Tag: kolkata

  • ಬಿಎಸ್‍ಎಫ್ ಯೋಧರ ಮೇಲೆ ದಾಳಿ – ಓರ್ವ ಸ್ಮಗ್ಲರ್‌ನ ಹತ್ಯೆ

    ಬಿಎಸ್‍ಎಫ್ ಯೋಧರ ಮೇಲೆ ದಾಳಿ – ಓರ್ವ ಸ್ಮಗ್ಲರ್‌ನ ಹತ್ಯೆ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಅಂತಾರಾಷ್ಟ್ರೀಯ ಗಡಿಯ ಬಳಿ ಗಡಿ ಭದ್ರತಾ ಪಡೆ (ಬಿಎಸ್‍ಎಫ್) ಸಿಬ್ಬಂದಿಯು ನಡೆಸಿದ ಎನ್‍ಕೌಂಟರ್‌ನಲ್ಲಿ ಕಳ್ಳಸಾಗಣೆದಾರನೊಬ್ಬನನ್ನು ಹತ್ಯೆಗೈಯಲಾಗಿದೆ.

    ಮೃತ ಕಳ್ಳಸಾಗಾಣಿಕೆದಾರನನ್ನು ಮುರ್ಷಿದಾಬಾದ್ ನಿವಾಸಿ ಭಾರತೀಯ ಪ್ರಜೆ ರೋಹಿಲ್ ಮಂಡಲ್ ಎಂದು ಗುರುತಿಸಲಾಗಿದೆ. ಈ ಕುರಿತು ಬಿಎಸ್‍ಎಫ್ ಅಧಿಕಾರಿಯೊಬ್ಬರು ಮಾತನಾಡಿ, ಕಳ್ಳಸಾಗಣೆದಾರರ ಗುಂಪೋಂದು ನಮ್ಮ ಸಿಬ್ಬಂದಿಯೊಬ್ಬರ ಮೇಲೆ ದಾಳಿ ನಡೆಸಿತ್ತು. ಅದಕ್ಕೆ ಪ್ರತೀಕಾರವಾಗಿ ಪಡೆಗಳು ಓರ್ವ ಕಳ್ಳಸಾಗಣೆದಾರನೊಬ್ಬನನ್ನು ಹತ್ಯೆಗೈದಿದ್ದಾರೆ. 141 ಬೆಟಾಲಿಯನ್‍ನ ಬಾರ್ಡರ್ ಔಟ್ ಪೋಸ್ಟ್ ಸಾಗರಪಾರಾ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಬಿಎಸ್‍ಎಫ್‍ನ ಗುಪ್ತಚರ ಇಲಾಖೆಯಿಂದ ವಿಶ್ವಾಸಾರ್ಹ ಮಾಹಿತಿ ಪಡೆದ ನಂತರ ಗಸ್ತು ತಿರುಗುತ್ತಿದ್ದ ಸಿಬ್ಬಂದಿ ಅಲರ್ಟ್ ಆಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಟೋಲ್ ಪ್ಲಾಜಾ ನೌಕರರ ಮೇಲೆ ಬಿಜೆಪಿ ಮುಖಂಡನ ಗೂಂಡಾ ವರ್ತನೆ

    ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಪ್ರದೇಶದಲ್ಲಿ 10-15 ಕಳ್ಳಸಾಗಾಣಿಕೆದಾರರ ಚಲನವಲನವನ್ನು ಗಮನಿಸಿದ ಪಡೆಗಳು ಗಸ್ತು ತಿರುಗುತ್ತಿದ್ದವರಿಗೆ ಮಾಹಿತಿ ನೀಡಿವೆ. ಸ್ವಲ್ಪ ಸಮಯದ ನಂತರ, ಕಳ್ಳಸಾಗಣೆದಾರರು ಕಲ್ಲುಗಳು ಮತ್ತು ಚೂಪಾದ ಆಯುಧಗಳನ್ನು ಬಳಸಿ ಜವಾನರ ಮೇಲೆ ದಾಳಿ ಮಾಡಿದರು. ಬಳಿಕ ಯೋಧರೂ ಪ್ರತಿದಾಳಿ ಆರಂಭಿಸಿದ್ದಾರೆ. ಇದನ್ನೂ ಓದಿ: ಸಂಬಂಧದ ವಿಚಾರ ಗೊತ್ತಾಗಿ ನೋವಿನಿಂದ ಗಲಾಟೆ ಮಾಡಿದ್ದು ನಿಜ, ಆದ್ರೆ ಕೊಲೆ ಮಾಡಿಲ್ಲ: ಅನಂತರಾಜು ಪತ್ನಿ

    ಬಿಎಸ್‍ಎಫ್ ಸಿಬ್ಬಂದಿ ಮೊದಲು ಕಳ್ಳಸಾಗಣೆದಾರರನ್ನು ಓಡಿಸಲು ಪ್ರಯತ್ನಿಸಿದರು. ಬಳಿಕ, ಆತ್ಮರಕ್ಷಣೆಗಾಗಿ ತಮ್ಮ ಕೈಯಲ್ಲಿದ್ದ ಆಯುಧವನ್ನು ಬಳಸಲು ಮುಂದಾಗಿದ್ದಾರೆ ಎಂದು ಬಿಎಸ್‍ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇತರ ಕಳ್ಳಸಾಗಣೆದಾರರು ಓಡಿಹೋಗಿದ್ದು, ಸ್ಥಳದಿಂದ 532 ಬಾಟಲ್ ಫೆನ್ಸೆಡಿಲ್ ಅನ್ನು ಯೋಧರು ವಶಪಡಿಸಿಕೊಂಡಿದ್ದಾರೆ.

  • ಪ್ರಿಯತಮನನ್ನು ಮದುವೆಯಾಗಲು ಬಾಂಗ್ಲಾದಿಂದ ಭಾರತಕ್ಕೆ ಈಜಿಕೊಂಡೇ ಬಂದ್ಳು!

    ಕೋಲ್ಕತ್ತಾ: ನಾವು ಈ ಹಿಂದೆ ಪ್ರೇಮಿಗಳು ತಮ್ಮ ಪ್ರೀತಿಯನ್ನು ಹುಡುಕಲು ಸಪ್ತ ಸಾಗರವನ್ನೇ ದಾಟಿ ಬರುವಂತಹ ಕಥೆಗಳನ್ನು ಕೇಳಿರುತ್ತೇವೆ. ಆದರೆ ಅವು ಕಾಲ್ಪನಿಕ ಕಥೆಗಳೇ ಹೊರತು ನಿಜವಲ್ಲ. ಆದರೆ ಇಲ್ಲೊಬ್ಬ ಬಾಂಗ್ಲಾದೇಶದ ಯುವತಿ ಭಾರತದಲ್ಲಿರುವ ತನ್ನ ಗೆಳೆಯನನ್ನು ಮದುವೆಯಾಗಲು ಈಜಿಕೊಂಡೇ ಬಂದಿದ್ದಾಳೆ. ತನ್ನ ಪ್ರಾಣವನ್ನೂ ಲೆಕ್ಕಿಸದೇ 1 ಗಂಟೆ ನದಿಯಲ್ಲಿ ಈಜುವ ಮೂಲಕ ಭಾರತ ಪ್ರವೆಶಿಸಿ ತನ್ನ ಪ್ರಿಯತಮನನ್ನು ಕೊನೆಗೂ ಭೇಟಿಯಾಗಿದ್ದಾಳೆ.

    ಹೌದು, ಬಾಂಗ್ಲಾದೇಶದ ಯುವತಿ ಕೃಷ್ಣ ಮಂಡಲ್ ಭಾರತದ ಯುವಕ ಅಭಿಕ್ ಮಂಡಲ್‌ನನ್ನು ಸಾಮಾಜಿಕ ಮಾಧ್ಯಮದಲ್ಲಿ ಭೇಟಿಯಾಗಿ, ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಕೃಷ್ಣ ಬಳಿ ಪಾಸ್‌ಪೋರ್ಟ್ ಇಲ್ಲದ ಕಾರಣ ಆಕೆ ತನ್ನ ಗೆಳೆಯನನ್ನು ಭೇಟಿಯಾಗಲು ಅಕ್ರಮವಾಗಿ ಭಾರತ ಪ್ರವೇಶಿಸಿಲು ನಿರ್ಧರಿಸಿದಳು. ಇದನ್ನೂ ಓದಿ: ಪ್ರೀತಿಸಿ ಮೋಸ ಮಾಡ್ತಾರೆ, ಕೈಗೊಂದು ಮಗು ಕೊಟ್ಟು ಓಡಿ ಹೋಗ್ತಾರೆ – ಲವ್‌ಜಿಹಾದ್ ವಿರುದ್ಧ ಶೋಭಾ ಗುಡುಗು

    ಕೃಷ್ಣ ಮೊದಲು ರಾಯಲ್ ಬೆಂಗಾಲ್ ಟೈಗರ್ಸ್ಗೆ ಹೆಸರುವಾಸಿಯಾಗಿರುವ ಸುಂದರಬನ್ಸ್ ಪ್ರವೆಶಿಸಿದ್ದಳು. ಬಳಿಕ ತನ್ನ ಗೆಳೆಯನನ್ನು ತಲುಪಲು ನದಿಯಲ್ಲಿ ಸುಮಾರು 1 ಗಂಟೆ ಈಜಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಾಸಿಕ್ ಧರ್ಮಸಂಸದ್‍ನಲ್ಲಿ ಹನುಮ ಜನ್ಮಸ್ಥಳ ಗಲಾಟೆ- ಕಿಷ್ಕಿಂದೆ ಸ್ವಾಮೀಜಿ ಮೇಲೆ ಹಲ್ಲೆ ಯತ್ನ

    ಮುಂದೇನಾಯ್ತು?
    ಕೃಷ್ಣ 3 ದಿನಗಳ ಹಿಂದೆ ತನ್ನ ಗೆಳೆಯ ಅಭಿಕ್‌ನನ್ನು ಕೋಲ್ಕತ್ತಾದ ಕಾಳಿಘಾಟ್ ದೇವಾಲಯದಲ್ಲಿ ವಿವಾಹವಾಗಿದ್ದಾಳೆ. ಆದರೆ ಆಕೆ ಅಕ್ರಮವಾಗಿ ಭಾರತ ಪ್ರವೇಶಿಸಿರುವುದರಿಂದ ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಕೃಷ್ಣಳನ್ನು ಬಾಂಗ್ಲಾದೇಶದ ಹೈಕಮಿಷನ್‌ಗೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

  • ಬಲವಂತವಾಗಿ ವೃದ್ಧನಿಗೆ ಮೂತ್ರ ಕುಡಿಸಿ, ಮಲ ತಿನ್ನಿಸಿ ವಿಕೃತಿ ಮೆರೆದ ಗ್ರಾಮಸ್ಥರು!

    ಬಲವಂತವಾಗಿ ವೃದ್ಧನಿಗೆ ಮೂತ್ರ ಕುಡಿಸಿ, ಮಲ ತಿನ್ನಿಸಿ ವಿಕೃತಿ ಮೆರೆದ ಗ್ರಾಮಸ್ಥರು!

    ಕೋಲ್ಕತ್ತಾ: ವಾಮಾಚಾರದ ಶಂಕೆಯಿಂದ ಗ್ರಾಮಸ್ಥರೆಲ್ಲರೂ ಸೇರಿ ವೃದ್ಧರೊಬ್ಬರಿಗೆ ಬಲವಂತವಾಗಿ ಮೂತ್ರ ಕುಡಿಸಿ, ಮಲ ತಿನ್ನಿಸಿ ವಿಕೃತಿ ಮೆರೆದಿದ್ದಾರೆ. ಈ ಅವಮಾನ ತಾಳಲಾರದೆ ವೃದ್ಧ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‍ನ ಮಥುರಾಪುರ ಗ್ರಾಮದಲ್ಲಿ ನಡೆದಿದೆ.

    ಪಶ್ಚಿಮ ಬಂಗಾಳದ ರಘುನಾಥಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಾಣಿಕ್ ಸರ್ದಾರ್ (68) ಆತ್ಮಹತ್ಯೆ ಮಾಡಿಕೊಂಡ ವೃದ್ಧ.

    ತನ್ನ ಮೊಮ್ಮಗಳು ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಮಾಣಿಕ್ ಸರ್ದಾರ್ ಆಕೆಯನ್ನು ನಗರದ ಓಜಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ನಿನ್ನೆ ಮೃತಪಟ್ಟಿದ್ದಾಳೆ. ಆದರೆ ನೆರೆಯವರು ಮಾಣಿಕ್ ಸರ್ದಾರ್ ನಾಲ್ವರೊಂದಿಗೆ ಸೇರಿ ವಾಮಾಚಾರ ಮಾಡಿದ್ದಾರೆ ಅಂದುಕೊಂಡಿದ್ದಾರೆ. ವಾಮಾಚಾರ ಮಾಡಿದ್ದೇ ಬಾಲಕಿ ಸಾವಿಗೆ ಕಾರಣವೆಂದು ತಿಳಿದಿದ್ದಾರೆ. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್ 

    ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು, ಮಾಣಿಕ್ ಸರ್ದಾರ್ ನನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ಬಲವಂತವಾಗಿ ಮೂತ್ರ ಕುಡಿಸಿ, ಮಲ ತಿನ್ನಿಸಿದ್ದಾರೆ. ಇದರಿಂದ ಮನನೊಂದ ವೃದ್ಧ ಅವಮಾನ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಹೋದರಿಯ ಸ್ನೇಹಿತೆಯನ್ನೇ ಗರ್ಭಿಣಿ ಮಾಡಿ, ಗರ್ಭಪಾತವನ್ನೂ ಮಾಡಿಸಿದ!

    ಸ್ಥಳಕ್ಕೆ ಭೇಟಿ ನೀಡಿದ ರಘುನಾಥಗಂಜ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

  • ಆರ್‌ಸಿಬಿ ಬೌಲರ್‌ಗಳಿಗೆ ಭೇಷ್ ಅಂದ ಕೆ.ಎಲ್ ರಾಹುಲ್

    ಆರ್‌ಸಿಬಿ ಬೌಲರ್‌ಗಳಿಗೆ ಭೇಷ್ ಅಂದ ಕೆ.ಎಲ್ ರಾಹುಲ್

    ಕೋಲ್ಕತ್ತಾ: ಮೊನ್ನೆ ನಡೆದ ಆರ್‌ಸಿಬಿ ಮತ್ತು ಲಕ್ನೋ ನಡುವಿನ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ತಂಡದ ಬೌಲರ್‌ಗಳು ಇನ್ನಿಂಗ್ಸ್‌ನ ಕೊನೆಯ ಹಂತದಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿದ ಕನ್ನಡಿಗ ಕೆ.ಎಲ್. ರಾಹುಲ್ ಇನ್ನಿಂಗ್ಸ್‌ನ ಕೊನೆಯ ಹಂತದಲ್ಲಿ ನಮ್ಮ ತಂಡದ ಬ್ಯಾಟ್ಸ್‌ಮ್ಯಾನ್‌ಗಳು ದೊಡ್ಡ ಹೊಡೆತಗಳನ್ನು ಆಡಲು ಪ್ರಯತ್ನಿಸಿದರು. ಆದರೆ ಎದುರಾಳಿ ತಂಡದ ಬೌಲರ್‌ಗಳು ಉತ್ತಮವಾಗಿ ಬೌಲಿಂಗ್ ಮಾಡಿದರು ಎಂದು ಹೇಳಿದ್ದಾರೆ.

    ಬುಧವಾರ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ನೀಡಿದ್ದ 208 ರನ್‌ಗಳ ಗುರಿ ಬೆನ್ನಟ್ಟಿದ್ದ ಲಕ್ನೋ ತಂಡವು 14 ರನ್‌ಗಳಿಂದ ಸೋಲನುಭವಿಸಿತು. ಅದಕ್ಕಾಗಿ ತಂಡದ ನಾಯಕ ರಾಹುಲ್ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದಾರೆ.

    ಪವರ್‌ಪ್ಲೇ ನಂತರದ ಏಳು ಓವರ್‌ಗಳಲ್ಲಿ ರಾಹುಲ್ ಒಂದು ಬೌಂಡರಿ ಮಾತ್ರ ಗಳಿಸಿದ್ದರು. ಇದೇ ಮೊದಲ ಬಾರಿ ಟೂರ್ನಿಯಲ್ಲಿ ಆಡಿದ ಲಕ್ನೋ ತಂಡವು ಗುರಿ ಬೆನ್ನಟ್ಟಿದ್ದ ಏಳು ಪಂದ್ಯಗಳ ಪೈಕಿ ಐದರಲ್ಲಿ ಸೋತಿದೆ.

    ಟೂರ್ನಿಯಲ್ಲಿ ಚೇಸಿಂಗ್ ಮಾಡಿದ ಪಂದ್ಯಗಳಲ್ಲಿ ನಮ್ಮ ಸಾಧನೆ ಚೆನ್ನಾಗಿಲ್ಲ ಎನ್ನುವುದನ್ನು ಒಪ್ಪಿಕೊಳ್ಳುತ್ತೇನೆ. ಈ ವಿಷಯದಲ್ಲಿ ಸುಧಾರಣೆಗೆ ಪ್ರಯತ್ನಿಸುತ್ತೇವೆ ಎಂದು ರಾಹುಲ್ ಹೇಳಿದರು.

    ಈ ಪಂದ್ಯದಲ್ಲಿ ರಾಹುಲ್ 58 ಎಸೆತಗಳನ್ನು ಎದುರಿಸಿ 79 ರನ್ ಗಳಿಸಿದ್ದರು. ಟೂರ್ನಿಯಲ್ಲಿ ಒಟ್ಟು 600ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

  • ಇಂದು ಎಲಿಮಿನೇಟರ್ ಪಂದ್ಯ – ಆರ್‌ಸಿಬಿಗೆ ಲಕ್ನೋ ಸವಾಲು

    ಇಂದು ಎಲಿಮಿನೇಟರ್ ಪಂದ್ಯ – ಆರ್‌ಸಿಬಿಗೆ ಲಕ್ನೋ ಸವಾಲು

    ಕೋಲ್ಕತ್ತಾ: ಈಡನ್ ಗಾರ್ಡನ್ಸ್‌ನಲ್ಲಿಂದು ಐಪಿಎಲ್ 2022ರ ಎಲಿಮಿನೇಟರ್ 2ನೇ ಪಂದ್ಯ ನಡೆಯಲಿದ್ದು, ಡುಪ್ಲೆಸಿ ಬಳಗಕ್ಕೆ ಕನ್ನಡಿಗ ರಾಹುಲ್ ನೇತೃತ್ವದ ಲಕ್ನೋ ತಂಡವು ಎದುರಾಗಲಿದೆ.

    ಐಪಿಎಲ್‍ನಲ್ಲಿ ಇದೇ ಮೊದಲ ಬಾರಿ ಕಣಕ್ಕಿಳಿದಿರುವ ಹೊಸ ತಂಡ ಲಕ್ನೋ ಲೀಗ್ ಹಂತದಲ್ಲಿ ತನ್ನ ಚರಣದ 14 ಪಂದ್ಯಗಳನ್ನಾಡಿ 9ರಲ್ಲಿ ಜಯಗಳಿಸಿದ್ದು, 5 ಪಂದ್ಯಗಳಲ್ಲಿ ಸೋತಿದೆ. ಟೂರ್ನಿಯ ಉದ್ದಕ್ಕೂ ಉತ್ತಮ ಪ್ರರ್ದಶನ ತೋರಿದ ರಾಹುಲ್ 2 ಮತ್ತು ಕ್ವಿಂಟನ್ ಡಿಕಾಕ್ ಒಂದು ಶತಕ ಗಳಿಸಿದ್ದಾರೆ. ಕೋಲ್ಕತ್ತಾ ನೈಟ್‍ರೈಡರ್ಸ್ ಎದುರಿನ ಪಂದ್ಯದಲ್ಲಿ ಇವರಿಬ್ಬರೂ ಮೊದಲ ವಿಕೆಟ್ ಜೊತೆಯಾಟದಲ್ಲಿ ಅಜೇಯ 210 ರನ್ ಗಳಿಸಿ ದಾಖಲೆ ಬರೆದಿದ್ದರು. ಇದನ್ನೂ ಓದಿ: ಕೊನೆಯ ಓವರ್‌ನಲ್ಲಿ ಮಿಲ್ಲರ್‌ ಹ್ಯಾಟ್ರಿಕ್‌ ಸಿಕ್ಸ್‌ – ಫೈನಲ್‌ಗೆ ಗುಜರಾತ್‌ ಎಂಟ್ರಿ

    ಎವಿನ್ ಲೂಯಿಸ್, ದೀಪಕ್ ಹೂಡಾ, ಆಲ್‍ರೌಂಡರ್‌ಗಳಾದ ಮಾರ್ಕಸ್ ಸ್ಟೊಯಿನಿಸ್ ಮತ್ತು ಜೇಸನ್ ಹೋಲ್ಡರ್ ಉತ್ತಮ ಫಾರ್ಮ್‍ನಲ್ಲಿರುವುದರಿಂದ ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಿದೆ. ಆರಂಭಿಕ ಓವರ್‌ಗಳಲ್ಲಿಯೇ ವಿಕೆಟ್ ಗಳಿಸುವ ಆವೇಶ್ ಖಾನ್, ಮೊಹಸೀನ್ ಖಾನ್ ಮತ್ತು ಸ್ಪಿನ್ನರ್ ರವಿ ಬಿಷ್ಣೋಯಿ ಅವರ ಮಾರಕ ಬೌಲಿಂಗ್ ಬೆಂಗಳೂರು ತಂಡಕ್ಕೆ ಸವಾಲಾಗಿ ನಿಂತಿದೆ. ಇದನ್ನೂ ಓದಿ: ಐಪಿಎಲ್‌ನಲ್ಲಿ ಮಿಂಚಿದ ತ್ರಿಪಾಠಿಗೆ ಯಾಕಿಲ್ಲ ಟೀಂ ಇಂಡಿಯಾದಲ್ಲಿ ಸ್ಥಾನ? – ರೊಚ್ಚಿಗೆದ್ದ ಅಭಿಮಾನಿಗಳು

    ಸತತ ವೈಫಲ್ಯಗಳ ನಂತರ ವಿರಾಟ್ ಕೊಹ್ಲಿ ಕಳೆದ ಪಂದ್ಯದಲ್ಲಿ ಫಾರ್ಮ್‍ಗೆ ಮರಳಿರುವುದು ತಂಡದಲ್ಲಿ ಉತ್ಸಾಹ ಹೆಚ್ಚಿಸಿದೆ. ನಾಯಕ ಡುಪ್ಲೆಸಿ, ದಿನೇಶ್ ಕಾರ್ತಿಕ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಬ್ಯಾಟಿಂಗ್ ವಿಭಾಗದ ಶಕ್ತಿಯಾಗಿದ್ದಾರೆ. ಆದರೆ ಬೌಲರ್‌ಗಳು ಸ್ಥಿರತೆ ಕಾಪಾಡಿಕೊಳ್ಳುವ ಸವಾಲು ತಂಡಕ್ಕೆ ಇದೆ. ಹರ್ಷಲ್ ಪಟೇಲ್, ಸ್ಪಿನ್ನರ್ ವಣಿಂದು ಹಸರಂಗಾ ಮತ್ತು ಜೋಶ್ ಹ್ಯಾಜಲ್‍ವುಡ್ ಅವರು ರಾಹುಲ್ ಪಡೆಯ ಅಬ್ಬರಕ್ಕೆ ತಡೆಯೊಡ್ಡುವಲ್ಲಿ ಸಫಲರಾದರೆ ಆರ್‌ಸಿಬಿಗೆ ಎರಡನೇ ಕ್ವಾಲಿಫೈಯರ್ ಪ್ರವೇಶಿಸುವ ಅವಕಾಶ ಲಭಿಸಬಹುದು.

    IPL

    ಪಾಯಿಂಟ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕಾಗಿ ನಡೆದಿದ್ದ ಪೈಪೋಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ಎದುರು ಸೋತ ಕಾರಣಕ್ಕೆ ಆರ್‌ಸಿಬಿಯು ಹಾದಿ ಸುಗಮವಾಗಿತ್ತು. ಅದರಿಂದಾಗಿ ಸತತ ಮೂರನೇ ಆವೃತ್ತಿಯಲ್ಲಿಯೂ ಪ್ಲೇ ಆಫ್ ಪ್ರವೇಶಿಸಿದೆ.

  • ಐಪಿಎಲ್ ಪಂದ್ಯ ರದ್ದು ತಡೆಗೆ `ಸೂಪರ್’ ನಿಯಮ – ಯಾವ ತಂಡದ ಲಕ್ ಹೇಗಿದೆ?

    ಐಪಿಎಲ್ ಪಂದ್ಯ ರದ್ದು ತಡೆಗೆ `ಸೂಪರ್’ ನಿಯಮ – ಯಾವ ತಂಡದ ಲಕ್ ಹೇಗಿದೆ?

    ನವದೆಹಲಿ: 15ನೇ ಆವೃತ್ತಿಯ ಐಪಿಎಲ್ ಪ್ಲೇ-ಆಫ್ ಹಂತದ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದ್ದು, ಬಿಸಿಸಿಐ ಹೊಸ ನಿಯಮ ಪ್ರಕಟಿಸಿದೆ.

    ಈ ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿಗೆ ಒಂದಿಲ್ಲೊಂದು ಲಕ್ ಒಲಿಯುತ್ತಿದ್ದು, ಬಹುಶಃ ಚಾಂಪಿಯನ್ ಆಗುವ ಅವಕಾಶವಿದ್ದಂತೆಯೇ ಕಾಣುತ್ತಿದೆ. ಪ್ಲೇ ಆಫ್‌ನಿಂದ ಹೊರಬೀಳಬೇಕಿದ್ದ ಆರ್‌ಸಿಬಿ ಮುಂಬೈ ಗೆಲುವಿನ ಕೃಪೆಯಿಂದ ಪ್ಲೇ-ಆಫ್ ಪ್ರವೇಶಿಸಿತು. ಮಳೆಯಿಂದ ಪಂದ್ಯಕ್ಕೆ ಅಡ್ಡಿಯಾದರೆ, ರನ್‌ರೇಟ್ ಮೇಲೆ ವಿಜೇತರನ್ನು ನಿರ್ಧರಿಸಲಾಗುತ್ತಿತ್ತು. ಆದರೆ, ಈ ಬಾರಿ ಸೂಪರ್ ಓವರ್ ನಿಯಮವನ್ನು ಅನುಷ್ಠಾನಗೊಳಿಸಿದ್ದು, ಹೆಚ್ಚುವರಿ ಸಮಯವನ್ನೂ ನಿಗದಿ ಮಾಡಲಾಗಿದೆ. ಈ ಬೆಳವಣಿಗೆ ಆರ್‌ಸಿಬಿಗೆ ವರ.

    IPL 2022 RCB VS SRH 5

    ಮಳೆ ಅಡ್ಡಿಯಿಂದ ನಿಗದಿತ ಸಮಯದೊಳಿಗೆ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಕೇವಲ ಸೂಪರ್ ಓವರ್ ವಿಜೇತರನ್ನು ನಿರ್ಧರಿಸಲಿದೆ. ಟಿ20 ಕ್ರಿಕೆಟ್‌ನಲ್ಲಿ ಕೇವಲ ಸೂಪರ್ ಓವರ್‌ನಿಂದಲೇ ಫಲಿತಾಂಶ ನಿರ್ಧರಿಸುವ ನಿಯಮ ಇದೇ ಮೊದಲಿಗೆ ಬಿಸಿಸಿಐ ಮಾಡಿದೆ. ಇದನ್ನೂ ಓದಿ: ಆಫ್ರಿಕಾ ಸರಣಿಗೆ ತಂಡ ಪ್ರಕಟ – ಟಿ20 ತಂಡಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಕ್ಯಾಪ್ಟನ್, ಡಿಕೆ ವಾಪಸ್‌, ಉಮ್ರಾನ್ ಮಲಿಕ್‍ಗೆ ಸ್ಥಾನ

    ಫೈನಲ್ ಸೇರಿ ಪ್ಲೇ-ಆಫ್‌ನ ಒಟ್ಟು 4 ಪಂದ್ಯಗಳಿಗೆ ನಿಗದಿತ 200 ನಿಮಿಷಗಳ ಜೊತೆಗೆ ಹೆಚ್ಚುವರಿ 2 ಗಂಟೆಗಳ ಸಮಯಾವಕಾಶ ನೀಡಲಾಗಿದೆ. ಮೊದಲ 3 ಪಂದ್ಯಗಳು ಮಳೆಯಿಂದಾಗಿ ವಿಳಂಬಗೊಂಡರೆ ಓವರ್ ಕಡಿತಗೊಳಿಸದೆ ರಾತ್ರಿ 9:40ಕ್ಕೆ ಆರಂಭಿಸಲು ಗಡುವು ನೀಡಲಾಗಿದೆ. ಒಂದು ವೇಳೆ ತಲಾ 5 ಓವರ್ ಪಂದ್ಯ ನಡೆಸಲು ಅವಕಾಶ ಸಿಕ್ಕರೆ ಆ ಪಂದ್ಯ ಆರಂಭಿಸಲು ರಾತ್ರಿ 11:56 ರವರೆಗೂ ಸಮಯವಿರಲಿದೆ. 5 ಓವರ್ ಪಂದ್ಯದಲ್ಲಿ ಟೈಮ್‌ಔಟ್ ಇರುವುದಿಲ್ಲ. ಅಲ್ಲದೆ ಮಧ್ಯರಾತ್ರಿ 12:50ರೊಳಗೆ ಪಂದ್ಯ ಮುಗಿಸುವಂತೆ ನಿಯಮ ಮಾಡಿದೆ.

    IPL 2022 GT VS LSG PLAYOFF 1

    5 ಓವರ್ ಪಂದ್ಯವೂ ಸಾಧ್ಯವಾಗದೆ ಇದ್ದಲ್ಲಿ ಸೂಪರ್ ಓವರ್ ನಡೆಯಲಿದೆ. ಇದಕ್ಕೆ ಮಧ್ಯರಾತ್ರಿ 12:50ರ ವರೆಗೂ ಸಮಯವಿರಲಿದೆ. ಮಳೆ ನಿಲ್ಲದೆ ಪಂದ್ಯ ನಡೆಸಲು ಸಾಧ್ಯವಾಗದೆ ಇದ್ದರೆ ಅಂಕಪಟ್ಟಿಯಲ್ಲಿ ಗಳಿಸಿದ ಸ್ಥಾನಗಳ ಮೇಲೆ ವಿಜೇತರ ನಿರ್ಧಾರವಾಗಲಿದೆ.  ಇದನ್ನೂ ಓದಿ: ಪ್ಲೇ ಆಫ್ ಪಂದ್ಯಗಳಿಗೆ ಮಳೆ ಕಾಟ – ಹೀಗೆ ನಿರ್ಧಾರವಾಗಲಿದೆ ಫಲಿತಾಂಶ?

    ಕ್ವಾಲಿಫೈಯರ್-1 ಮಳೆಗೆ ಬಲಿಯಾದರೆ, ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಗುಜರಾತ್ ನೇರವಾಗಿ ಫೈನಲ್‌ಗೇರಲಿದೆ. ರಾಜಾಸ್ಥಾನ ಕ್ವಾಲಿಫೈಯರ್-2ರಲ್ಲಿ ಆಡಬೇಕಾಗುತ್ತದೆ. ಎಲಿಮಿನೇಟರ್ ಪಂದ್ಯ ಮಳೆಗೆ ಆಹುತಿಯಾದರೆ, ಆರ್‌ಸಿಬಿ ಹೊರಬೀಳಲಿದ್ದು, 2ನೇ ಪ್ಲೇ ಆಫ್ ಪಂದ್ಯಕ್ಕೆ ಲಖನೌ ಪ್ರವೇಶ ಪಡೆಯಲಿದೆ.

    ಫೈನಲ್ ಪಂದ್ಯಕ್ಕೆ ಏನು ನಿಯಮ?: ಮೇ 29ಕ್ಕೆ ನಿಗದಿಯಾಗಿರುವ ಫೈನಲ್ ಪಂದ್ಯ ರಾತ್ರಿ 8ಕ್ಕೆ ಆರಂಭಗೊಳ್ಳುವ ಕಾರಣ ಮಳೆಯಿಂದ ತಡವಾದರೆ ಓವರ್ ಕಡಿತವಿಲ್ಲದೆ ಪಂದ್ಯ ಆರಂಭಿಸಲು ರಾತ್ರಿ 10:10ರ ವರೆಗೂ ಅವಕಾಶವಿರಲಿದೆ. 5 ಓವರ್ ಪಂದ್ಯ ನಡೆಸಲುಮಧ್ಯ ರಾತ್ರಿ 12:26ರ ವರೆಗೂ ಕಾಲಾವಕಾಶ ಇರಲಿದ್ದು, ಮೇ 30 ಅನ್ನು ಮೀಸಲು ದಿನವಾಗಿ ಇಡಲಾಗಿದೆ.

    IPL2022

    ಮೊದಲ ದಿನ ಪಂದ್ಯ ಅರ್ಧ ನಡೆದಿದ್ದರೆ, ಮೀಸಲು ದಿನದಂದು ಪಂದ್ಯ ಮುಂದುವರಿಯಲಿದೆ. ಕೇವಲ ಟಾಸ್ ಅಷ್ಟೇ ಆಗಿ ಪಂದ್ಯ ನಡೆಯದಿದ್ದರೆ, 2ನೇ ದಿನ ಹೊಸದಾಗಿ ಟಾಸ್ ಹಾಕಲಾಗುತ್ತದೆ. ಒಂದು ವೇಳೆ ಮೊದಲ ಇನ್ನಿಂಗ್ಸ್ ಮುಗಿದು, 2ನೇ ಇನ್ನಿಂಗ್ಸ್‌ 5 ಓವರ್ ಪೂರ್ಣಗೊಂಡ ಬಳಿಕ ಮಳೆ ಸುರಿದರೆ, ಡಕ್ವರ್ತ್ ಲೂಯಿಸ್ ನಿಯಮವನ್ನು ಅಳವಡಿಸಿ ವಿಜೇತರನ್ನು ನಿರ್ಧರಿಸಲಾಗುತ್ತದೆ. ಮೀಸಲು ದಿನದಂದು ಕೇವಲ ಸೂಪರ್ ಓವರ್ ನಿಂದಲೂ ಫಲಿತಾಂಶ ನಿರ್ಧರಿಸಬಹುದಾಗಿದೆ.

    ಫೈನಲ್‌ನಲ್ಲಿ ಸೂಪರ್ ಓವರ್ ಆರಂಭಿಸಲು ಮಧ್ಯರಾತ್ರಿ 1.20ರ ವರೆಗೂ ಅವಕಾಶವಿರಲಿದೆ.

  • ಪಂದ್ಯವಾಡದೇ ಆರ್‌ಸಿಬಿ ಮನೆಗೆ ಬರುತ್ತಾ?

    ಪಂದ್ಯವಾಡದೇ ಆರ್‌ಸಿಬಿ ಮನೆಗೆ ಬರುತ್ತಾ?

    ಕೋಲ್ಕತ್ತಾ: ಐಪಿಎಲ್‍ನಲ್ಲಿ ಕಡೆಯ ರೋಚಕ ಪಂದ್ಯಗಳಿಗೆ ಕೋಲ್ಕತ್ತಾ ಸಜ್ಜಾಗುತ್ತಿದೆ. ಈಗಾಗಲೇ 4 ತಂಡಗಳು ಪ್ಲೇ ಆಫ್ ಪಂದ್ಯಗಳನ್ನು ಆಡಲು ತಯಾರಿ ನಡೆಸುತ್ತಿವೆ. ಈ ನಡುವೆ ಪ್ಲೇ ಆಫ್ ಪ್ರವೇಶಿಸಿರುವ ಆರ್‌ಸಿಬಿ ಪಂದ್ಯವಾಡದೇ ಮನೆಗೆ ಬರುತ್ತಾ ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡುತ್ತಿದೆ.

    ಹೌದು ಇದಕ್ಕೆಲ್ಲ ಕಾರಣ ಕೋಲ್ಕತ್ತಾದಲ್ಲಿ ಸುರಿಯುತ್ತಿರುವ ಮಳೆ. ಕೋಲ್ಕತ್ತಾದಲ್ಲಿ ಪ್ಲೇ ಆಫ್ ಪಂದ್ಯಗಳು ನಡೆಯುತ್ತಿದ್ದು, ಕೋಲ್ಕತ್ತಾದಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದೆ. ಇದೀಗ ಪ್ಲೇ ಆಫ್‍ನ ಎರಡು ಪಂದ್ಯಗಳು ಕೋಲ್ಕತ್ತಾದಲ್ಲಿ ನಡೆಯಲಿದೆ. ಕೋಲ್ಕತ್ತಾದಲ್ಲಿ ಇನ್ನೆರಡು ದಿನ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ಪ್ಲೇ ಆಫ್ ಪಂದ್ಯಗಳು ಸರಿಯಾಗಿ ನಡೆಯುವುದು ಅನುಮಾನವಾಗಿದೆ. ಇದನ್ನೂ ಓದಿ: ಪ್ಲೇ ಆಫ್ ಪಂದ್ಯಗಳಿಗೆ ಮಳೆ ಕಾಟ – ಹೀಗೆ ನಿರ್ಧಾರವಾಗಲಿದೆ ಫಲಿತಾಂಶ?

    ಮೊದಲನೇ ಕ್ವಾಲಿಫೈಯರ್ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ನಡುವೆ ಮೇ 24 ಮಂಗಳವಾರ ನಡೆಯಲಿದೆ. ಎಲಿಮಿನೇಟರ್ ಪಂದ್ಯ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಮೇ 25 ಬುಧವಾರದಂದು ನಡೆಯಲಿದೆ. ಒಂದು ವೇಳೆ ಈ ಪಂದ್ಯಗಳು ಮಳೆಯಿಂದಾಗಿ ಸೂಪರ್ ಓವರ್ ಮೂಲಕವೂ ಫಲಿತಾಂಶ ಕಾಣದೇ ರದ್ದಾದರೆ ನೆಟ್‍ ರನ್‌ರೇಟ್‌ನಲ್ಲಿ ಮುಂದಿರುವ ತಂಡ 2ನೇ ಎಲಿಮಿನೇಟರ್‌ಗೆ ತೇರ್ಗಡೆ ಆಗುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ಎಲಿಮಿನೇಟರ್ ಪಂದ್ಯವಾಡುತ್ತಿರುವ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಲಕ್ನೋ ತಂಡಕ್ಕೆ ರನ್‍ರೇಟ್ ವರವಾಗುವ ಸಾಧ್ಯತೆ ಹೆಚ್ಚಿದೆ.

    ಇದೀಗ ಅಂಕಪಟ್ಟಿಯನ್ನು ಗಮನಿಸಿದಾಗ ಮೊದಲ ಸ್ಥಾನದಲ್ಲಿರುವ ಗುಜರಾತ್ ತಂಡ +0.316 ನೆಟ್‌ ರನ್‍ರೇಟ್ ಹೊಂದಿದ್ದರೆ, 2ನೇ ಸ್ಥಾನದಲ್ಲಿರುವ ರಾಜಸ್ಥಾನ +0298, 3ನೇ ಸ್ಥಾನದಲ್ಲಿರುವ ಲಕ್ನೋ +0.251 ಮತ್ತು ಬೆಂಗಳೂರು -0.253 ರನ್‍ರೇಟ್ ಹೊಂದಿದೆ. ಇದನ್ನು ಗಮನಿಸಿದಾಗ ಅದೃಷ್ಟದಾಟದ ಮೂಲಕ ಪ್ಲೇ ಆಫ್ ಪ್ರವೇಶಿಸಿರುವ ಆರ್‌ಸಿಬಿ ತಂಡಕ್ಕೆ ಪ್ಲೇ ಆಫ್‍ನಲ್ಲಿ ರನ್‍ರೇಟ್ ಮುಳ್ಳಾಗುವ ಸಾಧ್ಯತೆ ಕಂಡುಬರುತ್ತಿದೆ. ಇದನ್ನೂ ಓದಿ: ಆಫ್ರಿಕಾ ಸರಣಿಗೆ ತಂಡ ಪ್ರಕಟ – ಟಿ20 ತಂಡಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಕ್ಯಾಪ್ಟನ್, ಡಿಕೆ ವಾಪಸ್‌, ಉಮ್ರಾನ್ ಮಲಿಕ್‍ಗೆ ಸ್ಥಾನ

    ಆರ್‌ಸಿಬಿ ಮತ್ತು ಲಕ್ನೋ ನಡುವಿನ ಪಂದ್ಯಕ್ಕೆ ಮಳೆ ಅಡಚಣೆ ನೀಡಿ ಒಂದೂ ಎಸೆತ ಕಾಣದೇ ಪಂದ್ಯ ರದ್ದಾದರೆ, ನೆಟ್‍  ರನ್‍ರೇಟ್‍ನಲ್ಲಿ ಮುಂದಿರುವ ತಂಡ 2ನೇ ಕ್ವಾಲಿಫೈಯರ್‌ಗೆ ತೇರ್ಗಡೆ ಹೊಂದಲಿದೆ. ಇದೀಗ ನೆಟ್‍  ರನ್‍ರೇಟ್‍ನಲ್ಲಿ ಆರ್‌ಸಿಬಿಗಿಂತ ಲಕ್ನೋ ತಂಡ ಮುಂದಿದೆ. ಇದು ಪಂದ್ಯಕ್ಕೂ ಮುನ್ನ ಲಕ್ನೋ ಮೇಲುಗೈ ಸಾಧಿಸಿರುವಂತೆ ಕಂಡುಬಂದರೆ, ಇತ್ತ ಆರ್‌ಸಿಬಿ ಪಂದ್ಯವಾಡದೇ ಮನೆಗೆ ಹೆಜ್ಜೆ ಇಡುವ ದಾರಿಯಾಗಿದೆ.

    IPL 2022 GUJARATH VS RCB 05

    ಈ ರೀತಿ ಆಗದಿರಲಿ ಪ್ಲೇ ಆಫ್ ಪಂದ್ಯಗಳು ಸರಿಯಾಗಿ ನಡೆದು ಫಲಿತಾಂಶ ಕಾಣುವಂತಾಗಲಿ. ಆರ್‌ಸಿಬಿ ಫೈನಲ್‍ಗೇರಿ ಕಪ್ ಗೆಲ್ಲಲಿ ಎಂದು ಆರ್‌ಸಿಬಿ ಅಭಿಮಾನಿಗಳು ದೇವರಲ್ಲಿ ಬೇಡಿಕೊಳ್ಳುತ್ತಿದ್ದಾರೆ.

  • ಪ್ಲೇ ಆಫ್ ಪಂದ್ಯಗಳಿಗೆ ಮಳೆ ಕಾಟ – ಹೀಗೆ ನಿರ್ಧಾರವಾಗಲಿದೆ ಫಲಿತಾಂಶ?

    ಪ್ಲೇ ಆಫ್ ಪಂದ್ಯಗಳಿಗೆ ಮಳೆ ಕಾಟ – ಹೀಗೆ ನಿರ್ಧಾರವಾಗಲಿದೆ ಫಲಿತಾಂಶ?

    ಕೋಲ್ಕತ್ತಾ: 15ನೇ ಆವೃತ್ತಿ ಐಪಿಎಲ್‍ನ ಪ್ಲೇ ಆಫ್ ಪಂದ್ಯಗಳಿಗೆ ಮಳೆ ಕಾಟ ಕೊಡುವ ಸಾಧ್ಯತೆ ಹೆಚ್ಚಿದೆ.

    ಕೋಲ್ಕತ್ತಾದಲ್ಲಿ ಪ್ಲೇ ಆಫ್ ಪಂದ್ಯಗಳು ನಡೆಯುತ್ತಿದ್ದು, ಕೋಲ್ಕತ್ತಾದಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದೆ. ಇದೀಗ ಪ್ಲೇ ಆಫ್‍ನ ಎರಡು ಪಂದ್ಯಗಳು ಕೋಲ್ಕತ್ತಾದಲ್ಲಿ ನಡೆಯಲಿದೆ. ಕೋಲ್ಕತ್ತಾದಲ್ಲಿ ಇನ್ನೆರಡು ದಿನ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ಪ್ಲೇ ಆಫ್ ಪಂದ್ಯಗಳು ಸರಿಯಾದ ಫಲಿತಾಂಶ ಕಾಣುವ ಸಾಧ್ಯತೆ ಕಡಿಮೆ ಇದೆ. ಇದನ್ನೂ ಓದಿ: ಗೆಲುವಿನೊಂದಿಗೆ ಹೊರನಡೆದ ಪಂಜಾಬ್ – ಅಂಕಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿದ ಹೈದರಾಬಾದ್

    ಮೊದಲನೇ ಕ್ವಾಲಿಫೈಯರ್ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ನಡುವೆ ಮೇ 24 ಮಂಗಳವಾರ ನಡೆಯಲಿದೆ. ಎಲಿಮಿನೇಟರ್ ಪಂದ್ಯ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಮೇ 25 ಬುಧವಾರದಂದು ನಡೆಯಲಿದೆ.

    ಆ ಬಳಿಕ ಕ್ವಾಲಿಫೈಯರ್ 2ನೇ ಪಂದ್ಯ ಅಹಮದಾಬಾದ್‍ನಲ್ಲಿ ಮೇ 27 ರಂದು ಮತ್ತು ಫೈನಲ್ ಪಂದ್ಯ 29 ರಂದು ನಡೆಯಲಿದೆ. ಇದನ್ನೂ ಓದಿ: ಆಫ್ರಿಕಾ ಸರಣಿಗೆ ತಂಡ ಪ್ರಕಟ – ಟಿ20 ತಂಡಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಕ್ಯಾಪ್ಟನ್, ಡಿಕೆ ವಾಪಸ್‌, ಉಮ್ರಾನ್ ಮಲಿಕ್‍ಗೆ ಸ್ಥಾನ

    IPL 2022 SCK VS GT 4

    ಸೂಪರ್ ಓವರ್ ರಿಸಲ್ಟ್:
    ಮಳೆ ಬಂದು ನಿಗದಿತ ಸಮಯದಲ್ಲಿ ಪಂದ್ಯ ನಡೆಯದೇ ಇದ್ದರೆ ಈ ವೇಳೆ ಸೂಪರ್ ಓವರ್ ಮೂಲಕ ಪಂದ್ಯದ ಫಲಿತಾಂಶ ನಿರ್ಧರಿಸುವ ಸಾಧ್ಯತೆ ಇದೆ. ಅಲ್ಲದೇ 2 ಗಂಟೆಗಳ ಕಾಲ ಹೆಚ್ಚಿನ ಅವಧಿಯನ್ನು ಈಗಾಗಲೇ ನಿಗದಿಪಡಿಸಲಾಗಿದ್ದು, ಒಂದು ವೇಳೆ ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗದೇ ಇದ್ದರೆ 9:30ಕ್ಕೆ ಪ್ರಾರಂಭಿಸಲು ಐಪಿಎಲ್ ಆಡಳಿತ ಮಂಡಳಿ ಪ್ಲಾನ್ ಮಾಡಿಕೊಂಡಿದೆ. ಜೊತೆಗೆ ಎರಡು ತಂಡಗಳಿಗೂ ತಲಾ 5 ಓವರ್‌ಗಳ ಆಟದ ಮೂಲಕ ಫಲಿತಾಂಶ ಕಾಣುವಂತೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

  • ಕಚ್ಚಾ ಬಾದಾಮ್ ಗಾಯಕನಿಗೆ ರೈಲ್ವೆಯಲ್ಲಿ ಮ್ಯಾನೇಜರ್ ಹುದ್ದೆ – ಅಸಲಿ ಸುದ್ದಿ ಏನು?

    ಕಚ್ಚಾ ಬಾದಾಮ್ ಗಾಯಕನಿಗೆ ರೈಲ್ವೆಯಲ್ಲಿ ಮ್ಯಾನೇಜರ್ ಹುದ್ದೆ – ಅಸಲಿ ಸುದ್ದಿ ಏನು?

    ಕೋಲ್ಕತ್ತಾ: ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿ ನೆಟ್ಟಿಗರ ಮನಗೆದ್ದಿದ್ದ ಕಚ್ಚಾ ಬಾದಾಮ್ ಎಂಬ ಹಾಡವೊಂದನ್ನು ಹಾಡಿ ಪಶ್ಚಿಮ ಬಂಗಾಳದ ಗಾಯಕರಾದ ಬುಬನ್ ಗದ್ಯಾಕರ್ ರಾತ್ರೋರಾತ್ರಿ ವಿಶ್ವದಾದ್ಯಂತ ಪ್ರಖ್ಯಾತಿ ಪಡಿದಿದ್ದರು. ಬೀದಿ ಬದಿ ಕಡಲೆಕಾಯಿ ಮಾರುತ್ತಿದ್ದ ಇವರಿಗೆ ಭಾರತೀಯ ರೈಲ್ವೆಯಲ್ಲಿ ಮ್ಯಾನೇಜರ್ ಹುದ್ದೆ ನೀಡಲಾಗಿದೆ ಎನ್ನುವ ಸುದ್ದಿ ಓಡಾಡುತ್ತಿದೆ.

    ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೀಡಿಯೋದಲ್ಲಿ ಬುಬನ್ ರೈಲ್ವೆಯ ಬೋಗಿಯೊಂದರ ಬಾಗಿಲಲ್ಲಿ ನಿಂತು ವಾಕಿಟಾಕಿ ಹಿಡಿದು ನಿಂತಿದ್ದಾರೆ. ಅಲ್ಲದೆ ರೈಲ್ವೆ ಇಲಾಖೆಯ ಬಿಳಿ ಸಮವಸ್ತ್ರ ಧರಿಸಿದ್ದಾರೆ. ಇದನ್ನೂ ಓದಿ:  ಕಚ್ಚಾ ಬದಾಮ್ ಎಂದು ಹಾಡಿದ್ದವನ ಆತಂಕವೇನು ಗೊತ್ತಾ?

    ಆದರೆ ವೀಡಿಯೋದ ಅಸಲಿಯತ್ತನ್ನು ಸೂಕ್ಷ್ಮವಾಗಿ ಗಮನಿಸಿದಾಗ ಸಿಕ್ಕ ಮಾಹಿತಿಯೇ ಬೇರೆಯಾಗಿದ್ದು, ವೀಡಿಯೋದಲ್ಲಿ ಇರುವುದು ಬುಬನ್ ಅಲ್ಲ. ಅವರನ್ನು ಹೋಲುವ ಈಗಾಗಲೇ ರೈಲ್ವೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೇರೊಬ್ಬ ವ್ಯಕ್ತಿಯೆಂದು ತಿಳಿದು ಬಂದಿದೆ. ಇದನ್ನೂ ಓದಿ: ಇನ್‌ಸ್ಟಾಗ್ರಾಮ್ ನಲ್ಲಿ ಟ್ರೆಂಡ್ ಆಯ್ತು ಕಡಲೆಕಾಯಿ ಮಾರುವವನ ಹಾಡು

    ಬುಬನ್ ರೈಲ್ವೆ ಇಲಾಖೆಯಲ್ಲಿ ಯಾವುದೇ ಕೆಲಸ ಮಾಡುತ್ತಿಲ್ಲ. ಅಲ್ಲದೆ ವೀಡಿಯೋವನ್ನು ‘ಡೈಲಿ ಟ್ರಾವೆಲ್ ಹ್ಯಾಕ್’ ಎನ್ನುವ ವ್ಲಾಗ್ ನಡೆಸುವ ಬಿಹಾರ ಮೂಲದ ಧನಂಜಯ್ ಕುಮಾರ್ ಅವರು ಚಿತ್ರಿಕರಿಸಿದ್ದಾರೆ ಎಂದು ತಿಳಿದುಬಂದಿದೆ. ಅವರೇ ಸೃಷ್ಟಿಸಿರುವಂತೆ ವೀಡಿಯೋದಲ್ಲಿರುವುದು ಬುಬನ್ ಅಲ್ಲ. ಅವರನ್ನ ಹೋಲುವ ಮತ್ತೊಬ್ಬ ವ್ಯಕ್ತಿ. ವೀಡಿಯೋವನ್ನು ಅಗರ್ತಲ್-ಆನಂದ್ ವಿಹಾರ್ ತೇಜಸ್ ರಾಜಧಾನಿ ಎಕ್ಸಪ್ರೆಸ್‍ನಲ್ಲಿ ಚಿತ್ರಿಕರಿಸಲಾಗಿದೆ. ಈ ಮೂಲಕ ಬುಬನ್ ಅವರಿಗೆ ಯಾವುದೇ ರೈಲ್ವೆ ಇಲಾಖೆಯ ಕೆಲಸ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ.

  • ಸ್ಟೀಲ್ ಟಿಫಿನ್ ಬಾಕ್ಸ್ ಸ್ಫೋಟ – ಬಾಲಕ ಸಾವು

    ಸ್ಟೀಲ್ ಟಿಫಿನ್ ಬಾಕ್ಸ್ ಸ್ಫೋಟ – ಬಾಲಕ ಸಾವು

    ಕೋಲ್ಕತ್ತಾ: ಸ್ಟೀಲ್ ಟಿಫಿನ್ ಬಾಕ್ಸ್ ಸ್ಫೋಟಗೊಂಡು 17 ವರ್ಷದ ಹುಡುಗ ಮೃತಪಟ್ಟಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.

    ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ರಹರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ದುರ್ದೈವಿಯನ್ನು ಶೇಖ್ ಸಾಹಿಲ್ ಎಂದು ಗುರುತಿಸಲಾಗಿದೆ. ಚಿಂದಿ ಆಯುವ ತನ್ನ ಅಜ್ಜ ಸಂಗ್ರಹಿಸಿದ್ದ ಟಿಫಿನ್ ಬಾಕ್ಸ್ ತೆರೆಯಲು ಪ್ರಯತ್ನಿಸಿದಾಗ ಟಿಫನ್ ಬಾಕ್ಸ್ ಸ್ಫೋಟಗೊಂಡು ಶೇಖ್ ಸಾಹಿಲ್ ಗಂಭೀರವಾಗಿ ಗಾಯಗೊಂಡಿದ್ದನು. ಇದನ್ನೂ ಓದಿ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ ರಾಜೀನಾಮೆ

    CRIME 2

    ಈ ವೇಳೆ ಕೂಡಲೇ ಅವನನ್ನು ಕೋಲ್ಕತ್ತಾದಿಂದ ಸುಮಾರು 30 ಕಿಮೀ ದೂರದಲ್ಲಿರುವ ಬ್ಯಾರಕ್ ಪೋರ್‌ನಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶೇಖ್ ಸಾಹಿಲ್ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿಯನ್ನು ರಾಜ್ಯದಿಂದ ರಾಜ್ಯ ಸಭೆಗೆ ಸ್ಪರ್ಧಿಸಲು ಒಪ್ಪಿಸಿ – ರಾಹುಲ್‍ಗೆ ಮನವಿ

    ಸಾಹಿಲ್, ಅಜ್ಜ ಅಬ್ದುಲ್ ಹಮೀದ್ ಅವರು ಚಿಂದಿ ಆಯುವಾಗ ಪತ್ತೆಯಾದ ಸ್ಟೀಲ್ ಟಿಫನ್ ಬಾಕ್ಸ್‌ವೊಂದನ್ನು ಮನೆಗೆ ಎತ್ತಿಕೊಂಡು ಬಂದಿದ್ದರು. ಅಲ್ಲದೇ ಬಾಕ್ಸ್ ಒಳಗೆ ಏನಿದೆ ಎಂದು ಪರಿಶೀಲಿಸುವಂತೆ ಮೊಮ್ಮಗ ಸಾಹಿಲ್‍ಗೆ ಹೇಳಿರುವುದಾಗಿ ತಿಳಿಸಿದ್ದಾರೆ.