Tag: kolkata

  • ವ್ಯಕ್ತಿಯ ಬೆಲ್ಟ್, ಶೂಗಳಲ್ಲಿ 3 ಕೋಟಿ ಮೌಲ್ಯದ ಚಿನ್ನ ಪತ್ತೆ!

    ವ್ಯಕ್ತಿಯ ಬೆಲ್ಟ್, ಶೂಗಳಲ್ಲಿ 3 ಕೋಟಿ ಮೌಲ್ಯದ ಚಿನ್ನ ಪತ್ತೆ!

    ಕೊಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಆದಾಯ ತೆರಿಗೆ ಗುಪ್ತಚರ ನಿರ್ದೇಶನಾಲಯವು(ಡಿಆರ್‍ಐ) ಬರೋಬ್ಬರಿ 3 ಕೋಟಿ ರೂ. ಮೌಲ್ಯದ ಚಿನ್ನದ ಬಿಸ್ಕತ್ ನನ್ನು ವಶಪಡಿಸಿಕೊಂಡಿದೆ.

    ಡಿಆರ್ ಐ  ಅಧಿಕಾರಿಗಳು ನ್ಯೂ ಜಲ್‍ಪಾಲ್‍ಗುರಿ ರೈಲ್ವೇ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನನ್ನು ಅನುಮಾನ ಮೇರೆಗೆ ಪರಿಶೀಲನೆ ನಡೆಸಿದಾಗ ಆತನ ಬಳಿ 56 ಚಿನ್ನದ ಬಿಸ್ಕತ್ ಪತ್ತೆಯಾಗಿದ್ದು, ಸುಮಾರು 9.2 ಕೆ.ಜಿ ತೂಕ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

    ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯ ಮೂಲಕ ಚಿನ್ನವನ್ನು ಮ್ಯಾನ್ಮಾರ್ ದಿಂದ ಭಾರತಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು. ವ್ಯಕ್ತಿ ಅಸ್ಸಾಂನ ಗುವಾಹಾಟಿಯಲ್ಲಿನ ಮಣಿಪುರಿ ವ್ಯಕ್ತಿಯಿಂದ ಚಿನ್ನದ ಬಿಸ್ಕತ್ ಗಳನ್ನು ಪಡೆದುಕೊಂಡಿದ್ದನು ಎಂದು ತನಿಖೆ ಸಂಸ್ಥೆ ತಿಳಿಸಿದೆ.

    ಸದ್ಯಕ್ಕೆ ಡಿಆರ್‍ಐ ಕಳ್ಳಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದೆ. ಈತ ಪಶ್ಚಿಮ ಬಂಗಾಳದ ಹೂಗ್ಲಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ಈತ ಕಳ್ಳಸಾಗಾಣಿಕೆಯ ಚಿನ್ನದ ಬಿಸ್ಕತ್ ಗಳನ್ನು ತನ್ನ ಸೊಂಟದ ಸುತ್ತಲೂ ವಿಶೇಷವಾದ ಬಟ್ಟೆಯಿಂದ ತಯಾರಿಸಿದ್ದ ಬೆಲ್ಟ್ ನಲ್ಲಿ ಮತ್ತು ಸ್ಪೋರ್ಟ್ಸ್ ಶೂಗಳ ಒಳಭಾಗದಲ್ಲಿ ಅಡಗಿಸಿಕೊಂಡಿದ್ದನು ಎಂದು ಡಿಆರ್ ಐ ಹೇಳಿಕೆ ನೀಡಿದೆ.

    ಸದ್ಯಕ್ಕೆ ಡಿಆರ್‍ಐಯೂ ಬಂಧಿತ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದೆ. ಆತನಿಂದ ವಿದೇಶಿ ಮೂಲದ 9.296 ಕೆಜಿ ಚಿನ್ನದ ಬಿಸ್ಕತ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ಮೌಲ್ಯ ಬರೋಬ್ಬರಿ 3.08 ಕೋಟಿ ರೂ. ಆಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಬಿಜೆಪಿ ರಥಯಾತ್ರೆ ತಡೆಯುವವರ ತಲೆಗಳು, ಚಕ್ರಕ್ಕೆ ಸಿಲುಕಿ ಪುಡಿಯಾಗುತ್ತೆ: ಬಿಜೆಪಿ ನಾಯಕಿ

    ಬಿಜೆಪಿ ರಥಯಾತ್ರೆ ತಡೆಯುವವರ ತಲೆಗಳು, ಚಕ್ರಕ್ಕೆ ಸಿಲುಕಿ ಪುಡಿಯಾಗುತ್ತೆ: ಬಿಜೆಪಿ ನಾಯಕಿ

    ಕೋಲ್ಕತಾ: ರಾಜ್ಯದಲ್ಲಿ ನಡೆಯುವ ಬಿಜೆಪಿ ರಥಯಾತ್ರೆಗೆ ಅಡ್ಡಿಪಡಿಸುವವರ ತಲೆಗಳು ಚಕ್ರಕ್ಕೆ ಸಿಲುಕಿ ಪುಡಿಯಾಗುತ್ತದೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಮಹಿಳಾ ಘಟಕದ ಮುಖ್ಯಸ್ಥೆ ಲಾಕೆಟ್ ಚಟರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಸಿನಿಮಾದಿಂದ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿರುವ ಲಾಕೆಟ್ ಚಟರ್ಜಿ ಶನಿವಾರ ಮಲ್ಡಾ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಪ್ರಜಾಪ್ರಭುತ್ವದ ಉಳಿವಿಗಾಗಿ ಬಿಜೆಪಿ ರಥಯಾತ್ರೆ ಮಾಡುತ್ತಿದೆ. ಅಲ್ಲದೇ ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ. ಈ ರಥಯಾತ್ರೆಯನ್ನು ಯಾರೇ ತಡೆಯಲು ಮುಂದಾದರೆ, ಅವರ ತಲೆಗಳೇ ಚಕ್ರಕ್ಕೆ ಸಿಲುಕಿ ಪುಡಿಯಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಮುಂಬರುವ ಲೋಕಸಭಾ ಚುನಾವಣೆಯ ಅಂಗವಾಗಿ ರಾಜ್ಯದಲ್ಲಿ ಡಿಸೆಂಬರ್ 5, 6 ಮತ್ತು 7 ರಂದು 42 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ರಥಯಾತ್ರೆ ಸಂಚರಿಸಲಿದೆ. ಈ ಯಾತ್ರೆಯನ್ನು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉದ್ಘಾಟಿಸಲಿದ್ದಾರೆ. ಅಲ್ಲದೇ ರಥಯಾತ್ರೆಯ ಸಮಾರೋಪ ಸಮಾರಂಭವನ್ನು ಕೋಲ್ಕತಾದಲ್ಲಿ ನಡೆಸಲು ತೀರ್ಮಾನಿಸಿದ್ದೇವೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

    ಲಾಕೆಟ್ ಚಟರ್ಜಿ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್ಸಿನ ಕಾರ್ಯದರ್ಶಿ ಪಾರ್ಥ ಚಟರ್ಜಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ಕೆಲಸಕ್ಕೆ ಕೈ ಹಾಕಿದ್ದಾರೆ. ಬಂಗಾಳದಲ್ಲಿ ಕೋಮುವಾದವನ್ನು ಬಿತ್ತುವುದೇ ಬಿಜೆಪಿ ನಾಯಕರ ಪ್ರಮುಖ ಉದ್ದೇಶ. ಹೀಗಾಗಿಯೇ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಬಿಜೆಪಿಯ ಒಡೆದು ಆಳುವ ನೀತಿಯನ್ನು, ಪಶ್ಚಿಮ ಬಂಗಾಳ ಜನ ಚುನಾವಣೆಯಲ್ಲಿ ಅವರನ್ನು ಸೋಲಿಸುವ ಮೂಲಕ ಉತ್ತರಿಸುತ್ತಾರೆಂದು ಕಿಡಿಕಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪಿಎನ್‍ಬಿ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಆಪ್ತನ ಬಂಧನ

    ಪಿಎನ್‍ಬಿ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಆಪ್ತನ ಬಂಧನ

    ಕೋಲ್ಕತಾ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿಯ ಆಪ್ತನನ್ನು ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.

    ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಹಾಂಕಾಂಗ್ ನಿಂದ ಆಗಮಿಸಿದ್ದ ದೀಪಕ್ ಕುಲಕರ್ಣಿಯನ್ನು ಕೋಲ್ಕತ್ತ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಡಿ ಅಧಿಕಾರಿಗಳು ಸೋಮವಾರ ಬಂಧಿಸಿದ್ದಾರೆ. ಮಂಗಳವಾರ ಕುಲಕರ್ಣಿಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಮುಂಬೈಗೆ ಕರೆದೊಯ್ಯಲಾಗುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಮೆಹುಲ್ ಚೋಕ್ಸಿಯ ಎಲ್ಲಾ ಸಾಗರೋತ್ತರ ವ್ಯವಹಾರಗಳನ್ನು ದೀಪಕ್ ಕುಲಕರ್ಣಿ ನಿಭಾಯಿಸುತ್ತಿದ್ದ. ಇದಲ್ಲದೇ ಹಾಂಕಾಂಗ್ ನಲ್ಲಿ ಚೋಕ್ಸಿಗೆ ಸೇರಿದ್ದ ಡಮ್ಮಿ ಸಂಸ್ಥೆಯ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ವಜ್ರಾಭರಣ ವ್ಯಾಪಾರಿ ನೀರವ್ ಮೋದಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಯಾಗಿದ್ದು, ಯಾವುದೇ ದೇಶದಲ್ಲಿ ಅಡಗಿದ್ದರೂ ಬಂಧನಕ್ಕೆ ಆದೇಶ ಸಿಕ್ಕಿದೆ.

    ನೀರವ್ ಮೋದಿ ಜೊತೆ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಗೀತಾಂಜಲಿ ಜುವೆಲ್ಲರಿಯ ಮೆಹುಲ್ ಚೋಕ್ಸಿ ವಿರುದ್ಧ ಕೂಡ ಸಿಬಿಐ ಎಫ್‍ಐಆರ್ ದಾಖಲಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನಾಲ್ಕು ಬಾರಿ ಸಮನ್ಸ್ ನೀಡಿದರೂ ಆರೋಪಿಗಳಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸುವಂತೆ ಇಂಟರ್ ಪೋಲ್‍ಗೆ ಮನವಿ ಮಾಡಿಕೊಂಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿಂಡೀಸ್ ವಿರುದ್ಧದ ಟಿ-20 ಪಂದ್ಯದಲ್ಲಿ ಭಾರತಕ್ಕೆ ಗೆಲುವು

    ವಿಂಡೀಸ್ ವಿರುದ್ಧದ ಟಿ-20 ಪಂದ್ಯದಲ್ಲಿ ಭಾರತಕ್ಕೆ ಗೆಲುವು

    ಕೋಲ್ಕತ್ತ: ವೆಸ್ಟ್ ಇಂಡೀಸ್ ವಿರುದ್ಧದ ಮೊದಲನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ 5 ವಿಕೆಟ್‍ಗಳಿಂದ ಗೆಲ್ಲುವ ಮೂಲಕ ಶುಭಾರಂಭ ಪಡೆದಿದೆ.

    ವೆಸ್ಟ್ ಇಂಡೀಸ್ ವಿರುದ್ಧದ ಮೂರು ಟಿ-20 ಪಂದ್ಯಗಳ ಪೈಕಿ, ಮೊದಲನೇ ಪಂದ್ಯ ಕೋಲ್ಕತ್ತದ ಈಡನ್‍ಗಾರ್ಡ್ ಮೈದಾನದಲ್ಲಿ ಇಂದು ನಡೆದಿತ್ತು. ಮೊದಲು ಬ್ಯಾಟ್ ಮಾಡಿ ವಿಂಡೀಸ್ 109 ರನ್‍ಗಳಿಸಿತ್ತು. 110 ರನ್ ಗಳ ಸುಲಭ ಸವಾಲನ್ನು ಸ್ವೀಕರಿಸಿದ ಭಾರತ 17.5 ಓವರ್ ಗಳಲ್ಲಿ 110 ರನ್ ಗಳಿಸುವ ಮೂಲಕ 5 ವಿಕೆಟ್‍ಗಳಿಂದ ಗೆಲುವು ಸಾಧಿಸಿತು.

    ಪ್ರಾರಂಭದಲ್ಲೇ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ 6 ರನ್ ಹಾಗೂ ಆರಂಭಿಕ ಆಟಗಾರ ಶಿಖರ್ ಧವನ್ 3 ರನ್ ಗಳಿಸಿ ಔಟಾದರು. ನಂತರ ಬಂದ ಕ್ರುನಾಲ್ ಪಾಂಡ್ಯಾ 21 ರನ್ ಹಾಗೂ  ದಿನೇಶ್ ಕಾರ್ತಿಕ್‍  31 ರನ್ ಗಳು ಭಾರತದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದವು.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿ, ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿತ್ತು. ವಿಂಡೀಸ್ ಪರ ಫ್ಯಾಬಿಯನ್ ಅಲೆನ್ 27 ರನ್, ಕೀಮೊ ಪೌಲ್ 15 ರನ್ ಹೊಡೆಯುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ್ದರು. ಟೀಂ ಇಂಡಿಯಾದ ಕುಲ್‍ದೀಪ್ ಯಾದವ್ 4 ಓವರ್ ಗಳಲ್ಲಿ 13 ರನ್ ನೀಡಿ 3 ವಿಕೆಟ್ ಪಡೆದರೆ, ಉಮೇಶ್ ಯಾದವ್, ಜಸ್ಪ್ರಿತ್ ಬೂಮ್ರಾ, ಕೆ ಖಲೀಲ್ ಅಹಮದ್ ಹಾಗೂ ಕ್ರುನಾಲ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದುಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಹ್ಲಿ, ಧೋನಿ ಅನುಪಸ್ಥಿತಿಯಲ್ಲಿ ಕಣಕ್ಕೆ ಇಳಿಯಲಿದೆ ಟೀಂ ಇಂಡಿಯಾ

    ಕೊಹ್ಲಿ, ಧೋನಿ ಅನುಪಸ್ಥಿತಿಯಲ್ಲಿ ಕಣಕ್ಕೆ ಇಳಿಯಲಿದೆ ಟೀಂ ಇಂಡಿಯಾ

    ಕೋಲ್ಕತ್ತಾ: ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ಟೂರ್ನಿಯನ್ನು ಗೆದ್ದು ಹೆಚ್ಚಿನ ಆತ್ಮವಿಶ್ವಾಸದಲ್ಲಿರುವ ಟೀಂ ಇಂಡಿಯಾ ಭಾನುವಾರ ಆರಂಭವಾಗಲಿರುವ 3 ಪಂದ್ಯಗಳ ಟಿ20 ಸರಣಿಯಲ್ಲಿ ಮಾಜಿ ನಾಯಕ ಧೋನಿ, ನಾಯಕ ಕೊಹ್ಲಿ ಅನುಪಸ್ಥಿತಿಯಲ್ಲಿ ಗೆಲುವಿನ ಓಟ ಮುಂದುವರಿಸುವ ತವಕದಲ್ಲಿದೆ.

    ಕೋಲ್ಕತ್ತಾ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಇಂದು ಮೊದಲ ಟಿ20 ಪಂದ್ಯ ನಡೆಯಲಿದ್ದು, ಇಂದು ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.

    ಸರಣಿಗೆ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಿರುವುದರಿಂದ ರೋಹಿತ್ ಶರ್ಮಾ ನಾಯಕತ್ವ ವಹಿಸಲಿದ್ದಾರೆ. ಇತ್ತ ವಿಂಡೀಸ್ ತಂಡ ಕೂಡ ಡರೆನ್ ಬ್ರಾವೊ, ಕೀರನ್ ಪೊರ್ಲಾಡ್, ಆ್ಯಂಡ್ರೆ ರಸೆಲ್, ಹೆಟ್ಮೆಯರ್ ರಂತಹ ಟಿ20 ಭರವಸೆ ಆಟಗಾರರ ಹುಮ್ಮಸ್ಸಿನಿಂದ ಗೆಲುವಿನ ಆತ್ಮವಿಶ್ವಾಸದಲ್ಲಿದೆ. ಇತ್ತ 2014 ರಲ್ಲಿ ಇದೇ ಮೈದಾನದಲ್ಲಿ 264 ರನ್ ಸಿಡಿಸಿ ದಾಖಲೆ ಬರೆದಿದ್ದರು. ಸಾಮಾನ್ಯವಾಗಿ ಈಡನ್ ಗಾರ್ಡನ್ ಫಿಚ್ ಬ್ಯಾಟಿಂಗ್ ಅನುಕೂಲಕಾರವಾಗಿರಲಿದೆ ಎಂದು ವಿಶ್ಲೇಷಕರು ತಿಳಿಸಿದ್ದಾರೆ.

    ಮೊದಲ ಟಿ20 ಪಂದ್ಯಕ್ಕೆ ಬಿಸಿಸಿಐ 12 ಆಟಗಾರರ ತಂಡದ ಪಟ್ಟಿಯನ್ನು ಶನಿವಾರ ಪ್ರಕಟಿಸಿದ್ದು, ಕರ್ನಾಟಕದ ಕೆಎಲ್ ರಾಹುಲ್, ಮನೀಷ್ ಪಾಂಡೆ ಸೇರಿದಂತೆ ಧೋನಿ ಸ್ಥಾನದಲ್ಲಿ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಸ್ಥಾನ ಪಡೆದಿದ್ದಾರೆ. ವಿಂಡೀಸ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸ್ಥಾನ ಪಡೆದಿದ್ದ ರಾಹುಲ್ ಮಿಂಚಲು ವಿಫಲರಾಗಿದ್ದರು. ಬಳಿಕ ನಡೆದ ಏಕದಿನ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು. ಭಾನುವಾರ ಪಂದ್ಯದಲ್ಲಿ ಇಬ್ಬರು ತಂಡವನ್ನು ಸೇರಿಕೊಳ್ಳುವ ಸಾಧ್ಯತೆಗಳಿವೆ.

    ಟೀಂ ಇಂಡಿಯಾ:
    ರೋಹಿತ್ ಶರ್ಮಾ, ಶಿಖರ್ ಧವನ್, ಕೆಎಲ್ ರಾಹುಲ್,ರಿಷಬ್ ಪಂತ್, ಮನೀಷ್ ಪಾಂಡೆ, ದಿನೇಶ್ ಕಾರ್ತಿಕ್, ಕೃಣಾಲ್ ಪಾಂಡ್ಯ,  ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್,  ಭುವನೇಶ್ವರ್ ಕುಮಾರ್, ಜಸ್‍ಪ್ರೀತ್ ಬೂಮ್ರಾ, ಖಲೀಲ್ ಅಹಮದ್.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪತ್ನಿ ಕಪ್ಪಗಿದ್ದಕ್ಕೆ ಬೆಂಕಿ ಹಚ್ಚಿ ಕೊಂದೇ ಬಿಟ್ಟ!

    ಪತ್ನಿ ಕಪ್ಪಗಿದ್ದಕ್ಕೆ ಬೆಂಕಿ ಹಚ್ಚಿ ಕೊಂದೇ ಬಿಟ್ಟ!

    ಕೋಲ್ಕತ್ತಾ: ಪತ್ನಿ ಕಪ್ಪಗಿದ್ದಾಳೆ ಹಾಗೂ ವರದಕ್ಷಿಣೆ ತರಲಿಲ್ಲವೆಂದು ಪತಿಯೇ ಆಕೆಗೆ ಬೆಂಕಿ ಇಟ್ಟು ಕೊಲೆಗೈದ ಅಮಾನವೀಯ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

    ನ್ಯೂ ಬ್ಯಾರಕ್‍ಪುರ್ ನ ಪುರ್ಬಾ ಕೊಡಲಿಯಾದಲ್ಲಿ ಘಟನೆ ನಡೆದಿದ್ದು, ರವೀಂದ್ರ ಭಾರತಿ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ ಸಂಗೀತಾ ಸೂತ್ರಧಾರ್ (28) ಅವರನ್ನು ಬ್ಯಾಂಕ್ ಉದ್ಯೋಗಿಯಾಗಿದ್ದ ಬನ್‍ಹಿದ್ವೀಪ್ ಕೊಲೆಗೈದಿದ್ದಾನೆ.

    ಸಂಗೀತಾ ಕಪ್ಪಗಿದ್ದಾಳೆ ಎಂದು ಬನ್‍ಹಿದ್ವೀಪ್ ಪೀಡಿಸುತ್ತಿದ್ದ. ಜೊತೆಗೆ 2 ಲಕ್ಷ ರೂ. ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ. ವರದಕ್ಷಿಣೆ ತರುವಂತೆ ಮಗಳಿಗೆ ಪೀಡಿಸುತ್ತಿದ್ದ. ನನಗೆ 2 ಲಕ್ಷ ರೂ. ಬೇಕು, ತವರು ಮನೆಯಿಂದ ತರಬೇಕು ಅಂತಾ ಇತ್ತೀಚೆಗೆ ಒತ್ತಾಯಿಸುತ್ತಿದ್ದ. ಜೊತೆಗೆ ಮದುವೆ ಬಳಿಕ ಪತ್ನಿ ಕಪ್ಪಗಿದ್ದಾಳೆಂದು ಕಾಡಿಸುತ್ತಿದ್ದ. ಹೀಗಾಗಿ ನಮ್ಮ ಮಗಳನ್ನು ಬೆಂಕಿ ಹಚ್ಚಿ ಕೊಲೆ ಮಾಡಿ ಬಳಿಕ ಆಡುಗೆ ಮಾಡುವಾಗ ಬೆಂಕಿ ಹೊತ್ತಿಕೊಂಡಿದೆ ಎಂದು ಸುಳ್ಳು ಹೇಳುತ್ತಿದ್ದಾನೆ ಎಂದು ಮೃತಳ ಸಂಬಂಧಿಕರು ದೂರು ನೀಡಿದ್ದಾರೆ.

    ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಸಂಗೀತಾ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾಳೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 100 ವರ್ಷದ ವೃದ್ಧೆ ಮೇಲೆ 20ರ ಯುವಕನಿಂದ ಅತ್ಯಾಚಾರ!

    100 ವರ್ಷದ ವೃದ್ಧೆ ಮೇಲೆ 20ರ ಯುವಕನಿಂದ ಅತ್ಯಾಚಾರ!

    ಕೋಲ್ಕತ್ತಾ: 100 ವರ್ಷದ ವೃದ್ಧೆಯ ಮೇಲೆ 20ರ ಯುವಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಆಗ್ರಾ ಬಿಸ್ವಾಸ್ ಅಲಿಯಾಸ್ ಅಭಿಜಿತ್ ಅತ್ಯಾಚಾರ ಎಸಗಿದ ಆರೋಪಿ. ನಾಡಿಯಾ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿದ್ದು, ಅತ್ಯಾಚಾರದ ಬಳಿಕ ಯುವಕ ಅಲ್ಲಿಂದ ಕಾಲ್ಕಿತ್ತಿದ್ದ. ಈ ಕುರಿತು ಚಕ್ದಾ ಪೊಲೀಸ್ ಠಾಣೆಯಲ್ಲಿ ವೃದ್ಧೆಯ ಕುಟುಂಬಸ್ಥರು ಮಂಗಳವಾರ ಪ್ರಕರಣ ದಾಖಲಿಸಿದ್ದರು.

    ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು. ತಲೆಮರೆಸಿಕೊಂಡಿದ್ದ ಅಭಿಜೀತ್‍ನನ್ನು ಗಂಗಪ್ರಸಾದ್‍ಪುರ್ ಪ್ರದೇಶದಲ್ಲಿ ಸಂತ್ರಸ್ತ ವೃದ್ಧೆಯ ಕುಟುಂಬಸ್ಥರು ಮಂಗಳವಾರ ಬಂಧಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣದ ಕುರಿತು ಆರೋಪಿ ಯುವಕನನ್ನು ವಿಚಾರಣೆ ಮಾಡಿಸಿ, ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ವರದಿಯಾಗಿದೆ.

    ಸಂತ್ರಸ್ತ ವೃದ್ಧೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗಿತ್ತದೆ ಎಂದು ಚಕ್ದಾ ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ರಾಜಸ್ಥಾನದ ಜೈಪುರ್ ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಆಕೆಯ ಗುಪ್ತಾಂಗಕ್ಕೆ ರಾಡ್ ಹಾಕಿ ದುಷ್ಕರ್ಮಿಗಳು ಅಮಾನವೀಯತೆ ಮೆರೆದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಕಾಮುಕನಿಂದ ಪೈಶಾಚಿಕ ಕೃತ್ಯ!

    ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಕಾಮುಕನಿಂದ ಪೈಶಾಚಿಕ ಕೃತ್ಯ!

    ಕೊಲ್ಕತ್ತಾ: ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಕುಟುಂಬವೊಂದರ ಮಹಿಳೆ ಮೇಲೆ ಅತ್ಯಾಚಾರಗೈದು ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡನ್ನು ಹಾಕಿರುವ ಅಮಾನವೀಯ ಘಟನೆ ಪಶ್ಚಿಮ ಬಂಗಾಳ ಜಲ್ಪಾಯ್ ಗುರಿ ಜಿಲ್ಲೆಯಲ್ಲಿ ನಡೆದಿದೆ.

    ಈ ಘಟನೆ ಶನಿವಾರ ರಾತ್ರಿ ನಡೆದಿದ್ದು, ಪ್ರಕರಣ ಸಂಬಂಧ ಆರೋಪಿಗಳನ್ನು ರತ್ನು ಮುಂಡ ಮತ್ತು ಪರಿಮಲ್ ರಾಯ್ ಎಂದು ಗುರುತಿಸಲಾಗಿದೆ. ಸದ್ಯಕ್ಕೆ ಸಂತ್ರಸ್ತೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

    ಏನಿದು ಪ್ರಕರಣ?
    ಆರೋಪಿಗಳು ಸಂತ್ರಸ್ತೆಯ ಪತಿಯನ್ನು ಲೆಬು ಬಗಾನ್ ಪ್ರದೇಶಕ್ಕೆ ಶನಿವಾರ ರಾತ್ರಿ ಸುಮಾರು 8 ಗಂಟೆ ಮದ್ಯದ ಪಾರ್ಟಿಗೆ ಆಹ್ವಾನಿಸಿದ್ದಾರೆ. ಆದರೆ ಇದಕ್ಕೆ ಆಕೆಯ ಪತಿ ನಿರಾಕರಿಸಿದ್ದಾನೆ. ಆದರೂ ಆರೋಪಿಗಳು ಹಳೆಯ ವೈಯಕ್ತಿಕ ವಿವಾದವನ್ನು ಬಗೆಹರಿಸುವುದಾಗಿ ಹೇಳಿ ಬಲವಂತವಾಗಿ ಕರೆದುಕೊಂಡು ಹೋಗಿದ್ದಾರೆ. ಇತ್ತ ಪಾರ್ಟಿ ಗೆಂದು ಹೋದ ಪತಿ ರಾತ್ರಿ 10 ಗಂಟೆವರೆಗೂ ಮನೆಗೆ ಬರದಿದ್ದಾಗ ಪತಿಯನ್ನು ಹುಡುಕಿಕೊಂಡು ಸಂತ್ರಸ್ತೆ ಹೋಗಿದ್ದಾರೆ. ಆಗ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡಿದೆ.

    ಈ ಸಂದರ್ಭವನ್ನು ಉಪಯೋಗಿಸಿಕೊಂಡ ಆರೋಪಿಗಳಲ್ಲಿ ಒಬ್ಬ, ಮಹಿಳೆಯನ್ನು ಸಮೀಪವಿರೋ ಪ್ರದೇಶದಲ್ಲಿ ಪೊದೆಗೆ ಎಳೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಮತ್ತೊಬ್ಬ ಆಕೆಯ ಮೇಲೆ ಅತ್ಯಾಚಾರ ಮಾಡಿಲ್ಲ. ಆದರೆ ಈ ಕೃತ್ಯಕ್ಕೆ ಸಾಥ್ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಅತ್ಯಾಚಾರ ಮಾಡಿದಲ್ಲದೇ ಸಂತ್ರಸ್ತೆಯ ಗುಪ್ತಾಂಗಕ್ಕೆ ಸಣ್ಣ ಕಬ್ಬಿಣದ ರಾಡ್ ಅನ್ನು ತುರುಕಿದ್ದಾರೆ. ಸದ್ಯಕ್ಕೆ ಸಂತ್ರಸ್ತೆ ಜಲ್ಪಾಯ್ ಗುರಿ ಸಾದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪುರಸಭೆಯ ಉಪಾಧ್ಯಕ್ಷ ರಾಜೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.

    ಈ ಘಟನೆಯಿಂದ ಕೋಪಗೊಂಡ ಸ್ಥಳೀಯರು ಆರೋಪಿಗಳ ಮನೆಗಳ ದಾಳಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ಪರಿಸ್ಥಿತಿಯನ್ನು ಸ್ಥಳೀಯ ಪೊಲೀಸರು ನಿಯಂತ್ರಿಸಿದ್ದಾರೆ. ಸಂತ್ರಸ್ತೆಯ ಕುಟುಂಬದವರು ಧುಪ್ಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರತ್ನು ಮುಂಡಾ ಮತ್ತು ಪರಿಮಲ್ ರಾಯ್ ಆರೋಪಿಗಳನ್ನು ಬಂಧಿಸಲಾಗಿದ್ದು, ನಮ್ಮ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

    ಈ ಘಟನೆಯು ನವದೆಹಲಿಯಲ್ಲಿ 2012ರಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣದ ನೆನಪಿಸುವಂತಿದೆ. ಯುವತಿಯೊಬ್ಬಳ ಮೇಲೆ ಆಕೆಯ ಬಾಯ್ ಫ್ರೆಂಡ್ ಎದುರೇ ಚಲಿಸುತ್ತಿರುವ ಬಸ್ಸಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಅಲ್ಲದೇ ಓರ್ವ ಆರೋಪಿ ಆಕೆಯ ಖಾಸಗಿ ಅಂಗಕ್ಕೆ ರಾಡ್ ತುರುಕಿದ್ದನು. ನಂತರ ಬಸ್ಸಿನಿಂದ ಆಕೆಯನ್ನು ಹೊರದಬ್ಬಿದ್ದರು ಎಂದು ಪೊಲೀಸರು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪತಿ ಬರುವಿಕೆಗಾಗಿ ಕಾಯ್ತಿದ್ದ ಗರ್ಭಿಣಿಯ ಮೇಲೆ ಮೂವರಿಂದ ಪೈಶಾಚಿಕ ಕೃತ್ಯ

    ಪತಿ ಬರುವಿಕೆಗಾಗಿ ಕಾಯ್ತಿದ್ದ ಗರ್ಭಿಣಿಯ ಮೇಲೆ ಮೂವರಿಂದ ಪೈಶಾಚಿಕ ಕೃತ್ಯ

    ಕೋಲ್ಕತ್ತಾ: ಗರ್ಭಿಣಿ ಮಹಿಳೆಯ ಮೇಲೆ ಮೂವರು ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಪಶ್ಚಿಮ ಬಂಗಾಳದಲ್ಲಿ ಅಸನ್ನೋಲ್ ಜಿಲ್ಲೆಯಲ್ಲಿ ನಡೆದಿದೆ.

    ಈ ಘಟನೆ ಗುರುವಾರ ಸಂತ್ರಸ್ತೆ ಒಬ್ಬಳೆ ಮನೆಯಲ್ಲಿದ್ದಾಗ ನಡೆದಿದೆ. ಮಹಿಳೆ 4 ತಿಂಗಳ ಗರ್ಭಿಣಿ ಎಂದು ವರದಿಯಾಗಿದೆ. ಮನೆಯಲ್ಲಿ ಒಬ್ಬಳೆ ಇದ್ದು, ಪತಿಗಾಗಿ ಕಾಯುತ್ತಿದ್ದರು. ಈ ವೇಳೆ ಮನೆಯಲ್ಲಿ ಒಂಟಿಯಾಗಿದ್ದನ್ನು ತಿಳಿದ ಮೂವರು ಕಾಮುಕರು ಬಂದು ಬಾಗಿಲು ಬಡಿದಿದ್ದಾರೆ. ಸಂತ್ರಸ್ತೆ ಬಾಗಿಲು ತೆರೆಯುತ್ತಿದ್ದಂತೆ ಬಲವಂತವಾಗಿ ಒಳಗೆ ನುಗ್ಗಿ ಗರ್ಭಿಣಿ ಎಂದು ನೋಡದೆ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪತಿ ಮೆಕ್ಯಾನಿಕ್ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿ ಮನೆಗೆ ಬಂದಿದ್ದಾರೆ. ಆಗ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಅಸ್ಸಾನ್ಸೋಲ್ ದುರ್ಗಾಪುರ್ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಗಿ ಪೊಲೀಸರು ಹೇಳಿದ್ದಾರೆ.

    ಕುಟುಂಬದವರು ನೀಡಿದ ದೂರಿನ ಆಧಾರದ ಮೇರೆಗೆ ಮೂವರ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಆರೋಪಿಗಳಲ್ಲಿ ಒಬ್ಬನ ಹೆಸರು ಕುಲದೀಪ್ ಸಿಂಗ್ ಎಂದು ತಿಳಿದು ಬಂದಿದೆ. ಆದರೆ ಮತ್ತಿಬ್ಬರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

    ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ಖಚಿತವಾಗಿದೆ. ಸಂತ್ರಸ್ತೆ ಕೂಡ ನ್ಯಾಯಾಲಯದಲ್ಲಿ ಹೇಳಿಕೆಯನ್ನು ಕೊಟ್ಟಿದ್ದಾರೆ. ಆರೋಪಿಗಳಿಗಾಗಿ ಬಲೆ ಬೀಸಿದ್ದೇವೆ. ಸದ್ಯದಲ್ಲೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಪೊಲೀಸ್ ಆಯುಕ್ತರಾದ ಲಕ್ಷ್ಮಿ ನಾರಾಯಣ ಮೀನಾ ಅವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಹುಮಹಡಿ ಕಟ್ಟಡದ ಬಳಿ ಬಾಂಬ್ ಸ್ಫೋಟ- ಬಾಲಕಿ ಸಾವು, ಐವರು ಗಂಭೀರ!

    ಬಹುಮಹಡಿ ಕಟ್ಟಡದ ಬಳಿ ಬಾಂಬ್ ಸ್ಫೋಟ- ಬಾಲಕಿ ಸಾವು, ಐವರು ಗಂಭೀರ!

    ಕೋಲ್ಕತ್ತ: ಪಶ್ಚಿಮ ಬಂಗಾಳದ ರಾಜಧಾನಿಯ ನಗರ್ ಬಜಾರ್ ಪ್ರದೇಶದ ಬಹುಮಹಡಿ ಕಟ್ಟಡದ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯ ತೀವ್ರತೆಗೆ ಓರ್ವ ಬಾಲಕಿ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಇಂದು ಮುಂಜಾನೆ 9 ಗಂಟೆಗೆ ನಗರ್ ಬಜಾರ್ ಪ್ರದೇಶದ ಹಣ್ಣಿನ ಅಂಗಡಿಯ ಬೃಹತ್ ಕಟ್ಟದ ಬಳಿ ಬಾಂಬ್ ಸ್ಫೋಟಗೊಂಡಿದೆ. ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಗಂಭೀರವಾಗಿ ಗಾಯಗೊಂಡ ಐವರನ್ನು ಕೂಡಲೇ ಸ್ಥಳೀಯರು ಹತ್ತಿರದ ಆರ್.ಜಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

    ಸ್ಫೋಟ ಸಂಭವಿಸಿದಾಗ ಮೊದಲು ಸ್ಥಳೀಯರು ಸಿಲಿಂಡರ್ ಸ್ಫೋಟವಾಗಿರಬಹುದೆಂದು ಭಾವಿಸಿದ್ದರು. ಆದರೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಇದು ಸಿಲಿಂಡರ್ ಸ್ಫೋಟವಲ್ಲ, ಏನೋ ಬೇರೆ ಸ್ಫೋಟ ಸಂಭವಿಸಿರಬೇಕು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿ, ಈ ಮೊದಲು ನಾವು ಸಿಲಿಂಡರ್ ಸ್ಫೋಟ ಎಂದು ಊಹಿಸಿದ್ದೆವು. ಆದರೆ ನಂತರ ಬೇರೆ ಏನೋ ಸ್ಫೋಟವಾಗಿರಬಹುದು ಎಂಬ ಅನುಮಾನ ಮೂಡಿತ್ತು. ಹೀಗಾಗಿ ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ ಹಾಗೂ ವಿಧಿವಿಜ್ಞಾನ ತಜ್ಞರಿಗೆ ಮಾಹಿತಿ ನೀಡಿದೆವು. ಸದ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಸ್ಫೋಟದ ತೀವ್ರತೆಯಿಂದ ಗಾಜು, ಲೋಹ ಹಾಗೂ ಕಲ್ಲಿನ ಚೂರುಗಳು ಸಿಡಿದಿದ್ದು, ಹಲವರಿಗೆ ಗಾಯಗಳಾಗಿವೆ. ಸ್ಫೋಟ ಸಂಭವಿಸಿರುವ ಸ್ಥಳದ ಸಮೀಪವೇ ತೃಣಮೂಲ ಕಾಂಗ್ರೆಸ್ ಕಚೇರಿ ಇದೆ. ಡಂಡಂ ನಗರಸಭೆ ಅಧ್ಯಕ್ಷ ಮತ್ತು ಲೇಖಕ ಪಂಚು ರಾಯ್ ಇದೇ ಕಟ್ಟಡದಲ್ಲಿ ಕಚೇರಿ ಹೊಂದಿದ್ದರು. ಪಂಚು ರಾಯ್ ಪ್ರತಿ ಮಂಗಳವಾರ ಕಚೇರಿಗೆ ಬರುತ್ತಿರುತ್ತಾರೆ. ಹೀಗಾಗಿ ಅವರನ್ನೇ ಗುರಿಯಾಗಿಸಿ ಬಾಂಬ್ ಸ್ಫೋಟಿಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv