Tag: Kodi Math

  • ರಾಜ್ಯ, ಕೇಂದ್ರ ಸರ್ಕಾರದ ಬಗ್ಗೆ ಕೋಡಿಮಠದ ಶ್ರೀಗಳ ಭವಿಷ್ಯವಾಣಿ ಏನು?

    ರಾಜ್ಯ, ಕೇಂದ್ರ ಸರ್ಕಾರದ ಬಗ್ಗೆ ಕೋಡಿಮಠದ ಶ್ರೀಗಳ ಭವಿಷ್ಯವಾಣಿ ಏನು?

    ಹಾಸನ: ಈಗಿನ ಕಾಲದಲ್ಲಿ ಕೃಷ್ಣ ಇಲ್ಲದೇ ದುರ್ಯೋಧನ ಗೆಲ್ಲುತ್ತಾನೆ. ರಾಜ್ಯ ಮತ್ತು ಕೇಂದ್ರದಲ್ಲಿ ಇದೇ ಆಗೋದು ಎಂದು ಕೋಡಿಮಠದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ (Rajendra Mahaswamiji) ಭವಿಷ್ಯ ನುಡಿದಿದ್ದಾರೆ.

    ಜಿಲ್ಲೆಯ ಅರಸೀಕೆರೆ (Arsikere) ತಾಲೂಕಿನ ಹಾರನಹಳ್ಳಿ ಗ್ರಾಮದ ಕೋಡಿಮಠದಲ್ಲಿ ಮಾತನಾಡಿದ ಅವರು, ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕತ್ತರಿಸಿದ್ದರು. ಮಹಾಭಾರತದಲ್ಲಿ ಕೃಷ್ಣ ಇದ್ದ, ಗದಾಯುದ್ಧದಲ್ಲಿ ಭೀಮಾ ಗೆದ್ದ. ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ಲುತ್ತಾನೆ. ಸೆಂಟ್ರಲ್‌ನಲ್ಲೂ, ಸ್ಟೇಟ್‌ಲ್ಲೂ ಆಗೋದು ಎಂದು ಪರೋಕ್ಷವಾಗಿ ಹೇಳಿದ್ದಾರೆ.ಇದನ್ನೂ ಓದಿ: ಪೋಕ್ಸೋ ಕೇಸ್ – ಬಿಎಸ್‍ವೈಗೆ ತಾತ್ಕಾಲಿಕ ರಿಲೀಫ್

    ಸರ್ಕಾರಕ್ಕೆ ಏನು ತೊಂದರೆ ಆಗಲ್ಲ ಎಂದು ಹೆಂದೆಯೇ ಹೇಳಿದ್ದೆ ಎಂದು ತಿಳಿಸಿದ್ದಾರೆ. ಪ್ರಕೃತಿ ವಿಕೋಪ ಕುರಿತು ಮಾತನಾಡಿ, ಮಳೆ ಇನ್ನೂ ಮುಂದುವರೆಯಲಿದೆ. ಜಾಸ್ತಿ ತೊಂದರೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

    ಪ್ರಾಕೃತಿಕ ದೋಷವಿದ್ದು ಭೂಮಿ, ಅಗ್ನಿ, ವಾಯು, ಆಕಾಶದಿಂದ ಎಲ್ಲಾ ಕಡೆ ತೊಂದರೆ ಆಗಲಿದೆ ಎಂದು ಎಚ್ಚರಿಸಿದ್ದಾರೆ. ಜನ ಇದ್ದಂಗೆ ಸಾಯ್ತಾರೆ. ಭೂಮಿ ಬಿರುಕು ಬಿಡುತ್ತದೆ. ಗುಡ್ಡ ಕುಸಿದು ಹೋಗುತ್ತದೆ. ಪ್ರವಾಹದಲ್ಲಿ ಜಗತ್ತು ಮುಳುಗುತ್ತದೆ ಎಂದು ಹಿಂದೊಮ್ಮೆ ನಾನು ಹೇಳಿದ್ದೇನೆ. ಇನ್ನೂ ಮಳೆಯಾಗಲಿದೆ. ಅದರಿಂದ ಅನಾಹುತ ಸಂಭವಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಮೃತ ವೈದ್ಯೆ ಕುಟುಂಬಕ್ಕೆ ಹಣ ನೀಡಲು ಪ್ರಯತ್ನಿಸಿಲ್ಲ, ಇದು ಹಸಿ ಸುಳ್ಳು: ಮಮತಾ ಬ್ಯಾನರ್ಜಿ ತಿರುಗೇಟು

  • ಜಾತ್ಯಾತೀತ ಶಕ್ತಿಗಳು ಒಂದಾದ್ರೆ ಕೋಮುವಾದಿ ಶಕ್ತಿಗಳು ಸೋಲುತ್ತವೆ: ಎಚ್.ಕೆ ಪಾಟೀಲ್

    ಜಾತ್ಯಾತೀತ ಶಕ್ತಿಗಳು ಒಂದಾದ್ರೆ ಕೋಮುವಾದಿ ಶಕ್ತಿಗಳು ಸೋಲುತ್ತವೆ: ಎಚ್.ಕೆ ಪಾಟೀಲ್

    ಗದಗ: ಕೋಮುವಾದಿ ಶಕ್ತಿಗಳನ್ನು ಸೋಲಿಸಬೇಕು ಅನ್ನೋ ತತ್ವ, ಚಿಂತನೆಗೆ ಗೆಲುವಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ ಪಾಟೀಲ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಮಹಾನಗರ ಪಾಲಿಕೆಯೇ ಇರಲಿ, ಮತ್ತೊಂದೇ ಇರಲಿ ಕೋಮುವಾದಿ ಶಕ್ತಿಗಳು ಸೋಲಬೇಕಾದರೆ ಜಾತ್ಯಾತೀತ ಶಕ್ತಿಗಳು ಕಾಂಗ್ರೆಸ್ ಜೊತೆ ಹೊಂದಿಕೊಳ್ಳಬೇಕು, ಹೊಂದಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಬಿಜೆಪಿಗೆ ಬರುವ ಮುನ್ನ ದುಡ್ಡಿನ ಆಫರ್ ಕೊಟ್ಟಿದ್ದು ನಿಜ: ಶ್ರೀಮಂತ ಪಾಟೀಲ್

    ಕೋಡಿಮಠದ ಶ್ರೀಗಳ ಹತ್ತಿರ ಭವಿಷ್ಯ ಕೇಳಲು ಸಿದ್ದರಾಮಯ್ಯ ಭೇಟಿ ಎಂಬ ಸಚಿವ ಗೋವಿಂದ ಕಾರಜೋಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಸ್ವಾಮೀಜಿಗಳನ್ನು ಭೇಟಿ ಮಾಡುತ್ತಿರುವುದು ಹೊಸದೇನಲ್ಲ. ಈ ಹಿಂದೆಯೂ ಅವರು ಅನೇಕ ಸ್ವಾಮೀಜಿಗಳನ್ನು ಭೇಟಿ ಮಾಡಿದ್ದಾರೆ. ಮಠ-ಮಾನ್ಯಗಳಿಗೆ ಹೋಗುತ್ತಾರೆ. ಗದುಗಿನ ಸ್ವಾಮೀಜಿಗಳ ಜೊತೆಯೂ ಸಿದ್ದರಾಮಯ್ಯ ಉತ್ತಮ ಸಂಬಂಧಗಳನ್ನು ಹೊಂದಿದ್ದಾರೆ ಎಂದರು.  ಇದನ್ನೂ ಓದಿ: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ

    ಕೋಡಿಮಠದ ಶ್ರೀಗಳ ಹತ್ತಿರ ಬರೀ ಭವಿಷ್ಯ ಕೇಳಲು ಹೋಗಬೇಕು ಅಂತೇನಿಲ್ಲ. ಭಕ್ತಿಯಿಂದಲೂ ಹೋಗಬಹುದು. ಶ್ರೀಗಳು ಭವಿಷ್ಯ ಹೇಳುವುದಲ್ಲಿ ಪ್ರಖ್ಯಾತರು. ಸಿದ್ದರಾಮಯ್ಯ ಭವಿಷ್ಯ ಕೇಳಿದ್ದಾರೋ ಇಲ್ಲವೋ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

     

  • ಸಂಕ್ರಾಂತಿಯೊಳಗೆ ರಾಷ್ಟ್ರದಲ್ಲಿ ದೊಡ್ಡ ಅವಘಡ- ಕೋಡಿ ಮಠದ ಶ್ರೀ ಭವಿಷ್ಯ

    ಸಂಕ್ರಾಂತಿಯೊಳಗೆ ರಾಷ್ಟ್ರದಲ್ಲಿ ದೊಡ್ಡ ಅವಘಡ- ಕೋಡಿ ಮಠದ ಶ್ರೀ ಭವಿಷ್ಯ

    ಕೋಲಾರ: ಆಶ್ವೀಜ ಮಾಸದ ನಂತರ ಸಂಕ್ರಾಂತಿ ಒಳಗೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಅವಘಡ ಆಗಲಿದೆ ಎಂದು ಕೋಡಿ ಮಠದ ಶ್ರೀ ಶಿವಾನಂದ ಸ್ವಾಮೀಜಿ ಭವಿಷ್ಯ ನುಡಿದರು.

    ಕೋಲಾರ ತಾಲೂಕಿನ ಲಕ್ಷ್ಮೀ ಸಾಗರ ಗ್ರಾಮದಲ್ಲಿ ನೆಲೆಸಿರುವ ಚಾಮುಂಡೇಶ್ವರಿ ದೇವಿ ಜನ್ಮ ದಿನೋತ್ಸವದಲ್ಲಿ ಭಾಗವಹಿಸಿ ಬಳಿಕ ಮಾತನಾಡಿದ ಅವರು, ಸಂಕ್ರಾಂತಿಯೊಳಗೆ ರಾಷ್ಟ್ರ ಮಟ್ಟದಲ್ಲಿ ದೊಡ್ಡ ಅವಘಡ ಸಂಭವಿಸಲಿದೆ ಎಂದು ಹೇಳಿದ್ದಾರೆ.

    ಯಡಿಯೂರಪ್ಪ ರಾಜೀನಾಮೆ ವಿಚಾರದಲ್ಲಿ ಮಠಾಧೀಶರು ಬೀದಿಗೆ ಬಂದು ಹೋರಾಟ ಮಾಡಿದರು. ಆದರೆ ಕೇಂದ್ರದ ನಾಯಕರು ಮಠಾಧೀಶರಿಗೆ ಅಗೌರವ ತೋರಿದ್ದಾರೆ ಗುರುಗಳಿಗೆ ನೋವಾಗುವಂತೆ ನಡೆದುಕೊಂಡಿದ್ದು ಸರಿಯಲ್ಲ ಎಂದರು.

    ರಾಜ ಮಹರಾಜರಿಂದ ಗುರುಗಳಿಗೆ ಬೆಲೆ ಇದೆ, ಕೆಂದ್ರದ ನಾಯಕರು ಬಂದು ಗುರುಗಳಿಗೆ ಆಶ್ವಾಸನೆ ಕೊಡಬಹುದಿತ್ತು. ಯಾವುದೇ ಸಲಹೆ ಪಡೆಯದೆ ಮಠಾಧೀಶರಿಗೆ ಅಗೌರವ ತೋರಿದ್ದಾರೆ. ಮಠಾಧೀಶರು ರಾಜಕಾರಣ ಮಾಡಿಲ್ಲ, ಬದಲಾಗಿ ಮುಖ್ಯಮಂತ್ರಿ ಬದಲಾಯಿಸುವ ಸಂದರ್ಭ ಇದಲ್ಲ ಎಂದಿದ್ದರು. ಆದರೆ ಹೈಕಮಾಂಡ್ ಗುರುಗಳನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಹಿಂದೆ ರಾಜರ ಕಾಲದಲ್ಲಿ ಸ್ವಾಮೀಜಿಗಳು ಸಿಂಹಾಸನದ ಪಕ್ಕ ಕೂರುತ್ತಿದ್ದರು. ರಾಮಚಂದ್ರ, ಪಾಂಡವರು, ಅತಿರಥ ಮಹಾರಾಜರು ಗುರುಗಳ ಸಲಹೆ ಪಡೆಯುತ್ತಿದ್ದರು. ಇನ್ನೂ ಸಾಕಷ್ಟು ಹೇಳುವ ವಿಚಾರ ಇದೆ. ಇದು ಸಂದರ್ಭ ಅಲ್ಲ, ಮೇಕೆ ಚರ್ಮದಿಂದ ಮಾಡಿದ ತಬಲ ಕೂಡ ಪಂಜರವನ್ನ ಕರಗಿಸುತ್ತೆ, ಆದರೆ ಮಠಾದೀಶರ ಅಹವಾಲನ್ನು ಆಲಿಸಲೇ ಇಲ್ಲ ಇದು ಬೇಸರ ತಂದಿದೆ. ಹಿಂದೂ ರಾಷ್ಟ್ರ ಎಂದರೆ ಖಾವಿ, ಅದಕ್ಕೆ ಬೆಲೆ ಇಲ್ಲದಹಾಗೆ ಮಾಡಿದರು ಎಂದರು.

    ಹೋರಾಟ ಮಾಡಿದ ಮಠಾಧೀಶರಿಗೆ ಅಗೌರವ ತೋರಿದಿರಿ, ನೀವು ಕೊಟ್ಟ ದುಡ್ಡೇ ಖಾಯಂ ಆಯ್ತಾ, ಈ ಸಂಸ್ಕೃತಿ ಬೆಳೆಯಬಾರದು ಮತ್ತಷ್ಟು ಮಾತನಾಡುವುದಿದೆ. ಕೇಂದ್ರದ ನಾಯಕರು, ಅಮಿತ್ ಶಾ ನಮ್ಮ ಬಳಿ ಬಂದಿದ್ದರು. ಈಗ ಬಂದರೆ ಈ ಎಲ್ಲಾ ವಿಚಾರವನ್ನು ಕೇಳುತ್ತೇವೆ, ಖಾವಿಗಳಿಗೆ ಈ ದೇಶದಲ್ಲಿ ಏನು ಬೆಲೆ ಇದೆ ಎಂದು ಪ್ರಶ್ನೆ ಮಾಡಿದರು.