Tag: kolara

  • 30*40 ಮನೆ ವಿದ್ಯುತ್ ಸಂಪರ್ಕದ ಓಸಿಗೆ ಅಸ್ತು – ಲಕ್ಷಾಂತರ ಜನಕ್ಕೆ ಗುಡ್‌ನ್ಯೂಸ್‌ ಕೊಟ್ಟ ಡಿಕೆಶಿ

    30*40 ಮನೆ ವಿದ್ಯುತ್ ಸಂಪರ್ಕದ ಓಸಿಗೆ ಅಸ್ತು – ಲಕ್ಷಾಂತರ ಜನಕ್ಕೆ ಗುಡ್‌ನ್ಯೂಸ್‌ ಕೊಟ್ಟ ಡಿಕೆಶಿ

    ಕೋಲಾರ: ರಾಜ್ಯದಲ್ಲಿ 30*40 ನಿವೇಶನದಲ್ಲಿ ಮನೆ ಕಟ್ಟಿರುವವರಿಗೆ ವಿದ್ಯುತ್ (Electricity) ಸಂಪರ್ಕ ಕಲ್ಪಿಸುವ ಓಸಿ ಕೊಡೋದಕ್ಕೆ ಅನಮೋದನೆ ಸಿಕ್ಕಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ತಿಳಿಸಿದ್ದಾರೆ.

    ಕೋಲಾರದಲ್ಲಿ (Kolara) ಮಾಲೂರಿನ ಮಾರಿಕಾಂಭ ದೇವಾಲಯಕ್ಕೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್‌ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಇನ್ನೂ ಎರಡೂವರೆ ವರ್ಷ ಅಷ್ಟೇ ಬಾಕಿಯಿದೆ ನೀವು ಸಿಎಂ ಆಗ್ತೀರಾ? ಎಂದು ಪತ್ರಕರ್ತರ ಪ್ರಶ್ನೆಗೆ ನುಣುಚಿಕೊಂಡ ಡಿಕೆಶಿ, ಓಸಿ ಬಗ್ಗೆ ಗುಡ್‌ನ್ಯೂಸ್‌ ಕೊಟ್ಟರು.‌

    ರಾಜ್ಯದಲ್ಲಿ 30*40 ನಿವೇಶನದಲ್ಲಿ ಮನೆ ಕಟ್ಟಿಕೊಂಡಿರುವವರಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಓಸಿ ಕೊಡೋದಕ್ಕೆ ಅನಮೋದನೆ ಸಿಕ್ಕಿದೆ. ಇಂದು ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಬೆಂಗಳೂರಿನಲ್ಲಿ ಮೂರ್ನಾಲ್ಕು ಲಕ್ಷ ಜನ 30*40 ನಿವೇಶನದಲ್ಲಿ ಮನೆ ಕಟ್ಟಿದ್ರು. ಅವರೆಲ್ಲರಿಗೂ ಇದು ಅನುಕೂಲವಾಗಲಿದೆ. ಮಾಲೂರಿನ ಮಾರಿಕಾಂಭ ಸನ್ನಿಧಿಯಲ್ಲಿ ಈ ಶುಭ ಸುದ್ದಿಯನ್ನು ತಿಳಿಸುತ್ತಿದ್ದೇನೆ ಎಂದು ಹೇಳಿದರು.

    ಮುಂದುವರಿದು.. ಎತ್ತಿನಹೊಳೆ ಯೋಜನೆ ಕೋಲಾರ-ಚಿಕ್ಕಬಳ್ಳಾಪುರದ ಕೆಲವೆಡೆ ಭೂಮಿ ಪಡೆಯುವ ಕೆಲಸ ಆಗಬೇಕಿದೆ. ಉಳಿದಂತೆ ಆ ಭಾಗದಲ್ಲಿ ಪೈಪ್‌ಲೈನ್ ಕೆಲಸ ಮುಗಿದಿದೆ ಎಂದರು.

    ಇನ್ನೂ ಕೋಲಾರಕ್ಕೆ ನೀರು ಬರೋದು ಅನುಮಾನವಿಲ್ಲ ಅನ್ನೋ ಬಿಜೆಪಿ ಟೀಕೆಗೆ ಪ್ರತಿಕ್ರಿಯಿಸಿ, ಅದು ಬಿಜೆಪಿ ಯೋಜನೆಯಲ್ಲ, ನಮ್ಮ ಯೋಜನೆ. ಮೊದಲಿನಿಂದಲೂ ಆ ಯೋಜನೆಯನ್ನ ಬಿಜೆಪಿ ವಿರೋಧ ಮಾಡ್ತಾ ಬರ್ತಾ ಇದ್ರು. ಆ ಯೋಜನೆ ನಮ್ಮ ಸರ್ಕಾರದ್ದು ನಾವು ಪೂರ್ಣಗೊಳಿಸುತ್ತೇವೆ ಎಂದು ಹೇಳಿದರು.

  • ಮರಕ್ಕೆ ಕಾರು ಡಿಕ್ಕಿ – ಗರ್ಭಿಣಿ ಸಾವು

    ಮರಕ್ಕೆ ಕಾರು ಡಿಕ್ಕಿ – ಗರ್ಭಿಣಿ ಸಾವು

    ಕೋಲಾರ: ಮರಕ್ಕೆ ಕಾರು ಡಿಕ್ಕಿ ಹೊಡೆದು ಗರ್ಭಿಣಿ (Pregnant) ಮೃತಪಟ್ಟ ಘಟನೆ ಮಾಲೂರು ತಾಲ್ಲೂಕು ಭಾವನಹಳ್ಳಿಯಲ್ಲಿ ನಡೆದಿದೆ.

    ಅರ್ಚನಾ (25) ಸಾವನ್ನಪ್ಪಿದ ಗರ್ಭಿಣಿ. ಕೊರಚೂರು ಮೂಲದ ಚಾಲಕ ಪತಿಗೆ ಗಾಯಗೊಂಡು ಆಸ್ಪತ್ರೆಗೆ(Hospital) ದಾಖಲಾಗಿದ್ದಾರೆ.  ಇದನ್ನೂ ಓದಿ: 30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಬಂಧನ

    ರಸ್ತೆ ಬದಿಯಲ್ಲಿದ್ದ ಮಾವಿನ ಮರಕ್ಕೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ರಸ್ತೆ ಬದಿಯ ಬಳಿಮಾವಿನ ಮರ ಇದ್ದ ಕಾರಣ ಕಾರು ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಮಾಲೂರು ಪೊಲೀಸರ ಭೇಟಿ ಪ್ರಕರ ದಾಖಲು.

  • ಕೋಲಾರದಲ್ಲಿ ಮೂರು ಕಾರುಗಳ ನಡುವೆ ಸರಣಿ ಅಪಘಾತ – ಬೆಂಗಳೂರು ಮೂಲದ ವ್ಯಕ್ತಿ ಸಾವು!

    ಕೋಲಾರದಲ್ಲಿ ಮೂರು ಕಾರುಗಳ ನಡುವೆ ಸರಣಿ ಅಪಘಾತ – ಬೆಂಗಳೂರು ಮೂಲದ ವ್ಯಕ್ತಿ ಸಾವು!

    ಕೋಲಾರ: ಮೂರು ಕಾರುಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ (Series Accident) ಬೆಂಗಳೂರು ಮೂಲದ ವ್ಯಕ್ತಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಕೋಲಾರ (Kolara) ತಾಲೂಕಿನ ನರಸಾಪುರ ಬಳಿಯ ಬೆಳ್ಳೂರು ಬ್ರಿಡ್ಜ್ ನಡೆದಿದೆ.

    ಬೆಂಗಳೂರಿನ ಆರ್‌.ಟಿ ನಗರದ (Bengaluru RT Nagara) ನಿವಾಸಿ ಅಫ್ರೋಜ್ ಮೃತ ದುರ್ದೈವಿ. ಬೆಳ್ಳೂರು ಗೇಟ್‌ ಬಳಿಯ ಚೆನ್ನೈ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 76ರಲ್ಲಿ ಇಂಡಿಕಾ, ಫಾರ್ಚುನರ್‌ ಹಾಗೂ ಪೊಲೋ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಇದನ್ನೂ ಓದಿ: Pahalgam Attack | AK-47, M4 ರೈಫಲ್‌ ಹೊತ್ತು, ದಟ್ಟ ಕಾಡಿನಲ್ಲಿ 22 ಗಂಟೆ ನಡೆದುಕೊಂಡೇ ಬಂದಿದ್ದ ಉಗ್ರರು

    ಈ ವೇಳೆ ಪೊಲೋ ಕಾರಿನಲ್ಲಿದ್ದ ಬೆಂಗಳೂರು ಆರ್‌.ಟಿ ನಗರದ ನಿವಾಸಿ ಅಫ್ರೂಜ್‌ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಅಫ್ರೂಜ್‌ ಮುಳಬಾಗಿಲಿನ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ತೆರಳಿದ್ದರು. ಇನ್ನೂ ಘಟನೆಯಲ್ಲಿ ಗಾಯಗೊಂಡ ಐವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಬಾರ್‌ನಲ್ಲಿ ಸೈಲೆನ್ಸ್ ಎಂದವನ ಕೊಲೆ – ನಾಲ್ವರ ಬಂಧನ

    ಸ್ಥಳಕ್ಕೆ ವೇಮಗಲ್ ಠಾಣೆಯ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ರಾಯಚೂರು | ಸಿಡಿಲು ಬಡಿದು ವ್ಯಕ್ತಿ ಸಾವು – ಆಲಿಕಲ್ಲು ಮಳೆಗೆ ಕೋಟ್ಯಂತರ ರೂ. ಮೌಲ್ಯದ ಭತ್ತ ಹಾನಿ

  • ಕೋಲಾರ | ಇನ್ನೋವಾ ಕಾರಿಗೆ ಬೈಕ್‌ ಡಿಕ್ಕಿ – ನಾಲ್ವರು ಸ್ಥಳದಲ್ಲೇ ಸಾವು

    ಕೋಲಾರ | ಇನ್ನೋವಾ ಕಾರಿಗೆ ಬೈಕ್‌ ಡಿಕ್ಕಿ – ನಾಲ್ವರು ಸ್ಥಳದಲ್ಲೇ ಸಾವು

    ಕೋಲಾರ: ಇನ್ನೋವಾ ಕಾರು (Innova Car) ಹಾಗೂ ಬೈಕ್‌ ನಡುವೆ ಡಿಕ್ಕಿ  ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ (Bangarpet) ತಾಲೂಕಿನ ಕುಪ್ಪನಹಳ್ಳಿ ಬಳಿ ನಡೆದಿದೆ.

    ಕೋಲಾರದ ನೂತನ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ (Bengaluru Chennai expressway) ಘಟನೆ ನಡೆದಿದೆ. ಕಾರಿನಲ್ಲಿದ್ದ ಮಹೇಶ (45), ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಬೈಕ್‌ ಸವಾರನ ಗುರುತು ಪತ್ತೆಯಾಗಿಲ್ಲ. ಇದನ್ನೂ ಓದಿ:  ಇಂದಿನಿಂದ ಅಧಿವೇಶನ – ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ ಮೈತ್ರಿ ಸಜ್ಜು

    ಉಳಿದಂತೆ ಸುಶ್ಮಿತಾ, ವಿರುತ, ಸುಜಾತ, ಸುನಿಲ್ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ನಾಲ್ವರನ್ನ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೃತಪಟ್ಟವರು ಕೆಜಿಎಫ್ ತಾಲ್ಲೂಕು ಕಮ್ಮಸಂದ್ರ ಗ್ರಾಮದವರಾಗಿದ್ದು, ಬೆಂಗಳೂರಿನಿಂದ ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಘಟನೆ ನಡೆದಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರಂತ ಸಂಭವಿಸಿದೆ. ಇದನ್ನೂ ಓದಿ: ಷೇರುಪೇಟೆ ವಂಚನೆ: ಸೆಬಿ ಮಾಜಿ ಅಧ್ಯಕ್ಷೆ ಬುಚ್‌ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶ

  • ಜಾತಿ ವ್ಯವಸ್ಥೆಯ ಕ್ರೂರ ಘಟನೆ – ಎಸ್‌ಎಂಕೆ ಕೋಲಾರದ ಕಂಬಾಲಪಲ್ಲಿ ದುರಂತ ನಿಭಾಯಿಸಿದ್ದು ಹೇಗೆ?

    ಜಾತಿ ವ್ಯವಸ್ಥೆಯ ಕ್ರೂರ ಘಟನೆ – ಎಸ್‌ಎಂಕೆ ಕೋಲಾರದ ಕಂಬಾಲಪಲ್ಲಿ ದುರಂತ ನಿಭಾಯಿಸಿದ್ದು ಹೇಗೆ?

    ಬೆಂಗಳೂರು: ಇಡೀ ರಾಜ್ಯ ಎಸ್‌.ಎಂ ಕೃಷ್ಣ (SM Krishna) ಅವರ ಅವಧಿಯಲ್ಲಿ ಉತ್ತುಂಗಕ್ಕೇರಿತ್ತು. ಹಾಗಂತ ಆ ಕಾಲದಲ್ಲಿ ರಾಜ್ಯ ಏನೂ ಸಂಪದ್ಭರಿತವಾಗಿರಲಿಲ್ಲ. ತೀವ್ರತರ ಬರಗಾಲದ ಬೇಗೆಯಲ್ಲಿ ಹೈರಾಣಾಗಿತ್ತು. ಈ ಮಧ್ಯೆ ಸಮಸ್ಯೆ ಜೊತೆಗೆ ಕಾವೇರಿ ಹೋರಾಟದ ಕಾವು ಹೆಚ್ಚಾಗಿತ್ತು. ಜೊತೆಗೆ ಸರ್ಕಾರಕ್ಕೆ ಬಂದೆರಗಿದ್ದ ಬಹು ದೊಡ್ಡ ಸಮಸ್ಯೆ ಅಂದ್ರೆ ಡಾ. ರಾಜ್ ಕುಮಾರ್ ಅಪಹರಣ. ಇದೆಲ್ಲದರ ನಡುವೆಯೇ ಕೋಲಾರ ಕಂಬಾಲಪಲ್ಲಿಯಲ್ಲಿ ಜಾತಿ ವ್ಯವಸ್ಥೆಯ ಕ್ರೂರ ಘಟನೆಯೊಂದು ನಡೆದಿತ್ತು.

    ಏನಿದು ಕಂಬಾಲಪಲ್ಲಿ ದುರಂತ? 
    2000ರ ಮಾರ್ಚ್‌ನಲ್ಲಿ ಕೋಲಾರದ ಕಂಬಾಲಪಲ್ಲಿ ದುರಂತ (Kambalapalli Incident) ಸಂಭವಿಸಿತ್ತು. ಇದು ರಾಷ್ಟ್ರಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಸವರ್ಣೀಯರು 7 ಮಂದಿ ದಲಿತರನ್ನ ಮನೆಯಲ್ಲಿ ಕೂಡಿ ಹಾಕಿ ಜೀವಂತವಾಗಿ ಸುಟ್ಟು ಹಾಕಿದ್ದರು. ಇದೊಂದು ಜಾತಿ ವ್ಯವಸ್ಥೆಯ ಕ್ರೂರ ಘಟನೆಯಾಗಿತ್ತು. ಇದನ್ನೂ ಓದಿ: ತಿಮ್ಮಪ್ಪನ ಹುಂಡಿಗೆ ವಾಚ್ ಹಾಕಿ ಬಂದ ಮೇಲೆ ಕೇಂದ್ರಮಂತ್ರಿಯಾಗಿದ್ದ ಎಸ್‌ಎಂಕೆ!

    ಅಪರಾಧಿಗಳಿಗೇನೋ ಶಿಕ್ಷೆಯಾಯಿತು. ಆದ್ರೆ ಮುಖ್ಯಮಂತ್ರಿ ಅವತ್ತು ದಲಿತರ ಪರವಾಗಿ ನಿಂತು ಅವರಿಗೆ ರಕ್ಷಣೆ ನೀಡುವುದರ ಜೊತೆಗೆ ಮಾನವೀಯತೆಯ ದೃಷ್ಠಿಯಿಂದ ಸಮಸ್ಯೆ ಬಗೆಹರಿಸಿದ್ರು. ಪ್ರತಿ ದಲಿತ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟು 2 ಎಕರೆ ಜಮೀನು ಮಂಜೂರು ಮಾಡಿದ್ರು. ಆ ಬಳಿಕ ಕಂಬಾಲಪಲ್ಲಿ ದಲಿತರು ಸ್ವತಂತ್ರವಾಗಿ ಬದುಕೋ ಅವಕಾಶ ನಿರ್ಮಾಣವಾಯಿತು. ಇದನ್ನೂ ಓದಿ: ಮದುವೆಗೂ ಮುನ್ನ ಭಾವಿ ಪತ್ನಿ ಸಂದರ್ಶನ ಮಾಡಿದ್ದ ಕೃಷ್ಣ!

    108 ದಿನ ತಂತಿ ಮೇಲಿನ ನಡಿಗೆ:
    ತಮ್ಮ ಸ್ವಂತ ಶ್ರಮದಿಂದಲೇ ಎಸ್‌ಎಂ ಕೃಷ್ಣ ಅವರು ಸಿಎಂ ಆದ್ರು. ಆದ್ರೆ ಅವರು ಅವರು ಸಿಎಂ ಖುರ್ಚಿ ಏರಿದಾಗ ಅವರ ಹಾದಿ ಅಷ್ಟು ಸುಲಭವಾಗಿರಲಿಲ್ಲ. ಸಾಲು ಸಾಲು ಸಂಕಷ್ಟಗಳು ಎದುರಾಗಿದ್ವು.. ಸಿಎಂ ಆದ ಮರು ವರ್ಷದಲ್ಲೇ ಡಾ.ರಾಜ್‌ಕುಮರ್ ಅಪಹರಣ ರಾಜ್ಯಾದ್ಯಂತ ಕಿಚ್ಚು ಹೆಚ್ಚಿಸಿತ್ತು. ತಮಿಳಿಗರು-ಕನ್ನಡಿಗರ ನಡುವೆ ಜೋರು ಗಲಾಟೆಗಳು ಆಗೋ ಲಕ್ಷಣಗಳಿದ್ದವು. ಇತ್ತ ತಮಿಳರ ಆಸ್ತಿ ಪಾಸ್ತಿ ಕಾಪಾಡೋದರ ಜೊತೆಗೆ ಕನ್ನಡಿಗರ ಆಸ್ತಿ ಪಾಸ್ತಿಯೂ ಕಾಪಾಡೋ ಜವಾಬ್ದಾರಿ ಎಸ್‌ಎಂ ಕೃಷ್ಣ ಅವರದ್ದಾಗಿತ್ತು. ತಮ್ಮ ಪಾಡಿಗೆ ತಾವು ಟೆನ್ನಿಸ್ ಆಡ್ತಿದ್ದಾಗ ಪಾರ್ವತಮ್ಮ ಅವರು ನೇರಾ ಕೃಷ್ಣ ಅವರಿಗೆ ಕಾಲ್ ಮಾಡಿ ಪತಿ ರಾಜ್‌ಕುಮಾರ್ ಕಿಡ್ನ್ಯಾಪ್‌ ಆಗಿರೋ ಬಗ್ಗೆ ವಿಚಾರ ತಿಳಿಸಿದ್ರು. ಆ ಕ್ಷಣ ದಿಕ್ಕು ತೋಚದಂತಾಗಿತ್ತು, 108 ದಿನಗಳ ಕಾಲ ಕೃಷ್ಣ ಅವರದ್ದು ತಂತಿಯ ಮೇಲಿನ ನಡಿಗೆ ಆಗಿತ್ತು. ಇದನ್ನೂ ಓದಿ: ಜಮ್ಮು-ಕಾಶ್ಮೀರದ ದಾಲ್ ಸರೋವರದಲ್ಲಿ ಮೊದಲ ಜಲ ಸಾರಿಗೆ ಆರಂಭಿಸಿದ ಉಬರ್ – ಬುಕ್ಕಿಂಗ್‌ ಹೇಗೆ?

    ಇತ್ತ ದಿನ ಕಳೆಯುತ್ತಿತ್ತು. ವೀರಪ್ಪನ್ ರಾಜ್ ಕುಮಾರ್ ಬಿಡುಗಡೆ ಮಾಡೋಕೆ 50 ಕೋಟಿ ಡಿಮ್ಯಾಂಡ್ ಇಟ್ಟಿದ್ದ.. ಜೊತೆಗೆ ಜೈಲಲ್ಲಿದ್ದ ಆತನ ಸಹಚರರನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದ. ಇತ್ತ ರಾಜ್‌ಕುಮಾರ್ ಇಲ್ಲದ ಸಂದರ್ಭ ನೋಡಿಕೊಂಡು ದುರ್ಬಳಕೆ ಮಾಡಿಕೊಳ್ಳೋಕೆ ದುಷ್ಟ ಶಕ್ತಿಗಳು ಕಾದಿದ್ವು. ಅವುಗಳೆಲ್ಲವನ್ನೂ ಹತ್ತಿಕ್ಕಿ ನೇರಾ ತಮಿಳುನಾಡಿನ ಅಂದಿನ ಮುಖ್ಯಮಂತ್ರಿ ಆಗಿದ್ದ ಕರುಣಾನಿಧಿ ಅವರನ್ನ ಭೇಟಿ ಮಾಡಿ ಅಲ್ಲಿನ ಪತ್ರಕರ್ತ ನಕೀರನ್ ಸಹಾಯ ಪಡೆದು ಏನೇನೋ ಸರ್ಕಸ್ ಮಾಡಬೇಕಾಗಿ ಬಂತು. ಅಷ್ಟೂ ದಿನಗಳ ಕಾಲ ಹಗಲೂ ರಾತ್ರಿ ಎಸ್‌ಎಂ ಕೃಷ್ಣ ಒತ್ತಡ ಅನುಭವಿಸಿದ್ರು. ಜನರನ್ನೆಲ್ಲಾ ವಿಶ್ವಾಸಕ್ಕೆ ತೆಗೆದುಕೊಳ್ಳೋದರ ಜೊತೆಗೆ ವೀರಪ್ಪನ್ ರಾಜ್ ಕುಮಾರ್ ಮೇಲೆ ಯಾವುದೇ ದುಷ್ಕೃತ್ಯ ಹೇರದಂತೆ ನೋಡಿಕೊಳ್ಳೋದು ಅವತ್ತಿನ ಸವಾಲಾಗಿತ್ತು. ಕೊನೆಗೂ ರಾಜ್ ಕುಮಾರ್ ಅವರನ್ನು ಬಿಡಿಸಿಕೊಳ್ಳುವಲ್ಲಿ ಕೃಷ್ಣ ಯಶಸ್ವಿಯೂ ಆಗಿದ್ರು.

    ಕೃಷ್ಣ ಅವರ ಅವಧಿಯಲ್ಲಿ ರಾಜ್ಯ ತೀವ್ರತರ ಬರಗಾಲಕ್ಕೆ ಸಿಲುಕಿತ್ತು. ಮೋಡ ಬಿತ್ತನೆ ಮೂಲಕ ರಾಜ್ಯದಲ್ಲಿ ಮಳೆ ಸುರಿಸಲು ನೋಡಿದ್ರು. ಆದ್ರೆ ಆ ಪ್ಲ್ಯಾನ್‌ ಸಕ್ಸಸ್ ಆಗಲಿಲ್ಲ.. ಮಕ್ಕಳಿಗೇನೋ ಶಾಲೆಯಲ್ಲಿ ಬಿಸಿಯೂಟ ನೀಡೋ ಮೂಲಕ ಹಸಿವು ನೀಗಿಸಿದ್ರು. ಆದ್ರೆ ರೈತರ ಪಾಡು ಅಧೋಗತಿ ಆಗಿತ್ತು. ಅದೇ ವೇಳೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಾ ಹೋದ್ವು. ಹೀಗೆ ರಾಜ್ಯದಲ್ಲಿ ನೀರಿಲ್ಲ. ಬರಗಾಲದ ಸಮಯದಲ್ಲೇ ತಮಿಳುನಾಡು ಕಾವೇರಿ ನೀರಿಗಾಗಿ ನ್ಯಾಯಾಲಯದ ಮೊರೆ ಹೋಗಿತ್ತು. ಆದ್ರೆ ನ್ಯಾಯಾಲಯ ತಮಿಳುನಾಡಿನ ಪರ ಆದೇಶ ಕೊಟ್ಟಿತ್ತು. ಆಗ ಸಂದಿಗ್ಧ ಸ್ಥಿತಿಗೆ ಸಿಲುಕಿದ್ದ ಕೃಷ್ಣ ಅವರು ರೈತರ ಹಿತ ಕಾಪಾಡೋದಾ ಅಥವಾ ನ್ಯಾಯಾಲಯ ಹೇಳಿದಂತೆ ನೀರು ಬಿಡುವುದಾ ಎಂದು ಗೊತ್ತಾಗದೇ ರೈತರನ್ನೇ ಕೇಳೋಣ ಅಂತ ಆ 72ರ ವಯಸ್ಸಲ್ಲೂ ಪಾದಯಾತ್ರೆ ಹಮ್ಮಿಕೊಂಡಿದ್ರು. ಆದ್ರೆ ಅವರ ಅದೃಷ್ಟವೋ ಏನೋ ಇನ್ನೇನು ಪಾದಯಾತ್ರೆ ಮಂಡ್ಯ ನಗರಕ್ಕೆ ತಲುಪುತ್ತಿದ್ದಂತೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗಿ ತಮಿಳುನಾಡಿಗೆ ಸಾಕಷ್ಟು ನೀರು ಹರಿದುಹೋಗಿತ್ತು. ಇದನ್ನೂ ಓದಿ: ಸಂಭಲ್ ಬಳಿಕ ಮತ್ತೊಂದು ಮಸೀದಿ ವಿವಾದ – ಭಾರತದಲ್ಲಿ ಮಸೀದಿ ಮಂದಿರ ಕಗ್ಗಂಟು ಎಲ್ಲೆಲ್ಲಿ ಏನು?  

  • ಕೋಲಾರದಲ್ಲಿ 16 ವರ್ಷಗಳ ಬಳಿಕ ಪೂರ್ಣಗೊಂಡ ಹೊಸ ಜಲಾಶಯ

    ಕೋಲಾರದಲ್ಲಿ 16 ವರ್ಷಗಳ ಬಳಿಕ ಪೂರ್ಣಗೊಂಡ ಹೊಸ ಜಲಾಶಯ

    ಕೋಲಾರ: 16 ವರ್ಷಗಳ ಬಳಿಕ ಯರಗೋಳ್ (Yuragol) ಬಳಿ ಜಲಾಶಯವೊಂದರ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಸುಂದರವಾದ ಬೆಟ್ಟಗುಡ್ಡಗಳ ನಡುವೆ ಹರಿದು ತಮಿಳುನಾಡು (Tamil Nadu) ಸೇರುತ್ತಿದ್ದ ನೀರಿಗೆ ಅಡ್ಡಲಾಗಿ ಡ್ಯಾಂ (Dam) ನಿರ್ಮಾಣ ಮಾಡಿ ಕೋಲಾರ, ಮಾಲೂರು ಸೇರಿದಂತೆ 42 ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಯನ್ನು 2006ರಲ್ಲಿ ರೂಪಿಸಲಾಗಿತ್ತು. ಆದರೆ ಕಾಮಗಾರಿ ವಿಳಂಬವಾಗಿದ್ದು, 16 ವರ್ಷಗಳ ಬಳಿಕ ಯೋಜನೆ ಪೂರ್ಣಗೊಂಡಿದೆ.

    ಈ ಬೆನ್ನಲ್ಲೇ ಯರಗೋಳ್ ಜಲಾಶಯದ ಸುತ್ತಲೂ ಹಸಿರ ಸುಂದರ ವಾತಾವರಣ, ಜಲಾಶಯ ಹಾಗೂ ನೀರು ಬಯಲು ಸೀಮೆ ಜನರನ್ನು ಕೈಬೀಸಿ ಕರೆಯುತ್ತಿದೆ. ಯರಗೋಳ್ ಡ್ಯಾಂ ಕೋಲಾರ ಜಿಲ್ಲಾ ಕೇಂದ್ರದಿಂದ ಸುಮಾರು 45 ಕಿ.ಮೀ ದೂರವಿದ್ದು ತಮಿಳುನಾಡು ಹಾಗೂ ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಂತಿದೆ. ಹಾಗಾಗಿ ಕೇವಲ ಕೋಲಾರ ಜಿಲ್ಲೆಯ ಜನರಷ್ಟೇ ಅಲ್ಲಾ ಗಡಿ ಭಾಗದಿಂದ ಹೊರ ರಾಜ್ಯದ ಜನರು ಕೂಡಾ ಬಂದು ಡ್ಯಾಂ ನೋಡಿ ಖುಷಿ ಪಡುವಂತಹ ಸ್ಥಳವಾಗಿದೆ. ಇದನ್ನೂ ಓದಿ: Kanpur| ಖಾಸಗಿ ಆಸ್ಪತ್ರೆ ನಿರ್ದೇಶಕನಿಂದ 22 ವರ್ಷದ ನರ್ಸ್ ಮೇಲೆ ಅತ್ಯಾಚಾರ

    ಸುಂದರ ವಾತಾವರಣದಲ್ಲಿ ಕುಟುಂಬ ಸಮೇತರಾಗಿ ಬಂದು ಕೆಲ ಸಮಯ ಇಲ್ಲಿ ಕಳೆದು ಖುಷಿಪಟ್ಟು ಹೋಗುವಂತಿದೆ. ಹಾಗಾಗಿ ಇಲ್ಲಿ ಅರಣ್ಯ ಇಲಾಖೆ ಪ್ರವಾಸಿಗರನ್ನು ಆಕರ್ಷಿಸಲು ಹಲವು ಯೋಜನೆಗಳನ್ನು ಸಿದ್ಧ ಮಾಡಿದೆ. ಸರ್ಕಾರದಿಂದ ಅನುಮತಿ ಸಿಕ್ಕ ಕೂಡಲೇ ಸುಂದರ ತಾಣವಾಗಿಸಲು ಮುಂದಾಗಿದೆ. ಇದನ್ನೂ ಓದಿ: ಚಾಮರಾಜನಗರ| ‘ಮಿಸ್ಟರ್‌ ಬಿಆರ್‌ಟಿ’ ಎಂದೇ ಹೆಸರಾಗಿದ್ದ ವಕ್ರದಂತ ಹೊಂದಿದ್ದ ಕಾಡಾನೆ ಸಾವು

  • ಡಿವೈಡರ್‌ಗೆ ಕಾರು ಡಿಕ್ಕಿ- ಡಿವೈಡರ್ ಮೇಲೆ ನಿಂತಿದ್ದ ಇಬ್ಬರು ಕಾರ್ಮಿಕರು ಸಾವು

    ಡಿವೈಡರ್‌ಗೆ ಕಾರು ಡಿಕ್ಕಿ- ಡಿವೈಡರ್ ಮೇಲೆ ನಿಂತಿದ್ದ ಇಬ್ಬರು ಕಾರ್ಮಿಕರು ಸಾವು

    ಕೋಲಾರ: ಡಿವೈಡರ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಡಿವೈಡರ್ ಮೇಲೆ ನಿಂತಿದ್ದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolara) ನಡೆದಿದೆ.

    ಉತ್ತರ ಭಾರತ (North India) ಮೂಲದ ಕಿರಣ್ ಹಾಗೂ ರಜನಿಸಿಂಗ್ ಮೃತ ದುರ್ದೈವಿಗಳು. ಕೋಲಾರ ನಗರದ ಹೊರವಲಯದ ಪವನ್ ಕಾಲೇಜು ಬಳಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮಹಿಳೆ ಮತ್ತು ಮಕ್ಕಳು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ:  ಭಾರೀ ಭದ್ರತಾ ಲೋಪ | ದುಬೈ-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಅಮ್ಯುನಿಷನ್ ಕಾಟ್ರಿಡ್ಜ್ ಪತ್ತೆ

    ಬೆಂಗಳೂರು (Bengaluru) ಕಡೆಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿದ ಜೊತೆಗೆ ಅತಿ ವೇಗವಾಗಿ ಬಂದ ಕಾರಣ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ಡಿವೈಡರ್ ಮೇಲಿದ್ದ ಇಬ್ಬರು ಕಾರ್ಮಿಕರು ಸ್ಥಳದಲ್ಲಿ ಮೃತಪಟ್ಟಿದ್ದು, ಕೋಲಾರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಗೃಹಿಣಿ ಆತ್ಮಹತ್ಯೆ

  • ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಹತ್ಯೆಗೈದ ಪತಿ

    ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಹತ್ಯೆಗೈದ ಪತಿ

    ಕೋಲಾರ: ಪತ್ನಿಯನ್ನು ಚುಡಾಯಿಸಿದ್ದಕ್ಕೆ ಪತಿ, ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಕೋಲಾರದ (Kolara) ಜಮಾಲ್ ಷಾ ನಗರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

    ರೋಹಿದ್ ಅಲಿಯಾಸ್ ಅರ್ಬಾಜ್ (25) ಕೊಲೆಯಾದವನು. ಅಂಬ್ಜದ್ ಕೊಲೆ ಮಾಡಿದ ಆರೋಪಿ. ಇದನ್ನೂ ಓದಿ: ಲಾರೆನ್ಸ್ ಬಿಷ್ಣೋಯ್‌ | ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್‌ ಮೂಲಕ ಟಿವಿಗೆ ಸಂದರ್ಶನ – 7 ಪೊಲೀಸರು ಸಸ್ಪೆಂಡ್‌

    ಕಳೆದ ಕೆಲವು ದಿನಗಳಿಂದ ಅಂಬ್ಜದ್ ಪತ್ನಿಯ ಮೇಲೆ ಅರ್ಬಾಜ್ ಕಣ್ಣು ಹಾಕಿದ್ದ. ಈ ಮೊದಲು ಎರಡು ಮೂರು ಬಾರಿ ಇದೇ ವಿಚಾರವಾಗಿ ಗಲಾಟೆ ನಡೆದಿತ್ತು. ಶುಕ್ರವಾರ ರಾತ್ರಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಅಂಬ್ಜದ್ ಚಾಕುವಿನಿಂದ ಅರ್ಬಾಜ್‌ನ ಎದೆಗೆ ಇರಿದು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ತಮ್ಮ ಕುಟುಂಬದವರನ್ನ ಅಧಿಕಾರಕ್ಕೆ ತರಲು ದೇವೇಗೌಡರ ಕುಟುಂಬ ಒಂದೊಂದು ನರಬಲಿ ಪಡೆಯುತ್ತೆ: ಶಿವರಾಮೇಗೌಡ ವಾಗ್ದಾಳಿ

    ಕೊಲೆ ಮಾಡಿದ ಆರೋಪಿ ಅಂಬ್ಜದ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಸಿಎಂ ಪತ್ನಿ ವಿಚಾರಣೆ; ಈಗ ಎ1 ಸಿದ್ದರಾಮಯ್ಯ ಸರದಿ – ಸದ್ಯದಲ್ಲೇ ಸಿಎಂಗೂ ನೋಟಿಸ್ ಸಾಧ್ಯತೆ

  • ಕೋಲಾರ| ನಿರಂತರ ಮಳೆ- ಲಾಭದ ನಿರೀಕ್ಷೆಯಲ್ಲಿದ್ದ ಹೂವಿನ ಬೆಳೆಗಾರರು ಕಂಗಾಲು

    ಕೋಲಾರ| ನಿರಂತರ ಮಳೆ- ಲಾಭದ ನಿರೀಕ್ಷೆಯಲ್ಲಿದ್ದ ಹೂವಿನ ಬೆಳೆಗಾರರು ಕಂಗಾಲು

    ಕೋಲಾರ: ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಜಡಿ ಮಳೆಯ (Rain) ಪರಿಣಾಮ ಸಾಕಷ್ಟು ಅನಾಹುತಗಳು ಸೃಷ್ಟಿಯಾಗಿವೆ. ಅದರಲ್ಲೂ ರೈತರು ಬೆಳೆದ ಬೆಳೆಗಳು ಮಳೆಯ ಹೊಡೆತಕ್ಕೆ ಕೊಚ್ಚಿ ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ.

    ಕೋಲಾರ (Kolara) ತಾಲೂಕು ಹೊದಲವಾಡಿ ಗ್ರಾಮದಲ್ಲಿ ಹೂ ತೋಟಕ್ಕೆ ನಿರಂತರ ಮಳೆಯಿಂದ ನೀರಿನಲ್ಲಿ ನೆನೆದು ಹೂವಿನ ತೋಟ ಕೊಳೆಯಲು ಆರಂಭಿಸಿದೆ. ಪರಿಣಾಮ ದೀಪಾವಳಿವರೆಗೂ ಹೂವಿನ ಬೆಳೆ ಇರುತ್ತದೆ ಎಂದು ಭರ್ಜರಿ ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ಜಡಿ ಮಳೆ ತಣ್ಣೀರೆರಚಿದೆ. ಇದನ್ನೂ ಓದಿ: ಬಾಗಲಕೋಟೆ| ಮಳೆ ಅವಾಂತರಕ್ಕೆ ಕೊಳೆತು ಹೋಗುತ್ತಿದೆ ಈರುಳ್ಳಿ – ರೈತರ ಕಣ್ಣೀರು

    ಸುಮಾರು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಚೆಂಡು ಹೂವು ತೋಟದಲ್ಲಿ ನೀರು ನಿಂತಿದ್ದು ಹೂವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಅದರಲ್ಲೂ ದೀಪಾವಳಿ ಹಬ್ಬದ ಹಿನ್ನೆಲೆ ಹೂವಿಗೆ ಒಳ್ಳೆಯ ಬೆಲೆ ಬರುತ್ತದೆ. ಹಬ್ಬಕ್ಕಾಗಿಯೇ ತೋಟಕ್ಕೆ ಗೊಬ್ಬರ ನೀರು ಹಾಕಿ ಔಷಧ ಹಾಕಿ ಚೆನ್ನಾಗಿ ತೋಟವನ್ನು ಬೆಳೆಸಿ, ಹಬ್ಬದ ಸಮಯಕ್ಕೆ ಒಂದಷ್ಟು ಆದಾಯ ಮಾಡಿಕೊಳ್ಳಬಹುದು ಎಂದುಕೊಂಡಿದ್ದ ಹೂವು ಬೆಳೆಗಾರ ವೇಣು ಅವರಿಗೆ ನಿರಾಸೆಯಾಗಿದೆ. ಇದನ್ನೂ ಓದಿ: ಸ್ನೇಹಿತನ ವಿರುದ್ಧ ಸೇಡು ತೀರಿಸಿಕೊಳ್ಳಲು 4 ವಿಮಾನಗಳಿಗೆ ಬಾಂಬ್ ಬೆದರಿಕೆ – ಮುಂಬೈನಲ್ಲಿ ಅಪ್ರಾಪ್ತ ಅರೆಸ್ಟ್‌

    ಕಳೆದ ನವರಾತ್ರಿ ಹಬ್ಬದಲ್ಲಿ ಒಂದಷ್ಟು ಆದಾಯ ಬಂದಿದೆ. ಆದರೆ ದೀಪಾವಳಿ ಹಬ್ಬಕ್ಕೆ ಒಳ್ಳೆಯ ಬೆಲೆ ಬರುತ್ತದೆ ಆಗ ಹಾಕಿದ ಬಂಡವಾಳಕ್ಕೆ ಒಂದಷ್ಟು ಲಾಭ ಬರುತ್ತದೆ ಅನ್ನೋ ನಿರೀಕ್ಷೆಯಲ್ಲಿದ್ದ ವೇಣು ಅವರಿಗೆ ನಿರಂತರ ಸೈಕ್ಲೋನ್ ಮಳೆ ನಿರಾಸೆ ಉಂಟು ಮಾಡಿದೆ. ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಹೂವಿನ ಗಿಡಗಳು ಕೊಳೆಯಲು ಆರಂಭಿಸಿದೆ. ಅಲ್ಲದೆ ಮೊಗ್ಗಿಗೆ ರೋಗ ಬಾಧೆ ಶುರುವಾಗಿದೆ. ಇನ್ನೆರಡು ದಿನ ಇದೇ ರೀತಿ ಮಳೆ ಬಂದರೆ ಬೆಳೆ ಸಂಪೂರ್ಣ ಹಾಳಾಗುತ್ತದೆ ಅನ್ನೋದು ರೈತರ ಮಾತು. ಇದನ್ನೂ ಓದಿ: ಬೆಂಗಳೂರು, ದೆಹಲಿಗೆ ಹೊರಟಿದ್ದ 2 ವಿಮಾನಗಳಿಗೆ ಬಾಂಬ್‌ ಬೆದರಿಕೆ – 3 ದಿನಗಳಲ್ಲಿ 12 ಕೇಸ್‌

  • ಕೋಲಾರದಲ್ಲಿ ಶಾಸಕ ಮುನಿರತ್ನ ಪೊಲೀಸ್‌ ವಶಕ್ಕೆ

    ಕೋಲಾರದಲ್ಲಿ ಶಾಸಕ ಮುನಿರತ್ನ ಪೊಲೀಸ್‌ ವಶಕ್ಕೆ

    ಕೋಲಾರ: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ (Muniratna) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಕೋಲಾರದ (Kolar) ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶನಿವಾರ ಸಂಜೆ ಶಾಸಕರನ್ನು ವಶಕ್ಕೆ ಪಡೆಯಲಾಗಿದೆ. ಕೋಲಾರ ಮಾರ್ಗವಾಗಿ ಆಂಧ್ರಪ್ರದೇಶಕ್ಕೆ ಮುನಿರತ್ನ ಅವರು ತೆರಳುತ್ತಿದ್ದಾಗ ಬೆಂಗಳೂರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

    ಶಾಸಕರನ್ನು ವಶಕ್ಕೆ ಪಡೆದು ಪೊಲೀಸರು ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದಾರೆ. ಇದನ್ನೂ ಓದಿ: ಎಸ್ಟಿ ಪ್ರವರ್ಗಕ್ಕೆ ವಾಲ್ಮೀಕಿ ಸಮುದಾಯ, ಹಿಂದುಳಿದ ವರ್ಗಕ್ಕೆ ಕುಂಚಿಟಿಗ, ಸಾದರ, ವೀರಶೈವರನ್ನು ಸೇರಿಸಲು ಗೃಹ ಸಚಿವರ ಜೊತೆ ಚರ್ಚೆ: ಹೆಚ್‌ಡಿಕೆ