾಕಾಗುವಷ್ಟು ಡೀಸೆಲ್ ಕೂಪನ್ ಕೂಡ ಜಾರ್ಜ್ ನೀಡಿದ್ದಾರೆ.

    ಸಿದ್ದರಾಮಯ್ಯನವರನ್ನು ಮನೆಗೆ ಕರೆದು ಉಪಚಾರ ಮಾಡಿದ ಜಾರ್ಜ್, ಇನ್ನು ಮುಂದೆ ನೀವು ಈ ಇನ್ನೋವಾ ಕಾರಲ್ಲಿ ಓಡಾಡಬೇಡಿ. ನಿಮಗಾಗಿ ಒಂದು ಹೊಸ ಕಾರು ಖರೀದಿಸಿದ್ದೇನೆ. ಇದನ್ನು ತೆಗೆದುಕೊಳ್ಳಿ. ಈ ಹೊಸ ಕಾರಲ್ಲಿ ನೀವು ಓಡಾಡಿ ಎಂದು ಹೇಳಿ ಪ್ರಾಡೋ ಕಾರಿನ ಕೀ ಕೊಟ್ಟಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಒಲ್ಲದ ಮನಸ್ಸಿಂದಲೇ ಕೋಟಿ ರೂ. ಮೌಲ್ಯದ ಹೊಸ ಕಾರನ್ನು ಪಡೆದಿದ್ದು, ಈಗ ಸಿದ್ದರಾಮಯ್ಯ ಕೆಜೆ ಜಾರ್ಜ್ ಕೊಟ್ಟ ಹೊಸ ಕಾರಿನಲ್ಲಿಯೇ ಓಡಾಟ ನಡೆಸಿದ್ದಾರೆ.

    ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಅವರ ಜೊತೆಯಲ್ಲೇ ಇದ್ದ ಗೆಳೆಯ ಮಾಜಿ ಲೋಕೋಪಯೋಗಿ ಸಚಿವ ಮಹದೇವಪ್ಪ, ಚುನಾವಣೆ ಸಂದರ್ಭದಲ್ಲಿ ಮಗನಿಗೆ ಟಿಕೆಟ್ ಕೊಡಿಸಿಲಿಲ್ಲ ಎಂದು ಅಸಮಾಧಾನಗೊಂಡು ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯುತ್ತಿದ್ದಂತೆ ದೂರವಾಗಿದ್ದರು.

    ಸಿದ್ದರಾಮಯ್ಯನವರಿಗೆ ಚಾಮುಂಡೇಶ್ವರಿ ಕ್ಷೇತ್ರದ ಟಿಕೆಟ್ ಸಿಕ್ಕಿದರೆ ಅವರ ಮಗ ಯತೀಂದ್ರಗೆ ವರುಣಾ ಕ್ಷೇತ್ರದ ಟಿಕೆಟ್ ಸಿಕ್ಕಿತ್ತು. ಮಹದೇವಪ್ಪ ಲಾಬಿ ಮಾಡಿದ್ದರೂ ಅವರ ಮಗನಿಗೆ ಟಿಕೆಟ್ ಸಿಕ್ಕಿರಲಿಲ್ಲ. ಹೀಗಾಗಿ ಆಪ್ತರ ಜೊತೆ ಸಿಎಂಗೆ ಒಂದು ನ್ಯಾಯ ಬೇರೆಯವರಿಗೆ ಇನ್ನೊಂದು ನ್ಯಾಯ ಎಂದು ಹೇಳಿ ತಮ್ಮ ಅಸಮಾಧಾನವನ್ನು ಮಹದೇವಪ್ಪ ಹೊರ ಹಾಕುತ್ತಿದ್ದರು ಎಂದು ಮೂಲಗಳು ತಿಳಿಸಿತ್ತು.

  • ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ – ಜಾರ್ಜ್‍ಗೆ ತನಿಖಾ ಆಯೋಗದಿಂದಲೂ ಕ್ಲೀನ್‍ ಚಿಟ್?

    ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ – ಜಾರ್ಜ್‍ಗೆ ತನಿಖಾ ಆಯೋಗದಿಂದಲೂ ಕ್ಲೀನ್‍ ಚಿಟ್?

    ಬೆಂಗಳೂರು: ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ಕೇಶವನಾರಾಯಣ ಆಯೋಗದಿಂದ ಗೃಹ ಸಚಿವ ರಾಮಲಿಂಗಾರೆಡ್ಡಿಗೆ ವರದಿ ಸಲ್ಲಿಕೆಯಾಗಿದ್ದು, ಕೆಜೆ ಜಾರ್ಜ್‍ಗೆ ಕ್ಲೀನ್ ಚಿಟ್ ಸಿಕ್ಕಿದ್ಯಾ ಎನ್ನುವ ಪ್ರಶ್ನೆ ಎದ್ದಿದೆ.

    ಪ್ರಮುಖ ಆರೋಪ ಎದುರಿಸುತ್ತಿದ್ದ ಮಾಜಿ ಗೃಹ ಸಚಿವ, ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಜೆ.ಜಾರ್ಜ್ ಅವರನ್ನು ಕರೆಯಿಸಿ ತನಿಖೆ ನಡೆಸಿಲ್ಲ. ಇದೊಂದು ಒತ್ತಡದಿಂದ ಮಾಡಿಕೊಂಡಿರುವ ಕೃತ್ಯ ಎಂದು ಆಯೋಗ ಅಭಿಪ್ರಾಯಪಟ್ಟಿದೆ ಎನ್ನುವ ಅಂಶ ವರದಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

    ವಿಕಾಸಸೌಧದ ಕಚೇರಿಯಲ್ಲಿ ವರದಿ ಸಲ್ಲಿಕೆ ನಂತರ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ನ್ಯಾ. ಕೇಶವನಾರಾಯಣ ಆಯೋಗದ ವರದಿ ನೀಡಿದೆ. ಆಯೋಗ ಒಂದೂವರೆ ವರ್ಷ ಸಮಯ ತೆಗೆದುಕೊಂಡಿದೆ. ಎಸಿಎಸ್ ಅವರಿಗೆ ವರದಿ ನೀಡಲಾಗುತ್ತದೆ. ಅಂತಿಮವಾಗಿ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

    ನ್ಯಾ.ಕೇಶವ ನಾರಾಯಣ ಮಾತನಾಡಿ, ವರದಿ ಸರ್ಕಾರಕ್ಕೆ ಒಪ್ಪಿಸಲಾಗಿದೆ. ತೀರ್ಮಾನ ತೆಗೆದುಕೊಳ್ಳಲು ಸರ್ಕಾರಕ್ಕೆ ಅವಕಾಶ ಇರುತ್ತದೆ. ಇದು ಒಂದು ಸತ್ಯಶೋಧನೆ ಸಮಿತಿ ರೀತಿಯಲ್ಲಿದೆ. ನಮ್ಮ ಮುಂದೆ ಯಾರು ಆರೋಪಿಗಳು ಇರುವುದಿಲ್ಲ. ಒಟ್ಟು 50 ಸಾಕ್ಷ್ಯಗಳನ್ನು ವಿಚಾರಣೆ ಮಾಡಲಾಗಿದೆ. 320 ಪುಟಗಳ ವರದಿ ನೀಡಲಾಗಿದೆ ಎಂದು ತಿಳಿಸಿದ್ರು.

  • ಸ್ಟೀಲ್ ಬ್ರಿಡ್ಜ್ ಬದಲು ಕೆಂಪೇಗೌಡ ಪ್ರಾಜೆಕ್ಟ್ – ಎಲ್&ಟಿ ಕಂಪನಿಗೆ ಜಾರ್ಜ್ ಋಣಸಂದಾಯ

    ಸ್ಟೀಲ್ ಬ್ರಿಡ್ಜ್ ಬದಲು ಕೆಂಪೇಗೌಡ ಪ್ರಾಜೆಕ್ಟ್ – ಎಲ್&ಟಿ ಕಂಪನಿಗೆ ಜಾರ್ಜ್ ಋಣಸಂದಾಯ

    ಬೆಂಗಳೂರು: ಕೊನೆಗೂ ಸಚಿವ ಕೆ.ಜೆ.ಜಾರ್ಜ್ ಒತ್ತಡಕ್ಕೆ ಮಣಿದು ಬಿಡಿಎ ಕೆಂಪೇಗೌಡ ಲೇಔಟ್‍ನ ಸಮಗ್ರ ಅಭಿವೃದ್ದಿಯ ಪ್ರಾಜೆಕ್ಟ್ ಟೆಂಡರನ್ನು ಎಲ್ ಅಂಡ್ ಟಿ ಕಂಪನಿಗೆ ನೀಡಿದೆ.

    ಈ ಹಿಂದೆ 2 ಸಾವಿರ ಕೋಟಿ ರೂ. ಮೊತ್ತದ ಸ್ಟೀಲ್ ಬ್ರಿಡ್ಜ್ ಟೆಂಟರ್ನ್ ಎಲ್&ಟಿ ಕಂಪನಿ ಪಡೆದಿತ್ತು. ಅದಕ್ಕಾಗಿ 65 ಕೋಟಿ ರೂಪಾಯಿ ಕಪ್ಪವನ್ನೂ ನೀಡಿದ್ದ ಬಗ್ಗೆ ಗೋವಿಂದರಾಜು ಮನೆಯಲ್ಲಿ ಸಿಕ್ಕ ಡೈರಿಯಲ್ಲಿ ಉಲ್ಲೇಖವಾಗಿತ್ತು. ನಂತರ ತೀವ್ರ ವಿರೋಧದ ಕಾರಣ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿತ್ತು.

    ಸ್ಟೀಲ್ ಬ್ರಿಡ್ಜ್ ಬದಲಾಗಿ ಕೆಂಪೇಗೌಡ ಲೇಔಟ್‍ನ ಸಮಗ್ರ ಅಭಿವೃದ್ದಿಗೆ 1 ಸಾವಿರದ 255 ಕೋಟಿಯ ಟೆಂಡರ್ ಎಲ್&ಟಿ ಕಂಪನಿಗೆ ನೀಡುತ್ತೆ ಅನ್ನೋ ಬಗ್ಗೆ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಇದೀಗ ಆ ವರದಿಯಂತೆಯೇ ಎಲ್&ಟಿ ಕಂಪನಿಗೆ 1 ಸಾವಿರದ 255 ಕೋಟಿ ರೂಪಾಯಿ ಮೊತ್ತದ ಯೋಜನೆ ಟೆಂಡರ್ ನೀಡಲಾಗಿದೆ.

    400 ಕೋಟಿಗೂ ಅಧಿಕ ಸಾಲಕ್ಕೆ ಬಡ್ಡಿ ಕಟ್ಟುತ್ತಿರೋ ಬಿಡಿಎ ಇಷ್ಟೊಂದು ಬೃಹತ್ ಯೋಜನೆಗೆ ಎಲ್ಲಿಂದ ಹಣ ತರುತ್ತೋ ಅನ್ನೋದು ಜನರ ಪ್ರಶ್ನೆ.

  • ಸಚಿವ ಕೆಜೆ ಜಾರ್ಜ್ ಆಪ್ತರ ಮನೆ, ಕಚೇರಿ ಮೇಲೆ ಐಟಿ ದಾಳಿ

    ಸಚಿವ ಕೆಜೆ ಜಾರ್ಜ್ ಆಪ್ತರ ಮನೆ, ಕಚೇರಿ ಮೇಲೆ ಐಟಿ ದಾಳಿ

    ಬೆಂಗಳೂರು: ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದವರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಸಚಿವರ ಆಪ್ತರಾದ ಗನ್ ಇಸ್ಮಾಯಿಲ್, ಯುಗೇಂಧರ್ ಮತ್ತು ವಂದಿತ್ ರೆಡ್ಡಿ ಕಚೇರಿ ಮತ್ತು ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಸ್ಮಾಯಿಲ್ ಎಂಬವರು ಗನ್ ಮಾರುವ ಅಂಗಡಿಯನ್ನು ಹೊಂದಿದ್ದು, ಸಚಿವ ಕೆಜೆ ಜಾರ್ಜ್ ಆರ್ಥಿಕ ವ್ಯವಹಾರ ನೋಡಿಕೊಳ್ಳುತ್ತಿದ್ದಾರೆ. ಅಲ್ಲದೇ ಬಿಬಿಎಂಪಿ ಹಾಗೂ ಬಿಡಿಎ ಕಾಮಗಾರಿಗಳ ಗುತ್ತಿಗೆಯನ್ನು ಪಡೆಯುವ ಕೆಲಸವನ್ನು ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಜಾರ್ಜ್ ಅವರ ಮಗ ರಾಣಾ ಅವರ ಜೊತೆ ಆಪ್ತವಾಗ ಕಾಣಿಸಿಕೊಳ್ಳುತ್ತಿದ್ದರು. ಇವರ ಮೇಲೆ ಗುರುವಾರ ಐಟಿ ದಾಳಿ ನಡೆಸಿದೆ.

    ವಂದಿತ್ ರೆಡ್ಡಿ ಮೂಲತಃ ಆಂಧ್ರ ಪ್ರದೇಶದ ಚಿತ್ತೂರು ಮೂಲದವರಾಗಿದ್ದು, ನಗರದಲ್ಲಿ ಗುತ್ತಿಗೆದಾರರಾಗಿ ಕೆಲಸ ಮಾಡಿಕೊಂಡಿದ್ದಾರೆ. ರಾಣಾ ಆಪ್ತವಲಯದಲ್ಲಿ ವಂದಿತ್ ಗುರುತಿಸಿಕೊಂಡಿದ್ದರು. ಅಲ್ಲದೇ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರಿಗೂ ಆಪ್ತ ಎನ್ನಲಾಗಿದೆ. ಬೆಂಳೂರು ಕೆರೆಗಳ ಪುನರುತ್ಥಾನ ಉಸ್ತುವಾರಿಯನ್ನು ಟೆಂಡರ್ ಇಲ್ಲದೆಯೇ ನೀಡಲಾಗಿತ್ತು ಎಂಬ ಆರೋಪಗಳು ಕೇಳಿ ಬಂದಿವೆ.

    ಐಟಿ ದಾಳಿಗೊಳಗಾದ ಯುಗೇಂಧರ್ ಸಹ ಗುತ್ತಿಗೆದಾರರಾಗಿದ್ದು, ಜಾರ್ಜ್ ಅವರ ವೈಯಕ್ತಿಕ ವ್ಯವಹಾರದ ಜವಾಬ್ದಾರಿಯನ್ನು ಹೊಂದಿದ್ದರು ಎನ್ನಲಾಗಿದೆ.

    ಡಿವೈಎಸ್‍ಪಿ ಗಣಪತಿ ಪ್ರಕರಣದಲ್ಲಿ ಸಹ ಕೆಜೆ ಜಾರ್ಜ್ ಅವರ ಹೆಸರು ಕೇಳಿ ಬಂದಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆಗಾಗಿ ಫೆಬ್ರವರಿ 10 ಅಥವಾ 12 ರೊಳಗೆ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಅಲ್ಲದೇ ಯಾವುದೇ ವೇಳೆ ಅಗತ್ಯ ಬಿದ್ದರೆ ಜಾರ್ಜ್‍ರನ್ನು ಸಿಬಿಐ ವಶಕ್ಕೆ ಪಡೆಯುವ ಸಂಭವವಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    ಭಾನುವಾರ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ನಂತರ ಸಿಬಿಐ ಬ್ರಹ್ಮಾಸ್ತ್ರ ಪ್ರಯೋಗ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ರಾಜ್ಯ ಸರ್ಕಾರ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಆರ್. ಅಶೋಕ್ ಮೇಲೆ ಎಸಿಬಿ ಹಲವು ಭೂಹಗರಣಗಳ ಕುರಿತು ಕೇಸು ದಾಖಲಿಸುತ್ತಿದ್ದಂತೆ ಜಾರ್ಜ್ ಆಪ್ತರ ಮನೆಗಳ ಮೇಲೆ ಐಟಿ ದಾಳಿ ಮಾಡಲಾಗಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

    https://www.youtube.com/watch?v=jcIkDVzctzY