Tag: Kollywood

  • ಹುಟ್ಟುಹಬ್ಬದ ದಿನವೇ ನಟಿ ಸಾಯಿ ಧನ್ಸಿಕಾ ಜೊತೆ ನಟ ವಿಶಾಲ್ ನಿಶ್ಚಿತಾರ್ಥ

    ಹುಟ್ಟುಹಬ್ಬದ ದಿನವೇ ನಟಿ ಸಾಯಿ ಧನ್ಸಿಕಾ ಜೊತೆ ನಟ ವಿಶಾಲ್ ನಿಶ್ಚಿತಾರ್ಥ

    ಮ್ಮ ಹುಟ್ಟುಹಬ್ಬದ ದಿನವೇ ತಮಿಳು ನಟ ವಿಶಾಲ್ (Vishal) ಅಭಿಮಾನಿಗಳಿಗೆ ಸರ್‌ಪ್ರೈಸ್‌ ನ್ಯೂಸ್ ಕೊಟ್ಟಿದ್ದಾರೆ. ನಟಿ ಸಾಯಿ ಧನ್ಸಿಕಾ (Dhanshika) ಜೊತೆ ಚೆನ್ನೈನಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿಶ್ಚಿತಾರ್ಥ (Engagement) ಮಾಡಿಕೊಂಡು ಫೋಟೋಸ್‌ಗಳನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ನಟ ವಿಶಾಲ್ ಹೆಸರು ಹಿಂದೆ ಹಲವು ನಟಿಯರ ಜೊತೆ ಥಳುಕು ಹಾಕಿಕೊಂಡಿದ್ದರೂ ಮದುವೆವರೆಗೆ ಬಂದಿರಲಿಲ್ಲ. ಇದೀಗ ತಮ್ಮ 48ನೇ ವಯಸ್ಸಿನಲ್ಲಿ ಧನ್ಸಿಕಾ ಜೊತೆ ವಿವಾಹಕ್ಕೆ ಸಜ್ಜಾಗಿದ್ದಾರೆ. ಉಂಗುರ ಬದಲಿಸಿಕೊಂಡು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

    ಅಸಲಿಗೆ ಆಗಸ್ಟ್ 29ಕ್ಕೆ ವಿವಾಹವನ್ನೇ ಘೋಷಿಸಿದ್ದರು ವಿಶಾಲ್. ಹಿಂದೆ ಯೋಗಿಡಾ ಚಿತ್ರದ ಟ್ರೇಲರ್‌ ರಿಲೀಸ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ವಿಶಾಲ್ ಧನ್ಸಿಕಾ ಜೊತೆಗಿನ ಪ್ರೀತಿ ಖಚಿತಪಡಿಸಿ ಬಳಿಕ ಮದುವೆ ದಿನಾಂಕ ಘೋಷಿಸಿದ್ದರು. ಆದರೆ ಈ ದಿನ ಸಿನಿ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದೆ. ನಿಶ್ಚಿತಾರ್ಥ ಮಾಡಿಕೊಂಡಿದ್ದರೂ ಮದುವೆ ದಿನವನ್ನು ಜೋಡಿ ಪ್ರಕಟಿಸಿಲ್ಲ. ಇದನ್ನೂ ಓದಿ: ವಿಷ್ಣು ಸಮಾಧಿ ಇದ್ದ ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು?

    ವಿಶಾಲ್ ಇದುವರೆಗೂ 40ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕರಾಗಿ ಅಭಿನಯಿಸಿದ್ದಾರೆ. ಧನ್ಸಿಕಾ 15 ವರ್ಷಗಳಲ್ಲಿ 20ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಕಲಾವಿದರ ಸಂಘ ನಾಡಿಗೇರ್ ಸಂಘದ ಜನರಲ್ ಕಾರ್ಯದರ್ಶಿಯಾಗಿರುವ ವಿಶಾಲ್ ಸಂಘದ ಕಟ್ಟಡ ಸಂಪೂರ್ಣವಾದ ಬಳಿಕ ಮದುವೆಯಾಗುವುದಾಗಿ ಘೋಷಿಸಿದ್ದರು.

  • ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?

    ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?

    ಕಾಲಿವುಡ್ ನಟ ಧನುಷ್ (Dhanush) ಹಾಗೂ ಮೃಣಾಲ್ ಠಾಕೂರ್ (Mrunal Thakur) ಡೇಟಿಂಗ್ ವಿಚಾರ ಜಗಜ್ಜಾಹೀರಾಗುತ್ತಿದೆ. ಇಬ್ಬರೂ ಒಟ್ಟೊಟ್ಟಿಗೆ ಇರುವ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗ್ತಿವೆ. ಹೀಗೆ ವೈರಲ್ ಆಗ್ತಿರುವ ಇವರು ಮದುವೆ ಕೂಡಾ ಆಗಲಿದ್ದಾರೆ ಅನ್ನೋ ಗಾಳಿ ಸುದ್ದಿ ಸಿನಿದುನಿಯಾದಲ್ಲಿ ಗಿರ್ಕಿ ಹೊಡೆಯುತ್ತಿದೆ. ಮದುವೆ ಅಂತಾದರೆ ಈ ಇಬ್ಬರ ನಡುವೆ ವಯಸ್ಸಿನ ಅಂತರ ಎಷ್ಟಿದೆ ಅಂತನ್ನೋ ಚರ್ಚೆಗಳು ಕೂಡಾ ಶುರುವಾಗಿವೆ.

    `ಸೀತಾ ರಾಮಂ’ ಬೆಡಗಿ ಮೃಣಾಲ್ ಠಾಕೂರ್ ಆಗಸ್ಟ್ 1, 1992ರಲ್ಲಿ ಜನಿಸಿದ್ದಾರೆ, ಅಲ್ಲಿಗೆ ಮೃಣಾಲ್‌ಗೆ 33 ವರ್ಷ. ಇನ್ನು ನಟ ಧನುಷ್ ಜುಲೈ 28, 1983ರಲ್ಲಿ ಜನಿಸಿದ್ದಾರೆ, ಅಲ್ಲಿಗೆ ನಟ ಧನುಷ್‌ಗೆ 42 ವರ್ಷ. ನಟ ಧನುಷ್ ಹಾಗೂ ನಟಿ ಮೃಣಾಲ್ ನಡುವೆ 9 ವರ್ಷಗಳ ಅಂತರವಿದೆ. ಈಗಾಗಲೇ ನಟ ಧನುಷ್ ನಟ ರಜನಿಕಾಂತ್ ಅವರ ಪುತ್ರಿ ಐಶ್ವರ್ಯ ಜೊತೆ ಮದುವೆಯಾಗಿ 18 ವರ್ಷಗಳ ಬಳಿಕ ವಿಚ್ಚೇಧನವನ್ನ ಕೂಡಾ ನೀಡಿದ್ದಾರೆ.

    2022ರಲ್ಲಿ ರಜನಿಕಾಂತ್ ಪುತ್ರಿ ಐಶ್ವರ್ಯ ಜೊತೆ ಸಪರೇಷನ್ ಬಗ್ಗೆ ಘೋಷಣೆ ಮಾಡಿದ್ದರು ನಟ ಧನುಷ್. ನಂತರ 2024ರಲ್ಲಿ ವಿಚ್ಚೇಧನ ಪಡೆದುಕೊಂಡಿದ್ದಾರೆ. ಇದೀಗ ನಟ ಧನುಷ್ ಹಾಗೂ ಮೃಣಾಲ್ ನಡುವೆ ಇಲ್ಲ ಸಲ್ಲದ ಸುದ್ದಿಗಳು ಮುನ್ನೆಲೆಗೆ ಬರುತ್ತಿವೆ. ಸನ್ ಆಫ್ ಸರ್ಧಾರ್-2 ಸಿನಿಮಾದ ಪ್ರೀಮಿಯರ್‌ನಲ್ಲಿ ನಟ ಧನುಷ್ ಭಾಗಿಯಾಗಿದ್ದಾರೆ. ಅಲ್ಲದೇ ಆಗಸ್ಟ್ 1ರಂದು ಮೃಣಾಲ್ ಬರ್ತ್ಡೇ ಪಾರ್ಟಿಯಲ್ಲೂ ಧನುಷ್ ಪ್ರತ್ಯಕ್ಷರಾಗಿದ್ದಾರೆ ಎನ್ನಲಾಗ್ತಿದೆ. ಈ ಜೋಡಿ ಒಂದಾದರೆ ಚೆಂದ ಎಂದು ಜಾಲತಾಣದಲ್ಲಿ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ.

  • ಜಾನಿ ಮಾಸ್ಟರ್ ಜೊತೆಗಿನ ಫೋಟೋ: ಟೀಕೆಗೆ ಒಳಗಾದ ನಯನತಾರಾ-ವಿಘ್ನೇಶ್

    ಜಾನಿ ಮಾಸ್ಟರ್ ಜೊತೆಗಿನ ಫೋಟೋ: ಟೀಕೆಗೆ ಒಳಗಾದ ನಯನತಾರಾ-ವಿಘ್ನೇಶ್

    ಟಾಲಿವುಡ್‌ನ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ (Jani Master) ಲೈಂಗಿಕ ದೌರ್ಜನ್ಯದ ಆರೋಪವನ್ನ ಹೊತ್ತು ಜೈಲುವಾಸ ಅನುಭವಿಸಿ ಬಂದಿದ್ದಾರೆ. ಜಾನಿ ಮಾಸ್ಟರ್ ಜೊತೆಗಿನ ಫೋಟೋವನ್ನ ಹಂಚಿಕೊಂಡಿರುವ ವಿಘ್ನೇಶ್ ತೀವ್ರ ಚರ್ಚೆಗೆ ಕಾರಣವಾಗಿದ್ದಾರೆ. ವಿಘ್ನೇಶ್ (Vignesh Shivan) ನಿರ್ದೇಶನ ಮಾಡುತ್ತಿರುವ ಸಿನಿಮಾದಲ್ಲಿ ಜಾನಿ ಮಾಸ್ಟರ್ ಕೆಲಸ ಮಾಡುತ್ತಿದ್ದಾರಂತೆ ಹೀಗಾಗಿ ಈ ಫೋಟೋ ನೋಡಿ ಜಾಲತಾಣದಲ್ಲಿ ಸಾಕಷ್ಟು ಕಮೆಂಟ್ಸ್ ಮಾಡ್ತಿದ್ದಾರೆ.

    ಸಹಾಯಕ ನೃತ್ಯ ನಿರ್ದೇಶಕಿಯ ಮೇಲೆ ಅತ್ಯಾಚಾರ ಎಸಗಿದ್ದರು ಎನ್ನಲಾದ ಆರೋಪದ ಮೇಲೆ ಜಾನಿ ಮಾಸ್ಟರ್ ಜೈಲು ಸೇರಿದ್ದರು. ಬಳಿಕ ಜಾಮೀನು ಮೇಲೆ ಹೊರ ಬಂದಿದ್ದಾರೆ. ಅವರ ಜೊತೆಗೆ ಸಿನಿಮಾ ಮಾಡುತ್ತಿರುವ ಬಗ್ಗೆ ಅಪಾರ ಆಕ್ರೋಶ ವ್ಯಕ್ತವಾಗುತ್ತಿದೆ. ಸಿನಿಮಾಗೆ ನಿರ್ದೇಶಕ ವಿಘ್ನೇಶ್ ಆದ್ರೆ, ನಯನತಾರಾ (Nayanthara) ನಿರ್ಮಾಪಕಿಯಾಗಿದ್ದಾರೆ. ಹೀಗಾಗಿ ಇಬ್ಬರಿಗೂ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.  ಇದನ್ನೂ ಓದಿ: ಕಾರ್ತಿಕ್ ಜೊತೆ ಮತ್ತೆ ಸಿಕ್ಕಿಬಿದ್ದ ಶ್ರೀಲೀಲಾ!

    ಜಾನಿ ಮಾಸ್ಟರ್ ಕೇವಲ ತೆಲುಗು ಮಾತ್ರವಲ್ಲದೇ ತಮಿಳು, ಕನ್ನಡ ಹಾಗೂ ಹಿಂದಿ ಭಾಷೆಯ ಸಿನಿಮಾದ ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಕನ್ನಡದ ನಟಸಾರ್ವಭೌಮ, ಯುವರತ್ನ, ರಾಜರಥ, ವಿಕ್ರಾಂತ್ ರೋಣ, ಕಬ್ಜ ಸಿನಿಮಾದ ಹಾಡುಗಳಿಗೆ ಅದ್ಭುತ ನೃತ್ಯ ನಿರ್ದೇಶನ ಮಾಡುವ ಮೂಲಕ ಖ್ಯಾತಿ ಪಡೆದಿದ್ದಾರೆ. ಇದನ್ನೂ ಓದಿಕರ್ಣನಿಗೆ ಗ್ರೀನ್ ಸಿಗ್ನಲ್  ಭವ್ಯಾನಮ್ರತಾಕಿರಣ್ ರಾಜ್ ತ್ರಿವಳಿ ಆಟ

    ಜಾನಿ ಮಾಸ್ಟರ್ ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯದ ಆರೋಪ ಅವರ ವೃತ್ತಿ ಬದುಕಿಗೆ ಯಾವ ರೀತಿಯಾಗಿ ಡ್ಯಾಮೇಜ್ ಮಾಡುತ್ತಿದೆ ನೋಡಿ. ಅವರ ಜೊತೆಗೆ ಕೆಲಸ ಮಾಡಲು ಮುಂದಾದವರಿಗೂ ಕೂಡಾ ಟೀಕೆಗಳು ಶುರುವಾಗಿವೆ.

  • ತಲಾ ಅಜಿತ್ ನ್ಯೂ ಲುಕ್ ವೈರಲ್ – ಬಾಲ್ಡ್ ಲುಕ್ ಯಾಕೆ ಗೊತ್ತಾ..?

    ತಲಾ ಅಜಿತ್ ನ್ಯೂ ಲುಕ್ ವೈರಲ್ – ಬಾಲ್ಡ್ ಲುಕ್ ಯಾಕೆ ಗೊತ್ತಾ..?

    ಕಾಲಿವುಡ್‌ನ ನಟ ಅಜಿತ್‌ಕುಮಾರ್ (Ajit Kumar) ಒಂದು ಕಡೆ ಸಿನಿಮಾ, ಮತ್ತೊಂದು ಕಡೆ ಕಾರ್ ರೇಸಿಂಗ್‌ನಲ್ಲಿ ತೊಡಗಿಕೊಂಡಿದ್ದಾರೆ. ಇದೇ ವರ್ಷ ಅಜಿತ್‌ಕುಮಾರ್ ನಟನೆಯ ಎರಡು ಸಿನಿಮಾಗಳು ತೆರೆಕಂಡಿವೆ. ವಿದಾಮುಯರ್ಚಿ ಹಾಗೂ ಗುಡ್ ಬ್ಯಾಡ್ ಅಗ್ಲಿ ಸಿನಿಮಾಗಳು ತೆರೆಕಂಡು ಅಷ್ಟಕ್ಕಷ್ಟೇ ಪ್ರತಿಕ್ರಿಯೆ ಪಡೆದುಕೊಂಡಿವೆ. ಇದರ ಮಧ್ಯೆ ಈ ವರ್ಷ ಪದ್ಮಶ್ರೀ ಗರಿಯನ್ನ ಮುಡಿಗೇರಿಸಿಕೊಂಡಿದ್ದಾರೆ.

    ತಲಾ ಅಜಿತ್ ಅಂತಲೇ ಅಭಿಮಾನಿಗಳಿಂದ ಕರೆಸಿಕೊಳ್ಳುವ ಸಹಜ ಹಾಗೂ ಮನೋಜ್ಞ ಅಭಿನಯದಿಂದಲೇ ಅಪಾರ ಅಭಿಮಾನಿ ಬಳಗ ಹೊಂದಿರುವ ನಟ ಅಜಿತ್‌ಕುಮಾರ್. ಇದೇ ವರ್ಷವೇ ಎರಡು ಕಾರ್ ರೇಸ್‌ನಲ್ಲಿ ಭಾಗಿಯಾಗಿ ಎರಡನೇ ಸ್ಥಾನ ಗಿಟ್ಟಿಸಿಕೊಂಡಿದ್ದರು. ಈ ಮೂಲಕ ಕೇವಲ ಸಿನಿಮಾ ಅಭಿಮಾನಿಗಳು ಮಾತ್ರವಲ್ಲದೇ ಸ್ಪರ್ಧಾ ಜಗತ್ತಿನಲ್ಲೂ ಅಜಿತ್‌ಗೆ ಅಭಿಮಾನಿ ಬಳಗವಿದೆ. ಇದನ್ನೂ ಓದಿ: ವಿಜಯ್ ಜೊತೆ ಲವ್ ವದಂತಿಗೆ ತ್ರಿಷಾ ಕೆಂಡ – ಹೊಲಸು ಮನಸ್ಥಿತಿಯ ಜನ ಎಂದ ನಟಿ

    ಇದೀಗ ಅಜಿತ್ ತಮ್ಮ ವಿಶೇಷ ನೋಟದಿಂದ ಭಾರೀ ಸುದ್ದಿಯಾಗ್ತಿದ್ದಾರೆ. ಹೌದು, ಇತ್ತೀಚೆಗೆ ತಮ್ಮ ಹೊಸ ಲುಕ್ ಕಂಡು ಫ್ಯಾನ್ಸ್ ಕೊಂಚ ಗೊಂದಲಕ್ಕೀಡಾಗಿದ್ದಾರೆ. ಒಂದು ಕಡೆ ಅಜಿತ್ ನಟನೆಯ ಎಕೆ64 ಸಿನಿಮಾಗೆ ತಯಾರಿ ನಡೆಯುತ್ತಿದೆ. ಮತ್ತೊಂದೆಡೆ ಕಾರ್ ರೇಸ್‌ಗೂ ತಯಾರಿ ನಡೆಸಿದ್ದಾರೆ. ಈ ವೇಳೆ ಶಾರ್ಟ್ ಹೇರ್‌ಸ್ಟೈಲ್ ಇರುವ ಫೋಟೋ ವೈರಲ್ ಆಗಿದೆ.

    ಈ ಹೇರ್‌ಸ್ಟೈಲ್ ನೋಡಿ ಜಾಲತಾಣದಲ್ಲಿ ಫ್ಯಾನ್ಸ್ ಕಮೆಂಟ್ ಮೇಲೆ ಕಮೆಂಟ್ ಮಾಡ್ತಿದ್ದಾರೆ. ಕಂಪ್ಲೀಟ್ ರೇಸ್‌ನಲ್ಲೇ ತೊಡಗಿಕೊಳ್ತಾರಾ ನಮ್ಮ ಹೀರೋ ಎಂದು ಕೆಲವರು ಎಂದರೆ.. ಮತ್ತೆ ಕೆಲವರು ಇಲ್ಲ ಇದು ಅವ್ರ ಮುಂದಿನ ಸಿನಿಮಾದ ಹೇರ್‌ಸ್ಟೈಲ್ ಎಂದು ಕಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ಹಂಸಲೇಖ, ರವಿಚಂದ್ರನ್ `ಯಾ’ ಸಾಹಿತ್ಯದ ಹಿಟ್ ಸೀಕ್ರೆಟ್..!

  • ರಜನಿಕಾಂತ್‌ ʻಕೂಲಿʼ ಚಿತ್ರದ ಫಸ್ಟ್‌ ಸಾಂಗ್‌ಗೆ ಮುಹೂರ್ತ ಫಿಕ್ಸ್

    ರಜನಿಕಾಂತ್‌ ʻಕೂಲಿʼ ಚಿತ್ರದ ಫಸ್ಟ್‌ ಸಾಂಗ್‌ಗೆ ಮುಹೂರ್ತ ಫಿಕ್ಸ್

    ಕಾಲಿವುಡ್ ಸೂಪರ್‌ಸ್ಟಾರ್, ತಲೈವಾ ರಜನಿಕಾಂತ್ (Rajinikanth) ಅಭಿನಯದ ಮೋಸ್ಟ್ ಅವೈಟೆಡ್ ಸಿನಿಮಾ ʻಕೂಲಿʼ (Coolie) ಫಸ್ಟ್ ಲುಕ್‌ನಿಂದಲೇ ಗಮನ ಸೆಳೆದಿದೆ. ಲೋಕೇಶ್ ಕನಗರಾಜ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಕೂಲಿ ಸಿನಿಮಾದಲ್ಲಿ ಅತೀದೊಡ್ಡ ತಾರಾಗಣವಿದೆ. ರಿಯಲ್ ಸ್ಟಾರ್ ಉಪೇಂದ್ರ, ನಾಗಾರ್ಜುನ, ಸತ್ಯರಾಜ್, ಶೃತಿ ಹಾಸನ್ ಸೇರಿದಂತೆ ಬಹುತಾರಾಗಣ ಈ ಸಿನಿಮಾದಲ್ಲಿದೆ.

    ಕೂಲಿ ಸಿನಿಮಾದ ಫಸ್ಟ್ ಸಿಂಗಲ್ ರಿಲೀಸ್‌ಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ಜೂನ್ 25ರಂದು ಸಾಂಗ್ ರಿಲೀಸ್ ಆಗುತ್ತಿದೆ ಅನ್ನೋದು ರಿವೀಲ್ ಆಗಿದೆ. ರಜನಿಕಾಂತ್ ಪಿಆರ್ ಮ್ಯಾನೇಜರ್ ರಿಯಾಜ್ ಅಹ್ಮದ್ ಜಾಲತಾಣದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

    ಮುಂದಿನ ಆಗಸ್ಟ್‌ 25ರಂದು ಕೂಲಿ ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಫಸ್ಟ್ ಲುಕ್‌ನಿಂದ, ಡಿಫರೆಂಟ್ ಮೇಕಿಂಗ್‌ನಿಂದಲೇ ಭಾರತೀಯ ಚಿತ್ರರಂಗದಲ್ಲೇ ಹವಾ ಕ್ರಿಯೇಟ್ ಮಾಡಿದೆ. ಇನ್ನು ಕನ್ನಡದ ರಿಯಲ್‌ಸ್ಟಾರ್ ಸೌತ್‌ನ ಸೂಪರ್‌ಸ್ಟಾರ್ ಜೊತೆ ನಟಿಸುತ್ತಿರೋದು ಮತ್ತೊಂದು ವಿಶೇಷ.

    ಇತ್ತೀಚೆಗೆ ರಜನಿಕಾಂತ್ ಜೈಲರ್-2 ಸಿನಿಮಾದ ಶೂಟಿಂಗ್‌ಗಾಗಿ ಮೈಸೂರಿಗೆ ಆಗಮಿಸಿದ್ದರು. ಮೈಸೂರಿಗೆ ಶೂಟಿಂಗ್‌ಗೆ ಬಂದ ತಲೈವ ನೋಡಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ರು. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು. ಸದ್ಯ ರಜನಿ ಫ್ಯಾನ್ಸ್ ತಂಡದಿಂದ ಗುಡ್‌ನ್ಯೂಸ್ ಸಿಕ್ಕಿದೆ.

  • ʻಥಗ್‌ ಲೈಫ್‌ʼ ಸಿನಿಮಾಗೆ ಬ್ಯಾನ್‌ ಬಿಸಿ – ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್

    ʻಥಗ್‌ ಲೈಫ್‌ʼ ಸಿನಿಮಾಗೆ ಬ್ಯಾನ್‌ ಬಿಸಿ – ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್

    ‘ತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡಿಲ್ಲದೇ ತಪ್ಪೇ ಮಾಡಿಲ್ಲ, ಕ್ಷಮೆಯೂ ಕೇಳಲ್ಲ ಎಂದು ಪಟ್ಟು ಹಿಡಿರೋ ನಟ ಕಮಲ್ ಹಾಸನ್‌ಗೆ (Kamal Haasan) ತಕ್ಕ ಪಾಠ ಕಲಿಸಲು ಕನ್ನಡಪರ ಸಂಘಟನೆ ಮುಂದಾಗಿದೆ. ಇದರಿಂದ ಜೂನ್ 5ರಂದು ರಿಲೀಸ್‌ಗೆ ಸಜ್ಜಾಗಿರುವ ‘ಥಗ್ ಲೈಫ್’ (Thug Life) ಚಿತ್ರದ ಪ್ರದರ್ಶನಕ್ಕೆ ಬ್ಯಾನ್ ಬಿಸಿ ತಟ್ಟಿದೆ. ಈ ನಡುವೆ ಚಿತ್ರಕ್ಕೆ ಅಡ್ಡಿಪಡಿದಂತೆ ನಟ ಕಮಲ್‌ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

    ಹೌದು. ʻಥಗ್‌ ಲೈಫ್‌ʼ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವಂತೆ ತಮ್ಮ ಒಡೆತನದ ರಾಜಕಮಲ್ ಫಿಲ್ಮ್ ಇಂಟರ್ನ್ಯಾಷನಲ್ ಸಂಸ್ಥೆಯ ಸಿಇಒ ಮೂಲಕ ಕಮಲ್ ಹಾಸನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಕಮಲ್ ಹಾಸನ್‌ಗೆ ಕನ್ನಡದ ಪುಸ್ತಕ ನೀಡಿದ ರಂಜನಿ ರಾಘವನ್

    ಚಲನಚಿತ್ರ ಪ್ರದರ್ಶನಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು, ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಅರ್ಜಿ ಸಲ್ಲಿಕೆಯಾಗಿದ್ದು, ಮೇಲ್ವಿಚಾರಣೆ ಬಾಕಿಯಿದೆ. ಆದ್ರೆ ಈ ಬಗ್ಗೆ ಕಮಲ್‌ ಹಾಸನ್‌ ಎಲ್ಲಿಯೂ ಅಧಿಕೃತವಾಗಿ ಹೇಳಿಕೆ ನೀಡಿಲ್ಲ.

    ದುಬೈನಲ್ಲಿರುವ ಕಮಲ್ ಹಾಸನ್ ಮಂಗಳವಾರ (ಜೂ.3) ಚೆನ್ನೈಗೆ ಬರಲಿದ್ದಾರೆ. ಆದರೆ, ಕ್ಷಮೆ ಕೇಳದ ಹೊರತು ಥಗ್ ಲೈಫ್ ಸಿನಿಮಾ ರಿಲೀಸ್‌ಗೆ ಅವಕಾಶ ಕೊಡೋದೇ ಇಲ್ಲ ಅಂತ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು ಸ್ಪಷ್ಟವಾಗಿ ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡಿದ್ರೆ ಬೆಂಗಳೂರು ಬಂದ್: ಪ್ರವೀಣ್ ಶೆಟ್ಟಿ ಎಚ್ಚರಿಕೆ

    ಇನ್ನೂ ಕಮಲ್‌ ಹಾಸನ್ ವಿರುದ್ಧ ಬಿಜೆಪಿಗರು ಕಿಡಿಕಾರಿದ್ರೆ, ಡಿಸಿಎಂ ಡಿಕೆ ಮಾತ್ರ ಸೌಹಾರ್ದಯುತವಾಗಿ ಬಾಳ್ಬೇಕು ಅಂತಿದ್ದಾರೆ. ಈ ಮಧ್ಯೆ, ಫಿಲ್ಮ್ ಚೇಂಬರ್‌ಗೆ ಶಿವರಾಮೇಗೌಡ ಬಣದ ಹೋರಾಟಗಾರರು ಮುತ್ತಿಗೆ ಯತ್ನ ನಡೆಸಿದ್ರು. ಇದನ್ನೂ ಓದಿ: I’m Loving It – ಕೊನೆಗೂ ಬ್ರೇಕಪ್ ಬಗ್ಗೆ ಮೌನಮುರಿದ ಸಿಡ್ನಿ ಸ್ವೀನಿ!

  • ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!

    ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!

    ಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದ ನಟ ಕಮಲ್ ಹಾಸನ್ (Kamal Haasan) ವಿಚಾರದ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಶಿವಣ್ಣರನ್ನು (Shivanna) ಪ್ರಶ್ನಿಸಿದ್ದಕ್ಕೆ ಅವರು ಕೈಮುಗಿದಿದ್ದಾರೆ. ಇದನ್ನೂ ಓದಿ:ಅಪ್ಪನಂತೆ ಕುದುರೆ ಸವಾರಿ ಮಾಡಿದ ವಿನೀಶ್ ದರ್ಶನ್- ಫೋಟೋ ವೈರಲ್

    ಇಂದು (ಮೇ 31) ‘ಕಣ್ಣಪ್ಪ’ ಚಿತ್ರದ ಪ್ರಚಾರಕ್ಕಾಗಿ ಮೋಹನ್ ಬಾಬು, ವಿಷ್ಣು ಮಂಚು ಚಿತ್ರತಂಡ ಬೆಂಗಳೂರಿಗೆ ಆಗಮಿಸಿತ್ತು. ಈ ಕಾರ್ಯಕ್ರಮಕ್ಕೆ ಶಿವಣ್ಣ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ, ಕಮಲ್ ಹಾಸನ್ ಕಾಂಟ್ರವರ್ಸಿ ಬಗ್ಗೆ ಕೇಳಿದ್ದಕ್ಕೆ ಕೈಮುಗಿದು ನಮಸ್ಕರಿಸುತ್ತಾ ತೆರಳಿದ್ದಾರೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿದೆ. ಇದನ್ನೂ ಓದಿ:ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ

    ತಮಿಳು ನಟ ಮಾತಾಡಿರೋದರ ಬಗ್ಗೆ ತಪ್ಪು ಎಂದು ಎಲ್ಲೂ ಶಿವಣ್ಣ ಹೇಳುತ್ತಿಲ್ಲವಲ್ಲ ಎಂದು ಅಭಿಮಾನಿಗಳಲ್ಲಿ ಬೇಸರ ಮೂಡಿದೆ. ಇಷ್ಟೆಲ್ಲಾ ಆದ ಮೇಲೆಯೂ ಶಿವಣ್ಣ ಮೌನವಹಿಸಿರೋದ್ಯಾಕೆ? ಕಮಲ್ ಬಗ್ಗೆ ಕೇಳ್ತಿದ್ದಂತೆ ಕೈಮುಗಿದು ಹೋಗಿದ್ದು ಯಾಕೆ. ಹಾಗಾದ್ರೆ ಕಮಲ್ ಮಾಡಿದ್ದು ಸರಿ ಅಂತನಾ? ತಪ್ಪು ಅಂತನಾ ಎಂದೆಲ್ಲಾ ಪ್ರಶ್ನಿಸುತ್ತಿದ್ದಾರೆ. ಶಿವಣ್ಣ ಉತ್ತರದ ನಿರೀಕ್ಷೆಯಲ್ಲಿದ್ದ ಫ್ಯಾನ್ಸ್‌ಗೆ ನಿರಾಸೆ ಆಗಿದೆ.

    ಇದೆಲ್ಲದರ ನಡುವೆ ಹೇಳಿಕೆ ಬಗ್ಗೆ ನಾನು ಬದ್ಧನಾಗಿದ್ದೇನೆ ಎಂದ ಕಮಲ್‌ಗೆ ಕನ್ನಡಪರ ಸಂಘಟನೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. ಜೂನ್ 5ರಂದು ರಿಲೀಸ್‌ಗೆ ಸಜ್ಜಾಗಿರುವ ‘ಥಗ್ ಲೈಫ್’ ಚಿತ್ರವನ್ನು ರಾಜ್ಯದಲ್ಲಿ ಬ್ಯಾನ್ ಮಾಡಲಾಗುತ್ತಿದೆ.

    ನಿನ್ನೆ (ಮೇ 30) ಮತ್ತೆ ಚೆನ್ನೈನಲ್ಲಿ ಕಮಲ್ ಹಾಸನ್ ಮಾತನಾಡಿ, ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದರು. ಅಲ್ಲದೇ ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ. ಕಾನೂನು ಹಾಗೂ ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದಿದ್ದರು. ಇದು ಕನ್ನಡಿಗರನ್ನು ಮತ್ತಷ್ಟು ಕೆರಳಿಸಿದೆ.

  • ಕ್ಷಮೆ ಕೇಳದ ಕಮಲ್ ಹಾಸನ್‌ಗೆ ಬ್ಯಾನ್ ಬಿಸಿ..!

    ಕ್ಷಮೆ ಕೇಳದ ಕಮಲ್ ಹಾಸನ್‌ಗೆ ಬ್ಯಾನ್ ಬಿಸಿ..!

    ‘ತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡಿಲ್ಲದೇ ತಪ್ಪೇ ಮಾಡಿಲ್ಲ, ಕ್ಷಮೆ ಕೇಳಲ್ಲ ಎಂದು ಪಟ್ಟು ಹಿಡಿರೋ ಕಮಲ್ ಹಾಸನ್‌ಗೆ (Kamal Haasan) ತಕ್ಕ ಪಾಠ ಕಲಿಸಲು ಕನ್ನಡಪರ ಸಂಘಟನೆ ಮುಂದಾಗಿದೆ. ಇದರಿಂದ ಜೂನ್ 5ರಂದು ರಿಲೀಸ್‌ಗೆ ಸಜ್ಜಾಗಿರುವ ‘ಥಗ್ ಲೈಫ್’ ಚಿತ್ರದ ಪ್ರದರ್ಶನಕ್ಕೆ ಬ್ಯಾನ್ ಬಿಸಿ ತಟ್ಟಿದೆ. ಇದನ್ನೂ ಓದಿ:ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್

    ಕನ್ನಡಿಗರಿಗೆ ಕ್ಷಮೆಯಾಚಿಸಲು ಕಮಲ್ ಹಾಸನ್‌ಗೆ ಕೊಟ್ಟ ಗಡುವು ಮುಗಿದಿದೆ. ಕರ್ನಾಟಕದಲ್ಲಿ 100ಕ್ಕೂ ಹೆಚ್ಚು ಸ್ಕ್ರಿನ್‌ಗಳಲ್ಲಿ ರಿಲೀಸ್‌ಗೆ ರೆಡಿಯಿರುವ ‘ಥಗ್ ಲೈಫ್’ (Thug Life) ಚಿತ್ರ ಪ್ರದರ್ಶನ ಮಾಡದಂತೆ ಥಿಯೇಟರ್‌ಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇತರ ಕನ್ನಡಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಒಂದು ವೇಳೆ ಚಿತ್ರ ಪ್ರದರ್ಶನಕ್ಕೆ ಮುಂದಾದರೆ ಥಿಯೇಟರ್‌ಗೆ ಬೆಂಕಿ ಹಚ್ಚೋದಾಗಿ ಎಚ್ಚರಿಕೆ ನೀಡಿವೆ. ಇದನ್ನೂ ಓದಿ:ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ

    ಕಮಲ್ ನಟನೆ, ನಿರ್ಮಾಣದ ‘ಥಗ್ ಲೈಫ್’ ಚಿತ್ರದ ಹಂಚಿಕೆಯ ಹಕ್ಕನ್ನು ಪಡೆದಿದ್ದ ವೆಂಕಟೇಶ್ ಹಣ ವಾಪಸ್ ಕೊಡಲು ಮುಂದಾಗಿದ್ದಾರೆ. ರಿಲೀಸ್‌ಗೆ ಅಡ್ಡಿಯಾದ್ರೂ ಪರ್ವಾಗಿಲ್ಲ ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದ ಕಮಲ್ ಈಗಲಾದ್ರು ತಪ್ಪು ಅರಿತು ಕ್ಷಮೆಯಾಚಿಸುತ್ತಾರಾ ಎಂದು ಕಾದುನೋಡಬೇಕಿದೆ.

    ನಿನ್ನೆ (ಮೇ 30) ಚೆನ್ನೈನಲ್ಲಿ ಕಮಲ್ ಹಾಸನ್ ಮಾತನಾಡಿ, ಕ್ಷಮೆ ಕೇಳಲ್ಲ ಎಂದು ಹೇಳಿ ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದರು.

    ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ. ಕಾನೂನು ಹಾಗೂ ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದಿದ್ದರು.

  • ನಾನು ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ- ಕಮಲ್ ಹಾಸನ್ ಉದ್ಧಟತನ

    ನಾನು ಬೆದರಿಕೆಗೆ ಹೆದರಲ್ಲ, ಕ್ಷಮೆ ಕೇಳಲ್ಲ- ಕಮಲ್ ಹಾಸನ್ ಉದ್ಧಟತನ

    ನ್ನಡ ಭಾಷೆಯ ಬಗ್ಗೆ ಕಮಲ್ ಹಾಸನ್ (Kamal Haasan) ನೀಡಿರುವ ಹೇಳಿಕೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಕ್ಷಮೆ ಕೋರಲು ಗಡುವು ನೀಡಿದ್ದ ಕರ್ನಾಟಕಕ್ಕೆ ಕ್ಷಮೆ ಕೇಳಲ್ಲ, ನಾನು ತಪ್ಪು ಮಾಡಿಲ್ಲ ಎಂದು ಕಮಲ್ ಹಾಸನ್ ಮತ್ತೆ ಉದ್ಧಟತನ ತೋರಿದ್ದಾರೆ. ಇದನ್ನೂ ಓದಿ:ಮರೆಯಾದ ಭಾವಗೀತೆಗಳ ಭಾವ, ಅಗಲಿದ ಕಾವ್ಯ ಚೇತನ – ಹೆಚ್‌ಎಸ್‌ವಿ ನಿಧನಕ್ಕೆ ಶಿವರಾಜ ತಂಗಡಗಿ ಶೋಕ

    ಇಂದು (ಮೇ 30) ಚೆನ್ನೈನಲ್ಲಿ ಕಮಲ್ ಹಾಸನ್ ಮಾತನಾಡಿ, ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ನನ್ನಿಂದ ತಪ್ಪಾಗಿದ್ರೆ ಕ್ಷಮೆ ಕೇಳುವೆ, ನನ್ನಿಂದ ತಪ್ಪು ಆಗಿಲ್ಲ. ನನ್ನ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

    ಯಾವುದೇ ಬೆದರಿಕೆ, ಎಚ್ಚರಿಕೆಗೆ ನಾನು ಹೆದರುವುದಿಲ್ಲ. ಕಾನೂನು ಹಾಗೂ ನ್ಯಾಯದ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್ ಹಾಸನ್ ಮಾತು ಒಪ್ಪಲ್ಲ- ಜಗ್ಗೇಶ್ ಖಂಡನೆ

    ತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು ಎಂಬ ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ತಮ್ಮ ನಟನೆಯ ‘ಥಗ್ ಲೈಫ್’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಕನ್ನಡದ ಹಿರಿಯ ನಟ ಶಿವರಾಜ್‌ಕುಮಾರ್ ಅವರ ಎದುರೇ ಕಮಲ್ ಹಾಸನ್ ಈ ಹೇಳಿಕೆ ನೀಡಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

    ಕಮಲ್ ಹಾಸನ್ ಹೇಳಿಕೆ ಶುದ್ಧ ಸುಳ್ಳು. ಭಾಷಾ ಪ್ರಾವಿಣ್ಯತೆ ಇಲ್ಲದೇ ಈ ರೀತಿಯ ಉದ್ಧಟತನದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಭಾಷಾ ವಿಜ್ಞಾನಿಗಳು ಖಂಡಿಸಿದ್ದಾರೆ. ನಟನ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಕೂಡಲೇ ಕನ್ನಡಿಗರ ಕ್ಷಮೆಯಾಚಿಸಿ, ಇಲ್ಲದಿದ್ದರೆ ನಿಮ್ಮ ಸಿನಿಮಾವನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಲಾಗುವುದು ಎಂದು ಹೋರಾಟಗಾರರು ನಟನಿಗೆ ಎಚ್ಚರಿಕೆ ನೀಡಿದ್ದಾರೆ.

  • ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್ ಹಾಸನ್ ಮಾತು ಒಪ್ಪಲ್ಲ- ಜಗ್ಗೇಶ್ ಖಂಡನೆ

    ಕನ್ನಡ ತಮಿಳಿನಿಂದ ಹುಟ್ಟಿದೆ ಎಂದ ಕಮಲ್ ಹಾಸನ್ ಮಾತು ಒಪ್ಪಲ್ಲ- ಜಗ್ಗೇಶ್ ಖಂಡನೆ

    ನ್ನಡಕ್ಕೆ ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದ್ದು, ತಮಿಳಿನಿಂದ ಕನ್ನಡ ಹುಟ್ಟಿದೆ ಎಂದ ಕಮಲ್ ಹಾಸನ್ ಮಾತನ್ನು ಒಪ್ಪಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಜಗ್ಗೇಶ್ (Jaggesh) ಖಂಡಿಸಿದ್ದಾರೆ. ಇದನ್ನೂ ಓದಿ:‘ಬಿಗ್ ಬಾಸ್’ ಖ್ಯಾತಿಯ ದೀಪಿಕಾ ಕಕ್ಕರ್‌ಗೆ ಕ್ಯಾನ್ಸರ್

    ಕಲೆಗೆ ಜಾತಿ ಇಲ್ಲ. ಎಲ್ಲಾ ಭಾಷೆಯ ಕಲಾವಿದರು ಶಾರದಾಸುತರು ಒಪ್ಪುತ್ತೇವೆ. ಆ ನಿಟ್ಟಿನಲ್ಲಿ ಕಮಲ್ ಹಾಸನ್ (Kamal Haasan) ಅವರನ್ನು ಮೆಚ್ಚಿದ್ದೇವೆ. ಹಾಗಂತ ಕನ್ನಡ ತಮಿಳಿಂದ ಹುಟ್ಟಿದೆ ಎಂದ ಅವರ ಮಾತು ಒಪ್ಪಲ್ಲ. ಕನ್ನಡಕ್ಕೆ ಎರಡೂವರೆ ಸಾವಿರ ವರ್ಷದ ಇತಿಹಾಸವಿದೆ. ಅಷ್ಟೇಕೆ ಹನುಮದೇವರು ಕನ್ನಡ ಕಲಿಪುಂಗವ ಅವನ ಕಾಲ ರಾಮಾಯಣ ಇಷ್ಟು ಅರ್ಥವಾದರೆ ಸಾಕಲ್ಲವೆ ಸಾರ್ ಎಂದು ಜಗ್ಗೇಶ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

    ಮೇ 27ರಂದು ಬೆಂಗಳೂರಿನಲ್ಲಿ ನಡೆದ ‘ಥಗ್ ಲೈಫ್’ ಪ್ರಚಾರ ಕಾರ್ಯಕ್ಕೆ ನಟ ಶಿವಣ್ಣ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ, ರಾಜ್‌ಕುಮಾರ್ ಜೊತೆಗಿನ ಒಡನಾಡವನ್ನು ಕಮಲ್ ಹಾಸನ್ ಸ್ಮರಿಸಿದರು. ಬಳಿಕ ಶಿವಣ್ಣ ಎದುರೇ ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ನಟ ಹೇಳಿದ್ದಾರೆ. ಕನ್ನಡಿಗರ ಪ್ರೀತಿ, ಗೌರವಕ್ಕೆ ನಮಿಸುತ್ತಲೇ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದ ಕಮಲ್ ಹೇಳಿಕೆಗೆ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಹೃತಿಕ್ ರೋಷನ್ ಜೊತೆ ಸಿನಿಮಾ- ‘ಹೊಂಬಾಳೆ ಫಿಲಂಸ್’ನಿಂದ ಗುಡ್ ನ್ಯೂಸ್

    ಕಮಲ್ ಆಡಿರುವ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅದಷ್ಟೇ ಅಲ್ಲ, ಕಮಲ್ ಹಾಸನ್ ಕ್ಷಮೆಯಾಚಿಸಬೇಕು ಇಲ್ಲದಿದ್ರೆ ‘ಥಗ್ ಲೈಫ್’ ಸಿನಿಮಾಗೆ ತಡೆ ನೀಡೋದಾಗಿ ಅವರ ಚಿತ್ರಗಳನ್ನು ಬ್ಯಾನ್ ಮಾಡೋದಾಗಿ ಕರವೇ ಮತ್ತು ಕನ್ನಡಪರ ಸಂಘಟನೆ ಎಚ್ಚರಿಕೆ ನೀಡಿದೆ. ನಾಳೆ ಸಂಜೆಯೊಳಗೆ ನಟ ಕ್ಷಮೆ ಕೋರಬೇಕು ಎಂದು ಎಚ್ಚರಿಸಿದೆ.