Tag: kolkata

  • ರೈಲು ದುರಂತದ ಬೆನ್ನಲ್ಲೇ ಕೋಲ್ಕತ್ತಾಗೆ ಉಚಿತ ಬಸ್‌ ಸೇವೆ ಘೋಷಿಸಿದ ಒಡಿಶಾ ಸಿಎಂ

    ರೈಲು ದುರಂತದ ಬೆನ್ನಲ್ಲೇ ಕೋಲ್ಕತ್ತಾಗೆ ಉಚಿತ ಬಸ್‌ ಸೇವೆ ಘೋಷಿಸಿದ ಒಡಿಶಾ ಸಿಎಂ

    ಭುವನೇಶ್ವರ: ಒಡಿಶಾ (Odisha Train Tragedy) ರೈಲು ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ಒಡಿಶಾ ಸಿಎಂ ನವೀನ್‌ ಪಟ್ನಾಯಕ್‌ (Naveen Patnaik), ಕೋಲ್ಕತ್ತಾಗೆ (Kolkata) ಉಚಿತ ಬಸ್‌ ಸೇವೆ ಒದಗಿಸಲಾಗಿದೆ ಎಂದು ಘೋಷಿಸಿದ್ದಾರೆ.

    ಪ್ರಯಾಣಿಕರ ಹೆಚ್ಚಿನ ಪ್ರಯೋಜನವನ್ನು ಗಮನದಲ್ಲಿಟ್ಟುಕೊಂಡು ಸಿಎಂ ಪಟ್ನಾಯಕ್, ಇಂದಿನಿಂದ ಪುರಿ, ಭುವನೇಶ್ವರ ಮತ್ತು ಕಟಕ್‌ನಿಂದ ಕೋಲ್ಕತ್ತಾಗೆ ಉಚಿತ ಬಸ್ ಸೇವೆ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಂಟರ್‌ಲಾಕ್ ಸಿಸ್ಟಮ್ ಸಮಸ್ಯೆಯಿಂದ ರೈಲು ಅಪಘಾತ ಸಂಭವಿಸಿದೆ – ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

    ಪ್ರತಿದಿನ ಸುಮಾರು 50 ಬಸ್ಸುಗಳು ಕೋಲ್ಕತ್ತಾ ಮತ್ತು ಒಡಿಶಾದ ನಡುವಿನ ಮೂರು ನಗರಗಳಲ್ಲಿ ಸಂಚಾರ ನಡೆಸಲಿವೆ. ಇದಕ್ಕೆ ತಗಲುವ ವೆಚ್ಚವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಭರಿಸಲಾಗುವುದು. ಬಾಲಸೋರ್ ಮಾರ್ಗದಲ್ಲಿ ಸಾಮಾನ್ಯ ರೈಲು ಸೇವೆಯನ್ನು ಮರುಸ್ಥಾಪಿಸುವವರೆಗೆ ಈ ವ್ಯವಸ್ಥೆ ಮುಂದುವರಿಯುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

    ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಸಂಭವಿಸಿದ ಅಪಘಾತದಿಂದಾಗಿ ಈವರೆಗೆ 270 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 1,000 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಂದು ಮುಂಜಾನೆ ಮುಖ್ಯಮಂತ್ರಿ ಪಟ್ನಾಯಕ್ ಅವರು, ರಾಜ್ಯದ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಇದನ್ನೂ ಓದಿ: ರೈಲು ಡಿಕ್ಕಿಯಾದ ಶಬ್ದಕ್ಕೆ ಹೆದರಿ ಬಿಗಿಯಾಗಿ ಕಿಟಕಿ ಸರಳುಗಳನ್ನು ಹಿಡಿದು ಬಚಾವಾದೆ – ದುರಂತದಲ್ಲಿ ಬದುಕುಳಿದವನ ಮಾತು

  • ನಾವು ಸೇಫ್ ಆಗಿದ್ದೇವೆ; ಸುರಕ್ಷಿತವಾಗಿ ಸುಮೇದ್ ಸಿಖರ್ಜಿ ತಲುಪಿದ 110 ಕನ್ನಡಿಗರು

    ನಾವು ಸೇಫ್ ಆಗಿದ್ದೇವೆ; ಸುರಕ್ಷಿತವಾಗಿ ಸುಮೇದ್ ಸಿಖರ್ಜಿ ತಲುಪಿದ 110 ಕನ್ನಡಿಗರು

    ಚಿಕ್ಕಮಗಳೂರು: ಒಡಿಶಾ ರೈಲು ದುರಂತದಿಂದ (Odisha Train Accident) ಸಂಕಷ್ಟಕ್ಕೆ ಸಿಲುಕಿದ್ದ 110 ಜನ ಕನ್ನಡಿಗರು ಸುರಕ್ಷಿತವಾಗಿ ಜಾರ್ಖಂಡ್‌ನ (Jharkhand) ಸುಮೇದ್ ಸಿಖರ್ಜಿಗೆ ತಲುಪಿದ್ದಾರೆ. ಅಲ್ಲದೇ ತಾವು ಸೇಫ್ ಆಗಿದ್ದೇವೆ ಎಂದು ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ.

    ಹೌರಾ ರೈಲಿನಲ್ಲಿ ಚಿಕ್ಕಮಗಳೂರಿನ (Chikkamagaluru) ಕಳಸ, ಸಂಸೆ, ಹೊರನಾಡು, ಕುದುರೆಮುಖದ ಸುಮಾರು 110 ಜನರು ಜೈನ ಕ್ಷೇತ್ರಗಳ ದರ್ಶನಕ್ಕೆ ತೆರಳಿದ್ದರು. ಈ ವೇಳೆ ರೈಲು ಅಪಘಾತಗೊಂಡಿತ್ತು. ಈಗ ಎಲ್ಲಾ ಯಾತ್ರಿಕರು ಕೋಲ್ಕತ್ತಾ (Kolkata) ರೈಲು ನಿಲ್ದಾಣದಿಂದ ಮೂರು ಬಸ್‍ಗಳ ಮೂಲಕ ಯಾತ್ರಾ ಸ್ಥಳಕ್ಕೆ ತಲುಪಿದ್ದಾರೆ ಎಂಬ ಮಾಹಿತಿ ಬಂದಿದೆ. ಇದನ್ನೂ ಓದಿ: ದುರಂತಕ್ಕೂ ಮುಂಚೆ ಮಾಡಿದ್ದು ಎನ್ನಲಾದ ವೀಡಿಯೋ ವೈರಲ್‌ – ರೈಲು ಬೋಗಿಗಳಲ್ಲಿ ಕಿಕ್ಕಿರಿದು ತುಂಬಿದ್ರು ಪ್ರಯಾಣಿಕರು

    ಈಗಾಗಲೇ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿರುವ ಯಾತ್ರಿಕರು, ತಾವು ಸೇಫ್ ಆಗಿದ್ದೇವೆ ಎಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಅಪಘಾತದಲ್ಲಿ ಯಾರಿಗೂ ತೊಂದರೆಯಾಗಿಲ್ಲ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತದಿಂದ ಪಾರಾಗಿ ಬಂದಿದ್ದವರು ಹೊರಟಿದ್ದ ಬಸ್ ಅಪಘಾತ- ಹಲವರ ಸ್ಥಿತಿ ಗಂಭೀರ

  • ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಸಿಎಂ ಸಿದ್ದರಾಮಯ್ಯಗೆ ವಾಲಿಬಾಲ್ ಕ್ರೀಡಾಪಟುಗಳ ಧನ್ಯವಾದ

    ಒಡಿಶಾ ರೈಲು ದುರಂತ: ನೆರವಿಗೆ ಧಾವಿಸಿದ ಸಿಎಂ ಸಿದ್ದರಾಮಯ್ಯಗೆ ವಾಲಿಬಾಲ್ ಕ್ರೀಡಾಪಟುಗಳ ಧನ್ಯವಾದ

    ಬೆಂಗಳೂರು: ಒಡಿಶಾ ರೈಲು ಅಪಘಾತದಿಂದ (Odisha Train Crash) ಕೋಲ್ಕತ್ತಾದಲ್ಲಿ (Kolkata) ಸಿಲುಕಿದ್ದ ಕರ್ನಾಟಕದ ವಾಲಿಬಾಲ್ ಆಟಗಾರರನ್ನು (Volleyball Players) ಕರೆತರಲು ರಾಜ್ಯ ಸರ್ಕಾರ ಕೈಗೊಂಡ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಕ್ರೀಡಾಪಟುಗಳು ಧನ್ಯವಾದ ತಿಳಿಸಿದ್ದಾರೆ.

    ಕೋಲ್ಕತಾದಲ್ಲಿ ನಡೆಯುತ್ತಿರುವ 16 ವರ್ಷದೊಳಗಿನ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಕರ್ನಾಟಕದ ಬಾಲಕ ಹಾಗೂ ಬಾಲಕಿಯರ ತಂಡ ತೆರಳಿತ್ತು. ಈ ವೇಳೆ ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದ ಪರಿಣಾಮವಾಗಿ ಮರಳಿ ರಾಜ್ಯಕ್ಕೆ ವಾಪಸ್ ಬರಲು ಪರಿತಪಿಸುತ್ತಿದ್ದ ತಂಡಕ್ಕೆ ರಾಜ್ಯ ಸರ್ಕಾರ ನಿಯೋಜಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹಾಯ ಹಸ್ತ ನೀಡಿದ್ದಾರೆ. ಈ ಮೂಲಕ ತಂಡ ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ಸಾಗಲು ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಅಪಘಾತದಿಂದ ರೈಲು ಸಂಚಾರ ಸ್ಥಗಿತ- ಹೌರಾದಲ್ಲಿ ಸಿಲುಕಿದ ರಾಜ್ಯದ ವಾಲಿಬಾಲ್ ಆಟಗಾರರಿಗೆ ವಿಶೇಷ ವಿಮಾನ

    ತಂಡದ ತರಬೇತುದಾರರು ಸೇರಿದಂತೆ 32 ಸದಸ್ಯರನ್ನೊಳಗೊಂಡ ತಂಡ ತಮ್ಮ ಸಂಕಷ್ಟವನ್ನು ವೀಡಿಯೋ ಮಾಡಿ ಹೇಳಿಕೊಂಡಿದ್ದರು. ಈ ವೀಡಿಯೋ ತಲುಪಿದ ತಕ್ಷಣ ಕಾರ್ಯ ಪ್ರವೃತ್ತರಾದ ಸಚಿವರು ಮತ್ತು ಅಧಿಕಾರಿಗಳ ತಂಡ ಎಲ್ಲರಿಗೂ ಬೆಂಗಳೂರಿಗೆ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದೆ. ಅಲ್ಲದೆ ಸೂಕ್ತ ವಸತಿ ಹಾಗೂ ಊಟದ ವ್ಯವಸ್ಥೆ ಒದಗಿಸಿದ್ದಾರೆ.

    ಶುಕ್ರವಾರ ರಾತ್ರಿ ಬಾಲಸೋರ್‍ನಲ್ಲಿ ಮೂರು ರೈಲುಗಳು ಕೋಲ್ಕತ್ತಾ-ಚೆನ್ನೈ ಕೋರಮಂಡಲ್ ಎಕ್ಸ್‍ಪ್ರೆಸ್, ಬೆಂಗಳೂರು-ಹೌರಾ ಸೂಪರ್‍ಫಾಸ್ಟ್ ಎಕ್ಸ್‍ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಭೀಕರ ಅಪಘಾತ ನಡೆದಿತ್ತು. ಘಟನೆಯಲ್ಲಿ ಕನಿಷ್ಠ 288 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ರೈಲು ಅಪಘಾತದ ಬಳಿಕ ಆ ಮಾರ್ಗದ 58ಕ್ಕೂ ಹೆಚ್ಚು ರೈಲನ್ನು ರದ್ದು ಮಾಡಲಾಗಿದೆ. ಅಲ್ಲದೆ 81 ರೈಲುಗಳನ್ನು ಮಾರ್ಗ ಬದಲಾವಣೆ ಮಾಡಲಾಗಿದೆ. ಇದನ್ನೂ ಓದಿ: ರೈಲ್ವೇ ಟ್ರ್ಯಾಕ್ ಮೇಲೆ ಟೈರ್ ಇಟ್ಟ ದುಷ್ಕರ್ಮಿಗಳು – ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

  • ಒಡಿಶಾ ರೈಲು ಅಪಘಾತದಿಂದ ಪಾರಾಗಿ ಬಂದಿದ್ದವರು ಹೊರಟಿದ್ದ ಬಸ್ ಅಪಘಾತ- ಹಲವರ ಸ್ಥಿತಿ ಗಂಭೀರ

    ಒಡಿಶಾ ರೈಲು ಅಪಘಾತದಿಂದ ಪಾರಾಗಿ ಬಂದಿದ್ದವರು ಹೊರಟಿದ್ದ ಬಸ್ ಅಪಘಾತ- ಹಲವರ ಸ್ಥಿತಿ ಗಂಭೀರ

    ಕೊಲ್ಕತ್ತಾ: ಒಡಿಶಾದ ಬಾಲಾಸೋರ್‌ನಲ್ಲಿ ನಡೆದ ರೈಲು ಅಪಘಾತದ (Odisha Train Accident) ಸ್ಥಳದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಹಲವರು ಗಂಭೀರ ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ (West Bengal) ಮೇದಿನಿಪುರದಲ್ಲಿ ನಡೆದಿದೆ.

    ಮೇದಿನಿಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತು ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ಬಸ್ಸಿನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಗಾಯಾಳುಗಳ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಅಲ್ಲದೆ ಗಾಯಗೊಂಡವರಿಗೆ ವಿವಿಧ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಅಪಘಾತದಿಂದ ರೈಲು ಸಂಚಾರ ಸ್ಥಗಿತ- ಹೌರಾದಲ್ಲಿ ಸಿಲುಕಿದ ರಾಜ್ಯದ ವಾಲಿಬಾಲ್ ಆಟಗಾರರಿಗೆ ವಿಶೇಷ ವಿಮಾನ

    ಶುಕ್ರವಾರ ರಾತ್ರಿ ಬಾಲಸೋರ್‍ನಲ್ಲಿ ಮೂರು ರೈಲುಗಳು ಕೋಲ್ಕತ್ತಾ (Kolkata)-ಚೆನ್ನೈ ಕೋರಮಂಡಲ್ ಎಕ್ಸ್‍ಪ್ರೆಸ್, ಬೆಂಗಳೂರು (Bengaluru)-ಹೌರಾ ಸೂಪರ್‍ಫಾಸ್ಟ್ ಎಕ್ಸ್‍ಪ್ರೆಸ್ ಮತ್ತು ಗೂಡ್ಸ್ ರೈಲುಗಳ ನಡುವೆ ಭೀಕರ ಅಪಘಾತ ನಡೆದಿತ್ತು. ಘಟನೆಯಲ್ಲಿ ಕನಿಷ್ಠ 288 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೆ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

    ಘಟನೆಯ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಆ ಮಾರ್ಗದ 58ಕ್ಕೂ ಹೆಚ್ಚು ರೈಲನ್ನು ರದ್ದು ಮಾಡಲಾಗಿದೆ. ಅಲ್ಲದೆ 81 ರೈಲುಗಳನ್ನು ಮಾರ್ಗ ಬದಲಾವಣೆ ಮಾಡಲಾಗಿದೆ. ಇದನ್ನೂ ಓದಿ: ಯಾರಾದ್ರೂ ಲಂಚ ಕೇಳಿದ್ರೆ ನೇರವಾಗಿ ನನಗೆ ಪತ್ರ ಬರೆಯಿರಿ, ಒದ್ದು ಒಳಗೆ ಹಾಕಿಸ್ತೀನಿ: ಡಿಕೆಶಿ

  • ಅಪಘಾತದಿಂದ ರೈಲು ಸಂಚಾರ ಸ್ಥಗಿತ- ಹೌರಾದಲ್ಲಿ ಸಿಲುಕಿದ ರಾಜ್ಯದ ವಾಲಿಬಾಲ್ ಆಟಗಾರರಿಗೆ ವಿಶೇಷ ವಿಮಾನ

    ಅಪಘಾತದಿಂದ ರೈಲು ಸಂಚಾರ ಸ್ಥಗಿತ- ಹೌರಾದಲ್ಲಿ ಸಿಲುಕಿದ ರಾಜ್ಯದ ವಾಲಿಬಾಲ್ ಆಟಗಾರರಿಗೆ ವಿಶೇಷ ವಿಮಾನ

    ಬೆಂಗಳೂರು: ಒಡಿಶಾದಲ್ಲಿ (Odisha) ನಡೆದ ರೈಲುಗಳ ಡಿಕ್ಕಿಯಿಂದಾಗಿ ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಕೊಲ್ಕತ್ತಾದ (Kolkata) ಹೌರಾದಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ರಾಜ್ಯ ಸರ್ಕಾರ ವಿಶೇಷ ವಿಮಾನದ ವ್ಯವಸ್ಥೆ ಮಾಡಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಅವರು ಕೊಲ್ಕತ್ತಾ ವಿಮಾನ ನಿಲ್ದಾಣದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕರೆತರಲು ವಿಮಾನದ ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ. ಇಂಡಿಗೋ ವಿಮಾನವು ಭಾನುವಾರ ಮುಂಜಾನೆ 4.15ಕ್ಕೆ ಹೊರಟು ಬೆಂಗಳೂರಿಗೆ 6.50ಕ್ಕೆ ತಲುಪಲಿದೆ. ಈ ವಿಮಾನದಲ್ಲಿ ರಾಜ್ಯದ 32 ಮಂದಿ ವಾಲಿಬಾಲ್ ಆಟಗಾರರು ಬಂದಿಳಿಯಲಿದ್ದಾರೆ. ಅಲ್ಲದೆ ಆಟಗಾರರು ವಾಪಸ್ ಬರುವ ತನಕ ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: PublicTV Explainer: ರಕ್ಷಾ ‘ಕವಚ’ ಇದ್ದಿದ್ರೆ ಒಡಿಶಾ ರೈಲು ದುರಂತ ತಪ್ಪಿಸಬಹುದಿತ್ತೆ?

    ಕೋಲ್ಕತ್ತಾದಲ್ಲಿ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಮಹಿಳಾ, ಪುರುಷ ಆಟಗಾರರು, ಕೋಚ್ ಸೇರಿದಂತೆ 32 ಮಂದಿ ಪಾಲ್ಗೊಂಡಿದ್ದರು. ಪಂದ್ಯ ಮುಗಿಸಿ ವಾಪಸ್ ಆಗುವಾಗ ಒಡಿಶಾದಲ್ಲಿ ರೈಲು ದುರಂತ ಸಂಭವಿಸಿದ್ದರಿಂದ ಕೋಲ್ಕತ್ತಾದಲ್ಲಿ ಈ ಆಟಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ಇದನ್ನೂ ಓದಿ: ರೈಲ್ವೇ ಟ್ರ್ಯಾಕ್ ಮೇಲೆ ಟೈರ್ ಇಟ್ಟ ದುಷ್ಕರ್ಮಿಗಳು – ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

  • ಲಗೇಜ್‍ಗೆ ಹೆಚ್ಚುವರಿ ಹಣ ಪಾವತಿಸಿ ಎಂದಿದ್ದಕ್ಕೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಅಂತ ಏರ್‌ಪೋರ್ಟ್‌ನಲ್ಲಿ ಮಹಿಳೆ ಡ್ರಾಮಾ

    ಲಗೇಜ್‍ಗೆ ಹೆಚ್ಚುವರಿ ಹಣ ಪಾವತಿಸಿ ಎಂದಿದ್ದಕ್ಕೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಅಂತ ಏರ್‌ಪೋರ್ಟ್‌ನಲ್ಲಿ ಮಹಿಳೆ ಡ್ರಾಮಾ

    ಮುಂಬೈ: ಹೆಚ್ಚುವರಿ ಲಗೇಜ್‍ಗೆ ಹಣ ಪಾವತಿಸುವಂತೆ ಕೇಳಿದ್ದಕ್ಕೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಅಂತ ಮಹಿಳೆಯೊಬ್ಬಳು ಹೈಡ್ರಾಮಾ ಮಾಡಿದ ಘಟನೆ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  (Mumbai Airport) ನಡೆದಿದೆ.

    ಹೆಚ್ಚುವರಿ ಲಗೇಜ್ ತಂದಿದ್ದ ಮಹಿಳೆಗೆ ಏರ್‌ಪೋರ್ಟ್ ಸಿಬ್ಬಂದಿ ಹಣ ನೀಡುವಂತೆ ಸೂಚಿಸಿದ್ದಾರೆ. ಈ ವೇಳೆ ಜಗಳಕ್ಕಿಳಿದ ಮಹಿಳೆಯೊಬ್ಬಳು ತನ್ನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಬೆದರಿಸಿದ್ದಾಳೆ. ಕೂಡಲೆ ಸ್ಥಳಕ್ಕೆ ಬಂದ ಭದ್ರತಾ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯ ದಳ ಬ್ಯಾಗ್‍ಗಳನ್ನು ಪರಿಶೀಲಿಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ. ಇದರಿಂದ ವಿಮಾನ ನಿಲ್ದಾಣದಲ್ಲಿ ಕೆಲವು ಗಂಟೆಗಳ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಇದನ್ನೂ ಓದಿ: ಬೇಕಂತಲೇ ಹೆಣ್ಮಕ್ಕಳ ಮೈ ಮುಟ್ಟುತ್ತಿದ್ದ, ಹಿಂಬಾಲಿಸುತ್ತಿದ್ದ – ಬ್ರಿಜ್‌ ಭೂಷಣ್‌ ವಿರುದ್ಧ 10 ಕಂಪ್ಲೇಂಟ್‌, 2 FIR

    ಮಹಿಳೆಯ ವಿರುದ್ಧ ಜೀವ ಮತ್ತು ಇತರರ ಸುರಕ್ಷತೆಗೆ ಧಕ್ಕೆ ಆರೋಪದ ಮೇಲೆ ಎಫ್‍ಐಆರ್ (FIR) ದಾಖಲಿಸಲಾಗಿದೆ. ಕೋರ್ಟ್ ಮುಂದೆ ಹಾಜರುಪಡಿಸಿ ಮಹಿಳೆಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಸಹರ್ ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಗುರುತನ್ನು ಪೊಲೀಸರು ಬಿಡುಗಡೆ ಮಾಡಿಲ್ಲ.

    ಘಟನೆ ಹಿನ್ನೆಲೆ: ಮಹಿಳೆಯು ತನ್ನ ತಾಯಿಯನ್ನು ಭೇಟಿಯಾಗಲು ಮೇ 29 ರಂದು ಕೊಲ್ಕತ್ತಾಕ್ಕೆ (Kolkata) ಹೊರಟಿದ್ದಳು. 5:30 ರ ವೇಳೆ ಚೆಕ್ ಇನ್ ಆಗಲು ಚೆಕ್ ಇನ್ ಕೌಂಟರ್ ತಲುಪಿದ್ದಳು. ವಿಮಾನಯಾನ ನಿಯಮಗಳು ದೇಶೀಯ ಪ್ರಯಾಣಕ್ಕಾಗಿ ಗರಿಷ್ಠ 15 ಕೆಜಿಯ ಒಂದೇ ಬ್ಯಾಗ್ ಅನುಮತಿಸುತ್ತದೆ. ಆದರೆ ಮಹಿಳೆ ಎರಡು ಬ್ಯಾಗ್‍ಗಳನ್ನು ಹೊಂದಿದ್ದಳು ಮತ್ತು ಅದರ ತೂಕ 22.05 ಕೆಜಿ ಇತ್ತು.

    ಲಗೇಜ್ ತೂಕ ಹೆಚ್ಚಿದ್ದ ಹಿನ್ನಲೆ ಹಚ್ಚುವರಿ ಬ್ಯಾಗ್‍ಗೆ ಹಣ ಪಾವತಿಸುವಂತೆ ಕೌಂಟರ್‌ನಲ್ಲಿದ್ದ ಸಿಬ್ಬಂದಿ ಮನವಿ ಮಾಡಿದ್ದಾರೆ. ಇದಕ್ಕೆ ನಿರಾಕರಿಸಿದ ಮಹಿಳೆ ಸಿಬ್ಬಂದಿ ಜೊತೆಗೆ ಜಗಳಕ್ಕಿಳಿದು ಕೂಗಾಡಲು ಆರಂಭಿಸಿದ್ದಾಳೆ ಕಡೆಗೆ ತನ್ನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದು ಕೂಗಿ ಹೇಳಿದ್ದಾಳೆ. ಮಹಿಳೆಯ ವರ್ತನೆಯಿಂದ ಆತಂಕಕ್ಕೆ ಒಳಗಾದ ಸಿಬ್ಬಂದಿ ಭದ್ರತಾ ಪಡೆಗಳ ನೆರವು ಪಡೆದಿದ್ದಾರೆ. ಇದನ್ನೂ ಓದಿ: ಮುಂಬೈ ದಾಳಿ ರೂವಾರಿ ರಾಣಾ ಹಸ್ತಾಂತರಕ್ಕೆ ರಿಟ್ ಸವಾಲು

  • ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಸಲ್ಮಾನ್ ಖಾನ್

    ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಸಲ್ಮಾನ್ ಖಾನ್

    ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ (Salman Khan) ರಾಜಕೀಯ ಅಖಾಡಕ್ಕೆ ಇಳಿಯುತ್ತಾರಾ? ಅಂಥದ್ದೊಂದು ಕುತೂಹಲವನ್ನು ಮೂಡಿಸಿದೆ ಮಮತಾ ಬ್ಯಾನರ್ಜಿ (Mamata Banerjee) ಜೊತೆಗಿನ ಫೋಟೋ. ಮಮತಾ ಅವರನ್ನು ಸಲ್ಮಾನ್ ಭೇಟಿ ಆಗಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ದಿದಿ ಜೊತೆ ಸಲ್ಮಾನ್ ಹಲವು ನಿಮಿಷಗಳ ಕಾಲ ಮಾತನಾಡಿದ್ದಾರೆ. ಈ ಮಾತುಕತೆ ದಿದಿ ಮನೆಯಲ್ಲಿ ನಡೆದಿದೆ.

    ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿಯನ್ನು ಸಲ್ಲು ಭೇಟಿ ಮಾಡಲು ಕಾರಣವೇನು ಎನ್ನುವ ಚರ್ಚೆ ಕೂಡ ಶುರುವಾಗಿದೆ. ತಮ್ಮ ಭೇಟಿಗೆ ಬಂದ ಸಲ್ಮಾನ್ ಅವರನ್ನು ದಿದಿ ಶಾಲು ಹಾಕಿ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಸಲ್ಮಾನ್ ಕೂಡ ದಿದಿ ಭೇಟಿಯ ನಂತರ ಸಂಭ್ರಮದಿಂದ  ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಬಂದೂಕಿನೊಂದಿಗೆ ಆಟವಾಡಿದ ‘ಬಿಗ್ ಬಾಸ್’ ಅಬ್ದು ರೋಜಿಕ್‌ ವಿರುದ್ಧ ಪ್ರಕರಣ ದಾಖಲು

    ಒಂದು ಕಡೆ ರಾಜಕೀಯ ಮತ್ತೊಂದು ಕಡೆ ಸಿನಿಮಾ ಸಂಬಂಧಿ ಕಾರ್ಯಕ್ರಮಕ್ಕೆ ಏನಾದರೂ ಸಲ್ಲು ಹೋಗಿದ್ದರಾ ಅನ್ನುವ ಪ್ರಶ್ನೆಗೆ ಸಲ್ಲು ಆಪ್ತರು ತಿಳಿಸಿದಂತೆ. ಅದೊಂದು ರಾಜಕೀಯ ಸಂಬಂಧ ಭೇಟಿ ಆಗಿರಲಿಲ್ಲವಂತೆ. ಅಭಿಮಾನಿಗಳನ್ನು ರಂಜಿಸಲು ಸಲ್ಮಾನ್ ‘ದಬಂಗ್ ಟೂರ್’ ಹೆಸರಿನಲ್ಲಿ ಲೈವ್ ಕಾರ್ಯಕ್ರಮ ಮಾಡುತ್ತಾರಂತೆ. ಅಂಥದ್ದೊಂದು ಕಾರ್ಯಕ್ರಮ ನೀಡಲು ಅವರು ಹೋಗಿದ್ದರಂತೆ. ಈ ಸಮಯದಲ್ಲಿ ಭೇಟಿ ಆಗಿದ್ದಾರೆ ಎನ್ನಲಾಗುತ್ತಿದೆ.

    ದಬಂಗ್ ಟೂರ್ ಹೆಸರಿನಲ್ಲಿ ನಡೆಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಸಲ್ಮಾನ್ ಕೊಲ್ಕತ್ತಾಗೆ (Kolkata) ತೆರಳಿದ್ದಾರೆ. ಇದೇ ಸಂದರ್ಭದಲ್ಲಿ ದಿದಿ ಅವರ ನಿವಾಸಕ್ಕೂ ಭೇಟಿ ನೀಡಿದ್ದಾರೆ. ಸಲ್ಮಾನ್ ಅವರಿಗೆ ಜೀವ ಬೆದರಿಕೆ ಇರುವುದರಿಂದ ದಿದಿ ಸರಕಾರ ಅವರಿಗೆ ಹೆಚ್ಚಿನ ಭದ್ರತೆ ನೀಡಿತ್ತಂತೆ. ಹಾಗಾಗಿ ಧನ್ಯವಾದಗಳನ್ನು ಹೇಳಲು ಹೋಗಿದ್ದರು ಎಂದು ಅವರ ಆಪ್ತರು ತಿಳಿಸಿದ್ದಾರೆ.

  • ಬಾಂಗ್ಲಾದಿಂದ ಭಾರತಕ್ಕೆ ಅಕ್ರಮ ಚಿನ್ನ ಸಾಗಾಟ – 4.24 ಕೋಟಿ ರೂ. ಮೌಲ್ಯದ ಚಿನ್ನ ವಶ

    ಬಾಂಗ್ಲಾದಿಂದ ಭಾರತಕ್ಕೆ ಅಕ್ರಮ ಚಿನ್ನ ಸಾಗಾಟ – 4.24 ಕೋಟಿ ರೂ. ಮೌಲ್ಯದ ಚಿನ್ನ ವಶ

    (ಸಾಂದರ್ಭಿಕ ಚಿತ್ರ)

    ಕೋಲ್ಕತ್ತಾ: ಚಿನ್ನ ಕಳ್ಳಸಾಗಾಟ (Smuggling) ಮಾಡುತ್ತಿದ್ದ ಬಾಂಗ್ಲಾದೇಶದ (Bangladesh) ನಿವಾಸಿಗಳನ್ನು ಗಡಿ ಭದ್ರತಾ ಪಡೆ ಪಶ್ಚಿಮ ಬಂಗಾಳದ (West Bengal) ಉತ್ತರ 24 ಪರಗಣ ಜಿಲ್ಲೆಯ ಇಂಟಿಗ್ರೇಟೆಡ್ ಚೆಕ್ ಪೋಸ್ಟ್ (ICP) ಪೆಟ್ರಾಪೋಲ್‌ನಲ್ಲಿ ಬಂಧಿಸಿ 4.24 ಕೋಟಿ ರೂ. ಮೌಲ್ಯದ 52 ಚಿನ್ನದ ಬಿಸ್ಕತ್ತುಗಳನ್ನು (Gold Biscuit) ವಶಪಡಿಸಿಕೊಂಡಿದ್ದಾರೆ.

    ಬಿಎಸ್‌ಎಫ್ (BSF) ಅಧಿಕಾರಿಗಳ ಪ್ರಕಾರ ಆರೋಪಿ ಬಸ್ ಚಾಲಕನನ್ನು ಮುಸ್ತಫಾ ಎಂದು ಗುರುತಿಸಲಾಗಿದ್ದು, ಆತನ ಸಹಾಯಕನನ್ನು ಮತ್ತೂರ್ ರೆಹಮಾನ್ ಅಕಂಡಾ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಬಾಂಗ್ಲಾದೇಶದ ನಿವಾಸಿಗಳಾಗಿದ್ದು, ರಾಯಲ್ ಫ್ರೆಂಡ್‌ಶಿಪ್ ಇಂಟರ್‌ನ್ಯಾಷನಲ್ ಪ್ಯಾಸೆಂಜರ್ ಬಸ್ ಮೂಲಕ ಬಾಂಗ್ಲಾದೇಶದಿಂದ ಭಾರತಕ್ಕೆ ಚಿನ್ನ ಸಾಗಾಟ ಮಾಡುತ್ತಿದ್ದರು. ಕಳ್ಳಸಾಗಾಣಿಕೆಯ ಸುಳಿವು ದೊರೆತ ಗಡಿ ಭದ್ರತಾ ಪಡೆಯು ಕಾರ್ಯಾಚರಣೆಗೆ ಇಳಿದಿದ್ದು, ಅಕ್ರಮ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಉಗ್ರರ ಜೊತೆ ಸ್ಥಳೀಯರ ಶಾಮೀಲು – ಜಮ್ಮು ಕಾಶ್ಮೀರದಲ್ಲಿ 15 ಕಡೆ ಎನ್‍ಐಎ ಶೋಧ

    ಬಸ್ ಅಗರ್ತಾಲದಿಂದ ಢಾಕಾ ಮೂಲಕ ಕೋಲ್ಕತ್ತಾಗೆ ತೆರಳುತ್ತಿತ್ತು. ಐಸಿಪಿ ಪೆಟ್ರಾಪೋಲ್ ತಲುಪಿದ ಸಂದರ್ಭ ಬಿಎಸ್‌ಎಫ್‌ನ ಭದ್ರತಾ ತಂಡ ಬಸ್ ಅನ್ನು ಕೂಲಂಕುಷವಾಗಿ ಪರೀಶೀಲಿಸಿದ್ದಾರೆ. ಈ ವೇಳೆ ಬಸ್‌ನ ಇಂಧನ ಟ್ಯಾಂಕ್‌ನ ಪಕ್ಕದಲ್ಲಿರುವ ಟೊಳ್ಳಾದ ಪೈಪ್‌ನಲ್ಲಿ 6,950 ಗ್ರಾಂ ತೂಕದ 52 ಚಿನ್ನದ ಬಿಸ್ಕತ್ತುಗಳು ಪತ್ತೆಯಾಗಿವೆ. ವಶಪಡಿಸಿಕೊಂಡ ಚಿನ್ನದ ಬಿಸ್ಕತ್‌ಗಳ ಅಂದಾಜು ಮೌಲ್ಯ 4 ಕೋಟಿ 24 ಲಕ್ಷ ರೂ.ಗಳಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಪಾಕ್‌ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅರೆಸ್ಟ್‌

    ಬಂಧಿತ ಆರೋಪಿಗಳು ಹಾಗೂ ವಶಪಡಿಸಿಕೊಂಡ ಚಿನ್ನದ ಬಿಸ್ಕತ್ತುಗಳನ್ನು ಕೋಲ್ಕತ್ತಾದ (Kolkata) ಕಂದಾಯ ಗುಪ್ತಚರ ನಿರ್ದೇಶನಾಲಯಕ್ಕೆ (DRI) ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಎಸ್‌ಎಫ್‌ನ ಕಾರ್ಯಾಚರಣೆಯ ಕುರಿತು ಡಿಜಿ (DG) ಸಂತೋಷ ವ್ಯಕ್ತಪಡಿಸಿ ಕಾರ್ಯಾಚರಣೆಯಲ್ಲಿ ತೊಡಗಿದ್ದವರಿಗೆ ನಗದು ಬಹುಮಾನ ಘೋಷಿಸಿದ್ದಾರೆ. ಇದನ್ನೂ ಓದಿ: ಪಿಎಫ್‍ಐ ವಿರುದ್ಧದ ಪ್ರಕರಣ – ತಮಿಳುನಾಡಿನ ಹಲವೆಡೆ ಎನ್‍ಐಎ ದಾಳಿ

  • 12ನೇ ತರಗತಿ ಓದಿ ದಿನಕ್ಕೆ 10 ಕೋಟಿ ಸಂಪಾದನೆ – ಸೈಬರ್ ಕಿರಾತಕರು ಅಂದರ್

    12ನೇ ತರಗತಿ ಓದಿ ದಿನಕ್ಕೆ 10 ಕೋಟಿ ಸಂಪಾದನೆ – ಸೈಬರ್ ಕಿರಾತಕರು ಅಂದರ್

    ಮುಂಬೈ: ಪೊಲೀಸರಂತೆ ನಟಿಸಿ ದಿನವೊಂದಕ್ಕೆ 5 ರಿಂದ 10 ಕೋಟಿ ರೂ. ದೋಚುತ್ತಿದ್ದ ಸೈಬರ್ ಕ್ರೈಮ್ ಜಾಲವನ್ನು(Cybercriminals) ಮುಂಬೈ (Mumbai) ಪೊಲೀಸರು ಬಯಲಿಗೆಳೆದಿದ್ದಾರೆ.

    12ನೇ ತರಗತಿ ಓದಿ, ಉತ್ತಮ ತಾಂತ್ರಿಕ ಜ್ಞಾನ  (Technical Knowledge) ಹೊಂದಿದ್ದ ಮಾಸ್ಟರ್ ಮೈಂಡ್ (Mastermind) ಶ್ರೀನಿವಾಸ್ ರಾವ್ ದಾಡಿ (49) ಎಂಬಾತನನ್ನು ಬಂಗೂರ್ ನಗರ ಪೊಲೀಸ್ ಠಾಣೆಯ ತಂಡವು ಹೈದರಾಬಾದ್‍ನ ಹೋಟೆಲ್‍ನಲ್ಲಿ ಬಂಧಿಸಿದೆ. ಅಲ್ಲದೆ ಆತನ ಗ್ಯಾಂಗ್ ಸದಸ್ಯರಾದ ಥಾಣೆಯ ಇಬ್ಬರು ಮತ್ತು ಕೋಲ್ಕತ್ತಾದ (Kolkata) ನಾಲ್ವರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಕೇಂದ್ರದ ಮಾಜಿ ನೌಕರನ ಮನೆ ಮೇಲೆ ಸಿಬಿಐ ದಾಳಿ – 20 ಕೋಟಿ ವಶ

    ಆರೋಪಿಗಳು ದಾಡಿ ಹೆಸರಿನ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿರುವಂತೆ ನಟಿಸುತ್ತಿದ್ದರು. ಟೆಲಿಗ್ರಾಮ್ ಅಪ್ಲಿಕೇಶನ್ ಮೂಲಕ ಮಾತ್ರ ಸಂವಹನ ನಡೆಸುತ್ತಿದ್ದರು. ಅಲ್ಲದೆ ಎನಿಡೆಸ್ಕ್ ಅಪ್ಲಿಕೇಷನ್‍ಗಳನ್ನು ಸಹ ಬಳಸಿದ್ದರು. ಅವರು ಬಳಸಿದ 40 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದು, ಬಂಧಿತರಿಂದ 1.5 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಆರೋಪಿಗಳು ಜನರನ್ನು ಸಂಪರ್ಕಿಸಿ ಕೋರಿಯರ್ ಮೂಲಕ ತಮ್ಮ ರಿಯಲ್ ಎಸ್ಟೇಟ್ ಕಛೇರಿಗೆ ದಾಖಲೆಗಳನ್ನು ಕಳಿಸುವಂತೆ ಹೇಳುತ್ತಿದ್ದರು. ಅದರಲ್ಲೂ ಹೆಚ್ಚಾಗಿ ಮಹಿಳೆಯರನ್ನು ಇವರು ಟಾರ್ಗೆಟ್ ಮಾಡುತ್ತಿದ್ದರು. ಅಲ್ಲದೆ ತಮಗೆ ಕಳುಹಿಸಿದ ಕೊರಿಯರ್‍ನಲ್ಲಿ ಪೊಲೀಸರು ಡ್ರಗ್ಸ್ ಅಥವಾ ಶಸ್ತ್ರಾಸ್ತ್ರಗಳನ್ನು ಪತ್ತೆ ಮಾಡಿದ್ದಾರೆ ಎಂದು ಹೆದರಿಸುತ್ತಿದ್ದರು. ಭಯಭೀತರಾದವರಿಂದ ಬ್ಯಾಂಕ್ ಅಥವಾ ಆದಾಯ ತೆರಿಗೆ (Income Tax) ಸಂಬಂಧಿತ ವಿವರಗಳನ್ನು ಪಡೆದು ಖಾತೆಯಲ್ಲಿದ್ದ ಹಣ ಕದಿಯುತ್ತಿದ್ದರು ಎಂದು ಉಪ ಪೊಲೀಸ್ ಆಯುಕ್ತ ಅಜಯ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ.

    ದರೋಡೆಕೋರರು ಕದ್ದ ಎಲ್ಲಾ ಹಣ ಶ್ರೀನಿವಾಸ್ ರಾವ್ ನಿರ್ವಹಿಸುತ್ತಿದ್ದ ಬ್ಯಾಂಕ್ ಖಾತೆಗಳಿಗೆ ಸೇರುತ್ತಿತ್ತು. ನಂತರ ಆತ ಹಣವನ್ನು ಕ್ರಿಪ್ಟೋಕರೆನ್ಸಿಯಾಗಿ (Cryptocurrency) ಪರಿವರ್ತಿಸಿ ಚೀನಾದ ಪ್ರಜೆಗೆ ವರ್ಗಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಪ್ರಕರಣದ ತನಿಖೆಗಾಗಿ, ನಗರ ಪೊಲೀಸ್ ತಂಡಗಳು ದೆಹಲಿ, ಹೈದರಾಬಾದ್, ಕೋಲ್ಕತ್ತಾ, ಜಾಖರ್ಂಡ್, ಹರಿಯಾಣ ಮತ್ತು ಮಹಾರಾಷ್ಟ್ರದ ವಿವಿಧ ಸ್ಥಳಗಳಲ್ಲಿ ಗ್ಯಾಂಗ್‍ನ ಸಹಚರರ ಬಂಧನಕ್ಕೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಪೊಲೀಸರೆಂದು ಯಾಮಾರಿಸಿ ವಿದೇಶಿ ಪ್ರಜೆಯ ಹಣ ದೋಚಿದ ದುಷ್ಕರ್ಮಿಗಳು

  • 2 ಸಾವಿರ ರೂ. ಹಣದಾಸೆಗೆ ಬಾಂಗ್ಲಾದಿಂದ ಭಾರತಕ್ಕೆ ಅಕ್ರಮ ಚಿನ್ನ ಸಾಗಾಟ – ಮಹಿಳೆ ಅರೆಸ್ಟ್

    2 ಸಾವಿರ ರೂ. ಹಣದಾಸೆಗೆ ಬಾಂಗ್ಲಾದಿಂದ ಭಾರತಕ್ಕೆ ಅಕ್ರಮ ಚಿನ್ನ ಸಾಗಾಟ – ಮಹಿಳೆ ಅರೆಸ್ಟ್

    ಕೋಲ್ಕತ್ತಾ: ಕೇವಲ 2 ಸಾವಿರ ರೂ. ಹಣದ ಆಸೆಗಾಗಿ ಸುಮಾರು 2 ಕೆಜಿಗೂ ಅಧಿಕ ತೂಕ ಹೊಂದಿದ್ದ ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ಬಾಂಗ್ಲಾದೇಶದಿಂದ (Bangladesh) ಭಾರತಕ್ಕೆ (India) ಸಾಗಿಸಲು ಯತ್ನಿಸಿದ ಮಹಿಳೆಯೊಬ್ಬರನ್ನು ಪಶ್ಚಿಮ ಬಂಗಾಳದ (West Bengal) ಉತ್ತರ 24 ಪರಗಣ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆ (BSF) ಗುರುವಾರ ಬಂಧಿಸಿದೆ.

    ಮಾಣಿಕಾ ಧರ್ (34) ಬಂಧನಕ್ಕೊಳಗಾದ ಮಹಿಳೆ. ಈಕೆ ಬಾಂಗ್ಲಾದೇಶದ ಚಿತ್ತಗಾಂಗ್ ಜಿಲ್ಲೆಗೆ ಸೇರಿದವಳಾಗಿದ್ದು, ಅಕ್ರಮವಾಗಿ ಭಾರತಕ್ಕೆ ಚಿನ್ನದ ಗಟ್ಟಿ ಸಾಗಾಟ ಮಾಡುತ್ತಿದ್ದ ವೇಳೆ ಬಿಎಸ್‌ಎಫ್ ಕೈಗೆ ಸಿಕ್ಕಿಬಿದ್ದಿದ್ದಾಳೆ. ಆಕೆಯಿಂದ ವಶಪಡಿಸಿಕೊಂಡ ಚಿನ್ನ ಸುಮಾರು 2 ಕೆಜಿ ತೂಕವಿದ್ದು, ಅಂದಾಜು 1.29 ಕೋಟಿ ರೂ. ಮೌಲ್ಯದ್ದಾಗಿದೆ. ಇದನ್ನೂ ಓದಿ: ಬಿಜೆಪಿ ಸಂಸದನ ವಿರುದ್ಧ ಪ್ರತಿಭಟನೆ – ಕುಸ್ತಿಪಟುಗಳ ಭೇಟಿಯಾದ ಪ್ರಿಯಾಂಕಾ ಗಾಂಧಿ

    ಮಹಿಳೆಯೊಬ್ಬರು ಚಿನ್ನದೊಂದಿಗೆ ಗಡಿ ದಾಟಲು ಹೊರಟಿರುವ ಬಗ್ಗೆ ಭಾರತೀಯ ಚೆಕ್‌ಪೋಸ್ಟ್‌ನಲ್ಲಿ ನಿಯೋಜಿಸಲಾಗಿದ್ದ ಮಹಿಳಾ ಸಿಬ್ಬಂದಿಯೊಬ್ಬರಿಗೆ ಮಾಹಿತಿ ಲಭಿಸಿತ್ತು. ಕೂಡಲೇ ಸಿಬ್ಬಂದಿಗಳು ತಪಾಸಣೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಮಣಿಕಾ ಧರ್ ತನ್ನ ಸೊಂಟದಲ್ಲಿ 27 ವಿವಿಧ ರೀತಿಯ ಚಿನ್ನದ ಗಟ್ಟಿಗಳನ್ನು ಬಟ್ಟೆಯಲ್ಲಿ ಸುತ್ತಿಕೊಂಡು ಕಳ್ಳಸಾಗಾಣಿಕೆ (Smuggling) ಮಾಡುತ್ತಿರುವುದು ಪತ್ತೆಯಾಗಿದೆ. ಇದನ್ನೂ ಓದಿ: ಐವರು ಸೈನಿಕರ ದುರ್ಮರಣದ ಹಿಂದೆ ಪಾಕ್‌ ಕೈವಾಡ – ಡ್ರೋನ್‌ ಮೂಲಕ ಶಸ್ತ್ರಾಸ್ತ್ರ ಪೂರೈಕೆ

    ಮಹಿಳೆಯನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ, ಪಶ್ಚಿಮ ಬಂಗಾಳದ ಬರಾಸತ್‌ನಲ್ಲಿರುವ ಅಪರಿಚಿತ ವ್ಯಕ್ತಿಗೆ ಚಿನ್ನದ ಗಟ್ಟಿಗಳನ್ನು ತಲುಪಿಸಲು ಸೂಚಿಸಲಾಗಿದೆ. ಈ ರೀತಿಯಾದ ಕಳ್ಳಸಾಗಾಣಿಕೆ ಇದೇ ಮೊದಲ ಬಾರಿಯಾಗಿದ್ದು, ಇದನ್ನು ತಲುಪಿಸಿದರೆ ತನಗೆ 2 ಸಾವಿರ ರೂ. ದೊರೆಯುತ್ತದೆ ಎಂದು ಒಪ್ಪಿಕೊಂಡಿದ್ದಾಳೆ. ಇದನ್ನೂ ಓದಿ: ಕೈ, ತಲೆ ಕತ್ತರಿಸಿ ಪತ್ನಿಯ ದೇಹವನ್ನು ಸುಟ್ಟು ಹಾಕಿದ ಪಾಪಿ ಗಂಡ

    ಆರೋಪಿ ಮಹಿಳೆಯನ್ನು ಹಾಗೂ ವಶಪಡಿಸಿಕೊಂಡ ಚಿನ್ನದ ಗಟ್ಟಿಗಳನ್ನು ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಸಲುವಾಗಿ ಪೆಟ್ರಾಪೋಲ್‌ಗೆ ಒಪ್ಪಿಸಲಾಗಿದೆ. ಅಲ್ಲದೇ ಬಿಎಸ್‌ಎಫ್ ಯೋಧರ ಈ ಕಾರ್ಯವನ್ನು ದಕ್ಷಿಣ ಬಂಗಾಳ ಗಡಿ ಭಾಗದ ವಕ್ತಾರರು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಾರ್ವಜನಿಕ ಸ್ಥಳದಲ್ಲಿ ನಮಾಜ್‌ – 1,700 ಮುಸ್ಲಿಂ ಮುಖಂಡರ ವಿರುದ್ಧ ಕೇಸ್‌