Tag: Kolar police

  • ಕೋಲಾರದಲ್ಲಿಂದು ಸಾವಿರಾರು ಗಣವೇಷಧಾರಿಗಳಿಂದ ಪಥಸಂಚಲನ – ಪೊಲೀಸ್‌ ಬಿಗಿ ಬಂದೋಬಸ್ತ್

    ಕೋಲಾರದಲ್ಲಿಂದು ಸಾವಿರಾರು ಗಣವೇಷಧಾರಿಗಳಿಂದ ಪಥಸಂಚಲನ – ಪೊಲೀಸ್‌ ಬಿಗಿ ಬಂದೋಬಸ್ತ್

    ಕೋಲಾರ: ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ (RSS Route March) ಪ್ರಕರಣ ದಿನದಿಂದ ದಿನಕ್ಕೆ ಜಟಿಲವಾಗುತ್ತಿದ್ದು, ಹೈಕೋರ್ಟ್ ಸೂಚನೆ ಮೇರೆಗೆ ಇಂದು ಜಿಲ್ಲಾಡಳಿತ ಆರ್‌ಎಸ್‌ಎಸ್ ಸೇರಿ 8 ಸಂಘಟನೆಗಳಿಗೆ ಶಾಂತಿ ಸಭೆಗೆ ಆಗಮಿಸಲು ನೋಟಿಸ್ ನೀಡುತ್ತಿದೆ. ಹೀಗಾಗಿ ಜಿಲ್ಲಾಡಳಿತದ ಶಾಂತಿ ಸಭೆಯ ನಿರ್ಧಾರದತ್ತ ಇದೀಗ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ಆರ್‌ಎಸ್‌ಎಸ್‌ ಶತಮಾನೋತ್ಸವದ ಪ್ರಯುಕ್ತ ಕೋಲಾರದ (Kolara) ಮಾಲೂರಿನಲ್ಲಿ ಇಂದು ಪಥಸಂಚಲನ ಹಮ್ಮಿಕೊಳ್ಳಲಾಗಿದೆ.

    ಪಥಸಂಚಲನಕ್ಕೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅನುಮತಿ ಪಡೆಯಲಾಗಿದೆ. ಹೀಗಾಗಿ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಪಥಸಂಚಲನ ಆರಂಭವಾಗಲಿದ್ದು, ಒಟ್ಟು 4 ಕಿಮೀ ಪಥಸಂಚನ ನಡೆಯಲಿದೆ. ಸಾವಿರಾರು ಗಣವೇಶಧಾರಿಗಳು ಇದರಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.

    ಎಲ್ಲೆಲ್ಲಿ ಪಥಸಂಚಲನ?
    ಮಾಲೂರು ಹೋಂಡಾ ಸ್ಟೇಡಿಯಂ ನಿಂದ ಆರಂಭವಾಗಿ ಪಥಸಂಚನಲ ಶುರುವಾಗಿ ಬಿಇಓ ಆಫೀಸ್ ರಸ್ತೆ ಮಾರ್ಗವಾಗಿ ಕುವೆಂಪು ವೃತ್ತ, ಧರ್ಮರಾಯ ಸ್ವಾಮಿ ದೇವಾಲಯ, ಅಗ್ರಹಾರ ಬೀದಿ, ಕುಂಬಾರಪೇಟೆ ವೃತ್ತ. ದೊಡ್ಡಪೇಟೆ, ಮಹಾರಾಜ ಸರ್ಕಲ್, ಬಾಬುರಾವ್ ರಸ್ತೆ, ಕೆಂಪೇಗೌಡ ಸರ್ಕಲ್, ಮಾರಿಕಾಂಭಾ ಸರ್ಕಲ್, ಬ್ರಹ್ಮಕುಮಾರಿ ರಸ್ತೆ, ಅರಳೇರಿ ರಸ್ತೆಯ ಮೂಲಕ ಮತ್ತೆ ಹೋಂಡಾ ಸ್ಟೇಡಿಯಂ ನಲ್ಲಿ ಕೊನೆಗೊಳ್ಳಲಿದೆ.

    ಬಿಗಿ ಬಂದೋಬಸ್ತ್‌
    ಆರ್‌ಎಸ್‌ಎಸ್ ಪಥ ಸಂಚಲನ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸುಮಾರು 250 ಹೆಚ್ಚು ಪೊಲೀಸರಿಂದ ಭದ್ರತೆ ನೀಡಲಾಗಿದೆ. ಮಾಜಿ ಶಾಸಕರು, ಮಾಜಿ ಸಂಸದರು ಸೇರಿ ನೂರಾರು ಮುಖಂಡರು ಪಥಚಂದಲನದಲ್ಲಿ ಪಾಲ್ಗೊಳ್ಳಲಿದ್ದಾರೆ.

  • ಕೋಲಾರ | 1998ರಲ್ಲಿ ಕೇಸ್‌ – 27 ವರ್ಷದ ಬಳಿಕ ಆರೋಪಿ ಅರೆಸ್ಟ್‌

    ಕೋಲಾರ | 1998ರಲ್ಲಿ ಕೇಸ್‌ – 27 ವರ್ಷದ ಬಳಿಕ ಆರೋಪಿ ಅರೆಸ್ಟ್‌

    ಕೋಲಾರ: 1998ರಲ್ಲಿ ದಾಖಲಾಗಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 27 ವರ್ಷಗಳ ಬಳಿಕ ಕೋಲಾರದ ಗಲ್ ಪೇಟೆ ಪೊಲೀಸರು ಆರೋಪಿಯನ್ನ (Accused) ಬಂಧಿಸಿದ್ದಾರೆ. ಇದನ್ನೂ ಓದಿ: KRIDLನಲ್ಲಿ ಬಹುಕೋಟಿ ಹಗರಣ – ಬಿಜೆಪಿ ಮಾಜಿ ಶಾಸಕನ ವಿರುದ್ಧ ಅಕ್ರಮ ಆರೋಪ

    ನಗರದ ಕೋಟೆ ಬಡಾವಣೆಯ ನಿವಾಸಿ ಪ್ಯಾರೇಜಾನ್ ಬಂಧಿತ ಆರೋಪಿ. ಈತ 1998ರಲ್ಲಿ ಜಗಳ ಮಾಡಿಕೊಂಡಿದ್ದ. ಈತನ ವಿರುದ್ಧ ಗಲ್‌ ಪೇಟೆ ಪೊಲೀಸರು ಹಲ್ಲೆ, ಪ್ರಾಣ ಬೆದರಿಕೆ, ನಷ್ಟ ಉಂಟು ಮಾಡಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ಖಾಸಗಿ ಶಾಲೆಗಳ ದಾಖಲಾತಿಗೆ ಸರ್ಕಾರದಿಂದ ರೂಲ್ಸ್ – ಪೋಷಕರ ಸಂದರ್ಶನ, ಮನಸೋ ಇಚ್ಛೆ ಫೀಸ್‌ಗೆ ಬ್ರೇಕ್

    ಇದೀಗ ಸೂಕ್ತ ಮಾಹಿತಿ ಆಧರಿಸಿ ಆರೋಪಿಯನ್ನ ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದಾರೆ. ಆರೋಪಿ ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿದ ಪೇದೆ ಮಂಜುನಾಥ್ ಅವರಿಗೆ ಪೊಲೀಸ್‌ ಇಲಾಖೆ (Kolara Police Department) ಅಭಿನಂದನೆ ಸಲ್ಲಿಸಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಎಫೆಕ್ಟ್‌; ಕಾರಿನ ಮೇಲೆ ಬಿದ್ದ ಮರದ ಕೊಂಬೆ – ಬೈಕ್‌ ಸವಾರ ಜಸ್ಟ್‌ ಮಿಸ್‌

  • ಯುವಕರ ಶೋಕಿಗಳಿಗೆ ಬ್ರೇಕ್ ಹಾಕಿ ಶಿಸ್ತಿನ ಬುದ್ಧಿ ಕಲಿಸುತ್ತಿದ್ದಾರೆ ಕೋಲಾರ ಪೊಲೀಸರು!

    ಯುವಕರ ಶೋಕಿಗಳಿಗೆ ಬ್ರೇಕ್ ಹಾಕಿ ಶಿಸ್ತಿನ ಬುದ್ಧಿ ಕಲಿಸುತ್ತಿದ್ದಾರೆ ಕೋಲಾರ ಪೊಲೀಸರು!

    ಕೋಲಾರ: ಶಾಲಾ ಬಾಲಕಿ ಅತ್ಯಾಚಾರ ಯತ್ನ, ಕೊಲೆ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಕೋಲಾರ ಪೊಲೀಸರು ಯುವಕರ ಶೋಕಿಗಳಿಗೆ ಬ್ರೇಕ್ ಹಾಕಿ ಶಿಸ್ತಿನ ಬುದ್ಧಿ ಕಲಿಸುತ್ತಿದ್ದಾರೆ.

    ಸ್ಟೈಲಿಷ್ ಗಡ್ಡದಾರಿಗಳಿಗೆ, ಪುಂಡ ಪೋಕರಿಗಳನ್ನು ಅಟ್ಟಗಟ್ಟಿ ಖುದ್ದು ಪೊಲೀಸರೇ ತಲೆ ಬೋಳಿಸಿ ಸಮಾಜದಲ್ಲಿ ಶಿಸ್ತಾಗಿರುವಂತೆ ಸಂದೇಶ ರವಾನೆ ಮಾಡುತ್ತಿದ್ದರೆ. ಚಿತ್ರ ವಿಚಿತ್ರ ಗಡ್ಡ, ತಲೆಗೂದಲು ಬಿಟ್ಟ ಯುವಕರನ್ನು ಹಿಡಿದು ಮಾಲೂರು ಪೊಲೀಸರು ಸಲ್ಯೂನ್ ಗೆ ಕರೆದುಕೊಂಡು ಹೋಗಿ ಖುದ್ದು ಶೇವಿಂಗ್, ಹೇರ್ ಕಟ್ ಮಾಡಿಸಿ ಯುವಕರಿಗೆ ಅರಿವು ಮೂಡಿಸುತ್ತಿದ್ದಾರೆ.

    ಕಳೆದ ಗುರುವಾರ ಮಾಲೂರು ಪಟ್ಟಣದಲ್ಲಿ ವಿದ್ಯಾರ್ಥಿನಿಯನ್ನು ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಲಾಗಿತ್ತು. ಕೊಲೆ ಪ್ರಕರಣ ಇಡೀ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಬಾಲಕಿ ಹತ್ಯೆ ಪ್ರಕರಣ ನಂತರ ಎಚ್ಚೆತ್ತುಕೊಂಡಿರುವ ಮಾಲೂರು ಪೊಲೀಸ್ ಇಲಾಖೆ ಯುವಕರಿಗೆ ಶಿಸ್ತಿನ ಪಾಠ ಕಲಿಕೆಗೆ ಮುಂದಾಗಿದ್ದಾರೆ.

    ಪುಂಡ ಪೋಕರಿಗಳನ್ನು ಮಟ್ಟ ಹಾಕಲು ಕೋಲಾರ ಜಿಲ್ಲಾ ಪೊಲೀಸ್ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ರೋಡ್ ರೋಮಿಯೋ, ಬೈಕ್ ವಿಲ್ಹೀಂಗ್ ಮಾಡುವ ಯುವಕರನ್ನು ಪತ್ತೆ ಹಚ್ಚಿ ಶಿಸ್ತಿನ ಪಾಠ ಕಲಿಸುತ್ತಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆ ಸಿಕ್ಕಿದೆ.