Tag: Kollur Mookambika

  • ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ

    ಕೊಲ್ಲೂರು ಮೂಕಾಂಬಿಕೆಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಇಳಯರಾಜ

    ಉಡುಪಿ: ಕೊಲ್ಲೂರು ಮೂಕಾಂಬಿಕೆ (Kollur Mookambika) ತಾಯಿಗೆ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು (Diamond crown) ಅರ್ಪಿಸಿದ್ದಾರೆ.

    ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ (Ilaiyaraaja) ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ. ಇದನ್ನೂ ಓದಿ: ವಿಷ್ಣು ಸಮಾಧಿ, ಕರ್ನಾಟಕ ರತ್ನ ಬಗ್ಗೆ ರಮೇಶ್ ಅರವಿಂದ್ ರಿಯಾಕ್ಷನ್

    ಆಭರಣ ಅರ್ಪಿಸುವ ಮುನ್ನ ದೇಗುಲದಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇಗುಲದ ಆಡಳಿತ ಮಂಡಳಿ ಹಾಗೂ ಅರ್ಚಕರು ಭಾಗಿಯಾಗಿದ್ದರು. ಕೋಟ್ಯಂತರ ಮೌಲ್ಯದ ಆಭರಣಗಳನ್ನು ಅರ್ಪಿಸಿ ಇಳೆಯರಾಜ ಅವರು ಭಾವುಕರಾಗಿದ್ದು, ಮೂಕಾಂಬಿಕೆಯಿಂದ ತನ್ನ ಜೀವನದಲ್ಲಿ ಪವಾಡ ನಡೆದಿದೆ ಎಂದಿದ್ದಾರೆ. ಬಳಿಕ ದೇಗುಲದ ವತಿಯಿಂದ ಮಹಾದಾನಿ ಇಳಯರಾಜ ಅವರಿಗೆ ಗೌರವಾರ್ಪಣೆ ಮಾಡಲಾಯಿತು.

  • ಕೊಲ್ಲೂರಮ್ಮನ ದರ್ಶನದಿಂದ ಮನಸ್ಸಿಗೆ ಖುಷಿಯಾಗಿದೆ: ನಿರ್ಮಲಾ ಸೀತಾರಾಮನ್

    ಕೊಲ್ಲೂರಮ್ಮನ ದರ್ಶನದಿಂದ ಮನಸ್ಸಿಗೆ ಖುಷಿಯಾಗಿದೆ: ನಿರ್ಮಲಾ ಸೀತಾರಾಮನ್

    ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೇವರ ವಿಶೇಷ ದರ್ಶನ ಮಾಡಿ ಪೂಜೆ ಸಲ್ಲಿಕೆ ಮಾಡಿದ್ದಾರೆ. ರಾಜ್ಯ ಪ್ರವಾಸದಲ್ಲಿರುವ ವಿತ್ತ ಸಚಿವೆ ಉಡುಪಿಯಲ್ಲಿ ಎಡೆಬಿಡದ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ.

    ಶುಕ್ರವಾರ ರಾತ್ರಿ ಮಣಿಪಾಲಕ್ಕೆ ಬಂದಿದ್ದ ಅವರು, ಕೊಲ್ಲೂರಿಗೆ ಭೇಟಿಯಾಗಿದ್ದಾರೆ. ಕೊಲ್ಲೂರು ದೇವಸ್ಥಾನದ ಪರವಾಗಿ ಪೂರ್ಣಕುಂಭ ಸ್ವಾಗತ ಮಾಡಲಾಯಿತು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಿರ್ಮಲಾ ಸೀತಾರಾಮನ್ ಅವರನ್ನು ಸ್ವಾಗತ ಮಾಡಿದರು. ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ದೇವಿಯ ವಿಶೇಷ ದರ್ಶನ ಮಾಡಿದ್ದಾರೆ. ವಿಶೇಷ ಪೂಜೆಯನ್ನು ಸಲ್ಲಿಕೆ ಮಾಡಿದ್ದಾರೆ. ನಂತರ ಕೊಲ್ಲೂರಿನ ಪ್ರಾಂಗಣದಲ್ಲಿರುವ ಎಲ್ಲಾ ಗುಡಿಗಳನ್ನು ಸಂದರ್ಶಿಸಿ ಮಹಾ ಪೂಜೆಯಲ್ಲಿ ಭಾಗಿಯಾದರು.

    ಸಚಿವೆ ನಿರ್ಮಲಾ ಸೀತಾರಾಮನ್ ಮಾವ ಜೊತೆಗಿದ್ದು, ದೇವರ ದರ್ಶನ ಮಾಡಿದರು. ದೇವಸ್ಥಾನದ ಯಜ್ಞಶಾಲೆಯಲ್ಲಿ ಚಂಡಿಕಾ ಹೋಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾದರು. ಕೇಂದ್ರ ಸಚಿವರ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಬಿಜೆಪಿಯ ಕಾರ್ಯಕರ್ತರು ಸ್ಥಳೀಯ ನಾಯಕರು ಭೇಟಿಯಾದರು. ಸುಮಾರು 20 ನಿಮಿಷಗಳ ಕಾಲ ಸಚಿವೆ ಚರ್ಚಿಸಿದರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಸಚಿವರನ್ನು ಗೌರವಿಸಲಾಯಿತು. ಇದನ್ನೂ ಓದಿ: ಉಡುಪಿ ಪ್ರವಾಸ ಕೈಗೊಂಡಿರುವ ನಿರ್ಮಲಾ ಸೀತಾರಾಮನ್

    ಆಡಳಿತ ಮಂಡಳಿಯ ಅಧ್ಯಕ್ಷರು ಸದಸ್ಯರ ಜೊತೆ ಸಮಾಲೋಚನೆ ಮಾತುಕತೆ ಮಾಡಿದ ನಿರ್ಮಲಾ ಸೀತಾರಾಮನ್, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ದರ್ಶನ ಆಗಿದ್ದೇನೆ ದೇವರ ದರ್ಶನ, ಚಂಡಿಕಾಹೋಮದ ಸೇವೆಯಿಂದ ಮನಸ್ಸಿಗೆ ಖುಷಿಯಾಗಿದೆ ಎಂದು ಹೇಳಿದರು. ಮುಂದೆ ಮತ್ತೆ ಕ್ಷೇತ್ರಕ್ಕೆ ಭೇಟಿಕೊಡುವುದಾಗಿ ಹೇಳಿದರು. ಇದನ್ನೂ ಓದಿ: 2 ಗಂಟೆಗಳ ನಿರಂತರ ಕಾರ್ಯಾಚರಣೆಯಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ

  • ಸಲಾಂ ಮಂಗಳಾರತಿ ಹೆಸರು ಹೇಳಿ ಪೂಜೆ ನಡೆಯುವುದಿಲ್ಲ – ಕೊಲ್ಲೂರಿನ ಹಿರಿಯ ಅರ್ಚಕರು

    ಸಲಾಂ ಮಂಗಳಾರತಿ ಹೆಸರು ಹೇಳಿ ಪೂಜೆ ನಡೆಯುವುದಿಲ್ಲ – ಕೊಲ್ಲೂರಿನ ಹಿರಿಯ ಅರ್ಚಕರು

    ಉಡುಪಿ: ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದುಕೊಂಡು ಬರುತ್ತಿರುವ ಸಲಾಂ ಮಂಗಳಾರತಿಯ ಹೆಸರನ್ನು ಬದಲಾಯಿಸಬೇಕು. ಟಿಪ್ಪುಸುಲ್ತಾನ್ ಹೆಸರಿನಲ್ಲಿ ಆರತಿ ನಡೆಯಬಾರದು ಎಂದು ವಿಶ್ವಹಿಂದೂ ಪರಿಷತ್ತು ಸರ್ಕಾರಕ್ಕೆ ಮನವಿ ಮಾಡಿದೆ. ನಿಜ ಅರ್ಥದಲ್ಲಿ ಸಲಾಂ ಮಂಗಳಾರತಿ ಎಂದರೇನು ಪ್ರದೋಷ ಪೂಜೆ ಎಂದರೇನು ಎಂದು ಕೊಲ್ಲೂರಿನ ಹಿರಿಯ ಅರ್ಚಕ ಕೆ.ವಿ ಶ್ರೀಧರ್ ಅಡಿಗ ಮಾಹಿತಿ ನೀಡಿದ್ದಾರೆ.

    ಕೊಲ್ಲೂರು ದೇಗುಲದಲ್ಲಿ ಬೆಳಗ್ಗೆ ಮತ್ತು ಮಧ್ಯಾಹ್ನ ಪ್ರದೋಷ, ಎರಡು ರಾತ್ರಿ ಕಾಲದಲ್ಲಿ ಪೂಜೆ ನಡೆಯುತ್ತದೆ. ಇದೊಂದು ಬಹಳ ಅರ್ಥಗರ್ಭಿತವಾದ ಪೂಜೆ. ಪ್ರದೋಷ ಕಾಲ ಎಂಬುದಕ್ಕೆ ಬಹಳ ಮಹತ್ವವಿದೆ. ಪ್ರದೋಷ ಕಾಲದಲ್ಲಿ ಎಲ್ಲಾ ದೇವಿ ದೇವತೆಗಳ ಸಾನಿಧ್ಯ ಇರುತ್ತದೆ ಎಂಬ ನಂಬಿಕೆಯಿದೆ. ಪ್ರದೋಷ ಕಾಲದಲ್ಲಿ ನಡೆಯುವ ಪೂಜೆಗಳ ವೈಶಿಷ್ಟ ಬೇರೆಯೇ ಇದೆ. ಇದನ್ನು ಓದಿ : ಕೆಲವು ಶಾಲೆಯಲ್ಲಿ ಹಿಜಬ್ ಯೂನಿಫಾರ್ಮ್ ಇದೆ, ಪರೀಕ್ಷೆಯಲ್ಲಿ ಹೇಗೆ ಮಾನಿಟರ್ ಮಾಡ್ತೀರಾ?: ದಿನೇಶ್ ಗುಂಡೂರಾವ್

    ನಾವು ಆ ಕಾಲದಲ್ಲಿ ದೇವಿಗೆ ಪೂಜೆಯನ್ನು ನಡೆಸುತ್ತೇವೆ. ವೈಭವೋಪೇತವಾಗಿ ರಾಗೋಪಚಾರ ದೀಪಾರಾಧನೆಗಳನ್ನು ನಡೆಸುತ್ತೇವೆ. ಕರುಣಾ ಕರುಣಿಕೆಯಲ್ಲಿ ಕೇಳಿಬಂದ ಪ್ರಕಾರ ಅಂದರೆ ವಾಡಿಕೆ ಪ್ರಕಾರ ದೊರೆ ಟಿಪ್ಪು ಪೂಜೆಯಲ್ಲಿ ಭಾಗವಹಿಸಿದ್ದ. ಪ್ರದೋಷ ಪೂಜೆ ಸಂದರ್ಭದಲ್ಲಿ ಸಲಾಮ್ ಮಾಡಿದ್ದ ಅಂತ ಕರುಣಾಕರುಣಿಕ ಅರ್ಥಾತ್ ವಾಡಿಕೆಯಾಗಿ ಬಂದಿದೆ. ಇದಕ್ಕೆ ಯಾವುದೇ ತರಹದ ದಾಖಲೆಗಳು ಇಲ್ಲ. ಇದೊಂದು ಹೇಳಿಕೊಂಡು ಬಂದಿರುವಂತಹ ಮಾತು. ಪ್ರದೋಷ ಪೂಜೆ ಪ್ರದೋಷ ಮಂಗಳಾರತಿ ಎಂದೇ ದಾಖಲೆಯಲ್ಲಿರುವ ಧಾರ್ಮಿಕ ಪ್ರಾಧಾನ್ಯತೆ ಪೂಜೆಗೆ ಇದೆ.

    ಇದು ಹಿಂದಿನಿಂದಲೂ ಇವತ್ತಿಗೂ ನಡೆದುಕೊಂಡು ಬಂದಿರುವಂತಹ ಆಚರಣೆ. ರಾಷ್ಟ್ರದ ಯೋಗಕ್ಷೇಮಕ್ಕೋಸ್ಕರ ಪೂಜೆ ಸಂದರ್ಭದಲ್ಲಿ ಪ್ರಾರ್ಥನೆ ನಡೆಯುತ್ತದೆ. ಪೂಜೆ ಸಂದರ್ಭ ಟಿಪ್ಪು ಭಾಗವಹಿಸಿದ್ದ ಎಂದು ಹೇಳಿಕೊಂಡು ಬಂದಿದ್ದಾರೆ. ಹಾಗಾಗಿ ಈ ಹೆಸರು ಬಂದಿರಬಹುದು ಎಂದು ತಿಳಿಸಿದ್ದಾರೆ. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ

  • ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮಗನ ಹುಟ್ಟುಹಬ್ಬ ಆಚರಿಸಿದ ರಿಷಬ್ ಶೆಟ್ಟಿ

    ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಮಗನ ಹುಟ್ಟುಹಬ್ಬ ಆಚರಿಸಿದ ರಿಷಬ್ ಶೆಟ್ಟಿ

    – ಮೂಕಾಂಬಿಕಾ ಸನ್ನಿಧಿಯಲ್ಲಿ ಚಂಡಿಕಾಹೋಮ

    ಉಡುಪಿ: ಸ್ಯಾಂಡಲ್‍ವುಡ್ ನಟ-ನಿರ್ದೇಶಕ ರಿಷಭ್ ಶೆಟ್ಟಿ ತನ್ನ ಮಗನ ಎರಡನೇ ವರ್ಷದ ಹುಟ್ಟುಹಬ್ಬವನ್ನು ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಚಂಡಿಕಾಹೋಮ ಮಾಡುವ ಮೂಲಕ ಆಚರಿಸಿದರು.

    ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರದವರಾದ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಕೊಲ್ಲೂರಿಗೆ ಭೇಟಿಕೊಟ್ಟರು. ರಿಷಬ್ ಶೆಟ್ಟಿ, ಮಗ ರನ್ವಿತ್, ಪತ್ನಿ ಪ್ರಗತಿ ಜೊತೆ ತಾಯಿ ಮೂಕಾಂಬಿಕೆಯ ದರ್ಶನಗೈದು, ರನ್ವಿತ್ ಶೆಟ್ಟಿ ಹುಟ್ಟುಹಬ್ಬವನ್ನು ದೇಗುಲದ ಯಜ್ಞಶಾಲೆಯಲ್ಲಿ ಚಂಡಿಕಾಹೋಮ ಮಾಡುವ ಮೂಲಕ ಆಚರಿಸಿದರು.

    ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ರಿಷಬ್ ಶೆಟ್ಟಿ, ದೇವರ ಆಶೀರ್ವಾದ ನಮ್ಮ ಶ್ರಮ ಇದ್ದರೆ ಏನು ಬೇಕಾದರೂ ಸಾಧಿಸಬಹುದು. ನಾನು ಚಿಕ್ಕವನಿದ್ದಾಗಲೂ ಶುಭದಿನದಲ್ಲಿ ಕೊಲ್ಲೂರಿಗೆ ಬರುತ್ತಿದ್ದೆ. ಈಗ ಮಗನನ್ನು ಕರೆದುಕೊಂಡು ಬಂದು ದೇವಿಯ ಸೇವೆ ಸಲ್ಲಿಸಿದ್ದೇನೆ ಎಂದರು.

    ಕೆಲದಿನಗಳ ಹಿಂದೆ ರಿಷಬ್ ಶೆಟ್ಟಿ ನಟನೆಯ ‘ಹೀರೋ’ ಚಿತ್ರ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿತ್ತು. ಪ್ರೇಕ್ಷಕರಿಂದ ಚಪ್ಪಾಳೆಯನ್ನು ಗಿಟ್ಟಿಸಿಕೊಂಡಿತ್ತು.

  • ಕೊಲ್ಲೂರಮ್ಮನಿಗೆ ಮನೆಯಲ್ಲೇ ಪ್ರಾರ್ಥಿಸಿ- ದೇವಸ್ಥಾನಕ್ಕೆ ಬರಬೇಡಿ

    ಕೊಲ್ಲೂರಮ್ಮನಿಗೆ ಮನೆಯಲ್ಲೇ ಪ್ರಾರ್ಥಿಸಿ- ದೇವಸ್ಥಾನಕ್ಕೆ ಬರಬೇಡಿ

    ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿಯ ರಥೋತ್ಸವಕ್ಕೆ ಕೊರೊನಾ ವೈರಸ್ ಅಡ್ಡಿಯಾಗಿದೆ. ಕರ್ನಾಟಕದಲ್ಲಿ ಕೊರೊನಾ ಹೈ ಅಲರ್ಟ್ ಇರುವುದರಿಂದ ಅದ್ಧೂರಿ ರಥೋತ್ಸವ ನಡೆಸದೇ ಇರಲು ದೇವಸ್ಥಾನ ತೀರ್ಮಾನಿಸಿದೆ.

    ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಮೂಕಾಂಬಿಕೆಯ ಕ್ಷೇತ್ರ ದಕ್ಷಿಣ ಭಾರತದ ದೇವಿ ದೇವಸ್ಥಾನಗಳಲ್ಲಿ ಬಹಳ ಪ್ರಸಿದ್ಧಿ ಕ್ಷೇತ್ರ. ಮೂಕಾಂಬಿಕೆಯ ವಾರ್ಷಿಕ ರಥೋತ್ಸವಕ್ಕೆ ಸಾವಿರಾರು ಮಂದಿ ಸ್ಥಳೀಯ, ರಾಜ್ಯದ ಬೇರೆ ಬೇರೆ ಭಾಗದ ಮತ್ತು ಹೊರ ರಾಜ್ಯದ ಭಕ್ತರು ಸೇರುತ್ತಾರೆ. ರಾಜ್ಯದಲ್ಲಿ ಕೊರೊನಾ ಎಮರ್ಜೆನ್ಸಿ ಇರುವುದರಿಂದ ಸರಳವಾಗಿ ದೇವಿಯ ಉತ್ಸವ ನಡೆಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

    ದೇವಸ್ಥಾನದ ಆಡಳಿತ ಮಂಡಳಿ ಸಭೆ ಮಾಡಿ ಜಿಲ್ಲಾಧಿಕಾರಿ ಜಗದೀಶ್ ಅವರ ಸೂಚನೆಗೆ ಒಪ್ಪಿದೆ. ಅದ್ಧೂರಿ ರಥೋತ್ಸವ ಬದಲು ದೇವರ ರಥಾರೋಹಣ ಮಾತ್ರ ಮಾಡಲು ನಿಶ್ಚಯಿಸಿದೆ. ರಥಾರೋಹಣ ವೇಳೆ ದೇವಸ್ಥಾನದ ಸಿಬ್ಬಂದಿ ಮತ್ತು ಅರ್ಚಕರು ಮಾತ್ರ ಪಾಲ್ಗೊಳ್ಳುವಂತೆ ವಿನಂತಿ ಮಾಡಿಕೊಂಡಿದೆ.

    ಭಕ್ತರು ಮನೆಯಲ್ಲೇ ಇದ್ದು ಪ್ರಾರ್ಥನೆ ಮಾಡಿ ಸಮಸ್ಯೆಗಳು, ಕಂಟಕಗಳ ನಿವಾರಣೆಯಾದ ಮೇಲೆ ದೇವಸ್ಥಾನದಲ್ಲಿ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಳ್ಳಿ ಎಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಇಒ ಅರವಿಂದ ಅಯ್ಯಪ್ಪ ಸುತಗುಂಡಿ ಪಬ್ಲಿಕ್ ಟಿವಿ ಮೂಲಕ ವಿನಂತಿ ಮಾಡಿದ್ದಾರೆ.

  • ಡಿಕೆಶಿ ಬಿಡುಗಡೆಗೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ – ಹೆಬ್ಬಾಳ್ಕರ್ ಹರಕೆ

    ಡಿಕೆಶಿ ಬಿಡುಗಡೆಗೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ – ಹೆಬ್ಬಾಳ್ಕರ್ ಹರಕೆ

    ಉಡುಪಿ: ಇಡಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಶೀಘ್ರ ಬಿಡುಗಡೆ ಆಗುವಂತೆ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನಡೆಸಲಾಯ್ತು.

    ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಇವತ್ತು ಬೆಳಗ್ಗಿನಿಂದಲೇ ಚಂಡಿಕಾಹೋಮ ನೆರವೇರಿತು. ಮುಂಜಾನೆಯೇ ಡಿ.ಕೆ.ಶಿಯವರ ದೊಡ್ಡಪ್ಪ ಮತ್ತು ಚಿಕ್ಕಪ್ಪನ ಮಕ್ಕಳು ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

    ಚಂಡಿಕಾ ಹೋಮದ ಹರಕೆಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೊಂಡಿದ್ದರು ಎನ್ನಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಕಾರ್ಯದರ್ಶಿ ಚಂಡಿಕಾಹೋಮ ಬುಕ್ಕಿಂಗ್ ಮಾಡಿದ್ದರು. ಡಿಕೆಶಿ ಫೋಟೋ ಮುಂದಿಟ್ಟು ಚಂಡಿಕಾಹೋಮ ನಡೆಸಲಾಯ್ತು. ಶಿವಕುಮಾರ್ ಅವರ ಸಂಕಷ್ಟಗಳೆಲ್ಲ ಪರಿಹಾರವಾಗಿ ಶೀಘ್ರ ಬಂಧಮುಕ್ತರಾಗುವಂತೆ ದೇವರಲ್ಲಿ ವಿಶೇಷ ಪ್ರಾರ್ಥನೆಯೂ ನಡೆಯಿತು. ರಾಜ್ಯ ಕಾಂಗ್ರೆಸ್‍ನ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರು.

  • ಸೆಪ್ಟೆಂಬರ್ ಹುಂಡಿ ಎಣಿಕೆಯಲ್ಲಿ ದಾಖಲೆ ಬರೆದ ಕೊಲ್ಲೂರು ಮೂಕಾಂಬಿಕಾ ದೇವಾಲಯ

    ಸೆಪ್ಟೆಂಬರ್ ಹುಂಡಿ ಎಣಿಕೆಯಲ್ಲಿ ದಾಖಲೆ ಬರೆದ ಕೊಲ್ಲೂರು ಮೂಕಾಂಬಿಕಾ ದೇವಾಲಯ

    – ನೋಟ್ ಬ್ಯಾನ್ ಆಗಿ ವರ್ಷ ಕಳೆದರೂ ಬರ್ತಿದೆ ಹಳೆ ನೋಟು

    ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಸೆಪ್ಟೆಂಬರ್ ನಲ್ಲಿ ದಾಖಲೆ ಪ್ರಮಾಣದ ಹಣ ಕಾಣಿಕೆ ರೂಪದಲ್ಲಿ ಹರಿದು ಬಂದಿದೆ. ಈವರೆಗಿನ ಎಲ್ಲಾ ದಾಖಲೆಗಳು ಬ್ರೇಕ್ ಆಗಿದ್ದು ಒಂದು ತಿಂಗಳಲ್ಲೇ ಬರೋಬ್ಬರಿ 1 ಕೋಟಿ 10 ಲಕ್ಷ ರೂಪಾಯಿ ಹುಂಡಿಗೆ ಬಿದ್ದಿದೆ.

    ಕೊಲ್ಲೂರಿನಲ್ಲಿ ಪ್ರತಿ ತಿಂಗಳು ಹುಂಡಿಯ ಹಣವನ್ನು ಲೆಕ್ಕ ಮಾಡುವ ಪ್ರಕ್ರಿಯೆ ನಡೆಯುತ್ತಿದ್ದು ಈ ಬಾರಿ 1.10 ಕೋಟಿ ರೂಪಾಯಿ ಹುಂಡಿಗೆ ಕಾಣಿಕೆ ಬಿದ್ದಿದೆ. ಕಳೆದ ವರ್ಷ ಸಪ್ಟೆಂಬರ್ ತಿಂಗಳಲ್ಲಿ 1 ಕೋಟಿ 60 ಸಾವಿರ ರೂಪಾಯಿ ಸಂಗ್ರಹವಾಗಿ ಅದೇ ಈ ವರೆಗಿನ ದಾಖಲೆಯಾಗಿತ್ತು. ಈ ಪೈಕಿ 63 ಸಾವಿರ ರೂಪಾಯಿ 1000 ಮತ್ತು 500 ಮುಖಬೆಲೆಯ ಹಳೆಯ ನೋಟುಗಳು ಅನ್ನೋದು ವಿಶೇಷ.

    ಈ ವರ್ಷ 9 ಲಕ್ಷ 40 ಸಾವಿರ ರೂಪಾಯಿ ಹೆಚ್ಚುವರಿ ಸಂಗ್ರಹವಾಗಿದೆ. ಮಂಗಳವಾರ ಬೆಳಗ್ಗೆಯಿಂದ ತಡರಾತ್ರಿಯವರೆಗೆ ದೇವಸ್ಥಾನದ ಸಿಬ್ಬಂದಿ, ಸಾರ್ವಜನಿಕರು, ಶಾಲಾ ಮಕ್ಕಳು ಕೊಲ್ಲೂರು ಕ್ಷೇತ್ರದ ಎಲ್ಲಾ ಹುಂಡಿಗಳನ್ನು ಲೆಕ್ಕ ಮಾಡಿದ್ದಾರೆ. ತಡರಾತ್ರಿ 12.30ರ ತನಕವೂ ಸಿಬ್ಬಂದಿ ಚಿಲ್ಲರೆ- ನೋಟು ವಿಭಜನೆ, ಕಟ್ಟು ಕಟ್ಟುವುದು- ಲೆಕ್ಕ ಮಾಡುವುದರಲ್ಲಿ ತೊಡಗಿಸಿಕೊಂಡಿದ್ದರು ಎಂದು ಉಡುಪಿಯ ಅಪರ ಜಿಲ್ಲಾಧಿಕಾರಿ ಅನುರಾಧಾ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಈ ಬಾರಿ ಹುಂಡಿಯಲ್ಲಿ ಒಂದು ಲಕ್ಷ ರೂಪಾಯಿ ಮೊತ್ತದ ವಿದೇಶಿ ಕರೆನ್ಸಿ ಸಂಗ್ರಹವಾಗಿದೆ. ದೇವಿ ಮೂಕಾಂಬಿಕೆಗೆ 870 ಗ್ರಾಂ ಚಿನ್ನದ ಆಭರಣ- 3 ಕಿಲೋ ಬೆಳ್ಳಿಯ ಆಭರಣಗಳು ಹರಕೆ ರೂಪದಲ್ಲಿ ಬಂದಿದೆ. ಇದೂವರೆಗಿನ ದೊಡ್ಡ ಮೊತ್ತದ ಚಿನ್ನ ಮತ್ತು ಬೆಳ್ಳಿಯ ಹರಕೆ. ಈ ಬಾರಿ 63 ಸಾವಿರ ರೂಪಾಯಿಯ ಹಳೇ ನೋಟುಗಳನ್ನು ಭಕ್ತರು ಹುಂಡಿಗೆ ಹಾಕಿದ್ದಾರೆ. ವಿನಿಮಯ ಮಾಡಿಕೊಳ್ಳಲು ಸಾಧ್ಯವಾಗದೆ ಹೀಗೆ ಮಾಡಿದ್ರೋ..? ಇದರಲ್ಲೂ ಕಪ್ಪು ಹಣ ಇತ್ತೋ ಅನ್ನೋದು ಉತ್ತರ ಸಿಗದ ಪ್ರಶ್ನೆ.

    ನವರಾತ್ರಿ ತಿಂಗಳಲ್ಲಿ ದೇಶಾದ್ಯಂತ ಭಕ್ತರು ಕೊಲ್ಲೂರು ಮೂಕಾಂಬಿಕೆಯ ಕ್ಷೇತ್ರಕ್ಕೆ ಬಂದು ತಮ್ಮ ಹರಕೆ ತೀರಿಸುತ್ತಾರೆ. ಕೇರಳ ತಮಿಳುನಾಡು ರಾಜ್ಯದಿಂದ ಹೆಚ್ಚು ಮಂದಿ ಭಕ್ತರು ಕೊಲ್ಲೂರು ಕ್ಷೇತ್ರಕ್ಕೆ ಬರುವುದು ವಾಡಿಕೆ. ಈ ಬಾರಿ ಭಕ್ತರ ಸಂಖ್ಯೆಯೂ ಜಾಸ್ತಿಯಾಗಿದೆ. ಜೊತೆಗೆ ಬಂದ ಭಕ್ತರು ಹುಂಡಿಗೆ ಹಾಕಿದ- ಹೊತ್ತುಕೊಂಡ ಹರಕೆಯ ಮೊತ್ತವೂ ಹೆಚ್ಚಾಗಿದೆ.