Tag: Kodava Culture

  • ಕೊಡವರ ಸಂಸ್ಕೃತಿ ಉಳಿವಿಗಾಗಿ ಪಾದಯಾತ್ರೆ – ಫೆ.7ರಂದು ದಕ್ಷಿಣ ಕೊಡಗಿನ 5 ಶಾಲಾ ಕಾಲೇಜಿಗೆ ರಜೆ ಘೋಷಣೆ

    ಕೊಡವರ ಸಂಸ್ಕೃತಿ ಉಳಿವಿಗಾಗಿ ಪಾದಯಾತ್ರೆ – ಫೆ.7ರಂದು ದಕ್ಷಿಣ ಕೊಡಗಿನ 5 ಶಾಲಾ ಕಾಲೇಜಿಗೆ ರಜೆ ಘೋಷಣೆ

    ಮಡಿಕೇರಿ: ಕೊಡವರ ಸಂಸ್ಕೃತಿ (Kodava Culture) ಉಳಿವಿಗಾಗಿ ಕೊಡಗಿನಲ್ಲಿ ನಡೆಯುತ್ತಿರುವ ಕೊಡವಾಮೆ ಬಾಳೋ ಪಾದಯಾತ್ರೆಗೆ ಬೆಂಬಲಿಸಿ ಫೆ.7ರಂದು ದಕ್ಷಿಣ ಕೊಡಗಿನ 5 ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

    ಕುಟ್ಟದಿಂದ ಮಡಿಕೇರಿವರೆಗೆ (Madikeri) ಆರಂಭವಾಗಿರುವ ಕೊಡವಾಮೆ ಬಾಳೊ ಪಾದಯಾತ್ರೆಯು ಮಡಿಕೇರಿಯಲ್ಲಿ ಸೇರುವ ಅಂತಿಮ ದಿನ ಅಂದರೆ ಫೆ.7ರಂದು ದಕ್ಷಿಣ ಕೊಡಗಿನ ಕೆಲವು ಪ್ರತಿಷ್ಠಿತ ಶಾಲಾ ಕಾಲೇಜುಗಳು ರಜೆ (Holiday) ಘೋಷಣೆ ಮಾಡಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ-ಕುಮಟೂರುವಿನ ಜೆ.ಸಿ ಶಿಕ್ಷಣ ಸಂಸ್ಥೆ, ಟಿ. ಶೆಟ್ಟಿಗೇರಿ ರೂಟ್ಸ್ ಶಿಕ್ಷಣ ಸಂಸ್ಥೆ, ಪೊನ್ನಂಪೇಟೆಯ ಅಪ್ಪಚ್ಚಕವಿ ವಿದ್ಯಾಸಂಸ್ಥೆ, ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾ ಸಂಸ್ಥೆ, ಗೋಣಿಕೊಪ್ಪದ ಕಾಪ್ಸ್ ವಿದ್ಯಾಸಂಸ್ಥೆ ರಜೆ ಘೋಷಣೆ ಮಾಡಿದೆ. ಇದನ್ನೂ ಓದಿ: Delhi Exit Poll | 27 ವರ್ಷದ ಬಳಿಕ ಬಿಜೆಪಿಗೆ ಅಧಿಕಾರ

    ಕೊಡವ ಆಡಳಿತ ಮಂಡಳಿಯಲ್ಲಿರುವ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಹಾಗೂ ಶಿಕ್ಷಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ರಜೆ ನೀಡಬೇಕೆಂದು ಆ ಶಾಲೆಗಳ ಮಕ್ಕಳ ಪೋಷಕರು ಆಡಳಿತ ಮಂಡಳಿಗೆ ಮನವಿ ಮಾಡಿದ್ದರು. ಈ ಮನವಿಗೆ ಮಾನ್ಯತೆ ನೀಡಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ರಜೆ ಘೋಷಣೆ ಮಾಡಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಫೆ.8 ರಂದು ಭಾರತ- ಶ್ರೀಲಂಕಾ ಕ್ರಿಕೆಟ್‌ ಮ್ಯಾಚ್‌

  • ಕೊಡವ ಸಂಸ್ಕೃತಿಯ ಅನಾವರಣ- ಚಿಣ್ಣರರ ಕಲಾಪ್ರದರ್ಶನ

    ಕೊಡವ ಸಂಸ್ಕೃತಿಯ ಅನಾವರಣ- ಚಿಣ್ಣರರ ಕಲಾಪ್ರದರ್ಶನ

    ಮಡಿಕೇರಿ: ಕೊಡಗಿನ ಉಮ್ಮತ್ತಾಟ್, ಬೊಳಕ್ಕಾಟ್, ಕತ್ತಿಯಾಟ್ ಸೇರಿದಂತೆ ವಿವಿಧ ವಿಶಿಷ್ಟ ಜಾನಪದ ಕಲೆಗಳನ್ನು ಪ್ರದರ್ಶಿಸುವ ಮೂಲಕ ಚಿಣ್ಣರರು ಕಣ್ಣಿಗೆ ಹಬ್ಬವನ್ನುಂಟು ಮಾಡಿದರು.

    ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಟಿ.ಶೆಟ್ಟಿಗೇರಿಯ ರೂಟ್ಸ್ ಎಜುಕೇಷನ್ ಟ್ರಸ್ಟ್ (ರಿ)ನಲ್ಲಿ 5ನೇ ವರ್ಷದ ಮಕ್ಕಳ ಕೊಡವ ಜನಪದ ಸಾಂಸ್ಕೃತಿಕ ನಮ್ಮೆ ಸಂಭ್ರಮದಲ್ಲಿ ಮಕ್ಕಳು ನೃತ್ಯಗಳನ್ನು ಮಾಡಿದರು. ಕೊಡವ ಸಂಸ್ಕೃತಿಯ ಭವಿಷ್ಯದ ವಾರಸುದಾರರಾದ ಚಿಣ್ಣರರು ಸುಮಧುರ ಸಂಗೀತಕ್ಕೆ ಹಾಡಿನಲಿಯೋ ಕಲೆಯನ್ನು ಪ್ರದರ್ಶಿಸಿದರು.

    ನಶಿಸುತ್ತಿರುವ ಕೊಡಗಿನ ಜಾನಪದ ಕಲೆಯನ್ನು ಉಳಿಸುವ ನಿಟ್ಟಿನಲ್ಲಿ ಮಕ್ಕಳಿಗಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಾಲಕಿಯರು ಉಮ್ಮತ್ತಾಟ್, ಬಾಲಕರು ಕೋಲಾಟ್, ಕತ್ತಿಯಾಟ್, ಬೊಳಕಾಟ್, ಪರೆಕಳಿ, ಸೇರಿದಂತೆ ಕೊಡಗಿನ ವಿವಿಧ ಜಾನಪದ ಕಲೆಗಳನ್ನು ಪ್ರದರ್ಶಿಸಿದರು. ಕುಣಿದು ನಲಿಯುವ ಮೂಲಕ ಮಕ್ಕಳು ಎಲ್ಲರ ಮೆಚ್ಚುಗೆ ಗಳಿಸಿದರು. ಜಿಲ್ಲೆಯಾದ್ಯಂತ 20ಕ್ಕೂ ಅಧಿಕ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಕೊಡವ ಸಾಹಿತ್ಯ ಅಕಾಡೆಮಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕೊಡವ ಮಕ್ಕಳ ಕೂಟ ಸಾಥ್ ನೀಡಿತು.

    ಗ್ರಾಮೀಣ ಜಾನಪದ ಕಲೆಗಳು ಮರೆಯಾಗುತ್ತಿರುವ ಸಂದರ್ಭದಲ್ಲಿ ರಾಜ್ಯದ ವಿಶಿಷ್ಟ ಕೊಡವ ಸಂಸ್ಕೃತಿಯನ್ನು ಉಳಿಸಲು ಕೊಡವ ಸಾಹಿತ್ಯ ಅಕಾಡೆಮಿ ಶ್ರಮಿಸುತ್ತಿದ್ದು, ಮಕ್ಕಳಿಗಾಗಿ ವಿಶೇಷ ಸ್ಪರ್ದೆಗಳನ್ನು ಆಯೋಜಿಸಿ ಜಾನಪದ ಕಲೆಗಳ ಬಗ್ಗೆ ಆಸಕ್ತಿ ಮೂಡಿಸುತ್ತಿದೆ. ಕೊಡವರ ಸಾಂಪ್ರದಾಯಿಕ ಉಡುಗೆಯುಟ್ಟು ಕೈಯಲ್ಲಿ ಕೋಲು, ಕತ್ತಿಗಳನ್ನು ಹಿಡಿದು ಮಕ್ಕಳು ಮಾಡುತ್ತಿದ್ದ ನೃತ್ಯಕ್ಕೆ ನೆರೆದಿದ್ದ ಜನ ಚಪ್ಪಾಳೆ ಮೂಲಕ ಮಕ್ಕಳನ್ನು ಹುರಿದುಂಬಿಸುತ್ತಿದ್ದರು.