Tag: Kodava

  • ಹರ್ಷಿಕಾ-ಭುವನ್: ಕೊಡಗು ಶೈಲಿಯ ಮದುವೆ ಹೇಗಿರುತ್ತೆ ಗೊತ್ತಾ?

    ಹರ್ಷಿಕಾ-ಭುವನ್: ಕೊಡಗು ಶೈಲಿಯ ಮದುವೆ ಹೇಗಿರುತ್ತೆ ಗೊತ್ತಾ?

    ಸ್ಯಾಂಡಲ್‌ವುಡ್ ಬ್ಯೂಟಿ ಹರ್ಷಿಕಾ ಪೂಣಚ್ಚ(Harshika Poonacha)- ಭುವನ್ ಪೊನ್ನಣ್ಣ (Bhuvan) ಇಂದು (ಆಗಸ್ಟ್ 24) ಕೊಡವ ಸಂಪ್ರದಾಯದಂತೆ ದಾಂಪತ್ಯ(Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗಿನ ವಿರಾಜ್‌ಪೇಟೆಯ ಅಮ್ಮಾತ್ತಿ ಕೊಡವ ಸಮಾಜದಲ್ಲಿ ಮದುವೆ ಅದ್ದೂರಿಯಾಗಿ ಜರುಗಿದೆ. ಆಗಸ್ಟ್ 23-24ರಂದು ಎರಡು ದಿನ ಕೊಡವ ಶೈಲಿಯಂತೆ ವಿವಾಹ ನಡೆದಿದೆ. ಅಷಕ್ಕೂ ಕೊಡವ ಶೈಲಿಯ ಮದುವೆ ಹೇಗಿರುತ್ತೆ? ಈ ಬಗ್ಗೆ ಇಲ್ಲಿದೆ ಮಾಹಿತಿ.

    ಕೊಡವ ಸಂಪ್ರದಾಯ ಮದುವೆ ಕೊಂಚ ವಿಭಿನ್ನ. ಕೊಡಗಿನ ಮದುವೆ ದಿನದ ವಧು-ವರನ ಉಡುಗೆ, ಡ್ಯಾನ್ಸ್, ಮದುವೆ ಊಟದ ಮೆನು ಎಲ್ಲವೂ ಸ್ಪೆಷಲ್ ಆಗಿರುತ್ತದೆ. ಎರಡು ದಿನ ಈ ಅದ್ದೂರಿ ಮದುವೆಯಲ್ಲಿ, ಮೊದಲ ದಿನ ಊರ್ಕುಡುವ ಶಾಸ್ತ್ರವಿರುತ್ತದೆ. ಈ ದಿನವೇ ಹರ್ಷಿಕಾಗೆ ತಾಯಿಯಿಂದ ಮಾಂಗಲ್ಯದಾರಣೆ ಆಗಿದೆ. ನಂತರ ಹುಡುಗ-ಹುಡುಗಿ ಪರಸ್ಪರ ನೋಡುವ ಹಾಗಿಲ್ಲ. ಇಬ್ಬರಿಗೂ ಹಿರಿಯರಿಂದ ಪ್ರತ್ಯೇಕವಾಗಿ ಮೆಹೆಂದಿ ಶಾಸ್ತ್ರ ಜರುಗಲಿದೆ. ಇದನ್ನೂ ಓದಿ:ಹರ್ಷಿಕಾ-ಭುವನ್ ಮದುವೆಯಲ್ಲಿ ಬಗೆ ಬಗೆಯ ಭೋಜನ

    ಎರಡನೇ ದಿನ ಬೆಳಿಗ್ಗೆ ಹರ್ಷಿಕಾಗೆ ಬಳೆ ತೊಡಿಸುವ ಶಾಸ್ತ್ರ ನಡೆಯಿತು. ಬಳಿಕ ಪೊಂಬಣ ಪೂಜೆ ಮಾಡಿಸಲಾಗುತ್ತದೆ. ಅದು ವರ ಪೂಜೆ ರೀತಿಯಲ್ಲಿರುತ್ತದೆ. ಇತ್ತ ಮದುವೆ ಹುಡುಗ ಬಾಳೆ ಕಡೆದು ಮಂಟಪಕ್ಕೆ ಬರುತ್ತಾರೆ. ಈ ಶಾಸ್ತ್ರ ಭುವನ್ ನೆರವೇರಿಸಿ ಮಂಟಪಕ್ಕೆ ಬಂದಿದ್ದಾರೆ. ಭುವನ್ ನನ್ನು ಹುಡುಗಿ ಮನೆಯವರು ಕರೆದುಕೊಂಡು ಹೋಗ್ತಾರೆ. ಹರ್ಷಿಕಾ ಅಮ್ಮ ಹುಡುಗನಿಗೆ ಹಾಲು, ಬಾಳೆಹಣ್ಣು  ತಿನ್ನಿಸಿದ್ದಾರೆ. ನಂತರ ಹುಡುಗ ಹುಡುಗಿಯನ್ನ ವೇದಿಕೆ ಮೇಲೆ ಕೂರಿಸಿ ಮಹೂರ್ತ ಶುರು ಮಾಡಿದ್ದಾರೆ. ಬಂದ ಅತಿಥಿಗಳು ಹುಡುಗ ಹುಡುಗಿಗೆ ಅಕ್ಕಿಹಾಕಿ ಆಶೀರ್ವಾದ ಮಾಡಿ ಗಿಫ್ಟ್ ಕೊಡುತ್ತಾರೆ. ಕೊನೆಯಲ್ಲಿ ಹುಡುಗ- ಹುಡುಗಿ ಕೈ ಹಿಡಿದು ಎಬ್ಬಿಸ್ತಾನೆ. ಅದರಂತೆ ಹರ್ಷಿಕಾ ಕೈ ಹಿಡಿದು ಭುವನ್ ಎಬ್ಬಿಸಿದ್ದಾರೆ.

    ಇಂದು (ಆಗಸ್ಟ್‌ 24) ಗುರುಹಿರಿಯರ ಸಮ್ಮುಖದಲ್ಲಿ ನಟಿ ಹರ್ಷಿಕಾ- ಭುವನ್ ಕೊಡವ ಪದ್ಧತಿಯಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗಿನ ವಿರಾಟ್‌ಪೇಟೆಯಲ್ಲಿ ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ಜರುಗಿದೆ. ಕೊಡವ ಲುಕ್‌ನಲ್ಲಿ ನವಜೋಡಿ ಮಿಂಚಿದ್ದಾರೆ. ಮದುವೆಯೂ ಮುನ್ನವೇ ಜೋಡಿಯಾಗಿ ಹರ್ಷಿಕಾ-ಭುವನ್ ಗೃಹಪ್ರವೇಶ ನೆರವೇರಿತ್ತು. ಆಗಸ್ಟ್ 23ರಂದು ಊರ್ಕುಡುವ ಶಾಸ್ತ್ರ ನಡೆದಿತ್ತು. ಇದೀಗ  ಹರ್ಷಿಕಾ ದಂಪತಿಯ ಮದುವೆಗೆ ಗೋಲ್ಡನ್ ಸ್ಟಾರ್ ಗಣೇಶ್, ದೊಡ್ಡಣ್ಣ, ತಬಲಾ ನಾಣಿ, ಮಾಜಿ ಸಿಎಂ ಬಿಎಸ್ ವೈ, ಮುರುಗೇಶ್ ನಿರಾಣಿ, ಪೂಜಾ ಗಾಂಧಿ ಸೇರಿದಂತೆ ಹಲವರು ಭಾಗಿಯಾಗಿ ಶುಭ ಹಾರೈಸಿದ್ದರು.

    ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.

    ಯಾಕೆ ವರ್ಷಗಳು ಎಲ್ಲೂ ನಮ್ಮ ಪ್ರೀತಿ ಬಗ್ಗೆ ಬಾಯ್ಬಿಟ್ಟಿರಲಿಲ್ಲ ಎಂದು ಭುವನ್ ಕ್ಲ್ಯಾರಿಟಿ ನೀಡಿದ್ದಾರೆ. ಇಷ್ಟು ದಿನ ನಮ್ಮ ಮೇಲೆ ಯಾವುದೇ ಕೆಟ್ಟ ಕಣ್ಣು ಬೀಳದೇ ಇರಲಿ ಅಂತಾ ಮದುವೆ ವಿಚಾರ ಹೇಳಿರಲಿಲ್ಲ. ವೃತ್ತಿರಂಗದಲ್ಲಿ ಸೆಟಲ್ ಆಗಬೇಕಾದ ಕಾರಣ, ಇಬ್ಬರು ಸೈಲೆಂಟ್ ಆಗಿ ಇದ್ವಿ. ನಮ್ಮ ಲವ್ ಸ್ಟೋರಿ ಬಗ್ಗೆ ಆತ್ಮೀಯರಿಗೆ ತಿಳಿದಿತ್ತು. ಆದರೆ ಇತ್ತೀಚಿಗೆ ಎಲ್ಲರಿಗೂ ಗೊತ್ತಾಯ್ತು. ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಭುವನ್ ಮಾತನಾಡಿದ್ದರು.

    ನಾನು ಈಗ ಮದುವೆಯಾಗುವ ಐಡಿಯಾದಲ್ಲಿ ಇರಲಿಲ್ಲ. ಪ್ಲ್ಯಾನ್ ಲೇಟ್ ಇತ್ತು. ಆದರೆ ಕುಟುಂಬದವರ ಒತ್ತಾಯದ ಮೇರೆಗೆ ಈಗ ಎರಡು ತಿಂಗಳ ಹಿಂದೆ ಮದುವೆ ಬಗ್ಗೆ ಪ್ಲ್ಯಾನ್ ಮಾಡಿದ್ವಿ ಎಂದು ಇತ್ತೀಚಿಹೆ ಈ ನವಜೋಡಿ ಲವ್, ಮದುವೆ ಬಗ್ಗೆ ಬಾಯ್ಬಿಟ್ಟಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಹರ್ಷಿಕಾ ಪೂಣಚ್ಚ- ಭುವನ್

    ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಹರ್ಷಿಕಾ ಪೂಣಚ್ಚ- ಭುವನ್

    ಲವು ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಲು ಹರ್ಷಿಕಾ ಪೂಣಚ್ಚ- ಭುವನ್ (Bhuvan) ಸಜ್ಜಾಗಿದ್ದಾರೆ. ಕೊಡಗಿನ (Coorg) ವಿರಾಜ್‌ಪೇಟೆಯ ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ (Wedding) ನಡೆಯಲಿದೆ. ಇಂದು (ಆಗಸ್ಟ್ 24) ಬೆಳಿಗ್ಗೆ 10:30ಕ್ಕೆ ಹರ್ಷಿಕಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇದನ್ನೂ ಓದಿ:ಚಂದ್ರನನ್ನು ಮುಟ್ಟಿದ ಭಾರತ- ಇಸ್ರೋ ಸಾಧನೆಗೆ ಭೇಷ್‌ ಎಂದ ಸ್ಟಾರ್ಸ್

    ಆಗಸ್ಟ್ 23ರಂದು ವಿರಾಜ್‌ಪೇಟೆಯಲ್ಲಿ ಊರ್ಕುಡುವ ಶಾಸ್ತ್ರ ಅದ್ದೂರಿಯಾಗಿ ನಡೆದಿದೆ. ಜೈ ಜಗದೀಶ್ ದಂಪತಿ, ಅನುಪ್ರಭಾಕರ್ ದಂಪತಿ ಸೇರಿದಂತೆ ಹಲವು ಹರ್ಷಿಕಾ ಮದುವೆ ಸಂಭ್ರಮದಲ್ಲಿ ಭಾಗಿಯಾದರು. ಇದೀಗ ಹರ್ಷಿಕಾ- ಭುವನ್ ಹೊಸ ಬಾಳಿಗೆ ಕಾಲಿಡಲು ಕ್ಷಣಗಣನೆ ಶುರುವಾಗಿದೆ.

    ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ (Harshika Ponacha) ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.

    ಯಾಕೆ ವರ್ಷಗಳು ಎಲ್ಲೂ ನಮ್ಮ ಪ್ರೀತಿ ಬಗ್ಗೆ ಬಾಯ್ಬಿಟ್ಟಿರಲಿಲ್ಲ ಎಂದು ಭುವನ್ ಕ್ಲ್ಯಾರಿಟಿ ನೀಡಿದ್ದಾರೆ. ಇಷ್ಟು ದಿನ ನಮ್ಮ ಮೇಲೆ ಯಾವುದೇ ಕೆಟ್ಟ ಕಣ್ಣು ಬೀಳದೇ ಇರಲಿ ಅಂತಾ ಮದುವೆ ವಿಚಾರ ಹೇಳಿರಲಿಲ್ಲ. ವೃತ್ತಿರಂಗದಲ್ಲಿ ಸೆಟಲ್ ಆಗಬೇಕಾದ ಕಾರಣ, ಇಬ್ಬರು ಸೈಲೆಂಟ್ ಆಗಿ ಇದ್ವಿ. ನಮ್ಮ ಲವ್ ಸ್ಟೋರಿ ಬಗ್ಗೆ ಆತ್ಮೀಯರಿಗೆ ತಿಳಿದಿತ್ತು. ಆದರೆ ಇತ್ತೀಚಿಗೆ ಎಲ್ಲರಿಗೂ ಗೊತ್ತಾಯ್ತು. ಪ್ರೀತಿ ಮತ್ತು ಗೆಳೆತನ ಅನ್ನೋದಕ್ಕಿಂತ ಹೆಣ್ಣು ಮತ್ತು ಗಂಡಿನ ನಡುವೆ ಎಷ್ಟರ ಮಟ್ಟಿಗೆ ಹೊಂದಾಣಿಕೆ ಇದೆ ಅನ್ನೋದು ಮುಖ್ಯವಾಗುತ್ತೆ ಎಂದು ಭುವನ್ ಹೇಳಿದ್ದಾರೆ.

    ನಾನು ಈಗ ಮದುವೆಯಾಗುವ ಐಡಿಯಾದಲ್ಲಿ ಇರಲಿಲ್ಲ. ಪ್ಲ್ಯಾನ್ ಲೇಟ್ ಇತ್ತು. ಆದರೆ ಕುಟುಂಬದವರ ಒತ್ತಾಯದ ಮೇರೆಗೆ ಈಗ ಎರಡು ತಿಂಗಳ ಹಿಂದೆ ಮದುವೆ ಬಗ್ಗೆ ಪ್ಲ್ಯಾನ್ ಮಾಡಿದ್ವಿ. ಮುಂದಿನ ನಮ್ಮಿಬ್ಬರ ಕೊಡವ ಶೈಲಿಯಲ್ಲಿ ಮದುವೆ ಎಂದು ಖುಷಿಯಿಂದ ಭುವನ್ ಮಾತನಾಡಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಿಂಕ್ ಬಣ್ಣದ ಸೀರೆಯುಟ್ಟು ಮಿಂಚಿದ ಮದುಮಗಳು ಹರ್ಷಿಕಾ

    ಪಿಂಕ್ ಬಣ್ಣದ ಸೀರೆಯುಟ್ಟು ಮಿಂಚಿದ ಮದುಮಗಳು ಹರ್ಷಿಕಾ

    ಸ್ಯಾಂಡಲ್‌ವುಡ್ (Sandalwood) ಚಿಟ್ಟೆ ಹರ್ಷಿಕಾ ಪೂಣಚ್ಚ(Harshika Ponacha)- ಭುವನ್ (Bhuvan) ಆಗಸ್ಟ್‌ 24ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಮದುವೆ ಹಿಂದಿನ ದಿನದ (ಆಗಸ್ಟ್‌ 23) ಊರ್ಕುಡುವ ಶಾಸ್ತ್ರದಲ್ಲಿ ಮದುಮಗಳು ಹರ್ಷಿಕಾ ಮಿಂಚಿದ್ದಾರೆ.

    12 ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಲು ಸಜ್ಜಾಗಿದ್ದಾರೆ. ಕೊಡಗಿನ (Coorg) ವಿರಾಜ್‌ಪೇಟೆಯಲ್ಲಿ ಊರ್ಕುಡುವ ಶಾಸ್ತ್ರವಿದೆ. ನವ ಜೋಡಿಯ ಜೊತೆ ಕೊಡವ ಶೈಲಿಯಲ್ಲಿ ಅದ್ದೂರಿ ಡ್ಯಾನ್ಸ್ ಕೂಡ ಇರಲಿದೆ. ಇದೀಗ ಈ ಶಾಸ್ತ್ರಕ್ಕೆ ನಟಿ ಹರ್ಷಿಕಾ ಪಿಂಕ್ ಕಲರ್ ಸೀರೆಯುಟ್ಟು ಮುದ್ದಾಗಿ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಚಂದ್ರಯಾನ-3 ಲ್ಯಾಂಡಿಂಗ್‌ಗೆ ಶುಭಕೋರಿದ ಸ್ಯಾಂಡಲ್‌ವುಡ್ ಸ್ಟಾರ್ಸ್

    ಫ್ಯಾಶನ್ ಶೋವೊಂದರಲ್ಲಿ ಭುವನ್- ಹರ್ಷಿಕಾ ಭೇಟಿಯಾಗಿದ್ದು, ಆ ಪರಿಚಯವೇ ಪ್ರೀತಿಗೆ ತಿರುಗಿತ್ತು. ಭುವನ್, ಹರ್ಷಿಕಾಗೆ ಮೊದಲು ಪ್ರಪೋಸ್ ಮಾಡಿ ಒಂದೇ ದಿನದಲ್ಲಿ ಉತ್ತರ ಹೇಳಬೇಕು ಅಂತಾ ಟೈಂ ಫಿಕ್ಸ್ ಮಾಡಿದ್ರಂತೆ. ಫಸ್ಟ್ ಇಂಪ್ರೆಶನ್‌ನಲ್ಲೇ ಭುವನ್ ಇಷ್ಟವಾದ ಕಾರಣ ಒಂದೇ ದಿನದಲ್ಲಿ ಭುವನ್ ಪ್ರಪೋಸಲ್‌ಗೆ ಹರ್ಷಿಕಾ ಸಮ್ಮತಿ ನೀಡಿದ್ರಂತೆ. ಕುಟುಂಬದವರಿಗೂ ಕೂಡ ಭುವನ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದ್ದ ಕಾರಣ ಪ್ರೀತಿಗೆ ಗ್ರೀನ್ ಸಿಗ್ನಲ್ ನೀಡಿದ್ರಂತೆ ಎಂದು ಹರ್ಷಿಕಾ ಹೇಳಿದ್ದಾರೆ.

    ಕೊಡವ ಸಂಪ್ರದಾಯದಂತೆ ಹರ್ಷಿಕಾ-ಭುವನ್ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದಾರೆ. ಆಗಸ್ಟ್ 23- 24ರಂದು ಕೊಡಗಿನ ವಿರಾಜ್‌ಪೇಟೆಯಲ್ಲಿ ಹರ್ಷಿಕಾ-ಭುವನ್ ಅದ್ದೂರಿ ಮದುವೆ ನಡೆಯಲಿದೆ. ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ನಡೆಯಲಿದೆ. ರಾಜಕೀಯ- ಚಿತ್ರರಂಗದ ಗಣ್ಯರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭುವನ್-ಹರ್ಷಿಕಾ ಮದುವೆ: ಗಣ್ಯರಿಗೆ ಆಮಂತ್ರಣ

    ಭುವನ್-ಹರ್ಷಿಕಾ ಮದುವೆ: ಗಣ್ಯರಿಗೆ ಆಮಂತ್ರಣ

    ಲವು ವರ್ಷಗಳಿಂದ ಸ್ನೇಹಿತರಾಗಿದ್ದ ನಟ ಭುವನ್ (Bhuvan) ಹಾಗೂ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ. ಸಹವಾಜವಾಗಿಯೇ ಅಭಿಮಾನಿಗಳಿಗೆ ಸಂಭ್ರಮ ತಂದಿದೆ. ಈಗಾಗಲೇ ಬ್ಯಾಚುಲರ್ ಪಾರ್ಟಿ ಮುಗಿಸಿಕೊಂಡು ಬಂದಿರುವ ಈ ಜೋಡಿ, ಇದೀಗ ತಮ್ಮ ಮದುವೆಗೆ ಗಣ್ಯರನ್ನು ಆಹ್ವಾನಿಸುತ್ತಿದೆ.

    ಆಗಸ್ಟ್ 24ರಂದು ವಿರಾಜಪೇಟೆಯಲ್ಲಿ (Virajpet) ಅದ್ದೂರಿಯಾಗಿ ವಿವಾಹ ಮಹೋತ್ಸವ ನಡೆಯಲಿದ್ದು, ಸಾಕಷ್ಟು ಸಿದ್ದತೆಗಳನ್ನು ಮಾಡಲಾಗುತ್ತಿದೆ. ಕೊಡವ (Kodava) ಶೈಲಿಯಲ್ಲಿ ಭುವನ್ ಹಾಗೂ ಹರ್ಷಿಕಾ ಮದುವೆಯಾಗುತ್ತಿದ್ದು (Marriage), ಅದಕ್ಕಾಗಿ ವಿರಾಜಪೇಟೆಯ ‘ಅಮ್ಮತಿ ಕೊಡವ ಸಮಾಜ’ ಸಿಂಗಾರಗೊಳ್ಳಲಿದೆ.

    ಈಗಾಗಲೇ ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ನೀಡಿರುವ ಜೋಡಿ,  ಸಿಎಂ ಸಿದ್ದರಾಮಯ್ಯ,  ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ಗಣ್ಯರನ್ನು ಮದುವೆಗೆ ಈ ಜೋಡಿ ಆಹ್ವಾನಿಸಿದೆ. ಇದನ್ನೂ ಓದಿ:ಫೋನ್ ಸ್ವಿಚ್ ಆಫ್ ಮಾಡಿಕೊಂಡ ನಟ: ಉಪೇಂದ್ರಗಾಗಿ ಪೊಲೀಸರಿಂದ ತೀವ್ರ ಶೋಧ

    ಸಿನಿಮಾ ತಾರೆಯರಾದ ಶಿವರಾಜ್ ಕುಮಾರ್, ರವಿಚಂದ್ರನ್, ಗಣೇಶ್ , ದೊಡ್ಡಣ್ಣ, ಶ್ರೀನಾಥ್  ಜಯಮಾಲ, ಸುಧಾರಾಣಿ, ತಾರಾ, ಮಾಲಾಶ್ರೀ, ಅನುಪ್ರಭಾಕರ್,  ಅಮೂಲ್ಯ, ದಿಗಂತ್, ಅಶ್ವಿನಿ ಪುನೀತ್ ರಾಜ್ ಕುಮಾರ್ , ರಾಘವೇಂದ್ರ ರಾಜ್ ಕುಮಾರ್, ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ, ದುನಿಯಾ ವಿಜಯ್ ಸೇರಿದಂತೆ ಅನೇಕ ಗಣ್ಯರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದ್ದಾರೆ ಭುವನ್ ಮತ್ತು ಹರ್ಷಿಕಾ.

     

    ಇಬ್ಬರೂ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದಾರೆ ಮತ್ತು ರಾಜಕೀಯ ಗಣ್ಯರ ಜೊತೆಯೇ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹಾಗಾಗಿ ಎರಡೂ ಕ್ಷೇತ್ರಗಳಿಂದಲೇ ಅನೇಕ ಗಣ್ಯರು ಮದುವೆಗೆ ಬರುವ ಸಾಧ್ಯತೆಯಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇದೇ ಆಗಸ್ಟ್ 24ಕ್ಕೆ ಕೊಡವ ಪದ್ಧತಿಯಂತೆ ಹರ್ಷಿಕಾ- ಭುವನ್ ಮದುವೆ

    ಇದೇ ಆಗಸ್ಟ್ 24ಕ್ಕೆ ಕೊಡವ ಪದ್ಧತಿಯಂತೆ ಹರ್ಷಿಕಾ- ಭುವನ್ ಮದುವೆ

    ಸ್ಯಾಂಡಲ್‌ವುಡ್ (Sandalwood) ಚಿಟ್ಟೆ ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ (Bhuvan Ponnanna) ಅವರು ಇದೇ ಆಗಸ್ಟ್ 24ರಂದು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಹಲವು ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಲು ರೆಡಿಯಾಗಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಕೊಡಗಿನ ಜೋಡಿ ಗುಡ್ ನ್ಯೂಸ್ ಕೊಡ್ತಿದ್ದಾರೆ.

    harshika-poonacha-101391458

    ಚಿತ್ರರಂಗದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಒಬ್ಬರ ಹಿಂದೆ ಮತ್ತೊಂದು ಜೋಡಿ ಹಸೆಮಣೆ ಏರುತ್ತಿದ್ದಾರೆ. ಹರಿಪ್ರಿಯಾ-ವಸಿಷ್ಠ, ಅಭಿಷೇಕ್ ಅಂಬರೀಶ್- ಅವಿವಾ ಜೋಡಿ ನಂತರ ಹರ್ಷಿಕಾ-ಭುವನ್ ದಾಂಪತ್ಯ ಬದುಕಿಗೆ ಅಣಿಯಾಗುತ್ತಿದ್ದಾರೆ.

    ‘ಪಿಯುಸಿ’ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಪರಿಚಿತರಾದ ನಟಿ ಹರ್ಷಿಕಾ ಪೂಣಚ್ಚ (Harshika Poonachcha) ಕನ್ನಡದ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದರು. ತಮಸ್ಸು, ಜಾಕಿ ಚಿತ್ರದಲ್ಲಿ ಹರ್ಷಿಕಾ ಅದ್ಭುತವಾಗಿ ನಟಿಸಿದ್ದರು. ಕೊಡಗಿನ ಕುವರಿ ಹರ್ಷಿಕಾ ಅವರು ಸಾಲು ಸಾಲು ಸಿನಿಮಾಗಳ ಮೂಲಕ ಚಿತ್ರರಂಗದಲ್ಲಿ ಗಟ್ಟಿ ಸ್ಥಾನ ಗಿಟ್ಟಿಸಿಕೊಳ್ಳುವ ಸಂದರ್ಭದಲ್ಲಿ 2010ರಲ್ಲಿ ಭುವನ್ ಪೊನ್ನಣ್ಣ ಅವರು `ಜಸ್ಟ್ ಮಾತ್ ಮಾತಲ್ಲಿ’ ಚಿತ್ರದ ಮೂಲಕ ಎಂಟ್ರಿ ಕೊಟ್ಟರು. ಗಣೇಶ್ ನಟನೆಯ ಕೂಲ್ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ಭುವನ್ ನಟಿಸಿದ್ರು. ಆದರೆ ಗುರುತಿಸುವಂತಹ ಪಾತ್ರ ಅವರಿಗೆ ಸಿಗಲೇ ಇಲ್ಲಾ. ಅದ್ಯಾವಾಗ ಸುದೀಪ್ ನಿರೂಪಣೆಯ ಬಿಗ್ ಬಾಸ್ ಶೋ ಮೂಲಕ ದೊಡ್ಮನೆಗೆ ಕಾಲಿಟ್ರೋ ಅಂದಿನಿಂದ ಕನ್ನಡಿಗರ ಕಣ್ಣಿಗೆ ಭುವನ್ ಗಮನ ಸೆಳೆದರು. ಇದನ್ನೂ ಓದಿ:ಮಗಳೊಂದಿಗಿನ ಕ್ಯೂಟ್ ಸೆಲ್ಫಿ ಹಂಚಿಕೊಂಡ ರಾಧಿಕಾ ಪಂಡಿತ್

    ಹರ್ಷಿಕಾ- ಭುವನ್ ಒಂದೇ ಜಿಲ್ಲೆ ಕೊಡಗಿನವರಾಗಿದ್ದಾರೆ. ಆ ಆಪ್ತತೆಯೇ ಇಬ್ಬರನ್ನು ಲವ್ ರಿಂಗ್‌ಗೆ ಬೀಳುವಂತೆ ಮಾಡಿತ್ತು. ಹಲವು ವರ್ಷಗಳ ಗೆಳೆತನವೇ ಇಂದು ಮದುವೆಯೆಂಬ ಹೊಸ ಹೆಜ್ಜೆ ಇಡಲು ಸಾಕ್ಷಿಯಾಗಿದೆ. ಈ ಜೋಡಿ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇಬ್ಬರೂ ಜೊತೆಯಾಗಿ ಸಮಾಜಮುಖಿ ಕಾರ್ಯಗಳನ್ನೂ ಮಾಡಿದ್ದಾರೆ. ಕೊವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಅನೇಕರಿಗೆ ಅವರು ನೆರವು ನೀಡಿದ್ದರು. ಇಬ್ಬರ ನಡುವೆ ಪ್ರೀತಿ ಇದೆ ಎಂದು ಅನೇಕ ಬಾರಿ ಗಾಸಿಪ್ ಹಬ್ಬಿತ್ತು. ಆದರೆ ಆ ಕುರಿತು ಅವರು ಬಹಿರಂಗವಾಗಿ ಏನನ್ನೂ ಹೇಳಿಕೊಂಡಿರಲಿಲ್ಲ. ಈಗ ಅವರಿಬ್ಬರು ವೈವಾಹಿಕ ಜೀವನ ಆರಂಭಿಸುವ ಸಿದ್ಧತೆಯಲಿದ್ದಾರೆ. ಎರಡೂ ಕುಟುಂಬಗಳು ಮದುವೆಗೆ ತಯಾರಿ ಮಾಡಿಕೊಳ್ಳುತ್ತಿವೆ. ಇದನ್ನೂ ಓದಿ:ಮಗಳೊಂದಿಗಿನ ಕ್ಯೂಟ್ ಸೆಲ್ಫಿ ಹಂಚಿಕೊಂಡ ರಾಧಿಕಾ ಪಂಡಿತ್

    ಜುಲೈ 15ಕ್ಕೆ ಕೊಡಗಿನಲ್ಲಿ ಭುವನ್ ಮನೆಯ ಗೃಹಪ್ರವೇಶ ಸಮಾರಂಭ ನಡೆದಿದೆ. ಇದಾದ ಬಳಿಕ ಕೊಡವ (Kodava) ಸಂಪ್ರದಾಯದಂತೆ ಹರ್ಷಿಕಾ-ಭುವನ್ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದಾರೆ. ಆಗಸ್ಟ್ 23- 24ರಂದು ವಿರಾಜ್‌ಪೇಟೆಯಲ್ಲಿ ಹರ್ಷಿಕಾ-ಭುವನ್ ಅದ್ದೂರಿ ಮದುವೆ (Wedding) ನಡೆಯಲಿದೆ. ಅಮ್ಮತ್ತಿ ಕೊಡವ ಸಮಾಜದಲ್ಲಿ ಮದುವೆ ನಡೆಯಲಿದೆ. ರಾಜಕೀಯ- ಚಿತ್ರರಂಗದ ಗಣ್ಯರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ. ಸದ್ಯ ಈ ಜೋಡಿ, ಆಪ್ತರಿಗೆ ಮದುವೆ ಆಮಂತ್ರಣ ಪತ್ರಿಕೆ ಕೊಡೋದ್ರಲ್ಲಿ ಬ್ಯುಸಿಯಾಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೊಡವರ ಶಸ್ತ್ರಾಸ್ತ್ರ ಹಕ್ಕು ಉಲ್ಲೇಖ, ವಿಶ್ವಾದ್ಯಂತ ಮಾನ್ಯತೆ ಇರೋ ಹಿಜಬ್‌ಗೆ ಕರ್ನಾಟಕದಲ್ಲಿ ಅನುಮತಿ ಯಾಕಿಲ್ಲ: ಸುಪ್ರೀಂನಲ್ಲಿ ವಕೀಲರ ಪ್ರಶ್ನೆ

    ಕೊಡವರ ಶಸ್ತ್ರಾಸ್ತ್ರ ಹಕ್ಕು ಉಲ್ಲೇಖ, ವಿಶ್ವಾದ್ಯಂತ ಮಾನ್ಯತೆ ಇರೋ ಹಿಜಬ್‌ಗೆ ಕರ್ನಾಟಕದಲ್ಲಿ ಅನುಮತಿ ಯಾಕಿಲ್ಲ: ಸುಪ್ರೀಂನಲ್ಲಿ ವಕೀಲರ ಪ್ರಶ್ನೆ

    ನವದೆಹಲಿ:ವಿಶ್ವಾದ್ಯಂತ ಹಿಜಬ್‌ಗೆ(Hijab) ಮಾನ್ಯತೆ ಇದೆ, ಕರ್ನಾಟಕದಲ್ಲಿ(Karnataka) ಯಾಕಿಲ್ಲ? ಹಿಜಬ್ ನಿರ್ಬಂಧಿಸುವುದು ಎಷ್ಟು ಸರಿ ಎಂದು ಹಿಜಬ್‌ ಪರ ವಕೀಲರು ಪ್ರಶ್ನಿಸಿದ್ದಾರೆ.

    ಶಾಲೆ ಮತ್ತು ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್(High Court) ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್(Supreme Court) ವಿಚಾರಣೆಗೆ ನಡೆಸುತ್ತಿದೆ. ಕಳೆದ ಐದು ದಿನಗಳಿಂದ ನ್ಯಾ. ಹೇಮಂತ್ ಗುಪ್ತಾ ನೇತೃತ್ವದ ಪೀಠ ವಿಚಾರಣೆ ನಡೆಸುತ್ತಿದೆ.

    ಇಂದು ಮೂವರು ವಕೀಲರು ಹಿಜಬ್ ಪರವಾಗಿ ವಾದ ಮಂಡಿಸಿದ್ದಾರೆ. ಮೊದಲು ವಾದ ಆರಂಭಿಸಿದ ಹಿರಿಯ ವಕೀಲ ಆದಿತ್ಯ ಸೋಂಧಿ, ಪ್ರಕರಣ ಬಹಳ ಗಂಭೀರವಾಗಿದೆ. ಸಾಮಾಜಿಕ – ಆರ್ಥಿಕ ಮಾನದಂಡಗಳು ಮತ್ತು ವಿದ್ಯಾರ್ಥಿಗಳು ಹಿನ್ನೆಲೆಯನ್ನು ಇಲ್ಲಿ ಪರಿಗಣಿಸಬೇಕಾಗಿದೆ. ನಾನು ಓದುತ್ತಿದ್ದ ಕಾಲೇಜಿನಲ್ಲಿ ಹಿಜಬ್ ಧರಿಸದ ಮುಸ್ಲಿಂ ಸಹಪಾಠಿಗಳು ಇದ್ದರು. ಹಿಜಬ್ ಎನ್ನುವುದು ಒಂದು ಆಯ್ಕೆಯಾಗಿದ್ದು ಅದಕ್ಕೆ ಅನುಮತಿ ನೀಡಬೇಕಿದೆ.‌ ‌ಕೊಡವರಿಗೆ(Kodava) ಶಸ್ತ್ರಾಸ್ತ್ರಗಳನ್ನು(Arms) ಹೊಂದುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿಗೆ ಈ ತೀರ್ಪು ನೀಡಿದೆ. ಧಾರ್ಮಿಕ ಹೋರಾಟ ಅಥವಾ ಸಾಂಸ್ಕೃತಿಕ ಹಕ್ಕಿನ ನಡುವಿನ ಇರುವುದು ತೆಳುವಾದ ಗೆರೆ ಮಾತ್ರ. ಇವುಗಳನ್ನು ಪ್ರತ್ಯೇಕಿಸುವುದು ಕಷ್ಟ. ಸಾರ್ವಜನಿಕ ಸುವ್ಯವಸ್ಥೆಗಾಗಿ ಹಿಜಬ್ ನಿಷೇಧಿಸಿ ಸರ್ಕಾರ ಆದೇಶ ಮಾಡಿದೆ. ಶಾಲೆಗಳಿಗೆ ಸಮವಸ್ತ್ರ ನಿರ್ಧರಿಸುವ ಅಧಿಕಾರ ನೀಡಿದೆ. ಹಿಜಬ್ ನಿಂದ ಯಾವ ಸುವ್ಯವಸ್ಥೆ ಹಾಳಾಗುತ್ತದೆ? ಹುಡುಗಿಯರು ಹಿಜಬ್ ಧರಿಸುವುದು ಸಾಮಾನ್ಯ ಎಂದರು. ಇದನ್ನೂ ಓದಿ: 200 ಕೋಟಿ ಮೌಲ್ಯದ ಡ್ರಗ್ಸ್‌ ಸಾಗಿಸುತ್ತಿದ್ದ ಪಾಕಿಸ್ತಾನಿ ಹಡಗು ಗುಜರಾತ್‌ನಲ್ಲಿ ವಶ

    ಬಳಿಕ ವಾದ‌ ಮಂಡಿಸಿದ ಹಿರಿಯ ವಕೀಲ ರಾಜೀವ್ ಧವನ್(Rajeev Dhavan), ಉಡುಗೆ ತೊಡುಗೆಯ ಹಕ್ಕು ವಾಕ್ ಸ್ವಾತಂತ್ರ್ಯದ ಭಾಗವಾಗಿದೆ. ಇದು ಸಾರ್ವಜನಿಕ ಆದೇಶಕ್ಕೆ ಮಾತ್ರ ಒಳಪಟ್ಟಿರುತ್ತದೆ. ಈಗಾಗಲೇ ಉಲ್ಲೇಖಿಸಿರುವ ಪುಟ್ಟಸ್ವಾಮಿ ಮತ್ತು ನಲ್ಸಾ ಪ್ರಕರಣಗಳ ಆದೇಶದಂತೆ ಖಾಸಗಿತನ ಹಕ್ಕಾಗಿದೆ. ಹಿಜಬ್ ಧರಿಸಿದ ವ್ಯಕ್ತಿಯನ್ನು ಧರ್ಮ ಮತ್ತು ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡಲಾಗುವುದಿಲ್ಲ ಎಂದು ವಾದಿಸಿದರು.

    ಈ ಪ್ರಕರಣವನ್ನು ಅದರ ಸರಿಯಾದ ದೃಷ್ಟಿಕೋನದಲ್ಲಿ ವಿಚಾರಣೆ ನಡೆಸಬೇಕು. ಇಂದು ಬಹುಸಂಖ್ಯಾತ ಸಮುದಾಯದಲ್ಲಿ ಇಸ್ಲಾಂ ಎಂದು ಬಂದಿದ್ದನ್ನು ಹೊಡೆದುರುಳಿಸುವ ಅತೃಪ್ತಿ ಬಹಳಷ್ಟಿದೆ. ನನ್ನ ಅರ್ಜಿದಾರರು ಕಾಲೇಜಿನಲ್ಲಿದ್ದು ಹಿಜಬ್ ಧರಿಸಿಯೇ ಕರಾಟೆ ಸ್ಪರ್ಧೆಯಲ್ಲಿ ಸಾಧನೆ ಮಾಡಿದ್ದಾಳೆ. ಪ್ರಪಂಚದಾದ್ಯಂತ ಹಿಜಬ್ ಅನ್ನು ಮಾನ್ಯವೆಂದು ಗುರುತಿಸಲಾಗಿದೆ. ಇದು ಲಿಂಗ ಮತ್ತು ಧಾರ್ಮಿಕ ಹಕ್ಕುಗಳನ್ನು ನಿರ್ಧರಿಸುವ ವಿಷಯವಾಗಿದೆ ಎಂದು ಕೋರ್ಟ್‌ಗೆ ತಿಳಿಸಿದರು.

    HIJAB

    ಕೇಂದ್ರಿಯ ವಿದ್ಯಾಲಯಗಳಲ್ಲಿ ಹಿಜಬ್‌ಗೆ ಅನುಮತಿ ಇದೆ. ಅದು ಕೇಂದ್ರಿಯ ವಿದ್ಯಾಲಯಕ್ಕೆ ಸಂಬಂಧಿಸಿದ ನಿರ್ಧಾರ ಎಂದು ಅವರು ಹೇಳುತ್ತಾರೆ. ಧರ್ಮ ಮತ್ತು ಅದರ ಆಚರಣೆಗಳನ್ನು ಅಗತ್ಯ ಭಾಗಗಳಲ್ಲ ಎಂದು ಹೇಳುವ ಅಧಿಕಾರ ಹೊರಗಿನವರಿಗಿಲ್ಲ. ಅಂತವುಗಳನ್ನು ನಿಷೇಧಿಸಲು ಜಾತ್ಯಾತೀತ ಸರ್ಕಾರ ಮುಕ್ತವಾಗಿಲ್ಲ. ಲಕ್ಷಾಂತರ ಮಹಿಳೆಯರು ಸ್ಕಾರ್ಫ್ ಧರಿಸುತ್ತಿದ್ದಾರೆ. ಸಾರ್ವಜನಿಕ ಸುವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಹೇಳಲು ಏನು ಸಮರ್ಥನೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸ್ಕೂಲ್ ಬಸ್ಸಿನೊಳಗೆ ಉಸಿರುಗಟ್ಟಿ ಬಾಲಕಿ ಸಾವು ಪ್ರಕರಣ- ಶಾಲೆ ಮುಚ್ಚಲು ಆದೇಶ

    ಸಮವಸ್ತ್ರ ನಿಯಮ ರೂಪಿಸುವಾಗ ಬುರ್ಖಾಗೆ ಅವಕಾಶ ನೀಡುವುದಿಲ್ಲ ಎಂದು ಹೇಳಬಹುದು. ಹಿಜಬ್ ನಿರ್ಬಂಧಿಸುವುದು ಎಷ್ಟು ಸರಿ? ಸಮವಸ್ತ್ರ ಬಣ್ಣದೇ ಹಿಜಬ್ ಧರಿಸಲಾಗುತ್ತಿದೆ ಎಂದು ವಾದ ಮಂಡಿಸಿದರು.

    ಕೊಡವರಿಗೆ ವಿಶೇಷ ವಿನಾಯಿತಿ ಯಾಕೆ?
    ಕೊಡಗಿನ ಜನರ ವಿಶಿಷ್ಟ ಸಂಸ್ಕೃತಿಯ ಭಾಗ ಕೋವಿ. ಯೋಧ ಪರಂಪರೆಯ ಜನಾಂಗ ಕೊಡವರಿಗೆ ಕೋವಿ ಬಳಸಲು ವಿಶೇಷ ವಿನಾಯಿತಿಯ ಅನುಮತಿಯಿದೆ. ಇಂಡಿಯನ್ ಆರ್ಮ್ಸ್ ಆಕ್ಟ್ ಸೆಕ್ಷನ್ ಮೂರರ ಪ್ರಕಾರ ಯಾರಿಗೂ ಇಲ್ಲದ ಅನುಮತಿ ಕೊಡವರಿಗೆ ಇದೆ. ಕೊಡಗಿನ ಜನರ ಹಬ್ಬ ಹರಿದಿನ. ಹುಟ್ಟು, ಸಾವು ಎಲ್ಲದರಲ್ಲಿಯೂ ಕೋವಿಯ ಮಹತ್ವವಿದೆ. ಬಂದೂಕು ಕೊಡವರಿಗೆ ಕೇವಲ ಒಂದು ಅಯುಧವಲ್ಲ, ಇದು ಇಲ್ಲಿನ ಜನರ ಧಾರ್ಮಿಕ ಸಂಕೇತ ಕೊಡವರಲ್ಲಿ ಕೋವಿಗೆ ಪೂಜ್ಯಭಾವನೆಯಿದೆ, ಪವಿತ್ರ ಸ್ಥಾನವಿದೆ.

    ಸಮರ ಸಮುದಾಯವಾಗಿರುವ ಕೊಡವ ಸಮುದಾಯವು ಸ್ವಾತಂತ್ರ್ಯ ಪೂರ್ವದಿಂದಲೂ ಜುಮ್ಮಾ ಹಿಡುವಳಿದಾರರು, ಅಂದಿನಿಂದ ಅವರು ಈ ವಿನಾಯಿತಿಯ ಲಾಭವನ್ನು ಪಡೆಯುತ್ತಿದ್ದಾರೆ. ಹೀಗಾಗಿ ಈಗಲೂ ಅವರಿಗೆ ಅನಿರ್ದಿಷ್ಟ ಅವಧಿಗೆ ವಿನಾಯಿತಿ ನೀಡಲಾಗಿದೆ. ಈ ವಿನಾಯಿತಿ ಕೆಲವು ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತದೆ. ಆದ್ದರಿಂದ, ಅಧಿಸೂಚನೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯಲಾಗಿದೆ ಎಂದು ಈ ಹಿಂದೆ ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಪರವಾನಗಿ ಇಲ್ಲದೆ ಬಂದೂಕುಗಳನ್ನು ಹೊಂದಲು ಕೊಡವರಿಗೆ ಅವಕಾಶ- ರಾಜ್ಯಕ್ಕೆ  ಸುಪ್ರೀಂ ನೋಟಿಸ್‌

    ಪರವಾನಗಿ ಇಲ್ಲದೆ ಬಂದೂಕುಗಳನ್ನು ಹೊಂದಲು ಕೊಡವರಿಗೆ ಅವಕಾಶ- ರಾಜ್ಯಕ್ಕೆ ಸುಪ್ರೀಂ ನೋಟಿಸ್‌

    ನವದೆಹಲಿ: ಪರವಾನಗಿ ಇಲ್ಲದೆ ಬಂದೂಕುಗಳನ್ನು ಹೊಂದಲು ಮತ್ತು ಸಾಗಿಸಲು ಕೊಡವ ಸಮುದಾಯದವರಿಗೆ ನೀಡಿದ ಅವಕಾಶವನ್ನು ಪ್ರಶ್ನೆ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾ. ಎನ್.ವಿ. ರಮಣ ನೇತೃತ್ವದ ತ್ರಿಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

    ಕೊಡವರಿಗೆ ನೀಡಿದ ಅನುಮತಿ ಸಾಂವಿಧಾನಿಕ ಸಿಂಧುತ್ವ ಹೊಂದಿದೆ. ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ನಿವೃತ್ತ ಕ್ಯಾಪ್ಟನ್ ಚೇತನ ವೈ.ಕೆ. ಎನ್ನುವರು ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿ ಈ ಸಂಬಂಧ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.

    ಜಾತಿ, ಜನಾಂಗದ ಪೂರ್ವಿಕರ ಭೂ ಒಡೆತನದ ಮೇಲೆ ತಾರತಮ್ಯ ಮಾಡಲಾಗುತ್ತಿದೆ. ಇದು ಸಂವಿಧಾನದ 14, 15 ಮತ್ತು 21ನೇ ವಿಧಿಗಳನ್ನು ಉಲ್ಲಂಘಿಸುತ್ತದೆ. ಶಸ್ತ್ರಾಸ್ತ್ರ ಕಾಯಿದೆಯ ಸೆಕ್ಷನ್ 41ರ ಪ್ರಕಾರ, ಸಾರ್ವಜನಿಕ ಹಿತಾಸಕ್ತಿಯಿಂದ ಮಾತ್ರ ಶಸ್ತ್ರಾಸ್ತ್ರ ಪರವಾನಗಿ ಪಡೆಯುವುದರಿಂದ ವಿನಾಯಿತಿ ನೀಡಬಹುದು. ಆದರೆ, ಕೊಡವ ಸಮುದಾಯಕ್ಕೆ ಅಂತಹ ವಿನಾಯಿತಿ ನೀಡುವ ಕುರಿತು ಅಧಿಸೂಚನೆಯಲ್ಲಿ ಯಾವುದೇ ಕಾರಣವನ್ನು ನೀಡಲಾಗಿಲ್ಲ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಕಾರವಾರ ಬಂದರು ವಿಸ್ತರಣೆ ಕಾಮಗಾರಿ ಮುಂದುವರಿಸಬೇಡಿ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

    ಸಮರ ಸಮುದಾಯವಾಗಿರುವ ಕೊಡವ ಸಮುದಾಯವು ಸ್ವಾತಂತ್ರ್ಯ ಪೂರ್ವದಿಂದಲೂ ಜುಮ್ಮಾ ಹಿಡುವಳಿದಾರರು, ಅಂದಿನಿಂದ ಅವರು ಈ ವಿನಾಯಿತಿಯ ಲಾಭವನ್ನು ಪಡೆಯುತ್ತಿದ್ದಾರೆ. ಹೀಗಾಗಿ ಈಗಲೂ ಅವರಿಗೆ ಅನಿರ್ದಿಷ್ಟ ಅವಧಿಗೆ ವಿನಾಯಿತಿ ನೀಡಲಾಗಿದೆ. ಈ ವಿನಾಯಿತಿ ಕೆಲವು ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತದೆ. ಆದ್ದರಿಂದ, ಅಧಿಸೂಚನೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯಲಾಗಿದೆ ಎಂದು ಈ ಹಿಂದೆ ಹೈಕೋರ್ಟ್ ಆದೇಶದಲ್ಲಿ ತಿಳಿಸಿತ್ತು. ಇದನ್ನೂ ಓದಿ: ನನ್ನ ಮೇಲೆ ಯಾವ ಕೇಸ್ ಇತ್ತು, ಹೆಂಗೆ ನನ್ನ ಜೈಲಿಗೆ ಕಳಿಸಿದ್ರು, ನನ್ನ ಮೇಲೆ ಯಾವ ದಾಖಲೆ ಇದೆ: ಡಿಕೆಶಿ

    ಕೊಡಗಿನ ಜನರ ವಿಶಿಷ್ಟ ಸಂಸ್ಕೃತಿಯ ಭಾಗ ಕೋವಿ. ಯೋಧ ಪರಂಪರೆಯ ಜನಾಂಗ ಕೊಡವರಿಗೆ ಕೋವಿ ಬಳಸಲು ವಿಶೇಷ ವಿನಾಯಿತಿಯ ಅನುಮತಿಯಿದೆ. ಇಂಡಿಯನ್ ಆರ್ಮ್ಸ್ ಆಕ್ಟ್ ಸೆಕ್ಷನ್ ಮೂರರ ಪ್ರಕಾರ ಯಾರಿಗೂ ಇಲ್ಲದ ಅನುಮತಿ ಕೊಡವರಿಗೆ ಇದೆ. ಕೊಡಗಿನ ಜನರ ಹಬ್ಬ ಹರಿದಿನ. ಹುಟ್ಟು, ಸಾವು ಎಲ್ಲದರಲ್ಲಿಯೂ ಕೋವಿಯ ಮಹತ್ವವಿದೆ. ಬಂದೂಕು ಕೊಡವರಿಗೆ ಕೇವಲ ಒಂದು ಅಯುಧವಲ್ಲ, ಇದು ಇಲ್ಲಿನ ಜನರ ಧಾರ್ಮಿಕ ಸಂಕೇತ ಕೊಡವರಲ್ಲಿ ಕೋವಿಗೆ ಪೂಜ್ಯಭಾವನೆಯಿದೆ, ಪವಿತ್ರ ಸ್ಥಾನವಿದೆ.

  • ಸಂಸ್ಕೃತ ಭಾಷೆಯ ಮೇಲಿನ ಮಮತೆಯನ್ನು ತುಳು, ಕೊಡವ ಭಾಷೆಗಳ ಮೇಲೂ ತೋರಿಸಿ: ಬಿ.ಕೆ. ಹರಿಪ್ರಸಾದ್

    ಸಂಸ್ಕೃತ ಭಾಷೆಯ ಮೇಲಿನ ಮಮತೆಯನ್ನು ತುಳು, ಕೊಡವ ಭಾಷೆಗಳ ಮೇಲೂ ತೋರಿಸಿ: ಬಿ.ಕೆ. ಹರಿಪ್ರಸಾದ್

    ಬೆಂಗಳೂರು: ಬಿಜೆಪಿ ಸರ್ಕಾರ ರಾಜ್ಯದ ಕೇವಲ 24,821 ಸಂಸ್ಕೃತ ಭಾಷಿಗರ ಮೇಲೆ ತೋರಿಸುತ್ತಿರುವ ಅಗಾಧ ಮಮತೆಯನ್ನು ನಮ್ಮ ರಾಜ್ಯದಲ್ಲಿ ಮೂಲೆ ಗುಂಪಾಗಿರುವ ತುಳು ಮತ್ತು ಕೊಡವ ಭಾಷೆಗಳ ಮೇಲೆ ತೋರಿಸಲಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ.

    ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, 2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿರುವ ಒಟ್ಟು ತುಳುವರ ಸಂಖ್ಯೆ 18,46,427 ಹಾಗೆಯೇ ಕೊಡವ ಭಾಷೆಯನ್ನಾಡುವವರ ಸಂಖ್ಯೆ 1,13,857. ಆದರೆ, ಸಂಸ್ಕೃತ ಭಾಷೆಯನ್ನು ತಮ್ಮ ಮಾತೃಭಾಷೆಯೆಂದು ದಾಖಲಿಸಿದವರ ಸಂಖ್ಯೆ 24,821 ಮಾತ್ರ. ಇಷ್ಟು ಕಡಿಮೆ ಜನಸಂಖ್ಯೆಯ ಮೇಲೆ ಬಿಜೆಪಿ ಸರ್ಕಾರ ತನ್ನ ಅಗಾಧ ಪ್ರೀತಿಯನ್ನು ತೋರಿಸುತ್ತಾ ಬಂದಿದೆ. ಈಗಾಗಲೇ ರಾಜ್ಯದಲ್ಲಿ ಸಂಸ್ಕೃತ ವಿಶ್ವವಿದ್ಯಾಲಯವಿದೆ. ಅದಕ್ಕೆ ಬೇಕಾದಂತಹ ಎಲ್ಲಾ ಸೌಕರ್ಯಗಳನ್ನು ನೀಡಲಾಗಿದೆ. ಆದರೆ, ನಮ್ಮ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ತುಳು ಮತ್ತು ಕೊಡವ ಭಾಷೆಗಳ ಅಭಿವೃದ್ದಿಯತ್ತ ಮಾತ್ರ ದಿವ್ಯ ನಿರ್ಲಕ್ಷವನ್ನು ತೋರಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ‘ಆಕ್ಟ್ -1978’ ಸಿನಿಮಾ ಪ್ರೇರಣೆ – ಬ್ಯಾಂಕ್ ಮುಂದೆ ಪ್ರತಿಭಟಿಸಿ ನ್ಯಾಯ ಪಡೆದ ಮಹಿಳೆ

    ಭಾಷಾವಾರು ಪ್ರಾಂತ್ಯಗಳ ರಚನೆಯಾದಾಗ ಪ್ರಭಾವಿ ಪ್ರಾದೇಶಿಕ ಭಾಷೆಗಳಿಗೆ ಮಹತ್ವ ಬಂದವು. ಆದರೆ ಈ ಹಂತದಲ್ಲಿ ಪ್ರಾದೇಶಿಕ ಭಾಷೆಗಳ ಆಶ್ರಯದಲ್ಲಿರುವ, ಆದರೆ ಯಾವುದೇ ರಾಜ್ಯದ ಅಧಿಕೃತ ಭಾಷೆಗಳಲ್ಲದ ಸಣ್ಣ ಭಾಷೆಗಳು ತೀವ್ರ ಉಪೇಕ್ಷೆಗೆ ಒಳಗಾಗಿವೆ. ದೇಶದಲ್ಲಿ ಹಲವಾರು ರಾಜ್ಯಗಳು ತಮ್ಮ ಒಂದಕ್ಕೂ ಹೆಚ್ಚು ಭಾಷೆಗಳನ್ನು ಅಧಿಕೃತವಾಗಿ ಘೋಷಿಸಿಕೊಂಡಿವೆ. ಆದರೆ ಕರ್ನಾಟಕ ರಾಜ್ಯ ಕನ್ನಡವನ್ನು ಹೊರತುಪಡಿಸಿ ಬೇರೆ ಭಾಷೆಗಳಿಗೆ ಅಧಿಕೃತ ಸ್ಥಾನ ನೀಡಿಲ್ಲ. ಬಹುಜನರು ದಿನನಿತ್ಯ ಉಪಯೋಗಿಸುವ ಕೊಡವ, ತುಳು ಭಾಷೆಗಳನ್ನು ಕರ್ನಾಟಕದ ಅಧಿಕೃತ ಭಾಷೆಗಳೆಂದು ಮಾನ್ಯ ಮಾಡಬಹುದಾಗಿದೆ. ಮಾನ್ಯ ಮಾಡದೇ ಇರುವುದರಿಂದ ಕೇಂದ್ರ ಸರ್ಕಾರ ಸುಲಭವಾಗಿ ನುಣುಚಿಕೊಳ್ಳುತ್ತಿದೆ. ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಭಾಷೆಗಳಾದ ತುಳು ಮತ್ತು ಕೊಡವ ಭಾಷೆಗಳನ್ನು ರಾಜ್ಯ ಸರ್ಕಾರ ಮೊದಲು ತನ್ನ ಅಧಿಕೃತ ಭಾಷೆಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ

    ಸಂಸ್ಕೃತಕ್ಕೆ ನೀಡುತ್ತಿರುವಷ್ಟೇ ಮಹತ್ವವನ್ನು ನಮ್ಮ ಕನ್ನಡ, ತುಳು ಹಾಗೂ ಕೊಡವ ಭಾಷೆಗೂ ನೀಡುವ ಮೂಲಕ ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿಯನ್ನು ಬಿಡಬೇಕು. ಹಾಗೆಯೇ ನಮ್ಮ ಭಾಷೆಗಳ ಅಭಿವೃದ್ದಿಗೆ ಪ್ರೋತ್ಸಾಹ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನೆಚ್ಚಿನ ಶಿಕ್ಷಕನ ವರ್ಗಾವಣೆ – ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು

  • ಹೇಳಿಕೆಯಿಂದ ಕೊಡವ ಸಮಾಜಕ್ಕೆ ನೋವಾಗಿದ್ದರೆ ವಿಷಾದಿಸುತ್ತೇನೆ – ಸಿದ್ದರಾಮಯ್ಯ

    ಹೇಳಿಕೆಯಿಂದ ಕೊಡವ ಸಮಾಜಕ್ಕೆ ನೋವಾಗಿದ್ದರೆ ವಿಷಾದಿಸುತ್ತೇನೆ – ಸಿದ್ದರಾಮಯ್ಯ

    ಬೆಂಗಳೂರು: ನನ್ನ ಹೇಳಿಕೆಯಿಂದ ಕೊಡವ ಸಮಾಜಕ್ಕೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದಾರಮಯ್ಯ ಹೇಳಿದ್ದಾರೆ.

    ಕೊಡವರೂ ಬೀಫ್‌ ತಿನ್ನುತ್ತಾರೆ ಎಂಬ ನನ್ನ ಹೇಳಿಕೆ ತಪ್ಪುಗ್ರಹಿಕೆಯಿಂದ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದರೆ ಈ ಬಗ್ಗೆ ನಾನು ವಿಷಾದಿಸುತ್ತೇನೆ. ನನ್ನ ನೆರೆಯ ಜಿಲ್ಲೆಯಾದ ಕೊಡಗಿನ ಸಂಸ್ಕೃತಿ ಬಗ್ಗೆ ನನಗೆ ಅರಿವಿದೆ. ವಿಶೇಷವಾದ ಗೌರವವೂ ಇದೆ ಎಂದು ಟ್ವೀಟ್‌ ಮಾಡಿದ್ದಾರೆ.

    ಸಿದ್ದರಾಮಯ್ಯ ಹೇಳಿದ್ದು ಏನು?
    ತಮ್ಮ ಮೈಸೂರಿನ ಭಾಷಣದಲ್ಲಿ ಬಿಜೆಪಿ ಸರ್ಕಾರದ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಮಾತನಾಡುತ್ತಾ, ಸಿದ್ದರಾಮಯ್ಯ ಗೋಹತ್ಯೆ ಪರವಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಬೀಫ್ ಅನ್ನು‌ ಮುಸ್ಲಿಮರು ಮಾತ್ರ ತಿನ್ನುತ್ತಾರಾ? ಕ್ರೈಸ್ತರು ತಿನ್ನುತ್ತಾರೆ, ದಲಿತರು ತಿನ್ನುತ್ತಾರೆ. ಕೊಡವರು ತಿನ್ನುತ್ತಾರೆ. ಬೇರೆ ಬೇರೆ ಕಡೆ ತಿನ್ನುತ್ತಾರೆ. ಹಿಂದುಳಿದವರು ತಿನ್ನುತ್ತಾರೆ. ನನಗೆ ತಿನ್ನಬೇಕು ಅಂತ ಅನಿಸಿದ್ರೆ ನಾನು ಯಾವುದು ಬೇಕಾದರೂ ತಿನ್ನುತ್ತೇನೆ. ಅದನ್ನು ಪ್ರಶ್ನೆ ಮಾಡಲು ನೀನು ಯಾರು ಅಂತ ನಾನು ಈ ಹಿಂದೆ ಸದನದಲ್ಲಿ ಪ್ರಶ್ನೆ ಮಾಡಿದ್ದೆ. ನನಗೆ ಯಾವುದು ಇಷ್ಟ ಆಗುತ್ತದೋ ಅದನ್ನು ತಿನ್ನುತ್ತೇನೆ ಎಂದು ಹೇಳಿದ್ದರು.

    ಅರ್ಥ ಕಲ್ಪಿಸಬೇಡಿ:
    ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸೋಲಿಗೆ ಅಲ್ಲಿನ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಕಾರಣ ಎಂದು ಹೇಳಿದ್ದೇನೆಯೇ ಹೊರತು ರಾಜ್ಯ ಮಟ್ಟದ ನಾಯಕರೆಂದು ಹೇಳಿಲ್ಲ. ವಿಪರೀತಾರ್ಥ ಕಲ್ಪಿಸುವುದು ಬೇಡ. ಕಾಂಗ್ರೆಸ್ ಪಕ್ಷ ರೈತರ ಹೋರಾಟಗಳಿಗೆ ಬೆಂಬಲ ನೀಡುವ ಜೊತೆಗೆ ರೈತ ವಿರೋಧಿ ಕಾಯ್ದೆಗಳ ವಿರುದ್ಧ ಹೋರಾಟ ಮಾಡಲಿದೆ. ದೇಶದ ಕೃಷಿ ವ್ಯವಸ್ಥೆಗೆ ಮಾರಕವಾದ ಕಾಯ್ದೆಗಳ ಜಾರಿಗೆ ನಮ್ಮ ಪ್ರಬಲ ವಿರೋಧವಿದೆ ಎಂದು ಟ್ವೀಟ್‌ ಮಾಡಿದ್ದಾರೆ.

  • ಕೊಡಗಿನಲ್ಲಿ ಇಂದು ಕೋವಿ ಉತ್ಸವದ ಸಂಭ್ರಮ

    ಕೊಡಗಿನಲ್ಲಿ ಇಂದು ಕೋವಿ ಉತ್ಸವದ ಸಂಭ್ರಮ

    ಮಡಿಕೇರಿ: ಕೊಡಗಿನ ಕೊಡವರ ಪ್ರತಿಯೊಂದು ಅಚರಣೆಗಳು ಭಿನ್ನ, ವಿಶಿಷ್ಟ. ಇಂತಹ ಅಚರಣೆಗಳ ಸಾಲಿಗೆ ಹೊಸ ಸೇರ್ಪಡೆ ಎಂಬಂತೆ ಕೋವಿ ಉತ್ಸವ ಭರ್ಜರಿಯಾಗಿ ನಡೆಯಿತು.

    ಕೊಡಗಿನ ಜನರ ವಿಶಿಷ್ಟ ಸಂಸ್ಕ್ರತಿಯ ಭಾಗ ಕೋವಿ. ಯೋಧ ಪರಂಪರೆಯ ಜನಾಂಗ ಕೊಡವರಿಗೆ ಕೋವಿ ಬಳಸಲು ವಿಶೇಷ ವಿನಾಯಿತಿಯ ಅನುಮತಿಯಿದೆ. ಇಂಡಿಯನ್ ಆರ್ಮ್ಸ್ ಆಕ್ಟ್ ಸೆಕ್ಷನ್ ಮೂರರ ಪ್ರಾಕಾರ ಯಾರಿಗೂ ಇಲ್ಲದ ಅನುಮತಿ ಕೊಡವರಿಗೆ ಇದೆ. ಕೊಡಗಿನ ಜನರ ಹಬ್ಬ ಹರಿದಿನ. ಹುಟ್ಟು, ಸಾವು ಎಲ್ಲದರಲ್ಲಿಯೂ ಕೋವಿಯ ಮಹತ್ವವಿದೆ. ಬಂದೂಕು ಕೊಡವರಿಗೆ ಕೇವಲ ಒಂದು ಅಯುಧವಲ್ಲ, ಇದು ಇಲ್ಲಿನ ಜನರ ಧಾರ್ಮಿಕ ಸಂಕೇತ ಕೊಡವರಲ್ಲಿ ಕೋವಿಗೆ ಪೂಜ್ಯಭಾವನೆಯಿದೆ, ಪವಿತ್ರ ಸ್ಥಾನವಿದೆ.

    ಪ್ರತಿ ಮನೆಯಲ್ಲಿಯೂ ಹಬ್ಬ ಹರಿದಿನಗಳಂದು ದೇವರಂತೆಯೇ ಕೋವಿಗೂ ಪೂಜೆ ಸಲ್ಲುತ್ತದೆ. ಇದೆಲ್ಲದರ ಸಂಕೇತವಾಗಿ ಕೋವಿ ಉತ್ಸವ ಶುರುವಾಗಿದೆ. ಕಳೆದ 10 ವರ್ಷದಿಂದ ಈ ಕೋವಿ ಉತ್ಸವಕ್ಕೆ ಕೊಡಗಿನಲ್ಲಿ ಚಾಲನೆ ಸಿಕ್ಕಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಕೊಳಗೇರಿಯಲ್ಲಿ ಇಂದು ನಡೆದ ಈ ವಿಶಿಷ್ಟ ಉತ್ಸವದಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ಪುರುಷ, ಮಹಿಳೆ ಎಂಬ ಭೇದವಿಲ್ಲದೆ ಎಲ್ಲರೂ ಗುಂಡು ಸಿಡಿಸಿ ಸಂಭ್ರಮಿಸಿದರು.

    ಸಾಂಪ್ರದಾಯಿಕ ಉಡುಗೆತೊಟ್ಟ ನೂರಾರು ಕೊಡವರು ಮೈದಾನದಲ್ಲಿ ಜಮಾಯಿಸಿ, ಎಲ್ಲ ಬಂದೂಕುಗಳನ್ನು ಒಂದೆಡೆ ಇಟ್ಟು, ಭಕ್ತಿಯಿಂದ ಪೂಜೆ ಸಲ್ಲಿಸುತ್ತಾರೆ. ನಂತರ ತೆಂಗಿನ ಕಾಯಿಗೆ ಗುಂಡು ಹೊಡೆಯೋ ಆಟವಾಡಿ, ಬಂದೂಕು ತಮ್ಮ ಹಕ್ಕು ಎಂಬುದನ್ನು ಸಾರುತ್ತಾರೆ. ಮಹಿಳೆಯರು, ಪುರುಷರು ಎಲ್ಲರೂ ಗುರಿಯಿಟ್ಟು ತೆಂಗಿನ ಕಾಯಿಗೆ ಹೊಡೆಯುತ್ತಾ ಕೇಕೆ ಹಾಕಿ ಕುಣಿದು ಕುಪ್ಪಳಿಸಿ ಕೋವಿ ಉತ್ಸವವನ್ನು ಎಂಜಾಯ್ ಮಾಡುತ್ತಾರೆ.

    ಡಿಸೆಂಬರ್ 18 ವಿಶ್ವ ಅಲ್ಪ ಸಂಖ್ಯಾತರ ದಿನಾಚರಣೆ ಹಾಗಾಗಿ ಕಳೆದ 10 ವರ್ಷದಿಂದ ಈ ದಿನದಂದು ಸಿ.ಎನ್.ಸಿ ಕೋವಿ ಉತ್ಸವ ಆಚರಿಸುತ್ತಾ ತಮ್ಮ ಸಂಸ್ಕ್ರತಿಯ ಭಾಗವೇ ಅದ ಕೋವಿಯನ್ನು ಸಾರ್ವಜನಿಕವಾಗಿ ಬಳಸುತ್ತ ಕೋವಿ ತಮ್ಮ ಹಕ್ಕು ಎಂಬುದನ್ನು ಸಾರುತ್ತಿದೆ. ಇದನ್ನು ನಾವು ಬಳಸೋದು ಪ್ರಾಣ ರಕ್ಷಣೆಗಾಗಿ ಅಲ್ಲ. ಬದಲಾಗಿ ಕೋವಿಗೆ ಕೊಡವರಲ್ಲಿ ಪೂಜ್ಯಭಾವನೆಯು ಇದೆ ಎನ್ನುತ್ತಾರೆ ಕೊಡವರು.