Tag: Kodihalli Chandrasekhar

  • ಬೇಲಿ ಹಾರಿಯಾದರೂ ಸುವರ್ಣಸೌಧ ಮುತ್ತಿಗೆ – ಸರ್ಕಾರಕ್ಕೆ ಕೋಡಿಹಳ್ಳಿ ಗಡುವು

    ಬೇಲಿ ಹಾರಿಯಾದರೂ ಸುವರ್ಣಸೌಧ ಮುತ್ತಿಗೆ – ಸರ್ಕಾರಕ್ಕೆ ಕೋಡಿಹಳ್ಳಿ ಗಡುವು

    ಬೆಳಗಾವಿ: ಕೇಂದ್ರದಂತೆ ರಾಜ್ಯ ಸರ್ಕಾರ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯುವ ಬಗ್ಗೆ ಇಂದು ಮಧ್ಯಾಹ್ನ 2.30ರೊಳಗೆ ನಿರ್ಧಾರ ಪ್ರಕಟಿಸಬೇಕು. ಇಲ್ಲವಾದರೆ ಬೇಲಿ ಹಾರಿಯಾದರೂ ಸುವರ್ಣಸೌಧ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ಬೆಳಗಾವಿಯ ಸುವರ್ಣಸೌಧ ಎದುರಿರುವ ಕೊಂಡಸಕೊಪ್ಪದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು. ನಾವು ಬೆಳಗ್ಗೆ 11 ಘಂಟೆಯಿಂದ ಕೊಂಡಸಕೊಪ್ಪದಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಸರ್ಕಾರ ಕೂಡಲೇ ಸ್ಥಳಕ್ಕೆ ಬಂದು ನಮ್ಮ ಜೊತೆಗೆ ಮಾತನಾಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಸುವರ್ಣಸೌಧ ಮುತ್ತಿಗೆ ಯತ್ನ ವಿಫಲ – ಕೋಡಿಹಳ್ಳಿ ಚಂದ್ರಶೇಖರ್ ಸೇರಿ ನೂರಾರು ರೈತರು ಪೊಲೀಸರ ವಶಕ್ಕೆ

    ಹರಿಕಥೆ ಕೇಳೋಕೆ ಬಂದಿಲ್ಲ: ಸರ್ಕಾರದ ಪ್ರತಿನಿಧಿಗಳು ಇಲ್ಲಿಗೆ ಬರದಿದ್ದರೆ ನಾವು ಬೇಲಿ ಹಾರಿಯಾದರೂ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ನಮ್ಮನ್ನು ಯಾರು ತಡೆಯುತ್ತಾರೆ ನೋಡುತ್ತೇವೆ. ಪೊಲೀಸರ ಕಣ್ಣು ತಪ್ಪಿಸಿ ಸುವರ್ಣ ಸೌಧಕ್ಕೆ ಹೋಗಲೇಬೇಕು. ನಾವು ಇಲ್ಲಿ ಹರಿಕಥೆ ಕೇಳಲು ಬಂದಿಲ್ಲ, ಜೈಲಿಗೆ ಹೋಗಲು ಸಿದ್ಧರಿದ್ದೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಪ್ರತಿ ಮನೆಯಲ್ಲೂ ತಲ್ವಾರ್ ಇಟ್ಟುಕೊಂಡು ಗೋವು ರಕ್ಷಣೆ ಮಾಡಿ: ಸಾಧ್ವಿ ಸರಸ್ವತಿ

     

    ತೀವ್ರಗೊಂಡ ರೈತರ ಹೋರಾಟ: ವಿನೂತನವಾಗಿ ಪ್ರತಿಭಟನೆ ಮಾಡಿ ಅನ್ನದಾತರು ಸರ್ಕಾರದ ಗಮನ ಸೆಳೆಯಲು ಯತ್ನಿಸುತ್ತಿದ್ದಾರೆ. ಡೊಳ್ಳು ಬಾರಿಸಿ, ರೈತಗೀತೆಗಳನ್ನ ಹಾಡುವ ಮೂಲಕ ಪ್ರತಿಭಟನೆ ಮಾಡುತ್ತಿದ್ದಾರೆ.

  • ಅನ್‍ಲಾಕ್ ವೇಳೆಯಲ್ಲಿ ಸರ್ಕಾರಕ್ಕೆ ಶಾಕ್ – ಮತ್ತೆ ಸಾರಿಗೆ ನೌಕರರ ಪ್ರತಿಭಟನೆಗೆ ಪ್ಲಾನ್!

    ಅನ್‍ಲಾಕ್ ವೇಳೆಯಲ್ಲಿ ಸರ್ಕಾರಕ್ಕೆ ಶಾಕ್ – ಮತ್ತೆ ಸಾರಿಗೆ ನೌಕರರ ಪ್ರತಿಭಟನೆಗೆ ಪ್ಲಾನ್!

    ಬೆಂಗಳೂರು: ನಾಳೆಯಿಂದ ಬಸ್ ಸಂಚಾರ ಆರಂಭವಾಗ್ತಿದೆ. ರಾಜ್ಯದ ನಾಲ್ಕು ನಿಗಮಗಳಾದ ಕೆಎಸ್‍ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಹಾಗೂ ವಾಯುವ್ಯ ಸಾರಿಗೆಯ ಬಸ್ ಗಳು ಕಾರ್ಯಾಚರಣೆಗೊಳ್ಳುತ್ತಿವೆ. ಬಸ್ ಸಂಚಾರ ಆರಂಭವಾಯ್ತು ಅಂತಾ ರಿಲಾಕ್ಸ್ ಆಗುವ ಸಮಯದಲ್ಲಿ ಸಾರಿಗೆ ನೌಕರರಿಂದ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಮತ್ತೆ ಮತ್ತೇ ಸಾರಿಗೆ ಪ್ರೋಟೆಸ್ಟ್ ನಡೆಸುವುದಾಗಿ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದು, ಹೊಸ ಬಾಂಬ್ ಸಿಡಿಸಿದ್ದಾರೆ.

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ್, ಜುಲೈ 1ರವರೆಗೆ ಸರ್ಕಾರಕ್ಕೆ ಡೆಡ್ ಲೈನ್ ನೀಡಲಾಗಿದೆ. ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳಿಗೆ ಸ್ಪಂದಿಸದೇ ಇದ್ರೆ ಜುಲೈ 1 ರಿಂದ ಮತ್ತೆ ಸಾರಿಗೆ ಮುಷ್ಕರ ಆರಂಭಿಸುವುದಾಗಿ ಗುಡುಗಿದ್ದಾರೆ.

    ಕಳೆದ ಬಾರಿ ಏಪ್ರಿಲ್ 7 ರಿಂದ 22 ರವರೆಗೆ 15 ದಿನ ಸಾರಿಗೆ ಪ್ರೊಟೆಸ್ಟ್ ನಡೆದಿತ್ತು. ನಂತರ ಹೈಕೋರ್ಟ್ ಮಧ್ಯೆ ಪ್ರವೇಶದಿಂದ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗಿತ್ತು. ಇದೀಗ ಮತ್ತೆ ಪ್ರತಿಭಟನೆಯ ಕೂಗು ಕೇಳಿಬಂದಿದೆ. ಸರ್ಕಾರ ಕೊಟ್ಟ ಮಾತಿನಂತೆ ಆರನೇ ವೇತನ ಆಯೋಗ ಜಾರಿಗೆ ತರಬೇಕು. ಇಲ್ಲದಿದ್ದರೇ ಈ ಬಾರಿ ಸಾರಿಗೆ ನೌಕರರು ಅಷ್ಟೇ ಅಲ್ಲದೇ ಹೆಂಡತಿ, ಮಕ್ಕಳ ಜೊತೆಗೂಡಿ ಕುಟುಂಬ ಸಮೇತರಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಮೂಲಭೂತವಾಗಿ ಕನ್ನಡ ವಿರೋಧಿ – ಕುಮಾರಸ್ವಾಮಿ ಆಕ್ರೋಶ

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವ ಜನ ಅರೆಕೂಲಿಯಲ್ಲಿ ಕೆಲಸ ಮಾಡಿದ್ದಾರೆ. ಅವರಿಗೆ ಸರಿಯಾದ ನ್ಯಾಯಯುತ ವೇತನ ನೀಡಿ. ಸರ್ಕಾರ ಆರನೇ ವೇತನ ಆಯೋಗವನ್ನು ಜಾರಿ ಮಾಡುತ್ತೇವೆ ಎಂದಿತ್ತು. ಕಳೆದ ಬಾರಿ 15 ದಿನ ಪ್ರತಿಭಟನೆ ನಡೆಸಿದ್ದೇವೆ. ನಮ್ಮ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ಈಗಾಗಲೇ ಸಾರಿಗೆ ನೌಕರರನ್ನು ಅಮಾನತು, ವರ್ಗಾವಣೆ ಮಾಡಿದ್ದಾರೆ. ಎರಡು ತಿಂಗಳ ಸಂಬಳ ಕೊಡಬೇಕು. ಸಾವಿರ ರೂಪಾಯಿ ಸಂಬಳ ಕೊಡೋ ಕೆಲಸ ಮಾಡ್ತಿದೆ. ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯ ತರುತ್ತಿದ್ದೇವೆ. ಸಾರಿಗೆ ನೌಕರರ ಕುಟುಂಬದವರೊಂದಿಗೆ ಪ್ರತಿಭಟನೆ ಮಾಡ್ತೇವೆ. ಹೆಂಡತಿ, ಮಕ್ಕಳನೊಂದಿಗೆ ಸಾರಿಗೆ ನೌಕರರು ಪ್ರತಿಭಟಿಸುತ್ತಾರೆ. ಜೊತೆಗೆ ಸರ್ಕಾರ ವಿಶೇಷವಾದ ಪ್ಯಾಕೇಜ್ ಕೊಟ್ಟು ಸಾರಿಗೆ ಇಲಾಖೆಯನ್ನು ಉಳಿಸುವ ಕೆಲಸ ಮಾಡಬೇಕು. ಜುಲೈ ಒಂದನೇ ತಾರೀಖಿನ ಒಳಗೆ ಸಭೆ ನಡೆಸಿ, ಮುಂದಿನ ಹೋರಾಟದ ರೂಪುರೇಷೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಯಾಣಿಕರ ಪಾಸ್ ಅವಧಿ ವಿಸ್ತರಿಸಿದ ಬಿಎಂಟಿಸಿ

  • ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂತ್ಯ

    ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂತ್ಯ

    ಬೆಂಗಳೂರು: ಹೈಕೋರ್ಟ್ ಸೂಚನೆ ಹಿನ್ನೆಲೆ ಸಾರಿಗೆ ನೌಕರರ ಮುಷ್ಕರ ಅಂತ್ಯವಾಗಿದೆ. ನ್ಯಾಯಾಲಯಕ್ಕೆ ಗೌರವ ಕೊಟ್ಟು ಮುಷ್ಕರ ವಾಪಸ್ ಪಡೆದುಕೊಂಡಿದ್ದೇವೆ ಎಂದು ಸಾರಿಗೆ ನೌಕರರ ಒಕ್ಕೂಟ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

    ನ್ಯಾಯಾಲಯದ ಸೂಚನೆ ಮೇರೆಗೆ ಇಂದು ಹಲವರು ಕೆಲಸಕ್ಕೆ ಹಾಜರಾಗಲು ಹೋಗಿದ್ದಾರೆ. ಆದ್ರೆ ಮುಂದೆ ಮುಷ್ಕರದಲ್ಲಿ ಭಾಗಿಯಾಗಲ್ಲ ಎಂದು ಸರ್ಕಾರ ಮುಚ್ಚಳಿಕೆ ಬರೆಸಿಕೊಳ್ಳುತ್ತಿದೆ. ಹೋರಾಟ ನಮ್ಮ ಮೂಲಭೂತ ಹಕ್ಕು. ಇದನ್ನ ಕಸಿದುಕೊಳ್ಳುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದರು.

    ನ್ಯಾಯಾಲಯ ನಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನ ನಾವು ತಿರಸ್ಕಾರ ಮಾಡಲ್ಲ. ನಾಳೆಯಿಂದ ಕೆಲಸಕ್ಕೆ ಹಾಜರಾಗಲು ನಿರ್ದೇಶನ ನೀಡಿದ್ದೇವೆ. ನಾಳೆ ನ್ಯಾಯಾಲಯಕ್ಕೆ ನಾವು ಅರ್ಜಿ ಹಾಕಲಿದ್ದೇವೆ. ನ್ಯಾಯಾಲಯದ ಆದೇಶವನ್ನ ಗೌರವಿಸಿ ತಾತ್ಕಾಲಿಕವಾಗಿ ಮುಷ್ಕರ ಮುಂದೂಡಿಕೆ ಮಾಡಲಾಗಿದೆ. ಸರ್ಕಾರ ಸಹ ನಮ್ಮ ಬೇಡಿಕೆಗಳನ್ನ ಬಗೆಹರಿಸಿ. ಮುಷ್ಕರದ ವೇಳೆ 2,169 ಜನರನ್ನ ವಜಾ ಮತ್ತು 2,049 ಜನರನ್ನ ಅಮಾನತು ಮಾಡಲಾಗಿದೆ. 8 ಸಾವಿರ ಮಂದಿಯನ್ನ ವರ್ಗಾವಣೆ ಮಾಡಲಾಗಿದೆ. ಸರ್ಕಾರ ಕೂಡಲೇ ಇದನ್ನ ತೆರವು ಮಾಡಬೇಕು. ಡಿಸೆಂಬರ್ ನಲ್ಲಿ ಕೊಟ್ಟಿರುವ ಬೇಡಿಕೆ ಈಡೇರುಸುವ ಕೆಲಸ ಸರ್ಕಾರ ಮಾಡಲಿ. ನ್ಯಾಯಾಲಯದ ತೀರ್ಮಾನ ಏನೇನ್ ಆಗುತ್ತೆ ಅನ್ನೋದನ್ನು ಕಾದು ನೋಡುತ್ತೇವೆ ಎಂದು ತಿಳಿಸಿದರು.

    ನಮ್ಮ ಬೇಡಿಕೆ ಈಡೇರಿಕೆ ಬಗ್ಗೆ ಸರ್ಕಾರ ಗಮನ ಹರಿಸಿಲ್ಲ. ಆದ್ರೂ ನ್ಯಾಯಾಲಯ ಸೂಚಿಸಿದ ಹಿನ್ನಲೆ ಮುಷ್ಕರ ಅಂತ್ಯ ಮಾಡ್ತಿದ್ದೀವಿ. ಸಿಎಂಗೂ ಆರೋಗ್ಯ ಸರಿ ಇಲ್ಲ ಮೇ ತಿಂಗಳಿನಲ್ಲಿ ಸಿಎಂ ಚರ್ಚಿಸೋಣ ಎಂದು ಭರವಸೆ ನೀಡಿದ್ದಾರೆ. ಜೊತೆಗೆ ನಾಳೆ ನ್ಯಾಯಾಲಯದಲ್ಲೂ ನಮ್ಮ ಕುಂದುಕೊರತೆ ದಾಖಲಿಸುತ್ತೇವೆ. ನಾಳೆ ಹೇಳಿಕೆ ದಾಖಲಿಸೋ ಪ್ರಕ್ರಿಯೆ ವೇಳೆ ನಮ್ಮೆಲ್ಲಾ ಸಮಸ್ಯೆಗಳನ್ನ ಹೇಳಿಕೊಳ್ಳುತ್ತೇವೆ. ಸದ್ಯಕ್ಕೆ ನಾವು ಘನ ನ್ಯಾಯಾಲಯದ ಆದೇಶದ ಮೇರೆಗೆ ಈ ಮುಷ್ಕರ ನಿಲ್ಲಿಸುತ್ತಿದ್ದೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಸ್ಪಷ್ಟಪಡಿಸಿದರು.

  • ಕೋಡಿಹಳ್ಳಿ ಚಂದ್ರಶೇಖರ್ ಕರಪತ್ರಕ್ಕೆ ಸಚಿವ ಬೊಮ್ಮಾಯಿ ಸ್ಪಷ್ಟೀಕರಣ

    ಕೋಡಿಹಳ್ಳಿ ಚಂದ್ರಶೇಖರ್ ಕರಪತ್ರಕ್ಕೆ ಸಚಿವ ಬೊಮ್ಮಾಯಿ ಸ್ಪಷ್ಟೀಕರಣ

    ಬೆಂಗಳೂರು: ಜನಸಾಮಾನ್ಯರ ಹಿತದೃಷ್ಟಿಯಿಂದ ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಹಾಜರಾಗಿ ಎಂದು ಮಾತ್ರ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಹೇಳಿದ್ದೇನೆ. ಹೋರಾಟ ಮುಂದುವರಿಸುವ ಬಗ್ಗೆ ಯಾವುದೇ ಪ್ರಸ್ತಾವನೆಯನ್ನು ಮಾಡಿಲ್ಲ. 6 ನೇ ವೇತನ ಆಯೋಗದ ಬಗ್ಗೆ ಯಾವುದೇ ಭರವಸೆ ನೀಡಿರುವುದಿಲ್ಲ. ಇದರ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಿಗೆ ತಿಳಿಸುತ್ತೇನೆ ಎಂದು ಮಾತ್ರ ಹೇಳಿದ್ದೇನೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

    ಕೋಡಿಹಳ್ಳಿ ಚಂದ್ರಶೇಖರ್ ಅವರು ಇಂದು ಮುಂಜಾನೆ ತಮ್ಮನ್ನು ಭೇಟಿ ಮಾಡಿದ್ದರು. ಆ ಸಂದರ್ಭದಲ್ಲಿ ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡಿದ್ದೇನೆ. ಇದು ಮುಷ್ಕರ ನಡೆಸಲು ಸೂಕ್ತ ಸಂದರ್ಭ ಅಲ್ಲ. ಕೋವಿಡ್ ಎಲ್ಲರನ್ನೂ ಕಾಡುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ಜನ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಮುಷ್ಕರವನ್ನು ಸ್ಥಗಿತಗೊಳಿಸಿ ಕೆಲಸಕ್ಕೆ ಹಾಜರಾಗುವಂತೆ ಮಾತ್ರ ನಾನು ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

    ನಾನು ಈ ಮೇಲ್ಕಂಡ ವಿಷಯವನ್ನು ಮಾತ್ರ ಅವರಿಗೆ ತಿಳಿಸಿರುತ್ತೇನೆ. ಆದರೆ ಕೋಡಿಹಳ್ಳಿ ಚಂದ್ರಶೇಖರ್ ಅವರ ಕರಪತ್ರ ಇದಕ್ಕೆ ವ್ಯತಿರಿಕ್ತವಾಗಿದೆ. ಇದರಿಂದ ಸಾರಿಗೆ ನೌಕರರಿಗೆ ತಪ್ಪು ಸಂದೇಶ ರವಾನೆಯಾಗಬಾರದು. ಹೀಗಾಗಿ ಈ ಸ್ಪಷ್ಟೀಕರಣವನ್ನು ಕೊಡಲು ಬಯಸುತ್ತೇನೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • 12 ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಸಮರ- ಸರ್ಕಾರಕ್ಕೆ ಡೆಡ್‍ಲೈನ್ ಕೊಟ್ಟ ಕೋಡಿಹಳ್ಳಿ

    12 ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಸಮರ- ಸರ್ಕಾರಕ್ಕೆ ಡೆಡ್‍ಲೈನ್ ಕೊಟ್ಟ ಕೋಡಿಹಳ್ಳಿ

    ಬೆಂಗಳೂರು: ಸಾರಿಗೆ ನೌಕರರ ಮುಷ್ಕರ 12ನೇ ದಿನಕ್ಕೆ ಕಾಲಿಟ್ಟಿದೆ. ಇತ್ತ ಸಾರಿಗೆ ನೌಕರರ ಒಕ್ಕೂಟದ ಅಧ್ಯಕ್ಷ ಸರ್ಕಾರಕ್ಕೆ ಸೋಮವಾರದವರೆಗೆ ಡೆಡ್‍ಲೈನ್ ಕೊಟ್ಟಿದ್ದಾರೆ.

    ಸಾರಿಗೆ ಕೆಲಸಗಾರರ ಬಗ್ಗೆ ಸರ್ಕಾರ ತಿರಸ್ಕಾರ ಭಾವನೆ ತೋರಿಸುತ್ತಿದೆ. ಇದರಿಂದ ನೌಕರರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ನೀವುಗಳು ವಿಶ್ರಾಂತಿ ಪಡೆಯಲು ಕೊರೊನಾ ತೋರಿಸುತ್ತಿದ್ದೀರಿ. ಸಮಸ್ಯೆ ಬಗ್ಗೆ ಮುಕ್ತ ಮಾತುಕತೆ ಮಾಡಿ ಬಗೆಹರಿಸಬೇಕು. ಸರ್ಕಾರ ದೌರ್ಜನ್ಯದ ಮಾರ್ಗ ಅನುಸರಿಸುತ್ತಿದೆ. ಹಲವಾರು ನೌಕರರನ್ನ ಕಾರಣ ಕೊಡದೇ ಅರೆಸ್ಟ್ ಮಾಡಿ, ಭಯೋತ್ಪಾದಕರಾಗಿ ನೋಡಲಾಗುತ್ತಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು.

    ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳಲಿದೆ. 1 ಲಕ್ಷಕ್ಕೂ ಹೆಚ್ಚು ಜನರು ಜೈಲಿಗೆ ಹೋಗಲು ಸಿದ್ಧರಿದ್ದಾರೆ. ಸೋಮವಾರದ ನಂತರ ಜೈಲ್ ಬರೋ ಚಳುವಳಿ ಆರಂಭ ಮಾಡುತ್ತೆ ಎಂದು ಸರ್ಕಾರಕ್ಕೆ ಸಂದೇಶ ರವಾನಿಸಿದರು.

  • 11ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ – ಇಂದು ಕಾರ್ಮಿಕ ಆಯ್ತುಕರ ಕಚೇರಿಗೆ ಮುತ್ತಿಗೆ

    11ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ – ಇಂದು ಕಾರ್ಮಿಕ ಆಯ್ತುಕರ ಕಚೇರಿಗೆ ಮುತ್ತಿಗೆ

    ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ 11ನೇ ದಿನಕ್ಕೆ ಕಾಲಿಟ್ಟಿದ್ದು. ಇಂದು ರಾಜ್ಯಾದ್ಯಂತ ಕಾರ್ಮಿಕ ಆಯ್ತುಕರ ಕಚೇರಿಗೆ ಮುತ್ತಿಗೆ ಹಾಕಲು ನೌಕರರು ನಿರ್ಧರಿಸಿದ್ದಾರೆ.

    ಇಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸಾರಿಗೆ ನೌಕರರ ಒಕ್ಕೂಟದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಧರಣಿ ನಡೆಯಲಿದೆ. ಕಾರ್ಮಿಕ ಆಯ್ತುಕರ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ನೌಕರರ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಒತ್ತಾಯ ಮಾಡುವಂತೆ ಮನವಿ ಮಾಡಿಕೊಳ್ಳಲಿದ್ದಾರೆ. ಮುಷ್ಕರ ಆರಂಭವಾಗಿ 11 ದಿನವಾದ್ರೂ ಸರ್ಕಾರ ಸ್ಪಂದಿಸದ ಹಿನ್ನೆಲೆ ಧರಣಿಯನ್ನು ತೀವ್ರಗೊಳಿಸಲು ನೌಕರರು ಮುಂದಾಗಿದ್ದಾರೆ.

    ಎಷ್ಟೇ ಅಡ್ಡಿಗಳಿದ್ರೂ ನಾವು ವಿಚಲಿತರಾಗುವುದಿಲ್ಲ. ಮುಖ್ಯಮಂತ್ರಿಗಳು ನಮ್ಮ ಜೊತೆ ಮಾತನಾಡೋಕೆ ಯಾಕೆ ಹಿಂಜರೀತಿದ್ದೀರಿ. ಈಗ ಪಾಸಿಟಿವ್ ಆಗಿದೆ. ಸಾರಿಗೆ ಸಚಿವರಿಗೆ ಮೊಂಡುತನ ಬೇಡ. ಒಂದು ನಿರ್ದಿಷ್ಟ ನಿರ್ಧಾರಕ್ಕೆ ಬನ್ನಿ. ಆಯುಕ್ತರೊಂದಿಗೆ ಮಾತನಾಡುತ್ತೇವೆ ಅಂದಿದ್ದಾರೆ. ಇನ್ನು, ಅವನ್ಯಾರೋ ಕೋಡಿಹಳ್ಳಿ.. ಅವನೊಬ್ಬ 420 ಅಂತ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಅವನನ್ನು ಬಿಟ್ಟು ಮಾತುಕತೆಗೆ ಬನ್ನಿ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

    ಜಮಖಂಡಿಯಲ್ಲಿ ಮುಷ್ಕರದ ನಡುವೆ ಸಂಚರಿಸಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರಿಂದ, ಬಸ್ ಚಾಲಕ ಅವಟಿ ಕುತ್ತಿಗೆ ಭಾಗಕ್ಕೆ ಬಲವಾಗಿ ಪೆಟ್ಟುಬಿದ್ದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಚಾಲಕ ಮೃತಪಟ್ಟಿದ್ದಾರೆ. ಕುಟುಂಬಕ್ಕೆ ಸಾಂತ್ವನ ಹೇಳಿರುವ ಸಾರಿಗೆ ಸಚಿವ ಸವದಿ, ತಕ್ಷಣವೇ 30 ಲಕ್ಷ ಪರಿಹಾರ ಮತ್ತು ಒಬ್ಬರಿಗೆ ಕೆಲಸ ಕೊಡೋದಾಗಿ ಸೂಚಿಸಿದ್ದಾರೆ.

    ಹಾಸನದಲ್ಲಿ ಸರ್ಕಾರಿ ಬಸ್ ಬರುತ್ತಿದ್ದಂತೆಯೇ ಖಾಸಗಿ ಬಸ್‍ನಲ್ಲಿದ್ದ ಜನ ಇಳಿದು ಕೆಎಸ್‍ಆರ್‍ಟಿಸಿ ಹತ್ತುತ್ತಿದ್ದರು. ಇದರಿಂದ ಸಿಟ್ಟಿಗೆದ್ದ ಖಾಸಗಿ ಬಸ್‍ನವರು ವಾಗ್ವಾದ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಪಾರ್ಶ್ವವಾಯುಗೆ ತುತ್ತಾಗಿದ್ದ ಕೈ ಸ್ವಾಧೀನ ಕಳೆದುಕೊಂಡ ಬಿಎಂಟಿಸಿ ಡ್ರೈವರ್ ಗೆ ಒತ್ತಡ ಹಾಕಿ ಕೆಲಸಕ್ಕೆ ಕರೆಸಿಕೊಂಡಿದ್ದಾರೆ. ಆ ಡ್ರೈವರ್ ಒಂದೇ ಕೈಯಿಂದ ಬಸ್ ಓಡಿಸಿದ್ದಾರೆ.

  • ಎತ್ತಿಕಟ್ಟಿ ಅರಾಜಕತೆ ಸೃಷ್ಟಿ ಸುಲಭ, ಅದು ನಾಯಕತ್ವದ ಲಕ್ಷಣವಲ್ಲ: ಕೋಡಿಹಳ್ಳಿ ವಿರುದ್ಧ ಸಿ.ಟಿ.ರವಿ ಕಿಡಿ

    ಎತ್ತಿಕಟ್ಟಿ ಅರಾಜಕತೆ ಸೃಷ್ಟಿ ಸುಲಭ, ಅದು ನಾಯಕತ್ವದ ಲಕ್ಷಣವಲ್ಲ: ಕೋಡಿಹಳ್ಳಿ ವಿರುದ್ಧ ಸಿ.ಟಿ.ರವಿ ಕಿಡಿ

    – ಟಿಕೆಟ್ ನೀಡುವಾಗ ಯತ್ನಾಳ್‍ರನ್ನ ಬಿಎಸ್‍ವೈ ಸಮರ್ಥಿಸಿಕೊಂಡಿದ್ರು

    ಚಿಕ್ಕಮಗಳೂರು: ಕೋಡಿಹಳ್ಳಿ ಚಂದ್ರಶೇಖರ್ ಇಷ್ಟು ದಿನ ರೈತ ನಾಯಕರಾಗಿದ್ದರು ಈಗ ಕಾರ್ಮಿಕ ನಾಯಕರಾಗಿದ್ದಾರೆ. ನೌಕರರನ್ನ ಎತ್ತಿಕಟ್ಟುವುದು ಅರಾಜಕತೆ ಸೃಷ್ಟಿಸುವುದು ಸುಲಭ. ಆದರೆ, ಹರಾಜಕತೆ ಸೃಷ್ಟಿಸುವುದು ನಾಯಕತ್ವದ ಲಕ್ಷಣ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಚಿಕ್ಕಮಗಳೂರಿನ ಬಸವನಹಳ್ಳಿಯಲ್ಲಿ ಡಾಂಬಾರೀಕರಣಗೊಂಡ ರಸ್ತೆಯನ್ನ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಮೂರು ರೈತಪರವಾದ ಕೃಷಿ ಮಸೂದೆಗಳನ್ನು ಮಂಡಿಸಿದೆ. ಆದರೆ ಆ ಮಸೂದೆಗಳು ರೈತ ವಿರೋಧಿ ಮಸೂದೆಗಳು ಎನ್ನುತ್ತಿದ್ದಾರೆ. ಸರ್ಕಾರ ರೈತರ ಪರವಾಗಿ ತೆಗೆದುಕೊಂಡ ನಿಲುವುಗಳನ್ನು ರೈತ ವಿರೋಧಿ ಎಂದು ಬಿಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ. ನಾವು ಬೆಳೆದ ಬೆಳೆಯನ್ನ ಮುಕ್ತವಾಗಿ ಮಾರಾಟ ಮಾಡಲು ಅವಕಾಶ ನೀಡಬೇಕು ಎಂದಿದ್ದರು. ಈಗ ಸರ್ಕಾರ ಮುಕ್ತ ಮಾರಾಟಕ್ಕೆ ಅವಕಾಶ ಕೊಟ್ಟಿದೆ. ಈಗ ರೈತ ವಿರೋಧಿ ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

    ಬೆದರಿಕೆ ಮೂಲಕ ಸರ್ಕಾರವನ್ನು ಮಣಿಸಲು ಸಾಧ್ಯವಿಲ್ಲ. ಸಾರಿಗೆ ಸಚಿವರು ಮೇ 2ರ ವರೆಗೆ ಸಮಯ ಕೊಡುವಂತೆ ಕೇಳಿಕೊಂಡಿದ್ದಾರೆ. ನೌಕರರು ಅಲ್ಲಿಯವರೆಗೆ ಸಮಯ ಕೊಟ್ಟು ನೋಡಬೇಕು. ಸರ್ಕಾರ ಹಾಗೂ ಬಿಜೆಪಿ ನಿಮ್ಮ ಬೇಡಿಕೆಯ ಪರವಾಗಿದೆ. ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಸಮಸ್ಯೆಯನ್ನು ಎದುರಿಸುವಂತಹ ವೇಳೆಯಲ್ಲೂ ನೌಕರರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸಚಿವರು ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಮುಷ್ಕರವನ್ನು ಹಿಂತೆಗೆದುಕೊಳ್ಳುವಂತೆ ನೌಕರರಲ್ಲಿ ಮನವಿ ಮಾಡಿದರು. ಮೊದಲೇ ಸಂಕಷ್ಟದಲ್ಲಿದ್ದ ಸಾರಿಗೆ ಇಲಾಖೆ ಕೋವಿಡ್‍ನಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸಹಕರಿಸುವಂತೆ ವಿನಂತಿಸಿದರು.

    ಸೈನಿಕರ ಹತ್ಯೆ ದುರಾದೃಷ್ಟಕರ : ನಾನು ಗೌರಿ ಎಂದು ಮೊಂಬತ್ತಿ ಹಿಡಿದವರು 27 ಜನ ಸೈನಿಕರು ಸತ್ತಾಗ ಏಕೆ ಮೊಂಬತ್ತಿ ಹಿಡಿಯಲಿಲ್ಲ ಎಂದು ಟೀಕಿಸಿದರು. ಎಡಪಂಥೀಯ ನಿಲುಗಳಿಂದ ದುಷ್ಪ್ರೇರಣೆ ಪಡೆದ ಜನ ಛತ್ತಿಸ್‍ಗಢದಲ್ಲಿ 27 ಜನ ಸೈನಿಕರನ್ನ ಹತ್ಯೆ ಮಾಡಿದ್ದಾರೆ. ಇದು ದುರಾದೃಷ್ಟಕರ. ಸೈನಕರಿಗೆ ಶತ್ರುಗಳಾದವರು ದೇಶಕ್ಕೂ ಶತ್ರುಗಳೇ. ಯಾರು ಸಂವಿಧಾನವನ್ನ ಒಪ್ಪುವುದಿಲ್ಲವೋ ಅವರು ಬ್ಯಾಲೆಟ್ ಮೇಲೆ ನಂಬಿಕೆ ಇಡಲ್ಲ. ಸಂವಿಧಾನದ ಮೇಲೆ ಯಾರಿಗೆ ನಂಬಿಕೆ ಇರುತ್ತೋ ಅವರು ಬ್ಯಾಲೆಟ್ ಮೇಲೆ ನಂಬಿಕೆ ಇಡುತ್ತಾರೆ. ಬುಲೆಟ್ ಮೇಲೆ ನಂಬಿಕೆ ಇರುವವರಿಗೆ ಸಂವಿಧಾನದ ಮೇಲೆ ನಂಬಿಕೆ ಇರುವುದಿಲ್ಲ ಎಂದರು.

    ಸೈನಿಕರನ್ನ ಶತ್ರು ಎಂದು ಪರಿಗಣಿಸುವವನು ದೇಶದಲ್ಲಿ ಇರುವುದಕ್ಕೆ ಅನರ್ಹ. ಈ ಬಗ್ಗೆ ಗಂಭೀರವಾಗಿ ಚಿಂತಿಸಬೇಕು. ಸಣ್ಣ-ಸಣ್ಣ ವಿಷಯಗಳನ್ನ ವೈಭವಿಕರಿಸಿ ಅರಾಜಕತೆ ಸೃಷ್ಟಿಸಿ ದೇಶವನ್ನು ಹೊಡೆಯುವ ಹುನ್ನಾರ ನಡೆಯುತ್ತಿದೆ. ಈ ಬಗ್ಗೆ ಜನಜಾಗೃತಿ ಉಂಟು ಮಾಡುವ ಅನಿವಾರ್ಯತೆ ಇದೆ ಎಂದರು.

    ಇದೇ ವೇಳೆ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಯತ್ನಾಳ್ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿ.ಟಿ ರವಿ, ಬಿಎಸ್‍ವೈ ಹಾಗೂ ಯತ್ನಾಳ್ ಸಂಬಂಧ ಚೆನ್ನಾಗಿದೆ. ಯತ್ನಾಳ್ ಸ್ವಭಾವದ ಬಗ್ಗೆ 2018ರಲ್ಲಿ ಟಿಕೆಟ್ ನೀಡುವಾಗ ಚರ್ಚೆಯಾಗಿತ್ತು. ಆಗ ಯತ್ನಾಳ್ ಪರ ಬಿ.ಎಸ್ ಯಡಿಯೂರಪ್ಪ ಸಮರ್ಥನೆ ಮಾಡಿ ಮಾತನಾಡಿದ್ದರು. ಅವರ ವ್ಯಕ್ತಿಗತ ಸಂಬಂಧ ಚೆನ್ನಾಗಿದೆ ಎಂದರು.

  • ಎಸ್ಮಾ ಜಾರಿ ಮಾಡೋ ಸನ್ನಿವೇಶ ಸೃಷ್ಟಿಯಾಗಿಲ್ಲ: ಕೋಡಿಹಳ್ಳಿ ಚಂದ್ರಶೇಖರ್

    ಎಸ್ಮಾ ಜಾರಿ ಮಾಡೋ ಸನ್ನಿವೇಶ ಸೃಷ್ಟಿಯಾಗಿಲ್ಲ: ಕೋಡಿಹಳ್ಳಿ ಚಂದ್ರಶೇಖರ್

    – ನಾಳೆಯೂ ಮುಷ್ಕರ ಮುಂದುವರಿಯುತ್ತೆ

    ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಶಾಂತಿ ಮತ್ತು ಶಿಸ್ತಿನಿಂದ ನಡೆದಿದೆ. ಯಾರೂ ಸಹ ಕೊರೊನಾ ನಿಯಮಗಳನ್ನ ಉಲ್ಲಂಘನೆ ಮಾಡಿಲ್ಲ. ಮೊದಲೇ ಗಮನಕ್ಕೆ ತಂದು ಪ್ರತಿಭಟನೆ ನಡೆಸಲಾಗುತ್ತಿದ್ದು, ಎಸ್ಮಾ ಜಾರಿ ಮಾಡುವ ಸನ್ನಿವೇಶ ಸೃಷ್ಟಿಯಾಗಿಲ್ಲ ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

    ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್, ನಾಳೆ ಸಹ ಮುಷ್ಕರ ಮುಂದುವರಿಯಲಿದೆ. ಏಪ್ರಿಲ್ 10 ರಂದು ಬೆಳಗಾವಿ ಮತ್ತು ಏಪ್ರಿಲ್ 11ರಂದು ಬೀದರ್ ನಲ್ಲಿ ಸಭೆ ಮಾಡುತ್ತೇವೆ. ನೆರೆಯ ಆಂಧ್ರಪ್ರದೇಶದಲ್ಲಿ ಸಾರಿಗೆ ಸಿಬ್ಬಂದಿಯನ್ನ ಸರ್ಕಾರಿ ನೌಕರರು ಎಂದು ಘೋಷಣೆ ಮಾಡಿದೆ. ಕಳೆದ ಮೂರು ತಿಂಗಳ ಹಿಂದೆಯೇ ನಾವು ಸರ್ಕಾರದ ಗಮನಕ್ಕೆ ತಂದಿದ್ದೇವೆ. ಆರನೇ ವೇತನ ಆಯೋಗ ಜಾರಿ ಮಾಡ್ತಿವಿ ಎಂದು ಲಿಖಿತ ರೂಪದಲ್ಲಿ ಹೇಳಿದ್ದರು. ಈಗ ಕೊರೋನಾ ಕಷ್ಟ ಕಾಲ ಅಂತಾ ನೆಪ ಹೇಳ್ತಿದ್ದಾರೆ. ಆರ್ಥಿಕ ನಷ್ಟ ಅನ್ನೋದಾದ್ರೆ ಮಠ ಮಂದಿರಗಳಿಗೆ ಐನೂರು ಕೋಟಿ, ಸಾವಿರ ಕೋಟಿ ಅನುದಾನ ನೀಡಿದ್ದು ಹೇಗೆ ಎಂದು ಸರ್ಕಾರವನ್ನು ಕೋಡಿಹಳ್ಳಿ ಚಂದ್ರಶೇಖರ್ ಪ್ರಶ್ನಿಸಿದರು.

    ಸರ್ಕಾರ ಉದ್ದೇಶ ಪೂರ್ವಕವಾಗಿ ಈ ಯೋಜನೆಯನ್ನು ಕೈಗೆ ತೆಗೆದುಕೊಳ್ಳುತ್ತಿಲ್ಲ. ನಲವತ್ತು ವರ್ಷದಿಂದ ಸರ್ಕಾರ ಶೋಷಣೆ ಮಾಡುತ್ತಿದೆ. ತಕ್ಷಣವೇ ತಪ್ಪುನ್ನು ಸರಿ ಮಾಡಿ ಎಂದು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡರು. ನೀವು ಯಾವತ್ತೆ ಕರೆದ್ರೂ ನಿಮ್ಮ ಬಳಿ ಬರಲು ನಾವು ಸಿದ್ಧ. ಆರನೇ ವೇತನ ಆಯೋಗ ನಮಗೆ ಮುಖ್ಯ. ಸಾರಿಗೆ ಸಚಿವರು ಸ್ವಲ್ಪ ಕಸರತ್ತು ಮಾಡಿದ್ರೆ ಸಮಸ್ಯೆಗೆ ಸ್ಪಂದಿಸಬೇಕು. ಎಸ್ಮಾ ಜಾರಿ ಮಾಡುವ ಮುನ್ನ ನಿರ್ದಿಷ್ಟ ಕಾರಣ ನೀಡಿ ಎಂದರು.

    ನಮ್ಮ ಪ್ರತಿಭಟನೆಗೆ ಸ್ಪಂದಿಸುವಂತೆ ಖಾಸಗಿ ವಾಹನ ಮಾಲೀಕರಿಗೂ ಮನವಿ ಮಾಡಿಕೊಂಡಿದ್ದೇವೆ. ಸ್ಪಂದಿಸೊದು ಅವರ ವಿವೇಚನೆಗೆ ಬಿಟ್ಟಿದ್ದು. ಸರ್ಕಾರ ನಮಗೆ ಕೊಟ್ಟಿರೋ ಮಾತು ಈಡೇರಿಸೋ ತನಕ ನಮ್ಮ ಮುಷ್ಕರ ಕೈಬಿಡೋದಿಲ್ಲ. ಇದುವರೆಗೂ ಸರ್ಕಾರದಿಂದ ನಮಗೆ ಯಾವುದೇ ಸಂದೇಶ ಬಂದಿಲ್ಲ. ಒಂದು ವೇಳೆ ಕರೆದ್ರೆ ಖಂಡಿತ ಹೋಗಿ ಮಾತಾಡುತ್ತೇವೆ. ನೋ ಪೇ, ನೋ ವರ್ಕ್ ಅನ್ನೋದು ಸರಿ ಇದೆ. ಆದ್ರೆ ಮಾರ್ಚ್ ತಿಂಗಳ ಸಂಬಳ ನೀಡಲ್ಲ ಅಂತ ಹೇಳುವುದು ತಪ್ಪು. ಸಂಬಳ ನೀಡಿಲ್ಲ ಅಂದ್ರೆ ನ್ಯಾಯಾಲಯ ಇದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಏನಿದು ಎಸ್ಮಾ? ಸರ್ಕಾರಿ ನೌಕರರಿಗೆ ಭಯ ಯಾಕೆ?

  • ಏಪ್ರಿಲ್ 7ಕ್ಕೆ ಸಾರಿಗೆ ನೌಕರರ ಮುಷ್ಕರ – ರಾಜ್ಯಾದ್ಯಂತ ಬಸ್ ಬಂದ್

    ಏಪ್ರಿಲ್ 7ಕ್ಕೆ ಸಾರಿಗೆ ನೌಕರರ ಮುಷ್ಕರ – ರಾಜ್ಯಾದ್ಯಂತ ಬಸ್ ಬಂದ್

    ಬೆಂಗಳೂರು: ಆರನೇ ವೇತನ ಜಾರಿಗೆ ಆಗ್ರಹಿಸಿ ಏಪ್ರಿಲ್ ಏಳರಂದು ಸಾರಿಗೆ ಬಂದ್ ಗೆ ಕರೆ ಕೊಡಲಾಗಿದೆ. ಇಡೀ ರಾಜ್ಯಾದ್ಯಂತ ಬಸ್ ಗಳು ರಸ್ತೆಗಿಳಿಯಲ್ಲ ಎಂದು ಸಾರಿಗೆ ನೌಕರರು ಸರ್ಕಾರಕ್ಕೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇತ್ತ ನೌಕರರಿಗೆ ಸೆಡ್ಡು ಹೊಡೆಯಲು ಸಚಿವರು ಖಾಸಗಿ ವಾಹನಗಳನ್ನು ಇಳಿಸುವ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

    ಏಪ್ರಿಲ್ 6 ರೊಳಗೆ 6 ನೇ ವೇತನ ಆಯೋಗ ಜಾರಿ ಆಗಬೇಕು ಇಲ್ಲದಿದ್ರೆ ಏಪ್ರಿಲ್ 7ರಂದು ಮುಷ್ಕರ ನಡೆಸುವುದಾಗಿ ಸರ್ಕಾರಕ್ಕೆ ಸಾರಿಗೆ ನೌಕರರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇನ್ನೇನು ಪ್ರತಿಭಟನೆಗೆ ಒಂದು ದಿನವಷ್ಟೇ ಬಾಕಿ ಉಳಿದಿದ್ದು, ಈ ವಿಚಾರವಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮಹತ್ವದ ಸುದ್ದಿಗೋಷ್ಟಿ ನಡೆಸಿದರು. ವೇತನ ಹೆಚ್ಚಳ ಮಾಡಲು ನೀತಿ ಸಂಹಿತೆ ಅಡ್ಡಿಯಿದೆ. ನೀತಿ ಸಂಹಿತೆ ಮುಗಿದ ಬಳಿಕ ವೇತನ ಹೆಚ್ಚಳ ಮಾಡುವ ಖಾತ್ರಿ ಕೊಡುತ್ತೇವೆ. ಚುನಾವಣಾ ಆಯೋಗ ಅದಕ್ಕೂ ಮುನ್ನ ಅನುಮತಿ ನೀಡಿದರೆ ಚರ್ಚಿಸಿ ಘೋಷಣೆ ಮಾಡ್ತೇವೆ. ಖಾಸಗಿ ಬಸ್ ನವರಿಗೆ ಸ್ಪಂದಿಸುವಂತೆ ಆಹ್ವಾನ ಕೊಟ್ಟಿದ್ದೇವೆ. ಮಿನಿ ಬಸ್, ಟೆಂಪೋ ಟ್ರಾವೆಲರ್ ಗಳನ್ನೂ ಬಳಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಬಂದ್ ಬಗ್ಗೆ ಮಾತನಾಡಿದದ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ನಾವು ಸರ್ಕಾರಕ್ಕೆ ಮೂರೂವರೆ ತಿಂಗಳು ಗಡುವು ಕೊಟ್ಟಿದ್ದೇವು. ಅಂದಿನಿಂದ ಇಲ್ಲಿಯವರೆಗೂ ಸರ್ಕಾರಕ್ಕೆ ಕಾಲಾವಕಾಶ ಇತ್ತು. ಈಗ ಸರ್ಕಾರ ನೀತಿ ಸಂಹಿತೆ ನೆಪ ಹೇಳುತ್ತಿದೆ. ನಾಡಿದ್ದು ಬಸ್ ಬಂದ್ ಇದ್ದೇ ಇರುತ್ತೆ. ಕೊರೊನಾ ನಿಯಮಗಳನ್ನು ಮೀರಲ್ಲ. ಅಸಹಕಾರ ಚಳುವಳಿಯಂತೆ ಬಸ್ ನಿಲ್ಲಿಸಿ ಪ್ರತಿಭಟನೆ ನಡೆಸುತ್ತೇವೆ. ಕೊರೊನಾ ಕಡಿಮೆ ಇರೋ ಕಡೆ ಮುಷ್ಕರ ನಡೆಸಿ ಉಪವಾಸ ಕೈಗೊಳ್ಳತ್ತೇವೆ ಎಂದು ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

    ಸಾರಿಗೆ ನೌಕರರ ಮುಷ್ಕರಕ್ಕೆ ಸೆಡ್ಡು ಹೊಡೆಯುವ ಸಲುವಾಗಿ ಖಾಸಗಿ ವಾಹನಗಳನ್ನ ರಸ್ತೆಗಿಳಿಸಲು ಸರ್ಕಾರ ಸಜ್ಜಾಗಿದೆ. ಹೀಗಾಗಿ ಇಂದು ಟ್ಯಾಕ್ಸಿ, ಮಿನಿ ಕ್ಯಾಬ್ ಮತ್ತು ಬಸ್ ಮಾಲೀಕರೊಂದಿಗೆ ಸಾರಿಗೆ ಸಚಿವರು ಚರ್ಚಿಸಿ ಸಭೆ ನಡೆಸಿದ್ದಾರೆ. ಈ ಹಿಂದೆ ಖಾಸಗಿ ವಾಹನಗಳ ಮಾಲೀಕರು ಸರ್ಕಾರದ ಮುಂದೆ ಇಟ್ಟಿದ್ದ ಆರು ಬೇಡಿಕೆಗಳನ್ನ ಈಡೇರಿಸುವ ಜೊತಗೆ ಒಂದು ತಿಂಗಳ ಟ್ಯಾಕ್ಸ್ ರಿಲ್ಯಾಕ್ಸ್ಲೇಷನ್ ನೀಡುವುದಾಗಿ ಭರವಸೆ ನೀಡಿದ್ದು, ಖಾಸಗಿ ವಾಹನಗಳನ್ನ ರಸ್ತೆಗೆ ಇಳಿಸುವಂತೆ ತಿಳಿಸಲಾಗಿದೆ. ಇದಕ್ಕೆ ಖಾಸಗಿ ವಾಹನಗಳ ಮಾಲೀಕರು ಒಪ್ಪಿಕೊಂಡಿದ್ದು ಮುಷ್ಕರದ ದಿನ ವಾಹನಗಳನ್ನ ರಸ್ತೆಗೆ ಇಳಿಸುವುದಾಗಿ ತಿಳಿಸಿದ್ದಾರೆ.

  • ಕೊಟ್ಟ ಗಡುವು ಮುಗಿಯಿತು, ಸಮಾಧಾನ ಮಾತುಗಳನ್ನು ಬಿಟ್ಟು, ಅಭಿವೃದ್ದಿ ಕಡೆಗೆ ಗಮನ ಕೊಡಿ: ಕೋಡಿಹಳ್ಳಿ

    ಕೊಟ್ಟ ಗಡುವು ಮುಗಿಯಿತು, ಸಮಾಧಾನ ಮಾತುಗಳನ್ನು ಬಿಟ್ಟು, ಅಭಿವೃದ್ದಿ ಕಡೆಗೆ ಗಮನ ಕೊಡಿ: ಕೋಡಿಹಳ್ಳಿ

    ಬೆಂಗಳೂರು: ಸಾರಿಗೆ ನೌಕರರ ಬೇಡಿಕೆ ವಿಚಾರ ಕುರಿತಂತೆ, ನಿಮಗೆ ಕೊಟ್ಟ ಗಡುವು ಮುಗಿಯಿತು. ಸಮಾಧಾನ ಪಡಿಸುವ ಮಾತುಗಳನ್ನು ಬಿಟ್ಟು, ಅಭಿವೃದ್ದಿ ಕಡೆಗೆ ಗಮನ ಕೊಡಿ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್ ಹೇಳಿದ್ದಾರೆ

    ಈ ವಿಚಾರವಾಗಿ ಇಂದು ಪಬ್ಲಿಕ್ ಟಿವಿ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಸರ್ಕಾರದ ವಿರುದ್ಧ ಡಿಸೆಂಬರ್ 10 ರಿಂದ 14ರವರೆಗೂ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕೊನೆಗೂ ಸರ್ಕಾರ ಸಾರಿಗೆ ನೌಕರರ 9 ಬೇಡಿಕೆಗಳನ್ನು ಈಡೇರಿಸುವುದಾಗಿ ಪ್ರಕಟಿಸಿತ್ತು. ಅಲ್ಲದೆ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಮಾರ್ಚ್ 15 ರವರೆಗೂ ಅಂತಿಮ ಗಡುವು ನೀಡಲಾಗಿತ್ತು. ಆದರೆ ಇಲ್ಲಿಯವರೆಗೂ ಸರ್ಕಾರ ಒಂದೇ ಒಂದು ಬೇಡಿಕೆ ಪೂರ್ಣಗೊಳಿಸಿಲ್ಲ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    6ನೇ ವೇತನ ಆಯೋಗದ ವರದಿ ಏನಾಯ್ತು? ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿಯಂತೂ ಮಾಡಲಿಲ್ಲ. ಆದರೆ ಉಳಿದ 9 ಬೇಡಿಕೆಯಾದರೆ ಪೂರೈಸಬೇಕಿತ್ತು. ಕೇವಲ ಮಾಧ್ಯಮಗಳ ಮುಂದೆ ಬೇಡಿಕೆ ಪೂರೈಕೆಯ ಪ್ರಕಟಣೆಯಷ್ಟೇ ಮುಂದಿಟ್ಟಿದ್ದೀರಾ. ಸಾರಿಗೆ ನಿಗಮಗಳ ಪ್ರಕಟಣೆ ಜಾರಿಗೊಳಿಸುವ ಕೆಲಸವನ್ನು ಮಾಡಿಯೇ ಇಲ್ಲ. 7 ದಿನಗಳಲ್ಲಿ ಮುಗಿಸಬೇಕಾದ ಕೆಲಸಗಳು ಇನ್ನೂ ಕಾರ್ಯಗತವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ನಿಮ್ಮ ರಾಜಕೀಯ ನಾಯಕರು ಮಂತ್ರಿಗಿರಿ ಸಿಗದಿದ್ದಾಗ ಅದಕ್ಕೆ ಸಮಾಧಾನ ಮಾಡಲು ನಿಗಮಗಳ ಮುಂದಿಟ್ಟು ಖರ್ಚು ಮಾಡುತ್ತಾ ಇದ್ದೀರಾ? ಇದು ಸರಿ ಇಲ್ಲ. ಅಲ್ಲದೆ ಸಾರಿಗೆ ನಷ್ಟ ಭರಿಸಲು ನೌಕರರ ಸಂಬಳ ಕಟ್ ಮಾಡುತ್ತಿರುವುದು ನ್ಯಾಯಬದ್ದವಲ್ಲ. ಸೇವಾ ಸಂಸ್ಥೆಗಳು ಉಚಿತವಾಗಿ ಸೇವೆ ನೀಡಲಿ. ಆದರೆ ನೌಕರನಿಗೆ ಹೊರೆ ಬೇಡ. ಕೋಟಿ ಗಟ್ಟಲೆ ಇರುವ ಸಂಸ್ಥೆ ನಷ್ಟಕ್ಕೆ ನೀವೇ ಹೊಣೆಯಾಗಲಿದ್ದೀರಿ ಎಂದು ಪ್ರತಿಭಟನೆ ಎಚ್ಚರಿಕೆ ನೀಡಿದರು

    ಸರ್ಕಾರಕ್ಕೆ ನೀಡಿದ ಗಡುವು ಅಂತಿಮಗೊಳ್ಳುತ್ತಿದೆ ಆದರೆ ಇಲ್ಲಿಯವರೆಗೂ ಈ ಕುರಿತಂತೆ ಯಾವುದೇ ಮಾತುಕತೆ ನಡೆಸಿಲ್ಲ. ಕೇವಲ ಘೋಷಣೆಗಳ ಪೂರೈಕೆ ಬಗ್ಗೆ ಭರವಸೆ ಮಾತ್ರ ಕೊಡುತ್ತಿದ್ದೀರಿ. ಇದು ಬೇಡ. ಸರ್ಕಾರ ಸಾರಿಗೆ ನೌಕರರ ವಿಚಾರವಾಗಿ ಗಮನ ಹರಿಸಿ ಬೇಡಿಕೆ ಈಡೇರಿಸಿ ಎಂದು ಹೇಳಿದರು.