Tag: KM Doddi

  • ರಿಯಲ್ ಪೊಲೀಸ್ ಕೈಗೆ ಸಿಕ್ಕಿ ಬಿದ್ದ ರೀಲ್ ಪೊಲೀಸ್

    ರಿಯಲ್ ಪೊಲೀಸ್ ಕೈಗೆ ಸಿಕ್ಕಿ ಬಿದ್ದ ರೀಲ್ ಪೊಲೀಸ್

    ಮಂಡ್ಯ: ಪಿಎಸ್‌ಐ (PSI) ಸಮವಸ್ತ್ರ ಧರಿಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್ (Fake Police) ಅನ್ನು ಅಸಲಿ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ (KM Doddi) ನಡೆದಿದೆ.

    ಬೆಂಗಳೂರಿನ ಗೊಟ್ಟಿಗೆರೆ ನಿವಾಸಿ ಸಂಜಯ್ ಬಂಧಿತ ಆರೋಪಿಯಾಗಿದ್ದಾನೆ. ಸಂಜಯ್ ಪಿಎಸ್‌ಐ ಸಮವಸ್ತ್ರ ಧರಿಸಿ ಕೆಎಂ ದೊಡ್ಡಿ ಸುತ್ತಮುತ್ತ ದ್ವಿಚಕ್ರ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದರು. ಬಳಿಕ ಸಂಚಾರಿ ನಿಯಮ ಉಲ್ಲಂಘನೆಯಾಗಿದೆ ಎಂದು ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿದ್ದ. ನಕಲಿ ಪೊಲೀಸ್ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ಸ್ಥಳೀಯರು ಕೆಎಂ ದೊಡ್ಡಿ ಠಾಣೆಯ ಇನ್ಸ್ಪೆಕ್ಟರ್ ಆನಂದ್‌ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಎಲ್‌ಟಿಟಿಇ ಮುಖ್ಯಸ್ಥ ಜೀವಂತವಾಗಿದ್ದಾನಾ? – ಇದು ತಮಾಷೆ ಎಂದ ಶ್ರೀಲಂಕಾ

    ಈ ಮಾಹಿತಿ ಬೆನ್ನಲ್ಲೇ ತಕ್ಷಣ ಎಚ್ಚೆತ್ತ ಕೆಎಂ ದೊಡ್ಡಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಬಳಿಕ ಸಂಜಯ್ ಪಿಎಸ್‌ಐ ಸಮವಸ್ತ್ರದಲ್ಲಿ ಇರುವಾಗಲೇ ಹಿಡಿದು ವಿಚಾರಣೆ ಮಾಡಿದಾಗ ತಾನೊಬ್ಬ ನಕಲಿ ಪೊಲೀಸ್ ಎಂದು ತಪ್ಪೊಪ್ಪಿಕೊಂಡಿದ್ದಾನೆ.

    ಇದೀಗ ಆರೋಪಿ ಸಂಜಯ್‌ಗೆ ವಾರ್ನ್ ಮಾಡಲಾಗಿದ್ದು, ಕೋರ್ಟ್ ಜಾಮೀನಿನ ಮೇಲೆ ಆತನನ್ನು ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಮಂಡ್ಯ ಉಸ್ತುವಾರಿ ಆಗಲು ಒಪ್ಪದ ಸಚಿವರು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮದ್ವೆಯಾಗುವುದಾಗಿ ನಂಬಿಸಿ ಮೋಸ- ಮನನೊಂದು ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ

    ಮದ್ವೆಯಾಗುವುದಾಗಿ ನಂಬಿಸಿ ಮೋಸ- ಮನನೊಂದು ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ

    ಮಂಡ್ಯ: ಮದುವೆಯಾಗುವುದಾಗಿ ನಂಬಿಸಿದ್ದ ವ್ಯಕ್ತಿ ಮೋಸ ಮಾಡಿದ್ದರಿಂದ ಮನನೊಂದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಬೋರಾಪುರ ಗ್ರಾಮದಲ್ಲಿ ನಡೆದಿದೆ.

    ತಾಯಿ ನೇತ್ರಾವತಿ (30), ಮಕ್ಕಳಾದ ಶೋಭಿತಾ (09) ನಂದೀಶ್ (07) ಮೃತ ದುರ್ದೈವಿಗಳಾಗಿದ್ದಾರೆ. ಮೃತ ನೇತ್ರಾವತಿ ಪತಿ ಸೋಮನನ್ನು ಕಳೆದುಕೊಂಡಿದ್ದು, ತನ್ನ ಮಕ್ಕಳ ಜೊತೆ ಗ್ರಾಮದಲ್ಲಿ ವಾಸ ಮಾಡುತ್ತಿದ್ದಳು. ಈ ವೇಳೆ ಅದೇ ಗ್ರಾಮದ ಆನಂದ್ ಎಂಬಾತ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಈ ನಡುವೆ ಆನಂದ್ ಬೇರೆ ಮದುವೆಯಾಗಲು ಸಿದ್ಧತೆ ಮಾಡಿಕೊಂಡಿದ್ದ. ಈ ಸಂಬಂಧ  ಗ್ರಾಮದಲ್ಲಿ ರಾಜಿ ಪಂಚಾಯಿತಿಯೂ ನಡೆದಿತ್ತು.

    ರಾಜಿ ಪಂಚಾಯಿತಿಯಲ್ಲೂ ನ್ಯಾಯ ಸಿಗದಿದ್ದರಿಂದ ಬೇಸತ್ತಿದ್ದ ನೇತ್ರಾವತಿ ತನ್ನ ಮಕ್ಕಳಿಬ್ಬರಿಗೆ ವಿಷ ನೀಡಿ ತಾನೂ ವಿಷ ಸೇವಿಸಿದ್ದಾಳೆ. ವಿಷ ಸೇವಿಸಿದ್ದವರನ್ನು ಗ್ರಾಮಸ್ಥರು ಮಂಡ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಾಯಿ ನೇತ್ರಾವತಿ, ಮಗಳು ಶೋಭಿತಾ ಸಾವನ್ನಪ್ಪಿದ್ದರು. ಇತ್ತ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗ ನಂದೀಶ್ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಘಟನೆ ಕುರಿತಂತೆ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.