Tag: Kodishree

  • ರಾಜ್ಯ, ಕೇಂದ್ರ ಸರ್ಕಾರದ ಬಗ್ಗೆ ಕೋಡಿಮಠದ ಶ್ರೀಗಳ ಭವಿಷ್ಯವಾಣಿ ಏನು?

    ರಾಜ್ಯ, ಕೇಂದ್ರ ಸರ್ಕಾರದ ಬಗ್ಗೆ ಕೋಡಿಮಠದ ಶ್ರೀಗಳ ಭವಿಷ್ಯವಾಣಿ ಏನು?

    ಹಾಸನ: ಈಗಿನ ಕಾಲದಲ್ಲಿ ಕೃಷ್ಣ ಇಲ್ಲದೇ ದುರ್ಯೋಧನ ಗೆಲ್ಲುತ್ತಾನೆ. ರಾಜ್ಯ ಮತ್ತು ಕೇಂದ್ರದಲ್ಲಿ ಇದೇ ಆಗೋದು ಎಂದು ಕೋಡಿಮಠದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ (Rajendra Mahaswamiji) ಭವಿಷ್ಯ ನುಡಿದಿದ್ದಾರೆ.

    ಜಿಲ್ಲೆಯ ಅರಸೀಕೆರೆ (Arsikere) ತಾಲೂಕಿನ ಹಾರನಹಳ್ಳಿ ಗ್ರಾಮದ ಕೋಡಿಮಠದಲ್ಲಿ ಮಾತನಾಡಿದ ಅವರು, ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕತ್ತರಿಸಿದ್ದರು. ಮಹಾಭಾರತದಲ್ಲಿ ಕೃಷ್ಣ ಇದ್ದ, ಗದಾಯುದ್ಧದಲ್ಲಿ ಭೀಮಾ ಗೆದ್ದ. ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ಲುತ್ತಾನೆ. ಸೆಂಟ್ರಲ್‌ನಲ್ಲೂ, ಸ್ಟೇಟ್‌ಲ್ಲೂ ಆಗೋದು ಎಂದು ಪರೋಕ್ಷವಾಗಿ ಹೇಳಿದ್ದಾರೆ.ಇದನ್ನೂ ಓದಿ: ಪೋಕ್ಸೋ ಕೇಸ್ – ಬಿಎಸ್‍ವೈಗೆ ತಾತ್ಕಾಲಿಕ ರಿಲೀಫ್

    ಸರ್ಕಾರಕ್ಕೆ ಏನು ತೊಂದರೆ ಆಗಲ್ಲ ಎಂದು ಹೆಂದೆಯೇ ಹೇಳಿದ್ದೆ ಎಂದು ತಿಳಿಸಿದ್ದಾರೆ. ಪ್ರಕೃತಿ ವಿಕೋಪ ಕುರಿತು ಮಾತನಾಡಿ, ಮಳೆ ಇನ್ನೂ ಮುಂದುವರೆಯಲಿದೆ. ಜಾಸ್ತಿ ತೊಂದರೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

    ಪ್ರಾಕೃತಿಕ ದೋಷವಿದ್ದು ಭೂಮಿ, ಅಗ್ನಿ, ವಾಯು, ಆಕಾಶದಿಂದ ಎಲ್ಲಾ ಕಡೆ ತೊಂದರೆ ಆಗಲಿದೆ ಎಂದು ಎಚ್ಚರಿಸಿದ್ದಾರೆ. ಜನ ಇದ್ದಂಗೆ ಸಾಯ್ತಾರೆ. ಭೂಮಿ ಬಿರುಕು ಬಿಡುತ್ತದೆ. ಗುಡ್ಡ ಕುಸಿದು ಹೋಗುತ್ತದೆ. ಪ್ರವಾಹದಲ್ಲಿ ಜಗತ್ತು ಮುಳುಗುತ್ತದೆ ಎಂದು ಹಿಂದೊಮ್ಮೆ ನಾನು ಹೇಳಿದ್ದೇನೆ. ಇನ್ನೂ ಮಳೆಯಾಗಲಿದೆ. ಅದರಿಂದ ಅನಾಹುತ ಸಂಭವಿಸುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಮೃತ ವೈದ್ಯೆ ಕುಟುಂಬಕ್ಕೆ ಹಣ ನೀಡಲು ಪ್ರಯತ್ನಿಸಿಲ್ಲ, ಇದು ಹಸಿ ಸುಳ್ಳು: ಮಮತಾ ಬ್ಯಾನರ್ಜಿ ತಿರುಗೇಟು

  • ಕೊರೊನಾ ಅಧಿಕಾರಸ್ತರನ್ನು, ಮಂತ್ರಿಗಳನ್ನು ಬಲಿ ತೆಗೆದುಕೊಳ್ಳಲಿದೆ: ಕೋಡಿಶ್ರೀ ಭವಿಷ್ಯ

    ಕೊರೊನಾ ಅಧಿಕಾರಸ್ತರನ್ನು, ಮಂತ್ರಿಗಳನ್ನು ಬಲಿ ತೆಗೆದುಕೊಳ್ಳಲಿದೆ: ಕೋಡಿಶ್ರೀ ಭವಿಷ್ಯ

    – ರಾಜರಿಗೆ ತೊಂದರೆ, ರಾಜಭೀತಿ ಉಂಟಾಗಲಿದೆ

    ಹಾಸನ: ಕೊರೊನಾದಿಂದಾಗಿ ಜಾಗತಿಕ ಮಟ್ಟದಲ್ಲಿ ರಾಜರಿಗೆ ರಾಜೀಕ ಭೀತಿ ಉಂಟಾಗಲಿದ್ದು, ರಾಜರಿಗೆ ತೊಂದರೆ, ನೋವು ಕಾಯಿಲೆ, ಅಪಮಾನ, ರಾಜಭೀತಿ ಉಂಟಾಗಲಿದೆ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ.

    ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಕೋಡಿಮಠದಲ್ಲಿ ಮಾತನಾಡಿದ ಶಿವಯೋಗಿ ರಾಜೇಂದ್ರ ಶಿವಾಚಾರ್ಯ ಸ್ವಾಮೀಜಿ, ಜಗತ್ತಿನ ಎಲ್ಲಾ ರಾಷ್ಟ್ರಗಳಿಗೆ ರಾಜಭೀತಿ ಉಂಟಾಗಲಿದೆ. ಬರುವ ದಿನಗಳು ಹೆಚ್ಚು ಅಗೋಚರವಾಗಲಿದೆ ಭೂಮಿ ನಡುಗಲಿದೆ, ವಿಪರೀತ ಮಳೆಯಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಳ್ಳಿಗಳಲ್ಲಿ ಕೊರೊನಾ ಮರಣ ಮೃದಂಗ ಭಾರಿಸಲಿದೆ: ಕೋಡಿಶ್ರೀ ಭವಿಷ್ಯ

    ಈ ಕೊರೊನಾ ದೊಡ್ಡದೊಡ್ಡ ಜನರನ್ನು ಅಧಿಕಾರಸ್ತರನ್ನು ಮತ್ತು ಮಂತ್ರಿಗಳನ್ನು ಬಲಿ ತೆಗೆದುಕೊಳ್ಳಲಿದೆ. ಕೊರೊನಾನಾದಿಂದ ರಾಜರು ಮಾಡುವ ಶಾಸನಗಳು ಪ್ರಜೆಗಳ ವಿರೋಧಿಯಾಗಲಿದೆ. ದಟ್ಟವಾದ ಮೋಡ ಕವಿದು ಕತ್ತಲಾಗಲಿದೆ ಈ ಮಧ್ಯೆ ಒಂದು ಮಿಂಚು ಬಂದು ಮೋಡ ದೂರ ಸರಿಸಲಿದೆ. ಕಾರ್ಮೋಡವಾಗಿ ಬಂದಿರುವ ಈ ಕೊರೊನಾ ಮುಂದೆ ಒಳ್ಳೆಯ ಚಿಂತನೆ ಕೊಡಲಿದೆ. ಎರಡು ಮೂರು ತಿಂಗಳಲ್ಲಿ ಕೊರೊನಾ ಕಡಿಮೆಯಾಗಲಿದೆ ಎಂದು ಕೋಡಿಶ್ರೀ ಭವಿಷ್ಯ ನುಡಿದಿದ್ದಾರೆ.