Tag: Kolar

  • ಚಲಿಸುತ್ತಿದ್ದ ಅಟೋ ಮೇಲೆ ಮರ ಬಿದ್ದು ಚಾಲಕ ಸಾವು, ಇಬ್ಬರಿಗೆ ಗಂಭೀರ ಗಾಯ

    ಚಲಿಸುತ್ತಿದ್ದ ಅಟೋ ಮೇಲೆ ಮರ ಬಿದ್ದು ಚಾಲಕ ಸಾವು, ಇಬ್ಬರಿಗೆ ಗಂಭೀರ ಗಾಯ

    ಕೋಲಾರ: ಚಲಿಸುತ್ತಿದ್ದ ಅಟೋ ಮೇಲೆ ಮರ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪ್ರಯಾಣಿಕರಿಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಸೀತನಾಯಕನಹಳ್ಳಿ ಬಳಿ ನಡೆದಿದೆ.

    ಹರಪನಹಳ್ಳಿ ನಿವಾಸಿ 26 ವರ್ಷದ ಆಟೋ ಚಾಲಕ ರಘು ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳಿಬ್ಬರನ್ನು ಸಮೀಪದ ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಆಟೋ ಸೀತನಾಯಕನ ಹಳ್ಳಿ ಮಾರ್ಗದಲ್ಲಿ ಬರುತ್ತಿದ್ದ ವೇಳೆ ಮರವೊಂದು ಕೆಳಗೆ ಬಿದ್ದಿದೆ. ಆಟೋದ ಮುಂಭಾಗಕ್ಕೆ ಮರ ಬಿದ್ದಿದ್ದರಿಂದ ಚಾಲಕನ ತಲೆಗೆ ಗಂಭೀರವಾಗಿ ಪೆಟ್ಟಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಆಟೋ ಹಿಂದೆ ಕೂತು ಪ್ರಯಾಣ ಮಾಡುತ್ತಿದ್ದವರಿಗೆ ಗಂಭೀರವಾಗಿ ಗಾಯವಾಗಿದೆ.

    ಈ ಘಟನೆ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಇಟ್ಟಿಗೆ ಕಾರ್ಖಾನೆ ಚಿಮಿಣಿ ಬಿದ್ದು ಒಂದೇ ಕುಟುಂಬದ ಮೂವರ ಸಾವು

    ಇಟ್ಟಿಗೆ ಕಾರ್ಖಾನೆ ಚಿಮಿಣಿ ಬಿದ್ದು ಒಂದೇ ಕುಟುಂಬದ ಮೂವರ ಸಾವು

    ಕೋಲಾರ: ಇಟ್ಟಿಗೆ ಕಾರ್ಖಾನೆಯ ಚಿಮಿಣಿ ಬಿದ್ದು ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ರಾಜ್‍ಪೇಟೆ ಸಮೀಪದಲ್ಲಿ ಇಂದು ಮುಂಜಾನೆ ನಡೆದಿದೆ.

    ಜೋಡಿಕೃಷ್ಣ ಪುರಂನ ನಿವಾಸಿಗಳಾದ ಬಾಷಾ(60), ಫಾತಿಮಾ (50) ಮತ್ತು ಐದು ವರ್ಷದ ಅವರ ಮೊಮ್ಮಗ ನಯಾಜ್ ಮೃತ ದುರ್ದೈವಿಗಳು. ಜೈರಾಜ್ ಎಂಬವರಿಗೆ ಸೇರಿದ ಹಳೆಯ ಇಟ್ಟಿಗೆ ಕಾರ್ಖಾನೆ ಇದಾಗಿದ್ದು, ಇತ್ತೀಚಿಗೆ ಮಳೆ ಬೀಳುತ್ತಿರುವ ಪರಿಣಾಮವಾಗಿ ಚಿಮಿಣಿ ಕುಸಿದು ಬಿದ್ದಿದ್ದೆ.

    ಚಿಮಣಿಯ ಪಕ್ಕದ ಶೆಡ್ ನಲ್ಲಿ ಮಲಗಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಾಷಾ ಮತ್ತು ಫಾತಿಮಾ ಇದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದಾರೆ. ಈ ಸಂಬಂಧ ಅಂಡ್ರಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ತಂದೆ ಸಾವಿನಿಂದ ಖಿನ್ನತೆಗೊಳಗಾಗಿ ಯುವಕ ಆತ್ಮಹತ್ಯೆ

    ತಂದೆ ಸಾವಿನಿಂದ ಖಿನ್ನತೆಗೊಳಗಾಗಿ ಯುವಕ ಆತ್ಮಹತ್ಯೆ

    ಕೋಲಾರ: ತಂದೆ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ಯುವಕ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲೂಕು ಮುದವತ್ತಿ ಗ್ರಾಮದಲ್ಲಿ ಘಟನೆ.

    ಇಲ್ಲಿನ ಛತ್ರಕೋಡಿಹಳ್ಳಿ ನಿವಾಸಿಯಾದ 27 ವರ್ಷದ ನಾಗೇಶ್ ಆತ್ಮಹತ್ಯೆ ಮಾಡಿಕೊಂಡ ಯುವಕ. ಕೆಲವು ದಿನಗಳ ಹಿಂದೆ ನಾಗೇಶ್ ತಂದೆ ಸಾವನ್ನಪ್ಪಿದ್ದರು. ಇದರಿಂದ ಆತ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ.

    ಕಳೆದ ರಾತ್ರಿ ಊರಾಚೆ ಇರುವ ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ರಮೇಶ್ ಕುಮಾರ್

    ಸಭೆಯಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಹಾಡಿ ಹೊಗಳಿದ ರಮೇಶ್ ಕುಮಾರ್

    ಕೋಲಾರ: ಇಷ್ಟು ವರ್ಷದವರೆಗೂ ಯಾವ ಮುಖ್ಯಮಂತ್ರಿಗಳು ರೈತರ ಸಾಲವನ್ನು ಮನ್ನಾ ಮಾಡಿರಲಿಲ್ಲ. ಜಿಲ್ಲೆಗೆ ನಿರ್ಧಿಷ್ಟ ನೀರಾವರಿ ಯೋಜನೆಯನ್ನೂ ಮಾಡುವ ಗಂಡಸ್ತನವನ್ನು ಹೊಂದಿರಲಿಲ್ಲ. ಆದರೆ ನಮ್ಮ ಸಿಎಂ ರೈತರ ಸಾಲಮನ್ನಾ ಹಾಗೂ ಜಿಲ್ಲೆಗೆ ನಿರ್ಧಿಷ್ಟ ನೀರಾವರಿ ಯೋಜನೆ ಮಾಡಿದ್ದಾರೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ.

    ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಮನವೊಲಿಕೆ ಹಾಗೂ ಹೋರಾಟಗಾರರ ಸಭೆಯಲ್ಲಿ ರಮೇಶ್ ಕುಮಾರ್ ಮಾತನಾಡಿ ಸರ್ಕಾರದ ಸಾಧನೆಯನ್ನು ವಿವರಿಸಿದರು.

    20 ರಂದು ಕೋಲಾರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನದ ಹಿನ್ನಲೆ ನಗರದ ಪ್ರವಾಸಿ ಮಂದಿರದಲ್ಲಿ ರಮೇಶ್ ಕುಮಾರ್ ನೇತೃತ್ವದಲ್ಲಿ ಹೋರಾಟಗಾರರ ಮನವೊಲಿಸುವ ಸಭೆ ಯಶಸ್ವಿಯಾಯಿತು. ಅಲ್ಲದೆ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಯಾವುದೇ ಅಡೆತಡೆಗಳನ್ನು ಮಾಡದಂತೆ ಮನವಿ ಮಾಡಿದರು. ಇನ್ನೂ 11 ಜನ ನೀರಾವರಿ ಹೋರಾಟಗಾರರ ಮೇಲಿನ ಪ್ರಕರಣಗಳನ್ನ ಹಿಂಪಡೆಯುವ ಕುರಿತು ಸರ್ಕಾರದ ಗಮನ ಸೆಳೆಯುವ ಭರವಸೆಯನ್ನು ನೀಡಿದರು.

     ಕೆಜೆ ಜಾರ್ಜ್ ಗಣಪತಿ ಪ್ರಕರಣದಲ್ಲಿ  ಜಾರ್ಜ್ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಗಣಪತಿ ವಿಸರ್ಜನೆಯಾಗಿದೆ ಎಂದು ಹೇಳಿ ವ್ಯಂಗ್ಯವಾಡಿದರು. ಅಲ್ಲದೆ ಆರೋಪ ಸಾಭೀತಾದ ತಕ್ಷಣ ರಾಜೀನಾಮೆ ನೀಡುವಂತೆ ಯಾವ ಸುಪ್ರಿಂಕೋರ್ಟ್ ಆದೇಶ ಮಾಡಿಲ್ಲ. ಜೊತೆಗೆ ರಾಜೀನಾಮೆಗೆ ಆಗ್ರಹಿಸುವವರು ಸುಪ್ರಿಂಕೋರ್ಟ್ ಆದೇಶವನ್ನು ಮೊದಲು ಸರಿಯಾಗಿ ಓದಲಿ ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.

    ವೈಚಾರಿಕ ಅಭಿಪ್ರಾಯ ಭೇದ ವಿಕಾರ ರೂಪಕ್ಕೆ ತಾಳದೆ ಗೌರವಯುತವಾಗಿ ನಡೆದುಕೊಳ್ಳಬೇಕು ಹೀಗೆ ನಡೆದುಕೊಂಡರೆ ಮಾತ್ರ ನಾಯಕರಾಗಿ ದೇಶದ ಜನತೆಗೆ ಮಾದರಿಯಾಗಿರಲು ಸಾಧ್ಯವೆಂದು ರಮೇಶ್ ಕುಮಾರ್ ಹೇಳಿದರು.

  • ವಿಡಿಯೋ: ಕಾರ್ಮಿಕನ ಕೈ ಯಂತ್ರಕ್ಕೆ ಸಿಲುಕಿ ನರಳಾಟ

    ವಿಡಿಯೋ: ಕಾರ್ಮಿಕನ ಕೈ ಯಂತ್ರಕ್ಕೆ ಸಿಲುಕಿ ನರಳಾಟ

    ಕೋಲಾರ: ಕಾರ್ಖಾನೆಯಲ್ಲಿ ಕಾರ್ಮಿಕನ ಕೈ ಯಂತ್ರಕ್ಕೆ ಸಿಲುಕಿ ನರಳಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

    ಕೋಲಾರ ಜಿಲ್ಲೆ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದ್ವಿಚಕ್ರ ವಾಹನದ ಬಿಡಿಭಾಗಗಳನ್ನು ತಯಾರಿಸುವ ಸಾಯಿನಾಥ ಇಂಡಸ್ಟ್ರೀಸ್‍ನಲ್ಲಿ ಘಟನೆ ನಡೆದಿದೆ. ಆದ್ರೆ ಇದರ ಬಗ್ಗೆ ಎಲ್ಲೂ ಬಾಯಿ ಬಿಡದಂತೆ ಕಾರ್ಖಾನೆ ನೌಕರರಿಗೆ ಮಾಲೀಕರು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

    ಬಿಹಾರ ಮೂಲದ ಈ ಕಾರ್ಮಿಕನಿಗೆ ಗಾಯವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    https://www.youtube.com/watch?v=ncV-kx-M9dQ&feature=youtu.be

  • ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆ

    ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆ

    ಬೆಂಗಳೂರು: ಶನಿವಾರ ಸಂಜೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣದೇವ ಕೃಪೆ ತೋರಿದ್ದಾನೆ. ಇನ್ನೂ ಕೆಲವು ಕಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ.

    ಚಿಕ್ಕಬಳ್ಳಾಪುರ: ಜಿಲ್ಲೆ ಚಿಂತಾಮಣಿಯಲ್ಲಿ ವರುಣನ ಆರ್ಭಟ ಜೋರಾಗಿತ್ತು. ಚಿಂತಾಮಣಿ ನಗರದಲ್ಲಿ ಸಂಜೆಯಿಂದಲೂ ಬಿಟ್ಟು ಬಿಡದೆ ಮಳೆರಾಯ ಅಬ್ಬರಕ್ಕೆ ನಗರದ ಎಲ್ಲಾ ರಸ್ತೆಗಳು ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ನಗರದ ಎಂಜಿ ರಸ್ತೆಯ ಮಧ್ಯೆ ಭಾರೀ ಹಳ್ಳವೊಂದು ವಾಹನ ಸವಾರರಿಗೆ ಕಾಣದೆ ನೀರಿನ ಮಧ್ಯೆ ವಾಹನ ಸವಾರರು ಪರದಾಡುವಂತಾಗಿದೆ. ಮತ್ತೊಂದೆಡೆ ಚಿಕ್ಕಬಳ್ಳಾಪುರ-ಚಿಂತಾಮಣಿ ಮಾರ್ಗದ ರಾಷ್ಟ್ರೀಯ ಹೆದ್ದಾರಿ 234 ರ ತಾತ್ಕಾಲಿಕ ರಸ್ತೆ ಭಾರೀ ಮಳೆಗೆ ಕೊಚ್ಚಿ ಹೋಗಿದೆ.

    ಇದ್ದರಿಂದ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಎರಡು ಬದಿಯಲ್ಲಿ ವಾಹನ ಸವಾರರು ಹೈರಾಣಾಗಿದ್ದಾರೆ. ಅಂದ ಹಾಗೆ ನೂತನ ಹೆದ್ದಾರಿ ನಿರ್ಮಾಣ ಸಂಬಂಧ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಕಾರಣ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಲಾಗಿತ್ತು. ಇನ್ನೂ ಚಿಂತಾಮಣಿಯ ಕರಿಯಪ್ಪನಹಳ್ಳಿ ಬಳಿಯ ರೈಲ್ವೆ ಅಂಡರ್ ಪಾಸ್ ನಲ್ಲಿ 3-4 ಅಡಿ ನೀರು ತುಂಬಿಕೊಂಡಿರುವ ಪರಿಣಾಮ ವಾಹನಗಳ ಸಂಚಾರಕ್ಕೆ ತಡೆ ಉಂಟಾಗಿತ್ತು. ರೈಲ್ವೆ ಅಂಡರ್ ಪಾಸ್ ನಲ್ಲಿ ಕೆಎಸ್‍ಆರ್‍ಟಿಸಿ ಬಸ್ ಹಾಗೂ ಟಾಟಾ ಏಸ್ ಕೆಟ್ಟು ನಿಂತಿದ್ದವು. ಮಳೆಯಿಲ್ಲದೆ ಕಂಗೆಟ್ಟಿದ್ದ ಚಿಂತಾಮಣಿ ಜನರಿಗೆ ಒಂದೆಡೆ ಸಂತೋಷ ಆದರೆ. ಮತ್ತೊಂದೆಡೆ ಸಂಕಟ ಎದುರಾಗಿದೆ.

    ಹಾವೇರಿ: ಜಿಲ್ಲೆಯಲ್ಲಿ ರಾತ್ರಿಯಾಗುತ್ತಿದ್ದಂತೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು, ಬ್ಯಾಡಗಿ, ಹಿರೇಕೆರೂರು ಸೇರಿದಂತೆ ಶಿಗ್ಗಾಂವಿ ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗುತ್ತದೆ. ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಅಲ್ಲದೆ ಹಾವೇರಿ ನಗರದಲ್ಲಿನ ನೀರು ಚರಂಡಿ ತುಂಬಿ ಹೆದ್ದಾರಿಯಲ್ಲಿ ಹರಿಯುತ್ತಿದೆ. ವಾಹನ ಸವಾರರು ನಗರದಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯುತ್ ಸಹ ಕೆಲ ಕಾಲ ಸ್ಥಗಿತಗೊಂಡಿತು. ಜಿಲ್ಲೆಯ ಅನ್ನದಾತರು ಹರ್ಷಗೊಂಡಿದ್ದಾರೆ.

     

    ಕೋಲಾರ: ತುಂಬಿ ಹರಿಯುತ್ತಿರುವ ರಾಜಾಕಾಲುವೆಗಳು, ಮೈದುಂಬಿ ಮುಗುಳ್ನಗುತ್ತಿರುವ ಸಣ್ಣ ಸಣ್ಣ ಕೆರೆಗಳು, ದೊಡ್ಡದಾದ ಕೆರೆಯಲ್ಲಿ ಚಿತ್ತಾರ ದಂತೆ ಅಲ್ಲಲ್ಲಿ ನಿಂತಿರುವ ನೀರು, ಇದೆಲ್ಲಾ ಕಂಡು ಬಂದಿದ್ದು ಬರಗಾಲದ ತವರು ಜಿಲ್ಲೆ ಕೋಲಾರ ಜಿಲ್ಲೆಯಲ್ಲಿ. ಹೌದು ಬರಗಾಲದಿಂದ ತತ್ತರಿಸಿ ಹೋಗಿದ್ದ ಕೋಲಾರ ಜಿಲ್ಲೆ ನಿಜಕ್ಕೂ ಇಂಥಾದೊಂದು ಮಳೆಯನ್ನು ಕಂಡು ಕನಿಷ್ಠ 15 ವರ್ಷಗಳೇ ಕಳೆದು ಹೋಗಿತ್ತು. ಸದಾ ಬಿರು ಬಿಸಿಲಿನಿಂದ ಬೇಯುತ್ತಿದ್ದ ಜಿಲ್ಲೆಯಲ್ಲಿ ಮಳೆ ಮರಿಚಿಕೆಯಾಗಿತ್ತು. ಆದರೆ ಕಳೆದೊಂದು ವಾರದಿಂದ ಜಿಲ್ಲೆಯ ವಿವಿಧೆಡೆ ಸುರಿಯುತ್ತಿರುವ ಧಾರಾಕಾರ ಮಳೆ ಆ ಜಿಲ್ಲೆಯ ಅದೆಷ್ಟೋ ಬಡಜೀವಗಳ ಬೇಡಿಕೆಯನ್ನು ಈಡೇರಿಸಿದೆ. ಪರಿಣಾಮ ಜಿಲ್ಲೆಯಲ್ಲಿನ ಸಣ್ಣ ಪುಟ್ಟ ಕೆರೆಗಳು ಮತ್ತು ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಇದರಿಂದ ಜಿಲ್ಲೆಯ ಜನ ನಿಜಕ್ಕೂ ಪುಲ್ ಖುಷಿಯಾಗಿದ್ದಾರೆ.

    ಜಿಲ್ಲಾಡಳಿತ ಹೇಳುವಂತೆ ಜಿಲ್ಲೆಯಲ್ಲಿ ಸುಮಾರು 400 ಕ್ಕೂ ಹೆಚ್ಚು ಸಣ್ಣ ಪುಟ್ಟ ಕೆರೆಗಳು ತುಂಬಿವೆಯಂತೆ. ಶೇಖರಣೆಯಾಗಿರುವ ನೀರು ಪೋಲಾಗದಂತೆ ಕ್ರಮ ಕೈಗೊಳ್ಳಲಾಗುವುದು ಪಾತಾಳ ಸೇರಿರುವ ಅಂತರ್ಜಲ ಮಟ್ಟ ಸುಧಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಈ ವರ್ಷ ಕೋಲಾರ ಜಿಲ್ಲೆಯಲ್ಲಿ ಆರಂಭದಲ್ಲಿ ಮುಂಗಾರು ಮಳೆ ಕೈಕೊಟ್ಟಿತ್ತು. ನಂತರ ಬಂದ ಅಲ್ಪ ಸ್ವಲ್ಪ ಮಳೆಗೆ ಜಿಲ್ಲೆಯ ರೈತರು ರಾಗಿ, ಹುರುಳಿ, ಜೋಳ ಸೇರಿದಂತೆ ಅಲ್ಪಾವದಿ, ದೀರ್ಘಾವಧಿ ದ್ವಿದಳ ಬೆಳೆಗಳನ್ನು ಬಿತ್ತನೆ ಮಾಡಿದ್ದರು. ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿರುವ ಬೆಳೆಗೆ ಸಹಕಾರಿಯಾಗಿದೆ. ಕಳೆದ ಹತ್ತು ಹದಿನೈದು ವರ್ಷಗಳಿಂದ ಕಾಣದ ಇಂಥ ಮಳೆಯನ್ನು ಕಂಡಿರುವ ಜಿಲ್ಲೆಯ ರೈತರು ಪುಲ್ ಖುಷಿಯಾಗಿದ್ದಾರೆ. ಆದರೆ ಜಿಲ್ಲಾಡಳಿತ ಮನಸ್ಸು ಮಾಡಿ ಒತ್ತುವರಿಯಾಗಿರುವ ರಾಜಕಾಲುವೆ ಹಾಗೂ ಕೆರೆಗಳ ಒತ್ತುವರಿ ತೆರವು ಮಾಡಿದರೆ ಬೀಳುವ ಅಲ್ಪ ಸ್ವಲ್ಪ ಮಳೆಯ ನೀರು ಸರಾಗವಾಗಿ ಕೆರೆ ಸೇರುತ್ತದೆ. ಹಾಗಾಗಿ ಕೂಡಲೇ ಜಿಲ್ಲಾಡಳಿತ ಒತ್ತುವರಿ ತೆರವುಗೊಳಿಸಬೇಕು ಅನ್ನೋದು ಜಿಲ್ಲೆಯ ಜನರ ಒತ್ತಾಯಿಸುತ್ತಿದ್ದಾರೆ.

    ಚಿತ್ರದುರ್ಗ: ಮಳೆ ಇಲ್ಲದೆ ಕಂಗಲಾಗಿದ್ದ ಬರದ ನಾಡು ಚಿತ್ರದುರ್ಗಕ್ಕೆ ವರುಣ ಕೃಪೆ ತೋರಿದ್ದಾನೆ. ವರುಣನ ಕೃಪೆಗೆ ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕಿನ ಜನರು ಅಬ್ಬಬ್ಬಾ ಅನ್ನುವಂತೆ ಮಾಡಿದ್ದಾನೆ. ಹಲವು ವರ್ಷಗಳ ನಂತರ 4 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿ ರಾತ್ರಿ ಪೂರ್ತಿ ಜಾಗರಣೆ ಮಾಡುವಂತಾಗಿತ್ತು. ಇನ್ನೂ ಮುಂಜಾನೆಯಿಂದ ಮನೆಗೆ ನುಗಿದ ನೀರನ್ನ ಹೊರ ಹಾಕುವ ಕಾಯಕ ಮಾಡಬೇಕಾಯಿತು. ನಗರದ ಸಾಧಿಕ್ ನಗರ, ನೆಹರೂ ನಗರ, ಆಜಾರ್ ನಗರ, ಮಾರುತಿ ನಗರ ಹಾಗೂ ಹೊಸಪೇಟೆ ರಸ್ತೆಗಳು ಜಲಾವೃತಗೊಂಡಿದ್ದವು. ಇನ್ನೂ ಮೇದೆಹಳ್ಳಿಯ ಬಸವರಾಜ್ ಅನ್ನೋರಿಗೆ ಸೇರಿದ ಮನೆ ಕುಸಿದು ಸಾಕಷ್ಟು ತೊಂದರೆ ಅನುಭವಿಸುವಂತಾಗಿತ್ತು. ಅಷ್ಟೇ ಅಲ್ಲದೆ ಚಳ್ಳಕೆರೆಯ ಗೋಪನಹಳ್ಳಿಯ ಗ್ರಾಮದಲ್ಲಿ ಸುರಿದ ಧಾರಾಕಾರ ವರ್ಷಧಾರೆಗೆ ದೊಡ್ಡಹಳ್ಳ ತುಂಬಿ ಹರಿಯುತ್ತಿದೆ. ಗ್ರಾಮದ ಮನೆಗಳು, ಅಂಗನವಾಡಿ, ತೋಟ ಹಾಗೂ ಜಮೀನುಗಳಿಗೆ ನೀರು ನುಗ್ಗಿದೆ. ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಮಳೆ ನೀರಿನಿಂದಾಗಿ ರಾತ್ರಿ ಕೆಲ ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

    ನೆಲಮಂಗಲ: ಬೆಂಗಳೂರು ಹೊರವಲಯದ ನೆಲಮಂಗಲ ಪಟ್ಟಣ ಸೇರಿದಂತೆ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ಕಳೆದ 1 ಗಂಟೆಯಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಮ್ಯಾನ್ ಹೋಲ್ ಗಳು ಸೇರಿದಂತೆ ರಾಜಕಾಲುವೆಗಳು ತುಂಬಿ ಹರಿಯುತ್ತಿವೆ. ಧಾರಕಾರ ಮಳೆಯಿಂದಾಗಿ ಜನರು ಆತಂಕ ಪಡುವ ಪರಿಸ್ಥಿತಿ ಎದುರಾಗಿದೆ. ಮನೆಗಳಿಗೆ ತೆರಳುವಾಗ ವಾಹನ ಸವಾರರು ಮಳೆಯ ರುದ್ರ ನರ್ತನಕ್ಕೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಅಲ್ಲದೆ ಬೆಳಗ್ಗೆಯಿಂದ ಮೋಡ ಕವಿದ ವಾತವರಣ ಆವರಿಸಿದ್ದು ಸಂಜೆ ವೇಳೆಗೆ ಆಗಮಿಸಿದ ವರುಣನ ಆರ್ಭಟಕ್ಕೆ ಪಟ್ಟಣದ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

  • 100ಕ್ಕೂ ಹೆಚ್ಚು ದಲಿತ ಕುಟುಂಬಗಳಿರೋ ಕೋಲಾರದ ಈ ಗ್ರಾಮಕ್ಕೆ ಬೇಕಿದೆ ರಸ್ತೆಯ ಕಾಯಕಲ್ಪ

    100ಕ್ಕೂ ಹೆಚ್ಚು ದಲಿತ ಕುಟುಂಬಗಳಿರೋ ಕೋಲಾರದ ಈ ಗ್ರಾಮಕ್ಕೆ ಬೇಕಿದೆ ರಸ್ತೆಯ ಕಾಯಕಲ್ಪ

    ಕೋಲಾರ: ಕನಿಷ್ಠ ಸೌಲಭ್ಯಗಳಿಂದ ವಂಚಿತವಾಗಿರುವ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಗ್ರಾಮದ ಹೆಸರು ಕಂಬಿಪುರ. ಗ್ರಾಮದಲ್ಲಿ 80 ಕ್ಕೂ ಹೆಚ್ಚು ಮನೆಗಳಿವೆ. ಇಲ್ಲಿ ಶೇ. 100ರಷ್ಟು ದಲಿತ ಕುಟುಂಬಗಳೇ ವಾಸವಾಗಿವೆ.

    ದುರಂತ ಅಂದ್ರೆ ಸ್ವಾತಂತ್ರ್ಯ ಸಿಕ್ಕಿ 70 ವರ್ಷಗಳೇ ಕಳೆದ್ರೂ ಈ ಗ್ರಾಮಕ್ಕೆ ರಸ್ತೆ ಇಲ್ಲದಿರುವುದು. ರಸ್ತೆ ಮಾಡಿಕೊಡಿ ಸ್ವಾಮಿ ಅಂತ ಕಾಲಿಗೆ ಬಿದ್ದು ಅಂಗಲಾಚಿದ್ರೂ ಕೂಡ ರಸ್ತೆ ಮಾಡಿಲ್ಲ. ಅಷ್ಟೆ ಅಲ್ಲ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳು ಕೂಡ ಇಲ್ಲ. ಈ ಹಿಂದೆ ಅನೇಕ ಪ್ರತಿಭಟನೆ ಹೋರಾಟಗಳನ್ನು ಮಾಡಲಾಗಿದೆ. ಮತದಾನ ಬಹಿಷ್ಕಾರ ಮಾಡಿದ್ರು ಯಾರೊಬ್ಬರೂ ಕರುಣೆ ತೋರಿಲ್ಲ. ಸರಿಯಾದ ರಸ್ತೆ ಇಲ್ಲದಿರುವುದರಿಂದ ಮಕ್ಕಳು, ಮಹಿಳೆಯರು ಪ್ರತಿನಿತ್ಯ ಇನ್ನಿಲ್ಲದ ಸಂಕಟ ಅನುಭವಿಸುತ್ತಿದ್ದಾರೆ.

    ಗ್ರಾಮದ ದುಸ್ಥಿತಿಯನ್ನ ಕಂಡ ಕೆನರಾ ಬ್ಯಾಂಕ್ 2 ವರ್ಷಗಳ ಹಿಂದೆ ಗ್ರಾಮವನ್ನ ದತ್ತು ಪಡೆದಿದೆ. ಅಂದು ಶುದ್ಧ ಕುಡಿಯುವ ನೀರಿನ ಘಟಕ ಮಾಡಿ ಹೋದವರು ಇದುವರೆಗೂ ಗ್ರಾಮದ ಕಡೆ ತಿರುಗಿಯೂ ನೋಡಿಲ್ಲ. ನಮಗೆ ಬೇರೆನೂ ಬೇಡ, ರಸ್ತೆಯನ್ನ ಮಾಡಿಕೊಟ್ರೆ ಸಾಕು. ನಮ್ಮ ಜೀವನ ನಾವು ಮಾಡಿಕೊಳ್ಳುತ್ತೇವೆ. ಗ್ರಾಮಕ್ಕೆ ಹೊಂದಿಕೊಂಡಂತೆ ಕೆರೆ, ರಾಜ ಕಾಲುವೆ, ಖಾಸಗಿ ಜಮೀನು ಇದೆ. ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸಿ ಈ ಗ್ರಾಮದ ನೆರವಿಗೆ ಬರಬೇಕಿದೆ ಅಂತಾರೆ ಗ್ರಾಮಸ್ಥರು.

    ಒಟ್ಟಿನಲ್ಲಿ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಗ್ರಾಮಕ್ಕೆ ಅಧಿಕಾರಿಗಳು, ಜನಪ್ರತಿನಿಧಿಗಳಿಂದ ಕಾಯಕಲ್ಪ ಬೇಕಾಗಿದೆ. ರಸ್ತೆಗಾಗಿ ಗ್ರಾಮದವರು ಸದ್ಯ ಪಬ್ಲಿಕ್ ಟಿವಿಯಿಂದ ಬೆಳಕಿನ ಆಸರೆ ಬಯಸಿದ್ದಾರೆ.

    https://youtu.be/yOp78KVPVrI

     

     

  • ಮತಗಟ್ಟೆ ಬಳಿ ಕಾಂಗ್ರೆಸ್, ವರ್ತೂರ್ ಪ್ರಕಾಶ್ ಬೆಂಬಲಿಗರಿಂದ ಲಾಂಗು-ಮಚ್ಚು ಪ್ರದರ್ಶನ ಪ್ರಕರಣ: ಕೇಸ್ ಖುಲಾಸೆ

    ಮತಗಟ್ಟೆ ಬಳಿ ಕಾಂಗ್ರೆಸ್, ವರ್ತೂರ್ ಪ್ರಕಾಶ್ ಬೆಂಬಲಿಗರಿಂದ ಲಾಂಗು-ಮಚ್ಚು ಪ್ರದರ್ಶನ ಪ್ರಕರಣ: ಕೇಸ್ ಖುಲಾಸೆ

    ಕೋಲಾರ: 2013ರ ವಿಧಾನಸಭಾ ಚುನಾವಣೆ ವೇಳೆ ಮತಗಟ್ಟೆ ಬಳಿ ಕೋಲಾರ ನಗರದಲ್ಲಿ ಲಾಂಗು ಮಚ್ಚು ಪ್ರದರ್ಶಿಸಿದ ಪ್ರಕರಣವನ್ನ ಖುಲಾಸೆಗೊಳಿಸಿ 1ನೇ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

    2013ರ ಮೇ 5ರಂದು ವಿಧಾನಸಭಾ ಚುನಾವಣೆ ವೇಳೆ ಕೋಲಾರದ ಜೂನಿಯರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್ ಮತ್ತು ವರ್ತೂರ್ ಪ್ರಕಾಶ್ ಬೆಂಬಲಿಗರಿಂದ ಲಾಂಗು, ಮಚ್ಚು ಪ್ರದರ್ಶನ ನಡೆದಿತ್ತು. ಈ ವೇಳೆ ನಗರಸಭಾ ಸದಸ್ಯ ಪ್ರಸಾದ್ ಬಾಬು ಸೇರಿದಂತೆ ಐದು ಜನರ ವಿರುದ್ಧ ಅಂದಿನ ನಗರಠಾಣೆ ಇನ್ಸ್ ಪೆಕ್ಟರ್ ಜಗದೀಶ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ರು.

    ಪ್ರಕರಣವನ್ನ ಕೈಗೆತ್ತಿಕೊಂಡ ಕೋಲಾರದ 1ನೇ ಜಿಲ್ಲಾ ಸತ್ರ ಮತ್ತು ಹೆಚ್ಚುವರಿ ನ್ಯಾಯಾಲಯದ ಎದುರು ಸಾಕ್ಷ್ಯಾಧಾರಗಳನ್ನ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಕೇಸ್ ಖುಲಾಸೆಗೊಳಿಸಿದೆ. ಅಂದು ಯಾವುದೇ ಗಲಾಟೆ ನಡೆದಿಲ್ಲ. ಅದೊಂದು ರಾಜಕೀಯ ಪ್ರೇರಿತ ಗಲಾಟೆ ಎಂದು ಆರೋಪಿತರ ಪರ ಹಿರಿಯ ವಕೀಲ ಮೊಹಮ್ಮದ್ ಹನೀಫ್ ಅವರು ವಾದ ಮಂಡಿಸಿದರು.

    ಪೊಲೀಸರು, ಪ್ರತ್ಯಕ್ಷದರ್ಶಿಗಳು ಸೇರಿದಂತೆ 16 ಸಾಕ್ಷ್ಯಾಧಾರವನ್ನ ಪರಿಗಣಿಸಿದ ನ್ಯಾಯಾಧೀಶ ಎನ್‍ವಿ ವಿಜಯ್ ಅವರು ಮೂರು ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿ ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನಲೆಯಲ್ಲಿ ಪ್ರಕರಣವನ್ನ ಖುಲಾಸೆಗೊಳಿಸಿದ್ದಾರೆ.

    https://youtu.be/AlaHyfaY038

  • ಫೈಟ್ ಮಾಡಿ ಕೊನೆಗೆ ನಾಗರಹಾವನ್ನು ಗುಳುಂ ಮಾಡಿತು ಹುಂಜ: ವಿಡಿಯೋ ನೋಡಿ

    ಫೈಟ್ ಮಾಡಿ ಕೊನೆಗೆ ನಾಗರಹಾವನ್ನು ಗುಳುಂ ಮಾಡಿತು ಹುಂಜ: ವಿಡಿಯೋ ನೋಡಿ

    ಕೋಲಾರ: ಬುಸುಗುಟ್ಟಿದ ನಾಗರಹಾವನ್ನು ಸಲೀಸಾಗಿ ಹುಂಜ ನುಂಗಿದ ಘಟನೆಯೊಂದು ವಕ್ಕಲೇರಿ ಗ್ರಾಮದಲ್ಲಿ ನಡೆದಿದ್ದು ವಿಡಿಯೋ ವೈರಲ್ ಆಗಿದೆ.

    ಮಂಜುನಾಥ್ ಎಂಬುವವರ ಮನೆಯಲ್ಲಿರುವ ಹುಂಜ ಈ ಸಾಹಸ ಮಾಡಿದೆ. ಮನೆಯ ಹತ್ತಿರ ತಿರುಗಾಡುತ್ತಿದ್ದಾಗ ಅಲ್ಲಿ ನಾಗರಹಾವಿನ ಮರಿಯೊಂದು ಕಾಣಿಸಿಕೊಂಡಿತ್ತು. ತನ್ನ ಮೇಲೆ ಬುಸುಗುಟ್ಟಿದ ನಾಗರಹಾವನ್ನು ಕಂಡು ಅದನ್ನು ಹಿಡಿಯಲು ಹುಂಜ ನಾಗರಹಾವಿನ ಜೊತೆ ಸೆಣಸಾಡಿದೆ.

    ನಾಗರಹಾವು ಹಾಗೂ ಹುಂಜ ಸೆಣಸಾಡಿ ಕೊನೆಯಲ್ಲಿ ನಾಗರಹಾವುವನ್ನೇ ಸಲಿಸಾಗಿ ನುಂಗಿ ನೀರು ಕುಡಿದಿದೆ. ಹುಂಜ ಹಾಗೂ ನಾಗರಹಾವಿನ ನಡುವಿನ ಕಾಳಗದ ಭಯಾನಕ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು ವೈರಲ್ ಆಗುತ್ತಿದೆ.

    http://www.youtube.com/watch?v=KALZ-I6b5pU

  • ಇಂದಿರಾ ಆಯ್ತು.. ಅಪ್ಪಾಜಿ ಆಯ್ತು ಈಗ ಶೆಟ್ಟಿ ಕ್ಯಾಂಟೀನ್-ಬೆಳಗ್ಗೆ ಇಲ್ಲಿ ಉಪಹಾರ ಉಚಿತ

    ಇಂದಿರಾ ಆಯ್ತು.. ಅಪ್ಪಾಜಿ ಆಯ್ತು ಈಗ ಶೆಟ್ಟಿ ಕ್ಯಾಂಟೀನ್-ಬೆಳಗ್ಗೆ ಇಲ್ಲಿ ಉಪಹಾರ ಉಚಿತ

    ಕೋಲಾರ: ಕರ್ನಾಟಕದಲ್ಲಿ ಕ್ಯಾಂಟೀನ್ ಪಾಲಿಟಿಕ್ಸ್ ಸದ್ದು ಜೋರಾಗಿದೆ. ಕಾಂಗ್ರೆಸ್ ಇಂದಿರಾ ಕ್ಯಾಂಟೀನ್ ಆಯ್ತು. ಜೆಡಿಎಸ್‍ನ ಅಪ್ಪಾಜಿ ಕ್ಯಾಂಟೀನ್ ಆಯ್ತು. ಈಗ ಬಿಜೆಪಿ ಮುಖಂಡ ಕೃಷ್ಣಯ್ಯ ಶೆಟ್ಟಿ ಕ್ಯಾಂಟೀನ್ ಶುರು ಮಾಡಿದ್ದಾರೆ.

    ಕೋಲಾರ ಜಿಲ್ಲೆ ಮಾಲೂರು ತಾಲೂಕು ಟೇಕಲ್ ಗ್ರಾಮದ ರೈಲ್ವೆ ನಿಲ್ದಾಣದ ಬಳಿ ಕೃಷ್ಣಯ್ಯ ಶೆಟ್ಟಿ ಅವರು, ತಮ್ಮದೇ ಹೆಸರಿನಲ್ಲಿ ಕ್ಯಾಂಟೀನ್ ಶುರು ಮಾಡಿದ್ದಾರೆ. ಕ್ಷೇತ್ರದಿಂದ ದೂರ ಉಳಿದಿದ್ದ ಕೃಷ್ಣಯ್ಯಶೆಟ್ಟಿ ಈಗ ಎಲೆಕ್ಷನ್ ಹೊತ್ತಲ್ಲಿ ಟಿಕೆಟ್ ಪಡೆಯೋಕೆ ಹೊಸ ಪ್ಲ್ಯಾನ್ ಮಾಡಿದ್ದಾರೆ. ಪ್ರತಿ ದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆವರೆಗೆ ಉಚಿತವಾಗಿ ಉಪಹಾರ ನೀಡುತ್ತಿದ್ದಾರೆ. ಸದ್ಯ ಮಾಲೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿರುವ ಕೃಷ್ಣಯ್ಯ ಶೆಟ್ಟಿ ಈಗ ಮತ್ತೆ ಕ್ಷೇತ್ರದಲ್ಲಿ ಅಖಾಡಕ್ಕಿಳಿದಿದ್ದಾರೆ.

     

    ಇನ್ನು ಕೃಷ್ಣಯ್ಯಶೆಟ್ಟಿಯವರು ಹೀಗೆ ಟೇಕಲ್ ರೈಲು ನಿಲ್ದಾಣದ ಬಳಿ ಕ್ಯಾಂಟೀನ್ ಆರಂಭ ಮಾಡುತ್ತಿರುವುದು ಸ್ಥಳೀಯ ಕೆಲವು ಹೋಟೆಲ್ ಮಾಲೀಕರುಗಳಿಂದ ಅಸಮದಾನ ವ್ಯಕ್ತವಾಗಿದೆ. ಹಲವಾರು ವರ್ಷಗಳಿಂದ ಟೇಕಲ್ ರೈಲು ನಿಲ್ದಾಣದ ಬಳಿ ಸುಮಾರು ಐದಾರು ಕುಟುಂಬಗಳು ಸಣ್ಣ ಪುಟ್ಟ ಹೋಟೆಲ್ ನಡೆಸಿಕೊಂಡು ಜೀವನ ನಡೆಸುತ್ತಿದ್ದಾರೆ. ಆದ್ರೆ ಈಗ ಕೃಷ್ಣಯ್ಯ ಶೆಟ್ಟಿಯವರು ಉಚಿತ ಶೆಟ್ಟಿ ಕ್ಯಾಂಟೀನ್ ಆರಂಭ ಮಾಡಿರುವುದು ಹೋಟೆಲ್‍ಗಳಿಗೆ ಬೀಗ ಹಾಕುವ ಪರಿಸ್ಥಿತಿ ಬಂದಿದೆ.