Tag: kolkata

  • ಮಗನನ್ನು ಕಾರಿನಲ್ಲಿ ಲಾಕ್ ಮಾಡಿ ಬೀಚ್‍ನಲ್ಲಿ ದಂಪತಿ ಎಂಜಾಯ್

    ಮಗನನ್ನು ಕಾರಿನಲ್ಲಿ ಲಾಕ್ ಮಾಡಿ ಬೀಚ್‍ನಲ್ಲಿ ದಂಪತಿ ಎಂಜಾಯ್

    – ಉಸಿರುಗಟ್ಟಿ ಪ್ರಜ್ಞೆ ತಪ್ಪಿದ ಬಾಲಕನ ರಕ್ಷಣೆ

    ಕೋಲ್ಕತ್ತಾ: ಮಗನನ್ನು ಕಾರಿನಲ್ಲಿ ಲಾಕ್ ಮಾಡಿ ತಂದೆ-ತಾಯಿ ಸಮುದ್ರಕ್ಕೆ ಹೋಗಿ ಎಂಜಾಯ್ ಮಾಡಿದ್ದು, ಇದೇ ವೇಳೆ ಉಸಿರುಗಟ್ಟಿ ಪ್ರಜ್ಞೆ ತಪ್ಪಿದ ಬಾಲಕನನ್ನು ರಕ್ಷಣೆ ಮಾಡಿದ ಘಟನೆ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪೋರ್ ಜಿಲ್ಲೆಯಲ್ಲಿ ನಡೆದಿದೆ.

    ತಂದೆ- ತಾಯಿ ತಮ್ಮ ಮಗನ ಜೊತೆ ರಜೆ ದಿನವನ್ನು ಕಳೆಯಲು ಪೂರ್ವ ಮಿಡ್ನಾಪೋರ್‍ದಲ್ಲಿದ್ದ ದಿಘಾ ಸಮುದ್ರಕ್ಕೆ ತೆರಳಿದ್ದರು. ಈ ವೇಳೆ ತಮ್ಮ ಮಗನನ್ನು ಕಾರಿನಲ್ಲಿಯೇ ಲಾಕ್ ಮಾಡಿ ಇಬ್ಬರು ಸಮುದ್ರದಲ್ಲಿ ಕಾಲ ಕಳೆಯಲು ಹೋಗಿದ್ದರು. ಇದೇ ವೇಳೆ ಬಾಲಕ ಇದ್ದ ಕಾರಿನ ಬಳಿ ಹೋಗುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಆತನನ್ನು ನೋಡಿದ್ದಾರೆ. ಕಿಟಕಿಗಳು ಮುಚ್ಚಿದ್ದ ಕಾರಣ ಬಾಲಕನಿಗೆ ಉಸಿರಾಡಲು ತೊಂದರೆ ಆಗುತಿತ್ತು. ಅಲ್ಲದೆ ಆತ ಪ್ರಜ್ಞೆ ತಪ್ಪಿ ಬಿದ್ದಿದ್ದನು.

                                                                                                    ದಿಘಾ ಸಮುದ್ರ

    ಬಾಲಕನನ್ನು ನೋಡಿದ ಪೊಲೀಸ್ ಅಧಿಕಾರಿ ತಕ್ಷಣ ಬೇರೆ ಅಧಿಕಾರಿಗಳನ್ನು ಕರೆದು ಕಾರಿನ ಕಿಟಕಿಯನ್ನು ಒಡೆದು ಬಾಲಕನನ್ನು ರಕ್ಷಿಸಿದ್ದಾರೆ. ಬಳಿಕ ಪ್ರಜ್ಞೆ ತಪ್ಪಿದ್ದ ಬಾಲಕನ ಮೇಲೆ ನೀರು ಚಿಮುಕಿಸಿ ಆತನನ್ನು ಎಚ್ಚರಗೊಳಿಸಿದ್ದಾರೆ. ಸಮುದ್ರದಿಂದ ಸ್ಥಳಕ್ಕೆ ಬಂದ ಪೋಷಕರು ಮಗುವನ್ನು ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಬಾಲಕನ ತಂದೆಗೆ ಹಿಗ್ಗಾಮುಗ್ಗಾ ಬಾರಿಸಿದ್ದಾರೆ. ಅಲ್ಲದೆ ಮಗನನ್ನು ಇಂತಹ ಸ್ಥಿತಿಯಲ್ಲಿ ಬಿಟ್ಟು ಹೋಗಿದ್ದಕ್ಕೆ ಇಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಪೋಷಕರು ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲದೆ ಈ ರೀತಿ ಮತ್ತೆ ಮಾಡುವುದಿಲ್ಲ ಎಂದು ಬಾಲಕನ ತಂದೆ ಸ್ಥಳೀಯರ ಬಳಿ ಹೇಳಿಕೊಂಡಿದ್ದಾರೆ.

  • ನಮಾಜ್ ವೇಳೆ ರೋಡ್ ಬಂದ್ ಖಂಡಿಸಿ ಬಿಜೆಪಿಯಿಂದ ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟನೆ

    ನಮಾಜ್ ವೇಳೆ ರೋಡ್ ಬಂದ್ ಖಂಡಿಸಿ ಬಿಜೆಪಿಯಿಂದ ಹನುಮಾನ್ ಚಾಲೀಸಾ ಪಠಿಸಿ ಪ್ರತಿಭಟನೆ

    ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಪ್ರತೀ ಶುಕ್ರವಾರ ಮುಸ್ಲಿಮರು ಪ್ರಾರ್ಥನೆ (ನಮಾಜ್) ಸಲ್ಲಿಸುವ ವೇಳೆ ರೋಡ್ ಬಂದ್ ಆಗುತ್ತಿರುವುದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಹನುಮಾನ್ ಚಾಲಿಸಾ ಪಠಿಸಿ ಪ್ರತಿಭಟನೆ ಮಾಡಿದ್ದಾರೆ.

    ಪ್ರತಿ ಶುಕ್ರವಾರದ ನಮಾಜ್ ಸಮಯದಲ್ಲಿ ಮಸೀದಿ ಮುಂಭಾಗದ ರಸ್ತೆ ಸಂಚಾರ ನಿಷೇಧಿಸಲಾಗುತ್ತಿದೆ. ಇದರಿಂದ ವಾಹನ ಚಲಿಸುವವರಿಗೆ ತೊಂದರೆಯಾಗುತ್ತದೆ ಎಂದು ಹೇಳಿ ಬಿಜೆಪಿ ಯುವ ಮೋರ್ಚಾದವರು ಹೌರ ನಗರದ ಜಿ.ಟಿ ರಸ್ತೆಯಲ್ಲಿ ಕುಳಿತು ಹನುಮಾನ್ ಚಾಲಿಸಾ ಪಠಣ ಮಾಡುವ ಮೂಲಕ ಪ್ರತಿಭಟಿಸಿದ್ದಾರೆ.

    ರಸ್ತೆ ಸಂಚಾರ ಬಂದ್ ಮಾಡುವುದರಿಂದ ನಮಗೆ ತುಂಬ ತೊಂದರೆಯಾಗುತ್ತಿದೆ. ಶುಕ್ರವಾರ ನಮಗೆ ಸರಿಯಾದ ಸಮಯದಲ್ಲಿ ಕಚೇರಿಗೆ ತಲುಪಲು ಆಗುತ್ತಿಲ್ಲ ಎಂದು ಮಂಗಳವಾರ ಸಂಜೆ ರಸ್ತೆಗಿಳಿದ ನೂರಾರು ಬಿಜೆಪಿ ಕಾರ್ಯಕರ್ತರು ರಸ್ತೆ ಅಡ್ಡಗಟ್ಟಿ ಮುಂದಿನ ಶುಕ್ರವಾರದ ತನಕ ನಾವು ಹೀಗೆ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಈ ವಿಚಾರವಾಗಿ ಮಾತನಾಡಿರುವ ಹೌರ ಜಿಲ್ಲಾ ಯುವ ಮೋರ್ಚಾದ ಕಾರ್ಯಕರ್ತ ಒ.ಪಿ ಸಿಂಗ್ ಅವರು, ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಗ್ರ್ಯಾಂಡ್ ಟ್ರಾಂಕ್ ರಸ್ತೆ ಮತ್ತು ಇತರ ಮುಖ್ಯ ರಸ್ತೆಗಳಲ್ಲಿ ಶುಕ್ರವಾರ ಸಂಚಾರ ನಿಷೇಧಿಸಲಾಗಿದೆ. ಇದರಿಂದ ಸರಿಯಾದ ಸಮಯಕ್ಕೆ ರೋಗಿಗಳು ಆಸ್ಪತ್ರೆಗೆ ಹೋಗಲು ಆಗದೇ ಮೃತಪಡುತ್ತಿದ್ದಾರೆ. ಉದ್ಯೋಗಸ್ಥರು ಶುಕ್ರವಾರ ಸರಿಯಾದ ಸಮಯಕ್ಕೆ ಕಚೇರಿಗೆ ಹೋಗಲು ಆಗುತ್ತಿಲ್ಲ. ನಮಾಜ್ ವೇಳೆ ರಸ್ತೆಗಳ ನಿಷೇಧವನ್ನು ಎಲ್ಲಿಯವರೆಗೆ ಮುಂದುವರಿಸುತ್ತಾರೋ ಅಲ್ಲಿಯವರೆಗೆ ನಾವೂ ಹನುಮಾನ್ ಮಂದಿರಗಳ ಮುಂದೆ ಎಲ್ಲಾ ರಸ್ತೆಗಳನ್ನು ತಡೆದು ಹನುಮಾನ್ ಚಾಲಿಸಾವನ್ನು ಪಠಣ ಮಾಡುತ್ತೇವೆ ಎಂದು ಹೇಳಿದ್ದಾರೆ.

  • ನೆಲಕ್ಕೆ ಬಡಿದು, ತೋಳನ್ನು ಮುರಿದು ತಂದೆಯಿಂದಲೇ ಮೂರೂವರೆ ತಿಂಗಳ ಹೆಣ್ಣು ಮಗು ಹತ್ಯೆ

    ನೆಲಕ್ಕೆ ಬಡಿದು, ತೋಳನ್ನು ಮುರಿದು ತಂದೆಯಿಂದಲೇ ಮೂರೂವರೆ ತಿಂಗಳ ಹೆಣ್ಣು ಮಗು ಹತ್ಯೆ

    ಕೊಲ್ಕತ್ತಾ: ಹೆಣ್ಣುಮಗು ಎನ್ನುವ ಒಂದೇ ಕಾರಣಕ್ಕೆ ಮೂರೂವರೆ ತಿಂಗಳ ಎಳೆಯ ಮಗುವನ್ನು ತಂದೆಯೇ ಕೊಂದಿರುವ ಆಘಾತಕಾರಿ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.

    ಮಗುವನ್ನು ನೆಲಕ್ಕೆ ಬಡಿದು, ತೋಳನ್ನು ಮುರಿದು ಮುಖವನ್ನು ವಿರೂಪಗೊಳಿಸಿ ಕ್ರೂರವಾಗಿ ಕೊಂದಿದ್ದಾನೆ ಎಂದು ಪೋಲೀಸರು ಹೇಳಿದ್ದಾರೆ

    ಈ ಘಟನೆ ಬುಧವಾರ ನಡೆದಿದ್ದು, ಕೊಲ್ಕತ್ತಾದ ಕೋಲ್‍ಬರ್ತ್ ರಸ್ತೆಯ ನಿವಾಸಿಯಾದ ಸೈಕ್ ರಾಜು (25) ಕೃತ್ಯ ಎಸಗಿದ ಪಾಪಿ ತಂದೆ. ಆರೋಪಿ ಪತ್ನಿ ಅಫ್ಸಾರಿ ಬೇಗಂ ಈ ಸಂಬಂಧ ಪೋಲೀಸರಿಗೆ ದೂರನ್ನು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದ್ದು ಸೈಕ್ ರಾಜುವನ್ನು ಬಂಧಿಸಲಾಗಿದೆ.

    ತನ್ನ ಹೆಂಡತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಕ್ಕಾಗಿ ರಾಜು ಅಸಮಾಧಾನಗೊಂಡಿದ್ದ. ಅಲ್ಲದೆ ಈ ಕಾರಣಕ್ಕಾಗಿ ಆರೋಪಿ ತನ್ನ ಪತ್ನಿಯೊಡನೆ ಜಗಳವಾಡಿದ್ದಾನೆ. ದೂರಿನ ಪ್ರಕಾರ,  ರಾಜು ಹೆಣ್ಣು ಮಗುವನ್ನು ಹಲವು ಬಾರಿ ನೆಲಕ್ಕೆ ಎಸೆದಿದ್ದು ಮಾತ್ರವಲ್ಲದೆ ಕೈಗಳನ್ನು ತಿರುಚಿ ಮುಖಕ್ಕೆ ಗಾಯ ಮಾಡಿದ್ದಾನೆ. ಈ ವೇಳೆ ಅಲ್ಲೇ ಇದ್ದ ಪತ್ನಿ ಬೇಗಂ ವಿರೋಧ ವ್ಯಕ್ತಪಡಿಸಿದ್ದರೂ ಆರೋಪಿ ಮಗುವನ್ನು ಕೊಂದಿದ್ದಾನೆ.

    ಮೃತ ಮಗುವಿನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ಕಚ್ಚಾ ಬಾಂಬ್, ಗುಂಡಿನ ದಾಳಿಗೆ ಇಬ್ಬರ ಸಾವು

    ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ಕಚ್ಚಾ ಬಾಂಬ್, ಗುಂಡಿನ ದಾಳಿಗೆ ಇಬ್ಬರ ಸಾವು

    ಕೋಲ್ಕತ್ತಾ: ಪಶ್ಚಿಮ ಬಂಗಳಾದ ಕೋಲ್ಕತಾ ಉತ್ತರ ಭಾಗದ ಭಟ್ಪರಾದಲ್ಲಿ ಅಪರಿಚಿತರು ನಡೆಸಿದ ಕಚ್ಚಾ ಬಾಂಬ್ ಹಾಗೂ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.

    ಈ ಕುರಿತು ತುರ್ತು ಸಭೆ ನಡೆಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಪೊಲೀಸ್ ಕಮಿಷನರ್ ಹಾಗೂ ಇತರ ಪ್ರಮುಖ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಅಪರಿಚಿತರು ನಡೆಸಿದ ಕಚ್ಚಾ ಬಾಂಬ್ ಹಾಗೂ ಗುಂಡಿನ ದಾಳಿಯಿಂದ ಹಿಂಸಾಚಾರ ಉಂಟಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವನನ್ನು 17 ವರ್ಷದ ಪಾನಿಪೂರಿ ಮಾರುವ ಯುವಕನೆಂದು ಗುರುತಿಸಲಾಗಿದೆ. ತೀವ್ರ ಗಾಯಗಳಾಗಿದ್ದರಿಂದ ಆಸ್ಪತ್ರೆಗೆ ಸಾಗಿಸುವಾಗ ಮತ್ತೋರ್ವ ಯುವಕ ಸಾವನ್ನಪ್ಪಿದ್ದಾನೆ. ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ.

    ಕಚ್ಚಾ ಬಾಂಬ್ ಹಾಗೂ ಗುಂಡಿನ ದಾಳಿಯನ್ನು ಎದುರಿಸಲು ಪೊಲೀಸರು ಅಶ್ರುವಾಯು ಹಾಗೂ ಗುಂಡಿನ ದಾಳಿ ನಡೆಸುತ್ತಿದ್ದಾರೆ. ನಾರ್ಥ್ 24 ಪರಗಣ ಜಿಲ್ಲೆಯಲ್ಲಿ ಸ್ಥಳೀಯ ಪೊಲೀಸರಿಗಾಗಿ ಭಟ್ಪರದಲ್ಲಿ ನಿರ್ಮಿಸಲಾಗಿದ್ದ ಪೊಲೀಸ್ ಠಾಣೆಯ ಹೊಸ ಕಟ್ಟಡವನ್ನು ಉದ್ಘಾಟಿಸಲು ಡಿಜಿಪಿ ಬರುವುದಕ್ಕೂ ಒಂದು ಗಂಟೆಯ ಮೊದಲು ಈ ಘರ್ಷಣೆ ಸಂಭವಿಸಿದೆ. ಘಟನೆ ಸಂಭವಿಸುತ್ತಿದ್ದಂತೆ ಡಿಜಿಪಿ ಸೇರಿದಂತೆ ಎಲ್ಲರೂ ಕೋಲ್ಕತ್ತಾಗೆ ಮರಳಿದ್ದು, ಪೊಲೀಸ್ ಠಾಣೆಯ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

    ಲೋಕಸಭಾ ಚುನಾವಣೆಯ ನಂತರ ಭಟ್ಪರಾದಲ್ಲಿ ಇತ್ತೀಚೆಗೆ ಈ ಘರ್ಷಣೆ ನಡೆದಿದ್ದು, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಭಟ್ಪರಾದಲ್ಲಿ ವಿಪರೀತ ಹಿಂಸಾಚಾರದ ಘರ್ಷಣೆಗಳು ನಡೆದಿದ್ದವು. ಕೆಲವು ಸಂಘರ್ಷಗಳು ಕೋಮುವಾದಿ ಸ್ವರೂಪವನ್ನು ಪಡೆದಿದ್ದವು. ಇದೀಗ ಮತ್ತೆ ಬೃಹತ್ ಘರ್ಷಣೆಯೊಂದು ನಡೆದಿದ್ದು, ಇಬ್ಬರನ್ನು ಬಲಿಪಡೆದಿದೆ.

    ಪೊಲೀಸ್ ತಂಡ ನಗರಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದು, ಘಟನಾ ಸ್ಥಳದಲ್ಲಿ ರ್ಯಾಪಿಡ್ ಆಕ್ಷನ್ ಫೊರ್ಸ್(ಆರ್‍ಎಎಫ್) ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಂಗಡಿ ಮುಂಗಟ್ಟುಗಳು, ಮಾರುಕಟ್ಟೆ ಪ್ರದೇಶ ಸೇರಿದಂತೆ ನಗರದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣ ಸ್ತಬ್ಧವಾಗಿವೆ. ಭಟ್ಪರಾ ಹಾಗೂ ಪಕ್ಕದ ಕಂಕಿನಾರ ನಗರಗಳು ಚುನಾವಣೆಗೆ ಸಂಬಂಧಿಸಿದ ಹಿಂಸಾಚಾರಕ್ಕೆ ಗುರಿಯಾಗಿದ್ದವು. ಮೇ 19ರಂದು ನಡೆದ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಸಂದರ್ಭದಿಂದಲೂ ಭಟ್ಪರಾ ಸಾಲು ಸಾಲು ಹಿಂಸಾಚಾರಗಳಿಗೆ ಸಾಕ್ಷಿಯಾಗಿದೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮದ್ವೆಯಿಂದಾಗಿ ಸಂಸದೆಯ ಪ್ರಮಾಣ ವಚನ ಸ್ವೀಕಾರ ಕ್ಯಾನ್ಸಲ್

    ಮದ್ವೆಯಿಂದಾಗಿ ಸಂಸದೆಯ ಪ್ರಮಾಣ ವಚನ ಸ್ವೀಕಾರ ಕ್ಯಾನ್ಸಲ್

    ಕೋಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ ಟಿಎಂಸಿಯಿಂದ ಗೆಲುವು ಸಾಧಿಸಿ ಮೊದಲನೇ ಬಾರಿಗೆ ಸಂಸದೆ ಆದ ನಟಿ ನುಸ್ರತ್ ಜಹಾನ್ ಮದುವೆಯಿಂದಾಗಿ ಪ್ರಮಾಣ ವಚನ ಸ್ವೀಕರಿಸಲಿಲ್ಲ.

    ನುಸ್ರತ್ ಜಹಾನ್ ಬುಧವಾರ ಉದ್ಯಮಿ ನಿಖಿಲ್ ಜೈನ್ ಜೊತೆ ಟರ್ಕಿಯ ಬೋದ್ರಮ್‍ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಗ್ಗೆ ತಮ್ಮ ಟ್ವಿಟ್ಟರಿನಲ್ಲಿ ಮದುವೆ ಫೋಟೋ ಹಾಕಿ ಅಧಿಕೃತವಾಗಿ ಎಲ್ಲರಿಗೂ ತಿಳಿಸಿದ್ದಾರೆ.

    ಜೂನ್ 16ರಂದು ನುಸ್ರತ್ ಹಾಗೂ ನಿಖಿಲ್ ಜೈನ್ ಪೋಷಕರು ಟರ್ಕಿಗೆ ಹೋಗಿದ್ದರು. ಬಳಿಕ ಜೂನ್ 19 ಅಂದರೆ ಬುಧವಾರ ನುಸ್ರತ್ ಹಾಗೂ ನಿಖಿಲ್ ಪೋಷಕರು ಹಾಗೂ ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಜುಲೈ 4ರಂದು ನುಸ್ರತ್ ಹಾಗೂ ನಿಖಿಲ್ ಜೈನ್ ಕೋಲ್ಕತ್ತಾದಲ್ಲಿ ಆರತಕ್ಷತೆ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಬೆಂಗಲಿ ಕಲಾವಿದರು ಹಾಗೂ ರಾಜಕೀಯ ನಾಯಕರು ಆಗಮಿಸುವ ಸಾಧ್ಯತೆ ಇದೆ.

    ಲೋಕಸಭಾ ಚುನಾವಣೆಯಲ್ಲಿ 3.50 ಲಕ್ಷ ಮತಗಳ ಅಂತರದಿಂದ ನುಸ್ರತ್ ಜಹಾನ್ ಗೆದ್ದಿದ್ದರು. ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ ಖುಷಿಯಲ್ಲಿದ್ದ ನುಸ್ರತ್ ನಟಿ ಮಿಮಿ ಚಕ್ರವರ್ತಿ ಜೊತೆ ಸಂಸತ್ ಭವನದ ಮುಂದೆ ನಿಂತು ಫೋಟೋಗೆ ಪೋಸ್ ಕೊಟ್ಟು ಟ್ರೋಲ್ ಆಗಿದ್ದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಜೀವನ ನಿರ್ವಹಣೆಯಷ್ಟು ವೇತನ ಇದೆ – ಪತಿಯಿಂದ ಜೀವನಾಂಶ ಕೇಳುವಂತಿಲ್ಲ ಎಂದ ಕೋರ್ಟ್

    ಜೀವನ ನಿರ್ವಹಣೆಯಷ್ಟು ವೇತನ ಇದೆ – ಪತಿಯಿಂದ ಜೀವನಾಂಶ ಕೇಳುವಂತಿಲ್ಲ ಎಂದ ಕೋರ್ಟ್

    ಕೋಲ್ಕತ್ತಾ: ಜೀವನ ನಿರ್ವಹಣೆಗೆ ಸಾಕಾಗುವಷ್ಟು ವೇತನ ಹೊಂದಿದ ಮಹಿಳೆಗೆ ಪತಿಯಿಂದ ಜೀವನಾಂಶ ಪಡೆಯುವ ಅಗತ್ಯವಿಲ್ಲ ಎಂದು ಕೋಲ್ಕತಾ ಹೈ ಕೋರ್ಟ್ ಪ್ರಕರಣವೊಂದರಲ್ಲಿ ತೀರ್ಪು ನೀಡಿದೆ.

    ವಿಚ್ಛೇದನ ಕೋರಿ ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಪತಿಯಿಂದ ಜೀವನ ನಿರ್ವಹಣೆಗೆ ಜೀವನಾಂಶವನ್ನು ಕೋರಿ ಪತಿಯ ಸಂಪಾದನೆ ಮಾಹಿತಿ ನೀಡಿದ್ದರು. ಅಲ್ಲದೇ ಇದೇ ವೇಳೆ ತಮ್ಮ ವೇತನ ಮಾಹಿತಿಯನ್ನು ಕೋರ್ಟಿಗೆ ಸಲ್ಲಿಸಿದ್ದರು.

    ಅರ್ಜಿಯ ವಿಚಾರಣೆ ನಡೆಸಿದ ಹೈ ಕೋರ್ಟ್ ನ್ಯಾ. ಬಿಸ್ವಾಜಿತ್ ಬಸು ಅವರು, ಮಹಿಳೆಯ ವೇತನ 74 ಸಾವಿರಕ್ಕಿಂತ ಕಡಿಮೆ ಇಲ್ಲ. ಇದು ಅವರ ಜೀವನ ನಿರ್ವಹಣೆಗೆ ಸಾಕಾಗುತ್ತದೆ. ಅವರ ಜೀವನ ನಿರ್ವಹಣೆಗೆ ಕೇಳಿರುವ 50 ಸಾವಿರ ರೂ. ಗಳನ್ನು ಗಳಿಸುತ್ತಿದ್ದಾರೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

    ಮಹಿಳೆಗೆ ಜೀವನಾಂಶ ಪಡೆಯಲು ಹೈ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೂ ಮುನ್ನ ಕೆಳ ನ್ಯಾಯಾಲಯದಲ್ಲಿ ಮಧ್ಯಂತರ ಜೀವನಾಂಶ ಪಡೆಯಲು ಮಹಿಳೆ ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಅರ್ಜಿಯನ್ನ ತಿರಸ್ಕರಿಸಿತ್ತು. ಇದಕ್ಕೂ ಮುನ್ನ 2016 ಮಾರ್ಚ್ ರಂದು ನಲ್ಲಿ ಟ್ರಯಲ್ ಕೋರ್ಟ್ ಮಹಿಳೆಗೆ  ದಾವೆ ವೆಚ್ಚವಾಗಿ 30 ಸಾವಿರ ರೂ. ಗಳನ್ನು ನೀಡುವಂತೆ ಪತಿಗೆ ಆದೇಶ ನೀಡಿತ್ತು.

    ಹೈ ಕೋರ್ಟಿಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಪತಿ ವಾರ್ಷಿಕ 83 ಲಕ್ಷ ಆದಾಯವನ್ನು ಪಡೆಯುತ್ತಿದ್ದು, ಪತಿಯ ಆದಾಯಕ್ಕನುಗುಣವಾಗಿ ಜೀವನಾಂಶ ನೀಡಬೇಕು. ನನ್ನ ಆದಾಯವು ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ. ಹೀಗಾಗಿ ಪ್ರತ್ಯೇಕವಾದ ಪತಿಯಿಂದ ಪ್ರತಿ ತಿಂಗಳು 50 ಸಾವಿರ ಜೀವನಾಂಶ ಕೊಡಿಸಬೇಕು. ಇದರಲ್ಲಿ ಮನೆ ನಿರ್ವಹಣೆಗೆ 10 ಸಾವಿರ ರೂ., ಪಾಕೆಟ್ ಮನಿ 4 ಸಾವಿರ ರೂ., 22 ಸಾವಿರ ರೂ. ಸರಕು, ಬಟ್ಟೆ ದಿನ ನಿತ್ಯದ ಖರ್ಚಿಗೆ ಮತ್ತು 14 ಸಾವಿರ ರೂ. ಕಾನೂನು ಹೋರಾಟದ ವೆಚ್ಚವನ್ನು ನೀಡಬೇಕೆಂದು ಕೋರಿದ್ದರು.

    ಇದೇ ವೇಳೆ ಕೋರ್ಟಿಗೆ ಮಹಿಳೆ ತನ್ನ ವೇತನದ ಲೆಕ್ಕಪತ್ರಗಳನ್ನು ಸಲ್ಲಿಕೆ ಮಾಡಿದ್ರು. ಡಿ.2018, ಜ.2019 ಮತ್ತು ಮಾ.2019 ರಲ್ಲಿ ಮಹಿಳೆಯ ವೇತನ 74,624 ರಷ್ಟಿತ್ತು. ಕಳೆದ ತಿಂಗಳು 81,219 ವೇತನ ಪಡೆಯುತ್ತಿದ್ದಾರೆ ಎಂದು ದೃಢಪಟ್ಟಿತ್ತು. ಈ ಅಂಶಗಳನ್ನು ಪರಿಗಣಿಸಿದ ನ್ಯಾಯಾಲಯ ಮಹಿಳೆಯ ಅವಶ್ಯಕತೆಗಳಿಗೆ 50 ಸಾವಿರ ಸಾಕಾಗುತ್ತದೆ ಎಂದು ತಿಳಿಸಿದೆ.

  • ದೀದಿ ಹಿರಣ್ಯ ಕಶಿಪು ವಂಶಸ್ಥೆ: ಸಾಕ್ಷಿ ಮಹಾರಾಜ್

    ದೀದಿ ಹಿರಣ್ಯ ಕಶಿಪು ವಂಶಸ್ಥೆ: ಸಾಕ್ಷಿ ಮಹಾರಾಜ್

    ನವದೆಹಲಿ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ಹಿರಣ್ಯ ಕಶಿಪು ವಂಶಸ್ಥೆ ಎಂದು ಉನ್ನಾವೋ ಸಂಸದ ಸಾಕ್ಷಿ ಮಹಾರಾಜ್ ಹೇಳಿದ್ದಾರೆ.

    ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಸಂಸದ ಸಾಕ್ಷಿ ಮಹಾರಾಜ್, ಈ ಹಿಂದೆ ಹಿರಣ್ಯ ಕಶಿಪು ಎಂಬ ರಾಕ್ಷಸನಿದ್ದ. ಜೈ ಶ್ರೀರಾಮ್ ಎಂದು ಜಪಿಸುತ್ತಿದ್ದ ಪುತ್ರನನ್ನು ಜೈಲಿನಲ್ಲಿ ಇರಿಸಿದ್ದ. ಇಂದು ಪಶ್ಚಿಮ ಬಂಗಾಳದಲ್ಲಿ ಜೈ ಶ್ರೀರಾಮ್ ಎಂದು ಹೇಳುವವರನ್ನು ಜೈಲಿಗೆ ಕಳುಹಿಸಲಾಗುತ್ತಿದೆ. ಮಮತಾ ಬ್ಯಾನರ್ಜಿ ಅವರು ಹಿರಣ್ಯ ಕಶಿಪುವಿನ ವಂಶಸ್ಥರು ಇರಬಹುದು ಎನ್ನುವುದು ನನ್ನ ಅನಿಸಿಕೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಕೆಲವು ದಿನಗಳ ಸಿಎಂ ಮಮತಾ ಬ್ಯಾನರ್ಜಿ ಮಾರ್ಗ ಮಧ್ಯೆ ಕೆಲ ಯುವಕರು ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದರು. ಈ ವೇಳೆ ಕಾರಿನಿಂದ ಹೊರ ಬಂದ ಸಿಎಂ, ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

    ತೃಣಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿರುವ ಶಾಸಕ ಅರ್ಜುನ್ ಸಿಂಗ್, ಟಿಎಂಸಿಯ ಸಭೆಯ ವೇಳೆ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಈ ಘಟನೆ ಖಂಡಿಸಿ ದೀದಿ ನಿವಾಸಕ್ಕೆ ಜೈ ಶ್ರೀರಾಮ್ ಎಂದು ಬರೆದಿರುವ 10 ಲಕ್ಷ ಅಂಚೆ ಕಾರ್ಡುಗಳನ್ನು ಬಿಜೆಪಿ ನಾಯಕರು ಕಳುಹಿಸಲಿದ್ದೇನೆ ಎಂದು ಹೇಳಿದ್ದಾರೆ.

    ಹಿರಣ್ಯ ಕಶಿಪು ಯಾರು?
    ವಿಷ್ಣು ಪುರಾಣದಲ್ಲಿ ಬರುವ ಹಿರಣ್ಯ ಕಶಿಪು ಹಿರಣ್ಯಾಕ್ಷನ ಅಣ್ಣ. ಪ್ರಹ್ಲಾದನ ತಂದೆ, ಕಯಾದುವಿ ಪತಿ. ತಪಸ್ಸು ಮಾಡಿದ್ದ ಈತ ಅಮರತ್ವ ವರವನ್ನು ಕೊಡುವಂತೆ ಬ್ರಹ್ಮನಲ್ಲಿ ಕೇಳಿದ್ದ. ಅಮರತ್ವದ ವರ ನೀಡಲು ಸಾಧ್ಯವಿಲ್ಲ ಎಂದು ಬ್ರಹ್ಮ ಹೇಳಿದ್ದಕ್ಕೆ, ನನಗೆ ಮನುಷ್ಯನಿಂದ, ಪ್ರಾಣಿಗಳಿಂದ, ದೇವತೆಗಳಿಂದ, ಭೂ, ಜಲ, ವಾಯು ಮತ್ತು ಯಾವುದೇ ಆಯುಧಗಳಿಂದಲೂ ಮರಣ ಸಂಭವಿಸದೇ ಇರುವ ವರವನ್ನು ಕೇಳಿ ಪಡೆದುಕೊಂಡಿದ್ದ. ಕೊನೆಗೆ ವಿಷ್ಣು ಅರ್ಧ ಮಾನವ ಅರ್ಧ ಸಿಂಹ ಹೀಗೆ ನರಸಿಂಹ ಅವತಾರದಲ್ಲಿ ಬಂದು ಶಿವನ ಆರಾಧಕನಾಗಿದ್ದ ಹಿರಣ್ಯ ಕಶಿಪುವನ್ನು ಸಂಹಾರ ಮಾಡಿದ್ದ.

  • ಗೆಲುವಿನ ನಂತ್ರ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಸಂಸದೆ ಎಂಟ್ರಿ

    ಗೆಲುವಿನ ನಂತ್ರ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಸಂಸದೆ ಎಂಟ್ರಿ

    ಕೋಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ ಟಿಎಂಸಿಯಿಂದ ಗೆಲುವು ಸಾಧಿಸಿ ಸಂಸದೆ ಆದ ನಟಿ ನುಸ್ರತ್ ಜಹಾನ್ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

    ನುಸ್ರತ್ ಜಹಾನ್ ಕೋಲ್ಕತ್ತಾ ಮೂಲದ ಉದ್ಯಮಿ ನಿಖಿಲ್ ಜೈನ್ ಅವರನ್ನು ಮದುವೆಯಾಗಲಿದ್ದಾರೆ. ನುಸ್ರತ್ ಹಾಗೂ ನಿಖಿಲ್ ಡೆಸ್ಟಿನೇಶನ್ ವೆಡ್ಡಿಂಗ್ ಮಾಡಿಕೊಳ್ಳಲಿದ್ದು, ಟರ್ಕಿಯ ಇಸ್ತಾಂಬುಲ್‍ನಲ್ಲಿ ವಿವಾಹ ನೆರವೇರಲಿದೆ. ನುಸ್ರತ್ ಜಹಾನ್ ಸ್ವತಃ ತನ್ನ ಸಾಮಾಜಿಕ ಜಾಲತಾಣದಲ್ಲಿ ಮದುವೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

     

    View this post on Instagram

     

    When reality is finally better than ur dreams, the best thing to hold on to in life… is each other..!! @nikhiljain09

    A post shared by Nusrat (@nusratchirps) on

    ನುಸ್ರತ್ ಜಹಾನ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ನುಸ್ರತ್ ರಿಂಗ್ ಹಾಕಿಕೊಂಡಿರುವುದು ಕಾಣಿಸಿಕೊಂಡಿದೆ. ಅಲ್ಲದೆ ಅವರ ಕೈಯನ್ನು ಬೇರೆಯವರು ಹಿಡಿದುಕೊಂಡಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ 3.50 ಲಕ್ಷ ಮತಗಳ ಅಂತರದಿಂದ ನುಸ್ರತ್ ಜಹಾನ್ ಗೆದ್ದಿದ್ದರು. ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ ಖುಷಿಯಲ್ಲಿದ್ದ ನುಸ್ರತ್ ನಟಿ ಮಿಮಿ ಚಕ್ರವರ್ತಿ ಜೊತೆ ಸಂಸತ್ ಭವನದ ಮುಂದೆ ನಿಂತು ಫೋಟೋಗೆ ಪೋಸ್ ಕೊಟ್ಟು ಟ್ರೋಲ್ ಆಗಿದ್ದರು.

    ನುಸ್ರತ್ ಜಹಾನ್ ಹಾಗೂ ಮಿಮಿ ಚಕ್ರವರ್ತಿ ಜೀನ್ಸ್ ಮತ್ತು ಟಾಪ್ ಧರಿಸಿ ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಆ ಫೋಟೋಗಳಿಗೆ `ನಾವು ಅಧಿಕೃತವಾಗಿ ಸಂಸತ್‍ನಲ್ಲಿ ಸಂಸದೆಯರಾಗಿ ನಮ್ಮ ಹೆಸರನ್ನ ನಮೂಸಿದೆವು’ ಎಂದು ಬರೆದು ಅಪ್ಲೋಡ್ ಮಾಡಿದ್ದರು. ಈ ಪೋಸ್ಟ್ ಗೆ ನೆಟ್ಟಿಗರು ನಮ್ಮನ್ನು ಪ್ರತಿನಿಧಿಸಲು ನಿಮ್ಮನ್ನು ಆಯ್ಕೆ ಮಾಡಿದ್ದೇವೆ. ಸಂಸತ್ ಎಂದರೆ ಅದು ಪವಿತ್ರ ಸ್ಥಳ. ಅದರ ಗೌರವವನ್ನು ಉಳಿಸಿ ಎಂದು ಕಮೆಂಟ್ ಮಾಡುವ ಮೂಲಕ ಟ್ರೋಲ್ ಮಾಡಿದ್ದರು.

  • ವರದಕ್ಷಿಣೆ ಬೇಡವೆಂದ ವರನಿಗೆ ಸಿಕ್ತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ!

    ವರದಕ್ಷಿಣೆ ಬೇಡವೆಂದ ವರನಿಗೆ ಸಿಕ್ತು 1 ಲಕ್ಷ ಮೌಲ್ಯದ ಸಾವಿರ ಪುಸ್ತಕ!

    ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ.

    ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ ನಿರಾಕರಿಸಿ ಎಲ್ಲರಿಗೂ ಮಾದರಿಯಾದ ವರನಿಗೆ ಈ ಉಡುಗೊರೆ ನೋಡಿ ಸಿಕ್ಕಪಟ್ಟೆ ಖುಷಿಯಾಗಿದೆ. ಈ ವಿಶೇಷ ಉಡುಗೊರೆ ವಿಚಾರ ಸದ್ಯ ಎಲ್ಲೆಡೆ ಬಾರಿ ಸದ್ದು ಮಾಡುತ್ತಿದೆ.

    ನಾನು ಯಾವುದೇ ವರದಕ್ಷಿಣೆ ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೆ. ಆದರೆ ನಾನು ಕಲ್ಯಾಣ ಮಂಟಪಕ್ಕೆ ಬಂದಾಗ, ಪುಸ್ತಕಗಳ ಬೃಹತ್ ರಾಶಿಯನ್ನು ಉಡುಗೊರೆಯಾಗಿ ಕಂಡು ತುಂಬಾ ಆಶ್ಚರ್ಯವಾಯಿತು ಎಂದು ಬರಿಕ್ ಹೇಳಿದ್ದಾರೆ. ಹಾಗೆಯೇ ನನ್ನ ಪತಿಗೆ ಓದುವ ಹಂಬಲ ಹೆಚ್ಚು. ನನಗೂ ಓದುವ ಹವ್ಯಾಸವಿದೆ. ಇದನ್ನು ತಿಳಿದ ನನ್ನ ತಂದೆ ಈ ಗಿಫ್ಟ್ ಕೊಟ್ಟಿದ್ದಾರೆ ಎಂದು ವಧು ತಿಳಿಸಿದ್ದಾರೆ.

    ಈ ಬಗ್ಗೆ ವಧುವಿನ ಕುಟುಂಬದವರು ಮಾತನಾಡಿ, ಈ ಪುಸ್ತಕಗಳನ್ನು ಕೊಲ್ಕತ್ತಾ ಕಾಲೇಜು ರಸ್ತೆ, ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಪ್ರಕಾಶನವಾದ ಉದ್ಧೋಧನ್ ಪಬ್ಲಿಷ್ ಹೌಸ್‍ನಿಂದ ಖರೀದಿಸಿದ್ದೇವೆ. ಈ ಪುಸ್ತಕ ಸಂಗ್ರಹಣೆಯಲ್ಲಿ ರವೀಂದ್ರನಾಥ ಟ್ಯಾಗೋರ್, ಬಂಕಿಮ ಚಂದ್ರ ಚಟ್ಟೋಪಾಧ್ಯಾಯ, ಮತ್ತು ಶರತ್ ಚಂದ್ರ ಚಟ್ಟೋಪಾಧ್ಯಾಯವರ ಸಂಪೂರ್ಣ ಕೃತಿಗಳು ಇವೆ ಎಂದರು.

    ವರದಕ್ಷಿಣೆ ಪಡೆಯುವುದು ಹಾಗೂ ಕೊಡುವುದು ಅಪರಾಧ ಎಂದು ತಿಳಿದಿದ್ದರೂ ಅನೇಕರು ವರದಕ್ಷಿಣೆಯಿಲ್ಲದೆ ಮದುವೆ ಆಗುವುದಿಲ್ಲ. ಇಂತಹ ಜನರ ನಡುವೆಯೂ ಸೂರ್ಯಕಾಂತ್ ಅವರ ತರಹ ವರದಕ್ಷಿಣೆ ನಿರಾಕರಿಸುವವರ ಸಂಖ್ಯೆ ಕಡಿಮೆ. ಸೂರ್ಯಕಾಂತ್ ಅವರು ಇತರರಿಗೆ ಮಾದರಿ ಎಂದು ಎಲ್ಲೆಡೆ ಪ್ರಶಂಸೆಯ ಮಾತುಗಳು ಕೇಳಿಬರುತ್ತಿದೆ.

  • ಪಶ್ಚಿಮ ಬಂಗಾಳ ಚುನಾವಣೆ : ಬಿಜೆಪಿ, ಟಿಎಂಸಿ ಕಾರ್ಯಕರ್ತರ ನಿಗೂಢ ಸಾವು

    ಪಶ್ಚಿಮ ಬಂಗಾಳ ಚುನಾವಣೆ : ಬಿಜೆಪಿ, ಟಿಎಂಸಿ ಕಾರ್ಯಕರ್ತರ ನಿಗೂಢ ಸಾವು

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಲೋಕಸಭಾ ಚುನಾವಣಾ ಸಮಯದಲ್ಲಿ ಹಿಂಸಾಚಾರ ಹೆಚ್ಚಾಗಿದ್ದು ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಕಾರ್ಯಕರ್ತರು ನಿಗೂಢವಾಗಿ ಸಾವನ್ನಪ್ಪಿದ್ದಾರೆ.

    ಪಶ್ಚಿಮ ಬಂಗಾಳದ ಝಗ್ರಾಮ್ ಜಿಲ್ಲೆಯಾ ಗೋಪಿಬಾಲ್ಲಪುರದ ಬಿಜೆಪಿ ಕಾರ್ಯಕರ್ತ, ಬೂತ್ ಅಧ್ಯಕ್ಷ ರಾಮನ್ ಸಿಂಗ್ ಅವರು ಶನಿವಾರ ರಾತ್ರಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

    ಕಾಂತಿ ಕ್ಷೇತ್ರದ ಮೆಡಿನಿಪುರ್ ಎಂಬಲ್ಲಿ ಟಿಎಂಸಿ ಕಾರ್ಯಕರ್ತ ಸುಧಾಕರ್ ಮೈತಿ ಎಂಬುವವರ ಮೃತದೇಹ ಸಿಕ್ಕಿದೆ. ಸಂಬಂಧಿಕರನ್ನು ನೋಡಿಕೊಂಡು ಬರುತ್ತೇನೆ ಎಂದು ಶನಿವಾರ ರಾತ್ರಿ ಆಸ್ಪತ್ರೆಗೆ ಹೋಗಿದ್ದ ಸುಧಾಕರ್ ಅವರು ಮನೆಗೆ ವಾಪಸ್ ಬಂದಿಲ್ಲ. ಅವರ ಮೃತದೇಹ ಕಾಂತಿ ಕ್ಷೇತ್ರದಲ್ಲಿ ಸಿಕ್ಕಿದೆ ಎಂದು ಪೊಲೀಸರು ಮನೆಯವರಿಗೆ ತಿಳಿಸಿದ್ದಾರೆ. ಅದರೆ ಸುಧಾಕರ್ ಮನೆಯವರು ಇದು ಕೊಲೆ ಎಂದು ಆರೋಪ ಮಾಡಿದ್ದಾರೆ.

    ಶನಿವಾರ ರಾತ್ರಿ ಭಾಗನ್‍ಪುರ್ ಮತ್ತು ಮೆಡಿನಿಪುರ್ ನಲ್ಲಿ ಬಿಜೆಪಿ ಕಾರ್ಯಕರ್ತರಾದ ಆನಂತ ಗುಚೈತ್ ಮತ್ತು ರಂಜಿತ್ ಮೈಟಿ ಎಂಬುವವರ ಮೇಲೆ ಯಾರೋ ಕಿಡಿಗೇಡಿಗಳು ಗುಂಡಿನ ದಾಳಿ ಮಾಡಿದ್ದಾರೆ. ಅವರನ್ನು ತಮ್ಲುಕ್ ಅಸ್ಪತ್ರೆ ದಾಖಲು ಮಾಡಲಾಗಿತ್ತು. ಈಗ ಅವರನ್ನು ಹೆಚ್ಚಿನ ಚಿಕಿತ್ಸೆ ಕೊಡಿಸಲು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇಂದು ಪಶ್ಚಿಮ ಬಂಗಾಳದ ಎಂಟು ಲೋಕಸಭಾ ಕ್ಷೇತ್ರದಲ್ಲಿ ಆರನೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಝಗ್ರಾಮ್, ಮೆಡಿನಿಪುರ್, ಕಾಂತಿ, ತಮ್ಲುಕ್, ಬಂಕುರಾ, ಬಿಷ್ಣುಪುರ್, ಪುರುಲಿಯಾ ಮತ್ತು ಘಟಾಲ್ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ.