Tag: Kodagu Flood

  • ಮಳೆಯ ಆರ್ಭಟದ ನಂತ್ರ ಗ್ರಾಮಗಳತ್ತ ಕಾಡುಪ್ರಾಣಿಗಳು-ಒಡೆಯನಿಗಾಗಿ ಕಾಯ್ತೀರೋ ನಾಯಿ

    ಮಳೆಯ ಆರ್ಭಟದ ನಂತ್ರ ಗ್ರಾಮಗಳತ್ತ ಕಾಡುಪ್ರಾಣಿಗಳು-ಒಡೆಯನಿಗಾಗಿ ಕಾಯ್ತೀರೋ ನಾಯಿ

    -ಭೂಮಿಯಲ್ಲಿ ನೀರಿನ ಶಬ್ಧ

    ಕೊಡಗು: ಮಹಾಮಳೆ ಮತ್ತು ಪ್ರವಾಹಕ್ಕೆ ಸಿಲುಕು ನಲುಗಿರುವ ಕೊಡಗು ಹಾಗೂ ಮಂಗಳೂರಿನ ಕೆಲವು ಕಡೆ ಇಂದು ಮತ್ತು ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಂದು ಕಡೆ ಮಳೆ ಬಿಡುವ ನೀಡಿದ ಹಿನ್ನೆಲೆಯಲ್ಲಿ ಹಲವು ನಿರಾಶ್ರಿತರು ತಮ್ಮ ಮನೆಗಳತ್ತ ಆಗಮಿಸುತ್ತಿದ್ದಾರೆ. ಒಂದು ಕಡೆ ಕಾಡು ಪ್ರಾಣಿಗಳು ಗ್ರಾಮಗಳ ಮುಖ ಮಾಡಿದ್ದು, ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

    ಭಾಗಮಂಡಲ ಸಮೀಪದ ತಾವೂರು ಗ್ರಾಮದ ಪುರುಷೋತ್ತಮ್ ಮನೆಯಲ್ಲಿ ಸೋಮವಾರ ರಾತ್ರಿ ಹುಲಿಯೊಂದು ಸಾಕಿದ ನಾಯಿ ಮೇಲೆ ದಾಳಿ ನಡೆಸಿದೆ. ಪರಿಣಾಮ ನಾಯಿ ಗಂಭೀರವಾಗಿ ಗಾಯಗೊಂಡಿದ್ದ ನಾಯಿ ಮೃತ ಪಟ್ಟಿದೆ. ಇದರಿಂದಾಗಿ ಗ್ರಾಮದಲ್ಲಿ ಅತಂಕ ಹೆಚ್ಚಾಗಿದೆ. ಹತ್ತು ದಿನಗಳಿಂದ ಮೂವತ್ತೊಕ್ಲು ಗ್ರಾಮದ ನಿವಾಸಿ ಮುಕ್ಕಾಟಿರ ಉತ್ತಪ್ಪ ಸುಳಿವಿಲ್ಲ. ಮನೆ ಮಣ್ಣಿನೊಂದಿಗೆ ಸುಮಾರು 500 ಮೀಟರ್ ಜರಿದು ಬಂದು ನಿಂತಿದೆ.

    ಒಡೆಯನಿಗಾಗಿ ಮನೆ ಮುಂದೆ ನಾಯಿಯೊಂದು ಸುಳಿದಾಡ್ತಿದೆ. ಈ ಮಧ್ಯೆ ಕೊಡಗು ಮತ್ತು ಕೇರಳ ಗಡಿಬಾಗವಾದ ಕರಿಕೆ ಸಮೀಪದ ಚೇತುಕಾಯ ಗ್ರಾಮದ ಕೇಶವ ನಾಯ್ಕರ ಮನೆ ಹಿಂಬದಿಯಲ್ಲಿ ಭೂಮಿಯೊಳಗೆಯಿಂದ ನೀರಿನ ಶಬ್ಧ ಕೇಳಿ ಬರುತ್ತಿದೆ. ಇದರಿಂದ ಗ್ರಾಮಸ್ಥರು ಅಂಕತಕ್ಕೆ ಒಳಗಾಗಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತದಿಂದಾಗಿ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮತ್ತೊಮ್ಮೆ ಮಳೆಯಾಗಲಿದೆ. ಈ ಸಂಬಂಧ ಹವಾಮಾನ ಇಲಾಖೆ ಮಂಗಳೂರು ಮತ್ತು ಕೊಡಗು ಜಿಲ್ಲಾಧಿಕಾರಿಗಳಿಗೆ ಮಾಹಿತಿ ರವಾನಿಸಿದೆ.

    ಕೊಡಗು, ಕರಾವಳಿಯಲ್ಲಿ ಮತ್ತೆ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇತ್ತ ಮಳೆ, ಪ್ರವಾಹ ಹಿನ್ನೆಲೆಯಲ್ಲಿ ಕೊಡಗಿಗೆ ಆಗಸ್ಟ್ 31ರವರೆಗೆ ಪ್ರವಾಸಿಗರಿಗೂ ನಿರ್ಬಂಧ ವಿಧಿಸಲಾಗಿದೆ.

    ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದರಿಂದ ಆಗಸ್ಟ್ 31ರವರೆಗೆ ಕೊಡಗು ಪ್ರವಾಸಕ್ಕೆ ಬರಬೇಡಿ ಎಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಅಧಿಕಾರಗಳ ಆದೇಶವನ್ನು ನಿರಾಕರಿಸಿ ಪ್ರವಾಸಿಗರ ವಾಸ್ತವ್ಯಕ್ಕೆ ಅನುವು ಮಾಡಿಕೊಡುವ ಹೋಟೆಲ್ ರೆಸಾರ್ಟ್ ಮತ್ತು ಹೋಂಸ್ಟೇಗಳ ಮೇಲು ಕೇಸ್ ಹಾಕುವಂತೆ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಡಗಿನಲ್ಲಿ ಮಳೆಗೆ 14 ಮಂದಿ ಬಲಿ- ಒಂದೇ ದಿನ ನಾಲ್ವರ ಮೃತದೇಹ ಪತ್ತೆ, 5 ಮಂದಿಗೆ ಶೋಧ

    ಕೊಡಗಿನಲ್ಲಿ ಮಳೆಗೆ 14 ಮಂದಿ ಬಲಿ- ಒಂದೇ ದಿನ ನಾಲ್ವರ ಮೃತದೇಹ ಪತ್ತೆ, 5 ಮಂದಿಗೆ ಶೋಧ

    – ಇಂದು ನಿರಾಶ್ರಿತ ಯುವತಿಯ ವಿವಾಹ

    ಕೊಡಗು: ಮಹಾಮಳೆ ಈವರೆಗೆ ಒಟ್ಟು 14 ಮಂದಿಯನ್ನು ಬಲಿ ಪಡೆದಿದೆ. ಶನಿವಾರ ಒಂದೇ ದಿನ 4 ಮೃತದೇಹಗಳು ಪತ್ತೆಯಾಗಿದೆ. ರಣಮಳೆಯ ಪ್ರವಾಹಕ್ಕೆ ನಲುಗಿಹೋಗಿದ್ದ ಕೊಡಗು ನಿಧಾನವಾಗಿ ಸುಧಾರಿಸಿಕೊಳ್ಳುತ್ತಿದೆ. ಹೀಗಿರುವಾಗಲೇ ಮಡಿಕೇರಿಗೆ ಮತ್ತೆ ಮಳೆಯಯಾಗುವ ಎಚ್ಚರಿಕೆ ರವಾನೆಯಾಗಿದೆ.

    ಕೊಡಗಿನಲ್ಲಿ ವರುಣನ ಆರ್ಭಟ ಕೊಂಚ ಕಡಿಮೆಯಾಗಿದ್ದು, ಮಡಿಕೇರಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಆದರೆ ಆ ರಣಭೀಕರ ಮಳೆ ಸೃಷ್ಠಿಸಿದ ಅವಾಂತರ ಅಷ್ಟಿಷ್ಟಲ್ಲ. ಯಾಕೆಂದರೆ ಜಲಪ್ರಳಯದಿಂದ ಸತ್ತವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಪ್ರಕೃತಿ ವಿಕೋಪದಲ್ಲಿ ಸಿಲುಕಿ ಸಾವನ್ನಪ್ಪಿದ್ದ ನಾಲ್ಕು ಮಂದಿಯ ಮೃತದೇಹ ಶನಿವಾರ ಪತ್ತೆಯಾಗಿದೆ. ಮಡಿಕೇರಿ ತಾಲೂಕಿನ ಮಕ್ಕಂದೂರು ಸಮೀಪ ಉದಯಗಿರಿಯಲ್ಲಿ ಬಾಬು ಎಂಬವರ ಮೃತದೇಹವನ್ನು ಗರುಡ ತಂಡದ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ. ಹೆಬ್ಬೆಟ್ಟಗೇರಿಯ ನಿವಾಸಿ ಚಂದ್ರಪ್ಪರ ಮೃತದೇಹವನ್ನು ಎನ್‍ಡಿಆರ್‍ಎಫ್ ಸಿಬ್ಬಂದಿ ಪತ್ತೆ ಹಚ್ಚಿದರು. ಹಟ್ಟಿಹೊಳೆಯ ಫ್ರಾನ್ಸಿಸ್, ಕಾಟಕೇರಿಯಲ್ಲಿ ಗಿಲ್ಬರ್ಟ್ ಎಂಬವವರ ಮೃತದೇಹ ಸಹ ಪತ್ತೆಯಾಗಿದೆ.

    ಮಹಾಮಳೆಯಿಂದ ಅದೆಷ್ಟು ಮಂದಿ ನಾಪತ್ತೆಯಾಗಿದ್ದಾರೆ ಅನ್ನೋ ಮಾಹಿತಿ ಯಾರಿಗೂ ನಿಖರವಾಗಿ ಸಿಕ್ಕಿಲ್ಲ. ಕುಟುಂಬಸ್ಥರು, ಸಂಬಂಧಿಕರು ಕೊಟ್ಟ ಮಾಹಿತಿಯನ್ವಯ 5 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಮಡಿಕೇರಿ ತಾಲೂಕಿನ 34 ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದ ಹಾನಿಯಾಗಿದೆ. ನಿರಾಶ್ರಿತರ ಶಿಬಿರದಲ್ಲಿರುವ ನಾಲ್ಕು ಸಾವಿರ ಜನರಿಗೆ ಶೀಘ್ರವೇ ತಾತ್ಕಾಲಿಕ ಶೆಡ್ ಮತ್ತು ಮನೆ ಕಳೆದುಕೊಂಡವರಿಗೆ ತಾತ್ಕಾಲಿಕ ಆಶ್ರಯ ನಿರ್ಮಾಣ ಮಾಡಿಕೊಡಲಾಗುವುದು ಎಂದು ಕೊಡಗು ಡಿಸಿ ಶ್ರೀ ವಿದ್ಯಾ ಹೇಳಿದ್ದಾರೆ.

    ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡು ಪರಿಹಾರ ಕೇಂದ್ರ ಸೇರಿ ಮದುವೆಯ ಕನಸು ಕಮರಿ ಹೋಗಿದ್ದ ಇಬ್ಬರೂ ಯುವತಿಯರ ಮೊಗದಲ್ಲಿ ಮಂದಹಾಸ ಮೂಡಿದೆ. ಇಂದು ಮಂಜುಳ ಎಂಬ ಯುವತಿಯ ಮದುವೆ ನಡೆಯಲಿದೆ. ನಗರದ ಓಂಕಾರ ಸದನದಲ್ಲಿರೋ ಕಾಳಜಿ ಕೇಂದ್ರದಲ್ಲಿ ಮದುವೆ ತಯಾರಿ ನಡೆದಿದೆ. ಮೆಹೆಂದಿ ಶಾಸ್ತ್ರ ಸೇರಿದಂತೆ ಹಲವು ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಸೇರಿದಂತೆ ಹಲವರು ಭಾಗಿಯಾಗಿದ್ದರು.

    ಇತ್ತ ಮಡಿಕೇರಿಯಿಂದ ಮೈಸೂರು ತೆರಳುವ ರಸ್ತೆಯಲ್ಲಿ ಬಿದ್ದಿದ್ದ ಮಣ್ಣು ತೆರವು ಕಾರ್ಯ ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು, ಎಂದಿನಂತೆ ವಾಹನಗಳು ಸಂಚರಿಸುತ್ತಿವೆ. ಮಡಿಕೇರಿಯಿಂದ ಮಂಗಳೂರು ರಸ್ತೆ ಬದಿಯಲ್ಲಿ ಹಲವೆಡೆ ಗುಡ್ಡಗಳು ಕುಸಿದಿರುವ ಹಿನ್ನೆಲೆ ಸದ್ಯ ಲಘು ವಾಹನ ಸಂಚರಿಸಲು ಅನುಮತಿ ನೀಡಲಾಗಿದೆ. ಆದ್ರೆ ಪ್ರವಾಹ ಪೀಡಿತ ಕೊಡಗು ನಿಧಾನಕ್ಕೆ ಸಹಜ ಸ್ಥಿತಿಗೆ ಮರಳುತ್ತಿರೋ ಹೊತ್ತಲ್ಲಿ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ರವಾನಿಸಿದೆ. ಇನ್ನು ಮೂರು ದಿನ ಕರಾವಳಿ, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಎಚ್ಚರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಣ್ಣಮುಂದೆಯೇ ವ್ಯಕ್ತಿ ಭೂ ಸಮಾಧಿ- ಬಟ್ಟೆ ಒಣಹಾಕುವಾಗ ಭೂಕುಸಿತವಾಗಿ ನಾಪತ್ತೆ

    ಕಣ್ಣಮುಂದೆಯೇ ವ್ಯಕ್ತಿ ಭೂ ಸಮಾಧಿ- ಬಟ್ಟೆ ಒಣಹಾಕುವಾಗ ಭೂಕುಸಿತವಾಗಿ ನಾಪತ್ತೆ

    ಮಡಿಕೇರಿ: ಕಂಡು ಕೇಳರಿಯದ ಜಲಪ್ರಳಯ ಹಾಗೂ ಭೂ ಕುಸಿತಕ್ಕೆ ಕೊಡಗಿನಲ್ಲಿ ಸುಮಾರು 16 ಮಂದಿ ಬಲಿಯಾಗಿದ್ದಾರೆ. ಕಣ್ಣ ಮುಂದೆಯೇ ವ್ಯಕ್ತಿಯೊಬ್ಬರು ಮಣ್ಣುಪಾಲಾದ ಘಟನೆಯನ್ನು ಹಿರಿಯ ವ್ಯಕ್ತಿಯೊಬ್ಬರು ಹಂಚಿಕೊಂಡಿದ್ದಾರೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪ್ರತ್ಯಕ್ಷದರ್ಶಿ, ನಾಟಿ ಕೆಲಸ ಮುಗಿಸಿ ಮರುದಿನ ಗದ್ದೆ ಕಡೆ ಹೀಗುತ್ತಿದ್ದ ಸಂದರ್ಭದಲ್ಲಿ ಹಠತ್ತಾಗಿ ಗುಡ್ಡವೊಂದು ಕುಸಿದು ಬಿತ್ತು. ಪರಿಣಾಮ ನೀರು ಬಂದು ನಮ್ಮ ಮನೆ ಗದ್ದೆ ತೋಟ ಮುಚ್ಚಿ ಹೋಯ್ತು. ಈ ವೇಳೆ ಪಕ್ಕದ ಮನೆಯ ಮುಕ್ಕಾಟಿಯ ಸಾಬು ಎಂಬವರು ಮನೆಯಲ್ಲಿ ಬಟ್ಟೆ ಒಣಗೋಕೆ ಹಾಕುತ್ತಿದ್ದರು. ಇದೇ ಸಂದರ್ಭದಲ್ಲಿ ಅವರ ಮನೆಯ ಮೇಲೆ ಮರವೊಂದು ಬಿದ್ದಿದ್ದು, ನೋಡ ನೋಡುತ್ತಿದ್ದಂತೆಯೇ ಅವರು ಮಣ್ಣಿನಡಿ ಸಿಲುಕಿದ್ದಾರೆ. ಈವರೆಗೂ ಅವರ ದೇಹ ಸಿಕ್ಕಿಲ್ಲ. ಹೀಗಾಗಿ ಸದ್ಯ ಅಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಅಂತ ಅವರು ಹೇಳಿದ್ರು. ಇದನ್ನೂ ಓದಿ: ಗುಡ್ಡದ ಮೇಲಿನಿಂದ ಹಡಗಿನಂತೆ ಚಲಿಸಿದ ಮನೆ: ಅಜ್ಜಿ, ಮೊಮ್ಮಗು ಪಾರಾದ ಕಥೆ ಓದಿ

    ನಮ್ಮ ಮನೆಯ ಆಸುಪಾಸಿನ ಸುಮಾರು 300 ಮನೆಗಳನ್ನು ಸರ್ಕಾರದವರು ಖಾಲಿ ಮಾಡಿಸಿದ್ದಾರೆ. ಅಲ್ಲದೇ ಮಡಿಕೇರಿಯ 3,4 ಗ್ರಾಮಗಳಲ್ಲಿ ಗುಡ್ಡ ಕುಸಿತ ಹಾಗೂ ಎಷ್ಟು ಜನ ಮಣ್ಣುಪಾಲಾಗಿದ್ದಾರೆ ಎಂಬುದಕ್ಕೆ ಲೆಕ್ಕವಿಲ್ಲ ಅಂತ ಅವರು ತಿಳಿಸಿದ್ರು. ಇದನ್ನೂ ಓದಿ: ಮಗಳ ಮದ್ವೆಗಾಗಿ ಕೂಡಿಟ್ಟ ಹಣ, ಚಿನ್ನಕ್ಕಾಗಿ ಮನೆಯ ಅವಶೇಷದಡಿ ಹುಡುಕಾಟ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=mYi6vJ3i3Wg

  • ಕನಸಿನ ಮನೆಗಳನ್ನು ಬಿಟ್ಟು ಗ್ರಾಮಗಳನ್ನೇ ತೊರೆದ ಗ್ರಾಮಸ್ಥರು

    ಕನಸಿನ ಮನೆಗಳನ್ನು ಬಿಟ್ಟು ಗ್ರಾಮಗಳನ್ನೇ ತೊರೆದ ಗ್ರಾಮಸ್ಥರು

    ಮಡಿಕೇರಿ: ಜೀವ ಉಳಿಸಿಕೊಳ್ಳಲು ಕನಸಿನ ಮನೆಗಳನ್ನು ತೊರೆದು ಜನರು ಗ್ರಾಮಗಳನ್ನು ಖಾಲಿ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹದ ಪರಿಣಾಮ ಮಾದಪುರ ಸಮೀಪದ ಗ್ರಾಮಗಳಲ್ಲಿ ಜನರೇ ಇಲ್ಲದೇ ಖಾಲಿಯಾಗುತ್ತಿವೆ.

    ಮಾದಪುರ ಸಮೀಪದ ಹೆಮ್ಮಿಯಾಲ, ಹಟ್ಟಿಹೊಳೆ, ಮುಕ್ಕೋಡ್ಲು ಗ್ರಾಮಗಳಲ್ಲಿ ಜನರೇ ಇಲ್ಲ. ಗ್ರಾಮದ ಎಲ್ಲ ಮನೆಗಳಿಗೆ ಬೀಗ ಹಾಕಲಾಗಿದೆ. ಮೂರು ಗ್ರಾಮಗಳಲ್ಲಿ ಮನೆಗಳು ಬಹುತೇಕ ಕುಸಿತವಾಗಿದ್ದು, ಕೆಲಕಡೆ ನೀರು ಸಹ ನುಗ್ಗಿದೆ. ಅಬ್ಬರಿಸಿ ಬೊಬ್ಬಿರಿದು ರೌದ್ರ ನರ್ತನ ತೋರಿದ್ದ ಹಟ್ಟಿಹೊಳೆ ಈಗ ಸ್ವಲ್ಪ ಶಾಂತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    ಹಟ್ಟಿಹೊಳೆಯಬ ರೌದ್ರ ನರ್ತನದಿಂದಾಗಿ ಮುಕ್ಕೋಡ್ಲು ಗ್ರಾಮದ ಜನರು ಅಪಾಯಕ್ಕೆ ಸಿಲುಕಿದ್ದರು. ಸದ್ಯ ಹಟ್ಟಿಹೊಳೆ ಆರ್ಭಟ ತಗ್ಗಿದ್ದು, ಮುಕ್ಕೋಡ್ಲು ರಸ್ತೆಯಿಂದ ನೀರು ಬಿಟ್ಟಿದೆ. ರಸ್ತೆಯನ್ನ ತಕ್ಕಮಟ್ಟಿಗೆ ದುರಸ್ತಿ ಮಾಡುವ ಕಾರ್ಯಕೂಡ ನಡೆಯುತ್ತಿದೆ. ಮಳೆಯ ಅವಾಂತರಕ್ಕೆ ಮಡಿಕೇರಿಯ ಮಕಂದೂರಿನಲ್ಲಿ ಇಡೀ ಗುಡ್ಡವೇ ಕುಸಿದುಬಿದ್ದಿದ್ದು ಸುಮಾರು 40ಕ್ಕೂ ಹೆಚ್ಚು ಮನೆಗಳು ನೆಲಸಮವಾಗಿವೆ. ಸರ್ಕಾರ ನಮ್ಮೆಲ್ಲಾ ಮನೆಗಳನ್ನು ನಿರ್ಮಾಣ ಮಾಡಿಕೊಡಲಿ ಅಂತ ಅಲ್ಲಿಯ ಸ್ಥಳಿಯರು ಮನವಿ ಮಾಡಿಕೊಳ್ಳುತ್ತಿದ್ದಾರೆ.

    https://youtu.be/cOn-LBN3Qr4

     

  • ಕೊಡಗಿನ ಜಲಪ್ರಳಯಕ್ಕೆ 9 ಮಂದಿ ಸಾವು – 845ಕ್ಕೂ ಹೆಚ್ಚು ಮನೆಗಳು ನೀರುಪಾಲು

    ಕೊಡಗಿನ ಜಲಪ್ರಳಯಕ್ಕೆ 9 ಮಂದಿ ಸಾವು – 845ಕ್ಕೂ ಹೆಚ್ಚು ಮನೆಗಳು ನೀರುಪಾಲು

    ಕೊಡಗು: ಮಹಾಮಳೆಗೆ ಮಂಜಿನ ನಗರಿ ಜನ ಅಕ್ಷರಶಃ ತತ್ತರಿಸಿದ್ದಾರೆ. ಮರಣ ಮಳೆಗೆ ಈವರೆಗೆ 9 ಮಂದಿ ಸಾವನ್ನಪ್ಪಿದ್ದು, ಹಲವರು ಕಣ್ಮರೆಯಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ. ಹಲವೆಡೆ ಗ್ರಾಮಕ್ಕೆ ಗ್ರಾಮವೇ ಕಣ್ಮರೆಯಾಗಿದೆ. ಮುಕ್ಕೊಡ್ಲುವಿನ 70ಕ್ಕೂ ಜನರು ತಮ್ಮ ಜೀವ ರಕ್ಷಣೆಗಾಗಿ ಬೆಟ್ಟ ಹತ್ತಿ ಕೂತಿದ್ದಾರೆ. ಹಲವೆಡೆ ಜನ ಬೆಟ್ಟ ಹತ್ತುತ್ತಿದ್ದು, ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಲಾಗುತ್ತಿದೆ. ಮುಕ್ಕೋಡ್ಲುವಿನಲ್ಲಿ 200ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಒಂದು ಕಡೆ ಮತ್ತೆ ಮಳೆ ಆರ್ಭಟ, ಇನ್ನೊಂದು ಕಡೆ ಗುಡ್ಡ ಕುಸಿತ ಭೀತಿಯಿಂದ ಜೀವವನ್ನು ಕೈಯಲ್ಲಿ ಹಿಡಿದು ಕುಳಿತಿದ್ದಾರೆ.

    ರಕ್ಕಸ ಮಳೆ ಕೊಡವರ ನಾಡನ್ನು ಇಂಚಿಂಚಾಗಿ ನುಂಗುತ್ತಿದೆ. ನೋಡನೋಡುತ್ತಿದ್ದಂತೆ ಗುಡ್ಡಗಳು ಕುಸಿಯುತ್ತಿದೆ. ಬೆಟ್ಟದಿಂದ ಕುಸಿದ ಮಣ್ಣು ನದಿಯಂತೆ ಹರಿಯುತ್ತಿದೆ. ಗುಡ್ಡದೊಂದಿಗೆ ರಸ್ತೆಗಳು ಸಹ ಧರಾಶಾಹಿಯಾಗಿದೆ. ಮಹಾಮಳೆಗೆ ಹಟ್ಟಿಹೊಳೆ ಎಂಬ ಊರು ರಾತ್ರೋರಾತ್ರಿ ನಾಪತ್ತೆಯಾಗಿದೆ. ಹಕ್ಕಿ ಹೊಳೆ ಗ್ರಾಮ ಜಲಾವೃತಗೊಂಡಿದ್ದು, ಜನರೆಲ್ಲಾ ಊರು ಬಿಟ್ಟಿದ್ದಾರೆ. ಇತ್ತ 900ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಬರೋಬ್ಬರಿ 123 ಕಿಲೋಮೀಟರ್ ರಸ್ತೆಗಳೇ ನಾಪತ್ತೆಯಾಗಿದೆ. ಇತ್ತ ಬರೋಬ್ಬರಿ 58 ಸೇತುವೆಗಳು ನಾಶಗೊಂಡಿವೆ ಎಂಬ ಅಂಕಿ ಅಂಶಗಳು ಲಭ್ಯವಾಗಿದೆ.

    3,800 ಲೈಟ್ ಕಂಬಗಳು ಹಾಳಾಗಿದ್ದು, 278 ಸರ್ಕಾರಿ ಕಟ್ಟಡಗಳು ಕುಸಿದುಬಿದ್ದಿವೆ. 3601 ಜನರ ರಕ್ಷಣೆ ಮಾಡಲಾಗಿದ್ದು, ಕೊಡಗಿನ 36 ಕ್ಯಾಂಪ್‍ಗಳಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ 9 ರಕ್ಷಣಾ ಕೇಂದ್ರದಲ್ಲಿ ಒಟ್ಟು 802 ಮಂದಿ ಆಶ್ರಯ ಪಡೆದಿರುವ ಬಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

    ಮಡಿಕೇರಿ ಸೇರಿ 10ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳಲ್ಲಿ ಜನ ಆಶ್ರಯ ಪಡೆದಿದ್ದಾರೆ. ಮನೆಯನ್ನು ಕಳೆದುಕೊಂಡವರು ಕಣ್ಣೀರಿಡುತ್ತಾ ಕಾಲಕಳೆಯುತ್ತಿದ್ದಾರೆ. ಒಂದು ಮನೆ ಕೊಡಿ ಎಂದು ನಿರಾಶ್ರಿತರು ಸರ್ಕಾರಕ್ಕೆ ಆಗ್ರಹಿಸುತ್ತಿದ್ದಾರೆ. ಕೊಡಗಿನಿಂದ ಸಕಲೇಶಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಬಿರುಕು ಬಿಟ್ಟು ಕಂದಕ ಸೃಷ್ಟಿಯಾಗಿದೆ. ಪರಿಣಾಮ ಈ ಮಾರ್ಗದ ಸಂಚಾರ ಸಂಪರ್ಕ ಕಡಿತಗೊಂಡಿದ್ದು, ರಕ್ಷಣಾ ಕಾರ್ಯ ವಿಳಂಬವಾಗುತ್ತಿದೆ ಎಂದು ತಿಳಿದು ಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಡಗು ನೆರೆ – ಖಾಲಿ ಹಂಡೆ ಪ್ರದರ್ಶಿಸಿ ವಾಟಾಳ್ ಪ್ರತಿಭಟನೆ

    ಕೊಡಗು ನೆರೆ – ಖಾಲಿ ಹಂಡೆ ಪ್ರದರ್ಶಿಸಿ ವಾಟಾಳ್ ಪ್ರತಿಭಟನೆ

    ಬೆಂಗಳೂರು: ಮಂಜಿನ ನಗರಿ ಕೊಡಗು ಪ್ರವಾಹಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಮಳೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ 25 ಲಕ್ಷ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.

    ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಖಾಲಿ ಹಂಡೆಗಳೊಂದಿಗೆ ಆಗಮಿಸಿದ ವಾಟಾಳ್ ನಾಗರಾಜ್ ಮತ್ತು ಬೆಂಬಲಿಗರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಕೊಡಗಿನ ವಿಚಾರದಲ್ಲಿ ರಾಜ್ಯ ಸರಿಯಾಗಿ ಸ್ಪಂದಿಸುತ್ತಿಲ್ಲ. ಕರ್ನಾಟಕದ ಕಾಶ್ಮೀರ ಕೊಡಗಿನಲ್ಲಿ ಜನರ ಸಂಕಷ್ಟಕ್ಕೆ ಕೂಡಲೇ ನೆರವು ನೀಡಬೇಕು. ಜನರ ಪರಿಸ್ಥಿತಿ ನರಕ ದೃಶ್ಯವಾಗಿದ್ದು, ಸರ್ಕಾರದ ನೆರವು ನಿಧಾನವಾಗಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.

    ಕೊಡಗಿನಲ್ಲಿ ಮತ್ತೆ ಗುಡ್ಡ ಕುಸಿತ
    ಕೊಡಗಿನಲ್ಲಿ ಮರಣ ಮಳೆಯ ಅಬ್ಬರ ಕಡಿಮೆ ಆಗುತ್ತಿಲ್ಲ. ಇತ್ತ ವರುಣನ ಅಬ್ಬರದಿಂದ ಗುಡ್ಡ ಕುಸಿಯೋದು ನಿಂತಿಲ್ಲ. ತಿನ್ನಲು ಆಹಾರವಿಲ್ಲ. ಕಾಲಿನ ಅಡಿಯಲ್ಲಿ ನೀರಿದ್ರೂ ಕುಡಿಯೋ ನೀರಿಗಾಗಿ ಪರದಾಟ. ಕರೆಂಟೂ ಇಲ್ಲ. ಕೊಡವರ ಬದುಕಲ್ಲಿ ಕತ್ತಲು ಆವರಿಸಿದೆ. ಹೌದು ಮಹಾ ರಣಮಳೆಗೆ ಮಂಜಿನ ನಗರಿ ಮಡಿಕೇರಿ ಅಕ್ಷರಶಃ ತತ್ತರಿಸಿಹೋಗಿದೆ.

    ಮರಣ ಮಳೆಗೆ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೇರಿದೆ. ನೂರಾರು ಮಂದಿ ಅಪಾಯದಲ್ಲಿ ಸಿಲುಕಿದ್ದಾರೆ. ಭೋರ್ಗರೆಯುತ್ತಿರೋ ನದಿಗಳು, ಮನೆ, ಶಾಲೆ ತೋಟ, ರಸ್ತೆ ಹೀಗೆ ಎಲ್ಲವನ್ನ ಆಪೋಷನ ತೆಗೆದುಕೊಳ್ತಿವೆ. ಮಳೆಯಿಂದ ಸಂಪರ್ಕ ಕಳೆದುಕೊಂಡಿದ್ದ 3 ಸಾವಿರಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. 31 ಕಡೆ ಗಂಜಿಕೇಂದ್ರ ತೆರೆಯಲಾಗಿದ್ದು, 10ಕ್ಕೂ ಹೆಚ್ಚು ಗ್ರಾಮಗಳು ಖಾಲಿಯಾಗಿದೆ. 845 ಮನೆಗಳಿಗೆ ಹಾನಿಯಾಗಿವೆ ಎಂದು ತಿಳಿದು ಬಂದಿದೆ.

    ಸೋಮವಾರಪೇಟೆಯ ಮುಕ್ಕೋಡ್ಲು ಗ್ರಾಮವಂತೂ ವರುಣನ ಅಬ್ಬರಕ್ಕೆ ಹೈರಾಣಾಗಿದೆ. ಗಂಟೆಗಂಟೆಗೂ ಗುಡ್ಡ ಕುಸಿಯುತ್ತಿದೆ. ಗುಡ್ಡದ ಜೊತೆ ಮನೆಗಳು ಧರಾಶಾಹಿಯಾಗ್ತಿದೆ. ಇಡೀ ಗ್ರಾಮಕ್ಕೆ ಗ್ರಾಮವೇ ನದಿಯಂತೆ ಭಾಸವಾಗ್ತಿದೆ. ಮಕ್ಕಂದೂರು, ಕಾಡನಕೊಲ್ಲಿ, ಮಂದಲಪಟ್ಟಿ, ಕಾಟಿಕೇರಿ, ಮಕ್ಕಳಗುಡಿಯಲ್ಲಿ ಗುಡ್ಡಗಳ ಕುಸಿತ ಮುಂದುವರೆದಿದೆ. ಗುಡ್ಡದ ಕೆಳಗಿನ ಕಟ್ಟಡಗಳು ಭೂಸಮಾಧಿಯಾಗ್ತಿವೆ. ಕಾಡುಗಳು ನೆಲಸಮವಾಗ್ತಿವೆ.

    ಮುಕ್ಕೋಡ್ಲು, ಇಗೋಡ್ಲು ಹಾಗೂ ಹಟ್ಟಿ ಹೊಳೆಯಲ್ಲಿ ಸಿಲುಕಿರುವವರನ್ನು ರಕ್ಷಣೆ ಮಾಡಲು ಸೇನೆ ಹಾಗೂ ಎನ್.ಡಿ.ಆರ್.ಎಫ್ ತಂಡಗಳು ಹರಸಾಹಸ ಪಡುತ್ತಿವೆ. ಈ ಗ್ರಾಮಗಳ ರಸ್ತೆಗಳು ಸಂಪೂರ್ಣವಾಗಿ ಕೊಚ್ಚಿಹೋಗಿದ್ದು, ಸುರಿಯುತ್ತಿರುವ ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆ ಅಡ್ಡಿಯುಂಟಾಗಿದೆ. ಅಲ್ಲದೇ ಮುಕ್ಕೋಡ್ಲು ಗ್ರಾಮವೊಂದರಲ್ಲೇ ಸುಮಾರು 60ಕ್ಕೂ ಹೆಚ್ಚು ಮಂದಿ ಅಪಾಯಕ್ಕೆ ಸಿಲುಕಿದ್ದು, ರಕ್ಷಣೆಯ ನಿರೀಕ್ಷೆಯಲ್ಲಿದ್ದಾರೆ.

    ಗ್ರಾಮಗಳ ರಸ್ತೆಗಳು ಸಂಪೂರ್ಣವಾಗಿ ನೀರಿನಲ್ಲಿ ಕೊಚ್ಚಿಹೋಗಿದ್ದು, ಕೇವಲ ಹೆಲಿಕಾಪ್ಟರ್ ಮೂಲಕವೇ ಸಂತ್ರಸ್ಥರನ್ನು ರಕ್ಷಣೆಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಆದರೆ ಸುರಿಯುತ್ತಿರುವ ಭಾರೀ ಮಳೆಯಿಂದ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಮಿಲಿಟರಿ ಅಧಿಕಾರಿಗಳು ಹೆಲಿಕಾಪ್ಟರ್ ಕಾರ್ಯಾಚರಣೆ ಸಾಧ್ಯವಾಗುತ್ತಿಲ್ಲ. ಅಲ್ಲದೇ ಹೆಲಿಕಾಪ್ಟರ್‍ಗಳನ್ನು ಇಳಿಸಲು ಸಹ ಕಷ್ಟವಾಗುತ್ತಿದೆ ಎಂದು ವಾಯುಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೇರಳ, ಕೊಡಗು ಜಲಪ್ರಳಯ: ಕೊಲ್ಲೂರು ದೇವಸ್ಥಾನದಿಂದ 1.25 ಕೋಟಿ ರೂ. ಪರಿಹಾರ ಘೋಷಣೆ

    ಕೇರಳ, ಕೊಡಗು ಜಲಪ್ರಳಯ: ಕೊಲ್ಲೂರು ದೇವಸ್ಥಾನದಿಂದ 1.25 ಕೋಟಿ ರೂ. ಪರಿಹಾರ ಘೋಷಣೆ

    ಉಡುಪಿ: ಕೇರಳ ರಾಜ್ಯದ ಮತ್ತು ಕೊಡಗು ಜಿಲ್ಲೆಯ ಜಲಪ್ರಳಯಕ್ಕೆ ಉಡುಪಿಯ ಕೊಲ್ಲೂರು ದೇವಸ್ಥಾನ ಪರಿಹಾರ ದೇಣಿಗೆ ನೀಡಿದೆ. ದೇವಸ್ಥಾನದ ಆಡಳಿತ ವ್ಯವಸ್ಥಾಪನಾ ಮಂಡಳಿ ಸಭೆ ನಡೆಸಿ ಈ ತೀರ್ಮಾನ ಕೈಗೊಂಡಿದೆ.

    ಕೇರಳ ರಾಜ್ಯಕ್ಕೆ 1 ಕೋಟಿ ರೂಪಾಯಿ ಮತ್ತು ಕೊಡಗು ಜಿಲ್ಲೆಗೆ 25 ಲಕ್ಷ ರೂಪಾಯಿ ನೀಡಲು ನಿರ್ಧರಿಸಿದೆ. ಕೊಡಗು ಜಿಲ್ಲೆಯ ನೆರೆ ಪೀಡಿತ ಪ್ರದೇಶಕ್ಕೆ 25 ಲಕ್ಷ ರೂಪಾಯಿಯನ್ನು ಅಲ್ಲಿನ ಜಿಲ್ಲಾಧಿಕಾರಿಗಳ ಪರಿಹಾರ ನಿಧಿಗೆ ದೇವಸ್ಥಾನದ ಆಡಳಿತ ಮಂಡಳಿ ನೀಡಲಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸಿಎಂ ಪರಿಹಾರ ನಿಧಿಗೆ ನೇರವಾಗಿ 1 ಕೋಟಿ ರೂಪಾಯಿಯನ್ನು ದೇವಸ್ಥಾನ ಜಮಾ ಮಾಡುತ್ತದೆ.

    ಉಡುಪಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳದಿಂದ ಅತೀ ಹೆಚ್ಚು ಭಕ್ತರು ಆಗಮಿಸುತ್ತಾರೆ. ವರ್ಷವಿಡೀ ಕೊಲ್ಲೂರು ಕ್ಷೇತ್ರದಲ್ಲಿ ಶೇಕಡಾ 85 ರಷ್ಟು ಕೇರಳಿಗರೇ ಇರುತ್ತಾರೆ. ಅಲ್ಲಿನ ಜನರ ಮತ್ತು ಕರ್ನಾಟಕದ ಕೊಡವರ ಕಷ್ಟದಲ್ಲಿ ಭಾಗಿಯಾಗುವ ಉದ್ದೇಶದಿಂದ ಕೊಲ್ಲೂರು ವ್ಯವಸ್ಥಾಪನಾ ಮಂಡಳಿ ಈ ನಿರ್ಧಾರ ಕೈಗೊಳ್ಳಲಾಗಿದೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ದೇವಸ್ಥಾನದ ಆಡಳಿತ ಮೊಕ್ತೇಸರ ಹರೀಶ್ ಶೆಟ್ಟಿ, ಕೇರಳ, ಕೊಡಗಿನ ಜನ ಕಷ್ಟದಲ್ಲಿದ್ದಾರೆ. ಕಷ್ಟದಲ್ಲಿ ಇರುವವರ ಸಹಾಯಕ್ಕೆ ನಿಲ್ಲುವುದು ನಮ್ಮ ಜವಾಬ್ದಾರಿ. ತಾಯಿ ಮೂಕಾಂಬಿಕೆಯ ಪ್ರೇರಣೆಯಂತೆ ಈ ಪರಿಹಾರ ಮೊತ್ತವನ್ನು ಘೋಷಣೆ ಮಾಡಲಾಗಿದೆ. ಮೊತ್ತವನ್ನು ಶೀಘ್ರ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಡಗಿನ ಪ್ರವಾಹದಲ್ಲಿ ಸಿಲುಕಿದ ನಟಿ ದಿಶಾ ಪೂವಯ್ಯ ಕುಟುಂಬಸ್ಥರು

    ಕೊಡಗಿನ ಪ್ರವಾಹದಲ್ಲಿ ಸಿಲುಕಿದ ನಟಿ ದಿಶಾ ಪೂವಯ್ಯ ಕುಟುಂಬಸ್ಥರು

    ಬೆಂಗಳೂರು: ನಟಿ ದಿಶಾ ಪೂವಯ್ಯ ಕುಟುಂಬಸ್ಥರು ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಸಿಲುಕಿಕೊಂಡಿದ್ದಾರೆ. ಸಹಾಯಕ್ಕಾಗಿ ಅಧಿಕಾರಿಗಳು, ಸಚಿವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಯಾರು ಸಿಗುತ್ತಿಲ್ಲ ಎಂದು ದಿಶಾ ಅಸಮಾಧಾನ ಹೊರಹಾಕಿದ್ದಾರೆ.

    ಮಡಿಕೇರಿ ನಗರದಿಂದ 15 ಕಿ.ಮೀ.ದೂರದ ಮಂದಲಪಟ್ಟಿಯಲ್ಲಿ ತನ್ನ ತಾಯಿ ಹಾಗು ತಂದೆಯ ಕುಟುಂಬಸ್ಥರು ವಾಸವಾಗಿದ್ದಾರೆ. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡ ಕುಸಿಯುವ ಭಯದಲ್ಲಿ ಎಲ್ಲರೂ ಮನೆಯಿಂದ ಹೊರ ಬಂದು ಬೆಟ್ಟದ ಮೇಲೆ ನಿಂತಿದ್ದಾರೆ. ಒಂದು ಕಡೆ ನಮ್ಮ ತಾಯಿ ಕುಟುಂಸ್ಥರು ನದಿ ದಂಡೆ ಹತ್ತಿರ ನಿಂತಿದ್ದಾರೆ ಎಂಬ ವಿಷಯಗಳು ನನಗೆ ಗೊತ್ತಾಗಿದೆ. ಆದ್ರೆ ಯಾರೊಂದಿಗೂ ನಿರಂತರವಾಗಿ ಸಂಪರ್ಕ ಸಾಧಿಸಲು ಸಾಗುತ್ತಿಲ್ಲ ಎಂದು ದಿಶಾ ಭಾವುಕರಾದರು.

    ಸಹಾಯಕ್ಕಾಗಿ ಜಿಲ್ಲಾಧಿಕಾರಿಗಳು, ಸಚಿವ ಸಾ.ರಾ.ಮಹೇಶ್ ರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ. ಕೆಲವರು ಫೋನ್ ರಿಸೀವ್ ಮಾಡುತ್ತಿಲ್ಲ. ಮತ್ತೆ ಕೆಲವರ ಫೋನ್ ಸ್ವಿಚ್ ಆಫ್ ಅಂತಾ ಬರುತ್ತಿದೆ. ಬೆಟ್ಟದ ಮೇಲೆ ಸುಮಾರು 25 ಕುಟುಂಬಗಳಿದ್ದು, ಮೂರು ದಿನಗಳಿಂದ ಅನ್ನ, ಬಟ್ಟೆ, ಸೂರು ಇಲ್ಲದೇ ಸಂಕಷ್ಟದಲ್ಲಿದ್ದಾರೆ. ಅರಣ್ಯ ಪ್ರದೇಶದಲ್ಲಿ ಆನೆಗಳ ಕಾಟ ಇರೋದ್ರಿಂದ ಅಲ್ಲಿಯವರು ಮತ್ತಷ್ಟು ಭಯಭೀತರಾಗಿದ್ದಾರೆ. ಸಂತ್ರಸ್ತರಲ್ಲಿ ಒಂಬತ್ತು ತಿಂಗಳ ಮಗು ಸೇರಿದಂತೆ ಗರ್ಭಿಣಿಯೂ ಇದ್ದಾರೆ ಎಂದು ನನಗೆ ಹೇಳಿದ್ದಾರೆ. ಬೆಟ್ಟದ ಮೇಲಿರುವರನ್ನು ರಕ್ಷಿಸಲು ಹೆಲಿಕಾಪ್ಟರ್ ವ್ಯವಸ್ಥೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ದಿಶಾ ಹೇಳಿದರು.

    ನೆರೆಯ ಕೇರಳ ರಾಜ್ಯದಲ್ಲಿ ಮಂತ್ರಿಗಳು ಮತ್ತು ಅಧಿಕಾರಿಗಳು ತುಂಬಾ ಚಾಕಚಕ್ಯತೆಯಿಂದ ಕೆಲಸ ಮಾಡುತ್ತಿದ್ದಾರೆ. ತೀವ್ರಗತಿಯಲ್ಲಿ ರಕ್ಷಣಾ ಕಾರ್ಯಚರಣೆ ನಡೆಸಲಾಗುತ್ತಿದೆ. ಕೇರಳಕ್ಕೆ ಹೋಲಿಸಿದ್ರೆ ನಮ್ಮ ರಕ್ಷಣಾ ಕಾರ್ಯಚರಣೆ ತುಂಬಾ ನಿಧಾನವಾಗಿದೆ ಎಂದು ಬೇಸರಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv