Tag: Koagu Student Murder

  • SSLC ವಿದ್ಯಾರ್ಥಿನಿ ಹತ್ಯೆ; ಕೊಡವ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬಸ್ಥರು!

    SSLC ವಿದ್ಯಾರ್ಥಿನಿ ಹತ್ಯೆ; ಕೊಡವ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿದ ಕುಟುಂಬಸ್ಥರು!

    ಮಡಿಕೇರಿ: ಕೊಡಗಿನಲ್ಲಿ ಭೀಕರ ಹತ್ಯೆಗೀಡಾದ 10ನೇ ಬಾಲಕಿ ಮೀನಾ (Koagu Student Meena) ಅಂತ್ಯಕ್ರಿಯೆಯನ್ನು (Funeral) ಭಾನುವಾರ ಕುಟುಂಬಸ್ಥರು ಸ್ವಗ್ರಾಮದಲ್ಲಿ ನೇರವೇರಿಸಿದ್ದಾರೆ.

    ಶನಿವಾರ (ಮೇ 4) ಬೆಳಗ್ಗೆಯಷ್ಟೇ ಬಾಲಕಿ ಹತ್ಯೆಗೈದ ಅರೋಪಿ ಓಂಕಾರಪ್ಪ ಅಲಿಯಾಸ್ ಪ್ರಕಾಶ್ ನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದರು. ಅಲ್ಲದೇ ಹತ್ಯೆ ಮಾಡಿದ ಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ಮಾಡುವ ವೇಳೆಯಲ್ಲಿ ಬಾಲಕಿ ರುಂಡವನ್ನು ಅವನಿಂದಲೇ ಪತ್ತೆ ಮಾಡಿಸಿ ವಿಚಾರಣೆಯನ್ನೂ ನಡೆಸಿದ್ದರು. ಇದನ್ನೂ ಓದಿ: ಲೂಟಿ, ಹಗರಣ ಮಾಡೋದೇ ಫುಲ್‌ ಟೈಮ್‌ ಬಿಸಿನೆಸ್‌ ಆಗಿದೆ: ಟಿಎಂಸಿ ವಿರುದ್ಧ ಮೋದಿ ಕೆಂಡ

    ನಂತರ ಬಾಲಕಿಯ ರುಂಡವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದರು. ಅದರಂತೆ ಇಂದು (ಮೇ 5) ಮಡಿಕೇರಿ ಜಿಲ್ಲಾಸ್ಪತ್ರೆಯ ವೈದ್ಯರು. ಮಧ್ಯಾಹ್ನದ ಬಳಿಕ ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿದ್ದರು. ಬಳಿಕ ಬಾಲಕಿಯ ಕುಟುಂಬಸ್ಥರು ಬಾಲಕಿಯ ಮೃತದೇಹವನ್ನು ಸೋಮವಾರಪೇಟೆ ತಾಲ್ಲೂಕಿನ ಸುರ್ಲಭಿ ಗ್ರಾಮದ ಕುಂಬಾರಗಡಿಗೆ ತೆಗೆದುಕೊಂಡು ಹೋಗಿ ಕೊಡವ ಸಾಂಪ್ರದಾಯದಂತೆ ಬಾಲಕಿಯ ಅಂತ್ಯಸಂಸ್ಕಾರ ನೇರವೇರಿಸಿದ್ದಾರೆ.

    ಇನ್ನೂ ಗಂಭೀರವಾಗಿ ಗಾಯಗೊಂಡು ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೀನಾ ತಾಯಿ ಸಹ ಮಗಳ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು. ಇದನ್ನೂ ಓದಿ: ಕೊಡಗಿನ ಪ್ರವಾಸೋದ್ಯಮಕ್ಕೆ ದಕ್ಷಿಣ ಭಾರತದ ಅತಿ ದೊಡ್ಡ ಮತ್ತೊಂದು ಗ್ಲಾಸ್‌ ಸ್ಕೈ ವಾಕ್ ಬ್ರಿಡ್ಜ್ ಸೇರ್ಪಡೆ

  • ಕೊಡಗು: ಬಾಲಕಿಯ ಭೀಕರ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್‌ – ಇನ್ನೂ ಪತ್ತೆಯಾಗದ ರುಂಡ

    ಕೊಡಗು: ಬಾಲಕಿಯ ಭೀಕರ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್‌ – ಇನ್ನೂ ಪತ್ತೆಯಾಗದ ರುಂಡ

    ಕೊಡಗು: ಬಾಲಕಿಯ ರುಂಡ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ರುಂಡ ಹಾಗೂ ಕೋವಿಯೊಂದಿಗೆ ಆರೋಪಿ ಪರಾರಿಯಾಗಿದ್ದ. ಕಾಡಿನಲ್ಲಿದ್ದ ಆತನನ್ನು ಸೋಮವಾರಪೇಟೆ ಪೊಲೀಸ್‌ ಠಾಣೆಗೆ ಪೊಲೀಸರು ಕರೆತಂದಿದ್ದಾರೆ. ಇದನ್ನೂ ಓದಿ: ಇಂದು ನ್ಯಾಯಾಧೀಶರ ಮುಂದೆ ದೇವರಾಜೇಗೌಡ

    ಅರೋಪಿ ಸೆರೆಯಾದರೂ ಬಾಲಕಿಯ ರುಂಡ ಮಾತ್ರ ಪತ್ತೆಯಾಗಿಲ್ಲ. ಹೆಚ್ಚಿನ ವಿಚಾರಣೆ ನಡೆಸಿ ನಂತರ ಮಾಹಿತಿ ನೀಡುವುದಾಗಿ ಎಸ್‌ಪಿ ರಾಮರಾಜನ್ ತಿಳಿಸಿದ್ದಾರೆ.

    ಕೊಡಗಿನಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯ ಭೀಕರ ಹತ್ಯೆಯಾಗಿತ್ತು. ಸೂರ್ಲಬ್ಬಿ ಸರ್ಕಾರಿ ‌ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಏಕೈಕ ವಿದ್ಯಾರ್ಥಿನಿಯಾಗಿದ್ದ ಮೀನಾ, ಪರೀಕ್ಷೆಯಲ್ಲಿ ಪಾಸಾಗುವ ಮೂಲಕ ತನ್ನ ಶಾಲೆಗೆ 100% ಫಲಿತಾಂಶ ತಂದು ಕೊಟ್ಟಿದ್ದಳು. ಬೆಳಗ್ಗೆಯಿಂದಲೂ ತಾನು ಪಾಸಾದ ಖುಷಿಯಲ್ಲಿ ಇದ್ದ ಮೀನಾ, ಶಾಲೆಯತ್ತ ಬಂದು ತೇರ್ಗಡೆಯಾದ ಖುಷಿಯಲ್ಲಿ ಮನೆಗೆ ಹೋಗುತ್ತಿದ್ದಳು. ಇದೇ ಸಂದರ್ಭದಲ್ಲಿ ಆಕೆಯನ್ನು ಅಡ್ಡಗಟ್ಟಿ ಪ್ರಕಾಶ್‌ ಹತ್ಯೆ ಮಾಡಿದ್ದ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅಬ್ಬರ; ಮನೆಗಳಿಗೆ ನುಗ್ಗಿದ ನೀರು

    ಹತ್ಯೆ ಮಾಡಿ ರುಂಡ-ಮುಂಡ ಬೇರ್ಪಡಿಸಿ ಆರೋಪಿ ಪರಾರಿಯಾಗಿದ್ದ. ರುಂಡದೊಂದಿಗೆ ಎಸ್ಕೇಪ್‌ ಆಗಿದ್ದ. ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ಕೊನೆಗೂ ಪೊಲೀಸರ ಕೈಗೆ ಪ್ರಕಾಶ್‌ ಸಿಕ್ಕಿಬಿದ್ದಿದ್ದಾನೆ.